Team India | ಕಷ್ಟ ಕಾಲದಲ್ಲಿ ಗೆಳೆಯ ರಾಹುಲ್‌ ಜತೆಗೆ ಸದಾ ನಿಲ್ಲುವ ವಿರಾಟ್ ಕೊಹ್ಲಿ - Vistara News

T20 ವಿಶ್ವಕಪ್

Team India | ಕಷ್ಟ ಕಾಲದಲ್ಲಿ ಗೆಳೆಯ ರಾಹುಲ್‌ ಜತೆಗೆ ಸದಾ ನಿಲ್ಲುವ ವಿರಾಟ್ ಕೊಹ್ಲಿ

ಟೀಮ್‌ ಇಂಡಿಯಾದ (Team India) ಅಭ್ಯಾಸದ ವೇಳೆ ಕೆ. ಎಲ್‌ ರಾಹುಲ್‌ ಅವರಿಗೆ ವಿರಾಟ್‌ ಕೊಹ್ಲಿ ಸಲಹೆ ಕೊಡುತ್ತಿರುವ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Team India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಡಿಲೇಡ್‌ : ಟೀಮ್ ಇಂಡಿಯಾದ (Team India) ಆರಂಭಿಕ ಬ್ಯಾಟರ್‌ ಕೆ ಎಲ್‌ ರಾಹುಲ್‌ ಫಾರ್ಮ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಅವರ ವಿರುದ್ಧ ಕ್ರಿಕೆಟ್‌ ಫ್ಯಾನ್‌ಗಳು ತಿರುಗಿ ಬಿದ್ದಿದ್ದಾರೆ. ಹಿರಿಯ ಹಾಗೂ ಮಾಜಿ ಕ್ರಿಕೆಟಿಗರು ಟೀಕೆಗಳ ಸುರಿಮಳೆ ಸುರಿಸುತ್ತಿದ್ದಾರೆ. ಹೀಗಾಗಿ ಕನ್ನಡಿಗ ಕೆ. ಎಲ್‌ ರಾಹುಲ್ ಅವರು ಮುಂದಿನ ಪಂದ್ಯಗಳಲ್ಲಿ ಅಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಲೇಬೇಕು. ಅದಕ್ಕಾಗಿ ಅವರು ಸತತವಾಗಿ ಅಭ್ಯಾಸ ಮಾಡುತ್ತಿದ್ದಾರೆ. ಈ ರೀತಿಯಾಗಿ ಕಷ್ಟಕ್ಕೆ ಸಿಲುಕಿರುವ ಕೆ. ಎಲ್ ರಾಹುಲ್‌ಗೆ ಆತ್ಮೀಯ ಗೆಳೆಯ ವಿರಾಟ್‌ ಕೊಹ್ಲಿ ನೆರವು ಕೊಡುತ್ತಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಟಿ೨೦ ವಿಶ್ವ ಕಪ್‌ನ ಸೂಪರ್‌-೧೨ ಹಂತದ ಪಂದ್ಯಕ್ಕಾಗಿ ಟೀಮ್‌ ಇಂಡಿಯಾ ಅಡಿಲೇಡ್‌ಗೆ ತಲುಪಿದೆ. ಸೋಮವಾರ ವಿಶ್ರಾಂತಿ ಪಡೆದ ಟೀಮ್‌ ಇಂಡಿಯಾ ಆಟಗಾರರು ಮಂಗಳವಾರ ನೆಟ್‌ ಪ್ರಾಕ್ಟೀಸ್‌ ಮಾಡಿದೆ. ಈ ವೇಳೆ ಕೆ ಎಲ್‌ ರಾಹುಲ್‌ಗೆ ಅವರಿಗೆ ವಿರಾಟ್‌ ಕೊಹ್ಲಿ ಕೆಲವೊಂದು ತಂತ್ರಗಳನ್ನು ಹೇಳಿಕೊಡುತ್ತಿದ್ದರು. ಈ ಮೂಲಕ ಕಷ್ಟಕಾಲದಲ್ಲಿರುವ ಗೆಳೆಯನಿಗೆ ಅವರು ನೆರವು ನೀಡಲು ಮುಂದಾಗಿದ್ದಾರೆ.

ಆಸ್ಟ್ರೇಲಿಯಾದ ಬೌನ್ಸಿ ಪಿಚ್‌ನಲ್ಲಿ ಆರಂಭಿಕ ಬ್ಯಾಟರ್‌ಗಳಿಗೆ ರನ್‌ ಗಳಿಸಲು ಸಾಧ್ಯವಾಗುತ್ತಿಲ್ಲ. ಎಲ್ಲ ತಂಡಗಳ ಆರಂಭಿಕ ಬ್ಯಾಟರ್‌ಗಳು ರನ್‌ ಬರ ಎದುರಿಸುತ್ತಿದ್ದಾರೆ. ಅಂತೆಯೇ ಕೆ. ಎಲ್‌ ರಾಹುಲ್‌ ಕೂಡ ಬೇಗನೆ ವಿಕೆಟ್‌ ಒಪ್ಪಿಸುತ್ತಿದ್ದಾರೆ. ಆದರೆ, ಟೀಕಾಕಾರರು ರಾಹುಲ್‌ ಅವರನ್ನು ಮಾತ್ರ ಗುರಿಯಾಗಿಸುತ್ತಿದ್ದಾರೆ. ಆದರೆ, ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕೆ. ಎಲ್‌ ರಾಹುಲ್‌ ಉತ್ತಮ ಆಟಗಾರ. ಅವರು ಉತ್ತಮ ಪ್ರದರ್ಶನ ಕೊಟ್ಟೇ ಕೊಡುತ್ತಾರೆ ಎಂಬುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | KL Rahul | ಕೆ.ಎಲ್​. ರಾಹುಲ್​ ಅದ್ಭುತ ಆಟಗಾರ; ಕೋಚ್​ ರಾಹುಲ್‌ ದ್ರಾವಿಡ್​ ವಿಶ್ವಾಸ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

T20 World Cup 2024: ಭಾರತದ ಮಾಜಿ ಮುಖ್ಯ ಕೋಚ್, 2011ರಲ್ಲಿ ಏಕದಿನ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್(Gary Kirsten) ಮಾರ್ಗದರ್ಶನದಲ್ಲಿ ಪಾಕಿಸ್ತಾನ ಈ ಬಾರಿ ಟಿ20 ವಿಶ್ವಕಪ್​ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್​ 9ರಂದು ನಡೆಯಲಿದೆ.

VISTARANEWS.COM


on

T20 World Cup 2024
Koo

ಕರಾಚಿ: ಇದೇ ಜೂನ್​ 1ರಿಂದ ಆರಂಭಗೊಳ್ಳಲಿರುವ ಪುರುಷರ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಪಾಲ್ಗೊಳ್ಳುವ 20 ದೇಶಗಳ ಪೈಕಿ 19 ದೇಶಗಳು ತನ್ನ ತಂಡವನ್ನು ಹಲವು ದಿನಗಳ ಹಿಂದೆಯೇ ಪ್ರಕಟಿಸಿತ್ತು. ಆದರೆ, ಪಾಕಿಸ್ತಾನ ಮಾತ್ರ ತಂಡ ಪ್ರಕಟಕ್ಕೆ ಮೀನ-ಮೇಷ ಎಣಿಸುತ್ತಿತ್ತು. ಇದೀಗ ಕೊನೆಗೂ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ(Pakistan squad). ಶುಕ್ರವಾರ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ(Mohsin Naqvi) ಸುದ್ದಿಗೋಷ್ಠಿ ನಡೆಸಿ ತಂಡವನ್ನು ಪ್ರಕಟಿಸಿದ್ದಾರೆ.

“ಇದು ಯುವ ಮತ್ತು ಅನುಭವಿ ಆಟಗಾರರ ಮಿಶ್ರಣವನ್ನು ಹೊಂದಿರುವ ಅತ್ಯಂತ ಪ್ರತಿಭಾವಂತ ಮತ್ತು ಸಮತೋಲಿತ ತಂಡವಾಗಿದೆ” ಎಂದು ಪಿಸಿಬಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಬಾಬರ್​ ಅಜಂ ತಂಡದ ನಾಯಕನಾಗಿದ್ದಾರೆ. ಅಬ್ರಾರ್ ಅಹ್ಮದ್, ಅಜಮ್ ಖಾನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಸೈಮ್ ಅಯೂಬ್ ಮತ್ತು ಉಸ್ಮಾನ್ ಖಾನ್ ಅವರು ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಅವಕಾಶ ಪಡೆದ ಆಟಗಾರರು. ಆದರೆ ಹಿರಿಯ ಆಟಗಾರ ಹಸನ್ ಅಲಿ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಐಸಿಸಿ ನಿಯಮದ ಪ್ರಕಾರ ಮೇ 1 ತಂಡದ ಆಯ್ಕೆಗೆ ಅಂತಿಮ ದಿನವಾಗಿತ್ತು. ಈ ವೇಳೆ ಪಾಕ್​ ತನ್ನ ತಂಡವನ್ನು ಪ್ರಕಟಿಸಿರಲಿಲ್ಲ. ಮೇ 24 ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಂತಿಮ ದಿನವಾಗಿತ್ತು. ಇದೇ ದಿನ ತನ್ನ ತಂಡವನ್ನು ಪ್ರಟಿಸಿದೆ. ಪ್ರಮುಖ ಟಿ20 ಆಟಗಾರರಾದ ಮೊಹಮ್ಮದ್‌ ರಿಜ್ವಾನ್‌, ಆಜಂ ಖಾನ್‌, ಇರ್ಫಾನ್‌ ಖಾನ್‌ ನಿಯಾಜಿ ಮತ್ತು ಹ್ಯಾರಿಸ್‌ ರೌಫ್ ಅವರು ಫಿಟ್‌ನೆಸ್‌ ಹೊಂದಿಲ್ಲದ ಕಾರಣ ಪಾಕ್​ ಈ ತಂತ್ರವನ್ನು ಬಳಸಿತ್ತು.

ಭಾರತದ ಮಾಜಿ ಮುಖ್ಯ ಕೋಚ್, 2011ರಲ್ಲಿ ಏಕದಿನ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್(Gary Kirsten) ಮಾರ್ಗದರ್ಶನದಲ್ಲಿ ಪಾಕಿಸ್ತಾನ ಈ ಬಾರಿ ಟಿ20 ವಿಶ್ವಕಪ್​ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್​ 9ರಂದು ನಡೆಯಲಿದೆ. ಪಾಕಿಸ್ತಾನ ತನ್ನ ಮೊದಲ ಲೀಗ್​ ಪಂದ್ಯದಲ್ಲಿ ಅಮೆರಿಕ ವಿರುದ್ಧ ಜೂನ್​ 6ರಂದು ಆಡಲಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಟೂರ್ನಿಗೆ ಕಾಮೆಂಟರಿ ಬಳಗ ಘೋಷಿಸಿದ ಐಸಿಸಿ; ದಿನೇಶ್​ ಕಾರ್ತಿಕ್​ಗೂ ಸ್ಥಾನ

ಇಂಡೋ-ಪಾಕ್​ ನಡುವಣ ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಅಣಿಯಾಗಲಿದೆ. ಈ ಪಂದ್ಯಕ್ಕಾಗಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ ಪಂದ್ಯವನ್ನು ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ನಡೆಸಲಾಗುತ್ತಿದೆ.

ಪಾಕಿಸ್ತಾನ ತಂಡ


ಬಾಬರ್ ಅಜಂ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾಹ್ಮಾನ್ ಅಫ್ರಿದಿ, ಉಸ್ಮಾನ್ ಖಾನ್.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ ಟೂರ್ನಿಗೆ ಕಾಮೆಂಟರಿ ಬಳಗ ಘೋಷಿಸಿದ ಐಸಿಸಿ; ದಿನೇಶ್​ ಕಾರ್ತಿಕ್​ಗೂ ಸ್ಥಾನ

T20 World Cup 2024: ಬುಧವಾರವಷ್ಟೇ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದ ಆರ್​ಸಿಬಿ ತಂಡದ ದಿನೇಶ್​ ಕಾರ್ತಿಕ್​(Dinesh Karthik) ಅವರು ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ

VISTARANEWS.COM


on

T20 World Cup 2024
Koo

ದುಬೈ: 2 ದಿನಗಳ ಹಿಂದಷ್ಟೇ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದ ಆರ್​ಸಿಬಿ ತಂಡದ ದಿನೇಶ್​ ಕಾರ್ತಿಕ್​(Dinesh Karthik) ಅವರು ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಕರ್ತವ್ಯ ನಿರ್ವಹಿಸಲು ಸಜ್ಜಾಗಿದ್ದಾರೆ. ಇದೇ ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯುವ ಮಿನಿ ವಿಶ್ವಕಪ್​ ಸಮರದಲ್ಲಿ ಕಾರ್ತಿಕ್​ ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಶುಕ್ರವಾರ ಐಸಿಸಿ ವೀಕ್ಷಕ ವಿವರಣೆಗಾರರ ಪಟ್ಟಿಯನ್ನು ಪ್ರಕಟಿಸಿತು. ಈ ಪಟ್ಟಿಯಲ್ಲಿ ದಿನೇಶ್​ ಕಾರ್ತಿಕ್​ ಸೇರಿ ಹಲವು ದೇಶಗಳ ತಾರಾ ಕಾಮೆಂಟೇಟರ್ ಕಾಣಿಸಿಕೊಂಡಿದ್ದಾರೆ.

ರವಿಶಾಸ್ತ್ರಿ, ನಾಸರ್ ಹುಸೇನ್, ಇಯಾನ್ ಸ್ಮಿತ್, ಮೆಲ್ ಜೋನ್ಸ್, ಹರ್ಷಾ ಭೋಗ್ಲೆ ಮತ್ತು ಇಯಾನ್ ಬಿಷಪ್ ಪ್ರಮುಖ ಆಕರ್ಷಣೆಯಾಗಿದ್ದಾರೆ. ಇವರ ಜತೆ ದಿನೇಶ್ ಕಾರ್ತಿಕ್, ಎಬೊನಿ ರೈನ್‌ಫೋರ್ಡ್-ಬ್ರೆನ್, ಸ್ಯಾಮುಯೆಲ್ ಬದ್ರಿ, ಕಾರ್ಲೊಸ್ ಬ್ರಾತ್ ವೇಟ್, ಸ್ಟೀವನ್​ ಸ್ಮಿತ್, ಫಿಂಚ್, ಲಿಸಾ ಸ್ತಾಲೆಕರ್ ಈ ಬಾರಿಯ ಕಾಮೆಂಟರಿ ಪ್ಯಾನೆಲ್​ನಲ್ಲಿ ಇರಲಿದ್ದಾರೆ.

ರಿಕಿ ಪಾಂಟಿಂಗ್, ಸುನಿಲ್ ಗವಾಸ್ಕರ್, ಮ್ಯಾಥ್ಯೂ ಹೇಡನ್, ರಮಿಜ್ ರಾಜಾ, ಇಯಾನ್ ಮಾರ್ಗನ್, ಟಾಮ್ ಮೂಡಿ ಮತ್ತು ವಾಸಿಮ್ ಅಕ್ರಮ್ ಪಂದ್ಯಕ್ಕೂ ಮುನ್ನ ನಡೆಯುವ ವಿಶ್ಲೇಷಣೆಯಲ್ಲಿ ತಂಡಗಳ ಮತ್ತು ಆಟಗಾರರ ಸಾಮರ್ಥದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಉಳಿದಂತೆ ಡೇಲ್ ಸ್ಟೇನ್​, ಗ್ರೇಮ್ ಸ್ಮಿತ್, ಮೈಕೆಲ್ ಅಥರ್ಟನ್, ವಕಾರ್ ಯೂನಿಸ್, ಸೈಮನ್ ಡೌಲ್, ಶಾನ್ ಪೊಲಾಕ್, ಕೇಟಿ ಮಾರ್ಟಿನ್, ಎಂಪುಮೆಲೆಲೊ ಎಂಬಾಂಗ್ವಾ, ನಟಾಲಿ ಜರ್ಮನೋಸ್, ಡ್ಯಾನಿ ಮಾರಿಸನ್, ಅಲಿಸನ್ ಮಿಚೆಲ್, ಅಲನ್ ವಿಲ್ಕಿನ್ಸ್, ಬ್ರಿಯಾನ್ ಮುರ್ಗಟ್ರಾಯ್ಡ್, ಮೈಕ್ ಹೇಸ್‌ಮನ್, ಇಯಾನ್ ವಾರ್ಡ್, ಅಥರ್ ಅಲಿ ಖಾನ್, ರಸೆಲ್ ಅರ್ನಾಲ್ಡ್, ನಿಯಾಲ್ ಒ’ಬ್ರಿಯಾನ್, ಕಾಸ್ ನೈಡೋ ಮತ್ತು ಡ್ಯಾರೆನ್ ಗಂಗಾ ಕೂಡ ಟಿ20 ವಿಶ್ವಕಪ್ ನಲ್ಲಿ ಕಾಮೆಂಟರಿ ಮಾಡಲಿದ್ದಾರೆ.

ಇದನ್ನೂ ಓದಿ T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

ರಾಜಸ್ಥಾನದದ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯವೇ ದಿನೇಶ್ ಕಾರ್ತಿಕ್(Dinesh Karthik)ಗೆ ವಿದಾಯ(dinesh karthik retirement) ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು. 17 ವರ್ಷಗಳ ಐಪಿಎಲ್​ ಜರ್ನಿಯಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ.

2004 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪದಾರ್ಪಣೆ ಮಾಡಿದ ಕಾರ್ತಿಕ್​ ಭಾರತ ಪರ 26 ಟೆಸ್ಟ್‌ಗಳನ್ನು ಆಡಿ 1025 ರನ್ ಗಳಿಸಿದ್ದಾರೆ. 57 ಕ್ಯಾಚ್‌ಗಳು ಮತ್ತು 6 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಅವರು ತಮ್ಮ ಕೊನೆಯ ಟೆಸ್ಟ್ ಆಡಿದ್ದು 2018 ರಲ್ಲಿ. ಏಕದಿನದಲ್ಲಿ 94 ಪಂದ್ಯಗಳನ್ನು ಆಡಿ 1752 ರನ್ ಗಳಿಸಿದ್ದಾರೆ. 64 ಕ್ಯಾಚ್‌ಗಳು ಮತ್ತು 7 ಸ್ಟಂಪಿಂಗ್‌ಗಳನ್ನು ನಿರ್ವಹಿಸಿದ್ದಾರೆ. 60 ಟಿ20 ಪಂದ್ಯಗಳಿಂದ 686 ರನ್ ಗಳಿಸಿ, 30 ಕ್ಯಾಚ್‌ಗಳು ಮತ್ತು 8 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸಂಜುಗಿಂತ ಪಂತ್​ ಬೆಸ್ಟ್​ ಎಂದ ಯುವರಾಜ್

T20 World Cup 2024: ಸಂಜು ಸ್ಯಾಮ್ಸನ್‌ಗಿಂತ(sanju samson) ರಿಷಭ್​ ಪಂತ್(Rishabh Pant) ಅವರನ್ನು ಆಯ್ಕೆ ಮಾಡುತ್ತೇನೆ. ಅವರು ಎಡಗೈ ಆಟಗಾರ, ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲುವ ಬೃಹತ್ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಹಿಂದೆಯೂ ಕೂಡ ಭಾರತಕ್ಕೆ ಸ್ಮರಣೀಯ ಇನಿಂಗ್ಸ್​ ಆಡಿ ಗೆಲುವು ತಂದುಕೊಟ್ಟಿದ್ದಾರೆ. ಟಿ20 ವಿಶ್ವಕಪ್​ನಲ್ಲಿಯೂ ಅವರು ಮ್ಯಾಚ್​ ವಿನ್ನಿಂಗ್​ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ಯುವರಾಜ್​ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

T20 World Cup 2024
Koo

ಮುಂಬಯಿ: ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರನ್ನು ಆಡಿದರೆ ಉತ್ತಮ ಎಂದು ಹಲವು ಮಾಜಿ ಆಟಗಾರರು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದೀಗ ಈ ಪಟ್ಟಿಗೆ ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್​ ಸಿಂಗ್(Yuvraj Singh) ಕೂಡ ಯಾರನ್ನು ಆಡಿಸಿದರೆ ಉತ್ತಮ ಎಂದು ಹೇಳಿದ್ದಾರೆ.​​

​ಐಸಿಸಿ​ ಸಂದರ್ಶವೊಂದರಲ್ಲಿ ಮಾತನಾಡಿದ ಯುವರಾಜ್​ ಸಿಂಗ್​, “ನಾನು ಸಂಜು ಸ್ಯಾಮ್ಸನ್‌ಗಿಂತ(sanju samson) ರಿಷಭ್​ ಪಂತ್(Rishabh Pant) ಅವರನ್ನು ಆಯ್ಕೆ ಮಾಡುತ್ತೇನೆ. ಅವರು ಎಡಗೈ ಆಟಗಾರ, ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲುವ ಬೃಹತ್ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಹಿಂದೆಯೂ ಕೂಡ ಭಾರತಕ್ಕೆ ಸ್ಮರಣೀಯ ಇನಿಂಗ್ಸ್​ ಆಡಿ ಗೆಲುವು ತಂದುಕೊಟ್ಟಿದ್ದಾರೆ. ಟಿ20 ವಿಶ್ವಕಪ್​ನಲ್ಲಿಯೂ ಅವರು ಮ್ಯಾಚ್​ ವಿನ್ನಿಂಗ್​ ಪ್ರದರ್ಶನ ತೋರುವ ವಿಶ್ವಾಸವಿದೆ” ಎಂದು ಹೇಳಿದರು.

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್​ ಪಂತ್​ ಅವರು 14 ತಿಂಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಈ ಬಾರಿಯ ಐಪಿಎಲ್​ ಮೂಲಕ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ ಮಾಡಿದ್ದರು. ಪಂತ್​ ದೀರ್ಘಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರೂ ಕೂಡ ಅವರ ಪ್ರದರ್ಶನದಲ್ಲಿ ಯಾವುದೇ ವ್ಯತ್ಯಾಸ ಮಾತ್ರ ಕಂಡುಬಂದಿರಲಿಲ್ಲ. ಹಳೆಯ ಫಾರ್ಮ್​ನಂತೆ ಪ್ರದರ್ಶನ ತೋರಿದ್ದರು. ಹೀಗಾಗಿ ಯುವರಾಜ್​ ಕೂಡ ಪಂತ್​ರನ್ನು ಟಿ20ಯಲ್ಲಿ ಆಡಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ T20 World Cup 2024: ಇನ್ನೆರಡು ದಿನದಲ್ಲಿ ಮಿನಿ ವಿಶ್ವಕಪ್​ ಸಮರಕ್ಕೆ ರೋಹಿತ್​, ಕೊಹ್ಲಿ ಸೇರಿ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

Continue Reading

ಕ್ರೀಡೆ

T20 World Cup 2024: ಇನ್ನೆರಡು ದಿನದಲ್ಲಿ ಮಿನಿ ವಿಶ್ವಕಪ್​ ಸಮರಕ್ಕೆ ರೋಹಿತ್​, ಕೊಹ್ಲಿ ಸೇರಿ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

T20 World Cup 2024: ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ. ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ಈ ಪಂದ್ಯವನ್ನು ಆಡಲಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿವೆ. ಮೇ 27ರಿಂದ ಅಭ್ಯಾಸ ಪಂದ್ಯಗಳು ಆರಂಭಗೊಳ್ಳಲಿದೆ. ಲೀಗ್​ ಹಂತದ ಪಂದ್ಯಗಳಿಗೆ ಜೂನ್​ 1ರಿಂದ ಚಾಲನೆ ಸಿಗಲಿದೆ. ಈ ಮಹತ್ವದ ಟೂರ್ನಿಯನ್ನಾಡಲು ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ವಿರಾಟ್​ ಕೊಹ್ಲಿ(Virat Kohli), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್, ಮೊಹಮ್ಮದ್​ ಸಿರಾಜ್​​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

ಒಂದೇ ಅಭ್ಯಾಸ ಪಂದ್ಯ


ಭಾರತ ಕೇವಲ ಒಂದೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಮೂಲ ವೇಳಾಪಟ್ಟಿಯ ಪ್ರಕಾರ ಭಾರತ ತಂಡದ ಆಟಗಾರರು ಮೇ 21ರಂದು ನ್ಯೂಯಾರ್ಕ್​ಗೆ ತೆರಳಬೇಕಿತ್ತು. ಆದರೆ ಐಪಿಎಲ್​ ಟೂರ್ನಿಯಿಂದಾಗಿ ಇದು ಸಾಧ್ಯವಾಗಲಿಲ್ಲ. ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ. ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ಈ ಪಂದ್ಯವನ್ನು ಆಡಲಿದೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading
Advertisement
Narendra Modi
ದೇಶ5 hours ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ5 hours ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು5 hours ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

SRH vs RR
ಕ್ರೀಡೆ5 hours ago

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

Electric Shock
ಕ್ರೈಂ6 hours ago

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Prajwal Revanna Case
ಕರ್ನಾಟಕ6 hours ago

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Kangana Ranaut
ದೇಶ7 hours ago

Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

T20 World Cup 2024
ಕ್ರೀಡೆ7 hours ago

T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

Prajwal Revanna Case
ಕರ್ನಾಟಕ7 hours ago

Prajwal Revanna Case: ವಕೀಲ ದೇವರಾಜೇಗೌಡಗೆ ಇನ್ನೂ 14 ದಿನ ಜೈಲೇ ಗತಿ; ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Yuzvendra Chahal
ಕ್ರಿಕೆಟ್7 hours ago

Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌