Virat kohli : ಪುತ್ರಿಯ ಫೋಟೊ ತೆಗೆದವನ ಮೇಲೆ ಕಿರುಚಾಡಿ ರೇಗಿದ ಕೊಹ್ಲಿ, ವಿಡಿಯೊ ವೈರಲ್​​ - Vistara News

ಕ್ರಿಕೆಟ್

Virat kohli : ಪುತ್ರಿಯ ಫೋಟೊ ತೆಗೆದವನ ಮೇಲೆ ಕಿರುಚಾಡಿ ರೇಗಿದ ಕೊಹ್ಲಿ, ವಿಡಿಯೊ ವೈರಲ್​​

ತಮ್ಮ ಪುತ್ರಿ ವಾಮಿಕಾಳ ಚಿತ್ರವನ್ನು ತೆಗೆಯದಂತೆ ಕೊಹ್ಲಿ (Virat kohli) ಅನುಷ್ಕಾ ಜೋಡಿ ಆಗಾಗ ಫೋಟೋಗ್ರಾಫರ್​​ಗಳಿಗೆ ಮನವಿ ಮಾಡುತ್ತಿದ್ದಾರೆ.

VISTARANEWS.COM


on

Virat kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದಹೆಲಿ: ಪುತ್ರಿ ವಾಮಿಕಾಳ ಖಾಸಗಿತನ ಹಾಗೂ ಆಕೆಯ ಬಾಲ್ಯದ ಬದುಕನ್ನು ಆನಂದಿಸಲು ಬಿಡಿ ಎಂಬುದಾಗಿ ಟೀಮ್​ ಇಂಡಿಯಾದ ಸ್ಟಾರ್ ಬ್ಯಾಟರ್​ ವಿರಾಟ್​ ಕೊಹ್ಲಿ (Virat kohli) ಆಗಾಗ ನೆಟ್ಟಿಗರಿಗೆ ಮನವಿ ಮಾಡುತ್ತಿರುತ್ತಾರೆ. ಆದರೆ ಪಾಪರಾಜಿಗಳು ಇಂಥದ್ದಕ್ಕೆಲ್ಲ ಕ್ಯಾರೇ ಮಾಡುವುದಿಲ್ಲ. ಮನವಿಯ ನಡುವೆಯೂ ಅವರು ಕದ್ದು ಮುಚ್ಚಿ ಫೊಟೊ ತೆಗೆಯಲು ಯತ್ನಿಸುತ್ತಾರೆ. ಅಂತೆಯೇ ಅಹಮದಾಬಾದ್​​ ಏರ್​ಪೋರ್ಟ್​​ನಲ್ಲಿ ತಮ್ಮ ಪುತ್ರಿಯ ವಿಡಿಯೊ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಕೊಹ್ಲಿ ರೇಗಾಡಿದ ಘಟನೆ ನಡೆದಿದೆ. ಮೊದಲೇ ವಿಶ್ವ ಕಪ್ ಸೋತ ಬೇಸರದಲ್ಲಿದ್ದ ಕೊಹ್ಲಿ ಕೈ ತೋರಿಸಿ ಜೋರಾಗಿ ಕೂಗಾಡಿ ಎಚ್ಚರಿಕೆ ಕೊಟ್ಟಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜೋಡಿ ಈ ಹಿಂದೆ ಹಲವು ಬಾರಿ ತಮ್ಮ ಮಗಳು ವಾಮಿಕಾಳ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳದಂತೆ ಜನರನ್ನು ಮನವಿ ಮಾಡಿಕೊಂಡಿದ್ದರು. ಅವಳು ಹುಟ್ಟಿದಾಗಿನಿಂದಲೂ ಅದೇ ರೀತಿ ಮಾಡುವಂತೆ ಫೋಟೋಗ್ರಾಫರ್​ಗಳ ಬಳಿ ಬೇಡಿಕೊಂಡಿದ್ದರು. ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡದ ಸೋಲಿನ ನಂತರ ಅಹಮದಾಬಾದ್​ನಿಂದ ಕೊಹ್ಲಿ ಹಾಗೂ ಅನುಷ್ಕಾ ಹೊರಟಿದ್ದರು. ಅವರು ಕಲಿನಾ ವಿಮಾನ ನಿಲ್ದಾಣಕ್ಕೆ ಬಂದಾಗ ಪಾಪರಾಜಿಗಳು ಫೋಟೋಗೆ ಯತ್ನಿಸಿದರು. ಈ ವೇಳೆ ಅವರು ಕೋಪಗೊಂಡರು.

ಆದರೂ ಕೆಲವು ಛಾಯಾಗ್ರಾಹಕರು ವಾಮಿಕಾಳ ಚಿತ್ರಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಲೇ ಇದ್ದರು. ತಂದೆಯಾಗಿ ಕೊಹ್ಲಿಗೆ ತಪ್ಪಿನ ಪುನರಾವರ್ತನೆ ಇಷ್ಟವಾಗಲಿಲ್ಲ

ತಾಯಿಯಾಗುತ್ತಿದ್ದಾರೆ ಅನುಷ್ಕಾ

ಅನುಷ್ಕಾ ಮತ್ತೆ ತಾಯಿಯಾಗಲಿದ್ದಾರೆ ಎಂಬ ವದಂತಿಗಳು ಹಬ್ಬಿದೆ. ಅದರ ಚಿತ್ರಗಳನ್ನು ಸೆರೆ ಹಿಡಿಯಲೂ ಅವರು ಪ್ರಯತ್ನಿಸುತ್ತಲೇ ಇದ್ದರು. ಕೊಹ್ಲಿ ಛಾಯಾಗ್ರಾಹಕರು ಏನು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸುತ್ತಲೇ ಇದ್ದರು. ಆ ಸಮಯದಲ್ಲಿ, ಅವರಲ್ಲಿ ಒಬ್ಬರು ವಮಿಕಾ ಅವರ ಚಿತ್ರವನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕಂಡು ಕೊಹ್ಲಿ ಕೆರಳಿದರು.

ಕೋಪದ ನೋಟದೊಂದಿಗೆ, ಕೊಹ್ಲಿ ಛಾಯಾಗ್ರಾಹಕನ ಮೇಲೆ ಕಿರುಚಲು ಪ್ರಾರಂಭಿಸಿದರು. ಮತ್ತೆ ಅದನ್ನು ಮಾಡದಂತೆ ಬೆರಳಿನಿಂದ ಸನ್ನೆ ಮಾಡಿದರು. ಆಶ್ಚರ್ಯಕರವಾಗಿ, ಅವರ ಸನ್ನೆ ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಯಿತು. ಅನೇಕರು ಛಾಯಾಗ್ರಾಹಕರು ಅವರ ನಡವಳಿಕೆಯನ್ನು ಟೀಕಿಸಿದರು. ನವೆಂಬರ್ 23ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಕೊಹ್ಲಿಗೆ ಮತ್ತೊಂದು ಆಘಾತ; ದೀರ್ಘ ಕಾಲ ಜತೆಗಿದ್ದ ಮ್ಯಾನೇಜರ್ ಜತೆಗಿನ ಸಂಬಂಧ ಅಂತ್ಯ

2023 ರ ವಿಶ್ವಕಪ್ ಫೈನಲ್ ಪಂದ್ಯದ ಸೋಲಿನ ಬಳಿಕ ಭಾರತ ತಂಡ ಆಘಾತಕ್ಕೆ ಒಳಗಾಗಿದೆ. ಇದೇ ವೇಳೆ ಟೀಮ್ ಇಂಡಿಯಾದ ಬ್ಯಾಟರ್​ ವಿರಾಟ್​ ಕೊಹ್ಲಿ ಮತ್ತೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅವರ ದೀರ್ಘ ಕಾಲದ ಜತೆಗಾರ, ಮ್ಯಾನೇಜರ್ ಹಾಗೂ ಉದ್ಯಮ ಪಾಲುದಾರ ಬಂಟಿ ಸಜ್ದೇ ಅವರಿಂದ ಪ್ರತ್ಯೇಕಗೊಂಡಿದ್ದಾರೆ. ಜೆರ್ರಿ ಮ್ಯಾಗೈರ್, ಕಾರ್ನರ್ ಸ್ಟೋನ್ ಸಂಸ್ಥಾಪಕರಾಗಿರುವ ಬಂಟಿ ಕೊಹ್ಲಿಯ ಪಾಲುದಾರಿಕೆಯನ್ನು ಬಿಟ್ಟು ಹೋಗುವುದಕ್ಕೆ ಕಾರಣ ಗೊತ್ತಿಲ್ಲ. ಆದರೆ ಕೊಹ್ಲಿ ಶೀಘ್ರದಲ್ಲೇ ತಮ್ಮದೇ ಆದ ಕಂಪನಿಯನ್ನು ಪ್ರಾರಂಭಿಸಲಿದ್ದಾರೆ ಮತ್ತು ಅದನ್ನು ನೋಂದಾಯಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ : Mitchell Marsh : ವಿಶ್ವ ಕಪ್​ ಮೇಲೆಯೇ ಕಾಲಿಟ್ಟ ಮಿಚೆಲ್ ಮಾರ್ಷ್​ಗೆ ಕ್ರಿಕೆಟ್ ಪ್ರೇಮಿಗಳ ತಪರಾಕಿ

“ಹೌದು, ಕೊಹ್ಲಿ ಮತ್ತು ಬಂಟಿ ಬಹಳ ದೀರ್ಘ ಮತ್ತು ಯಶಸ್ವಿನ ಪಾಲುದಾರಿಕೆ ಬಳಿಕ ಇದೀಗ ಬೇರ್ಪಟ್ಟಿದ್ದಾರೆ. ಕಾರ್ನರ್ ಸ್ಟೋನ್ ಸಂಸ್ಥೆಯಿಂದ ಬೇರ್ಪಟ್ಟ ಇತರ ಬಹಳಷ್ಟು ಕ್ರಿಕೆಟಿಗರು ಇದ್ದಾರೆ. ರೋಹಿತ್, ಕೆಎಲ್ ರಾಹುಲ್, ಅಜಿಂಕ್ಯ ರಹಾನೆ, ಶುಭ್ಮನ್ ಗಿಲ್ ಆ ಸಂಸ್ಥೆಯಿಂದ ಬೇರ್ಪಟ್ಟಿದ್ದರು. ಆದರೆ ಕೊಹ್ಲಿ ಈ ಸಂಸ್ಥೆ ಜತೆ ದೀರ್ಘ ಕಾಲದ ನಂಟು ಹೊಂದಿದ್ದರು. ಹೀಗಾಗಿ ಬಿಟ್ಟು ಹೋಗುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದೀಗ ಅವರ ಆ ಸಂಬಂಧವೂ ಮುಗಿದಿದೆ” ಎಂದು ಉದ್ಯಮದ ಮೂಲವೊಂದು ತಿಳಿಸಿದೆ.

2020ರಲ್ಲಿ, ಕರಣ್ ಜೋಹರ್ ಒಡೆತನದ ಧರ್ಮ ಪ್ರೊಡಕ್ಷನ್ಸ್. ಕಾರ್ನ್​ ರ್ಸ್ಟೋನ್ ಸಹಭಾಗಿತ್ವದಲ್ಲಿ ಧರ್ಮ ಕಾರ್ನರ್ಸ್ಟೋನ್ ಏಜೆನ್ಸಿ (ಡಿಸಿಎ) ಎಂಬ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯನ್ನು ಸ್ಥಾಪಿಸಿತ್ತು. ಆದಾಗ್ಯೂ, ಕಾರ್ನರ್ ಸ್ಟೋನ್ ಅವರೊಂದಿಗಿನ ಕೊಹ್ಲಿಯ ಪಾಲುದಾರಿಕೆ ಪ್ರತ್ಯೇಕವಾಗಿ ಮುಂದುವರಿದಿತ್ತು ಜೆವಿ ಎಂಬ ಹೊಸ ಸಂಸ್ಥೆಯ ಮೂಲಕ ಉದ್ಯಮದಲ್ಲಿತ್ತು.

ಕಾರ್ನರ್ ಸ್ಟೋನ್​ ಸಂಸ್ಥೆಯಲ್ಲಿ ಬಂಟಿ ಇದ್ದರೂ ಅದನ್ನು ಕೊಹ್ಲಿಯೇ ನಡೆಸುತ್ತಿದ್ದಾರೆ ಎಂಬ ಜೋಕ್​ ಉದ್ಯಮ ಕ್ಷೇತ್ರದಲ್ಲಿ ಇದೆ. ಆದರೀಗ ಇಂಥ ಒಪ್ಪಂದ ಮುರಿದು ಹೋಗಿದೆ.

.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

KL Rahul: 9ನೇ ಓವರ್ ನ 2ನೇ ಎಸೆತದಲ್ಲಿ ರವಿ ಬಿಷ್ಣೋಯ್ ಅವರು ಚೆಂಡನ್ನು ಎಸೆದರು. ಶಾಯ್ ಹೋಪ್ ಅದಕ್ಕೆ ಭರ್ಜರಿಯಾಗಿ ಹೊಡೆದರು. ಕವರ್ ಪ್ರದೇಶದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಕೆಎಲ್ ರಾಹುಲ್ ಚೆಂಡನ್ನು ಹಿಡಿಯಲು ಯತ್ನಿಸಿದರು. ಅದರೆ, ಅದರು ಕೈಯಿಂದ ಜಾರಿತು. ಬಳಿಕ ಅವರು ನೆಗೆದು ಆ ಚೆಂಡನ್ನು ಹಿಡಿದರು. ಅದ್ಭುತ ಡೈವ್ ಮಾಡಿದ ನಾಯಕನ ಪ್ರಯತ್ನಗಳನ್ನು ಶ್ಲಾಘಿಸಿದ ಸಂಜೀವ್ ಗೋಯೆಂಕಾ ಚಪ್ಪಾಳೆ ತಟ್ಟಿದರು.

VISTARANEWS.COM


on

KL Rahul
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ (IPL 2024) ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ನಾಯಕ ಕೆಎಲ್ ರಾಹುಲ್ (KL Rahul) ಮೈದಾನದಲ್ಲಿ ಭರ್ಜರಿ ಫೀಲ್ಡಿಂಗ್ ಮಾಡಿದರು. ಈ ವೇಳೆ ಲಕ್ನೊ ಸೂಪರ್ ಜೈಂಟ್ಸ್ ಮಾಲೀಕರಾದ ಸಂಜೀವವ ಗೋಯೆಂಕಾ ಅವರು ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ಚಪ್ಪಾಳೆ ತಟ್ಟಿದರು. ಈ ಮೂಲಕ ಅವರಿಬ್ಬರ ನಡುವಿನ ಜಗಳ ಅಂತ್ಯಗೊಂಡಿತು.

ಪಂದ್ಯದಲ್ಲಿ ಡೆಲ್ಲಿ ತಂಡ ಜೇಕ್ ಫ್ರೇಸರ್-ಮೆಗ್​ಕುರ್ಕ್​ ಅವರನ್ನು ಬೇಗನೆ ಕಳೆದುಕೊಂಡರೂ ನಂತರದಲ್ಲಿ ಅಭಿಷೇಕ್ ಪೊರೆಲ್ ಮತ್ತು ಶಾಯ್ ಹೋಪ್ ಜೋಡಿ ಲಕ್ನೋ ಸೂಪರ್ ಜೈಂಟ್ಸ್ ಬೌಲರ್​ಗಳ ಮೇಳೆ ಅಬ್ಬರಿಸಿದರು. ವಿಶೇಷವಾಗಿ ಶಾಯ್ ಹೋಪ್ ದೃಢವಾಗಿ ಕಾಣುತ್ತಿದ್ದರು. ಅವರು ದೊಡ್ಡ ಇನ್ನಿಂಗ್ಸ್ ಗೆ ಸಜ್ಜಾಗುತ್ತಿದ್ದರು. ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆ.ಎಲ್.ರಾಹುಲ್ ಅವರು ಅವರ ವಿಕೆಟ್ ಪಡೆಯಲು ವಿಶೇಷ ಯೋಜನೆ ರೂಪಿಸಿದರು. ಅಲ್ಲದೇ ತಾವೇ ಉತ್ತಮ ಕ್ಯಾಚ್​ ಹಿಡಿಯುವ ಮೂಲಕ ಅವರನ್ನು ಪೆವಿಲಿಯನ್​ಗೆ ಅಟ್ಟಿದರು.

9ನೇ ಓವರ್ ನ 2ನೇ ಎಸೆತದಲ್ಲಿ ರವಿ ಬಿಷ್ಣೋಯ್ ಅವರು ಚೆಂಡನ್ನು ಎಸೆದರು. ಶಾಯ್ ಹೋಪ್ ಅದಕ್ಕೆ ಭರ್ಜರಿಯಾಗಿ ಹೊಡೆದರು. ಕವರ್ ಪ್ರದೇಶದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಕೆಎಲ್ ರಾಹುಲ್ ಚೆಂಡನ್ನು ಹಿಡಿಯಲು ಯತ್ನಿಸಿದರು. ಅದರೆ, ಅದರು ಕೈಯಿಂದ ಜಾರಿತು. ಬಳಿಕ ಅವರು ನೆಗೆದು ಆ ಚೆಂಡನ್ನು ಹಿಡಿದರು. ಅದ್ಭುತ ಡೈವ್ ಮಾಡಿದ ನಾಯಕನ ಪ್ರಯತ್ನಗಳನ್ನು ಶ್ಲಾಘಿಸಿದ ಸಂಜೀವ್ ಗೋಯೆಂಕಾ ಚಪ್ಪಾಳೆ ತಟ್ಟಿದರು.

ರಾಹುಲ್ ಆರ್​ಸಿಬಿಗೆ ಬರಲ್ಲ

ಲಕ್ನೋ: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ 10 ವಿಕೆಟ್​ಗಳ ಹೀನಾಯ ಸೋಲು ಕಂಡ ಬೇಸರದಲ್ಲಿ ಸಿಟ್ಟಿಗೆದ್ದ ಫ್ರಾಂಚೈಸಿ ಮಾಲಿಕ ಸಂಜೀವ್ ಗೋಯೆಂಕಾ(Sanjiv Goenka) ಮೈದಾನದಲ್ಲೇ ನಾಯಕ ಕೆ.ಎಲ್​ ರಾಹುಲ್(KL Rahul)​ ಜತೆ ಜಗಳವಾಡಿದ್ದರು. ಈ ಘಟನೆ ಬಳಿಕ ಅನೇಕ ಮಾಜಿ ಆಟಗಾರರು ಗೋಯೆಂಕಾ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಗೆ ಸಂಬಂಧಿಸಿ ರಾಹುಲ್​ ಲಕ್ನೋ ತಂಡ ತೊರೆಯಲಿದ್ದಾರೆ, ಆರ್​ಸಿಬಿ ಸೇರಲಿದ್ದಾರೆ, ತಂಡದ ಆಟಗಾರರೊಂದಿಗೆ ಪ್ರಯಾಣಿಸದೆ ಪ್ರತ್ಯೇಕವಾಗಿ ಪ್ರಯಾಣಿಸಿದ್ದಾರೆ ಹೀಗೆ ಹಲವು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಈ ಎಲ್ಲ ಊಹಾಪೋಹಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ.

ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಈ ಮೂಲಕ ನಮ್ಮ ಮಧ್ಯೆ ಯಾವುದೇ ಮುನಿಸು ಇಲ್ಲ ಎನ್ನುವ ಸಂದೇಶ ನೀಡಿದಂತಿದೆ. ಸದ್ಯ ವೈರಲ್​ ಆಗುತ್ತಿರುವ ಫೋಟೊದಲ್ಲಿ ರಾಹುಲ್​ ಅವರನ್ನು ಗೋಯೆಂಕಾ ತಬ್ಬಿಕೊಂಡಿರಿವಂತೆ ಕಾಣುತ್ತಿದೆ. ರಾಹುಲ್​ ಕೂಡ ನಗುಮುಗದಿಂದಲೇ ಕಾಣಿಸಿಕೊಂಡಿದ್ದಾರೆ. ಆದರೆ, ಗೋಯೆಂಕಾ ಅವರ ಮುಖ ಮಾತ್ರ ಸ್ಪಷ್ಟವಾಗಿ ಗೋಚರಿಸಿಲ್ಲ. ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ರಾಹುಲ್​ ಮತ್ತು ಗೋಯೆಂಕಾ ನಡುವಿನ ಮುನಿಸು ಶಮನವಾದಂತೆ ಕಾಣುತ್ತಿದೆ.

ಇದನ್ನೂ ಓದಿ: IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

ಕಳೆದ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮಾತ್ರವಲ್ಲದೆ, ಬೌಲಿಂಗ್​ನಲ್ಲಿಯೂ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. ಕನಿಷ್ಠ 1 ವಿಕೆಟ್​ ಕೂಡ ಕೀಳಲಾಗದ ಘೋರ ವೈಫಲ್ಯ ಕಂಡಿತ್ತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವಂತೆ ಕಂಡುಬಂದಿತ್ತು. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾಗಿದ್ದರೂ, ಈ ದೃಶ್ಯ ನೋಡುವಾಗ ಇದು ಅಸಮಾಧಾನದ ನುಡಿ ಎಂದು ತಿಳಿದು ಬಂದಿತ್ತು.

ಗೋಯೆಂಕಾ ಮಾತಿಗೆ ರಾಹುಲ್ ಪ್ರತಿಕ್ರಿಯೆ ನೀಡಲು ಮುಂದಾದರೂ ಕೂಡ ಇದನ್ನು ಗೋಯೆಂಕಾ ಒಪ್ಪಿಕೊಳ್ಳದೆ ಏನೋ ಬೈಯುತ್ತಿರುವಂತೆ ದೃಶ್ಯದಲ್ಲಿ ಕಂಡುಬಂದಿತ್ತು. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುಗಿತ್ತು. ಈ ಘಟನೆಯಿಂದ ರಾಹುಲ್​ ನೊಂದಿದ್ದಾರೆ ಎನ್ನಲಾಗಿತ್ತು. ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದ ಹೆಡ್ ಮತ್ತು ಅಭಿಷೇಕ್​​ ಸ್ಟೇಡಿಯಂನ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿದ್ದರು.

Continue Reading

ಪ್ರಮುಖ ಸುದ್ದಿ

IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

IPL 2024: ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರು ಇದೀಗ ಆಲ್​ರೌಂಡರ್​ ಪಾಂಡ್ಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಎಬಿ ಡಿವಿಲಿಯರ್ಸ್ ಮತ್ತು ಪೀಟರ್ಸನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಬ್ಬರ ಹೇಳಿಕೆಗಳು ಸರಿಯಲ್ಲ ಎಂದು ಹೇಳಿದ್ದಾರೆ. ಆ ರೀತಿ ಹೇಳುವುದಕ್ಕೆ ನಾಯಕರಾಗಿ ಅವರಿಬ್ಬರ ಟ್ರ್ಯಾಕ್ ರೆಕಾರ್ಡ್ ಎಷ್ಟಿದೆ ಎಂಬುದನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024) ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ (Hardik Pandya) ವಿಫಲಗೊಂಡಿದ್ದಾರೆ. ಪ್ಲೇ ಆಫ್ ರೇಸ್ ನಿಂದ ಹೊರಗುಳಿದ ಮೊದಲ ತಂಡ ಎಂಬ ಕುಖ್ಯಾತಿಗೆ ಮುಂಬಯಿ ತಂಡ ಪಾತ್ರವಾಗಿದೆ. ಹಾರ್ದಿಕ್ ಪಾಂಡ್ಯ ನಾಯಕನಾ ಬಳಿಕದಿಂದ ಅವರು ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ಅಭಿಮಾನಿಗಳ ಕೀಟಲೆಗಳ ಜತೆಗೆ ಅನೇಕ ಹಿರಿಯ ಆಟಗಾರರ ಮೂದಲಿಕೆಗಳನ್ನೂ ಕೇಳುವಂತಾಗಿದೆ. ಇಂಗ್ಲೆಂಡ್​ನ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಮತ್ತು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಹಾರ್ದಿಕ್ ನಾಯಕತ್ವದ ಶೈಲಿಯನ್ನು ಸತತವಾಗಿ ಪ್ರಶ್ನಿಸಿದ್ದರು. ತಮ್ಮ ತಂಡದ ವೈಫಲ್ಯಕ್ಕೆ ಹಾರ್ದಿಕ್ ಕಾರಣ ಎಂದು ಇಬ್ಬರೂ ಷರಾ ಬರೆದಿದ್ದರು.

ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರು ಇದೀಗ ಆಲ್​ರೌಂಡರ್​ ಪಾಂಡ್ಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಎಬಿ ಡಿವಿಲಿಯರ್ಸ್ ಮತ್ತು ಪೀಟರ್ಸನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಬ್ಬರ ಹೇಳಿಕೆಗಳು ಸರಿಯಲ್ಲ ಎಂದು ಹೇಳಿದ್ದಾರೆ. ಆ ರೀತಿ ಹೇಳುವುದಕ್ಕೆ ನಾಯಕರಾಗಿ ಅವರಿಬ್ಬರ ಟ್ರ್ಯಾಕ್ ರೆಕಾರ್ಡ್ ಎಷ್ಟಿದೆ ಎಂಬುದನ್ನು ಪ್ರಶ್ನಿಸಿದ್ದಾರೆ.

ಈ ಇಬ್ಬರು ನಾಯಕರಾಗಿದ್ದ ವೇಳೆ ಅವರು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಕೆವಿನ್ ಪೀಟರ್ಸನ್ ಮತ್ತು ಎಬಿ ಡಿವಿಲಿಯರ್ಸ್ ನಾಯಕರಾಗಿ ಗಮನಾರ್ಹವಾಗಿ ಏನನ್ನೂ ಸಾಧಿಸಿಲ್ಲ. ನೀವು ಅವರ ದಾಖಲೆಗಳನ್ನು ಮೊದಲು ನೋಡಿಕೊಳ್ಳಿ. ಅದು ಚೆನ್ನಾಗಿದ್ದರೆ ಉಳಿದವರ ದಾಖಲೆಗಳನ್ನು ವಿಮರ್ಶೆ ಮಾಡುವುದು ಸೂಕ್ತ ಎಂದು ಗಂಭೀರ್ ಟೀಕಿಸಿದ್ದಾರೆ.

ಇದನ್ನೂ ಓದಿ: Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

ಐಪಿಎಲ್​​ನಲ್ಲಿ ಎಬಿ ಡಿವಿಲಿಯರ್ಸ್ ಎಂದಿಗೂ ನಾಯಕತ್ವ ವಹಿಸಿಲ್ಲ. ಎಬಿಡಿ ಸಾಧನೆ ಎಂದರೆ ಸ್ವಂತ ಸ್ಕೋರ್​ಗಳು. ಅದನ್ನು ಹೊರತುಪಡಿಸಿ ಅವರು ಏನನ್ನೂ ಸಾಧಿಸಿದ್ದಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಗಂಭೀರ್​ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಐಪಿಎಲ್ ವಿಜೇತ ನಾಯಕ. ಆದ್ದರಿಂದ ನೀವು ಕಿತ್ತಳೆಯನ್ನು ಕಿತ್ತಳೆಗೆ ಹೋಲಿಸಬೇಕು ಮತ್ತು ಕಿತ್ತಳೆಯನ್ನು ಸೇಬುಗಳಿಗೆ ಹೋಲಿಸಬಾರದು ಎಂದು ಗೌತಮ್ ಗಂಭೀರ್ ಹೇಳಿಕೆ ನೀಡಿದ್ದಾರೆ.

Continue Reading

ಕ್ರೀಡೆ

Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

Team India New Head Coach: ಕ್ರಿಕೆಟ್ ಆಸ್ಟ್ರೇಲಿಯಾ ಕಂಡ ಯಶಸ್ವಿ ಕೋಚ್ ಗಳಲ್ಲಿ ಒಬ್ಬರಾದ ಜಸ್ಟಿನ್ ಲ್ಯಾಂಗರ್ ತಾವಾಗಿಯೇ ಕೋಚಿಂಗ್​ ಬಗ್ಗೆ ಆಸಕ್ತಿ ತೋರಿರುವ ಕಾರಣ ಬಿಸಿಸಿಐ ಅವರಿಗೆ ಮಣೆ ಹಾಕಿದರೂ ಅಚ್ಚರಿಯಿಲ್ಲ. ಲ್ಯಾಂಗರ್ ಮಾರ್ಗದರ್ಶನದಲ್ಲಿ ಆಸೀಸ್ ತಂಡ ಟಿ20 ವಿಶ್ವಕಪ್, ಇಂಗ್ಲೆಂಡ್​ ಎದುರಿನ ಪ್ರತಿಷ್ಠಿತ ಆ್ಯಶಸ್​ ಟೆಸ್ಟ್​ ಸರಣಿ ಗೆದ್ದಿತ್ತು

VISTARANEWS.COM


on

Team India New Head Coach
Koo

ನವದೆಹಲಿ: ಟಿ20 ವಿಶ್ವಕಪ್​ ಬಳಿಕ ಟೀಮ್​ ಇಂಡಿಯಾಕ್ಕೆ ಯಾರಾಗಲಿದ್ದಾರೆ ನೂತನ ಕೋಚ್(Team India New Head Coach) ಎಂಬ ಬಿಸಿ ಬಿಸಿ ಚರ್ಚೆಯ ಮಧ್ಯೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಕೋಚ್​, ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿರುವ ಜಸ್ಟಿನ್ ಲ್ಯಾಂಗರ್(Justin Langer) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಭಾರತ ತಂಡದ ಮುಖ್ಯ ಕೋಚ್ ಸ್ಥಾನವು ಅಸಾಮಾನ್ಯ ಪಾತ್ರವಾಗಿದೆ ಎಂದು ಹೇಳುವ ಮೂಲಕ ಕೋಚಿಂಗ್​ ಬಗ್ಗೆ ಒಲವು ತೋರಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯಕ್ಕೂ ಮುನ್ನ ಟೈಮ್ಸ್ ಆಫ್ ಇಂಡಿಯಾದೊಂದಿಗೆ ಮಾತನಾಡಿದ ಲ್ಯಾಂಗರ್, ಭಾರತ ತಂಡ ಕೋಚಿಂಗ್​ ಮಾಡುವುದು ಅಸಾಮಾನ್ಯ ಪಾತ್ರವಾಗಿದೆ. ನನಗೂ ಕೋಚಿಂಗ್​ ಮಾಡಲು ಕುತೂಹಲವಿದೆ. ಇಲ್ಲಿ ಅಪಾರ ಸಂಖ್ಯೆಯ ಕ್ರಿಕೆಟ್ ಪ್ರತಿಭೆಗಳಿದ್ದಾರೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ಗಮನಿಸುವಾಗ ಕೋಚಿಂಗ್​ ಹುದ್ದೆಗೆ ಅರ್ಜಿ ಸಲ್ಲಿಸುವ ಸೂಚನೆಯೊಂದು ಲಭಿಸಿದೆ. ಸೋಮವಾರ ಬಿಸಿಸಿಐ ಕೋಚ್ ಹುದ್ದೆಗಾಗಿ(Team India Coach) ಬಿಸಿಸಿಐ(BCCI) ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ.

ಶುಕ್ರವಾರವಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಾವು 3 ವರ್ಷಗಳ ದೀರ್ಘ ಅವಧಿಗಾಗಿ ಕೋಚ್​ ಹುಡುಕಾಟದಲ್ಲಿದ್ದೇವೆ ಎಂದು ಹೇಳಿದ್ದರು. ಜತೆಗೆ ದ್ರಾವಿಡ್ ಅವರಿಗೂ​ ಮರುಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದರು. ಆದರೆ, ದ್ರಾವಿಡ್​ ಕೋಚ್​ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ಹೊಂದಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಬಿಸಿಸಿಐ ನೂತನ ಕೋಚ್​ ಹುಡುಕಾಟದಲ್ಲಿದೆ.

ಬಿಸಿಸಿಐ ಕೂಡ ವಿದೇಶಿ ಕೋಚ್​ ಆಯ್ಕೆಯ ಬಗ್ಗೆ ಆಲೋಚನೆ ನಡೆಸುತ್ತಿದೆ ಎನ್ನುವ ಮಾತುಗಳು ಈ ಹಿಂದೆಯೇ ಕೇಳಿ ಬಂದಿತ್ತು. 2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಯೋಚಿಸಿದೆ ಎನ್ನಲಾಗಿದೆ.

ಇದನ್ನೂ ಓದಿ Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

ಕ್ರಿಕೆಟ್ ಆಸ್ಟ್ರೇಲಿಯಾ ಕಂಡ ಯಶಸ್ವಿ ಕೋಚ್ ಗಳಲ್ಲಿ ಒಬ್ಬರಾದ ಜಸ್ಟಿನ್ ಲ್ಯಾಂಗರ್ ತಾವಾಗಿಯೇ ಕೋಚಿಂಗ್​ ಬಗ್ಗೆ ಆಸಕ್ತಿ ತೋರಿರುವ ಕಾರಣ ಬಿಸಿಸಿಐ ಅವರಿಗೆ ಮಣೆ ಹಾಕಿದರೂ ಅಚ್ಚರಿಯಿಲ್ಲ. ಲ್ಯಾಂಗರ್ ಮಾರ್ಗದರ್ಶನದಲ್ಲಿ ಆಸೀಸ್ ತಂಡ ಟಿ20 ವಿಶ್ವಕಪ್, ಇಂಗ್ಲೆಂಡ್​ ಎದುರಿನ ಪ್ರತಿಷ್ಠಿತ ಆ್ಯಶಸ್​ ಟೆಸ್ಟ್​ ಸರಣಿ ಗೆದ್ದಿತ್ತು. ಮೂರು ವರ್ಷಗಳ ಕಾಲ ಅವರು ಆಸೀಸ್​ ತಂಡದ ಕೋಚ್​ ಆಗಿ ಕರ್ತವ್ಯ ನಿರ್ವಹಿಸಿದ್ದರು. ಒಟ್ಟಾರೆಯಾಗಿ ಟಿ20 ವಿಶ್ವಕಪ್​ ಮುಗಿದ ಬಳಿಕ ಭಾರತ ತಂಡದ ಕೋಚ್​ ಯಾರಾಗಲಿದ್ದಾರೆ ಎನ್ನುವ ಸ್ಪಷ್ಟ ಚಿತ್ರಣ ಸಿಗಲಿದೆ.

Continue Reading

ಕ್ರೀಡೆ

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

KL Rahul: ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಇದರ ಬೆನ್ನಲ್ಲೇ ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

KL Rahul
Koo

ಲಕ್ನೋ: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ 10 ವಿಕೆಟ್​ಗಳ ಹೀನಾಯ ಸೋಲು ಕಂಡ ಬೇಸರದಲ್ಲಿ ಸಿಟ್ಟಿಗೆದ್ದ ಫ್ರಾಂಚೈಸಿ ಮಾಲಿಕ ಸಂಜೀವ್ ಗೋಯೆಂಕಾ(Sanjiv Goenka) ಮೈದಾನದಲ್ಲೇ ನಾಯಕ ಕೆ.ಎಲ್​ ರಾಹುಲ್(KL Rahul)​ ಜತೆ ಜಗಳವಾಡಿದ್ದರು. ಈ ಘಟನೆ ಬಳಿಕ ಅನೇಕ ಮಾಜಿ ಆಟಗಾರರು ಗೋಯೆಂಕಾ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಗೆ ಸಂಬಂಧಿಸಿ ರಾಹುಲ್​ ಲಕ್ನೋ ತಂಡ ತೊರೆಯಲಿದ್ದಾರೆ, ಆರ್​ಸಿಬಿ ಸೇರಲಿದ್ದಾರೆ, ತಂಡದ ಆಟಗಾರರೊಂದಿಗೆ ಪ್ರಯಾಣಿಸದೆ ಪ್ರತ್ಯೇಕವಾಗಿ ಪ್ರಯಾಣಿಸಿದ್ದಾರೆ ಹೀಗೆ ಹಲವು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಈ ಎಲ್ಲ ಊಹಾಪೋಹಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ.

ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಈ ಮೂಲಕ ನಮ್ಮ ಮಧ್ಯೆ ಯಾವುದೇ ಮುನಿಸು ಇಲ್ಲ ಎನ್ನುವ ಸಂದೇಶ ನೀಡಿದಂತಿದೆ. ಸದ್ಯ ವೈರಲ್​ ಆಗುತ್ತಿರುವ ಫೋಟೊದಲ್ಲಿ ರಾಹುಲ್​ ಅವರನ್ನು ಗೋಯೆಂಕಾ ತಬ್ಬಿಕೊಂಡಿರಿವಂತೆ ಕಾಣುತ್ತಿದೆ. ರಾಹುಲ್​ ಕೂಡ ನಗುಮುಗದಿಂದಲೇ ಕಾಣಿಸಿಕೊಂಡಿದ್ದಾರೆ. ಆದರೆ, ಗೋಯೆಂಕಾ ಅವರ ಮುಖ ಮಾತ್ರ ಸ್ಪಷ್ಟವಾಗಿ ಗೋಚರಿಸಿಲ್ಲ. ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ರಾಹುಲ್​ ಮತ್ತು ಗೋಯೆಂಕಾ ನಡುವಿನ ಮುನಿಸು ಶಮನವಾದಂತೆ ಕಾಣುತ್ತಿದೆ.

ಕಳೆದ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮಾತ್ರವಲ್ಲದೆ, ಬೌಲಿಂಗ್​ನಲ್ಲಿಯೂ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. ಕನಿಷ್ಠ 1 ವಿಕೆಟ್​ ಕೂಡ ಕೀಳಲಾಗದ ಘೋರ ವೈಫಲ್ಯ ಕಂಡಿತ್ತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವಂತೆ ಕಂಡುಬಂದಿತ್ತು. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾಗಿದ್ದರೂ, ಈ ದೃಶ್ಯ ನೋಡುವಾಗ ಇದು ಅಸಮಾಧಾನದ ನುಡಿ ಎಂದು ತಿಳಿದು ಬಂದಿತ್ತು.

ಗೋಯೆಂಕಾ ಮಾತಿಗೆ ರಾಹುಲ್ ಪ್ರತಿಕ್ರಿಯೆ ನೀಡಲು ಮುಂದಾದರೂ ಕೂಡ ಇದನ್ನು ಗೋಯೆಂಕಾ ಒಪ್ಪಿಕೊಳ್ಳದೆ ಏನೋ ಬೈಯುತ್ತಿರುವಂತೆ ದೃಶ್ಯದಲ್ಲಿ ಕಂಡುಬಂದಿತ್ತು. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುಗಿತ್ತು. ಈ ಘಟನೆಯಿಂದ ರಾಹುಲ್​ ನೊಂದಿದ್ದಾರೆ ಎನ್ನಲಾಗಿತ್ತು. ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದ ಹೆಡ್ ಮತ್ತು ಅಭಿಷೇಕ್​​ ಸ್ಟೇಡಿಯಂನ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿದ್ದರು.

ಇದನ್ನೂ ಓದಿ IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ತಂಡ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಪ್ಲೇ ಆಫ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಲಕ್ನೋಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಡೆಲ್ಲಿ ವಿರುದ್ಧ ಗೆದ್ದರೆ ಮಾತ್ರ ಸಾಲದು ಅಂತಿಮ ಪಂದ್ಯದಲ್ಲಿ ಮುಂಬೈ ವಿರುದ್ಧವೂ ಗೆಲುವು ಅತ್ಯಗತ್ಯ.

Continue Reading
Advertisement
KL Rahul
ಕ್ರೀಡೆ10 mins ago

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Bank Loan Fraud
ಪ್ರಮುಖ ಸುದ್ದಿ1 hour ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
ಉತ್ತರ ಕನ್ನಡ2 hours ago

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Swati Maliwal
ಪ್ರಮುಖ ಸುದ್ದಿ2 hours ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ2 hours ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Manjappa Magodi
ಚಿತ್ರದುರ್ಗ3 hours ago

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Viral News
ವಿದೇಶ3 hours ago

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

Narendra Modi
ಪ್ರಮುಖ ಸುದ್ದಿ3 hours ago

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Viral Video
ವೈರಲ್ ನ್ಯೂಸ್3 hours ago

Viral Video: 25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಹುಟ್ಟಿಕೊಂಡಿದ್ದು ಹೇಗೆ ಗೊತ್ತೇ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ4 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20246 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20249 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ10 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು11 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ18 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಟ್ರೆಂಡಿಂಗ್‌