Virat Kohli: ಕುಮಾರ ಸಂಗಕ್ಕರ ವಿಶ್ವ ದಾಖಲೆಯ ಮೇಲೆ ಕಣ್ಣಿಟ್ಟ ವಿರಾಟ್​ ಕೊಹ್ಲಿ - Vistara News

ಕ್ರಿಕೆಟ್

Virat Kohli: ಕುಮಾರ ಸಂಗಕ್ಕರ ವಿಶ್ವ ದಾಖಲೆಯ ಮೇಲೆ ಕಣ್ಣಿಟ್ಟ ವಿರಾಟ್​ ಕೊಹ್ಲಿ

ವಿರಾಟ್​ ಕೊಹ್ಲಿ ಅವರು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 2000 ಕ್ಕೂ ಹೆಚ್ಚು ರನ್ ಗಳಿಸಿದ ಕುಮಾರ ಸಂಗಕ್ಕರ ಅವರ ವಿಶ್ವ ದಾಖಲೆಯನ್ನು ಮುರಿಯಲು ಸಜ್ಜಾಗಿದ್ದಾರೆ.

VISTARANEWS.COM


on

Virat Kohli takes part in India's training session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೊಹಾನ್ಸ್​ಬರ್ಗ್​: ಈಗಾಗಲೇ ಹಲವು ದಿಗ್ಗಜ ಆಟಗಾರರ ದಾಖಲೆಗಳನ್ನು ಮುರಿದಿರುವ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli) ಅವರು ದಕ್ಷಿಣ ಆಫ್ರಿಕಾ(IND vs SA) ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಕುಮಾರ ಸಂಗಕ್ಕರ(Kumar Sangakkara) ಅವರ ವಿಶ್ವ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ.

ವಿರಾಟ್​ ಕೊಹ್ಲಿ ಅವರು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 2000 ಕ್ಕೂ ಹೆಚ್ಚು ರನ್ ಗಳಿಸಿದ ಕುಮಾರ ಸಂಗಕ್ಕರ ಅವರ ವಿಶ್ವ ದಾಖಲೆಯನ್ನು ಮುರಿಯಲು ಸಜ್ಜಾಗಿದ್ದಾರೆ. ಈ ದಾಖಲೆ ಮುರಿಯಲು ಕೊಹ್ಲಿಗೆ ಬೇಕಿರುವುದು ಕೇವಲ 66 ರನ್​. ಸದ್ಯ ಕೊಹ್ಲಿ ಎಲ್ಲ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಆರು ಬಾರಿ 2000-ಪ್ಲಸ್ ರನ್‌ಗಳನ್ನು ಬಾರಿಸಿ ಪ್ರಸ್ತುತ ಈ ದಾಖಲೆಯ ಪಟ್ಟಿಯಲ್ಲಿ ಸಂಗಕ್ಕಾರ ಅವರೊಂದಿಗೆ ಜಂಟಿಯಾಗಿದ್ದಾರೆ.

ಕೊಹ್ಲಿ 2012, 2014, 2016, 2017, 2018 ಮತ್ತು 2019 ರಲ್ಲಿ 2000 ರನ್ ಗಳಿಸಿದ್ದಾರೆ. ಸಂಗಕ್ಕರ ಅವರು 2004, 2006, 2009, 2011, 2012 ಮತ್ತು 2013 ರಲ್ಲಿ 2000 ರನ್ ಗಳಿಸಿದ್ದರು.

ಅತಿ ಹೆಚ್ಚು ಬಾರಿ 2000 ರನ್ ಗಳಿಸಿದ ಆಟಗಾರರು

ಕುಮಾರ ಸಂಗಕ್ಕರ-6

ವಿರಾಟ್​ ಕೊಹ್ಲಿ-6

ಮಹೇಲಾ ಜಯವರ್ಧನೆ-5

ಸಚಿನ್​ ತೆಂಡೂಲ್ಕರ್-5

ಜಾಕ್​ ಕ್ಯಾಲಿಸ್​-4

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್​ ಸರಣಿಯ ಮೊದಲ ಬಾಕ್ಸಿಂಗ್​ ಡೇ ಟೆಸ್ಟ್​ ಮಂಗಳವಾರದಿಂದ ಆರಂಭಗೊಳ್ಳಲಿದೆ. ಈಗಾಗಲೇ ಭಾರತೀಯ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ.

ದ್ರಾವಿಡ್​, ಸೆಹವಾಗ್​ ದಾಖಲೆ ಮುರಿಯಲು ಸಜ್ಜಾದ ಕಿಂಗ್​ ಕೊಹ್ಲಿ

ವಿರಾಟ್​ ಕೊಹ್ಲಿಗೆ ಈ ಸರಣಿಯಲ್ಲಿ ವೀರೇಂದ್ರ ಸೇಹವಾಗ್(Virender Sehwag)​ ಮತ್ತು ಹಾಲಿ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರ ದಾಖಲೆಯೊಂದನ್ನು ಮುರಿಯುವ ಅವಕಾಶವಿದೆ.

ಹೌದು, ವಿರಾಟ್​ ಕೊಹ್ಲಿ ಅವರು 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಒಟ್ಟಾರೆ 71 ರನ್​ ಬಾರಿಸಿದರೆ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ 2ನೇ ಭಾರತೀಯ ಬ್ಯಾಟರ್​ ಎನಿಸಿಕೊಳ್ಳಲಿದ್ದಾರೆ. ಈ ಮೂಲಕ ದ್ರಾವಿಡ್​ ಮತ್ತು ಸೆಹವಾಗ್​ ಅವರ ದಾಖಲೆಯನ್ನು ಮುರಿಯಲಿದ್ದಾರೆ.

ಇದನ್ನೂ ಓದಿ ಕೊಹ್ಲಿಯ ವಿಕೆಟ್​ ಪಡೆಯಲು ದಕ್ಷಿಣ ಆಫ್ರಿಕಾ ಬೌಲರ್​ಗಳಿಗೆ ಸಲಹೆ ನೀಡಿದ ಕುಚಿಕು ಗೆಳೆಯ

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್​ನಲ್ಲಿ ಅತಿ ಹೆಚ್ಚು ರನ್​ಗಳಿಸಿದ ಭಾರತೀಯ ದಾಖಲೆ ದಿಗ್ಗಜ ಸಚಿನ್​ ತೆಂಡೂಲ್ಕರ್​ ಹೆಸರಿನಲ್ಲಿದೆ. ಅಲ್ಲದೆ ಉಭಯ ತಂಡಗಳ ಆಟಗಾರರ ಪೈಕಿಯೂ ಸಚಿನ್​ ಮೊದಲ ಸ್ಥಾನ ಪಡೆದಿದ್ದಾರೆ. ತೆಂಡೂಲ್ಕರ್​ 25 ಪಂದ್ಯಗಳನ್ನು ಆಡಿ 1,741 ರನ್​ ಬಾರಿಸಿದ್ದಾರೆ.

ಭಾರತೀಯ ಆಟಗಾರರ ಪೈಕಿ ಈ ಸಾಧನೆ ಮಾಡಿ ಎರಡನೇ ಸ್ಥಾನದಲ್ಲಿರುವ ವಿರೇಂದ್ರ ಸೆಹವಾಗ್,​ 15 ಟೆಸ್ಟ್​ ಪಂದ್ಯಗಳಿಂದ 1306 ರನ್ ಬಾರಿಸಿದ್ದಾರೆ. ಮೂರನೇ ಸ್ಥಾನದಲ್ಲಿರುವ ರಾಹುಲ್​ ದ್ರಾವಿಡ್​ 21 ಟೆಸ್ಟ್​ ಆಡಿ 1252 ರನ್​ ಗಳಿಸಿದ್ದಾರೆ.


35ರ ಹರೆಯದ ವಿರಾಟ್ ಕೊಹ್ಲಿ ಇದುವರೆಗೆ 14 ಟೆಸ್ಟ್ ಪಂದ್ಯಗಳನ್ನು ಆಡಿ 56.18. ಸರಾಸರಿಯಲ್ಲಿ 1236 ರನ್ ಬಾರಿಸಿದ್ದಾರೆ. ಕೊಹ್ಲಿ 71 ರನ್​ ಬಾರಿಸಿದರೆ ದ್ರಾವಿಡ್​ ಮತ್ತು ಸೆಹವಾಗ್​ ದಾಖಲೆ ಪತನಗೊಳ್ಳಲಿದೆ. ಪ್ರಚಂಡ ಫಾರ್ಮ್​ನಲ್ಲಿರುವ ಕೊಹ್ಲಿ ಈ ದಾಖಲೆಯನ್ನು ಮುರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಗ್ರ ಸ್ಥಾನದಲ್ಲಿರುವ ಸಚಿನ್​ ದಾಖಲೆ ಮುರಿಯುವು ಕೊಂಚ ಕಷ್ಟವಾಗಿದೆ. ಈ ದಾಖಲೆ ಮುರಿಯಲು 505 ರನ್​ ಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Virat kohli : ಕೊಹ್ಲಿ ಹೆಸರು ಕೂಗಿ ಪಾಕಿಸ್ತಾನ ಬೌಲರ್​​ನನ್ನು ಲೇವಡಿ ಮಾಡಿದ ಅಭಿಮಾನಿಗಳು; ಇಲ್ಲಿದೆ ವಿಡಿಯೊ

Virat kohli: ಹ್ಯಾರಿಸ್ ರವೂಫ್ 5 ನೇ ಓವರ್​ನಲ್ಲಿ ಆಕ್ರಮಣ ಮುಂದಾದರು. ಆದರೆ ಮೊದಲ ಓವರ್​ನಲ್ಲಿ 17 ರನ್​ ನೀಡಿದ ಕಾರಣ ಅವರಿಗೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ, ನಂತರ ಅದ್ಭುತ ಪುನರಾಗಮನ ಮಾಡಿದರು. ತಮ್ಮ ವೇಗದಿಂದ ಇಂಗ್ಲೆಂಡ್ ಬ್ಯಾಟರ್​ಗಳಿಗೆ ತೊಂದರೆ ನೀಡಿದರು.

VISTARANEWS.COM


on

Virat kohli
Koo

ಬೆಂಗಳೂರು: ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್ ಇಂಗ್ಲೆಂಡ್ ವಿರುದ್ಧ ಟಿ20 ಐ ಪಂದ್ಯದಲ್ಲಿ ಬೌಲಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಉಭಯ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಟಿ 20 ಐ ಸರಣಿಯ ಎರಡನೇ ಪಂದ್ಯ ಶನಿವಾರ (ಮೇ 25) ಬರ್ಮಿಂಗ್​ಹ್ಯಾಮ್​ನ ಎಜ್​ಬಾಸ್ಟನ್​ನಲ್ಲಿ ನಡೆಯಿತು. ದೀರ್ಘಕಾಲದ ಗಾಯದ ನಂತರ ಪಾಕಿಸ್ತಾನ ತಂಡಕ್ಕೆ ಮರಳಿದ ಹ್ಯಾರಿಸ್ ರವೂಫ್, ಚೆಂಡಿನೊಂದಿಗೆ ತಂಡಕ್ಕೆ ಪ್ರಮುಖ ಪಾತ್ರ ವಹಿಸಿದರು ಮತ್ತು ತಮ್ಮ ತಂಡದ ಪರವಾಗಿ ನಿರ್ಣಾಯಕ ವಿಕೆಟ್​ಗಳನ್ನು ಪಡೆದರು. ಆದಾಗ್ಯೂ, ಬರ್ಮಿಂಗ್​ಹ್ಯಾಮ್​ನ ಎಜ್​ಬಾಸ್ಟನ್​ನಲ್ಲಿ ನಡೆದ ಪಂದ್ಯ ಗೆಲ್ಲಲು ಅವರು ತಮ್ಮ ತಂಡಕ್ಕೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ. ಆದರೆ ಅವರಿಗೆ ಕೊಹ್ಲಿ (Virat kohli) ಕಾಡಿದರು.

ಹ್ಯಾರಿಸ್ ರವೂಫ್ 5 ನೇ ಓವರ್​ನಲ್ಲಿ ಆಕ್ರಮಣ ಮುಂದಾದರು. ಆದರೆ ಮೊದಲ ಓವರ್​ನಲ್ಲಿ 17 ರನ್​ ನೀಡಿದ ಕಾರಣ ಅವರಿಗೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ, ನಂತರ ಅದ್ಭುತ ಪುನರಾಗಮನ ಮಾಡಿದರು. ತಮ್ಮ ವೇಗದಿಂದ ಇಂಗ್ಲೆಂಡ್ ಬ್ಯಾಟರ್​ಗಳಿಗೆ ತೊಂದರೆ ನೀಡಿದರು.

ಹ್ಯಾರಿಸ್ ರವೂಫ್ ತಮ್ಮ ಎರಡನೇ ಸ್ಪೆಲ್​ನಲ್ಲಿ ಆಕ್ರಮಣಕ್ಕೆ ಬಂದಾಗ, ಅವರಿಗೆ ಪ್ರೇಕ್ಷಕರಿಂದ ಉತ್ತಮ ಸ್ವಾಗತ ಸಿಗಲಿಲ್ಲ. ವೇಗಿ ಎರಡನೇ ಓವರ್​ನ ಮೊದಲ ಎಸೆತವನ್ನು ಎಸೆಯುತ್ತಿದ್ದಂತೆ ಅಭಿಮಾನಿಗಳು “ಕೊಹ್ಲಿ ಕೊಹ್ಲಿ” ಎಂದು ಕೂಗಿದರು. ಹ್ಯಾರಿಸ್ ರವೂಫ್ ಅವರನ್ನು ಕೆಲವು ಸಮಯದಿಂದ “ಕೊಹ್ಲಿ ಕೊಹ್ಲಿ” ಎಂದು ಕರೆಯಲಾಗುತ್ತದೆ. ಏಕೆಂದರೆ 2022 ರ ಟಿ 20 ವಿಶ್ವಕಪ್​​ನಲ್ಲಿ ಎಂಸಿಜಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಸಮಯದಲ್ಲಿ ಕೊಹ್ಲಿ ರವೂಫ್​ಗೆ ಸಿಕ್ಸರ್ ಬಾರಿಸಿದ್ದರು.

ಇದನ್ನೂ ಓದಿ: Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

ಇಂಗ್ಲೆಂಡ್ ವಿರುದ್ಧದ ಎರಡನೇ ಟಿ 20 ಐ ಪಂದ್ಯದಲ್ಲಿ, ಹ್ಯಾರಿಸ್ ರೌಫ್ 34 ರನ್​ಗಳಿಗೆ 2 ವಿಕೆಟ್​ ಪಡೆದರು. ಎದುರಾಳಿಯನ್ನು ಒಟ್ಟು 200 ಕ್ಕಿಂತ ಕಡಿಮೆ ಮೊತ್ತಕ್ಕೆ ನಿಯಂತ್ರಿಸಲು ತಮ್ಮ ತಂಡಕ್ಕೆ ಸಹಾಯ ಮಾಡಿದರು. ಇವರಲ್ಲದೆ, ಶಾಹೀನ್ ಅಫ್ರಿದಿ ಮತ್ತು ಇಮಾದ್ ವಾಸಿಮ್ ಎರಡು ವಿಕೆಟ್ ಪಡೆದು ಎದುರಾಳಿಗಳನ್ನು 183 ರನ್​ಗಳಿಗೆ ನಿಯಂತ್ರಿಸಿದರು.

ಇದು ಪಾಕಿಸ್ತಾನದಿಂದ ಉತ್ತಮ ಬ್ಯಾಟಿಂಗ್ ಪ್ರದರ್ಶನವಾಗಿತ್ತು. ಫಖರ್ ಜಮಾನ್ 45 ರನ್ ಗಳಿಸಿದರೆ ನಾಯಕ ಬಾಬರ್ ಅಜಮ್ 32 ರನ್ ಗಳಿಸಿದರು. ಆದಾಗ್ಯೂ ಕೇವಲ 160 ರನ್​ಗಳಿಗೆ ಆಲೌಟ್ ಆದರು ಮತ್ತು ಪಂದ್ಯವನ್ನು 23 ರನ್ ಗಳಿಂದ ಕಳೆದುಕೊಂಡರು.

ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಎರಡನೇ ಟಿ 20 ಪಂದ್ಯದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಇದು ಅವರಿಂದ ಉತ್ತಮ ಬೌಲಿಂಗ್ ಪ್ರದರ್ಶನ ಎಂದು ಅವರು ಒಪ್ಪಿಕೊಂಡರು. ಆದರೆ ಬ್ಯಾಟಿಂಗ್​ನಲ್ಲಿ ವಿಫಲಗೊಂಡೆವು ಎಂದು ಹೇಳಿದ್ದಾರೆ.

ಇದು ಸಾಧಾರಣ ಸ್ಕೋರ್ ಆಗಿತ್ತು, ನಾವು ಉತ್ತಮವಾಗಿ ಬೌಲಿಂಗ್ ಮಾಡಿದ್ದವು. ದೊಡ್ಡ ಜತೆಯಾಟ ಮೂಡಿ ಬರಲಿಲ್ಲ. ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ತಿಳಿದಿದ್ದಾರೆ. ನಾವು ಪ್ರತಿಯೊಬ್ಬ ಆಟಗಾರನ ಪಾತ್ರವನ್ನು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Hardik Pandya : ಹಾರ್ದಿಕ್ ಪಾಂಡ್ಯ ಕೆಲವು ವರ್ಷಗಳ ಹಿಂದೆ ತಮ್ಮ ವೃತ್ತಿಪರ ಕ್ರಿಕೆಟ್ ಪ್ರಯಾಣ ಪ್ರಾರಂಭಿಸಿದ ಬಳಿಕ ಕೆಟ್ಟ ಕಾರಣಗಳಿಗೋಸ್ಕರವೇ ಆಗಾಗ ಸುದ್ದಿಯಾಗುತ್ತಾರೆ. ಜನರು ಅವರ ವೈಯಕ್ತಿಕ ಜೀವನದ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದಾರೆ. ನತಾಶಾ ಅವರನ್ನು ಮದುವೆಯಾಗುವ ಮೊದಲು ಮಗುವಾಗಿದ್ದೆಲ್ಲ ಘಟನೆಗಳು ನಡೆದಿದೆ.

VISTARANEWS.COM


on

Hardik Pandya
Koo

ನವದೆಹಲಿ: ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardik Pandya) ಈಗ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸುದ್ದಿಯಾಗಿರುವುದು ಕ್ರಿಕೆಟ್​ ಕಾರಣಕ್ಕೆ ಅಲ್ಲ. ಬದಲಾಗಿ ಅವರ ವೈವಾಹಿಕ ಜೀವನದ ಕಾರಣಕ್ಕೆ. ಅವರ ಪತ್ನಿ ನತಾಶಾ ಸ್ಟಾಂಕೊವಿಕ್ ಅವರನ್ನು ತೊರೆದು ಹೋಗಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಹೀಗಾಗಿ ಅವರ ಪರ್ಸನಲ್ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಅವರು ಆರಂಭದಲ್ಲಿಯೂ ಒಂದು ಬಾರಿ ಲವ್​ ಬ್ರೇಕ್ ಅಪ್​ ಮಾಡಿಕೊಂಡಿದ್ದರು ಎಂಬ ಸುದ್ದಿಯೊಂದು ಇದೀಗ ಮತ್ತೆ ತಲೆ ಎತ್ತಿದೆ. ಅವರು ರಾಷ್ಟ್ರೀಯ ತಂಡಕ್ಕೆ ಪ್ರವೇಶಿಸಿದ ಕೆಲವು ವರ್ಷಗಳ ನಂತರ, ಬಾಲಿವುಡ್ ನಟಿ ಎಲಿ ಅವ್ರಾಮ್ ಅವರೊಂದಿಗೆ ಸಣ್ಣ ಅವಧಿಯಲ್ಲಿ ಡೇಟಿಂಗ್ ಮಾಡುತ್ತಿದ್ದರು. ಆದಾಗ್ಯೂ, ಪಾಂಡ್ಯ ಅವರ ವಿವಾದಾತ್ಮಕ ಟಿವಿ ಶೋನಲ್ಲಿ (ಕಾಫಿ ವಿತ್ ಕರಣ್​​) ಕಾಣಿಸಿಕೊಂಡ ನಂತರ ಅವರ ಕುತೂಹಲಕಾರಿ ಪ್ರೇಮಕಥೆ ಅಂತ್ಯಗೊಂಡಿತ್ತು.

ಹಾರ್ದಿಕ್ ಪಾಂಡ್ಯ ಕೆಲವು ವರ್ಷಗಳ ಹಿಂದೆ ತಮ್ಮ ವೃತ್ತಿಪರ ಕ್ರಿಕೆಟ್ ಪ್ರಯಾಣ ಪ್ರಾರಂಭಿಸಿದ ಬಳಿಕ ಕೆಟ್ಟ ಕಾರಣಗಳಿಗೋಸ್ಕರವೇ ಆಗಾಗ ಸುದ್ದಿಯಾಗುತ್ತಾರೆ. ಜನರು ಅವರ ವೈಯಕ್ತಿಕ ಜೀವನದ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದಾರೆ. ನತಾಶಾ ಅವರನ್ನು ಮದುವೆಯಾಗುವ ಮೊದಲು ಮಗುವಾಗಿದ್ದೆಲ್ಲ ಘಟನೆಗಳು ನಡೆದಿದೆ. ಹಾರ್ದಿಕ್ ಪಾಂಡ್ಯ ಅವರು ಸ್ಟಾಂಕೋವಿಕ್ ಅವರನ್ನು ಮದುವೆಯಾಗುವ ಮೊದಲು, ಬಾಲಿವುಡ್ ನಟಿ ಎಲಿ ಅವ್ರಾಮ್ ಅವರೊಂದಿಗೆ ಸ್ವಲ್ಪ ಸಮಯದವರೆಗೆ ಡೇಟಿಂಗ್ ಮಾಡಿದ್ದರು.

ಹಲವಾರು ಊಹಾಪೋಹಗಳು, ಸುದ್ದಿಗಳ ನಂತರ ಇಬ್ಬರೂ ಒಟ್ಟಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಪ್ರಾರಂಭಿಸಿದ್ದರು. ಹಾರ್ದಿಕ್ ಅವರ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಅವರ ಮದುವೆಯ ವೇಳೆ ಎಲಿ ಕಾಣಿಸಿಕೊಂಡಿದ್ದರು. ಅಲ್ಲೆಲ್ಲ ಓಡಾಡಿದ್ದರು.ಅವರ ಬೇಟಿಯ ಉದ್ದಕ್ಕೂ, ಹಾರ್ದಿಕ್ ಅಥವಾ ಎಲಿ ಇಬ್ಬರ ನಡುವೆ ಪ್ರಣಯ ಸಂಬಂಧವಿದೆ ಎಂಬ ವದಂತಿಗಳನ್ನು ದೃಢಪಡಿಸಲಿಲ್ಲ ಅಥವಾ ನಿರಾಕರಿಸಿರಲಿಲ್ಲ.

ಎಲಿ ಅವ್ರಾಮ್ ಜತೆ ಬ್ರೇಕ್​ಅಪ್​​

ಟಿವಿ ಶೋ ‘ಕಾಫಿ ವಿತ್ ಕರಣ್’ ನಲ್ಲಿ ಹಾರ್ದಿಕ್ ಅವರ ವಿವಾದಾತ್ಮಕ ಹೇಳಿಕೆಯೂ ಅವರಿಬ್ಬರ ಬ್ರೇಕ್​ಅಪ್​ಗೆ ಕಾರಣ ಎನ್ನಲಾಗಿದೆ. ಅಲ್ಲಿ ಕ್ರಿಕೆಟಿಗ ಮಹಿಳೆಯರ ಬಗ್ಗೆ ಕೆಲವು ಆಕ್ಷೇಪಾರ್ಹ ಕಾಮೆಂಟ್​ಗಳನ್ನು ಮಾಡಿದ್ದರು. ಈ ಕಾರಣಕ್ಕೆ ಬಿಸಿಸಿಐನಿಂದ ದಂಡನೆಯನ್ನೂ ಎದುರಿಸಿದ್ದರು.

ಇದನ್ನೂ ಓದಿ: Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

ವಿವಾದ ಭುಗಿಲೆದ್ದ ನಂತರ ಎಲಿ ಅವ್ರಾಮ್ ತನ್ನ ಆಘಾತ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು. ಹಾರ್ದಿಕ್ ಅವರನ್ನು ವೈಯಕ್ತಿಕವಾಗಿ ಬಲ್ಲೆ ಮತ್ತು ಇತರ ಹೆಣ್ಣಿನ ಬಗ್ಗೆ ಇಷ್ಟು ಅಸಹ್ಯಕರ ರೀತಿಯಲ್ಲಿ ಮಾತನಾಡಿದ ಅವರ ಲಜ್ಜೆಯಿಲ್ಲ. ಅವರಿಗೆ ಟೀಕೆ ಮಾಡಲಾಗುತ್ತಿರುವುದು ಸರಿಯಾದ ಕ್ರಮ ಎಂದಿದ್ದರು.

ಎಲಿ ಜತೆ ಬ್ರೇಕಪ್ ಆದ ನಂತರ ಹಾರ್ದಿಕ್ ಪಾಂಡ್ಯ ಮತ್ತೊಬ್ಬ ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ ಅವರೊಂದಿಗೆ ಮತ್ತೆ ಪ್ರೀತಿಯನ್ನು ಕಂಡುಕೊಂಡರು. ಇವರಿಬ್ಬರು 2020 ರಲ್ಲಿ ವಿವಾಹವಾದರು ಮತ್ತು ಕೆಲವು ತಿಂಗಳ ನಂತರ ತಮ್ಮ ಮೊದಲ ಮಗು ಅಗಸ್ತ್ಯನನ್ನು ಸ್ವಾಗತಿಸಿದ್ದರು.

Continue Reading

ಪ್ರಮುಖ ಸುದ್ದಿ

Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

Shikhar Dhawan

VISTARANEWS.COM


on

Shikhar Dhawan
Koo

ಬೆಂಗಳೂರು: ಎಡಗೈ ಬ್ಯಾಟರ್​ ಶಿಖರ್ ಧವನ್ (Shikhar Dhawan) ಭಾರತ ಕ್ರಿಕೆಟ್​ ತಂಡ ನೋಡಿದ ಅತ್ಯುತ್ತಮ ಆರಂಭಿಕ ಬ್ಯಾಟರ್​ಗಳಲ್ಲಿ ಒಬ್ಬರು. ಆದರೆ ಅವರ ವೈಯಕ್ತಿಕ ಜೀವನವು ಸ್ವಲ್ಪ ಮಟ್ಟಿಗೆ ಕ್ಲಿಷ್ಟಕರವಾಗಿದೆ. ಅವರ ಜೀವನ ಕತೆಯು ಪ್ರಕ್ಷುಬ್ಧತೆಯಿಂದ ತುಂಬಿಕೊಂಡಿದೆ. ಕಳೆದ ವರ್ಷ ಪರಸ್ಪರ ಒಪ್ಪಿಗೆಯೊಂದಿಗೆ ಪತ್ನಿ ಆಯೆಷಾ ಮುಖರ್ಜಿ ಅವರಿಂದ ಬೇರ್ಪಟ್ಟ ಬಳಿಕ ನಾನಾ ಘಟನೆಗಳು ಸಂಭವಿಸಿವೆ. 2023 ರ ಅಕ್ಟೋಬರ್​ನಲ್ಲಿ 11 ವರ್ಷಗಳ ವೈವಾಹಿಕ ಜೀವನವನ್ನು ಕೊನೆಗೊಳಿಸಲು ಪತ್ನಿ ಮತ್ತು ಅವರ ನಡುವಿನ ಹೊಂದಾಣಿಕೆ ಕೊರತೆಯೇ ಕಾರಣ. ಇದೇ ಹಿನ್ನೆಲೆಯಲ್ಲಿ ದೆಹಲಿಯ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನಕ್ಕೆ ಒಪ್ಪಿತ್ತು. ಆಗಸ್ಟ್ 8, 2020 ರಿಂದ ಧವನ್ ಮತ್ತು ಆಯೆಷಾ ಗಂಡ ಮತ್ತು ಹೆಂಡತಿಯಾಗಿ ಜತೆಗಿಲ್ಲ.

ಧವನ್ ತನ್ನ ಮಗ ಜೊರಾವರ್ ನಿಂದ ದೂರವಾಗಿರುವ ಬಗ್ಗೆ ಬೇಸರ ಹೊಂದಿದ್ದಾರೆ. ಪುತ್ರ ಆಸ್ಟ್ರೇಲಿಯಾದ ಪ್ರಜೆಯಾಗಿದ್ದು, ತನ್ನ ತಾಯಿಯೊಂದಿಗೆ ಮೆಲ್ಬೋರ್ನ್​ನಲ್ಲಿ ಇದ್ದಾನೆ. ಸಮಸ್ಯೆ ಹೊರತಾಗಿಯೂ ಧವನ್​ ಪುತ್ರನಿಗಾಗಿ ಹಂಬಲಿಸುತ್ತಿರುತ್ತಾರೆ. ಆತನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಆಗಾಗ ಹೇಳುತ್ತಿರುತ್ತಾರೆ. ಏತನ್ಮಧ್ಯೆ ಶಿಖರ್ ಧವನ್​ ಭಾರತ ಮಹಿಳಾ ತಂಡದ ಲೆಜೆಂಡ್​​ ಮಿಥಾಲಿ ರಾಜ್ ಅವರನ್ನು ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಮಿಥಾಲಿ ಜೊತೆ ಧವನ್ ಹೆಸರು ಲಿಂಕ್?

ಕೆಲವು ದಿನಗಳ ಹಿಂದೆ ಧವನ್ ಬಾಲಿವುಡ್ ನಟಿ ಹುಮಾ ಖುರೇಷಿ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿದ್ದರು. ಆದರೆ ಅವರಲ್ಲಿ ಇಬ್ಬರೂ ಮಸಾಲಾ ಸುದ್ದಿಗೆ ಪ್ರತಿಕ್ರಿಯಿಸಿರಲಿಲ್ಲ. ಅದು ಹಾಗೆಯೇ ಅಂತ್ಯಗೊಂಡಿತು. ಇದೀಗ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅವರೊಂದಿಗೆ ಭಾರತೀಯ ಕ್ರಿಕೆಟಿಗನ ಹೆಸರು ತಳುಕು ಹಾಕಿಕೊಂಡಿದೆ.

ಮಿಥಾಲಿ ಇನ್ನೂ ಅವಿವಾಹಿತರಾಗಿದ್ದು, ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ವೀಕ್ಷಕವಿವರಣೆಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೆಂಟರ್ ಕೂಡ ಆಗಿದ್ದಾರೆ. ಏತನ್ಮಧ್ಯೆ, ಧವನ್ ಇತ್ತೀಚೆಗೆ ಟಾಕ್ ಶೋವೊಂದರಲ್ಲಿ ಮಾತನಾಡುವಾಗ ಮಿಥಾಲಿ ಅವರೊಂದಿಗೆ ಡೇಟಿಂಗ್ ವದಂತಿಗಳ ಬಗ್ಗೆ ಮೌನ ಮುರಿದಿದ್ದಾರೆ.

ಇದನ್ನೂ ಓದಿ: Natasa Stankovic : ಡೈವೋರ್ಸ್​ ಗಾಸಿಪ್​ ನಡುವೆಯೇ ಬೇರೊಬ್ಬರ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕ ಜಿಯೋ ಸಿನೆಮಾದ ‘ಧವನ್ ಕರೆಂಗೆ’ ಕಾರ್ಯಕ್ರಮದ ಸಂದರ್ಶನದಲ್ಲಿ ಮಾತನಾಡಿದ್ದರು. ಈ ವೇಳೆ ಅವರು ಮಿಥಾಲಿ ಅವರನ್ನು ಮದುವೆಯಾಗುವ ವದಂತಿ ಬಗ್ಗೆ ಮಾತನಾಡಿದ್ದಾರೆ. ಇದೊಂದು ಅತ್ಯಂತ ಶಾಕಿಂಗ್ ಘಟನೆ ಎಂದಿದ್ದಾರೆ. ನಿಮಗಾದ ಶಾಕಿಂಗ್​ ನ್ಯೂಸ್​ ಯಾವುದು ಎಂದು ಕೇಳಿದ್ದಕ್ಕೆ, , “ನಾನು ಮಿಥಾಲಿ ರಾಜ್ ಅವರನ್ನು ಮದುವೆಯಾಗುತ್ತಿದ್ದೇನೆ ಎಂಬ ವಿಷಯ ಎಂದ ಹೇಳಿದ್ದಾರೆ.

ರಿಷಭ್ ಪಂತ್​ಗೆ ಶ್ಲಾಘನೆ

15 ತಿಂಗಳ ಸವಾಲಿನ ಅವಧಿಯ ನಂತರ ಕ್ರಿಕೆಟ್​ಗೆ ಮರಳಿದ್ದ ಭಾರತದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರನ್ನು ಧವನ್ ಶ್ಲಾಘಿಸಿದರು. ಡಿಸೆಂಬರ್ 2022 ರಲ್ಲಿ, ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪಂತ್ ಗಾಯಗೊಂಡಿದ್ದರು. ಈ ಘಟನೆಯ ನಂತರ, ಪಂತ್ ಹಲವಾರು ಶಸ್ತ್ರಚಿಕಿತ್ಸೆಗಳಿಗೆ ಒಳಗಾದ ನಂತರ ಎನ್​​ಸಿಎನಲ್ಲಿ ಪುನಶ್ಚೇತನ ಮಾಡಿದ್ದಾರೆ. ಅವರ ಆತ್ಮಸ್ಥೈರ್ಯವನ್ನು ಧವನ್ ಹೊಗಳಿದ್ದಾರೆ.

Continue Reading

ಪ್ರಮುಖ ಸುದ್ದಿ

Natasa Stankovic : ಡೈವೋರ್ಸ್​ ಗಾಸಿಪ್​ ನಡುವೆಯೇ ಬೇರೊಬ್ಬರ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

Natasa Stankovic: ನತಾಶಾ ಮತ್ತು ಹಾರ್ದಿಕ್ ಮೇ 2020 ರಲ್ಲಿ ವಿವಾಹವಾಗಿದ್ದರು. ಅವರಿಗೆ ಅಗಸ್ತ್ಯ ಎಂಬ ಮೂರು ವರ್ಷದ ಮಗನಿದ್ದಾನೆ. ಇತ್ತೀಚೆಗೆ, ನತಾಶಾ ತಮ್ಮ ಪಕ್ಕದಲ್ಲಿದ್ದ ಪಾಂಡ್ಯಾ ಹೆಸರನ್ನು ತೆಗೆದುಹಾಕಿದ್ದರು. ಇದು ಅವರ ವಿಚ್ಛೇದನದ ಬಗ್ಗೆ ಊಹಾಪೋಹಗಳನ್ನು ಸೃಷ್ಟಿಸಿತ್ತು.

VISTARANEWS.COM


on

Natasa Stankovic
Koo

ಬೆಂಗಳೂರು: ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ ಸ್ಟಾಂಕೋವಿಕ್ (Natasa Stankovic) ಈಗ ಸುದ್ದಿಯಲ್ಲಿದ್ದಾರೆ. ಅವರು ಮತ್ತು ಹಾರ್ದಿಕ್ ಈಗಾಗಲೇ ಪರಸ್ಪರ ಒಪ್ಪಂದದಿಂದ ಬೇರ್ಪಟ್ಟಿದ್ದಾರೆ ಎಂದು ಸಾಕಷ್ಟು ವದಂತಿಗಳಾಗಿವೆ. ಈ ಗಾಸಿಪ್​ ಸುದ್ದಿಯ ಬೆಂಕಿಗೆ ಹೆಚ್ಚಿನ ತುಪ್ಪ ಸುರಿಯುವಂತೆ ಅವರು ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಸಾರ್ವಜನಿಕಗಾಗಿ ಹೋಗುತ್ತಿರುವ ವಿಡಿಯೊ ವೈರಲ್ ಆಗಿದ್ದು ಪಾಪರಾಜಿಗಳು (ಕ್ಯಾಮೆರಾಮನ್​ಗಳು) ಅವರಿಬ್ಬರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ನಟಿ ದಿಶಾ ಪಠಾಣಿ ಅವರ ವದಂತಿಯ ಗೆಳೆಯ ಅಲೆಕ್ಸಾಂಡರ್ ಅಲೆಕ್ಸ್ಲಿಕ್​ ಮತ್ತು ನತಾಶಾ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಪಾಪರಾಜಿಗಳಿಂದ ಸಾಕಷ್ಟು ವಿನಂತಿಗಳನ್ನು ಪಡೆದ ನಂತರ ನತಾಶಾ ಪೋಸ್ ನೀಡಿದ್ದಾರೆ. ಹೀಗಾಗಿ ಪಾಂಡ್ಯಾ ಜತೆಗಿನ ಡೈವೋರ್ಸ್​ ಪ್ರಕರಣವನ್ನು ಇನ್ನಷ್ಟು ಆಸಕ್ತಿದಾಯಕವಾಗಿದೆ. ಐಪಿಎಲ್ 2024 ರಲ್ಲಿ ಹಾರ್ದಿಕ್ ತಮ್ಮ ಉನ್ನತ ನಿರೀಕ್ಷೆಗಳಿಗೆ ತಕ್ಕ ಹಾಗೆ ಆಡಿಲ್ಲ. ಪತಿ ಸೋಲುತ್ತಿದ್ದರೂ ಒಂದೇ ಒಂದು ಬಾರಿಯೂ, ನತಾಶಾ ತಮ್ಮ ಪತಿಯ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ಟ್ಯಾಂಡ್​ಗಳಿಗೆ ಬಂದಿರಲಿಲ್ಲ.

ನತಾಶಾ ಮತ್ತು ಹಾರ್ದಿಕ್ ಮೇ 2020 ರಲ್ಲಿ ವಿವಾಹವಾಗಿದ್ದರು. ಅವರಿಗೆ ಅಗಸ್ತ್ಯ ಎಂಬ ಮೂರು ವರ್ಷದ ಮಗನಿದ್ದಾನೆ. ಇತ್ತೀಚೆಗೆ, ನತಾಶಾ ತಮ್ಮ ಪಕ್ಕದಲ್ಲಿದ್ದ ಪಾಂಡ್ಯಾ ಹೆಸರನ್ನು ತೆಗೆದುಹಾಕಿದ್ದರು. ಇದು ಅವರ ವಿಚ್ಛೇದನದ ಬಗ್ಗೆ ಊಹಾಪೋಹಗಳನ್ನು ಸೃಷ್ಟಿಸಿತ್ತು.

ಇದನ್ನೂ ಓದಿ: IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ

ಅದೇನೇ ಇದ್ದರೂ, ಅಲೆಕ್ಸಾಂಡರ್ ಮತ್ತು ನತಾಶ ಮತ್ತು ದಿಶಾ ಇಬ್ಬರಿಗೂ ಉತ್ತಮ ಸ್ನೇಹಿತ ಎಂದು ವರದಿಯಾಗಿದೆ. ಅವರು ತಮ್ಮ ತೋಳುಗಳ ಮೇಲೆ ದಿಶಾ ಅವರ ಮುಖದ ಹಚ್ಚೆ ಹೊಂದಿರುವುದರಿಂದ, ಅವರು ಬಾಲಿವುಡ್ ನಟಿ ಜೊತೆ ಡೇಟಿಂಗ್ ಮಾಡುತ್ತಿರಬೇಕು ಎಂದು ಎಲ್ಲರೂ ಭಾವಿಸಿದ್ದಾರೆ.

ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಮುಂಬಯಿ: ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿದೆ. ಆದರೆ, ಚಾಲಾಕಿ ಪಾಂಡ್ಯ ಅವರ ಬುದ್ಧಿವಂತಿಕೆಯಿಂದ ಪತ್ನಿಗೆ ನಯಾ ಪೈಸೆಯೂ ಸಿಗುವುದು ಅನುಮಾನ ಎನ್ನುವಂತಿದೆ.

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇದು ಅಸಾಧ್ಯ ಎನ್ನುವಂತಿದೆ.

ಹೌದು, ಹಾರ್ದಿಕ್​ ಪಾಂಡ್ಯ ಅವರು ಮುಂಬೈಯಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದರೂ ಕೂಡ ತಮ್ಮ ಹೆಸರಿನಲ್ಲಿ ಹೆಚ್ಚು ಆಸ್ತಿಯನ್ನು ಮಾಡಿಲ್ಲ. ಬಹುತೇಕ ಆಸ್ತಿಯನ್ನು ತನ್ನ ಪೋಷಕರ ಹೆಸರಿನಲ್ಲಿ ಮಾಡಿಟ್ಟಿದ್ದಾರೆ. ಈ ವಿಚಾರವನ್ನು ಪಾಂಡ್ಯ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. ಈ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದ ಪಾಂಡ್ಯ, “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ಸಹೋದರ, ತಂದೆ ಮತ್ತು ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಈ ವಿಡಿಯೊ ಈಗ ವೈರಲ್​ ಆಗಿದ್ದು ಪಾಂಡ್ಯಗೆ ಜೀವನದಲ್ಲಿ ಮುದೊಂದು ದಿನ ಪ್ರೇಯಸಿಯಿಂದ ದೋಖಾ ಎದುರಾಗುವ ಸುಳಿವು ಮೊದಲೇ ತಿಳಿದಿತ್ತಾ? ಎನ್ನುವ ನಿಗೂಡ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Continue Reading
Advertisement
Karnataka weather Forecast
ಮಳೆ20 mins ago

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Protein Powder
ಆರೋಗ್ಯ50 mins ago

Protein Powder: ಫಿಟ್‌ನೆಸ್‌ಗಾಗಿ ಪ್ರೊಟೀನ್‌ ಪುಡಿಗಳ ಸೇವನೆ ಮಾಡುತ್ತೀರಾ? ಹಾಗಿದ್ದರೆ ಎಚ್ಚರ!

Dina Bhavishya
ಭವಿಷ್ಯ2 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು

Fire Accident
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

election commission
ಪ್ರಮುಖ ಸುದ್ದಿ7 hours ago

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Fire Accident
ಪ್ರಮುಖ ಸುದ್ದಿ7 hours ago

Fire Accident: 9 ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ಗೇಮಿಂಗ್‌ ಜೋನ್‌ಗೆ NOCಯೇ ಇರ್ಲಿಲ್ಲ!

Virat kohli
ಪ್ರಮುಖ ಸುದ್ದಿ7 hours ago

Virat kohli : ಕೊಹ್ಲಿ ಹೆಸರು ಕೂಗಿ ಪಾಕಿಸ್ತಾನ ಬೌಲರ್​​ನನ್ನು ಲೇವಡಿ ಮಾಡಿದ ಅಭಿಮಾನಿಗಳು; ಇಲ್ಲಿದೆ ವಿಡಿಯೊ

Union Minister Pralhad Joshi latest statement about channagiri case
ಕರ್ನಾಟಕ7 hours ago

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

childrens summer camp closing ceremony at yallapur
ಉತ್ತರ ಕನ್ನಡ8 hours ago

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Hardik Pandya
ಪ್ರಮುಖ ಸುದ್ದಿ8 hours ago

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌