Virat Kohli: ಕಿಂಗ್​ ಕೊಹ್ಲಿ ಕ್ರಿಕೆಟ್​ ಬದುಕಿಗೆ 15 ವರ್ಷಗಳ ಸಂಭ್ರಮ; ಹೀಗಿದೆ ದಾಖಲೆಯ ಹಾದಿ - Vistara News

ಕ್ರಿಕೆಟ್

Virat Kohli: ಕಿಂಗ್​ ಕೊಹ್ಲಿ ಕ್ರಿಕೆಟ್​ ಬದುಕಿಗೆ 15 ವರ್ಷಗಳ ಸಂಭ್ರಮ; ಹೀಗಿದೆ ದಾಖಲೆಯ ಹಾದಿ

ಕಿಂಗ್​ ಖ್ಯಾತಿಯ(king kohli) ವಿರಾಟ್​ ಕೊಹ್ಲಿ(Virat Kohli) ಅವರ ಕ್ರಿಕೆಟ್​ ವೃತ್ತಿ ಬದುಕಿಗೆ(virat kohli cricket journey) ಇಂದಿಗೆ 15 ವರ್ಷಗಳು ತುಂಬಿದೆ.

VISTARANEWS.COM


on

Indian cricketer virat kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ, ದಾಖಲೆಗಳ ಸರದಾರ, ಕಿಂಗ್​ ಖ್ಯಾತಿಯ(king kohli) ವಿರಾಟ್​ ಕೊಹ್ಲಿ(Virat Kohli) ಅವರ ಕ್ರಿಕೆಟ್​ ವೃತ್ತಿ ಬದುಕಿಗೆ(virat kohli cricket journey) ಇಂದಿಗೆ 15 ವರ್ಷಗಳು ತುಂಬಿದೆ. ಇಷ್ಟು ವರ್ಷಗಳ ಅವರ ಕ್ರಿಕೆಟ್​ ಬಾಳ್ವೆಯಲ್ಲಿ ಅನೇಕ ದಿಗ್ಗಜ ಕ್ರಿಕೆಟಿಗರ ದಾಖಲೆಗಳನ್ನು ಮುರಿದು ಮುನ್ನುಗುತ್ತಿದ್ದಾರೆ. ಇನ್ನೂ ಕೂಡ ಕೆಲ ವರ್ಷಗಳು ಭಾರತ ತಂಡದ ಪರ ಆಡಲಿ ಎಂಬುದು ಅವರ ಅಭಿಮಾನಿಗಳ ಆಶಯವಾಗಿದೆ.

ಲಂಕಾ ವಿರುದ್ಧ ಪದಾರ್ಪಣೆ

ವಿರಾಟ್​ ಕೊಹ್ಲಿ ಅವರು ಆಗಸ್ಟ್​ 18, 2008ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತ ತಂಡದ ಪರ ಪದಾರ್ಪಣೆ ಮಾಡಿದರು. ಆಗ ತಾನೆ ಅಂಡರ್​-19 ವಿಶ್ವಕಪ್​ ಗೆದ್ದಿದ್ದ ಅವರಿಗೆ ಸಚಿನ್​ ತೆಂಡೂಲ್ಕರ್​ ಮತ್ತು ವೀರೇಂದ್ರ ಸೆಹವಾಗ್​ ಅವರ ಅನುಪಸ್ಥಿತಿಯಲ್ಲಿ ಆರಂಭಿಕಾಗಿ ಆಡುವ ಅವಕಾಶ ನೀಡಲಾಗಿತ್ತು. ತಮ್ಮ ಚೊಚ್ಚಲ ಪಂದ್ಯದಲ್ಲಿ ಅವರು 12 ರನ್​ ಗಳಿಸಿ ನುವಾನ್ ಕುಲಶೇಖರ ಅವರಿಗೆ ವಿಕೆಟ್​ ಒಪ್ಪಿಸಿದ್ದರು. ಆದರೆ ನಾಲ್ಕನೇ ಪಂದ್ಯದಲ್ಲಿ 54 ರನ್​ ಗಳಿಸಿ ತಮ್ಮ ಚೊಚ್ಚಲ ಅರ್ಧಶತಕವನ್ನು ಬಾರಿಸಿದ್ದರು. ಅವರು ಭಾರತ ತಂಡಕ್ಕೆ ಪದಾರ್ಪಣೆ ಮಾಡುವ ವೇಳೆ ಕೇವಲ 8 ಲಿಸ್ಟ್​ ಎ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದರು.

ಅಮೋಘ ಸಾಧನೆ

34 ವರ್ಷದ ವಿರಾಟ್ ಕೊಹ್ಲಿ ಅವರು ಇದುವರೆಗೆ ಒಟ್ಟು 275 ಏಕದಿನ ಪಂದ್ಯಗಳನ್ನು ಆಡಿದ್ದು 57.32 ರ ಸರಾಸರಿಯಲ್ಲಿ 12898 ರನ್ ಗಳಿಸಿದ್ದಾರೆ. ಇದರಲ್ಲಿ 46 ಶತಕ ಮತ್ತು 65 ಅರ್ಧಶತಕ ಒಳಗೊಂಡಿದೆ. ಬೌಲಿಂಗ್​ನಲ್ಲೂ 4 ವಿಕೆಟ್ ಪಡೆದಿದ್ದಾರೆ. ಟೆಸ್ಟ್​ನಲ್ಲಿ 111 ಪಂದ್ಯಗಳಲ್ಲಿ 8676 ರನ್ ಗಳಿಸಿದ್ದು, 29 ಶತಕ, 7 ದ್ವಿಶತಕ ಮತ್ತು 29 ಅರ್ಧಶತಕ ಸಿಡಿಸಿದ್ದಾರೆ. 254 ಅವರ ಗರಿಷ್ಠ ವೈಯಲ್ತಿಕ ಮೊತ್ತಾವಾಗಿದೆ. 115 ಟಿ20 ಪಂದ್ಯವಾಡಿ 4,008 ರನ್ ಬಾರಿಸಿದ್ದಾರೆ. ಇದರಲ್ಲಿ 37 ಅರ್ಧಶತಕ ಮತ್ತು 1 ಶತಕ ದಾಖಲಾಗಿದೆ.

ಅಂಡರ್​ 19 ವಿಶ್ವಕಪ್​ ವಿಜೇತ ನಾಯಕ

ಅಂಡರ್‌-19 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿದ ಹಿರಿಮೆಯೂ ವಿರಾಟ್​ ಪಾಲಿಗಿದೆ. 2008ರಲ್ಲಿ ಮಲೇಷ್ಯಾದಲ್ಲಿ ನಡೆದ ಅಂಡರ್‌-19ನೇ ವಿಶ್ವಕಪ್‌ ಫೈನಲ್‌ನಲ್ಲಿ ಕೊಹ್ಲಿ ನಾಯಕತ್ವದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಡಿ-ಎಲ್‌ ನಿಯಮದಂತೆ 12 ರನ್ನುಗಳಿಂದ ಮಣಿಸಿ ಚಾಂಪಿಯನ್‌ ಆಗಿ ಮೂಡಿಬಂದಿತ್ತು. ವಿರಾಟ್ ಅವರು ಇಂದು ಎಷ್ಟೇ ದೊಡ್ಡ ಸಾಧನೆ ಮಾಡಿದ್ದರೂ ಅವರ ಪಾಲಿಗೆ ಇದು ಶ್ರೇಷ್ಠ ಟೂರ್ನಿಯಾಗಿದೆಯಂತೆ. ಹಿಂದೊಮ್ಮೆ ಅವರು ಈ ಮಾತನ್ನು ಸಂದರ್ಶನವೊಂದರಲ್ಲಿ ತಿಳಿಸಿದ್ದರು. “ಅಂಡರ್‌-19 ವಿಶ್ವಕಪ್‌ ಪಂದ್ಯಾವಳಿ ತನ್ನ ವೃತ್ತಿ ಬದುಕಿನ ಪ್ರಮುಖ ಮೈಲುಗಲ್ಲು. ನನಗೆ ವೃತ್ತಿ ಬದುಕನ್ನು ಕಟ್ಟಿಕೊಳ್ಳಲು ಮತ್ತು ಕ್ರಿಕೆಟ್‌ ರಂಗದಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಟ್ಟಿತು. ಹಾಗಾಗಿಯೇ ಆ ಪಂದ್ಯ ನನ್ನ ಹೃದಯದಲ್ಲಿ ವಿಶೇಷ ಸ್ಥಾನ ಪಡೆದಿದೆ’ ಎಂದು ಕೊಹ್ಲಿ ಹೇಳಿದ್ದರು.

ಇದನ್ನೂ ಓದಿ Virat Kohli: ರಜೆಯಲ್ಲಿದ್ದರೂ ಓಟ ಮಾತ್ರ ನಿರಂತರ; ಕೊಹ್ಲಿಯ ಈ ಮಾತಿನ ರಹಸ್ಯವೇನು?

ನಾಯಕನಾಗಿಯೂ ಸಾಧನೆ

2018ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್​ ಸರಣಿಯಲ್ಲಿ ವಿರಾಟ್​ ಕೊಹ್ಲಿ ನೇತೃತ್ವದ ಭಾರತ ತಂಡ ಸರಣಿ ಗೆಲುವು ದಾಖಲಿಸಿತ್ತು. ಭಾರತೀಯ ತಂಡವು 70 ವರ್ಷಗಳಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಸಾಧಿಸಿದ ಮೊದಲ ಸರಣಿ ಗೆಲುವು ಇದಾಗಿತ್ತು. ಈ ಕೀರ್ತಿ ವಿರಾಟ್​ ಕೊಹ್ಲಿಗೆ ಸೇರಿದೆ. ಕೊಹ್ಲಿ ನಾಯಕನಾಗಿ 68 ಟೆಸ್ಟ್‌ಗಳಲ್ಲಿ ತಂಡವನ್ನು ಮುನ್ನಡೆಸಿದ್ದು, ಇದರಲ್ಲಿ 40 ಗೆದ್ದರೆ, 17 ರಲ್ಲಿ ಸೋಲು ಮತ್ತು 11 ಡ್ರಾ ಕಂಡಿದೆ. 2019ರ ಏಕದಿನ ವಿಶ್ವಕಪ್​ನಲ್ಲಿ ತಂಡವನ್ನು ಮುನ್ನಡೆಸಿ ವೇಳೆ ಭಾರತ ತಂಡ ಸೆಮಿಫೈನಲ್​ನಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ ಸೋಲು ಕಂಡು ನಿರಾಸೆ ಮೂಡಿಸಿತ್ತು.

15 ವರ್ಷಗಳ ತಮ್ಮ ಕ್ರಿಕೆಟ್​ ಪ್ರಯಣವನ್ನು ಕೊಹ್ಲಿ ಒಂದೇ ಚಿತ್ರದಲ್ಲಿ ಫಾರೆವರ್​ ಗ್ರೇಟ್​ಫುಲ್​ ಎಂದು ಬರೆದು ಕೊಂಡಿದ್ದಾರೆ. ಈ ಫೋಟೊ ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ಸ್ಮರಣೀಯ ಗೆಲುವು ತಂದು ಕೊಟ್ಟ ಬಳಿಕ ಸಂಭ್ರಮಿಸಿದ ಫೋಟೊವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

IPL 2024: ಪಂದ್ಯವು ಟಾಸ್​ ಸೇರಿದಂತೆ ಒಂದೇ ಒಂದು ಎಸೆತ ಕಾಣದೇ ರದ್ದಾಯಿತು. ಸ್ಟೇಡಿಯಮ್​ನಲ್ಲಿ ಸೇರಿದ್ದ 45,000 ಅಭಿಮಾನಿಗಳು ಪಂದ್ಯ ಆರಂಭವಾಗುವ ನಿರೀಕ್ಷೆಯಿಂದ ಸ್ಥಳದಿಂದ ಕದಲಲಿಲ್ಲ. ರಾತ್ರಿ 10:56 ಕ್ಕೆ 5 ಓವರ್​ಗಳ ಪಂದ್ಯದ ಕಟ್ ಆಫ್ ಸಮಯವಾಗಿತ್ತು. ಮೈದಾನದ ಸಿಬ್ಬಂದಿ ಎಲ್ಲ ಪ್ರಯತ್ನಗಳನ್ನು ಮಾಡಿದ ಹೊರತಾಗಿಯೂ ಆಡಿಲು ಯಾವುದೇ ಅವಕಾಶ ದೊರೆಯಲಿಲ್ಲ. ರಾತ್ರಿ 10:40 ರ ಸುಮಾರಿಗೆ ಅಧಿಕಾರಿಗಳು ಪಂದ್ಯವನ್ನು ರದ್ದುಗೊಳಿಸಿದರು.

VISTARANEWS.COM


on

IPL 2024
Koo

ಅಹಮದಾಬಾದ್​​: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜನೆಗೊಂಡಿದ್ದ ಗುಜರಾತ್​ ಜೈಂಟ್ಸ್​ ಮತ್ತು ಕೋಲ್ಕೊತಾ ನೈಟ್​ ರೈಡರ್ಸ್​ ನಡುವಿನ ಪಂದ್ಯ ರದ್ದಾಗಿದೆ. ಇದು ಹಾಲಿ ಆವೃತ್ತಿಯಲ್ಲಿ ಮಳೆಯಿಂದ ರದ್ದಾಗಿರುವ ಮೊದಲ ಪಂದ್ಯವಾಗಿದೆ. ಹೀಗಾಗಿ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ಹಂಚಲಾಯಿತು. ಈ ಫಲಿತಾಂಶದಿಂದಾಗಿ ಜಿಟಿ ತಂಡದ ಪ್ಲೇಆಫ್​ ಅವಕಾಶ ಅಂತ್ಯವಾಯಿತು. ಇದೇ ವೇಳೆ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ಅಗ್ರ 2 ರಲ್ಲಿ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಪಂದ್ಯವು ಟಾಸ್​ ಸೇರಿದಂತೆ ಒಂದೇ ಒಂದು ಎಸೆತ ಕಾಣದೇ ರದ್ದಾಯಿತು. ಸ್ಟೇಡಿಯಮ್​ನಲ್ಲಿ ಸೇರಿದ್ದ 45,000 ಅಭಿಮಾನಿಗಳು ಪಂದ್ಯ ಆರಂಭವಾಗುವ ನಿರೀಕ್ಷೆಯಿಂದ ಸ್ಥಳದಿಂದ ಕದಲಲಿಲ್ಲ. ರಾತ್ರಿ 10:56 ಕ್ಕೆ 5 ಓವರ್​ಗಳ ಪಂದ್ಯದ ಕಟ್ ಆಫ್ ಸಮಯವಾಗಿತ್ತು. ಮೈದಾನದ ಸಿಬ್ಬಂದಿ ಎಲ್ಲ ಪ್ರಯತ್ನಗಳನ್ನು ಮಾಡಿದ ಹೊರತಾಗಿಯೂ ಆಡಿಲು ಯಾವುದೇ ಅವಕಾಶ ದೊರೆಯಲಿಲ್ಲ. ರಾತ್ರಿ 10:40 ರ ಸುಮಾರಿಗೆ ಅಧಿಕಾರಿಗಳು ಪಂದ್ಯವನ್ನು ರದ್ದುಗೊಳಿಸಿದರು.

ಎಂಐ ಮತ್ತು ಪಿಬಿಕೆಎಸ್ ನಂತರ ಟೈಟಾನ್ಸ್ ಸ್ಪರ್ಧೆಯಿಂದ ಹೊರಗುಳಿದ ಮೂರನೇ ತಂಡವಾಗಿದೆ. ಏತನ್ಮಧ್ಯೆ, ನೈಟ್ಸ್ 13 ಪಂದ್ಯಗಳಲ್ಲಿ 9 ರಲ್ಲಿ ಗೆಲುವು ಸಾಧಿಸಿ 19 ಅಂಕಗಳೊಂದಿಗೆ +1.428 ನೆಟ್ ರನ್ ರೇಟ್​ನೊಂದಿಗೆ ಅಗ್ರಸ್ಥಾನ ಉಳಿಸಿಕೊಂಡಿದೆ. 2012 ಮತ್ತು 2014ರಲ್ಲಿ ಕೆಕೆಆರ್ ಅಗ್ರ 2ರಲ್ಲಿ ಸ್ಥಾನ ಪಡೆದಿತ್ತು. ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ಮೇ 19 ರ ಭಾನುವಾರ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ರಾಯಲ್ಸ್ ತಂಡವನ್ನು ಸೋಲಿಸಿದರೆ ಈ ಬಾರಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವಿದೆ. ಗೌತಮ್ ಗಂಭೀರ್ ಕೆಕೆಆರ್​​ಗೆ ಮರಳಿದ ಕಾರಣ ತಂಡಕ್ಕೆ ಭಾರೀ ಅನುಕೂಲಗಳು ಆಗಿವೆ.

ಗುಜರಾತ್​ಗೆ ನಿರಾಶಾದಾಯಕ ಅಭಿಯಾನ

ಗುಜರಾತ್​ ಟೈಟಾನ್ಸ್ ಪ್ಲೇಆಫ್​ನಲ್ಲಿ ಸ್ಥಾನ ಪಡೆಯುವ ರೇಸ್​​ನಿಂದ ಹೊರಗುಳಿದಿದೆ. ಹಾರ್ದಿಕ್ ಪಾಂಡ್ಯ ನಿರ್ಗಮನ ಮತ್ತು ಮೊಹಮ್ಮದ್ ಶಮಿ ಗಾಯಗೊಂಡ ನಂತರ ಜಿಟಿಗೆ ಉತ್ತಮ ಅನುಕೂಲಗಳು ಸಿಗಲಿಲ್ಲ. ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಮುಂದಿನ ಸುತ್ತಿಗೆ ಪ್ರವೇಶಿಸುವ ಅವಕಾಶ ಆ ತಂಡಕ್ಕೆ ಇತ್ತು. ಆದರೆ, ಮಳೆ ಅವರ ಭರವಸೆಗಳನ್ನು ಭಗ್ನಗೊಳಿಸಿತು.

ಇದನ್ನೂ ಓದಿ: IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣ

ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೇ 16 ರಂದು ನಡೆಯಲಿರುವ ಪಂದ್ಯದಲ್ಲಿ ಶುಭ್ಮನ್ ಗಿಲ್ ಪಡೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. 2022ರಲ್ಲಿ, ಜಿಟಿ ತಮ್ಮ ಮೊದಲ ಪ್ರವೇಶದಲ್ಲಿ ಪ್ರಶಸ್ತಿ ಗೆದ್ದಿತ್ತು. 2023ರಲ್ಲಿ ಸಿಎಸ್​ಕೆ ತಂಡವನ್ನು ಮಣಿಸುವಲ್ಲಿ ವಿಫಲವಾದ ಬಳಿಕ ರನ್ನರ್ ಅಪ್ ಸ್ಥಾನ ಪಡೆದಿತ್ತು. ಆದರೆ ಈ ಋತುವಿನಲ್ಲಿ ಗಿಲ್ ಒತ್ತಡದ ನಡುವೆ ನಾಯಕತ್ವ ಹಾಗೂ ಬ್ಯಾಟಿಂಗ್​ನಲ್ಲಿ ವೈಫಲ್ಯ ಕಂಡಿದ್ದರು.

Continue Reading

ಕ್ರೀಡೆ

Muhammad Waseem : ಇತಿಹಾಸ ಸೃಷ್ಟಿಸಿದ ಯುಎಇ ಕ್ರಿಕೆಟ್​ ತಂಡದ ನಾಯಕ ವಸೀಮ್​

Muhammad Waseem : ಒಮಾನ್​​ನಲ್ಲಿ ನಡೆದ ಎಸಿಸಿ ಪ್ರೀಮಿಯರ್ ಕಪ್​ನಲ್ಲಿ ಯುಎಇಯ ಯಶಸ್ಸಿನಲ್ಲಿ ವಸೀಮ್ ಪ್ರಮುಖ ಪಾತ್ರ ವಹಿಸಿದ್ದರು. ಕುವೈತ್ ವಿರುದ್ಧ ಡಕ್ ಔಟ್ ನೊಂದಿಗೆ ಅಭಿಯಾನ ಆರಂಭಿಸಿದ ವಸೀಮ್, ಬಹ್ರೇನ್ ವಿರುದ್ಧ 65 ರನ್ ಗಳಿಸಿ ಪುಟಿದೆದ್ದರು. ನಂತರ ಅವರು ಒಮಾನ್ ಮತ್ತು ಕಾಂಬೋಡಿಯಾ ವಿರುದ್ಧ ಕ್ರಮವಾಗಿ 45 ಮತ್ತು 48 ರನ್ ಗಳಿಸಿದ್ದರು.

VISTARANEWS.COM


on

Muhammad Waseem
Koo

ಬೆಂಗಳೂರು: ಯುಎಇ ನಾಯಕ ಮುಹಮ್ಮದ್ ವಸೀಮ್ (Muhammad Waseem) ಪ್ರತಿಷ್ಠಿತ ಐಸಿಸಿ ಪುರುಷರ ತಿಂಗಳ ಆಟಗಾರ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಈ ಸಾಧನೆ ಮಾಡಿದ ತಮ್ಮ ದೇಶದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಏಪ್ರಿಲ್ ನಲ್ಲಿ ಬ್ಯಾಟ್ ನೊಂದಿಗೆ ಸಮೃದ್ಧ ಓಟವನ್ನು ಆನಂದಿಸಿದ ನಂತರ ಅವರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಸೀಮ್ ಅವರಲ್ಲದೆ, ಪಾಕಿಸ್ತಾನದ ಸ್ಟಾರ್ ಆಟಗಾರ ಶಾಹೀನ್ ಅಫ್ರಿದಿ ಮತ್ತು ನಮೀಬಿಯಾದ ಗೆರ್ಹಾರ್ಡ್ ಎರಾಸ್ಮಸ್ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಅವರಿಬ್ಬರನ್ನು ವಸೀಮ್ ಸೋಲಿಸಿ ತನ್ನ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಪಡೆದರು.

ಒಮಾನ್​​ನಲ್ಲಿ ನಡೆದ ಎಸಿಸಿ ಪ್ರೀಮಿಯರ್ ಕಪ್​ನಲ್ಲಿ ಯುಎಇಯ ಯಶಸ್ಸಿನಲ್ಲಿ ವಸೀಮ್ ಪ್ರಮುಖ ಪಾತ್ರ ವಹಿಸಿದ್ದರು. ಕುವೈತ್ ವಿರುದ್ಧ ಡಕ್ ಔಟ್ ನೊಂದಿಗೆ ಅಭಿಯಾನ ಆರಂಭಿಸಿದ ವಸೀಮ್, ಬಹ್ರೇನ್ ವಿರುದ್ಧ 65 ರನ್ ಗಳಿಸಿ ಪುಟಿದೆದ್ದರು. ನಂತರ ಅವರು ಒಮಾನ್ ಮತ್ತು ಕಾಂಬೋಡಿಯಾ ವಿರುದ್ಧ ಕ್ರಮವಾಗಿ 45 ಮತ್ತು 48 ರನ್ ಗಳಿಸಿದ್ದರು.

ಬಲಗೈ ಬ್ಯಾಟರ್​ ನೇಪಾಳ ವಿರುದ್ಧ ಆಡಲು ವಿಫಲರಾದರು ಮತ್ತು ಒಮಾನ್ ವಿರುದ್ಧದ ಫೈನಲ್​ನಲ್ಲಿ ಪಂದ್ಯ ವಿಜೇತ ಶತಕವನ್ನು ಹೊಡೆದಿದ್ದರು. ವಸೀಮ್ 44.83ರ ಸರಾಸರಿಯಲ್ಲಿ 269 ರನ್ ಗಳಿಸಿದ್ದರು. ಪಂದ್ಯಾವಳಿಯಲ್ಲಿ ಅವರ ಉತ್ತಮ ಓಟಕ್ಕೆ ಈಗ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ನೀಡಲಾಗಿದೆ.

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಗೆದ್ದ ಬಗ್ಗೆ ಸಂತಸ ವ್ಯಕ್ತಪಡಿಸಿದ ಮುಹಮ್ಮದ್ ವಸೀಮ್, ಇದು ಉದಯೋನ್ಮುಖ ಕ್ರಿಕೆಟ್ ತಂಡಗಳ ಆಟಗಾರರಿಗೆ ದೊಡ್ಡ ಪ್ರೇರಣೆಯಾಗಲಿದೆ ಎಂದು ಹೇಳಿದರು. ಏಷ್ಯಾ ಕಪ್​​ನಲ್ಲಿ ಮುಂದಿನ ಆವೃತ್ತಿಯ ಮೇಲೆ ಕಣ್ಣಿಟ್ಟಿರುವ ಅವರು ಎಸಿಸಿ ಪ್ರೀಮಿಯರ್ ಕಪ್​ನಲ್ಲಿ ಯುಎಇಯನ್ನು ಮುಂಚೂಣಿಯಿಂದ ಮುನ್ನಡೆಸಲು ಸಾಧ್ಯವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.

ರೋಮಾಂಚನ ಎಂದ ವಸೀಮ್​

ಐಸಿಸಿ ತಿಂಗಳ ಪುರುಷ ಆಟಗಾರ ಪ್ರಶಸ್ತಿಯನ್ನು ಗೆದ್ದಿರುವುದು ದೊಡ್ಡ ಗೌರವವಾಗಿದೆ. ವಿಶ್ವದಾದ್ಯಂತದ ಪ್ರಶಸ್ತಿ ವಿಜೇತರ ವಿಶಿಷ್ಟ ಪಟ್ಟಿಗೆ ಸೇರಲು ನಾನು ರೋಮಾಂಚನಗೊಂಡಿದ್ದೇನೆ ಎಂದು ವಸೀಮ್ ಹೇಳಿದರು.

ಈ ಪ್ರಶಸ್ತಿಯು ಆಟಗಾರರಿಗೆ ವಿಶೇಷವಾಗಿ ಯುಎಇಯಂತಹ ಉದಯೋನ್ಮುಖ ಕ್ರಿಕೆಟ್ ತಂಡಗಳ ಆಟಗಾರರಿಗೆ ದೊಡ್ಡ ಪ್ರೇರಣೆ. ನಮ್ಮ ಗುರಿ ಮುಂದಿನ ವರ್ಷದ ಏಷ್ಯಾ ಕಪ್​​ಗೆ ಅರ್ಹತೆ ಪಡೆಯುವುದು ಮತ್ತು ನನ್ನ ತಂಡ ಮತ್ತು ಪಂದ್ಯಾವಳಿಯಲ್ಲಿ ಅವರ ಪ್ರದರ್ಶನದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದರು.

ವೈಯಕ್ತಿಕ ಮಟ್ಟದಲ್ಲಿ, ವಿಶೇಷವಾಗಿ ಫೈನಲ್​ನಲ್ಲಿ ನಾನು ತಂಡವನ್ನು ಮುಂಚೂಣಿಯಿಂದ ಮುನ್ನಡೆಸಿದ್ದೇನೆ ಎಂದು ನನಗೆ ಸಂತೋಷವಾಗಿದೆ. ದೊಡ್ಡ ಪಂದ್ಯದಲ್ಲಿ ಶತಕ ಗಳಿಸುವುದು ನಿಜಕ್ಕೂ ವಿಶೇಷ ಕ್ಷಣವಾಗಿದೆ, ವಿಶೇಷವಾಗಿ ಅದು ತಂಡಕ್ಕೆ ಗೆಲುವಿಗೆ ಸಹಾಯ ಮಾಡಿದಾಗ. ಏಷ್ಯಾಕಪ್ಗಾಗಿ ನಮ್ಮ ಸಿದ್ಧತೆಗಳನ್ನು ನಾನು ಎದುರು ನೋಡುತ್ತಿದ್ದೇನೆ ಮತ್ತು ಯುಎಇ ಕ್ರಿಕೆಟ್ನ ಈ ರೋಮಾಂಚಕಾರಿ ಸಮಯದಲ್ಲಿ ಬ್ಯಾಟ್ನೊಂದಿಗೆ ತಂಡಕ್ಕೆ ಉತ್ತಮ ಪ್ರದರ್ಶನ ನೀಡುವುದನ್ನು ಮುಂದುವರಿಸುವುದು ಮತ್ತು ಮಾದರಿಯಾಗಿ ಮುನ್ನಡೆಸುವುದು ನನ್ನ ಗುರಿಯಾಗಿದೆ, “ಎಂದು ಅವರು ಹೇಳಿದರು.

ಮಹಿಳಾ ವಿಭಾಗದಲ್ಲಿ ಹೇಲಿ ಮ್ಯಾಥ್ಯೂಸ್

ದಕ್ಷಿಣ ಆಫ್ರಿಕಾದ ನಾಯಕಿ ಲಾರಾ ವೊಲ್ವಾರ್ಡ್ ಮತ್ತು ಶ್ರೀಲಂಕಾದ ನಾಯಕಿ ಚಾಮರಿ ಅಟ್ಟಪಟ್ಟು ಅವರಿಂದ ಸ್ಪರ್ಧೆಯನ್ನು ಸೋಲಿಸಿದ ವೆಸ್ಟ್ ಇಂಡೀಸ್ ಸ್ಟಾರ್ ಹೇಲಿ ಮ್ಯಾಥ್ಯೂಸ್ ಐಸಿಸಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಮ್ಯಾಥ್ಯೂಸ್ ಮೂರನೇ ಬಾರಿಗೆ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಇದನ್ನೂ ಓದಿ: IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

ಪ್ರಶಸ್ತಿ ಗೆದ್ದಿರುವುದಕ್ಕೆ ನನಗೆ ನಿಜವಾಗಿಯೂ ಸಂತೋಷವಾಗಿದೆ. ಪ್ರದರ್ಶನಗಳು ತಂಡದ ಯಶಸ್ಸಿಗೆ ಕಾರಣವಾದವು ಮತ್ತು ನಾಯಕನಾಗಿ ಅದು ನನಗೆ ಅತ್ಯಂತ ಮುಖ್ಯವಾದ ವಿಷಯವಾಗಿದೆ ಎಂದು ಮ್ಯಾಥ್ಯೂಸ್ ಹೇಳಿದರು.

ಏಪ್ರಿಲ್​​ನಲ್ಲಿ ಮ್ಯಾಥ್ಯೂಸ್ ಪಾಕಿಸ್ತಾನ ವಿರುದ್ಧ ಮೂರು ಟಿ 20 ಮತ್ತು ಅನೇಕ ಏಕದಿನ ಪಂದ್ಯಗಳನ್ನು ಆಡಿದ್ದರು. ಏಕದಿನ ಪಂದ್ಯಗಳಲ್ಲಿ ಅವರು ಎರಡು ಶತಕಗಳ ಸಹಾಯದಿಂದ 325 ರನ್ ಗಳಿಸಿದ್ದಾರೆ ಮತ್ತು ಆರು ವಿಕೆಟ್​ಗಳನ್ನು ಪಡೆದಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಮ್ಯಾಥ್ಯೂಸ್ 126 ರನ್ ಹಾಗೂ 6 ವಿಕೆಟ್ ಕಬಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

IPL 2024 : ಇತ್ತೀಚೆಗೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ ಎಲ್ಎಸ್​​ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ಡಗೌಟ್ ಬಳಿ ರಾಹುಲ್ ಅವರೊಂದಿಗೆ ಜಗಳವಾಡುತ್ತಿರುವುದು ಕಂಡು ಬಂದಿತು. ಇದು ಅನೇರಿಕೆ ಬೇಸರವನ್ನುಂಟು ಮಾಡಿತ್ತು. ಹಲವಾರು ಮಂದಿ ಇದನ್ನು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 2024 (IPL 2024) ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡ ದೆಹಲಿಗೆ ಪ್ರವಾಸ ಮಾಡಿದೆ. ಆದರೆ ಈ ತಂಡದ ಜತೆ ಕೆಎಲ್ ರಾಹುಲ್ (KL Rahul) ಇರಲಿಲ್ಲ. ಈ ಅನುಪಸ್ಥಿತಿ ಅನೇಕರನ್ನು ಆಶ್ಚರ್ಯಗೊಳಿಸಿದೆ. ಅವರು ನೇರವಾಗಿ ಪಂದ್ಯಕ್ಕೆ ತಂಡದ ಜತೆ ಸೇರಬಹುದು ಎಂಬ ಊಹಾಪೋಹಗಳಿವೆಯಾದರೂ, ನಾಯಕ ಸಾಮಾನ್ಯ ರೀತಿಯಲ್ಲಿ ಪ್ರಯಾಣಿಸಲಿಲ್ಲ ಎಂಬ ಅಂಶವು ಹುಬ್ಬೇರುವಂತೆ ಮಾಡಿದೆ. ಮಾಲೀಕ ಸಂಜೀವ್​ ಗೋಯೆಂಕಾ ಅವರ ಗಲಾಟೆಯಿಂದ ಬೇಸತ್ತಿರುವ ರಾಹುಲ್ ಸ್ವಂತ ಖರ್ಚಿನಲ್ಲಿಯೇ ಪ್ರಯಾಣ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಇದು ಅವರ ನಡುವಿನ ಮತ್ತಷ್ಟು ಸಂಘರ್ಷಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ ಎಲ್ಎಸ್​​ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ಡಗೌಟ್ ಬಳಿ ರಾಹುಲ್ ಅವರೊಂದಿಗೆ ಜಗಳವಾಡುತ್ತಿರುವುದು ಕಂಡು ಬಂದಿತು. ಇದು ಅನೇರಿಕೆ ಬೇಸರವನ್ನುಂಟು ಮಾಡಿತ್ತು. ಹಲವಾರು ಮಂದಿ ಇದನ್ನು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದರು. ಇನ್ನೂ ಅನೇಕರು ತಂಡದಲ್ಲಿ ಅವರ ನಾಯಕತ್ವದ ಪಾತ್ರದ ಬಗ್ಗೆ ಚರ್ಚೆಗಳನ್ನು ನಡೆಸಿದ್ದರು. ಇದಕ್ಕೆಲ್ಲ ಕಾರಣ ಲಕ್ನೊ ನೀಡಿದ್ದ 166 ರನ್​ಗಳನ್ನು ಎಸ್​ಆರ್​ಎಚ್​ ತಂಡ 9.4 ಓವರ್​ಗಳಲ್ಲಿ ಬೆನ್ನಟ್ಟಿರುವುದು.

ಸ್ಪರ್ಧೆಯಲ್ಲಿ ಜೀವಂತವಾಗಿರಲು ಲಕ್ನೊ ತಂಡಕ್ಕೆ ಗೆಲುವು ಬೇಕಾಗಿದೆ. ಅವರು ಪ್ರಸ್ತುತ 12 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ ಮತ್ತು ಪ್ಲೇಆಫ್ಗೆ ಅವರ ಹಾದಿ ಸುಲಭವಲ್ಲ. ಈ ನಿರ್ಣಾಯಕ ಮುಖಾಮುಖಿಗೆ ಸಜ್ಜಾಗುತ್ತಿರುವಾಗ, ಎಲ್ಲರ ಕಣ್ಣುಗಳು ರಾಹುಲ್ ಮತ್ತು ಎಲ್ಎಸ್​ಜಿ ತಂಡದ ಮೇಲೆ ನೆಟ್ಟಿವೆ.

ರಾಹುಲ್ ಅವರ ಫಾರ್ಮ್ ಕೂಡ ಪರಿಶೀಲನೆಗೆ ಒಳಗಾಗಿದೆ. ವಿಶೇಷವಾಗಿ ಟಿ 20 ವಿಶ್ವಕಪ್ ತಂಡದಿಂದ ಹೊರಗುಳಿದ ನಂತರ ಅವರ ಆಟದ ವೈಖರಿ ಬಗ್ಗೆ ಪ್ರಶ್ನೆಗಳೆದ್ದಿವೆ. ಐಪಿಎಲ್ 2024 ಋತುವಿನಾದ್ಯಂತ ಅವರ ಬ್ಯಾಟಿಂಗ್ ಪರಾಕ್ರಮವು ಶ್ಲಾಘನೀಯ. ವಿಕೆಟ್ ಕೀಪರ್-ಬ್ಯಾಟರ್​ 38.33 ಸರಾಸರಿಯಲ್ಲಿ 460 ರನ್ ಗಳಿಸಿದ್ದಾರೆ. 136.09 ಉತ್ತಮ ಉತ್ತಮ ರನ್​​ ರೇಟ್ ಹೊಂದಿದ್ದಾರೆ. ಅವರು ಶತಕ ಕಳೆದುಕೊಂಡಿದ್ದರೂ ರಾಹುಲ್ ಈ ಋತುವಿನಲ್ಲಿ ಮೂರು ಅರ್ಧಶತಕಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: Rohit Sharma : ಭಾರತ ತಂಡದ ಹೊಸ ಜೆರ್ಸಿ ಬಿಡುಗಡೆ ಮಾಡಿದ ರೋಹಿತ್​ ಶರ್ಮಾ, ಇಲ್ಲಿದೆ ವಿಡಿಯೊ

ಎಲ್ಎಸ್​ಜಿ ಫ್ರಾಂಚೈಸಿಯ ಬಗ್ಗೆ ಮಾತನಾಡುವುದಾದರೆ ಅವರು 2022 ರಿಂದ ಐಪಿಎಲ್ ಸರ್ಕ್ಯೂಟ್​​ಗೆ ಗಮನಾರ್ಹ ಸೇರ್ಪಡೆಯಾಗಿದ್ದಾರೆ ಮತ್ತು ಅವರು ಇಲ್ಲಿಯವರೆಗೆ ಆಡಿದ ಎರಡೂ ಋತುಗಳಲ್ಲಿ ಪ್ಲೇಆಫ್ಗೆ ಅರ್ಹತೆ ಪಡೆದಿದ್ದಾರೆ. ರಾಹುಲ್, ಕ್ವಿಂಟನ್ ಡಿ ಕಾಕ್, ಮಾರ್ಕ್ ವುಡ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಅವರ ಗಮನಾರ್ಹ ಸಹಿಗಳಲ್ಲಿ ಸೇರಿದ್ದಾರೆ. ನಂತರ ರಾಹುಲ್ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಯಿತು, ಆಂಡಿ ಫ್ಲವರ್ ಅವರನ್ನು ಮುಖ್ಯ ಕೋಚ್ ಆಗಿ ಮತ್ತು ಗೌತಮ್ ಗಂಭೀರ್ ಅವರನ್ನು ತಂಡದ ಮಾರ್ಗದರ್ಶಕರಾಗಿ ನೇಮಿಸಲಾಯಿತು. 2022 ಮತ್ತು 2023 ರ ಋತುಗಳಲ್ಲಿ ಗುಂಪು ಹಂತದಲ್ಲಿ ಮೂರನೇ ಸ್ಥಾನದಲ್ಲಿದ್ದರೂ, ಅವರು ಪ್ಲೇಆಫ್ನಲ್ಲಿ ಹೊರಗುಳಿದರು.

Continue Reading

ಕ್ರೀಡೆ

Rohit Sharma : ಭಾರತ ತಂಡದ ಹೊಸ ಜೆರ್ಸಿ ಬಿಡುಗಡೆ ಮಾಡಿದ ರೋಹಿತ್​ ಶರ್ಮಾ, ಇಲ್ಲಿದೆ ವಿಡಿಯೊ

Rohit Sharma : ಬಿಸಿಸಿಐನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಇತ್ತೀಚೆಗೆ ಅಪ್ಲೋಡ್ ಮಾಡಿದ ವೀಡಿಯೊದಲ್ಲಿ ಭಾರತ ತಂಡದ ನಾಯಕ ಹಾಗೂ ಬಿಸಿಸಿಐ ಕಾರ್ಯದರ್ಶಿ ಭಾರತದ ಹೊಸ ಬಣ್ಣಗಳನ್ನು ಮೊದಲ ಬಾರಿಗೆ ಪರಿಶೀಲಿಸುತ್ತಿರುವುದನ್ನು ಕಾಣಬಹುದು. ವಿಶೇಷ ಕಾರ್ಯಕ್ರಮದಲ್ಲಿ, ಜನಪ್ರಿಯ ಜರ್ಮನ್ ಕ್ರೀಡಾ ಉಡುಪು ತಯಾರಕ ಅಡಿಡಾಸ್ ತರಬೇತಿ ಕಿಟ್, ಕೋಚಿಂಗ್ ಸಿಬ್ಬಂದಿ ಕಿಟ್ ಮತ್ತು ಮುಖ್ಯ ಕಿಟ್ ಸೇರಿದಂತೆ ಎಲ್ಲರ ಕಿಟ್​​ಗಳನ್ನು ಪ್ರದರ್ಶಿಸಿತು.

VISTARANEWS.COM


on

Rohit Sharma
Koo

ಅಹ್ಮದಾಬಾದ್​: 2024 ರ ಟಿ 20 ವಿಶ್ವಕಪ್​​ಗಾಗಿ ಭಾರತ ತಂಡಕ್ಕಾಗಿ ರೂಪಿಸಿರುವ ಹೊಸ ಕಿಟ್ ಬಿಡುಗಡೆ ಕಾರ್ಯಕ್ರಮ ಅಹಮಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾರತೀಯ ಕ್ರಿಕೆಟ್ ಕೌನ್ಸಿಲ್ (BCCI) ಕಾರ್ಯದರ್ಶಿ ಜಯ್ ಶಾ ಮತ್ತು ಭಾರತ ನಾಯಕ ರೋಹಿತ್ ಶರ್ಮಾ (Rohit Sharma) ಭಾಗವಹಿಸಿದ್ದರು. ಬಿಸಿಸಿಐನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಇತ್ತೀಚೆಗೆ ಅಪ್ಲೋಡ್ ಮಾಡಿದ ವೀಡಿಯೊದಲ್ಲಿ ಭಾರತ ತಂಡದ ನಾಯಕ ಹಾಗೂ ಬಿಸಿಸಿಐ ಕಾರ್ಯದರ್ಶಿ ಭಾರತದ ಹೊಸ ಬಣ್ಣಗಳನ್ನು ಮೊದಲ ಬಾರಿಗೆ ಪರಿಶೀಲಿಸುತ್ತಿರುವುದನ್ನು ಕಾಣಬಹುದು. ವಿಶೇಷ ಕಾರ್ಯಕ್ರಮದಲ್ಲಿ, ಜನಪ್ರಿಯ ಜರ್ಮನ್ ಕ್ರೀಡಾ ಉಡುಪು ತಯಾರಕ ಅಡಿಡಾಸ್ ತರಬೇತಿ ಕಿಟ್, ಕೋಚಿಂಗ್ ಸಿಬ್ಬಂದಿ ಕಿಟ್ ಮತ್ತು ಮುಖ್ಯ ಕಿಟ್ ಸೇರಿದಂತೆ ಎಲ್ಲರ ಕಿಟ್​​ಗಳನ್ನು ಪ್ರದರ್ಶಿಸಿತು.

ಅಡಿಡಾಸ್ ಈ ಹಿಂದೆ ಸಾಮಾಜಿಕ ಮಾಧ್ಯಮ ಹ್ಯಾಂಡಲ್​ಗಳಲ್ಲಿ ವೀಡಿಯೊ ಮೂಲಕ ಭಾರತದ ಹೊಸ ಕಿಟ್ ಪ್ರಕಟಿಸಿತ್ತು. ಇದರಲ್ಲಿ ಭಾರತೀಯ ಕ್ರಿಕೆಟ್ ತಾರೆಗಳಾದ ರೋಹಿತ್, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಅವರು ಧರ್ಮಶಾಲಾದ ಎಚ್ಪಿಸಿಎ ಕ್ರೀಡಾಂಗಣದಲ್ಲಿ ಹೊಸ ಕಿಟ್ ಅನ್ನು ಸ್ವಾಗತಿಸಿರುವುದನ್ನು ಚಿತ್ರಿಸಲಾಗಿತ್ತು. ವೀಡಿಯೊದಲ್ಲಿ ನೋಡಿದಂತೆ, ಹೊಸ ಕಿಟ್ ದೇಹದಲ್ಲಿ ನೀಲಿ ಮತ್ತು ತೋಳುಗಳಿಗೆ ತಿಳಿ ಕಿತ್ತಳೆ ಅದ್ಭುತ ಮಿಶ್ರಣ ಹೊಂದಿದೆ. ಈ ಕಿಟ್ ಸೊಂಟದ ಬದಿಯಲ್ಲಿ ಸಮಾನಾಂತರವಾಗಿ ಚಲಿಸುವ ಎರಡು ಕಿತ್ತಳೆ ಪಟ್ಟೆಗಳನ್ನು ಒಳಗೊಂಡಿದೆ, ಅಡಿಡಾಸ್​​ನ ಮೂರು ಟ್ರೇಡ್​​ಮಾರ್ಕ್​ ಬಿಳಿ ಪಟ್ಟೆಗಳನ್ನು ಹೊಂದಿದೆ. ಮುಖ್ಯ ಕಿಟ್ ಅದರ ಕಾಲರ್ ಮೇಲೆ ತ್ರಿವರ್ಣ ಪಟ್ಟೆಗಳನ್ನೂ ಒಳಗೊಂಡಿದೆ.

ಇದನ್ನೂ ಓದಿ: MS Dhoni : ಧೋನಿಗೆ ದೇವಸ್ಥಾನ; ಸಿಎಸ್​​ಕೆ ತಂಡದ ಮಾಜಿ ಆಟಗಾರ ಅಭಿಮಾನದ ನುಡಿ

ಮೇ 23, 2023 ರಂದು ಬಿಸಿಸಿಐ ಅಡಿಡಾಸ್​ನೊಂದಿಗೆ ಬಹು ವರ್ಷಗಳ ಒಪ್ಪಂದವನ್ನು ಬರೆದಾಗಿನಿಂದ ಭಾರತವು ಅಡಿಡಾಸ್ನ ವಿನ್ಯಾಸಗಳನ್ನು ಧರಿಸುತ್ತಿದೆ. ಅಡಿಡಾಸ್ ಬಿಸಿಸಿಐಗೆ ಬರುವ ಮೊದಲು, ಎಂಪಿಎಲ್​​ ಬಟ್ಟೆ ಬ್ರಾಂಡ್ ಕಿಲ್ಲರ್ ಜೀನ್ಸ್ ಭಾರತದ ಕಿಟ್ ಪ್ರಾಯೋಜಕರಾಗಿದ್ದರು. ಈ ಘೋಷಣೆಯ ನಂತರ, ಅನೇಕ ಭಾರತೀಯ ಕ್ರಿಕೆಟ್ ತಾರೆಯರು ಹೊಸ ಬಣ್ಣಗಳಲ್ಲಿ ರೂಪದರ್ಶಿಗಳಾಗಿ ಕಾಣಿಸಿಕೊಂಡಿದ್ದಾರೆ.

ಜೂನ್ 5 ರಿಂದ ಪ್ರಾರಂಭವಾಗುವ ವಿಶ್ವಕಪ್ ಅಭಿಯಾನಕ್ಕಾಗಿ ಈಗಾಗಲೇ ತಮ್ಮ ತಂಡವನ್ನು ಘೋಷಿಸಿರುವ ಭಾರತ, ಇತ್ತೀಚಿನ ಟಿ 20 ಐ ಪಂದ್ಯಗಳಲ್ಲಿ ಅದ್ಭುತ ಫಾರ್ಮ್ ನಿಂದಾಗಿ ಸ್ಪರ್ಧೆಯನ್ನು ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ.

ಟಿ20 ವಿಶ್ವಕಪ್ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್. ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್. ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

Continue Reading
Advertisement
Hoarding
ಸಂಪಾದಕೀಯ10 mins ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ10 mins ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ20 mins ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ27 mins ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ33 mins ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ34 mins ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Lok Sabha Election
ದೇಶ2 hours ago

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Award Ceremony
ಬೆಂಗಳೂರು2 hours ago

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Muhammad Waseem
ಕ್ರೀಡೆ2 hours ago

Muhammad Waseem : ಇತಿಹಾಸ ಸೃಷ್ಟಿಸಿದ ಯುಎಇ ಕ್ರಿಕೆಟ್​ ತಂಡದ ನಾಯಕ ವಸೀಮ್​

Narendra Modi
ದೇಶ3 hours ago

Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ5 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ5 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ5 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ6 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ6 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ12 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ17 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ19 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌