Virat Kohli: ಐಪಿಎಲ್​ನ ನೆಚ್ಚಿನ ಎದುರಾಳಿ ತಂಡವನ್ನು ಹೆಸರಿಸಿದ ವಿರಾಟ್​ ಕೊಹ್ಲಿ - Vistara News

ಕ್ರೀಡೆ

Virat Kohli: ಐಪಿಎಲ್​ನ ನೆಚ್ಚಿನ ಎದುರಾಳಿ ತಂಡವನ್ನು ಹೆಸರಿಸಿದ ವಿರಾಟ್​ ಕೊಹ್ಲಿ

Virat Kohli: ಕೊಹ್ಲಿ ಕೆಕೆಆರ್​ ತಂಡವನ್ನು ತನ್ನ ನೆಚ್ಚಿನ ಎದುರಾಳಿ ತಂಡವಾಗಿ ಆಯ್ಕೆ ಮಾಡಿಕೊಳ್ಳಲು ಕೂಡ ಒಂದು ಕಾರಣವಿದೆ. ಏಕೆಂದರೆ ಕೊಹ್ಲಿ ತಮ್ಮ ಚೊಚ್ಚಲ ಐಪಿಎಲ್​ ಪಂದ್ಯ ಆಡಿದ್ದು ಕೆಕೆಆರ್​ ವಿರುದ್ಧ. ಇದೇ ಕಾರಣದಿಂದ ಕೊಹ್ಲಿಗೆ ಕೆಕೆಆರ್​ ನೆಚ್ಚಿನ ಎದುರಾಳಿ ತಂಡವಾಗಿದೆ.

VISTARANEWS.COM


on

Virat Kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಐಪಿಎಲ್​ ಟೂರ್ನಿಯ(IPL) ಇದುವರೆಗಿನ 17 ಆವೃತ್ತಿಗಳಲ್ಲಿಯೂ ಆರ್​ಸಿಬಿ(RCB) ಒಂದೇ ತಂಡದ ಪರ ಆಡುತ್ತಿರುವ ವಿರಾಟ್​ ಕೊಹ್ಲಿ(Virat Kohli) ತಮ್ಮ ನೆಚ್ಚಿನ ಎದುರಾಳಿ ತಂಡ ಯಾವುದು ಎಂದು ಹೇಳಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿ 16 ವರ್ಷ ತುಂಬಿದ ಹಿನ್ನಲೆಯಲ್ಲಿ ನಡೆಸಿದ್ದ ಸಂದರ್ಶನದಲ್ಲಿ ಕೊಹ್ಲಿ ಈ ವಿಚಾರವನ್ನು ಬಹಿರಂಗಪಡಿಸಿದರು.

ಆಗಸ್ಟ್​ 18 ರಂದು ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಅಡಿ ಇರಿಸಿ 16 ವರ್ಷ ತುಂಬಿತ್ತು. ಇದೇ ಹಿನ್ನಲೆಯಲ್ಲಿ ಆರ್​ಸಿಬಿ ಕೊಹ್ಲಿಯೊಂದಿಗೆ ವಿಶೇಷ ಸಂದರ್ಶನ ನಡೆಸಿತ್ತು. ಈ ಸಂದರ್ಶನದಲ್ಲಿ ಕೊಹ್ಲಿಗೆ ನಿಮ್ಮ ನೆಚ್ಚಿನ ಐಪಿಎಲ್​ ಎದುರಾಳಿ ತಂಡ ಯಾವುದೆಂದು ಪ್ರಶ್ನೆ ಕೇಳಲಾಯಿತು. ಎಲ್ಲರು ಕೊಹ್ಲಿ ಚೆನ್ನೈ ಅಥವಾ ಮುಂಬೈ ಇಂಡಿಯನ್ಸ್​ ಆಯ್ಕೆ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಿದ್ದರು. ಆದರೆ ಈ ನಿರೀಕ್ಷೆ ಹುಸಿಯಾಗಿದೆ. ಕೊಹ್ಲಿಯ ನೆಚ್ಚಿನ ಎದುರಾಳಿ ತಂಡ ಮೂರು ಬಾರಿಯ ಚಾಂಪಿಯನ್​ ಕೆಕೆಆರ್​.

ಹೌದು, ಕೊಹ್ಲಿ ಕೆಕೆಆರ್​ ತಂಡವನ್ನು ತನ್ನ ನೆಚ್ಚಿನ ಎದುರಾಳಿ ತಂಡವಾಗಿ ಆಯ್ಕೆ ಮಾಡಿಕೊಳ್ಳಲು ಕೂಡ ಒಂದು ಕಾರಣವಿದೆ. ಏಕೆಂದರೆ ಕೊಹ್ಲಿ ತಮ್ಮ ಚೊಚ್ಚಲ ಐಪಿಎಲ್​ ಪಂದ್ಯ ಆಡಿದ್ದು ಕೆಕೆಆರ್​ ವಿರುದ್ಧ. ಇದೇ ಕಾರಣದಿಂದ ಕೊಹ್ಲಿಗೆ ಕೆಕೆಆರ್​ ನೆಚ್ಚಿನ ಎದುರಾಳಿ ತಂಡವಾಗಿದೆ.

ಏಪ್ರಿಲ್ 18, 2008 ರಂದು ಆರ್‌ಸಿಬಿ ಮತ್ತು ಕೆಕೆಆರ್ ಮುಖಾಮುಖಿಯಾಗಿತ್ತು. ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 5 ಎಸೆತಗಳಲ್ಲಿ 1 ರನ್ ಗಳಿಸಿ ಔಟಾಗಿದ್ದರು. ಆರ್​ಸಿಬಿ ಈ ಪಂದ್ಯದಲ್ಲಿ ಕೇವಲ 82 ರನ್‌ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು. ಎದುರಾಳಿ ಕೆಕೆಆರ್​ 222 ರನ್ ಗಳಿಸಿತ್ತು.

ಒಂದೇ ಫ್ರಾಂಚೈಸಿ ಪರ ಆಡಿದ ಏಕೈಕ ಆಟಗಾರ ಎನಿಸಿಕೊಂಡಿರುವ ಕೊಹ್ಲಿ ನಾಯಕನಾಗಿ ಮತ್ತು ಆಟಗಾರನಾಗಿ ಒಟ್ಟು ಮೂರು ಸಲ ಐಪಿಎಲ್​ ಫೈನಲ್​ ಆಡಿದ್ದಾರೆ. ಆದರೆ ಒಮ್ಮೆಯೂ ಟ್ರೋಫಿ ಗೆದ್ದಿಲ್ಲ. ಮುಂದಿನ ಸಲವಾದರೂ ಕಪ್​ ಗೆಲ್ಲಲಿದೆಯಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಮತ್ತೆ ನಾಯಕನಾಗಲಿದ್ದಾರಾ ಕೊಹ್ಲಿ?


ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿಯೇ ಮತ್ತೆ ಆರ್​ಸಿಬಿಗೆ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. 

ವಿರಾಟ್​ ಕೊಹ್ಲಿ 2013ರಲ್ಲಿ ಆರ್​ಸಿಬಿಯ ಪೂರ್ಣ ಪ್ರಮಾಣದ ನಾಯಕನಾಗಿ ನೇಮಕಗೊಂಡಿದ್ದರು. 2021ರ ತನಕ ಅವರು ಆರ್​ಸಿಬಿಯನ್ನು ಮುನ್ನಡೆಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಒಟ್ಟು 140 ಪಂದ್ಯಗಳನ್ನು ಆಡಿದ್ದ ಆರ್​​ಸಿಬಿ 66 ಪಂದ್ಯಗಳನ್ನು ಜಯಿಸಿದೆ. 70 ಪಂದ್ಯಗಳಲ್ಲಿ ಸೋಲು ಕಂಡಿದೆ. ಐಪಿಎಲ್​ ಇತಿಹಾಸದಲ್ಲಿ ವಿನ್ನಿಂಗ್ಸ್​ ಸರಾಸರಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದ ಸರಾಸರಿ ಗೆಲುವು ಶೇ. 46.15 ರಷ್ಟಿದೆ. ದಾಖಲೆ ಧೋನಿ ಹೆಸರಿನಲ್ಲಿದೆ. ಧೋನಿ ನಾಯಕತ್ವದ ಗೆಲುವಿನ ಸರಾಸರಿ 60.38 ರಷ್ಟಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Robin Uthappa: ಮಾನಸಿಕ ಖಿನ್ನತೆಯ ಅನುಭವಗಳನ್ನು ಬಿಚ್ಚಿಟ್ಟ ಭಾರತ ತಂಡದ ಮಾಜಿ ಕ್ರಿಕೆಟಿಗ

Robin Uthappa: ಉತ್ತಪ್ಪ ಅವರು 2015 ರಲ್ಲಿ ಕೊನೆಯ ಬಾರಿ ಜಿಂಬಾಬ್ಬೆ ವಿರುದ್ಧದ ಏಕದಿನ ಹಾಗೂ ಟಿ-20 ಯನ್ನು ಆಡಿದ್ದರು

VISTARANEWS.COM


on

Robin Uthappa
Koo

ಬೆಂಗಳೂರು: ಟೀಮ್​ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ರಾಬಿನ್​ ಉತ್ತಪ್ಪ(Robin Uthappa) ಹಿಂದೆ ತಾನು ಖಿನ್ನತೆಯಿಂದ(Depression) ಬಳಲಿ ಆತ್ಮಹತ್ಯೆಗೆ ಮುಂದಾಗಿ ಇದರಿಂದ ಹೊರಬಂದ ವಿಚಾರವನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದಾರೆ. ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಚಿಕಿತ್ಸೆ ಪಡೆಯುವುದು ಹೇಗೆ ಎಂಬಹುದನ್ನು ತಿಳಿಸುವ ಉದ್ದೇಶದಿಂದ ಅವರು ಈ ವಿಚಾರವನ್ನು ತಿಳಿಸಿದ್ದಾರೆ.

ಟ್ವಿಟರ್​ ಎಕ್ಸ್​ ವಿಡಿಯೊದಲ್ಲಿ ಮಾತನಾಡಿದ ಉತ್ತಪ್ಪ, ಖಿನ್ನತೆಯೊಂದಿಗಿನ ತನ್ನ ಸಮರವು ಕ್ರಿಕೆಟ್ ಮೈದಾನದಲ್ಲಿ ತಾನು ಎದುರಿಸಿದ ಯಾವುದೇ ಸವಾಲುಗಳಿಗಿಂತ ಹೆಚ್ಚಿನದಾಗಿತ್ತು ಎಂದು ಹೇಳಿದ್ದಾರೆ. ಕ್ರಿಕೆಟ್ ಕ್ಷೇತ್ರದಲ್ಲಿ ನಾನು ಹಲವು ಯುದ್ಧಗಳನ್ನು ಎದುರಿಸಿದ್ದೇನೆ, ಆದರೆ ಅವು ಯಾವುದೂ ನಾನು ಖಿನ್ನತೆಯೊಂದಿಗೆ ಹೋರಾಡಿದ ಯುದ್ಧಕ್ಕಿಂತ ಕಠಿಣವಾಗಿರಲಿಲ್ಲ. ಜೀವನದಲ್ಲಿ ಏನು ಮಾಡಬೇಕೆಂದು ನಿಮಗೆ ತಿಳಿದಿಲ್ಲದಿದ್ದಾಗ ಆತ್ಮಹತ್ಯೆಯ ಯೋಚನೆಗಳು ತಲೆಗೆ ಬರುತ್ತದೆ. ಆ ಕತ್ತಲೆಯಿಂದ ಹೊರಬರಲು ಸ್ವಲ್ಪ ಸಹಾಯ ಬೇಕಾಗುತ್ತದೆ ಎಂದು ಹೇಳುವ ಮೂಲಕ ಉತ್ತಪ್ಪ ತಮ್ಮ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

“ಇತ್ತೀಚೆಗೆ ಇಂಗ್ಲೆಂಡ್​ನ ಮಾಜಿ ಕ್ರಿಕೆಟಿಗ ಗ್ರಹಾಮ್ ತೋರ್ಪ್ ಮತ್ತು ಭಾರತದ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕೇಳಿದ್ದೇವೆ. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ)ನ ಬೆನ್ನೆಲುಬು ಆಗಿದ್ದ ವಿ.ಬಿ. ಚಂದ್ರಶೇಖರ್ ಸರ್ ಸಾವನ್ನೂ ಕೂಡ ನಾವು ನೋಡಿದ್ದೇವೆ. ಇದೇ ಮಾನಸಿಕ ಸ್ಥಿತಿಯನ್ನು ನಾನೂ ಅನುಭವಿಸಿದ್ದೇನೆ. ಇದು ಉತ್ತಮ ವಿಷಯವಲ್ಲ. ನಮ್ಮನ್ನು ಪ್ರೀತಿಸುವ ಜನರಿಗೆ ನಾವು ಹೊರೆಯಾಗುತ್ತೇವೆ ಎಂಬ ಭಾವನೆ ನಮ್ಮಲ್ಲಿ ಬರುತ್ತದೆ” ಎಂದು 38 ವರ್ಷದ ಉತ್ತಪ್ಪ ಹೇಳಿದರು.

ಇದನ್ನೂ ಓದಿ Robin Uthappa: ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಬಿನ್ ಉತ್ತಪ್ಪಗೆ ಬಿಗ್ ರಿಲೀಫ್; ಜಾಮೀನು ರಹಿತ ವಾರೆಂಟ್​ಗೆ ಹೈಕೋರ್ಟ್ ತಡೆ

ಉತ್ತಪ್ಪ ಅವರು 2022ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. 2006 ರಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಪಂದ್ಯದ ಮೂಲಕ ಭಾರತ ತಂಡಕ್ಕೆ ಪಾದರ್ಪಣೆ ಮಾಡಿದ ರಾಬಿನ್‌ ಉತ್ತಪ್ಪ, 46 ಏಕದಿನ ಪಂದ್ಯಗಳನ್ನು ಆಡಿದ್ದು, 934 ರನ್‌ ಗಳನ್ನು ಗಳಿಸಿದ್ದಾರೆ. 86 ಅವರ ಸರ್ವಾಧಿಕ ರನ್.‌ 2007 ರ ಟಿ-20 ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗಿದ್ದ ಉತ್ತಪ್ಪ ಪಾಕಿಸ್ತಾನ ವಿರುದ್ಧದ ಸಮಬಲಗೊಂಡ ಪಂದ್ಯದಲ್ಲಿ ಬಾಲ್‌ ಶೂಟೌಟ್​ನಲ್ಲಿ ಗೆಲ್ಲಲು ಪ್ರಧಾನ ಪಾತ್ರ ವಹಿಸಿದ್ದರು. 13 ಅಂತಾರಾಷ್ಟ್ರೀಯ ಟಿ-20 ಪಂದ್ಯವನ್ನಾಡಿರುವ ಅವರು, 118.01 ಸ್ಟ್ರೈಕ್‌ ರೇಟ್‌ ನೊಂದಿಗೆ 249 ರನ್‌ ಗಳಿಸಿದ್ದಾರೆ.

2015 ರಲ್ಲಿ ಕೊನೆಯ ಬಾರಿ ಜಿಂಬಾಬ್ಬೆ ವಿರುದ್ಧದ ಏಕದಿನ ಹಾಗೂ ಟಿ-20 ಯನ್ನು ಆಡಿದ್ದರು. ಐಪಿಎಲ್​ನಲ್ಲಿ ಮಂಬಯಿ, ಆರ್​ಸಿಬಿ, ಕೆಕೆಆರ್‌, ರಾಜಸ್ಥಾನ್‌ ರಾಯಲ್ಸ್‌, ಸಿಎಸ್‌ ಕೆ ಪರವಾಗಿ ಆಡಿದ್ದರು. ಐಪಿಎಲ್‌ ನಲ್ಲಿ 205 ಪಂದ್ಯವನ್ನಾಡಿ ಒಟ್ಟು 4952 ರನ್‌ ಗಳಿಸಿದ್ದಾರೆ.

Continue Reading

ಕ್ರೀಡೆ

Manu Bhaker: ನಟ ವಿಜಯ್​ ಗೊತ್ತು, ಸಿಎಂ ಸ್ಟಾಲಿನ್‌ ಗೊತ್ತಿಲ್ಲ ಎಂದು ನಕ್ಕ ಮನು ಭಾಕರ್; ವಿಡಿಯೊ ವೈರಲ್​​

Manu Bhaker: ಮನು ಅವರು ವಿದ್ಯಾರ್ಥಿಗಳ ಜತೆಗೆ ಕತ್ರಿನಾ ಕೈಫ್ ಹೆಜ್ಜೆ ಹಾಕಿದ್ದ ಕಾಲಾ ಚಷ್ಮಾ(‘Kala Chashma’ Song) ಹಿಂದಿ ಹಾಡೊಂದಕ್ಕೆ ನೃತ್ಯ ಮಾಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Manu Bhaker
Koo

ಚೆನ್ನೈ: ಅವಳಿ ಒಲಿಂಪಿಕ್ಸ್​ ಪಕದ ವಿಜೇತೆ ಮನು ಭಾಕರ್(Manu Bhaker) ಅವರು ಚೆನ್ನೈಯಲ್ಲಿ ನಡೆದಿದ್ದ ಶಾಲಾ ಕಾರ್ಯಕ್ರಮವೊಂದಲ್ಲಿ ಪಾಲ್ಗೊಂಡಿದ್ದರು. ಕ್ರೀಡಾ ಸ್ಕಾಲರ್‌ಷಿಪ್‌ ವಿತರಣಾ ಕಾರ್ಯಕ್ರಮ ಇದಾಗಿತ್ತು. ಈ ವೇಳೆ ಅವರಿಗೆ ತಮಿಳುನಾಡಿನ ಕುರಿತಾದ ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಇದರೊಲ್ಲೊಂದು ಪ್ರಶ್ನೆ, ತಮಿಳುನಾಡು ಮುಖ್ಯಮಂತ್ರಿ(Tamil Nadu CM) ಎಂ.ಕೆ. ಸ್ಟಾಲಿನ್‌(MK Stalin) ಗೊತ್ತೇ ಎಂಬುದಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಮನು ಭಾಕರ್​ ನನಗೆ ಅವರು ಯಾರೆಂದೆ ತಿಳಿದಿಲ್ಲ ಎಂದು ಹೇಳುವ ಮೂಲಕ ಜೋರಾಗಿ ನಕ್ಕರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ಕೂಡ ಮನು ಅವರ ಈ ಪ್ರತಿಕ್ರಿಯೆ ಕೇಳಿ ಜೋರಾಗಿ ನಕ್ಕರು. ಸದ್ಯ ಈ ವಿಡಿಯೊ ವೈರಲ್(viral video)​ ಆಗಿದೆ.

ತಮಿಳುನಾಡಿನ ವಿಶೇಷ ಖಾದ್ಯ ಪೊಂಗಲ್​, ಮಧುರೈ ಮೀನಾಕ್ಷಿ ದೇವಸ್ಥಾನ, ಸಿನಿಮಾ ನಟ ವಿಜಯ್(Vijay)​ ತಿಳಿದಿದೆಯಾ? ಹೀಗೆ ಹಲವು ಪ್ರಶ್ನೆಗಳನ್ನು ಮನು ಭಾಕರ್​ ಅವರಿಗೆ ಕೇಳಲಾಯಿತು. ನಟ ವಿಜಯ್​ ಅವರನ್ನು ಹೊರತುಪಡಿಸಿ ಉಳಿದ ಯಾವುದರ ಬಗ್ಗೆಯೂ ತಿಳಿದಿಲ್ಲ ಎಂದು ಹೇಳಿದರು. ಅದರಲ್ಲೂ ಸಿಎಂ ಸ್ಟಾಲಿನ್​ ತಿಳಿದಿಲ್ಲ ಎನ್ನುವ ಪ್ರತಿಕ್ರಿಯೆಯ ವಿಡಿಯೊ ಮಾತ್ರ ತುಂಬಾ ವೈರಲ್​ ಆಗಿದೆ. ಸ್ಟಾಲಿನ್​ ವಿರೋಧಿಗಳು ಈ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಟ್ರೋಲ್​ ಮಾಡಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮನು ಅವರು ವಿದ್ಯಾರ್ಥಿಗಳ ಜತೆಗೆ ಕತ್ರಿನಾ ಕೈಫ್ ಹೆಜ್ಜೆ ಹಾಕಿದ್ದ ಕಾಲಾ ಚಷ್ಮಾ(‘Kala Chashma’ Song) ಹಿಂದಿ ಹಾಡೊಂದಕ್ಕೆ ನೃತ್ಯ ಮಾಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು. ಭರತನಾಟ್ಯ(Manu Bhaker Bharatnatyam) ಕಲಿಕೆಗಾಗಿ ಮನು ಭಾಕರ್​ ತಮಿಳುನಾಡಿಗೆ ಆಗಮಿಸಿದ್ದರು. ತಮಿಳುನಾಡಿನ ಶಿಕ್ಷಕರೊಬ್ಬರ ಸಹಾಯದಿಂದ ಆನ್​ಲೈನ್​ನಲ್ಲಿಯೇ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದ 22 ವರ್ಷದ ಮನು ಭಾಕರ್​ ಇದೀಗ ಶೂಟಿಂಗ್​ನಿಂದ ಮೂರು ತಿಂಗಳ ವಿಶ್ರಾಂತಿ ಪಡೆದು ನೇರವಾಗಿ ತರಗತಿಗೆ ಹಾಜರಾಗಿ ನೃತ್ಯ ಕಲಿಯಲಿದ್ದಾರೆ. ಜತೆಗೆ ವಯೋಲಿನ್​ ಕಲಿಕೆ ಕೂಡ ಮಾಡಲಿದ್ದಾರೆ.

ಇದನ್ನೂ ಓದಿ Manu Bhaker: 3 ತಿಂಗಳ ರಜೆಯಲ್ಲಿ ಭರತನಾಟ್ಯ, ಕುದುರೆ ಸವಾರಿ, ಸ್ಕೇಟಿಂಗ್ ಕಲಿಯಲಿದ್ದಾರೆ ಮನು ಭಾಕರ್

ಪ್ಯಾರಿಸ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಮನು ಭಾಕರ್​ ಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು. ಭಾಕರ್(Manu Bhaker)​ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು.

Continue Reading

ಕ್ರಿಕೆಟ್

KL Rahul: ಆರ್‌ಸಿಬಿ ಸೇರದಂತೆ ಕೆ.ಎಲ್​ ರಾಹುಲ್‌ಗೆ 25 ಕೋಟಿ ಆಫರ್ ಮಾಡಿದ ಫ್ರಾಂಚೈಸಿ!

KL Rahul: ಅಜ್ನ್ಯೂಸ್ ಎಂಬ ಸುದ್ದಿ ಸಂಸ್ಥೆ ವರದಿ ಮಾಡಿರುವ ಪ್ರಕಾರ ರಾಹುಲ್​ ಈ ಬಾರಿಯ ಮೆಗಾ ಹರಾಜಿನಲ್ಲಿ(IPL 2025) ಆರ್‌ಸಿಬಿಯಿಂದ ದೂರ ಉಳಿಯಲು ಸ್ವತಃ ಆರ್​ಸಿಬಿ ಫ್ರಾಂಚೈಸಿಯೇ 25 ಕೋಟಿ ಆಫರ್ ಮಾಡಿದೆ ಎಂದು ತಿಳಿಸಿದೆ.

VISTARANEWS.COM


on

KL Rahul
Koo

ಬೆಂಗಳೂರು: ಟೀಮ್​ ಇಂಡಿಯಾದ ಬ್ಯಾಟರ್​, ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಮತ್ತೆ ತವರು ತಂಡವಾದ ಆರ್​ಸಿಬಿ(RCB) ತಂಡಕ್ಕೆ ಸೇರುವ ಪ್ರಯತ್ನ ನಡೆಸುತ್ತಿದ್ದರೆ, ಅತ್ತ ಫ್ರಾಂಚೈಸಿಯೇ ಆರ್‌ಸಿಬಿಯಿಂದ ದೂರ ಉಳಿಯಲು ರಾಹುಲ್‌ಗೆ 25 ಕೋಟಿ ಆಫರ್ ಮಾಡಿದೆ ಎಂದು ವರದಿಯಾಗಿದೆ.

ಹೌದು, ಅಜ್ನ್ಯೂಸ್ ಎಂಬ ಸುದ್ದಿ ಸಂಸ್ಥೆ ವರದಿ ಮಾಡಿರುವ ಪ್ರಕಾರ ರಾಹುಲ್​ ಈ ಬಾರಿಯ ಮೆಗಾ ಹರಾಜಿನಲ್ಲಿ(IPL 2025) ಆರ್‌ಸಿಬಿಯಿಂದ ದೂರ ಉಳಿಯಲು ಸ್ವತಃ ಆರ್​ಸಿಬಿ ಫ್ರಾಂಚೈಸಿಯೇ 25 ಕೋಟಿ ಆಫರ್ ಮಾಡಿದೆ ಎಂದು ತಿಳಿಸಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಮುಫದ್ದಲ್ ವೋಹ್ರಾ ಎನ್ನುವ ನೆಟ್ಟಿಗ ಈ ವಿಚಾರವನ್ನು ತನ್ನ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾನೆ. ಸದ್ಯ ಈ ಸುದ್ದಿ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಷ್ಟಕ್ಕೂ ಆರ್​ಸಿಬಿ ಸೇರದಂತೆ ರಾಹುಲ್​ಗೆ ಫ್ರಾಂಚೈಸಿಯೇ ಇಷ್ಟು ದೊಡ್ಡ ಮೊತ್ತವನ್ನು ನೀಡಲು ಮುಂದಾಗಿರುವುದೆ ಏಕೆ ಎನ್ನುವ ಅನುಮಾನ ಹುಟ್ಟಿಕೊಂಡಿದೆ.

ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. ಹೀಗಾಗಿ ರಾಹುಲ್​ 18ನೇ ಆವೃತ್ತಿಯಲ್ಲಿ ಆರ್​ಸಿಬಿ ಸೇರಲಿದ್ದಾರೆ ಎನ್ನಲಾಗಿತ್ತು. ಅಭಿಮಾನಿಗಳು ಕೂಡ ಆರ್​ಸಿಬಿ ಜೆರ್ಸಿಯಲ್ಲಿ ರಾಹುಲ್​ ಅವರ ಫೋಟೊ ಎಡಿಟ್​ ಮಾಡಿ ಆರ್​ಸಿಬಿಗೆ ಸ್ವಾಗತ ಎನ್ನುವ ಪೋಸ್ಟರ್​ ಕೂಡ ಹಂಚಿಕೊಂಡಿದ್ದರು. ಆದರೆ ಈಗ ಫ್ರಾಂಚೈಸಿಯೇ ಅವರನ್ನು ತಂಡ ಸೇರದಂತೆ ಹಣ ನೀಡಲು ಮುಂದಾಗಿದೆ ಎನ್ನಲಾಗಿದೆ.

ಇದನ್ನೂ ಓದಿ IPL 2025: ಫ್ರಾಂಚೈಸಿಗಳ ಒತ್ತಾಯಕ್ಕೆ ಮಣಿದು ಇಷ್ಟು ಆಟಗಾರರ ರಿಟೇನ್​ಗೆ ಅವಕಾಶ ನೀಡಲಿದೆ ಬಿಸಿಸಿಐ

ಕಳೆದ ಆವೃತ್ತಿಯಲ್ಲಿ ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ರಾಹುಲ್​ ಬೇಸರಗೊಂಡಿದ್ದರು. ಈ ವೇಳೆಯೇ ರಾಹುಲ್ ಮುಂದಿನ ಆವೃತ್ತಿಯಲ್ಲಿ ಲಕ್ನೋ ತೊರೆಯುವುದು ಬಹುತೇಕ ಖಚಿತ ಎನ್ನಲಾಗಿತ್ತು. ಒಟ್ಟಾರೆ ಟೀಮ್​ ಇಂಡಿಯಾ ಪರ ಕೂಡ ಫಾರ್ಮ್​ ಕಳೆದುಕೊಂಡಿರುವ ರಾಹುಲ್​ ಈ ಬಾರಿ ಯಾವ ತಂಡದ ಪಾಲಾಗಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಇನ್ನೊಂದು ಮೂಲಗಳ ಪ್ರಕಾರ ರಿಂಕು ಸಿಂಗ್​ ಅಥವಾ, ಹಾರ್ದಿಕ್​ ಪಾಂಡ್ಯ ಅವರನ್ನು ಖರೀದಿಸಲು ಆರ್​ಸಿಬಿ ಯೋಚಿಸಿದೆ ಎನ್ನಲಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಮ್ಯಾಚ್​ ಫಿನಿಶಿಂಗ್​ ಮಾಡುವ ಆಟಗಾರ ಇಲ್ಲದ್ದು ತಂಡಕ್ಕೆ ಇದುವರೆಗೂ ಹಿನ್ನಡೆಯಾಗಿತ್ತು. ಇದೇ ಕಾರಣಕ್ಕೆ ಪಾಂಡ್ಯ ಅಥವಾ ರಿಂಕು ಅವರನ್ನು ಖರೀದಿಸಲು ಮುಂದಾಗಿದೆ ಎನ್ನಲಾಗಿದೆ.

Continue Reading

ಕ್ರೀಡೆ

ICC Chairman Election: ಅಮಿತ್​ ಶಾ ಮಗ ಜಯ್​ ಶಾ ಐಸಿಸಿಯ ಮುಂದಿನ ಅಧ್ಯಕ್ಷ?

VISTARANEWS.COM


on

ICC Chairman Election
Koo

ಮುಂಬಯಿ: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್‌ ಶಾ(Jay Shah) ಅವರು ತಮ್ಮ ಈ ಹುದ್ದೆಯನ್ನು ತೊರೆಯಲಿದ್ದಾರೆ ಎಂದು ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಇದೀಗ ಈ ಸುದ್ದಿ ಕೆಲವೇ ದಿನಗಳಲ್ಲಿ ನಿಜವಾಗುವ ಸಾಧ್ಯತೆ ಕಂಡು ಬಂದಿದೆ. ಹೌದು, ಐಸಿಸಿ ಹಾಲಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ(Greg Barclay) ಮೂರನೇ ಅವಧಿಗೆ ಮುಂದುವರಿಯುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಐಸಿಸಿಯ(ICC) ಹೊಸ ಅಧ್ಯಕ್ಷರ ಚುನಾವಣೆಗೆ(ICC Chairman Election) ಜಯ್ ಶಾ ಸ್ಪರ್ಧಿಸುವುದು ಖಚಿತ ಎನ್ನಲಾಗಿದೆ. ಐಸಿಸಿ ಚುನಾವಣೆ ಇದೇ ನವೆಂಬರ್​ನಲ್ಲಿ ನಡೆಯಲಿದೆ.

‘ನವೆಂಬರ್ ಅಂತ್ಯದಲ್ಲಿ ಅಧಿಕಾರಾವಧಿ ಮುಗಿದಾಗ ಈ ಹುದ್ದೆಯಿಂದ ಕೆಳಗಿಳಿಯುತ್ತೇನೆ. ಮೂರನೇ ಅವಧಿಗೆ ನಿಲ್ಲುವುದಿಲ್ಲ’ ಎಂದು ಗ್ರೆಗ್ ಬಾರ್ಕ್ಲೇ ಅವರು ಈಗಾಗಲೇ ಮಂಡಳಿಗೆ ದೃಢಪಡಿಸಿದ್ದಾರೆ. ಬಾರ್ಕ್ಲೇ ಅವರು 2020 ರಲ್ಲಿ ಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ನೇಮಕವಾಗಿದ್ದರು. ಇದಾದ ಬಳಿಕ 2022 ರಲ್ಲಿ ಅವರನ್ನು ಮರು ಆಯ್ಕೆ ಮಾಡಲಾಗಿತ್ತು. ನ್ಯೂಜಿಲ್ಯಾಂಡ್ ಮೂಲದ ವಕೀಲ ಗ್ರೆಗ್ ಬಾರ್ಕ್ಲೇ ಕಳೆದ ನಾಲ್ಕು ವರ್ಷಗಳಿಂದ ಐಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಈಗಾಗಲೇ ಜಯ್​ ಶಾ ಬಿಸಿಸಿಐ ಜತೆಗೆ ಐಸಿಸಿ ಸಮಿತಿಯಲ್ಲಿ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಮಾತ್ರವಲ್ಲದೆ ಏಷ್ಯಾ ಕ್ರಿಕೆಟ್ ಕೌನ್ಸಿಲ್‌ (ಎಸಿಸಿ) ಅಧ್ಯಕ್ಷರೂ ಆಗಿದ್ದಾರೆ. ಇದೀಗ ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿಂದೆಯೂ ಹಲವು ಬಾರಿ ಜಯ್​ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಸ್ಪಧಿಸಿರಲಿಲ್ಲ. ಈ ಬಾರಿ ಖಚಿತ ಎಂದು ಜಯ್​ ಶಾ ಆಪ್ತ ಮೂಲಗಳು ಮಾಹಿತಿ ನೀಡಿದೆ. ಜಯ್ ಶಾ 2019 ರಲ್ಲಿ ಬಿಸಿಸಿಐ ಕಾರ್ಯದರ್ಶಿ ಹುದ್ದೆಯನ್ನು ವಹಿಸಿಕೊಂಡಿದ್ದರು.

ಇದನ್ನೂ ಓದಿ Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

35 ವರ್ಷದ ಜಯ್​ ಶಾ ಒಂದೊಮ್ಮೆ ಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಐಸಿಸಿಯ ಅತ್ಯಂತ ಕಿರಿಯ ಅಧ್ಯಕ್ಷರಾದ ಗೌರವಕ್ಕೆ ಪಾತ್ರರಾಗಲಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ ಅಧಿಕಾರದಲ್ಲಿದ್ದಾರೆ. 2020ರಲ್ಲಿ ಈ ಸ್ಥಾನಕ್ಕೆ ಇವರು ಆಯ್ಕೆ ಆಗಿದ್ದರು. ಈ ವರ್ಷ ಅವರ ಅಧಿಕಾರಾವಧಿ ಕೊನೆಯಾಗಲಿದೆ.

ಜಯ್​ ಶಾ ನಾಯಕತ್ವವು ವಿಶ್ವಾದ್ಯಂತ ಕ್ರಿಕೆಟ್‌ನಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿದೆ. ಐಸಿಸಿ ಪುರುಷರ ವಿಶ್ವಕಪನ್ನು ಅವರು ಹೊಸ ಎತ್ತರಕ್ಕೆ ಮುನ್ನಡೆಸಿದ್ದಾರೆ. ಲಿಂಗ ಸಮಾನತೆಯನ್ನು ತರುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್​ನಲ್ಲಿ ಪುರುಷ ಮತ್ತು ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ಪದ್ಧತಿಯನ್ನು ಕೂಡ ಇವರ ಕಾರ್ಯವಧಿಯಲ್ಲಿ ಜಾರಿಗೆ ತರಲಾಗಿತ್ತು. ಮತ್ತು ಮಹಿಳಾ ಪ್ರೀಮಿಯರ್ ಲೀಗ್‌ನ ರಚನೆ, ಒಲಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆ, ಹೀಗೆ ಅನೇಕ ಕಾರ್ಯಗಳ ಮೂಲಕ ಕ್ರಿಕೆಟ್​ ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಿದ್ದಾರೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥರಾದ ಅತ್ಯಂತ ಕಿರಿಯ ಎನ್ನುವ ಹೆಗ್ಗಳಿಕೆಯೂ ಜಯ್​ ಶಾ ಅವರದ್ದಾಗಿದೆ. ಭಾರತದ ದೇಶೀಯ ಕ್ರಿಕೆಟ್ ಭವಿಷ್ಯವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಜಯ್​ ಶಾ ಹಲವು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

Continue Reading
Advertisement
Kolkata Doctor Murder Case
ದೇಶ10 mins ago

Kolkata Doctor Murder Case: ಕೋಲ್ಕತ್ತಾ ವೈದ್ಯೆ ಅತ್ಯಾಚಾರ; ಮತ್ತೆ ನೆನಪಿಗೆ ಬಂದಳು ಕರ್ನಾಟಕ ಮೂಲದ ನರ್ಸ್ ಅರುಣಾ ಶಾನ್‌ಬಾಗ್

bangaldesh Unrest
ದೇಶ12 mins ago

Bangladesh Unrest: ಬಾಂಗ್ಲಾದಲ್ಲಿ ಹಿಂದೂಗಳನ್ನು ರಕ್ಷಿಸಿ- ನಾಲ್ವರು ಶಂಕರಾಚಾರ್ಯರಿಂದ ಕೇಂದ್ರ ಸರ್ಕಾರಕ್ಕೆ ಮನವಿ

Assault Case
ಕರ್ನಾಟಕ17 mins ago

Assault Case: ಫುಡ್ ಡೆಲಿವರಿ ಬಾಯ್‌ನ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ; ಸಿಸಿಟಿವಿಯಲ್ಲಿ ಸೆರೆ

Viral Video
ವೈರಲ್ ನ್ಯೂಸ್21 mins ago

Viral Video: ಆಟಿಕೆ ಎಂದು ತಿಳಿದು ಹಾವನ್ನೇ ಕಚ್ಚಿದ ಮಗು! ಕಚ್ಚಿಸಿಕೊಂಡ ಹಾವು ಸಾವು!

Tofu
ಆಹಾರ/ಅಡುಗೆ24 mins ago

Homemade Tofu Recipe: ಸೋಯಾ ಹಾಲಿನ ತೋಫು ಮನೆಯಲ್ಲೇ ಮಾಡಿಕೊಳ್ಳುವುದು ಹೇಗೆ?

Robin Uthappa
ಕ್ರೀಡೆ41 mins ago

Robin Uthappa: ಮಾನಸಿಕ ಖಿನ್ನತೆಯ ಅನುಭವಗಳನ್ನು ಬಿಚ್ಚಿಟ್ಟ ಭಾರತ ತಂಡದ ಮಾಜಿ ಕ್ರಿಕೆಟಿಗ

Fashion News
ಫ್ಯಾಷನ್49 mins ago

Fashion News: ಉದ್ಯಾನನಗರಿಯಲ್ಲಿ ಮಿನುಗಿದ ಇಂಡಿಯನ್ ಗ್ಲಾಮರ್ ಸ್ಟ್ರೀಟ್ ಫ್ಯಾಷನ್ ಶೋ!

thawar chand gehlot car
ಪ್ರಮುಖ ಸುದ್ದಿ1 hour ago

Thawar Chand Gehlot: ರಾಜ್ಯಪಾಲರಿಗೆ ಬಂತು ಬುಲೆಟ್‌ಪ್ರೂಫ್‌ ಕಾರು! ಥಟ್‌ ಅಂತ ಯಾಕೀ ಬದಲಾವಣೆ?

Champai Soren
ದೇಶ1 hour ago

Champai Soren: ಹೊಸ ಪಕ್ಷ ಸ್ಥಾಪನೆ ಬಗ್ಗೆ ಚಂಪೈ ಸೊರೆನ್ ಘೋಷಣೆ; ಜಾರ್ಖಂಡ್‌ ರಾಜಕೀಯದಲ್ಲಿ ಸಂಚಲನ

fraud Case chikkaballapura
ಕ್ರೈಂ1 hour ago

Fraud Case: ʼಗಟ್ಟಿಮೇಳ ನಿಲ್ಸಿʼ ಗಂಡನನ್ನು ತರಾಟೆಗೆ ತೆಗೆದುಕೊಂಡ ಮೊದಲ ಹೆಂಡತಿ, ಮದುವೆ ಮನೆಯಲ್ಲಿ ಗಲಾಟೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌