Virat Kohli: ಒಲಿಂಪಿಕ್ಸ್​ನಲ್ಲಿ ಪಾಲ್ಗೊಳ್ಳುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿ ತುಂಬಿದ ವಿರಾಟ್​ ಕೊಹ್ಲಿ - Vistara News

ಕ್ರೀಡೆ

Virat Kohli: ಒಲಿಂಪಿಕ್ಸ್​ನಲ್ಲಿ ಪಾಲ್ಗೊಳ್ಳುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿ ತುಂಬಿದ ವಿರಾಟ್​ ಕೊಹ್ಲಿ

Virat Kohli: ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ, ಸ್ಟಾರ್​ ಶಟ್ಲರ್​, ಪಿ.ವಿ.ಸಿಂಧು(PV Sindhu) ಮತ್ತು ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್(Sharath Kamal) ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್ ಒಲಿಂಪಿಕ್(Paris Olympics 2024) ಕ್ರೀಡೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ.

VISTARANEWS.COM


on

Virat Kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಇದೇ ತಿಂಗಳ 26ಕ್ಕೆ ಆರಂಭಗೊಳ್ಳಲಿರುವ ಪ್ಯಾರಿಸ್​ ಒಲಿಂಪಿಕ್ಸ್(paris olympics)​ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಭಾರತೀಯ ಕ್ರೀಡಾಪಟುಗಳಿಗೆ ಸ್ಟಾರ್​ ಕ್ರಿಕೆಟಿಗ ವಿರಾಟ್​ ಕೊಹ್ಲಿ(Virat Kohli) ವಿಶೇಷವಾಗಿ ಹಾರೈಸುವ ಮೂಲಕ ಸ್ಫೂರ್ತಿ ತುಂಬಿದ್ದಾರೆ. ಈ ವಿಡಿಯೊವನ್ನು ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

“ಭಾರತ, ಇಂಡಿಯಾ, ಹಿಂದಿನ ಹೆಸರು ಹಿಂದೂಸ್ಥಾನ. ಒಂದು ಕಾಲದಲ್ಲಿ ಭಾರತವನ್ನು ಪ್ರಪಂಚದಾದ್ಯಂತ ಹಾವಾಡಿಗರು ಮತ್ತು ಆನೆಗಳ ನಾಡು ಎಂದು ಮಾತ್ರ ನೋಡುತ್ತಿದ್ದರು. ಆದರೆ, ಈಗ ಇದು ಬದಲಾಗಿದೆ. ಇಂದು ನಾವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ, ಗ್ಲೋಬಲ್ ಟೆಕ್ ಹಬ್ ಎಂದು ಕರೆಯಲ್ಪಡುತ್ತೇವೆ. ಆರ್ಥಿಕವಾಗಿಯೂ ನಮ್ಮ ದೇಶ ಉತ್ತಮವಾಗಿ ಪ್ರಗತಿ ಸಾಧಿಸುತ್ತಿದೆ. ನಾವು ಕ್ರಿಕೆಟ್, ಬಾಲಿವುಡ್, ಸ್ಟಾರ್ಟ್ ಅಪ್ ಯುನಿಕಾರ್ನ್ ಗಳಿಗೆ ಹೆಸರುವಾಸಿಯಾಗಿದ್ದೇವೆ. ಈಗ ನಾವೆಲ್ಲರೂ ಒಲಿಂಪಿಕ್ಸ್​ ಕಡೆ ಗಮನಹರಿಸಿದ್ದೇವೆ. ನಮ್ಮ ದೇಶದ ಕ್ರೀಡಾಪಟುಗಳು ಒಲಿಂಪಿಕ್ಸ್​ನಲ್ಲಿ ಹೆಚ್ಚಿನ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಗೆಲ್ಲುವಂತಾಗಲಿ” ಎಂದು ಹಾರೈಸಿದ್ದಾರೆ.

“ನಮ್ಮ ಸಹೋದರ ಸಹೋದರಿಯರು ಪ್ಯಾರಿಸ್​ನಲ್ಲಿ ಪದಕ ಗೆಲ್ಲುವ ಹಸಿವಿನಲ್ಲಿದ್ದಾರೆ. ಶತಕೋಟಿ ದೇಶವಾಸಿಗಳು ಆಶೀರ್ವಾದ ಅವರ ಮೇಲಿದೆ. ನಿಮ್ಮ ಪ್ರದರ್ಶನವನ್ನು ನೋಡಲು ನಾವೆಲ್ಲರೂ ಉತ್ಸುಕರಾಗಿದ್ದೇವೆ. ನಿವು ಮಾಡುವ ಸಾಧನೆಯಿಂದ ದೇಶದ ಹೆಸರು ಎಲ್ಲಡೆ ಪಸರಿಸಲಿದೆ” ಎಂದು ಕೊಹ್ಲಿ ಈ ವಿಡಿಯೊದಲ್ಲಿ ಹೇಳಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಅಥ್ಲೀಟ್‌ಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ದೇಶಕ್ಕೆ ಹೆಮ್ಮೆ ತರುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ Paris Olympics 2024 : ಜಿಯೋಸಿನಿಮಾದಲ್ಲಿ ಪ್ಯಾರಿಸ್​ ಒಲಿಂಪಿಕ್ಸ್​​ ಉಚಿತ ನೇರಪ್ರಸಾರ

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ. 30 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rishabh Pant: ಡೆಲ್ಲಿ ತೊರೆದು ಮುಂದಿನ ಐಪಿಎಲ್​ನಲ್ಲಿ ಈ ಫ್ರಾಂಚೈಸಿ ಪರ ಆಡಲಿದ್ದಾರೆ ರಿಷಭ್​ ಪಂತ್​

Rishabh Pant: ಮಹೇಂದ್ರ ಸಿಂಗ್​ ಧೋನಿ ಮುಂದಿನ ವರ್ಷ ಐಪಿಎಲ್​ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್​ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಧೋನಿ ಸ್ಥಾನಕ್ಕೆ ಪಂತ್​ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.

VISTARANEWS.COM


on

Rishabh Pant
Koo

ನವದೆಹಲಿ: ಮುಂದಿನ ವರ್ಷ ನಡೆಯುವ 18ನೇ ಆವೃತ್ತಿಯ ಐಪಿಎಲ್​ ಟೂರ್ನಿಗೆ(IPL 2025 Mega Auction) ಇದೇ ವರ್ಷಾಂತ್ಯದಲ್ಲಿ ಆಟಗಾರರ ಮೆಗಾ ಹರಾಜು ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ತಂಡದ ನಾಯಕನಾಗಿರುವ ರಿಷಭ್ ಪಂತ್(Rishabh Pant) ರಿಟೈನ್ ಆಸಕ್ತಿ ಹೊಂದಿಲ್ಲ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದೆ. ಪಂತ್​ ಚೆನ್ನೈ(Chennai Super Kings) ತಂಡ ಸೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ಮೆಗಾ ಹರಾಜಿನಲ್ಲಿ 10 ತಂಡಗಳಿಗೆ ಗರಿಷ್ಠ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಕಲ್ಪಿಸಲಿದೆ, ಜತೆಗೆ ಹರಾಜಿನಲ್ಲಿ ಒಂದು ರೈಟ್​ ಟು ಮ್ಯಾಚ್​ (ಆರ್​ಟಿಎಂ) ಕಾರ್ಡ್​ ಬಳಸಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ. ಪಂತ್​ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಎಂದು ಹೇಳಲಾಗಿದೆ. ಆದರೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಮಹೇಂದ್ರ ಸಿಂಗ್​ ಧೋನಿ ಮುಂದಿನ ವರ್ಷ ಐಪಿಎಲ್​ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್​ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಈ ಬಾರಿಯೇ ಧೋನಿ ನಿವೃತ್ತಿಯಾಗಬೇಕಿತ್ತು. ಆದರೆ ಅವರು ಇನ್ನೂ ನಿವೃತ್ತಿ ಪ್ರಕಟಿಸಿಲ್ಲ. ತಂಡದಲ್ಲಿ ಸೂಕ್ತ ವಿಕೆಟ್​ ಕೀಪರ್​ ಇಲ್ಲದ ಕಾರಣ ಧೋನಿ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್​ ನಡೆಸಿದ್ದರು. ಧೋನಿ ಸ್ಥಾನಕ್ಕೆ ಪಂತ್​ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.

ಇದನ್ನೂ ಓದಿ Rishabh Pant: ರಿಷಭ್​ ಪಂತ್​ಗೆ ಹೊಸ ಹೆಸರಿಟ್ಟ ವಿವಿಯನ್​ ರಿಚರ್ಡ್ಸ್​

ಮಹೇಂದ್ರ ಸಿಂಗ್​ ಧೋನಿ ಮನೆಯ ಯಾವುದೇ ವಿಶೇಷ ಕಾರ್ಯಕ್ರಮದಲ್ಲೂ, ರಿಷಭ್​ ಪಂತ್​ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಅಣ್ಣನ ಸ್ಥಾನದಲ್ಲಿ ನಿಂತು ಧೋನಿ ಅವರು ಪಂತ್​ಗೆ ಸಲಹೆ ನೀಡುತ್ತಾರೆ. ಪಂತ್​ ಕೂಡ ಧೋನಿ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಧೋನಿಯೇ ಪಂತ್​ ಅವರನ್ನು ಸಿಎಸ್​ಕೆ ತಂಡಕ್ಕೆ ಆಹ್ವಾನಿಸಬಹುದು. ಪಂತ್​ ಚೆನ್ನೈ ಸೇರಿದರೆ ಕೀಪಿಂಗ್​ ನಡೆಸಬಹುದು. ಧೋನಿ ಇಂಪ್ಯಾಕ್ಟ್​ ಆಟಗಾರನಾಗಿ ಬ್ಯಾಟಿಂಗ್​ ಮಾತ್ರ ನಡೆಸುವ ಸಾಧ್ಯತೆ ಇದೆ.

ಇಂಪ್ಯಾಕ್ಟ್​ ನಿಯಮ ಕೈಬಿಡುವ ಸಾಧ್ಯತೆ!


ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ. ಧೋನಿ ಅವರು ಇಂಪ್ಯಾಕ್ಟ್​ ನಿಯಮ ಇಲ್ಲವಾದರೆ ಮುಂದಿನ ಆವೃತ್ತಿ ಆಡುವುದು ಅನುಮಾನ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಹೇಳಿದ್ದರು. ಒಂದೊಮ್ಮೆ ಈ ನಿಯಮ ಕೈಬಿಟ್ಟರೆ ಆಗ ಧೋನಿ ಆಡುತ್ತಾರಾ ಎನ್ನುವ ಪ್ರಶ್ನೆಯೊಂದು ಮೂಡುವುದು ಸಹಜ.

Continue Reading

ಕ್ರೀಡೆ

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

David Warner: ಡೇವಿಡ್ ವಾರ್ನರ್ ಬಯಸಿದರೂ, ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಅವರು ಎಲ್ಲಾ ಮೂರು ಸ್ವರೂಪಗಳಿಂದಲೂ ನಿವೃತ್ತರಾಗಿದ್ದಾರೆ. ಅವರ ಕೊಡುಗೆಯನ್ನು ನಾವು ಶ್ಲಾಘಿಸಲೇಬೇಕು. ಚಾಂಪಿಯನ್ಸ್ ಟ್ರೋಫಿಗೆ ಅವರನ್ನು ಆಯ್ಕೆ ಮಾಡುವ ಯಾವುದೇ ಯೋಜನೆಯಿಲ್ಲ ಎಂದು ಆಸ್ಟ್ರೇಲಿಯಾ ತಂಡದ ಮುಖ್ಯ ಆಯ್ಕೆಗಾರ ಜಾರ್ಜ್​ ಬೈಲಿ(George Bailey) ತಿಳಿಸಿದ್ದಾರೆ.

VISTARANEWS.COM


on

David Warner
Koo

ಸಿಡ್ನಿ: ಈಗಾಗಲೇ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ತಂಡದ ಎಡಗೈ ಬ್ಯಾಟರ್​ ಡೇವಿಡ್​ ವಾರ್ನರ್(David Warner)​ ಅವರು ಕೆಲ ದಿನಗಳ ಹಿಂದಷ್ಟೇ ತಂಡ ಬಯಸಿದರೆ ತಮ್ಮ ನಿವೃತ್ತಿಯನ್ನು ಹಿಂಪಡೆಯಲು ಯೋಚಿಸಿದ್ದಾರೆ. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಮುಂದಿನ ವರ್ಷ ನಡೆಯುವ ಚಾಂಪಿಯನ್ಸ್ ಟ್ರೋಫಿ(Champions Trophy)ಯಲ್ಲಿ ಆಡಲು ಸಿದ್ಧ ಎಂದು ಹೇಳಿದ್ದರು. ಆದರೆ, ವಾರ್ನರ್​ ಅವರ ಈ ಇಂಗಿತವನ್ನು ಪುರಸ್ಕರಿಸುವುದಿಲ್ಲ ಎಂದು ಆಸ್ಟ್ರೇಲಿಯಾ ತಂಡದ ಮುಖ್ಯ ಆಯ್ಕೆಗಾರ ಜಾರ್ಜ್​ ಬೈಲಿ(George Bailey) ತಿಳಿಸಿದ್ದಾರೆ.

ತಂಡಕ್ಕೆ ಸಹಾಯ ಬೇಕಾದಲ್ಲಿ ತಾನು ಆಯ್ಕೆಗೆ ಲಭ್ಯವಿರುವುದಾಗಿ ವಾರ್ನರ್​ ಹೇಳಿದ್ದರು. ಇದೇ ವಿಚಾರವಾಗಿ ಮಾತನಾಡಿದ ಆಯ್ಕೆ ಸಮಿತಿಯ ಮುಖ್ಯಸ್ಥ ಜಾರ್ಜ್​ ಬೈಲಿ, “ಡೇವಿಡ್ ವಾರ್ನರ್ ಬಯಸಿದರೂ, ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಅವರು ಎಲ್ಲಾ ಮೂರು ಸ್ವರೂಪಗಳಿಂದಲೂ ನಿವೃತ್ತರಾಗಿದ್ದಾರೆ. ಅವರ ಕೊಡುಗೆಯನ್ನು ನಾವು ಶ್ಲಾಘಿಸಲೇಬೇಕು. ಚಾಂಪಿಯನ್ಸ್ ಟ್ರೋಫಿಗೆ ಅವರನ್ನು ಆಯ್ಕೆ ಮಾಡುವ ಯಾವುದೇ ಯೋಜನೆಯಿಲ್ಲ” ಎಂದು ಹೇಳಿದ್ದಾರೆ. ಬೈಲಿಯ ಈ ಹೇಳಿಕೆ ನೋಡುವಾಗ ವಾರ್ನರ್​ಗೆ ಚಾಂಪಿಯನ್ಸ್​ ಟ್ರೋಫಿ ಆಡುವ ಅವಕಾಶ ಸಿಗುವುದು ಕಷ್ಟ ಎನ್ನುವುದು ಸ್ಪಷ್ಟವಾಗಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8ರ ಹಂತದಲ್ಲಿ ಆಸ್ಟ್ರೇಲಿಯಾ ಸೋತು ಹೊರಬಿದ್ದ ತಕ್ಷಣ ವಾರ್ನರ್​ ಅವರು ತಮ್ಮ 15 ವರ್ಷಗಳ ಕ್ರಿಕೆಟ್​ ವೃತ್ತಿ ಜೀವನಕ್ಕೆ ತೆರೆ ಎಳೆದಿದ್ದರು.  110 ಟಿ20 ಪಂದ್ಯಗಳನ್ನು ಆಡಿರುವ ವಾರ್ನರ್‌ 3,277 ರನ್‌ ಗಳಿಸಿದ್ದಾರೆ. ಈ ವರ್ಷದ ಜನವರಿಯಲ್ಲಿ ಟೆಸ್ಟ್‌ ಹಾಗೂ ಏಕದಿನ ಕ್ರಿಕೆಟ್‌ಗೂ ವಾರ್ನರ್‌ ವಿದಾಯ ಹೇಳಿದ್ದರು.

ಇದನ್ನೂ ಓದಿ Champions Trophy 2025: ಚಾಂಪಿಯನ್ಸ್‌ ಟ್ರೋಫಿಯಿಂದ ಭಾರತ ಹಿಂದೆ ಸರಿದರೆ ಯಾವ ತಂಡಕ್ಕೆ ಸಿಗಲಿದೆ ಅವಕಾಶ?

112 ಟೆಸ್ಟ್‌ಗಳಿಂದ ಅವರು 2011 ಮತ್ತು 2024 ರ ನಡುವೆ 26 ಶತಕಗಳು ಮತ್ತು 37 ಅರ್ಧಶತಕಗಳೊಂದಿಗೆ 44.59 ಸರಾಸರಿಯಲ್ಲಿ 8,786 ರನ್ ಗಳಿಸಿದ್ದಾರೆ. 161 ಏಕದಿನ ಪಂದ್ಯಗಳಿಂದ 45.30 ಸರಾಸರಿಯಲ್ಲಿ 22 ಶತಕ ಮತ್ತು 33 ಅರ್ಧ ಶತಕಗಳ ಸಹಾಯದಿಂದ 6,932 ರನ್ ಗಳಿಸಿದ್ದಾರೆ. 37 ವರ್ಷದ ಡೇವಿಡ್​ ವಾರ್ನರ್​, 2009ರಲ್ಲಿ ಮೆಲ್ಬೋರ್ನ್​ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು.

ರಿಕಿ ಪಾಂಟಿಂಗ್, ಆ್ಯಡಂ ಗಿಲ್ ಕ್ರಿಸ್ಟ್​, ಶೇನ್​ ವಾರ್ನ್​ ಅವರಂತಹ ದಿಗ್ಗಜ ಆಟಗಾರರೊಂದಿಗೆ ಆಡಿದ ಅನುಭವವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನನ್ನ ಕ್ರಿಕೆಟ್​ ವೃತ್ತಿಜೀವನದಲ್ಲಿ ಸಾಧಿಸುವುದು ಇನ್ನೂ ಯಾವುದೂ ಉಳಿದಿಲ್ಲ. ಮೂರು ಮಾದರಿಯ (ಏಕದಿನ, ಟೆಸ್ಟ್ ಮತ್ತು ಟಿ20) ವಿಶ್ವಕಪ್​ ತಂಡದ ಸದಸ್ಯ ಎನ್ನುವುದು ನಿಜಕ್ಕೂ ಹೆಮ್ಮೆಯ ಸಂಗತಿ. ನನ್ನ ಕ್ರಿಕೆಟ್​ ಜರ್ನಿಯಲ್ಲಿ ಸಹಕರಿಸಿದ ಎಲ್ಲ ಸಿಬ್ಬಂದಿ, ಸಹ ಆಟಗಾರರಿಗೆ ನಾನು ಚಿರಋಣಿ ಎಂದು ವಾರ್ನರ್​ ಹೇಳಿ ತಮ್ಮ ನಿವೃತ್ತಿ ಪ್ರಕಟಿಸಿದ್ದರು.

Continue Reading

ಕ್ರೀಡೆ

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Karnataka Assembly: ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದರು. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಕೇಳಿದ್ದರು.

VISTARANEWS.COM


on

Karnataka Assembly
Koo

ಬೆಂಗಳೂರು: ಟಿ20 ವಿಶ್ವಕಪ್‌ ವಿಜೇತ ಭಾರತ ತಂಡದ ಕೋಚ್‌, ಕನ್ನಡಿಗ ರಾಹುಲ್‌ ದ್ರಾವಿಡ್‌(Rahul Dravid) ಅವರಿಗೆ ಅಭಿನಂದಿಸುವ ನಿರ್ಣಯವನ್ನು ವಿಧಾನಸಭೆ ತೆಗೆದುಕೊಳ್ಳಬೇಕೆಂದು ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್(S. Suresh Kumar) ಆಗ್ರಹಿಸಿದ್ದಾರೆ. ಇದಕ್ಕೆ ಸ್ಪೀಕರ್‌ ಯು.ಟಿ. ಖಾದರ್‌(U. T. Khader) ಸಹಮತ ವ್ಯಕ್ತಪಡಿಸಿ ಈ ನಿರ್ಣಯವನ್ನು ಅಂಗೀಕರಿಸಿದ್ದಾರೆ.

ಭಾರತ ತಂಡ 17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್​ ಗೆಲ್ಲುವಂತಾಗಲು ಕೋಚ್​ ರಾಹುಲ್‌ ದ್ರಾವಿಡ್‌ ಅವರ ತರಬೇತಿ ಹಾಗೂ ಮಾರ್ಗದರ್ಶನವೂ ಮಹತ್ವದ ಪಾತ್ರ ವಹಿಸಿದೆ. ಹೀಗಾಗಿ ಈ ಸದನ ಒಕ್ಕೊರಲಿನಿಂದ ಅವರನ್ನು ಅಭಿನಂದಿಸುವ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸುರೇಶ್‌ ಕುಮಾರ್‌ ಹೇಳಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಸ್ಪೀಕರ್‌ ಯು.ಟಿ. ಖಾದರ್‌, “ಈ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ದ್ರಾವಿಡ್‌ ಅವರನ್ನು ಅಭಿನಂದಿಸುವ ನಿರ್ಣಯವನ್ನು ತಕ್ಷಣ ಮಂಡಿಸುವುದಕ್ಕೆ ಸೂಚನೆ ನೀಡಲಾಗುವುದು’ ಎಂದರು.

ಕಳೆದ ವಾರ ಬೆಂಗಳೂರಿನ(Bengaluru) ಕ್ರಿಕೆಟ್​ ಅಕಾಡೆಮಿಯ ವಿದ್ಯಾರ್ಥಿಗಳು ಗಾರ್ಡ್‌ ಆಫ್‌ ಹಾನರ್‌ (ಗೌರವ ವಂದನೆ) ಮೂಲಕ(guard of honour) ದ್ರಾವಿಡ್​ಗೆ ಅಭಿನಂದಿಸಿದ್ದರು.

ರಾಹುಲ್​ ದ್ರಾವಿಡ್​ ಅವರು ಎನ್​ಸಿಎ ಕ್ರಿಕೆಟ್​ ಅಕಾಡೆಮಿಗೆ(cricket academy in Bengaluru) ಆಗಮಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಇಲ್ಲಿ ಕ್ರಿಕೆಟ್​ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳು ಬ್ಯಾಟ್​ ಎತ್ತಿ ಗಾರ್ಡ್‌ ಆಫ್‌ ಹಾನರ್‌ ಮೂಲಕ ಗೌರವ ಸಲ್ಲಿಸಿದರು. ದ್ರಾವಿಡ್​ ಕೂಡ ಸಂತಸದಿಂದಲೇ ಎಲ್ಲರ ಕೈ ಕುಲುಕಿ ಧನ್ಯವಾದ ತಿಳಿಸಿದ್ದರು.

ದ್ರಾವಿಡ್​ಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗವಾಸ್ಕರ್


ಪ್ರಧಾನ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದರು. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಕೇಳಿದ್ದರು.

ಇದನ್ನೂ ಓದಿ Rahul Dravid : ತಮಗೆ ನೀಡಿದ 2.5 ಕೋಟಿ ರೂಪಾಯಿ ನಿರಾಕರಿಸಿ ಸಮಾನತೆ ತತ್ವ ಸಾರಿದ ರಾಹುಲ್ ದ್ರಾವಿಡ್​

ದ್ರಾವಿಡ್​ ಆಟಗಾರರಾಗಿ ಮತ್ತು ತಂಡದ ನಾಯಕರಾಗಿ ವಿದೇಶಗಳಲ್ಲಿ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. ವೆಸ್ಟ್ ಇಂಡೀಸ್​ನಲ್ಲಿ ಗೆಲ್ಲುವುದು ಅಸಾಧ್ಯ ಎಂಬ ಕಾಲದಲ್ಲಿ ಅವರು ಭಾರತಕ್ಕೆ ಸರಣಿ ಗೆಲುವನ್ನು ತಂದಿದ್ದಾರೆ. ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿಗಳನ್ನು ಗೆದ್ದಿರುವ ಕೇವಲ ಮೂರು ಭಾರತೀಯ ನಾಯಕರ ಪೈಕಿ ಅವರು ಕೂಡ ಒಬ್ಬರಾಗಿದ್ದಾರೆ. ಈ ಹಿಂದೆ, ಅವರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಅತ್ಯುತ್ತಮ ಕ್ರಿಕೆಟ್ ಪ್ರತಿಭೆಗಳನ್ನು ಹೊರತಂದಿದ್ದಾರೆ. ಬಳಿಕ ಭಾರತೀಯ ಹಿರಿಯರ ಕ್ರಿಕೆಟ್ ತಂಡದ ಕೋಚ್ ಆಗಿ ಉತ್ತಮ ನಿರ್ವಹಣೆ ನೀಡಿದ್ದಾರೆ ಎಂದು ಗವಾಸ್ಕರ್​ ಬರೆದುಕೊಂಡಿದ್ದಾರೆ.

1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಆದರೆ ವಿಶ್ವಕಪ್ ಎನ್ನುವುದು ಅವರಿಗೆ ಕನಸಾಗಿತ್ತು. ಈ ಕೊರಗು ಕೂಡ ಅವರಲ್ಲಿತ್ತು. ನಾಯಕನಾಗಿ, ಆಟಗಾರನಾಗಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ.

2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ವಿಶ್ವಕಪ್​ ಕಪ್​ ಗೆದ್ದು ಸಂಭ್ರಮಿಸಿ ತಮ್ಮ ಎಲ್ಲ ಹಿಂದಿನ ನೋವನ್ನು ಮರೆತಿದ್ದಾರೆ. ಸದ್ಯ ಕೋಚ್​ ಹುದ್ದೆಯಿಂದ ಕೆಳಗಿಳಿದಿರುವ ದ್ರಾವಿಡ್​ ತಮ್ಮ ಇಬ್ಬರು ಮಕ್ಕಳ ಕ್ರಿಕೆಟ್​ ಭವಿಷ್ಯ ರೂಪಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಿಕೊಳ್ಳಬಹುದು.

Continue Reading

ಕ್ರೀಡೆ

Hardik Pandya: ರೋಡ್​ ಶೋದಲ್ಲಿ ಚಕ್ ದೇ! ಇಂಡಿಯಾ ಹಾಡಿದ ಹಾರ್ದಿಕ್​ ಪಾಂಡ್ಯ; ವಿಡಿಯೊ ವೈರಲ್​

Hardik Pandya: ಹಾರ್ದಿಕ್​ ಅವರು ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಮತ್ತು ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಭಾರತ ತಂಡ ವಿಶ್ವಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.  ಒಟ್ಟು 144 ರನ್​ ಮತ್ತು 11 ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು.

VISTARANEWS.COM


on

Hardik Pandya
Koo

ಅಹಮದಾಬಾದ್​: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡದ ಭಾಗವಾಗಿದ್ದ, ಉಪನಾಯಕ ಹಾರ್ದಿಕ್​ ಪಾಂಡ್ಯಗೆ(Hardik Pandya) ಅವರ ತವರಾದ ವಡೋದರದಲ್ಲಿ(Vadodara) ಭರ್ಜರಿಯಾಗಿ ರೋಡ್​ ಶೋ ಮೂಲಕ ಅಭಿನಂದಿಸಲಾಯಿತು. ಕಿಕ್ಕಿರಿದು ಸೇರಿದ ಅಭಿಮಾನಿಗಳ ಮುಂದೆ ಪಾಂಡ್ಯ ಚಕ್ ದೇ! ಇಂಡಿಯಾ(Chak De India) ಹಾಡನ್ನು(Hardik Pandya singing) ಜೋರಾಗಿ ಹಾಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ವಿಶ್ವಕಪ್​ ಮುಗಿದು ಭಾರತಕ್ಕೆ ಬಂದಿದ್ದ ಹಾರ್ದಿಕ್​ ಪಾಂಡ್ಯ ಮುಂಬೈಯಲ್ಲಿ ಕೆಲ ದಿನಗಳ ಕಾಲ ನೆಲೆಸಿದ್ದರು. ಇದೀಗ ತವರಾದ ವಡೋದರಕ್ಕೆ ಬಂದಿದ್ದಾರೆ. ಇಲ್ಲಿ ತವರಿನ ಅಭಿಮಾನಿಗಳು ಅವರಿಗೆ ಭರ್ಜರಿ ಅಭಿನಂದನಾ ಕಾರ್ಯಕ್ರಮ ನಡೆಸಿದ್ದಾರೆ. ತೆರೆದ ವಾಹನದಲ್ಲಿ ರೋಡ್​ ಶೋ ಮಾಡಿ ಪಾಂಡ್ಯಗೆ ಸ್ವಾಗತ ಕೋರಲಾಯಿತು. ಬಹು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಹಾರ್ದಿಕ್​ ಸಹೋದರ ಕೃಣಾಲ್​ ಪಾಂಡ್ಯ ಕೂಡ ರೋಡ್​ ಶೋದಲ್ಲಿ ಭಾಗಿಯಾಗಿದ್ದರು.

ಹಾರ್ದಿಕ್​ ಅವರು ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಮತ್ತು ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಭಾರತ ತಂಡ ವಿಶ್ವಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಒಟ್ಟು 144 ರನ್​ ಮತ್ತು 11 ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಅದರಲ್ಲೂ ಫೈನಲ್​ನಲ್ಲಿ ಸೋಲಿನ ಭೀತಿಯಲ್ಲಿದ್ದ ಭಾರತಕ್ಕೆ ಅಪಾಯಕಾರಿ ಕ್ಲಾಸೆನ್​ ಮತ್ತು ಮಿಲ್ಲರ್​ ವಿಕೆಟ್​ ಭೇಟೆಯಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ Hardik Pandya : ಪತ್ನಿ ಜತೆ ವಿಚ್ಛೇದನ ಸುದ್ದಿ ನಡುವೆ ರಷ್ಯನ್ ಮಾಡೆಲ್​ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ; ಯಾರವರು?

ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಲಿದ್ದಾರೆ, ಜತೆಗೆ ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನತಾಶಾಗೆ ವರ್ಗಾಯಿಸಬೇಕಿದೆ ಎನ್ನಲಾಗಿತ್ತು. ಈ ಎಲ್ಲ ಮಾತುಗಳ ಮಧ್ಯೆಯೂ ಪಾಂಡ್ಯ ದೇಶದ ಕರ್ತವ್ಯಕ್ಕೆ ಹಾಜರಾಗಿ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ಕೆಲ ದಿನಗಳ ಹಿಂದೆ ನತಾಶಾ ಸ್ಟಾನ್‌ಕೋವಿಕ್‌(Nataša Stanković)ಗೆ ಪಾಂಡ್ಯ ವಿಚ್ಛೇದನ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಹಾರ್ದಿಕ್​ ಪಾಂಡ್ಯ ಅವರು ಸುಂದರ ಹುಡುಗಿಯ ಜತೆಗಿರುವ ಫೋಟೊ ಮತ್ತು ವಿಡಿಯೊ ವೈರಲ್​ ಆಗಿತ್ತು.

ಹಾರ್ದಿಕ್​ ಪಾಂಡ್ಯ ಜತೆ ಕಾಣಿಸಿಕೊಂಡಿದ್ದ ಈ ಹುಡುಗಿಯ ಹೆಸರು ಪ್ರಾಚಿ ಸೋಲಂಕಿ(Prachi Solanki). ಈಕೆ ಪ್ರಸಿದ್ಧ ಮೇಕಪ್ ಆರ್ಟಿಸ್ಟ್​, ಹಾಗೂ ಸೋಷಿಯಲ್ ಮೀಡಿಯಾ ಇನ್ಫುಲೆನ್ಸರ್ ಆಗಿದ್ದಾಳೆ. ಹಾರ್ದಿಕ್​ ಜತೆಗಿರುವ ಹಲವು ಸುಂದರ ಕ್ಷಣದ ಫೋಟೊ ಮತ್ತು ವಿಡಿಯೊವನ್ನು ತನ್ನ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಸೋಲಂಕಿ, ವಿಶ್ವಕಪ್​ ಹೀರೋ ಅವರನ್ನು ಭೇಟಿ ಮಾಡಿದೆ ಎಂದು ಬರೆದುಕೊಂಡು ಲವ್​ ಎಮೊಜಿಯನ್ನು ಹಾಕಿದ್ದಾರೆ. ವಿಡಿಯೊದಲ್ಲಿ ಪಾಂಡ್ಯ ಜತೆ ಸೋಲಂಕಿ ಅತ್ಯಂತ ಆತ್ಮೀಯವಾಗಿ ಕಂಡುಬಂದಿದ್ದಳು.

ಸೋಲಂಕಿ ಅವರು ಹಾರ್ದಿಕ್​ ಮನೆಗೆ ಬಂದು ಭೇಟಿಯಾಗಿರುವುದು ನೆಟ್ಟಿಗರಿಗೆ ಹಲವು ಅನುಮಾನ ಮೂಡುವಂತೆ ಮಾಡಿದೆ. ಪಾಂಡ್ಯ ಕುಟುಂಬದ ಸದ್ಯರೊಂದಿಗೂ ಸೋಲಂಕಿ ಆತ್ಮೀಯವಾಗಿರುವ ಫೋಟೊವನ್ನು ಕೂಡ ಹಂಚಿಕೊಂಡಿದ್ದಾರೆ. ಸದ್ಯಕ್ಕೆ ಇದೊಂದು ಆತ್ಮೀಯ ಭೇಟಿಯಂತೆ ತೋರುತ್ತಿದ್ದರೂ ಕೂಡ ನೆಟ್ಟಿಗರು ಮಾತ್ರ ಶೀಘ್ರದಲ್ಲೇ ಪಾಂಡ್ಯ ಸೋಲಂಕಿಯನ್ನು ವಿವಾಹವಾಗಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸಲು ಆರಂಭಿಸಿದ್ದಾರೆ.

Continue Reading
Advertisement
actor darshan samata husband
ಪ್ರಮುಖ ಸುದ್ದಿ2 mins ago

Actor Darshan: ರೇಣುಕಾ ಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಆಪ್ತೆಯ ಪತಿ!

Karnataka Rain
ಮಳೆ15 mins ago

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ; ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

Rishabh Pant
ಕ್ರೀಡೆ25 mins ago

Rishabh Pant: ಡೆಲ್ಲಿ ತೊರೆದು ಮುಂದಿನ ಐಪಿಎಲ್​ನಲ್ಲಿ ಈ ಫ್ರಾಂಚೈಸಿ ಪರ ಆಡಲಿದ್ದಾರೆ ರಿಷಭ್​ ಪಂತ್​

Job Alert
ಉದ್ಯೋಗ35 mins ago

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Viral Video
Latest50 mins ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ58 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ1 hour ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ1 hour ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್1 hour ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ2 hours ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌