virat-kohli-scores-ton-after-four-years IPL 2023 : ನಾಲ್ಕು ವರ್ಷಗಳ ಬಳಿಕ ಶತಕ ಬಾರಿಸಿದ ವಿರಾಟ್​ ಕೊಹ್ಲಿ - Vistara News

ಕ್ರಿಕೆಟ್

IPL 2023 : ನಾಲ್ಕು ವರ್ಷಗಳ ಬಳಿಕ ಶತಕ ಬಾರಿಸಿದ ವಿರಾಟ್​ ಕೊಹ್ಲಿ

2019ರಲ್ಲಿ ವಿರಾಟ್​ ಕೊಹ್ಲಿ ಕೊನೇ ಬಾರಿ ಕೆಕೆಆರ್​ ವಿರುದ್ಧ ಶತಕ ಬಾರಿಸಿದ್ದರು. ಆ ಬಳಿಕ ಮೂರು ವರ್ಷ ಬ್ಯಾಟಿಂಗ್ ವೈಫಲ್ಯ ಕಂಡಿದ್ದರು.

VISTARANEWS.COM


on

Virat kohli IPL century
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​: ಆರ್​ಸಿಬಿ ತಂಡದ ಮಾಜಿ ನಾಯಕ ಹಾಗೂ ಸ್ಟಾರ್ ಆಟಗಾರ ವಿರಾಟ್​ ಕೊಹ್ಲಿ ಮತ್ತೆ ಬ್ಯಾಟಿಂಗ್​ನಲ್ಲಿ ತಮ್ಮ ಅಬ್ಬರ ಪ್ರದರ್ಶಿಸಿದ್ದಾರೆ. ಸನ್​ ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 63 ಎಸೆತಗಳಲ್ಲಿ 100 ರನ್​ ಬಾರಿಸಿದ ಅವರು ಐಪಿಎಲ್​ ಇತಿಹಾಸದಲ್ಲಿ ತಮ್ಮ ಆರನೇ ಶತಕ ಬಾರಿಸಿದ್ದಾರೆ. ಈ ಮೂಲಕ ಅವರು ವಿಶ್ವದ ಶ್ರೀಮಂತ ಕ್ರಿಕೆಟ್​ ಲೀಗ್​ನಲ್ಲಿ ಗರಿಷ್ಠ ಶತಕಗಳನ್ನು ಬಾರಿಸಿದ ಆಟಗಾರ ಎಂಬ ಕ್ರಿಸ್​ ಗೇಲ್​ ದಾಖಲೆಯನ್ನು ಸರಿಗಟ್ಟಿದ್ದಾರೆ. ವಿಂಡೀಸ್​ ದೈತ್ಯ ಆರು ಶತಕಗಳನ್ನು ಬಾರಿಸಿದ್ದರು. ಆರ್​ಆರ್​ ತಂಡ ಜೋಸ್ ಬಟ್ಲರ್​ ಐದು ಶತಕಗಳನ್ನು ಬಾರಿಸಿ ಎರಡನೇ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಕಳೆದ ಮೂರು ವರ್ಷಗಳಿಂದ ಬ್ಯಾಟಿಂಗ್​ನಲ್ಲಿ ಸೊರಗಿದ್ದ ವಿರಾಟ್​ ಕೊಹ್ಲಿ ಹಾಲಿ ಆವೃತ್ತಿಯಲ್ಲಿ ಭರಪೂರ ರನ್​ ಗಳಿಸಿದ್ದಾರೆ. ಎಲ್ಲದಕ್ಕಿಂತ ಮಿಗಿಲಾಗಿ ಇದು ನಾಲ್ಕು ವರ್ಷಗಳ ಬಳಿಕ ಬಾರಿಸಿದ ಐಪಿಎಲ್ ಶತಕವಾಗಿದೆ.

2019ನೇ ಅವೃತ್ತಿಯಲ್ಲಿ ವಿರಾಟ್​ ಕೊಹ್ಲಿ ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ವಿರುದ್ಧ ಶತಕ ಬಾರಿಸಿದ್ದರು. ಆ ಬಳಿಕದ ಮೂರು ಆವೃತ್ತಿಯಲ್ಲಿ ಅವರ ಬ್ಯಾಟಿಂಗ್ ವೈಖರಿ ಕಳೆಗುಂದಿತ್ತು. ಇದೀಗ ಎಸ್ಆರ್​ಎಚ್​ ವಿರುದ್ಧ ಮತ್ತೆ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದಾರೆ.

ಹಾಲಿ ಆವೃತ್ತಿಯಲ್ಲಿ ವಿರಾಟ್​ ಕೊಹ್ಲಿ ಆರು ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಒಟ್ಟಾರೆ ಆಡಿರುವ 13 ಪಂದ್ಯಗಳಲ್ಲಿ 538 ರನ್​ ಬಾರಿಸಿದ್ದು ಆರೆಂಜ್ ಕ್ಯಾಪ್​ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇಷ್ಟೊಂದು ಇನಿಂಗ್ಸ್​ಗಳಲ್ಲಿ 52 ಫೊರ್​ ಹಾಗೂ 15 ಸಿಕ್ಸರ್​ಗಳನ್ನು ಬಾರಿಸಿದ್ದಾರೆ.

ಪಂದ್ಯದಲ್ಲಿ ಏನಾಯಿತು?

ಹೈದರಾಬಾದ್​: ವಿರಾಟ್​ ಕೊಹ್ಲಿಯ ಐಪಿಎಲ್ ಇತಿಹಾಸದ ಆರನೇ ಶತಕ (100 ರನ್​, 63 ಎಸೆತ, 12 ಫೋರ್​, 4 ಸಿಕ್ಸರ್​) ಹಾಗೂ ನಾಯಕ ಫಾಫ್​ ಡು ಪ್ಲೆಸಿಸ್​ (71 ರನ್​, 47 ರನ್​, 2 ಸಿಕ್ಸರ್​) ನೆರವು ಪಡೆದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಐಪಿಎಲ್​ 16ನೇ ಆವೃತ್ತಿಯ 65ನೇ ಪಂದ್ಯದಲ್ಲಿ ಸನ್​ ರೈಸರ್ಸ್​ ಹೈದರಾಬಾದ್ ತಂಡದ ವಿರುದ್ಧ… ವಿಕೆಟ್​ಗಳ ನಿರಾಯಾಸ ಗೆಲುವು ಪಡೆಯಿತು. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ ಹಾದಿಯಲ್ಲಿ ಇನ್ನಷ್ಟು ಪ್ರಗತಿ ಸಾಧಿಸಿತು. ಅತ್ತ ಎಸ್​ಆರ್​ಎಚ್​ ತಂಡ ಹ್ಯಾಟ್ರಿಕ್​ ಸೋಲಿಗೆ ಒಳಗಾಯಿತು.

ಇಲ್ಲಿನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆಯೋಜನೆಗೊಂಡಿರುವ ಪಂದ್ಯದಲ್ಲಿ ಟಾಸ್​ ಗೆದ್ದ ಆರ್​ಸಿಬಿ ನಾಯಕ ಫಾಪ್​ ಡು ಪ್ಲೆಸಿಸ್​ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟ್​ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ ನಷ್ಟ ಮಾಡಿಕೊಂಡು 186 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆರ್​ಸಿಬಿ ಇನ್ನೂ ನಾಲ್ಕು ಎಸೆತಗಳು ಬಾಕಿ ಇರುವಂತೆಯೇ ಕೇವಲ 2 ವಿಕೆಟ್​ ನಷ್ಟ ಮಾಡಿಕೊಂಡು 187 ರನ್​ ಬಾರಿಸಿ ವಿಜಯೋತ್ಸವ ಆಚರಿಸಿತು. ಈ ಸೋಲಿನೊಂದಿಗೆ ಎಸ್​ಆರ್​ಎಚ್​ ತಂಡದ ವಿಕೆಟ್​ಕೀಪರ್​ ಬ್ಯಾಟರ್​ ಹೆನ್ರಿಚ್ ಕ್ಲಾಸೆನ್​ (104 ರನ್​, 51 ಎಸೆತ, 6 ಸಿಕ್ಸರ್​, 8 ಫೋರ್​) ಬಾರಿಸಿದ ವಿಸ್ಫೋಟಕ ಶತಕ ವ್ಯರ್ಥವಾಯಿತು.

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಆರ್​ಸಿಬಿ ಅತ್ಯಂತ ನಿರಾಳವಾಗಿ ಆಡಿತು. ಆರಂಭಿಕರಾದ ಫಾಫ್​ ಡು ಪ್ಲೆಸಿಸ್​ ಹಾಗೂ ವಿರಾಟ್​ ಕೊಹ್ಲಿ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ನಿರಂತರವಾಗಿ ರನ್​ ಬಾರಿಸಿಕೊಂಡು ಬಂದರು. 25 ಎಸೆತಗಳಲ್ಲಿ 50 ರನ್ ಕಲೆ ಹಾಕಿದ ಈ ಇಬ್ಬರು ಆಟಗಾರರು. 68 ಎಸೆತಗಳಲ್ಲಿ 100ಗ ಗಡಿ ತಲುಪಿಸಿದರು. ಅದಕ್ಕಿಂತ ಮೊದಲು ಫಾಫ್​ ಡು ಪ್ಲೆಸಿಸ್ 34 ಎಸೆತಗಳಲ್ಲಿ ತಮ್ಮ ಹಾಳಿ ಆವೃತ್ತಿಯಲ್ಲಿ ಎಂಟನೇ ಅರ್ಧ ಶತಕ ಬಾರಿಸಿದರು. ಸ್ವಲ್ಪ ಹೊತ್ತಿನಲ್ಲೇ ವಿರಾಟ್​ ಕೊಹ್ಲಿ 35 ಎಸೆತಗಳಲ್ಲಿ ಹಾಲಿ ಆವೃತ್ತಿಯ ಏಳನೇ ಅರ್ಧ ಶತಕ ಬಾರಿಸಿದರು. ಆದರೆ, ಅವರು ಅದನ್ನು ಶತಕವಾಗಿ ಪರಿವರ್ತಿಸಿದರು.

ಇದನ್ನೂ ಓದಿ :

ಅರ್ಧ ಶತಕದ ಬಳಿಕ ಏಕಾಏಕಿ ಗಳಿಕೆಗೆ ವೇಗ ಕೊಟ್ಟ ವಿರಾಟ್​ ಕೊಹ್ಲಿ 62 ಎಸೆತದಲ್ಲಿ 100 ರನ್​ ಬಾರಿಸಿದರು. ಈ ಜೋಡಿ 91 ಎಸೆತಕ್ಕೆ 150 ರನ್​ ಬಾರಿಸಿದರು. ಆದರೆ, ಭುವೇಶ್ವರ್​ ಕುಮಾರ್ ಎಸೆತ ಬೌನ್ಸರ್​ಗೆ ಸಿಕ್ಸರ್​ ಬಾರಿಸಲು ಮುಂದಾದ ವಿರಾಟ್​ ಕೊಹ್ಲಿ ಕ್ಯಅಚ್​ ನೀಡಿ ಔಟಾದರು. ತಂಡದ ಮೊತ್ತ 177 ಆಗುಷ್ಟರಲ್ಲಿ ಫಾಫ್​ ಡು ಪ್ಲೆಸಿಸ್ ಔಟಾದರು. ಗ್ಲೆನ್​ಮ್ಯಾಕ್ಸ್​ವೆಲ್ 5 ರನ್​ ಹಾಗೂ ಮೈಕೆಲ್​ ಬ್ರಾಸ್​ವೆಲ್ ಗೆಲುವಿನ ಗುರಿ ಮುಟ್ಟಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

BAN vs NEP: ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು.

VISTARANEWS.COM


on

BAN vs NEP
Koo

ಕಿಂಗ್‌ಸ್ಟನ್‌: ತಂಜಿಮ್ ಹಸನ್ ಸಾಕಿಬ್(7ಕ್ಕೆ 4) ಅವರ ಘಾತಕ ಬೌಲಿಂಗ್​ ದಾಳಿಯ ನೆರವಿನಿಂದಾಗಿ ಸೂಪರ್​-8 ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಬಾಂಗ್ಲಾದೇಶ(BAN vs NEP) ಮೇಲುಗೈ ಸಾಧಿಸಿದೆ. ನೇಪಾಳ ವಿರುದ್ಧ 21 ರನ್​ ಅಂತರದಿಂದ ಗೆದ್ದು ಸೂಪರ್​-8ಗೆ ಪ್ರವೇಶ ಪಡೆದಿದೆ. ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ ತಂಡದ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಬಾಂಗ್ಲಾ ಗೆಲುವಿನಿಂದ ನೆದರ್ಲೆಂಡ್ಸ್​ ತಂಡ ಟೂರ್ನಿಯಿಂದ ಹೊರಬಿದ್ದಿತು.

ಇಲ್ಲಿನ ಸೇಂಟ್ ವಿನ್ಸೆಂಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ 19.3 ಓವರ್​ಗಳಲ್ಲಿ ಕೇವಲ 106 ರನ್​ಗೆ ಕುಸಿತ ಕಂಡಿತು. ಈ ಮೊತ್ತವನ್ನು ನೋಡುವಾಗ ಬಾಂಗ್ಲಾ ಸೋಲು ಕಾಣಬಹುದೆಂದು ಊಹಿಸಲಾಯಿತು. ಆದರೆ, ಬಾಂಗ್ಲಾ ಬೌಲರ್​ಗಳು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ನಡೆಸಿ ನೇಪಾಳವನ್ನು 85 ರನ್​ಗೆ ಕಟ್ಟಿಹಾಕಿ ಅಮೋಘ ಗೆಲುವು ಸಾಧಿಸಿದರು.

ಬಾಂಗ್ಲಾದೇಶ ಈ ಪಂದ್ಯದಲ್ಲಿ ಸೋಲು ಕಾಣುತ್ತಿದ್ದರೆ, ನೆದರ್ಲೆಂಡ್ಸ್​ ತಂಡಕ್ಕೂ ಸೂಪರ್​-8 ಹಂತಕ್ಕೇರುವ ಅವಕಾಶವಿತ್ತು. ಆದರೆ ಬಾಂಗ್ಲಾ ಗೆಲುವಿನಿಂದ ನೆದರ್ಲೆಂಡ್ಸ್​ ತಂಡ ಹೊರಬಿದ್ದಿತು. ನೆದರ್ಲೆಂಡ್ಸ್​ ತಂಡ ಲಂಕಾ ವಿರುದ್ಧ 83 ರನ್​ ಅಂತರದ ಸೋಲು ಕಂಡಿತು. ಈ ಪಂದ್ಯ ಗೆದ್ದಿದ್ದರೂ ಕೂಡ ನೆದರ್ಲೆಂಡ್ಸ್​ಗೆ ಯಾವುದೇ ಲಾಭವಾಗುತ್ತಿರಲಿಲ್ಲ.

ಸಣ್ಣ ಮೊತ್ತವನ್ನು ಚೇಸಿಂಗ್​ ನಡೆಸಿದ ನೇಪಾಳ ಆರಂಭಿಕ ಆಘಾತ ಎದುರಿಸಿದರೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಕುಶಾಲ್ ಮಲ್ಲ ಮತ್ತು ದೀಪೇಂದ್ರ ಸಿಂಗ್ ಐರಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದ ಕಾರಣ ತಂಡ ಚೇತರಿಕೆಯ ಹಾದಿಗೆ ಮರಳಿ ಗೆಲುವು ಕಾಣುವ ಸ್ಥಿತಿಯಲ್ಲಿತ್ತು. ಆದರೆ, ಮುಸ್ತಫಿಜುರ್​ ರೆಹಮಾನ್​ ಅವರು ಉಭತ ಆಟಗಾರರ ವಿಕೆಟ್​ ಬೇಟೆಯಾಡಿ ಬಾಂಗ್ಲಾಗೆ ಯಶಸ್ಸು ತಂದುಕೊಟ್ಟರು. ಕುಶಾಲ್ ಮಲ್ಲ 27 ರನ್​ ಬಾರಿಸಿದರೆ, ದೀಪೇಂದ್ರ ಸಿಂಗ್ 25 ರನ್​ ಗಳಿಸಿದರು. ಇವರಿಬ್ಬರ ವಿಕೆಟ್​ ಪತನಗೊಳ್ಳುತ್ತಿದ್ದಂತೆ ನೆಪಾಳ ಸೋಲು ಕೂಡ ಖಚಿತಗೊಂಡಿತು.

ಇದನ್ನೂ ಓದಿ T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್​ಗೆ 3 ವಿಕೆಟ್​ ಪಡೆದರು. ನಾಯಕ ಶಕೀಬ್​ 2 ವಿಕೆಟ್​ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್​ ಮೊದಲ ಎಸೆತದಲ್ಲೇ ವಿಕೆಟ್​ ಕಿತ್ತರೆ ಬ್ರೋಕನ್​ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆ ಮಾಡಲಿದ್ದಾರೆ.

ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾ ತಂಡ ಖಾತೆ ತೆರೆಯುವ ಮುನ್ನವೇ ವಿಕೆಟ್​ ಕಳೆದುಕೊಂಡಿತು. ಬಳಿಕ ಬಂದ ಆಟಗಾರರು ಕೂಡ ಸತತವಾಗಿ ವಿಕೆಟ್​ ಕಳೆದುಕೊಂಡು ಪೆವಿಲಿಯನ್​ ಪರೇಡ್​ ನಡೆಸಿದರು. ನಾಯಕ ಶಕೀಬ್​ ಅಲ್​ ಹಸನ್​ 17 ರನ್​ ಬಾರಿಸಿದ್ದೇ ತಂಡದ ಪರ ಆಟಗಾರನೊಬ್ಬ ಬಾರಿಸಿದ ಗರಿಷ್ಠ ಸ್ಕೋರ್​. ನೇಪಾಳ ಪರ ಸೋಂಪಾಲ್ ಕಾಮಿ(2), ಅತ್ಯಾಚಾರ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸಿ ಇದೀಗ ನಿರಪರಾಧಿ ಎನಿಸಿಕೊಂಡಿರುವ ಸಂದೀಪ್ ಲಮಿಚಾನೆ(2), ನಾಯಕ ರೋಹಿತ್ ಪೌಡೆಲ್(2) ಮತ್ತು ದೀಪೇಂದ್ರ ಸಿಂಗ್(2) ವಿಕೆಟ್​ ಕಿತ್ತರು.

Continue Reading

ಕ್ರೀಡೆ

Sachin Tendulkar: ವಿಶ್ವ ಅಪ್ಪಂದಿರ ದಿನದಂದು ವಿಶೇಷ ಫೋಟೊ ಹಂಚಿಕೊಂಡು ಭಾವುಕರಾದ ಸಚಿನ್​ ತೆಂಡೂಲ್ಕರ್​

Sachin Tendulkar: ಸಚಿನ್​ ಅವರು ‘ಸಚಿನ್​ ತೆಂಡೂಲ್ಕರ್ ಫೌಂಡೇಶನ್‌’ ಎನ್ನುವ ಹೆಸರಿನ ಪ್ರತಿಷ್ಠಾನದ ಮೂಲಕ ಬಡ ಮಕ್ಕಳಿಗೆ ಶಿಕ್ಷಣ, ಕ್ರಿಡೆ ಮತ್ತು ವೈದ್ಯಕೀಯ ನೆರವನ್ನು ನೀಡುತ್ತಿದ್ದಾರೆ. ಸಮಾಜಮುಖಿ ಕಾರ್ಯವನ್ನು ಮಾಡುವ ಮೂಲಕ ಅನೇಕ ಬಡ ಮಕ್ಕಳ ಕನಸನ್ನು ನನಸು ಮಾಡುವ ಕಾರ್ಯ ಮಾಡುತ್ತಿದ್ದಾರೆ.

VISTARANEWS.COM


on

Sachin Tendulkar
Koo

ಮುಂಬಯಿ: ಪ್ರತಿವರ್ಷ ಜೂನ್‌ ತಿಂಗಳ ಮೂರನೇ ಭಾನುವಾರ ವಿಶ್ವ ಅಪ್ಪಂದಿರ(Father’s Day) ದಿನ ಎಂದು ಆಚರಿಸಲಾಗುತ್ತದೆ. ಇಂದು ವಿಶ್ವಾದ್ಯಂತ ಅಪ್ಪಂದಿರ ದಿನಾಚರಣೆಯನ್ನು(Happy Father’s Day) ಆಚರಿಸಲಾಗುತ್ತಿದೆ. ಈ ದಿನ ತಂದೆಯ ತ್ಯಾಗ, ಕುಟುಂಬದ ಸುಖಕ್ಕಾಗಿ ಆತ ಪಡುವ ಕಷ್ಟ ಎಲ್ಲವನ್ನೂ ಸ್ಮರಿಸುತ್ತಾ ಆತನಿಗೆ ಅಭಿನಂದನೆ ಮತ್ತು ಗೌರವ ಸಲ್ಲಿಸಲಾಗುತ್ತದೆ. ಟೀಮ್​ ಇಂಡಿಯಾದ ಮಾಜಿ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್(Sachin Tendulkar)​ ಕೂಡ ಅಪ್ಪಂದಿರ ದಿನಾಚರಣೆಯನ್ನು ಆಚರಿಸಿದ್ದಾರೆ.

ಟ್ವಿಟರ್​ ಎಕ್ಸ್​ನಲ್ಲಿ ತಂದೆ ಮತ್ತಉ ತಾಯಿಯ ಜತೆಗಿನ ಸುಂದರ ಕ್ಷಣದ ಫೋಟೊವನ್ನು ಹಂಚಿಕೊಂಡಿರುವ ಸಚಿನ್​, ನನ್ನ ತಂದೆಯ ಪ್ರೀತಿಯ ನೆನಪಿಗಾಗಿ, ಅವರ ನಗು ಪ್ರತಿಯೊಂದು ಕೋಣೆಯನ್ನು ಬೆಳಗಿಸುತ್ತದೆ ಮತ್ತು ಅವರ ಪ್ರೀತಿಯು ಪ್ರತಿ ಕ್ಷಣವೂ ವಿಶೇಷವಾಗಿಸಿತ್ತು. ನಮ್ಮಿಂದ ದೂರ ಆಗಿದ್ದರೂ ಕೂಡ ಆ ಪ್ರೀತಿ ಮಾತ್ರ ಶಾಶ್ವತವಾಗಿದೆ. ತಂದೆಯ ದಿನದ ಶುಭಾಶಯಗಳು, ಬಾಬಾ! ಎಂದು ಬರೆದುಕೊಂಡಿದ್ದಾರೆ.

ಸಚಿನ್ ತನ್ನ ತಂದೆ ರಮೇಶ್ ತೆಂಡೂಲ್ಕರ್ ಅವರ ನೆನಪಿಗಾಗಿ ಪ್ರತಿ ವರ್ಷವೂ ಕೂಡ ತಂದೆಯ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಕ್ರಿಕೆಟ್​ಗೆ ನಿವೃತ್ತಿ ಹೇಳುವ ಸಂದರ್ಭದಲ್ಲಿಯೂ ಸಚಿನ್​ ಅವರು ತಮ್ಮ ತಂದೆಯೇ ನನ್ನ ರೋಲ್​ ಮಾಡೆಲ್​ ಎಂದಿದ್ದರು. ಅವರು ನೀಡಿದ ಬೆಂಬಲದಿಂದ ನಾನು ಕ್ರಿಕೆಟ್​ನಲ್ಲಿ ಈ ಎಲ್ಲ ಸಾಧನೆ ಮಾಡಿದೆ ಎಂದಿದ್ದರು.

ಇದನ್ನೂ ಓದಿ Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

ತಂದೆಯ ಸಾವಿನ ನೋವಿನ ಮಧ್ಯೆಯೂ ವಿಶ್ವಕಪ್​ ಆಡಿದ್ದ ಸಚಿನ್​


1999ರ ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿ ಆಡುತ್ತಿದ್ದ ವೇಳೆ ಸಚಿನ್​ ಅವರ ತಂದೆ ನಿಧನರಾಗಿದ್ದರು. ತಂದೆ ತೀರಿಕೊಂಡ ನೋವಿನ ಮಧ್ಯೆಯೂ ಮೂರು ದಿನಗಳ ನಂತರ ಸಚಿನ್ ಕೀನ್ಯಾ ವಿರುದ್ಧ 140 ರನ್ ಬಾರಿಸಿದ್ದರು. ​ಹಿಂದೊಮ್ಮೆ ಸಂದರ್ಶನವೊಂದರಲ್ಲಿ ಈ ಘಟನೆಯನ್ನು ನೆನೆದು ಸಚಿನ್​ ಭಾವುಕರಾಗಿದ್ದರು. ತಂದೆಯ ಹಠಾತ್ ಸಾವಿನಿಂದ ಸಚಿನ್ ವಿಶ್ವಕಪ್‌ನಿಂದ ಹಿಂದೆ ಸರಿಯಲಿದ್ದಾರೆ ಎಂಬ ಊಹಪೋಹಗಳು ಎದ್ದಿದ್ದವು. ಆದರೆ ವಿಶ್ವಕಪ್‌ನಲ್ಲಿ ಆಡುವುದನ್ನು ಮುಂದುವರೆಸಲು ತಾಯಿ ಒತ್ತಾಯಿಸಿದ ನಂತರ ಸಚಿನ್ ಮೈದಾನಕ್ಕೆ ಇಳಿದಿದ್ದರು.

ಸಚಿನ್​ ಅವರು ‘ಸಚಿನ್​ ತೆಂಡೂಲ್ಕರ್ ಫೌಂಡೇಶನ್‌’ ಎನ್ನುವ ಹೆಸರಿನ ಪ್ರತಿಷ್ಠಾನದ ಮೂಲಕ ಬಡ ಮಕ್ಕಳಿಗೆ ಶಿಕ್ಷಣ, ಕ್ರಿಡೆ ಮತ್ತು ವೈದ್ಯಕೀಯ ನೆರವನ್ನು ನೀಡುತ್ತಿದ್ದಾರೆ. ಸಮಾಜಮುಖಿ ಕಾರ್ಯವನ್ನು ಮಾಡುವ ಮೂಲಕ ಅನೇಕ ಬಡ ಮಕ್ಕಳ ಕನಸನ್ನು ನನಸು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಈ ಪ್ರತಿಷ್ಠಾನವು ಮಕ್ಕಳಿಗೆ ಸಮಾನ ಅವಕಾಶವನ್ನು ನೀಡಲು ಮತ್ತು ಉತ್ತಮ ಜಗತ್ತನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

24 ವರ್ಷಗಳ ಕ್ರಿಕೆಟ್‌ ಬಾಳ್ವೆಯಲ್ಲಿ ಸಚಿನ್​ 664 ಪಂದ್ಯ, 34,357 ರನ್‌, 201 ವಿಕೆಟ್‌, 100 ಅಂತಾರಾಷ್ಟ್ರೀಯ ಶತಕ, 164 ಅರ್ಧ ಶತಕ, ಲೆಕ್ಕವಿಲ್ಲದಷ್ಟು ದಾಖಲೆಗಳ ಸರದಾರ, ದೇಶದ ಶ್ರೇಷ್ಠ ಗೌರವ ಭಾರತ ರತ್ನ, ಪದ್ಮ ಪ್ರಶಸ್ತಿಗಳ ಒಡೆಯ, ರಾಜೀವ್‌ ಗಾಂಧಿ ಖೇಲ್‌ರತ್ನ ಪ್ರಶಸ್ತಿಗಳಿಂದೆಲ್ಲ ಪುರಸ್ಕೃತರಾಗಿರುವ ಸಚಿನ್‌ ಸಾಧನೆ ನಿಜಕ್ಕೂ ಒಂದು ಅದ್ಭುತವೇ ಸರಿ. ಕ್ರಿಕೆಟ್​ ಬಾಳ್ವೆಯ ಆರಂಭದಿಂದ ಹಿಡಿದು ಕಡೇಯ ದಿನದವರೆಗೂ ಯಾವುದೇ ವಿವಾದವಿಲ್ಲದೆ ಸವ್ಯಸಾಚಿಯಾಗಿದ್ದ ಸಚಿನ್​ ಎಲ್ಲ ಕ್ರಿಕೆಟ್​ ಆಟಗಾರರಿಗೂ ಸ್ಫೂರ್ತಿಯಾಗಿದ್ದಾರೆ.

Continue Reading

ಕ್ರೀಡೆ

Rishabh Pant: ಯೂಟ್ಯೂಬ್ ಸಿಲ್ವರ್ ಪ್ಲೇ ಬಟನ್ ಪಡೆದ ರಿಷಭ್​ ಪಂತ್​; ಗಳಿಕೆಯ ಹಣ ದಾನಕ್ಕೆ ಮೀಸಲು

Rishabh Pant: ಐಪಿಎಲ್​ ಸಂದರ್ಭದಲ್ಲಿ ಪಂತ್​ ಅವರು ಈ ಯುಟ್ಯೂಬ್(YouTube) ಚಾನೆಲ್​ ಅನ್ನು ಪ್ರಾರಂಭಿಸಿದ್ದರು. ಈ ವಿಚಾರವನ್ನು ಅವರು ವಿಡಿಯೊ ಮೂಲಕ ಟ್ವೀಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದರು. ಜತೆಗೆ ತಮ್ಮ ಈ ಚಾನೆಲ್​ಗೆ ಬೆಂಬಲ ಸೂಚಿಸುವಂತೆ ಕೇಳಿಕೊಂಡಿದ್ದರು. ಇದೀಗ ಕೇವಲ ಒಂದೇ ತಿಂಗಳಿನಲ್ಲಿ ಇವರ ಚಾನೆಲ್​ 1 ಲಕ್ಷ ಸಬ್​ಸ್ಕ್ರೈಬ್ ಕಂಡಿದೆ.

VISTARANEWS.COM


on

Rishabh Pant
Koo

ಮುಂಬಯಿ: ಟೀಮ್​ ಇಂಡಿಯಾದ ಕ್ರಿಕೆಟಿಗ ರಿಷಭ್​ ಪಂತ್​(Rishabh Pant) ಅವರು ಕ್ರಿಕೆಟ್​ ಜತೆಗೆ ಯೂಟ್ಯೂಬ್​ ಚಾನೆಲ್(Rishabh Pant YouTube channel)​ ಒಂದನ್ನು ನಡೆಸುತ್ತಿದ್ದಾರೆ. 1 ಲಕ್ಷ ಸಬ್​ಸ್ಕ್ರೈಬ್ ಆದ ನಿಟ್ಟಿನಲ್ಲಿ ಯುಟ್ಯೂಬ್ ಕಡೆಯಿಂದ ಅವರಿಗೆ ಸಿಲ್ವರ್ ಪ್ಲೇ ಬಟನ್(Silver Play Button) ಸಿಕ್ಕಿದೆ. ಈ ಸಂತಸದ ವಿಚಾರವನ್ನು ಸ್ವತಃ ಪಂತ್​ ಟ್ವೀಟ್​ ಮೂಲಕ ತಿಳಿಸಿದ್ದಾರೆ. ಈ ಚಾನೆಲ್​ನಿಂದ ಬರುವ ಹಣವನ್ನು ಅಸಹಾಯಕರಿಗೆ ದಾನ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಐಪಿಎಲ್​ ಸಂದರ್ಭದಲ್ಲಿ ಪಂತ್​ ಅವರು ಈ ಯುಟ್ಯೂಬ್(YouTube) ಚಾನೆಲ್​ ಅನ್ನು ಪ್ರಾರಂಭಿಸಿದ್ದರು. ಈ ವಿಚಾರವನ್ನು ಅವರು ವಿಡಿಯೊ ಮೂಲಕ ಟ್ವೀಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದರು. ಜತೆಗೆ ತಮ್ಮ ಈ ಚಾನೆಲ್​ಗೆ ಬೆಂಬಲ ಸೂಚಿಸುವಂತೆ ಕೇಳಿಕೊಂಡಿದ್ದರು. ಇದೀಗ ಕೇವಲ ಒಂದೇ ತಿಂಗಳಿನಲ್ಲಿ ಇವರ ಚಾನೆಲ್​ 1 ಲಕ್ಷ ಸಬ್​ಸ್ಕ್ರೈಬ್ ಕಂಡಿದೆ.


ಪಂತ್​ ಅವರು ಸದ್ಯ ಸಾಗುತ್ತಿರುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಪಾಕ್​ ವಿರುದ್ಧದ ಪಂದ್ಯದಲ್ಲಿ ಏಕಾಂಗಿ ಬ್ಯಾಟಿಂಗ್​ ಹೋರಾಟ ನಡೆಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇವರು ಆ ಪಂದ್ಯದಲ್ಲಿ ನಿಂತು ಆಡದೇ ಇದ್ದಿದ್ದರೆ ಭಾರತ 100 ಗಡಿ ಕೂಡ ದಾಟುವುದು ಕೂಡ ಕಷ್ಟವಾಗಿರುತ್ತಿತ್ತು.

2022ರ ಡಿಸೆಂಬರ್​ 30ರಂದು(rishabh pant accident date) ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್​ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.

ರಿಷಭ್​ ಪಂತ್​ ಅವರ ಗಂಭೀರ ಗಾಯವನ್ನು ಕಂಡ ಅನೇಕರು ಪಂತ್​ ಕ್ರಿಕೆಟ್​ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್​ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್​ ತಮ್ಮ ನಂಬಿಕೆ ಮತ್ತು ಕ್ರಿಕೆಟ್​ಗೆ ಮರಳುವ ದೃಢ ಸಂಕಲ್ಪದಿಂದ ಕಠಿಣ ವ್ಯಾಯಾಮ ನಡೆಸಿ ಕೇವಲ 14 ತಿಂಗಳಲ್ಲಿ ಸಂಪೂರ್ಣ ಫಿಟ್​ ಆಗಿ ಈ ಬಾರಿಯ ಐಪಿಎಲ್​ ಟೂರ್ನಿ ಆಡುವ ಮೂಲಕ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ ಮಾಡಿದ್ದರು.

ಇದನ್ನೂ ಓದಿ Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

ಸುಟ್ಟ ಗಾಯಗಳು ಹಾಗೂ ಮಂಡಿಗೆ ಗಾಯಗೊಂಡಿಗೆ ರಿಷಭ್​ ಪಂತ್​ಗೆ ಆರಂಭದಲ್ಲಿ ಡೆಹ್ರಾಡೂನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಪಂತ್​ ದುಬೈಯಲ್ಲಿ ಕ್ರಿಸ್​ಮಸ್​ ಪಾರ್ಟಿಯಲ್ಲಿ ಮುಗಿಸಿ ಮರಳಿ ಭಾರತಕ್ಕೆ ಬಂದು ತಾಯಿಗೆ ಹೊಸ ವರ್ಷದ ಸರ್​ಪ್ರೈಸ್​ ನೀಡಲೆಂದು ದೆಹಲಿಯಿಂದ ಡೆಹ್ರಾಡೂನ್​ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು. 

ಹರಿಯಾಣ ರಾಜ್ಯ ಸಾರಿಗೆ ನಿಗಮದ ಚಾಲಕ ಸುಶೀಲ್ ಕುಮಾರ್ ಮತ್ತು ಕಂಡಕ್ಟರ್ ಪರಮ್‌ಜೀತ್ ಅಪಘಾತಕ್ಕೀಡಾಗಿ ನೋವಿನಿಂದ ನರಳುತ್ತಿದ್ದ ಕ್ರಿಕೆಟಿಗ ರಿಷಭ್​ ಪಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಪಾಣ ಉಳಿಸುವಂತೆ ಮಾಡಿದ್ದರು. ರಸ್ತೆ ವಿಭಜಕಕ್ಕೆ ಕಾರೊಂದು ಡಿಕ್ಕಿ ಹೊಡೆದದ್ದನ್ನು ನೋಡಿದ ಸುಶೀಲ್ ಕುಮಾರ್ ಕುಮಾರ್​ ಮತ್ತು ಪರಮ್‌ಜೀತ್ ತಕ್ಷಣ ಬಸ್​ ನಿಲ್ಲಿಸಿ ಪಂತ್​ ಅವರಿಗೆ ಆರೈಕೆ ಮಾಡಿದ್ದರು.

Continue Reading

ಕ್ರೀಡೆ

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

Team India Coach: ಕಳೆದ ತಿಂಗಳು ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಆರಂಭದಲ್ಲಿ ಎನ್​ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರ ಹೆಸರು ಕೇಳಿ ಬಂದಿತ್ತು. ಆದರೆ ಅವರು ಕೊಚ್​ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದರು. ಈ ವೇಳೆ ಗಂಭೀರ್​ ಕೋಚ್​ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು.

VISTARANEWS.COM


on

Team India Coach
Koo

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ನೂತನ ಕೋಚ್‌(Team India Coach) ಆಗಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌(Gautam Gambhir) ಅವರನ್ನೇ ನೇಮಕ ಮಾಡಲು ಬಿಸಿಸಿಐ(BCCI) ತೀರ್ಮಾನ ಕೈಗೊಂಡಿದ್ದು ಇದೇ ತಿಂಗಳ ಅಂತ್ಯದಲ್ಲಿ ಅಧಿಕೃತ ಘೋಷಣೆ ಮಾಡಲಿದೆ ಎಂದು ಕೆಲ ಆಂಗ್ಲ ಮಾಧ್ಯಮಗಳು ವರದಿ ಮಾಡಿದೆ. ರಾಹುಲ್​ ದ್ರಾವಿಡ್(Rahul Dravid)​ ಅವರು ಟಿ20 ವಿಶ್ವಕಪ್​ ಬಳಿಕ ಕೋಚ್(India Head Coach)​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ.

ದ್ರಾವಿಡ್​ ಅವರು ಕೋಚ್​ ಹುದ್ದೆಯಿಂದ ಕೆಳಗಿಳಿಯುವುದಾಗಿ ಹೇಳಿದ ಬೆನ್ನಲ್ಲೇ ಗಂಭೀರ್​ ಮುಂದಿನ ಕೋಚ್ ಎನ್ನುವ ಮಾತುಗಳು ಕೇಳಿಬಂದಿತ್ತು. ಐಪಿಎಲ್​ ವೇಳೆ ಇದಕ್ಕಾಗಿ ಜಯ್​ ಶಾ ಮತ್ತು ಬಿಸಿಸಿಐ ಅಧಿಕಾರಿಗಳು ಕೂಡ ಗಂಭೀರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮೂಲಗಳ ಪ್ರಕಾರ ಗಂಭೀರ್​ ಕೂಡ ಕೋಚ್​ ಆಗಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್‌ ತಂಡಕ್ಕೆ ಯಶಸ್ವಿ ಮಾರ್ಗದರ್ಶನ ನೀಡಿ ತಂಡವನ್ನು ಚಾಂಪಿಯನ್​ ಮಾಡಿದ ಗಂಭೀರ್‌, ರಾಹುಲ್‌ ದ್ರಾವಿಡ್‌ ಅವರ ಸ್ಥಾನ ತುಂಬಲು ಅರ್ಹರು ಎಂದು ಬಿಸಿಸಿಐ ಭಾವಿಸಿದೆ ಎಂದು ಮೂಲಗಳು ತಿಳಿಸಿವೆ.  ಮೂಲಗಳ ಪ್ರಕಾರ ಗಂಭೀರ್​ ಕೋಚ್​ ಆಗುವ ದೃಷ್ಟಿಯಿಂದಲೇ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಎನ್ನಲಾಗಿದೆ.

ಕಳೆದ ತಿಂಗಳು ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಆರಂಭದಲ್ಲಿ ಎನ್​ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರ ಹೆಸರು ಕೇಳಿ ಬಂದಿತ್ತು. ಆದರೆ ಅವರು ಕೊಚ್​ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದರು. ಈ ವೇಳೆ ಗಂಭೀರ್​ ಕೋಚ್​ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಅವರೇ ಕೋಚ್​ ಆಗುವುದು ಖಚಿತ ಎನ್ನುತ್ತಿದೆ ಮೂಲಗಳು. ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ India Coach: ಕೋಚ್​ ಆಗುವ ಮುನ್ನವೇ ಗಂಭೀರ್​ಗೆ ಕಿವಿಮಾತು ಹೇಳಿದ ಅನಿಲ್ ಕುಂಬ್ಳೆ

ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಭರ್ತಿ ಮಾಡುವ ಮುನ್ನ ಗಂಭೀರ್​ ಅವರು ​ಒಂದು ಷರತ್ತು ಹಾಕಿದ್ದರು. ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಗಂಭೀರ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಿದ್ಧರಿರುವುದಾಗಿ ಹೇಳಿದ್ದರು. ಕೋಚ್​ ಹುದ್ದೆಗಾಗಿ ಎಷ್ಟು ಅರ್ಜಿಗಳು ಬಂದಿದೆ ಎಂಬುದರ ಬಗ್ಗೆ ಸದ್ಯ ಯಾವುದೇ ಮಾಹಿತಿ ಹೊರಬಿದ್ದಿಲ್ಲ ಆದರೆ ಗಂಭೀರ್​ ಕೋಚ್​ ಆಗುವುದು ಖಚಿತ ಎನ್ನಲಾಗಿದೆ.

ದ್ರಾವಿಡ್ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕವೇ ಕೋಚ್​ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಆದರೆ, ಬಿಸಿಸಿಐ ಟಿ20 ವಿಶ್ವಕಪ್​ ತನಕ ಅವರನ್ನು ಮುಂದುವರಿಯುವಂತೆ ಒತ್ತಾಯ ಮಾಡಿತ್ತು. ಹೀಗಾಗಿ ದ್ರಾವಿಡ್​ ಟಿ20 ವಿಶ್ವಕಪ್ ತನಕ ಈ ಹುದ್ದೆಯಲ್ಲಿ ಮುಂದುವರಿದರು.

Continue Reading
Advertisement
Nikhil Gupta
ವಿದೇಶ35 seconds ago

Nikhil Gupta: ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ಆರೋಪ; ಜೆಕ್‌ ಗಣರಾಜ್ಯದಿಂದ ನಿಖಿಲ್‌ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

BAN vs NEP
ಕ್ರೀಡೆ29 mins ago

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

Actor Darshan of many acquaintance unknown of darshan
ಸ್ಯಾಂಡಲ್ ವುಡ್34 mins ago

Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

Lok Sabha Election Result
Lok Sabha Election 202438 mins ago

Rajat Sharma: ಕಾಂಗ್ರೆಸ್ ನಾಯಕರ ವಿರುದ್ಧ ಖ್ಯಾತ ಪತ್ರಕರ್ತ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇಕೆ?

Flesh-Eating Bacteria
ಆರೋಗ್ಯ49 mins ago

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

CM Siddaramaiah and Vidhanasoudha
ಪ್ರಮುಖ ಸುದ್ದಿ57 mins ago

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

Euro 2024
ಕ್ರೀಡೆ1 hour ago

Euro 2024: ಗೆಲುವಿನ ಶುಭಾರಂಭ ಕಂಡ ಇಂಗ್ಲೆಂಡ್​; ರೋಚಕ ಗೆಲುವು ಸಾಧಿಸಿದ ನೆದರ್ಲೆಂಡ್ಸ್

Nayana Nagaraj ginirama serial fame got married with suhas
ಕಿರುತೆರೆ1 hour ago

Nayana Nagaraj: 10 ವರ್ಷದ ಪ್ರೀತಿ! ಮನಮೆಚ್ಚಿದ ಹುಡುಗನ ಜತೆ ಸಪ್ತಪದಿ ತುಳಿದ ʻಗಿಣಿರಾಮʼ ನಟಿ

Auto Launches
ಆಟೋಮೊಬೈಲ್1 hour ago

Auto Launches: ಸ್ಕೋಡಾ ಕುಶಾಕ್‌, ಬಿಎಂಡಬ್ಲ್ಯು ಆರ್ 1300 ಸೇರಿ ಇನ್ನೂ ಹಲವು ಹೊಸ ವಾಹನ ಮಾರುಕಟ್ಟೆಗೆ!

Irregular Periods problem Here are some simple home remedies
ಆರೋಗ್ಯ1 hour ago

Irregular Periods: ಏರುಪೇರಾದ ಋತುಚಕ್ರದ ಸಮಸ್ಯೆಯೇ? ಇಲ್ಲಿವೆ ಸರಳ ಮನೆಮದ್ದುಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ16 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ17 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ22 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌