Virat Kohli | ಲಂಕಾ ವಿರುದ್ಧ ಶತಕ ಬಾರಿಸಿ ಸಚಿನ್​ ದಾಖಲೆ ಮುರಿದ ವಿರಾಟ್​ ಕೊಹ್ಲಿ! - Vistara News

ಕ್ರಿಕೆಟ್

Virat Kohli | ಲಂಕಾ ವಿರುದ್ಧ ಶತಕ ಬಾರಿಸಿ ಸಚಿನ್​ ದಾಖಲೆ ಮುರಿದ ವಿರಾಟ್​ ಕೊಹ್ಲಿ!

ಶ್ರೀಲಂಕಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಮ್​ ಇಂಡಿಯಾ ಆಟಗಾರ ವಿರಾಟ್​ ಕೊಹ್ಲಿ ಶತಕ ಬಾರಿಸಿ ಮಿಂಚಿದ್ದಾರೆ.

VISTARANEWS.COM


on

sachin and virat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರ: ಶ್ರೀಲಂಕಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat Kohli) ಶತಕ ಸಿಡಿಸುವ ಮೂಲಕ ಭಾರತ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.

ತಿರುವನಂತಪುರದ ಗ್ರೀನ್​ಫೀಲ್ಡ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್​ ಮೂಲಕ ಭರ್ಜರಿ ಶತಕ ಬಾರಿಸಿ ಮಿಂಚಿದರು. ಇದೇ ವೇಳೆ ಅವರು ಸಚಿನ್​ ತೆಂಡೂಲ್ಕರ್​(ತವರಿನಲ್ಲಿ 20 ಶತಕ) ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ತವರಿನಲ್ಲಿ ಅತ್ಯಧಿಕ ಶತಕ ಬಾರಿಸಿದ ಟೀಮ್​ ಇಂಡಿಯಾದ ಮೊದಲ ಆಟಗಾರ ಎಂಬ ದಾಖಲೆ ಬರೆದರು. ಕೊಹ್ಲಿ ಈ ಶತಕದೊಂದಿಗೆ ತವರಿನಲ್ಲಿ 21 ಶತಕ ಬಾರಿಸಿದ ಸಾಧನೆ ಮಾಡಿದರು.

ಈ ಪಂದ್ಯದಲ್ಲಿ ಕೊಹ್ಲಿ ಒಟ್ಟು 110 ಎಸೆತ ಎದುರಿಸಿ ಅಜೇಯ 166 ರನ್​ ಸಿಡಿಸಿದರು. ಈ ಮನಮೋಹಕ ಇನಿಂಗ್ಸ್​ ವೇಳೆ 8 ಸಿಕ್ಸರ್​ ಮತ್ತು 13 ಬೌಂಡರಿ ಸಿಡಿಸಿದರು. ಜತೆಗೆ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 46ನೇ ಶತಕ ಪೂರೈಸಿದರು. ಒಟ್ಟಾರೆ ಇದು ಕೊಹ್ಲಿ 74ನೇ ಅಂತಾರಾಷ್ಟ್ರೀಯ ಶತಕವಾಗಿದೆ.

ಇದನ್ನೂ ಓದಿ | Virat Kohli | ಮಹೇಲ ಜಯವರ್ಧನೆ ವಿಶ್ವ ದಾಖಲೆ ಮುರಿದ ವಿರಾಟ್​ ಕೊಹ್ಲಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

Virat Kohli: 829.8 ಮೀ. ಅಥವಾ 2,722 ಅಡಿ ಎತ್ತರವಿರುವ, 33 ಲಕ್ಷ ಚದರಡಿ ತಳಪಾಯ ಹೊಂದಿರುವ, 168 ಮಹಡಿಗಳುಳ್ಳ ಬುರ್ಜ್‌ ಖಲೀಫಾ ಈವರೆಗಿನ ಪ್ರಪಂಚದ ಅತಿ ಎತ್ತರದ ಮಾನವನಿರ್ಮಿತ ಕಟ್ಟಡ ಎಂಬ ಖ್ಯಾತಿಯನ್ನು ಹೊಂದಿದೆ.

VISTARANEWS.COM


on

Virat Kohli
Koo

ದುಬೈ: ಟಿ20 ಕ್ರಿಕೆಟ್​ಗೆ ವಿದಾಯ(virat kohli retirement) ಹೇಳಿದ ವಿರಾಟ್​ ಕೊಹ್ಲಿಗೆ(Virat Kohli) ಗೌರವ ಸೂಚಕವಾಗಿ ಅವರ ಫೋಟೊವನ್ನು ಬುರ್ಜ್‌ ಖಲೀಫಾ(Burj Khalifa) ಕಟ್ಟಡದ ಮೇಲೆ ಪ್ರದರ್ಶನ ಮಾಡಲಾಯಿತು. ಲೇಸರ್​ ಲೈಟ್​ಗಳ ಮೂಲಕ ಕೊಹ್ಲಿಯ ಫೋಟೊ ಕಂಗೊಳಿಸಿದ ವಿಡಿಯೊ ವೈರಲ್​ ಆಗಿದೆ.

ವಿರಾಟ್​ ಕೊಹ್ಲಿ ಅವರು ಟಿ20 ವಿಶ್ವಕಪ್​ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಫೈನಲ್​ ಪಂದ್ಯದಲ್ಲಿ 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದ್ದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದಿದ್ದರು. ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ.

829.8 ಮೀ. ಅಥವಾ 2,722 ಅಡಿ ಎತ್ತರವಿರುವ, 33 ಲಕ್ಷ ಚದರಡಿ ತಳಪಾಯ ಹೊಂದಿರುವ, 168 ಮಹಡಿಗಳುಳ್ಳ ಬುರ್ಜ್‌ ಖಲೀಫಾ ಈವರೆಗಿನ ಪ್ರಪಂಚದ ಅತಿ ಎತ್ತರದ ಮಾನವನಿರ್ಮಿತ ಕಟ್ಟಡ ಎಂಬ ಖ್ಯಾತಿಯನ್ನು ಹೊಂದಿದೆ. ಹೈಮೆನೋಕಾಲಿಸ್‌ ಎಂಬ ಮರುಭೂಮಿಯ ಹೂವಿನ ಆಕಾರವು ಈ ಕಟ್ಟಡದ ತಳವಿನ್ಯಾಸಕ್ಕೆ ಪ್ರೇರಣೆಯಾಗಿದೆ. 2004ರ ಸೆಪ್ಟಂಬರ್‌ 20ರಂದು ಪ್ರಾರಂಭವಾದ ಕಟ್ಟಡದ ನಿರ್ಮಾಣ ಕಾರ್ಯವು ಪೂರ್ಣಗೊಂಡದ್ದು 2010ರ ಜನವರಿ 4ರಂದು.

ಇದನ್ನೂ ಓದಿ Virat Kohli: ನನ್ನ ​ಅಹಂಕಾರವೇ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣ ಎಂದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

ದುಬೈ ಸರ್ಕಾರ ಈ ಹಿಂದೆ ಭಾರತದ 77ನೇ ಸ್ವಾತಂತ್ರ್ಯೋತ್ಸವದಂದು ಭಾರತದ ತ್ರಿವರ್ಣ ಧ್ವಜ, ಕೋವಿಡ್ ಸಂಕಷ್ಟದ ವೇಳೆ ಭಾರತಕ್ಕೆ ಧೈರ್ಯ ತುಂಬುವ ಸಂದೇಶವನ್ನು ಬುರ್ಜ್‌ ಖಲೀಫಾದಲ್ಲಿ ಪ್ರದರ್ಶಿಸಿತ್ತು. ಹಲವು ಭಾರತೀಯ ಚಲನಚಿತ್ತರಗಳ ಫೋಸ್ಟರ್​ಗಳನ್ನು ಕೂಡ ಬುರ್ಜ್‌ ಖಲೀಫಾದಲ್ಲಿ ಪ್ರರ್ಶಿಸಲಾಗುತ್ತದೆ. ಕಟ್ಟಡದ ಹೊರ ಆವರಣದ ಒಂದು ಸುತ್ತು ಬರಬಹುದಾದ ವೀಕ್ಷಣಾ ಬಾಲ್ಕನಿ 124 ಮತ್ತು 125ನೇ ಮಹಡಿಯಲ್ಲಿವೆ. ಗಾಜಿನ ಗೋಡೆಯ ಮೂಲಕ ನಾವು ಸುತ್ತಲಿನ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು.

ಬುರ್ಜ್‌ ಖಲೀಫಾ ಕಟ್ಟಡದಲ್ಲಿ ಪ್ರತಿಷ್ಠಿತ ಹೊಟೇಲ್‌ಗ‌ಳು, ಪ್ರಖ್ಯಾತ ಅಪಾರ್ಟ್‌ಮೆಂಟ್‌ಗಳು, ವ್ಯಾಪಾರಿ ಕೇಂದ್ರಗಳು ಇತ್ಯಾದಿ ಇವೆ. ಈ ಕಟ್ಟಡದಲ್ಲಿ ಒಂದು ಐಷಾರಾಮಿ ಮನೆಯನ್ನು ಹೊಂದುವುದು ದೇಶ-ವಿದೇಶಗಳ ಕೋಟ್ಯಾಧಿಪತಿಗಳ ಕನಸು ಎಂದರೆ ತಪ್ಪಲ್ಲ. ಈ ಕಟ್ಟಡವನ್ನು ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಿರುವುದರಿಂದ ಪ್ರವಾಸೋದ್ಯಮಕ್ಕೂ ಒಳಿತಾಗಿದೆ. ಹಾಗೆಯೇ ದೇಶ-ವಿದೇಶಗಳ ಪ್ರವಾಸಿಗರಿಗೆ ಈ ಅದ್ಭುತ ಕಟ್ಟಡವನ್ನು ನೋಡುವ ಸ್ಮರಣೀಯ ಅನುಭವ ಲಭ್ಯವಾಗುತ್ತದೆ. ಬುರ್ಜ್‌ ಖಲೀಫಾದ 125ನೇ ಮಹಡಿಯವರೆಗೆ ಹೋಗಲು ಪ್ರವಾಸಿಗರಿಗೆ ಅವಕಾಶವಿದೆ. ವಾರ್ಷಿಕ ಎರಡು ಮಿಲಿಯನ್​ಗೂ ಅಧಿಕ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.

Continue Reading

ಕ್ರೀಡೆ

Jasprit Bumrah: ವಿಶ್ವಕಪ್​ ಗೆದ್ದ ಖುಷಿಯಲ್ಲಿ ಜಸ್​ಪ್ರೀತ್​ ಬುಮ್ರಾಗೆ ಟ್ರೀಟ್​ ಕೊಡಿಸಿದ ಪತ್ನಿ

Jasprit Bumrah:ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಮತ್ತು ಬುಮ್ರಾ ಅವರು 2021 ಮಾರ್ಚ್​ 15ರಂದು ಗೋವಾದಲ್ಲಿ ಮದುವೆಯಾಗಿದ್ದರು. ಮಹಾರಾಷ್ಟ್ರದವರಾದ ಸಂಜನಾ 2014ರ ಮಿಸ್ ಇಂಡಿಯಾ ಸ್ಪರ್ಧೆಯ ಫೈನಲ್ ತಲುಪಿದ್ದರು.

VISTARANEWS.COM


on

Jasprit Bumrah
Koo

ಬಾರ್ಬಡೋಸ್​: ಟಿ20 ವಿಶ್ವಕಪ್​(T20 World Cup) ಟೂರ್ನಿಯಲ್ಲಿ ಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಭಾರತ ತಂಡದ ವಿಶ್ವಕಪ್(India’s T20 World Cup win)​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ ಜಸ್​ಪ್ರೀತ್​ ಬುಮ್ರಾ(Jasprit Bumrah) ಅವರಿಗೆ ಪತ್ನಿ, ಕ್ರೀಡಾ ನಿರೂಪಕಿಯೂ ಆಗಿರುವ ಸಂಜನಾ ಗಣೇಶನ್(Sanjana Ganesan) ಐಸ್‌ ಕ್ರೀಂ ಪಾರ್ಟಿ ಕೊಡಿಸಿದ್ದಾರೆ. ಪತ್ನಿ ಐಸ್‌ ಕ್ರೀಂ ಟ್ರೀಟ್​ ಕೊಟ್ಟ ಫೋಟೊವನ್ನು ಬುಮ್ರಾ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಾಕಿದ್ದಾರೆ.

ಫೈನಲ್​ ಪಂದ್ಯದ ಬಳಿಕ ಸಂಜನಾ ಅವರು ಪತಿ ಬುಮ್ರಾರನ್ನು ಇಲ್ಲಿನ ಸ್ಥಳೀಯ ರೆಸ್ಟೋರೆಂಟ್​ಗೆ ಕರೆದುಕೊಂಡು ಹೋಗಿ ಐಸ್ ಕ್ರೀಂ ತಿನ್ನಿಸಿದ್ದಾರೆ. ‘ವಿಶ್ವ ಚಾಂಪಿಯನ್ ಜತೆಗೆ ಐಸ್ ಕ್ರೀಂ ತಿನ್ನುವ ಖುಷಿ’ ಎಂದು ಸಂಜನಾ ತಮ್ಮ ಇನ್​ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಐಸ್‌ ಕ್ರೀಂ ಟ್ರೀಟ್​ ಕೊಟ್ಟ ಪತ್ನಿಗೆ ಧನ್ಯವಾದಗಳು ಮೈ ಡಿಯರ್..ಎಂದು ಬುಮ್ರಾ ಹೇಳಿದ್ದಾರೆ.

ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಮತ್ತು ಬುಮ್ರಾ ಅವರು 2021 ಮಾರ್ಚ್​ 15ರಂದು ಗೋವಾದಲ್ಲಿ ಮದುವೆಯಾಗಿದ್ದರು. ಮಹಾರಾಷ್ಟ್ರದವರಾದ ಸಂಜನಾ 2014ರ ಮಿಸ್ ಇಂಡಿಯಾ ಸ್ಪರ್ಧೆಯ ಫೈನಲ್ ತಲುಪಿದ್ದರು. ಬುಮ್ರಾ ಅವರು ಕಳೆದ ವರ್ಷ ಗಂಡು ಮಗುವಿನ ತಂದೆಯಾಗಿದ್ದರು. ಮಗುವಿಗೆ ‘ಅಂಗದ್(Angad) ಜಸ್​ಪ್ರೀತ್​ ಬುಮ್ರಾ’ ಎಂದು ಹೆಸರಿಡಲಾಗಿದೆ. ಅಂಗದ್​ ಎಂದರೆ ಯೋಧ ಎಂದರ್ಥ. ರಾಮಾಯಣದಲ್ಲಿ ಬರುವ ವಾಲಿಯ ಪುತ್ರನ ಹೆಸರು ಕೂಡ ಅಂಗದ್​. ಇದೇ ಹೆಸರನ್ನು ಬುಮ್ರಾ ಅವರು ತಮ್ಮ ಮಗನಿಗೆ ಇಟ್ಟಿದ್ದಾರೆ.

ಭಾರತದ ಸ್ಟಾರ್ ವೇಗಿ ಬುಮ್ರಾ ಈ ಬಾರಿಯ ಟಿ20 ವಿಶ್ವಕಪ್ ಆವೃತ್ತಿಯಲ್ಲಿ ಯಾವುದೇ ಬೌಲರ್​​ಗೆ ಕಡಿಮೆ ಇಲ್ಲದ ಎಕಾನಮಿ ರೇಟ್ ಪ್ರದರ್ಶಿಸಿದರು. ಅವರು 8.26 ಸರಾಸರಿ ಮತ್ತು 4.17 ಎಕಾನಮಿ ರೇಟ್​​​ನಲ್ಲಿ 15 ವಿಕೆಟ್​ ಉರುಳಿಸಿ ಭಾರತದ ಗೆಲುವಿನ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ


ಕೆರಿಬಿಯನ್‌ ರಾಷ್ಟ್ರದಲ್ಲಿ(Caribbean country) ಬೀಸುತ್ತಿರುವ ಭಾರೀ ಚಂಡಮಾರುತದಿಂದಾಗಿ ಬಾರ್ಬಡೋಸ್​ನಲ್ಲಿಯೇ ಉಳಿದಿರುವ ಟೀಮ್​ ಇಂಡಿಯಾ(Team India stuck in Barbados), ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ. ಚಂಡಮಾರುತದ ಅಬ್ಬರ ಮತ್ತೆ ಹೆಚ್ಚಾಗಿರುವ ಕಾರಣ ಬಾರ್ಬಡೋಸ್​ನಲ್ಲಿ ವಿದ್ಯುತ್ ಮತ್ತು ನೀರು ಪೂರೈಕೆಗೆ ತೊಂದರೆಯಾಗಿದೆ. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿವೆ. ಹೀಗಾಗಿ ಆಟಗಾರರು ಭಾರತಕ್ಕೆ ಬರುವುದು ಇನ್ನೂ 2 ದಿನ ತಡವಾಗುವ ಸಾಧ್ಯತೆ ಕಂಡುಬಂದಿದೆ.

ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿದ್ದು, ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿದೆ.

ಸದ್ಯ ಟೀಮ್​ ಇಂಡಿಯಾದ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿದೆ. ಚಂಡಮಾರುತದ ಕಾರಣ, ಭಾರತೀಯ ಆಟಗಾರರಿರುವ ಹೊಟೇಲ್‌ ಸೇವೆಯಲ್ಲೂ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

Continue Reading

ಕ್ರಿಕೆಟ್

Virat Kohli: ನನ್ನ ​ಅಹಂಕಾರವೇ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣ ಎಂದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli: ಕೊಹ್ಲಿ ಅಹಂ ಬಗ್ಗೆ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ ಮಾಜಿ ಆಟಗಾರ ಅಂಬಾಟಿ ರಾಯುಡು ಹೇಳಿಕೆ ನೀಡಿದ್ದರು. ಕೊಹ್ಲಿ ತನ್ನ ತಂಡದಲ್ಲಿರುವ ಸಹ ಆಟಗಾರರಂತೆ ಪ್ರದರ್ಶನ ನೀಡಬೇಕು. ಕೊಂಚ ಸ್ಟಾಂಡರ್ಡ್​ ಕಮ್ಮಿ ಮಾಡುಕೊಳ್ಳುವುದು ಸೂಕ್ತ ಎಂದಿದ್ದರು.

VISTARANEWS.COM


on

Virat Kohli
Koo

ಬಾರ್ಬಡೋಸ್​: ಈ ಬಾರಿಯಾ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿರಾಟ್​ ಕೊಹ್ಲಿ(Virat Kohli) ತಾವು ಬ್ಯಾಟಿಂಗ್ ವೈಫಲ್ಯ ಕಾಣಲು ಕಾರಣ ಏನೆಂಬುದನ್ನು ತಿಳಿಸಿದ್ದಾರೆ. ಕೊಹ್ಲಿ ಈ ಮಾತು ಕೇಳಿ ಕೆಲವರಿಗೆ ಅಚ್ಚರಿಯಾಗಿದೆ. ಹೌದು, ಫೈನಲ್​ ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ, ನನ್ನ ​ಅಹಂಕಾರವೇ ಈ ವೈಫಲ್ಯಕ್ಕೆ ಕಾರಣ ಎಂದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಕಳೆದ ಶನಿವಾರ ನಡೆದ ಫೈನಲ್​ ಪಂದ್ಯದಲ್ಲಿ ಕೊಹ್ಲಿ ಅರ್ಧಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಫೈನಲ್​ ಪಂದ್ಯಕ್ಕೂ ಮುನ್ನ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಸಂಪೂರ್ಣ ವೈಫಲ್ಯ ಕಂಡಿದ್ದರು. ಇದುವರೆಗೂ ವಿಶ್ವಕಪ್​ ಟೂರ್ನಿಯಲ್ಲಿ ಶೂನ್ಯಕ್ಕೆ ಔಟಾಗದೆ ಇದ್ದ ಕೊಹ್ಲಿ ಈ ಬಾರಿ 2 ಸಲ ಶೂನ್ಯಕ್ಕೆ ಔಟಾಗುವ ಮೂಲಕ ಅವಮಾನ ಎದುರಿಸಿದ್ದರು.

ಫೈನಲ್​ ಪಂದ್ಯ ಬಳಿಕ ಮಾತನಾಡಿದ ಕೊಹ್ಲಿ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಈ ಟೂರ್ನಿಯಿಂದ ಜೀವನದಲ್ಲಿ ಹಲವು ಪಾಠ ಕಲಿತಿದ್ದೇನೆ. ನನ್ನ ಅಹಂ ಅನ್ನು ಬದಿಗೆ ಇಟ್ಟು ಹೇಳುವುದಾದರೆ, ನಾನೇ ಎಲ್ಲ, ನಾನೇ ಶ್ರೇಷ್ಠ ಎನ್ನುವ ಅಹಂ ಬಿಡಬೇಕು. ಅಹಂಕಾರದಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎನ್ನುವುದು ನನಗೆ ಈಗ ಅರ್ಥವಾಗಿದೆ. ಒಂದು ಕ್ಷಣದಲ್ಲಿ ಎದುರಾದ ಪರಿಸ್ಥಿತಿಗೆ ಗೌರವಿಸಿ, ತಲೆಬಾಗಲೇ ಬೇಕು. ಇದನ್ನು ಬಿಟ್ಟು ಅಹಂ ತೋರಿದರೆ ದೇವರು ಕೂಡ ಮೆಚ್ಚುವುದಿಲ್ಲ. ನನ್ನ ವಿಚಾರದಲ್ಲೂ ಕೂಡ ಅದೇ ಆಯಿತು” ಎಂದು ಕೊಹ್ಲಿ ಮುಕ್ತವಾಗಿ ಹೇಳಿಕೊಂಡರು.

ಇದನ್ನೂ ಓದಿ Virat Kohli : ಶುಭಾಶಯ ಕೋರಿದ ನರೇಂದ್ರ ಮೋದಿಗೆ ಪ್ರತಿಕ್ರಿಯೆ ಕೊಟ್ಟ ಕೊಹ್ಲಿ; ಇಲ್ಲಿದೆ ಅದರ ವಿವರ

ಕೊಹ್ಲಿ ಅಹಂ ಬಗ್ಗೆ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ ಮಾಜಿ ಆಟಗಾರ ಅಂಬಾಟಿ ರಾಯುಡು ಹೇಳಿಕೆ ನೀಡಿದ್ದರು. ಕೊಹ್ಲಿ ತನ್ನ ತಂಡದಲ್ಲಿರುವ ಸಹ ಆಟಗಾರರಂತೆ ಪ್ರದರ್ಶನ ನೀಡಬೇಕು. ಕೊಂಚ ಸ್ಟಾಂಡರ್ಡ್​ ಕಮ್ಮಿ ಮಾಡುಕೊಳ್ಳುವುದು ಸೂಕ್ತ ಎಂದಿದ್ದರು. ಆದರೆ ಈ ವೇಳೆ ಕೊಹ್ಲಿ ಅಭಿಮಾನಿಗಳು ರಾಯುಡು ವಿರುದ್ಧ ಕಿಡಿ ಕಾರಿದ್ದರು. ಇದೀಗ ಕೊಹ್ಲಿಯೇ ತಮ್ಮ ಅಹಂ ಬಗ್ಗೆ ಒಪ್ಪಿಕೊಂಡಿದ್ದಾರೆ.

ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದರು.

ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ. ಈ ಟಿ 20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ 59 ಎಸೆತಗಳಲ್ಲಿ 76 ರನ್ ಮಾಡುವ ಮೊದಲು ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 75 ರನ್ ಮಾತ್ರ ಗಳಿಸಿದ್ದರು.

Continue Reading

ಕ್ರೀಡೆ

Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

Team India stuck in Barbados: ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿದ್ದು, ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿದೆ.

VISTARANEWS.COM


on

Team India stuck in Barbados
Koo

ಬ್ರಿಜ್‌ಟೌನ್‌: ಟಿ20 ವಿಶ್ವಕಪ್‌ ಗೆದ್ದ ಬಳಿಕ ತವರಿಗೆ ಮರಳಲು ಸಜ್ಜಾಗಿ ನಿಂತಿರುವ ಟೀಮ್​ ಇಂಡಿಯಾ(Team India stuck in Barbados) ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ. ಕೆರಿಬಿಯನ್‌ ರಾಷ್ಟ್ರದಲ್ಲಿ(Caribbean country) ಬೀಸುತ್ತಿರುವ ಭಾರೀ ಚಂಡಮಾರುತದ ಅಬ್ಬರ ಮತ್ತೆ ಹೆಚ್ಚಾಗಿರುವ ಕಾರಣ ಬಾರ್ಬಡೋಸ್​ನಲ್ಲಿ ವಿದ್ಯುತ್ ಮತ್ತು ನೀರು ಪೂರೈಕೆಗೆ ತೊಂದರೆಯಾಗಿದೆ. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿವೆ. ಹೀಗಾಗಿ ಆಟಗಾರರು ಭಾರತಕ್ಕೆ ಬರುವುದು ಇನ್ನೂ 2 ದಿನ ತಡವಾಗುವ ಸಾಧ್ಯತೆ ಕಂಡುಬಂದಿದೆ.

ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿದ್ದು, ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿದೆ.

ಸದ್ಯ ಟೀಮ್​ ಇಂಡಿಯಾದ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿದೆ. ಚಂಡಮಾರುತದ ಕಾರಣ, ಭಾರತೀಯ ಆಟಗಾರರಿರುವ ಹೊಟೇಲ್‌ ಸೇವೆಯಲ್ಲೂ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

ಇದನ್ನೂ ಓದಿ Team India Coach: ಟೀಮ್​ ಇಂಡಿಯಾ ಕೋಚ್​ ಆಯ್ಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಜಯ್‌ ಶಾ

ಟೀಂ ಇಂಡಿಯಾಗೆ ಐತಿಹಾಸಿಕ ಗೆಲುವು

ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಮಣಿಸಿದ ಭಾರತ 2007ರ ಬಳಿಕ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ನಂತರ ಎರಡು ಬಾರಿ ಪಂದ್ಯಾವಳಿಯನ್ನು ಗೆದ್ದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ವಿರಾಟ್ ಕೊಹ್ಲಿ 76 ರನ್ ಗಳಿಸಿದರೆ, ಅಕ್ಷರ್ ಪಟೇಲ್ 47 ರನ್ ಗಳಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 169 ರನ್​ಗೆ ಹೋರಾಟ ಮುಗಿಸಿತು.

ವಿದಾಯ ಹೇಳಿದ ರೋಹಿತ್​– ಕೊಹ್ಲಿ


ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ವಿರಾಟ್​ ಕೊಹ್ಲಿ, ರವೀಂದ್ರ ಜಡೇಜ ಮತ್ತು ರೋಹಿತ್​ ಶರ್ಮ ಅವರು ಟಿ20 ಕ್ರಿಕೆಟ್​ಗೆ ವಿದಾಯ ಘೋಷಿಸಿದರು. ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

Continue Reading
Advertisement
Virat Kohli
ಕ್ರೀಡೆ12 mins ago

Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

Stock Market
ವಾಣಿಜ್ಯ20 mins ago

Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌

self harming mysore
ಕ್ರೈಂ34 mins ago

Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

police constable commits suicide by jumping into well
ಬೆಂಗಳೂರು47 mins ago

Police constable : ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ ಮಡಿವಾಳ ಪೊಲೀಸ್‌ ಕಾನ್ಸ್‌ಟೇಬಲ್!

Euro 2024
ಕ್ರೀಡೆ49 mins ago

Euro 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಪೋರ್ಚುಗಲ್; ಫ್ರಾನ್ಸ್ ಎದುರಾಳಿ

Yogi Adityanath
ದೇಶ56 mins ago

Yogi Adityanath: ಉತ್ತರಪ್ರದೇಶಕ್ಕೆ ಅಪಮಾನ ಮಾಡಲು ರಾಹುಲ್‌ ಗಾಂಧಿ ಸಂಚು; ಯೋಗಿ ಕಿಡಿ

Good News For Farmers
ದೇಶ1 hour ago

Good News For Farmers: ಬಿಸಿಲಿನ ಝಳಕ್ಕೆ ಬಸವಳಿದ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಈ ತಿಂಗಳು ಉತ್ತಮ ವರ್ಷಧಾರೆ

train service
ಬೆಂಗಳೂರು1 hour ago

Train services: ಗೋಲಗುಂಬಜ್ ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಪರಿಷ್ಕರಣೆ; ಬೆಂಗಳೂರಿನಿಂದ ವಿಶೇಷ ರೈಲುಗಳ ಓಡಾಟ

Pawan Kalyan
ದೇಶ2 hours ago

Pawan Kalyan: ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ

actor darshan crazy fans
ವೈರಲ್ ನ್ಯೂಸ್2 hours ago

Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌