Virat Kohli : ಕೊಹ್ಲಿಗೆ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​ - Vistara News

ಕ್ರೀಡೆ

Virat Kohli : ಕೊಹ್ಲಿಗೆ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Virat Kohli: ವಿರಾಟ್ ಕೊಹ್ಲಿ ಬ್ಯಾಟಿಂಗ್ ಸಾಮರ್ಥ್ಯವನ್ನು ಮಾತ್ರ ಮ್ಯಾಥ್ಯೂ ಹೇಡನ್ ಹೊಗಳಲಿಲ್ಲ. ಅವರ ಫೀಲ್ಡಿಂಗ್​ ಕರಾಮತ್ತನ್ನು ಕೂಡ ಮೆಚ್ಚಿದ್ದಾರೆ. ಮೈದಾನದಲ್ಲಿ ಚಿಗರೆಯಂತೆ ಓಡಿ ಫೀಲ್ಡಿಂಗ್ ಮಾಡುವ ಅವರಿಂದಾಗಿ ವಿಕೆಟ್​ಗಳು ಲಭಿಸಿವೆ ಎಂಬುದಾಗಿ ಹೇಡನ್​ ಹೇಳಿದ್ದಾರೆ. ಅವರ ಅತ್ಯುತ್ತಮ ಪ್ರಯತ್ನದಿಂದಾಗಿಯೇ ಆರ್​ಸಿಬಿ ತಂಡ ಪ್ಲೇಆಫ್​ ಹಂತಕ್ಕೆ ಏರಲು ಸಾಧ್ಯವಾಯಿತು. ಹೀಗಾಗಿ ಕೊಹ್ಲಿಗೆ ನಿಜವಾದ ಗೌರವ ಸಲ್ಲಬೇಕು ಎಂದು ಮಾಜಿ ಆರಂಭಿಕ ಬ್ಯಾಟರ್ ನುಡಿದಿದ್ದಾರೆ.

VISTARANEWS.COM


on

Virat Kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೇ 22 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024 ರ ಎಲಿಮಿನೇಟರ್‌ನಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಾಲ್ಕು ವಿಕೆಟ್‌ಗಳ ಸೋಲನ್ನು ಆಸ್ಟ್ರೇಲಿಯಾದ ಮಾಜಿ ಬ್ಯಾಟರ್ ಮತ್ತು ವೀಕ್ಷಕ ವಿವರಣೆಗಾರ ಮ್ಯಾಥ್ಯೂ ಹೇಡನ್ ಬೇಸರದ ವಿಷಯ ಎಂದು ವಿಶ್ಲೇಷಿಸಿದ್ದಾರೆ. ಇದೇ ವೇಳೆ ಅವರು ವಿರಾಟ್​ ಕೊಹ್ಲಿಗೆ ನಿಜವಾದ ಗೌರವ ಸಲ್ಲಿಸಬೇಕು. ತಂಡದ ಸೋಲಿಗೆ ಅವರನ್ನು ಹೊಣೆಗಾರನನ್ನಾಗಿ ಮಾಡಬಾರದು ಒತ್ತಿ ಹೇಳಿದರು. ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗರು ಪಂದ್ಯದುದ್ದಕ್ಕೂ ಕೊಹ್ಲಿಯ ಸಮರ್ಪಣೆ ಮತ್ತು ಪ್ರಭಾವಶಾಲಿ ಆಟವನ್ನು ಶ್ಲಾಘಿಸಿದ್ದಾರೆ.

ವಿರಾಟ್ ಕೊಹ್ಲಿ ಬ್ಯಾಟಿಂಗ್ ಸಾಮರ್ಥ್ಯವನ್ನು ಮಾತ್ರ ಮ್ಯಾಥ್ಯೂ ಹೇಡನ್ ಹೊಗಳಲಿಲ್ಲ. ಅವರ ಫೀಲ್ಡಿಂಗ್​ ಕರಾಮತ್ತನ್ನು ಕೂಡ ಮೆಚ್ಚಿದ್ದಾರೆ. ಮೈದಾನದಲ್ಲಿ ಚಿಗರೆಯಂತೆ ಓಡಿ ಫೀಲ್ಡಿಂಗ್ ಮಾಡುವ ಅವರಿಂದಾಗಿ ವಿಕೆಟ್​ಗಳು ಲಭಿಸಿವೆ ಎಂಬುದಾಗಿ ಹೇಡನ್​ ಹೇಳಿದ್ದಾರೆ. ಅವರ ಅತ್ಯುತ್ತಮ ಪ್ರಯತ್ನದಿಂದಾಗಿಯೇ ಆರ್​ಸಿಬಿ ತಂಡ ಪ್ಲೇಆಫ್​ ಹಂತಕ್ಕೆ ಏರಲು ಸಾಧ್ಯವಾಯಿತು. ಹೀಗಾಗಿ ಕೊಹ್ಲಿಗೆ ನಿಜವಾದ ಗೌರವ ಸಲ್ಲಬೇಕು ಎಂದು ಮಾಜಿ ಆರಂಭಿಕ ಬ್ಯಾಟರ್ ನುಡಿದಿದ್ದಾರೆ.

ಆರ್‌ಆರ್ ವಿರುದ್ಧ 24 ಎಸೆತಗಳಲ್ಲಿ 33 ರನ್ ಬಾರಿಸಿದ ಕೊಹ್ಲಿ ಅದ್ಭುತ ಮೈಲಿಗಲ್ಲನ್ನು ಸಾಧಿಸಿದ್ದರು. ಐಪಿಎಲ್‌ನಲ್ಲಿ 8000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹೇಡನ್ ಇದನ್ನು ಅಸಾಮಾನ್ಯ ಸಾಧನೆ ಎಂದು ಕರೆದಿದ್ದಾರೆ. ಭಾರತೀಯ ಬ್ಯಾಟಿಂಗ್ ಮಾಸ್ಟರ್ ಅವರು ಎಂದು ಹೇಳಿದ್ದಾರೆ

ಇದಲ್ಲದೆ, ಐಪಿಎಲ್ 2024 ರಲ್ಲಿ ಆರ್​​ಬಿಗಾಗಿ ಕೊಹ್ಲಿ ತೋರಿದ ಸ್ಪರ್ಧಾತ್ಮಕ ಮನೋಭಾವ ಸ್ಥಿರ ಪ್ರದರ್ಶನವನ್ನು ಹೇಡನ್ ಶ್ಲಾಘಿಸಿದರು. ಬಲಗೈ ಬ್ಯಾಟರ್​ ಈ ಋತುವಿನಲ್ಲಿ ರನ್‌ಗಾಗಿ ಹಸಿದ ರೀತಿಯಲ್ಲಿ ತೋರುತ್ತಿದ್ದರು. ಮೈದಾದನದಲ್ಲಿ ಅವರ ಉಪಸ್ಥಿತಿಯು ಪರಿಣಾಮ ಬೀರಿತ್ತು. ಬೆಂಗಳೂರು ತಂಡ ಪ್ಲೇಆಫ್‌ ಪ್ರವೇಶಿಸುವಲ್ಲಿ ಅವರ ಪಾತ್ರ ಮುಖ್ಯ ಎಂದು ಹೇಳಿದರು.

ಆರ್‌ಆರ್‌ಗೆ ಆರ್‌ಸಿಬಿ ಸೋಲಿಗೂ ವಿರಾಟ್ ಕೊಹ್ಲಿಗೂ ಯಾವುದೇ ಸಂಬಂಧವಿಲ್ಲ: ಮ್ಯಾಥ್ಯೂ ಹೇಡನ್

ಮ್ಯಾಥ್ಯೂ ಹೇಡನ್ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಹೀಗೆ ಹೇಳಿದ್ಧಾರೆ. “ಈ ಸೋಲಿಗೆ ಕೊಹ್ಲಿಯೊಂದಿಗೆ ಯಾವುದೇ ಸಂಬಂಧವಿಲ್ಲ. ನಮಗೆ ತಿಳಿದಿದೆ, ಅವರು ತನ್ನ ಸಂಪೂರ್ಣ ಹೃದಯ ಮತ್ತು ಆತ್ಮವನ್ನು ತಂಡಕ್ಕಾಗಿ ಕೊಟ್ಟಿದ್ದಾರೆ. ಅವರ ಫೀಲ್ಡಿಂಗ್ ಪ್ರಯತ್ನದ ಬಗ್ಗೆ ನೀವು ಯೋಚಿಸಿದಾಗ ಇನ್ನು ವಿಶೇಷ ಎನಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Glenn Maxwell : ಮ್ಯಾಕ್ಸ್​​ವೆಲ್​ಗೆ ಕೊಟ್ಟ ಹಣ ವಾಪಸ್​ ಪಡೆಯಿರಿ; ಅಭಿಮಾನಿಗಳ ಒತ್ತಾಯ

ವಿರಾಟ್ ಕೊಹ್ಲಿ ಈ ಋತುವಿನಲ್ಲಿ ಬ್ಯಾಟ್‌ನೊಂದಿಗೆ ಅದ್ಭುತವಾಗಿದ್ದರು. 15 ಪಂದ್ಯಗಳಲ್ಲಿ 154 ರ ಪ್ರಭಾವಶಾಲಿ ಸ್ಟ್ರೈಕ್ ರೇಟ್‌ನಲ್ಲಿ 741 ರನ್ ಗಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಕೊಹ್ಲಿ ಆಗಾಗ್ಗೆ ಆರ್​ಸಿಬಿ ತಂಡವನ್ನು ಅನ್ನು ಏಕಾಂಗಿಯಾಗಿ ಗೆಲ್ಲಿಸಿದ್ದರು. 2024 ರಲ್ಲಿ ಮುಂಬರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕೊಹ್ಲಿ ಶೀಘ್ರದಲ್ಲೇ T20 ವಿಶ್ವಕಪ್ 2024 ಗಾಗಿ ಭಾರತೀಯ ತಂಡದೊಂದಿಗೆ ಯುಎಸ್​ಎ ಮತ್ತು ವೆಸ್ಟ್​ ಇಂಡೀಸ್​​ಗೆ ತೆರಳಲಿದ್ದಾರೆ. ಅವರು ಜೂನ್ 5 ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ವಿರುದ್ಧ ತಮ್ಮ ಅಭಿಯಾನ ಪ್ರಾರಂಭಿಸಲಿದ್ದಾರೆ. ಆರ್​ಸಿಬಿ ಓಪನರ್ ಐಪಿಎಲ್ 2024 ರಲ್ಲಿ ಉತ್ತಮ ಫಾರ್ಮ್​ ತೋರಿದ ಕಾರಣ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕ ಆಟಗಾರನಾಗಿ ಆಡುವ ಸಾಧ್ಯತೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Euro 2024: ಡೆನ್ಮಾರ್ಕ್ ಸವಾಲನ್ನು ಮೆಟ್ಟಿ ನಿಂತೀತೇ ಸ್ಲೊವೇನಿಯಾ?; ಬಲಾಬಲ ಹೇಗಿದೆ?

Euro 2024: ಡೆನ್ಮಾರ್ಕ್ ಮತ್ತು ಸರ್ಬಿಯಾ ಇದುವರೆಗೆ ಒಟ್ಟು 6 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಡೆನ್ಮಾರ್ಕ್​ ದಾಖಲೆಯ 5 ಪಂದ್ಯಗಳನ್ನು ಗೆದ್ದರೆ, ಸರ್ಬಿಯಾ ಕೇವಲ ಒಂದು ಪಂದ್ಯ ಮಾತ್ರ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಇಂದಿನ ಪಂದ್ಯದಲ್ಲಿಯೂ ಡೆನ್ಮಾರ್ಕ್ ಗೆಲ್ಲುವ ಫೇವರಿಟ್​ ಎನಿಸಿಕೊಂಡಿದೆ

VISTARANEWS.COM


on

Euro 2024
Koo

ಮ್ಯೂನಿಚ್: ಇಂದು ನಡೆಯುವ ಯುರೋ ಕಪ್​(Euro 2024) ಫುಟ್ಬಾಲ್​ ಟೂರ್ನಿಯ ‘ಸಿ’ ಗ್ರೂಪ್​ನ ತಂಡಗಳಾದ ಡೆನ್ಮಾರ್ಕ್ ಮತ್ತು ಸ್ಲೊವೇನಿಯಾ(Denmark vs Slovenia) ಮುಖಾಮುಖಿಯಾಗಲಿವೆ. ತಡ ರಾತ್ರಿಯ ಮತ್ತೊಂದು ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್​ ಮತ್ತು ಸರ್ಬಿಯಾ ಕಾದಾಟ ನಡೆಸಲಿವೆ. ಎಲ್ಲ ನಾಲ್ಕು ತಂಡಗಳಿಗೂ ಇದು ಈ ಬಾರಿಯ ಕೂಡದ ಮೊದಲ ಪಂದ್ಯವಾಗಿದ್ದು ಗೆಲುವಿನಿ ಶುಭಾರಂಭಕ್ಕೆ ತೀವ್ರ ಪೈಪೋಟಿ ನಡೆಸುವ ನಿರೀಕ್ಷೆ ಇದೆ. ಪಂದ್ಯ ರಾತ್ರಿ 9.30ಕ್ಕೆ ಪ್ರಸಾರಗೊಳ್ಳಲಿದೆ.

ಮ್ಯಾಂಚೆಸ್ಟರ್ ಕ್ಲಬ್​ ಪರ ಆಡುವ ಮಿಡ್​ಫೀಲ್ಡರ್​ ಕ್ರಿಶ್ಚಿಯನ್ ಎರಿಕ್ಸೆನ್(Christian Eriksen) ಅವರು ತಂಡಕ್ಕೆ ಮರಳಿರುವುದು ಡೆನ್ಮಾರ್ಕ್ ತಂಡದ ಆತ್ಮವಿಶ್ವಾಸ ಹೆಚ್ಚಿಸುವಂತೆ ಮಾಡಿದೆ. 2021ರಲ್ಲಿ ಅವರು ಯರೋ ಕಪ್​ ಆಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಮೈದಾನದಲ್ಲೇ ಕುಸಿದ್ದು ಬಿದ್ದು ಆಸ್ಪತ್ರೆ ಸೇರಿದ್ದರು. ಅದೃಷ್ಟವಶಾತ್ ಅವರು ಬದುಕುಳಿದು ಇದೀಗ ಮತ್ತೆ ಯೊರೋ ಕಪ್​ನಲ್ಲಿ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಬಲಾಬಲ


ಡೆನ್ಮಾರ್ಕ್ ಮತ್ತು ಸರ್ಬಿಯಾ ಇದುವರೆಗೆ ಒಟ್ಟು 6 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಡೆನ್ಮಾರ್ಕ್​ ದಾಖಲೆಯ 5 ಪಂದ್ಯಗಳನ್ನು ಗೆದ್ದರೆ, ಸರ್ಬಿಯಾ ಕೇವಲ ಒಂದು ಪಂದ್ಯ ಮಾತ್ರ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಇಂದಿನ ಪಂದ್ಯದಲ್ಲಿಯೂ ಡೆನ್ಮಾರ್ಕ್ ಗೆಲ್ಲುವ ಫೇವರಿಟ್​ ಎನಿಸಿಕೊಂಡಿದೆ. ಕಳೆದ ವರ್ಷ ನಡೆದಿದ್ದ ಟೂರ್ನಿಯಲ್ಲಿ ಡೆನ್ಮಾರ್ಕ್ ತಂಡ ಸರ್ಬಿಯಾ ವಿರುದ್ಧ 2-1 ಗೋಲುಗಳ ಅಂತರದಿಂದ ಗೆದ್ದು ಬೀಗಿತ್ತು. ಆದರೂ ಕೂಡ ಸವಾಲನ್ನು ಹಗುರುವಾಗಿ ಪರಿಗಣಿಸುವಂತಿಲ್ಲ. ಏಕೆಂದರೆ ಈ ಬಾರಿ ಸರ್ಬಿಯಾ ಹೆಚ್ಚಾಗಿ ಯುವ ಆಟಗಾರರನ್ನು ನೆಚ್ಚಿಕೊಂಡಿದೆ.

ಇದನ್ನೂ ಓದಿ Euro 2024: ಕ್ರೊವೇಷಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸ್ಪೇನ್

ಸಂಭಾವ್ಯ ತಂಡಗಳು


ಡೆನ್ಮಾರ್ಕ್​: ಕ್ಯಾಸ್ಪರ್ ಷ್ಮೆಚೆಲ್, ಜೋಕಿಮ್ ಆಂಡರ್ಸನ್, ಆಂಡ್ರಿಯಾಸ್ ಕ್ರಿಸ್ಟೆನ್ಸೆನ್, ಜಾನಿಕ್ ವೆಸ್ಟರ್ಗಾರ್ಡ್, ಜೋಕಿಮ್ ಮೆಹ್ಲೆ, ಪಿಯರೆ- ಎಮಿಲಿ ಹೊಜ್ಬ್ಜೆರ್ಗ್, ಮಾರ್ಟೆನ್ ಹ್ಜುಲ್ಮಂಡ್, ವಿಕ್ಟರ್ ಕ್ರಿಸ್ಟಿಯಾನ್ಸೆನ್, ಕ್ರಿಶ್ಚಿಯನ್ ಎರಿಕ್ಸೆನ್, ರಾಸ್ಮಸ್ ಹೊಜ್ಲುಂಡ್, ಮಿಕ್ಕೆಲ್ ಡ್ಯಾಮ್ಸಾರ್ಡ್

ಸ್ಲೊವೇನಿಯಾ: ಜಾನ್ ಒಬ್ಲಾಕ್, ಝಾನ್ ಕಾರ್ನಿಕ್ನಿಕ್, ಡೇವಿಡ್ ಬ್ರೆಕಾಲೊ, ಜಾಕಾ ಬಿಜೋಲ್, ಎರಿಕ್ ಜಾಂಜಾ, ಟೊಮಿ ಹೊರ್ವಟ್, ಟಿಮಿ ಮ್ಯಾಕ್ಸ್ ಎಲ್ಸ್ನಿಕ್, ಆಡಮ್ ಗ್ನೆಜ್ಡಾ ಸೆರಿನ್, ಜಾನ್ ಮ್ಲಾಕರ್, ಆಂಡ್ರಾಜ್ ಸ್ಪೋರಾರ್, ಬೆಂಜಮಿನ್ ಸೆಸ್ಕೋ.

ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಇಂಗ್ಲೆಂಡ್​ ನಾಯಕ


ಇಂಗ್ಲೆಂಡ್ ನಾಯಕ ಹ್ಯಾರಿ ಕೇನ್ ಅವರು ಸರ್ಬಿಯಾ ವಿರುದ್ಧದ ಪಂದ್ಯಕ್ಕೂ ಮುನ್ನವೇ ತಮ್ಮ ತಂಡ ಗೆಲುವು ಸಾಧಿಸಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ತಂಡ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿದೆ. ಪಂದ್ಯಕ್ಕೆ ಬೇಕಾದ ಎಲ್ಲ ಪೂರ್ವ ತಯಾರಿಯನ್ನು ಮಾಡಿದ್ದೇವೆ, ಗೆಲ್ಲುವು ವಿಶ್ವಾಸ ನಮ್ಮ ತಂಡದಲ್ಲಿದೆ ಎಂದು ಹೇಳಿದರು.

ಹ್ಯಾರಿ ಕೇನ್ ಅವರು 2018ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ಗೋಲ್ಡನ್​ ಶೂ ಪ್ರಶಸ್ತಿ ಗೆದ್ದಿದ್ದರು. ಆದರೆ ತಂಡ ಮಾತ್ರ ಸೆಮಿಫೈನಲ್​ನಲ್ಲಿ ಕ್ರೊಯೇಷಿಯಾ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಇದುವರೆಗೂ ಇಂಗ್ಲೆಂಡ್​ ತಂಡ ಯುರೋ ಕಪ್ ಗೆದ್ದಿಲ್ಲ.

Continue Reading

ಕ್ರೀಡೆ

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

Team India Coach: ಕಳೆದ ತಿಂಗಳು ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಆರಂಭದಲ್ಲಿ ಎನ್​ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರ ಹೆಸರು ಕೇಳಿ ಬಂದಿತ್ತು. ಆದರೆ ಅವರು ಕೊಚ್​ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದರು. ಈ ವೇಳೆ ಗಂಭೀರ್​ ಕೋಚ್​ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು.

VISTARANEWS.COM


on

Team India Coach
Koo

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ನೂತನ ಕೋಚ್‌(Team India Coach) ಆಗಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌(Gautam Gambhir) ಅವರನ್ನೇ ನೇಮಕ ಮಾಡಲು ಬಿಸಿಸಿಐ(BCCI) ತೀರ್ಮಾನ ಕೈಗೊಂಡಿದ್ದು ಇದೇ ತಿಂಗಳ ಅಂತ್ಯದಲ್ಲಿ ಅಧಿಕೃತ ಘೋಷಣೆ ಮಾಡಲಿದೆ ಎಂದು ಕೆಲ ಆಂಗ್ಲ ಮಾಧ್ಯಮಗಳು ವರದಿ ಮಾಡಿದೆ. ರಾಹುಲ್​ ದ್ರಾವಿಡ್(Rahul Dravid)​ ಅವರು ಟಿ20 ವಿಶ್ವಕಪ್​ ಬಳಿಕ ಕೋಚ್(India Head Coach)​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ.

ದ್ರಾವಿಡ್​ ಅವರು ಕೋಚ್​ ಹುದ್ದೆಯಿಂದ ಕೆಳಗಿಳಿಯುವುದಾಗಿ ಹೇಳಿದ ಬೆನ್ನಲ್ಲೇ ಗಂಭೀರ್​ ಮುಂದಿನ ಕೋಚ್ ಎನ್ನುವ ಮಾತುಗಳು ಕೇಳಿಬಂದಿತ್ತು. ಐಪಿಎಲ್​ ವೇಳೆ ಇದಕ್ಕಾಗಿ ಜಯ್​ ಶಾ ಮತ್ತು ಬಿಸಿಸಿಐ ಅಧಿಕಾರಿಗಳು ಕೂಡ ಗಂಭೀರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮೂಲಗಳ ಪ್ರಕಾರ ಗಂಭೀರ್​ ಕೂಡ ಕೋಚ್​ ಆಗಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್‌ ತಂಡಕ್ಕೆ ಯಶಸ್ವಿ ಮಾರ್ಗದರ್ಶನ ನೀಡಿ ತಂಡವನ್ನು ಚಾಂಪಿಯನ್​ ಮಾಡಿದ ಗಂಭೀರ್‌, ರಾಹುಲ್‌ ದ್ರಾವಿಡ್‌ ಅವರ ಸ್ಥಾನ ತುಂಬಲು ಅರ್ಹರು ಎಂದು ಬಿಸಿಸಿಐ ಭಾವಿಸಿದೆ ಎಂದು ಮೂಲಗಳು ತಿಳಿಸಿವೆ.  ಮೂಲಗಳ ಪ್ರಕಾರ ಗಂಭೀರ್​ ಕೋಚ್​ ಆಗುವ ದೃಷ್ಟಿಯಿಂದಲೇ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಎನ್ನಲಾಗಿದೆ.

ಕಳೆದ ತಿಂಗಳು ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಆರಂಭದಲ್ಲಿ ಎನ್​ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರ ಹೆಸರು ಕೇಳಿ ಬಂದಿತ್ತು. ಆದರೆ ಅವರು ಕೊಚ್​ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದರು. ಈ ವೇಳೆ ಗಂಭೀರ್​ ಕೋಚ್​ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಅವರೇ ಕೋಚ್​ ಆಗುವುದು ಖಚಿತ ಎನ್ನುತ್ತಿದೆ ಮೂಲಗಳು. ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ India Coach: ಕೋಚ್​ ಆಗುವ ಮುನ್ನವೇ ಗಂಭೀರ್​ಗೆ ಕಿವಿಮಾತು ಹೇಳಿದ ಅನಿಲ್ ಕುಂಬ್ಳೆ

ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಭರ್ತಿ ಮಾಡುವ ಮುನ್ನ ಗಂಭೀರ್​ ಅವರು ​ಒಂದು ಷರತ್ತು ಹಾಕಿದ್ದರು. ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಗಂಭೀರ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಿದ್ಧರಿರುವುದಾಗಿ ಹೇಳಿದ್ದರು. ಕೋಚ್​ ಹುದ್ದೆಗಾಗಿ ಎಷ್ಟು ಅರ್ಜಿಗಳು ಬಂದಿದೆ ಎಂಬುದರ ಬಗ್ಗೆ ಸದ್ಯ ಯಾವುದೇ ಮಾಹಿತಿ ಹೊರಬಿದ್ದಿಲ್ಲ ಆದರೆ ಗಂಭೀರ್​ ಕೋಚ್​ ಆಗುವುದು ಖಚಿತ ಎನ್ನಲಾಗಿದೆ.

ದ್ರಾವಿಡ್ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕವೇ ಕೋಚ್​ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಆದರೆ, ಬಿಸಿಸಿಐ ಟಿ20 ವಿಶ್ವಕಪ್​ ತನಕ ಅವರನ್ನು ಮುಂದುವರಿಯುವಂತೆ ಒತ್ತಾಯ ಮಾಡಿತ್ತು. ಹೀಗಾಗಿ ದ್ರಾವಿಡ್​ ಟಿ20 ವಿಶ್ವಕಪ್ ತನಕ ಈ ಹುದ್ದೆಯಲ್ಲಿ ಮುಂದುವರಿದರು.

Continue Reading

ಕ್ರಿಕೆಟ್

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Pakistan Cricket Team: ಪಾಕ್​ ಮಾಧ್ಯಮ ವರದಿಗಳ ಪ್ರಕಾರ ಮಾಜಿ ಆಟಗಾರರು ಹಾಗೂ ಪಿಸಿಬಿ ಸದಸ್ಯರು ಆಟಗಾರರ ಸಂಬಳ ಕಡಿತಗೊಳಿಸಲು ಪಾಕ್​ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ಮೊಹ್ಸಿನ್​ ನಖ್ವಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Pakistan Cricket Team
Koo

ಇಸ್ಲಾಮಾಬಾದ್‌: ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ(T20 World Cup 2024) ಕಳಪೆ ಪ್ರದರ್ಶನ ತೋರುವ ಮೂಲಕ ಟೂರ್ನಿಯಿಂದ ಹೊರಬಿದ್ದು ಆಘಾತ ಕಂಡಿರುವ ಪಾಕಿಸ್ತಾನ ತಂಡದ(Pakistan Cricket Team) ಆಟಗಾರರಿಗೆ ಮತ್ತೊಂದು ಶಾಕ್​ ಎದುರಾಗಿದೆ. ಆಟಗಾರರ ವಾರ್ಷಿಕ ಸಂಭಾವನೆಯಲ್ಲಿ ಕಡಿತ ಮಾಡಲು ಪಾಕ್​ ಕ್ರಿಕೆಟ್​ ಮಂಡಳಿ(PCB) ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕ 5ಕ್ಕೆ ಏರಿಕೆಯಾಯಿತು. ಇದರಿಂದಾಗಿ ಐರ್ಲೆಂಡ್‌ ವಿರುದ್ಧ ಪಾಕ್‌ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ. ಟೂರ್ನಿಯಿಂದ ಹೊರಬಿದ್ದ ಪಾಕ್​ ತಂಡದ ವಿರುದ್ಧ ಮಾಜಿ ಆಟಗಾರರು ಭಾರೀ ಟೀಕೆ ವ್ಯಕ್ತಪಡಿಸಿದ್ದಾರೆ. ಈ ರೀತಿ ಪ್ರದರ್ಶನ ತೋರುದಕ್ಕಿಂತ ಟೂರ್ನಿಯಲ್ಲಿ ಪಾಲ್ಗೊಳ್ಳದೇ ಇದ್ದಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

ಪಾಕ್​ ಮಾಧ್ಯಮ ವರದಿಗಳ ಪ್ರಕಾರ ಮಾಜಿ ಆಟಗಾರರು ಹಾಗೂ ಪಿಸಿಬಿ ಸದಸ್ಯರು ಆಟಗಾರರ ಸಂಬಳ ಕಡಿತಗೊಳಿಸಲು ಪಾಕ್​ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ಮೊಹ್ಸಿನ್​ ನಖ್ವಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಪಾಕ್​ ಕ್ರಿಕೆಟ್​ ಮಂಡಳಿ ಕೂಡ ಈ ವಿಚಾರವನ್ನು ಗಂಭಿರವಾಗಿ ಪರಿಗಣಿಸಿದ್ದು ಉನ್ನತ ಮಟ್ಟದ ಸಭೆ ನಡೆಸಿ ಆಟಗಾರರ ಕೇಂದ್ರೀಯ ಗುತ್ತಿಗೆಯನ್ನು ಮರು ಪರಿಶೀಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ Pakistan Cricket Board: ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ ಜಾರಿಗೆ ತಂದ ಪಾಕ್​ ಕ್ರಿಕೆಟ್​ ಮಂಡಳಿ

ವೇತನ ಮಾತ್ರವಲ್ಲದೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನಿಯಮವನ್ನು ಜಾರಿಗೆ ತೆರಲಿದೆ ಎಂದು ತಿಳಿದುಬಂದಿದೆ. ಈ ನಿಯಮದ ಪ್ರಕಾರ ದೇಶಿ ಕ್ರಿಕೆಟ್‌ ಹಾಗೂ ಕೇಂದ್ರೀಯ ಗುತ್ತಿಗೆಗೆ ಸಹಿ ಮಾಡಿರುವ ಎಲ್ಲ ಪಾಕ್​ ಆಟಗಾರರು ವರ್ಷವೊಂದರಲ್ಲಿ ಪಾಕಿಸ್ತಾನ ಸೂಪರ್‌ ಲೀಗ್‌ (ಪಿಎಸ್‌ಎಲ್‌) ಹೊರತುಪಡಿಸಿ, ವಿದೇಶಗಳಲ್ಲಿ ನಡೆಯುವ ಎರಡು ಟಿ20 ಲೀಗ್‌ಗಳಲ್ಲಿ ಮಾತ್ರ ಭಾಗವಹಿಸಬಹುದಾಗಿದೆ.

ಪಾಕ್​ ತಂಡದ ವಿರುದ್ಧ ದೇಶದ್ರೋಹದ ಕೇಸ್‌


ನಿರಾಸದಾಯಕ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡದ ವಿರುದ್ಧ ಪಾಕ್‌ನ ಗುಜ್ರಾನ್ವಾಲಾ ನಗರದ ವಕೀಲರೊಬ್ಬರು ದೇಶದ್ರೋಹ ಕೇಸ್‌ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಕೇಸ್‌ನ ಬಗ್ಗೆ ಜೂನ್​ 21ಕ್ಕೆ ಮುನ್ನ ವರದಿ ಸಲ್ಲಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ ಎಂದು ತಿಳಿದುಬಂದಿದೆ. ಪಾಕ್‌ ತಂಡದ ಕಳಪೆ ಪ್ರದರ್ಶನದಿಂದ ಹಣ ವ್ಯರ್ಥವಾಗುತ್ತಿದೆ ಮತ್ತು ರಾಷ್ಟ್ರದ ನಂಬಿಕೆಗೆ ದ್ರೋಹ ಉಂಟಾಗಿದೆ. ಆಟಗಾರರು ದೇಶದ ಬಗ್ಗೆ ಗೌರವಕ್ಕಿಂತ ಆರ್ಥಿಕ ಲಾಭಕ್ಕೆ ಆದ್ಯತೆ ನೀಡಿದ್ದಾರೆ ಎಂದು ಅರ್ಜಿದಾರ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾಗಿ ವರದಿಯಾಗಿದೆ.

Continue Reading

ಕ್ರೀಡೆ

Grand Prix 2024 Competition: ಬೆಳ್ಳಿ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್

Grand Prix 2024 Competition: 2024ರ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ ಬಾಕ್ಸಿಂಗ್‌ನಲ್ಲಿ ಭಾರತ ಆರು ಕೋಟಾಗಳನ್ನು ಪಡೆದಿದ್ದು, ಅಮಿತ್ ಪಂಗಲ್ (51 ಕೆಜಿ), ನಿಶಾಂತ್ ದೇವ್ (71 ಕೆಜಿ), ನಿಖತ್ ಜರೀನ್ (50 ಕೆಜಿ), ಪ್ರೀತಿ ಪವಾರ್ (54 ಕೆಜಿ), ಜೈಸ್ಮಿನ್ ಲಂಬೋರಿಯಾ (57 ಕೆಜಿ), ಲೊವ್ಲಿನಾ ಬೊರ್ಗೊಹೈನ್ (75 ಕೆಜಿ) ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

VISTARANEWS.COM


on

Grand Prix 2024 Competition
Koo

ನವದೆಹಲಿ: ಟೋಕಿಯೊ ಒಲಿಂಪಿಕ್ ಪದಕ ವಿಜೇತೆ ಭಾರತೀಯ ಬಾಕ್ಸರ್(Indian boxer Lovlina Borgohain) ಲವ್ಲಿನಾ ಬೊರ್ಗೊಹೈನ್(Lovlina Borgohain) ಅವರು ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ ಟೂರ್ನಿಗೂ ಮುನ್ನ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಜೆಕ್ ಗಣರಾಜ್ಯದಲ್ಲಿ ನಡೆದ ಗ್ರ್ಯಾಂಡ್ ಪ್ರಿಕ್ಸ್ 2024 ಸ್ಪರ್ಧೆಯಲ್ಲಿ(Grand Prix 2024 Competition) ಬೆಳ್ಳಿ ಪದಕವನ್ನು ಜಯಿಸಿದ್ದಾರೆ. ಅವರ ಈ ಪ್ರದರ್ಶನ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಭರವಸೆಯನ್ನು ಹೆಚ್ಚಿಸುವಂತೆ ಮಾಡಿದೆ.

ಮಹಿಳಾ ವಿಭಾಗದ ಫೈನಲ್​ ಪಂದ್ಯದಲ್ಲಿ ಲವ್ಲಿನಾ ಚೀನಾದ ಲಿ ಕಿಯಾನ್ ವಿರುದ್ಧ ತೀವ್ರ ಹೋರಾಟ ನಡೆಸಿದರೂ ಕೂಡ 2-3 ಅಂಕಗಳ ಅಂತರದಿಂದ ಸೋತರು. ಇದಕ್ಕೂ ಮುನ್ನ ನಡೆದ ರೌಂಡ್​ ರಾಬಿನ್​ ಸುತ್ತಿನಲ್ಲಿ ಲವ್ಲಿನಾ ಇಂಗ್ಲೆಂಡ್‌ನ ಚಾಂಟಲ್ ರೀಡ್ ವಿರುದ್ಧ 3-2 ರಿಂದ ತನ್ನ ಮೊದಲ ಪಂದ್ಯವನ್ನು ಗೆದಿದ್ದರು. ಎರಡನೇ ಪಂದ್ಯದಲ್ಲಿ ಸೋಲು ಕಂಡಿದ್ದರು. 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೆಲ್ಟರ್‌ವೇಟ್ ವಿಭಾಗದಲ್ಲಿ ಲವ್ಲಿನಾ ಕಂಚಿನ ಪದಕವನ್ನು ಗೆದ್ದಿದ್ದರು.

2024ರ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ ಬಾಕ್ಸಿಂಗ್‌ನಲ್ಲಿ ಭಾರತ ಆರು ಕೋಟಾಗಳನ್ನು ಪಡೆದಿದ್ದು, ಅಮಿತ್ ಪಂಗಲ್ (51 ಕೆಜಿ), ನಿಶಾಂತ್ ದೇವ್ (71 ಕೆಜಿ), ನಿಖತ್ ಜರೀನ್ (50 ಕೆಜಿ), ಪ್ರೀತಿ ಪವಾರ್ (54 ಕೆಜಿ), ಜೈಸ್ಮಿನ್ ಲಂಬೋರಿಯಾ (57 ಕೆಜಿ), ಲೊವ್ಲಿನಾ ಬೊರ್ಗೊಹೈನ್ (75 ಕೆಜಿ) ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

ಟೋಕಿಯೊ 2020 ರ ಕಂಚಿನ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ (ಮಹಿಳೆಯರ 75 ಕೆಜಿ), ಎರಡು ಬಾರಿಯ ವಿಶ್ವ ಚಾಂಪಿಯನ್ ನಿಖತ್ ಜರೀನ್ (ಮಹಿಳೆಯರ 50 ಕೆಜಿ) ಮತ್ತು ಪ್ರೀತಿ ಪವಾರ್ (ಮಹಿಳೆಯರ 54 ಕೆಜಿ) ಕಳೆದ ವರ್ಷ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ತಮ್ಮ ಒಲಿಂಪಿಕ್ಸ್​ ಕೋಟಾಗಳನ್ನು ಗೆದ್ದಿದ್ದರು.

ಇದನ್ನೂ ಓದಿ Euro 2024: ಕ್ರೊವೇಷಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸ್ಪೇನ್

ಚಿನ್ನ ಗೆದ್ದ ಬಾಕ್ಸರ್​ಗಳಿಗೆ ಭಾರೀ ನಗದು ಪ್ರಶಸ್ತಿ ಘೋಷಣೆ


ಕೆಲವು ತಿಂಗಳ ಹಿಂದೆ ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ಪ್ರಕಟಿಸಿತ್ತು. ಇದೀಗ ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (International Boxing Association) ಕೂಡ ಮಹತ್ವದ ನಿರ್ಧಾರ ಕೈಗೊಂಡಿದ್ದು, ಚಿನ್ನ ಗೆಲ್ಲುವ ಪ್ರತಿಯೊಬ್ಬ ಬಾಕ್ಸರ್​ಗಳಿಗೆ 41.68 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಜತೆಗೆ ಕೋಚ್‌, ರಾಷ್ಟ್ರೀಯ ತಂಡಗಳಿಗೆ 10 ಲಕ್ಷ ನೀಡುವುದಾಗಿಯೂ ಪ್ರಕಟಿಸಿದೆ. ಆದರೆ, 2020ರ ಟೋಕಿಯೊ ಒಲಿಂಪಿಕ್ಸ್‌ ಬಾಕ್ಸಿಂಗ್ ಸ್ಪರ್ಧೆಗಳನ್ನು ಐಬಿಎ(IBA) ನೆರವಿಲ್ಲದೇ ಐಒಸಿಯೇ ಸಂಘಟಿಸಿತ್ತು. ಕ್ರೀಡಾ ಸಂಸ್ಥೆಗಳು ನೀಡುವ ಬಹುಮಾನ ಹಣಕ್ಕೂ ಐಒಸಿ ಸಮ್ಮತಿ ನೀಡಿಲ್ಲ.

ಪ್ಯಾರಿಸ್​ ಒಲಿಂಪಿಕ್ಸ್​ ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

Continue Reading
Advertisement
Euro 2024
ಕ್ರೀಡೆ8 mins ago

Euro 2024: ಡೆನ್ಮಾರ್ಕ್ ಸವಾಲನ್ನು ಮೆಟ್ಟಿ ನಿಂತೀತೇ ಸ್ಲೊವೇನಿಯಾ?; ಬಲಾಬಲ ಹೇಗಿದೆ?

Renuka Swamy murder
ಪ್ರಮುಖ ಸುದ್ದಿ9 mins ago

Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

Elon Musk
ಪ್ರಮುಖ ಸುದ್ದಿ51 mins ago

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Shootout Case
ಪ್ರಮುಖ ಸುದ್ದಿ54 mins ago

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

kusina mane
ರಾಮನಗರ55 mins ago

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Job Alert
ಉದ್ಯೋಗ1 hour ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

murder case in Bengaluru rural
ಬೆಂಗಳೂರು ಗ್ರಾಮಾಂತರ1 hour ago

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

V Cinemas multiplex inauguration by dolly dhanjay Ramesh arvind
ಸ್ಯಾಂಡಲ್ ವುಡ್1 hour ago

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

Petrol Diesel Price
ರಾಜಕೀಯ2 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Team India Coach
ಕ್ರೀಡೆ2 hours ago

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ3 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌