Site icon Vistara News

Wanindu Hasaranga : ಭಾರತ ವಿರುದ್ಧದ ಏಕ ದಿನ ಸರಣಿಗೆ ಲಂಕಾದ ಆಲ್​ರೌಂಡರ್​ ಔಟ್

Wanindu Hasaranga

ಬೆಂಗಳೂರು: ಭಾರತ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ನಡುವೆ ಶ್ರೀಲಂಕಾ ತಂಡಕ್ಕೆ ಮತ್ತೊಂದು ಆಘಾತವಾಗಿದೆ. ಇತ್ತೀಚಿನ ಬೆಳವಣಿಗೆ ಪ್ರಕಾರ ಆ ತಂಡದ ಸ್ಟಾರ್ ಆಲ್​ರೌಂಡರ್​ ವನಿಂದು ಹಸರಂಗ (Wanindu Hasaranga) ಅವರನ್ನು ಸರಣಿಯ ಉಳಿದ ಪಂದ್ಯಗಳಿಂದ ಹೊರಗಿಡಲಾಗಿದೆ. ಆಗಸ್ಟ್ 02 ರ ಶುಕ್ರವಾರ ಕೊಲಂಬೊದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ವೇಳೆ ಸ್ನಾಯುಸೆಳೆತದ ಗಾಯದಿಂದಾಗಿ ಹಸರಂಗ ಹೊರಗುಳಿದಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲಿಯೂ ಅವರು ಆಡಿಲ್ಲ. ಅವರು ಮೂರನೇ ಪಂದ್ಯಕ್ಖೂ ಲಭ್ಯರಿರುವುದಿಲ್ಲ.

ಲಂಕಾ ಲಯನ್ಸ್ ತಂಡವು ಈಗಾಗಲೇ ದುಷ್ಮಂತ ಚಮೀರಾ, ಮಥೀಶಾ ಪತಿರಾನಾ, ದಿಲ್ಶಾನ್ ಮಧುಶಂಕಾ ಅವರ ಬೌಲಿಂಗ್ ವಿಭಾಗದಲ್ಲಿ ಇಲ್ಲದಿರುವುದರಿಂದ ಇದು ದೊಡ್ಡ ಹಿನ್ನಡೆ ಎದುರಿಸುತ್ತಿದೆ. ಗಾಯದಿಂದಾಗಿ ಈ ಮೂವರೂ 50 ಓವರ್​​ಗಳ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಇದೀಗ ಅತ್ಯಂತ ಅನುಭವಿ ಬೌಲರ್ ಪ್ರಮುಖ ಸರಣಿಯಿಂದ ಹೊರಹಾಕಲ್ಪಟ್ಟಿದ್ದಾರೆ.

ಆತಿಥೇಯ ತಂಡಕ್ಕೆ ಹಸರಂಗ ಬದಲಿಗೆ ಜೆಫ್ರಿ ವಾಂಡರ್ಸೆ ಸೇರಿಕೊಂಡಿದ್ದಾರೆ. ಅವರು ಎರಡನೇ ಪಂದ್ಯದಲ್ಲಿ ಭಾರತದ 6 ವಿಕೆಟ್ ಉರುಳಿಸಿದ್ದಾರೆ. . ಬೌಲಿಂಗ್​ಗೆ ಸಂಬಂಧಿಸಿದಂತೆ ಹೇಳುವುದಾದರೆ ವಾಂಡರ್ಸೆ ಸ್ವತಃ ಲೆಗ್-ಸ್ಪಿನ್ನರ್ ಆಗಿರುವರ ಕಾರಣ ಹಸರಂಗ ಅವರಿಗೆ ಸೂಕ್ತ ಬದಲಿ ಆಟಗಾರರಾಗಿದ್ದಾರೆ. ಆದಾಗ್ಯೂ, ಅವರು ಬ್ಯಾಟಿಂಗ್​ನಲ್ಲಿ ವಿಶ್ವಾಸಾರ್ಹ ಸೇರ್ಪಡೆಯಾಗಿಲ್ಲ.

ಮೊದಲ ಪಂದ್ಯದಲ್ಲಿ ಹಸರಂಗ ಮೂರು ನಿರ್ಣಾಯಕ ವಿಕೆಟ್​ಗಳನ್ನು ಕಬಳಿಸುವ ಮೂಲಕ ಆತಿಥೇಯರ ಮೇಲೆ ಪ್ರಭಾವ ಬೀರಿದ್ದರು. ಆದಾಗ್ಯೂ, ಬ್ಯಾಟ್​​ಗನೊಂದಿಗೆ ಅವರ ಕೊಡುಗೆಗಳು ನಗಣ್ಯವಾಗಿದ್ದವು. ಇತ್ತೀಚಿನ ದಿನಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ದ್ವೀಪ ರಾಷ್ಟ್ರವು ಸರಣಿಯ ಉಳಿದ ಭಾಗಕ್ಕೆ ಲೆಗ್-ಸ್ಪಿನ್ನರ್ ಸೇವೆಯನ್ನು ತೀವ್ರವಾಗಿ ಕಳೆದುಕೊಳ್ಳಲಿದೆ,

ಜೆಫ್ರಿ ವಾಂಡರ್ಸೆ

ಲೆಗ್ ಸ್ಪಿನ್ನರ್ ಜೆಫ್ರಿ ವಾಂಡರ್ಸೆ ಅವರು ವನಿಂದು ಹಸರಂಗ ಬದಲಿಗೆ ಶ್ರೀಲಂಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ವರ್ಷದ ಜನವರಿಯಲ್ಲಿ ಜಿಂಬಾಬ್ವೆ ವಿರುದ್ಧದ ತವರು ಏಕದಿನ ಸರಣಿಯಲ್ಲಿ ವಾಂಡರ್ಸೆ ಕೊನೆಯ ಬಾರಿಗೆ ಶ್ರೀಲಂಕಾ ಪರ ಆಡಿದ್ದರು. 22 ಏಕದಿನ ಪಂದ್ಯಗಳನ್ನಾಡಿ 27 ವಿಕೆಟ್ ಕಬಳಿಸಿದ್ದಾರೆ. 34ರ ಹರೆಯದ ವಾಂಡರ್ಸೆ 1 ಟೆಸ್ಟ್ ಹಾಗೂ 14 ಟಿ20 ಪಂದ್ಯಗಳನ್ನು ಆಡಿದ್ದಾರೆ.

ಭಾರತಕ್ಕೆ ಸೋಲು

ಬೆಂಗಳೂರು : ಆತಿಥೇಯ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ (IND vs SL ODI ) ಎರಡನೇ ಪಂದ್ಯದಲ್ಲಿ ಭಾರತ ತಂಡ 32 ರನ್​ಗಳ ಸೋಲಿಗೆ ಒಳಗಾಗಿದೆ. ಲಂಕಾದ ಸ್ಪಿನ್ನರ್​ಗಳ ದಾಳಿಗೆ ನಲುಗಿದ ಭಾರತೀಯ ಬ್ಯಾಟರ್​ಗಳು ಸುಲಭವಾಗಿ ಶರಣಾದರು. ಪ್ರಮುಖವಾಗಿ ಕಳೆದ ಎರಡು ಪಂದ್ಯಗಳಲ್ಲಿ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ಪ್ರದರ್ಶನದ ಬಗ್ಗೆ ಟೀಕೆಗಳು ಕೇಳಿ ಬಂದವು. ಭಾರತ ಹಾಗೂ ಲಂಕಾ ನಡುವಿನ ಮೊದಲ ಪಂದ್ಯವು ಟೈ ಆಗಿತ್ತು. ಹೀಗಾಗಿ ಈ ಗೆಲುವಿನೊಂದಿಗೆ ಲಂಕಾ ತಂಡವು ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದುಕೊಂಡಿದೆ. ಮುಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಮಾತ್ರ ಭಾರತ ತಂಡದ ಮರ್ಯಾದೆ ಉಳಿಯಬಹುದು. ಇಲ್ಲವಾದರೆ ರೋಹಿತ್ ಶರ್ಮಾ ಬಳಗ ಮುಖಭಂಗ ಅನುಭವಿಸುವ ಎಲ್ಲ ಸಾಧ್ಯತೆಗಳಿವೆ.

ಇದನ್ನೂ ಓದಿ: Paris Olympics 2024 : ಆ.​​​ 5ರಂದು ಭಾರತದ ಅಥ್ಲೀಟ್​ಗಳು ಒಲಿಂಪಿಕ್ಸ್​ನ ಯಾವ ಸ್ಪರ್ಧೆಗಳಲ್ಲಿ ಕಣಕ್ಕಿಳಿಯಲಿದ್ದಾರೆ? ಇಲ್ಲಿದೆ ಎಲ್ಲ ಮಾಹಿತಿ

ಕೊಲೊಂಬೊದ ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಬ್ಯಾಟ್ ಮಾಡಿ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್​ಗೆ 240 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ.. ಓವರ್​ಗಳಲ್ಲಿ 42.2 ಓವರ್​ಗಳಲ್ಲಿ 208 ರನ್​ಗೆ ಆಲ್​ಔಟ್ ಆಗಿ ಸೋಲೊಪ್ಪಿಕೊಂಡಿತು. ಜೆಫ್ರಿ ವಂಡರ್ಸೆ 6 ವಿಕೆಟ್​ ಹಾಗೂ ಚರಿತ್ ಅಸಲಂಕಾ 3 ವಿಕೆಟ್ ಉರುಳಿಸಿ ಭಾರತ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಲಂಕಾ ಸ್ಪಿನ್ನರ್​ಗಳ ದಾಳಿಗೆ ನಿಯಮಿತವಾಗಿ ವಿಕೆಟ್​ ಕಳೆದುಕೊಂಡು ನಿರಾಸೆಗೆ ಒಳಗಾಯಿತು.

Exit mobile version