INDvsAUS : ನಮಗೆ ಸ್ಪಿನ್​ ಪಿಚ್​​ನಲ್ಲಿ ಆಡುವುದೇ ಇಷ್ಟ; ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದ ರೋಹಿತ್​ ಶರ್ಮಾ - Vistara News

ಕ್ರಿಕೆಟ್

INDvsAUS : ನಮಗೆ ಸ್ಪಿನ್​ ಪಿಚ್​​ನಲ್ಲಿ ಆಡುವುದೇ ಇಷ್ಟ; ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದ ರೋಹಿತ್​ ಶರ್ಮಾ

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ (INDvsAUS) ಮೊದಲು ಸ್ಪಿನ್ ಪಿಚ್​ ಆಯ್ಕೆ ಮಾಡಿಕೊಂಡಿರುವುದು ನಾವೇ ಎಂಬುದಾಗಿ ರೋಹಿತ್ ಶರ್ಮಾ ಹೇಳಿದ್ದಾರೆ.

VISTARANEWS.COM


on

We like playing on spin pitch; Rohit Sharma says criticism does not shake his head
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದೋರ್​ : ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಯ (INDvsAUS) ಮೂರನೇ ಪಂದ್ಯದಲ್ಲಿ ಭಾರತ ತಂಡ 9 ವಿಕೆಟ್​ಗಳ ಹೀನಾಯ ಸೋಲಿಗೆ ಒಳಗಾಗಿದೆ. ಇದರೊಂದಿಗೆ ಸರಣಿಯು 2-1 ಸಮಬಲ ಸಾಧಿಸಿದೆ. ಈ ಫಲಿತಾಂಶದ ಬಳಿಕ ಮಿತಿ ಮೀರಿ ಟರ್ನ್​ ಆಗುವು ಪಿಚ್​ನ ಕುರಿತು ಚರ್ಚೆಗಳು ಆರಂಭಗೊಂಡಿವೆ. ನಾಯಕ ರೋಹಿತ್​​ ಶರ್ಮಾ (Rohit Sharma) ಅವರಿಗೂ ಈ ಕುರಿತು ಪಂದ್ಯದ ಬಳಿಕ ಪ್ರಶ್ನೆ ಕೇಳಿದಾಗ ಅವರು ತೀಕ್ಷ್ಣವಾದ ಉತ್ತರ ಕೊಟ್ಟಿದ್ದಾರೆ. ಪಿಚ್ ಟರ್ನ್​ ಆಗುವುದು ಒಂದು ಸಂಗತಿಯೇ ಅಲ್ಲ. ನಮಗೆ ಫಲಿತಾಂಶ ದೊರಕಬೇಕು ಎಂದು ಅವರು ಹೇಳಿದ್ದಾರೆ.

ಹೋಳ್ಕರ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯ ಎರಡೂವರೆ ದಿನದಲ್ಲಿ ಮುಕ್ತಾಯ ಕಂಡಿತ್ತು. ಮೊದಲೆರಡು ಪಂದ್ಯಗಳಲ್ಲಿ ಭಾರತದ ಸ್ಪಿನ್ನರ್​ಗಳು ಪ್ರವಾಸಿ ಬಳಗವನ್ನು ಕಟ್ಟಿ ಹಾಕಿದ್ದರೆ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಸ್ಪಿನ್ನರ್​ಗಳು ಭಾರತದ ಬ್ಯಾಟರ್​ಗಳಿಗೆ ಕಡಿವಾಣ ಹಾಕಿದ್ದರು. ಒಟ್ಟಿನಲ್ಲಿ ಮೂರು ಪಂದ್ಯಗಳೂ ಮೂರು ದಿನಗಳ ಒಳಗೆ ಮುಕ್ತಾಯಗೊಂಡಿವೆ. ಹೀಗಾಗಿ ಭಾರತದಲ್ಲಿ ಪಿಚ್​ ಮಿತಿ ಮೀರಿ ಟರ್ನ್​ ತೆಗೆದುಕೊಳ್ಳುತ್ತಿರುವುದು ಸರಿಯಲ್ಲ ಎಂಬ ವಾದ ಶುರುವಾಗಿದೆ. ಇದನ್ನು ರೋಹಿತ್​ ಒಪ್ಪಿಲ್ಲ.

ಪ್ರತಿಯೊಂದು ಸೀರಿಸ್​ಗೆ ಮೊದಲು ಯಾವ ರೀತಿಯ ಪಿಚ್​ನಲ್ಲಿ ಆಡಲು ಬಯಸುತ್ತೇವೆ ಎಂಬುದನ್ನು ಚರ್ಚಿಸುತ್ತೇವೆ. ಅಂತೆಯೇ ಈ ಬಾರಿ ಸ್ಪಿನ್​ ಪಿಚ್ ಆಯ್ಕೆ ಮಾಡಿಕೊಂಡಿದ್ದೆವು. ಹಾಗೆಂದು ನಾವು ಬ್ಯಾಟರ್​​ಗಳ ಮೇಳೆ ಒತ್ತಡ ಹೇರುತ್ತಿದ್ದೇವೆ ಎಂದರ್ಥವಲ್ಲ. ನಾವು ಗೆದ್ದರೆ ಎಲ್ಲವೂ ಸರಿ ಇದೆ ಎಂದು ಅಂದುಕೊಳ್ಳುತ್ತೇವೆ. ಇಲ್ಲದಿದ್ದರೆ ನಮ್ಮ ಬ್ಯಾಟಿಂಗ್ ಬಗ್ಗೆ ಪ್ರಶ್ನಿಸುತ್ತೇವೆ ಎಂದು ರೋಹಿತ್​ ಶರ್ಮ ಪಂದ್ಯದ ಬಳಿಕದ ಪತ್ರಿಕಾಗೋಷ್ಠಿಯಲ್ಲಿ ತೀಕ್ಷ್ಣ ಉತ್ತರ ಕೊಟ್ಟಿದ್ದಾರೆ.

ಇದನ್ನೂ ಓದಿ : IND VS AUS: ಮೂರನೇ ಟೆಸ್ಟ್​ನಲ್ಲಿ ರೋಹಿತ್​ ಶರ್ಮಾ ಜತೆಗಾರ ಯಾರು?; ಇಕ್ಕಟ್ಟಿನ ಸ್ಥಿತಿಯಲ್ಲಿ ಆಯ್ಕೆ ಸಮಿತಿ

ಪಿಚ್​ ಕುರಿತು ಚರ್ಚೆ ನಡೆಸುವ ಪ್ರವೃತ್ತಿ ಹೆಚ್ಚಾಗಿದೆ. ನಾವು ಯಾವತ್ತೂ ಪಿಚ್​ ಕುರಿತು ಗಮನ ಕೇಂದ್ರೀಕರಿಸುವುದಿಲ್ಲ. ಬದಲಾಗಿ ಆಟಕ್ಕೆ ಗಮನ ನೀಡುತ್ತೇವೆ. ಪಿಚ್​ ಕುರಿತು ಟೀಕೆ ಮಾಡುತ್ತಿರುವ ಮಾಜಿ ಕ್ರಿಕೆಟಿಗರು ಇಂಥ ಪಿಚ್​ಗಳಲ್ಲಿ ಆಡಿದ್ದಾರೋ ಎಂಬುದು ಗೊತ್ತಿಲ್ಲ. ಆದರೆ, ನಮಗೆ ಇಂಥ ಸವಾಲಿನ ಪಿಚ್​ನಲ್ಲಿ ಆಡುವುದೇ ಇಷ್ಟ. ಸ್ಪಿನ್​ಗೆ ಆಡುವುದೇ ನಮ್ಮ ಸಾಮರ್ಥ್ಯ. ತವರಿನ ಸರಣಿಯಲ್ಲಿ ನಾವು ಸ್ಪಿನ್​ಗೆ ಆಡುವುದನ್ನೇ ಬಯಸುತ್ತೇವೆ. ಹೊರಗಿನ ವ್ಯಕ್ತಿಗಳ ಏನು ಹೇಳುತ್ತಾರೆ ಎಂಬುದನ್ನು ಗಮನ ಹರಿಸುವುದಿಲ್ಲ ಎಂದು ರೋಹಿತ್​ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

T20 World Cup 2024: ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

VISTARANEWS.COM


on

T20 World Cup 2024
Koo

ಸಿಡ್ನಿ: ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ(IPL 2024) ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಪರ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಭಾರೀ ಸಂಚಲನ ಸೃಷ್ಟಿಸಿದ್ದ ಯುವ ಬ್ಯಾಟರ್​ ಜೇಕ್ ಫ್ರೇಸರ್-ಮೆಕ್‌ಗುರ್ಕ್(Jake Fraser-McGurk) ಅವರನ್ನು ಕೊನೆಗೂ ಕ್ರಿಕೆಟ್​ ಆಸ್ಟ್ರೇಲಿಯಾ ಮುಂದಿನ ತಿಂಗಳು ಆರಂಭಗೊಳ್ಳಲಿರುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಪ್ರಯಾಣದ ಮೀಸಲು ಆಟಗಾರನಾಗಿ ಆಯ್ಕೆ ಮಾಡಿದೆ. ಇವರ ಜತೆಗೆ ಮ್ಯಾಟ್ ಶಾರ್ಟ್ ಕೂಡ ಅವಕಾಶ ಪಡೆದಿದ್ದಾರೆ. ಉಭಯ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸಿದ ವಿಚಾರವನ್ನು ಕ್ರಿಕೆಟ್​ ಆಸ್ಟ್ರೇಲಿಯಾ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿದೆ. ಆಸ್ಟ್ರೇಲಿಯಾ(Australia T20 World Cup squad) ತನ್ನ ಮೊದಲ ಪಂದ್ಯವನ್ನು ಜೂನ್​ 3ರಂದು ಉಗಾಂಡ ವಿರುದ್ಧ ಆಡಲಿದೆ.

ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. 

ಡೆಲ್ಲಿ ತಂಡದ ಪರ ಅತಿ ಕಡಿಮೆ ಎಸೆತಗಳಿಂದ ಅರ್ಧಶತಕ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಫ್ರೇಸರ್-ಮೆಕ್‌ಗುರ್ಕ್ ಪಾತ್ರರಾಗಿದ್ದರು. ಜತೆಗೆ ಈ ಆವೃತ್ತಿಯ ಐಪಿಎಲ್​ನಲ್ಲಿ ಅತಿ ಕಡಿಮೆ ಎಸೆತಗಳಿಂದ(15) ಅರ್ಧಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಕೂಡ ಬರೆದಿದ್ದರು. ಈ ಬಾರಿ ಒಟ್ಟು 9 ಐಪಿಎಲ್​ ಪಂದ್ಯಗಳನ್ನಾಡಿದ ಮೆಕ್‌ಗುರ್ಕ್ 330 ರನ್​ ಬಾರಿಸಿದ್ದಾರೆ. 84 ರನ್​ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

ಇದನ್ನೂ ಓದಿ T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

ಲುಂಗಿ ಎನ್‌ಗಿಡಿ ಬದಲಿಗೆ ಆಲ್​ರೌಂಡರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್(Jake Fraser-McGurk) ಅವರನ್ನು ಡೆಲ್ಲಿ ತಂಡ ಬದಲಿ ಆಟಗಾರನಾಗಿ ಮೂಲಬೆಲೆ 50 ಲಕ್ಷ ರೂ.ಗೆ ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು. ಮೆಕ್‌ಗುರ್ಕ್ ಲಿಸ್ಟ್ ಎ ಪಂದ್ಯದಲ್ಲಿ ಕೇವಲ 29 ಎಸೆತದಲ್ಲಿ ಶತಕ ಬಾರಿಸಿ ಅತ್ಯಂತ ವೇಗದ ಶತಕದ ವಿಶ್ವದಾಖಲೆ ಬರೆದಿದ್ದರು. ಈ ಬಾರಿಯ ಐಪಿಎಲ್​ನಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿಸಿದ್ದರು. ಮುಂದಿನ ಬಾರಿ ಇವರಿಗೆ ಹರಾಜಿನಲ್ಲಿ ದುಬಾರಿ ಬೆಲೆ ಸಿಗುವ ಸಾಧ್ಯತೆ ಇದೆ.

ಮಿಚೆಲ್​ ಮಾರ್ಷ್​ ತಂಡದ ನಾಯಕನಾಗಿದ್ದಾರೆ.

ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್, ಟಿಮ್‌ ಡೇವಿಡ್ ಅವರನ್ನು ಬ್ಯಾಟಿಂಗ್​ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ಗ್ಲೆನ್​ ಮ್ಯಾಕ್ಸ್‌ವೆಲ್‌, ಮಾರ್ಕಸ್ ಸ್ಟೊಯಿನಿಸ್, ಕ್ಯಾಮರೂನ್ ಗ್ರೀನ್ ತಂಡದ ಸ್ಟಾರ್​ ಆಲ್​ರೌಂಡರ್​ಗಳಾಗಿದ್ದಾರೆ. ಸ್ಪಿನ್ಸ್‌ ಬೌಲರ್​ಗಳಾಗಿ ಆ್ಯಡಂ ಝಂಪಾ ಮತ್ತು ಆ್ಯಶ್ಟನ್​ ಅಗರ್ ಸ್ಥಾನ ಪಡೆದಿದ್ದಾರೆ. ವೇಗಿಗಳಾಗಿ ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ. ಪ್ರಯಾಣದ ಮೀಸಲು ಆಟಗಾರರು: ಮ್ಯಾಟ್ ಶಾರ್ಟ್, ಜೇಕ್ ಫ್ರೇಸರ್-ಮೆಕ್‌ಗುರ್ಕ್

Continue Reading

ಕ್ರೀಡೆ

Rohit Sharma: ಖಾಸಗಿತನಕ್ಕೆ ಧಕ್ಕೆ ಆರೋಪ ಮಾಡಿದ ರೋಹಿತ್​ಗೆ ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್

Rohit Sharma: ರೋಹಿತ್​ ಶರ್ಮ(Rohit Sharma) ಅವರ ಈ ಆರೋಪಕ್ಕೆ ಇದೀಗ ಸ್ಟಾರ್‌ಸ್ಪೋರ್ಟ್ಸ್ ಸ್ಪಷ್ಟನೆ ನೀಡಿದ್ದು, ರೋಹಿತ್‌ ಮಾತನಾಡಿರುವ ಯಾವುದೇ ಖಾಸಗಿ ಆಡಿಯೋಗಳನ್ನು ಪ್ರಸಾರ ಮಾಡಿಲ್ಲ ಎಂದು ಹೇಳಿದೆ.

VISTARANEWS.COM


on

Rohit Sharma
Koo

ಮುಂಬಯಿ: ಐಪಿಎಲ್‌(IPL 2024) ಪ್ರಸಾರಕರಿಂದ ತನ್ನ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ಟ್ವೀಟ್​ ಮೂಲಕ ಸ್ಟಾರ್‌ಸ್ಪೋರ್ಟ್ಸ್(Star Sports) ವಿರುದ್ಧ ಗಂಭೀರ ಆರೋಪ ಮಾಡಿದ್ದ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಅವರ ಈ ಆರೋಪಕ್ಕೆ ಇದೀಗ ಸ್ಟಾರ್‌ಸ್ಪೋರ್ಟ್ಸ್ ಸ್ಪಷ್ಟನೆ ನೀಡಿದ್ದು, ರೋಹಿತ್‌ ಮಾತನಾಡಿರುವ ಯಾವುದೇ ಖಾಸಗಿ ಆಡಿಯೋಗಳನ್ನು ಪ್ರಸಾರ ಮಾಡಿಲ್ಲ ಎಂದು ಹೇಳಿದೆ.

ಕೋಲ್ಕತಾ ನೈಟ್​ ರೈಡರ್ಸ್​ ತಂಡದ ಸಹಾಯಕ ಕೋಚ್‌ ಜತೆ ರೋಹಿತ್‌ ಮಾತನಾಡುತ್ತ ಕುಳಿತ್ತಿದ್ದ ವೀಡಿಯೋವನ್ನು ಪ್ರಸಾರ ಮಾಡಲಾಗಿತ್ತು. ಇದಾದ ಬಳಿಕ ರೋಹಿತ್​ ಮುಂಬೈಯಲ್ಲಿ ನಡೆದಿದ್ದ ಐಪಿಎಲ್​​ ಪಂದ್ಯದ ವೇಳೆ ಧವಳ್ ಕುಲಕರ್ಣಿ ಅವರೊಂದಿಗೆ ಸಂಭಾಷಣೆ ನಡೆಸಿದ್ದರು. ಇದನ್ನು ರೆಕಾರ್ಡ್​ ಮಾಡುತ್ತಿರುವಾಗ ಕ್ಯಾಮೆರಾಮನ್​ಗೆ ಆಡಿಯೊ ಆಫ್​ ಮಾಡಿ ಎಂದು ಕೋರಿಕೊಂಡಿದ್ದರು.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

ಇದೇ ವಿಚಾರವಾಗಿ ರೋಹಿತ್​ ಟ್ವೀಟ್​ ಮಾಡಿ ‘ತನ್ನ ವಿನಂತಿಯ ಹೊರತಾಗಿಯೂ, ಸ್ಟಾರ್ ಸ್ಪೋರ್ಟ್ಸ್ ನಾನು ತಂಡದ ಸಹ ಆಟಗಾರರು ಮತ್ತು ಸಹೋದ್ಯೋಗಿಗಳೊಂದಿಗೆ ಆಡಿದ ವೈಯಕ್ತಿಕ ಮಾತುಕತೆಗಳ ಆಡಿಯೊ ಮತ್ತು ವಿಡಿಯೊ ತುಣುಕನ್ನು ಹಂಚಿಕೊಳ್ಳುವುದನ್ನು ಸ್ಟಾರ್ ಸ್ಪೋರ್ಟ್ಸ್ ಮುಂದುವರೆಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್​ ಹುಟ್ಟಿಸುವ ಸಲುವಾಗಿ ಪ್ರಸಾರಕರು ಈ ರೀತಿ ಕ್ರಿಕೆಟಿಗರ ಗೌಪ್ಯತೆಗೆ ಅಡ್ಡಿಪಡಿಸುವುದು ಸರಿಯಲ್ಲ. ಸ್ವಲ್ಪವಾದರೂ ಸಾಮಾನ್ಯ ಜ್ಞಾನ ಇರಬೇಕು” ಎಂದು ಟ್ವೀಟ್​ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದರು.

ಕ್ರಿಕೆಟಿಗರ ಜೀವನವು ಎಷ್ಟು ಗೊಂದಲವಾಗಿದೆ ಎಂದರೆ, ಈಗ ನಾವು ನಮ್ಮ ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ, ತರಬೇತಿ ಅಥವಾ ಪಂದ್ಯದ ದಿನಗಳಲ್ಲಿ ಗೌಪ್ಯವಾಗಿ ಮಾತನಾಡು ಕೂಡ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಾನು ನಡೆಸುವ ಪ್ರತಿಯೊಂದು ಸಂಭಾಷಣೆಯನ್ನು ಕೂಡ ಕ್ಯಾಮೆರಾಗಳು ರೆಕಾರ್ಡ್ ಮಾಡುತ್ತಿವೆ. ಇದು ಒಳ್ಳೆಯ ವಾತಾವರಣವಲ್ಲ ಎಂದು ರೋಹಿತ್​ ಬೇಸರ ವ್ಯಕ್ತಪಡಿಸಿದ್ದರು.

ಈ ಕುರಿತು ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್, ‘ಇದರಲ್ಲಿ ಯಾವುದೇ ಧ್ವನಿ ಇರಲಿಲ್ಲ. ಅಲ್ಲದೇ ನಮಗೆ ಅನುಮತಿ ನೀಡಿದ ಜಾಗದಲ್ಲೇ ಚಿತ್ರೀಕರಣ ಮಾಡಲಾಗಿತ್ತು. ಚಿತ್ರೀಕರಣದ ವೇಳೆಯಲ್ಲೂ ಧ್ವನಿ ಮುದ್ರಿಸಲಾಗಿರಲಿಲ್ಲ’ ಎಂದು ಹೇಳಿದೆ.

ನಾಯಕತ್ವದ ಕರ್ತವ್ಯಗಳಿಂದ ಮುಕ್ತರಾದ ನಂತರ ರೋಹಿತ್ ಈ ಬಾರಿ ದೊಡ್ಡ ಸ್ಕೋರ್ ಮಾಡುತ್ತಾರೆ ಎಂದು ಅನೇಕರು ನಿರೀಕ್ಷಿಸಿದ್ದರು. ಆದರೆ ಈ ನಿರೀಕ್ಷೆಗಳಲ್ಲೆ ಹುಸಿಯಾಗಿತ್ತು. ರೋಹಿತ್​ ಈ ಬಾರಿ 1 ಶತಕ ಬಾರಿಸಿದ್ದು ಬಿಟ್ಟರೆ ಉಳಿದ ಬಹುತೇಕ ಪಂದ್ಯಗಳಲ್ಲಿಯೂ ಕಳಪೆ ಪ್ರದರ್ಶನ ತೋರಿದ್ದರು. ಐಪಿಎಲ್​​ ವೇದಿಕೆಯಲ್ಲಿ ಮಿಂಚಲು ಸಾಧ್ಯವಾಗದಿದ್ದರೂ, ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ರೋಹಿತ್ ದೊಡ್ಡ ಮೊತ್ತವನ್ನು ಗಳಿಸಲು ಎದುರು ನೋಡುತ್ತಿದ್ದಾರೆ.

ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

Continue Reading

ಕ್ರೀಡೆ

KKR vs SRH: ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ: ಅಯ್ಯರ್​-ಕಮಿನ್ಸ್​ ಪಡೆಗಳ ಫೈನಲ್‌ ರೇಸ್‌

KKR vs SRH: ಆಸ್ಟ್ರೇಲಿಯಾದ ಎಡಗೈ ಬ್ಯಾಟರ್​ ಟ್ರಾವಿಸ್​ ಹೆಡ್​ ಇದೇ ಸ್ಟೇಡಿಯಂನಲ್ಲಿ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಶತಕದ ಆಟವಾಡುವ ಮೂಲಕ ಭಾರತದ ಗೆಲುವನ್ನು ಕಸಿದಿದ್ದರು. ಹೀಗಾಗಿ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿಯೂ ಅವರ ಬ್ಯಾಟಿಂಗ್​ ಮೇಲೆ ಭಾರೀ ನಿರೀಕ್ಷೆ ಇರಿಸಲಾಗಿದೆ

VISTARANEWS.COM


on

KKR vs SRH
Koo

ಅಹಮದಾಬಾದ್​: 17ನೇ ಆವೃತ್ತಿಯ ಐಪಿಎಲ್​ನ(IPL 2024) ಮೊದಲ ಕ್ವಾಲಿಫೈಯರ್(KKR vs SRH) ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಪಂದ್ಯದಲ್ಲಿ ಕೆಕೆಆರ್​(Kolkata Knight Riders) ಮತ್ತು ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡಗಳು ಕಾದಾಟ ನಡೆಸಲಿದೆ. ಇತ್ತಂಡಗಳ ಈ ಹೋರಾಟಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಅಣಿಯಾಗಿದೆ. ಸೋಮವಾರ ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳವು (ATS) ಅಹಮದಾಬಾದ್‌ ಏರ್‌ಪೋರ್ಟ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರನ್ನು (ISIS Terrorists) ಬಂಧಿಸಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಇತ್ತಂಡಗಳಲ್ಲಿ ಕೆಕೆಆರ್​ ಲೀಗ್‌ ಹಂತದ ಅಗ್ರಸ್ಥಾನಿ ಎಂಬ ಹೆಗ್ಗಳಿಕೆ ಇದೆ. ಅಷ್ಟೇ ಅಲ್ಲ, ಲೀಗ್‌ ಹಂತದಲ್ಲಿ ಎದುರಾದ ಒಂದು ಪಂದ್ಯಗಳಲ್ಲಿ ಹೈದರಾಬಾದ್​ಗೆ 4 ರನ್​ ಅಂತರದ ಸೋಲುಣಿಸಿದ ಹಿರಿಮೆಯನ್ನೂ ಹೊಂದಿದೆ. ಜತೆಗೆ ಉಭಯ ತಂಡಗಳು 26 ಬಾರಿ ಮುಖಾಮುಖಿಯಾಗಿದ್ದು ಈ ಪೈಕಿ ಕೆಕೆಆರ್​ 17 ಪಂದ್ಯ ಗೆದ್ದಿದೆ. ಹೈದರಾಬಾದ್​ ಗೆದ್ದಿರುವುದು ಕೇವಲ 9 ಪಂದ್ಯ ಮಾತ್ರ. ಈ ಲೆಕ್ಕಾಚಾರದಲ್ಲಿ ಕೆಕೆಆರ್​ ನೆಚ್ಚಿನ ತಂಡ ಎಂಬುದರಲ್ಲಿ ಅನುಮಾನವಿಲ್ಲ.

ಹೆಡ್​-ಅಭಿಷೇಕ್​ ಮೇಲೆ ಭಾರೀ ನಿರೀಕ್ಷೆ


ಆಸ್ಟ್ರೇಲಿಯಾದ ಎಡಗೈ ಬ್ಯಾಟರ್​ ಟ್ರಾವಿಸ್​ ಹೆಡ್​ ಇದೇ ಸ್ಟೇಡಿಯಂನಲ್ಲಿ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಶತಕದ ಆಟವಾಡುವ ಮೂಲಕ ಭಾರತದ ಗೆಲುವನ್ನು ಕಸಿದಿದ್ದರು. ಹೀಗಾಗಿ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿಯೂ ಅವರ ಬ್ಯಾಟಿಂಗ್​ ಮೇಲೆ ಭಾರೀ ನಿರೀಕ್ಷೆ ಇರಿಸಲಾಗಿದೆ. ಜತೆಗೆ 25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ ಬ್ಯಾಟಿಂಗ್​ ಮೇಲು ತಂಡ ಹೆಚ್ಚಿನ ನಂಬಿಕೆ ಇರಿಸಿದೆ.

ಈ ಆವೃತ್ತಿಯ ಐಪಿಎಲ್​ನಲ್ಲಿ ಹೆಡ್ ಮತ್ತು ಅಭಿಷೇಕ್​ ​​ ಜಿದ್ದಿಗೆ ಬಿದ್ದವತರಂತೆ ಬ್ಯಾಟ್​ ಬೀಸಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಈ ಜೋಡಿ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರುವುದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಈ ಜೋಡಿ ಲೀಗ್​ನಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ 5 ಓವರ್​ನಲ್ಲಿಯೇ 100ರ ಗಡಿ ದಾಟಿದ ದಾಖಲೆಯನ್ನು ಕೂಡ ಹೊಂದಿದ್ದಾರೆ. ಅಭಿಷೇಕ್​ ಶರ್ಮ ಈ ಬಾರಿಯ ಕೂಟದಲ್ಲಿ 41 ಸಿಕ್ಸರ್​ ಬಾರಿಸಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್​ ಕ್ಲಾಸೆನ್​, ಐಡೆನ್​ ಮಾರ್ಕ್ರಮ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಬೌಲಿಂಗ್​ನಲ್ಲಿ ನಾಯಕ ಪ್ಯಾಟ್​ ಕಮಿನ್ಸ್​, ಭುವನೇಶ್ವರ್​ ಕುಮಾರ್​, ಟಿ. ನಟರಾಜನ್​ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

ಕೆಕೆಆರ್​ ಕೂಡ ಸಮರ್ಥ ತಂಡ


ಗೌತಮ್​ ಗಂಭಿರ್​ ಅವರ ಮಾರ್ಗದರ್ಶನ ಮತ್ತು ಆಟಗಾರರ ಸಂಘಟಿತ ಪ್ರದರ್ಶನ ಕೆಕೆಆರ್​ ಪಾಲಿನ ಬಲ. ಅದರಲ್ಲೂ ಆಲ್​ರೌಂಡರ್​ ಸುನೀಲ್​ ನರೈನ್​ ಅವರಂತು ಈ ಬಾರಿ ಪ್ರಚಂಡ ಫಾರ್ಮ್​ನಲ್ಲಿದ್ದಾರೆ. ತಂಡಕ್ಕೆ ಹಿನ್ನಡೆಯಾಗಿರುವುದೆಂದರೆ ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದು. ಹೀಗಾಗಿ ಅವರ ತಂಡ ಇವರ ಸೇವೆ ಕಳೆದುಕೊಂಡಿದೆ. ಇವರ ಸ್ಥಾನದಲ್ಲಿ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಈ ಪಂದ್ಯದಲ್ಲಿ ಆಡಲಿದ್ದಾರೆ. ಮೊದಲ ಪಂದ್ಯವನ್ನಾಡುತ್ತಿರುವ ಕಾರಣ ಅವರ ಫಾರ್ಮ್​ ಹೇಗಿರಲಿದೆ ಎನ್ನುವುದು ಕೂಡ ಇಲ್ಲಿ ಮುಖ್ಯವಾಗಿದೆ.

ಇದನ್ನೂ ಓದಿ KKR vs SRH: ಕೆಕೆಆರ್​-ಹೈದರಾಬಾದ್​ ಕ್ವಾಲಿಫೈಯರ್​ ಪಂದ್ಯದ ಹವಾಮಾನ ವರದಿ ಹೇಗಿದೆ?

ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರಿದ್ದಾರೆ. ಯುವ ಆಟಗಾರ ಆಂಗ್ಕ್ರಿಶ್ ರಘುವಂಶಿ, ಗಾಯದಿಂದ ಚೇತರಿಕೆ ಕಂಡು ಕಮ್​ಬ್ಯಾಕ್​ ಮಾಡಿರುವ ನಿತೇಶ್​ ರಾಣಾ, ವೆಂಕಟೇಶ್​ ಅಯ್ಯರ್​ ಮತ್ತು ನಾಯಕ ಶ್ರೇಯಸ್​ ಅಯ್ಯರ್​ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ನೆರವು ನೀಡಲಿದ್ದಾರೆ. ರಿಂಕು ಸಿಂಗ್​ ಕಳೆದ ಆವೃತ್ತಿಯಲ್ಲಿ ತೋರಿದ ಪ್ರದರ್ಶನ ಇದುವರೆಗೂ ತೋರಿಲ್ಲ. ಹೀಗಾಗಿ ಈ ಮಹತ್ವದ ಪಂದ್ಯದಲ್ಲಿ ಅವರು ಅಬ್ಬರಿಸುವ ಅನಿವಾರ್ಯತೆ ಇದೆ. 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಈ ಪಂದ್ಯದಲ್ಲಾದರೂ ತಾವು ಪಡೆದ ಈ ಮೊತ್ತಕ್ಕೆ ನ್ಯಾಯ ಒದಗಿಸಲೇ ಬೇಕು. ದುಬಾರಿ ಮೊತ್ತ ಪಡೆದರೂ ಕೂಡ ಅವರಿಂದ ನಿರೀಕ್ಷಿತ ಪ್ರದರ್ಶನ ಕಂಡುಬಂದಿಲ್ಲ.

Continue Reading

ಕ್ರೀಡೆ

KKR vs SRH: ಕೆಕೆಆರ್​-ಹೈದರಾಬಾದ್​ ಕ್ವಾಲಿಫೈಯರ್​ ಪಂದ್ಯದ ಹವಾಮಾನ ವರದಿ ಹೇಗಿದೆ?

KKR vs SRH: ಹವಾಮಾನ ವರದಿಯ ಪ್ರಕಾರ ಪಂದ್ಯಕ್ಕೆ ಯಾವುದೇ ಮಳೆಯ ಭೀತಿ ಇಲ್ಲ. ಹೀಗಾಗಿ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ. ಒಂದೊಮ್ಮೆ ಮಳೆ ಬಂದರೂ ಕೂಡ ಚಿಂತಿಸುವ ಅಗತ್ಯವಿಲ್ಲ ಏಕೆಂದರೆ ಮೀಸಲು ದಿನ ಇದೆ. ಮಳೆಯಿಂದ ಇಂದು ಪಂದ್ಯ ಸಾಗದಿದ್ದರೂ ಕೂಡ ಮೀಸಲು ದಿನಕ್ಕೆ ಮುಂದುವರಿಯಲಿದೆ.

VISTARANEWS.COM


on

KKR vs SRH:
Koo

ಅಹಮದಾಬಾದ್​​: ಇಂದು ನಡೆಯುವ ಐಪಿಎಲ್​ನ(IPL 2024) ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಅಗ್ರಸ್ಥಾನಿ ಕೋಲ್ಕತ್ತಾ ನೈಟ್​ ರೈಡರ್ಸ್(KKR vs SRH)​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ಕಾದಾಟ ನಡೆಸಲಿದೆ. ಗೆದ್ದ ತಂಡ ನೇರವಾಗಿ ಫೈನಲ್​ ಪ್ರವೇಶಿಸಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶವಿದ್ದು, ಎಲಿಮಿನೇಟರ್​ ಪಂದ್ಯದ ವಿಜೇತರನ್ನು ಎದುರಿಸಲಿದ್ದಾರೆ. ಇಂದಿನ ಕ್ವಾಲಿಫೈಯರ್​ ಪಂದ್ಯದ ಹವಾಮಾನ(ahmedabad weather) ವರದಿಯ ಪ್ರಕಾರ ಪಂದ್ಯಕ್ಕೆ ಯಾವುದೇ ಮಳೆ ಭೀತಿ ಇಲ್ಲ.

ಹವಾಮಾನ ವರದಿ


ಹವಾಮಾನ ವರದಿಯ ಪ್ರಕಾರ ಪಂದ್ಯಕ್ಕೆ ಯಾವುದೇ ಮಳೆಯ ಭೀತಿ ಇಲ್ಲ. ಹೀಗಾಗಿ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ. ಇದೇ ಮೈದಾನದಲ್ಲಿ ನಡೆಯಬೇಕಿದ್ದ ಒಂದು ಲೀಗ್​ ಪಂದ್ಯ ರದ್ದಾಗಿತ್ತು. ಇದು ಕೆಕೆಆರ್​ ಮತ್ತು ಗುಜರಾತ್​ ನಡುವಣ ಪಂದ್ಯವಾಗಿತ್ತು. ಮಳೆಯಿಂದ ಟಾಸ್​ ಕೂಡ ಆಗದೆ ರದ್ದಾಗಿತ್ತು. ಒಂದೊಮ್ಮೆ ಮಳೆ ಬಂದರೂ ಕೂಡ ಚಿಂತಿಸುವ ಅಗತ್ಯವಿಲ್ಲ ಏಕೆಂದರೆ ಮೀಸಲು ದಿನ ಇದೆ. ಮಳೆಯಿಂದ ಇಂದು ಪಂದ್ಯ ಸಾಗದಿದ್ದರೂ ಕೂಡ ಮೀಸಲು ದಿನಕ್ಕೆ ಮುಂದುವರಿಯಲಿದೆ.

ಪಿಚ್​ ರಿಪೋರ್ಟ್​


ವಿಶ್ವದ ಅತಿ ದೊಡ್ಡ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನೇರ ಬೌಂಡರಿಗಳಿಗೆ ಸರಾಸರಿ 75 ಮೀಟರ್ ಮತ್ತು ಚದರ ಗಡಿಗಳಿಗೆ 60 ಮೀಟರ್ ಉದ್ದವನ್ನು ಹೊಂದಿದೆ. ಇಲ್ಲಿ ಇದುವರೆಗೆ 33 ಐಪಿಎಲ್​ ಪಂದ್ಯಗಳು ನಡೆದಿದ್ದು 15 ಬಾರಿ ಮೊದಲು ಬ್ಯಾಟಿಂಗ್​ ಮಾಡಿದ ತಂಡ, 18 ಬಾರಿ ಚೇಸಿಂಗ್​ ನಡೆಸಿದ ತಂಡಗಳು ಗೆದ್ದಿವೆ. ಇಲ್ಲಿ ದಾಖಲಾದ ಗರಿಷ್ಠ ಒತ್ತ 233 ರನ್​. ಮುಂಬೈ ಮತ್ತು ಗುಜರಾತ್ ನಡುವಣ ಪಂದ್ಯದಲ್ಲಿ ಈ ಮೊತ್ತ ದಾಖಲಾಗಿತ್ತು.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

ಮುಖಾಮುಖಿ


ಉಭಯ ತಂಡಗಳ ಐಪಿಎಲ್​ ಇತಿಹಾಸ ನೋಡುವಾಗ ಕೆಕೆಆರ್​ ಬಲಿಷ್ಠವಾಗಿದೆ. ಇದುವರೆಗೆ 26 ಪಂದ್ಯಗಳನ್ನು ಆಡಿ 17 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಪಂದ್ಯದಲ್ಲೂ ಹೈದರಾಬಾದ್​ ಸೋಲು ಕಂಡಿತ್ತು. ಉಭಯ ತಂಡಗಳ ನಡುವೆ ಒಂದು ಸೂಪರ್​ ಓವರ್​ ಪಂದ್ಯ ಕೂಡ ನಡೆದಿತ್ತು. 2020ರಲ್ಲಿ ಅಬುಧಾಬಿಯಲ್ಲಿ ನಡೆದಿದ್ದ ಪಂದ್ಯ ಇದಾಗಿತ್ತು. ಈ ಪಂದ್ಯದಲ್ಲಿ ಕೆಕೆಆರ್​ ಜಯಿಸಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ನಾಳಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್​ ಆಗಿದೆ.

ಸಂಭಾವ್ಯ ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​: ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ವಿಜಯಕಾಂತ್ ವ್ಯಾಸಕಾಂತ್, ಟಿ. ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್, ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ನಿತೀಶ್ ರಾಣಾ, ಆಂಡ್ರೆ ರಸೆಲ್, ರಮಣ್​ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading
Advertisement
cisf soldier death raichur
ಕ್ರೈಂ13 mins ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್19 mins ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್21 mins ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ44 mins ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ56 mins ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Star Kids with Sanskrit Names From Yami Gautam to Priyanka Chopra
ಬಾಲಿವುಡ್58 mins ago

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Rohit Sharma
ಕ್ರೀಡೆ58 mins ago

Rohit Sharma: ಖಾಸಗಿತನಕ್ಕೆ ಧಕ್ಕೆ ಆರೋಪ ಮಾಡಿದ ರೋಹಿತ್​ಗೆ ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್

corona virus wave in singapore
ಪ್ರಮುಖ ಸುದ್ದಿ1 hour ago

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

KKR vs SRH
ಕ್ರೀಡೆ1 hour ago

KKR vs SRH: ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ: ಅಯ್ಯರ್​-ಕಮಿನ್ಸ್​ ಪಡೆಗಳ ಫೈನಲ್‌ ರೇಸ್‌

ISIS Terrorists
ದೇಶ1 hour ago

ISIS Terrorists: ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದ ಐಸಿಸ್ ಉಗ್ರರು; ಸೆರೆ ಸಿಕ್ಕಿದ್ದು ಹೇಗೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌