WFI Chief Sanjay Singh: ಪ್ರತಿಭಟನೆಯಿಂದಲೇ ಕುಸ್ತಿಯಲ್ಲಿ ಹೆಚ್ಚಿನ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ; ಸಂಜಯ್​ ಸಿಂಗ್​ ಆರೋಪ - Vistara News

ಕ್ರೀಡೆ

WFI Chief Sanjay Singh: ಪ್ರತಿಭಟನೆಯಿಂದಲೇ ಕುಸ್ತಿಯಲ್ಲಿ ಹೆಚ್ಚಿನ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ; ಸಂಜಯ್​ ಸಿಂಗ್​ ಆರೋಪ

WFI Chief Sanjay Singh: ಕಳೆದ ವರ್ಷ ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಯೇ ಈ ಬಾರಿಯ ಒಲಿಂಪಿಕ್ಸ್​ ಕುಸ್ತಿಯಲ್ಲಿ ಭಾರತ ಹೆಚ್ಚಿನ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಸಂಜಯ್​ ಸಿಂಗ್ ದೂರಿದ್ದಾರೆ.

VISTARANEWS.COM


on

WFI chief Sanjay Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಟೋಕಿಯೋದಲ್ಲಿ ನಡೆದಿದ್ದ ಕಳೆದ ಒಲಿಂಪಿಕ್ಸ್​ನಲ್ಲಿ ಭಾರತ 7 ಪದಕ ಜಯಿಸಿತ್ತು. ಹೀಗಾಗಿ ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(paris olympics) ಹಲವು ಪದಕ ನಿರೀಕ್ಷೆ ಮಾಡಲಾಗಿತ್ತು. ಆದರೆ, ಭಾರತಕ್ಕೆ ಗೆಲ್ಲಲು ಸಾಧ್ಯವಾದದ್ದು ಕೇವಲ 6 ಪದಕ ಮಾತ್ರ. ಕುಸ್ತಿ ವಿಭಾಗದಲ್ಲಿ ಅಮನ್ ಸೆಹ್ರಾವತ್ ಮಾತ್ರ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು. ವಿನೇಶ್ ಫೋಗಟ್ 100 ಗ್ರಾಂ ಅಧಿಕ ತೂಕದ ಕಾರಣದಿಂದ ಫೈನಲ್​ನಿಂದ ಅನರ್ಹಗೊಂಡ ಕಾರಣ ಐತಿಹಾಸಿಕ ಪದಕವೊಂದು ಕೈ ಜಾರಿತ್ತು. ಇದೀಗ ಕುಸ್ತಿ ತಂಡದ ಪ್ರದರ್ಶನದ ಕುರಿತು ಫೆಡರೇಷನ್​ ಅಧ್ಯಕ್ಷ ಸಂಜಯ್​ ಸಿಂಗ್(WFI Chief Sanjay Singh)​ ಗಂಭೀರ ಆರೋಪ ಮಾಡಿದ್ದಾರೆ. ಕಳೆದ ವರ್ಷ ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಯೇ ಭಾರತ ಕುಸ್ತಿಯಲ್ಲಿ ಹೆಚ್ಚಿನ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ದೂರಿದ್ದಾರೆ.

ಖಾಸಗಿ ಸುದ್ದಿ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಸಂಜಯ್​ ಸಿಂಗ್​, ಭಾರತ ಕುಸ್ತಿ ಒಂದರಲ್ಲೇ 6 ಪದಕಗಳನ್ನು ಗೆಲ್ಲಬಹುದಿತ್ತು. ಆದರೆ, ಕಳೆದ 15-16 ತಿಂಗಳಿನಿಂದ ಕುಸ್ತಿ ವಿಚಾರದಲ್ಲಿ ಆದ ಹಲವು ಘಟನೆಗಳೇ ನಾವು ಪದಕ ಗೆಲ್ಲಲು ಸಾಧ್ಯವಾಗಿಲ್ಲ. ಕಳೆದ ಬಾರಿ ನಾವು ಎರಡು ಪದಕಗಳನ್ನು ಗೆದ್ದಿದ್ದೆವು. ಆದರೆ, ಈ ಬಾರಿ ಬರಿ ಒಂದನ್ನು ಮಾತ್ರ ಗೆದ್ದಿದ್ದೇವೆ. ಇದಕ್ಕೆ ಕಾರಣ ಕುಸ್ತಿಪಟುಗಳು ಅಭ್ಯಾಸದ ಕಡೆಗೆ ಗಮನ ಹರಿಸದೇ ಕೇವಲ ಪ್ರತಿಭಟನೆಗೆ ಮುಂದಾದದ್ದು. ರವಿ ದಹಿಯಾ, ಬಜರಂಗ್​ ಪೂನಿಯ ಕಳೆದ ಬಾರಿ ಪದಕ ಗೆದ್ದಿದ್ದರು. ಆದರೆ ಈ ಬಾರಿ ಅವರು ಒಲಿಂಪಿಕ್ಸ್​ಗೆ ಅರ್ಹತೆ ಪಡೆಯುವಲ್ಲಿ ವಿಫಲರಾದರು. ಒಟ್ಟಾರೆ ಪ್ರತಿಭಟನೆಯೇ ಭಾರತ ಕುಸ್ತಿ ಪ್ರದರ್ಶನಕ್ಕೆ ಹಿನ್ನಡೆ ಉಂಟುಮಾಡಿದ್ದು ಎಂದು ಸಂಜಯ್​ ಸಿಂಗ್ ಹೇಳಿದ್ದಾರೆ.

“14-15 ತಿಂಗಳ ಕಾಲ ಕುಸ್ತಿಪಟುಗಳು ಪ್ರತಿಭಟನೆ ನಡೆಸಿ ಯಾವುದೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿ ಆಡಲಿಲ್ಲ. ಜತೆಗೆ ಅಭ್ಯಾಸ ಕೂಡ ನಡೆಸದೆ ಫಿಟ್​ನೆಸ್​ ಕಳೆದುಕೊಂಡರು. ಹೀಗಾಗಿ ಕುಸ್ತಿಪಟುಗಳಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ” ಸಂಜಯ್​ ಸಿಂಗ್​ ಹೇಳಿದ್ದಾರೆ.

ಇದನ್ನೂ ಓದಿ Sakshi Malik: ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಟೂರ್ನಿಯಲ್ಲಿ ಸ್ಪರ್ಧಿಸಬೇಡಿ: ಸಾಕ್ಷಿ ಮಲಿಕ್

ಸಂಜಯ್​ ಸಿಂಗ್​ ಅವರು ವಿನೇಶ್‌ ಫೋಗಟ್​ ಅನರ್ಹತೆಯ ವಿರುದ್ಧ ಸಹಾಯಕ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಈಗಾಗಲೇ ಆಗ್ರಹಿಸಿದ್ದಾರೆ. ಇದು ವಿನೇಶ್‌ ಅವರ ತಪ್ಪಾಗಿರಲು ಸಾಧ್ಯವಿಲ್ಲ. ಅವರು ಉತ್ತಮವಾಗಿ ಭಾಗಿಯಾಗಿದ್ದರು. ಅವರ ಕೋಚ್‌, ನ್ಯೂಟ್ರಿಶಿಯನ್‌ ಮತ್ತು ಬೆಂಬಲ ಸಿಬ್ಬಂದಿ ಇದರ ಜವಾಬ್ದಾರಿ ಹೊರಬೇಕು ಎಂದು ಅವರು ಹೇಳಿದ್ದರು. ವಿನೇಶ್‌ ತೂಕ ಹೆಚ್ಚಳವಾಗದಂತೆ ಅವರು ನೋಡಿಕೊಳ್ಳಬೇಕಿತ್ತು. ಇದಕ್ಕೆ ಕಾರಣರಾದವರ ವಿರುದ್ಧ ಭಾರತ ಸರಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ಈ ಮೂಲಕ ವಿನೇಶ್​ ಬೆಂಬಲಕ್ಕೆ ನಿಂತಿದ್ದರು.

ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಅವರ ಆಪ್ತ ಎನ್ನುವ ಕಾರಣಕ್ಕೆ ಸಂಜಯ್ ಸಿಂಗ್​ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷರಾದ ವೇಳೆ ಇದನ್ನು ಖಂಡಿಸಿ ಸಾಕ್ಷಿ ಮಲಿಕ್​, ವಿನೇಶ್​ ಫೋಗಟ್​, ಬಜರಂಗ್​ ಪೂನಿಯಾ ಸೇರಿ ಹಲವು ಕುಸ್ತಿಪಟುಗಳು ವಿರೋಧ ವ್ಯಕ್ತಪಡಿಸಿದ್ದರು. ಅವರನ್ನು ಕುಸ್ತಿ ಒಕ್ಕೂಟದಿಂದ ದೂರ ಇಟ್ಟರೆ ನಮಗೆ ಯಾವುದೇ ಸಮಸ್ಯೆ ಇರದು ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paralympics 2024: ಪ್ಯಾರಾಲಿಂಪಿಕ್ಸ್​ನಲ್ಲಿ ಭಾಗ್ಯಶ್ರೀ, ಸುಮಿತ್ ತ್ರಿವರ್ಣ ಧ್ವಜಧಾರಿಗಳು

Paralympics 2024: ಈ ಬಾರಿಯ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ 84 ಕ್ರೀಡಾಪಟುಗಳ ದೊಡ್ಡ ದಂಡು ಪಾಲ್ಗೊಳ್ಳಲಿದೆ. ಈ ಕೂಟದಲ್ಲಿ 25ಕ್ಕೂ ಅಧಿಕ ಪದಕಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಭಾರತ ಪ್ಯಾರಾಲಿಂಪಿಕ್ ಸಮಿತಿ ಅಧ್ಯಕ್ಷ ದೇವೇಂದ್ರ ಝಜಾರಿಯಾ ಹೇಳಿದ್ದಾರೆ.

VISTARANEWS.COM


on

Paralympics 2024
Koo

ನವದೆಹಲಿ: ಇದೇ 28ರಿಂದ ಸೆಪ್ಟೆಂಬರ್​ 8ರವರೆಗೆ ನಡೆಯುವ ಪ್ಯಾರಿಸ್ ಪ್ಯಾರಾಲಿಂಪಿಕ್(Paralympics 2024) ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಶಾಟ್‌ಪುಟ್ ತಾರೆ ಭಾಗ್ಯಶ್ರೀ ಜಾಧವ್(Bhagyashree Jadhav) ಮತ್ತು ಸ್ಟಾರ್ ಜಾವೆಲಿನ್ ಎಸೆತಗಾರ ಸುಮಿತ್ ಆಂಟಿಲ್(Sumit Antil) ಭಾರತದ ಧ್ವಜಧಾರಿಗಳಾಗಿ(flag bearers for Paralympics) ಆಯ್ಕೆಯಾಗಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಭಾರತದ 84 ಸದಸ್ಯರ ತಂಡವನ್ನು ಭಾಗ್ಯಶ್ರೀ ಮತ್ತು ಸುಮಿತ್ ಪರೇಡ್ ಆಫ್ ನೇಷನ್‌ನಲ್ಲಿ ಮುನ್ನಡೆಸಲಿದ್ದಾರೆ ಎಂದು ಭಾರತದ ಪ್ಯಾರಾಲಿಂಪಿಕ್ಸ್‌ ಸಮಿತಿ ಶುಕ್ರವಾರ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

ಭಾಗ್ಯಶ್ರೀ ಜಾಧವ್


ಮಹಾರಾಷ್ಟ್ರದ ಮೂಲದ ಭಾಗ್ಯಶ್ರೀ ಜಾಧವ್ ಕಳೆದ ಕೆಲ ವರ್ಷಗಳಿಂದ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಅವರು 2022 ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಶಾಟ್‌ಪುಟ್ F34 ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದಿದ್ದರು. ಮತ್ತು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಏಳನೇ ಸ್ಥಾನ ಪಡೆದಿದ್ದರು. ಫೆಜಾ ವಿಶ್ವಕಪ್ ಮತ್ತು ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗೇಮ್ಸ್ ಸೇರಿದಂತೆ ವಿವಿಧ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಪದಕ ಗೆದ್ದು ತಮ್ಮ ಛಾಪು ಮೂಡಿಸಿದ್ದಾರೆ.

ಸುಮಿತ್ ಆಂಟಿಲ್


ಟೋಕಿಯೊ ಪ್ಯಾರಾಲಿಂಪಿಕ್ಸ್ 2020 ರಲ್ಲಿ ವಿಶ್ವ ದಾಖಲೆಯ 68.55 ಮೀ. ಜಾವೆಲಿನ್​ ಎಸೆಯುವ ಮೂಲಕ ಚಿನ್ನದ ಪದಕವನ್ನು ಗೆದ್ದ ಸುಮಿತ್ ಆಂಟಿಲ್ ಪುರುಷರ ವಿಭಾಗದ ಧ್ವಜಧಾರಿಯಾಗಿದ್ದಾರೆ. ಎಫ್64 ವಿಭಾಗದಲ್ಲಿ ಪ್ರಸ್ತುತ ವಿಶ್ವ ದಾಖಲೆ ಹೊಂದಿರುವ ಸುಮಿತ್ ಆಂಟಿಲ್ ಈ ಬಾರಿಯು ಚಿನ್ನದ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. 2022ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 73.29 ಮೀಟರ್‌ ದೂರ ಜಾವೆಲಿನ್ ಎಸೆಯುವ ಮೂಲಕ ಹೊಸ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದರು.

ಇದನ್ನೂ ಓದಿ Paris Paralympics : ಪ್ಯಾರಾಲಿಂಪಿಕ್ಸ್​​ನಲ್ಲಿ 12 ಕ್ರೀಡೆಗಳಲ್ಲಿ ಭಾಗವಹಿಸಲಿದೆ ಭಾರತ

25 ಪದಕ ನಿರೀಕ್ಷೆ


ಈ ಬಾರಿಯ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ 84 ಕ್ರೀಡಾಪಟುಗಳ ದೊಡ್ಡ ದಂಡು ಪಾಲ್ಗೊಳ್ಳಲಿದೆ. ಈ ಕೂಟದಲ್ಲಿ 25ಕ್ಕೂ ಅಧಿಕ ಪದಕಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಭಾರತ ಪ್ಯಾರಾಲಿಂಪಿಕ್ ಸಮಿತಿ ಅಧ್ಯಕ್ಷ ದೇವೇಂದ್ರ ಝಜಾರಿಯಾ ಹೇಳಿದ್ದಾರೆ. ಕಳೆದ ಟೋಕಿಯೊದಲ್ಲಿ 19 ಪದಕಗಳನ್ನು ಗೆದ್ದಿದೆ. ಕಳೆದ ವರ್ಷ ಹಾಂಗ್‌ಝೌನ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲೂ 111 ಪದಕಗಳನ್ನು ಜಯಿಸಿ, ಉತ್ತಮ ಸಾಧನೆ ಮೆರೆದಿತ್ತು.

ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕೆನೊಯಿಂಗ್, ಸೈಕ್ಲಿಂಗ್, ಬ್ಲೈಂಡ್ ಜುಡೊ, ಪವರ್ ಲಿಫ್ಟಿಂಗ್, ರೋಯಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೊ ಸೇರಿದಂತೆ 12 ಕ್ರೀಡೆಗಳಲ್ಲಿ ಭಾರತ ಕ್ರೀಡಾಪಟುಗಳು ಕಣಕ್ಕೆ ಇಳಿಯಲಿದ್ದಾರೆ.

Continue Reading

ಕ್ರೀಡೆ

Ishan Kishan: ಬುಚ್ಚಿಬಾಬು ಟ್ರೋಫಿಯಲ್ಲಿ ಸಿಕ್ಸರ್​ಗಳ ಸುರಿಮಳೆಗೈದು ಶತಕ ಬಾರಿಸಿದ ಇಶಾನ್​ ಕಿಶನ್

Ishan Kishan: ಇಶಾನ್ ಕಿಶನ್​ ಮಧ್ಯಪ್ರದೇಶ ವಿರುದ್ಧ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದು ತಮ್ಮ ಬಿರುಸಿನ ಬ್ಯಾಟಿಂಗ್​ ಮೂಲಕ 86 ಎಸೆತಗಳಲ್ಲಿ ಶತಕ ಪೂರೈಸಿದರು

VISTARANEWS.COM


on

Ishan Kishan
Koo

ಮುಂಬಯಿ: ‘ಬುಚ್ಚಿಬಾಬು ಟ್ರೋಫಿ’ ಆಹ್ವಾನಿತ(Buchi Babu Tournament) ಕ್ರಿಕೆಟ್​ ಪಂದ್ಯಾವಳಿಯಲ್ಲಿ ಇಶಾನ್​ ಕಿಶನ್​(Ishan Kishan) ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಶತಕ ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಮತ್ತೆ ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡುವ ವಿಶ್ವಾಸದಲ್ಲಿದ್ದಾರೆ. ರಣಜಿ ಆಡಲು ನಿರಾಕರಿಸಿದ್ದ ಕಾರಣದಿಂದಾಗಿ ಇಶಾನ್​ ಕಿಶನ್​ ಅವರನ್ನು ಬಿಸಿಸಿಐ ಟೀಮ್​ ಇಂಡಿಯಾದಿಂದ ದೂರ ಇರಿಸಿತ್ತು. ಇದೀಗ ದೇಶೀಯ ರೆಡ್​ ಬಾಲ್​ ಟೂರ್ನಿಯಲ್ಲಿ ಇಶಾನ್​ ತಮ್ಮ ಬ್ಯಾಟಿಂಗ್​ ಸಾಮರ್ಥ್ಯ ಪ್ರದರ್ಶಿಸಿದ್ದಾರೆ.

ಜಾರ್ಖಂಡ್​ ತಂಡದ ನಾಯಕನಾಗಿರುವ ಇಶಾನ್ ಕಿಶನ್​ ಮಧ್ಯಪ್ರದೇಶ ವಿರುದ್ಧ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದು ತಮ್ಮ ಬಿರುಸಿನ ಬ್ಯಾಟಿಂಗ್​ ಮೂಲಕ 86 ಎಸೆತಗಳಲ್ಲಿ ಶತಕ ಪೂರೈಸಿದರು. ಅಚ್ಚರಿ ಎಂದರೆ ಸತತ 2 ಸಿಕ್ಸರ್​ ಬಾರಿಸುವ ಮೂಲಕ ಅವರು ಈ ಶತಕ ಪೂರ್ತಿಗೊಳಿಸಿದರು. ಅಂತಿಮವಾಗಿ ಬರೋಬ್ಬರಿ 10 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ 114 ರನ್​ ಬಾರಿಸಿದರು. ಇವರ ಶತಕದ ನೆರವಿನಿಂದ ತಂಡ ಉತ್ತಮ ರನ್​ ಕಲೆಹಾಕಿದೆ.

ಕಳೆದ ವರ್ಷ ನವೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಸಂದರ್ಭದಲ್ಲಿ ಕಿಶನ್ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು. ನಂತರದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದರೂ ಕೂಡ ಅಂತಿಮ ಹಂತದಲ್ಲಿ ವೈಯಕ್ತಿಕ ಕಾರಣಗಳಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದರು. ಸ್ವಲ್ಪ ವಿರಾಮವನ್ನು ತೆಗೆದುಕೊಂಡ ಇಶಾನ್​ಗೆ ಅಂದಿನ ಕೋಚ್​ ದ್ರಾವಿಡ್​ ಮತ್ತು ಆಯ್ಕೆ ಸಮಿತಿ ರಣಜಿ ಟ್ರೋಫಿ ಪಂದ್ಯಗಳಲ್ಲಿ ಆಡುವಂತೆ ಸೂಚನೆ ನೀಡಿತ್ತು. ಆದರೆ ಇದನ್ನು ಇಶಾನ್​ ಕಡೆಗಣಿಸಿದ್ದರು. ಈ ಕಾರಣದಿಂದ ಬಿಸಿಸಿಐ ಅವರನ್ನು ಕೇಂದ್ರೀಯ ಗುತ್ತಿಗೆಯಿಂದಲೂ ಕೈಬಿಟ್ಟಿತ್ತು.

ಸೆಪ್ಟೆಂಬರ್​ 5ರಿಂದ ಆರಂಭಗೊಳ್ಳಲಿರುವ ದುಲೀಪ್​ ಟ್ರೋಫಿಯಲ್ಲಿಯೂ ಅವಕಾಶ ಪಡೆದಿರುವ ಇಶಾನ್​ ಕಿಶನ್​, ನಿರೀಕ್ಷಿತ ಬ್ಯಾಟಿಂಗ್​ ಪ್ರದರ್ಶನ ತೋರಿದರೆ, ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಅವಕಾಶ ಪಡೆಯುವುದು ಖಚಿತವಾಗಿದೆ.

ಇದನ್ನೂ ಓದಿ Buchi Babu Tournament: ಬುಚ್ಚಿಬಾಬು ಕ್ರಿಕೆಟ್‌ ಟೂರ್ನಿ ಆಡಲಿದ್ದಾರೆ ಸೂರ್ಯಕುಮಾರ್​, ಅಯ್ಯರ್​

ಮಾನಸಿಕ ಒತ್ತಡದದಿಂದ ಬಳಲುತ್ತಿರುವುದಾಗಿ ಸುಳ್ಳು ಕಾರಣ ನೀಡಿ  ಮುಕೇಶ್‌ ಅಂಬಾನಿ(Mukesh Ambani) ಪುತ್ರ ಅನಂತ್‌ ಅಂಬಾನಿ(Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ವಿವಾಹಪೂರ್ವ(Anant Ambani wedding) ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ದುಬೈನಲ್ಲಿಯೂ ಪಾರ್ಟಿ ಮಾಡಿ ಸಿಕ್ಕಿಬಿದ್ದಿದ್ದರು. ಇದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿತ್ತು.

ತಂಡಕ್ಕೆ ಆಯ್ಕೆ ಮಾಡದಿರುವುದರ ಕುರಿತು ಕೆಲ ದಿನಗಳ ಹಿಂದೆ ಪ್ರತಿಕ್ರಿಯೆ ನೀಡಿದ್ದ ಇಶಾನ್​, “ನಾನು ಬ್ರೇಕ್ ಪಡೆದಿದ್ದೆ, ನನ್ನ ಪ್ರಕಾರ ಇದು ಸಾಮಾನ್ಯ. ತಂಡಕ್ಕೆ ಕಮ್ ಬ್ಯಾಕ್ ಮಾಡಬೇಕಾದರೆ ದೇಶೀಯ ಕ್ರಿಕೆಟ್​ನಲ್ಲಿ ಪ್ರದರ್ಶನ ನೀಡಬೇಕು ಎಂಬ ನಿಯಮವಿದೆ ಎನ್ನುವುದು ನನಗೆ ತಿಳಿದಿದೆ. ಆದರೆ, ಅಂದು ನಾನು ಆಡುವ ಮನಸ್ಥಿತಿಯಲ್ಲಿ ಇರಲಿಲ್ಲ. ಹಿಗಾಗಿಯೇ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಬ್ರೇಕ್ ಪಡೆದಿದ್ದೆ. ಉತ್ತಮ ಫಾರ್ಮ್​ನಲ್ಲಿರುವಾಗ ಅಂತಾರಾಷ್ಟ್ರೀಯ ಕ್ರಿಕೆಟ್​ ಬಿಟ್ಟು ದೇಶೀಯ ಕ್ರಿಕೆಟ್​ನಲ್ಲಿ ಆಡಬೇಕು ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಇಂಡಿಯನ್ ಎಕ್ಸ್ ಪ್ರೆಸ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

Continue Reading

ಕ್ರಿಕೆಟ್

Mady Villiers: ಎಬಿಡಿ ವಿಲಿಯರ್ಸ್ ಶೈಲಿಯಲ್ಲೇ ಕ್ಯಾಚ್​ ಹಿಡಿದ ಇಂಗ್ಲೆಂಡ್​ ಆಟಗಾರ್ತಿ ಮ್ಯಾಡಿ ವಿಲಿಯರ್ಸ್; ವಿಡಿಯೊ ವೈರಲ್​

Mady Villiers: ಮ್ಯಾಡಿ ವಿಲಿಯರ್ಸ್ ಫೀಲ್ಡಿಂಗ್​ ಮಾತ್ರವಲ್ಲದೆ ಬೌಲಿಂಗ್​ನಲ್ಲಿ 1 ವಿಕೆಟ್​ ಪಡೆದರು. ಆದರೆ, ಬ್ಯಾಟಿಂಗ್​ನಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾದರು. ಕೇವಲ ಒಂದು ರನ್​ಗೆ ಸೀಮಿತರಾಗಿ ವಿಕೆಟ್​ ಕಳೆದುಕೊಂಡರು.

VISTARANEWS.COM


on

Mady Villiers
Koo

ಲಂಡನ್​: ವಿಶ್ವ ಕ್ರಿಕೆಟ್‌ನಲ್ಲಿ ಈಗಾಗಲೇ ಹಲವು ಅದ್ಭುತ ಕ್ಯಾಚ್‌ಗಳು(stunning catch) ದಾಖಲಾಗಿವೆ. ಆ ಸಾಲಿಗೆ ಇದೀಗ ಇಂಗ್ಲೆಂಡ್​ ತಂಡದ ಆಟಗಾರ್ತಿ ಮ್ಯಾಡಿ ವಿಲಿಯರ್ಸ್(Mady Villiers) ಸೇರ್ಪಡೆಗೊಂಡಿದ್ದಾರೆ. ‘ದಿ ಹಂಟ್ರೆಡ್​’ ಕ್ರಿಕೆಟ್(The Hundred)​ ಟೂರ್ನಿಯ ಪಂದ್ಯವೊಂದರಲ್ಲಿ ಮ್ಯಾಡಿ ವಿಲಿಯರ್ಸ್ ಯಾರೂ ಊಹಿಸದ ರೀತಿಯಲ್ಲಿ ಮೇಲಕ್ಕೆ ಜಂಪ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಒಂದನ್ನು ಹಿಡಿಯುವ ಮೂಲಕ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಸದ್ಯ ಈ ಕ್ಯಾಚ್​ನ ವಿಡಿಯೊ ವೈರಲ್​ ಆಗುತ್ತಿದ್ದು, ಮಹಿಳಾ ಕ್ರಿಕೆಟ್​ನಲ್ಲಿ ಕಂಡು ಬಂದ ಅತ್ಯದ್ಭುತ ಕ್ಯಾಚ್​ ಎಂದು ಕ್ರಿಕೆಟ್​ ಪಂಡಿತರು ಹೇಳಿದ್ದಾರೆ.

ಓವಲ್‌ ಇನ್ವಿನ್ಸಿಬಲ್‌ ತಂಡದ ಪರವಾಗಿ ಆಡುತ್ತಿರುವ 25 ವರ್ಷದ ಮ್ಯಾಡಿ ವಿಲಿಯರ್ಸ್‌ 30ಯಾರ್ಡ್​ನಲ್ಲಿ ಫೀಲ್ಡಿಂಗ್​ ನಡೆಸುತ್ತಿದ್ದರು. ಈ ವೇಳೆ ಎದುರಾಳಿ ತಂಡದ ಆಟಗಾರ್ತಿ ಬೌಂಡರಿ ಕಡೆಗೆ ಬಾರಿಸಿದ ಚೆಂಡನ್ನು ಕಣ್ಣು ಮಿಟುಕಿಸುವಷ್ಟರಲ್ಲಿ ಮೇಲಕ್ಕೆ ಜಿಗಿದು ತನ್ನ ಎಡಗೈಯಿಂದ ಕ್ಯಾಚ್​ ಹಿಡಿದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಕ್ಯಾಚ್​ ಕಂಡ ಪ್ರೇಕ್ಷಕರು ಒಂದು ಕ್ಷಣ ದಂಗಾಗಿದ್ದಾರೆ. ಅತ್ತ ಕಾಮೆಂಟ್ರಿ ನಡೆಸುತ್ತಿದ್ದವರು, ಕ್ಯಾಚ್‌ ಆಫ್‌ ದಿ ಟೂರ್ನಮೆಂಟ್‌ ಎಂದು ಬಣ್ಣಿಸಿದ್ದಾರೆ. ಟ್ರೆಂಟ್‌ ರಾಕೆಟ್ಸ್‌ ತಂಡ ಆರಂಭಿ ಆಟಗಾರ್ತಿ ಬ್ರಯೋನಿ ಸ್ಮಿತ್ ಅವರ ಕ್ಯಾಚ್​ ಇದಾಗಿತ್ತು.

ಇದನ್ನೂ ಓದಿ Kieron Pollard: ರಶೀದ್ ಖಾನ್‌ ಓವರ್​ನಲ್ಲಿ ಸತತ 5 ಸಿಕ್ಸರ್ ಬಾರಿಸಿದ ಪೊಲಾರ್ಡ್‌; ವಿಡಿಯೊ ಇಲ್ಲಿದೆ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಟ್ರೆಂಟ್‌ ರಾಕೆಟ್ಸ್‌ ತಂಡ ಆಶ್ಲೀ ಗಾರ್ಡ್ನರ್(43) ಅವರ ಏಕಾಂಗಿ ಬ್ಯಾಟಿಂಗ್​ ಹೋರಾಟದ ನೆರವಿನಿಂದ 8 ವಿಕೆಟ್​ಗೆ 91 ರನ್​ ಬಾರಿಸಿ ಸವಾಲೊಡ್ಡಿತು. ಗುರಿ ಬೆನ್ನಟ್ಟಿದ ಓವಲ್‌ ಇನ್ವಿನ್ಸಿಬಲ್‌ ತಂಡ 5 ವಿಕೆಟ್​ ನಷ್ಟಕ್ಕೆ 92 ರನ್​ ಬಾರಿಸಿ ಗೆಲುವು ಸಾಧಿಸಿತು. ಮ್ಯಾಡಿ ವಿಲಿಯರ್ಸ್ ಫೀಲ್ಡಿಂಗ್​ ಮಾತ್ರವಲ್ಲದೆ ಬೌಲಿಂಗ್​ನಲ್ಲಿ 1 ವಿಕೆಟ್​ ಪಡೆದರು. ಅದು ಕೂಡ ಆಶ್ಲೀ ಗಾರ್ಡ್ನರ್ ಅವರದ್ದು. ಬ್ಯಾಟಿಂಗ್​ನಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾದರು. ಕೇವಲ ಒಂದು ರನ್​ಗೆ ಸೀಮಿತರಾಗಿ ವಿಕೆಟ್​ ಕಳೆದುಕೊಂಡರು.

ಓವಲ್‌ ಇನ್ವಿನ್ಸಿಬಲ್‌ ತಂಡ ಆಡಿದ 8 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿ ಸೆಮಿಫೈನಲ್​ ಹಂತಕ್ಕೇರಿದೆ. ನಾಳೆ(ಆ.17) ನಡೆಯುವ ಸೆಮಿ ಪಂದ್ಯದಲ್ಲಿ ಲಂಡನ್ ಸ್ಪಿರಿಟ್ ತಂಡದ ಸವಾಲು ಎದುರಿಸಲಿದೆ. ಗೆದ್ದರೆ ಆಗಸ್ಟ್​ 18ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ವೆಲ್ಷ್ ಫೈರ್​ ತಂಡದ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.

Continue Reading

ಕ್ರಿಕೆಟ್

ICC Champions Trophy: ಭಾರತ ತಂಡ ಪಾಕ್​ಗೆ ತೆರಳುವ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಜಯ್​ ಶಾ

ICC Champions Trophy: ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದೆ.

VISTARANEWS.COM


on

ICC Champions Trophy
Koo

ಮುಂಬಯಿ: ಮುಂದಿನ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ(ICC Champions Trophy) ಭಾರತ(champions trophy ind vs pak) ತಂಡ ಪಾಲ್ಗೊಳ್ಳಲಿದೆಯಾ? ಇಲ್ಲವಾ? ಎಂಬ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಇದುವರೆಗೂ ಈ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಲಭಿಸಿಲ್ಲ. ಇದೇ ವಿಚಾರವಾಗಿ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(jay shah) ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಸಂದರ್ಶನವೊಂದರಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಯ್​ ಶಾ, ಭಾರತ ತಂಡ ಪಾಕಿಸ್ತಾನಕ್ಕೆ(ind vs pak) ತೆರಳುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಟೂರ್ನಿ ಆರಂಭಕ್ಕೆ ಕೆಲವು ದಿನ ಮೊದಲು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಪಾಕಿಸ್ತಾನ ಮಾತ್ರ ಭಾರತ ತಂಡದ ಆಗಮನದ ನಿರೀಕ್ಷೆಯಲ್ಲಿದೆ. ಇದೇ ಕಾರಣಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕೂಡ ಪ್ರಕಟಿಸಿದೆ. ಈ ವೇಳಾಪಟ್ಟಿ ಪ್ರಕಾರ ಭಾರತ ಮತ್ತು ಪಾಕ್​ ನಡುವಣ ಪಂದ್ಯ ಮಾರ್ಚ್ 1 ರಂದು ಲಾಹೋರ್​ನಲ್ಲಿ ನಡೆಯಬೇಕಿದೆ.

ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದೆ. ಕ್ರಿಕೆಟ್​ನಲ್ಲಿ ಟೀಮ್​ ಇಂಡಿಯಾಗೆ ಇರುವ ಕ್ರೇಜ್ ಮತ್ತು ಬೇಡಿಕೆ​ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್​ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್​ ಮೇಲೆ ಇರುವ ಕಳಂಕವೂ ದೂರವಾಗಲಿದೆ. ಅಲ್ಲದೆ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಪಿಸಿಬಿಯ ಮನವಿಗೆ ಐಸಿಸಿ ಸ್ಪಂದಿಸಿದ್ದು, ಹೈಬ್ರಿಡ್​ ಮಾದರಿಯ ಪಂದ್ಯಗಳಿಗೆ ಐಸಿಸಿ ಅನುಮತಿಸಿಲ್ಲ ಎಂದು ವರದಿಯಾಗಿದೆ. ಈ ವಿಚಾವಾಗಿ ಈಗಾಗಲೇ ಬಿಸಿಸಿಐ ಜತೆ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಒಟ್ಟಾರೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಭಾರತ ಚಾಂಪಿಯನ್ಸ್​ ಟ್ರೋಫಿ ಆಡುವ ಬಗ್ಗೆ ನಿರ್ಧಾರವಾಗಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.

ಇದನ್ನೂ ಓದಿ Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

ಒಂದೊಮ್ಮೆ ಟೂರ್ನಿ ಪಾಕ್​ನಲ್ಲಿಯೇ ನಡೆದು, ಭಾರತ ತಂಡ ಪಾಲ್ಗೊಳ್ಳಲಿದ್ದರೆ ಆಗ ಯಾವ ತಂಡಕ್ಕೆ ಅವಕಾಶ ಸಿಗಲಿದೆ ಎಂಬ ಪ್ರಶ್ನೆ ಕ್ರಿಕೆಟ್​ ಅಭಿಮಾನಿಗಳಲ್ಲಿ ಮೂಡಿದೆ. ಇದಕ್ಕೆ ಉತ್ತರ ಇಲ್ಲಿದೆ. ಐಸಿಸಿ ನಿಯಮಗಳ ಪ್ರಕಾರ 2023ರ ಸಾಲಿನ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಅಂಕಪಟ್ಟಿಯ ಅಗ್ರ 7ರಲ್ಲಿ ಸ್ಥಾನ ಪಡೆಯುವ ತಂಡಗಳು ನೇರವಾಗಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಅರ್ಹತೆ ಪಡೆದುಕೊಂಡಿದೆ. ಟೂರ್ನಿಯ ಆತಿಥೇಯ ದೇಶಕ್ಕೆ ನೇರವಾಗಿ ಅರ್ಹತೆ ಸಿಗುತ್ತದೆ. ಒಟ್ಟು 8 ತಂಡಗಳು ಅರ್ಹತೆ ಪಡೆದಿದೆ.

ಭಾರತ ತಂಡ ಟೂರ್ನಿಯಿಂದ ಹಿಂದೆ ಸರಿದರೆ, 9ನೇ ಸ್ಥಾನಿಯಾಗಿರುವ ಶ್ರೀಲಂಕಾಗೆ ಅವಕಾಶ ಸಿಗಲಿದೆ. ಯಾವುದೇ ತಂಡವು ಐಸಿಸಿ ಟೂರ್ನಿಯಿಂದ ಹಿಂದೆ ಸರಿದರೆ ಅಂಕಪಟ್ಟಿಯಲ್ಲಿ ನಂತರದ ಸ್ಥಾನ ಪಡೆದಿರುವ ತಂಡ ತಂಡಕ್ಕೆ ಅರ್ಹತೆ ನೀಡಲಾಗುತ್ತದೆ. ಪ್ರಸ್ತುತ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಅರ್ಹತೆ ಪಡೆದ ತಂಡಗಳಾಗಿವೆ.

Continue Reading
Advertisement
Saarthi AI
ವಿದೇಶ3 mins ago

Saarthi AI: ಬೆಂಗಳೂರು ಮೂಲದ ಸಾರಥಿ AI ಕಂಪನಿ CEOನ ಪಾಸ್‌ಪೋರ್ಟ್‌, ವೀಸಾ ಕಳವು

Paralympics 2024
ಕ್ರೀಡೆ34 mins ago

Paralympics 2024: ಪ್ಯಾರಾಲಿಂಪಿಕ್ಸ್​ನಲ್ಲಿ ಭಾಗ್ಯಶ್ರೀ, ಸುಮಿತ್ ತ್ರಿವರ್ಣ ಧ್ವಜಧಾರಿಗಳು

Crop Damage
ಕರ್ನಾಟಕ48 mins ago

Crop Damage: ಮಳೆಯಿಂದ 81,589 ಹೆಕ್ಟೇರ್‌ನಲ್ಲಿ ಬೆಳೆಹಾನಿ; ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆ ಎಂದ ಸಿಎಂ

Yogi Adityanath
ದೇಶ1 hour ago

Yogi Adityanath: ಹೊಸ ಮೈಲಿಗಲ್ಲು ಸಾಧಿಸಿದ ಯೋಗಿ- ಉತ್ತರ ಪ್ರದೇಶದ ಸುದೀರ್ಘ ಅವಧಿಯ ಸಿಎಂ ಎಂಬ ಖ್ಯಾತಿ

Health Tips Kannada
ಆರೋಗ್ಯ1 hour ago

Health Tips Kannada: ಈ 5 ಅಭ್ಯಾಸಗಳು ನಿಮ್ಮ ಹಾರ್ಮೋನಿನ ಏರುಪೇರಿಗೆ ಕಾರಣವಾಗಿರಬಹುದು!

Matthew Perry Death Case
ವಿದೇಶ2 hours ago

Matthew Perry Death Case: ಅಮೆರಿಕನ್ ನಟನ ಸಾವಿಗೆ ಕಾರಣವಾಗಿದ್ದು ಲಾಸ್‌ ಏಂಜಲೀಸ್‌ನ ಈ ʼಮಾದಕದ್ರವ್ಯಗಳ ರಾಣಿʼ!

Ishan Kishan
ಕ್ರೀಡೆ2 hours ago

Ishan Kishan: ಬುಚ್ಚಿಬಾಬು ಟ್ರೋಫಿಯಲ್ಲಿ ಸಿಕ್ಸರ್​ಗಳ ಸುರಿಮಳೆಗೈದು ಶತಕ ಬಾರಿಸಿದ ಇಶಾನ್​ ಕಿಶನ್

ಕರ್ನಾಟಕ2 hours ago

Notorious Thief: ಸಿಟಿಯಲ್ಲಿ ಕದ್ದು ಕಾಡಿನಲ್ಲಿರುತ್ತಿದ್ದ ನಟೋರಿಯಸ್ ಕಳ್ಳ; 50ಕ್ಕೂ ಹೆಚ್ಚು ಕೇಸ್‌ಗಳ ಆರೋಪಿ ಅರೆಸ್ಟ್!

Kantara Awards
ಸಿನಿಮಾ2 hours ago

Kantara Awards: 16 ಕೋಟಿ ಖರ್ಚು, 400 ಕೋಟಿ ಆದಾಯ; ʼಕಾಂತಾರʼ ಕುರಿತ ವಿಶೇಷ ಸಂಗತಿಗಳು ಇಲ್ಲಿವೆ

Eye Makeup Care
ಫ್ಯಾಷನ್2 hours ago

Eye Makeup Care: ಐ ಶ್ಯಾಡೋ ಹಚ್ಚುವ ಮುನ್ನ 5 ಸಂಗತಿ ತಿಳಿದಿರಲಿ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌