MS Dhoni : ಇದೆಂಥಾ ಅಚ್ಚರಿ; ಅಪರೂಪಕ್ಕೆ ಧೋನಿಯನ್ನು ಹೊಗಳಿದ ಗೌತಮ್​ ಗಂಭೀರ್​! Vistara News
Connect with us

ಕ್ರಿಕೆಟ್

MS Dhoni : ಇದೆಂಥಾ ಅಚ್ಚರಿ; ಅಪರೂಪಕ್ಕೆ ಧೋನಿಯನ್ನು ಹೊಗಳಿದ ಗೌತಮ್​ ಗಂಭೀರ್​!

ಗೌತಮ್​ ಗಂಭೀರ್​ ಅವಕಾಶ ಸಿಕ್ಕಾಗೆಲ್ಲ ಧೋನಿಯ (MS Dhoni) ವಿರುದ್ಧ ಕಿಡಿ ಕಾರುತ್ತಿದ್ದರು. ಅಪರೂಪಕ್ಕೆ ಇದೀಗ ಬಾಯ್ತುಂಬಾ ಹೊಗಳಿಬಿಟ್ಟಿದ್ದಾರೆ.

VISTARANEWS.COM


on

MS Dhoni
Koo

ನವ ದೆಹಲಿ : ಭಾರತ ತಂಡ ಮಾಜಿ ಆರಂಭಿಕ ಬ್ಯಾಟರ್​ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್​ (Gautham Gambhir) ಅವರಿಗೆ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಹಾಗೂ ವಿರಾಟ್​ ಕೊಹ್ಲಿಯ (Virat Kohli) ಬಗ್ಗೆ ಸಲ್ಲದ ಅಸಹನೆ. ಅವಕಾಶ ಸಿಕ್ಕಾಗೆಲ್ಲ ಅವರಿಬ್ಬರನ್ನು ಟೀಕಿಸುತ್ತಾರೆ ರಾಜಕಾರಣಿ ಕಂ ಕಾಮೆಂಟೇಟರ್​. ಆದರೆ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಗೌತಮ್​ ಗಂಭೀರ್ ಧೋನಿಯನ್ನು ಪ್ರಶಂಸಿಸಿದ್ದಾರೆ. ಅವರು ಸಿಕ್ಕಾಪಟ್ಟೆ ತ್ಯಾಗ ಮಾಡಿದ್ದಾರೆ ಎಂದು ಹೇಳುವ ಮೂಲಕ ಅವರನ್ನು ತ್ಯಾಗಮಯಿ ಎಂದು ಬಿಂಬಿಸಲು ಹೊರಟಿದ್ದಾರೆ. ಅದ್ಯಾಕೆ ಎಂಬುದು ಗೊತ್ತಿಲ್ಲ. ಆದರೆ ಅವರ ಪ್ರಶಂಸೆಯಲ್ಲಿ ಬೆರೆಯವರನ್ನು ಟೀಕಿಸುವ ಉದ್ದೇಶವೂ ಇರಬಹುದು ಎಂದು ಅಭಿಮಾನಿಗಳು ಅಂದಾಜು ಮಾಡಿದ್ದಾರೆ.

ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಎಂಎಸ್ ಧೋನಿ ಅವರನ್ನು ಗಂಭೀರ್ ಶ್ಲಾಘಿಸಿದ್ದು. ವೈಯಕ್ತಿಕ ವೈಭವಕ್ಕಿಂತ ತಂಡಗಳ ಯಶಸ್ಸಿಗೆ ಆದ್ಯತೆ ನೀಡಿದ ನಿಸ್ವಾರ್ಥ ನಾಯಕ ಎಂದು ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ.

ಈ ಹಿಂದೆ ಧೋನಿಯನ್ನು ಅವಕಾಶ ಸಿಕ್ಕಾಗೆಲ್ಲ ಗಂಭೀರ್​ ಟೀಕಿಸಿದ್ದರು. ವಿಶೇಷವಾಗಿ 2011 ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್​ನಲ್ಲಿ ಎಲ್ಲರಿಗೂ ಸಿಗಬೇಕಾದ ಪ್ರಶಂಸೆಯನ್ನು ಧೋನಿ ತಾವೊಬ್ಬರೇ ತೆಗೆದುಕೊಂಡಿದ್ದಾರೆ ಎಂದು ತೆಗಳುತ್ತಿದ್ದರು. ಆ ಪಂದ್ಯದಲ್ಲಿ ಧೋನಿ ಅಜೇಯ 91 ರನ್ ಬಾರಿಸುವ ಜತೆಗೆ ವಿನ್ನಿಂಗ್ ಸಿಕ್ಸರ್ ಸಿಡಿಸಿದ್ದರು. ಜನಮಾನಸದಲ್ಲಿ ಅದು ಅಚ್ಚಳಿಯದೇ ಉಳಿದ ಕಾರಣ ಗೆಲುವಿನ ಪ್ರಶಂಸೆ ಧೋನಿಗೆ ಹೆಚ್ಚಾಗಿ ಸಿಕ್ಕಿತ್ತು. ಅದೇ ಪಂದ್ಯದಲ್ಲಿ 97 ರನ್​ ಬಾರಿಸಿದ ತಮಗೆ ಆ ಕ್ರೆಡಿಟ್​ ಸಿಗಲಿಲ್ಲ ಎಂಬ ಕೊರಗು ಗಂಭೀರ್ ಅವರದ್ದು. ಅದಕ್ಕಾಗಿ ಅವರು ಧೋನಿ ವಿರುದ್ಧ ಆಗಾಗ ತಿರುಗಿ ಬೀಳುತ್ತಿದ್ದು. ಇದೀಗ ಅಚ್ಚರಿ ಎಂಬಂತೆ ಹೊಗಳಿದ್ದಾರೆ.

ಇದನ್ನೂ ಓದಿ : ICC ODI Ranking : ಒಂದೇ ವಾರದೊಳಗೆ ಪಾಕಿಸ್ತಾನ ತಂಡವನ್ನು ಕೆಳಕ್ಕೆ ತಳ್ಳಿದ ಆಸ್ಟ್ರೇಲಿಯಾ!

ಧೋನಿಯ ನಾಯಕತ್ವದ ಜವಾಬ್ದಾರಿಗಳನ್ನು ವಹಿಸಿಕೊಳ್ಳದೇ ಹೋಗಿದ್ದರೆ ಹಲವಾರು ವೈಯಕ್ತಿಕ ದಾಖಲೆ ಮಾಡಬಹುದಾಗಿತ್ತು. ಅವರ ಜವಾಬ್ದಾರಿಗಳು ವೈಯಕ್ತಿಕ ಬ್ಯಾಟಿಂಗ್ ಸಾಧನೆಗಳನ್ನು ಮರೆ ಮಾಡಿವೆ ಎಂದು ಗಂಭೀರ್ ಇದೀಗ ಹೇಳಿದ್ದಾರೆ. ಧೋನಿ ನಾಯಕತ್ವದಲ್ಲಿರದಿದ್ದರೆ ಅವರು ಹಲವಾರು ಏಕದಿನ ದಾಖಲೆಗಳನ್ನು ಸೃಷ್ಟಿಸಬಹುದಾಗಿತ್ತು ಎಂದು ಗಂಭೀರ್ ನುಡಿದಿದ್ದಾರೆ.

“ನಾಯಕತ್ವದ ಜವಾಬ್ದಾರಿಯಿಂದಾಇ ಧೋನಿಗೆ ಬ್ಯಾಟರ್​​ ಆಗಿ ಸಾಧಿಸಬಹುದಾದದ್ದನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಬಹಳಷ್ಟು ಬಾರಿ ನಾಯಕನಾಗಿ ನೀವು ತಂಡವನ್ನು ಮೊದಲ ಸ್ಥಾನದಲ್ಲಿರಿಸಬೇಕಾಗುತ್ತದೆ. ಎಂಎಸ್ ಧೋನಿ ನಾಯಕನಾಗದಿದ್ದರೆ ಅವರು 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದಿತ್ತು. ಅವರು ಹಲವಾರು ಏಕದಿನ ದಾಖಲೆಗಳನ್ನು ಮುರಿಯಬಹುದಾಗಿತ್ತು ಎಂಬುದು ನನಗೆ ಖಾತ್ರಿಯಿದೆ. ಅವರು ಸಾಕಷ್ಟು ಟ್ರೋಫಿಗಳನ್ನು ಗೆದ್ದಿದ್ದಾರೆ ಆದರೆ ವೈಯಕ್ತಿಕವಾಗಿ ಅವರು ಟ್ರೋಫಿಗಳಿಗಾಗಿ ತಮ್ಮ ಅಂತಾರಾಷ್ಟ್ರೀಯ ರನ್​ಗಳನ್ನು ತ್ಯಾಗ ಮಾಡಿದ್ದಾರೆ ಎಂದು ಗಂಭೀರ್ ಸ್ಟಾರ್ ಸ್ಪೋರ್ಟ್ಸ್​​ನಲ್ಲಿ ಹೇಳಿದ್ದಾರೆ.

ಧೋನಿ ಭಾರತೀಯ ಕ್ರಿಕೆಟ್​ಗೆ ವರದಾನ: ಗಂಭೀರ್

ಸಾಂಪ್ರದಾಯಿಕ ಕ್ರಿಕಟಿಗರನ್ನು ಮೀರುವ ಅವರ ವಿಶಿಷ್ಟ ಸಾಮರ್ಥ್ಯವನ್ನು ಧೋನಿಗೆ ಇತ್ತು. ಮಾಜಿ ನಾಯಕ ಭಾರತೀಯ ಕ್ರಿಕೆಟ್​​ನಲ್ಲಿ ಪರಿವರ್ತಕ ವ್ಯಕ್ತಿ ಎಂದು ಗಂಭೀರ್​​ ಹೇಳಿದರು. ವಿಕೆಟ್ ಕೀಪರ್​ಗಳು ಐತಿಹಾಸಿಕವಾಗಿ ಸ್ಪಂಪ್​ಗಳ ಹಿಂದಿನ ಪರಾಕ್ರಮ ಮತ್ತು ನಂತರ ಅವರ ಬ್ಯಾಟಿಂಗ್ ಕೌಶಲ್ಯಕ್ಕೆ ಹೆಸರುವಾಸಿಯಾಗಿರುತ್ತಾರೆ. ಆದರೆ ಧೋನಿ ಮೊದಲು ಬ್ಯಾಟರ್​​ ಮತ್ತು ಎರಡನೆಯದಾಗಿ ವಿಕೆಟ್ ಕೀಪರ್ ಆಗಿ ಎಂದು ಗಂಭೀರ್ ಹೇಳಿದ್ದಾರೆ.

ಹೆಚ್ಚಿನ ವಿಕೆಟ್​ಕೀಪರ್​ಗಳು ಮೊದಲು ಕೀಪರ್​ ಮತ್ತು ನಂತರ ಬ್ಯಾಟರ್ ಆಗಿರುತ್ತಾರೆ. ಎಂಎಸ್ ಧೋನಿ ಮೊದಲು ಬ್ಯಾಟರ್ ಆಗಿದ್ದರು ನಂತರ ವಿಕೆಟ್ ಕೀಪರ್ ಆಗಿದ್ದರು. ಎಂಎಸ್ ಧೋನಿಯಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಿದ್ದರು. ಆ ಕ್ರಮಾಂಕದಲ್ಲಿ ಪಂದ್ಯಗಳನ್ನು ಗೆಲ್ಲಿಸಬಲ್ಲ ವಿಕೆಟ್ ಕೀಪರ್- ಸಿಕ್ಕಿದ್ದು ಭಾರತೀಯ ಕ್ರಿಕೆಟ್​ಗೆ ಒಂದು ಆಶೀರ್ವಾದ ಎಂದು ಗಂಭೀರ್ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

NZ vs BAN: ಮಂಕಡ್​ ನಿರಾಕರಿಸಿ ಕ್ರೀಡಾ ಸ್ಫೂರ್ತಿ ಮೆರೆದ ಲಿಟನ್‌ ದಾಸ್‌‌ಗೆ ನೆಟ್ಟಿಗರ ಮೆಚ್ಚುಗೆ

ಮಂಕಡಿಂಗ್ ರೂಪದಲ್ಲಿ ರನೌಟ್(mankading out) ಆದ ಇಶ್ ಸೋಧಿ ಅಂಪೈರ್ ಜತೆ ಮಾತನಾಡಿ ಮತ್ತೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿದ ಬಾಂಗ್ಲಾ ನಾಯಕ ಲಿಟನ್‌ ದಾಸ್‌‌ ಅವರ ನಡೆಗೆ ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

VISTARANEWS.COM


on

Edited by

Hasan Mahmud running out Ish Sodhi at the non-striker's end
Koo

ಢಾಕಾ: ನ್ಯೂಜಿಲ್ಯಾಂಡ್​(NZ vs BAN) ವಿರುದ್ಧದ ತವರಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಹೀನಾಯ ಸೋಲು ಕಂಡಿದೆ. ಆದರೆ ಪಂದ್ಯದಲ್ಲಿ ಹಂಗಾಮಿ ನಾಯಕ ಲಿಟನ್‌ ದಾಸ್‌‌(Litton Das) ಅವರು ತೋರಿದ ಕ್ರೀಡಾಸ್ಫೂರ್ತಿಗೆ ಎದುರಾಳಿ ತಂಡದ ಆಟಗಾರರು ಮಾತ್ರವಲ್ಲದೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಿವೀಸ್​ ಬ್ಯಾಟಿಂಗ್​ ಸರದಿಯಲ್ಲಿ ಬಾಂಗ್ಲಾ ಬೌಲರ್‌ ಹಸನ್(Hasan Mahmud) 46ನೇ ಓವರ್ ಬೌಲ್ ಮಾಡುತ್ತಿದ್ದ ವೇಳೆ ನಾನ್ ಸ್ಟ್ರೈಕ್​ನಲ್ಲಿದ್ದ ಇಶ್ ಸೋಧಿ(Ish Sodhi) ಬೌಲಿಂಗ್​ ನಡೆಸುವ ಮುನ್ನವೇ ಕ್ರೀಸ್ ತೊರೆದು ಮಂಕಡಿಂಗ್ ರೂಪದಲ್ಲಿ ರನೌಟ್(mankading out) ಆದರು. ಆದರೆ ಅಂಪೈರ್ ಜತೆ ಮಾತನಾಡಿ ಲಿಟ್ಟನ್ ದಾಸ್ ಅವರು ಇಶ್ ಸೋಧಿಗೆ ಮತ್ತೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿದರು. ಅವರ ಈ ನಡೆಗೆ ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಕಡಿಂಗ್ ವೇಳೆ ಸೋಧಿ 17 ರನ್ ಗಳಿಸಿದರು. ಬಳಿಕ 35 ರನ್ ಬಾರಿಸಿದರು. ಇದರಲ್ಲಿ ಮೂರು ಸೊಗಸಾದ ಸಿಕ್ಸರ್​ ಕೂಡ ಸಿಡಿಯಿತು.

ಸೋಲು ಕಂಡ ಬಾಂಗ್ಲಾ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ನ್ಯೂಜಿಲ್ಯಾಂಡ್​ ತಂಡ 49.2 ಓವರ್​ಗಳಲ್ಲಿ 254ರನ್​ಗೆ ಆಲೌಟ್​ ಆಯಿತು. ಗುರಿ ಬೆನ್ನಟ್ಟಿದ ಬಾಂಗ್ಲಾ ಸತತ ವಿಕೆಟ್​ ಕಳೆದುಕೊಂಡು 41.1 ಓವರ್​ಗಳಲ್ಲಿ ಕೇವಲ 168 ರನ್​ಗೆ ಸರ್ವಪತನ ಕಂಡಿತು. ಕಿವೀಸ್​ 86 ರನ್​ಗಳ ಗೆಲುವು ಸಾಧಿಸಿತು. ಮೊದಲ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ಮೂರು ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಕಿವೀಸ್​ ತಂಡ 1-0 ಮುನ್ನಡೆ ಸಾಧಿಸಿದೆ. ಅಂತಿಮ ಪಂದ್ಯ ಸೆಪ್ಟೆಂಬರ್​ 26ರಂದು ನಡೆಯಲಿದೆ.

ಏನಿದು ಮಂಕಡಿಂಗ್​ ಔಟ್​

ಕ್ರಿಕೆಟ್‌ ಆಟದಲ್ಲಿ ಬೌಲರ್‌ ಒಬ್ಬ ಚೆಂಡನ್ನು ಬ್ಯಾಟರ್​ನತ್ತ ಎಸೆಯುವ ಮೊದಲೇ ನಾನ್‌ ಸ್ಟ್ರೈಕ್‌ ನಲ್ಲಿರುವ ಬ್ಯಾಟರ್​ ಕ್ರೀಸ್‌ ಬಿಟ್ಟಿದ್ದರೆ ಆಗ ಬೌಲರ್‌ ಆತನನ್ನು ರನೌಟ್‌ ಮಾಡುವ ಅವಕಾಶವನ್ನು ಕ್ರಿಕೆಟ್‌ ಕಾನೂನಿನ 41.46 ನಿಯಮ ನೀಡುತ್ತದೆ. ನಾನ್‌ ಸ್ಟ್ರೈಕ್​ನಲ್ಲಿರುವ ಬ್ಯಾಟರ್​ ಒಬ್ಬನನ್ನು ಆತನ ಅರಿವಿಗೆ ಬರದಂತೆ ರನೌಟ್‌ ಮಾಡುವ ವಿಧಾನ ಇದಾಗಿದೆ. ಈ ಅವಕಾಶ ಆ ಓವರ್‌ ಬೌಲಿಂಗ್‌ ಮಾಡುತ್ತಿರುವ ಬೌಲರ್​ಗೆ ಮಾತ್ರವೇ ಇರುತ್ತದೆ. ಮತ್ತು ಇದು ಸಂಪೂರ್ಣವಾಗಿ ಬೌಲರೊಬ್ಬನ ವಿವೇಚನೆಗೆ ಬಿಟ್ಟಿರುವ ವಿಚಾರವಾಗಿರುತ್ತದೆ.

ಇದನ್ನೂ ಓದಿ Litton Das: ಬಾಂಗ್ಲಾ ತಂಡಕ್ಕೆ ಲಿಟ್ಟನ್​ ದಾಸ್​ ನಾಯಕ

ಮಂಕಡಿಂಗ್ ಹೆಸರು ಬರಲು ಕಾರಣವೇನು?

1947ರಲ್ಲಿ ಭಾರತ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಕ್ವೀನ್ಸ್‌ ಲ್ಯಾಂಡ್‌ ವಿರುದ್ಧದ ಪಂದ್ಯವೊಂದರಲ್ಲಿ ಭಾರತದ ಎಡಗೈ ಸ್ಪಿನ್ನರ್‌ ವೀನೂ ಮಂಕಡ್‌ ಅವರು ಬಿಲ್‌ ಬ್ರೌನ್‌ ಅವರನ್ನು ನಾನ್‌ ಸ್ಟ್ರೈಕ್‌ ಭಾಗದಲ್ಲಿ ರನೌಟ್‌ ಮಾಡಿದ್ದರು. ಆ ಬಳಿಕ ಕ್ರಿಕೆಟ್‌ ನ ಈ ವಿಚಿತ್ರ ನಿಯಮಕ್ಕೆ ‘ಮಂಕಡ್‌’ ನಿಯಮ ಎಂದೇ ಪ್ರಸಿದ್ಧಿ ಪಡೆಯಿತು.

Continue Reading

ಕ್ರಿಕೆಟ್

Mohammed Shami: 16 ವರ್ಷಗಳ ಬಳಿಕ ವಿಶೇಷ ದಾಖಲೆ ಬರೆದ ಮೊಹಮ್ಮದ್​ ಶಮಿ

ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್ ಕಿತ್ತ ಮೂರನೇ ವೇಗಿ ಎಂಬ ಖ್ಯಾತಿಗೆ ಮೊಹಮ್ಮದ್ ಶಮಿ ಪಾತ್ರರಾಗಿದ್ದಾರೆ. ಆ ಮೂಲಕ ದಿಗ್ಗಜರಾದ ಕಪಿಲ್ ದೇವ್ ಹಾಗೂ ಅಜಿತ್ ಅಗರ್ಕರ್ ಅವರನ್ನೊಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ.

VISTARANEWS.COM


on

Edited by

Mohammed Shami finished with 5 for 51
Koo

ಮೊಹಾಲಿ: ಆಸ್ಟ್ರೇಲಿಯಾ(India vs Australia, 1st ODI) ವಿರುದ್ಧ ಶುಕ್ರವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಘಾತಕ ಬೌಲಿಂಗ್​ ಮೂಲಕ ಗಮನಸೆಳೆದ ಮೊಹಮ್ಮದ್​ ಶಮಿ(Mohammed Shami) 16 ವರ್ಷಗಳ ಬಳಿಕ ದಾಖಲೆಯೊಂದನ್ನು ಬರೆದಿದ್ದಾರೆ. ಇದಕ್ಕೂ ಮುನ್ನ 2007ರಲ್ಲಿ ಜಹೀರ್ ಖಾನ್(Zaheer Khan) ಗೋವಾದಲ್ಲಿ ನಡೆದಿದ್ದ ಪಂದ್ಯದಲ್ಲಿ ಲಂಕಾ ವಿರುದ್ಧ 5 ವಿಕೆಟ್ ಸಾಧನೆ ಮಾಡಿದ್ದರು. ಇದೀಗ 16 ವರ್ಷಗಳ ಬಳಿಕ ಶಮಿ ತವರು ಅಂಗಣದಲ್ಲಿ 5 ವಿಕೆಟ್ ಸಾಧನೆ ಮಾಡಿದ್ದಾರೆ.

ಮೂರನೇ ವೇಗಿ

ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್ ಕಿತ್ತ ಮೂರನೇ ವೇಗಿ ಎಂಬ ಖ್ಯಾತಿಗೆ ಮೊಹಮ್ಮದ್ ಶಮಿ ಪಾತ್ರರಾಗಿದ್ದಾರೆ. ಆ ಮೂಲಕ ದಿಗ್ಗಜರಾದ ಕಪಿಲ್ ದೇವ್ ಹಾಗೂ ಅಜಿತ್ ಅಗರ್ಕರ್ ಅವರನ್ನೊಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ.

2019ರ ವಿಶ್ವಕಪ್​​ನಲ್ಲಿ ಬರ್ಮಿಂಗ್ ಹ್ಯಾಮ್​​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 69 ರನ್​​ಗೆ 5 ವಿಕೆಟ್ ಪಡೆದದ್ದು ಶಮಿಯ ಇದುವರೆಗಿನ ಶ್ರೇಷ್ಠ ಬೌಲಿಂಗ್​ ಸಾಧನೆಯಾಗಿತ್ತು. ಆದರೆ ಆಸೀಸ್​ ವಿರುದ್ಧ ಶಮಿ 51 ರನ್​ಗೆ 5 ವಿಕೆಟ್​ ಕೆಡವಿ ಈ ಸಾಧನೆಯನ್ನು ಉತ್ತಮ ಪಡಿಸಿಕೊಂಡರು. ಇದು ಏಕದಿನ ಕ್ರಿಕೆಟ್​​ನಲ್ಲಿ ಶಮಿ ಅವರ ಎರಡನೇ ಐದು ವಿಕೆಟ್ ಸಾಧನೆಯಾಗಿದೆ. ಒಟ್ಟಾರೆ 50 ಓವರ್​ಗಳ ಸ್ವರೂಪದಲ್ಲಿ ಶಮಿ ಒಂಬತ್ತು ಬಾರಿ ನಾಲ್ಕು ವಿಕೆಟ್​ಗಳನ್ನು ಕಿತ್ತ ಸಾಧನೆ ಮಾಡಿದ್ದಾರೆ.

ಶಮಿ ಈಗ ಏಕದಿನ ಪಂದ್ಯಗಳಲ್ಲಿ ಕಾಂಗರೂ ಬಳಗದ ವಿರುದ್ಧ 37 ವಿಕೆಟ್​ಗಳನ್ನು ಹೊಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಮೆನ್ ಇನ್ ಬ್ಲೂ ಪರ ಅತಿ ಹೆಚ್ಚು ವಿಕೆಟ್ (45) ಪಡೆದ ಕಪಿಲ್ ದೇವ್ ನಂತರ ಎರಡನೇ ಸ್ಥಾನದಲ್ಲಿದ್ದಾರೆ. ಮೊಹಾಲಿಯಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ 277 ರನ್​ಗಳ ಗುರಿ ಬೆನ್ನತ್ತಿದಿದೆ. ಸರಣಿಯ ಎರಡನೇ ಪಂದ್ಯ ಇಂದೋರ್​ನಲ್ಲಿ ಮತ್ತು ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ರಾಜ್​​ಕೋಟ್​​ನಲ್ಲಿ ನಡೆಯಲಿದೆ.

ಇದನ್ನೂ ಓದಿ IND vs AUS: ಆಸೀಸ್​ಗೆ ಬೀಳಲಿ ಸರಣಿ ಸೋಲಿನ ಏಟು

ಪಂದ್ಯ ಗೆದ್ದ ಭಾರತ

ಇಲ್ಲಿನ ಐಎಸ್​ ಬಿಂದ್ರಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 50 ಓವರ್​ಗಳಲ್ಲಿ 276 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ. 48.4 ಓವರ್​ಗಳಲ್ಲಿ. 5 ವಿಕೆಟ್​ ಕಳೆದುಕೊಂಡು 281 ರನ್ ಬಾರಿಸಿ ಜಯಶಾಲಿಯಾಯಿತು. ಭಾರತ ತಂಡದ ಪರ ಬೌಲಿಂಗ್​ನಲ್ಲಿ 51 ರನ್​ಗಳಿಗೆ 5 ವಿಕೆಟ್​ ಉರುಳಿಸಿದ ಮೊಹಮ್ಮದ್ ಶಮಿ ಹಾಗೂ ಬ್ಯಾಟಿಂಗ್ ಮೂಲಕ ತಲಾ ಅರ್ಧ ಶತಕಗಳನ್ನು ಬಾರಿಸಿದ ಶುಭ್​ಮನ್​ ಗಿಲ್​ (74) ಹಾಗೂ ಋತುರಾಜ್​ ಗಾಯಕ್ವಾಡ್​ (71), ಸೂರ್ಯಕುಮಾರ್​ ಯಾದವ್​ (50), ಮತ್ತು ಕೆ. ಎಲ್​ ರಾಹುಲ್​ (58*) ಗೆಲುವಿನ ರೂವಾರಿಗಳು ಎನಿಸಿಕೊಂಡರು. ಶಮಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.

Continue Reading

ಕ್ರಿಕೆಟ್

‘ಎಂದಿಗೂ ಬದಲಾಗಬೇಡ’ ನವೀನ್ ಉಲ್ ಹಕ್​ಗೆ ಜನ್ಮದಿನದ ಶುಭಾಶಯ ಕೋರಿದ ಗಂಭೀರ್; ಹಾರೈಕೆ ಹಿಂದಿದೆ ನರಿ ಬುದ್ಧಿ

ಐಪಿಎಲ್​ನ ಲಕ್ನೋ ತಂಡದ ಜೆರ್ಸಿಯಲ್ಲಿ ಜತೆಗಿರುವ ಫೋಟೊವನ್ನು ಹಂಚಿಕೊಂಡು ನವೀನ್ ಉಲ್ ಹಕ್​ಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿ, ನೀನು ಯಾವುದೇ ಕಾರಣಕ್ಕೂ, ಬದಲಾಗಬೇಡ, ನಿನ್ನಂತಹ ವ್ಯಕ್ತಿಗಳು ಸಿಗುವುದು ತುಂಬಾ ಕಡಿಮೆ” ಎಂದು ಗೌತಮ್​ ಗಂಭೀರ್ ಬರೆದುಕೊಂಡಿದ್ದಾರೆ.

VISTARANEWS.COM


on

Edited by

naveen ul haq and gautam gambhir
Koo

ಮುಂಬಯಿ: ವಿರಾಟ್​ ಕೊಹ್ಲಿಯ(virat kohli) ಬದ್ಧ ಎದುರಾಳಿ ಅಫಘಾನಿಸ್ತಾನ ತಂಡದ ವೇಗಿ ನವೀನ್ ಉಲ್ ಹಕ್ (Naveen-ul-Haq) 24ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅನೇಕರು ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಆದರೆ ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ ಗೌತಮ್​ ಗಂಭೀರ್(Gautam Gambhir)​ ಅವರ ಹಾರೈಕೆ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ.

ವಿರಾಟ್​ ಕೊಹ್ಲಿ ಅವರನ್ನು ಒಂದಲ್ಲ ಒಂದು ವಿಚಾರವಾಗಿ ಕೆಣಕುವ ಮತ್ತು ಅಪಹಾಸ್ಯ ಮಾಡುವ ಗಂಭೀರ್​ ಈ ಬಾರಿಯೂ ಇದೇ ಕೀಳುಮಟ್ಟದ ಪ್ರವೃತ್ತಿಯನ್ನು ತೋರಿದ್ದಾರೆ. ಐಪಿಎಲ್​ನ ಲಕ್ನೋ ತಂಡದ ಜೆರ್ಸಿಯಲ್ಲಿ ಜತೆಗಿರುವ ಫೋಟೊವನ್ನು ಹಂಚಿಕೊಂಡು ನವೀನ್ ಉಲ್ ಹಕ್​ಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿ, ನೀನು ಯಾವುದೇ ಕಾರಣಕ್ಕೂ, ಬದಲಾಗಬೇಡ, ನಿನ್ನಂತಹ ವ್ಯಕ್ತಿಗಳು ಸಿಗುವುದು ತುಂಬಾ ಕಡಿಮೆ” ಎಂದು ಹರಸಿ ಕೊಹ್ಲಿಗೆ ಪರೋಕ್ಷವಾಗಿ ಟಾಂಗ್​ ನೀಡಿದ್ದಾರೆ.

ನವೀನ್ ಉಲ್ ಹಕ್ ವಿಚಾರದಲ್ಲಿ ಕೊಹ್ಲಿ ಜತೆ ಕಿರಿಕ್​

ಈ ಬಾರಿಯ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಮೆಂಟರ್​ ಆಗಿ ಕಾರ್ಯನಿರ್ವಹಿಸಿದ್ದ ಗೌತಮ್​ ಗಂಭಿರ್​ ಅವರು ನವೀನ್​ ಉಲ್​ ಹಕ್​ ವಿಚಾರದಲ್ಲಿ ಕೊಹ್ಲಿ(virat kohli and naveen ul haq) ಜತೆ ಮೈದಾನದಲ್ಲೇ ವಾಗ್ವಾದ ನಡೆಸಿ ಕೈ ಕೈ ಮಿಲಾಯಿಸುವ ಹಂತದದ ವರೆಗೂ ಹೋಗಿದ್ದರು. ಅತ್ತ ನವೀನ್​ ಕೂಡ ಕೊಹ್ಲಿಯನ್ನು ಪದೇಪದೆ ಕೆಣಕಿ ಅಗೌರವದಿಂದ ನಡೆದುಕೊಂಡಿದ್ದರು. ಇದಕ್ಕೆ ಕೊಹ್ಲಿ ಅಭಿಮಾನಿಗಳು ಗಂಭೀರ್​ ಮತ್ತು ನವೀನ್​ ಅವರನ್ನು ಕಂಡಾಗಲೆಲ್ಲಾ ಕೊಹ್ಲಿಯ ಹೆಸರನ್ನು ಜೋರಾಗಿ ಕರೆದು ಕೆಣಕುತ್ತಿದ್ದಾರೆ.

ಏಷ್ಯಾಕಪ್​ನಲ್ಲಿಯೂ ಕೊಹ್ಲಿಯನ್ನು ಕೆಣಕಿದ್ದ ಗಂಭೀರ್​

ಕಳೆದ ವಾರ ಮುಕ್ತಾಯ ಕಂಡ ಏಷ್ಯಾಕಪ್​ ಟೂರ್ನಿಯಲ್ಲಿಯೂ ಕೊಹ್ಲಿಯನ್ನು ಗಂಭೀರ್​ ಅಪಹಾಸ್ಯ ಮಾಡಿದ್ದರು. ಪಾಕಿಸ್ತಾನ ವಿರುದ್ಧದ ಮೊದಲ ಮುಖಾಮುಖಿಯಲ್ಲಿ ಕೊಹ್ಲಿ, ಶಾಹೀನ್​ ಅಫ್ರಿದಿ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆದ ವೇಳೆ ಲೈವ್​ ಕಾಮೆಂಟ್ರಿಯಲ್ಲೇ ಟೀಕಿಸಿದ್ದರು. ವಿರಾಟ್​ ಕೊಹ್ಲಿ ಔಟಾಗುತ್ತಿದ್ದಂತೆ “ಈ ಎಸೆತಕ್ಕೆ ಬ್ಯಾಟ್​ ಬೀಸುವ ಅಗತ್ಯವೇ ಇರಲಿಲ್ಲ. ವಿಕೆಟ್​ನ ಮುಂದೆ ಕೂಡ ಈ ಚೆಂಡು ಇರಲಿಲ್ಲ. ಸಂಪೂರ್ಣವಾಗಿ ವಿಕೆಟ್​ ನಿಂದ ಚೆಂಡು ಹೊರ ಭಾಗದಲ್ಲಿತ್ತು. ವಿಶ್ವದ ಶ್ರೇಷ್ಠ ಬೌಲರ್​ಗಳಲ್ಲಿ ಒಬ್ಬರಾಗಿರುವ ಶಾಹೀನ್ ಅಫ್ರಿದಿ ಅವರಂತ ಬೌಲರ್​ಗಳ ಮುಂದೆ ಶ್ರೇಷ್ಠ ಬ್ಯಾಟರ್​ ಈ ಎಸೆತಕ್ಕೆ ಮುಂದೆ ಹೋಗಬೇಕೋ ಅಥವಾ ಹಿಂದೆ ಹೋಗಬೇಕೋ ಎಂಬುದನ್ನು ತಿಳಿದಿರಬೇಕು” ಎಂದು ಹೇಳುವ ಮೂಲಕ ಗಂಭೀರ್​ ಅವರು ಕೊಹ್ಲಿಯನ್ನು ಟೀಕಿಸಿ ವ್ಯಂಗ್ಯವಾಡಿದ್ದರು.

ಇದನ್ನೂ ಓದಿ IND vs PAK : ಭಾರತದ ಕ್ರಿಕೆಟಿಗರು ಪಾಕಿಸ್ತಾನದವರ ಕೈ ಕುಲುಕುವುದು ಸರಿಯಲ್ಲ; ಗಂಭೀರ್​ ಹೀಗೆ ಹೇಳಿದ್ಯಾಕೆ?

ಇದಾದ ಬಳಿಕ ಪಾಕ್​ ವಿರುದ್ಧದ ಸೂಪರ್​ 4 ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಇದನ್ನು ಗಂಭೀರ್​ ಟೀಕಿಸಿದ್ದರು. 94 ಎಸೆತದಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ ಅಜೇಯ 122 ರನ್​ ಗಳಿಸಿದ್ದರು. ಅಲ್ಲದೆ ಅತಿ ವೇಗವಾಗಿ 13 ಸಾವಿರ ರನ್​ ಪೂರ್ತಿಗೊಳಿಸಿದ ದಾಖಲೆಯನ್ನು ನಿರ್ಮಿಸಿದ್ದರು. ಈ ಎಲ್ಲ ಕಾರಣದಿಂದ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು ಆದರೆ ಗಂಭೀರ್​ ಈ ಪ್ರಶಸ್ತಿಗೆ ಕೊಹ್ಲಿ ಅರ್ಹನಲ್ಲ ಎಂದು ಹೇಳಿದ್ದರು.

Continue Reading

ಕ್ರಿಕೆಟ್

Sara vs Gill: ಶುಭಮನ್​ ಗಿಲ್​ ಜತೆಗಿನ ಪ್ರೀತಿಗೆ ಕ್ಲ್ಯಾರಿಟಿ ನೀಡಿದ ಸಾರಾ ತೆಂಡೂಲ್ಕರ್

ಸಾರಾ ತೆಂಡೂಲ್ಕರ್ ಅವರು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ‘ವೆಲ್‌ ಪ್ಲೇ​​ ಶುಭಮನ್​ ಗಿಲ್’ ಎಂದು ಬರೆದು ಚಪ್ಪಾಳೆ ತಟ್ಟುವ ಎಮೊಜಿಯನ್ನು ಹಾಕಿದ್ದಾರೆ. ಇದು ನೆಟ್ಟಿಗರಿಗೆ ಆಹಾರವಾಗಿದೆ.

VISTARANEWS.COM


on

Edited by

Shubman Gill and Sara Tendulkar
Koo

ಮುಂಬಯಿ: ಸಚಿನ್​ ತೆಂಡೂಲ್ಕರ್​(sachin tendulkar) ಅವರ ಪುತ್ರಿ ಸಾರಾ ತೆಂಡೂಲ್ಕರ್ ಮತ್ತು ಟೀಮ್​ ಇಂಡಿಯಾದ ಸ್ಟಾರ್​ ಯುವ ಆಟಗಾರ ಶುಭಮನ್​ ಗಿಲ್​ ಇಬ್ಬರು ಕದ್ದು ಮುಚ್ಚಿ ಡೇಟಿಂಗ್(sara tendulkar and shubman gill relationship)​ ನಡೆಸುತ್ತಿದ್ದಾರೆ ಎಂಬ ಸುದ್ದಿ ಈಗಾಗಲೇ ಹಲವು ಬಾರಿ ಕೇಳಿಬಂದಿದೆ. ಇದೇ ಕಾರಣಕ್ಕೆ ಇವರಿಬ್ಬರನ್ನು ನೆಟ್ಟಿಗರು ಹಲವು ಬಾರಿ ಟ್ರೋಲ್​ ಕೂಡ ಮಾಡಿದ್ದಾರೆ. ಆದರೆ ಗಿಲ್​ ಮತ್ತು ಸಾರಾ ತಮ್ಮ ಪ್ರೀತಿ ಮತ್ತು ಡೇಟಿಂಗ್​ ವಿಚಾರವಾಗಿ ಇದುವರೆಗೂ ಎಲ್ಲಯೂ ತುಟಿಬಿಚ್ಚಿಲ್ಲ. ಎಷ್ಟೇ ರೂಮರ್ಸ್​ ಹಬ್ಬಿದರೂ ತಮ್ಮ ಪಾಡಿಗೆ ತಾವು ಸುಮ್ಮನಿದ್ದರು. ಇದೀಗ ಸಾರಾ ಅವರು ಮಾಡಿರುವ ಟ್ವೀಟ್​ ಈ ಜೋಡಿ ನಿಜವಾಗಿಯೂ ಪ್ರೀತಿಸುತ್ತಿರುವುದು ಖಚಿತ ಎಂಬ ಸುಳಿವು ನೀಡಿದಂತಿದೆ.

“ವೆಲ್‌ ಪ್ಲೇ​ ಶುಭಮನ್​ ಗಿಲ್”

ಆಸ್ಟ್ರೇಲಿಯಾ ವಿರುದ್ಧ ಶುಕ್ರವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಶುಭಮನ್​ ಗಿಲ್​ 63 ಎಸೆತ ಎದುರಿಸಿ 6 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 74 ರನ್​ ಬಾರಿಸಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅವರ ಪ್ರದರ್ಶನಕ್ಕೆ ಸಾರಾ ತೆಂಡೂಲ್ಕರ್ ಅವರು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ‘ವೆಲ್‌ ಪ್ಲೇ​​ ಶುಭಮನ್​ ಗಿಲ್’ ಎಂದು ಬರೆದು ಚಪ್ಪಾಳೆ ತಟ್ಟುವ ಎಮೊಜಿಯನ್ನು ಹಾಕಿದ್ದಾರೆ. ಇದು ನೆಟ್ಟಿಗರಿಗೆ ಆಹಾರವಾಗಿದೆ. ಇಬರಿಬ್ಬರ ಮಧ್ಯೆ ಪ್ರೇಮಾಂಕುರ ಇರುವುದು ಪಕ್ಕಾ ಎಂದಿದ್ದಾರೆ.

ಶುಭ​ಮನ್​ ಗಿಲ್ ಅವರು ಆಡುವ ವೇಳೆ​ ಹಲವು ಬಾರಿ ಪ್ರೇಕ್ಷಕರು ಸಾರಾ, ಸಾರಾ… ಎಂದು ಕೂಗಿದ್ದರು. ಈ ಸಾರಾ ಯಾರೆಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ನಡೆಯುತ್ತಿದ್ದರೂ ಇದಕ್ಕೆ ಯಾವುದೇ ಕ್ಲ್ಯಾರಿಟಿ ಸಿಕ್ಕಿರಲಿಲ್ಲ. ಕೆಲವರು ಗಿಲ್ ಸಚಿನ್​ ತೆಂಡೂಲ್ಕರ್​ ಪುತ್ರಿ ಜತೆ ಅಂದುಕೊಂಡಿದ್ದರೆ, ಇನ್ನೂ ಕೆಲವರು ನಟಿ ಸಾರಾ ಅಲಿ ಖಾನ್​ ಎಂದುಕೊಂಡಿದ್ದರು. ಆದರೆ ಈಗ ನೆಟ್ಟಿಗರಿಗೆ ಒಂದು ಹಂತದ ಕ್ಲ್ಯಾರಿಟಿ ಸಿಕ್ಕಿದ್ದು ಸಚಿನ್​ ಪುತ್ರಿ ಸಾರಾ ಅವರರೇ ಗಿಲ್​ ಪ್ರೇಯಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ Viral Video: ಪಂದ್ಯ ಮುಗಿದರೂ ತಡರಾತ್ರಿವರೆಗೂ ಬ್ಯಾಟಿಂಗ್​ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರ

ಭಾರತಕ್ಕೆ 5 ವಿಕೆಟ್​ ಜಯ

ಇಲ್ಲಿನ ಐಎಸ್​ ಬಿಂದ್ರಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 50 ಓವರ್​ಗಳಲ್ಲಿ 276 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ. 48.4 ಓವರ್​ಗಳಲ್ಲಿ. 5 ವಿಕೆಟ್​ ಕಳೆದುಕೊಂಡು 281 ರನ್ ಬಾರಿಸಿ ಜಯಶಾಲಿಯಾಯಿತು. ಭಾರತ ತಂಡದ ಪರ ಬೌಲಿಂಗ್​ನಲ್ಲಿ 51 ರನ್​ಗಳಿಗೆ 5 ವಿಕೆಟ್​ ಉರುಳಿಸಿದ ಮೊಹಮ್ಮದ್ ಶಮಿ ಹಾಗೂ ಬ್ಯಾಟಿಂಗ್ ಮೂಲಕ ತಲಾ ಅರ್ಧ ಶತಕಗಳನ್ನು ಬಾರಿಸಿದ ಶುಭ್​ಮನ್​ ಗಿಲ್​ (74) ಹಾಗೂ ಋತುರಾಜ್​ ಗಾಯಕ್ವಾಡ್​ (71), ಸೂರ್ಯಕುಮಾರ್​ ಯಾದವ್​ (50), ಮತ್ತು ಕೆ. ಎಲ್​ ರಾಹುಲ್​ (58*) ಗೆಲುವಿನ ರೂವಾರಿಗಳು ಎನಿಸಿಕೊಂಡರು.

Continue Reading
Advertisement
cyclothon in Bangalore
ಬೆಂಗಳೂರು4 mins ago

World Heart Day: ಹೃದಯ ಆರೋಗ್ಯ ಜಾಗೃತಿಗಾಗಿ ಸಾಗರ್ ಆಸ್ಪತ್ರೆಯಿಂದ ‌ಸೈಕ್ಲೋಥಾನ್; 500 ಮಂದಿ ಭಾಗಿ

Hasan Mahmud running out Ish Sodhi at the non-striker's end
ಕ್ರಿಕೆಟ್26 mins ago

NZ vs BAN: ಮಂಕಡ್​ ನಿರಾಕರಿಸಿ ಕ್ರೀಡಾ ಸ್ಫೂರ್ತಿ ಮೆರೆದ ಲಿಟನ್‌ ದಾಸ್‌‌ಗೆ ನೆಟ್ಟಿಗರ ಮೆಚ್ಚುಗೆ

Narendra modi image
ಕಲೆ/ಸಾಹಿತ್ಯ28 mins ago

Narendra Modi : ಕಲಾವಿದನ ಕುಂಚ, ಕೃತಕ ಬುದ್ಧಿಮತ್ತೆ ಸೇರಿಕೊಂಡರೆ ಪ್ರಕೃತಿಯಲ್ಲೇ ಕಾಣುತ್ತದೆ ಮೋದಿ ಮುಖ

Vistara Top 10 News 2309
ಕರ್ನಾಟಕ37 mins ago

VISTARA TOP 10 NEWS : ಸೆ. 26ಕ್ಕೆ ಬೆಂಗಳೂರು ಬಂದ್‌ಗೆ ಕರೆ, ಚೈತ್ರಾ ಕುಂದಾಪುರ ಟೀಮ್‌ ಪರಪ್ಪನ ಅಗ್ರಹಾರದಲ್ಲಿ ಸೆರೆ

Anegondi Vrindavana
ಕರ್ನಾಟಕ40 mins ago

Gangavathi News: ಆನೆಗೊಂದಿ ಜಯತೀರ್ಥ-ರಘುವರ್ಯರ ವೃಂದಾವನ ವಿವಾದ; ರಾಯರ ಮಠದ ಪರ ಹೈಕೋರ್ಟ್ ತೀರ್ಪು

Modi Reservation
ದೇಶ51 mins ago

Women’s Reservation Bill : ಮಹಿಳಾ ಮೀಸಲಾತಿ ವಿರೋಧಿಸಿದವರಿಗೆ ಭೀತಿ ಶುರುವಾಗಿದೆ; ಮೋದಿ ಲೇವಡಿ

Mohammed Shami finished with 5 for 51
ಕ್ರಿಕೆಟ್1 hour ago

Mohammed Shami: 16 ವರ್ಷಗಳ ಬಳಿಕ ವಿಶೇಷ ದಾಖಲೆ ಬರೆದ ಮೊಹಮ್ಮದ್​ ಶಮಿ

MK Stalin
ದೇಶ1 hour ago

Organ Donation : ಅಂಗಾಂಗ ದಾನ ಮಾಡಿದವರ ಅಂತ್ಯ ಸಂಸ್ಕಾರಕ್ಕೆ ಸಕಲ ಸರ್ಕಾರಿ ಗೌರವ

Chaitra Kundapura
ಉಡುಪಿ2 hours ago

Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್‌

women arrested
ದೇಶ2 hours ago

Illicit Affair : ಅಕ್ರಮ ಸಂಬಂಧ ನೋಡಿದ ಮಗನನ್ನೇ ಕೊಂದ ಹೆತ್ತಮ್ಮ; 2 ವರ್ಷದ ಬಳಿಕ ಪ್ರಿಯಕರನ ಜತೆ ಅರೆಸ್ಟ್​​

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ19 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ6 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ1 week ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ1 week ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌