Rishabh Pant | ರಿಷಭ್​ ಪಂತ್​ ಆರೋಗ್ಯ ಸ್ಥಿತಿ ಕುರಿತು ಮ್ಯಾಕ್ಸ್​​ ಆಸ್ಪತ್ರೆಯ ವೈದ್ಯರು ಕೊಟ್ಟ ಹೇಳಿಕೆಗಳೇನು? - Vistara News

ಕ್ರಿಕೆಟ್

Rishabh Pant | ರಿಷಭ್​ ಪಂತ್​ ಆರೋಗ್ಯ ಸ್ಥಿತಿ ಕುರಿತು ಮ್ಯಾಕ್ಸ್​​ ಆಸ್ಪತ್ರೆಯ ವೈದ್ಯರು ಕೊಟ್ಟ ಹೇಳಿಕೆಗಳೇನು?

ಕಾರು ಅಪಘಾತಕ್ಕೆ ಒಳಗಾದ ರಿಷಭ್​ ಪಂತ್ ಅವರ ಗಾಯದ ಸ್ವರೂಪದ ಬಗ್ಗೆ ಡೆಹ್ರಾಡೂನ್​ ಮ್ಯಾಕ್ಸ್ ಆಸ್ಪತ್ರೆಯ ವೈದ್ಯರ ತಂಡ ಬುಲೆಟಿನ್​ ಬಿಡುಗಡೆ ಮಾಡಿದೆ.

VISTARANEWS.COM


on

ind vs nz pant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡೆಹ್ರಾಡೂನ್​: ಕಾರು ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕ್ರಿಕೆಟರ್​ ರಿಷಭ್ ಪಂತ್ (Rishabh Pant) ಅವರ ಆರೋಗ್ಯ ಸ್ಥಿತಿಯ ಬಗ್ಗೆ ಡೆಹ್ರಾಡೂನ್​ನ ಮ್ಯಾಕ್ಸ್​ ​ ಆಸ್ಪತ್ರೆಯ ಮೊದಲ ಬುಲೆಟಿನ್​ ಬಿಡುಗಡೆ ಮಾಡಿದೆ. ಅದರ ಪ್ರಕಾರ ಯುವ ಕ್ರಿಕೆಟಿಗ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ರೀತಿಯ ಆತಂಕಗಳು ಇಲ್ಲ. ಆದರೆ, ಆಗಿರುವ ಗಾಯಗಳಿಗೆ ಚಿಕಿತ್ಸೆ ಮುಂದುವರಿಯಲಿದ್ದು, ಸಂಜೆ ವೇಳೆ ಇನ್ನೊಂದು ಬುಲೆಟಿನ್ ಬಿಡುಗಡೆಯಾಗಲಿದೆ.

ಮ್ಯಾಕ್ಸ್ ಆಸ್ಪತ್ರೆಯ ವೈದ್ಯರಾದ ಡಾ. ಆಶೀಶ್​ ಯಾಗ್ನಿಕ್ ಅವರು ಪಂತ್​ ಆರೋಗ್ಯದ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಕ್ರಿಕೆಟರ್​ ರಿಷಭ್​ ಪಂತ್​ ಅವರು ಆಸ್ಪತ್ರೆಯ ವೈದ್ಯರ ತಂಡದ ನಿಗಾದಲ್ಲಿ ಇದ್ದಾರೆ. ಆರ್ಥೋಪೆಡಿಕ್​ ಹಾಗೂ ಪ್ಲಾಸ್ಟಿಕ್​ ಸರ್ಜನ್​ಗಳು ಆರೋಗ್ಯ ಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಹಣೆಯ ಮೇಲೆ ಒಂದೆರಡು ಗಾಯಗಳು ಆಗಿದ್ದು, ಬೆನ್ನಿನ ಚರ್ಮದ ಮೇಲೂ ಗಾಯಗಳಾಗಿವೆ. ಅಂತೆಯೇ ಮಂಡಿಗೂ ಪೆಟ್ಟು ಬಿದ್ದಿದೆ, ಎಂದು ಹೇಳಿದ್ದಾರೆ.

ಅವರನ್ನು ಇನ್ನಷ್ಟು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಸಂಜೆಯ ವೇಳೆಗೆ ಇನ್ನಷ್ಟು ಮಾಹಿತಿ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಪಂತ್​ ಅವರು ಡೆಲ್ಲಿಯಿಂದ ತಮ್ಮೂರು ಉತ್ತರಾಖಂಡದ ರೂರ್ಕಿಗೆ ಕಾರಿನಲ್ಲಿ ಹೋಗುವಾಗ ಅಪಘಾತಕ್ಕೆ ಒಳಗಾಗಿದ್ದರು. ಅವರು ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿದೆ. ಡೆಲ್ಲಿ -ಡೆಹ್ರಾಡೂನ್​ ಎಕ್ಸ್​ಪ್ರೆಸ್​ ವೇನಲ್ಲಿ ಮಂಜು ಹೆಚ್ಚು ಇದ್ದ ಕಾರಣ ರಸ್ತೆ ಕಾಣದೇ ಅಪಘಾತವಾಗಿದೆ ಎನ್ನಲಾಗುತ್ತಿದೆ. ಕಾರು ಚಾಲನೆ ಮಾಡುತ್ತಿದ್ದ ಪಂತ್​ಗೆ ನಿದ್ದೆಯ ಮಂಪರು ಆವರಿಸಿದ್ದು ಕೂಡ ಘಟನೆ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ | Rishabh Pant | ಕಾರು ಅವಘಡದಲ್ಲಿ ಗಾಯಗೊಂಡಿರುವ ರಿಷಭ್​ ಪಂತ್​ ಐಪಿಎಲ್​, ವಿಶ್ವ ಕಪ್​ಗೆ ಅಲಭ್ಯ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

MS Dhoni : ಐಪಿಎಲ್​ನಲ್ಲಿ 150 ಪಂದ್ಯಗಳನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರರಾದ ಧೋನಿ; ಅವರ ಬಳಿಕ ಯಾರಿದ್ದಾರೆ?

MS Dhoni: ಎಂಎಸ್ ಧೋನಿ ಐಪಿಎಲ್​​ನಲ್ಲಿ 259 ಪಂದ್ಯಗಳನ್ನು ಆಡಿದ್ದಾರೆ, 2008 ರಲ್ಲಿ ಉದ್ಘಾಟನಾ ಆವೃತ್ತಿಯಿಂದ ಟಿ 20 ಲೀಗ್​​ನ ಭಾಗವಾಗಿದ್ದಾರೆ. ಐಪಿಎಲ್​​ನಲ್ಲಿ 5 ಪ್ರಶಸ್ತಿಗಳನ್ನು ಗೆದ್ದಿರುವ ಜಂಟಿ ಅತ್ಯಂತ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸಕ್ತ ಋತುವಿಗೆ ಮುಂಚಿತವಾಗಿ ಧೋನಿ ಸೂಪರ್ ಕಿಂಗ್ಸ್​​ನ ನಾಯಕತ್ವವನ್ನು ಋತುರಾಜ್ ಗಾಯಕ್ವಾಡ್ಗೆ ಹಸ್ತಾಂತರಿಸಿದ್ದರು.

VISTARANEWS.COM


on

MS Dhoni
Koo

ನವದೆಹಲಿ: ಐಪಿಎಲ್ನ 17 ವರ್ಷಗಳ ಇತಿಹಾಸದಲ್ಲಿ 150 ಪಂದ್ಯಗಳಲ್ಲಿ ಗೆಲುವು ಕಂಡ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಮಹೇಂದ್ರ ಸಿಂಗ್​ ಧೋನಿ (MS Dhoni) ಪಾತ್ರರಾಗಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸೂಪರ್ ಕಿಂಗ್ಸ್ ತಂಡವು ಸನ್ ರೈಸರ್ಸ್ ತಂಡವನ್ನು 78 ರನ್ ಗಳಿಂದ ಸೋಲಿಸಿ ಕೇವಲ 134 ರನ್ ಗಳಿಗೆ ಆಲೌಟ್ ಆದ ನಂತರ ಧೋನಿ ಈ ಸಾಧನೆ ಮಾಡಿದ್ದಾರೆ. ಚೆನ್ನೈನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್​​ಕೆ 78 ರನ್​​ಗಳಿಂದ ಎಸ್ಆರ್​ಎಚ್​​ ತಂಡವನ್ನು ಮಣಿಸಿತ್ತು.

ಎಂಎಸ್ ಧೋನಿ ಐಪಿಎಲ್​​ನಲ್ಲಿ 259 ಪಂದ್ಯಗಳನ್ನು ಆಡಿದ್ದಾರೆ, 2008 ರಲ್ಲಿ ಉದ್ಘಾಟನಾ ಆವೃತ್ತಿಯಿಂದ ಟಿ 20 ಲೀಗ್​​ನ ಭಾಗವಾಗಿದ್ದಾರೆ. ಐಪಿಎಲ್​​ನಲ್ಲಿ 5 ಪ್ರಶಸ್ತಿಗಳನ್ನು ಗೆದ್ದಿರುವ ಜಂಟಿ ಅತ್ಯಂತ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸಕ್ತ ಋತುವಿಗೆ ಮುಂಚಿತವಾಗಿ ಧೋನಿ ಸೂಪರ್ ಕಿಂಗ್ಸ್​​ನ ನಾಯಕತ್ವವನ್ನು ಋತುರಾಜ್ ಗಾಯಕ್ವಾಡ್ಗೆ ಹಸ್ತಾಂತರಿಸಿದ್ದರು.

ಐಪಿಎಲ್​ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದವರು

  1. ಎಂಎಸ್ ಧೋನಿ – 150
  2. ರವೀಂದ್ರ ಜಡೇಜಾ – 133
  3. ರೋಹಿತ್ ಶರ್ಮಾ – 133
  4. ದಿನೇಶ್ ಕಾರ್ತಿಕ್ – 125
  5. ಸುರೇಶ್ ರೈನಾ – 122

ಎಂಎಸ್ ಧೋನಿ ಈಗಾಗಲೇ ಐಪಿಎಲ್​​ನಲ್ಲಿ 133 ಗೆಲುವುಗಳೊಂದಿಗೆ ಅತ್ಯಂತ ಯಶಸ್ವಿ ನಾಯಕ ಎಂಬ ದಾಖಲೆಯನ್ನು ಹೊಂದಿದ್ದಾರೆ. ರೋಹಿತ್ ಶರ್ಮಾ 87 ಗೆಲುವುಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

ಭಾನುವಾರ ಸಿಎಸ್​ಕೆ ಇನ್ನಿಂಗ್ಸ್​ನ ಅಂತಿಮ ಓವರ್​ನಲ್ಲಿ ಋತುರಾಜ್ ಗಾಯಕ್ವಾಡ್ 98 ರನ್​ಗಳಿಗೆ ಔಟಾದ ನಂತರ ಎಂಎಸ್ ಧೋನಿ ಚೆಪಾಕ್ ಪ್ರೇಕ್ಷಕರಿಗೆ ಮತ್ತೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡರು. ಧೋನಿ ಅವರು ಎದುರಿಸಿದ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿದರು ಮತ್ತು ಮುಂದಿನ ಎಸೆತದಲ್ಲಿ ಸಿಂಗಲ್​ ಪಡೆದರು ಮತ್ತು 2 ಎಸೆತಗಳಲ್ಲಿ 5 ರನ್ ಗಳಿಸಿ ಅಜೇಯರಾಗಿ ಉಳಿದರು, ಸಿಎಸ್​ಕೆ 212 ರನ್​​ಗಳ ಬೃಹತ್ ಮೊತ್ತವನ್ನು ಗಳಿಸಿತು.

ಎಲ್ಲಾ ಮೂರು ವಿಭಾಗಗಳಲ್ಲಿ ಪ್ರಾಬಲ್ಯ ಸಾಧಿಸಿದ ಸೂಪರ್ ಕಿಂಗ್ಸ್ ಸನ್​ರೈಸರ್ಸ್​ ಪರ ಧೋನಿ ಕ್ಯಾಚೊಂದನ್ನು ಪಡೆದರು. ಡ್ಯಾರಿಲ್ ಮಿಚೆಲ್ ತ್ವರಿತ 5 ಔಟ್​ಫೀಲ್ಡ್​​ ಕ್ಯಾಚ್​ಗಳನ್ನು ಪಡೆದು ಐಪಿಎಲ್ ದಾಖಲೆಯನ್ನು ಸರಿಗಟ್ಟಿದರು.

ಧೋನಿ ತಮ್ಮ ಅತಿಥಿ ಪಾತ್ರಗಳಲ್ಲಿ ಬ್ಯಾಟ್ ನಿಂದ ಮಿಂಚುತ್ತಿದ್ದಾರೆ. ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಕೇವಲ 37 ಎಸೆತಗಳಲ್ಲಿ 257 ಸ್ಟ್ರೈಕ್ ರೇಟ್​​ನಲ್ಲಿ 96 ರನ್ ಗಳಿಸಿದ್ದಾರೆ. ಧೋನಿಯ ಕೊನೆಯ ಓವರ್​​​ ವಿಶೇಷಗಳು ಒಂದಕ್ಕಿಂತ ಹೆಚ್ಚು ಸಂದರ್ಭಗಳಲ್ಲಿ ಪ್ರಖರವಾಗಿವೆ. ವಾಂಖೆಡೆ ಕ್ರೀಡಾಂಗಣದಲ್ಲಿ ಹಾರ್ದಿಕ್ ಪಾಂಡ್ಯ ಬಳಗದ ವಿರುದ್ಧ ಅವರ ಬ್ಯಾಟಿಂಗ್​​ ವಿಶೇಷವಾಗಿತ್ತು. ಏಕೆಂದರೆ ಮಾಜಿ ನಾಯಕ ಸತತ 3 ಸಿಕ್ಸರ್​ಗಳನ್ನು ಬಾರಿಸಿದ್ದರು. 4 ಎಸೆತಗಳಲ್ಲಿ 20 ರನ್ ಗಳಿಸಿದ್ದರು.

ಎಸ್ಆರ್ಹೆಚ್ ವಿರುದ್ಧ 78 ರನ್​​ಗಳ ವಿಜಯ ಸಾಧಿಸಿದ ಸಿಎಸ್​ಕೆ ಮತ್ತೆ ಅಗ್ರ 4 ಸ್ಥಾನಕ್ಕೇರಿತು. ಆಡಿರುವ 9 ಪಂದ್ಯಗಳಲ್ಲಿ 10 ಅಂಕ ಗಳಿಸಿರುವ ಅವರು 3ನೇ ಸ್ಥಾನದಲ್ಲಿದ್ದಾರೆ.

Continue Reading

Latest

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

Kavya Maran : 19ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಇದು ನಡೆದಿದೆ. ಗಾಯಕ್ವಾಡ್ ಕಟ್ ಶಾಟ್ ಆಡಿದರು, ಅಲ್ಲಿ ಪ್ಯಾಟ್ ಕಮಿನ್ಸ್ ಚೆಂಡನ್ನು ಫೀಲ್ಡ್ ಮಾಡಿ ಬೌಲರ್​ ಇರುವ ತುದಿಗೆ ಎಸೆದರು. ಆ ಥ್ರೋ ಸರಿಯಾಗಿ ವಿಕೆಟ್​ಗೆ ಬಡಿಯಲಿಲ್ಲ ಮತ್ತು ಗಾಯಕ್ವಾಡ್ ತನ್ನ ಸಿಂಗಲ್ ಅನ್ನು ಪೂರ್ಣಗೊಳಿಸಿದರು ಹಾಗೂ ಅವರ ವಿಕೆಟ್​ ಉಳಿಯಿತು.

VISTARANEWS.COM


on

Kavya Maran
Koo

ಹೈದರಾಬಾದ್​​: ಸನ್ರೈಸರ್ಸ್ ಹೈದರಾಬಾದ್ ತಂಡದ ಮಾಲೀಕರಾದ ಕಾವ್ಯಾ ಮಾರನ್ (Kavya Maran) ಅವರು ಐಪಿಎಲ್​ 2024 (IPL 2024) ಪಂದ್ಯದ ವೇಳೆ ತಮ್ಮ ತಂಡದ ಆಟಗಾರರು ತಪ್ಪು ಮಾಡಿದಾಗ ಮಾಡುವ ವಿಭಿನ್ನ ಹಾವಭಾವಗಳು ಹೆಚ್ಚು ವೈರಲ್​ ಆಗುತ್ತವೆ. ಅವುಗಳಿಂದ ಭಿನ್ನವಾದ ಮೀಮ್ಸ್​ಗಳನ್ನು ರಚಿಸಿ ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಡುತ್ತಾರೆ. ಅಂತೆಯೇ 31 ವರ್ಷದ ಉದ್ಯಮಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ 2024 ರ 46 ನೇ ಪಂದ್ಯದಲ್ಲಿ ಮಗು ಅಳುವಂತೆ ಮುಖ ಮಾಡಿ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ. ಋತುರಾಜ್ ಗಾಯಕ್ವಾಡ್ ಅವರ ರನ್ ಔಟ್ ಚಾನ್ಸ್​ ಎಸ್ಆರ್​ಎಚ್​​​ ಕಳೆದುಕೊಂಡಾಗ ಕಾವ್ಯಾ ಮತ್ತೊಮ್ಮೆ ಗಮನ ಸೆಳೆದರು.

19ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಇದು ನಡೆದಿದೆ. ಗಾಯಕ್ವಾಡ್ ಕಟ್ ಶಾಟ್ ಆಡಿದರು, ಅಲ್ಲಿ ಪ್ಯಾಟ್ ಕಮಿನ್ಸ್ ಚೆಂಡನ್ನು ಫೀಲ್ಡ್ ಮಾಡಿ ಬೌಲರ್​ ಇರುವ ತುದಿಗೆ ಎಸೆದರು. ಆ ಥ್ರೋ ಸರಿಯಾಗಿ ವಿಕೆಟ್​ಗೆ ಬಡಿಯಲಿಲ್ಲ ಮತ್ತು ಗಾಯಕ್ವಾಡ್ ತನ್ನ ಸಿಂಗಲ್ ಅನ್ನು ಪೂರ್ಣಗೊಳಿಸಿದರು ಹಾಗೂ ಅವರ ವಿಕೆಟ್​ ಉಳಿಯಿತು.

ನಂತರ ಚೆಂಡು ಲೆಗ್ ಸೈಡ್ ಕಡೆಗೆ ಹೋಯಿತು ಮತ್ತು ಸ್ಟ್ಯಾಂಡ್ ನಿಂದ ಪಂದ್ಯ ವೀಕ್ಷಿಸುತ್ತಿದ್ದ ಕಾವ್ಯಾ ಮಾರನ್ ಈ ವೇಳೆ ಅಳುವಂತೆ ಮುಖ ಮಾಡಿದರು. ಈ ರನ್​ ಔಟ್​ ಮಿಸ್​ನಿಂದಾಗಿ ಚೆನ್ನೈ ಇನ್ನೊಂದು ರನ್​ ಹೆಚ್ಚುವರಿಯಾಗಿ ಓಡಿತು.

ಗಾಯಕ್ವಾಡ್ ಅಂತಿಮವಾಗಿ ಅಂತಿಮ ಓವರ್​​ನಲ್ಲಿ ಔಟಾಗಿ ಕೇವಲ ಎರಡು ರನ್​ಗಳ ಕೊರತೆಯಿಂದ ಶತಕ ಕಳೆದುಕೊಂಡರು. ಅವರ ರನ್​ಗಳಿಂದ ಸಿಎಸ್ಕೆ 212 ರನ್ಗಳ ದೊಡ್ಡ ಸ್ಕೋರ್ ಬಾರಿಸಿತು. ಗಾಯಕ್ವಾಡ್ ಅವರೊಂದಿಗೆ ಡ್ಯಾರಿಲ್ ಮಿಚೆಲ್ ಮತ್ತು ಶಿವಂ ದುಬೆ ಕೂಡ ಕ್ರಮವಾಗಿ 52 ಮತ್ತು 39 ರನ್ ಗಳಿಸಿದರು. ಆರ್​ಸಿಬಿ ವಿರುದ್ಧದ ಈ ಹಿಂದಿನ ಪಂದ್ಯದಲ್ಲಿ ಸೋತ ಎಸ್​ಎಚ್​​ಆರ್​ ಮತ್ತೊಂದು ಪರಾಜಯಕ್ಕೆ ಒಳಗಾಯಿತು.

Continue Reading

Latest

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

IPL 2024: ವಿರಾಟ್ ಕೊಹ್ಲಿ ಪ್ರಸ್ತುತ ‘ಆರೆಂಜ್ ಕ್ಯಾಪ್’ ಪಡೆದಿದ್ದು, ಎರಡನೇ ಸ್ಥಾನದಲ್ಲಿರುವ ಸಾಯಿ ಸುದರ್ಶನ್ ಅವರಿಗಿಂತ 82 ರನ್​ ಮುಂದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ರನ್ ಚೇಸ್ ಮಾಸ್ಟರ್ ಕ್ಲಾಸ್ ಮೂಲಕ ಕೊಹ್ಲಿ ಈ ಐಪಿಎಲ್ 2024 ಋತುವಿನಲ್ಲಿ 500 ರನ್ ಪೂರೈಸಿದ್ದಾರೆ. ಪ್ರಸ್ತುತ, ಅವರ ಪ್ರಸ್ತುತ ಐಪಿಎಲ್ 2024 ರ ಸಂಖ್ಯೆ 10 ಇನಿಂಗ್ಸ್​​ಗಳಲ್ಲಿ 71.42 ರ ಅದ್ಭುತ ಸರಾಸರಿಯಲ್ಲಿ ಈ ರನ್ ಮಾಡಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್ 2024 ರ (IPL 2024) 45ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ವಿರಾಟ್ ಕೊಹ್ಲಿ 70* ರನ್ ಗಳಿಸಿದ್ದಾರೆ. ಆರ್​ಸಿಬಿಯ ಲೆಜೆಂಡರಿ ಓಪನರ್ ತಮ್ಮ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್​​ನಲ್ಲಿ ಆರು ಬೌಂಡರಿಗಳು ಮತ್ತು ಮೂರು ಸಿಕ್ಸರ್​ ಬಾರಿಸಿದ್ದಾರೆ. ಐಪಿಎಲ್ 2024 ರ ತಮ್ಮ ಒಟ್ಟು ರನ್​ಗಳನ್ನು 500 ರ ಗಡಿ ದಾಟಿಸಿದ್ದಾರೆ. ಈ ಮೂಲಕ ಅವರು ಐಪಿಎಲ್​ನಲ್ಲಿ ಬೃಹತ್ ಬ್ಯಾಟಿಂಗ್ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ಇದೇ ವೇಳೆ ಅವರು ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಬ್ಯಾಟರ್​ ಡೇವಿಡ್​ ವಾರ್ನರ್ ಅವರ ಸಾಧನೆಯನ್ನು ಸರಿಗಟ್ಟಿದ್ದಾರೆ.

ಏನಿದು ದಾಖಲೆ?

ವಿರಾಟ್ ಕೊಹ್ಲಿ ಪ್ರಸ್ತುತ ‘ಆರೆಂಜ್ ಕ್ಯಾಪ್’ ಪಡೆದಿದ್ದು, ಎರಡನೇ ಸ್ಥಾನದಲ್ಲಿರುವ ಸಾಯಿ ಸುದರ್ಶನ್ ಅವರಿಗಿಂತ 82 ರನ್​ ಮುಂದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ರನ್ ಚೇಸ್ ಮಾಸ್ಟರ್ ಕ್ಲಾಸ್ ಮೂಲಕ ಕೊಹ್ಲಿ ಈ ಐಪಿಎಲ್ 2024 ಋತುವಿನಲ್ಲಿ 500 ರನ್ ಪೂರೈಸಿದ್ದಾರೆ. ಪ್ರಸ್ತುತ, ಅವರ ಪ್ರಸ್ತುತ ಐಪಿಎಲ್ 2024 ರ ಸಂಖ್ಯೆ 10 ಇನಿಂಗ್ಸ್​​ಗಳಲ್ಲಿ 71.42 ರ ಅದ್ಭುತ ಸರಾಸರಿಯಲ್ಲಿ ಈ ರನ್ ಮಾಡಿದ್ದಾರೆ.

ವಿಶೇಷವೆಂದರೆ, ಕೊಹ್ಲಿ ತನ್ನ ವೃತ್ತಿಜೀವನದಲ್ಲಿ ಒಂದೇ ಐಪಿಎಲ್ ಋತುವಿನಲ್ಲಿ ಏಳು ಬಾರಿ ಕನಿಷ್ಠ 500 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್​​ನ ಸಕ್ರಿಯ ಆರಂಭಿಕ ಬ್ಯಾಟರ್​ ಡೇವಿಡ್ ವಾರ್ನರ್ ಅವರೊಂದಿಗೆ ಅವರು ಸಮಬಲ ಸಾಧಿಸಿದ್ದಾರೆ. ಅವರು ತಮ್ಮ ಐಪಿಎಲ್ ಪ್ರಯಾಣದಲ್ಲಿ ಏಳು ಬಾರಿ ಈ ಸಾಧನೆ ಮಾಡಿದ್ದಾರೆ.

ಕಳೆದ ವರ್ಷ 53ರ ಸರಾಸರಿಯಲ್ಲಿ 639 ರನ್ ಗಳಿಸಿದ್ದ ಕೊಹ್ಲಿ ಸತತ ಎರಡನೇ ಬಾರಿಗೆ ಈ ಋತುವಿನಲ್ಲಿ 500 ರನ್ ಪೂರೈಸಿದ್ದರು. ಅವರ ಇತ್ತೀಚಿನ ಬ್ಯಾಟಿಂಗ್ ಸಾಧನೆಯ ಜೊತೆಗೆ, ಆರ್​ಸಿಬಿ ತಂಡವು ಹಲವಾರು ಬೃಹತ್ ಐಪಿಎಲ್ ಬ್ಯಾಟಿಂಗ್ ಮೈಲಿಗಲ್ಲುಗಳನ್ನು ಹೊಂದಿದೆ. ಇದರಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ (2016 ರಲ್ಲಿ 973 ರನ್) ಮತ್ತು ಪಂದ್ಯಾವಳಿಯ ಇತಿಹಾಸದಲ್ಲಿ ಒಟ್ಟಾರೆಯಾಗಿ ಅತಿ ದೊಡ್ಡ ಸ್ಕೋರ್ ಆಗಿದೆ.

ವಾರ್ನರ್ 2014 ರಿಂದ 2020 ರವರೆಗೆ ಸತತ ಆರು ಐಪಿಎಲ್ ಪಂದ್ಯಗಳಲ್ಲಿ ಒಂದು ಋತುವಿನಲ್ಲಿ 500 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕಳೆದ ವರ್ಷ ಅವರು ಕ್ಯಾಪಿಟಲ್ಸ್ ಪರ ಸುಮಾರು 37 ಸರಾಸರಿಯಲ್ಲಿ 516 ರನ್ ಗಳಿಸಿದ್ದರು.

Continue Reading

Latest

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

Kane Williamson: ನ್ಯೂಜಿಲ್ಯಾಂಡ್​​ನ ಆಯ್ಕೆದಾರ ಸ್ಯಾಮ್ ವೆಲ್ಸ್ ಬಹಿರಂಗಪಡಿಸಿದ ಅಧಿಕೃತ ತಂಡದ ಪ್ರಕಟಣೆಯಲ್ಲಿ, ಕೇನ್ ವಿಲಿಯಮ್ಸನ್ ನಾಯಕನಾಗಿ ತಮ್ಮ ನಾಲ್ಕನೇ ಟಿ 20 ವಿಶ್ವಕಪ್​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಅವರ ಒಟ್ಟು ಆರು ಬಾರಿ ಆಡಿದ್ದಾರೆ. ಅವರ ನಾಯಕತ್ವದ ಗುಣಗಳು ಮತ್ತು ಅನುಭವವು ನ್ಯೂಜಿಲ್ಯಾಂಡ್​ಗೆ ಅಮೂಲ್ಯ ಆಸ್ತಿ ಎಂದು ಹೇಳಿದ್ದಾರೆ.

VISTARANEWS.COM


on

Kane Williamson
Koo

ನವದೆಹಲಿ: ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ (Kane Williamson) ಜೂನ್​ನಲ್ಲಿ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ 20 ವಿಶ್ವಕಪ್​​ನಲ್ಲಿ ಅನುಭವ ಹೊಂದಿರುವ ನ್ಯೂಜಿಲ್ಯಾಂಡ್​ ತಂಡವನ್ನು ನಾಲ್ಕನೇ ಟಿ20 ವಿಶ್ವ ಕಪ್​ನಲ್ಲಿ ಮುನ್ನಡೆಸಲಿದ್ದಾರೆ.

ನ್ಯೂಜಿಲ್ಯಾಂಡ್​​ನ ಆಯ್ಕೆದಾರ ಸ್ಯಾಮ್ ವೆಲ್ಸ್ ಬಹಿರಂಗಪಡಿಸಿದ ಅಧಿಕೃತ ತಂಡದ ಪ್ರಕಟಣೆಯಲ್ಲಿ, ಕೇನ್ ವಿಲಿಯಮ್ಸನ್ ನಾಯಕನಾಗಿ ತಮ್ಮ ನಾಲ್ಕನೇ ಟಿ 20 ವಿಶ್ವಕಪ್​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಅವರ ಒಟ್ಟು ಆರು ಬಾರಿ ಆಡಿದ್ದಾರೆ. ಅವರ ನಾಯಕತ್ವದ ಗುಣಗಳು ಮತ್ತು ಅನುಭವವು ನ್ಯೂಜಿಲ್ಯಾಂಡ್​ಗೆ ಅಮೂಲ್ಯ ಆಸ್ತಿ ಎಂದು ಹೇಳಿದ್ದಾರೆ.

ಟಿ 20 ವಿಶ್ವಕಪ್ ತಂಡದ ಅನುಭವಿಗಳ ಸಾಲಿನಲ್ಲಿ ವಿಲಿಯಮ್ಸನ್ ಒಬ್ಬರೇ ಅಲ್ಲ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಿಮ್ ಸೌಥಿ ಆಡಲಿದ್ದಾರೆ ಅವರು ಜಾಗತಿಕ ಟೂರ್ನಿಗೆ ಏಳನೇ ಬಾರಿಗೆ ಆಯ್ಕೆಯಾಗಿದ್ದಾರೆ. ಟ್ರೆಂಟ್ ಬೌಲ್ಟ್ ಐದು ಟಿ20 ವಿಶ್ವಕಪ್ ಪಂದ್ಯಗಳನ್ನು ಆಡಿದ್ದಾರೆ. ಅನುಭವಿ ಎಡಗೈ ಬೌಲರ್ ಸೇರಿದಂಥೆ ಮೂವರು ನ್ಯೂಜಿಲೆಂಡ್ ತಂಡದ ಪ್ರಬಲ ಶಕ್ತಿಯಾಗಿದ್ದಾರೆ.

ಟಿ 20 ವಿಶ್ವ ಕಪ್​ನಲ್ಲಿ ಹೊಂದಾಣಿಕೆ ಕೀಲಿ

ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿನ ವೈವಿಧ್ಯಮಯ ಆಟದ ಪರಿಸ್ಥಿತಿಗಳನ್ನು ಗುರುತಿಸಿ, ಆಯ್ಕೆದಾರರು ಹೊಂದಾಣಿಕೆಗೆ ಆದ್ಯತೆ ನೀಡಿದ್ದಾರೆ. ಆಯ್ಕೆಯಾದ ಹದಿನೈದು ಆಟಗಾರರಲ್ಲಿ ಹದಿಮೂರು ಮಂದಿ 2022 ರಲ್ಲಿ ತಂಡದ ಇತ್ತೀಚಿನ ವೆಸ್ಟ್ ಇಂಡೀಸ್ ಪ್ರವಾಸದ ಭಾಗವಾಗಿದ್ದರು, ಇದು ಅವರಿಗೆ ನೆರವಾಗಲಿದೆ.

ಇದನ್ನೂ ಓದಿ:

ಕೆರಿಬಿಯನ್ ಪ್ರೀಮಿಯರ್ ಲೀಗ್ ಟಿ 20 ಯಲ್ಲಿ ಆರು ಆಟಗಾರರು ಸ್ಪರ್ಧಿಸಿದ್ದಾರೆ. ಇದು ಕೆರಿಬಿಯನ್ ಪಿಚ್​ಗಳ ಬಗ್ಗೆ ಅವರ ಜ್ಞಾನ ಮತ್ತಷ್ಟು ಹೆಚ್ಚಿಸಿದೆ.

ಅನುಭವವು ಪ್ರಮುಖ ಅಂಶವಾಗಿದ್ದರೂ, ತಂಡವು ಹೊಸ ಮುಖಗಳನ್ನು ಸ್ವಾಗತಿಸಲಿದೆ. ಭರವಸೆಯ ಬೌಲರ್ ಮ್ಯಾಟ್ ಹೆನ್ರಿ ಮತ್ತು ಬ್ಯಾಟಿಂಗ್ ಆಲ್ರೌಂಡರ್ ರಚಿನ್ ರವೀಂದ್ರ ಮಾತ್ರ ಟಿ20 ವಿಶ್ವಕಪ್ ತಂಡದಲ್ಲಿದ್ದಾರೆ. ಅವರ ಸೇರ್ಪಡೆಯು ಯುವ ಪ್ರತಿಭೆಗಳನ್ನು ಪೋಷಿಸುವ ಬ್ಲ್ಯಾಕ್ ಕ್ಯಾಪ್ಸ್ ನ ಬದ್ಧತೆಯಾಗಿದೆ.

Continue Reading
Advertisement
Lok Sabha Election
ಪ್ರಮುಖ ಸುದ್ದಿ5 mins ago

Lok Sabha Election : ಇಂದೋರ್​ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯೂ ಕಣದಿಂದ ಹಿಂದಕ್ಕೆ; ಬಿಜೆಪಿಗೆ ಸೇರ್ಪಡೆ!

PM Narendra modi in Bagalakote and Attack on Congress
Lok Sabha Election 202411 mins ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

Family Drama Trailer Out
ಸಿನಿಮಾ19 mins ago

Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

gold rate today rakul
ಚಿನ್ನದ ದರ24 mins ago

Gold Rate Today: ಚಿನ್ನದ ಬೆಲೆಯಲ್ಲಿ ₹330 ಇಳಿಕೆ; ಇಂದಿನ ಬಂಗಾರ- ಬೆಳ್ಳಿ ದರಗಳು ಇಲ್ಲಿವೆ

Narenda Modi Sonia gandhi
ದೇಶ28 mins ago

Narendra Modi: ರಾಜಕೀಯ ದ್ವೇಷ ಮರೆತು ಸೋನಿಯಾ, ರಾಹುಲ್‌ಗೆ ಸಹಾಯ; ಹೀಗ್ಯಾಕಂದ್ರು ಪ್ರಧಾನಿ ಮೋದಿ?

dheeren rajkumar announces a new film change his name
ಸ್ಯಾಂಡಲ್ ವುಡ್47 mins ago

Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

MS Dhoni
Latest56 mins ago

MS Dhoni : ಐಪಿಎಲ್​ನಲ್ಲಿ 150 ಪಂದ್ಯಗಳನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರರಾದ ಧೋನಿ; ಅವರ ಬಳಿಕ ಯಾರಿದ್ದಾರೆ?

Mahesh Babu shares sweet moments with sister Manjula and Prabhas aunt
South Cinema1 hour ago

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Kavya Maran
Latest1 hour ago

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

ವೈರಲ್ ನ್ಯೂಸ್1 hour ago

Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202411 mins ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 hour ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202420 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202423 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌