INDvsNZ T20 : ನ್ಯೂಜಿಲ್ಯಾಂಡ್​ ವಿರುದ್ಧದ ಎರಡನೇ ಪಂದ್ಯ ನಡೆಯುವುದು ಎಲ್ಲಿ? ಅಲ್ಲಿನ ಪಿಚ್​ ಹೇಗಿದೆ? Vistara News
Connect with us

ಕ್ರಿಕೆಟ್

INDvsNZ T20 : ನ್ಯೂಜಿಲ್ಯಾಂಡ್​ ವಿರುದ್ಧದ ಎರಡನೇ ಪಂದ್ಯ ನಡೆಯುವುದು ಎಲ್ಲಿ? ಅಲ್ಲಿನ ಪಿಚ್​ ಹೇಗಿದೆ?

ಭಾರತ ಹಾಗೂ ನ್ಯೂಜಿಲ್ಯಾಂಡ್​ (INDvsNZ T20) ನಡುವಿನ ಎರಡನೇ ಟಿ20 ಪಂದ್ಯ ನಡೆಯುವುದು ಎಲ್ಲಿ ಹಾಗೂ ಟಾಸ್​ ಎಷ್ಟು ಗಂಟೆಗೆ ಎಂಬ ವಿವರ ಇಲ್ಲಿದೆ.

VISTARANEWS.COM


on

indian cricket team
Koo

ಲಖನೌ: ಭಾರತ ಹಾಗೂ ಪ್ರವಾಸಿ ನ್ಯೂಜಿಲ್ಯಾಂಡ್​ ನಡುವಿನ ಎರಡನೇ ಟಿ20 ಪಂದ್ಯ (INDvsNZ T20) ಕ್ರಿಕೆಟ್​ ಅಭಿಮಾನಿಗಳಲ್ಲಿ ಕೌತುಕ ಸೃಷ್ಟಿಸಿದೆ. ಭಾರತ ತಂಡ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವುದೇ ಅದಕ್ಕೆ ಕಾರಣ. ಎರಡನೇ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ನೇತೃತ್ವದ ಟೀಮ್​ ಇಂಡಿಯಾ ಗೆಲುವು ಸಾಧಿಸಿದರೆ ಮಾತ್ರ ಸರಣಿ ಜೀವಂತವಾಗಿರಲಿದೆ. ಹೀಗಾಗಿ ಭಾರತ ತಂಡದ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಕೋಚ್​ ರಾಹುಲ್​ ದ್ರಾವಿಡ್​ ಹಾಗೂ ನಾಯಕ ಹಾರ್ದಿಕ್​ ಪಾಂಡ್ಯ ಈ ಪಂದ್ಯವನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ನಾನಾ ಯೋಜನೆ ರೂಪಿಸಿಕೊಂಡಿರುತ್ತಾರೆ. ಮೊದಲ ಪಂದ್ಯದ ತಪ್ಪುಗಳನ್ನು ಸರಿಪಡಿಸಿಕೊಂಡು ಕಣಕ್ಕೆ ಇಳಿಯವುದೇ ತಂಡದ ಗುರಿಯಾಗಲಿದೆ.

ಈ ಪಂದ್ಯ ಉತ್ತರದ ಪ್ರದೇಶದ ಲಖನೌನಲ್ಲಿ ನಡೆಯಲಿದೆ. ಇಲ್ಲಿನ ಭಾರತ ರತ್ನ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಪಂದ್ಯ ಆಯೋಜನೆಗೊಂಡಿದೆ. ಇದು ಸಮತೋಲಿತ ಪಿಚ್ ಆಗಿದ್ದು ಬ್ಯಾಟಿಂಗ್ ಹಾಗೂ ಬೌಲಿಂಗ್​ಗೆ ಸಮಾನ ರೀತಿಯಲ್ಲಿ ಸಹಕಾರಿಯಾಗಿದೆ.

ಇತ್ತಂಡಗಳ ನಡುವಿನ ಹಣಾಹಣಿ ಜನವರಿ 29ರ ರಾತ್ರಿ 7 ಗಂಟೆಗೆ ಆರಂಭವಾಗಲಿದೆ. ಟಾಸ್​ ಸಂಜೆ 6.30 ನಿಮಿಷಕ್ಕೆ ನಡೆಯಲಿದೆ. ನ್ಯೂಜಿಲ್ಯಾಂಡ್​ ತಂಡಕ್ಕೆ ಈ ಪಂದ್ಯವನ್ನು ಗೆದ್ದರೆ ಸರಣಿ ಗೆದ್ದ ಗೌರವ ಲಭಿಸಲಿದೆ. ಹಿಂದಿನ ಪಂದ್ಯದಂತೆ ನಿಗದಿತ ಯೋಜನೆಯ ಪ್ರಕಾರ ಕಣಕ್ಕೆ ಇಳಿಯಲಿದೆ.

ಪಿಚ್​ ಹೇಗಿದೆ?

ಲಖನೌನ ಏಕನಾ ಕ್ರಿಕೆಟ್ ಸ್ಟೇಡಿಯಮ್​ನ ಪಿಚ್​ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಕ್ಕೂ ಪೂರಕವಾಗಿದೆ. ಆದರೆ, ಇಲ್ಲಿ ನಡೆದ ಐದು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮೊದಲು ಬ್ಯಾಟ್​ ಮಾಡಿದ ತಂಡವೇ ಜಯ ಗಳಿಸಿದೆ. ಇಲ್ಲಿ ಚೇಸಿಂಗ್ ಮಾಡುವುದು ಸುಲಭವಲ್ಲ. ಹೀಗಾಗಿ ಟಾಸ್​ ಗೆದ್ದ ತಂಡದ ನಾಯಕ ಬ್ಯಾಟಿಂಗ್ ಮೊರೆ ಹೋಗುವುದರಲ್ಲಿ ಸಂಶಯವಿಲ್ಲ. ಪಂದ್ಯಕ್ಕೆ ಮಳೆಯ ಅಡಚಣೆ ಇಲ್ಲ ಎಂಬುದಾಗಿ ಹವಾಮಾನ ವರದ ಹೇಳಿದೆ.

ನೇರಪ್ರಸಾರ ಎಲ್ಲಿ

ಭಾರತ ಹಾಗೂ ನ್ಯೂಜಿಲ್ಯಾಂಡ್​ ತಂಡಗಳ ನಡುವಿನ ಟಿ20ನ ಸರಣಿಯ ಎರಡನೇ ಪಂದ್ಯ ಸ್ಟಾರ್​ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ. ಅದೇ ರೀತಿ ಡಿಸ್ನಿ ಹಾಟ್​ ಸ್ಟಾರ್​ನಲ್ಲಿ ಲೈವ್​ ಸ್ಟ್ರೀಮಿಂಗ್​ ಆಗಲಿದೆ.

ಇದನ್ನೂ ಓದಿ : Washington Sundar : ನಿಮ್ಮಿಷ್ಟದ ಬಿರಿಯಾನಿ ಸಿಗಲ್ಲ ಎಂದಾದರೆ ಹೋಟೆಲ್​ ಬದಲಿಸುತ್ತೀರಾ? ಸುಂದರ್ ಕೇಳಿದ್ದು ಯಾರಿಗೆ?

ತಂಡಗಳು

ಭಾರತ: ಹಾರ್ದಿಕ್​ ಪಾಂಡ್ಯ (ನಾಯಕ), ಸೂರ್ಯಕುಮಾರ್​ ಯಾದವ್, ಇಶಾನ್ ಕಿಶನ್​, ಶುಭ್​ಮನ್ ಗಿಲ್​, ಪೃಥ್ವಿ ಶಾ, ದೀಪಕ್​ ಹೂಡ, ರಾಹುಲ್ ತ್ರಿಪಾಠಿ, ಜಿತೇಶ್​ ಶರ್ಮ, ವಾಷಿಂಗ್ಟನ್​ ಸುಂದರ್​, ಕುಲ್ದೀಪ್​ ಯಾದವ್​, ಯಜ್ವೇಂದ್ರ ಚಹಲ್​, ಅರ್ಶ್​ದೀಪ್​ ಸಿಂಗ್​, ಉಮ್ರಾನ್​ ಮಲಿಕ್​, ಶಿವಂ ಮಾವಿ, ಮುಕೇಶ್​ ಕುಮಾರ್​.

ನ್ಯೂಜಿಲ್ಯಾಂಡ್​ : ಮಿಚೆಲ್​ ಸ್ಯಾಂಟ್ನರ್​ (ನಾಯಕ), ಫಿನ್​ ಅಲೆನ್​, ಡೆವೋನ್​ ಕಾನ್ವೆ, ಗ್ಲೆನ್​ ಫಿಲಿಪ್ಸ್​, ಡೇನ್​ ಕ್ಲೆವರ್​, ಮಾರ್ಕ್​ ಚಾಪ್ಮನ್​, ಮೈಕೆಲ್ ಬ್ರೇಸ್​ವೆಲ್​, ಡ್ಯಾರಿಲ್​ ಮಿಚೆಲ್, ಮೈಕೆಲ್​ ರಿಪ್ಪಾನ್​, ಲಾಕಿ ಫರ್ಗ್ಯೂಸನ್, ಇಶ್ ಸೋಧಿ, ಬ್ಲೇರ್ ಟಿಕ್ನರ್​, ಜಾಕೊಬ್​ ಡಫಿ, ಹೆನ್ರಿ ಶಿಪ್ಲೆ, ಬೆನ್​ ಲಿಸ್ಟರ್.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ಕ್ರಿಕೆಟ್

IPL 2023 : ಚಾಂಪಿಯನ್​ ಗುಜರಾತ್​​ಗೆ ಮೊದಲ ಪಂದ್ಯದಲ್ಲಿ 5 ವಿಕೆಟ್ ಜಯ, ಸಿಎಸ್​ಕೆ ನಿರಾಸೆ

ಗುಜರಾತ್​ ಟೈಟನ್ಸ್​ ತಂಡ ಈ ಬಾರಿಯೂ ಸಂಘಟಿತ ಪ್ರಯತ್ನದ ಮೂಲಕ ಗೆಲ್ಲುವ ಮಾದರಿಯನ್ನು ಪ್ರದರ್ಶಿಸಿತು.

VISTARANEWS.COM


on

Champion Gujarat won by 5 wickets in the first match CSK was disappointed
Koo

ಅಹಮದಾಬಾದ್: ಶುಭ್​ಮನ್​ ಗಿಲ್​ (63 ರನ್​) ಅರ್ಧ ಶತಕ ಹಾಗೂ ಬೌಲರ್​ಗಳ ಸಂಘಟಿತ ಬೌಲಿಂಗ್ ದಾಳಿಯ ನೆರವು ಪಡೆದ ಗುಜರಾತ್​ ಟೈಟನ್ಸ್​ ತಂಡ ಐಪಿಎಲ್​ 2023ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ 5 ವಿಕೆಟ್​ ವಿಜಯ ಸಾಧಿಸಿತು. ಈ ಮೂಲಕ ಹಾಲಿ ಚಾಂಪಿಯನ್​ ಗುಜರಾತ್​ ಬಳಗ ಶುಭಾರಂಭ ಮಾಡಿದರೆ, ಧೋನಿ ನೇತೃತ್ವದ ಸಿಎಸ್​ಕೆ ಆರಂಭಿಕ ಆಘಾತ ಎದುರಾಯಿತು. ಅದೇ ರೀತಿ ಸ್ಫೋಟಕ ಅರ್ಧ ಶತಕ ಬಾರಿಸಿದ ಋತುರಾಜ್​ ಗಾಯಕ್ವಾಡ್​ (92 ರನ್​, 50 ಎಸೆತ, 4 ಫೋರ್​, 9 ಸಿಕ್ಸರ್​​) ಅವರ ಪರಿಶ್ರಮ ವ್ಯರ್ಥಗೊಂಡಿತು.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟ್​ ಮಾಡಿದ ಸಿಎಸ್​ಕೆ ತಂಡ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್​ ಬಾರಿಸಿತು. ಗುರಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್​ ತಂಡ 19.2 ಓವರ್​​ಗಳಲ್ಲಿ 5 ವಿಕೆಟ್ ಕಳೆದುಕೊಂಡು 182 ರನ್​ ಬಾರಿಸಿ ಜಯ ಸಾಧಿಸಿತು.

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಗುಜರಾತ್ ಟೈಟನ್ಸ್ ತಂಡ 37 ರನ್​ಗಳಿಗೆ ಮೊದಲ ವಿಕೆಟ್​ ಕಳೆದುಕೊಂಡಿತು. ಆರಂಭಿಕ ಬ್ಯಾಟರ್ ವೃದ್ಧಿಮಾನ್ ಸಾಹ 25 ರನ್​ ಬಾರಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಸಾಯಿ ಸುದರ್ಶನ್​ 22 ರನ್ ಬಾರಿಸಿದರು. ನಾಯಕ ಹಾರ್ದಿಕ್ ಪಾಂಡ್ಯ 8 ರನ್​ಗೆ ಔಟಾಗುವ ಮೂಲಕ ತಂಡಕ್ಕೆ ಹಿನ್ನಡೆ ಉಂಟಾಯಿತು. ಆದರೆ, ಕೊನೇ ಹಂತದಲ್ಲಿ ವಿಜಯ್​ ಶಂಕರ್​ (27), ರಾಹುಲ್​ ತೆವತಿಯಾ (15) ಹಾಗೂ ರಶೀದ್ ಖಾನ್​ (10) ತಂಡವನ್ನು ಗೆಲ್ಲಿಸಿದರು.

ಅದಕ್ಕಿಂತ ಮೊದಲು ಬ್ಯಾಟ್​ ಮಾಡಲು ಆಹ್ವಾನ ಪಡೆದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಬ್ಯಾಟರ್ ಡೆವೋನ್​ ಕಾನ್ವೆ 1 ರನ್​ಗೆ ವಿಕೆಟ್​ ಒಪ್ಪಿಸುವ ಮೂಲಕ ಹಿನ್ನಡೆ ಉಂಟು ಮಾಡಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಮೊಯೀನ್ ಅಲಿ ಸ್ಫೋಟಕ ಬ್ಯಾಟಿಂಗ್ ಮಾಡಿದರೂ 23 ರನ್​ಗಳಿಗೆ ಔಟಾದರು. ಹೀಗಾಗಿ ಸಿಎಸ್​ಕೆ ತಂಡಕ್ಕೆ ಮತ್ತೆ ಹಿನ್ನಡೆ ಉಂಟಾಯಿತು.

ಗಾಯಕ್ವಾಡ್​ ಸ್ಫೋಟಕ ಬ್ಯಾಟಿಂಗ್​

ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಬೆನ್​ಸ್ಟೋಕ್ಸ್​ 7 ರನ್​ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರಿಸಿದ ಗಾಯಕ್ವಾಡ್​​ ನಿಧಾನವಾಗಿ ಇನಿಂಗ್ಸ್ ಕಟ್ಟಿದರು. 23 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ ಅವರು ನಂತರವೂ ಬಿಡುಬೀಸಿನ ಬ್ಯಾಟಿಂಗ್ ನಡೆಸಿದರು. ಆದರೆ, ಅಲ್ಜಾರಿ ಜೋಸೆಫ್​ ಎಸೆದ ಚಾಣಾಕ್ಷ ಬೌಲಿಂಗ್​ಗೆ ಅವರು ಶುಭ್​ಮನ್​ ಗಿಲ್​ಗೆ ವಿಕೆಟ್​ ಒಪ್ಪಿಸಿ ನಿರ್ಗಮಿಸಿದರು.

ಗಾಯಕ್ವಾಡ್​ ಹೊರತುಪಡಿಸಿ ಚೆನ್ನೈ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. ಅಂಬಾಟಿ ರಾಯುಡು 12 ರನ್​ಗೆ ಔಟಾದರೆ, ಶಿವಂ ದುಬೆ 19 ರನ್ ಕೊಡುಗೆ ಕೊಟ್ಟರು. ಮಹೇಂದ್ರ ಸಿಂಗ್ ಧೋನಿ 7 ಎಸೆತಗಳಿಗೆ 14 ರನ್​ ಬಾರಿಸಿದರು.

ಅದ್ಧೂರಿ ಉದ್ಘಾಟನಾ ಕಾರ್ಯಕ್ರಮ

ಕೋವಿಡ್‌ ನಂತರ ಮೊದಲ ಬಾರಿಗೆ ಅತ್ಯಂತ ವೈಭವದಿಂದ ನಡೆದ ಉದ್ಘಾಟನ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ಖ್ಯಾತಿಯ ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ(Rashmika Mandanna) ಮತ್ತು ಮಿಲ್ಕಿ ಬ್ಯೂಟಿ ಖ್ಯಾತಿಯ ತಮನ್ನಾ ಭಾಟಿಯ(Tamannaah Bhatia) ನೃತ್ಯದ ಮೂಲಕ ಎಲ್ಲರನ್ನು ರಂಜಿಸಿದರೆ, ಅರಿಜಿತ್​ ಸಿಂಗ್(arijit singh)​ ಅವರ ಅದ್ಭುತ ಕಂಠಕ್ಕೆ ದಾಖಲೆಯ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರನ್ನು ತಲೆದೂಗಿದರು. ಇದೇ ವೇಳೆ ನಡೆಸಿದ ಲೇಸರ್​ ಶೋ ಅಭಿಮಾನಿಗಳನ್ನು ಮಂತ್ರಮುಗ್ದರನ್ನಾಗಿಸಿತು. ಆಸ್ಕರ್​ ಪ್ರಶಸ್ತಿ ಗೆದ್ದ ಆರ್​ಆರ್​ಆರ್​ ಸಿನೆಮಾದ ನಾಟು ನಾಟು ಹಾಡಿಗೆ ರಶ್ಮಿಕಾ ಕುಣಿದು ಕುಪ್ಪಳಿಸಿದರು.

ಅದ್ಧೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ, ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ಟೀಮ್​ ಇಂಡಿಯಾದ ಮಾಜಿ ಆಟಗಾರರಾದ ರವಿಶಾಸ್ತ್ರಿ, ಸುನೀಲ್​ ಗವಾಸ್ಕರ್​, ವಿದೇಶಿ ಮಾಜಿ ಆಟಗಾರರಾದ ಆರಾನ್​ ಫಿಂಚ್​, ಕೆವಿನ್​ ಪೀಟರ್ಸನ್​ ಸೇರಿ ಅನೇಕ ಕ್ರಿಕೆಟಿಗರು ಹಾಗೂ ಮತ್ತಿತರ ಬಿಸಿಸಿಐ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕ್ರಿಕೆಟ್

IPL 2023 : ಐಪಿಎಲ್​ನ ಮೊದಲ ಇಂಪ್ಯಾಕ್ಟ್​​ ಪ್ಲೇಯರ್​ ಯಾರು? ಅನುಕೂಲ ಬಳಸಿಕೊಂಡಿದ್ದು ಯಾವ ತಂಡ?

ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಮೊದಲ ಇಂಪ್ಯಾಕ್ಟ್​​ ಪ್ಲೇಯರ್​ ಬಳಸಿಕೊಂಡು ಐಪಿಎಲ್​ನಲ್ಲಿ ಇತಿಹಾಸ ನಿರ್ಮಿಸಿತು.

VISTARANEWS.COM


on

IPL 2023
Koo

ಅಹಮದಾಬಾದ್​: ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಇಂಪ್ಯಾಕ್ಟ್​ ಪ್ಲೇಯರ್​ ನಿಯಮ ಚರ್ಚೆಯ ವಿಷಯವಾಗಿದೆ. ಪಂದ್ಯದ ನಡುವೆಯೇ ಆಟಗಾರನನ್ನು ಬದಲಾಯಿಸುವುದು ಈ ನಿಯಮದ ಅನುಕೂಲ. ತಂಡವೊಂದರ ಅನುಕೂಲಕ್ಕೆ ತಕ್ಕ ಹಾಗೆ ಒಬ್ಬ ಆಟಗಾರನ್ನು ಪಂದ್ಯದ ಮಧ್ಯದಲ್ಲಿ ಕೈ ಬಿಟ್ಟು ಬೇರೊಬ್ಬ ಆಟಗಾರನನ್ನು ತಂಡಕ್ಕೆ ಸೇರಿಸುವ ಮೂಲಕ ಗೆಲುವಿನ ಅವಕಾಶ ಸೃಷ್ಟಿಸಲು ಸಾಧ್ಯವಾಗುತ್ತದೆ. ಈ ನಿಯಮ ಚೆನ್ನೈ ಸೂಪರ್​ ಕಿಂಗ್ಸ್​ ಹಾಗೂ ಗುಜರಾತ್​ ಜಯಂಟ್ಸ್​ ತಂಡಗಳ ನಡುವಿನ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿಯೇ ಬಳಕೆಯಾಯಿತು. ಹಾಗಾದರೆ ಈ ನಿಯಮಕ್ಕೆ ಒಳಪಟ್ಟ ಆಟಗಾರ ಯಾರೆಂಬುದನ್ನು ನೋಡೋಣ.

ಚೆನ್ನೈ ಸೂಪರ್​ ಕಿಂಗ್ಸ್ ತಂಡ ಬೌಲರ್ ತುಷಾರ್ ದೇಶಪಾಂಡೆ ಐಪಿಎಲ್​ನ ಮೊದಲ ಇಂಪ್ಯಾಕ್ಟ್ ಪ್ಲೇಯರ್​ ಎನಿಸಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್​ ಮಾಡಿದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ನಂತರ ರನ್​ ಚೇಸ್​ ಮಾಡುವ ವೇಳೆ ತುಷಾರ್​ ದೇಶಪಾಂಡೆ ಅವರನ್ನು ಕಣಕ್ಕೆ ಇಳಿಸಿತು. ಅವರನ್ನು ಆಡುವ 11ರ ಬಳಗಕ್ಕೆ ಸೇರಿಸಿಕೊಳ್ಳುವಾಗಿ ಬ್ಯಾಟರ್​ ಅಂಬಾಟಿ ರಾಯುಡು ಅವರನ್ನು ಕೈ ಬಿಡಲಾಯಿತು. ಅಂಬಾಟಿ ರಾಯುಡು ಬ್ಯಾಟ್​ ಮಾಡಿ 12 ರನ್​ ಬಾರಿಸ ಔಟಾಗಿದ್ದರು. 27 ವರ್ಷದ ತುಷಾರ್​ ದೇಶಪಾಂಡೆ ಮುಂಬಯಿ ಮೂಲದವರು. ರಣಜಿ ಟ್ರೋಫಿಯಲ್ಲಿ ಮುಂಬಯಿ ತಂಡ ಪರವಾಗಿ ಅವರು ಆಡುತ್ತಾರೆ.

ಹೊಸ ನಿಯಮಗಳೇನು?

ಈ ಬಾರಿಯ ಟೂರ್ನಿಯಲ್ಲಿ ಹತ್ತು ತಂಡಗಳನ್ನು ತಲಾ 5 ತಂಡಗಳ ಎರಡು ಗುಂಪುಗಳಾಗಿ ಬಿಂಗಡಿಸಲಾಗಿದೆ. ಗುಂಪು ಹಂತದಲ್ಲಿ ತಂಡವೊಂದು ತನ್ನದೇ ಗುಂಪಿನ ಉಳಿದ 4 ತಂಡಗಳ ವಿರುದ್ಧ ತಲಾ 2 ಪಂದ್ಯಗಳನ್ನು ಆಡಬೇಕು. ಆಗ ತಂಡವೊಂದು 8 ಪಂದ್ಯಗಳನ್ನು ಆಡಿದಂತಾಗುತ್ತದೆ. ಬಳಿಕ ಎರಡೂ ಗುಂಪುಗಳ ತಂಡಗಳ ನಡುವೆ ಪಂದ್ಯಗಳು ಆರಂಭವಾಗುತ್ತವೆ. ಅಂದರೆ ಮೊದಲ ಗುಂಪಿನ ಒಂದು ತಂಡ, ಇನ್ನೊಂದು ಗುಂಪಿನ ತಂಡವೊಂದರ ವಿರುದ್ಧ ತಲಾ 2 ಪಂದ್ಯಗಳನ್ನು ಆಡುತ್ತದೆ. ಇತರ ನಾಲ್ಕು ತಂಡಗಳ ವಿರುದ್ಧ ತಲಾ 1 ಪಂದ್ಯ ಆಡಲಾಗುತ್ತದೆ. ಇದೇ ಮಾದರಿ ಇತರ ತಂಡಗಳಿಗೂ ಈ ಅನ್ವಯವಾಗುತ್ತದೆ. ಅಲ್ಲಿಗೆ ತಂಡವೊಂದು ಲೀಗ್‌ ಹಂತದಲ್ಲಿ 14 ಪಂದ್ಯಗಳನ್ನಾಡಿದಂತಾಗುತ್ತದೆ.

ಇದನ್ನೂ ಓದಿ IPL 203 : ಐಪಿಎಲ್​ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ

ಇಂಪ್ಯಾಕ್ಟ್ ಪ್ಲೇಯರ್‌

ಆಸ್ಟ್ರೇಲಿಯದ ಪ್ರತಿಷ್ಠಿತ ಬಿಗ್‌ಬಾಶ್‌ ಟಿ20 ಲೀಗ್‌ನಲ್ಲಿ ಚಾಲ್ತಿಯಲ್ಲಿರುವ ಇಂಪ್ಯಾಕ್ಟ್ ಪ್ಲೇಯರ್‌ ನಿಯಮವನ್ನು ಈ ಬಾರಿ ಐಪಿಎಲ್​ನಲ್ಲಿಯೂ ಪರಿಚಯಿಸಲಾಗಿದೆ. ಈ ನಿಯಮದ ಪ್ರಮಾರ ತಂಡವೊಂದು ಆಡುತ್ತಿರುವಾಗ ಪರಿಸ್ಥಿತಿಗೆ ಅನುಗುಣವಾಗಿ ಒಬ್ಬ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಪ್ಲೇಯಿಂಗ್​ ಇಲೆವನ್​ ಬಳಗದಿಂದ ಹೊರಗಿರುವ ಒಬ್ಬ ಆಟಗಾರನನ್ನು ತಂಡಕ್ಕೆ ಆಡುವ ಬಳಗಕ್ಕೆ ಸೇರಿಸಿಕೊಳ್ಳಬಹುದು. ಇನಿಂಗ್ಸ್‌ ಆರಂಭಕ್ಕೂ ಮುನ್ನ, ಒಂದು ಓವರ್‌ ಮುಗಿದ ಮೇಲೆ, ವಿಕೆಟ್‌ ಬಿದ್ದಾಗ, ಓವರ್‌ಗಳ ನಡುವಿನ ವಿರಾಮದಲ್ಲಿ ಈ ನಿಯಮವನ್ನು ಬಳಸಬಹುದು. ಈ ನಿಯಮದನ್ವಯ ಒಬ್ಬ ಬದಲಿ ಆಟಗಾರನನ್ನು ಮಾತ್ರ ಬದಲಿಸಲು ಅವಕಾಶವಿರಲಿದೆ.

ಇದನ್ನೂ ಓದಿ IPL 2023: ಅಹಮದಾಬಾದ್​ನಲ್ಲಿ ಭಾರಿ ಮಳೆ; ಚೆನ್ನೈ-ಗುಜರಾತ್​ ಪಂದ್ಯ ಅನುಮಾನ

ವೈಡ್‌, ನೋಬಾಲ್‌ಗ‌ಳೂ ಡಿಆರ್‌ಎಸ್‌

ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಜಾರಿಗೆ ತರಲಾಗಿದ್ದ ವೈಡ್‌, ನೋಬಾಲ್‌ ಡಿಆರ್‌ಎಸ್‌ ನಿಯಮವನ್ನು ಈ ಬಾರಿಯ ಐಪಿಎಲ್​ನಲ್ಲಿಯೂ ಅಳವಡಿಸಲಾಗಿದೆ. ಅಂಪೈರ್​ಗಳು ನೀಡಿದ ವೈಡ್‌, ನೋಬಾಲ್‌ ಕರೆಗಳನ್ನು ಡಿಆರ್‌ಎಸ್‌ ಮೂಲಕ ಈಗ ಆಟಗಾರರಿಗೆ ಪ್ರಶ್ನಿಸಬಹುದಾಗಿದೆ.

ಈ ಹಿಂದೆ ಟಾಸ್​ಗೂ ಮುನ್ನ ಪ್ಲೇಯಿಂಗ್​ ಇಲೆವೆನ್​ ಪಟ್ಟಿ ಸಲ್ಲಿಸಬೇಕಿತ್ತು. ಆದರೆ ಇದೀಗ ತಂಡಗಳ ನಾಯಕರು ಟಾಸ್‌ ಹಾರಿಸುವಾಗ 11 ಆಟಗಾರರ ಅಂತಿಮಪಟ್ಟಿಯನ್ನು ನೀಡಬೇಕಾಗಿಲ್ಲ. ಟಾಸ್‌ ಫ‌ಲಿತಾಂಶ ನೋಡಿಕೊಂಡು ಬಳಿಕ 11ರ ಪಟ್ಟಿಯನ್ನು ಪ್ರಕಟಿಸಬಹುದು.

ಗುವಾಹಟಿಯಲ್ಲಿ 2 ಪಂದ್ಯ

ಫುಟ್ಬಾಲ್​ ಕ್ರೀಡೆಯನ್ನು ಹೆಚ್ಚಾಗಿ ನೆಚ್ಚಿಕೊಂಡಿರುವ ಅಸ್ಸಾಂನ ಗುವಾಹಟಿಯಲ್ಲಿ ಈ ಬಾರಿ ಐಪಿಎಲ್ ಪಂದ್ಯಗಳು​ ನಡೆಯಲಿವೆ. ಈ ಮೂಲಕ ಇಲ್ಲಿನ ಫುಟ್ಬಾಲ್​ ಅಭಿಮಾನಿಗಳಿಗೆ ಕ್ರಿಕೆಟ್‌ನಲ್ಲೂ ಆಸಕ್ತಿ ಹುಟ್ಟಿಸಲು ಬಿಸಿಸಿಐ ಮುಂದಾಗಿದೆ. ಗುವಾಹಟಿಯಲ್ಲಿ ಈ ಬಾರಿ ಎರಡು ಪಂದ್ಯಗಳು ನಡೆಯಲಿದೆ. ರಾಜಸ್ಥಾನ ರಾಯಲ್ಸ್‌ನ ಎರಡು ತವರಿನ ಪಂದ್ಯಗಳು ಅಸ್ಸಾಂ ಕ್ರಿಕೆಟ್‌ ಅಸೋಸಿಯೇಶನ್‌ ಕ್ರೀಡಾಂಗಣದಲ್ಲಿ ನಡೆಯಲಿದೆ

Continue Reading

ಕ್ರಿಕೆಟ್

IPL 2023 : ಬೌಲಿಂಗ್​ನಲ್ಲಿ ಶತಕ ಬಾರಿಸಿದ ಮೊಹಮ್ಮದ್​ ಶಮಿ, ಏನಿದು ಸಾಧನೆ?

ಮೊಹಮ್ಮದ್​ ಶಮಿ ಐಪಿಎಲ್​ನ 94 ಇನಿಂಗ್ಸ್​​ಗಳಲ್ಲಿ 100 ವಿಕೆಟ್​ ಸಾಧನೆ ಮಾಡಿದ್ದು, ಈ ಪಟ್ಟಿಯಲ್ಲಿ 19ನೇ ಅಟಗಾರ ಎನಿಸಿಕೊಂಡಿದ್ದಾರೆ.

VISTARANEWS.COM


on

Mohammad Shami who scored a century in bowling what is the achievement
Koo

ಅಹಮದಾಬಾದ್​: ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ವೇಗದ ಬೌಲರ್​ ಮೊಹಮ್ಮದ್​ ಶಮಿ ಎರಡು ವಿಕೆಟ್​ ಪಡೆದಿದ್ದಾರೆ. ನಾಲ್ಕು ಓವರ್​ಗಳಲ್ಲಿ 29 ರನ್​ಗಳಿಗೆ 2 ವಿಕೆಟ್​ ಕಬಳಿಸಿದರು. ಈ ಮೂಲಕ ಅವರು ತಂಡದ ಯಶಸ್ವಿ ಬೌಲರ್ ಎನಿಸಿಕೊಂಡರು. ಇದೆಲ್ಲದಕ್ಕಿಂತ ಹೆಚ್ಚಾಗಿ ಅವರು ಮೊದಲ ವಿಕೆಟ್​ ಪಡೆದ ತಕ್ಷಣ ಐಪಿಎಲ್​ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಟಾಸ್​ ಸೋತು ಮೊದಲು ಬ್ಯಾಟ್​ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಆರಂಭಿಕ ಬ್ಯಾಟರ್​ ಡೆವೋನ್​ ಕಾನ್ವೆ ಒಂದು ರನ್​ಗೆ ಔಟ್​ ಆದರು. ಶಮಿ ಎಸೆದ ಮಾರಕ ಬೌಲಿಂಗ್​ಗೆ ಅವರು ಕ್ಲೀನ್​ ಬೌಲ್ಡ್ ಆದರು. ಈ ವೇಳೆ ಶಮಿ 100 ಐಪಿಎಲ್​ ವಿಕೆಟ್​ಗಳನ್ನು ಕಿತ್ತಿರುವ 19ನೇ ಬೌಲರ್ ಎನಿಸಿಕೊಂಡರು. ಶಮಿ ತಮ್ಮ 94ನೇ ಇನಿಂಗ್ಸ್​​ನಲ್ಲಿ ಈ ಸಾಧನೆ ಮಾಡಿದರು.

ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ವೆಸ್ಟ್​ ಇಂಡೀಸ್​ನ ಡ್ವೆನ್ ಬ್ರಾವೊ ಮೊದಲ ಸ್ಥಾನದಲ್ಲಿದ್ದಾರೆ. ಅವರು ಐಪಿಎಲ್​ನ 158 ಇನಿಂಗ್ಸ್​​ಗಳಲ್ಲಿ 183 ವಿಕೆಟ್​ ಕಬಳಿಸಿದ್ದಾರೆ. ಮುಂಬಯಿ ಇಂಡಿಯನ್ಸ್​ ಮಾಜಿ ವೇಗದ ಬೌಲರ್​ ಲಸಿತ್​ ಮಾಲಿಂಗ ಎರಡನೇ ಸ್ಥಾನದಲ್ಲಿದ್ದಾರೆ. 122 ಐಪಿಎಲ್​ ಮ್ಯಾಚ್​​ಗಳಲ್ಲಿ ಅವರು 170 ತಮ್ಮದಾಗಿಸಿಕೊಂಡಿದ್ದಾರೆ.

ಆರ್​ಸಿಬಿ ಮಾಜಿ ಸ್ಪಿನ್ನರ್​ ಹಾಗೂ ಹಾಲಿ ರಾಜಸ್ಥಾನ್​ ರಾಯಲ್ಸ್​ ತಂಡದ ಆಟಗಾರ ಯಜ್ವೇಂದ್ರ ಚಹಲ್​ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. 130 ಎಸೆತಗಳಲ್ಲಿ ಅವರು 166 ವಿಕೆಟ್ ಪಡೆದಿದ್ದಾರೆ.

ಉತ್ತಮ ಮೊತ್ತ ಪೇರಿಸಿದ ಚೆನ್ನೈ

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್​ ಮಾಡಲು ಆಹ್ವಾನ ಪಡೆದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಬ್ಯಾಟರ್ ಡೆವೋನ್​ ಕಾನ್ವೆ 1 ರನ್​ಗೆ ವಿಕೆಟ್​ ಒಪ್ಪಿಸುವ ಮೂಲಕ ಹಿನ್ನಡೆ ಉಂಟು ಮಾಡಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಮೊಯೀನ್ ಅಲಿ ಸ್ಪೋಟಕ ಬ್ಯಾಟಿಂಗ್ ಮಾಡಿದರೂ 23 ರನ್​ಗಳಿಗೆ ಔಟಾದರು. ಹೀಗಾಗಿ ಸಿಎಸ್​ಕೆ ತಂಡಕ್ಕೆ ಮತ್ತೆ ಹಿನ್ನಡೆ ಉಂಟಾಯಿತು.

ಗಾಯಕ್ವಾಡ್​ ಸ್ಫೋಟಕ ಬ್ಯಾಟಿಂಗ್​

ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಬೆನ್​ಸ್ಟೋಕ್ಸ್​ 7 ರನ್​ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರಿಸಿದ ಬೆನ್​ಸ್ಟೋಕ್ಸ್​ ಸತತವಾಗಿ ಇನಿಂಗ್ಸ್ ಕಟ್ಟಿದರು. 23 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ ಅವರು ನಂತರವೂ ಬಿಡುಬೀಸಿನ ಬ್ಯಾಟಿಂಗ್ ನಡೆಸಿದರು. ಆದರೆ, ಅಲ್ಜಾರಿ ಜೋಸೆಫ್​ ಎಸೆದ ಚಾಣಾಕ್ಷ ಬೌಲಿಂಗ್​ಗೆ ಅವರು ಶುಭ್​ಮನ್​ ಗಿಲ್​ಗೆ ವಿಕೆಟ್​ ಒಪ್ಪಿಸಿ ನಿರ್ಗಮಿಸಿದರು.

ಗಾಯಕ್ವಾಡ್​ ಹೊರತುಪಡಿಸಿ ಚೆನ್ನೈ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. ಅಂಬಾಟಿ ರಾಯುಡು 12 ರನ್​ಗೆ ಔಟಾದರೆ, ಶಿವಂ ದುಬೆ 19 ರನ್ ಕೊಡುಗೆ ಕೊಟ್ಟರು. ಮಹೇಂದ್ರ ಸಿಂಗ್ ಧೋನಿ 7 ಎಸೆತಗಳಿಗೆ 14 ರನ್​ ಬಾರಿಸಿದರು.

Continue Reading

ಕ್ರಿಕೆಟ್

IPL 2023 : 92 ರನ್​ ಬಾರಿಸಿದ ಋತುರಾಜ್​, ಗುಜರಾತ್ ತಂಡಕ್ಕೆ 179 ರನ್​ಗಳ ಗೆಲುವಿನ ಗುರಿ

VISTARANEWS.COM


on

Rituraj who scored 92 runs set a target of 179 runs for the Gujarat team
Koo

ಅಹಮದಾಬಾದ್​​: ಆರಂಭಿಕ ಬ್ಯಾಟರ್ ಋತುರಾಜ್​ ಗಾಯಕ್ವಾಡ್​ (92 ರನ್​, 50 ಎಸೆತ, 4 ಫೋರ್​, 9 ಸಿಕ್ಸರ್​​) ಅವರ ಅಮೊಘ ಅರ್ಧ ಶತಕದ ನೆರವು ಪಡೆದ ಸಿಎಸ್​ಕೆ ತಂಡ ಐಪಿಎಲ್​ 16ನೇ ಆವೃತ್ತಿಯ (IPL 2023) ಉದ್ಘಾಟನಅ ಪಂದ್ಯದಲ್ಲಿ ಮೊದಲು ಬ್ಯಾಟ್​ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್​ ಬಾರಿಸಿದೆ. ಇದರೊಂದಿಗೆ ಟಾಸ್​ ಗೆದ್ದು ಮೊದಲು ಫೀಲ್ಡಿಂಗ್​ ಅಯ್ಕೆ ಮಾಡಿಕೊಂಡಿದ್ದ ಗುಜರಾತ್​ ತಂಡಕ್ಕೆ 179 ರನ್​ಗಳ ಗೆಲುವಿನ ಗುರಿ ಎದುರಾಗಿದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್​ ಮಾಡಲು ಆಹ್ವಾನ ಪಡೆದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಬ್ಯಾಟರ್ ಡೆವೋನ್​ ಕಾನ್ವೆ 1 ರನ್​ಗೆ ವಿಕೆಟ್​ ಒಪ್ಪಿಸುವ ಮೂಲಕ ಹಿನ್ನಡೆ ಉಂಟು ಮಾಡಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಮೊಯೀನ್ ಅಲಿ ಸ್ಪೋಟಕ ಬ್ಯಾಟಿಂಗ್ ಮಾಡಿದರೂ 23 ರನ್​ಗಳಿಗೆ ಔಟಾದರು. ಹೀಗಾಗಿ ಸಿಎಸ್​ಕೆ ತಂಡಕ್ಕೆ ಮತ್ತೆ ಹಿನ್ನಡೆ ಉಂಟಾಯಿತು.

ಗಾಯಕ್ವಾಡ್​ ಸ್ಫೋಟಕ ಬ್ಯಾಟಿಂಗ್​

ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಬೆನ್​ಸ್ಟೋಕ್ಸ್​ 7 ರನ್​ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರಿಸಿದ ಬೆನ್​ಸ್ಟೋಕ್ಸ್​ ಸತತವಾಗಿ ಇನಿಂಗ್ಸ್ ಕಟ್ಟಿದರು. 23 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ ಅವರು ನಂತರವೂ ಬಿಡುಬೀಸಿನ ಬ್ಯಾಟಿಂಗ್ ನಡೆಸಿದರು. ಆದರೆ, ಅಲ್ಜಾರಿ ಜೋಸೆಫ್​ ಎಸೆದ ಚಾಣಾಕ್ಷ ಬೌಲಿಂಗ್​ಗೆ ಅವರು ಶುಭ್​ಮನ್​ ಗಿಲ್​ಗೆ ವಿಕೆಟ್​ ಒಪ್ಪಿಸಿ ನಿರ್ಗಮಿಸಿದರು.

ಗಾಯಕ್ವಾಡ್​ ಹೊರತುಪಡಿಸಿ ಚೆನ್ನೈ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. ಅಂಬಾಟಿ ರಾಯುಡು 12 ರನ್​ಗೆ ಔಟಾದರೆ, ಶಿವಂ ದುಬೆ 19 ರನ್ ಕೊಡುಗೆ ಕೊಟ್ಟರು. ಮಹೇಂದ್ರ ಸಿಂಗ್ ಧೋನಿ 7 ಎಸೆತಗಳಿಗೆ 14 ರನ್​ ಬಾರಿಸಿದರು.

ಅದ್ಧೂರಿ ಉದ್ಘಾಟನಾ ಕಾರ್ಯಕ್ರಮ

ಕೋವಿಡ್‌ ನಂತರ ಮೊದಲ ಬಾರಿಗೆ ಅತ್ಯಂತ ವೈಭವದಿಂದ ನಡೆದ ಉದ್ಘಾಟನ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ಖ್ಯಾತಿಯ ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ(Rashmika Mandanna) ಮತ್ತು ಮಿಲ್ಕಿ ಬ್ಯೂಟಿ ಖ್ಯಾತಿಯ ತಮನ್ನಾ ಭಾಟಿಯ(Tamannaah Bhatia) ನೃತ್ಯದ ಮೂಲಕ ಎಲ್ಲರನ್ನು ರಂಜಿಸಿದರೆ, ಅರಿಜಿತ್​ ಸಿಂಗ್(arijit singh)​ ಅವರ ಅದ್ಭುತ ಕಂಠಕ್ಕೆ ದಾಖಲೆಯ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರನ್ನು ತಲೆದೂಗಿದರು. ಇದೇ ವೇಳೆ ನಡೆಸಿದ ಲೇಸರ್​ ಶೋ ಅಭಿಮಾನಿಗಳನ್ನು ಮಂತ್ರಮುಗ್ದರನ್ನಾಗಿಸಿತು. ಆಸ್ಕರ್​ ಪ್ರಶಸ್ತಿ ಗೆದ್ದ ಆರ್​ಆರ್​ಆರ್​ ಸಿನೆಮಾದ ನಾಟು ನಾಟು ಹಾಡಿಗೆ ರಶ್ಮಿಕಾ ಕುಣಿದು ಕುಪ್ಪಳಿಸಿದರು.

ಅದ್ಧೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ, ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ಟೀಮ್​ ಇಂಡಿಯಾದ ಮಾಜಿ ಆಟಗಾರರಾದ ರವಿಶಾಸ್ತ್ರಿ, ಸುನೀಲ್​ ಗವಾಸ್ಕರ್​, ವಿದೇಶಿ ಮಾಜಿ ಆಟಗಾರರಾದ ಆರಾನ್​ ಫಿಂಚ್​, ಕೆವಿನ್​ ಪೀಟರ್ಸನ್​ ಸೇರಿ ಅನೇಕ ಕ್ರಿಕೆಟಿಗರು ಹಾಗೂ ಮತ್ತಿತರ ಬಿಸಿಸಿಐ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Elephant trap
ಕರ್ನಾಟಕ5 hours ago

Elephant trapped : ಮೂರು ತಿಂಗಳಿನಿಂದ ಸತಾಯಿಸುತ್ತಿರುವ 10 ವರ್ಷದ ಗಂಡಾನೆ ಕೊನೆಗೂ ಹನಿ ಟ್ರ್ಯಾಪ್‌ಗೆ ಬಿತ್ತು!

Unaccounted 6.4 Crore rupees seized in Chikmagalur
ಕರ್ನಾಟಕ5 hours ago

Karnataka Election 2023: ಚುನಾವಣೆ ಹಿನ್ನೆಲೆ ಹಣದ ಹೊಳೆ, ದಾಖಲೆ ಇಲ್ಲದ 6 ಕೋಟಿ ರೂ., 17 ಕೆಜಿ ಚಿನ್ನ, ಬೆಳ್ಳಿ ವಶ

Champion Gujarat won by 5 wickets in the first match, CSK was disappointed
ಕ್ರಿಕೆಟ್5 hours ago

IPL 2023 : ಚಾಂಪಿಯನ್​ ಗುಜರಾತ್​​ಗೆ ಮೊದಲ ಪಂದ್ಯದಲ್ಲಿ 5 ವಿಕೆಟ್ ಜಯ, ಸಿಎಸ್​ಕೆ ನಿರಾಸೆ

holalu urus
ಕರ್ನಾಟಕ5 hours ago

Communal Harmony : ಉರೂಸ್‌ ಸಂಭ್ರಮದಲ್ಲಿ ಹಿಂದೂ ಶ್ರೀಗಳನ್ನು ಗೌರವಿಸಿ ಭಾವೈಕ್ಯತೆ ಮೆರೆದ ಮುಸ್ಲಿಮರು

Nelyadi suicide
ಕರ್ನಾಟಕ5 hours ago

Suicide case : ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ, ಆ ಮನೆಯಲ್ಲಿ ಇದು ಮೂರನೇ ಸುಸೈಡ್‌!

Bangalore mysore highway
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ಟೋಲ್ ದರ ಜನರಿಗೆ ದುಃಸ್ವಪ್ನವಾಗದಿರಲಿ

IT Raid on the bank owned by Belgaum Congress leader VS Sadhunavar
ಕರ್ನಾಟಕ5 hours ago

IT Raid: ಕಾಂಗ್ರೆಸ್‌ ಮುಖಂಡ ವಿ.ಎಸ್.‌ ಸಾಧುನವರ ಒಡೆತನದ ಬ್ಯಾಂಕ್‌ ಮೇಲೆ ಐಟಿ ದಾಳಿ

IPL 2023
ಕ್ರಿಕೆಟ್5 hours ago

IPL 2023 : ಐಪಿಎಲ್​ನ ಮೊದಲ ಇಂಪ್ಯಾಕ್ಟ್​​ ಪ್ಲೇಯರ್​ ಯಾರು? ಅನುಕೂಲ ಬಳಸಿಕೊಂಡಿದ್ದು ಯಾವ ತಂಡ?

People In Pakistan Unhappy, Believe Partition Was A Mistake: Says Mohan Bhagwat
ದೇಶ6 hours ago

Mohan Bhagwat: ಪಾಕ್ ಜನಕ್ಕೆ ನೆಮ್ಮದಿ ಇಲ್ಲ, ದೇಶ ವಿಭಜನೆ ಪ್ರಮಾದ ಎಂಬ ಭಾವನೆ ಇದೆ: ಮೋಹನ್‌ ಭಾಗವತ್‌

Mohammad Shami who scored a century in bowling, what is the achievement?
ಕ್ರಿಕೆಟ್6 hours ago

IPL 2023 : ಬೌಲಿಂಗ್​ನಲ್ಲಿ ಶತಕ ಬಾರಿಸಿದ ಮೊಹಮ್ಮದ್​ ಶಮಿ, ಏನಿದು ಸಾಧನೆ?

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್6 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ16 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ1 day ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ2 days ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ5 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ5 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ2 weeks ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ2 weeks ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!