ಕ್ರಿಕೆಟ್
INDvsNZ T20 : ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಪಂದ್ಯ ನಡೆಯುವುದು ಎಲ್ಲಿ? ಅಲ್ಲಿನ ಪಿಚ್ ಹೇಗಿದೆ?
ಭಾರತ ಹಾಗೂ ನ್ಯೂಜಿಲ್ಯಾಂಡ್ (INDvsNZ T20) ನಡುವಿನ ಎರಡನೇ ಟಿ20 ಪಂದ್ಯ ನಡೆಯುವುದು ಎಲ್ಲಿ ಹಾಗೂ ಟಾಸ್ ಎಷ್ಟು ಗಂಟೆಗೆ ಎಂಬ ವಿವರ ಇಲ್ಲಿದೆ.
ಲಖನೌ: ಭಾರತ ಹಾಗೂ ಪ್ರವಾಸಿ ನ್ಯೂಜಿಲ್ಯಾಂಡ್ ನಡುವಿನ ಎರಡನೇ ಟಿ20 ಪಂದ್ಯ (INDvsNZ T20) ಕ್ರಿಕೆಟ್ ಅಭಿಮಾನಿಗಳಲ್ಲಿ ಕೌತುಕ ಸೃಷ್ಟಿಸಿದೆ. ಭಾರತ ತಂಡ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವುದೇ ಅದಕ್ಕೆ ಕಾರಣ. ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಮಾತ್ರ ಸರಣಿ ಜೀವಂತವಾಗಿರಲಿದೆ. ಹೀಗಾಗಿ ಭಾರತ ತಂಡದ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಈ ಪಂದ್ಯವನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ನಾನಾ ಯೋಜನೆ ರೂಪಿಸಿಕೊಂಡಿರುತ್ತಾರೆ. ಮೊದಲ ಪಂದ್ಯದ ತಪ್ಪುಗಳನ್ನು ಸರಿಪಡಿಸಿಕೊಂಡು ಕಣಕ್ಕೆ ಇಳಿಯವುದೇ ತಂಡದ ಗುರಿಯಾಗಲಿದೆ.
ಈ ಪಂದ್ಯ ಉತ್ತರದ ಪ್ರದೇಶದ ಲಖನೌನಲ್ಲಿ ನಡೆಯಲಿದೆ. ಇಲ್ಲಿನ ಭಾರತ ರತ್ನ ಅಟಲ್ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಪಂದ್ಯ ಆಯೋಜನೆಗೊಂಡಿದೆ. ಇದು ಸಮತೋಲಿತ ಪಿಚ್ ಆಗಿದ್ದು ಬ್ಯಾಟಿಂಗ್ ಹಾಗೂ ಬೌಲಿಂಗ್ಗೆ ಸಮಾನ ರೀತಿಯಲ್ಲಿ ಸಹಕಾರಿಯಾಗಿದೆ.
ಇತ್ತಂಡಗಳ ನಡುವಿನ ಹಣಾಹಣಿ ಜನವರಿ 29ರ ರಾತ್ರಿ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6.30 ನಿಮಿಷಕ್ಕೆ ನಡೆಯಲಿದೆ. ನ್ಯೂಜಿಲ್ಯಾಂಡ್ ತಂಡಕ್ಕೆ ಈ ಪಂದ್ಯವನ್ನು ಗೆದ್ದರೆ ಸರಣಿ ಗೆದ್ದ ಗೌರವ ಲಭಿಸಲಿದೆ. ಹಿಂದಿನ ಪಂದ್ಯದಂತೆ ನಿಗದಿತ ಯೋಜನೆಯ ಪ್ರಕಾರ ಕಣಕ್ಕೆ ಇಳಿಯಲಿದೆ.
ಪಿಚ್ ಹೇಗಿದೆ?
ಲಖನೌನ ಏಕನಾ ಕ್ರಿಕೆಟ್ ಸ್ಟೇಡಿಯಮ್ನ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಕ್ಕೂ ಪೂರಕವಾಗಿದೆ. ಆದರೆ, ಇಲ್ಲಿ ನಡೆದ ಐದು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡವೇ ಜಯ ಗಳಿಸಿದೆ. ಇಲ್ಲಿ ಚೇಸಿಂಗ್ ಮಾಡುವುದು ಸುಲಭವಲ್ಲ. ಹೀಗಾಗಿ ಟಾಸ್ ಗೆದ್ದ ತಂಡದ ನಾಯಕ ಬ್ಯಾಟಿಂಗ್ ಮೊರೆ ಹೋಗುವುದರಲ್ಲಿ ಸಂಶಯವಿಲ್ಲ. ಪಂದ್ಯಕ್ಕೆ ಮಳೆಯ ಅಡಚಣೆ ಇಲ್ಲ ಎಂಬುದಾಗಿ ಹವಾಮಾನ ವರದ ಹೇಳಿದೆ.
ನೇರಪ್ರಸಾರ ಎಲ್ಲಿ
ಭಾರತ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವಿನ ಟಿ20ನ ಸರಣಿಯ ಎರಡನೇ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನಲ್ಲಿ ನೇರ ಪ್ರಸಾರವಾಗಲಿದೆ. ಅದೇ ರೀತಿ ಡಿಸ್ನಿ ಹಾಟ್ ಸ್ಟಾರ್ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಇದನ್ನೂ ಓದಿ : Washington Sundar : ನಿಮ್ಮಿಷ್ಟದ ಬಿರಿಯಾನಿ ಸಿಗಲ್ಲ ಎಂದಾದರೆ ಹೋಟೆಲ್ ಬದಲಿಸುತ್ತೀರಾ? ಸುಂದರ್ ಕೇಳಿದ್ದು ಯಾರಿಗೆ?
ತಂಡಗಳು
ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಶುಭ್ಮನ್ ಗಿಲ್, ಪೃಥ್ವಿ ಶಾ, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯಜ್ವೇಂದ್ರ ಚಹಲ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಕೇಶ್ ಕುಮಾರ್.
ನ್ಯೂಜಿಲ್ಯಾಂಡ್ : ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಡೆವೋನ್ ಕಾನ್ವೆ, ಗ್ಲೆನ್ ಫಿಲಿಪ್ಸ್, ಡೇನ್ ಕ್ಲೆವರ್, ಮಾರ್ಕ್ ಚಾಪ್ಮನ್, ಮೈಕೆಲ್ ಬ್ರೇಸ್ವೆಲ್, ಡ್ಯಾರಿಲ್ ಮಿಚೆಲ್, ಮೈಕೆಲ್ ರಿಪ್ಪಾನ್, ಲಾಕಿ ಫರ್ಗ್ಯೂಸನ್, ಇಶ್ ಸೋಧಿ, ಬ್ಲೇರ್ ಟಿಕ್ನರ್, ಜಾಕೊಬ್ ಡಫಿ, ಹೆನ್ರಿ ಶಿಪ್ಲೆ, ಬೆನ್ ಲಿಸ್ಟರ್.
ಕ್ರಿಕೆಟ್
IPL 2023 : ಚಾಂಪಿಯನ್ ಗುಜರಾತ್ಗೆ ಮೊದಲ ಪಂದ್ಯದಲ್ಲಿ 5 ವಿಕೆಟ್ ಜಯ, ಸಿಎಸ್ಕೆ ನಿರಾಸೆ
ಗುಜರಾತ್ ಟೈಟನ್ಸ್ ತಂಡ ಈ ಬಾರಿಯೂ ಸಂಘಟಿತ ಪ್ರಯತ್ನದ ಮೂಲಕ ಗೆಲ್ಲುವ ಮಾದರಿಯನ್ನು ಪ್ರದರ್ಶಿಸಿತು.
ಅಹಮದಾಬಾದ್: ಶುಭ್ಮನ್ ಗಿಲ್ (63 ರನ್) ಅರ್ಧ ಶತಕ ಹಾಗೂ ಬೌಲರ್ಗಳ ಸಂಘಟಿತ ಬೌಲಿಂಗ್ ದಾಳಿಯ ನೆರವು ಪಡೆದ ಗುಜರಾತ್ ಟೈಟನ್ಸ್ ತಂಡ ಐಪಿಎಲ್ 2023ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್ ವಿಜಯ ಸಾಧಿಸಿತು. ಈ ಮೂಲಕ ಹಾಲಿ ಚಾಂಪಿಯನ್ ಗುಜರಾತ್ ಬಳಗ ಶುಭಾರಂಭ ಮಾಡಿದರೆ, ಧೋನಿ ನೇತೃತ್ವದ ಸಿಎಸ್ಕೆ ಆರಂಭಿಕ ಆಘಾತ ಎದುರಾಯಿತು. ಅದೇ ರೀತಿ ಸ್ಫೋಟಕ ಅರ್ಧ ಶತಕ ಬಾರಿಸಿದ ಋತುರಾಜ್ ಗಾಯಕ್ವಾಡ್ (92 ರನ್, 50 ಎಸೆತ, 4 ಫೋರ್, 9 ಸಿಕ್ಸರ್) ಅವರ ಪರಿಶ್ರಮ ವ್ಯರ್ಥಗೊಂಡಿತು.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಮ್ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಬಾರಿಸಿತು. ಗುರಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ ತಂಡ 19.2 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 182 ರನ್ ಬಾರಿಸಿ ಜಯ ಸಾಧಿಸಿತು.
ದೊಡ್ಡ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಗುಜರಾತ್ ಟೈಟನ್ಸ್ ತಂಡ 37 ರನ್ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ಬ್ಯಾಟರ್ ವೃದ್ಧಿಮಾನ್ ಸಾಹ 25 ರನ್ ಬಾರಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಸಾಯಿ ಸುದರ್ಶನ್ 22 ರನ್ ಬಾರಿಸಿದರು. ನಾಯಕ ಹಾರ್ದಿಕ್ ಪಾಂಡ್ಯ 8 ರನ್ಗೆ ಔಟಾಗುವ ಮೂಲಕ ತಂಡಕ್ಕೆ ಹಿನ್ನಡೆ ಉಂಟಾಯಿತು. ಆದರೆ, ಕೊನೇ ಹಂತದಲ್ಲಿ ವಿಜಯ್ ಶಂಕರ್ (27), ರಾಹುಲ್ ತೆವತಿಯಾ (15) ಹಾಗೂ ರಶೀದ್ ಖಾನ್ (10) ತಂಡವನ್ನು ಗೆಲ್ಲಿಸಿದರು.
ಅದಕ್ಕಿಂತ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಬ್ಯಾಟರ್ ಡೆವೋನ್ ಕಾನ್ವೆ 1 ರನ್ಗೆ ವಿಕೆಟ್ ಒಪ್ಪಿಸುವ ಮೂಲಕ ಹಿನ್ನಡೆ ಉಂಟು ಮಾಡಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಮೊಯೀನ್ ಅಲಿ ಸ್ಫೋಟಕ ಬ್ಯಾಟಿಂಗ್ ಮಾಡಿದರೂ 23 ರನ್ಗಳಿಗೆ ಔಟಾದರು. ಹೀಗಾಗಿ ಸಿಎಸ್ಕೆ ತಂಡಕ್ಕೆ ಮತ್ತೆ ಹಿನ್ನಡೆ ಉಂಟಾಯಿತು.
ಗಾಯಕ್ವಾಡ್ ಸ್ಫೋಟಕ ಬ್ಯಾಟಿಂಗ್
ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಬೆನ್ಸ್ಟೋಕ್ಸ್ 7 ರನ್ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರಿಸಿದ ಗಾಯಕ್ವಾಡ್ ನಿಧಾನವಾಗಿ ಇನಿಂಗ್ಸ್ ಕಟ್ಟಿದರು. 23 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ ಅವರು ನಂತರವೂ ಬಿಡುಬೀಸಿನ ಬ್ಯಾಟಿಂಗ್ ನಡೆಸಿದರು. ಆದರೆ, ಅಲ್ಜಾರಿ ಜೋಸೆಫ್ ಎಸೆದ ಚಾಣಾಕ್ಷ ಬೌಲಿಂಗ್ಗೆ ಅವರು ಶುಭ್ಮನ್ ಗಿಲ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು.
ಗಾಯಕ್ವಾಡ್ ಹೊರತುಪಡಿಸಿ ಚೆನ್ನೈ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಅಂಬಾಟಿ ರಾಯುಡು 12 ರನ್ಗೆ ಔಟಾದರೆ, ಶಿವಂ ದುಬೆ 19 ರನ್ ಕೊಡುಗೆ ಕೊಟ್ಟರು. ಮಹೇಂದ್ರ ಸಿಂಗ್ ಧೋನಿ 7 ಎಸೆತಗಳಿಗೆ 14 ರನ್ ಬಾರಿಸಿದರು.
ಅದ್ಧೂರಿ ಉದ್ಘಾಟನಾ ಕಾರ್ಯಕ್ರಮ
ಕೋವಿಡ್ ನಂತರ ಮೊದಲ ಬಾರಿಗೆ ಅತ್ಯಂತ ವೈಭವದಿಂದ ನಡೆದ ಉದ್ಘಾಟನ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ಖ್ಯಾತಿಯ ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ(Rashmika Mandanna) ಮತ್ತು ಮಿಲ್ಕಿ ಬ್ಯೂಟಿ ಖ್ಯಾತಿಯ ತಮನ್ನಾ ಭಾಟಿಯ(Tamannaah Bhatia) ನೃತ್ಯದ ಮೂಲಕ ಎಲ್ಲರನ್ನು ರಂಜಿಸಿದರೆ, ಅರಿಜಿತ್ ಸಿಂಗ್(arijit singh) ಅವರ ಅದ್ಭುತ ಕಂಠಕ್ಕೆ ದಾಖಲೆಯ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರನ್ನು ತಲೆದೂಗಿದರು. ಇದೇ ವೇಳೆ ನಡೆಸಿದ ಲೇಸರ್ ಶೋ ಅಭಿಮಾನಿಗಳನ್ನು ಮಂತ್ರಮುಗ್ದರನ್ನಾಗಿಸಿತು. ಆಸ್ಕರ್ ಪ್ರಶಸ್ತಿ ಗೆದ್ದ ಆರ್ಆರ್ಆರ್ ಸಿನೆಮಾದ ನಾಟು ನಾಟು ಹಾಡಿಗೆ ರಶ್ಮಿಕಾ ಕುಣಿದು ಕುಪ್ಪಳಿಸಿದರು.
ಅದ್ಧೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಟೀಮ್ ಇಂಡಿಯಾದ ಮಾಜಿ ಆಟಗಾರರಾದ ರವಿಶಾಸ್ತ್ರಿ, ಸುನೀಲ್ ಗವಾಸ್ಕರ್, ವಿದೇಶಿ ಮಾಜಿ ಆಟಗಾರರಾದ ಆರಾನ್ ಫಿಂಚ್, ಕೆವಿನ್ ಪೀಟರ್ಸನ್ ಸೇರಿ ಅನೇಕ ಕ್ರಿಕೆಟಿಗರು ಹಾಗೂ ಮತ್ತಿತರ ಬಿಸಿಸಿಐ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ರಿಕೆಟ್
IPL 2023 : ಐಪಿಎಲ್ನ ಮೊದಲ ಇಂಪ್ಯಾಕ್ಟ್ ಪ್ಲೇಯರ್ ಯಾರು? ಅನುಕೂಲ ಬಳಸಿಕೊಂಡಿದ್ದು ಯಾವ ತಂಡ?
ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಇಂಪ್ಯಾಕ್ಟ್ ಪ್ಲೇಯರ್ ಬಳಸಿಕೊಂಡು ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಿತು.
ಅಹಮದಾಬಾದ್: ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮ ಚರ್ಚೆಯ ವಿಷಯವಾಗಿದೆ. ಪಂದ್ಯದ ನಡುವೆಯೇ ಆಟಗಾರನನ್ನು ಬದಲಾಯಿಸುವುದು ಈ ನಿಯಮದ ಅನುಕೂಲ. ತಂಡವೊಂದರ ಅನುಕೂಲಕ್ಕೆ ತಕ್ಕ ಹಾಗೆ ಒಬ್ಬ ಆಟಗಾರನ್ನು ಪಂದ್ಯದ ಮಧ್ಯದಲ್ಲಿ ಕೈ ಬಿಟ್ಟು ಬೇರೊಬ್ಬ ಆಟಗಾರನನ್ನು ತಂಡಕ್ಕೆ ಸೇರಿಸುವ ಮೂಲಕ ಗೆಲುವಿನ ಅವಕಾಶ ಸೃಷ್ಟಿಸಲು ಸಾಧ್ಯವಾಗುತ್ತದೆ. ಈ ನಿಯಮ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಜಯಂಟ್ಸ್ ತಂಡಗಳ ನಡುವಿನ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿಯೇ ಬಳಕೆಯಾಯಿತು. ಹಾಗಾದರೆ ಈ ನಿಯಮಕ್ಕೆ ಒಳಪಟ್ಟ ಆಟಗಾರ ಯಾರೆಂಬುದನ್ನು ನೋಡೋಣ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಬೌಲರ್ ತುಷಾರ್ ದೇಶಪಾಂಡೆ ಐಪಿಎಲ್ನ ಮೊದಲ ಇಂಪ್ಯಾಕ್ಟ್ ಪ್ಲೇಯರ್ ಎನಿಸಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಂತರ ರನ್ ಚೇಸ್ ಮಾಡುವ ವೇಳೆ ತುಷಾರ್ ದೇಶಪಾಂಡೆ ಅವರನ್ನು ಕಣಕ್ಕೆ ಇಳಿಸಿತು. ಅವರನ್ನು ಆಡುವ 11ರ ಬಳಗಕ್ಕೆ ಸೇರಿಸಿಕೊಳ್ಳುವಾಗಿ ಬ್ಯಾಟರ್ ಅಂಬಾಟಿ ರಾಯುಡು ಅವರನ್ನು ಕೈ ಬಿಡಲಾಯಿತು. ಅಂಬಾಟಿ ರಾಯುಡು ಬ್ಯಾಟ್ ಮಾಡಿ 12 ರನ್ ಬಾರಿಸ ಔಟಾಗಿದ್ದರು. 27 ವರ್ಷದ ತುಷಾರ್ ದೇಶಪಾಂಡೆ ಮುಂಬಯಿ ಮೂಲದವರು. ರಣಜಿ ಟ್ರೋಫಿಯಲ್ಲಿ ಮುಂಬಯಿ ತಂಡ ಪರವಾಗಿ ಅವರು ಆಡುತ್ತಾರೆ.
ಹೊಸ ನಿಯಮಗಳೇನು?
ಈ ಬಾರಿಯ ಟೂರ್ನಿಯಲ್ಲಿ ಹತ್ತು ತಂಡಗಳನ್ನು ತಲಾ 5 ತಂಡಗಳ ಎರಡು ಗುಂಪುಗಳಾಗಿ ಬಿಂಗಡಿಸಲಾಗಿದೆ. ಗುಂಪು ಹಂತದಲ್ಲಿ ತಂಡವೊಂದು ತನ್ನದೇ ಗುಂಪಿನ ಉಳಿದ 4 ತಂಡಗಳ ವಿರುದ್ಧ ತಲಾ 2 ಪಂದ್ಯಗಳನ್ನು ಆಡಬೇಕು. ಆಗ ತಂಡವೊಂದು 8 ಪಂದ್ಯಗಳನ್ನು ಆಡಿದಂತಾಗುತ್ತದೆ. ಬಳಿಕ ಎರಡೂ ಗುಂಪುಗಳ ತಂಡಗಳ ನಡುವೆ ಪಂದ್ಯಗಳು ಆರಂಭವಾಗುತ್ತವೆ. ಅಂದರೆ ಮೊದಲ ಗುಂಪಿನ ಒಂದು ತಂಡ, ಇನ್ನೊಂದು ಗುಂಪಿನ ತಂಡವೊಂದರ ವಿರುದ್ಧ ತಲಾ 2 ಪಂದ್ಯಗಳನ್ನು ಆಡುತ್ತದೆ. ಇತರ ನಾಲ್ಕು ತಂಡಗಳ ವಿರುದ್ಧ ತಲಾ 1 ಪಂದ್ಯ ಆಡಲಾಗುತ್ತದೆ. ಇದೇ ಮಾದರಿ ಇತರ ತಂಡಗಳಿಗೂ ಈ ಅನ್ವಯವಾಗುತ್ತದೆ. ಅಲ್ಲಿಗೆ ತಂಡವೊಂದು ಲೀಗ್ ಹಂತದಲ್ಲಿ 14 ಪಂದ್ಯಗಳನ್ನಾಡಿದಂತಾಗುತ್ತದೆ.
ಇದನ್ನೂ ಓದಿ IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ
ಇಂಪ್ಯಾಕ್ಟ್ ಪ್ಲೇಯರ್
ಆಸ್ಟ್ರೇಲಿಯದ ಪ್ರತಿಷ್ಠಿತ ಬಿಗ್ಬಾಶ್ ಟಿ20 ಲೀಗ್ನಲ್ಲಿ ಚಾಲ್ತಿಯಲ್ಲಿರುವ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಈ ಬಾರಿ ಐಪಿಎಲ್ನಲ್ಲಿಯೂ ಪರಿಚಯಿಸಲಾಗಿದೆ. ಈ ನಿಯಮದ ಪ್ರಮಾರ ತಂಡವೊಂದು ಆಡುತ್ತಿರುವಾಗ ಪರಿಸ್ಥಿತಿಗೆ ಅನುಗುಣವಾಗಿ ಒಬ್ಬ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಪ್ಲೇಯಿಂಗ್ ಇಲೆವನ್ ಬಳಗದಿಂದ ಹೊರಗಿರುವ ಒಬ್ಬ ಆಟಗಾರನನ್ನು ತಂಡಕ್ಕೆ ಆಡುವ ಬಳಗಕ್ಕೆ ಸೇರಿಸಿಕೊಳ್ಳಬಹುದು. ಇನಿಂಗ್ಸ್ ಆರಂಭಕ್ಕೂ ಮುನ್ನ, ಒಂದು ಓವರ್ ಮುಗಿದ ಮೇಲೆ, ವಿಕೆಟ್ ಬಿದ್ದಾಗ, ಓವರ್ಗಳ ನಡುವಿನ ವಿರಾಮದಲ್ಲಿ ಈ ನಿಯಮವನ್ನು ಬಳಸಬಹುದು. ಈ ನಿಯಮದನ್ವಯ ಒಬ್ಬ ಬದಲಿ ಆಟಗಾರನನ್ನು ಮಾತ್ರ ಬದಲಿಸಲು ಅವಕಾಶವಿರಲಿದೆ.
ಇದನ್ನೂ ಓದಿ IPL 2023: ಅಹಮದಾಬಾದ್ನಲ್ಲಿ ಭಾರಿ ಮಳೆ; ಚೆನ್ನೈ-ಗುಜರಾತ್ ಪಂದ್ಯ ಅನುಮಾನ
ವೈಡ್, ನೋಬಾಲ್ಗಳೂ ಡಿಆರ್ಎಸ್
ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಜಾರಿಗೆ ತರಲಾಗಿದ್ದ ವೈಡ್, ನೋಬಾಲ್ ಡಿಆರ್ಎಸ್ ನಿಯಮವನ್ನು ಈ ಬಾರಿಯ ಐಪಿಎಲ್ನಲ್ಲಿಯೂ ಅಳವಡಿಸಲಾಗಿದೆ. ಅಂಪೈರ್ಗಳು ನೀಡಿದ ವೈಡ್, ನೋಬಾಲ್ ಕರೆಗಳನ್ನು ಡಿಆರ್ಎಸ್ ಮೂಲಕ ಈಗ ಆಟಗಾರರಿಗೆ ಪ್ರಶ್ನಿಸಬಹುದಾಗಿದೆ.
ಈ ಹಿಂದೆ ಟಾಸ್ಗೂ ಮುನ್ನ ಪ್ಲೇಯಿಂಗ್ ಇಲೆವೆನ್ ಪಟ್ಟಿ ಸಲ್ಲಿಸಬೇಕಿತ್ತು. ಆದರೆ ಇದೀಗ ತಂಡಗಳ ನಾಯಕರು ಟಾಸ್ ಹಾರಿಸುವಾಗ 11 ಆಟಗಾರರ ಅಂತಿಮಪಟ್ಟಿಯನ್ನು ನೀಡಬೇಕಾಗಿಲ್ಲ. ಟಾಸ್ ಫಲಿತಾಂಶ ನೋಡಿಕೊಂಡು ಬಳಿಕ 11ರ ಪಟ್ಟಿಯನ್ನು ಪ್ರಕಟಿಸಬಹುದು.
ಗುವಾಹಟಿಯಲ್ಲಿ 2 ಪಂದ್ಯ
ಫುಟ್ಬಾಲ್ ಕ್ರೀಡೆಯನ್ನು ಹೆಚ್ಚಾಗಿ ನೆಚ್ಚಿಕೊಂಡಿರುವ ಅಸ್ಸಾಂನ ಗುವಾಹಟಿಯಲ್ಲಿ ಈ ಬಾರಿ ಐಪಿಎಲ್ ಪಂದ್ಯಗಳು ನಡೆಯಲಿವೆ. ಈ ಮೂಲಕ ಇಲ್ಲಿನ ಫುಟ್ಬಾಲ್ ಅಭಿಮಾನಿಗಳಿಗೆ ಕ್ರಿಕೆಟ್ನಲ್ಲೂ ಆಸಕ್ತಿ ಹುಟ್ಟಿಸಲು ಬಿಸಿಸಿಐ ಮುಂದಾಗಿದೆ. ಗುವಾಹಟಿಯಲ್ಲಿ ಈ ಬಾರಿ ಎರಡು ಪಂದ್ಯಗಳು ನಡೆಯಲಿದೆ. ರಾಜಸ್ಥಾನ ರಾಯಲ್ಸ್ನ ಎರಡು ತವರಿನ ಪಂದ್ಯಗಳು ಅಸ್ಸಾಂ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯಲಿದೆ
ಕ್ರಿಕೆಟ್
IPL 2023 : ಬೌಲಿಂಗ್ನಲ್ಲಿ ಶತಕ ಬಾರಿಸಿದ ಮೊಹಮ್ಮದ್ ಶಮಿ, ಏನಿದು ಸಾಧನೆ?
ಮೊಹಮ್ಮದ್ ಶಮಿ ಐಪಿಎಲ್ನ 94 ಇನಿಂಗ್ಸ್ಗಳಲ್ಲಿ 100 ವಿಕೆಟ್ ಸಾಧನೆ ಮಾಡಿದ್ದು, ಈ ಪಟ್ಟಿಯಲ್ಲಿ 19ನೇ ಅಟಗಾರ ಎನಿಸಿಕೊಂಡಿದ್ದಾರೆ.
ಅಹಮದಾಬಾದ್: ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ವೇಗದ ಬೌಲರ್ ಮೊಹಮ್ಮದ್ ಶಮಿ ಎರಡು ವಿಕೆಟ್ ಪಡೆದಿದ್ದಾರೆ. ನಾಲ್ಕು ಓವರ್ಗಳಲ್ಲಿ 29 ರನ್ಗಳಿಗೆ 2 ವಿಕೆಟ್ ಕಬಳಿಸಿದರು. ಈ ಮೂಲಕ ಅವರು ತಂಡದ ಯಶಸ್ವಿ ಬೌಲರ್ ಎನಿಸಿಕೊಂಡರು. ಇದೆಲ್ಲದಕ್ಕಿಂತ ಹೆಚ್ಚಾಗಿ ಅವರು ಮೊದಲ ವಿಕೆಟ್ ಪಡೆದ ತಕ್ಷಣ ಐಪಿಎಲ್ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟರ್ ಡೆವೋನ್ ಕಾನ್ವೆ ಒಂದು ರನ್ಗೆ ಔಟ್ ಆದರು. ಶಮಿ ಎಸೆದ ಮಾರಕ ಬೌಲಿಂಗ್ಗೆ ಅವರು ಕ್ಲೀನ್ ಬೌಲ್ಡ್ ಆದರು. ಈ ವೇಳೆ ಶಮಿ 100 ಐಪಿಎಲ್ ವಿಕೆಟ್ಗಳನ್ನು ಕಿತ್ತಿರುವ 19ನೇ ಬೌಲರ್ ಎನಿಸಿಕೊಂಡರು. ಶಮಿ ತಮ್ಮ 94ನೇ ಇನಿಂಗ್ಸ್ನಲ್ಲಿ ಈ ಸಾಧನೆ ಮಾಡಿದರು.
ಐಪಿಎಲ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ನ ಡ್ವೆನ್ ಬ್ರಾವೊ ಮೊದಲ ಸ್ಥಾನದಲ್ಲಿದ್ದಾರೆ. ಅವರು ಐಪಿಎಲ್ನ 158 ಇನಿಂಗ್ಸ್ಗಳಲ್ಲಿ 183 ವಿಕೆಟ್ ಕಬಳಿಸಿದ್ದಾರೆ. ಮುಂಬಯಿ ಇಂಡಿಯನ್ಸ್ ಮಾಜಿ ವೇಗದ ಬೌಲರ್ ಲಸಿತ್ ಮಾಲಿಂಗ ಎರಡನೇ ಸ್ಥಾನದಲ್ಲಿದ್ದಾರೆ. 122 ಐಪಿಎಲ್ ಮ್ಯಾಚ್ಗಳಲ್ಲಿ ಅವರು 170 ತಮ್ಮದಾಗಿಸಿಕೊಂಡಿದ್ದಾರೆ.
ಆರ್ಸಿಬಿ ಮಾಜಿ ಸ್ಪಿನ್ನರ್ ಹಾಗೂ ಹಾಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಯಜ್ವೇಂದ್ರ ಚಹಲ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. 130 ಎಸೆತಗಳಲ್ಲಿ ಅವರು 166 ವಿಕೆಟ್ ಪಡೆದಿದ್ದಾರೆ.
ಉತ್ತಮ ಮೊತ್ತ ಪೇರಿಸಿದ ಚೆನ್ನೈ
ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಬ್ಯಾಟರ್ ಡೆವೋನ್ ಕಾನ್ವೆ 1 ರನ್ಗೆ ವಿಕೆಟ್ ಒಪ್ಪಿಸುವ ಮೂಲಕ ಹಿನ್ನಡೆ ಉಂಟು ಮಾಡಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಮೊಯೀನ್ ಅಲಿ ಸ್ಪೋಟಕ ಬ್ಯಾಟಿಂಗ್ ಮಾಡಿದರೂ 23 ರನ್ಗಳಿಗೆ ಔಟಾದರು. ಹೀಗಾಗಿ ಸಿಎಸ್ಕೆ ತಂಡಕ್ಕೆ ಮತ್ತೆ ಹಿನ್ನಡೆ ಉಂಟಾಯಿತು.
ಗಾಯಕ್ವಾಡ್ ಸ್ಫೋಟಕ ಬ್ಯಾಟಿಂಗ್
ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಬೆನ್ಸ್ಟೋಕ್ಸ್ 7 ರನ್ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರಿಸಿದ ಬೆನ್ಸ್ಟೋಕ್ಸ್ ಸತತವಾಗಿ ಇನಿಂಗ್ಸ್ ಕಟ್ಟಿದರು. 23 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ ಅವರು ನಂತರವೂ ಬಿಡುಬೀಸಿನ ಬ್ಯಾಟಿಂಗ್ ನಡೆಸಿದರು. ಆದರೆ, ಅಲ್ಜಾರಿ ಜೋಸೆಫ್ ಎಸೆದ ಚಾಣಾಕ್ಷ ಬೌಲಿಂಗ್ಗೆ ಅವರು ಶುಭ್ಮನ್ ಗಿಲ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು.
ಗಾಯಕ್ವಾಡ್ ಹೊರತುಪಡಿಸಿ ಚೆನ್ನೈ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಅಂಬಾಟಿ ರಾಯುಡು 12 ರನ್ಗೆ ಔಟಾದರೆ, ಶಿವಂ ದುಬೆ 19 ರನ್ ಕೊಡುಗೆ ಕೊಟ್ಟರು. ಮಹೇಂದ್ರ ಸಿಂಗ್ ಧೋನಿ 7 ಎಸೆತಗಳಿಗೆ 14 ರನ್ ಬಾರಿಸಿದರು.
ಕ್ರಿಕೆಟ್
IPL 2023 : 92 ರನ್ ಬಾರಿಸಿದ ಋತುರಾಜ್, ಗುಜರಾತ್ ತಂಡಕ್ಕೆ 179 ರನ್ಗಳ ಗೆಲುವಿನ ಗುರಿ
ಅಹಮದಾಬಾದ್: ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ (92 ರನ್, 50 ಎಸೆತ, 4 ಫೋರ್, 9 ಸಿಕ್ಸರ್) ಅವರ ಅಮೊಘ ಅರ್ಧ ಶತಕದ ನೆರವು ಪಡೆದ ಸಿಎಸ್ಕೆ ತಂಡ ಐಪಿಎಲ್ 16ನೇ ಆವೃತ್ತಿಯ (IPL 2023) ಉದ್ಘಾಟನಅ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಬಾರಿಸಿದೆ. ಇದರೊಂದಿಗೆ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಅಯ್ಕೆ ಮಾಡಿಕೊಂಡಿದ್ದ ಗುಜರಾತ್ ತಂಡಕ್ಕೆ 179 ರನ್ಗಳ ಗೆಲುವಿನ ಗುರಿ ಎದುರಾಗಿದೆ.
ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಬ್ಯಾಟರ್ ಡೆವೋನ್ ಕಾನ್ವೆ 1 ರನ್ಗೆ ವಿಕೆಟ್ ಒಪ್ಪಿಸುವ ಮೂಲಕ ಹಿನ್ನಡೆ ಉಂಟು ಮಾಡಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಮೊಯೀನ್ ಅಲಿ ಸ್ಪೋಟಕ ಬ್ಯಾಟಿಂಗ್ ಮಾಡಿದರೂ 23 ರನ್ಗಳಿಗೆ ಔಟಾದರು. ಹೀಗಾಗಿ ಸಿಎಸ್ಕೆ ತಂಡಕ್ಕೆ ಮತ್ತೆ ಹಿನ್ನಡೆ ಉಂಟಾಯಿತು.
ಗಾಯಕ್ವಾಡ್ ಸ್ಫೋಟಕ ಬ್ಯಾಟಿಂಗ್
ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಬೆನ್ಸ್ಟೋಕ್ಸ್ 7 ರನ್ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರಿಸಿದ ಬೆನ್ಸ್ಟೋಕ್ಸ್ ಸತತವಾಗಿ ಇನಿಂಗ್ಸ್ ಕಟ್ಟಿದರು. 23 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ ಅವರು ನಂತರವೂ ಬಿಡುಬೀಸಿನ ಬ್ಯಾಟಿಂಗ್ ನಡೆಸಿದರು. ಆದರೆ, ಅಲ್ಜಾರಿ ಜೋಸೆಫ್ ಎಸೆದ ಚಾಣಾಕ್ಷ ಬೌಲಿಂಗ್ಗೆ ಅವರು ಶುಭ್ಮನ್ ಗಿಲ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು.
ಗಾಯಕ್ವಾಡ್ ಹೊರತುಪಡಿಸಿ ಚೆನ್ನೈ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಅಂಬಾಟಿ ರಾಯುಡು 12 ರನ್ಗೆ ಔಟಾದರೆ, ಶಿವಂ ದುಬೆ 19 ರನ್ ಕೊಡುಗೆ ಕೊಟ್ಟರು. ಮಹೇಂದ್ರ ಸಿಂಗ್ ಧೋನಿ 7 ಎಸೆತಗಳಿಗೆ 14 ರನ್ ಬಾರಿಸಿದರು.
ಅದ್ಧೂರಿ ಉದ್ಘಾಟನಾ ಕಾರ್ಯಕ್ರಮ
ಕೋವಿಡ್ ನಂತರ ಮೊದಲ ಬಾರಿಗೆ ಅತ್ಯಂತ ವೈಭವದಿಂದ ನಡೆದ ಉದ್ಘಾಟನ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ಖ್ಯಾತಿಯ ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣ(Rashmika Mandanna) ಮತ್ತು ಮಿಲ್ಕಿ ಬ್ಯೂಟಿ ಖ್ಯಾತಿಯ ತಮನ್ನಾ ಭಾಟಿಯ(Tamannaah Bhatia) ನೃತ್ಯದ ಮೂಲಕ ಎಲ್ಲರನ್ನು ರಂಜಿಸಿದರೆ, ಅರಿಜಿತ್ ಸಿಂಗ್(arijit singh) ಅವರ ಅದ್ಭುತ ಕಂಠಕ್ಕೆ ದಾಖಲೆಯ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರನ್ನು ತಲೆದೂಗಿದರು. ಇದೇ ವೇಳೆ ನಡೆಸಿದ ಲೇಸರ್ ಶೋ ಅಭಿಮಾನಿಗಳನ್ನು ಮಂತ್ರಮುಗ್ದರನ್ನಾಗಿಸಿತು. ಆಸ್ಕರ್ ಪ್ರಶಸ್ತಿ ಗೆದ್ದ ಆರ್ಆರ್ಆರ್ ಸಿನೆಮಾದ ನಾಟು ನಾಟು ಹಾಡಿಗೆ ರಶ್ಮಿಕಾ ಕುಣಿದು ಕುಪ್ಪಳಿಸಿದರು.
ಅದ್ಧೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಟೀಮ್ ಇಂಡಿಯಾದ ಮಾಜಿ ಆಟಗಾರರಾದ ರವಿಶಾಸ್ತ್ರಿ, ಸುನೀಲ್ ಗವಾಸ್ಕರ್, ವಿದೇಶಿ ಮಾಜಿ ಆಟಗಾರರಾದ ಆರಾನ್ ಫಿಂಚ್, ಕೆವಿನ್ ಪೀಟರ್ಸನ್ ಸೇರಿ ಅನೇಕ ಕ್ರಿಕೆಟಿಗರು ಹಾಗೂ ಮತ್ತಿತರ ಬಿಸಿಸಿಐ ಅಧಿಕಾರಿಗಳು ಉಪಸ್ಥಿತರಿದ್ದರು.
-
ದೇಶ21 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಕರ್ನಾಟಕ21 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಗ್ಯಾಜೆಟ್ಸ್11 hours ago
Aadhaar Update: ಆನ್ಲೈನ್ನಲ್ಲಿ ಆಧಾರ್ ಅಪ್ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ
-
ಅಂಕಣ22 hours ago
ಗೋ ಸಂಪತ್ತು: ಆಹಾರವಾಗಿ ಮಾತ್ರವಲ್ಲ, ಔಷಧವಾಗಿಯೂ ಮಜ್ಜಿಗೆಗೆ ಮಹತ್ವವಿದೆ!
-
ಅಂಕಣ22 hours ago
Brand story : ಚೀನಾದ ಇ-ಕಾಮರ್ಸ್ ದಿಗ್ಗಜ ಅಲಿಬಾಬಾ, 6 ಕಂಪನಿಗಳಾಗಿ ವಿಭಜನೆಯಾಗುತ್ತಿರುವುದೇಕೆ?
-
ಕರ್ನಾಟಕ12 hours ago
B.Y. Vijayendra: ಯಾವುದೇ ಕಾರಣಕ್ಕೆ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸಲ್ಲ: ಗೊಂದಲಕ್ಕೆ ತೆರೆಯೆಳೆದ ಯಡಿಯೂರಪ್ಪ
-
ದೇಶ13 hours ago
Gujarat High Court: ಪಿಎಂ ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್ಗೆ 25 ಸಾವಿರ ರೂ. ದಂಡ!
-
ಕರ್ನಾಟಕ15 hours ago
SSLC Exam 2023: ಕಲಬುರಗಿಯಲ್ಲಿ ಎಸ್ಎಸ್ಎಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ವಾಟ್ಸಾಪ್ನಲ್ಲಿ ಹರಿದಾಡಿದ ಕನ್ನಡ ಪೇಪರ್