BCCI Contracts | ಬಿಸಿಸಿಐ ಗುತ್ತಿಗೆಯಲ್ಲಿ ಯಾರಿಗೆಲ್ಲ ಪ್ರಮೋಶನ್, ಡಿಮೋಶನ್ ಆಗಬಹುದು? - Vistara News

ಕ್ರಿಕೆಟ್

BCCI Contracts | ಬಿಸಿಸಿಐ ಗುತ್ತಿಗೆಯಲ್ಲಿ ಯಾರಿಗೆಲ್ಲ ಪ್ರಮೋಶನ್, ಡಿಮೋಶನ್ ಆಗಬಹುದು?

ಡಿಸೆಂಬರ್​ 21ರಂದು ನಡೆಯಲಿರುವ ಬಿಸಿಸಿಐ ವಾರ್ಷಿಕ ಮಹಾಸಭೆಯಲ್ಲಿ ಪ್ರಮುಖ ಆಟಗಾರರ ಕೇಂದ್ರೀಯ ಗುತ್ತಿಗೆಯಲ್ಲಿ (BCCI Contracts) ಬದಲಾವಣೆ ಆಗಲಿದೆ.

VISTARANEWS.COM


on

BCCI Contracts
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ : ಟೀಮ್​ ಇಂಡಿಯಾದಲ್ಲಿ ಯುವ ಆಟಗಾರರಿಗೆ ಹೆಚ್ಚು ಆದ್ಯತೆ ನೀಡಬೇಕು ಎಂಬ ಮಾತುಗಳು ಕೇಳಿ ಬರುತ್ತಿರುವ ನಡುವೆಯೇ, ಭಾರತ ತಂಡದ ಇಬ್ಬರು ಟೆಸ್ಟ್​ ಸ್ಪೆಷಲಿಸ್ಟ್​ಗಳಿಗೆ ಕೇಂದ್ರೀಯ ಗುತ್ತಿಗೆ (BCCI Contracts) ನಷ್ಟವಾಗುವ ಸಾಧ್ಯತೆಗಳಿವೆ. ಡಿಸೆಂಬರ್​ 21ರಂದು ನಡೆಯಲಿರುವ ಬಿಸಿಸಿಐ ವಾರ್ಷಿಕ ಮಹಾಸಭೆಯಲ್ಲಿ ಈ ನಿರ್ಧಾರ ಪ್ರಕಟವಾಗಲಿದೆ.

ಟೆಸ್ಟ್​ ತಂಡದ ಉಪನಾಯಕ ಅಜಿಂಕ್ಯ ರಹಾನೆ ಹಾಗೂ ವೇಗದ ಬೌಲರ್​ ಇಶಾಂತ್​ ಶರ್ಮ ಕೇಂದ್ರೀಯ ಗುತ್ತಿಗೆಯ ಅವಕಾಶ ನಷ್ಟ ಮಾಡಿಕೊಳ್ಳಲಿರುವ ಪ್ರಮುಖ ಆಟಗಾರರು. ಇದರ ಜತೆಗೆ ಮಾಜಿ ವಿಕೆಟ್​ಕೀಪರ್​ ಬ್ಯಾಟರ್​ ವೃದ್ಧಿಮಾನ್​ ಸಾಹ ಅವರೂ ಪಟ್ಟಿಯಿಂದ ಹೊರಕ್ಕೆ ಬೀಳಲಿದ್ದಾರೆ. ಯಾಕೆಂದರೆ ಅವರನ್ನು ಮತ್ತೆ ತಂಡಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬುದಾಗಿ ಈ ಹಿಂದೆಯೇ ಟೀಮ್​ ಇಂಡಿಯಾ ಮ್ಯಾನೇಜ್ಮೆಂಟ್​ ಸಂದೇಶ ರವಾನೆ ಮಾಡಿತ್ತು. ಹೀಗಾಗಿ ಅವರನ್ನು ಮತ್ತೆ ಪಟ್ಟಿಗೆ ಸೇರಿಸುವುದಿಲ್ಲ. ಅದರೆ, ಇಶಾಂತ್​ ಹಾಗೂ ಅಜಿಂಕ್ಯ ರಹಾನೆ ಇನ್ನೂ ವಿದಾಯ ಘೋಷಣೆ ಮಾಡಿಲ್ಲ. ಆದರೆ, ಅವರಿಗೆ ಅವಕಾಶವನ್ನೂ ನೀಡಲಾಗುತ್ತಿಲ್ಲ.

ಬಿಸಿಸಿಐನಲ್ಲಿ ಎ+, ಎ, ಬಿ ಮತ್ತು ಸಿ ಎಂಬ ಮೂರು ಗ್ರೇಡ್​ಗಳ ಗುತ್ತಿಗೆಯಿದೆ. ಗ್ರೇಡ್​ಗೆ ತಕ್ಕಂತೆ ಆಟಗಾರರು ಅನುಕ್ರಮವಾಗಿ ವಾರ್ಷಿಕವಾಗಿ 7 ಕೋಟಿ, 5 ಕೋಟಿ, 3 ಕೋಟಿ ಹಾಗೂ 1 ಕೋಟಿ ರೂಪಾಯಿ ಪಡೆಯುತ್ತಾರೆ. ಎ+ ಮತ್ತು ಎ ಗ್ರೇಡ್​ನ ಆಟಗಾರರು ಮೂರು ಮಾದರಿಯ ಕ್ರಿಕೆಟ್ ತಂಡದಲ್ಲಿ ಕಾಯಂ ಸದಸ್ಯರಾಗಿರಬೇಕು. ಅಂತೆಯೇ ಬಿ ಗ್ರೇಡ್​ನವರು ಎರಡು ಮಾದರಿ ಹಾಗೂ ಸಿ ಗ್ರೇಡ್​ನ ಆಟಗಾರರು ಒಂದು ಮಾದರಿಯಲ್ಲಿ ಆಡುತ್ತಿರಬೇಕು.

ಯಾರಿಗೆಲ್ಲ ಪ್ರಮೋಶನ್​?

ಪ್ರಸ್ತುತ ಟೀಮ್​ ಇಂಡಿಯಾದಲ್ಲಿ ಅವಕಾಶ ಪಡೆಯುವವರ ಪಟ್ಟಿಯನ್ನು ನೋಡಿದಾಗ ಶುಬ್ಮನ್​ ಗಿಲ್​, ಸೂರ್ಯಕುಮಾರ್​ ಯಾದವ್ ಹಾಗೂ ಹಾರ್ದಿಕ್​ ಪಾಂಡ್ಯಗೆ ಪ್ರಮೋಶನ್​ ಸಿಗಬಹುದು. ಶುಬ್ಮನ್​ ಏಕ ದಿನ ಹಾಗೂ ಟೆಸ್ಟ್​ ಮಾದರಿಯಲ್ಲಿ ಆಡುತ್ತಿದ್ದರೆ, ಸೂರ್ಯಕುಮಾರ್​ಗೆ ಏಕ ದಿನ ಹಾಗೂ ಟಿ20 ಮಾದರಿಯಲ್ಲಿ ಅವಕಾಶ ನೀಡಲಾಗುತ್ತಿದೆ. ಹಾರ್ದಿಕ್ ಅವರನ್ನು ಟಿ20 ತಂಡದ ನಾಯಕ ಎಂದೇ ಬಿಂಬಿಸಲಾಗುತ್ತಿದೆ. ಇವರೆಲ್ಲರೂ ಈ ಸಿ ಗುಂಪಿನಲ್ಲಿದ್ದಾರೆ. ಈ ಸ್ಥಾನದಿಂದ ಬಿ ಅಥವಾ ಎ ಗುಂಪಿಗೆ ಬಡ್ತಿ ಪಡೆಯಲಿದ್ದಾರೆ ಈ ಆಟಗಾರರು.

ಡಿಸೆಂಬರ್​ 12ರಂದು ಸಭೆ ನಡೆಯಲಿದ್ದು, 12 ಕಾರ್ಯಸೂಚಿಯ ಬಗ್ಗೆ ಚರ್ಚೆ ನಡೆಯಲಿದೆ. ಸಭೆ ವಿಡಿಯೊ ಕಾನ್ಫರೆನ್ಸ್​ ಮಾದರಿಯಲ್ಲಿ ನಡೆಯಲಿದೆ ಎಂಬುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ | Suryakumar Yadav | ರಣಜಿ ಪಂದ್ಯದಲ್ಲಿ ಆಡಲಿದ್ದಾರೆ ಸೂರ್ಯಕುಮಾರ್‌ ಯಾದವ್‌; ಯಾಕೆ ಗೊತ್ತೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IND VS PAK : ಭಾರತ- ಪಾಕಿಸ್ತಾನ ಪಂದ್ಯ ಅರ್ಧ ಗಂಟೆ ತಡ; ಟಾಸ್ ಗೆದ್ದ ಪಾಕ್​ನಿಂದ ಫೀಲ್ಡಿಂಗ್ ಆಯ್ಕೆ

IND VS PAK : ನ್ಯೂಯಾರ್ಕ್​ನಲ್ಲಿ ಸಂಜೆಯ ವೇಳೆಗೆ ಮಳೆ ಶುರುವಾಗಿತ್ತು. ಹೀಗಾಗಿ ಟಾಸ್ ನಡೆಸಲು ಆಗಲಿಲ್ಲ. ಸ್ವಲ್ಪ ಹೊತ್ತಿನ ಬಳಿಕ ಮಳೆ ನಿಂತಿದ್ದು ಅಂಪೈರ್​ಗಳು ಅರ್ಧ ಗಂಟೆ ತಡವಾಗಿ ಟಾಸ್​ ನಡೆಸಿದರು. ಪಾಕ್​ ನಾಯಕ ಬಾಬರ್​ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು .

VISTARANEWS.COM


on

Ind vs pak
Koo

ನ್ಯೂಯಾರ್ಕ್​: ಟಿ 20 ವಿಶ್ವಕಪ್​ ಪಂದ್ಯಕ್ಕಾಗಿ ನಿರ್ಮಿಸಲಾಗಿರುವ ನಸ್ಸೌ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಳೆಯಿಂದಾಗಿ ಅರ್ಧ ಗಂಟೆ ತಡವಾಗಿ ಆರಂಭವಾಗಿದೆ. ಸ್ಥಳೀಯ ಸಮಯ ಬೆಳಗ್ಗೆ 10 ಗಂಟೆಗೆ ಹಾಗೂ ಭಾರತದ ಸಮಯ ಸಂಜೆ 7.30ಕ್ಕೆ ನಡೆಯಬೇಕಾಗಿದ್ದ ಟಾಸ್​ ಮಳೆಯಿಂದಾಗಿ ತಡವಾಯಿತು. 8 ಗಂಟೆಗೆ ಟಾಸ್​ ನಡೆದು ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 8.30ಕ್ಕೆ ಪಂದ್ಯ ಆರಂಭವಾಗಲಿದೆ.

ನ್ಯೂಯಾರ್ಕ್​ನಲ್ಲಿ ಸಂಜೆಯ ವೇಳೆಗೆ ಮಳೆ ಶುರುವಾಗಿತ್ತು. ಹೀಗಾಗಿ ಟಾಸ್ ನಡೆಸಲು ಆಗಲಿಲ್ಲ. ಸ್ವಲ್ಪ ಹೊತ್ತಿನ ಬಳಿಕ ಮಳೆ ನಿಂತಿದ್ದು ಅಂಪೈರ್​ಗಳು ಅರ್ಧ ಗಂಟೆ ತಡವಾಗಿ ಟಾಸ್​ ನಡೆಸಿದರು. ಪಾಕ್​ ನಾಯಕ ಬಾಬರ್​ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು .

ವಿಶ್ವ ಕಪ್​ನಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಐರ್ಲೆಂಡ್ ಎದುರಿನ ತನ್ನ ಮೊದಲ ಪಂದ್ಯದಲ್ಲಿ ಭಾರತ 8 ವಿಕೆಟ್​ಗಳ ಅಮೋಘ ಜಯ ಸಾಧಿಸಿದೆ. ಆದರೆ, ಪಾಕಿಸ್ತಾನ ತಂಡವು ತನ್ನ ಆರಂಭಿಕ ಪಂದ್ಯದಲ್ಲೇ ಕ್ರಿಕೆಟ್ ಶಿಶು ಅಮೆರಿಕ ವಿರುದ್ಧ ಶರಣಾಗಿತ್ತು. ಹೀಗಾಗಿ ಪಾಕಿಸ್ತಾನ ಹೆಚ್ಚು ಒತ್ತಡದಲ್ಲಿದೆ.

2007ರ ಟಿ20 ವಿಶ್ವಕಪ್​ನ ನಂತರದಿಮದ 8ನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ ಈ ಹಿಂದಿನ 7 ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿದ್ದರೆ ಪಾಕಿಸ್ತಾನ ಒಂದು ಬಾರಿ ಗೆದ್ದಿದೆ. 2007ರ ಉದ್ಘಾಟನಾ ಆವೃತ್ತಿಯಲ್ಲಿ 2ರಲ್ಲಿ ಬಾರಿ ಭಾರತ ಗೆದ್ದಿದೆ. 2021ರಲ್ಲಿ ಭಾರತದ ವಿರುದ್ಧ ಪಾಕ್ ವಿಜಯ ಕಂಡುಕೊಂಡಿತ್ತು.

ಇದನ್ನೂ ಓದಿ: IND vs PAK : ಭಾರತ ತಂಡವನ್ನು ಪಾಕಿಸ್ತಾನಕ್ಕೆ ಹೋಗಲು ಸಮ್ಮಿಶ್ರ ಸರ್ಕಾರವೂ ಬಿಡುವುದಿಲ್ಲ

ಕಳೆದ ವರ್ಷ ನಡೆದ ಟಿ20 ವಿಶ್ವಕಪ್​​ನಲ್ಲಿ ಟೀಮ್ ಇಂಡಿಯಾ, ಪಾಕ್ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು. ಪವರ್​​​ಪ್ಲೇನಲ್ಲಿ 32ಕ್ಕೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿ ರೋಚಕ ಗೆಲುವು ತಂದಿದ್ದರು. ಕೊಹ್ಲಿ 52 ಎಸೆತಗಳಲ್ಲಿ ಅಜೇಯ 82 ರನ್ ಚಚ್ಚಿ ಅವಿಸ್ಮರಣೀಯ ಇನಿಂಗ್ಸ್ ಆಡಿದ್ದರು.

ಇತ್ತಂಡಗಳ ಪ್ಲೇಯಿಂಗ್ ಇಲೆವೆನ್​

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ಪಾಕಿಸ್ತಾನ : ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಉಸ್ಮಾನ್ ಖಾನ್, ಫಖರ್ ಜಮಾನ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಅಮೀರ್.

Continue Reading

ಪ್ರಮುಖ ಸುದ್ದಿ

Rishbha Pant : ನನ್ನ ಕಾಲನ್ನು ತುಂಡರಿಬೇಕಿತ್ತು; ಅಪಘಾತದ ಭಯಾನಕ ಸಂಗತಿಗಳನ್ನು ಹೇಳಿದ ರಿಷಭ್ ಪಂತ್​

Rishbha Pant: ರಿಷಭ್ ಪಂತ್ ಅವರನ್ನು ಅಪಘಾತದ ಸ್ಥಳದಿಂದ ರಕ್ಷಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ವಿಮಾನದಲ್ಲಿ ಕರೆದೊಯ್ಯುವ ಮೊದಲು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಪಂತ್​ 2-3 ವರ್ಷಗಳ ಅವಧಿಯಲ್ಲಿ ಚೇತರಿಸಿಕೊಳ್ಳಬಹುದು ಎಂದು ಭವಿಷ್ಯ ನುಡಿದಿದ್ದರು. ಆದರೆ ಆಟಗಾರನ ಇಚ್ಛಾಶಕ್ತಿಯು ವೇಗವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡಿತು.

VISTARANEWS.COM


on

Rishabh Pant
Koo

ಬೆಂಗಳೂರು : ಭಾರತ ತಂಡ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್​ ರಿಷಭ್ ಪಂತ್ (Rishbha Pant) 2022 ರ ಡಿಸೆಂಬರ್​ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಅಪಘಾತದಲ್ಲಿ 26 ವರ್ಷದ ಆಟಗಾರ ಅನೇಕ ಜೀವಕ್ಕೆ ಅಪಾಯ ತರುವ ಮತ್ತು ಅಂಗವೈಕಲ್ಯಕ್ಕೆ ತುತ್ತಾಗಬಹುದಾಗಿದ್ದಂತ ಗಾಯಗಳಿಗೆ ಒಳಗಾಗಿದ್ದರು. ಹೀಗಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ಕ್ರಿಕೆಟ್ ಆಡುವ ಅವಕಾಶ ಕಳೆದುಕೊಂಡಿದ್ದರು. ಈ ಬ್ಯಾಟರ್​ ಐಪಿಎಲ್ 2023 ಮತ್ತು ಏಕದಿನ ವಿಶ್ವಕಪ್ 2023 ಅನ್ನು ಸಂಪೂರ್ಣವಾಗಿ ತಪ್ಪಿಸಿಕೊಂಡಿದ್ದರು. ಆದರೆ ಇದೀಗ ಅವರು ಟಿ20 ವಿಶ್ವಕಪ್​ಗಾಗಿ ತಯಾರಿ ನಡೆಸುತ್ತಿದ್ದಾರೆ.

ರಿಷಭ್ ಪಂತ್ ಅವರನ್ನು ಅಪಘಾತದ ಸ್ಥಳದಿಂದ ರಕ್ಷಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ವಿಮಾನದಲ್ಲಿ ಕರೆದೊಯ್ಯುವ ಮೊದಲು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಪಂತ್​ 2-3 ವರ್ಷಗಳ ಅವಧಿಯಲ್ಲಿ ಚೇತರಿಸಿಕೊಳ್ಳಬಹುದು ಎಂದು ಭವಿಷ್ಯ ನುಡಿದಿದ್ದರು. ಆದರೆ ಆಟಗಾರನ ಇಚ್ಛಾಶಕ್ತಿಯು ವೇಗವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡಿತು.

ಇತ್ತೀಚೆಗೆ, ಪಂತ್ ತಮ್ಮ ಅಪಘಾತದ ಬಗ್ಗೆ ಮಾತನಾಡಿದ್ದಾರೆ. ಅವರ ಗಾಯಗಳ ಬಗ್ಗೆ ವೈದ್ಯರು ಏನು ಹೇಳಿದರು ಮತ್ತು ಅದು ಅಂಗಗಳನ್ನು ತೆಗೆದು ಹಾಕುವುದಕ್ಕೆ ಹೇಗೆ ಕಾರಣವಾಗಬಹುದು ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: IND vs PAK : ಭಾರತ ತಂಡವನ್ನು ಪಾಕಿಸ್ತಾನಕ್ಕೆ ಹೋಗಲು ಸಮ್ಮಿಶ್ರ ಸರ್ಕಾರವೂ ಬಿಡುವುದಿಲ್ಲ

ವೈದ್ಯರು ನನ್ನ ಬಳಿಗೆ ಬಂದು ರಿಷಭ್, ನೀವು ಮೂರು ಪವಾಡಗಳನ್ನು ಮಾಡಬೇಕಾಗಿದೆ. ಅವುಗಳಲ್ಲಿ ಎರಡು ನೀವು ಈಗಾಗಲೇ ಮಾಡಿದ್ದೀರಿ ಎಂದು ಹೇಳಿದರು. ಆಗ ನನ್ನ ಜೀವನದ ಬಗ್ಗೆ ನನಗೆ ಯಾವುದೇ ಕಲ್ಪನೆ ಇರಲಿಲ್ಲ. ಆದ್ದರಿಂದ ನಾನು ಅದನ್ನು ಸಂಪೂರ್ಣವಾಗಿ ಕೇಳುತ್ತಿದ್ದೆ. ಮೊದಲನೆಯದಾಗಿ, ಇಂತಹ ಭೀಕರ ಅಪಘಾತದ ನಂತರ ನೀವು ಜೀವಂತವಾಗಿದ್ದೀರಿ ಎಂಬುದೇ ದೊಡ್ಡ ಪವಾಡ ಎಂದು ವೈದ್ಯರು ಹೇಳಿದ್ದರು ಎಂಬುದಾಗಿ ‘ಆಪ್ ಕಿ ಅದಾಲತ್’ ನಲ್ಲಿ ಪಂತ್​ ಹೇಳಿದ್ದಾರೆ.

“ಅಪಘಾತವಾದಾಗ ನನ್ನ ಬಲಗಾಲು 90 ಡಿಗ್ರಿ ಬಾಗಿತ್ತು. ಆ ಹೊತ್ತಿನಲ್ಲಿ ನನಗೆ ಏನು ಮಾಡಬೇಕೋ ಎಂದು ತಿಳಿದಿರಲಿಲ್ಲ. ನನ್ನನ್ನು ರಕ್ಷಿಸಿದ ವ್ಯಕ್ತಿಗೆ ಕಾಲನ್ನು ಹಿಡಿದು ಸ್ವಸ್ಥಾನಕ್ಕೆ ಮರಳಿಸುವಂತೆ ಹೇಳಿದ್ದೆ. ನೋವಿನ ನಡುವೆಯೂ ಅದನ್ನು ಮಾಡಿದ್ದೆ. ಈ ಬಗ್ಗೆ ವೈದ್ಯರು ಹೇಳಿದ್ದರು. ಎರಡನೆಯದಾಗಿ, ನಿಮ್ಮ ಕಾಲನ್ನು ನೀವು ಸರಿ ಮಾಡದೇ ಹೋಗಿದ್ದರೆ ಅದು ಅಂಗಚ್ಛೇದನಕ್ಕೆ ಕಾರಣವಾಗುತ್ತಿತ್ತು” ಎಂದು ಅವರು ಹೇಳಿದರು.

ಶಸ್ತ್ರ ಚಿಕಿತ್ಸೆಯ ಭರವಸೆ

ವೈದ್ಯರು ಎಸಿಎಲ್ ಮತ್ತು ಸಿಎಲ್​ನಲ್ಲಿ ಯಾವುದೇ ಗಾಯ ಉಳಿದಿಲ್ಲ ಎಂದು ಹೇಳಿದ್ದರು. ಅದು ನನಗೆ ನೆರವಾಯಿತು ಎಂದು ಪಂತ್ ಹೇಳಿದ್ದಾರೆ. ಮೂರನೇ ಪವಾಡವೆಂದರೆ ಎಸಿಎಲ್ ಮತ್ತು ಪಿಸಿಎಲ್​​ಗೆ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಎಂದು ಅವರು ಹೇಳಿದ್ದರು. ನನ್ನ ಮೊಣಕಾಲುಗಳಲ್ಲಿ ಯಾವುದೇ ಲಿಗಮೆಂಟ್​ ಉಳಿದಿಲ್ಲ ಎಂದು ಅವರು ಹೇಳಿದ್ದರು. ಇದು ಕೂಡ ಮೂರನೇ ಪವಾಡ ಎಂಬುದಾಗಿ ಪಂತ್ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

IND vs PAK : ಭಾರತ ತಂಡವನ್ನು ಪಾಕಿಸ್ತಾನಕ್ಕೆ ಹೋಗಲು ಸಮ್ಮಿಶ್ರ ಸರ್ಕಾರವೂ ಬಿಡುವುದಿಲ್ಲ

Champions Trophy 2025 : ಈ ಬಾರಿ ಬಿಜೆಪಿ ಸರಳ ಬಹುಮತ ಪಡೆದಿಲ್ಲ. ಹೀಗಾಗಿ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆ. ಆದಾಗ್ಯೂ ಈ ಸರ್ಕಾರದ ವಿದೇಶಾಂಗ ನೀತಿ ಬದಲಾಗುವ ಸಾಧ್ಯತೆಗಳು ಇಲ್ಲದ ಕಾರಣ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದು ಖಚಿತವಲ್ಲ ಎಂದು ಕ್ರಿಕ್ಬಝ್ ವರದಿ ಮಾಡಿದೆ.

VISTARANEWS.COM


on

Champions Trophy 2025
Koo

ನವದೆಹಲಿ: 2024 ರ ಟಿ 20 ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ (IND vs PAK) ನಡೆಯುತ್ತಿರುವ ನಡುವೆಯೇ ಚಾಂಪಿಯನ್ಸ್ ಟ್ರೋಫಿಯ ಸಂಘಟಕರಾದ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪಾಕಿಸ್ತಾನದಲ್ಲಿ ನಿಗದಿಯಾಗಿರುವ ಪಂದ್ಯಾವಳಿಯ 2025 ರ ಆವೃತ್ತಿಗೆ 20 ದಿನಗಳನ್ನು ನಿಗದಿ ಮಾಡಿದೆ. ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಮಾರ್ಚ್ 09 ರವರೆಗೆ ನಡೆಯಲಿದ್ದು, ಇದು 19 ದಿನಗಳ (+1 ಮೀಸಲು ದಿನ) ಟೂರ್ನಿಯಾಗಿದೆ.

2017 ರ ಫೈನಲ್ ತಲುಪಿದ ಭಾರತೀಯ ತಂಡವು ಟೂರ್ನಿಯ ಆತಿಥ್ಯ ವಹಿಸಿರುವ ಪಾಕಿಸ್ತಾನಕ್ಕೆ ಹೋಗುವ ಸಾಧ್ಯತೆಗಳು ಇಲ್ಲ. ಇತ್ತೀಚೆಗೆ ಮುಕ್ತಾಯಗೊಂಡ ಲೋಕ ಸಭಾ ಚುನಾವಣೆಯ ನಂತರ ಬಿಜೆಪಿ ನೇತೃತ್ವದ ಎನ್​ಡಿಎಗೆ ಅಧಿಕಾರಕ್ಕೆ ಏರಿದ ಬಳಿಕ ಈ ಸುದ್ದಿ ಪ್ರಕಟಗೊಂಡಿದೆ. ಈ ಬಾರಿ ಬಿಜೆಪಿ ಸರಳ ಬಹುಮತ ಪಡೆದಿಲ್ಲ. ಹೀಗಾಗಿ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆ. ಆದಾಗ್ಯೂ ಈ ಸರ್ಕಾರದ ವಿದೇಶಾಂಗ ನೀತಿ ಬದಲಾಗುವ ಸಾಧ್ಯತೆಗಳು ಇಲ್ಲದ ಕಾರಣ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದು ಖಚಿತವಲ್ಲ ಎಂದು ಕ್ರಿಕ್​ಬಜ್​ ವರದಿ ಮಾಡಿದೆ.

2014ರಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ನೆರೆಯ ರಾಷ್ಟ್ರದೊಂದಿಗೆ ಯಾವುದೇ ಸ್ನೇಹಪರ ರೀತಿಯಲ್ಲಿ ಸಂಬಂಧ ಹೊಂದಿಲ್ಲ. ಶತ್ರು ದೇಶದ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಪುಲ್ವಾಮಾ ಮತ್ತು ಉರಿ ದಾಳಿಯ ನಂತರ ಎರಡೂ ದೇಶಗಳ ಸಂಬಂಧ ಹದಗೆಟ್ಟಿದೆ. ಇದರ ಪರಿಣಾಮವಾಗಿ, 2012-13ರಲ್ಲಿ ಪಾಕಿಸ್ತಾನವು ಬಹು-ಸ್ವರೂಪದ ಸರಣಿಗಾಗಿ ಭಾರತಕ್ಕೆ ಭೇಟಿ ನೀಡಿದ ನಂತರ ಉಭಯ ದೇಶಗಳು ಯಾವುದೇ ದ್ವಿಪಕ್ಷೀಯ ಸ್ಪರ್ಧೆಗಳಲ್ಲಿ ಭಾಗಿಯಾಗಿಲ್ಲ. ಅದರ ನಂತರ, ಎರಡೂ ತಂಡಗಳು ಬಹುರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಮಾತ್ರ ಮುಖಾಮುಖಿಯಾಗಿವೆ.

ಈ ಬಾರಿಯೂ ಸಾಧ್ಯವಿಲ್ಲ

ಪಕ್ಷವು ದೇಶದಲ್ಲಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದರಿಂದ, ಪಾಕಿಸ್ತಾನವನ್ನು ಪರಕೀಯ ರಾಷ್ಟ್ರವಾಗಿ ನೋಡುವ ಭಾರತದ ದೃಷ್ಟಿಕೋನವು ಬದಲಾಗದೆ ಉಳಿಯುವ ಸಾಧ್ಯತೆಯಿದೆ ಎಂದು ವರದಿ ಸೂಚಿಸಿದೆ. ಪಂದ್ಯಾವಳಿಯ ಆತಿಥ್ಯ ವಹಿಸಲು ಐಸಿಸಿ ಹೈಬ್ರಿಡ್ ಮಾದರಿಯನ್ನು ಬಳಸಲು ಹೇಳಬಹುದು. ಯುಎಇ ಸಹ-ಆತಿಥ್ಯ ಪಡೆಯುವ ಸಾಧ್ಯತೆಗಳಿವೆ.

ಮುಂದಿನ ಎರಡು ತಿಂಗಳಲ್ಲಿ ಸ್ಪಷ್ಟತೆ

ವಾಘಾ ಗಡಿಗೆ ಹತ್ತಿರದ ಸ್ಥಳವಾದ ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಭಾರತ ತಂಡ ಟೂರ್ನಿಯ ಎಲ್ಲಾ ಪಂದ್ಯಗಳನ್ನು ಆಡಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈಗಾಗಲೇ ದೃಢಪಡಿಸಿದೆ. ಇದು ಭಾರತಕ್ಕೆ ಕನಿಷ್ಠ ವ್ಯವಸ್ಥಾಪನಾ ಮತ್ತು ಭದ್ರತಾ ಸವಾಲುಗಳನ್ನು ಒಡ್ಡಿದೆ. ಅಭಿಮಾನಿಗಳಿಗೆ ಪಂದ್ಯಗಳನ್ನು ವೀಕ್ಷಿಸಲು ಗಡಿಯಾಚೆಗಿನ ಅನುಭವ ನೀಡಲಿದೆ.

ಇದನ್ನೂ ಓದಿ: IND vs PAK : ​ ವಿರಾಟ್​ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಬಾಬರ್ ಅಜಂ; ಪಾಕಿಸ್ತಾನದ ಮಾಜಿ ಆಟಗಾರನ ಟೀಕೆ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಈ ಹಿಂದೆ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದೆ ಮತ್ತು ಮಂಡಳಿಯು ಇದನ್ನು ಈ ಬಾರಿಯೂ ಅನುಸರಿಸುವ ನಿರೀಕ್ಷೆಯಿದೆ. “ಮುಂದಿನ ಎರಡು ತಿಂಗಳಲ್ಲಿ ನಾವು ಕೆಲವು ಆಲೋಚನೆಗಳನ್ನು ಹೊಂದಿದ್ದೇವೆ” ಎಂದು ಮೂಲಗಳು ತಿಳಿಸಿವೆ.

ಕೊಲಂಬೊದಲ್ಲಿ ಜುಲೈನಲ್ಲಿ ನಡೆಯಲಿರುವ ವಾರ್ಷಿಕ ಸಮ್ಮೇಳನದ ನಂತರ ಅಂತಿಮ ನಿರ್ಧಾರಕ್ಕೆ ಬರಲು ಸರ್ಕಾರದೊಂದಿಗೆ ಸಂವಹನ ನಡೆಸುವಂತೆ ಐಸಿಸಿ ಈಗಾಗಲೇ ಭಾರತೀಯ ಮಂಡಳಿಗೆ ತಿಳಿಸಿರಬೇಕು ಎಂದು ನಿರೀಕ್ಷಿಸಲಾಗಿದೆ.

Continue Reading

ಕ್ರಿಕೆಟ್

IND vs PAK : ​ ವಿರಾಟ್​ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಬಾಬರ್ ಅಜಂ; ಪಾಕಿಸ್ತಾನದ ಮಾಜಿ ಆಟಗಾರನ ಟೀಕೆ

IND vs PAK : 024ರ ಟಿ 20 ವಿಶ್ವಕಪ್ ನಲ್ಲಿ ಪಾಕಿಸ್ತಾನವು ಭಾರತವನ್ನು ಎದುರಿಸಲಿದ್ದು, ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಬಾಬರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನದ ನಾಯಕನನ್ನು ಭಾರತದ ಸ್ಟಾರ್ ಬ್ಯಾಟರ್​ಗಳಿಗೆ ಕೊಹ್ಲಿಗೆ ಹೋಲಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

IND vk PAK
Koo

ಬೆಂಗಳೂರು : 2024 ರ ಟಿ 20 ವಿಶ್ವಕಪ್ ಪಂದ್ಯದಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ವಿರುದ್ಧ 44 ರನ್ ಗಳಿಸಿದ್ದ ಪಾಕ್​ ತಂಡದ ನಾಯಕ ಬಾಬರ್ ಅಜಮ್ (Babar Azam) ಟಿ 20 ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿ ಅವರ ದಾಖಲೆ ಮುರಿದಿದ್ದಾರೆ. ಪಾಕಿಸ್ತಾನಿಗಳು ಮತ್ತು ಅವರ ಅಭಿಮಾನಿಗಳು ಈ ಮೈಲಿಗಲ್ಲಿನ ಬಗ್ಗೆ ಸಂಭ್ರಮದಲ್ಲಿದ್ದಾರೆ. ಆದರೆ, ಬಾಬರ್ ಸ್ಕೋರ್ ಮಾಡಿರುವುದೆಲ್ಲ ಸಣ್ಣಪುಟ್ಟ ತಂಡಗಳ ಜತೆ ಎಂಬುದು ಹಲವರ ಅಭಿಪ್ರಾಯ. ಬಾಬರ್ ಪಾಕಿಸ್ತಾನದ ಸ್ಟಾರ್ ಬ್ಯಾಟರ್​​ ಆಗಿದ್ದು, ತವರಿನಲ್ಲಿ ಮಾತ್ರ ಸಾಕಷ್ಟು ಪ್ರಭಾವ ಹೊಂದಿದ್ದಾರೆ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳ (IND vs PAK) ನಡುವಿನ ಪಂದ್ಯದ ವೇಳೆ ಈ ಚರ್ಚೆ ಮುನ್ನೆಲೆಗೆ ಬಂದಿದೆ.

2024ರ ಟಿ 20 ವಿಶ್ವಕಪ್ ನಲ್ಲಿ ಪಾಕಿಸ್ತಾನವು ಭಾರತವನ್ನು ಎದುರಿಸಲಿದ್ದು, ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಬಾಬರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನದ ನಾಯಕನನ್ನು ಭಾರತದ ಸ್ಟಾರ್ ಬ್ಯಾಟರ್​ಗಳಿಗೆ ಕೊಹ್ಲಿಗೆ ಹೋಲಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕನೇರಿಯಾ ಅವರು ಭಾರತೀಯ ದಂತಕಥೆಗೆಗೆ ಬಾಬರ್ ಕನಿಷ್ಠ ಹತ್ತರವೂ ಇಲ್ಲ ಎಂದು ವ್ಯಂಗ್ಯವಾಡಿದರು. 30 ವರ್ಷದ ಕನೇರಿಯಾ ಯುಎಸ್ಎ ಬೌಲಿಂಗ್ ಲೈನ್ಅಪ್ ವಿರುದ್ಧ ಬಾಬರ್​ ಹೇಗೆ ಹೆಣಗಾಡಿದ್ದರು ಎಂಬುದನ್ನು ಬೊಟ್ಟು ಮಾಡಿ ತೋರಿಸಿದ್ದಾರೆ.

ಇದನ್ನೂ ಓದಿ: INDvsPAK : ಪಾಕ್​ ಮತ್ತು ಭಾರತ ಪಂದ್ಯದ ಕುರಿತು ನಟ ಕಮಲ್​ ಹಾಸನ್​ ನೀಡಿರುವ ಹೇಳಿಕೆಯ ವಿಡಿಯ ಇಲ್ಲಿದೆ

ಬಾಬರ್ ಅಜಮ್ ಶತಕ ಬಾರಿಸಿದ ಕೂಡಲೇ ನೀವು ವಿರಾಟ್ ಕೊಹ್ಲಿಯೊಂದಿಗೆ ಹೋಲಿಕೆಗಳನ್ನು ಮಾಡಲಾಗುತ್ತಿದೆ. ಬಾಬಾರ್ ಅಜಂ ವಿರಾಟ್ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಎಂದು ಕನೇರಿಯಾ ಹೇಳಿದ್ದಾರೆ. ದೊಡ್ಡ ಬೌಲರ್​ಗಳನ್ನು ಎದುರಿಸುವ ಸಾಮರ್ಥ್ಯ ಇಲ್ಲ. ಉತ್ತಮ ಬೌಲರ್​ಗಳಿಗೆ ರನ್​ ಗಳಿಸಲು ಸಾಧ್ಯವಾಗುವುದಿಲ್ಲ. ಅಮೆರಿಕದ ಬಲಿಷ್ಠ ಬೌಲಿಂಗ್ ವಿರುದ್ಧವೇ 40 ರನ್​ಗೆ ಔಟಾಗಿದ್ದಾರೆ. ಕೊಹ್ಲಿಯ ರೀತಿ ಉತ್ತಮ ಆಟಗಾರನಾಗಿದ್ದರೆ ಕ್ರೀಸ್​ನಲ್ಲಿ ಉಳಿದು ಆಟವನ್ನು ಗೆಲ್ಲಬೇಕಾಗಿತ್ತು. ಪಾಕಿಸ್ತಾನ ಏಕಪಕ್ಷೀಯವಾಗಿ ಪಂದ್ಯವನ್ನು ಗೆಲ್ಲಬೇಕಿತ್ತು, “ಎಂದು ಕನೇರಿಯಾ ಹೇಳಿದ್ದಾರೆ.

ಭಾರತ ತಂಡವು ಪಾಕಿಸ್ತಾನವನ್ನು ಕೆಟ್ಟದಾಗಿ ಸೋಲಿಸುತ್ತದೆ. ಪಾಕಿಸ್ತಾನ ಭಾರತವನ್ನು ಸೋಲಿಸುವ ಸಾಮರ್ಥ್ಯ ಹೊಂದಿಲ್ಲ. ಪಾಕಿಸ್ತಾನ ವಿಶ್ವಕಪ್​ಗೆ ಬಂದಾಗಲೆಲ್ಲಾ ತಮ್ಮ ಬೌಲಿಂಗ್ ಘಟಕವನ್ನು ಶ್ಲಾಘಿಸುತ್ತಲೇ ಇರುತ್ತಾರೆ. ಅದರೆ, ಅವರ ಬೌಲಿಂಗ್ ಅನ್ನು ಸಲೀಸಾಗಿ ಎದುರಿಸಲು ಸಾಧ್ಯ, “ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಜಯ ಅನಿವಾರ್ಯ

ಪಾಕಿಸ್ತಾನದ ಟಿ 20 ವಿಶ್ವಕಪ್ ಅಭಿಯಾನದ ಬಗ್ಗೆ ಮಾತನಾಡುವುದಾದರೆ, ಮೆನ್ ಇನ್ ಗ್ರೀನ್ ತಂಡವು ಜೂನ್ 9 ರಂದು ಸಾಂಪ್ರದಾಯಿಕ ಎದುರಾಳಿ ಭಾರತವನ್ನು ಎದುರಿಸಲಿದೆ. ತಂಡಕ್ಕೆ ಗೆಲುವಿನ ಅವಶ್ಯಕತೆಯಿದೆ. ಯುಎಸ್ಎ ವಿರುದ್ಧದ ಸೋಲನ್ನು ಟಿ 20 ವಿಶ್ವಕಪ್ ಇತಿಹಾಸದ ಅತಿದೊಡ್ಡ ಅವಮಾನ ಎಂದು ಕರೆಯಲಾಗುತ್ತಿದೆ. ನಿರ್ಣಾಯಕ ಪಂದ್ಯಕ್ಕೆ ಮೊದಲು ತಂಡದ ನೈತಿಕ ಸ್ಥೈರ್ಯವು ಕೆಳಮಟ್ಟಕ್ಕೆ ಕುಸಿದಿದೆ. ಹಿಂದಿನ ಆವೃತ್ತಿಯಲ್ಲಿ ಫೈನಲ್ ತಲುಪಿದ ಮಾಜಿ ಚಾಂಪಿಯನ್ಸ್ ಪಂದ್ಯಾವಳಿಯಿಂದ ಹೊರಗುಳಿಯುವ ಸಾಧ್ಯತೆಯಿದೆ.

Continue Reading
Advertisement
V Somanna profile
ಪ್ರಮುಖ ಸುದ್ದಿ38 mins ago

V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

Terror Attack
ಕ್ರೈಂ44 mins ago

Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

Ind vs pak
ಪ್ರಮುಖ ಸುದ್ದಿ1 hour ago

IND VS PAK : ಭಾರತ- ಪಾಕಿಸ್ತಾನ ಪಂದ್ಯ ಅರ್ಧ ಗಂಟೆ ತಡ; ಟಾಸ್ ಗೆದ್ದ ಪಾಕ್​ನಿಂದ ಫೀಲ್ಡಿಂಗ್ ಆಯ್ಕೆ

Narendra Modi
ದೇಶ2 hours ago

Narendra Modi: ರಾಜಕೀಯದಾಚೆ ಕವಿ, ಗಾಳಿಪಟ ಪ್ರೇಮಿ; ಮೋದಿ ಬಗ್ಗೆ ನಿಮಗೆ ಗೊತ್ತಿರದ 20 ಸಂಗತಿ ಇಲ್ಲಿವೆ

Bus Accident
ಕ್ರೈಂ2 hours ago

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

HD Kumaraswamy
ಕರ್ನಾಟಕ2 hours ago

HD Kumaraswamy Profile: ಹರದನಹಳ್ಳಿಯಿಂದ ದೆಹಲಿವರೆಗೆ; ಕುಮಾರಸ್ವಾಮಿ ಸಾಗಿಬಂದ ದಾರಿ ಹೀಗಿದೆ

Narendra Modi
ದೇಶ2 hours ago

Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Narendra Modi 3.0
ಪ್ರಮುಖ ಸುದ್ದಿ2 hours ago

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Farmer Death
ದಾವಣಗೆರೆ3 hours ago

Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

Modi 3.0 Cabinet BS Yediyurappa congratulates Pralhad Joshi
Lok Sabha Election 20243 hours ago

Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌