Team India | ಭಾರತ ಕ್ರಿಕೆಟ್‌ ತಂಡಕ್ಕೆ ಯಾರು ಆಗಬಹುದು ಮುಂದಿನ ಸಾರಥಿ? - Vistara News

ಕ್ರಿಕೆಟ್

Team India | ಭಾರತ ಕ್ರಿಕೆಟ್‌ ತಂಡಕ್ಕೆ ಯಾರು ಆಗಬಹುದು ಮುಂದಿನ ಸಾರಥಿ?

ಭಾರತ ಕ್ರಿಕೆಟ್‌ ತಂಡಕ್ಕೆ ಮುಂದಿನ ದೀರ್ಘಕಾಲದ ನಾಯಕ ಯಾರು ಆಗಬಹುದು? ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ. ಬಿಸಿಸಿಐ ಕೂಡ ಈ ಬಗ್ಗೆ ಹೆಚ್ಚು ಗಮನ ವಹಿಸಿದ್ದು ಕಂಡುಬರುತ್ತಿದೆ.

VISTARANEWS.COM


on

ಭಾರತ ಕ್ರಿಕೆಟ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: Team India ನಾಯಕರು ಯಾರು ಎಂದು ಕೇಳಿದಾಗ ಯೋಚಿಸಿ ಹೇಳಬೇಕಾದ ಪರಸ್ಥಿತಿ ಸೃಷ್ಟಿಯಾಗದೆ. ಯಾಕೆಂದರೆ ಕಳೆದ ಮೂರ್ನಾಲ್ಕು ತಿಂಗಳಲ್ಲಿ ಏಳು ನಾಯಕರು ಬೇರೆಬೇರೆ ಮಾದರಿಯಲ್ಲಿ ಭಾರತ ತಂಡದ ನೇತೃತ್ವ ವಹಿಸಿದ್ದಾರೆ.

ಕೆಲವೊಂದು ಬಾರಿ ಅನಿವಾರ್ಯತೆಗೆ ನಾಯಕತ್ವ ಬದಲಿಸಿದ್ದರೆ ಇನ್ನೂ ಕೆಲವೊಂದು ಬಾರಿ ಭವಿಷ್ಯದ ನಾಯಕನ ಆಯ್ಕೆಗೂ ಹಲವರಿಗೆ ಅವಕಾಶ ನೀಡಲಾಗಿದೆ. ವಾಸ್ತವದಲ್ಲಿ ವಿರಾಟ್‌ ಕೊಹ್ಲಿ ಕಾಯಂ ನಾಯಕತ್ವಕ್ಕೆ ವಿದಾಯ ಹೇಳಿದ ಬಳಿಕ ಇಷ್ಟೊಂದು ಬದಲಾವಣೆ ಉಂಟಾಗಿರುವುದು. ರೋಹಿತ್‌ ಶರ್ಮ ಅವರನ್ನು ಮೂರು ಮಾದರಿಯ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದರೂ ಫಿಟ್ನೆಸ್‌ ಸೇರಿದಂತೆ ನಾನಾ ಕಾರಣಗಳಿಗೋಸ್ಕರ ಅವರು ಎಲ್ಲ ಸರಣಿಗೂ ಲಭ್ಯರಾಗುತ್ತಿಲ್ಲ. ಹೀಗಾಗಿ ಹೊಸಬರು ಅವಕಾಶ ಪಡೆಯುತ್ತಿದ್ದಾರೆ.

ನಾಯಕತ್ವ ಬದಲಾವಣೆ ಬಿಸಿಸಿಐಗೆ ಪರೀಕ್ಷೆಯ ವಿಷಯವಾಗಿದ್ದರೂ, ಕ್ರಿಕೆಟ್‌ ಅಭಿಮಾನಿಗಳು ಗೊಂದಲಕ್ಕೆ ಒಳಗಾಗಿದ್ದಾರೆ. ಈ ಕುರಿತ ವಿಶ್ಲೇಷಣೆ ಇಲ್ಲಿದೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ದೀರ್ಘಕಾಲ ನಾಯಕರಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಅಲ್ಲದೆ, ನಾಯಕತ್ವ ಸ್ಥಾನದಲ್ಲಿ ಹೇಗಿರಬೇಕು ಎಂಬುದಕ್ಕೆ ಮಾದರಿಯಾದವರು. ಆಟ ಕೈತಪ್ಪಿ ಹೋಗುತ್ತಿದ್ದ ಸಮಯದಲ್ಲೂ ಸ್ಥಿತಪ್ರಜ್ಞರಾಗಿ ಪಂದ್ಯವನ್ನು ಗೆಲ್ಲಲು ಅವಶ್ಯಕತೆಯಿದ್ದ ಎಲ್ಲ ತಂತ್ರಗಳನ್ನು ಉಪಯೋಗಿಸುವ ಚಾಣಾಕ್ಷ ಎಂದೇ ಹೆಸರಾದವರು. ಭಾರತವು ಮೂರು ಐಸಿಸಿ ಟ್ರೋಫಿಯನ್ನು ಎತ್ತಿದ್ದು ಇವರ ನಾಯಕತ್ವದಲ್ಲಿ.

ಇವರ ಬಳಿಕ ಆ ಪರಂಪರೆಯನ್ನು ವಿರಾಟ್ ಕೋಹ್ಲಿ ಮುಂದುವರಿಸಿದರು. ದೀರ್ಘಕಾಲದ ನಾಯಕರಾಗಿ ಭಾರತ ತಂಡವನ್ನು ಮುನ್ನಡೆಸಿದರು. ಆಟಗಾರನಾಗಿ ವಿರಾಟ್ ಅಗ್ರಸ್ಸಿವ್ ಎಂದು ಪ್ರಸಿದ್ಧರಾಗಿದ್ದರು, ಆದರೆ ನಾಯಕರಾಗಿ ವಿರಾಟ್ ಪ್ರೌಢತೆಯಿಂದ ಕಾರ್ಯ ನಿರ್ವಹಿಸಿದ್ದರು. ವಿರಾಟ್ ನಾಯಕರಾದ ಆರಂಭದ ದಿನಗಳಲ್ಲಿ ಧೋನಿಯವರಿಂದ ಸೂಕ್ತ ಸಲಹೆಗಳನ್ನು ಪಡೆದು ನಿಭಾಯಿಸುತ್ತಿದ್ದದ್ದು ಕಂಡುಬಂದಿತ್ತು. ಭಾರತ ಕ್ರಿಕೆಟ್ ತಂಡವು ವಿರಾಟ್ ನಾಯಕತ್ವದಲ್ಲಿ ವಿಶ್ವ ಕಪ್ ಅಥವಾ ಇನ್ಯಾವುದೇ ಐಸಿಸಿ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಆದರೆ, ವಿರಾಟ್ ನೇತೃತ್ವದಲ್ಲಿ ಬಾರತ ಒಟ್ಟು 95 ಏಕದಿನ ಪಂದ್ಯಗಳನ್ನಾಡಿದ್ದು 65 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ಮಟ್ಟಿಗೆ ವಿರಾಟ್ ಯಶಸ್ವಿ ಹಾಗೂ ಶ್ರೇಷ್ಠ ನಾಯಕ ಎಂದೇ ಹೇಳಬಹುದು.

ಭಾರತ ತಂಡಕ್ಕೆ ಸಮರ್ಥ ನಾಯಕನ ಅಗತ್ಯತೆ

ವಿರಾಟ್ ಮೂರು ಮಾದರಿಯ ಕ್ರಿಕೆಟ್‌ನ ನಾಯಕ ಸ್ಥಾನದಿಂದ ಕೆಳಗಿಳಿದ ಬಳಿಕ ರೋಹಿತ್ ಶರ್ಮ ನಾಯಕರಾದರು. ಆದರೆ, ಈಗಿನ ಸನ್ನಿವೇಶಗಳನ್ನು ಗಮನಿಸಿದರೆ ರೋಹಿತ್ ದೀರ್ಘಕಾಲದ ನಾಯಕರಾಗಿ ಮುಂದುವರಿಯುವುದು ಅನುಮಾನ ಎನ್ನಬಹುದು. ಮುಂಬರುವ 2023ರ ಬಳಿಕ ಭಾರತ ಕ್ರಿಕೆಟ್‌ ತಂಡದ ನಾಯಕರ ಸ್ಥಾನದಲ್ಲಿ ಬದಲಾವಣೆಯಾಗುವ ಸಾಧ್ಯತೆ ಹೆಚ್ಚಾಗಿ ಕಾಣುತ್ತದೆ. ಈಗಾಗಲೇ ರೋಹಿತ್ ಶರ್ಮಾ ಪ್ರಮುಖ ಸರಣಿಯಿಂದ ದೂರವಿದ್ದರು. ಹೀಗಾಗಿ, ಘಟಾನುಘಟಿಗಳ ಅನುಪಸ್ಥಿತಿಯಲ್ಲಿ ತಂಡವನ್ನು ಯುವ ಆಟಗಾರರು ಮುನ್ನಡೆಸುವ ಸನ್ನಿವೇಶ ಎದುರಾಗಿತ್ತು.

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ರಿಷಭ್ ಪಂತ್ ನಾಯಕರಾಗಿದ್ದರು, ಐರ್ಲೆಂಡ್ ವಿರುದ್ಧದ ಸರಣಿಗೆ ಹಾರ್ದಿಕ್ ಪಾಂಡ್ಯ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಪಂದ್ಯವೊಂದರಲ್ಲಿ ಬುಮ್ರಾ ನಾಯಕರಾಗಿದ್ದರು ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್ ನಾಯಕರಾಗಿದ್ದಾರೆ. ಇದನ್ನೆಲ್ಲ ಗಮನಿಸಿದಾಗ ಬಿಸಿಸಿಐ ಭಾರತ ತಂಡದ ಮುಂದಿನ ನಾಯಕನ ಆಯ್ಕೆಯಲ್ಲಿರುವುದು ತಿಳಿಯಬಹುದಾಗಿದೆ. ಹೀಗೆ ಒಂದೊಂದು ಸರಣಿಗೆ ಒಬ್ಬೊಬ್ಬ ನಾಯಕನನ್ನು ಆಯ್ಕೆ ಮಾಡಲು ಕೆಲವೊಂದು ಅನಿರೀಕ್ಷಿತ ಘಟನೆಗಳೂ ಕಾರಣವಾಗಿತ್ತು. ಹಿರಿಯ ಆಟಗಾರರು ಲಭ್ಯವಿರಲಿಲ್ಲ, ಕೆಲವರು ಗಾಯಗೊಂಡು ಆಡಲು ಸಾಧ್ಯವಿರಲಿಲ್ಲ. ಹೀಗೆ ಅನೇಕ ಕಾರಣಗಳಿದ್ದವು. ಆದರೆ, ಭಾರತಕ್ಕೆ ಒಬ್ಬ ಸಮರ್ಥ ನಾಯಕನ ಅಗತ್ಯವಿರುವುದು ಮಾತ್ರ ಸತ್ಯದ ಸಂಗತಿಯಾಗಿದೆ. ಈ ಹಿಂದೆ ಭಾರತದ ಕೋಚ್ ರಾಹುಲ್ ದ್ರಾವಿಡ್ ಕೂಡ ಭಾರತ ತಂಡಕ್ಕೆ ಸೂಕ್ತ ನಾಯಕನ ಅವಶ್ಯಕತೆಯ ಬಗ್ಗೆ ಅಭಿಪ್ರಾಯ ಪಟ್ಟಿದ್ದರು.

ಯಾರೆಲ್ಲ ಇದ್ದಾರೆ ಈ ರೇಸ್‌ನಲ್ಲಿ?

ಮುಂದಿನ ನಾಯಕನನ್ನು ಆಯ್ಕೆ ಮಾಡುವುದು ತಿಳಿದಷ್ಟು ಸುಲಭವಾಗಿಲ್ಲ. ಏಕೆಂದರೆ ಈ ರೇಸ್‌ನಲ್ಲಿ ಅನೇಕರು ಭಾಗಿಯಾಗಿದ್ದಾರೆ. ಯಾರಿಗೆಲ್ಲ ಅವಕಾಶದ ಬಾಗಿಲು ತೆರೆದಿದೆ? ಯಾರು ಹೊಸ್ತಿಲಲ್ಲಿ ನಿಂತಿದ್ದಾರೆ? ಯಾರು ಅನಿರೀಕ್ಷಿತವಾಗಿ ಒಳ ಬರಬಹುದು ಎಂಬುದು ಪ್ರಶ್ನೆಯಾಗಿದೆ. ಈ ಬಗ್ಗೆ ಈಗಾಗಲೇ ಆಟಗಾರರ ಪರೀಕ್ಷೆ ನಡೆಯುತ್ತಿರುವುದನ್ನು ಗಮನಿಸಬಹುದು.

ಕೆ. ಎಲ್ ರಾಹುಲ್

ಕೆ.ಎಲ್ ರಾಹುಲ್ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಸಮರ್ಥ ಪ್ರದರ್ಶನ ನೀಡುವ ಆಟಗಾರ. ಇವರ ಆಟದ ಶೈಲಿ ಉತ್ತಮವಾಗಿದ್ದು ಈಗಾಗಲೇ ಭಾರತ ತಂಡದ ಆರಂಭಿಕ ಬ್ಯಾಟರ್ ಆಗಿ ಸಾಮರ್ಥ್ಯ ಪ್ರದರ್ಶನ ಮಾಡಿದ್ದಾರೆ. ಆದರೆ, ನಾಯಕರಾಗಿ ತಂಡ ಮನ್ನಡೆಸಲು ಎಷ್ಟು ಸಮರ್ಥರು? ಸಾಧಕ-ಬಾಧಕಗಳೇನು? ಎಂಬ ಪ್ರಶ್ನೆಯಿದೆ. ಈಗಾಗಲೇ ಐಪಿಎಲ್‌ನಲ್ಲಿ ಪಂಜಾಬ್ ಹಾಗೂ ಲಖನೌ ತಂಡವನ್ನು ನಾಯಕರಾಗಿ ಮನ್ನಡೆಸಿದ ಅನುಭವ ಇವರಿಗಿದೆ. ಒಟ್ಟು 42 ಪಂದ್ಯಗಳಲ್ಲಿ 20 ಪಂದ್ಯಗಳಲ್ಲಿ ಕೆ.ಎಲ್ ರಾಹುಲ್ ನೇತೃತ್ವದ ತಂಡ ಗೆಲುವು ಸಾಧಿಸಿದೆ. ಆದರೆ, ಈವರೆಗೆ ಯಾವುದೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ತಂಡದ ಜವಾಬ್ದಾರಿಯನ್ನು ನಿರ್ವಹಿಸಿಲ್ಲ. ಮೂರು ಮಾದರಿಯಲ್ಲಿ ಒಳ್ಳೆಯ ಫಾರ್ಮ್‌ನಲ್ಲಿದ್ದು, ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತ ಬಂದಿರುವ ಬಲಿಷ್ಠ ಆಟಗಾರ ಎನಿಸಿಕೊಂಡ ಕೆ.ಎಲ್ ರಾಹುಲ್ ಅವರಿಗೆ ನಾಯಕರಾಗಿ ಸಾಮರ್ಥ್ಯವನ್ನು ಸಾಬೀತು ಪಡಿಸಲು ಒಂದು ಸುವರ್ಣಾವಕಾಶ ದೊರಕಿತ್ತು. ಆದರೆ, ರಾಹುಲ್ ಗಾಯಗೊಂಡ ಕಾರಣದಿಂದ ಈ ಅವಕಾಶ ಕೈತಪ್ಪಿತ್ತು.

ಕೆ.ಎಲ್‌ ರಾಹುಲ್

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಕೆ.ಎಲ್. ರಾಹುಲ್ ನಾಯಕರಾಗಬೇಕಿತ್ತು, ಆದರೆ ದುರದೃಷ್ಟವಷಾತ್ ಅದು ಆಗಲಿಲ್ಲ. ರಿಷಭ್ ಪಂತ್ ಹೆಗಲಿಗೆ ಈ ಜವಾಬ್ದಾರಿ ನೀಡಲಾಗಿತ್ತು. ಈ ಮುಂದೆ ಗುಣಮುಖರಾಗಿ ಬಂದ ನಂತರ ಉತ್ತಮ ಫಾರ್ಮ್ ಇದ್ದರೆ ಕೆ.ಎಲ್ ರಾಹುಲ್ ಈ ರೇಸ್‌ನಲ್ಲಿ ಮುಂಚೂಣಿಯಲ್ಲಿರುತ್ತಾರೆ. ಕೆ.ಎಲ್‌ ರಾಹುಲ್‌ ಕೆಲವೊಂದು ಆನ್‌ಫೀಲ್ಡ್‌ ನಿರ್ಣಯಗಳನ್ನು ಮಾಡುವಲ್ಲಿ ಸಫಲರಾದ ದಾಖಲೆಗಳ ಸಂಖ್ಯೆ ಕಡಿಮೆ. ಅಲ್ಲದೆ, ಅವರ ಮದುವೆಯ ಸುದ್ದಿ ಕೇಳಿಬರುತ್ತಿದೆ. ಇದು ಕೂಡ ಅವರ ವೃತ್ತಿ ಜೀವನದ ಮೇಲೆ ಪರಿಣಾಮ ಬೀರಬಹುದು. ರೋಹಿತ್ ಶರ್ಮ ಬಳಿಕ ನಾಯಕ ಸ್ಥಾನಕ್ಕೆ ಕೇಳಿಬರುವ ಮೊದಲ ಹೆಸರು ಕೆ.ಎಲ್ ರಾಹುಲ್ ಅವರದ್ದು. ಹೀಗಾಗಿ ಏನಾಗಬಹುದು ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಿಗಿದೆ.

ರಿಷಭ್ ಪಂತ್

ರಿಷಭ್‌ ಪಂತ್ ಭಾರತದ ಅಗ್ರೆಸ್ಸಿವ್ ಯುವ ಎಡಗೈ ಬ್ಯಾಟರ್ ಹಾಗೂ ಕೀಪರ್! ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಐಪಿಎಲ್‌ನಲ್ಲಿ ಒಟ್ಟು 56% ರಷ್ಟು ಗೆಲುವು ಸಾಧಿಸಿದ ದಾಖಲೆ ರಿಷಭ್ ಹೆಸರಲ್ಲಿತ್ತು. ಕೆ.ಎಲ್ ರಾಹುಲ್ ಲಭ್ಯವಿಲ್ಲದ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಮುನ್ನಡೆಸುವ ಅವಕಾಶ ದಕ್ಕಿತ್ತು. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಭಾರತ ತಂಡವು ಕಳಪೆ ಪ್ರದರ್ಶನ ನೀಡಿದ್ದು, ಸೋಲಿಗೆ ಕಾರಣವಾಗಿತ್ತು. ಆದರೆ, ನಂತರದ ಎರಡು ಪಂದ್ಯಗಳಲ್ಲಿ ಭಾರತ ರೋಚಕ ಆಟವಾಡಿತ್ತು. ಆದರೆ, ಇದೊಂದೇ ಸರಣಿಯಿಂದ ರಿಷಭ್ ಸಾಮರ್ಥ್ಯವನ್ನು ಅಳೆಯಲು ಸಾಧ್ಯವಿಲ್ಲ ಎಂಬ ಧ್ವನಿ ಕೂಡ ಕೇಳಿ ಬರುತ್ತಿದೆ. ನಾಯಕ ಸ್ಥಾನಕ್ಕೆ ಹೊಸಬರಾದ ರಿಷಭ್‌ಗೆ ಈ ಸರಣಿಯಲ್ಲಿ ಸೂಕ್ತ ಮಾರ್ಗದರ್ಶನ ಮಾಡಲು ಹಿರಿಯ ಆಟಗಾರರು ಇರಲಿಲ್ಲ. ಈಗಾಗಲೇ ಅನೇಕ ಸಾಧನೆಗಳನ್ನು ಮಾಡುತ್ತಿರುವ ರಿಷಭ್ ಹಿರಿಯರ ಮಾರ್ಗದರ್ಶನವಿದ್ದರೆ ಉತ್ತಮ ನಾಯಕರಾಗಬಹುದು ಎಂಬ ಮಾತು ಒಂದೆಡೆ ಕೇಳುತ್ತಿದೆ. ಆದರೆ, ಮತ್ತೊಂದೆಡೆ ರಿಷಭ್ ಪಂತ್ ಎದುರಿರುವ ಬಾಧಕಗಳ ಕುರಿತು ಚರ್ಚೆ ನಡೆಯುತ್ತಿದೆ.

ಭಾರತ ಕ್ರಿಕೆಟ್‌
ರಿಷಭ್‌ ಪಂತ್

ರಿಷಭ್ ಕೂಡ ಧೋನಿಯವರಂತೆ ವಿಕೆಟ್ ಹಿಂದೆ ನಿಂತು ತಂಡವನ್ನು ನಿಭಾಯಿಸುವವರು. ಆದರೆ, ಧೋನಿ ಹಾಗೆ ಸೂಕ್ಷ್ಮತೆಗಳನ್ನು ಗಮನಿಸಿ ನಿರ್ಣಯಗಳನ್ನು ಕೈಗೊಳ್ಳುವಷ್ಟು ಪ್ರೌಢತೆ ಬಂದಿಲ್ಲ. ಅದಕ್ಕೆ, ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಅವರು ಬೌಲಿಂಗ್‌ನಲ್ಲಿ ಮಾಡಿದ ಬದಲಾವಣೆಗಳು ಸಾಕ್ಷಿ ಎನ್ನಲಾಗಿದೆ. ಈ ಸರಣಿಯಲ್ಲಿ ನಾಯಕರಾಗಿದ್ದಾಗ ರಿಷಭ್ ಇಂದ ಉತ್ತಮ ಬ್ಯಾಟಿಂಗ್ ಪ್ರದರ್ಶನ ಕೂಡ ಕಂಡಿಬಂದಿಲ್ಲ. ಹೀಗಾಗಿ ಅವರಿಗೆ ತಂಡದ ಜವಾಬ್ದಾರಿಯನ್ನು ಹೊತ್ತಾಗ ಒತ್ತಡವನ್ನು ನಿಭಾಯಿಸುವ ತಂತ್ರದ ಬಗ್ಗೆ ಇನ್ನೂ ಕಲಿಯಬೇಕಿದೆ. ಎಲ್ಲದಕ್ಕಿಂತ ಮುಖ್ಯವಾಗಿ ರಿಷಭ್ ಇನ್ನೂ ಕಿರಿಯರು ಎಂಬ ಭಾವನೆಯಿದೆ. ತಂಡದಲ್ಲಿ ಬುಮ್ರಾ, ದಿನೇಶ್ ಕಾರ್ತಿಕ್ ಸೇರಿದಂತೆ ಅನೇಕ ಹಿರಿಯ ಆಟಗಾರರಿದ್ದಾಗ ಅವರನ್ನು ನಿಭಾಯಿಸುವ ಹೊಣೆ ತಂಡದ ಅತಿ ಕಿರಿಯ ಆಟಗಾರ ಪಡೆಯುವುದು ಎಷ್ಟು ಸರಿ? ಎಂಬ ಪ್ರಶ್ನೆಯಿದೆ. ಆದರೆ, ರಿಷಭ್ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದರೆ ಇದ್ಯಾವುದೂ ಲೆಕ್ಕಕ್ಕೆ ಬರುವುದಿಲ್ಲ ಎಂಬುದು ಸುಳ್ಳಲ್ಲ. ಕಿರಿಯ ಆಟಗಾರನಾದ ಕಾರಣದಿಂದ ಕ್ರಿಕೆಟ್‌ನಲ್ಲಿ ಇನ್ನೂ ಮುಂದುವರಿದು ದೀರ್ಘಕಾಲದ ನಾಯಕರಾಗಿ ಉಳಿಯಬಹುದು.

ಹಾರ್ದಿಕ್ ಪಾಂಡ್ಯ

ಒಂದು ಟೂರ್ನಿ ಭವಿಷ್ಯವನ್ನು ಬದಲಾಯಿಸಬಹುದು ಎಂಬುದಕ್ಕೆ ಹಾರ್ದಿಕ್ ಪಾಂಡ್ಯ ಸಾಕ್ಷಿಯಾಗಿದ್ದಾರೆ. ಈ ಹಿಂದೆ ನಾಯಕ ಸ್ಥಾನಕ್ಕೆ ಹೆಸರನ್ನು ಯೋಚಿಸುವಾಗ ಎಲ್ಲಿಯೂ ಹಾರ್ದಿಕ್ ಪಾಂಡ್ಯ ಹೆಸರು ಕೇಳಿಬಂದಿಲ್ಲ. ಆದರೆ, 2022ರ ಐಪಿಎಲ್‌ನಲ್ಲಿ ಗುಜರಾತ್ ತಂಡವನ್ನು ಮುನ್ನಡೆಸಿದ್ದಲ್ಲದೆ, ಟ್ರೋಫಿಯನ್ನು ಗೆದ್ದರು. ಆಲ್ ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ನಾಯಕ ಸ್ಥಾನಕ್ಕೂ ಸಿದ್ಧ ಎಂದು ಸಾಬೀತು ಮಾಡಿದರು. ಇದರ ಪರಿಣಾಮವಾಗಿ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ನಾಯಕರಾದರು. ಐರ್ಲೆಂಡ್ ವಿರುದ್ಧ ಭಾರತವು ಸುಲಭಧ ಗೆಲುವು ಸಾಧಿಸಿತು. ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಬಿರುಸಿನ ಆಟವನ್ನಾಡುವ ಮೂಲಕ ಆಲ್ ರೌಂಡರ್ ಆಗಿ ಮಿಂಚಿದ್ದರು. ಭಾರತಕ್ಕೆ ಒಬ್ಬ ಆಲ್ ರೌಂಡರ್ ನಾಯಕ ಇದ್ದರೆ ಅನುಕೂಲವೇ ಸರಿ. ಈ ನಿಟ್ಟನಿಲ್ಲಿ ಚಿಂತಿಸಿದಾಗ ಹಾರ್ದಿಕ್‌ ಪಾಂಡ್ಯ ಹೆಸರು ಮೊದಲು ಕೇಳಿಬರುತ್ತದೆ.

ಭಾರತ ಕ್ರಿಕೆಟ್‌
ಹಾರ್ದಿಕ್‌ ಪಾಂಡ್ಯ

ಶಿಖರ್ ಧವನ್ ಅಥವಾ ಬುಮ್ರಾ?

ಭಾರತ ಕ್ರಿಕೆಟ್ ತಂಡವು ಮೂರು ಮಾದರಿಗೂ ಒಬ್ಬರನ್ನೇ ನಾಯಕರನ್ನಾಗಿ ಮಾಡುಬಹುದೇ? ಅಥವಾ ಮೂರಕ್ಕೂ ಪ್ರತ್ಯೇಕ ನಾಯಕರನ್ನು ನೇಮಿಸಬಹುದೇ? ಎಂಬ ಒಂದು ಚಿಂತನೆಯಿದೆ. ಮೂರು ಮಾದರಿಗೂ ಒಬ್ಬರೇ ನಾಯಕರಾಗುವುದಾದರೆ ಕೆ.ಎಲ್ ರಾಹುಲ್, ರಿಷಭ್ ಪಂತ್ ಅವರಿಗೆ ಅವಕಾಶ ಹೆಚ್ಚಿದೆ ಎನ್ನಬಹುದು. ಆದರೆ, ಇನ್ನೆರಡು ಸಾಧ್ಯತೆಗಳು ತೆರದುಕೊಂಡಿವೆ. ಈ ಬಾರಿಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಬುಮ್ರಾ ಕೂಡ ನಾಯಕರಾಗಿ ಯಶಸ್ವಿಯಾಗಿದ್ದರು. ಹೀಗಾಗಿ ಬುಮ್ರಾ ಕೂಡ ಬಿಸಿಸಿಐಗೆ ಇರುವ ಒಂದು ಆಯ್ಕೆ ಎನ್ನಬಹುದು. ಅಂತೆಯೇ, ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಶಿಖರ್ ಧವನ್‌ಗೆ ಕ್ಯಾಪ್ಟನ್ ಪಟ್ಟ ನೀಡಿದ್ದು, ಅವರ ಸಾಮರ್ಥ್ಯದ ಪರೀಕ್ಷೆ ನಡೆಯಲಿದೆ. ಆದರೆ, ಈಗಿನ ಯುವ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದು ಬುಮ್ರಾ ಅಥವಾ ಶಿಖರ್ ಧವನ್ ಅವರಿಗೆ ಮುಂದೆ ಅವಕಾಶ ಕಡಿಮೆಯಾಗಬಹುದು. ಇವರಿಬ್ಬರಲ್ಲಿ ಯಾರಾದರೂ ನಾಯಕರಾದರೆ ಬಹುಶಃ 2023ರ ವಿಶ್ವ ಕಪ್ ಮಟ್ಟಿಗೆ ಆಗುವ ಸಾಧ್ಯತೆಯಿದೆ.

ಅಚ್ಚರಿಯ ಸಾಧ್ಯತೆ ಏನಿರಬಹುದು?

ಈ ಎಲ್ಲ ಸಾಧ್ಯತೆಗಳನ್ನು ಬದಿಗೊತ್ತಿ ಇನ್ನೊಬ್ಬ ಆಟಗಾರ ಈ ರೇಸ್‌ನಲ್ಲಿ ಗೆಲ್ಲಬಹುದು. ಎಲ್ಲರೂ ನಾಯಕ ಸ್ಥಾನದ ಬಾಗಿಲಲ್ಲಿ ಕಾಯುತ್ತಿರುವಾಗ ಶ್ರೇಯಸ್ ಅಯ್ಯರ್ ಮುನ್ನುಗ್ಗಿ ಒಳಗೆ ಹೋಗಬಹುದು. ಶ್ರೇಯಸ್ ಅಯ್ಯರ್ ಕೂಡ ಉತ್ತಮ ನಾಯಕ ಎಂದು ಐಪಿಎಲ್‌ನಲ್ಲಿ ಸಾಬೀತು ಮಾಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ವಿರಾಟ್ ಕೊಹ್ಲಿಯ ಸ್ಥಾನ ತುಂಬಲು ಸಮರ್ಥರು ಎಂದು ಸಾಬೀತು ಮಾಡಿದ್ದಾರೆ. ಆದರೆ, ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶ್ರೇಯಸ್ ನಾಯಕತ್ವದ ಪರೀಕ್ಷೆ ಇನ್ನೂ ಆಗಬೇಕಿದೆ. ಒಳ್ಳೆಯ ಫಾರ್ಮ್‌ನಲ್ಲಿದ್ದು, ಶಿಸ್ತಿನ ಆಟವನ್ನು ಪ್ರದರ್ಶಿಸುವ ಶ್ರೇಯಸ್ ಅಯ್ಯರ್ ಕೂಡ ನಾಯಕ ಸ್ಥಾನಕ್ಕೆ ಸೂಕ್ತ ಆಯ್ಕೆಯಾಗಬಹುದು.

ಭಾರತ ಕ್ರಿಕೆಟ್‌

ಇದನ್ನೂ ಓದಿ: Commonwealth Games ; ಇದೇ ಮೊದಲ ಬಾರಿಗೆ ಮಹಿಳೆಯರ ಕ್ರಿಕೆಟ್‌, ಭಾರತ ತಂಡ ಪ್ರಕಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sania Mirza: ಹೇಳಲು ತುಂಬಾ ಇದೆ, ಆದರೂ ಮೌನವಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

Sania Mirza: ಸಾನಿಯಾ ಮಿರ್ಜಾ ಹಾಗೂ ಶೋಯೆಬ್‌ ಮಲಿಕ್‌ ಅವರು 2010ರಲ್ಲಿ ಮದುವೆಯಾಗಿದ್ದರು. ಹೈದರಾಬಾದ್‌ನ ತಾಜ್‌ ಕೃಷ್ಣಾ ಹೋಟೆಲ್‌ನಲ್ಲಿ ಹೈದರಾಬಾದ್‌ ಮುಸ್ಲಿಂ ಸಮುದಾಯದ ಸಂಪ್ರದಾಯದಂತೆ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರಿಗೆ ಇಜಾನ್‌ ಎಂಬ ಪುತ್ರನಿದ್ದಾನೆ. ಮಲಿಕ್​ಗೆ ವಿಚ್ಚೇದನ ನೀಡಿದ ಬಳಿಕ ಸಾನಿಯಾ ದುಬೈನಲ್ಲಿ ನೆಲೆಸಿದ್ದಾರೆ.

VISTARANEWS.COM


on

Sania Mirza
Koo

ದುಬೈ: ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ಶೋಯೆಬ್‌ ಮಲಿಕ್‌(Shoaib Malik) ಅವರಿಗೆ ವಿಚ್ಚೇದನ ನೀಡಿದ ಬಳಿಕ ಭಾರತದ ಟೆನಿಸ್‌ ತಾರೆ ಸಾನಿಯಾ ಮಿರ್ಜಾ(Sania Mirza) ಅವರು ಮೊದಲ ಬಾರಿಗೆ ಕನ್ನಡಿ ಮುಂದೆ ನಿಂತಿರುವ ಫೋಟೊ ಹಂಚಿಕೊಂಡು ‘ಪ್ರತಿಬಿಂಬ’ ಎಂದು ಬರೆದುಕೊಂಡು ಪೋಸ್ಟ್​ ಮಾಡಿದ್ದರು. ಈ ಪೋಸ್ಟ್​ ಮಾಡಿದ 3 ತಿಂಗಳ ಬಳಿಕ ಇದೀಗ ಮತ್ತೊಂದು ಪೋಸ್ಟ್​ ಮಾಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿರುವ ಸಾನಿಯಾ, ‘ನಾನು ಇದನ್ನು ಮೊದಲೇ ಹೇಳಲು ಬಯಸಲಿಲ್ಲ. ನಾನು ಹೇಳಿದ್ದು ಬಹಳ ಕಡಿಮೆ. ಹೇಳಲು ಬಹಳಷ್ಟಿದೆ. ಆದರೂ ನಾನು ಮೌನವಾಗಿದ್ದೇನೆ’ ಎಂದು ಬರೆದಿರುವ ಇಮೇಜ್​ ಕಾರ್ಡ್​ ಒಂದನ್ನು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್​ ಕಂಡು ನೆಟ್ಟಿಗರು ಸಾನಿಯಾ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಪೋಸ್ಟ್​ ಇದಾಗಿದೆ ಎಂದು ಕಮೆಂಟ್​ ಮಾಡಿದ್ದಾರೆ.

ಸಾನಿಯಾ ತಂದೆ ಇಮ್ರಾನ್​ ಮಿರ್ಜಾ ಕೂಡ ಪಿಟಿಐಗೆ ಪ್ರತಿಕ್ರಿಕೆ ನೀಡುವ ವೇಳೆ, “ನನ್ನ ಮಗಳು ಮಲಿಕ್​ಗೆ​ ಖುಲಾ ನೀಡಿದ್ದಾಳೆ. ಖುಲಾ ಎಂದರೆ ಸ್ತ್ರೀ ತನ್ನ ಪತಿಯಿಂದ ಬಿಡುಗಡೆ ಕೇಳುವ ಸ್ವಾತಂತ್ರ್ಯ. ಇದು ಸಮ್ಮತಿಯ ವಿಚ್ಛೇದನವಾಗಿದ್ದು, ಗಂಡನೊಂದಿಗೆ ತನಗೆ ಬಾಳ್ವೆ ಮಾಡಲು ಇಷ್ಟವಿಲ್ಲ ಎಂದಾದಲ್ಲಿ ಆಕೆ ಖುಲಾ ನೀಡಿ ಬೇರೆ ಆಗಬಹುದಾಗಿದೆ” ಎಂದು ಹೇಳಿದ್ದರು.


ಶೋಯೆಬ್‌ ಮಲಿಕ್‌ ಸನಾ ಜಾವೇದ್ ಅವರನ್ನು ವಿವಾಹವಾಗುವ ಮೂಲಕ ಸಾನಿಯಾ ಮಿರ್ಜಾ(Sania Mirza) ಜತೆಗಿನ 13 ವರ್ಷದ ದಾಂಪತ್ಯವು ಕೊನೆಗೊಂಡಿತ್ತು. ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಹಲವು ಊಹಾಪೋಹದ ಸುದ್ದಿಗಳು ಹರಿದಾಡುತ್ತಿತ್ತು. ಕೆಲವರು ವಿಚ್ಚೇದನ ನೀಡದೆ ಶೋಯೆಬ್‌ ವಿವಾಹವಾಗಿದ್ದಾರೆ ಎಂದರೆ, ಇನ್ನು ಕೆಲವರು ಕಳೆದ ವರ್ಷವೇ ಈ ಜೋಡಿ ವಿಚ್ಚೇದನ ಪಡೆದಿತ್ತು ಎಂದು ಚರ್ಚಿಸುತ್ತಿದ್ದರು. ಈ ಎಲ್ಲ ವಿದ್ಯಮಾನಗಳನ್ನು ಕಂಡು ಸಾನಿಯಾ ಮಿರ್ಜಾ ಅವರ ಕುಟುಂಬವೇ ಅಧಿಕೃತ ಪ್ರಕಟನೆಯ ಮೂಲಕ ಸ್ಪಷ್ಟನೆ ನೀಡಿತ್ತು.

ಸಾನಿಯಾ ಮಿರ್ಜಾ ಹಾಗೂ ಶೋಯೆಬ್‌ ಮಲಿಕ್‌ ಅವರು 2010ರಲ್ಲಿ ಮದುವೆಯಾಗಿದ್ದರು. ಹೈದರಾಬಾದ್‌ನ ತಾಜ್‌ ಕೃಷ್ಣಾ ಹೋಟೆಲ್‌ನಲ್ಲಿ ಹೈದರಾಬಾದ್‌ ಮುಸ್ಲಿಂ ಸಮುದಾಯದ ಸಂಪ್ರದಾಯದಂತೆ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರಿಗೆ ಇಜಾನ್‌ ಎಂಬ ಪುತ್ರನಿದ್ದಾನೆ. ಮಲಿಕ್​ಗೆ ವಿಚ್ಚೇದನ ನೀಡಿದ ಬಳಿಕ ಸಾನಿಯಾ ದುಬೈನಲ್ಲಿ ನೆಲೆಸಿದ್ದಾರೆ. 2023ರ ಆಸ್ಟ್ರೇಲಿಯನ್ ಓಪನ್​ಲ್ಲಿ ಆಡುವ ಮೂಲಕ ಸಾನಿಯಾ ಟೆನಿಸ್​ಗೆ ವಿದಾಯ ಹೇಳಿದ್ದರು. ರೋಹನ್ ಬೋಪಣ್ಣ ಜತೆ ಮಿಶ್ರ ಡಬಲ್ಸ್​ ಆಡಿದ್ದ ಅವರು ಈ ಟೂರ್ನಿಯಲ್ಲಿ ರನ್ನರ್​ ಅಪ್ ಆಗಿದ್ದರು.

ಇದನ್ನೂ ಓದಿ Sania Mirza: ಪಾಕಿಸ್ತಾನಿ ಸಿಂಗರ್​ ಜತೆ ಕಾಣಿಸಿಕೊಂಡ ಸಾನಿಯಾ ಮಿರ್ಜಾ; ಫೋಟೊ ವೈರಲ್

2004ರ ವರ್ಷದಲ್ಲಿ ಸಾನಿಯಾ ಮಿರ್ಜಾ ವೃತ್ತಿಪರವಾದ ಟೆನಿಸ್ ಆಡಲು ಆರಂಭ ಮಾಡಿದಾಗ, ಶಾರ್ಟ್ಸ್ ಮತ್ತು ಟೀ ಶರ್ಟ್ ಹಾಕಿ ಕೋರ್ಟಿಗೆ ಇಳಿದಾಗ ಆಕೆಯ ಮೇಲೆ ಕಾಮಾಲೆ ಕಣ್ಣಿನ ಸಂಪ್ರದಾಯವಾದಿಗಳು ಫತ್ವಾ ಹೊರಡಿಸಿ ಮುಗಿಬಿದಿತ್ತು. ಅವರು ಪರ್ದಾ ಹಾಕಲು ನಿರಾಕರಣೆ ಮಾಡಿದಾಗ, ಪಾಕಿಸ್ತಾನದ ಕ್ರಿಕೆಟ್ ಆಟಗಾರ ಶೋಯಬ್ ಮಲಿಕ್ ಅವರನ್ನು ಮದುವೆಯಾದಾಗ ಹಲವರು ಅವರನ್ನು ʻಪಾಕಿಸ್ಥಾನದ ಸೊಸೆ’ ಎಂದು ಮೂಗು ಮುರಿದದ್ದೂ ಇದೆ! 

Continue Reading

ಪ್ರಮುಖ ಸುದ್ದಿ

T20 World Cup : ವಿಶ್ವ ಕಪ್​ ತಂಡದಿಂದ ಅರ್ಶ್​​ದೀಪ್​ ಕೈಬಿಡಲು ಆಗ್ರಹ; ಏನಾಯಿತು ಅವರಿಗೆ?

T20 World Cup: ನಾಯಕ ರುತುರಾಜ್ ಗಾಯಕ್ವಾಡ್ ಅವರ ಅರ್ಧಶತಕದ ನೆರವಿನಿಂದ ಸಿಎಸ್​ಕೆ ಮೊದಲ ಇನಿಂಗ್ಸ್​ನ 20 ಓವರ್​ಗಳಲ್ಲಿ 162 ರನ್ ಗಳಿಸಿತು. ಆದಾಗ್ಯೂ ಬ್ಯಾಟರ್​ಗಳ ದುಃಸ್ವಪ್ನ ಹೊಂದಿದ್ದ ಪಿಚ್​ನಲ್ಲಿ ಪಿಬಿಕೆಎಸ್​​ನ ಮುಂಚೂಣಿ ಬೌಲರ್ ಅರ್ಶ್​ದೀಪ್​ ಸಿಂಗ್​ 4 ಓವರ್​ಗಳ ಸ್ಪೆಲ್​ನಲ್ಲಿ 52 ರನ್​ಗಳನ್ನು ಬಿಟ್ಟುಕೊಟ್ಟರು. ಅವರ 13.00 ಎಕಾನಮಿ ಪಿಬಿಎಸ್​ಕೆ ಬೌಲರ್​ಗಳಲ್ಲಿ ಅತ್ಯಧಿಕವಾಗಿತ್ತು.

VISTARANEWS.COM


on

T20 World Cup
Koo

ಬೆಂಗಳೂರು: ಮುಂಬರುವ ಟಿ 20 ವಿಶ್ವಕಪ್ (T20 World Cup) ಆಡಲಿರುವ ಭಾರತ ತಂಡಕ್ಕೆ ಆಯ್ಕೆಯಾದ ಒಂದು ದಿನದ ನಂತರ ಐಪಿಎಲ್​ನ ಪಂಜಾಬ್​ ಕಿಂಗ್ಸ್ ತಂಡ ಬೌಲರ್​ ಅರ್ಶ್​ದೀಪ್​ ಸಿಂಗ್​ ಚೆನ್ನೈ ವಿರುದ್ಧ ದುಬಾರಿ ಬೌಲಿಂಗ್​ ದಾಳಿ ನಡೆಸಿದ್ದಾರೆ. ತಮ್ಮ 4 ಓವರ್​ಗಳ ಸ್ಪೆಲ್​ನಲ್ಲಿ 52 ರನ್ ನೀಡಿದ್ದಾರೆ. ಚೆನ್ನೈ ಬ್ಯಾಟರ್​ಗಳು ಸ್ಪರ್ಧಾತ್ಮಕ ಮೊತ್ತ ಗಳಿಸಲು ಹೆಣಗಾಡಿದ ಹೊರತಾಗಿಯೂ ಅವರು ಹೆಚ್ಚು ರನ್​ ನೀಡಿದ್ದಾರೆ. ಇದು ಅವರ ಬೌಲಿಂಗ್​ ದಾಳಿಯ ಬಗ್ಗೆ ಟೀಕೆಗಳು ಎದುರಾಗಿವೆ. ಅವರನ್ನು ವಿಶ್ವ ಕಪ್ ತಂಡದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಚೆನ್ನೈನಲ್ಲಿ ಇಂದು ಸಿಎಸ್​ಕೆ ವಿರುದ್ಧ ಪಂಜಾಬ್ ಕಿಂಗ್ಸ್​ ಮೊದಲು ಬೌಲಿಂಗ್ ಮಾಡಿತ್ತು. ಚೆಪಾಕ್​​ನ ನಿಧಾನಗತಿಯ ಟ್ರ್ಯಾಕ್​ನಲ್ಲಿ ಆತಿಥೇಯರು ಬ್ಯಾಟಿಂಗ್​ನಲ್ಇ ಹೆಣಗಾಡಿದರು. ಹೀಗಾಗಿ ಪಂಜಾಬ್​ ತಂಡದ ನಿರ್ಧಾರ ಉತ್ತಮ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಅರ್ಶ್​ದೀಪ್​ ಬೌಲಿಂಗ್​ ಉತ್ತಮವಾಗಿರಲಿಲ್ಲ.

ನಾಯಕ ರುತುರಾಜ್ ಗಾಯಕ್ವಾಡ್ ಅವರ ಅರ್ಧಶತಕದ ನೆರವಿನಿಂದ ಸಿಎಸ್​ಕೆ ಮೊದಲ ಇನಿಂಗ್ಸ್​ನ 20 ಓವರ್​ಗಳಲ್ಲಿ 162 ರನ್ ಗಳಿಸಿತು. ಆದಾಗ್ಯೂ ಬ್ಯಾಟರ್​ಗಳ ದುಃಸ್ವಪ್ನ ಹೊಂದಿದ್ದ ಪಿಚ್​ನಲ್ಲಿ ಪಿಬಿಕೆಎಸ್​​ನ ಮುಂಚೂಣಿ ಬೌಲರ್ ಅರ್ಶ್​ದೀಪ್​ ಸಿಂಗ್​ 4 ಓವರ್​ಗಳ ಸ್ಪೆಲ್​ನಲ್ಲಿ 52 ರನ್​ಗಳನ್ನು ಬಿಟ್ಟುಕೊಟ್ಟರು. ಅವರ 13.00 ಎಕಾನಮಿ ಪಿಬಿಎಸ್​ಕೆ ಬೌಲರ್​ಗಳಲ್ಲಿ ಅತ್ಯಧಿಕವಾಗಿತ್ತು.

ಇದನ್ನೂ ಓದಿ: Deepak Chahar : ಸಹೋದರನನ್ನು ಗೇಲಿ ಮಾಡಿದವರಿಗೆ ತಿರುಗೇಟು ಕೊಟ್ಟ ದೀಪಕ್ ಚಾಹರ್​ ಸಹೋದರಿ!

ಕುತೂಹಲಕಾರಿ ಸಂಗತಿಯೆಂದರೆ ಮುಂಬರುವ ಮೆಗಾ ಟಿ 20 ವಿಶ್ವಕಪ್ ಈವೆಂಟ್​​ನಿಂದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರೊಂದಿಗೆ ಅಂತಿಮ 15 ಸದಸ್ಯರ ತಂಡದಲ್ಲಿ ಅರ್ಶ್​​ದೀಪ್​ ಸಿಂಗ್​ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ ಈಗ ಅವರ ಬೌಲಿಂಗ್​ ದಾಳಿ ಎಷ್ಟು ಪರಿಣಾಮಕಾರಿ ಎಂಬುದೇ ಅನುಮಾನ ಶುರುವಾಗಿದೆ.

ಕಿಡಿಕಾರಿದ ಅಭಿಮಾನಿಗಳು

ಅರ್ಶ್​ದೀಪ್​ ಅವರ ಕಳಪೆ ಪ್ರದರ್ಶನ ಮತ್ತು ಬೌಲರ್ ಸ್ನೇಹಿ ಪಿಚ್​​ನಲ್ಲಿ ಅರ್ಶ್​​ದೀಪ್​ ಅವರ ಪ್ರಯತ್ನಗಳ ಕೊರತೆಯು ಅಭಿಮಾನಿಗಳನ್ನು ಗೊಂದಲಕ್ಕೀಡು ಮಾಡಿದೆ. ಈ ಬಗ್ಗೆ ಚಿಂತೆಗೀಡು ಮಾಡಿತು. ಅನೇಕರು ಅವರ ಆಯ್ಕೆಯನ್ನು ಪ್ರಶ್ನಿಸಿದ್ದಾರೆ. ಕೆಲವರು ಸಿಎಸ್ಕೆ ದಂತಕಥೆ ಎಂಎಸ್ ಧೋನಿಗೆ ಹೆಚ್ಚುವರಿ ರನ್​ಗಳನ್ನು ನೀಡಿದಕ್ಕಾಗಿ ಟ್ರೋಲ್ ಮಾಡಿದ್ದಾರೆ.

ಅರ್ಶ್​ದೀಪ್​ ಸಿಂಗ್ 2022 ರಲ್ಲಿ ಪಾದಾರ್ಪಣೆ ಮಾಡಿದಾಗಿನಿಂದ ರಾಷ್ಟ್ರೀಯ ತಂಡದಲ್ಲಿದ್ದಾರೆ. ಆದಾಗ್ಯೂ, ಮೊಹಮ್ಮದ್ ಶಮಿ ಹಿಮ್ಮಡಿ ಗಾಯದಿಂದ ಬಳಲುತ್ತಿರುವುದರಿಂದ, ಭಾರತವು ವೇಗದ ಬೌಲಿಂಗ್ ಆಯ್ಕೆಗಳ ಕೊರತೆಯನ್ನು ಎದುರಿಸಿದೆ. ಹೀಗಾಗಿ ಎಡಗೈ ವೇಗಿಗೆ ಅವಕಾಶ ಸಿಕ್ಕಿದೆ. ಐಪಿಎಲ್ 2024 ಋತುವಿನಲ್ಲಿ ಎಡಗೈ ವೇಗದ ಬೌಲರ್ನ ಪ್ರಶ್ನಾರ್ಹ ಫಾರ್ಮ್ ಖಂಡಿತವಾಗಿಯೂ ಟಿ 20 ವಿಶ್ವಕಪ್ ಹತ್ತಿರವಾಗುತ್ತಿದ್ದಂತೆ ಅಭಿಮಾನಿಗಳನ್ನು ಚಿಂತೆಗೀಡು ಮಾಡುತ್ತದೆ.

ಪ್ರಿಯ ಬಿಸಿಸಿಐ, ದಯವಿಟ್ಟು ಅರ್ಷ್ದೀಪ್ ಸಿಂಗ್ ಧೋನಿಗೆ ಈ ಕೊನೆಯ ಓವರ್ ಅನ್ನು ಪರಿಶೀಲಿಸಬಹುದೇ? ಅವರು ಉದ್ದೇಶಪೂರ್ವಕವಾಗಿ ಧೋನಿಯ ಆಫ್ ಸ್ಟಂಪ್​​ಗೆ ಹೊರಗೆ ಇಡೀ ಓವರ್ ಎಸೆದಿದ್ದಾರೆ. ಇದು ಧೋನಿಗೆ ಸಿಕ್ಸರ್ ಎಸೆಯಲು ನೆರವು ನೀಡಿತು ಎಂದು ಸನ್ನಿ ಎಂಬ ಅಭಿಮಾನಿ ಹೇಳಿದ್ದಾರೆ.

Continue Reading

ಕ್ರೀಡೆ

T20 World Cup: ರೋಹಿತ್​, ಅಗರ್ಕರ್​ ಜಂಟಿ ಸುದ್ದಿಗೋಷ್ಠಿಗೆ ಕ್ಷಣಗಣನೆ

T20 World Cup: ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಹಾರ್ದಿಕ್​ ಪಾಂಡ್ಯಗೆ ಅವಕಾಶ ನೀಡಿದ್ದು ಮಾತ್ರವಲ್ಲದೆ ಉಪನಾಯಕನ ಸ್ಥಾನ ನೀಡಿದ್ದರ ಬಗ್ಗೆ ಈಗಾಗಲೇ ಅನೇಕ ಮಾಜಿ ಆಟಗಾರರಿಂದ ಟೀಕೆಗಳು ವ್ಯಕ್ತವಾಗಿದೆ. ಗುಜರಾತಿ ಲಾಬಿ ಎಂದು ಕೆಲವರು ಬಿಸಿಸಿಐ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

T20 World Cup
Koo

ಮುಂಬೈ: ಅಮೆರಿಕ ಮತ್ತು ವೆಸ್ಟ್​ ಇಂಡಿಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ(T20 World Cup) ಭಾರತ ತಂಡ (Team India) ಆಯ್ಕೆ ಮಾಡಿದ ಬೆನ್ನಲ್ಲೇ ಇಂದು(ಗುರುವಾರ) ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್(Ajit Agarkar) ಮತ್ತು ತಂಡದ ನಾಯಕ ರೋಹಿತ್ ಶರ್ಮಾ(Rohit Sharma) ಮುಂಬೈಯ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಮಂಗಳವಾರ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಮತ್ತು ಅಜಿತ್​ ಅಗರ್ಕರ್​ ಅಹಮದಾಬಾದ್​ನಲ್ಲಿ ಔಪಚಾರಿಕ ಸಭೆ ನಡೆಸಿ ಟ್ವೀಟರ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ತಂಡವನ್ನು ಪ್ರಟಿಸಿದ್ದರು. ಇದೀಗ ನಾಯಕ ರೋಹಿತ್​ ಮತ್ತು ಅಗರ್ಕರ್​ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ಆಟಗಾರರ ಆಯ್ಕೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕೆಲ ಆಟಗಾರರಿಗೆ ಅವಕಾಶ ನೀಡದ ಬಗ್ಗೆಯೂ ಈ ಸುದ್ದಿಗೋಷ್ಠಿಯಲ್ಲಿ ಉತ್ತರ ಸಿಗುವ ಸಾಧ್ಯತೆ ಇದೆ. ಅದರಲ್ಲಿಯೂ ಅನುಭವಿ ಆಟಗಾರ ಕೆಎಲ್ ರಾಹುಲ್​ಗೆ ಮತ್ತು ರಿಂಕು ಸಿಂಗ್​ಗೆ ಅವಕಾಶ ನೀಡದ್ದರ ಕುರಿತು ಹಲವು ಪ್ರಶ್ನೆಗಳು ಎದುರಾಗಬಹುದು.

ಇದನ್ನೂ ಓದಿ T20 World Cup: ಟಿ20 ವಿಶ್ವಕಪ್​ ತಂಡ ಸೇರಲು ರಾಹುಲ್​ಗೆ ಇನ್ನೂ ಇದೆ ಅವಕಾಶ

ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಹಾರ್ದಿಕ್​ ಪಾಂಡ್ಯಗೆ ಅವಕಾಶ ನೀಡಿದ್ದು ಮಾತ್ರವಲ್ಲದೆ ಉಪನಾಯಕನ ಸ್ಥಾನ ನೀಡಿದ್ದರ ಬಗ್ಗೆ ಈಗಾಗಲೇ ಅನೇಕ ಮಾಜಿ ಆಟಗಾರರಿಂದ ಟೀಕೆಗಳು ವ್ಯಕ್ತವಾಗಿದೆ. ಗುಜರಾತಿ ಲಾಬಿ ಎಂದು ಕೆಲವರು ಬಿಸಿಸಿಐ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಾಂಡ್ಯ ಆಯ್ಕೆಯ ಬಗ್ಗೆಯೂ ರೋಹಿತ್​ಗೆ ಪ್ರಶ್ನೆಗಳ ಸುರಿಮಳೆ ಬರುವ ಸಾಧ್ಯತೆಯೂ ಕಂಡುಬಂದಿದೆ. ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದೆ.

ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡುವ ಮೂಲಕ ಭಾರತ ತನ್ನ ಅಭಿಯಾನ ಆರಂಭಿಸಲಿದೆ. ದ್ವಿತೀಯ ಪಂದ್ಯವನ್ನು ಜೂನ್‌ 9 ರಂದು ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕ್​ ವಿರುದ್ಧ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

Continue Reading

ಪ್ರಮುಖ ಸುದ್ದಿ

Deepak Chahar : ಸಹೋದರನನ್ನು ಗೇಲಿ ಮಾಡಿದವರಿಗೆ ತಿರುಗೇಟು ಕೊಟ್ಟ ದೀಪಕ್ ಚಾಹರ್​ ಸಹೋದರಿ!

Deepak Chahar :ಎರಡನೇ ಎಸೆತದ ನಂತರ, ಅವರು ತಮ್ಮ ತೊಡೆ ಸ್ನಾಯುವಿನ ಸೆಳತಕ್ಕೆ ಒಳಗಾದರು. ನಾಯಕ ಋತುರಾಜ್ ಗಾಯಕ್ವಾಡ್ ಅವರೊಂದಿಗೆ ದೀರ್ಘ ಮಾತುಕತೆಯ ನಂತರ ಚಹರ್ ಮೈದಾನದಿಂದ ಹೊರನಡೆಯಲು ನಿರ್ಧರಿಸಿದರು. ಸ್ಟ್ರೈಕ್ ಬೌಲರ್ ಅನುಪಸ್ಥಿತಿಯು ಸಿಎಸ್​ಕೆಯು ಪಂದ್ಯವನ್ನು ಕಳೆದುಕೊಂಡಿತು. ದೀಪಕ್ ಚಹರ್ ನಿರಂತರವಾಗಿ ಗಾಯಗಳಿಗೆ ಒಳಗಾಗುತ್ತಿರುವುದರಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಅನೇಕರು ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಟ್ರೋಲ್ ಮಾಡಿದರು.

VISTARANEWS.COM


on

Deepak Chahar
Koo

ಚೆನ್ನೈ: ಸಿಎಸ್​ಕೆ ತಂಡದ ಪ್ರತಿಭಾನ್ವಿತ ವೇಗದ ಬೌಲರ್ ದೀಪಕ್ ಚಹರ್ (Deepak Chahar) ಇತ್ತೀಚೆಗೆ ಪಂಜಾಬ್​ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಆಡಿರಲಿಲ್ಲ. ಅವರು ಗಾಯಗೊಂಡ ಕಾರಣ ಆಡುವ 11ರ ಬಳಗದಲ್ಲಿ ಅವಕಾಶ ಗಿಟ್ಟಿಸಿಲ್ಲ. ಹೀಗಾಗಿ ಅವರು ಟ್ರೋಲ್​ಗೆ ಒಳಗಾಗಿದ್ದಾರೆ. ಪದೇ ಪದೇ ಗಾಯಕ್ಕೆ ಒಳಗಾಗುತ್ತಿದ್ದಾರೆ ಎಂಬ ಚುಚ್ಚು ಮಾತುಗಳನ್ನು ಕ್ರಿಕೆಟ್ ಅಭಿಮಾನಿಗಳು ಆಡುತ್ತಿದ್ದಾರೆ. ಇದರಿಂದ ಬೇಸತ್ತ ಅವರ ಸಹೋದರಿ ಮಾಲತಿ ಚಾಹರ್​ ಟ್ರೋಲ್​ ಮಾಡಿದವರಿಗೆ ಸಿಕ್ಕಾಪಟ್ಟೆ ಬೈದಿದ್ದಾರೆ. ನಿಮಗೆ ಸ್ವಲ್ಪವೂ ಸಂವೇದನೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಐಪಿಎಲ್ 2024 ರ ಮುಖಾಮುಖಿಯಲ್ಲಿ ಸಿಎಸ್​ಕೆ ವಿರುದ್ಧ ಪಂಜಾಬ್ ತಂಡ ಗೆದ್ದಿದೆ. ಅದಕ್ಕೆ ಕಾರಣ ಆಟಗಾರರ ಅಲಭ್ಯತೆ. ಹೀಗಾಗಿ ಚಾಹರ್ ಟ್ರೋಲ್​ಗೆ ಒಳಗಾಗಿದ್ದಾರೆ ಸ್ಟ್ರೈಕ್ ವೇಗಿ ದೀಪಕ್ ಚಾಹರ್ ಕೇವಲ 2 ಎಸೆತಗಳನ್ನು ಎಸೆದ ನಂತರ ಮೈದಾನದಿಂದ ನಿರ್ಗಮಿಸಿದರು.

ಎರಡನೇ ಎಸೆತದ ನಂತರ, ಅವರು ತಮ್ಮ ತೊಡೆ ಸ್ನಾಯುವಿನ ಸೆಳತಕ್ಕೆ ಒಳಗಾದರು. ನಾಯಕ ಋತುರಾಜ್ ಗಾಯಕ್ವಾಡ್ ಅವರೊಂದಿಗೆ ದೀರ್ಘ ಮಾತುಕತೆಯ ನಂತರ ಚಹರ್ ಮೈದಾನದಿಂದ ಹೊರನಡೆಯಲು ನಿರ್ಧರಿಸಿದರು. ಸ್ಟ್ರೈಕ್ ಬೌಲರ್ ಅನುಪಸ್ಥಿತಿಯು ಸಿಎಸ್​ಕೆಯು ಪಂದ್ಯವನ್ನು ಕಳೆದುಕೊಂಡಿತು. ದೀಪಕ್ ಚಹರ್ ನಿರಂತರವಾಗಿ ಗಾಯಗಳಿಗೆ ಒಳಗಾಗುತ್ತಿರುವುದರಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಅನೇಕರು ಅವರನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಟ್ರೋಲ್ ಮಾಡಿದರು. ಇದು ಅವರ ಸಹೋದರಿ ಮಾಲತಿ ಚಹರ್ ಅವರ ಕೋಪಕ್ಕೆ ಕಾರಣವಾಗಿದೆ.

ವೃತ್ತಿಯಲ್ಲಿ ನಟಿಯಾಗಿರುವ ಮಾಲತಿ ಚಹರ್ ತಮ್ಮ ಎಕ್ಸ್ ಖಾತೆಯಲ್ಲಿ (ಟ್ವಿಟರ್) ತಮ್ಮ ಸಹೋದರನ ಬಗ್ಗೆ ಸಂವೇದನಾರಹಿತವಾಗಿ ವರ್ತಿಸಿದ್ದಕ್ಕಾಗಿ ಅಭಿಮಾನಿಗಳನ್ನು ದೂಷಿಸಿದ್ದಾರೆ. ಯಾವುದೇ ಕ್ರೀಡಾಪಟು ಗಾಯಗೊಳ್ಳುವುದನ್ನು ಎಂದಿಗೂ ಸಂಭ್ರಮಿಸುವುದಿಲ್ಲ. ದೀಪಕ್ ಚಹರ್ ಕೂಡ ಇದಕ್ಕೆ ಹೊರತಾಗಿಲ್ಲ ಎಂದು ಅವರು ಹೇಳಿದರು. ಅವರು ಚೇತರಿಸಿಕೊಳ್ಳಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾನೆ ಎಂದು ಹೇಳಿದ ಮಾಲತಿ, ತನ್ನ ಸಹೋದರನ ಪುಟಿದೇಳುವ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: T20 World Cup : ಈ ದಿನದಂದು ವಿಶ್ವ ಕಪ್​ಗಾಗಿ ಯುಎಸ್​ಎಗೆ ಹೊರಡಲಿದೆ ಟೀಮ್ ಇಂಡಿಯಾ

ಸಿಎಸ್​ಕೆ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರು ಚಹರ್ ಅವರ ಗಾಯದ ಬಗ್ಗೆ ಉತ್ತಮ ಭಾವನೆ ಹೊಂದಿಲ್ಲ ಎಂದು ಬಹಿರಂಗಪಡಿಸಿದ್ದಾರೆ. ಅದು ಮೇಲ್ನೋಟಕ್ಕೆ ಪ್ರೋತ್ಸಾಹದಾಯಕವಾಗಿಲ್ಲ. ಆದ್ದರಿಂದ, ಫಿಸಿಯೋಗಳು ಮತ್ತು ವೈದ್ಯರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರನ್​ ಗಾಗಿ ​ ಓಡದೆ ಸ್ವಾರ್ಥ ತೋರಿದ ಧೋನಿ; ನೆಟ್ಟಿಗರಿಂದ ಭಾರೀ ಟೀಕೆ

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್ ತಂಡದ ಮಾಜಿ ನಾಯಕ​ ಮಹೇಂದ್ರ ಸಿಂಗ್ ಧೋನಿ(MS Dhoni) ಬುಧವಾರ ನಡೆದ ಪಂಜಾಬ್​ ಲಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ತೋರಿದ ವರ್ತನೆಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದು ಮಾಡುತ್ತಿದೆ. ಹಲವು ನೆಟ್ಟಿಗರು ಧೋನಿ ಇಷ್ಟೊಂದು ಸ್ವಾರ್ಥಿಯಾಗಬಾರದೆಂದು ಟೀಕಿಸಿದ್ದಾರೆ.

ಯಾವುದೇ ವಿವಾದಗಳಿಗೆ ಒಳಗಾಗದೆ ಶಾಂತ ಸ್ವಭಾವದಿಂದ ಆಡುವ ಧೋನಿ ಹಲವು ಬಾರಿ ಸಹ ಆಟಗಾರರ ಶತಕ ಮತ್ತು ಅರ್ಧಶತಕಕ್ಕೋಸ್ಕರ ರನ್​ ಗಳಿಸದೆ ಅವಕಾಶ ಒದಗಿಸಿಕೊಟ್ಟಿದ್ದಾರೆ. ಧೋನಿಯ ಈ ನಡೆಯ ಬಗ್ಗೆ ಅನೇಕರು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದರು. ಆದರೆ, ಪಂಬಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನಡೆಸುವ ಸಲುವಾಗಿ ಸ್ವಾರ್ಥಿಯಾಗಿ ಕಂಡು ಬಂದರು.

ಚೆನ್ನೈ ಬ್ಯಾಟಿಂಗ್​ ಇನಿಂಗ್ಸ್​ನ ಅಂತಿಮ ಓವರ್​ನಲ್ಲಿ ಅರ್ಷದೀಪ್​ ಎಸೆದ ಈ ಓವರ್​ನ ಮೂರನೇ ಎಸೆತವನ್ನು ಧೋನಿ ಬಲವಾಗಿ ಹೊಡೆದರು. ಚೆಂಡು ಬೌಂಡರಿ ಲೈನ್​ ಬಳಿ ಹೋದರೂ ಕೂಡ ಧೋನಿ ರನ್​ ಓಡದೆ ಸ್ವಾರ್ಥ ತೋರಿದರು. ನಾನ್​ಸ್ಟ್ರೈಕ್​ನಲ್ಲಿದ್ದ ಡೇರಿಯಲ್​ ಮಿಚೆಲ್​ ಅವರು ರನ್​ಗಾಗಿ ಓಡಿ ಕ್ರೀಸ್​ ಬಳಿ ಬಂದರು. ಈ ವೇಳೆ ಧೋನಿ ಅವೇಶದಲ್ಲಿಯೇ ಮಿಚೆಲ್​ಗೆ ಹಿಂದೆ ಹೋಗುವಂತೆ ತಿಳಿಸಿದರು. ಸ್ಟ್ರೈಕ್​ ತನಕ ಓಡಿದ್ದ ಮಿಚೆಲ್​ ಮತ್ತೆ ನಾನ್​ಸ್ಟ್ರೈಕರ್​ ಬಳಿಗೆ ಓಡಿ ಬಂದರು. ಮುಂದಿನ ಎಸೆತವನ್ನು ಧೋನಿ ಬೀಟ್​ ಮಾಡಿದರು. 5ನೇ ಎಸೆತದಲ್ಲಿ ಸಿಕ್ಸರ್​ ಬಾರಿಸಿ ಅಂತಿಮ ಎಸೆತದಲ್ಲಿ ರನೌಟ್​ ಆದರು.

Continue Reading
Advertisement
Deepika Padukone
ಬಾಲಿವುಡ್2 mins ago

Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

Sania Mirza
ಕ್ರೀಡೆ10 mins ago

Sania Mirza: ಹೇಳಲು ತುಂಬಾ ಇದೆ, ಆದರೂ ಮೌನವಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

T20 World Cup
ಪ್ರಮುಖ ಸುದ್ದಿ21 mins ago

T20 World Cup : ವಿಶ್ವ ಕಪ್​ ತಂಡದಿಂದ ಅರ್ಶ್​​ದೀಪ್​ ಕೈಬಿಡಲು ಆಗ್ರಹ; ಏನಾಯಿತು ಅವರಿಗೆ?

Viral News
ವೈರಲ್ ನ್ಯೂಸ್31 mins ago

Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

Prajwal Revanna Case Prajwal arrives in Dubai from Germany
ಕ್ರೈಂ33 mins ago

Prajwal Revanna Case: ಜರ್ಮನಿಯಿಂದ ದುಬೈಗೆ ಹಾರಿದ ಪ್ರಜ್ವಲ್‌ ರೇವಣ್ಣ! ತನಿಖೆ ದಿಕ್ಕು ತಪ್ಪಿಸಿ, ದಿನ ದೂಡಲು ತಂತ್ರ?

Karnataka Weather Forecast
ಮಳೆ43 mins ago

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

Chandrayaan 3
ದೇಶ54 mins ago

Chandrayaan 3: ಇತಿಹಾಸ ಸೃಷ್ಟಿಸಿ ಚಂದ್ರನ ಮಡಿಲಲ್ಲಿ ಮಲಗಿದ ವಿಕ್ರಮ್‌ ಲ್ಯಾಂಡರ್‌, ಪ್ರಜ್ಞಾನ್‌ ರೋವರ್; ಇಲ್ಲಿವೆ Photos

Amitabh Bachchan vanity van ambition was to pee by Vidhu Vinod Chopra
ಬಾಲಿವುಡ್55 mins ago

Amitabh Bachchan: ಅಮಿತಾಭ್‌ ಬಚ್ಚನ್‌ ವ್ಯಾನ್‌ನಲ್ಲಿ ಸುಸ್ಸು ಮಾಡೋದೇ ನನ್ನ ಗುರಿ ಎಂದ ಖ್ಯಾತ ನಿರ್ದೇಶಕ!

Prajwal Revanna Case Minister Zameer Ahmed close aide makes Prajwal obscene video pen drive viral
ರಾಜಕೀಯ59 mins ago

Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

T20 World Cup
ಕ್ರೀಡೆ1 hour ago

T20 World Cup: ರೋಹಿತ್​, ಅಗರ್ಕರ್​ ಜಂಟಿ ಸುದ್ದಿಗೋಷ್ಠಿಗೆ ಕ್ಷಣಗಣನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌