Who was the first impact player of IPL? Who took advantage?IPL 2023 : ಐಪಿಎಲ್​ನ ಮೊದಲ ಇಂಪ್ಯಾಕ್ಟ್​​ ಪ್ಲೇಯರ್​ ಯಾರು? ಅನುಕೂಲ ಬಳಸಿಕೊಂಡಿದ್ದು ಯಾವ ತಂಡ? - Vistara News

ಕ್ರಿಕೆಟ್

IPL 2023 : ಐಪಿಎಲ್​ನ ಮೊದಲ ಇಂಪ್ಯಾಕ್ಟ್​​ ಪ್ಲೇಯರ್​ ಯಾರು? ಅನುಕೂಲ ಬಳಸಿಕೊಂಡಿದ್ದು ಯಾವ ತಂಡ?

ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಮೊದಲ ಇಂಪ್ಯಾಕ್ಟ್​​ ಪ್ಲೇಯರ್​ ಬಳಸಿಕೊಂಡು ಐಪಿಎಲ್​ನಲ್ಲಿ ಇತಿಹಾಸ ನಿರ್ಮಿಸಿತು.

VISTARANEWS.COM


on

IPL 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಇಂಪ್ಯಾಕ್ಟ್​ ಪ್ಲೇಯರ್​ ನಿಯಮ ಚರ್ಚೆಯ ವಿಷಯವಾಗಿದೆ. ಪಂದ್ಯದ ನಡುವೆಯೇ ಆಟಗಾರನನ್ನು ಬದಲಾಯಿಸುವುದು ಈ ನಿಯಮದ ಅನುಕೂಲ. ತಂಡವೊಂದರ ಅನುಕೂಲಕ್ಕೆ ತಕ್ಕ ಹಾಗೆ ಒಬ್ಬ ಆಟಗಾರನ್ನು ಪಂದ್ಯದ ಮಧ್ಯದಲ್ಲಿ ಕೈ ಬಿಟ್ಟು ಬೇರೊಬ್ಬ ಆಟಗಾರನನ್ನು ತಂಡಕ್ಕೆ ಸೇರಿಸುವ ಮೂಲಕ ಗೆಲುವಿನ ಅವಕಾಶ ಸೃಷ್ಟಿಸಲು ಸಾಧ್ಯವಾಗುತ್ತದೆ. ಈ ನಿಯಮ ಚೆನ್ನೈ ಸೂಪರ್​ ಕಿಂಗ್ಸ್​ ಹಾಗೂ ಗುಜರಾತ್​ ಜಯಂಟ್ಸ್​ ತಂಡಗಳ ನಡುವಿನ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿಯೇ ಬಳಕೆಯಾಯಿತು. ಹಾಗಾದರೆ ಈ ನಿಯಮಕ್ಕೆ ಒಳಪಟ್ಟ ಆಟಗಾರ ಯಾರೆಂಬುದನ್ನು ನೋಡೋಣ.

ಚೆನ್ನೈ ಸೂಪರ್​ ಕಿಂಗ್ಸ್ ತಂಡ ಬೌಲರ್ ತುಷಾರ್ ದೇಶಪಾಂಡೆ ಐಪಿಎಲ್​ನ ಮೊದಲ ಇಂಪ್ಯಾಕ್ಟ್ ಪ್ಲೇಯರ್​ ಎನಿಸಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್​ ಮಾಡಿದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ನಂತರ ರನ್​ ಚೇಸ್​ ಮಾಡುವ ವೇಳೆ ತುಷಾರ್​ ದೇಶಪಾಂಡೆ ಅವರನ್ನು ಕಣಕ್ಕೆ ಇಳಿಸಿತು. ಅವರನ್ನು ಆಡುವ 11ರ ಬಳಗಕ್ಕೆ ಸೇರಿಸಿಕೊಳ್ಳುವಾಗಿ ಬ್ಯಾಟರ್​ ಅಂಬಾಟಿ ರಾಯುಡು ಅವರನ್ನು ಕೈ ಬಿಡಲಾಯಿತು. ಅಂಬಾಟಿ ರಾಯುಡು ಬ್ಯಾಟ್​ ಮಾಡಿ 12 ರನ್​ ಬಾರಿಸ ಔಟಾಗಿದ್ದರು. 27 ವರ್ಷದ ತುಷಾರ್​ ದೇಶಪಾಂಡೆ ಮುಂಬಯಿ ಮೂಲದವರು. ರಣಜಿ ಟ್ರೋಫಿಯಲ್ಲಿ ಮುಂಬಯಿ ತಂಡ ಪರವಾಗಿ ಅವರು ಆಡುತ್ತಾರೆ.

ಹೊಸ ನಿಯಮಗಳೇನು?

ಈ ಬಾರಿಯ ಟೂರ್ನಿಯಲ್ಲಿ ಹತ್ತು ತಂಡಗಳನ್ನು ತಲಾ 5 ತಂಡಗಳ ಎರಡು ಗುಂಪುಗಳಾಗಿ ಬಿಂಗಡಿಸಲಾಗಿದೆ. ಗುಂಪು ಹಂತದಲ್ಲಿ ತಂಡವೊಂದು ತನ್ನದೇ ಗುಂಪಿನ ಉಳಿದ 4 ತಂಡಗಳ ವಿರುದ್ಧ ತಲಾ 2 ಪಂದ್ಯಗಳನ್ನು ಆಡಬೇಕು. ಆಗ ತಂಡವೊಂದು 8 ಪಂದ್ಯಗಳನ್ನು ಆಡಿದಂತಾಗುತ್ತದೆ. ಬಳಿಕ ಎರಡೂ ಗುಂಪುಗಳ ತಂಡಗಳ ನಡುವೆ ಪಂದ್ಯಗಳು ಆರಂಭವಾಗುತ್ತವೆ. ಅಂದರೆ ಮೊದಲ ಗುಂಪಿನ ಒಂದು ತಂಡ, ಇನ್ನೊಂದು ಗುಂಪಿನ ತಂಡವೊಂದರ ವಿರುದ್ಧ ತಲಾ 2 ಪಂದ್ಯಗಳನ್ನು ಆಡುತ್ತದೆ. ಇತರ ನಾಲ್ಕು ತಂಡಗಳ ವಿರುದ್ಧ ತಲಾ 1 ಪಂದ್ಯ ಆಡಲಾಗುತ್ತದೆ. ಇದೇ ಮಾದರಿ ಇತರ ತಂಡಗಳಿಗೂ ಈ ಅನ್ವಯವಾಗುತ್ತದೆ. ಅಲ್ಲಿಗೆ ತಂಡವೊಂದು ಲೀಗ್‌ ಹಂತದಲ್ಲಿ 14 ಪಂದ್ಯಗಳನ್ನಾಡಿದಂತಾಗುತ್ತದೆ.

ಇದನ್ನೂ ಓದಿ IPL 203 : ಐಪಿಎಲ್​ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ

ಇಂಪ್ಯಾಕ್ಟ್ ಪ್ಲೇಯರ್‌

ಆಸ್ಟ್ರೇಲಿಯದ ಪ್ರತಿಷ್ಠಿತ ಬಿಗ್‌ಬಾಶ್‌ ಟಿ20 ಲೀಗ್‌ನಲ್ಲಿ ಚಾಲ್ತಿಯಲ್ಲಿರುವ ಇಂಪ್ಯಾಕ್ಟ್ ಪ್ಲೇಯರ್‌ ನಿಯಮವನ್ನು ಈ ಬಾರಿ ಐಪಿಎಲ್​ನಲ್ಲಿಯೂ ಪರಿಚಯಿಸಲಾಗಿದೆ. ಈ ನಿಯಮದ ಪ್ರಮಾರ ತಂಡವೊಂದು ಆಡುತ್ತಿರುವಾಗ ಪರಿಸ್ಥಿತಿಗೆ ಅನುಗುಣವಾಗಿ ಒಬ್ಬ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಪ್ಲೇಯಿಂಗ್​ ಇಲೆವನ್​ ಬಳಗದಿಂದ ಹೊರಗಿರುವ ಒಬ್ಬ ಆಟಗಾರನನ್ನು ತಂಡಕ್ಕೆ ಆಡುವ ಬಳಗಕ್ಕೆ ಸೇರಿಸಿಕೊಳ್ಳಬಹುದು. ಇನಿಂಗ್ಸ್‌ ಆರಂಭಕ್ಕೂ ಮುನ್ನ, ಒಂದು ಓವರ್‌ ಮುಗಿದ ಮೇಲೆ, ವಿಕೆಟ್‌ ಬಿದ್ದಾಗ, ಓವರ್‌ಗಳ ನಡುವಿನ ವಿರಾಮದಲ್ಲಿ ಈ ನಿಯಮವನ್ನು ಬಳಸಬಹುದು. ಈ ನಿಯಮದನ್ವಯ ಒಬ್ಬ ಬದಲಿ ಆಟಗಾರನನ್ನು ಮಾತ್ರ ಬದಲಿಸಲು ಅವಕಾಶವಿರಲಿದೆ.

ಇದನ್ನೂ ಓದಿ IPL 2023: ಅಹಮದಾಬಾದ್​ನಲ್ಲಿ ಭಾರಿ ಮಳೆ; ಚೆನ್ನೈ-ಗುಜರಾತ್​ ಪಂದ್ಯ ಅನುಮಾನ

ವೈಡ್‌, ನೋಬಾಲ್‌ಗ‌ಳೂ ಡಿಆರ್‌ಎಸ್‌

ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಜಾರಿಗೆ ತರಲಾಗಿದ್ದ ವೈಡ್‌, ನೋಬಾಲ್‌ ಡಿಆರ್‌ಎಸ್‌ ನಿಯಮವನ್ನು ಈ ಬಾರಿಯ ಐಪಿಎಲ್​ನಲ್ಲಿಯೂ ಅಳವಡಿಸಲಾಗಿದೆ. ಅಂಪೈರ್​ಗಳು ನೀಡಿದ ವೈಡ್‌, ನೋಬಾಲ್‌ ಕರೆಗಳನ್ನು ಡಿಆರ್‌ಎಸ್‌ ಮೂಲಕ ಈಗ ಆಟಗಾರರಿಗೆ ಪ್ರಶ್ನಿಸಬಹುದಾಗಿದೆ.

ಈ ಹಿಂದೆ ಟಾಸ್​ಗೂ ಮುನ್ನ ಪ್ಲೇಯಿಂಗ್​ ಇಲೆವೆನ್​ ಪಟ್ಟಿ ಸಲ್ಲಿಸಬೇಕಿತ್ತು. ಆದರೆ ಇದೀಗ ತಂಡಗಳ ನಾಯಕರು ಟಾಸ್‌ ಹಾರಿಸುವಾಗ 11 ಆಟಗಾರರ ಅಂತಿಮಪಟ್ಟಿಯನ್ನು ನೀಡಬೇಕಾಗಿಲ್ಲ. ಟಾಸ್‌ ಫ‌ಲಿತಾಂಶ ನೋಡಿಕೊಂಡು ಬಳಿಕ 11ರ ಪಟ್ಟಿಯನ್ನು ಪ್ರಕಟಿಸಬಹುದು.

ಗುವಾಹಟಿಯಲ್ಲಿ 2 ಪಂದ್ಯ

ಫುಟ್ಬಾಲ್​ ಕ್ರೀಡೆಯನ್ನು ಹೆಚ್ಚಾಗಿ ನೆಚ್ಚಿಕೊಂಡಿರುವ ಅಸ್ಸಾಂನ ಗುವಾಹಟಿಯಲ್ಲಿ ಈ ಬಾರಿ ಐಪಿಎಲ್ ಪಂದ್ಯಗಳು​ ನಡೆಯಲಿವೆ. ಈ ಮೂಲಕ ಇಲ್ಲಿನ ಫುಟ್ಬಾಲ್​ ಅಭಿಮಾನಿಗಳಿಗೆ ಕ್ರಿಕೆಟ್‌ನಲ್ಲೂ ಆಸಕ್ತಿ ಹುಟ್ಟಿಸಲು ಬಿಸಿಸಿಐ ಮುಂದಾಗಿದೆ. ಗುವಾಹಟಿಯಲ್ಲಿ ಈ ಬಾರಿ ಎರಡು ಪಂದ್ಯಗಳು ನಡೆಯಲಿದೆ. ರಾಜಸ್ಥಾನ ರಾಯಲ್ಸ್‌ನ ಎರಡು ತವರಿನ ಪಂದ್ಯಗಳು ಅಸ್ಸಾಂ ಕ್ರಿಕೆಟ್‌ ಅಸೋಸಿಯೇಶನ್‌ ಕ್ರೀಡಾಂಗಣದಲ್ಲಿ ನಡೆಯಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi Stadium : ಗುಜರಾತ್​ಗೆ ಸಡ್ಡು; ತಮಿಳುನಾಡಿನಲ್ಲಿ ನಿರ್ಮಾಣವಾಗಲಿದೆ ನರೇಂದ್ರ ಮೋದಿ ಸ್ಟೇಡಿಯಮ್​​ಗಿಂತ ದೊಡ್ಡ ಕ್ರಿಕೆಟ್​ ಸೌಲಭ್ಯ

Narendra Modi Stadium : ಸ್ಟೇಡಿಯಮ್ ನಿರ್ಮಾಣಕ್ಕೆ ಮೂರು ಅಂತಿಗೊಳಿಸಲಾಗಿದೆ. ಸಚಿವರು ಖುದ್ದಾಗಿ ಪರಿಶೀಲನೆ ನಡೆಸಿದ್ದಾರೆ. ಕೊಯಮತ್ತೂರಿನ ಒಂಡಿಪುದೂರ್ ಪ್ರದೇಶವನ್ನು ಈಗ ಹೊಸ ಕ್ರಿಕೆಟ್ ಕ್ರೀಡಾಂಗಣಕ್ಕೆ ಆಯ್ಕೆ ಮಾಡಲಾಗಿದೆ. ಅಂತರರಾಷ್ಟ್ರೀಯ ಸ್ಥಳದ ನಿರ್ಮಾಣಕ್ಕಾಗಿ ವಿವರವಾದ ಯೋಜನಾ ವರದಿ ತಯಾರಿಸಲು ತಮಿಳುನಾಡು ಸರ್ಕಾರ ಟೆಂಡರ್ ನೀಡಿದೆ.

VISTARANEWS.COM


on

Narendra Modi Stadium
Koo

ಬೆಂಗಳೂರು: ಇತ್ತೀಚಿನ ಬೆಳವಣಿಗೆಯೊಂದರ ಪ್ರಕಾರ ತಮಿಳುನಾಡು ರಾಜ್ಯ ಸರ್ಕಾರವು ಕೊಯಮತ್ತೂರಿನಲ್ಲಿ ಅಂತಾರಾಷ್ಟ್ರೀಯ ಸೌಲಭ್ಯಗಳೊಂದಿಗೆ ಹೊಸ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲು ಯೋಜನೆ ರೂಪಿಸಿದೆ. . ಇತ್ತೀಚಿನ ಸುದ್ದಿ ವರದಿಗಳ ಪ್ರಕಾರ, ತಮಿಳುನಾಡು ರಾಜ್ಯ ಸರ್ಕಾರವು ದೇಶದ ಅತಿ ಹೆಚ್ಚು ಆಸನಗಳು ಇರುವ ಕ್ರೀಡಾಂಗಣವನ್ನು ನಿರ್ಮಿಸಲು ಯೋಜಿಸುತ್ತಿದೆ. ಇದು ಗುಜರಾತ್​ನ ಅಹಮದಾಬಾದ್ ನಗರದಲ್ಲಿರುವ ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಸೌಲಭ್ಯವಾಗಿರುವ ನರೇಂದ್ರ ಮೋದಿ ಸ್ಟೇಡಿಯಮ್​ಗಿಂತಲೂ (Narendra Modi Stadium) ದೊಡ್ಡದಾಗಿರಲಿದೆ. ಈ ಮೂಲಕ ಗುಜರಾತ್​ಗೆ ಕ್ರಿಕೆಟ್​ನಲ್ಲಿ ಸಡ್ಡು ಹೊಡೆಯಲು ದಕ್ಷಿಣದ ರಾಜ್ಯ ತಮಿಳುನಾಡು ಮುಂದಾಗಿದೆ.

ಸಂಸತ್ತಿನ ಚುನಾವಣೆಯ ಸಮಯದಲ್ಲಿ ಕೊಯಮತ್ತೂರಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭರವಸೆ ನೀಡಿದ್ದರು ಎಂದು ರಾಜ್ಯ ಕೈಗಾರಿಕಾ ಸಚಿವ ಟಿಆರ್​ಬಿ ರಾಜಾ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಮಾಹಿತಿ ನೀಡಿದ್ದರು. ಈ ಪ್ರದೇಶದಲ್ಲಿ ಕ್ರಿಕೆಟ್ ಮೂಲಸೌಕರ್ಯ ಹೆಚ್ಚಿಸಲು ಸರ್ಕಾರ ಬಯಸಿದೆ ಎಂದು ಅವರು ಹೇಳಿದ್ದರು.

ಉದಯನಿಧಿ ಸ್ಟಾಲಿನ್ ಭರವಸೆ

ರಾಜ್ಯ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರು ಹೊಸ ಕ್ರಿಕೆಟ್ ಕ್ರೀಡಾಂಗಣಕ್ಕೆ ಸೂಕ್ತ ಸ್ಥಳವನ್ನು ಕಂಡುಹಿಡಿಯುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ. ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದ ನಂತರ ಈ ಕ್ರೀಡಾಂಗಣವು ತಮಿಳುನಾಡಿನ ಎರಡನೇ ಅಂತರರಾಷ್ಟ್ರೀಯ ಗುಣಮಟ್ಟದ ಸ್ಥಳವಾಗಲಿದೆ ಎಂದು ಉದಯನಿಧಿ ಹೇಳಿದ್ದಾರೆ.

ಕ್ರೀಡಾ ಪ್ರೇಮಿಗಳ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಕೊಯಮತ್ತೂರಿನಲ್ಲಿ ಅತ್ಯಾಧುನಿಕ ಕ್ರಿಕೆಟ್ ಕ್ರೀಡಾಂಗಣವನ್ನು ಸ್ಥಾಪಿಸಲು ನಾವು ಮುಂದಾಗಿದ್ದೇವೆ. ನಮ್ಮ ಸಚಿವ ಟಿಆರ್​ಬಿ ರಾಜಾ ಅವರು ಹೇಳಿದಂತೆ ಈ ಕ್ರೀಡಾಂಗಣವು ಚೆನ್ನೈನ ಅಪ್ರತಿಮ ಎಂಎಸಿ ಕ್ರೀಡಾಂಗಣದ ನಂತರ ತಮಿಳುನಾಡಿನ ಎರಡನೇ ಅತಿ ದೊಡ್ಡ ಅಂತರರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ತಾಣವಾಗಲಿದೆ. ನಮ್ಮ ಸರ್ಕಾರ ತಮಿಳುನಾಡಿನಲ್ಲಿ ಕ್ರೀಡಾ ಮೂಲಸೌಕರ್ಯಗಳನ್ನು ಹೆಚ್ಚಿಸಲು ಬದ್ಧರಾಗಿದೆ ” ಎಂದು ಬರೆದುಕೊಂಡಿದ್ದಾರೆ.

ಸ್ಟೇಡಿಯಮ್ ನಿರ್ಮಾಣಕ್ಕೆ ಮೂರು ಅಂತಿಗೊಳಿಸಲಾಗಿದೆ. ಸಚಿವರು ಖುದ್ದಾಗಿ ಪರಿಶೀಲನೆ ನಡೆಸಿದ್ದಾರೆ. ಕೊಯಮತ್ತೂರಿನ ಒಂಡಿಪುದೂರ್ ಪ್ರದೇಶವನ್ನು ಈಗ ಹೊಸ ಕ್ರಿಕೆಟ್ ಕ್ರೀಡಾಂಗಣಕ್ಕೆ ಆಯ್ಕೆ ಮಾಡಲಾಗಿದೆ. ಅಂತರರಾಷ್ಟ್ರೀಯ ಸ್ಥಳದ ನಿರ್ಮಾಣಕ್ಕಾಗಿ ವಿವರವಾದ ಯೋಜನಾ ವರದಿ ತಯಾರಿಸಲು ತಮಿಳುನಾಡು ಸರ್ಕಾರ ಟೆಂಡರ್ ನೀಡಿದೆ.

ವಿಶ್ವದಲ್ಲೇ ಅತಿ ಹೆಚ್ಚು ಆಸನ ಸಾಮರ್ಥ್ಯದ ಕ್ರೀಡಾಂಗಣ

ಹೊಸ ಕ್ರಿಕೆಟ್ ಕ್ರೀಡಾಂಗಣವನ್ನು ಕೊಯಮತ್ತೂರು ನಗರದಿಂದ 16 ಕಿ.ಮೀ ದೂರದಲ್ಲಿ ನಿರ್ಮಾಣಗೊಳ್ಳಲಿದೆ. ವಿಐಪಿ ಮತ್ತು ಕಾರ್ಪೊರೇಟ್ ಸೌಲಭ್ಯಗಳು, ಆಟಗಾರರ ಲಾಂಜ್, ಮಾಧ್ಯಮ ಕೇಂದ್ರ, ಸಾರ್ವಜನಿಕ ಕೆಫೆಟೇರಿಯಾಗಳು ಮತ್ತು ರೆಸ್ಟೋರೆಂಟ್​ಗಳು, ವೀಕ್ಷಣಾ ಗ್ಯಾಲರಿಗಳು ಮತ್ತು ಕ್ರಿಕೆಟ್ ವಸ್ತುಸಂಗ್ರಹಾಲಯದಂತಹ ಉನ್ನತ ಶ್ರೇಣಿಯ ಸೌಲಭ್ಯಗಳನ್ನು ಒಳಗೊಂಡಿರಲಿದೆ.

ತಮಿಳುನಾಡು ಚೆನ್ನೈನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಹೊಂದಿದೆ. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ನ ತವರು ಸ್ಥಳವಾದ ಚೆಪಾಕ್ ಭಾರತದ ಎರಡನೇ ಹಳೆಯ ಕ್ರೀಡಾಂಗಣವಾಗಿದೆ. ಅಹ್ಮದಾಬಾದ್​​ನ ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವಾಗಿದ್ದರೆ, ಮೆಲ್ಬೋರ್ನ್ ಕ್ರಿಕೆಟ್ ಮೈದಾನ (ಎಂಸಿಜಿ) ಆಯಾಮಗಳ ದೃಷ್ಟಿಯಿಂದ ದೊಡ್ಡದಾಗಿದೆ.

ಇದನ್ನೂ ಓದಿ:Paris Olympics 2024 : ವಿನೇಶ್ ಫೋಗಟ್​ ಬೆಳ್ಳಿ ಪದಕದ ಮನವಿ ತೀರ್ಪು ಭಾನುವಾರಕ್ಕೆ ಮುಂದೂಡಿಕೆ

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣ ಮತ್ತು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವನ್ನು ಹೊಸ ಕ್ರೀಡಾಂಗಣಕ್ಕೆ ಮಾದರಿಗಳಾಗಿ ಇಲಾಖೆ ಶಿಫಾರಸು ಮಾಡಿದೆ. ಆಟಗಾರರು ಮತ್ತು ತರಬೇತುದಾರರಿಗೆ ಸಂಶೋಧನೆ ಮತ್ತು ಪುನರ್ವಸತಿ ಸೌಲಭ್ಯಗಳು, ಉತ್ತಮ ಗುಣಮಟ್ಟದ ಮಾಧ್ಯಮ, ಆಡಳಿತಾತ್ಮಕ ಮತ್ತು ಸಾರ್ವಜನಿಕ ಸೌಲಭ್ಯಗಳು ಸೇರಿದಂತೆ ಸುಧಾರಿತ ವಿನ್ಯಾಸ ಪರಿಕಲ್ಪನೆಗಳನ್ನು ಸಂಯೋಜಿಸುವ ಕೆಲಸವನ್ನು ಬಿಡ್​​ದಾರರಿಗೆ ವಹಿಸಲಾಗಿದೆ.

Continue Reading

ಕ್ರೀಡೆ

Jitesh Sharma : ಟೆಕಿ ಜತೆ ಎಂಗೇಜ್ಮೆಂಟ್​ ಮಾಡಿಕೊಂಡ ಜಿತೇಶ್ ಶರ್ಮಾ

Jitesh Sharma : ಲಿಂಕ್ಡ್ಇನ್ ಪ್ರಕಾರ, ಶಲಾಕಾ ಅವರು ಬದ್ನೇರ್​ನ ಪ್ರೊಫೆಸರ್ ರಾಮ್ ಮೇಘೆ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್​ನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್​ ನಲ್ಲಿ ಬಿಇ ಪೂರ್ಣಗೊಳಿಸಿದರು. ನಂತರ ಅವರು ಯಶವಂತರಾವ್ ಚವಾಣ್ ಕಾಲೇಜ್ ಆಫ್ ಎಂಜಿನಿಯರಿಂಗ್ (ವೈಸಿಸಿಇ) ನಿಂದ ವಿಎಲ್ಎಸ್ಐ ವಿನ್ಯಾಸದಲ್ಲಿ ಮಾಸ್ಟರ್ ಆಫ್ ಟೆಕ್ನಾಲಜಿ (M.Tech) ಪಡೆದಿದ್ದಾರೆ.

VISTARANEWS.COM


on

Jitesh Sharma
Koo

ಬೆಂಗಳೂರು : ಪಂಜಾಬ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್​ ಜಿತೇಶ್ ಶರ್ಮಾ (Jitesh Sharma) ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ. ಅವರು ಶಲಾಕಾ ಮಕೇಶ್ವರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಶುಕ್ರವಾರ ಇನ್ಸ್ಟಾಗ್ರಾಮ್​​ನಲ್ಲಿ ಅವರು ತಮ್ಮ ನಿಶ್ಚಿತಾರ್ಥದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಎಂಜಿನಿಯರಿಂಗ್ ಪದವೀಧರೆಯಾಗಿರುವ ನಾಗ್ಪುರ ಮೂಲದ ಶಲಾಕಾ ಮಾಕೇಶ್ವರ್ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಶಲಾಕಾ ಅವರು ಗ್ಲೋಬಲ್ ಲಾಜಿಕ್​ನಲ್ಲಿ ಲಸೀನಿಯರ್ ಟೆಸ್ಟ್ ಎಂಜಿನಿಯರ್ ಮತ್ತು ಅಡ್ವೆಂಟ್ ಸಾಫ್ಟ್ ವೇರ್ ಪ್ರೈವೇಟ್ ಲಿಮಿಟೆಡ್​​ನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಲಿಂಕ್ಡ್ಇನ್ ಪ್ರಕಾರ, ಶಲಾಕಾ ಅವರು ಬದ್ನೇರ್​ನ ಪ್ರೊಫೆಸರ್ ರಾಮ್ ಮೇಘೆ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್​ನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್​ ನಲ್ಲಿ ಬಿಇ ಪೂರ್ಣಗೊಳಿಸಿದರು. ನಂತರ ಅವರು ಯಶವಂತರಾವ್ ಚವಾಣ್ ಕಾಲೇಜ್ ಆಫ್ ಎಂಜಿನಿಯರಿಂಗ್ (ವೈಸಿಸಿಇ) ನಿಂದ ವಿಎಲ್ಎಸ್ಐ ವಿನ್ಯಾಸದಲ್ಲಿ ಮಾಸ್ಟರ್ ಆಫ್ ಟೆಕ್ನಾಲಜಿ (M.Tech) ಪಡೆದಿದ್ದಾರೆ.

ಮಾಹಿತಿ ನೀಡಿದ ಜಿತೇಶ್ ಶರ್ಮಾ

ಜಿತೇಶ್ ಶರ್ಮಾ ಅವರು ಶಲಾಕಾ ಮಾಕೇಶ್ವರ್ ಅವರೊಂದಿಗಿನ ನಿಶ್ಚಿತಾರ್ಥದ ಫೋಟೋಗಳನ್ನು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಜಿತೇಶ್ ಕಪ್ಪು ಪ್ಯಾಂಟ್ ಮತ್ತು ಬೂದು ಬಣ್ಣದ ಶರ್ಟ್ ಧರಿಸಿದ್ದರೆ, ಶಲಾಕಾ ಸಾಂಪ್ರದಾಯಿಕ ಸೀರೆ ಧರಿಸಿದ್ದರು. ಇಬ್ಬರು ಹೂವಿನ ಹಾರಗಳನ್ನು ಹಾಕಿಕೊಂಡಿದ್ದರು. ಆಗಸ್ಟ್ 8ರಂದು ಅವರ ನಿಶ್ಚಿತಾರ್ಥದ ಪೋಸ್ಟ್ ಬಹಿರಂಗಪಡಿಸಿದ್ದಾರೆ.

ಭಾರತದ ಹೊಸ ಟಿ 20 ಐ ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಕ್ರಿಕೆಟಿಗರು ಜಿತೇಶ್ ಶರ್ಮಾ ಮತ್ತು ಶಲಾಕಾ ಮಾಕೇಶ್ವರ್ ಅವರ ನಿಶ್ಚಿತಾರ್ಥಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಸಹೋದರ ಮತ್ತು ಅತ್ತಿಗೆ ಇಬ್ಬರಿಗೂ ಅಭಿನಂದನೆಗಳು ಎಂದು ಸೂರ್ಯಕುಮಾರ್ ಬರೆದಿದ್ದಾರೆ.

ಇದನ್ನೂ ಓದಿ: Paris Olympics 2024 : ನಾಳೆ ಪ್ಯಾರಿಸ್​ ಒಲಿಂಪಿಕ್ಸ್​ ಸಮಾರೋಪ; ಎಲ್ಲಿ ಕಾರ್ಯಕ್ರಮ? ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಎಲ್ಲ ವಿವರ

“ಕ್ಲಬ್​​ಗೆ ಅಭಿನಂದನೆ ಮತ್ತು ಸ್ವಾಗತ” ಎಂದು ಋತುರಾಜ್ ಗಾಯಕ್ವಾಡ್ ಪ್ರತಿಕ್ರಿಯಿಸಿದ್ದಾರೆ. “ನಿಮ್ಮಿಬ್ಬರಿಗೂ ಅಭಿನಂದನೆಗಳು” ಎಂದು ಶಿವಂ ದುಬೆ ಬರೆದಿದ್ದಾರೆ. ವಾಷಿಂಗ್ಟನ್ ಸುಂದರ್, ಮೊಹ್ಸಿನ್ ಖಾನ್ ಮತ್ತು ಪಂಜಾಬ್ ಕಿಂಗ್ಸ್​​​ ಮಾಜಿ ಕೋಚ್ ವಾಸಿಮ್ ಜಾಫರ್ ಸೇರಿದಂತೆ ಭಾರತೀಯ ಕ್ರಿಕೆಟಿಗರು ಜಿತೇಶ್ ಶರ್ಮಾ ಅವರ ನಿಶ್ಚಿತಾರ್ಥಕ್ಕೆ ಶುಭಾಶಯ ಸಲ್ಲಿಸಿದ್ದಾರೆ.

ಟಿ20 ವಿಶ್ವಕಪ್ 2024: ಭಾರತ ತಂಡದಲ್ಲಿ ಜಿತೇಶ್ ಶರ್ಮಾ ಸ್ಥಾನ

ಜಿತೇಶ್ ಶರ್ಮಾ ಭಾರತ ಪರ 9 ಟಿ20 ಪಂದ್ಯಗಳನ್ನಾಡಿದ್ದಾರೆ. ಬಲಗೈ ಬ್ಯಾಟ್ಸ್ಮನ್ 147.05 ಸ್ಟ್ರೈಕ್ ರೇಟ್​​ನಲ್ಲಿ 100 ರನ್ ಗಳಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಟಿ20 ಐ ಸರಣಿಯಲ್ಲಿ ಅವರು ಎರಡು ಪಂದ್ಯಗಳನ್ನು ಆಡಿದ್ದರು ಆದರೆ ಪ್ರಭಾವ ಬೀರಲು ಹೆಣಗಾಡಿದರು. ಐಪಿಎಲ್ 2024 ರಲ್ಲಿ ಅವರು ಪಂಜಾಬ್ ಕಿಂಗ್ಸ್ ಪರ ಕಳಪೆ ಪ್ರದರ್ಶನ ನೀಡಿದ್ದರು.

ಐಪಿಎಲ್ 2024 ರ ಋತುವಿನಲ್ಲಿ 30 ವರ್ಷದ ಬ್ಯಾಟ್ಸ್ಮನ್ 14 ಪಂದ್ಯಗಳಲ್ಲಿ 131.69 ಸ್ಟ್ರೈಕ್ ರೇಟ್ನಲ್ಲಿ 187 ರನ್ ಗಳಿಸಿದ್ದಾರೆ. ಅವರ ಪ್ರದರ್ಶನವು 2024 ರ ಟಿ 20 ವಿಶ್ವಕಪ್ಗೆ ಆಯ್ಕೆದಾರರ ಗಮನವನ್ನು ಸೆಳೆಯಲಿಲ್ಲ, ಅಲ್ಲಿ ಟೀಮ್ ಇಂಡಿಯಾ ಪ್ರಶಸ್ತಿಯನ್ನು ಗೆದ್ದಿತು. ಜಿತೇಶ್ ಈಗ ಮುಂದಿನ ಐಪಿಎಲ್ ಋತುವಿನಲ್ಲಿ ಪ್ರಭಾವ ಬೀರುವ ಮತ್ತು ರಾಷ್ಟ್ರೀಯ ತಂಡಕ್ಕೆ ಮರಳುವ ಗುರಿ ಹೊಂದಿದ್ದಾರೆ.

ಮುಂಬರುವ ದೇಶೀಯ ಕ್ರಿಕೆಟ್ನಲ್ಲಿ ಜಿತೇಶ್ ಶರ್ಮಾ ವಿದರ್ಭ ಪರ ಆಡುವ ನಿರೀಕ್ಷೆಯಿದೆ. ವಿಶ್ವಕಪ್ ತಂಡದಿಂದ ಹೊರಗುಳಿದ ನಂತರ ಅವರು ತಮ್ಮನ್ನು ಸಾಬೀತುಪಡಿಸಲು ಬಯಸುತ್ತಾರೆ. ಐಪಿಎಲ್ ಋತುವಿನ ಮಂದಗತಿಯ ನಂತರ ಪಂಜಾಬ್ ಕಿಂಗ್ಸ್ ಅವರನ್ನು ಉಳಿಸಿಕೊಳ್ಳುತ್ತದೆಯೇ ಎಂಬುದು ಅನಿಶ್ಚಿತವಾಗಿದೆ.

Continue Reading

ಪ್ರಮುಖ ಸುದ್ದಿ

Smriti Mandhana : ವಿರಾಟ್​ ಕೊಹ್ಲಿ ಜತೆ ನನ್ನನ್ನು ಹೋಲಿಕೆ ಮಾಡಬೇಡಿ; ಸ್ಮೃತಿ ಮಂದಾನ ಮನವಿ

Smriti Mandhana : ಮಂದಾನ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಕ್ರಮವಾಗಿ ಮಹಿಳಾ ಪ್ರೀಮಿಯರ್ ಲೀಗ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಾರೆ. ಅವರಿಬ್ಬರ ಅದೇ ಜರ್ಸಿ ಸಂಖ್ಯೆ 18 . ಅನೇಕ ಅಭಿಮಾನಿಗಳು ಮತ್ತು ತಜ್ಞರು ಸ್ಮೃತಿಯನ್ನು ಕೊಹ್ಲಿಗೆ ಹೋಲಿಕೆ ಮಾಡುತ್ತಲೇ ಇದ್ದಾರೆ. ಅವರಿಬ್ಬರೂ ಒಂದೇ ರೀತಿಯ ವರ್ತನೆ ಮತ್ತು ಶೈಲಿಯನ್ನೂ ಹೊಂದಿದ್ದಾರೆ. ಆಟದ ಬಗ್ಗೆ ಭಾವೋದ್ರಿಕ್ತರಾಗುತ್ತಾರೆ.

VISTARANEWS.COM


on

Smriti Mandhana
Koo

ನವದೆಹಲಿ: ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಜತೆ ತನ್ನನ್ನು ಹೋಲಿಕೆ ಮಾಡಬಾರದಾಗಿ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂದಾನ (Smriti Mandhana) ಮನವಿ ಮಾಡಿದ್ದಾರೆ. ತಾವು ಧರಿಸುವ ನಂ.18 ಜರ್ಸಿಯ ಆಧಾರದ ಮೇಲೆ ಜನರು ಅವಳನ್ನು ಅವನೊಂದಿಗೆ ಹೋಲಿಸಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಮೃತಿ ಮಂದಾನ ಅವರನ್ನು ಭಾರತೀಯ ಕ್ರಿಕೆಟ್​ನ ರಾಣಿ ಎಂದು ಕರೆಯಲಾಗುತ್ತದೆ. ಏಕೆಂದರೆ ಅವರು ಎಲ್ಲಾ ಮೂರು ಸ್ವರೂಪಗಳಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ. ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡದ ಅತ್ಯುತ್ತಮ ಬ್ಯಾಟರ್​ಗಳಲ್ಲಿ ಒಬ್ಬರು.

ವಿರಾಟ್ ಕೊಹ್ಲಿ ಅವರು ಕ್ರಿಕೆಟ್​ನ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರಾಗಿರುವುದರಿಂದ ಅವರಿಗೆ ಯಾವುದೇ ಹೋಲಿಕೆ ಇಲ್ಲ. ಸಚಿನ್ ತೆಂಡೂಲ್ಕರ್ ಮತ್ತು ವಿವಿಯನ್ ರಿಚರ್ಡ್ಸ್ ಅವರಂತೆಯೇ ಅವರು ಪ್ರತ್ಯೇಕ ಕ್ರಿಕೆಟ್ ಅಧ್ಯಾಯ ಹೊಂದಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಹಲವಾರು ಸಾಧನೆಗಳನ್ನು ಮಾಡಿದ್ದಾರೆ.

ಮಂದಾನ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಕ್ರಮವಾಗಿ ಮಹಿಳಾ ಪ್ರೀಮಿಯರ್ ಲೀಗ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಾರೆ. ಅವರಿಬ್ಬರ ಅದೇ ಜರ್ಸಿ ಸಂಖ್ಯೆ 18 . ಅನೇಕ ಅಭಿಮಾನಿಗಳು ಮತ್ತು ತಜ್ಞರು ಸ್ಮೃತಿಯನ್ನು ಕೊಹ್ಲಿಗೆ ಹೋಲಿಕೆ ಮಾಡುತ್ತಲೇ ಇದ್ದಾರೆ. ಅವರಿಬ್ಬರೂ ಒಂದೇ ರೀತಿಯ ವರ್ತನೆ ಮತ್ತು ಶೈಲಿಯನ್ನೂ ಹೊಂದಿದ್ದಾರೆ. ಆಟದ ಬಗ್ಗೆ ಭಾವೋದ್ರಿಕ್ತರಾಗುತ್ತಾರೆ.

ಸ್ಮೃತಿ ಮಂದಾನ ಅವರು ಹೋಲಿಕೆಗಳನ್ನು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ. ವಿರಾಟ್ ಕೊಹ್ಲಿಯನ್ನು ಶ್ರೇಷ್ಠ ಆಟಗಾರ ಎಂದು ಕರೆದ ಅವರು, ಅವರು ಸಾಕಷ್ಟು ಸಾಧನೆ ಮಾಡಿರುವುದರಿಂದ ಜನರು ನನ್ನನ್ನು ಕೊಹ್ಲಿ ಎಂದು ಕರೆಯುವುದು ಆಧಾರರಹಿತ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ಒಬ್ಬ ಶ್ರೇಷ್ಠ ಆಟಗಾರ. ಅವರು ತಮ್ಮ ವೃತ್ತಿಜೀವನದಲ್ಲಿ ಭಾರತೀಯ ಕ್ರಿಕೆಟ್​ ಸಾಕಷ್ಟು ಕೊಡುಗೆಗಳನ್ನು ಕೊಟ್ಟಿದ್ದಾರೆ. ನಾನು ಹೋಲಿಕೆಗಳನ್ನು ಇಷ್ಟಪಡುವುದಿಲ್ಲ, ನಾನು ನಂ.18 ಜರ್ಸಿ ಧರಿಸಿದ್ದೇನೆ ಎಂಬ ಕಾರಣಕ್ಕೆ ಅವನನ್ನು ನನ್ನೊಂದಿಗೆ ಹೋಲಿಸಬೇಡಿ ಎಂದು ಮಂದಾನ ತಮ್ಮ ಹೇಳಿಕೆಯನ್ನು ಪುನರಾವರ್ತಿಸಿದ್ದಾರೆ.

2024ರ ಟಿ20 ವಿಶ್ವಕಪ್​ಲ್ಲಿ ಕಣಕ್ಕಿಳಿಯಲಿದ್ದಾರೆ ಸ್ಮೃತಿ

ಕಳೆದ ಕೆಲವು ತಿಂಗಳುಗಳಿಂದ ಸ್ಮೃತಿ ಮಂದಾನ ಉತ್ತಮ ಫಾರ್ಮ್​ನಲ್ಲಿದ್ದಾರೆ. ಬ್ಯಾಟರ್​ ಆಟದ ಎಲ್ಲಾ ಮೂರು ಸ್ವರೂಪಗಳಲ್ಲಿ ತಂಡಕ್ಕಾಗಿ ನಿರಂತರ ರನ್​ಗಳನ್ನು ಗಳಿಸುತ್ತಿದ್ದಾರೆ. ವೈಟ್-ಬಾಲ್ ಮತ್ತು ರೆಡ್-ಬಾಲ್ ಕ್ರಿಕೆಟ್​​ನಲ್ಲಿ ತಂಡದ ಪ್ರಾಬಲ್ಯಕ್ಕೆ ಅವರೂ ಕಾರಣ.

ಸ್ಮೃತಿ ಮಂದಾನ 2024ರ ಟಿ20 ವಿಶ್ವಕಪ್​​ನಲ್ಲಿ ಆಡಲಿದ್ದಾರೆ. ಬ್ಯಾಟ್ಸ್ಮನ್ ಪಂದ್ಯಾವಳಿಯಲ್ಲಿ ಬ್ಯಾಟಿಂಗ್​ ಫಾರ್ಮ್ ಮುಂದುವರಿಸಲು ಉತ್ಸುಕರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅವರು ಮಾಡುತ್ತಿರುವ ಪ್ರದರ್ಶನವನ್ನು ಮುಂದುವರಿಸಿದರೆ, ಭಾರತವು ಪ್ರಶಸ್ತಿ ಗೆಲ್ಲಬಹುದು.

ಇದನ್ನೂ ಓದಿ: Saina Nehwal : ನನ್ನ ಸ್ಮ್ಯಾಶ್​ ತಡೆಯಲು ಬುಮ್ರಾಗೆ ಸಾಧ್ಯವಿಲ್ಲ; ಕ್ರಿಕೆಟ್​ಗೆ ಹೆಚ್ಚು ಆದ್ಯತೆ ಬಗ್ಗೆ ತಕರಾರು ಎತ್ತಿದ ಸೈನಾ ನೆಹ್ವಾಲ್​

ಅಕ್ಟೋಬರ್ 3 ರಿಂದ 20 ರವರೆಗೆ ಏಷ್ಯನ್ ಕೌಂಟಿಯಲ್ಲಿ ಪಂದ್ಯಾವಳಿ ನಡೆಯಲಿದೆ. 2024ರ ಟಿ20 ವಿಶ್ವಕಪ್ ಟೂರ್ನಿಯು 18 ದಿನಗಳ ಕಾಲ ನಡೆಯಲಿದ್ದು, 10 ತಂಡಗಳು ಬಾಂಗ್ಲಾದೇಶದ ಎರಡು ಸ್ಥಳಗಳಲ್ಲಿ 23 ಪಂದ್ಯಗಳನ್ನು ಆಡಲಿವೆ.

Continue Reading

ಪ್ರಮುಖ ಸುದ್ದಿ

Rahul Dravid : ಕೋಚಿಂಗ್​ ಅವಧಿಯ ಅತ್ಯಂತ ಕೆಟ್ಟ ಸರಣಿಯನ್ನು ವಿವರಿಸಿದ ರಾಹುಲ್ ದ್ರಾವಿಡ್​

Rahul Dravid : ಸೆಂಚೂರಿಯನ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು 113 ರನ್​ಗಳಿಂದ ಗೆಲ್ಲುವ ಮೂಲಕ ಭಾರತ ತಂಡವು ಪ್ರವಾಸವನ್ನು ಉತ್ತಮವಾಗಿ ಪ್ರಾರಂಭಿಸಿತ್ತು. ದಕ್ಷಿಣ ಆಫ್ರಿಕಾದಲ್ಲಿ ತಮ್ಮ ಮೊದಲ ಸರಣಿಯನ್ನು ಗೆಲ್ಲುವ ಅಂಚಿನಲ್ಲಿತ್ತು. ಆದಾಗ್ಯೂ, ದಕ್ಷಿಣ ಆಫ್ರಿಕಾ ಕೊನೆಯ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಗಮನಾರ್ಹ ಪುನರಾಗಮನ ಮಾಡಿತು. ತವರಿನಲ್ಲಿ ಭಾರತದ ವಿರುದ್ಧ ಅಜೇಯ ಗೆಲುವು ದಾಖಲಿಸಿತು.

VISTARANEWS.COM


on

Rahul Dravid
Koo

ನವದೆಹಲಿ: ಭಾರತದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರು ತಮ್ಮ ಕೋಚಿಂಗ್ ಅವಧಿಯ ಅತ್ಯಂತ ಕೆಟ್ಟ ಸೋಲನ್ನು ನೆನಪಿಸಿಕೊಂಡಿದ್ದಾರೆ. ಅವರ ಪ್ರಕಾರ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲದಿರುವುದೇ ಅತ್ಯಂತ ಬೇಸರದ ವಿಷಯವಾಗಿದೆ. ವಿಶೇಷ ಏನೆಂದರೆ ದ್ರಾವಿಡ್ ಅವರನ್ನು ನವೆಂಬರ್ 2021 ರಲ್ಲಿ ಮತ್ತು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಸ್ವಲ್ಪ ಮುಂಚಿತವಾಗಿ ಭಾರತದ ಮುಖ್ಯ ಕೋಚ್ ಆಗಿ ನೇಮಿಸಲಾಗಿತ್ತು. ಆರಂಭದಲ್ಲೇ ಅವರಿಗೆ ಹಿನ್ನಡೆಯಾಗಿತ್ತು.

ಸೆಂಚೂರಿಯನ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು 113 ರನ್​ಗಳಿಂದ ಗೆಲ್ಲುವ ಮೂಲಕ ಭಾರತ ತಂಡವು ಪ್ರವಾಸವನ್ನು ಉತ್ತಮವಾಗಿ ಪ್ರಾರಂಭಿಸಿತ್ತು. ದಕ್ಷಿಣ ಆಫ್ರಿಕಾದಲ್ಲಿ ತಮ್ಮ ಮೊದಲ ಸರಣಿಯನ್ನು ಗೆಲ್ಲುವ ಅಂಚಿನಲ್ಲಿತ್ತು. ಆದಾಗ್ಯೂ, ದಕ್ಷಿಣ ಆಫ್ರಿಕಾ ಕೊನೆಯ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಗಮನಾರ್ಹ ಪುನರಾಗಮನ ಮಾಡಿತು. ತವರಿನಲ್ಲಿ ಭಾರತದ ವಿರುದ್ಧ ಅಜೇಯ ಗೆಲುವು ದಾಖಲಿಸಿತು.

ಸರಣಿಯನ್ನು ನೆನಪಿಸಿಕೊಂಡ ದ್ರಾವಿಡ್, ಇದು ಅತ್ಯಂತ ಕೆಟ್ಟ ಪ್ರದರ್ಶನ ಎಂದು ಹೇಳಿದರು.

“ಅತ್ಯಂತ ಕಡಿಮೆ ಅಂಕ ನೀಡುವ ತಮ್ಮ ಸರಣಿ ಯಾವುದು ಎಂದು ನೀವು ನನ್ನನ್ನು ಕೇಳಿದರೆ, ನನ್ನ ವೃತ್ತಿಜೀವನದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ಎಂದು ನಾನು ಹೇಳುತ್ತೇನೆ. ನಾವು ಸೆಂಚೂರಿಯನ್ನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿದ್ದೆವು. ನಂತರ ನಾವು ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಿದ್ದೆವು. ನಿಮಗೆ ತಿಳಿದಿರುವಂತೆ ನಾವು ದಕ್ಷಿಣ ಆಫ್ರಿಕಾದಲ್ಲಿ ಎಂದಿಗೂ ಸರಣಿಯನ್ನು ಗೆದ್ದಿಲ್ಲ. ಆ ಸರಣಿಯನ್ನು ಗೆಲ್ಲಲು ಇದು ನಮಗೆ ನಿಜವಾಗಿಯೂ ದೊಡ್ಡ ಅವಕಾಶವಾಗಿತ್ತು. ನಮ್ಮ ಕೆಲವು ಹಿರಿಯ ಆಟಗಾರರು ಅಲ್ಲಿ ಇರಲಿಲ್ಲ, “ಎಂದು ದ್ರಾವಿಡ್ ಹೇಳಿದ್ದಾರೆ.

ಸರಣಿಯ ಕೊನೆಯ ಎರಡು ಟೆಸ್ಟ್ ಪಂದ್ಯಗಳನ್ನು ಗೆಲ್ಲಲು ಅವಕಾಶವಿದೆ. ಪಂದ್ಯವನ್ನು ಮುಕ್ತಾಯಗೊಳಿಸಲು ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಗುರಿಯನ್ನು ನಿಗದಿಪಡಿಸಬಹುದಿತ್ತು ಎಂದು ಅವರು ಬಹಿರಂಗಪಡಿಸಿದರು.

ಸರಣಿಯಲ್ಲಿ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಆ ಸರಣಿಯಲ್ಲಿ ನಾವು ಕೆಲವು ಹಿರಿಯ ಆಟಗಾರರ ಸೇವೆ ಕಳೆದುಕೊಂಡಿದ್ದೆವು. ಆದರೂ ಗೆಲುವಿಗೆ ಹತ್ತಿರದಲ್ಲಿದ್ದೆವು. ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯಗಳಲ್ಲಿ ಮೂರನೇ ಇನ್ನಿಂಗ್ಸ್​ನಲ್ಲಿ ನಮಗೆ ದೊಡ್ಡ ಅವಕಾಶವಿತ್ತು. ನಾವು ಯೋಗ್ಯವಾದ ಸ್ಕೋರ್ ಅನ್ನು ಹೊಂದಿಸಬಹುದಿತ್ತು ಮತ್ತು ಪಂದ್ಯವನ್ನು ಗೆಲ್ಲಬಹುದಿತ್ತು. ಆದರೆ ದಕ್ಷಿಣ ಆಫ್ರಿಕಾ ಉತ್ತಮವಾಗಿ ಆಡಿತು. ಅವರು ನಾಲ್ಕನೇ ಇನ್ನಿಂಗ್ಸ್ ನಲ್ಲಿ ಹಿನ್ನಡೆಯಾಯಿತು. ಆದ್ದರಿಂದ ಅದು ಬಹುಶಃ ನನ್ನ ಕೋಚಿಂಗ್​​ನಲ್ಲಿ ನನ್ನ ಅತ್ಯಂತ ಕೆಳಮಟ್ಟದ ಪ್ರದರ್ಶನ ಎಂದು ನಾನು ಹೇಳುತ್ತೇನ, “ಎಂದು ಅವರು ಹೇಳಿದರು.

ಇದನ್ನೂ ಓದಿ: Arshad Nadeem : ಒಲಿಂಪಿಕ್ಸ್ ದಾಖಲೆಯೊಂದಿಗೆ ಬಂಗಾರ ಗೆದ್ದ ಅರ್ಷದ್ ನದೀಮ್​ಗೆ ಪಾಕ್​ ಪ್ರಧಾನಿ ಕೊಟ್ಟ ಬಹುಮಾನ ಕೇವಲ 3 ಲಕ್ಷ ರೂಪಾಯಿ!

ಭಾರತವು ಎರಡನೇ ಟೆಸ್ಟ್​​ನಲ್ಲಿ ಕೊಹ್ಲಿಯ ಸೇವೆಯನ್ನೂ ಕಳೆದುಕೊಂಡಿತ್ತು. ಪರಿಣಾಮವಾಗಿ, ಕೆ.ಎಲ್.ರಾಹುಲ್ ಎರಡನೇ ಟೆಸ್ಟ್ ನಲ್ಲಿ ಭಾರತವನ್ನು ಮುನ್ನಡೆಸಿದರು. ದಕ್ಷಿಣ ಆಫ್ರಿಕಾ 240 ರನ್​ ಬೆನ್ನಟ್ಟುವ ಮೂಲಕ ಪಂದ್ಯವನ್ನು ಗೆದ್ದಿತು. ನಂತರ ಅಂತಿಮ ಟೆಸ್ಟ್ ನಲ್ಲಿ 212 ರನ್ ಗಳನ್ನು ಬೆನ್ನಟ್ಟಿತು ಮತ್ತು ಸರಣಿಯನ್ನು 2-1ರಿಂದ ಗೆದ್ದುಕೊಂಡಿತು. ಪ್ರವಾಸದ ನಂತರ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರಿಂದ ಕೊಹ್ಲಿ ಅವರ ನಾಯಕತ್ವದ ಅವಧಿಯನ್ನು ಈ ಸರಣಿಯು ಕೊನೆಗೊಳಿಸಿತು.

Continue Reading
Advertisement
Vastu Tips
ಧಾರ್ಮಿಕ26 mins ago

Vastu Tips: ವಿದ್ಯುತ್ ಕಂಬದಿಂದ ಮನೆಗೆ ನಕಾರಾತ್ಮಕ ಶಕ್ತಿ ತಟ್ಟಬಹುದು ಎನ್ನುತ್ತಾರೆ ವಾಸ್ತು ಪರಿಣತರು!

Dog meat
ಕರ್ನಾಟಕ28 mins ago

Dog Meat: ಅಬ್ದುಲ್‌ ರಜಾಕ್‌ ಬಾಕ್ಸ್‌ನಲ್ಲಿದ್ದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಹೈದರಾಬಾದ್‌ ಲ್ಯಾಬ್‌ ವರದಿ

Madhabi Puri Buch
ಪ್ರಮುಖ ಸುದ್ದಿ56 mins ago

Madhabi Puri Buch: ಅದಾನಿ ಹಗರಣದಲ್ಲಿ ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್‌ ಭಾಗಿ; ಯಾರಿವರು? ಹಿನ್ನೆಲೆ ಏನು?

Paris Olympics 2024
ಪ್ರಮುಖ ಸುದ್ದಿ59 mins ago

Paris Olympics 2024: ಇಂದು ಪ್ಯಾರಿಸ್​ ಒಲಿಂಪಿಕ್ಸ್​ ಕ್ರೀಡಾಕೂಟದ ಸಮಾರೋಪ; ಕಾರ್ಯಕ್ರಮದ ಎಲ್ಲ ವಿವರ ಇಲ್ಲಿದೆ

Karnataka weather Forecast
ಮಳೆ59 mins ago

Karnataka Weather : ಬೆಂಗಳೂರಿನಲ್ಲಿಂದು ಗುಡುಗು ಸಹಿತ ಸಾಧಾರಣ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರು ನಂಬಿದ ವ್ಯಕ್ತಿಗಳಿಂದ ಮೋಸ ಹೋಗುವಿರಿ

natwar singh
ದೇಶ5 hours ago

Natwar Singh: ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವ ನಟ್ವರ್‌ ಸಿಂಗ್‌ ನಿಧನ; ಗಣ್ಯರ ಸಂತಾಪ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧಿಗಳ ಹೋರಾಟ ಮುಕ್ತಾಯ; ಈ ಬಾರಿ ಆರು ಪದಕಗಳು ಮಾತ್ರ

Hindenburg
ವಾಣಿಜ್ಯ7 hours ago

Hindenburg: ಅದಾನಿ ವಿದೇಶಿ ಕಂಪನಿಯಲ್ಲಿ ಸೆಬಿ ಅಧ್ಯಕ್ಷೆಯದ್ದೂ ಪಾಲು; ಹಿಂಡನ್‌ಬರ್ಗ್‌ ಮತ್ತೊಂದು ಸ್ಫೋಟಕ ವರದಿ

Narendra Modi Stadium
ಪ್ರಮುಖ ಸುದ್ದಿ7 hours ago

Narendra Modi Stadium : ಗುಜರಾತ್​ಗೆ ಸಡ್ಡು; ತಮಿಳುನಾಡಿನಲ್ಲಿ ನಿರ್ಮಾಣವಾಗಲಿದೆ ನರೇಂದ್ರ ಮೋದಿ ಸ್ಟೇಡಿಯಮ್​​ಗಿಂತ ದೊಡ್ಡ ಕ್ರಿಕೆಟ್​ ಸೌಲಭ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌