AUS vs WI: ತವರಿನಲ್ಲೇ ಆಸೀಸ್​ ಸೊಕ್ಕಡಗಿಸಿದ ವಿಂಡೀಸ್​​; 27 ವರ್ಷಗಳ ಬಳಿಕ ಐತಿಹಾಸಿಕ ಗೆಲುವು - Vistara News

ಕ್ರೀಡೆ

AUS vs WI: ತವರಿನಲ್ಲೇ ಆಸೀಸ್​ ಸೊಕ್ಕಡಗಿಸಿದ ವಿಂಡೀಸ್​​; 27 ವರ್ಷಗಳ ಬಳಿಕ ಐತಿಹಾಸಿಕ ಗೆಲುವು

ಬ್ಯಾಟಿಂಗ್​ ವೇಳೆ ಕಾಲಿನ ಬೆರಳು ಮುರಿತಕ್ಕೊಳಗಾದ ಶಮರ್ ಜೋಸೆಫ್(Shamar Joseph)​ ಅವರ ಘಾತಕ ಬೌಲಿಂಗ್​ ದಾಳಿಗೆ ಸರ್ವಪತನ ಕಂಡ ಆಸ್ಟ್ರೇಲಿಯಾ 8 ರನ್​ಗಳ ಸೋಲಿಗೆ ತುತ್ತಾಯಿತು.

VISTARANEWS.COM


on

West Indies team pose after their first Test win in Australia in 27 years
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬ್ರಿಸ್ಬೇನ್: ಬಲಿಷ್ಠ ಆಸ್ಟ್ರೇಲಿಯಾ(AUS vs WI) ತಂಡಕ್ಕೆ ತವರಿನಲ್ಲೇ ಭಾರೀ ಮುಖಭಂಗವಾಗಿದೆ. ವೆಸ್ಟ್​ ಇಂಡೀಸ್​ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ(Australia vs West Indies 2nd Test) ಆಘಾತಕಾರಿ ಸೋಲು ಕಂಡಿದೆ. ಬ್ಯಾಟಿಂಗ್​ ವೇಳೆ ಕಾಲಿನ ಬೆರಳು ಮುರಿತಕ್ಕೊಳಗಾದ ಶಮರ್ ಜೋಸೆಫ್(Shamar Joseph)​ ಅವರ ಘಾತಕ ಬೌಲಿಂಗ್​ ದಾಳಿಗೆ ಸರ್ವಪತನ ಕಂಡ ಆಸ್ಟ್ರೇಲಿಯಾ 8 ರನ್​ಗಳ ಸೋಲಿಗೆ ತುತ್ತಾಯಿತು. 2 ಪಂದ್ಯಗಳ ಟೆಸ್ಟ್​ ಸರಣಿ 1-1 ಸಮಬಲದೊಂದಿಗೆ ಡ್ರಾ ಗೊಂಡಿತು.

8 ರನ್​ಗಳ ರೋಚಕ ಗೆಲುವು ಸಾಧಿಸಿದ ವೆಸ್ಟ್ ಇಂಡೀಸ್ ಐತಿಹಾಸಿಕ ಗೆಲುವಿನ ಸಾಧನೆ ಮಾಡಿತು. ಇದು ವಿಂಡೀಸ್​ಗೆ 27 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಒಲಿದ ಗೆಲುವುವಾಗಿದೆ. ವೆಸ್ಟ್​ ಇಂಡೀಸ್​ ಕೊನೆಯ ಬಾರಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ ಗೆಲುವು ಕಂಡದ್ದು 1997 ರಲ್ಲಿ. ಇದು ಮಾತ್ರವಲ್ಲದೆ ಹಗಲು-ರಾತ್ರಿ(ಪಿಂಕ್​ ಬಾಲ್​ ಟೆಸ್ಟ್​) ಟೆಸ್ಟ್​ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ವಿಶ್ವದ ಮೊದಲ ತಂಡ ಎಂಬ ಹಿರಿಮೆಗೂ ವಿಂಡೀಸ್​ ತಂಡ ಪಾತ್ರವಾಗಿದೆ.

60 ರನ್​ಗೆ 2 ವಿಕೆಟ್​ ಕಳೆದುಕೊಂಡು ನಾಲ್ಕನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾಕ್ಕೆ ಪಂದ್ಯ ಗೆಲ್ಲಲು 156 ರನ್​ಗಳ ಅತ್ಯವಿತ್ತು. ಕೈಯಲ್ಲಿ ಇನ್ನೂ 8 ವಿಕೆಟ್​ ಕೂಡ ಇತ್ತು. ಎಲ್ಲರ ನಿರೀಕ್ಷೆ ಕೂಡ ಆಸ್ಟ್ರೇಲಿಯಾ ತಂಡದ ಪರವಾಗಿಯೇ ಇತ್ತು. ಆದರೆ, ಆತ್ಮವಿಶ್ವಾಸ ಕಳೆದುಕೊಳ್ಳದೆ ಆಡಲಿಳಿದ ವಿಂಡೀಸ್​ ಆಟಗಾರರು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ಸಂಘಟಿಸಿ ಆಸೀಸ್​ಗೆ ಸೋಲಿನ ಶಾಕ್​ ನೀಡುವಲ್ಲಿ ಯಶಸ್ವಿಯಾಗಿತು. 33 ರನ್​ ಗಳಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದ್ದ ಸ್ಟೀವನ್​ ಸ್ಮಿತ್ ನಾಲ್ಕನೇ ದಿನದಾಟದಲ್ಲಿಯೂ ಏಕಾಂಗಿಯಾಗಿ ಹೋರಾಡಿ ಅಜೇಯ 91 ರನ್​ ಬಾರಿಸಿದರು. ಮತ್ತೊಂದು ತುದಿಯಲ್ಲಿ ಅವರಿಗೆ ಯಾರು ಸಾಥ್​ ನೀಡಿದ ಕಾರಣ ಸೋಲು ಎದುರಾಯಿತು. 9 ರನ್​ ಗಳಿಸಿದ್ದ ಕ್ಯಾಮರೂನ್​ ಗ್ರೀನ್​ 42 ರನ್​ ಗಳಿಸಿ ಔಟಾದರು. ಅಂತಿಮವಾಗಿ ಕಾಂಗರೂ ಪಡೆ 207 ರನ್ ಗಳಿಗೆ ಆಲೌಟಾಗಿ ಸೋಲು ಕಂಡಿತು. ಮೊದಲ ಇನಿಂಗ್ಸ್​ನಲ್ಲಿ 311 ರನ್​ಗಳಿಸಿದ್ದ ವಿಂಡೀಸ್​ ದ್ವಿತೀಯ ಇನಿಂಗ್ಸ್​ನಲ್ಲಿ 193ರನ್​ ಬಾರಿಸಿತ್ತು.

ಇದನ್ನೂ ಓದಿ IND vs ENG: ಬೆನ್ ಸ್ಟೋಕ್ಸ್ ಕ್ಲೀನ್​ ಬೌಲ್ಡ್​ ಮಾಡಿ ಕಪಿಲ್​ ದೇವ್ ದಾಖಲೆ ಸರಿಗಟ್ಟಿದ ಅಶ್ವಿನ್

ಸೇಡು ತೀರಿಸಿಕೊಂಡ ಶಮರ್ ಜೋಸೆಫ್


ವೆಸ್ಟ್ ಇಂಡೀಸ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಶಮರ್ ಜೋಸೆಫ್ ಬ್ಯಾಟಿಂಗ್​ ನಡೆಸುವ ವೇಳೆ ಮಿಚೆಲ್​ ಸ್ಟಾರ್ಕ್​ ಅವರು ಎಸೆತ ಯಾರ್ಕರ್​ ಎಸೆತಕ್ಕೆ ಕಾಲಿನ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಗಾಯಗೊಂಡ ಜೋಸೆಫ್​ಗೆ ಫಿಸಿಯೋ ಪ್ರಥಮ ಚಿಕಿತ್ಸೆ ನೀಡಿದರೂ ಕೂಡ ಗಾಯ ಗಂಭೀರವಾದ ಪರಿಣಾಮ ಅವರಿಂದ ಎದ್ದು ನಿಲ್ಲಲೂ ಆಗಿರಲಿಲ್ಲ. ಹೀಗಾಗಿ ಅವರು ರಿಟೈರ್ಡ್​ ಔಟ್​ ಆಗಿ ಕುಂಟುತಾ ಮೈದಾನ ತೊರೆದಿದ್ದರು. ಅವರನ್ನು ಸಹ ಆಟಗಾರರು ಭುಜದ ಬಲದಿಂದ ಮೈದಾನದಿಂದ ಡ್ರೆಸ್ಸಿಂಗ್​ ರೂಮ್​ಗೆ ಕರೆ ತಂದಿದ್ದರು. ನೋವಿನಿಂದ ನರಳಿದ್ದ ಅವರು ಈ ಸೇಡನ್ನು ಬೌಲಿಂಗ್​ ಮೂಲಕ ತೋರ್ಪಡಿಸಿ 7 ವಿಕೆಟ್​ ಕಿತ್ತು ಆಸೀಸ್​ ಸೊಕ್ಕಡಗಿಸಿದರು.

Shamar Joseph
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Team India Coach: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ; ಮೇ 27 ಕೊನೆಯ ದಿನ

Team India Coach: ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ದ್ರಾವಿಡ್ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕವೇ ಕೋಚ್​ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಆದರೆ, ಬಿಸಿಸಿಐ ಟಿ20 ವಿಶ್ವಕಪ್​ ತನಕ ಅವರನ್ನು ಮುಂದುವರಿಯುವಂತೆ ಒತ್ತಾಯ ಮಾಡಿತ್ತು. ಹೀಗಾಗಿ ದ್ರಾವಿಡ್​ ಟಿ20 ವಿಶ್ವಕಪ್ ತನಕ ಈ ಹುದ್ದೆಯಲ್ಲಿ ಮುಂದುವರಿದರು.

VISTARANEWS.COM


on

Team India Coach
Koo

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಟೂರ್ನಿಯ ಬಳಿಕ ಭಾರತ ತಂಡ ಕೋಚ್​ ಬದಲಾವಣೆಯಾಗುವುದು ಖಚಿತವಾಗಿದೆ. ಸದ್ಯ ಕೋಚ್​ ಆಗಿರುವ ರಾಹುಲ್​ ದ್ರಾವಿಡ್​ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಹೀಗಾಗಿ, ಮುಂದಿನ ಮೂರೂವರೆ ವರ್ಷಗಳ ಅವಧಿಗೆ ಮುಖ್ಯ ಕೋಚ್ ಹುದ್ದೆಗಾಗಿ(Team India Coach) ಬಿಸಿಸಿಐ(BCCI) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಶುಕ್ರವಾರವಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಾವು 3 ವರ್ಷಗಳ ದೀರ್ಘ ಅವಧಿಗಾಗಿ ಕೋಚ್​ ಹುಡುಕಾಟದಲ್ಲಿದ್ದೇವೆ ಎಂದು ಹೇಳಿದ್ದರು. ಜತೆಗೆ ದ್ರಾವಿಡ್ ಅವರಿಗೂ​ ಮರುಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದರು. ಆದರೆ, ದ್ರಾವಿಡ್​ ಕೋಚ್​ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ಹೊಂದಿಲ್ಲ ಎಂದು ತಿಳಿದುಬಂದಿದೆ.

ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಆಯ್ಕೆಯಾದ ಹೊಸ ಕೋಚ್‌ ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ದ್ರಾವಿಡ್ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕವೇ ಕೋಚ್​ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಆದರೆ, ಬಿಸಿಸಿಐ ಟಿ20 ವಿಶ್ವಕಪ್​ ತನಕ ಅವರನ್ನು ಮುಂದುವರಿಯುವಂತೆ ಒತ್ತಾಯ ಮಾಡಿತ್ತು. ಹೀಗಾಗಿ ದ್ರಾವಿಡ್​ ಟಿ20 ವಿಶ್ವಕಪ್ ತನಕ ಈ ಹುದ್ದೆಯಲ್ಲಿ ಮುಂದುವರಿದರು.

ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಹಲವು ಬಾರಿ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಕೋಚ್ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. 2022ರಲ್ಲಿ ಜಿಂಬಾಬ್ವೆ ಹಾಗೂ ಐರ್ಲೆಂಡ್ ನಡುವಿನ ಸರಣಿಗೆ ಲಕ್ಷ್ಮಣ್ ಕೋಚ್ ಆಗಿ ಕಾರ್ಯನಿರ್ವಹಿಸಿ ಯಶಸ್ಸು ಕಂಡಿದ್ದರು. ಇವರ ಮಾರ್ಗದರ್ಶನದಲ್ಲೇ ಅಂಡರ್ 19 ವಿಶ್ವ ಕಪ್ ಕೂಡ ಟೀಮ್​ ಇಂಡಿಯಾ ಗೆದ್ದಿತ್ತು. ಹೀಗಾಗಿ ದ್ರಾವಿಡ್​ ಬಳಿಕ ಟೀಮ್​ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್ ಸೂಕ್ತ ಎಂದು ಬಿಸಿಸಿಐ ನಿರ್ಧರಿಸಿದೆ ಎನ್ನಲಾಗಿದೆ.

ಏಕದಿನ ವಿಶ್ವಕಪ್‌ ಸೋಲಿನ ಬಳಿಕ ಮಾಧ್ಯಮದವರ ಜತೆ ಮಾತನಾಡಿದ್ದ ರಾಹುಲ್‌ ದ್ರಾವಿಡ್‌, “ಕೋಚ್‌ ಹುದ್ದೆಯಲ್ಲಿ ಮುಂದುವರಿಯುವ ಅಥವಾ ತೊರೆಯುವ ಕುರಿತು ಇನ್ನೂ ಯೋಚಿಸಿಲ್ಲ” ಎಂದು ಹೇಳಿದ್ದರು.

Continue Reading

ಕ್ರೀಡೆ

Thailand Open 2024: ಇಂದಿನಿಂದ ಥಾಯ್ಲೆಂಡ್‌ ಓಪನ್‌ ಟೂರ್ನಿ; ಚಿರಾಗ್‌-ಸಾತ್ವಿಕ್‌ ಜೋಡಿ ಮೇಲೆ ಪದಕ ಭರವಸೆ

Thailand Open 2024: ಸಿಂಧು ಅನುಪಸ್ಥಿತಿಯಲ್ಲಿ, ಅಶ್ಮಿತಾ ಚಲಿಹಾ, ಮಾಳವಿಕಾ ಬನ್ಸೋಡ್ ಮತ್ತು ಆಕರ್ಷಿ ಕಶ್ಯಪ್ ಅವರು ಮಹಿಳಾ ಸಿಂಗಲ್ಸ್‌ನಲ್ಲಿ ಆಡಲಿದ್ದಾರೆ. ಮಾಳವಿಕಾ ಅಗ್ರ ಶ್ರೇಯಾಂಕದ ಚೀನಾದ ಹಾನ್ ಯುಯೆ ಮತ್ತು ಆಕರ್ಷಿ ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ವಿರುದ್ಧ ಸೆಣಸಾಡಲಿದ್ದಾರೆ.

VISTARANEWS.COM


on

Thailand Open
Koo

ಬ್ಯಾಂಕಾಕ್‌: ಥಾಯ್ಲೆಂಡ್‌ ಓಪನ್‌(Thailand Open 2024) ಸೂಪರ್‌ 500 ಬ್ಯಾಡ್ಮಿಂಟನ್‌ ಪಂದ್ಯಾವಳಿ ಇಂದು(ಮಂಗಳವಾರ) ಆರಂಭಗೊಳ್ಳಲಿದ್ದು ಲಕ್ಷ್ಯ ಸೇನ್‌ ಮತ್ತು ಪಿ.ವಿ. ಸಿಂಧು(PV Sindhu) ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಭಾರತದ ಸ್ಟಾರ್‌ ಶಟ್ಲರ್‌ಗಳಾದ, ಅಗ್ರ ಶ್ರೇಯಾಂಕದ ಚಿರಾಗ್‌ ಶೆಟ್ಟಿ(Chirag Shetty)-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ(Satwiksairaj Rankireddy) ಜೋಡಿ ಮೇಲೆ ಪದಕ ಭರವಸೆ ಇರಿಸಲಾಗಿದೆ.

ಪುರುಷರ ಸಿಂಗಲ್ಸ್‌ನಲ್ಲಿ ಎಚ್‌.ಎಸ್‌. ಪ್ರಣಯ್‌, ಕಿರಣ್‌ ಜಾರ್ಜ್‌, ಸತೀಶ್‌ ಕುಮಾರ್‌ ಸೆಣಸಲಿದ್ದಾರೆ. ಚಿರಾಗ್​ ಮತ್ತು ಸಾತ್ವಿಕ್‌ ಮಲೇಷ್ಯಾದ ನೂರ್‌ ಮೊಹಮ್ಮದ್‌ ಅಝ್ರೀನ್‌ ಅಯೂಬ್‌ ಅಝ್ರೀನ್‌-ಟಾನ್‌ ವೀ ಕಿಯೋಂಗ್‌ ವಿರುದ್ಧ ಆಡಲಿದ್ದಾರೆ. ಕೆಲ ದಿನಗಳ ಹಿಂದೆ ನಡೆದಿದ್ದ ಥಾಮಸ್‌ ಕಪ್‌ನಲ್ಲಿ ಭಾರತೀಯ ಜೋಡಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫ‌ಲರಾಗಿದ್ದರು. ಇದೀಗ ಥಾಯ್ಲೆಂಡ್‌ ಟೂರ್ನಿಯಲ್ಲಿ ತಮ್ಮ ಹಿಂದಿನ ಲಯಕ್ಕೆ ಮರಳಿ ಇದೇ ಜುಲೈನಲ್ಲಿ ನಡೆಯಲಿರುವ ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಟೂರ್ನಿಗೆ ಸಿದ್ದಗೊಳ್ಳಬೇಕಿದೆ. ಒಲಿಂಪಿಕ್​ಗೆ ಅರ್ಹತೆ ಪಡೆದ ಶಟ್ಲರ್​ಗಳಿಗೆ ಈ ಟೂರ್ನಿ ತಮ್ಮ ಕೌಶಲ್ಯಗಳನ್ನು ಉತ್ತಮಗೊಳಿಸಲು ಒಳ್ಳೆಯ ಅವಕಾಶವಾಗಿದೆ.

ಸಿಂಧು ಅನುಪಸ್ಥಿತಿಯಲ್ಲಿ, ಅಶ್ಮಿತಾ ಚಲಿಹಾ, ಮಾಳವಿಕಾ ಬನ್ಸೋಡ್ ಮತ್ತು ಆಕರ್ಷಿ ಕಶ್ಯಪ್ ಅವರು ಮಹಿಳಾ ಸಿಂಗಲ್ಸ್‌ನಲ್ಲಿ ಆಡಲಿದ್ದಾರೆ. ಮಾಳವಿಕಾ ಅಗ್ರ ಶ್ರೇಯಾಂಕದ ಚೀನಾದ ಹಾನ್ ಯುಯೆ ಮತ್ತು ಆಕರ್ಷಿ ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ವಿರುದ್ಧ ಸೆಣಸಾಡಲಿದ್ದಾರೆ. ಮಹಿಳೆಯರ ಡಬಲ್ಸ್‌ನಲ್ಲಿ, ಪ್ಯಾರಿಸ್ ಗೇಮ್ಸ್‌ಗೆ ಅರ್ಹತೆ ಪಡೆದಿರುವ ಭಾರತದ ನಾಲ್ಕನೇ ಶ್ರೇಯಾಂಕದ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಕೂಡ ಕಣದಲ್ಲಿದ್ದಾರೆ. ಮೊದಲ ಸುತ್ತಿನ ಪಂದ್ಯದಲ್ಲಿ ಬೈ ಪಡೆದ ಕಾರಣ ಈ ಜೋಡಿ ಎರಡನೇ ಸುತ್ತಿನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ.

ಇದನ್ನೂ ಓದಿ India Open 2024 Final: ಇಂಡಿಯಾ ಓಪನ್​ ಫೈನಲ್​ನಲ್ಲಿ ಚಿರಾಗ್‌-ಸಾತ್ವಿಕ್‌ ಜೋಡಿಗೆ ಸೋಲು

ಪ್ಯಾರಿಸ್​ ಒಲಿಂಪಿಕ್ಸ್​ಗೆ ಇನ್ನು ಕೆಲವೇ ತಿಂಗಳು ಮಾತ್ರ ಬಾಕಿ ಇರುವ ಕಾರಣದಿಂದ ಅವರು ಕಠಿಣ ಅಭ್ಯಾಸದ ಮೊರೆ ಹೋಗಿರುವ ಕಾರಣ ಅವಳಿ ಒಪಿಂಪಿಕ್​ ಪದಕ ವಿಜೇತೆ ಸಿಂಧು ಈ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಪ್ರತಿಷ್ಠಿತ ಉಬರ್‌ ಕಪ್‌(Uber Cup) ಟೂರ್ನಿಯಿಂದಲೂ ಸಿಂಧು ಹೊರಗುಳಿದಿದ್ದರು. ಸಿಂಧು ಟೋಕಿಯೊ ಒಲಿಂಪಿಕ್ಸ್​ ಬಳಿಕ ಆಡಿದ ಎಲ್ಲ ಪ್ರಮುಖ ಟೂರ್ನಿಯಲ್ಲಿಯೂ ಕಳಪೆ ಪ್ರದರ್ಶನ ತೋರುವ ಮೂಲಕ ಸೋಲು ಕಾಣುತ್ತಲೇ ಬಂದಿದ್ದಾರೆ. ಅದರಲ್ಲೂ ಕಳೆದ ಒಂದು ವರ್ಷಗಳಲ್ಲಿ ನಡೆದ ಟೂರ್ನಿಗಳಲ್ಲಿ ದ್ವಿತೀಯ ಹಂತಕ್ಕೆ ಏರಿದ್ದೇ ಅವರ ದೊಡ್ಡ ಸಾಧನೆಯಾಗಿತ್ತು. 

40 ವರ್ಷದ ಹಫೀಜ್ ಅವರ ಬಳಿ ಸಿಂಧು ಕೆಲ ತಿಂಗಳುಗಳ ಹಿಂದೆಯೇ ತರಬೇತಿ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಸಿಂಧು ಅವರು ಹಫೀಜ್ ಅವರ ಮಾರ್ಗದರ್ಶನದಲ್ಲಿ ಉತ್ತಮ ಲಯ ಕಂಡುಕೊಳ್ಳುವ ಮೂಲಕ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವಂತಾಗಲಿ ಎನ್ನುವುದು ಸಿಂಧು ಅಭಿಮಾನಿಗಳ ಆಶಯವಾಗಿದೆ.

Continue Reading

ಕ್ರೀಡೆ

Federation Cup: ಫೆಡರೇಷನ್ ಕಪ್‌ ಫೈನಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ನೀರಜ್ ಚೋಪ್ರಾ

Federation Cup: 26 ವರ್ಷದ ನೀರಜ್ ಜೂನ್​ 18ರಂದು ಫಿನ್​ಲ್ಯಾಂಡ್​ನ ಪಾವೊ ನುರ್ಮಿ ಗೇಮ್ಸ್​ನಲ್ಲೂ ಸ್ಪರ್ಧಿಸಲಿದ್ದಾರೆ. ಈ ಟೂರ್ನಿಯಲ್ಲಿ 90 ಮೀ. ಗಡಿ ದಾಟಲು ಅವರು ಪಣ ತೊಟ್ಟಿದ್ದಾರೆ.

VISTARANEWS.COM


on

Federation Cup
Koo

ಭುವನೇಶ್ವರ: ಮೂರು ವರ್ಷದ ಬಳಿಕ ತವರಿನಲ್ಲಿ ನಡೆಯುವ ಫೆಡರೇಷನ್ ಕಪ್‌ನಲ್ಲಿ(Federation Cup) ಕಣಕ್ಕೆ ಇಳಿಯಲು ಸಜ್ಜಾದ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ, ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಮತ್ತು ಕಿಶೋರ್ ಜೇನಾ(Kishore Jena) ಅವರು ಈ ಟೂರ್ನಿಯಲ್ಲಿ ನೇರವಾಗಿ ಫೈನಲ್‌ ಪ್ರವೇಶ ಪಡೆದಿದ್ದಾರೆ. ಇಂದು ಅರ್ಹತಾ ಸುತ್ತಿನ ಸ್ಪರ್ಧೆ ನಡೆಯಲಿದ್ದು ಬುಧವಾರ ಫೈನಲ್‌ ನಡೆಯಲಿದೆ.

ನೀರಜ್​ ಚೋಪ್ರಾ ಮತ್ತು ಜೇನಾ ಈಗಾಗಲೇ ಹಲವು ಬಾರಿ ಅರ್ಹತಾ ಮಟ್ಟ (75 ಮೀಟರ್‌) ದಾಟಿರುವುದರಿಂದ ಉಭಯ ಜಾವೆಲಿನ್​ ಪಟುಗಳಿಗೆ ನೇರವಾಗಿ ಫೈನಲ್‌ಗೆ ಅರ್ಹತೆ ನೀಡಲಾಯಿತು. ನಾಳೆ ಇವರಿಬ್ಬರು ಫೈನಲ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಕಳೆದ ವಾರ ನಡೆದ ಡೈಮಂಡ್‌ ಲೀಗ್‌ನ ದೋಹಾ ಲೆಗ್‌ನಲ್ಲಿ ಚೋಪ್ರಾ 88.36 ಮೀ ದೂರ ಜಾವೆಲಿನ್ ಎಸೆದು ಎರಡನೇ ಸ್ಥಾನ ಪಡೆದಿದ್ದರು. ಏಷ್ಯನ್ ಕ್ರೀಡಾಕೂಟದ ಬೆಳ್ಳಿ ವಿಜೇತ ಜೇನಾ ಈ ಬಾರಿ ಡೈಮಂಡ್‌ ಲೀಗ್‌ಗೆ ಚೊಚ್ಚಲ ಪ್ರವೇಶ ಮಾಡಿ, 76.31 ಮೀ ದೂರ ಎಸೆದಿದ್ದರು.

ಕರ್ನಾಟಕದ ಡಿ.ಪಿ. ಮನು ಕೂಡ ಫೆಡರೇಷನ್ ಕಪ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. 2023ರ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮನು ಆರನೇ ಸ್ಥಾನ ಪಡೆದಿದ್ದರು.

26 ವರ್ಷದ ನೀರಜ್ ಜೂನ್​ 18ರಂದು ಫಿನ್​ಲ್ಯಾಂಡ್​ನ ಪಾವೊ ನುರ್ಮಿ ಗೇಮ್ಸ್​ನಲ್ಲೂ ಸ್ಪರ್ಧಿಸಲಿದ್ದಾರೆ. ಈ ಟೂರ್ನಿಯಲ್ಲಿ 90 ಮೀ. ಗಡಿ ದಾಟಲು ಅವರು ಪಣ ತೊಟ್ಟಿದ್ದಾರೆ.

ಇದನ್ನೂ ಓದಿ Neeraj Chopra: ಪ್ಯಾರಿಸ್​ ಒಲಿಂಪಿಕ್ಸ್​ಗೆ ಮುನ್ನ 90 ಮೀಟರ್​ ಗಡಿ ದಾಟುವೆ; ನೀರಜ್​ ಚೋಪ್ರಾ ವಿಶ್ವಾಸ

ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ನೀರಜ್‌ ಈ ಬಾರಿಯೂ ಚಿನ್ನ ಗೆಲ್ಲಲಿ ಎನ್ನುವುದು ಶತ ಕೋಟಿ ಭಾರತೀಯರ ಆಶಯ ಮತ್ತು ಹಾರೈಕೆಯಾಗಿದೆ. 2024ರಲ್ಲಿ ನಡೆಯುವ ಪ್ಯಾರಿಸ್ ಒಲಿಂಪಿಕ್ಸ್ ಅತಿ ದೊಡ್ಡ ಮತ್ತು ಮಹತ್ವದ ಕ್ರೀಡಾಕೂಟವಾಗಿದೆ. ಸುಮಾರು 200 ದೇಶಗಳ 10,000 ಕ್ರೀಡಾಪಟುಗಳು ಒಲಿಂಪಿಕ್ ವೈಭವಕ್ಕಾಗಿ ಸ್ಪರ್ಧಿಸಲಿದ್ದಾರೆ. ಪ್ಯಾರಿಸ್ ತನ್ನ ಮೂರನೇ ಬಾರಿಗೆ ಆತಿಥೇಯ ನಗರವಾಗಿ (1900 ಮತ್ತು 1924 ರ ನಂತರ) ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲಿದೆ. ಜುಲೈ 26 ರಿಂದ ಆಗಸ್ಟ್ 11ರ ತನಕ ಟೂರ್ನಿ ನಡೆಯಲಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕ್ರೀಡೆ

IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

IPL 2024 Points Table: ಇಂದು ನಡೆಯುವ ಪಂದ್ಯದಲ್ಲಿ ಡೆಲ್ಲಿ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಡೆಲ್ಲಿ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದುಗೊಂಡು ತಲಾ 1 ಅಂಕ ಲಭಿಸಿದರೂ ಡೆಲ್ಲಿಗೆ ಪ್ಲೇ ಆಫ್​ ಅವಕಾಶ ಸಿಗುವುದಿಲ್ಲ.

VISTARANEWS.COM


on

IPL 2024 Points Table
Koo

ಅಹಮದಾಬಾದ್​: ಕೆಕೆಆರ್​ ವಿರುದ್ಧದ ಸೋಮವಾರದ ಐಪಿಎಲ್(IPL 2024)​ ಪಂದ್ಯ ರದ್ದು ಗೊಂಡ ಕಾರಣ ಶುಭಮನ್​ ಗಿಲ್​ ಸಾರಥ್ಯದ ಗುಜರಾತ್​ ಟೈಟಾನ್ಸ್​ ತಂಡ ಈ ಬಾರಿಯ ಟೂರ್ನಿಯಿಂದ ಅಧಿಕೃತವಾಗಿ(IPL 2024 Points Table) ಹೊರಬಿದ್ದಿದೆ. ಸತತವಾಗಿ 2 ಬಾರಿ ಫೈನಲ್​ ಪ್ರವೇಶಿಸಿ ಒಂದು ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ಗುಜರಾತ್​ಈ ಬಾರಿ ಲೀಗ್​ನಿಂದಲೇ ಹೊರಬಿದ್ದಿದೆ. ಸದ್ಯ ಗುಜರಾತ್​ ಸೇರಿ ಒಟ್ಟು ಮೂರು ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಉಳಿದ 2 ತಂಡಗಳೆಂದರೆ ಪಂಜಾಬ್​ ಕಿಂಗ್ಸ್​ ಮತ್ತು ಮುಂಬೈ ಇಂಡಿಯನ್ಸ್​.

ಇಂದು ನಡೆಯುವ ಪಂದ್ಯದಲ್ಲಿ ಡೆಲ್ಲಿ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಡೆಲ್ಲಿ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದುಗೊಂಡು ತಲಾ 1 ಅಂಕ ಲಭಿಸಿದರೂ ಡೆಲ್ಲಿಗೆ ಪ್ಲೇ ಆಫ್​ ಅವಕಾಶ ಸಿಗುವುದಿಲ್ಲ.

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​139319 (+1.428)
ರಾಜಸ್ಥಾನ್​ ರಾಯಲ್ಸ್​​​128416 (+0.349)
ಚೆನ್ನೈ​​137614 (+0.528)
ಹೈದರಾಬಾದ್​127514 (+0.406)
ಆರ್​ಸಿಬಿ136712 (+0.387)
ಡೆಲ್ಲಿ136712 (-0.482)
ಲಕ್ನೋ126612 (-0.769)
ಗುಜರಾತ್​135711 (-1.063)
ಮುಂಬೈ13498 (-0.271)
ಪಂಜಾಬ್​​12488 (-0.423)

ಪಂದ್ಯವು ಟಾಸ್​ ಸೇರಿದಂತೆ ಒಂದೇ ಒಂದು ಎಸೆತ ಕಾಣದೇ ರದ್ದಾಯಿತು. ಸ್ಟೇಡಿಯಮ್​ನಲ್ಲಿ ಸೇರಿದ್ದ 45,000 ಅಭಿಮಾನಿಗಳು ಪಂದ್ಯ ಆರಂಭವಾಗುವ ನಿರೀಕ್ಷೆಯಿಂದ ಸ್ಥಳದಿಂದ ಕದಲಲಿಲ್ಲ. ರಾತ್ರಿ 10:56 ಕ್ಕೆ 5 ಓವರ್​ಗಳ ಪಂದ್ಯದ ಕಟ್ ಆಫ್ ಸಮಯವಾಗಿತ್ತು. ಮೈದಾನದ ಸಿಬ್ಬಂದಿ ಎಲ್ಲ ಪ್ರಯತ್ನಗಳನ್ನು ಮಾಡಿದ ಹೊರತಾಗಿಯೂ ಆಡಿಲು ಯಾವುದೇ ಅವಕಾಶ ದೊರೆಯಲಿಲ್ಲ. ರಾತ್ರಿ 10:40 ರ ಸುಮಾರಿಗೆ ಅಧಿಕಾರಿಗಳು ಪಂದ್ಯವನ್ನು ರದ್ದುಗೊಳಿಸಿದರು.

ಇದನ್ನೂ ಓದಿ IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

ಗುಜರಾತ್​ಗೆ ನಿರಾಶಾದಾಯಕ ಅಭಿಯಾನ

ಗುಜರಾತ್​ ಟೈಟಾನ್ಸ್ ಪ್ಲೇಆಫ್​ನಲ್ಲಿ ಸ್ಥಾನ ಪಡೆಯುವ ರೇಸ್​​ನಿಂದ ಹೊರಗುಳಿದಿದೆ. ಹಾರ್ದಿಕ್ ಪಾಂಡ್ಯ ನಿರ್ಗಮನ ಮತ್ತು ಮೊಹಮ್ಮದ್ ಶಮಿ ಗಾಯಗೊಂಡ ನಂತರ ಜಿಟಿಗೆ ಉತ್ತಮ ಅನುಕೂಲಗಳು ಸಿಗಲಿಲ್ಲ. ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಮುಂದಿನ ಸುತ್ತಿಗೆ ಪ್ರವೇಶಿಸುವ ಅವಕಾಶ ಆ ತಂಡಕ್ಕೆ ಇತ್ತು. ಆದರೆ, ಮಳೆ ಅವರ ಭರವಸೆಗಳನ್ನು ಭಗ್ನಗೊಳಿಸಿತು.

Continue Reading
Advertisement
bomb hoax bengaluru
ಕ್ರೈಂ36 seconds ago

Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ

Team India Coach
ಕ್ರಿಕೆಟ್14 mins ago

Team India Coach: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ; ಮೇ 27 ಕೊನೆಯ ದಿನ

Job Alert
ಉದ್ಯೋಗ30 mins ago

Job Alert: ಎಎಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Narendra Modi
ದೇಶ37 mins ago

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

HD Deve gowda prajwal revanna case
ಪ್ರಮುಖ ಸುದ್ದಿ46 mins ago

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

Thailand Open
ಕ್ರೀಡೆ1 hour ago

Thailand Open 2024: ಇಂದಿನಿಂದ ಥಾಯ್ಲೆಂಡ್‌ ಓಪನ್‌ ಟೂರ್ನಿ; ಚಿರಾಗ್‌-ಸಾತ್ವಿಕ್‌ ಜೋಡಿ ಮೇಲೆ ಪದಕ ಭರವಸೆ

US Sanction
ವಿದೇಶ1 hour ago

US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

Prajwal Revanna Case Devaraje Gowda
ಕ್ರೈಂ2 hours ago

Prajwal Revanna Case: ವಕೀಲ ದೇವರಾಜೇಗೌಡ ಇಂದು ಪೊಲೀಸ್‌ ಕಸ್ಟಡಿಗೆ

Federation Cup
ಕ್ರೀಡೆ2 hours ago

Federation Cup: ಫೆಡರೇಷನ್ ಕಪ್‌ ಫೈನಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ನೀರಜ್ ಚೋಪ್ರಾ

Israel-Hamas Conflict
ವಿದೇಶ2 hours ago

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ16 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ16 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ17 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ17 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ17 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ24 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌