ICC World Cup 2023 : 12 ವರ್ಷಗಳ ಐಸಿಸಿ ಪ್ರಶಸ್ತಿ ಬರ ನೀಗಿಸುವುದೇ ಭಾರತ? - Vistara News

ಕ್ರಿಕೆಟ್

ICC World Cup 2023 : 12 ವರ್ಷಗಳ ಐಸಿಸಿ ಪ್ರಶಸ್ತಿ ಬರ ನೀಗಿಸುವುದೇ ಭಾರತ?

130 ಕೋಟಿ ಅಭಿಮಾನಿಗಳನ್ನು ಹೊಂದಿರುವ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಫೈನಲ್ ​ನಲ್ಲಿ (ICC World Cup 2023) ಸೋಲಿಸಿ ಪ್ರಶಸ್ತಿ ಗೆಲ್ಲುವ ಎಲ್ಲ ಅವಕಾಶಗಳನ್ನು ಹೊಂದಿದೆ.

VISTARANEWS.COM


on

Australia Criket team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್: ಆರು ವಾರಗಳ ಕಾಲ ನಡೆದ ಏಕ ದಿನ ವಿಶ್ವ ಕಪ್​ನ (ICC World Cup 2023) ಕೊನೆಯ ಮತ್ತು ವಿಜೇತರನ್ನು ನಿರ್ಣಯಿಸುವ ಪಂದ್ಯ ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನೆವೆಂಬರ್​ 19ರಂದು ನಡೆಯಲಿದೆ. ಅಕ್ಟೋಬರ್ 5ರಂದು ಟೂರ್ನಿಯ ಉದ್ಘಾಟನಾ ಆವೃತ್ತಿಯೂ ಇದೇ ಸ್ಟೇಡಿಯಮ್​ನಲ್ಲಿ ನಡೆದಿತ್ತು. ಇದೀಗ ಅದೇ ಸ್ಟೇಡಿಯಮ್​ನಲ್ಲಿ ವಿಶ್ವ ವಿಜೇತರು ಯಾರೆಂಬುದು ಪ್ರಕಟವಾಗಲಿದೆ. ಸಹಜವಾಗಿ ಟೂರ್ನಿಯ ಬಲಿಷ್ಠ ಎರಡು ತಂಡಗಳಾದ ಆಸ್ಟ್ರೇಲಿಯಾ ಮತ್ತು ಭಾರತ ಫೈನಲ್​ಗೇರಿದ್ದು ಇತ್ತಂಡಗಳು ಪ್ರಶಸ್ತಿಗಾಗಿ ಸೆಣಸಾಸಲಿವೆ.

47 ಪಂದ್ಯಗಳು ಮುಕ್ತಾಯಗೊಂಡಿದ್ದು ಇದರಲ್ಲಿ ಸೆಮಿ ಫೈನಲ್ ಸೇರಿದಂತೆ 10ರಲ್ಲಿ 10ಪಂದ್ಯಗಳನ್ನೂ ಗೆದ್ದಿರುವ ಭಾರತ ಹಾಗೂ 8 ಪಂದ್ಯಗಳಲ್ಲಿ ಗೆಲುವು ಕಂಡಿರುವ ಆಸ್ಟ್ರೇಲಿಯಾ ಟ್ರೋಫಿಗಾಗಿ ಸೆಣಸಾಡಲಿವೆ. ಇದು ಟೂರ್ನಿಯ ಅತ್ಯಂತ ರೋಚಕ ಹಾಗೂ ನಿರ್ಣಾಯಕ ಪಂದ್ಯವಾಗಿದೆ. ಕೋಟ್ಯಂತರ ಭಾರತೀಯರು ಹಾಗೂ ಅಸಂಖ್ಯಾತ ಕ್ರಿಕೆಟ್​ ಅಭಿಮಾನಿಗಳು ಈ ಪಂದ್ಯವನ್ನು ವೀಕ್ಷಿಸಲು ಕಾತರರಾಗಿದ್ದಾರೆ. ಹಾಲಿ ಟೂರ್ನಿಯ ವಿಜೇತರು ಯಾರು ಎಂಬ ಕುತೂಹಲ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗಿದೆ.

20 ವರ್ಷಗ ಹಿಂದಿನ ಟೂರ್ನಿಯ ಪುನರಾವರ್ತನೆ

ವಿಶ್ವಕಪ್ ಫೈನಲ್​​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾವನ್ನು ಕ್ರಿಕೆಟ್​ ಅಭಿಮಾನಿಗಳು ಈ ಹಿಂದೆ ನೋಡಿದ್ದಾರೆ. 2003ರ ಆವೃತ್ತಿಯಲ್ಲಿ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ನಿರಾಸೆ ಎದುರಿಸಿತ್ತು. ಬೃಹತ್ ಅಂತರದ ವಿಜಯ ಕಂಡಿರುವ ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿದಿತ್ತು. ಅದೇ ಮಾದರಿಯ ರೋಚಕತೆಯನ್ನು ಈ ಪಂದ್ಯದಲ್ಲೂ ನಿರೀಕ್ಷೆ ಮಾಡಬಹುದು.

ಭಾರತ ಹಾಗೂ ಆಸ್ಟ್ರೇಲಿಯಾ ಹಾಲಿ ಆವೃತ್ತಿಯ ವಿಶ್ವ ಕಪ್​ನ ತಮ್ಮ ಮೊದಲ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು. ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್​ ಗೆಲುವು ಕಂಡಿತ್ತು. ಈ ಎರಡು ಕ್ರಿಕೆಟ್ ಶಕ್ತಿ ಕೇಂದ್ರಗಳು ತಮ್ಮ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಿ ಸರಿಯಾಗಿ 41 ದಿನಗಳಾಗಿವೆ. ಈಗ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ತಮ್ಮ ಹಣೆಬರಹ ನಿರ್ಧರಿಸಲಿದ್ದಾರೆ.

ಆಸ್ಟ್ರೇಲಿಯಾ ಇಲ್ಲಿಯವರೆಗೆ ತಮ್ಮ ಏಳು ವಿಶ್ವಕಪ್ ಫೈನಲ್​​ಗಳಲ್ಲಿ ಐದನ್ನು ಗೆದ್ದಿದೆ. ಆದರೆ ಪ್ರಸ್ತುತ ಫಾರ್ಮ್ ಐಸಿಸಿ ಬರವನ್ನು ಕೊನೆಗೊಳಿಸಲು ಭಾರತಕ್ಕೆ ಉತ್ತಮ ಅವಕಾಶವನ್ನು ನೀಡಿದೆ. ಪಂದ್ಯಾವಳಿಯ ಕೊನೇ ಹಂತದಲ್ಲಿ ಆಸ್ಟ್ರೇಲಿಯಾ ಪ್ರದರ್ಶನದ ಉತ್ತುಂಗದಲ್ಲಿದೆ. ಭಾರತವು 1.3 ಬಿಲಿಯನ್ ಅಭಿಮಾನಿಗಳ ಭಾರವನ್ನು ಹೊತ್ತುಕೊಂಡಿದೆ.

ಭಾರತ

ನಾಗ್ಪುರ ಮೂಲದ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. 2011ರಲ್ಲಿ ಭಾರತ ತಂಡ ವಿಶ್ವ ಕಪ್ ಗೆದ್ದಾಗ ಅವರಿಗೆ ಆಡುವ ಅವಕಾಶ ಸಿಕ್ಕಿರಲಿಲ್ಲ. ಇದೀಗ 12 ವರ್ಷಗಳ ನಂತರ ತನ್ನ ದೇಶವನ್ನು ವಿಶ್ವಕಪ್ ಫೈನಲ್​ಗೆ ಮುನ್ನಡೆಸಿದ್ದಾರೆ ಅವರು. ಭಾರತದ ತಂಡವನ್ನು ಸಮರ್ಥವಾಗಿ ಫೈನಲ್​ಗೇರಿಸಿದ್ದಾರೆ ಅವರು.

ಹಾಲಿ ಆವೃತ್ತಿಯಲ್ಲಿ ಭಾರತ ತಂಡ ಒಟ್ಟಿನಿಂದ ಆಡುತ್ತಿದೆ. ರೋಹಿತ್ ಅವರ ನಿಸ್ವಾರ್ಥ ಸ್ವಭಾವವು ತಂಡದಲ್ಲಿ ಜೋಶ್ ಹುಟ್ಟಿಸುವ ಜತೆಗೆ ಪಂದ್ಯದಲ್ಲಿ ಉತ್ತಮ ಆರಂಭವನ್ನು ದೊರಕಿಸಿಕೊಡುತ್ತಿದೆ. ಅದೇ ಅಭ್ಯಾಸವನ್ನು ಅವರು ಫೈನಲ್​ನಲ್ಲಿ ತೋರಿಸಲಿದ್ದಾರೆ. ಕೊಹ್ಲಿ ಮತ್ತೊಂದು ಶತಕ ಯಾಕೆ ಹೊಡಿಯಬಾರದು ಎಂಬುದು ಅಭಿಮಾನಿಗಳ ಪ್ರಶ್ನೆ.

ಭಾರತದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಇದುವರೆಗಿನ ಅತ್ಯಂತ ಸಮರ್ಥ ಪ್ರದರ್ಶನ ನೀಡುತ್ತಿದೆ. ಗೆಲುವಿನ ಅಭಿಯಾನದಲ್ಲಿ ಮಧ್ಯಮ ಕ್ರಮಾಂಕದ ಕೊಡುಗೆ ದೊಡ್ಡದಿದೆ. ಶ್ರೇಯಸ್ ಅಯ್ಯರ್ ಮತ್ತು ಕೆ.ಎಲ್.ರಾಹುಲ್ ಭಾರತೀಯ ಕ್ರಿಕೆಟ್​ ಪ್ರೇಮಿಗಳಿಗೆ ಉತ್ಸಾಹ ತುಂಬಿದ್ದಾರೆ.

ಭಾರತದ ವೇಗದ ಬೌಲಿಂಗ್ ವಿಭಾಗ ಚರ್ಚೆಯ ವಿಷಯವಾಗಿದೆ. ಮೊಹಮ್ಮದ್ ಶಮಿ 6 ಪಂದ್ಯಗಳಲ್ಲಿ 23 ವಿಕೆಟ್​​ಗಳನ್ನು ಪಡೆದಿದ್ದರೆ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ನೇತೃತ್ವದ ಬೌಲಿಂಗ್ ವಿಭಾಗವು 10 ಪಂದ್ಯಗಳಲ್ಲಿ 96 ವಿಕೆಟ್​ಗಳನ್ನು ಉರುಳಿಸಿವೆ. ಹೀಗಾಗಿ ಭಾರತ ಪರ ಮತ್ತೊಂದು ಬಾರಿ ಮಿಂಚುವುದರಲ್ಲಿ ಯಾವುದೇ ಅನುಮಾನ ಇಲ್ಲ.

ಭಾರತವು ತಂಡ ಶಾಂತವಾಗಿ, ಸಂಯೋಜಿತವಾಗಿ ಮತ್ತು ಆತ್ಮವಿಶ್ವಾಸದಿಂದ ಆಡುತ್ತಿದೆ..ರಾಹುಲ್ ದ್ರಾವಿಡ್ ಮತ್ತು ರೋಹಿತ್ ಶರ್ಮಾ ಅವರಿಗೆ ಯಾವುದೇ ಪ್ರಮುಖ ಆಯ್ಕೆ ತಲೆನೋವು ಇಲ್ಲ, ಏಕೆಂದರೆ ಭಾರತವು ಬಹುಶಃ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯವನ್ನು ಗೆದ್ದ ಅದೇ ತಂಡಕ್ಕೆ ಅಂಟಿಕೊಳ್ಳಲಿದೆ.

ಸಿಡಿದೆದ್ದ ಆಸ್ಟ್ರೇಲಿಯಾ

2011 ರಲ್ಲಿ, 18 ವರ್ಷದ ಪ್ಯಾಟ್​ ಕಮಿನ್ಸ್ ಮೊದಲ ಬಾರಿ ಆಸ್ಟ್ರೇಲಿಯಾ ಕ್ರಿಕೆಟ್​ ಸಂಸ್ಥೆ ಜತೆ ಕೇಂದ್ರ ಒಪ್ಪಂದಕ್ಕೆ ಸಹಿ ಹಾಕಿದ್ದರು. ಅವರೀಗ ಕಾಂಗರೂ ಪಡೆಯ ನಾಐಕ.12 ವರ್ಷಗಳ ನಂತರ, ಅವರು ಲಂಡನ್​ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅಲ್ಲಿ ಸೋಲಿಸಿದ್ದು ಭಾರತ ತಂಡವನ್ನೇ. ಐದು ತಿಂಗಳ ಅವಧಿಯಲ್ಲಿ ತಂಡವನ್ನು ವಿಶ್ವಕಪ್ ಫೈನಲ್ ತಲುಪಿಸಿದ್ದಾರೆ ಅವರು.

ಆಸ್ಟ್ರೇಲಿಯಾದ 2023 ರ ವಿಶ್ವಕಪ್ ಅಭಿಯಾನದ ಆರಂಭ ನಿರಾಸೆಯಿಂದ ಕೂಡಿತ್ತು. ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಸೋತಿತ್ತು. ಆದರೆ ಆ ಬಳಿಕ ಪ್ರತಿ ಪಂದ್ಯವನ್ನು ಫೈನಲ್ ಪಂದ್ಯದಂತೆಯೇ ಆಡಿದ ಆ ತಂಡ ಬಳಿಕ ಒಂದೇ ಒಂದು ಸೋಲು ಕಾಣದೇ ಫೈನಲ್​ಗೆ ತಲುಪಿದೆ. ಇದು ಆ ತಂಡಕ್ಕೆ ಎಂಟನೇ ಏಕದಿನ ವಿಶ್ವಕಪ್ ಫೈನಲ್​.

ಲಕ್ನೋದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ಸೋಲುವ ಅಂಚಿನಲ್ಲಿದ್ದಾಗ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಎಕ್ಸ್ ನಲ್ಲಿ ಹೀಗೆ ಬರೆದಿ್ದರು. “ಆಸ್ಟ್ರೇಲಿಯಾ ಇಂದು ಸೋತರೆ ಅವರು ಇಡೀ ಪಂದ್ಯಾವಳಿಯಲ್ಲಿ ಎಲ್ಲರ ಮೇಲೂ ತಮ್ಮ ಕೋಪ ತೋರಿಸುತ್ತಾರೆ. ನಿಮಗೆ ಏನು ಬೇಕೋ ಅದನ್ನು ನೀವೇ ನಿರ್ಧರಿಸಿ ಎಂದು ಬರೆದಿದ್ದರು ಸತ್ಯವಾಗಿದೆ.

ಆಸ್ಟ್ರೇಲಿಯಾದ ಅಗ್ರ ಮೂರು ಬ್ಯಾಟರ್​ಗಳಾದ ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ 150 ಕ್ಕಿಂತ ಹೆಚ್ಚು ವೈಯಕ್ತಿಕ ಸ್ಕೋರ್ ಹೊಂದಿದ್ದಾರೆ. ವಾರ್ನರ್ ತಮ್ಮ ಸಾಮರ್ಥ್ಯವನ್ನು ತಂಡಕ್ಕೆ ಮುಡಿಪಾಗಿಟ್ಟಿದ್ದಾರೆ. ಗ್ಲೆನ್ ಮ್ಯಾಕ್ಸ್​ವೆಲ್​ ಮಕ್ಕಳಂತೆ ಕ್ರಿಕೆಟ್ ಆಡುತ್ತಿದ್ದಾರೆ. ಸ್ಟೀವ್​ ಸ್ಮಿತ್ ಸ್ವಲ್ಪ ಅಸಹಜವಾಗಿದ್ದರೂ, ಮಾರ್ನಸ್ ಲಾಬುಶೇನ್ ಅವರ ಉಪಸ್ಥಿತಿಯು ತಂಡಕ್ಕೆ ಬಲ ತಂದಿದೆ. ಬೌಲಿಂಗ್​ನಲ್ಲಿ ಮಿಚೆಲ್ ಸ್ಟಾರ್ಕ್​ ಸ್ವಿಂಗ್​ ಬೌಲಿಂಗ್ ಚೆನ್ನಾಗಿ ಕೆಲಸ ಮಾಡುತ್ತಿದೆ. ಜೋಶ್ ಹೇಜಲ್​ವುಡ್​ ಮತ್ತು ಕಮಿನ್ಸ್ ಸ್ವಲ್ಪ ಅನಿಶ್ಚಿತರಾಗಿದ್ದಾರೆ. ಮೂವರು ತಮ್ಮ ಹೆಸರಿಗೆ 40 ವಿಕೆಟ್ ಗಳನ್ನು ಉರುಳಿಸಿದ್ದಾರೆ. ಆದರೆ ಪವರ್ ಪ್ಲೇನಲ್ಲಿ ಆಕ್ರಮಣದ ಕೊರತೆಯಿದೆ. ಆಡಮ್ ಜಂಪಾ ಅವರ ದೃಢತೆ ಆಸ್ಟ್ರೇಲಿಯಾಕ್ಕೆ ಗೆಲುವು ತರಲಿದೆ. ಅವರು 21.5 ಕ್ಕಿಂತ ಕಡಿಮೆ ಸರಾಸರಿಯಲ್ಲಿ ಹತ್ತರಲ್ಲಿ 21 ವಿಕೆಟ್​ಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ : ಫೈನಲ್ ಪಂದ್ಯದಲ್ಲಿ ವರ್ಣರಂಜಿತ ಕಾರ್ಯಕ್ರಮ; ಪಟ್ಟಿ ಬಿಡುಗಡೆಗೊಳಿಸಿದ ಬಿಸಿಸಿಐ

ಮಾರ್ನಸ್ ಸ್ಟೊಯಿನಿಸ್ ಅವರ ಸ್ಪಿನ್ ಆಡುವ ಸಾಮರ್ಥ್ಯವು ಇತ್ತೀಚಿನ ದಿನಗಳಲ್ಲಿ ಕಳವಳಕಾರಿಯಾಗಿದೆ, ಮಾರ್ನಸ್ ಲಾಬುಶೇನ್ ಅವರ ಫಾರ್ಮ್ ಮತ್ತು ಆಸ್ಟ್ರೇಲಿಯಾವನ್ನು ಬಿಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿಸಿದೆ. ಲ್ಯಾಬುಶೇನ್ ಬದಲಿಗೆ ಸ್ಟೋಯ್ನಿಸ್ ಆಡುವ ನಿರೀಕ್ಷೆಯಿದೆ.

ಪಿಚ್ ರಿಪೋರ್ಟ್​

ಅಹಮದಾಬಾದ್​​ನಲ್ಲಿ ಮಧ್ಯಾಹ್ನದ ಸಮಯದಲ್ಲಿ ತಾಪಮಾನವು ಹೆಚ್ಚಾಗಿರುತ್ತದೆ ಮತ್ತು ಸಂಜೆ ತುಂಬಾ ತಂಪಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕೆಂಪು ಮತ್ತು ಕಪ್ಪು ಮಣ್ಣಿನ ವಿಕೆಟ್ ಗಳಿವೆ. ಕೆಂಪು ಬಣ್ಣವು ಬ್ಯಾಟರ್​ಗಳಿಗೆ ನೆರವಾಗುತ್ತದೆ. ಬೌಲರ್​ಗಳಿಗೆ ಲೆಂಥ್​ ಎಸೆತಕ್ಕೆ ನೆರವಾಗುತ್ತದೆ. ಕಪ್ಪು ಮಣ್ಣಿನ ಪಿಚ್​ ನಿಧಾನವಾಗಿದೆ. ಇಲ್ಲಿನ ಪಿಚ್​ ಒಂದು ಬಾರಿ ಸೆಟ್​ ಆದ ಬ್ಯಾಟರ್​ಗಳಿಗೆ ಹಲವು ಅನುಕೂಲಗಳನ್ನು ನೀಡುತ್ತದೆ.

ತಂಡಗಳು:

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ : ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಶೇನ್/ ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಸ್ (ವಿಕೆಟ್​ ಕೀಪರ್​), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್, ಆಡಮ್ ಝಂಪಾ, ಜೋಶ್ ಹೇಜಲ್​ವುಡ್​​.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Paris Olympics 2024 : ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ಸೇಲಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೆನಿಸ್ ಸೇರಿದಂತೆ 16 ಕ್ರೀಡೆಗಳಲ್ಲಿ 117 ಕ್ರೀಡಾಪಟುಗಳು 69 ಪದಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: 2024 ರ ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ಉದ್ಘಾಟನಾ ಸಮಾರಂಭವು ನಡೆಯುತ್ತಿರುವುದರಿಂದ ಫ್ರಾನ್ಸ್​​ನ ರಾಜಧಾನಿಯಲ್ಲಿ ಸಂಭ್ರಮ ಜೋರಾಗಿದೆ. ಸಾವಿರಾರು ಕ್ರೀಡಾಪಟುಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಜತೆಗೆ ಕ್ರೀಡಾಪ್ರೇಮಿಗಳು ಹಾಗೂ ಆಯೋಜಕರ ದೊಡ್ಡ ದಂಡು ಅಲ್ಲಿ ನೆರೆದಿದೆ. ಅಂತೆಯೇ ಭಾರತದಿಂದ ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ಸೇಲಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೆನಿಸ್ ಸೇರಿದಂತೆ 16 ಕ್ರೀಡೆಗಳಲ್ಲಿ 117 ಕ್ರೀಡಾಪಟುಗಳು 69 ಪದಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

ಬಹುನಿರೀಕ್ಷಿತ ಕ್ರೀಡಾಕೂಟದ ಪ್ರಾರಂಭಕ್ಕೆ ಮುಂಚಿತವಾಗಿ, ಭಾರತದ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಪ್ರತಿನಿಧಿಸುವ 117 ಅಥ್ಲೀಟ್​ಗಳ ಭಾರತದ ನಿಯೋಗಕ್ಕೆ ಶುಭಾಶಯಗಳನ್ನು ಕಳುಹಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್​ ಆರಂಭವಾಗುತ್ತಿದ್ದು ಭಾರತೀಯ ತಂಡಕ್ಕೆ ನನ್ನ ಶುಭ ಹಾರೈಕೆಗಳು. ಪ್ರತಿಯೊಬ್ಬ ಕ್ರೀಡಾಪಟುವೂ ಭಾರತದ ಹೆಮ್ಮೆ.. ಅವರೆಲ್ಲರೂ ತಮ್ಮ ಅಸಾಧಾರಣ ಪ್ರದರ್ಶನಗಳು ನಮಗೆ ಸ್ಫೂರ್ತಿ ನೀಡುವ ಮೂಲಕ ನಿಜವಾದ ಕ್ರೀಡಾ ಮನೋಭಾವವನ್ನು ಬೆಳಗಿಸಲಿ ಮತ್ತು ಸಾಕಾರಗೊಳಿಸಲಿ ಎಂದು ಪ್ರಧಾನಿ ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಮತ್ತು ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರು ಭಾರತದ ಧ್ವಜಧಾರಿಯಾಗಿ ಉದ್ಘಾಟನಾ ಸಮಾರಂಭದ ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಪರೇಡ್​ನಲ್ಲಿ 7,500 ಸ್ಪರ್ಧಿಗಳು ಸೀನ್ ನದಿಯ ಆರು ಕಿಲೋಮೀಟರ್ (ನಾಲ್ಕು ಮೈಲಿ) ಉದ್ದದ ಉದ್ದಕ್ಕೂ 85 ದೋಣಿಗಳಲ್ಲಿ ಪ್ರಯಾಣಿಸಲಿದ್ದಾರೆ.

ಕೋವಿಡ್-19 ಕಾರಣದಿಂದಾಗಿ ಒಂದು ವರ್ಷ ವಿಳಂಬವಾಗಿ ಖಾಲಿ ಕ್ರೀಡಾಂಗಣದಲ್ಲಿ ತೆರೆಯಲ್ಪಟ್ಟ 2020 ರ ಟೋಕಿಯೊ ಒಲಿಂಪಿಕ್ಸ್​ಗೆ ಹೋಲಿಸಿದರೆ, ಪ್ಯಾರಿಸ್​​ನ ಮಹತ್ವಾಕಾಂಕ್ಷೆಯ ನಡಿಗೆ 300,000 ಉತ್ಸಾಹಭರಿತ ಪ್ರೇಕ್ಷಕರು ಮತ್ತು ವಿಶ್ವದಾದ್ಯಂತದ ವಿಐಪಿಗಳು ಮತ್ತು ಸೆಲೆಬ್ರಿಟಿಗಳ ಪ್ರೇಕ್ಷಕರ ಮುಂದೆ ನಡೆಯಲಿದೆ. ಸ್ಪರ್ಧೆಗಳು ಜುಲೈ 27 ರಿಂದ ಪ್ರಾರಂಭವಾಗಲಿದ್ದು, ಆರಂಭಿಕ ದಿನದಂದು ಭಾರತವು 16 ಸ್ಪರ್ಧೆಗಳಲ್ಲಿ 6ರಲ್ಲಿ ಭಾಗವಹಿಸಲಿದೆ. ಅವುಗಳೆಂದರೆ, ರೋಯಿಂಗ್, ಬ್ಯಾಡ್ಮಿಂಟನ್, ಶೂಟಿಂಗ್, ಟೇಬಲ್ ಟೆನಿಸ್, ಟೆನಿಸ್ ಮತ್ತು ಹಾಕಿ.

Continue Reading

ಪ್ರಮುಖ ಸುದ್ದಿ

ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ICC Champions Trophy: 2024-2026ರ ಅವಧಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ಎಲ್ಲಾ ಸ್ವರೂಪಗಳಲ್ಲಿ 61 ಪಂದ್ಯಗಳನ್ನು ಆಡಲಿದೆ. 11 ಟೆಸ್ಟ್, 26 ಏಕದಿನ ಹಾಗೂ 24 ಟಿ20 ಪಂದ್ಯಗಳನ್ನಾಡಲಿದೆ. ಅಂತಾರಾಷ್ಟ್ರೀಯ ದೂರದರ್ಶನ ಹಕ್ಕುಗಳನ್ನು ಮಾರಾಟ ಮಾಡಲು ಮುಂದಾಗಿದೆ.

VISTARANEWS.COM


on

Pakistan Cricket Board
Koo

ಬೆಂಗಳೂರು: ಬಿಸಿಸಿಐ ಶಾಲಾ ಮಕ್ಕಳ ಕ್ರಿಕೆಟ್​ನ ಸಣ್ಣ ಟೂರ್ನಿಯನ್ನು ಆಯೋಜಿಸಿದರೂ ಮಾಧ್ಯಮಗಳು ಅದರ ಪ್ರಸಾರದ ಹಕ್ಕನ್ನು ಪಡೆಯಲು ಕ್ಯೂ ನಿಲ್ಲುತ್ತಾರೆ. ಕೊಟ್ಯಂತರ ರೂಪಾಯಿ ಸುರಿದು ಅದರ ಹಕ್ಕನ್ನು ಪಡೆಯಲು ಮುಂದಾಗುತ್ತಾರೆ. ಆದರೆ, ಪಾಕಿಸ್ತಾನ ಕ್ರಿಕೆಟ್​ ಮಂಡಳಿಯು ಹಾಕಿದ ಅಂತಾರಾಷ್ಟ್ರೀಯ ಬಿಡ್​ ಕೇಳುವವರೇ ಇಲ್ಲದಂತಾಗಿದೆ. ಹೀಗಾಗಿ ಮಂಡಳಿ (PCB) ತನ್ನ ನಿರೀಕ್ಷೆಗಳನ್ನು ಪೂರೈಸದ ಕಾರಣ ಅಂತರರಾಷ್ಟ್ರೀಯ ಮಾಧ್ಯಮ ಹಕ್ಕುಗಳನ್ನು ಪಡೆಯುವಲ್ಲಿ ಮತ್ತೊಮ್ಮೆ ಹಿನ್ನಡೆಯನ್ನು ಎದುರಿಸಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ (ICC Champions Trophy) ಮುನ್ನ ಇದು ದೊಡ್ಡ ಹಿನ್ನಡೆಯಾಗಿದೆ.

ಆಗಸ್ಟ್ 2024 ರಿಂದ ಡಿಸೆಂಬರ್ 2026 ರವರೆಗೆ ದೂರದರ್ಶನ, ಡಿಜಿಟಲ್, ಆಡಿಯೋ, ವೆಬ್ ಮತ್ತು ಮೊಬೈಲ್ ಪ್ಲಾಟ್​ಫಾರ್ಮ್​​ಗಳಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪ್ರಸಾರ ಮಾಡಲು ಪಿಸಿಬಿ ಇತ್ತೀಚೆಗೆ ಎಲ್ಲಾ ಜಾಗತಿಕ ಟೆಂಡರ್​ಗಳನ್ನು ಪ್ರಕಟಿಸಿತ್ತು. ಪಾಕಿಸ್ತಾನ ಕ್ರಿಕೆಟ್ ತಂಡದ ತವರು ಸರಣಿಯು ಆಗಸ್ಟ್ 21 ರಿಂದ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯೊಂದಿಗೆ ಪ್ರಾರಂಭವಾಗಲಿದೆ. ಪಾಕಿಸ್ತಾನವು ಅಕ್ಟೋಬರ್​ನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಆತಿಥ್ಯ ವಹಿಸಲಿದೆ. ತಂಡದ ಫ್ಯೂಚರ್ ಟೂರ್ ಪ್ರೋಗ್ರಾಮ್ಸ್ (ಎಫ್​ಟಿಪಿ) ವೇಳಾಪಟ್ಟಿಯ ಪ್ರಕಾರ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿವೆ.

2024-2026ರ ಅವಧಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ಎಲ್ಲಾ ಸ್ವರೂಪಗಳಲ್ಲಿ 61 ಪಂದ್ಯಗಳನ್ನು ಆಡಲಿದೆ. 11 ಟೆಸ್ಟ್, 26 ಏಕದಿನ ಹಾಗೂ 24 ಟಿ20 ಪಂದ್ಯಗಳನ್ನಾಡಲಿದೆ. ಅಂತಾರಾಷ್ಟ್ರೀಯ ದೂರದರ್ಶನ ಹಕ್ಕುಗಳನ್ನು ಮಾರಾಟ ಮಾಡಲು ಮುಂದಾಗಿದೆ.

ಭಾರೀ ನಿರಾಸೆ

ಅಂತರರಾಷ್ಟ್ರೀಯ ಮಾಧ್ಯಮ ಹಕ್ಕುಗಳನ್ನು ಮಾರಾಟ ಮಾಡುವಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ನಿರೀಕ್ಷೆಗಳನ್ನು ಪೂರೈಸಲಾಗಲಿಲ್ಲ. ಅವರಿಗೆ ಸಲ್ಲಿಕೆಯಾದ ಬಿಡ್​ ಮೂಲ ಮೌಲ್ಯದ ಅರ್ಧದಷ್ಟು ಮಾತ್ರ ಇತ್ತು. ಕ್ರಿಕೆಟ್ ಮಂಡಳಿಯು ಮೂರು ವರ್ಷಗಳ ಅಂತಾರರಾಷ್ಟ್ರೀಯ ಮಾಧ್ಯಮ ಹಕ್ಕುಗಳಿಗಾಗಿ ಸುಮಾರು 584 ಕೋಟಿ ರೂಪಾಯಿ (ಪಾಕಿಸ್ತಾನ) ನಿಗದಿ ಮಾಡಿತ್ತು. ಆದರೆ, ಪ್ರಸಾರಕು ಅದರ ಅರ್ಧದಷ್ಟು ಮೊತ್ತಕ್ಕೆ ಪ್ರಸ್ತಾಪ ಸಲ್ಲಿಸಿದೆ.

ಪಾಕ್ ಕಂಪನಿಯಿಂದ ಸಲ್ಲಿಕೆ

ಪಾಕಿಸ್ತಾನದ ಮಾಧ್ಯಮ ಸಮೂಹ ಮತ್ತು ಖಾಸಗಿ ಕಂಪನಿಯ ಒಕ್ಕೂಟವು ವಿದೇಶಿ ಬಿಡ್ದಾರರಾದ ವಿಲ್ಲೋ ಮತ್ತು ಸ್ಪೋರ್ಟ್ಸ್ ಫೈವ್ ಅವರೊಂದಿಗೆ ಹರಾಜಿನಲ್ಲಿ ಭಾಗವಹಿಸಿತು. ಈ ಪೈಕಿ ಸ್ಪೋರ್ಟ್ಸ್ ಫೈವ್ 218 ಡಾಲರ್​ಗೆ ಬಿಡ್ ಸಲ್ಲಿಸಿದೆ. ಪಾಕಿಸ್ತಾನದ ಕಂಪನಿಯು ಸುಮಾರು 114 ಕೋಟಿ ಪಾಕಿಸ್ತಾನ ರೂಪಾಯ ಬಿಡ್ ಮಾಡಿದರೆ, ವಿಲ್ಲೋ ಸಂಸ್ಥೆಯು 62 ಕೋಟಿ ರೂಪಾಯಿ ಬಿಡ್ ಮಾಡಿತು. ಮೀಸಲು ಬೆಲೆಯನ್ನು ತಲುಪದ ಕಾರಣ ಮಂಡಳಿಯು ಬಿಡ್ದಾರರಿಗೆ ಬೆಲೆಯನ್ನು ಹೆಚ್ಚಿಸಲು ಸೂಚಿಸಿದೆ.

ಇದನ್ನೂ ಓದಿ: Dinesh Karthik : ಇಷ್ಟದ ಐಪಿಎಲ್​ ತಂಡ ಯಾವುದೆಂದು ಬಹಿರಂಗಪಡಿಸಿದ ದಿನೇಶ್ ಕಾರ್ತಿಕ್​

ಎರಡನೇ ಸುತ್ತಿನಲ್ಲಿ, ಸ್ಪೋರ್ಟ್ಸ್ ಫೈವ್ ತಮ್ಮ ಬಿಡ್ ಅನ್ನು ಅದೇ ಮೊತ್ತ ಉಳಿಸಿಕೊಂಡರೆ, ಪಾಕಿಸ್ತಾನಿ ಕಂಪನಿಯು ತಮ್ಮ ಬಿಡ್ ಅನ್ನು ಸ್ವಲ್ಪ ಏರಿಸಿತು. ಆದಾಗ್ಯೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇನ್ನೂ ಮೀಸಲು ಬೆಲೆಯನ್ನು ಪೂರೈಸದ ಕಾರಣ ಎರಡೂ ಪ್ರಸ್ತಾಪಗಳನ್ನು ತಿರಸ್ಕರಿಸಿದೆ.

ಹೊಸ ಟೆಂಡರ್​

ನ್ಯೂಜಿಲೆಂಡ್ ವಿರುದ್ಧದ ತವರು ಸರಣಿ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಮಹಿಳಾ ಸರಣಿಗೆ ಹೊಸ ಟೆಂಡರ್ ನೀಡಲಾಗಿದೆ. ಈ ಸುತ್ತಿನಲ್ಲಿ, ಪಾಕಿಸ್ತಾನಿ ಕಂಪನಿಗಳು ಒಟ್ಟಾಗಿ 2.7 ಕೋಟಿ ಪಾಕಿಸ್ತಾನಿ ರೂಪಾಯಿಗಳು), ವಿಲ್ಲೋ 2 ಕೋಟಿ ರೂಪಾಟಿ ಮತ್ತು ಸ್ಪೋರ್ಟ್ಸ್ ಫೈವ್ 1.39 ಕೋಟಿ ರೂಪಾಯಿ ಬಿಡ್ ಮಾಡಿದವು.

Continue Reading

ಪ್ರಮುಖ ಸುದ್ದಿ

Dinesh Karthik : ಇಷ್ಟದ ಐಪಿಎಲ್​ ತಂಡ ಯಾವುದೆಂದು ಬಹಿರಂಗಪಡಿಸಿದ ದಿನೇಶ್ ಕಾರ್ತಿಕ್​

Dinesh Karthik :

VISTARANEWS.COM


on

Dinesh Karthik
Koo

ಬೆಂಗಳೂರು: ಭಾರತದ ಮಾಜಿ ಬ್ಯಾಟರ್​ ದಿನೇಶ್ ಕಾರ್ತಿಕ್ ತಮ್ಮ ನೆಚ್ಚಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿಯ ಬಗ್ಗೆ ಮಾತನಾಡಿದ್ದಾರೆ. ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಾವು ಆಡಿದ ಅತ್ಯುತ್ತಮ ತಂಡ ಎಂದು ಕರೆದಿದ್ದಾರೆ. ಇದೇ ವೇಲೆ ಅವರು ವಾಸಿಸಲು ಇಷ್ಟಪಡುವ ನಗರದ ಬಗ್ಗೆಯೂ ಮಾತನಾಡಿದರು.

ದಿನೇಶ್ ಕಾರ್ತಿಕ್ ಭಾರತೀಯ ಕ್ರಿಕೆಟ್ನ ಶ್ರೇಷ್ಠ ಆಟಗಾರರಲ್ಲಿ ಒಬ್ಬರು. ಕೀಪರ್-ಬ್ಯಾಟರ್​ ಎಲ್ಲಾ ಮೂರು ಸ್ವರೂಪಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದರು. ಸ್ಥಿರವಾಗಿ ರನ್ ಗಳಿಸಿದ್ದರು. ಇದಲ್ಲದೆ, ಅವರು ಇಂಡಿಯನ್ ಪ್ರೀಮಿಯರ್ ಲೀಗ್​​​ನಲ್ಲಿ ವೃತ್ತಿಜೀವನದುದ್ದಕ್ಕೂ ಅದ್ಭುತವಾಗಿ ಆಡಿದರು.

ದಿನೇಶ್ ಕಾರ್ತಿಕ್ ಐಪಿಎಲ್​​ನಲ್ಲಿ ಕೋಲ್ಕತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್, ಡೆಲ್ಲಿ ಡೇರ್ ಡೆವಿಲ್ಸ್, ಗುಜರಾತ್ ಲಯನ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದಾರೆ. ಅವರು ತಂಡಗಳಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. 2024 ರ ಆರಂಭದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಕೊನೆಯ ಆವೃತ್ತಿಯಲ್ಲಿ ಆರ್​ಸಿಬಿ ಪರ ಆಡುತ್ತಾ ವೃತ್ತಿಜೀವನವನ್ನು ಕೊನೆಗೊಳಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿನೇಶ್ ಕಾರ್ತಿಕ್ ಅಭಿಮಾನಿಗಳಿಂದ ಅಪಾರ ಪ್ರೀತಿ ಪಡೆದಿದ್ದರು. ಲೀಗ್​​ನ ಕೊನೆಯ ಆವೃತ್ತಿಯಲ್ಲಿ, ಕೀಪರ್-ಬ್ಯಾಟರ್​ ಅವರು ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಅವರು 15 ಪಂದ್ಯಗಳಲ್ಲಿ 187.36 ಸ್ಟ್ರೈಕ್ ರೇಟ್ ನಲ್ಲಿ 326 ರನ್ ಗಳಿಸಿದ್ದಾರೆ. ತಮ್ಮ ತಂಡವು ಪ್ಲೇಆಫ್ ತಲುಪಲು ಸಹಾಯ ಮಾಡಿದ್ದರು. ಸಂವಾದದ ಅವಧಿಯಲ್ಲಿ ದಿನೇಶ್ ಕಾರ್ತಿಕ್ ಅವರನ್ನು ನೀವು ಆಡಿದ ನೆಚ್ಚಿನ ಐಪಿಎಲ್ ತಂಡವನ್ನು ಹೆಸರಿಸಲು ಕೋರಲಾಯಿತು. ಈ ವೇಳೆ ಆರ್​ಸಿಬಿ ಎಂದರು. ಜತೆಗೆ ಅದರ ಹಿಂದಿನ ಕಾರಣವನ್ನು ವಿವರಿಸಿದ್ದಾರೆ. ಫ್ರಾಂಚೈಸಿ ಅತ್ಯುತ್ತಮ ಅಭಿಮಾನಿ ಬಳಗ ಹೊಂದಿದೆ ಎಂದು ಹೇಳಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋತಾಗ ಅಭಿಮಾನಿಗಳು ಬೇಸರ ಮಾಡಿಕೊಳ್ಳುತ್ತಾರೆ. ಅಲ್ಲದೆ ಪ್ರೀತಿ ತೋರುತ್ತಾರೆ ಎಂದು ವಿವರಿಸಿದರು. ಈ ತಂಡದೊಂದಿಗೆ ಆಡುವಾಗ ಆನಂದಿಸಿದ್ದಾರೆ. ಮೋಜಿನ ಸಮಯವನ್ನು ಕಳೆದಿದ್ದಾರೆ ಎಂದು ಹೇಳಿದ್ದಾರೆ.

ಆರ್​ಸಿಬಿ ಪರ ಆಡಲು ನನ್ನ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ. ಇದು ಉತ್ತಮ ಅಭಿಮಾನಿಗಳನ್ನು ಹೊಂದಿದೆ. ಅದು ಆ ತಂಡಕ್ಕಾಗಿ ಆಡುವ ಉತ್ತಮ ವಿಷಯ. ಅವರು ನಿಮ್ಮನ್ನು ಪ್ರೀತಿಸುತ್ತಾರೆ. ನೀವು ಉತ್ತಮವಾಗಿ ಕಾರ್ಯನಿರ್ವಹಿಸದಿದ್ದರೆ ಅವರು ನಿಮ್ಮ ಮೇಲೂ ಕಠಿಣವಾಗಿ ಟೀಕೆ ಮಾಡುತ್ತಾರೆ. ಆರ್​ಸಿಬಿಯಲ್ಲಿ ಆಡಿರುವುದು ನಿಜವಾದ ಮೋಜಿನ ಸಮಯ ಎಂದು ಹೇಳಿದರು.

ದಿನೇಶ್ ಕಾರ್ತಿಕ್ ಐಪಿಎಲ್​​ನಲ್ಲಿ 257 ಪಂದ್ಯಗಳನ್ನು ಆಡಿದ್ದು, 26.32 ಸರಾಸರಿಯಲ್ಲಿ 4,842 ರನ್ ಗಳಿಸಿದ್ದಾರೆ. ಅವರು ಈಗ ಪಂದ್ಯಾವಳಿಯ ಮುಂದಿನ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾರ್ಗದರ್ಶಕರಾಗಿ ಸೇರಲಿದ್ದಾರೆ.

ದಿನೇಶ್ ಕಾರ್ತಿಕ್ ನೆಚ್ಚಿನ ನಗರ

ದಿನೇಶ್ ಕಾರ್ತಿಕ್ ಅವರಿಗೆ ಲಂಡನ್ ನೆಚ್ಚಿನ ನಗರವಾಗಿದೆ. ಇದರ ಹಿಂದಿನ ಕಾರಣ ವಿವರಿಸುವಾಗ ಅವರು ಮತ್ತು ಅವರ ಕುಟುಂಬವು ಅಲ್ಲಿ ವಾಸಿಸಲು ಇಷ್ಟಪಡುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Venkatesh Iyer : ಟೀಮ್ ಇಂಡಿಯಾದಿಂದ ನಿರ್ಲಕ್ಷ್ಯ, ಹೊಸ ತಂಡ ಸೇರಿದ ವೆಂಕಟೇಶ್ ಅಯ್ಯರ್​

ಲಂಡನ್. ನನಗೆ ಮತ್ತು ನನ್ನ ಕುಟುಂಬಕ್ಕೆ ಇಷ್ಟದ ನಗರ. ಮಳೆಯಾಗದಿದ್ದಾಗ ನಾನು ನಗರ ಮತ್ತು ಹವಾಮಾನ ಪ್ರೀತಿಸುತ್ತೇನೆ. ಮಳೆಯಾಗದಿದ್ದಾಗ ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ದಿನೇಶ್ ಕಾರ್ತಿಕ್ 2004ರಿಂದ 2022ರ ಅವಧಿಯಲ್ಲಿ 26 ಟೆಸ್ಟ್, 94 ಏಕದಿನ ಮತ್ತು 60 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ತಮ್ಮ 19 ನೇ ವಯಸ್ಸಿನಲ್ಲಿ ಲಾರ್ಡ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದರು. ಟೆಸ್ಟ್ನಲ್ಲಿ 1025 ರನ್, ಏಕದಿನದಲ್ಲಿ 1725 ರನ್ ಮತ್ತು ಟಿ 20ಐನಲ್ಲಿ 686 ರನ್ ಗಳಿಸಿದ್ದಾರೆ. 2007ರ ಐಸಿಸಿ ಟಿ20 ವಿಶ್ವಕಪ್ ಗೆದ್ದಿದ್ದರು.

Continue Reading

ಪ್ರಮುಖ ಸುದ್ದಿ

Venkatesh Iyer : ಟೀಮ್ ಇಂಡಿಯಾದಿಂದ ನಿರ್ಲಕ್ಷ್ಯ, ಹೊಸ ತಂಡ ಸೇರಿದ ವೆಂಕಟೇಶ್ ಅಯ್ಯರ್​

Venkatesh Iyer : ವೆಂಕಟೇಶ್ ಅಯ್ಯರ್ ದೇಶೀಯ ಸರ್ಕೀಟ್​​ ಮತ್ತು ಐಪಿಎಲ್​​ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಲಂಕಾಶೈರ್​ ಪರ ಉತ್ತಮ ಪ್ರದರ್ಶನ ಮುಂದುವರಿಸುವ ಮತ್ತು ದುಲೀಪ್ ಟ್ರೋಫಿಯಲ್ಲಿ ಪ್ರಭಾವ ಬೀರುವ ಭರವಸೆ ಅವರು ಹೊಂದಿದ್ದಾರೆ. 2022 ರ ಆರಂಭದಲ್ಲಿ ಶ್ರೀಲಂಕಾ ವಿರುದ್ಧದ ಟಿ 20 ಐ ಸರಣಿಯಲ್ಲಿ ಅವರು ಕೊನೆಯ ಬಾರಿಗೆ ತಂಡಕ್ಕಾಗಿ ಕಾಣಿಸಿಕೊಂಡಿದ್ದರು.

VISTARANEWS.COM


on

Venkatesh Iyer
Koo

ಬೆಂಗಳೂರು: ಭಾರತ ತಂಡಕ್ಕೆ ಆಯ್ಕೆ ಮಾಡುವ ವಿಚಾರದಲ್ಲಿ ಸತತವಾಗಿ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ (KKR) ಆಲ್​ರೌಂಡರ್​ ವೆಂಕಟೇಶ್ ಅಯ್ಯರ್ (Venkatesh Iyer) ಏಕದಿನ ಕಪ್ ಮತ್ತು ಕೌಂಟಿ ಚಾಂಪಿಯನ್​ಶಿಪ್​ಗಾಗಿ ಲಂಕಾಶೈರ್​ ತಂಡದೊಂದಿಗೆ ಐದು ವಾರಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪರ ಅದ್ಭುತ ಪ್ರದರ್ಶನ ನೀಡಿದ ನಂತರ ಅವರಿಗೆ ಈ ಅವಕಾಶ ಸಿಕ್ಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ (IPL 2024) ಕೋಲ್ಕತಾ ನೈಟ್ ರೈಡರ್ಸ್ (KKR) ಗೆಲ್ಲುವಲ್ಲಿ ವೆಂಕಟೇಶ್ ಅಯ್ಯರ್ ಪ್ರಮುಖ ಪಾತ್ರ ವಹಿಸಿದ್ದರು. ಆಲ್​ರೌಂಡರ್​ ಫ್ರಾಂಚೈಸಿಗಾಗಿ 370 ರನ್ ಗಳಿಸಿದ್ದರು. 4 ಅರ್ಧಶತಕಗಳನ್ನು ಬಾರಿಸಿದರು. ಅವರು ಪಂದ್ಯಾವಳಿಯ ಇತಿಹಾಸದಲ್ಲಿ ತಮ್ಮ ತಂಡಕ್ಕೆ ಮೂರನೇ ಪ್ರಶಸ್ತಿ ಎತ್ತಿಹಿಡಿಯಲು ಸಹಾಯ ಮಾಡಿದರು. ಅವರ ಸ್ಥಿರ ಪ್ರದರ್ಶನದ ಹೊರತಾಗಿಯೂ ವೆಂಕಟೇಶ್ ಅಯ್ಯರ್ ಅವರಿಗೆ ಭಾರತೀಯ ತಂಡದಲ್ಲಿ ಅವಕಾಶ ಸಿಗಲಿಲ್ಲ. ಆಲ್​ರೌಂಡರ್​ ಈಗ ಯುಕೆಯಲ್ಲಿ ಆಡಲು ನಿರ್ಧರಿಸಿದ್ದಾರೆ. ಅವರು ಲಂಕಾಶೈರ್​ನೊಂದಿಗೆ ಐದು ವಾರಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಸೆಪ್ಟೆಂಬರ್​ನಲ್ಲಿ ನಡೆಯಲಿರುವ ದುಲೀಪ್ ಟ್ರೋಫಿಗಾಗಿ ಭಾರತಕ್ಕೆ ಮರಳಲಿದ್ದಾರೆ.

ವೆಂಕಟೇಶ್ ಅಯ್ಯರ್ ದೇಶೀಯ ಸರ್ಕೀಟ್​​ ಮತ್ತು ಐಪಿಎಲ್​​ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಲಂಕಾಶೈರ್​ ಪರ ಉತ್ತಮ ಪ್ರದರ್ಶನ ಮುಂದುವರಿಸುವ ಮತ್ತು ದುಲೀಪ್ ಟ್ರೋಫಿಯಲ್ಲಿ ಪ್ರಭಾವ ಬೀರುವ ಭರವಸೆ ಅವರು ಹೊಂದಿದ್ದಾರೆ. 2022 ರ ಆರಂಭದಲ್ಲಿ ಶ್ರೀಲಂಕಾ ವಿರುದ್ಧದ ಟಿ 20 ಐ ಸರಣಿಯಲ್ಲಿ ಅವರು ಕೊನೆಯ ಬಾರಿಗೆ ತಂಡಕ್ಕಾಗಿ ಕಾಣಿಸಿಕೊಂಡಿದ್ದರು.

ವೆಂಕಟೇಶ್ ಅಯ್ಯರ್ ಐತಿಹಾಸಿಕ ಕ್ಲಬ್​​ ಪರ ಆಡುವ ಉತ್ಸಾಹದ ಬಗ್ಗೆ ಮಾತನಾಡಿದ್ದಾರೆ, ತಮ್ಮ ಕೌಶಲಗಳನ್ನು ಪರೀಕ್ಷಿಸಲು ಮತ್ತು ತನ್ನ ತಂಡವನ್ನು ಗೆಲ್ಲಲು ಸಹಾಯ ಮಾಡಲು ಇದು ಉತ್ತಮ ಅವಕಾಶ ಎಂದು ಅವರು ಒಪ್ಪಿಕೊಂಡರು. ಅಧಿಕೃತ ಹೇಳಿಕೆಯಲ್ಲಿ ಅವರು ಈ ರೀತಿ ತಿಳಿಸಿದ್ದಾರೆ.

ಇಂಗ್ಲೆಂಡ್​ಗೆ ತೆರಳಲು ಮತ್ತು ನನ್ನ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡುವ ಅವಕಾಶವನ್ನು ಪಡೆಯಲು ಉತ್ಸುಕನಾಗಿದ್ದೇನೆ. ಲಂಕಾಶೈರ್​ ಅತ್ಯಂತ ಐತಿಹಾಸಿಕ ಕೌಂಟಿಯಾಗಿದ್ದು, ಭಾರತೀಯ ಆಟಗಾರರನ್ನು ತಮ್ಮ ಕ್ಲಬ್​ಗೆ ಸ್ವಾಗತಿಸುವ ದೀರ್ಘ ಇತಿಹಾಸ ಹೊಂದಿದೆ. ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್​ ಸ್ಟೇಡಿಯಮ್​ನಲ್ಲಿ ಕೆಂಪು ಗುಲಾಬಿ ಬಣ್ಣ ಜೆರ್ಸಿ ಧರಿಸಿದ ಲೆಜೆಂಡ್​ಗಳಾದ ಫಾರೂಕ್ ಎಂಜಿನಿಯರ್, ಸೌರವ್ ಗಂಗೂಲಿ, ವಿವಿಎಸ್ ಲಕ್ಷ್ಮಣ್ ಮತ್ತು ಇತ್ತೀಚೆಗೆ ವಾಷಿಂಗ್ಟನ್ ಸುಂದರ್ ಅವರನ್ನು ಅನುಕರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: India Tour of Sri Lanka 2024 : ಶ್ರೀಲಂಕಾ ತಂಡಕ್ಕೆ 3ನೇ ಹೊಡೆತ; ಭಾರತ ವಿರುದ್ಧದ ಟಿ20 ಸರಣಿಗೆ ಬಿನುರಾ ಫರ್ನಾಂಡೊ ಅಲಭ್ಯ

ಇಂಗ್ಲೆಂಡ್​ನ ಪರಿಸ್ಥಿತಿಗಳಲ್ಲಿ ಏಕದಿನ ಮತ್ತು ಪ್ರಥಮ ದರ್ಜೆ ಕ್ರಿಕೆಟ್​​ನಲ್ಲಿ ನನ್ನ ಕೌಶಲಗಳನ್ನು ಪರೀಕ್ಷಿಸಲು ಉತ್ತಮ ವೇದಿಕೆಯಾಗಿದೆ. ನಾನು ಅಭಿಮಾನಿಗಳನ್ನು ರಂಜಿಸಬಲ್ಲೆ ಮತ್ತು ಈ ಬೇಸಿಗೆಯಲ್ಲಿ ಎರಡೂ ಸ್ವರೂಪಗಳಲ್ಲಿ ತಮ್ಮ ಗುರಿ ಸಾಧಿಸಲು ನನ್ನ ಲಂಕಾಶೈರ್​ ತಂಡದ ಆಟಗಾರರಿಗೆ ಸಹಾಯ ಮಾಡಬಹುದು ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

Continue Reading
Advertisement
Health Tips Kannada
ಆರೋಗ್ಯ9 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ54 mins ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ1 hour ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ1 hour ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ1 hour ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ6 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Vijay Mallya
ದೇಶ7 hours ago

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ13 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ15 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌