ಅದೃಷ್ಟ ಕೈಹಿಡಿದು, ಫೈನಲ್ ತಲುಪುವುದೇ ದಕ್ಷಿಣ ಆಫ್ರಿಕಾ? ಹೇಗಿದೆ ಸೆಮಿ ಇತಿಹಾಸ? Vistara News

ಕ್ರಿಕೆಟ್

ಅದೃಷ್ಟ ಕೈಹಿಡಿದು, ಫೈನಲ್ ತಲುಪುವುದೇ ದಕ್ಷಿಣ ಆಫ್ರಿಕಾ? ಹೇಗಿದೆ ಸೆಮಿ ಇತಿಹಾಸ?

ಒಟ್ಟು ನಾಲ್ಕು ಬಾರಿ ಸೆಮಿಫೈನಲ್ ಆಡಿರುವ ದಕ್ಷಿಣ ಆಫ್ರಿಕಾ ಒಮ್ಮೆಯೂ ಫೈನಲ್​ ಪ್ರವೇಶಿಸುವಲ್ಲಿ ಯಶಸ್ಸು ಕಂಡಿಲ್ಲ. ಈ ಬಾರಿಯಾದರೂ ಫೈನಲ್ ಟಿಕೆಟ್​ ಪಡೆದೀತೇ ಎನ್ನುವುದು ಗುರುವಾರ ನಿರ್ಧಾರವಾಗಲಿದೆ.

VISTARANEWS.COM


on

South Africa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಕ್ಷಿಣ ಆಫ್ರಿಕಾ ತಂಡ ಗುರುವಾರ ಕೋಲ್ಕೊತಾದ ಈಡನ್​ ಗಾರ್ಡನ್ಸ್​ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್​ ಪಂದ್ಯವನ್ನಾಡಲು ಸಜ್ಜಾಗಿದೆ. ಒಟ್ಟು ನಾಲ್ಕು ಬಾರಿ ಸೆಮಿಫೈನಲ್ ಆಡಿರುವ ದಕ್ಷಿಣ ಆಫ್ರಿಕಾ ಒಮ್ಮೆಯೂ ಫೈನಲ್​ ಪ್ರವೇಶಿಸುವಲ್ಲಿ ಯಶಸ್ಸು ಕಂಡಿಲ್ಲ. ಈ ಬಾರಿಯಾದರೂ ಫೈನಲ್ ಟಿಕೆಟ್​ ಪಡೆದೀತೇ ಎನ್ನುವುದು ಗುರುವಾರ ನಿರ್ಧಾರವಾಗಲಿದೆ. ದಕ್ಷಿಣ ಆಫ್ರಿಕಾ ತಂಡದ ವಿಶ್ವಕಪ್​ ಹಿನ್ನೊಟ ಹೀಗಿದೆ.

ಡಕ್‌ವರ್ತ್‌-ಲೂಯಿಸ್‌ ನಿಯಮಕ್ಕೆ ಬಲಿಯಾದ ದಕ್ಷಿಣ ಆಫ್ರಿಕಾ

ಪ್ರಥಮ ಬಾರಿಗೆ ವಿಶ್ವಕಪ್‌ ಆಡಲಿಳಿದ ದಕ್ಷಿಣ ಆಫ್ರಿಕಾ ತಂಡ 1992ರ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಸೆಮಿಫೈನಲ್​ ಪ್ರವೇಶ ಪಡೆಯಿತು. ಆ ಟೂರ್ನಿಯಲ್ಲಿ ಅತ್ಯಂತ ಬಲಿಷ್ಠವಾಗಿದ್ದ ಹರಿಣ ಪಡೆ ವಿಶ್ವಕಪ್​ ಗೆಲ್ಲುವ ನೆಚ್ಚಿನ ತಂಡವೂ ಆಗಿತ್ತು. ಸಿಡ್ನಿಯಲ್ಲಿ ನಡೆದ ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್‌-ದಕ್ಷಿಣ ಆಫ್ರಿಕಾ ಹೋರಾಟಕ್ಕಿಳಿದಿದ್ದವು. ಮೊದಲು ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌ 45 ಓವರ್‌ಗಳಲ್ಲಿ 6 ವಿಕೆಟಿಗೆ 256 ರನ್‌ ಮಾಡಿತ್ತು. ಅಮೋಘ ಚೇಸಿಂಗ್‌ ನಡೆಸಿದ ದಕ್ಷಿಣ ಆಫ್ರಿಕಾ ಗೆಲುವಿನ ಅಂಚಿಗೆ ಬಂದಿತ್ತು. 4 ವಿಕೆಟ್‌ ನೆರವಿನಿಂದ ಕೊನೆಯ 13 ಎಸೆತಗಳಲ್ಲಿ 22 ತೆಗೆಯುವ ಸುಲಭ ಸವಾಲು ಎದುರಿತ್ತು.

ಎಲ್ಲರಿಗೂ ಶಾಕ್‌!

ಇನ್ನೇನು ದಕ್ಷಿಣ ಆಫ್ರಿಕಾ ಗೆಲುವು ಕಾಣುತ್ತದೆ ಎನ್ನುವ ಹೊತ್ತಿಗೆ ಸರಿಯಾಗಿ ಮಳೆ ಸುರಿಯಿತು. ಪಂದ್ಯ ಸ್ಥಗಿತಗೊಂಡಿತು. ಆಗ ಯಾರಿಗೂ ಮಳೆ ನಿಯಮದ ತಿಳಿವಳಿಕೆ ಇರಲಿಲ್ಲ. ದಕ್ಷಿಣ ಆಫ್ರಿಕಾ ಇಲ್ಲಿಂದಲೇ ಆಟ ಮುಂದುವರಿಸಿ ಗೆದ್ದು ಬರುತ್ತದೆಂದೇ ಎಲ್ಲರೂ ಭಾವಿಸಿದ್ದರು. ಆದರೆ ಅಲ್ಲಿ ಸಂಭವಿಸಿದ್ದೇ ಬೇರೆ. ಸಿಡ್ನಿ ಅಂಗಳದ ದೈತ್ಯ ಸ್ಕೋರ್‌ಬೋರ್ಡ್​ನಲ್ಲಿ ದಕ್ಷಿಣ ಆಫ್ರಿಕಾಕ್ಕೆ ಒಂದು ಎಸೆತದಿಂದ 22 ರನ್‌ ತೆಗೆಯುವ ಮರು ನಿಗದಿತ ಗುರಿಯನ್ನು ಬಿತ್ತರಿಸಿದಾಗ ಎಲ್ಲರಿಗೂ ಅಚ್ಚರಿ ಮೂಡಿತ್ತು.

ಇಂಗ್ಲೆಂಡ್‌ ತಂಡ ಬ್ಯಾಟಿಂಗ್​ ಇನ್ನಿಂಗ್ಸ್‌ ವೇಳೆ ಓವರ್‌ ಗತಿಯನ್ನು ಕಾಯ್ದುಕೊಳ್ಳದಿದ್ದುದು, ಮಳೆಯಿಂದ ಸಂಭವಿಸಿದ ನಷ್ಟವನ್ನೆಲ್ಲ ಪರಿಗಣಿಸಿ ನೂತನ ನಿಯಮದಂತೆ ಗುರಿಯನ್ನು ಮರು ನಿಗದಿಗೊಳಿಸಲಾಗಿತ್ತು. ನಾಟೌಟ್‌ ಬ್ಯಾಟ್ಸ್‌ಮನ್‌ಗಳಾಗಿದ್ದ ಬ್ರಿಯಾನ್‌ ಮೆಕ್‌ಮಿಲನ್‌ (21) ಮತ್ತು ಡೇವಿಡ್‌ ರಿಚರ್ಡ್‌ಸನ್‌ (13) ತೀವ್ರ ಹತಾಶೆಯಿಂದ ವಾಪಸ್‌ ಕ್ರೀಸಿಗೆ ಬರುತ್ತಿದ್ದ ದೃಶ್ಯಾವಳಿ ಇಂದಿಗೂ ಕಣ್ಣಿಗೆ ಕಟ್ಟಿದಂತಿದೆ.

2 ಬಾರಿ ಆಸೀಸ್ ವಿರುದ್ಧ ಸೋಲು

ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾ ವಿರುದ್ಧ ಆಡುತ್ತಿರುವ ಮೂರನೇ ವಿಶ್ವಕಪ್​ ಸೆಮಿಫೈನಲ್​ ಇದಾಗಿದೆ. ಇದಕ್ಕೂ ಮುನ್ನ 1999ರಲ್ಲಿ ಮತ್ತು 2007ರಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್​ ಪಂದ್ಯವನ್ನಾಡಿತ್ತು. ಆದರೆ ಎರಡೂ ಪಂದ್ಯಗಳಲ್ಲಿಯೂ ಸೋಲು ಕಂಡಿತ್ತು. ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ 1999ರ ವಿಶ್ವಕಪ್​ ಸೆಮಿಫೈನಲ್​ನಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಆಸ್ಟ್ರೇಲಿಯಾ 213ರನ್ ಬಾರಿಸಿತು. ಗುರು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಕೂಡ 213ರನ್​ಗೆ ಆಲೌಟ್​ ಆಯಿತು. ಪಂದ್ಯ ಟೈಗೊಂಡಿತು. ಲೀಗ್​ ಹಂತದಲ್ಲಿ ಉತ್ತಮ ರನ್​ರೇಟ್​ ಕಾಯ್ದುಕೊಂಡಿದ್ದ ಆಸ್ಟ್ರೇಲಿಯಾ ನೇರವಾಗಿ ಫೈನಲ್​ ಪ್ರವೇಶಿಸಿತ್ತು. ಇಲ್ಲಿಯೂ ದಕ್ಷಿಣ ಆಫ್ರಿಕಾಗೆ ಅದೃಷ್ಟ ಕೈಕೊಟ್ಟಿತು.

ಇದನ್ನೂ ಓದಿ AUS vs SA: ದಕ್ಷಿಣ ಆಫ್ರಿಕಾ-ಆಸ್ಟ್ರೇಲಿಯಾ ನಡುವಣ ವಿಶ್ವಕಪ್​ ದಾಖಲೆ ಹೇಗಿದೆ?

2007ರಲ್ಲಿ ಮತ್ತೆ ಆಸೀಸ್​ ಎದುರಾಳಿ

2007ರ ವಿಶ್ವಕಪ್​ ಟೂರ್ನಿಯಲ್ಲಿ ಮತ್ತೆ ಆಸ್ಟ್ರೇಲಿಯಾ ತಂಡ ಸೆಮಿಯಲ್ಲಿ ಎದುರಾಯಿತು. ಈ ವೇಳೆ ದಕ್ಷಿಣ ಆಫ್ರಿಕಾ ಹಿಂದಿನ ಸೆಮಿ ಸೋಲಿನ ಸೇಡು ತೀರಿಸಿಕೊಳ್ಳಬಹುದು ಎಂದು ಎಲ್ಲರು ನಿರೀಕ್ಷೆ ಮಾಡಿದ್ದರು. ಆದರೆ ಆಸೀಸ್​ ಈ ಪಂದ್ಯವನ್ನು 7 ವಿಕೆಟ್​ಗಳಿಂದ ಗೆದ್ದು ಬೀಗಿತ್ತು. ಮೊದಲು ಬ್ಯಾಟಿಂಗ್​ ನಡೆಸಿದ ದಕ್ಷಿಣ ಆಫ್ರಿಕಾ ಜಾಕ್​ ಕಾಲಿಸ್​ ಮತ್ತು ಜಾಂಟಿ ರೋಡ್ಸ್ ಅವರ ಸಣ್ಣ ಮಟ್ಟದ ಬ್ಯಾಟಿಂಗ್​ ಹೋರಾಟದಿಂದ 149ಕ್ಕೆ ಆಲೌಟ್​ ಆಯಿತು. ಸುಲಭ ಮೊತ್ತವನ್ನು ಬೆನ್ನಟ್ಟಿದ ಆಸೀಸ್​ 3 ವಿಕೆಟ್​ಗೆ 150 ರನ್​ ಬಾರಿಸಿ ಫೈನಲ್​ ಪ್ರವೇಶ ಪಡೆಯಿತು.

ಮತ್ತೆ ಕಾಡಿದ ಮಳೆ

2015ರ ವಿಶ್ವಕಪ್​ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಅತ್ಯಂತ ಬಲಿಷ್ಠ ಆಟಗಾರರನ್ನು ಒಳಗೊಂಡ ತಂಡವಾಗಿ ಕಾಣಿಸಿಕೊಂಡಿತ್ತು. ಸೆಮಿಫೈನಲ್​ನಲ್ಲಿ ನ್ಯೂಜಿಲ್ಯಾಂಡ್​ ತಂಡ ಎದುರಾಯಿತು. ಇಲ್ಲಿಯೂ ದಕ್ಷಿಣ ಆಫಿಕ್ರಾ ತಂಡಕ್ಕೆ ಮಳೆ ಕಂಟವಾಯಿತು. ಮಳೆಯಿಂದ ಈ ಪಂದ್ಯವನ್ನು ಡಕ್​ವರ್ತ್​ ನಿಯಮದ ಅನುಸಾರ 43 ಓವರ್​ಗೆ ಸೀಮಿತಗೊಳಿಸಲಾಯಿತು. ಮೊದಲು ಬ್ಯಾಟಿಂಗ್​ ನಡೆಸಿದ ದಕ್ಷಿಣ ಆಫ್ರಿಕಾ 5 ವಿಕೆಟ್​ಗೆ 281 ರನ್​ ಬಾರಿಸಿತು. ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್​ ತಂಡ ಹಲವು ಜೀವದಾನ ಪಡೆದು 4 ವಿಕೆಟ್​ಗಳ ಗೆಲುವು ಸಾಧಿಸಿತು. ಸ್ಟಾರ್​ ಫೀಲ್ಡರ್​ಗಳಾಗಿದ್ದ ಡಿ ವಿಲಿಯರ್ಸ್​, ಡು ಪ್ಲೆಸಿಸ್​ ಹೀಗೆ ಹಲವು ಆಟಗಾರರು ಸುಲಭ ಕ್ಯಾಚ್​ ಮತ್ತು ರನೌಟ್​ ಎಡವಟ್ಟು ನಡೆಸಿದ ಪರಿಣಾಮ ತಂಡ ಸೋಲು ಕಂಡಿತು. ಡಿ ವಿಲಿಯರ್ಸ್​ ಸೇರಿ ಕೆಲ ಆಟಗಾರರು ಕಣ್ಣೀರು ಸುರಿಸುತ್ತಾ ಮೈದಾನ ತೊರೆದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Jasprit Bumrah : ಬುಮ್ರಾ ಚಿತ್ರ ಹಾಕಿ ಎಲ್ಲರಿಗೂ ಸಂದೇಶ ರವಾನಿಸಿದ ಮುಂಬಯಿ ಇಂಡಿಯನ್ಸ್​​​

ಹಾರ್ದಿಕ್ ಪಾಂಡ್ಯ ಫ್ರಾಂಚೈಸಿಗೆ ಮರಳುವುದನ್ನು ಮುಂಬೈ ಇಂಡಿಯನ್ಸ್ ಘೋಷಿಸಿದ ಒಂದು ದಿನದ ನಂತರ ಬುಮ್ರಾ (Jasprit Bumrah) ರಹಸ್ಯ ಸೋಶಿಯಲ್​ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದರು.

VISTARANEWS.COM


on

Jasprit bumarh
Koo

ಮುಂಬಯಿ: ಒಂದು ವಾರದ ಹಿಂದೆ, ಜಸ್ಪ್ರೀತ್ ಬುಮ್ರಾ (Jasprit Bumrah) ಸೋಶಿಯಲ್ ಮೀಡಿಯಾಗಳಲ್ಲಿ ರಹಸ್ಯ ಪೋಸ್ಟ್ ಒಂದನ್ನು ಮಾಡಿದ್ದರು. ಅದು ಅವರ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಭಿನ್ನಾಭಿಪ್ರಾಯದ ವದಂತಿಗಳಿಗೆ ಕಾರಣವಾಯಿತು. ಹಾರ್ದಿಕ್ ಪಾಂಡ್ಯ ಫ್ರಾಂಚೈಸಿಗೆ ಮರಳುವುದಾಗಿ ಘೋಷಿಸಿದ ನಂತರ ಈ ಬಿರುಕು ಉಂಟಾಗಿದೆ ಎಂದು ಆರೋಪಿಸಲಾಗಿದೆ. ರೋಹಿತ್ ಶರ್ಮಾ ನಿವೃತ್ತರಾದ ನಂತರ ನಾಯಕತ್ವವು ತನ್ನದಾಗಿರುತ್ತದೆ ಎಂದು ಭಾವಿಸಿದ್ದರಿಂದ ಬುಮ್ರಾ ಪಾಂಡ್ಯ ಅವರ ಮರಳುವಿಕೆಯ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದಾರೆ. ಆದಾಗ್ಯೂ, ಎಂಐ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಭಿನ್ನಾಭಿಪ್ರಾಯದ ಈ ವದಂತಿಗಳನ್ನು ತಳ್ಳಿಹಾಕಿದೆ.

ಮುಂಬೈ ಇಂಡಿಯನ್ಸ್ ತನ್ನ ಖಾತೆಯಲ್ಲಿ ಜಸ್ಪ್ರೀತ್ ಬುಮ್ರಾ ಅವರ ಚಿತ್ರವನ್ನು ಪೋಸ್ಟ್ ಮಾಡಿದ್ದು, “ಮೌನವು ಕೆಲವೊಮ್ಮೆ ಉತ್ತಮ ಉತ್ತರವಾಗಿದೆ” ಎಂದು ಉಲ್ಲೇಖಿಸಿದೆ. ಐಪಿಎಲ್ 2024 ರ ಹರಾಜಿಗೆ ಮುಂಚಿತವಾಗಿ ಬುಮ್ರಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆದು ಚೆನ್ನೈ ಸೂಪರ್ ಕಿಂಗ್ಸ್​​ ತಂಡಕ್ಕೆ ಹೋಗುತ್ತಾರೆ ಎಂದು ಅಭಿಮಾನಿಗಳು ಊಹಿಸಿದ್ದರು.

ಈ ಪೋಸ್ಟ್ ಭಿನ್ನಾಭಿಪ್ರಾಯದ ವದಂತಿಗಳನ್ನು ತಳ್ಳಿಹಾಕಿದರೂ ಮೂಲ ಪ್ರಶ್ನೆ ಹಾಗೆಯೇ ಉಳಿದಿದೆ. ರೋಹಿತ್ ಶರ್ಮಾ ಕೆಳಗಿಳಿದ ನಂತರ ಮುಂಬೈ ಇಂಡಿಯನ್ಸ್ ತಂಡವನ್ನು ಯಾರು ಮುನ್ನಡೆಸುತ್ತಾರೆ ಎಂಬುದು.

ಬುಮ್ರಾ- ಪಾಂಡ್ಯರಲ್ಲ ನಾಯಕ ಯಾರು?

ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದಾರೆ. ಅವರ ಹೆಸರಿನಲ್ಲಿ 5 ಪ್ರಶಸ್ತಿಗಳಿವೆ. ಆದಾಗ್ಯೂ, ಅವರ ವೃತ್ತಿಜೀವನ ಕೊನೇ ಹಂತದಲ್ಲಿದೆ. ಐಪಿಎಲ್ 2024 ರಲ್ಲಿ 37 ವರ್ಷದ ರೋಹಿತ್​ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ ಆಔಋ ನಂತರ ನಾಯಕತ್ವವನ್ನು ಯಾರು ಮುನ್ನಡೆಸುತ್ತಾರೆ ಎಂಬುದೇ ಪ್ರಶ್ನೆಯಾಗಿದೆ.

ಇದನ್ನೂ ಓದಿ : ಜಗಳಗಂಟ ಗಂಭೀರ್​ ಕರಾಳ ಮುಖ ತೆರೆದಿಟ್ಟ ಶ್ರೀಶಾಂತ್‌; ವಿಡಿಯೊ ವೈರಲ್​ 

ಎರಡು ವರ್ಷಗಳ ಹಿಂದೆ ಗುಜರಾತ್ ಟೈಟಾನ್ಸ್​​ಗೆ ತೆರಳಿದ್ದ ಪಾಂಡ್ಯ ನಂತರದಲ್ಲಿ ಮುಂಬೈ ಇಂಡಿಯನ್ಸ್ ತಂಡ ಮರಳಿರುವುದರಿಂದ ಮ್ಯಾನೇಜ್ಮೆಂಟ್​ಗೆ ಕೆಲವು ಪ್ರಶ್ನೆಗಳನ್ನು ಎದುರಾಗಿದೆ. ಬುಮ್ರಾ ಒಂದು ದಶಕದಿಂದ ಫ್ರಾಂಚೈಸಿಗಾಗಿ ಆಡುತ್ತಿದ್ದಾರೆ. ರೋಹಿತ್ ಅಂತಿಮವಾಗಿ ಕೆಳಗಿಳಿದ ನಂತರ ನಾಯಕತ್ವದ ಪಾತ್ರವು ಅವರದು ಎಂದು ಭಾವಿಸಲಾಗಿತ್ತು. ಆದರೆ, ಪಾಂಡ್ಯ ಮರಳಿರುವುದರಿಂದ ನಾಯಕತ್ವ ಬುಮ್ರಾಗೆ ಸಿಗುವುದೇ ಎಂಬ ಅನುಮಾನ ಹೆಚ್ಚಾಗಿದೆ.

ಪಾಂಡ್ಯ ಅವರ ಅಚ್ಚರಿಯ ಮರಳುವಿಕೆ ಬಳಿಕವೂ ಫ್ರಾಂಚೈಸಿಯಲ್ಲಿ ಅವರ ಪಾತ್ರವು ಹಾಗೆಯೇ ಉಳಿಯಬಹುದೇ ಎಂಬ ಪ್ರಶ್ನೆ ಎದ್ದಿದೆ. ಮುಂಬೈ ಇಂಡಿಯನ್ಸ್ ಪ್ರಯತ್ನಿಸಿದ ಪರೀಕ್ಷಿಸಿದ ಮತ್ತು ಯಶಸ್ವಿ ನಾಯಕ ಪಾಂಡ್ಯ ಅಥವಾ ಎಂಐ ಕುಟುಂಬದ ನಿಷ್ಠಾವಂತ ಮತ್ತು ಕಠಿಣ ಪರಿಶ್ರಮದ ಸದಸ್ಯ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡುತ್ತದೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.

Continue Reading

ಕ್ರಿಕೆಟ್

WPL Auction 2024: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ಕೇವಲ 2 ದಿನ ಬಾಕಿ

ವುಮೆನ್ಸ್​ ಪ್ರೀಮಿಯರ್ ಲೀಗ್‌ ಆಟಗಾರ್ತಿಯರ ಮಿನಿ ಹರಾಜು ಡಿಸೆಂಬರ್ 9 ರಂದು ನಡೆಯಲಿದೆ. ಹರಾಜು ಪ್ರಕ್ರಿಯೆಗಾಗಿ ಈಗಾಗಲೇ ಒಟ್ಟು 165 ಆಟಗಾರ್ತಿಯರು ಹೆಸರು ನೋಂದಾಯಿಸಿಕೊಂಡಿದ್ದಾರೆ.

VISTARANEWS.COM


on

WPL Auction 2024
Koo

ಮುಂಬಯಿ: ಪ್ರತಿಷ್ಠಿತ ವುಮೆನ್ಸ್​ ಪ್ರೀಮಿಯರ್ ಲೀಗ್‌ (WPL Auction 2024) ಸೀಸನ್-2 ಆಟಗಾರ್ತಿಯರ ಹರಾಜಿಗಾಗಿ ವೇದಿಕೆ ಸಿದ್ಧವಾಗಿದೆ. ಆಟಗಾರ್ತಿಯರ ಮಿನಿ ಹರಾಜು ಡಿಸೆಂಬರ್ 9 ರಂದು ನಡೆಯಲಿದೆ. ಹರಾಜು ಪ್ರಕ್ರಿಯೆಗಾಗಿ ಈಗಾಗಲೇ ಒಟ್ಟು 165 ಆಟಗಾರ್ತಿಯರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಹರಾಜಿಗೂ ಮುನ್ನ ಐದು ಫ್ರಾಂಚೈಸಿಗಳು ಒಟ್ಟು 60 ಆಟಗಾರ್ತಿಯರನ್ನು ಉಳಿಸಿಕೊಂಡಿದ್ದು, 29 ಮಂದಿಯನ್ನು ರಿಲೀಸ್ ಮಾಡಿದೆ.

ಡಿಸೆಂಬರ್ 9 ರಂದು ನಡೆಯುವ ಹರಾಜಿನಲ್ಲಿ ಖಾಲಿ ಉಳಿದಿರುವ 30 ಸ್ಲಾಟ್​ಗಳಿಗಾಗಿ ಬಿಡ್ಡಿಂಗ್ ನಡೆಯಲಿದೆ. ಈ ಸದ್ಯ ಯಾವ ತಂಡಕ್ಕೆ ಒಟ್ಟು ಆಟಗಾರ್ತಿಯನ್ನು ಖರೀದಿ ಮಾಡಬಹುದು ಮತ್ತು ಅವರ ಬಳಿ ಇರುವ ಹಣದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ತಂಡದಲ್ಲಿ ಒಟ್ಟು 18 ಆಟಗಾರ್ತಿಯರಿಗೆ ಮಾತ್ರ ಅವಕಾಶ.

ಬಿಡ್ಡಿಂಗ್ ಪ್ರಾರಂಭ?

ಬಿಡ್ಡಿಂಗ್ ಪ್ರಕ್ರಿಯೆ ಮಧ್ಯಾಹ್ನ 2.30 ರಿಂದ ಆರಂಭಗೊಳ್ಳಲಿದೆ. ಇದರ ನೇರ ಪ್ರಸಾರವನ್ನು ಸ್ಪೋರ್ಟ್ಸ್​-18 ಚಾನೆಲ್​ನಲ್ಲಿ ವೀಕ್ಷಿಸಬಹುದಾಗಿದೆ. ಇದಲ್ಲದೆ ಜಿಯೋ ಸಿನಿಮಾ ಆ್ಯಪ್​ನಲ್ಲಿ ಮತ್ತು ವೆಬ್​ಸೈಟ್​ನಲ್ಲಿ ಈ ಹರಾಜು ಪ್ರಕ್ರಿಯೆಯ ಲೈವ್ ಸ್ಟ್ರೀಮಿಂಗ್​ ಇರಲಿದೆ.

ಒಟ್ಟು 5 ತಂಡಗಳು

ಪುರುಷರ ಐಪಿಎಲ್​ನಲ್ಲಿ ನಡೆಯುವ ಈ ಟೂರ್ನಿಯಲ್ಲಿ ಒಟ್ಟು 5 ತಂಡಗಳು ಭಾಗವಹಿಸಲಿದೆ. ಇದು ಎರಡನೇ ಆವೃತ್ತಿಯಾಗಿದೆ. ಎಎಲ್ಲ 5 ತಂಡಗಳ ತವರಿನಲ್ಲಿ ಪಂದ್ಯಗಳು ನಡೆಯಲಿದೆ. ಚೊಚ್ಚಲ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಹರ್ಮನ್​ಪ್ರೀತ್​ ಕೌರ್​ ಸಾರಥ್ಯದ ಮುಂಬೈ ಇಂಡಿಯನ್ಸ್​ ತಂಡ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಮಣಿಸಿ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಈ ಬಾರಿ ಚಾಂಪಿಯನ್​ ಯಾರಗಲಿದ್ದಾರೆ ಎನ್ನುವುದು ಟೂರ್ನಿಯ ಕುತೂಹಲವಾಗಿದೆ.

ತಂಡಗಳು

ಮುಂಬೈ ಇಂಡಿಯನ್ಸ್

ಡೆಲ್ಲಿ ಕ್ಯಾಪಿಟಲ್ಸ್

ಯುಪಿ ವಾರಿಯರ್ಸ್

ಗುಜರಾತ್ ಜೈಂಟ್ಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಯಾವ ತಂಡಕ್ಕೆ ಎಷ್ಟು ಆಟಗಾರ್ತಿಯನ್ನು ಖರೀದಿ ಮಾಡಬಹುದು?

ಮುಂಬೈ ಇಂಡಿಯನ್ಸ್​

ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನು 5 ಆಟಗಾರ್ತಿಯನ್ನು ಖರೀದಿ ಮಾಡಬಹುದು. ಸದ್ಯ 13 ಆಟಗಾರರನ್ನು ಉಳಿಸಿಕೊಂಡಿದ್ದು 4 ಆಟಗಾರರನ್ನು ಬಿಡುಗಡೆ ಮಾಡಿದೆ. ಮುಂಬೈ ಬಳಿಯಿರುವ ಮೊತ್ತ 2.1 ಕೋಟಿ ರೂ.

ಇದನ್ನೂ ಓದಿ IPL 2024: ಹರಾಜಿನಲ್ಲಿ ಯಾವ ತಂಡಕ್ಕೆ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಮಾಹಿತಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಸ್ಟಾರ್​ ಆಟಗಾರ್ತಿಯರ ಪಡೆಯನ್ನೇ ಹೊಂದಿದ್ದರೂ ಅತ್ಯಂತ ಕಳಪೆ ಪ್ರದರ್ಶನ ತೋರಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ 11 ಆಟಗಾರರನ್ನು ಉಳಿಸಿಕೊಂಡಿದೆ. ಇನ್ನು 8 ಆಟಗಾರ್ತಿಯನ್ನು ಖರೀದಿ ಮಾಡಬಹುದಾಗಿದೆ. ಸದ್ಯ ಫ್ರಾಂಚೈಸಿ ಬಳಿ ಉಳಿದಿರುವ ಮೊತ್ತ 3.35 ಕೋಟಿ ರೂ.

ಯುಪಿ ವಾರಿಯರ್ಸ್

ಯುಪಿ ವಾರಿಯರ್ಸ್ ತಂಡದ ಬಳಿ ಇನ್ನು 4 ಕೋಟಿ ರೂ. ಉಳಿದಿದೆ. 5 ಆಟಗಾರರನ್ನು ಬಿಡುಗಡೆ ಮಾಡಿದೆ. 13 ಆಟಗಾರ್ತಿಯನ್ನು ಖರೀದಿ ಮಾಡಬೇಕಿದೆ. ಬಲಿಷ್ಠ ಆಟಗಾರ್ತಿಯನ್ನು ಕಳೆದ ಬಾರಿ ಹೊಂದಿದ್ದರೂ ನಿರೀಕ್ಷಿತ ಪ್ರದರ್ಶನ ಮಾತ್ರ ಕಂಡು ಬಂದಿರಲಿಲ್ಲ. ಹೀಗಾಗಿ ಕೇವಲ 5 ಆಟಗಾರ್ತಿಯನ್ನು ಉಳಿಸಿಕೊಂಡು ಉಳಿದ ಎಲ್ಲ ಆಟಗಾರ್ತಿಯನ್ನು ತಂಡದಿಂದ ಕೈಬಿಟ್ಟಿದೆ.

ಡೆಲ್ಲಿ ಕ್ಯಾಪಿಟಲ್ಸ್

ಇತ್ತೀಚೆಗೆ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸೀಸ್​ ತಂಡದ ಮೆಗ್​ ಲ್ಯಾನಿಂಗ್​ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್​ 15 ಆಟಗಾರರನ್ನು ಉಳಿಸಿಕೊಂಡಿದ್ದಾರೆ. 2.25 ಕೋಟಿ ರೂ. ಹರಾಜು ಮೊತ್ತ ಹೊಂದಿದೆ. ಮೂರು ಆಟಗಾರ್ತಿಯನ್ನು ಖರೀದಿ ಮಾಡಬಹುದಾಗಿದೆ.

ಗುಜರಾತ್ ಜೈಂಟ್ಸ್

ಗುಜರಾತ್ ಜೈಂಟ್ಸ್ ಗರಿಷ್ಠ 11 ಆಟಗಾರರನ್ನು ಬಿಡುಗಡೆ ಮಾಡಿದ್ದು ಕೇವಲ 7 ಆಟಗಾರ್ತಿಯನ್ನು ಮಾತ್ರ ಉಳಿಸಿಕೊಂಡಿದೆ. ಗುಜರಾತ್ ಜೈಂಟ್ಸ್ ಬಳಿ 5.95 ಕೋಟಿ ರೂ. ಹರಾಜು ಮೊತ್ತವಿದೆ. ಈ ಹಣದಲ್ಲಿ ಮತ್ತೆ 11 ಆಟಗಾರ್ತಿಯರನ್ನು ಖರೀದಿ ಮಾಡಬೇಕಿದೆ.

Continue Reading

ಐಪಿಎಲ್ 2023

ಸ್ಟಾರ್​​ ಆಟಗಾರನ ಖರೀದಿಗೆ ಸ್ಕೆಚ್​ ಹಾಕಿದ ಸಖತ್ ಕ್ಯೂಟ್ ಓನರ್ ಕಾವ್ಯ ಮಾರನ್

ನ್ಯೂಜಿಲ್ಯಾಂಡ್​ ತಂಡದ ಯುವ ಆಟಗಾರ ರಚಿನ್​ ರವೀಂದ್ರ(Rachin Ravindra) ಅವರನ್ನು ಖರೀದಿ ಮಾಡಲು ಸನ್ ರೈಸರ್ಸ್ ಹೈದರಾಬಾದ್(SunRisers Hyderabad) ತಂಡ ಮುಂದಾಗಿದೆ ಎಂದು ಇರ್ಫಾನ್​ ಪಠಾಣ್​ ಹೇಳಿದ್ದಾರೆ.

VISTARANEWS.COM


on

kavya maran
Koo

ಹೈದರಾಬಾದ್​: ಇಂಡಿಯನ್ ಪ್ರೀಮಿಯರ್ ಲೀಗ್ 2024 ಮಿನಿ-ಆಕ್ಷನ್ ಡಿ.19ರಂದು ದುಬೈನಲ್ಲಿ ನಡೆಯಲಿದೆ. ಎಲ್ಲ ಫ್ರಾಂಚೈಸಿಗಳು ಸ್ಟಾರ್​ ಆಟಗಾರರ ಪಟ್ಟಿಯನ್ನು ಸಿದ್ಧ ಪಡಿಸಿದ್ದು ಅವರ ಖರೀದಿಗಾಗಿ ಕಾದು ಕುಳಿತಿದೆ. ಇತ್ತೀಚೆಗೆ ಮುಕ್ತಾಯ ಕಂಡ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಪ್ರದರ್ಶನ ತೋರಿ ಗಮನಸೆಳೆದ ನ್ಯೂಜಿಲ್ಯಾಂಡ್​ ತಂಡದ ಯುವ ಆಟಗಾರ ರಚಿನ್​ ರವೀಂದ್ರ(Rachin Ravindra) ಅವರನ್ನು ಖರೀದಿ ಮಾಡಲು ಸನ್ ರೈಸರ್ಸ್ ಹೈದರಾಬಾದ್(SunRisers Hyderabad) ತಂಡ ಮುಂದಾಗಿದೆ ಎಂದು ಇರ್ಫಾನ್​ ಪಠಾಣ್​ ಹೇಳಿದ್ದಾರೆ.

ಸ್ಟಾರ್​ ಸ್ಪೋರ್ಟ್ಸ್​ ಜತೆಗಿನ ಸಂವಾದದಲ್ಲಿ ಮಾತನಾಡಿದ ಇರ್ಫಾನ್​, ಈ ಬಾರಿ ಮಿನಿ ಹರಾಜಿನಲ್ಲಿ ರಚಿನ್​ ರವೀಂದ್ರ ಅವರನ್ನು ಎಷ್ಟೇ ಮೊತ್ತ ನೀಡಿಯಾದರೂ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿ ಮಾಡಲಿದೆ. ಇದಕ್ಕೆ ಬೇಕಾದ ಎಲ್ಲ ತಯಾರಿಯನ್ನು ತಂಡದ ಮಾಲಕಿ ಕಾವ್ಯಾ ಮಾರನ್ ಯೋಜನೆ ರೂಪಿಸಿದ್ದಾರೆ ಎಂದು ಹೇಳಿದ್ದಾರೆ.

ಕಲಾನಿಧಿ ಮಾರನ್ ಅವರ ಪುತ್ರಿ ಕಾವ್ಯಾ ಮಾರನ್ ಅವರು ಸನ್​ ರೈಸರ್ಸ್​ ಹೈದರಾಬಾದ್​ ತಂಡದ ಮಾಲಕಿಯಾದಿನಿಂದ ಪ್ರತಿ ಐಪಿಎಲ್​ ಸೀಸನ್​ನಲ್ಲೂ ಅವರು ಟ್ರೆಂಡಿಂಗ್​ನಲ್ಲಿರುತ್ತಾರೆ. ಎಲ್ಲರ ಗಮನ ಸೆಳೆದು ಸುದ್ದಿಯಾಗುತ್ತಾರೆ. ಐಪಿಎಲ್ ಹರಾಜಿನಲ್ಲಿಯೂ ಹಾಜರಿದ್ದು ಗಮನಸೆಳೆಯುತ್ತಾರೆ.

ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ಹರಾಜಿನಲ್ಲಿ ಅವರು ವಿಶೇಷವಾಗಿ ಭಾಗಿಯಾಗುವ ಮೂಲಕ ಸ್ಟಾರ್​ ಆಟಗಾರರನ್ನು ತಮ್ಮ ತಂಡಕ್ಕೆ ಸೇರಿಕೊಳ್ಳುವ ತನಕ ತಮ್ಮ ಹಠ ಬಿಟ್ಟುಕೊಡದೆ ಬಿಡ್ಡಿಂಗ್​ ಮಾಡಬಲ್ಲರು. ಕಳೆದ ಬಾರಿ ಹ್ಯಾರಿ ಬ್ರೂಕ್ ಅವರನ್ನು 13.25 ಕೋಟಿ ರೂ. ನೀಡಿ ಖರೀದಿ ಮಾಡುವ ಮೂಲಕ ಭಾರಿ ಸುದ್ದಿಯಾಗಿದ್ದರು. ಇದೀಗ ಈ ಬಾರಿ ರಚಿನ್​ ರವೀಂದ್ರ ಮೇಲೆ ಕಣ್ಣಿಟ್ಟಿದ್ದಾರೆ.

ಇದನ್ನೂ ಓದಿ IPL 2024: ಹರಾಜಿನಲ್ಲಿ ಯಾವ ತಂಡಕ್ಕೆ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಮಾಹಿತಿ

31ರ ಹರೆಯದ ಕಾವ್ಯಾ ಯಾವಾಗಲೂ ಐಪಿಎಲ್ ಹರಾಜಿನಲ್ಲಿ ತನ್ನ ಉಪಸ್ಥಿತಿ ತೋರುತ್ತಾರೆ. ತನ್ನ ಅದ್ಭುತ ನೋಟ ಮತ್ತು ಆಟದ ಮೇಲಿನ ಅಪಾರ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ. ಕಾವ್ಯಾ ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ.

ಒಂದು ಬಾರಿಯ ಚಾಂಪಿಯನ್​ ಸನ್​ರೈಸರ್ಸ್​ ಹೈದರಾಬಾದ್​ ತಂಡಕ್ಕೆ 6 ಆಟಗಾರರನ್ನು ಖರೀದಿ ಮಾಡಬಹುದಾಗಿದೆ. ತಲಾ ಮೂರು ಭಾರತೀಯ ಮತ್ತು ವಿದೇಶಿ ಆಟಗಾರರನ್ನು ಬಿಡ್​ ಮಾಡಬಹುದು. ತಂಡದ ಬಳಿ 34 ಕೋಟಿ ರೂ. ಹಣವಿದೆ. ಹೀಗಾಗಿ ರಚಿನ್​ ಅವರನ್ನು ಖರೀದಿ ಮಾಡಬಹುದು.

ಕರ್ನಾಟಕ ಮೂಲಕ ನ್ಯೂಜಿಲ್ಯಾಂಡ್​ ಆಟಗಾರ ರಚಿನ್​ ರವೀಂದ್ರ ಅವರು ಈ ಬಾರಿಯ ವಿಶ್ವಕಪ್​ನಲ್ಲಿ ಅಮೋಘ ಬ್ಯಾಟಿಂಗ್​ ನಡೆಸಿ ಮಿಂಚಿದ್ದರು. ಚೊಚ್ಚಲ ಬಾರಿ ವಿಶ್ವಕಪ್​ನಲ್ಲಿ ಆಡಲಿಳಿದ ಅವರು 3 ಶತಕ ಬಾರಿಸಿ ಗಮನಸೆಳೆದರು. ಅಲ್ಲದೆ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​ ಸೇರಿ ಅನೇಕರ ದಾಖಲೆಗಳನ್ನು ಮುರಿದಿದ್ದರು. ಒಟ್ಟಾರೆ ಅವರು 10 ಪಂದ್ಯಗಳನ್ನು ಆಡಿ 578 ರನ್​ ಬಾರಿಸಿದ್ದರು.

ಆರ್​ಸಿಬಿ ಬಗ್ಗೆ ಒಲವು

ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕೂಡ ರಚಿನ್​ ಅವರನ್ನು ಖರಿದೀಸುವ ರೇಸ್​ನಲ್ಲಿ ಮುಂಚೂಣಿಯಲ್ಲಿದೆ. ಅಲ್ಲದೆ ವಿಶ್ವಕಪ್​ ಆಡುವ ವೇಳೆ ಸ್ವತಃ ರಚಿನ್​ ಅವರು ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡುವ ಆಸೆ ಇದೆ ಎಂದು ಹೇಳಿದ್ದರು. ರಚಿನ್​ ಅವರು ಯಾವ ತಂಡದ ಪಾಲಾಗಲಿದ್ದಾರೆ ಎನ್ನುವುದು ಡಿ.10ಕ್ಕೆ ನಿರ್ಧಾರವಾಗಲಿದೆ.

Continue Reading

ಕರ್ನಾಟಕ

VISTARA TOP 10 NEWS : ಮೌಲ್ವಿ ಐಸಿಸ್‌ ಸಂಪರ್ಕ ನಿಜವೇ? ಹಳೆಪಿಂಚಣಿ ಮರುಜಾರಿ ಖಚಿತವೇ? ಇತರ ಪ್ರಮುಖ ಸುದ್ದಿ

VISTARA TOP 10 NEWS :ಮೌಲ್ವಿ ತನ್ವೀರ್‌ ಪೀರಾ ಅವರ ಬಗ್ಗೆ NIA ತನಿಖೆಗೆ ಒತ್ತಡ ಹೆಚ್ಚಾಗಿದೆ. ರಾಜ್ಯದಲ್ಲಿ ಹಳೆ ಪಿಂಚಣಿ ಮರುಜಾರಿ ಚಿಂತನೆಗೆ ಭರವಸೆ ಸಿಕ್ಕಿದೆ.. ಹೀಗೆ ಪ್ರಮುಖ ಸುದ್ದಿಗಳ ಸುತ್ತು ನೋಟ ಇಲ್ಲಿದೆ.

VISTARANEWS.COM


on

Vistara Top 10 News 7-12
Koo

1.ತನ್ವೀರ್‌ ಪೀರಾ ಐಸಿಸ್‌ ಸಂಬಂಧ: ಪರ ವಿರೋಧ ಚರ್ಚೆ ತಾರಕಕ್ಕೆ, NIA ತನಿಖೆಗೆ ಸವಾಲು
ವಿಜಯಪುರ ಮೂಲದ ಮೌಲ್ವಿ, ಸೂಫಿ ಸಂತರೆಂದು ಹೇಳಲಾಗುವ ತನ್ವೀರ್‌ ಪೀರಾ ಅವರಿಗೆ ಐಸಿಸ್‌ ಸಂಪರ್ಕವಿದೆ ಎಂಬ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪದ ವಿರುದ್ಧ ಕಾಂಗ್ರೆಸ್‌ ಸಿಡಿದೆದ್ದಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಕೂಡಾ ಧ್ವನಿ ಎತ್ತಿದ್ದಾರೆ. ಈ ನಡುವೆ ತನ್ವೀರ್‌ ಪೀರಾ ಅವರು ಸಾರೇ ಜಹಾಂ ಸೇ ಅಚ್ಛಾ ಹಾಡಿನ ವಿಡಿಯೊ ಮೂಲಕ ತನ್ನ ದೇಶಭಕ್ತಿ ಪ್ರದರ್ಶನ ಮಾಡಿದ್ದಾರೆ.

ಸಂಬಂಧಿತ ವರದಿ 1. ಸಿಎಂ ಜತೆ ಐಸಿಸ್‌ ಸಂಪರ್ಕಿತ ಮೌಲ್ವಿ; ಎನ್‌ಐಎ ತನಿಖೆಗೆ ಬೊಮ್ಮಾಯಿ ಆಗ್ರಹ
ಸಂಬಂಧಿತ ವರದಿ 2: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲ್‌
ಸಂಬಂಧಿತ ವರದಿ 3: ಸಾರೇ ಜಹಾಂ ಸೇ ಅಚ್ಛಾ ಹಾಡಿನ ಮೂಲಕ ತಿರುಗೇಟು ನೀಡಿದ ತನ್ವೀರ್‌ ಪೀರಾ
ಸಂಬಂಧಿತ ವರದಿ 4: ತನ್ವೀರ್‌ ಪೀರಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೋದಿಯೇ ಭಾಗವಹಿಸಿದ್ದರು!?

2. ಚೀನಾದಿಂದ ಬಂದೇ ಬಿಟ್ಟಿತು ನ್ಯುಮೋನಿಯಾ ಸೋಂಕು, ದಿಲ್ಲಿಯಲ್ಲಿ 7 ಮಂದಿಗೆ ಪಾಸಿಟಿವ್‌
ಕೋವಿಡ್ ಬಳಿಕ ಚೀನಾದಲ್ಲಿ ಕೋಲಾಹಲ ಸೃಷ್ಟಿಸಿರುವ ನ್ಯುಮೋನಿಯಾ ರೀತಿಯ ಸೋಂಕು (Pneumonia Outbreak) ಇದೀಗ ಭಾರತಕ್ಕೂ ಹರಡಿರುವುದು ಖಚಿತವಾಗಿದೆ. ದೆಹಲಿಯ ಏಮ್ಸ್ (AIIMS Delhi) ಆಸ್ಪತ್ರೆಯಲ್ಲಿ ಇದರ 7 ಪ್ರಕರಣ ಪತ್ತೆಯಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

3. ರಾಜ್ಯದಲ್ಲಿ ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ
ರಾಜ್ಯದಲ್ಲಿ ಹಳೇ ಪಿಂಚಣಿ ಪದ್ಧತಿಯನ್ನೇ (Old Pension Scheme) ಮರು ಜಾರಿಗೆ ಆಗ್ರಹಿಸುತ್ತಿರುವ ಸರ್ಕಾರಿ ನೌಕರರಿಗೆ ಈ ಬಾರಿ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ಸಿಗಲಿದೆಯೇ? ಹೌದು ಎನ್ನುತ್ತಾರೆ ಸಚಿವ ಕೃಷ್ಣ ಭೈರೇಗೌಡ. ಈ ಸಂಬಂಧ ಇರುವ ಸಮಿತಿಯನ್ನು 10 ದಿನದೊಳಗೆ ಪುನಾರಚನೆ ಮಾಡುವುದಾಗಿ ಅವರು ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. 2000 ರೂ. ನೋಟು ಬದಲಾವಣೆ ದಂಧೆ; ವಿಸ್ತಾರ ನ್ಯೂಸ್‌ನಲ್ಲಿ ಬಯಲು
2000 ರೂ. ನೋಟುಗಳನ್ನು ಬದಲಾಯಿಸಲು ಜನ ಸಾಮಾನ್ಯರಿಗೆ ಇನ್ನೂ ಅವಕಾಶವಿದೆ. ಹೀಗಾಗಿ ಜನಸಾಮಾನ್ಯರನ್ನು ಬಳಸಿಕೊಂಡು ವಿನಿಮಯ ಮಾಡುವ ದಂಧೆಯೊಂದು ಹುಟ್ಟಿಕೊಂಡಿದೆ. ಇದನ್ನು ವಿಸ್ತಾರ ನ್ಯೂಸ್‌ ಬಯಲಿಗೆಳೆದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5.ಇನ್ನು ಮುಂದೆ ಮೋದಿಯನ್ನೂ ಯಾರೂ ಹೀಗೆ ಕರೆಯುವಂತಿಲ್ಲ!
ತಮ್ಮನ್ನು ಮೋದಿಜಿ(modiji), ಆದರಣೀಯ ಮೋದಿಜಿ(aadarniya modiji), ಶ್ರೀ ಮೋದಿಜಿ(Shri Modiji) ಎಂದು ಕರೆಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸಂಸದರಿಗೆ ತಿಳಿಸಿದ್ದಾರೆ. ದಿಲ್ಲಿಯಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಾರ್ಟಿಯ (Bharatiya Janata Party) ಸಂಸದೀಯ ಸಭೆಯಲ್ಲಿ ಅವರು ಈ ಮನವಿ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ಮತ್ತೆ ನಂದಿನಿ ಹಾಲಿನ ದರ ಏರಿಕೆ? ಯಾವಾಗ? ಎಷ್ಟು ಮಾಡಬಹುದು?
ಕಳೆದ ಆಗಸ್ಟ್‌ನಲ್ಲಿ ನಂದಿನಿ ಹಾಲಿನ (Nandini Milk) ಹಾಗೂ ಮೊಸರಿನ ದರ ಸೇರಿದಂತೆ ಇನ್ನಿತರ ಉತ್ಪನ್ನಗಳ ದರವನ್ನು ಏರಿಸಲಾಗಿತ್ತು. ಇದು ಜನಸಾಮಾನ್ಯರ ಜೇಬಿಗೆ ಹೊರೆಯಾಗಿ ಪರಿಣಮಿಸಿತ್ತು. ಇದೀಗ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಕೆಎಂಎಫ್‌ (KMF) ಚಿಂತನೆ ನಡೆಸಿದೆ ಎನ್ನಲಾಗಿದೆ. ಆದರೆ, ಇದಕ್ಕೆ ಸರ್ಕಾರ ಒಪ್ಪುತ್ತದೆಯೇ? ಒಪ್ಪಿದರೂ ಎಷ್ಟು ರೂಪಾಯಿ ಏರಿಕೆ ಆಗಲಿದೆ ಎಂಬುದು ಮಾತ್ರ ಇನ್ನೂ ನಿರ್ಧಾರ ಆಗಿಲ್ಲ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಲಕ್ಷ ಕೋಟಿ ರೂ. ತೆರಿಗೆ ವಂಚಿಸಿ ಚೀನಾಗೆ ಸಾಗಿಸಿದ ವಿವೊ ಕಂಪನಿ! ಹೇಗೆ ಸಾಧ್ಯವಾಯ್ತು?
2014 ಮತ್ತು 2021ರ ನಡುವೆ ಭಾರತದಿಂದ ಹೊರಗೆ ₹1 ಲಕ್ಷ ಕೋಟಿ ಹಣವನ್ನು ರವಾನೆ ಮಾಡಲು ಶೆಲ್ ಕಂಪನಿಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED probe) ಚೀನಾದ ಫೋನ್ ತಯಾರಕ ವಿವೋ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ನಾಳೆಯಿಂದ ಅಂಡರ್‌ 19 ಏಷ್ಯಾ ಕಪ್‌; ಭಾರತ-ಪಾಕ್‌ ಮುಖಾಮುಖಿ ಯಾವಾಗ?
ದುಬೈ (Dubai) ಆತಿಥ್ಯನಲ್ಲಿ ನಡೆಯುವ ಪುರುಷರ ಅಂಡರ್​-19 ಏಷ್ಯಾಕಪ್ (ACC Men’s U19 Asia Cup 2023) ಟೂರ್ನಿಯ ಪಂದ್ಯಾವಳಿಗಳು ಡಿಸೆಂಬರ್ 8 ರಿಂದ ಆರಂಭಗೊಳ್ಳಲಿದೆ. ಟೂರ್ನಿ ಡಿಸೆಂಬರ್ 17 ರವರೆಗೆ ನಡೆಯಲಿದೆ. ಡಿ.8ರ ಉದ್ಘಾಟನ ಪಂದ್ಯದಲ್ಲಿ ಭಾರತ ಅಫಘಾನಿಸ್ತಾನ​ ವಿರುದ್ಧ ಅಭಿಯಾನ ಆರಂಭಿಸಲಿದೆ. ಪಾಕಿಸ್ತಾನ ವಿರುದ್ಧ ಭಾರತ ಡಿ.10 ರಂದು ಕಣಕಿಳಿಯಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಈ ಸುದ್ದಿಯನ್ನೂ ಓದಿ: ಕಿಂಗ್‌ ಕೊಹ್ಲಿ ಕೈಬಿಟ್ಟ ಬಿಸಿಸಿಐ; ಟಿ20 ವಿಶ್ವಕಪ್‌ಗೆ ನೂತನ ಆಟಗಾರನ ಆಯ್ಕೆ

9. ನೋವು ವಿವಾರಕ ಮೆಫ್ಟಾಲ್‌ ಮಾತ್ರೆ ಸೇವನೆಯಿಂದ ಗಂಭೀರ ಪರಿಣಾಮ!
ಮೆಫ್ಟಾಲ್ (Meftal) ಬ್ರ್ಯಾಂಡ್‌ ಹೆಸರಿನಲ್ಲಿ ಜನಪ್ರಿಯವಾಗಿ ಮಾರಾಟವಾಗುವ, ಸಾಮಾನ್ಯವಾಗಿ ಬಳಸುವ ನೋವು ನಿವಾರಕ (Painkiller) ಔಷಧ, ಮಾತ್ರೆಯ ಬಳಕೆಯ ಬಗ್ಗೆ ಇಂಡಿಯನ್ ಫಾರ್ಮಾಕೊಪೊಯಿಯಾ ಕಮಿಷನ್ (Indian Pharmacopoeia Commission-IPC) ಎಚ್ಚರಿಕೆ ನೀಡಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ಗಂಡನ ಮೇಲಿನ ಸಿಟ್ಟಿಗೆ ಫೇಕ್‌ ಬಾಂಬ್‌ ಇಟ್ಟಳು! ಇದರ ಹಿಂದಿತ್ತು love ಕಹಾನಿ
ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಇರದೇ ಅದು ಸೇಡಾಗಿ ಮುಂದುವರಿದ ಪರಿಣಾಮ ಠಾಣೆ ಮೆಟ್ಟಿಲೇರುವಂತೆ ಮಾಡಿದೆ. ಮೊಬೈಲ್‌ ಹೊಡೆದು ಹಾಕಿದ ಸಿಟ್ಟಿಗೆ ಪತ್ನಿಯೊಬ್ಬಳು ಪ್ರಿಯಕರನ ಮಾತು ಕೇಳಿ ಆರ್‌ಡಿಎಕ್ಸ್‌ ಬಾಂಬ್‌ ಸ್ಫೋಟಿಸುವುದಾಗಿ (Bomb Threat) ಸಂದೇಶ ರವಾನೆ ಮಾಡಿ ಜೈಲುಪಾಲಾಗಿದ್ದಾಳೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
plants
ಲೈಫ್‌ಸ್ಟೈಲ್5 mins ago

Vastu Tips: ವಾಸ್ತು ಪ್ರಕಾರ ಈ ಗಿಡಗಳನ್ನು ಮನೆಯೊಳಗೆ ಇಡಲೇಬಾರದು!

Junior Mehmood
ಬಾಲಿವುಡ್10 mins ago

Junior Mehmood: ‘ಮೇರಾ ನಾಮ್ ಜೋಕರ್’ ಖ್ಯಾತಿಯ ನಟ ಜೂನಿಯರ್ ಮೆಹಮೂದ್ ಇನ್ನಿಲ್ಲ

cm k chandrashekar rao
ದೇಶ14 mins ago

K Chandrasekhar Rao: ರೇವಂತ್‌ ರೆಡ್ಡಿ ಸಿಎಂ ಆದ ದಿನವೇ ಜಾರಿ ಬಿದ್ದು ಸೊಂಟ ಮುರಿದುಕೊಂಡ ಕೆಸಿಆರ್‌

Jasprit bumarh
ಕ್ರಿಕೆಟ್18 mins ago

Jasprit Bumrah : ಬುಮ್ರಾ ಚಿತ್ರ ಹಾಕಿ ಎಲ್ಲರಿಗೂ ಸಂದೇಶ ರವಾನಿಸಿದ ಮುಂಬಯಿ ಇಂಡಿಯನ್ಸ್​​​

Karthik threw the sandal to vinay Ugly Fight
ಬಿಗ್ ಬಾಸ್34 mins ago

BBK SEASON 10: ಚಪ್ಪಲಿ ಎಸೆದೆ ಕಾರ್ತಿಕ್‌; ನನಗೆ ಮರ್ಯಾದೆ ಇಲ್ವಾ? ಆಚೆ ಹೋಗ್ಬೇಕು ಎಂದ ವಿನಯ್‌!

RBI governor Shaktikanta Das
ದೇಶ59 mins ago

RBI monetary policy: ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರ ಇಂದು; ಬಡ್ಡಿ ದರ ಏರುತ್ತಾ?

Stamp duty
ಕರ್ನಾಟಕ1 hour ago

Assembly Session : ಭೂಮಿ ಬೆಲೆ ಹೆಚ್ಚಿಸಿದ್ದ ಸರ್ಕಾರದಿಂದ ಮುದ್ರಾಂಕ ಶುಲ್ಕವೂ ಹೆಚ್ಚಳ

dengue flue
ಆರೋಗ್ಯ2 hours ago

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

Vistara Editorial, Government should conduct exam without any lapse
ಕರ್ನಾಟಕ2 hours ago

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

Raja Marga Father and Daughter
ಅಂಕಣ2 hours ago

Raja Marga Column : 13 ವರ್ಷದ ನನ್ನ ಮಗಳು ಒಮ್ಮಿಂದೊಮ್ಮೆಗೆ ಮಂಕಾಗಿದ್ದು ಯಾಕೆ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ4 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ15 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ16 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ21 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ2 days ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌