WOMEN'S T20 RANKINGS: ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಪ್ರಗತಿ ಸಾಧಿಸಿದ ಹರ್ಮನ್‌ಪ್ರೀತ್‌, ಶಫಾಲಿ - Vistara News

ಕ್ರೀಡೆ

WOMEN’S T20 RANKINGS: ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಪ್ರಗತಿ ಸಾಧಿಸಿದ ಹರ್ಮನ್‌ಪ್ರೀತ್‌, ಶಫಾಲಿ

WOMEN’S T20 RANKINGS: ಟಿ20 ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ದೀಪ್ತಿ ಶರ್ಮ ತೃತೀಯ ಸ್ಥಾನ, ರಾಧಾ ಯಾದವ್‌ ಬರೋಬ್ಬರಿ 8 ಸ್ಥಾನಗಳ ಜಿಗಿತದೊಂದಿಗೆ 15ನೇ ಸ್ಥಾನ ಪಡೆದಿದ್ದಾರೆ.

VISTARANEWS.COM


on

WOMEN'S T20 RANKINGS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಟೀಮ್​ ಇಂಡಿಯಾದ ಮಹಿಳಾ ಕ್ರಿಕೆಟ್​ ಆಟಗಾರ್ತಿಯರಾದ ಶಫಾಲಿ ವರ್ಮ(Shafali Verma) ಮತ್ತು ನಾಯಕಿ ಹರ್ಮನ್‌ಪ್ರೀತ್‌ ಕೌರ್‌(Harmanpreet Kaur) ನೂತನ ಟಿ20 ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ(WOMEN’S T20 RANKINGS) ಉತ್ತಮ ಪ್ರಗತಿ ಸಾಧಿಸಿದ್ದಾರೆ. ಕೌರ್‌ 3 ಸ್ಥಾನ ಮೇಲೇರಿದ್ದು, 12ನೇ ರ್‍ಯಾಂಕ್‌ ಗಳಿಸಿದ್ದಾರೆ. ಆರಂಭಿಕ ಆಟಗಾರ್ತಿ ಶಫಾಲಿ ವರ್ಮ 2 ಸ್ಥಾನಗಳ ಪ್ರಗತಿ ಸಾಧಿಸಿ 15ನೇ ಸ್ಥಾನದಲ್ಲಿದ್ದಾರೆ.

ನ್ಯೂಜಿಲ್ಯಾಂಡ್‌ನ‌ ಅಮೇಲಿಯಾ ಕೆರ್‌ ಮತ್ತು ಇಂಗ್ಲೆಂಡ್‌ನ‌ ಡೇನಿಯಲ್‌ ವ್ಯಾಟ್‌ ಕೂಡ ಶಫಾಲಿ ಜತೆ 15ನೇ ಸ್ಥಾನದಲ್ಲಿದ್ದಾರೆ. ಸ್ಮೃತಿ ಮಂಧನಾ 5ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಟಿ20 ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ದೀಪ್ತಿ ಶರ್ಮ ತೃತೀಯ ಸ್ಥಾನ, ರಾಧಾ ಯಾದವ್‌ ಬರೋಬ್ಬರಿ 8 ಸ್ಥಾನಗಳ ಜಿಗಿತದೊಂದಿಗೆ 15ನೇ ಸ್ಥಾನ, 6 ಸ್ಥಾನಗಳ ಪ್ರಗತಿ ಸಾಧಿಸಿದ ಪೂಜಾ ವಸ್ತ್ರಾಕರ್‌ 23ನೇ, ಕನ್ನಡತಿ ಶ್ರೇಯಾಂಕಾ ಪಾಟೀಲ್‌(Shreyanka Patil) 9 ಸ್ಥಾನಗಳ ಪ್ರಗತಿಯೊಂದಿಗೆ 60ನೇ ಸ್ಥಾನದಲ್ಲಿದ್ದಾರೆ.

ಜುಲೈ 19 ರಿಂದ 28 ರವರೆಗೆ ನಡೆಯುವ ಮಹಿಳಾ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಭಾರತ ಈಗಾಗಲೇ ಅಭ್ಯಾಸ ಆರಂಭಿಸಿದೆ. ಟಿ20 ಮಾದರಿಯಲ್ಲಿ ನಡೆಯುವ ಈ ಟೂರ್ನಿಯಲ್ಲಿ ಹಾಲಿ ಚಾಂಪಿಯನ್​ ಆಗಿರುವ ಭಾರತವೇ ಈ ಬಾರಿಯೂ ಕಪ್​ ಗೆಲ್ಲುವ ಫೇವರಿಟ್ ಆಗಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ತವರಿನ ಸರಣಿಯಲ್ಲಿ ಎಲ್ಲ ಆಟಗಾರ್ತಿಯರು ಉತ್ತಮ ಪ್ರದರ್ಶನ ತೋರಿದ್ದರು. ಏಷ್ಯಾ ಕಪ್​ನಲ್ಲಿಯೂ ಇದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

ಆತಿಥೇಯ ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ, ಮಲೇಷ್ಯಾ, ಥೈಲ್ಯಾಂಡ್, ನೇಪಾಳ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ‘ಎ’ ಗುಂಪಿನಲ್ಲಿ ಪಾಕಿಸ್ತಾನ, ನೇಪಾಳ ಮತ್ತು ಯುಎಇ ತಂಡಗಳೊಂದಿಗೆ ಸ್ಥಾನ ಪಡೆದಿದೆ. ಭಾರತ ತಂಡ ಜುಲೈ 19ರಂದು ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದ್ದು, ಜುಲೈ 21 ಮತ್ತು 23ರಂದು ಕ್ರಮವಾಗಿ ಯುಎಇ ಮತ್ತು ನೇಪಾಳ ವಿರುದ್ಧ ಸೆಣಸಲಿದೆ.

ಭಾರತ ತಂಡ:


ಹರ್ಮನ್​​ಪ್ರೀತ್​ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಂಕಾ ಪಾಟೀಲ್, ಸಜನಾ ಸಜೀವನ್.

ಮೀಸಲು ಆಟಗಾರರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್, ಮೇಘನಾ ಸಿಂಗ್

ಭಾರತದ ಪಂದ್ಯಗಳ ವೇಳಾಪಟ್ಟಿ

ಜುಲೈ19ರಂದು , ಭಾರತ-ಪಾಕಿಸ್ತಾನ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ
ಜುಲೈ 21ರಂದು, ಭಾರತ-ಯುಎಇ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ
ಜುಲೈ 23 ರಂದು , ಭಾರತ-ನೇಪಾಳ, ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣ, ಡಂಬುಲ್ಲಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

KL Rahul: ಮುಂದಿನ ವರ್ಷ ಆರ್​ಸಿಬಿ ಪರ ಆಡಲಿದ್ದಾರೆ ಕೆ.ಎಲ್​ ರಾಹುಲ್​; ಪೋಸ್ಟರ್ ವೈರಲ್

KL Rahul: ರಾಹುಲ್​ ಆರ್​ಸಿಬಿ ಸೇರಲಿದ್ದಾರೆ ಎಂಬ ಸುದ್ದಿ ಕೇಳಿದ್ದೇ ತಡ ಕನ್ನಡಿಗರು ಮತ್ತು ಆರ್​ಸಿಬಿ ಅಭಿಮಾನಿಗಳು ಆರ್​ಸಿಬಿ ಜೆರ್ಸಿಯಲ್ಲಿ ರಾಹುಲ್​ ಅವರ ಫೋಟೊ ಎಡಿಟ್​ ಮಾಡಿ ತವರಿಗೆ ಸ್ವಾಗತ ಎನ್ನುವ ಪೋಸ್ಟರ್​ ಶೇರ್​ ಮಾಡಲಾರಂಭಿಸಿದ್ದಾರೆ. ಈ ಪೋಸ್ಟರ್​ಗಳು ವೈರಲ್​ ಆಗುತ್ತಿವೆ.

VISTARANEWS.COM


on

KL Rahul
Koo

ಬೆಂಗಳೂರು: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ, ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಮುಂದಿನ ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡ(Rahul To Join RCB) ಸೇರುವುದು ಬಹುತೇಕ ಖಚಿತ ಎನ್ನುವ ಮಾಹಿತಿ ಹೊರಬಿದ್ದಿದೆ. ಹೌದು, ರಾಹುಲ್​ ಲಕ್ನೋ ತಂಡ ತೊರೆಯಲಿರುವ ಸುಳಿವನ್ನು ಲಕ್ನೋ ತಂಡದ ಸಹ ಆಟಗಾರ ಅಮೀತ್​ ಮಿಶ್ರಾ ಬಿಟ್ಟುಕೊಟ್ಟಿದ್ದಾರೆ.

ರಾಹುಲ್​ ಕೂಡ ಆರ್​ಸಿಬಿ ಪರ ಆಡುವ ಬಯಕೆಯನ್ನು ಈ ಹಿಂದೆಯೇ ವ್ಯಕ್ತಪಡಿಸಿದ್ದರು. ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ಬೇಸರಗೊಂಡ ರಾಹುಲ್​ ಮುಂದಿನ ಆವೃತ್ತಿಯಲ್ಲಿ ಈ ತಂಡದ ಪರ ಆಡುವುದು ಅನುಮಾನ.

ರಾಹುಲ್​ ಆರ್​ಸಿಬಿ ಸೇರಲಿದ್ದಾರೆ ಎಂಬ ಸುದ್ದಿ ಕೇಳಿದ್ದೇ ತಡ ಕನ್ನಡಿಗರು ಮತ್ತು ಆರ್​ಸಿಬಿ ಅಭಿಮಾನಿಗಳು ಆರ್​ಸಿಬಿ ಜೆರ್ಸಿಯಲ್ಲಿ ರಾಹುಲ್​ ಅವರ ಫೋಟೊ ಎಡಿಟ್​ ಮಾಡಿ ತವರಿಗೆ ಸ್ವಾಗತ ಎನ್ನುವ ಪೋಸ್ಟರ್​ ಶೇರ್​ ಮಾಡಲಾರಂಭಿಸಿದ್ದಾರೆ. ಈ ಪೋಸ್ಟರ್​ಗಳು ವೈರಲ್​ ಆಗುತ್ತಿವೆ.

ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ 10 ವಿಕೆಟ್​ಗಳ ಹೀನಾಯ ಸೋಲು ಕಂಡ ಬೇಸರದಲ್ಲಿ ಸಿಟ್ಟಿಗೆದ್ದ ಫ್ರಾಂಚೈಸಿ ಮಾಲಿಕ ಸಂಜೀವ್ ಗೋಯೆಂಕಾ(Sanjiv Goenka) ಮೈದಾನದಲ್ಲೇ ನಾಯಕ ಕೆ.ಎಲ್​ ರಾಹುಲ್(KL Rahul)​ ಜತೆ ಜಗಳವಾಡಿದ್ದರು. ಈ ಘಟನೆ ಬಳಿಕ ಅನೇಕ ಮಾಜಿ ಆಟಗಾರರು ಗೋಯೆಂಕಾ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ರಾಹುಲ್​ ಕೂಡ ಬೇಸರಗೊಂಡಿದ್ದರು. ಇದೇ ಕಾರಣಕ್ಕೆ ರಾಹುಲ್​ ತಂಡ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ RCB: ಆರ್​ಸಿಬಿ ಕಪ್​ ಗೆಲ್ಲದಿರಲು ನೈಜ ಕಾರಣ ತಿಳಿಸಿದ ತಂಡದ ಮಾಜಿ ಆಟಗಾರ

ಮುಂದಿನ ವರ್ಷ ಮೆಗಾ ಹರಾಜು ಕೂಡ ನಡೆಯಲಿದೆ. (IPL 2025)​ 18ನೇ ಆವೃತ್ತಿಯಲ್ಲಿ ಬೆಂಗಳೂರು ತಂಡದಲ್ಲಿ ಕೂಡ ದೊಡ್ಡ ಬದಲಾವಣೆಯೊಂದು ಸಂಭವಿಸುವ ಮುನ್ಸೂಚನೆಯೊಂದು ಲಭಿಸಿದೆ. ಈ ಹಿಂದೆ ತಂಡದ ನಾಯಕನಾಗಿದ್ದ ದಕ್ಷಿಣ ಆಫ್ರಿಕಾದ ಡುಪ್ಲೆಸಿಸ್​ ಅವರನ್ನು ಕೈ ಬಿಟ್ಟು ಮಾಜಿ ನಾಯಕ ವಿರಾಟ್​ ಕೊಹ್ಲಿ(Virat Kohli)ಗೆ ಮತ್ತೆ ನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಳೆದ ಮೂರು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ. ಈ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ಮೂಲಕ 700ಕ್ಕೂ ಅಧಿಕ ರನ್​ ಕಲೆ ಹಾಕಿ ಟೂರ್ನಿಯ ಅತ್ಯಧಿಕ ಸ್ಕೋರ್​ ಎನಿಸಿಕೊಂಡಿದ್ದರು.

Continue Reading

ಕ್ರೀಡೆ

Kylian Mbappe: ಬಾಲ್ಯದ ಕನಸಿನ ರಿಯಲ್‌ ಮ್ಯಾಡ್ರಿಡ್‌ ತಂಡ ಸೇರಿದ ಕೀಲಿಯನ್‌ ಎಂಬಾಪೆ

Kylian Mbappe: ಕಳೆದ ವರ್ಷ ಸೌದಿ ಅರೇಬಿಯಾದ ಅಲ್ ಹಿಲಾಲ್ ಕ್ಲಬ್(Saudi Arabian giants Al-Hilal) ತನ್ನ ಕ್ಲಬ್​ ಪರ ಆಡಲು ಎಂಬಾಪೆಗೆ ದಾಖಲೆಯ 2,716 ಕೋ.ರೂ. ಮೊತ್ತ ನೀಡಲು ಮುಂದಾಗಿತ್ತು. ಆದರೆ, ಎಂಬಾಪೆ ಈ ಆಫರ್​ ತಿರಸ್ಕರಿಸಿದ್ದರು. 

VISTARANEWS.COM


on

Kylian Mbappe
Koo

ಮ್ಯಾಡ್ರಿಡ್‌: ಫ್ರಾನ್ಸ್‌ ತಂಡದ ಸ್ಟಾರ್ ಫುಟ್ಬಾಲ್​ ಆಟಗಾರ ಕೀಲಿಯನ್‌ ಎಂಬಾಪೆ(Kylian Mbappe) ತಮ್ಮ ಕನಸಿನ ರಿಯಲ್‌ ಮ್ಯಾಡ್ರಿಡ್‌(Real Madrid) ತಂಡವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಮುಂದಿನ 5 ವರ್ಷಗಳ ಕಾಲ ಅವರು ಈ ಕ್ಲಬ್​ ಪರ ಆಡಲಿದ್ದಾರೆ. ಎಂಬಾಪೆಯನ್ನು ತಂಡಕ್ಕೆ ಸ್ವಾಗತಿಸಲು ದಾಖಲೆ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ಕ್ಲಬ್‌ ಅಧ್ಯಕ್ಷ ಫ್ಲೊರೆಂಟಿನೊ ಪೆರೆಝ್‌ 9ನೇ ನಂಬರ್ ಜೆರ್ಸಿ ನೀಡಿ ತಂಡಕ್ಕೆ ಸ್ವಾಗತಿಸಿದರು. ಎಂಬಾಪೆ ಜತೆ ತಂದೆ-ತಾಯಿ ಕೂಡ ಭಾಗಿಯಾಗಿದ್ದರು. ತಂಡ ಸೇರಿದ ಬಳಿಕ ಮಾತನಾಡಿದ ಎಂಬಾಪೆ ‘ನನ್ನ ಬಾಲ್ಯಕಾಲದ ಕನಸು ಇಂದು ನನಸಾಗಿದೆ. ನನ್ನ ಕುಟುಂಬಕ್ಕೆ ಸಂತಸವಾಗಿದೆ. ನನ್ನ ತಾಯಿ ಭಾವನೆಗಳನ್ನು ತಡೆಯಲಾಗದೇ ಅತ್ತಿದ್ದಾರೆ’ ಎಂದರು.

ಕಳೆದ ವರ್ಷ ಸೌದಿ ಅರೇಬಿಯಾದ ಅಲ್ ಹಿಲಾಲ್ ಕ್ಲಬ್(Saudi Arabian giants Al-Hilal) ತನ್ನ ಕ್ಲಬ್​ ಪರ ಆಡಲು ಎಂಬಾಪೆಗೆ ದಾಖಲೆಯ 2,716 ಕೋ.ರೂ. ಮೊತ್ತ ನೀಡಲು ಮುಂದಾಗಿತ್ತು. ಆದರೆ, ಎಂಬಾಪೆ ಈ ಆಫರ್​ ತಿರಸ್ಕರಿಸಿದ್ದರು. 

ಎಂಬಾಪೆ ಮೈದಾನದಲ್ಲಿ ಇದ್ದರೆ ದಾಖಲೆಗಳು ನಿರ್ಮಾಣವಾಗುತ್ತವೆ. ಪಂದ್ಯಕ್ಕೊಂದು ಹೊಸ ತಿರುವು ಸಿಗುತ್ತದೆ. ಆತನ ಪಾದಗಳಲ್ಲಿ ಅಡಗಿರುವ ಮಾಂತ್ರಿಕ ಶಕ್ತಿ, ಮುಂದೊಂದು ದಿನ ಆತನನ್ನು ಫುಟ್ಬಾಲ್‌ ದಿಗ್ಗಜರ ಸಾಲಿಗೆ ಸೇರಿಸುವುದರಲ್ಲಿ ಯಾವ ಅನುಮಾನವೂ ಇಲ್ಲ.

ಇದನ್ನೂ ಓದಿ Austria vs France: ಗಂಭೀರ ಗಾಯಗೊಂಡ ಎಂಬಾಪೆ; ಮುಂದಿನ ಪಂದ್ಯಕ್ಕೆ ಅನುಮಾನ

ಯುಇಎಫ್‌ಎ ಚಾಂಪಿಯನ್‌ ಲೀಗ್‌ನಲ್ಲಿ ಗೋಲು ದಾಖಲಿಸಿದ ಅತ್ಯಂತ ಕಿರಿಯ ಫ್ರೆಂಚ್ ಆಟಗಾರ, ಡಿವಿಶನ್ 1ನಲ್ಲಿ 10 ಗೋಲು ದಾಖಲಿಸಿದ ಅತೀ ಕಿರಿಯ ಆಟಗಾರ, 2016–17ರ ಋತುವಿನಲ್ಲಿ 26 ಗೋಲು ಬಾರಿಸಿ ದಾಖಲೆ, ಚಾಂಪಿಯನ್‌ ಲೀಗ್‌ನಲ್ಲಿ 10 ಗೋಲು ಬಾರಿಸಿದ ಅತೀ ಕಿರಿಯ ಆಟಗಾರ, ಲೀಗ್‌ ಪ್ರಶಸ್ತಿ ಗೆದ್ದ ಅತೀ ಕಿರಿಯ ಆಟಗಾರ, ವಿಶ್ವಕಪ್‌ನಲ್ಲಿ ಗೋಲು ದಾಖಲಿಸಿದ ಅತೀ ಕಿರಿಯ ಫ್ರೆಂಚ್ ಆಟಗಾರ..‌ ಹೀಗೆ ದಾಖಲೆಗಳನ್ನು ಹೊಂದಿರುವ ಎಂಬಾಪೆ ಇದೀಗ ಪ್ರತಿಷ್ಠಿತ ರಿಯಲ್‌ ಮ್ಯಾಡ್ರಿಡ್‌ ಕ್ಲಬ್​ ಪರ ಕೂಡ ಹಲವು ದಾಖಲೆ ನಿರ್ಮಿಸುವ ಉತ್ಸಾಹದಲ್ಲಿದ್ದಾರೆ.

4ನೇ ಬಾರಿಗೆ ಯುರೋ ಕಪ್ ಗೆದ್ದ ಸ್ಪೇನ್​


ಬರ್ಲಿನ್: ಕಳೆದ ಭಾನುವಾರ ನಡೆದಿದ್ದ ಪ್ರತಿಷ್ಠಿತ ಯುರೋ ಕಪ್ ಫುಟ್‌ಬಾಲ್ ಟೂರ್ನಿಯಲ್ಲಿ(Euro 2024 final) ಸ್ಪೇನ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಭಾನುವಾರ ತಡರಾತ್ರಿ ನಡೆದ ಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್(England vs Spain) ತಂಡವನ್ನು 2-1 ಗೋಲುಗಳಿಂದ ಮಣಿಸಿ ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

1936ರ ನಿರ್ಮಿಸಲ್ಪಟ್ಟ ಒಲಿಂಪಿಯಾ ಸ್ಟೇಡಿಯಂನಲ್ಲಿ ನಡೆದ ಉಭಯ ತಂಡಗಳ ಪ್ರಶಸ್ತಿ ಕಾದಾಟದಲ್ಲಿ ಸ್ಪೇನ್​ ಕೈ ಮೇಲಾಗಿದೆ. 1966ರ ಬಳಿಕ ಪ್ರಮುಖ ಟ್ರೋಫಿ ಜಯಿಸಲು ವಿಫಲವಾಗಿರುವ ಇಂಗ್ಲೆಂಡ್ ಈ ಬಾರಿಯೂ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಕಳೆದ ಬಾರಿಯೂ ಫೈನಲ್​ನಲ್ಲಿ ಮುಗ್ಗರಿಸಿ ರನ್ನರ್​ ಅಪ್​ ಪ್ರಶಸ್ತಿಗೆ ತೃಪ್ತಿಪಟ್ಟಿತ್ತು.

Continue Reading

ಪ್ರಮುಖ ಸುದ್ದಿ

Team India : ಶ್ರೀಲಂಕಾ ಪ್ರವಾಸದ ಟಿ20 ಸರಣಿಗೆ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ನಾಯಕ

Team India: ಹಾರ್ದಿಕ್ ಪಾಂಡ್ಯ ವಿಶ್ವಕಪ್ ಸಮಯದಲ್ಲಿ ​​ ರೋಹಿತ್ ಅವರ ಉಪನಾಯಕರಾಗಿದ್ದರು. ಅವರು ಹೆಚ್ಚು ಅನುಭವ ಹೊಂದಿದ್ದಾರೆ. ಮೂರು ಏಕದಿನ ಮತ್ತು 16 ಟಿ 20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಜೊತೆಗೆ ಐಪಿಎಲ್​​ನ ಎರಡು ಋತುಗಳಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದಾರೆ.

VISTARANEWS.COM


on

Team India
Koo

ನವದೆಹಲಿ: ಸೀಮಿತ ಓವರ್​ಗಳ ಪಂದ್ಯಗಳ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿರುವ ಭಾರತ ತಂಡಕ್ಕೆ (Team India) ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ತಂಡದ ನಾಯಕರನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ. ಅವರು ಟಿ20 ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ತಿಂಗಳು ಟಿ 20 ವಿಶ್ವಕಪ್​ನಲ್ಲಿ ಭಾರತವನ್ನು ಪ್ರಶಸ್ತಿಗೆ ಮುನ್ನಡೆಸಿದ ರೋಹಿತ್ ಶರ್ಮಾ ಅವರಿಂದ ಸೂರ್ಯಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬಾರ್ಬಡೋಸ್​ನಲ್ಲಿ ನಡೆದ ಫೈನಲ್ ನಂತರ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರೊಂದಿಗೆ ರೋಹಿತ್​​ ನಿವೃತ್ತಿ ಹೊಂದಿದ್ದಾರೆ.

ಹಾರ್ದಿಕ್ ಪಾಂಡ್ಯ ವಿಶ್ವಕಪ್ ಸಮಯದಲ್ಲಿ ​​ ರೋಹಿತ್ ಅವರ ಉಪನಾಯಕರಾಗಿದ್ದರು. ಅವರು ಹೆಚ್ಚು ಅನುಭವ ಹೊಂದಿದ್ದಾರೆ. ಮೂರು ಏಕದಿನ ಮತ್ತು 16 ಟಿ 20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಜೊತೆಗೆ ಐಪಿಎಲ್​​ನ ಎರಡು ಋತುಗಳಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಗಾಯಗಳು ಹಾರ್ದಿಕ್ ಅವರನ್ನು ಕಾಡುತ್ತಿವೆ. ಇತ್ತೀಚೆಗೆ, ಅಕ್ಟೋಬರ್ 19, 2023 ರಂದು ಏಕದಿನ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧದ ಭಾರತದ ಪಂದ್ಯದ ಸಮಯದಲ್ಲಿ ಅವರಿಗೆ ಆದ ಪಾದದ ಗಾಯವು ಅವರನ್ನು ಐಪಿಎಲ್ 2024 ರವರೆಗೆ ತಂಡದಿಂದ ಹೊರಕ್ಕೆ ಇರುವಂತೆ ಮಾಡಿತು. ಬಳಿಕ ಅವರು ರೋಹಿತ್ ಬದಲಿಗೆ ಮುಂಬೈ ಇಂಡಿಯನ್ಸ್ ನಾಯಕನಾಗಿ ಆಡಿದರು. ಅವರು ಟಿ 20 ವಿಶ್ವಕಪ್​​ನಲ್ಲಿ ರಾಷ್ಟ್ರೀಯ ಕರ್ತವ್ಯಕ್ಕೆ ಮರಳಿದರು. ವಾಸ್ತವವಾಗಿ, 2022 ರ ಆರಂಭದಿಂದ ಭಾರತ ಆಡಿದ 79 ಟಿ 20 ಪಂದ್ಯಗಳಲ್ಲಿ, ಹಾರ್ದಿಕ್ ಕೇವಲ 46 ರಲ್ಲಿ ಮಾತ್ರ ಭಾಗಿಯಾಗಿದ್ದಾರೆ.

ಸೂರ್ಯಕುಮಾರ್ ಈ ಹಿಂದೆ ದೇಶೀಯ ಕ್ರಿಕೆಟ್ನಲ್ಲಿ ಮುಂಬೈ ತಂಡವನ್ನು ಮುನ್ನಡೆಸಿದ್ದಾರೆ. ಕಳೆದ ವರ್ಷದ ಕೊನೆಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಐದು ಟಿ 20 ಐ ಸರಣಿಯಲ್ಲಿ ಮತ್ತು ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಅವರು ನಾಯಕತ್ವದ ಸಾಲಿನಲ್ಲಿ ಬಲವಾಗಿದ್ದಾರೆ ಮತ್ತು ಸಮಕಾಲೀನ ಟಿ 20 ಕ್ರಿಕೆಟ್​ಗೆ ಸೂಕ್ತ ವೇಗದಲ್ಲಿ ಬ್ಯಾಟಿಂಗ್ ಮಾಡುತ್ತಾರೆ.

ಇದನ್ನೂ ಓದಿ: Yuvraj Singh : ಅಂಗವಿಕಲರಂತೆ ರೀಲ್ಸ್​ ಮಾಡಿದ ಯುವರಾಜ್​, ಹರ್ಭಜನ್​ ಸಿಂಗ್ ವಿರುದ್ಧ ದೂರು ದಾಖಲು

ಟಿ 20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರಿಂದ ಅಧಿಕಾರ ವಹಿಸಿಕೊಂಡ ಹೊಸ ಕೋಚ್ ಗೌತಮ್ ಗಂಭೀರ್ ಅವರ ಅಡಿಯಲ್ಲಿ ಶ್ರೀಲಂಕಾದಲ್ಲಿ ಟಿ 20 ಪಂದ್ಯಗಳಲ್ಲಿ ಭಾರತ ಪಾಲ್ಗೊಳ್ಳಬೇಕಾಗಿದೆ. 2026 ರಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಮುಂದಿನ ಟಿ 20 ವಿಶ್ವಕಪ್​ಗೆ ತಂಡವನ್ನು ನಿರ್ಮಿಸುವ ನಿಟ್ಟಿನಲ್ಲಿ ಎಲ್ಲಾ ಮೊದಲ ಆಯ್ಕೆಯ ಆಟಗಾರರೊಂದಿಗೆ ತಂಡ ಸಿದ್ಧಗೊಳ್ಳಲಿದೆ. ಟಿ 20 ವಿಶ್ವಕಪ್ ನಂತರ ಭಾರತವು ಜಿಂಬಾಬ್ವೆಯಲ್ಲಿ ಐದು ಪಂದ್ಯಗಳ ಟಿ 20 ಐ ಸರಣಿಯನ್ನು ಆಡಿತು. ಆದರೆ ಆ ತಂಡದಲ್ಲಿ ವಿಶ್ವಕಪ್ ಗೆದ್ದ ತಂಡದಿಂದ ಕೇವಲ ಮೂವರು ಆಟಗಾರರು ಇದ್ದರು. ಅವರು ಕೊನೆಯ ಮೂರು ಪಂದ್ಯಗಳಿಗೆ ಮಾತ್ರ ಲಭ್ಯವಿದ್ದರು.

ಪ್ರವಾಸ ತಂಡವನ್ನು ಅಂತಿಮಗೊಳಿಸಲು ಆಯ್ಕೆದಾರರು ಬುಧವಾರ ಸಭೆ ಸೇರಲಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರವಾಸದಲ್ಲಿ ಮೂರು ಟಿ20 ಪಂದ್ಯಗಳ ಜೊತೆಗೆ ಮೂರು ಏಕದಿನ ಪಂದ್ಯಗಳು ನಡೆಯಲಿವೆ.

Continue Reading

ಕ್ರೀಡೆ

Yuvraj Singh : ಅಂಗವಿಕಲರಂತೆ ರೀಲ್ಸ್​ ಮಾಡಿದ ಯುವರಾಜ್​, ಹರ್ಭಜನ್​ ಸಿಂಗ್ ವಿರುದ್ಧ ದೂರು ದಾಖಲು

Yuvraj Singh: ಅಂಗವಿಕಲರ ಉದ್ಯೋಗ ಉತ್ತೇಜನದ ರಾಷ್ಟ್ರೀಯ ಕೇಂದ್ರದ (ಎನ್​ಸಿಪಿಇಡಿಪಿ) ಕಾರ್ಯನಿರ್ವಾಹಕ ನಿರ್ದೇಶಕ ಅರ್ಮಾನ್ ಅಲಿ ಅವರು ಅಮರ್ ಕಾಲೋನಿ ಪೊಲೀಸ್ ಠಾಣೆಯ ಎಸ್ಎಚ್ಒಗೆ ಕ್ರಿಕೆಟಿಗರ ವಿರುದ್ಧ ದೂರು ದಾಖಲಿಸಿರುವುದರಿಂದ ಈ ವಿಷಯ ಮತ್ತಷ್ಟು ಬೆಳೆದಿದೆ.

VISTARANEWS.COM


on

Yuvraj Singh
Koo

ನವದೆಹಲಿ: ಲೆಜೆಂಡ್ಸ್ ವಿಶ್ವ ಕಪ್​ನ ಉದ್ಘಾಟನಾ ಆವೃತ್ತಿಯಲ್ಲಿ ಗೆಲುವು ಸಾಧಿಸಿದ ಖುಷಿಯಲ್ಲಿ ಮಾಡಿದ ವಿಡಿಯೊ ಭಾರತದ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ (Yuvraj Singh), ಹರ್ಭಜನ್ ಸಿಂಗ್, ಸುರೇಶ್ ರೈನಾ ಮತ್ತು ಗುರ್ಕೀರತ್ ಮಾನ್ ಗೆ ಸಮಸ್ಯೆಯಾಗಿ ಮಾರ್ಪಟ್ಟಿದೆ. ಎಲ್ಲರ ವಿರುದ್ಧ ಅಂಗವಿಕಲರನ್ನು ಅಪಹಾಸ್ಯ ಮಾಡಿದ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಲಾಗಿದೆ. ವಿಶೇಷವೆಂದರೆ, ಮಾಜಿ ಕ್ರಿಕೆಟಿಗರು ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್​ನಲ್ಲಿ ರೀಲ್ ಅನ್ನು ಪೋಸ್ಟ್ ಮಾಡಿದ್ದರು. ಅಲ್ಲಿ ಅವರು ನಟ ವಿಕ್ಕಿ ಕೌಶಲ್ ಅವರ ಮುಂಬರುವ ಚಿತ್ರ ಬ್ಯಾಡ್ ನ್ಯೂಸ್​ನ ವೈರಲ್ ಹಾಡಿನ ‘ತೌಬಾ-ತೌಬಾ’ ಹಾಡಿಗೆ ಹೆಜ್ಜೆ ಹಾಕಿದ್ದರು.

ವಿಶ್ವ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಫೈನಲ್​​ನಲ್ಲಿ ಭಾಗವಹಿಸಿದ ನಂತರ ಕ್ರಿಕೆಟಿಗರು ತಮ್ಮ ದೇಹದ ಸ್ಥಿತಿಯನ್ನು ಹಾಸ್ಯಮಯ ರೀತಿಯಲ್ಲಿ ತೋರಿಸಿದ್ದರು. ಈ ಕಿರು ಕ್ಲಿಪ್ ವಿಕ್ಕಿ ಕೌಶಲ್ ಅವರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಅವರು ಪೋಸ್ಟ್​ಗೆ ನಗುವ ಎಮೋಜಿಗಳೊಂದಿಗೆ ಕಾಮೆಂಟ್ ಮಾಡಿದ್ದರು. ಆದಾಗ್ಯೂ, ಭಾರತದ ಪ್ಯಾರಾ-ಬ್ಯಾಡ್ಮಿಂಟನ್ ತಾರೆ ಮಾನಸಿ ಜೋಶಿ ಅವರು ಕ್ರಿಕೆಟಿಗರು ವಿಕಲಚೇತನರನ್ನು ಅಪಹಾಸ್ಯ ಮಾಡಿದ್ದಾರೆ ಎಂದು ಟೀಕಿಸಿದ್ದರು. ಅವರ ಆಕ್ರೋಶದ ನಂತರ, ಹರ್ಭಜನ್. ರೀಲ್ ಅನ್ನು ತೆಗೆದು ತಮ್ಮ ಇನ್ಸ್ಟಾಗ್ರಾಮ್ ಮೂಲಕ ಕ್ಷಮೆ ಯಾಚಿಸಿದ್ದರು.

ಅಂಗವಿಕಲರ ಉದ್ಯೋಗ ಉತ್ತೇಜನದ ರಾಷ್ಟ್ರೀಯ ಕೇಂದ್ರದ (ಎನ್​ಸಿಪಿಇಡಿಪಿ) ಕಾರ್ಯನಿರ್ವಾಹಕ ನಿರ್ದೇಶಕ ಅರ್ಮಾನ್ ಅಲಿ ಅವರು ಅಮರ್ ಕಾಲೋನಿ ಪೊಲೀಸ್ ಠಾಣೆಯ ಎಸ್ಎಚ್ಒಗೆ ಕ್ರಿಕೆಟಿಗರ ವಿರುದ್ಧ ದೂರು ದಾಖಲಿಸಿರುವುದರಿಂದ ಈ ವಿಷಯ ಮತ್ತಷ್ಟು ಬೆಳೆದಿದೆ.

ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅರ್ಮಾನ್ ಸೂಚನೆ

ಕ್ರಿಕೆಟಿಗರಲ್ಲದೆ, ಮೆಟಾ ಇಂಡಿಯಾದ ಉಪಾಧ್ಯಕ್ಷೆ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಸಂಧ್ಯಾ ದೇವನಾಥನ್ ಕೂಡ ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 ಅನ್ನು ಉಲ್ಲಂಘಿಸಿದ್ದಾರೆ ಎಂದು ದೂರು ನೀಡಲಾಗಿದೆ. “ಈ ವೀಡಿಯೊ ಭಾರತದ ಸಂವಿಧಾನದ 21 ನೇ ವಿಧಿಯ ಸ್ಪಷ್ಟ ಉಲ್ಲಂಘನೆಯಾಗಿದೆ, ಇದು ಪ್ರತಿಯೊಬ್ಬ ವ್ಯಕ್ತಿಗೆ ಘನತೆಯಿಂದ ಬದುಕುವ ಹಕ್ಕನ್ನು ಖಾತರಿಪಡಿಸುತ್ತದೆ. ಇದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆ, 2016 ರ ಸೆಕ್ಷನ್ 92 ಅನ್ನು ಉಲ್ಲಂಘಿಸುತ್ತದೆ ಮತ್ತು ನಿಪುನ್ ಮಲ್ಹೋತ್ರಾ ವಿರುದ್ಧ ಸೋನಿ ಪಿಕ್ಚರ್ಸ್ ಫಿಲ್ಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (2004 ಎಸ್ಸಿಸಿ ಆನ್ಲೈನ್ ಎಸ್ಸಿ 1639) ಪ್ರಕರಣದಲ್ಲಿ ಸ್ಥಾಪಿಸಲಾದ ಸುಪ್ರೀಂ ಕೋರ್ಟ್​ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ ” ಎಂದು ಅರ್ಮಾನ್ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Chennai Super King : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್​

ಕ್ರಿಕೆಟಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅರ್ಮಾನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. “ಅವರ ಕೃತ್ಯಗಳಿಗಾಗಿ ಅವರಿಗೆ ದಂಡ ವಿಧಿಸಬೇಕು” ಎಂದು ಅರ್ಮಾನ್ ಅಭಿಪ್ರಾಯಪಟ್ಟಿದ್ದಾರೆ.

Continue Reading
Advertisement
Director Arrest gajendra in murder case
ಸ್ಯಾಂಡಲ್ ವುಡ್10 mins ago

Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Vicky Kaushal Kissing Scenes of 27 Seconds deleated From Bad Newz
ಬಾಲಿವುಡ್37 mins ago

Vicky Kaushal: 27 ಸೆಕೆಂಡುಗಳ ಕಾಲ ಚುಂಬಸಿದ ವಿಕ್ಕಿ ಕೌಶಲ್ -ತೃಪ್ತಿ; ಸೆನ್ಸಾರ್‌ ಬೋರ್ಡ್‌ನಿಂದ ಬಿತ್ತು ಕತ್ತರಿ!

uttara kannada landslide shirur
ಉತ್ತರ ಕನ್ನಡ48 mins ago

Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Ajit Pawar
ರಾಜಕೀಯ49 mins ago

Ajit Pawar: ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ಗೆ ಶಾಕ್‌; ಎನ್‌ಸಿಪಿಗೆ ರಾಜೀನಾಮೆ ನೀಡಿದ ಆಪ್ತ

KL Rahul
ಕ್ರೀಡೆ52 mins ago

KL Rahul: ಮುಂದಿನ ವರ್ಷ ಆರ್​ಸಿಬಿ ಪರ ಆಡಲಿದ್ದಾರೆ ಕೆ.ಎಲ್​ ರಾಹುಲ್​; ಪೋಸ್ಟರ್ ವೈರಲ್

Samarjit Lankesh Monalisa Kannada Movie 20 Years Celebration Gowri Movie 2 Songs Released
ಸ್ಯಾಂಡಲ್ ವುಡ್1 hour ago

Samarjit Lankesh: ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ: ರಿಲೀಸ್ ಆಯ್ತು ‘ಗೌರಿ’ ಚಿತ್ರದ ಹಾಡುಗಳು

gt world mall
ಪ್ರಮುಖ ಸುದ್ದಿ1 hour ago

GT World Mall: ಪಂಚೆ ಧರಿಸಿ ಬಂದ ರೈತರಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ ಜಿಟಿ ವರ್ಲ್ಡ್‌ ಮಾಲ್‌

Kylian Mbappe
ಕ್ರೀಡೆ1 hour ago

Kylian Mbappe: ಬಾಲ್ಯದ ಕನಸಿನ ರಿಯಲ್‌ ಮ್ಯಾಡ್ರಿಡ್‌ ತಂಡ ಸೇರಿದ ಕೀಲಿಯನ್‌ ಎಂಬಾಪೆ

SIIMA 2024 nomination list announced kaatera
ಸ್ಯಾಂಡಲ್ ವುಡ್2 hours ago

SIIMA 2024: ಸೈಮಾ ನಾಮಿನೇಷನ್ ರೇಸ್‌ನಲ್ಲಿ ʻಕಾಟೇರʼ, ʻಸಪ್ತ ಸಾಗರದಾಚೆ ಎಲ್ಲೋ ಸೈಡ್-ಎʼ!

Chandipura Virus
ಆರೋಗ್ಯ2 hours ago

Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌