Women’s T20 World Cup: ವಿಶ್ವಕಪ್​ ನಡೆಸಲು ಸೇನೆಯ ನೆರವು ಕೇಳಿದ ಬಾಂಗ್ಲಾ ಕ್ರಿಕೆಟ್​ ಮಂಡಳಿ - Vistara News

ಕ್ರೀಡೆ

Women’s T20 World Cup: ವಿಶ್ವಕಪ್​ ನಡೆಸಲು ಸೇನೆಯ ನೆರವು ಕೇಳಿದ ಬಾಂಗ್ಲಾ ಕ್ರಿಕೆಟ್​ ಮಂಡಳಿ

Women’s T20 World Cup:ಬಾಂಗ್ಲಾದೇಶ ಕ್ರಿಕೆಟ್​ ಮಂಡಳಿ ಸೇನಾ ಮುಖ್ಯಸ್ಥ ಜನರಲ್‌ ವಕಾರ್‌ ಜಮಾನ್‌ ಅವರಿಗೆ ಪತ್ರ ಬರೆದಿದ್ದು, ಬಾಂಗ್ಲಾದೇಶದಲ್ಲಿ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ನಡೆಸಿಕೊಡಲು ಸಹಾಯ ಮಾಡಬೇಕು ಎಂದು ಕೋರಿದೆ.

VISTARANEWS.COM


on

Women’s T20 World Cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ(Women’s T20 World Cup) ಅಕ್ಟೋಬರ್‌ನಲ್ಲಿ ಬಾಂಗ್ಲಾದೇಶ ಆತಿಥ್ಯದಲ್ಲಿ ನಡೆಯಲಿದೆ. ಆದರೆ, ಬಾಂಗ್ಲಾದೇಶದಲ್ಲಿ(bangladesh violence)  ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಅಲ್ಲಿನ ನಾಗರೀಕರು ನಡೆಸುತ್ತಿರುವ ಪ್ರತಿಭಟನೆ, ಗಲಭೆಗಳು ಹಿಂಸಾತ್ಮಕ ರೂಪ ತಳೆದ ಕಾರಣ ಶೇಕ್ ಹಸೀನಾ‌ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಕಳೆದ ಸೋಮವಾರ (ಆ.04) ಭಾರತಕ್ಕೆ ಪಲಾಯನ ಮಾಡಿದ್ದರು. ಹೊಸ ಸರ್ಕಾರ ರಚನೆಯಾಗಿದ್ದರೂ ಕೂಡ ಹಿಂಸಾತ್ಮಕ ಘಟನೆಗಳು ಇನ್ನೂ ನಡೆಯುತ್ತಲೇ ಇದೆ. ಹೀಗಾಗಿ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ (Bangladesh Cricket Board) ಸೇನೆಯ ನೆರವು ಕೋರಿದೆ.

ಬಾಂಗ್ಲಾದೇಶ ಕ್ರಿಕೆಟ್​ ಮಂಡಳಿ ಸೇನಾ ಮುಖ್ಯಸ್ಥ ಜನರಲ್‌ ವಕಾರ್‌ ಜಮಾನ್‌ ಅವರಿಗೆ ಪತ್ರ ಬರೆದಿದ್ದು, ಬಾಂಗ್ಲಾದೇಶದಲ್ಲಿ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ನಡೆಸಿಕೊಡಲು ಸಹಾಯ ಮಾಡಬೇಕು ಎಂದು ಕೋರಿದೆ. ಐಸಿಸಿ ಕೂಡ ಬಾಂಗ್ಲಾದೇಶದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಒಂದೊಮ್ಮೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸದೇ ಹೋದರೆ, ಭದ್ರತಾ ಕಾರಣದಿಂದ ಟೂರ್ನಿಯನ್ನು ಬಾಂಗ್ಲಾದೇಶದಿಂದ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಟೂರ್ನಿ ಸ್ಥಳಾಂತರಗೊಂಡರೆ ಭಾರತದಲ್ಲಿ ನಡೆಯಲಿದೆ ಎನ್ನಲಾಗಿದೆ. ಸದ್ಯ ಸೇನೆ ಢಾಕಾದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ.

ಇದನ್ನೂ ಓದಿ ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

ಹಿಂಸಾತ್ಮಕ ಪ್ರತಿಭಟನೆ ಏಕೆ?

ಬಾಂಗ್ಲಾದೇಶದಲ್ಲಿ ಮೀಸಲಾತಿ ಕಾರಣಕ್ಕಾಗಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ. 1971ರಲ್ಲಿ ನಡೆದ ಬಾಂಗ್ಲಾದೇಶ ಹೋರಾಟದಲ್ಲಿ ಭಾಗಿಯಾದವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.30ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು. ಮೀಸಲಾತಿ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಕೆಲ ದಿನಗಳ ಹಿಂದೆಯೂ ನಡೆದ ಹಿಂಸಾತ್ಮಕ ಹೋರಾಟದಲ್ಲಿ ನೂರಾರು ಜನ ಮೃತಪಟ್ಟಿದ್ದರು.

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೇಳುತ್ತಲೇ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್‌, ಶೇ.30ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿತ್ತು. ಆದರೆ, ಸಂಪೂರ್ಣವಾಗಿ ಮೀಸಲಾತಿಯನ್ನು ರದ್ದುಗೊಳಿಸುವ ಬದಲು ಶೇ.5ರಷ್ಟು ಮೀಸಲಾತಿ ಮುಂದುವರಿಸಿದೆ. ಸಂಪೂರ್ಣವಾಗಿ ಮೀಸಲಾತಿ ರದ್ದುಗೊಳಿಸಬೇಕು ಎಂದು ಜನರ ಆಗ್ರಹವಾಗಿದ್ದು, ಇದಕ್ಕಾಗಿ ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆಗೆ ಪ್ರತಿಪಕ್ಷಗಳೂ ಬೆಂಬಲ ನೀಡಿದ್ದು, ಶೇಖ್‌ ಹಸೀನಾ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಅದರಂತೆ, ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ.

ಹಿಂದೂಗಳ ಮೇಲೆ ದಾಳಿ

ಶೇಕ್‌ ಹಸೀನಾ ಅವರು ರಾಜೀನಾಮೆ ನೀಡಿ ಪಲಾಯನ ಮಾಡಿದ ಬಳಿಕ ನಡೆದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮನೆಗಳು, ವ್ಯವಹಾರಗಳು ಮತ್ತು ದೇವಾಲಯಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದಲ್ಲಿ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 45 ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಹೀಗಾಗಿ ಇವರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎನ್ನಲಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥ ಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ನೇಮಿಸಲಾಯಿತು. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Maharaja Trophy schedule: ಮಹಾರಾಜ ಟ್ರೋಫಿಯ ವೇಳಾಪಟ್ಟಿ ಪ್ರಕಟ; ಆಗಸ್ಟ್​ 15ರಿಂದ ಟೂರ್ನಿ ಆರಂಭ

Maharaja Trophy schedule: ಹಾಲಿ ಚಾಂಪಿಯನ್ ಹುಬ್ಬಳ್ಳಿ ಟೈಗರ್ಸ್, ರನ್ನರ್ಸ್ ಅಪ್ ಮೈಸೂರು ವಾರಿಯರ್ಸ್, ಗುಲ್ಬರ್ಗ ಮಿಸ್ಟಿಕ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳು ಟೂರ್ನಿಯಲ್ಲಿ ಆಡಲಿವೆ.

VISTARANEWS.COM


on

Maharaja Trophy schedule
Koo

ಬೆಂಗಳೂರು: ಇದೇ ಆಗಸ್ಟ್‌ 15ರಿಂದ ಆರಂಭವಾಗಲಿರುವ ಮೂರನೇ ಆವೃತ್ತಿಯ ಮಹಾರಾಜ ಟ್ರೋಫಿ(Maharaja Trophy) ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ(Maharaja Trophy schedule) ಪ್ರಕಟಗೊಂಡಿದೆ. ಎಲ್ಲ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಉದ್ಘಾಟನ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗ ಮಿಸ್ಟಿಕ್ಸ್ ಮುಖಾಮುಖಿಯಾಗಲಿವೆ. ಹಾಲಿ ಚಾಂಪಿಯನ್ ಹುಬ್ಬಳ್ಳಿ ಟೈಗರ್ಸ್, ರನ್ನರ್ಸ್ ಅಪ್ ಮೈಸೂರು ವಾರಿಯರ್ಸ್, ಗುಲ್ಬರ್ಗ ಮಿಸ್ಟಿಕ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳು ಟೂರ್ನಿಯಲ್ಲಿ ಆಡಲಿವೆ.

ಟೀಮ್​ ಇಂಡಿಯಾ ಮಾಜಿ ಕೋಚ್​ ರಾಹುಲ್​ ದ್ರಾವಿಡ್​ ಪುತ್ರ ಸಮಿತ್​ ದ್ರಾವಿಡ್(Samit Dravid)​ ಕೂಡ ಈ ಬಾರಿ ಟೂರ್ನಿಯಲ್ಲಿ ಆಡುತ್ತಿರುವುದು ವಿಶೇಷ. ಸುಮಿತ್​ ಮೈಸೂರು ವಾರಿಯರ್ಸ್ ತಂಡದ ಪರ ಆಡಲಿದ್ದಾರೆ. ಟೂರ್ನಿಯ ವೇಳಾಪಟ್ಟಿ ಹೀಗಿದೆ. ಆಗಸ್ಟ್​ 15 ರಿಂದ ಪಂದ್ಯಾವಳಿ ಆರಂಭವಾಗಿ ಸೆಪ್ಟೆಂಬರ್​ 1ರ ತನಕ ನಡೆಯಲಿದೆ.

ಇದನ್ನೂ ಓದಿ Maharaja Trophy Squads: ಹರಾಜಿನ ಬಳಿಕ ಎಲ್ಲ ತಂಡಗಳ ಆಟಗಾರರ ಪಟ್ಟಿ ಹೀಗಿದೆ

ವೇಳಾಪಟ್ಟಿ


ಗುರುವಾರ, ಆಗಸ್ಟ್ 15, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಮಧ್ಯಾಹ್ನ 3:00

ಶುಕ್ರವಾರ, ಆಗಸ್ಟ್ 16, 2024 : ಶಿವಮೊಗ್ಗ ಲಯನ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00

ಶುಕ್ರವಾರ, ಆಗಸ್ಟ್ 16, 2024 : ಮಂಗಳೂರು ಡ್ರ್ಯಾಗನ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಶುಕ್ರವಾರ, ಆಗಸ್ಟ್ 16, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00

ಶನಿವಾರ, ಆಗಸ್ಟ್ 17, 2024 : ಶಿವಮೊಗ್ಗ ಲಯನ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00

ಶನಿವಾರ, ಆಗಸ್ಟ್ 17, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಭಾನುವಾರ, ಆಗಸ್ಟ್ 18, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಭಾನುವಾರ, ಆಗಸ್ಟ್ 18, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00

ಸೋಮವಾರ, ಆಗಸ್ಟ್ 19, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಸೋಮವಾರ, ಆಗಸ್ಟ್ 19, 2024 : ಮೈಸೂರು ವಾರಿಯರ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00

ಮಂಗಳವಾರ, ಆಗಸ್ಟ್ 20, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಮಂಗಳವಾರ, ಆಗಸ್ಟ್ 20, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00

ಬುಧವಾರ, ಆಗಸ್ಟ್ 21, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00

ಬುಧವಾರ, ಆಗಸ್ಟ್ 21, 2024 : ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಗುರುವಾರ, ಆಗಸ್ಟ್ 22, 2024 : ಮೈಸೂರು ವಾರಿಯರ್ಸ್ vs ಶಿವಮೊಗ್ಗ ಲಯನ್ಸ್, ಮಧ್ಯಾಹ್ನ 3:00

ಗುರುವಾರ, ಆಗಸ್ಟ್ 22, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00

ಶುಕ್ರವಾರ, ಆಗಸ್ಟ್ 23, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಶುಕ್ರವಾರ, ಆಗಸ್ಟ್ 23, 2024 : ಮಂಗಳೂರು ಡ್ರಾಗನ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಸಂಜೆ 7:00

ಶನಿವಾರ, ಆಗಸ್ಟ್ 24, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಶನಿವಾರ, ಆಗಸ್ಟ್ 24, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಭಾನುವಾರ, ಆಗಸ್ಟ್ 25, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಭಾನುವಾರ, ಆಗಸ್ಟ್ 25, 2024 : ಮಂಗಳೂರು ಡ್ರಾಗನ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00

ಸೋಮವಾರ, ಆಗಸ್ಟ್ 26, 2024 : ಮಂಗಳೂರು ಡ್ರಾಗನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಸೋಮವಾರ, ಆಗಸ್ಟ್ 26, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಸಂಜೆ 7:00

ಮಂಗಳವಾರ, ಆಗಸ್ಟ್ 27, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00

ಮಂಗಳವಾರ, ಆಗಸ್ಟ್ 27, 2024 : ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00

ಬುಧವಾರ, ಆಗಸ್ಟ್ 28, 2024 : ಮಂಗಳೂರು ಡ್ರಾಗನ್ಸ್​ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಬುಧವಾರ, ಆಗಸ್ಟ್ 28, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00

ಗುರುವಾರ, ಆಗಸ್ಟ್ 29, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00

ಗುರುವಾರ, ಆಗಸ್ಟ್ 29, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಶುಕ್ರವಾರ, ಆಗಸ್ಟ್ 30, 2024 : ಸೆಮಿಫೈನಲ್ 1 (1 vs 4), ಸಂಜೆ 7:00

ಶನಿವಾರ, ಆಗಸ್ಟ್ 31, 2024 : ಸೆಮಿಫೈನಲ್ 2 (2 vs 3), ಸಂಜೆ 7:00

ಭಾನುವಾರ, ಸೆಪ್ಟೆಂಬರ್ 1, 2024 : ಫೈನಲ್, ಸಂಜೆ 7:00

Continue Reading

ಕ್ರೀಡೆ

Kieron Pollard: ರಶೀದ್ ಖಾನ್‌ ಓವರ್​ನಲ್ಲಿ ಸತತ 5 ಸಿಕ್ಸರ್ ಬಾರಿಸಿದ ಪೊಲಾರ್ಡ್‌; ವಿಡಿಯೊ ಇಲ್ಲಿದೆ

Kieron Pollard: ಸದರ್ನ್ ಬ್ರೇವ್ ತಂಡದ ಪರ ಆಡುತ್ತಿರುವ ಪೊಲಾರ್ಡ್​ ಟ್ರೆಂಟ್ ರಾಕೆಟ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 45 ರನ್ ಬಾರಿಸಿದರು

VISTARANEWS.COM


on

Kieron Pollard
Koo

ಲಂಡನ್​: ವೆಸ್ಟ್​ ಇಂಡೀಸ್​ ತಂಡದ ಸ್ಫೋಟಕ ಬ್ಯಾಟರ್​ ಕೈರನ್​ ಪೊಲಾರ್ಡ್(Kieron Pollard) ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ಕೆಲವು ವರ್ಷಗಳೇ ಕಳೆದಿದೆ. ಆದರೆ, ಅವರ ಬ್ಯಾಟಿಂಗ್​ ಅಬ್ಬರ ಮಾತ್ರ ಹಿಂದಿನಂತೆಯೇ ಇದೆ. ಹೌದು, ಲಂಡನ್​ನಲ್ಲಿ ನಡೆಯುತ್ತಿರುವ ದಿ ಹಂಟ್ರೆಡ್​ ಕ್ರಿಕೆಟ್​ ಟೂರ್ನಿಯಲ್ಲಿ(The Hundred 2024) ಅಪಘಾನಿಸ್ತಾನದ ಖ್ಯಾತ ಸ್ಪಿನ್ನರ್​​ ಆಗಿರುವ ರಶೀದ್​ ಖಾನ್​ ಓವರ್​ನಲ್ಲಿ ಸತತ 5 ಸಿಕ್ಸರ್​ ಸಿಡಿಸಿ ಸುದ್ದಿಯಾಗಿದ್ದಾರೆ. ಪೊಲಾರ್ಡ್​ ಅವರ ಈ ಸಿಕ್ಸರ್​ ವಿಡಿಯೊ ವೈರಲ್​ ಆಗಿದೆ.

ಸದರ್ನ್ ಬ್ರೇವ್ ತಂಡದ ಪರ ಆಡುತ್ತಿರುವ ಪೊಲಾರ್ಡ್​ ಟ್ರೆಂಟ್ ರಾಕೆಟ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 45 ರನ್ ಬಾರಿಸಿದರು. ಈ ಐದು ಸಿಕ್ಸರ್​ಗಳು ರಶೀದ್​ ಖಾನ್​ ಓವರ್​ನಲ್ಲಿ ಸಿಡಿಯಿತು. ಬಿರುಸಿನ ಬ್ಯಾಟಿಂಗ್​ ನಡೆಸಿದ ಪೊಲಾರ್ಡ್​ ರಶೀದ್​ ಖಾನ್​ ಗೂಗ್ಲಿ ಎಸೆತಕ್ಕೂ ಜಗ್ಗದೆ ಚೆಂಡನ್ನು ಬೌಂಡರಿ ಗೆರೆಯಿಂದಾಚೆ ಬಾರಿಸಿದರು. ಸದ್ಯ ಪೊಲಾರ್ಡ್​ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಆಟಗಾರರ ಪೈಕಿ 7ನೇ ಸ್ಥಾನದಲ್ಲಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟ್ರೆಂಟ್ ರಾಕೆಟ್ಸ್ ತಂಡ 100 ಎಸೆತಗಳಲ್ಲಿ 8 ವಿಕೆಟ್ ಕಳೆದುಕೊಂಡು 128 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಸದರ್ನ್ ಬ್ರೇವ್ 99 ಎಸೆತಗಳಲ್ಲಿ 129 ರನ್‌ ಬಾರಿಸಿ ಗೆಲುವು ದಾಖಲಿಸಿತು. ಅದ್ಭುತ ಇನ್ನಿಂಗ್ಸ್ ಆಡಿದ ಪೊಲಾರ್ಡ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದನ್ನೂ ಓದಿ Kieron Pollard : ಇಂಗ್ಲೆಂಡ್​ ತಂಡ ಸೇರಿದ ಮುಂಬೈ ಇಂಡಿಯನ್ಸ್ ದೈತ್ಯ ಬ್ಯಾಟರ್​

ರಶೀದ್​ ಖಾನ್​ ಅವರು ಕೆಲ ದಿನಗಳ ಹಿಂದೆ ಟೈಮಲ್‌ ಮಿಲ್ಸ್‌ ಎಸೆತವನ್ನು ಮಹೇಂದ್ರ ಸಿಂಗ್​ ಧೋನಿ ಪರಿಚಯಿಸಿದ ಹೆಲಿಕಾಪ್ಟರ್ ಶಾಟ್ ಮೂಲಕ ಆಫ್​ ಸೈಡ್​ ಕಡೆಗೆ ಸಿಕ್ಸರ್​ ಬಾರಿಸಿ ಮಿಂಚಿದ್ದರು. ರಶೀದ್​ ಸಿಕ್ಸರ್​ ಬಾರಿಸುತ್ತಿದ್ದಂತೆ ಕಾಮೆಂಟ್ರಿ ಮಾಡುತ್ತಿದ್ದವರು ಓ ಸೊಗಸಾದ ಹೆಲಿಕಾಪ್ಟರ್ ಶಾಟ್ ಎಂದು ವರ್ಣಿಸಿದ್ದರು. ರಶೀದ್​ ಖಾನ್ ಬಾರಿಸಿದ ಈ ಹೆಲಿಕಾಪ್ಟರ್ ಶಾಟ್​ನ ವಿಡಿಯೊ ವೈರಲ್​ ಆಗಿತ್ತು.

ಒಂದೇ ಓವರ್​ಗೆ 6 ಸಿಕ್ಸರ್​ ಸಿಡಿಸಿದ್ದ ಪೊಲಾರ್ಡ್​


ಪೊಲಾರ್ಡ್​ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದೇ ಓವರ್​ಗೆ 6 ಸಿಕ್ಸರ್​ ಬಾರಿಸಿದ್ದ ದಾಖಲೆಯನ್ನೂ ಹೊಂದಿದ್ದಾರೆ. 2021ರಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಅಕಿಲಾ ಧನಂಜಯ್‌ ಅವರ ಓವರ್​ನಲ್ಲಿ ಪೊಲಾರ್ಡ್​ 6 ಸಿಕ್ಸರ್​ ಬಾರಿಸಿದ್ದರು.

ಐಪಿಎಲ್​ನಲ್ಲಿ ಪೊಲಾರ್ಡ್​ 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ತಂಡದ ಪರ ಬ್ಯಾಟಿಂಗ್​ ಕೋಚ್​ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Continue Reading

ಕ್ರೀಡೆ

Arshad Nadeem: ಕಿಂಚಿತ್ತು ಬೆಂಬಲ ನೀಡದಿದ್ದರೂ ನದೀಮ್​ಗೆ ಕೋಟಿಗಟ್ಟಲೆ ತೆರಿಗೆ ಕಟ್ಟಲು ಹೇಳಿದ ಪಾಕ್​ ಸರ್ಕಾರ

Arshad Nadeem: ಜಾವೆಲಿನ್‌ ಥ್ರೋ (Javelin Throw) ಸ್ಪರ್ಧೆಯಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದು ಸಾಧನೆ ಮಾಡಿರುವ ಪಾಕಿಸ್ತಾನದ ಅರ್ಷದ್​ ನದೀಮ್​ಗೆ ಸುಮಾರು 3 ರಿಂದ 6 ಕೋಟಿ ರೂ. ತೆರಿಗೆ ಪಾವತಿಸುವಂತೆ ಸೂಚಿಸಿದೆ ಎಂದು ವರದಿಯಾಗಿದೆ.

VISTARANEWS.COM


on

Arshad Nadeem
Koo

ಕರಾಚಿ: ಪ್ಯಾರಿಸ್‌ ಒಲಿಂಪಿಕ್ಸ್‌ 2024ರ (Paris Olympics 2024) ಜಾವೆಲಿನ್‌ ಥ್ರೋ (Javelin Throw) ಸ್ಪರ್ಧೆಯಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದು ಸಾಧನೆ ಮಾಡಿರುವ ಪಾಕಿಸ್ತಾನದ ಅರ್ಷದ್​ ನದೀಮ್​ (Arshad Nadeem)ಗೆ ಪ್ರೋತ್ಸಾಹವಾಗಿ ಪಾಕಿಸ್ತಾನ ಸರ್ಕಾರ ಕಿಂಚಿತ್ತು ಸಹಾಯ ಮಾಡದಿದ್ದರೂ ಕೂಡ ಇದೀಗ ಅವರಿಗೆ ಕೋಟಿಗಟ್ಟಲೇ ತೆರಿಗೆ ಕಟ್ಟುವಂತೆ ಸೂಚಿಸಿದೆ. ಸುಮಾರು 3 ರಿಂದ 6 ಕೋಟಿ ರೂ. ತೆರಿಗೆ ಪಾವತಿಸುವಂತೆ ನದೀಮ್​ಗೆ ಸೂಚಿಸುವ ಮೂಲಕ ಶಾಕ್​ ಕೊಟ್ಟಿದೆ.

ಫೆಡರಲ್ ಬೋರ್ಡ್ ಆಫ್ ರೆವೆನ್ಯೂ ನಿಯಮಗಳು ಹೇಳುವ ಪ್ರಕಾರ, ಆಟಗಾರರರು ಪಡೆದ ಬಹುಮಾನದ ಹಣಕ್ಕೆ ಸಂಬಂಧಿಸಿದಂತೆ ತೆರಿಗೆ ಪಾವತಿಸಬೇಕಾಗುತ್ತದೆ. ಅರ್ಷದ್​ ನದೀಮ್​ ಈವರೆಗೂ 20 ಕೋಟಿ ರೂ. ಬಹುಮಾನ ಮೊತ್ತವನ್ನು ಸ್ವೀಕರಿಸಿದ್ದು, ಈ ಮೊತ್ತಕ್ಕೆ ಅವರು ತೆರಿಗೆಯನ್ನು ಪಾವತಿಸಬೇಕಿದೆ. ಫೈಲರ್‌ಗಳು ಮತ್ತು ನಾನ್‌ಫೈಲರ್‌ಗಳಿಗೆ ತೆರಿಗೆ ದರ ವಿಭಿನ್ನವಾಗಿದೆ. ಫೈಲರ್‌ಗಳು ಒಟ್ಟು ಮೊತ್ತದ ಶೇಕಡಾ 15 ರಷ್ಟು ಪಾವತಿಸಬೇಕಾಗುತ್ತದೆ, ಆದರೆ ಫೈಲ್ ಮಾಡದವರು ಸ್ವೀಕರಿಸಿರುವ ಮೊತ್ತದ ಶೇಕಡಾ 30 ರಷ್ಟು ಪಾವತಿಸಬೇಕಾಗುತ್ತದೆ. ಅರ್ಷದ್ ತೆರಿಗೆ ಸಲ್ಲಿಸುವವರಾಗಿದ್ದರೆ, ಅವರು ಬಹುಮಾನದ ಮೊತ್ತದಲ್ಲಿ 3 ಕೋಟಿ ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಒಂದು ವೇಳೆ ಇಲ್ಲವಾದಲ್ಲಿ 6 ಕೋಟಿ ರೂ. ಮೊತ್ತ ಪಾವತಿಸಬೇಕಾಗುತ್ತದೆ.

ಚಿನ್ನ ಗೆದ್ದ ನದೀಮ್​ಗೆ ಪಾಕಿಸ್ತಾನ ಪ್ರಾಂತ್ಯದ ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ 10 ಕೋಟಿ ರೂ., ಸಿಂಧ್ ಸರ್ಕಾರ ಐದು ಕೋಟಿ ರೂ., ವಿಶ್ವ ಅಥ್ಲೀಟ್ ಫೆಡರೇಶನ್ ಒಂದು ಕೋಟಿ 40 ಲಕ್ಷ ಬಹುಮಾನ ಘೋಷಿಸಿದ್ದು, ಸಿಂಧ್ ಗವರ್ನರ್ ಕಮ್ರಾನ್ ತೆಸ್ಸೋರಿ, ಕ್ರಿಕೆಟಿಗ ಅಹ್ಮದ್ ಶೆಹಜಾದ್ ಮತ್ತು ಓರ್ಷ ಗಾಯಕ 30 ಲಕ್ಷಗಳನ್ನು ನೀಡಿದ್ದಾರೆ.

ಇದನ್ನೂ ಓದಿ Paris Olympics: ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ​ಒಲಿಂಪಿಕ್ಸ್​ ಪದಕ!

ಪಾಕಿಸ್ತಾನದ ಪಂಜಾಬ್‌ನಲ್ಲಿರುವ ಮಿಯಾನ್‌ ಚಾನುವಿನಲ್ಲಿನ ಬಡ ಪಂಜಾಬಿ ಕುಟುಂಬದಲ್ಲಿ ಜನಿಸಿದ ಅರ್ಷದ್‌ ನದೀಮ್‌, ಇಂದು ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಬೇಕಾದರೆ ಅವರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ತಂದೆ ಮುಹಮ್ಮದ್‌ ಅಶ್ರಫ್‌ ಗಾರೆ ಮೇಸ್ತ್ರಿ ಆಗಿದ್ದ ಕಾರಣ, ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಅರ್ಷದ್‌ ನದೀಮ್‌ ಕೂಡ ತಂದೆಯ ಜತೆ ಗಾರೆ ಕೆಲಸವನ್ನು ಮಾಡಿದ್ದರು. ಇದರೆ ಜತೆಗೆ ಕ್ರೀಡೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಅರ್ಷದ್​ ಅವರು ರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹಲವು ಪದಕಗಳನ್ನು ಗೆದ್ದು ಕೊಟ್ಟರು ಕೂಡ ಪಾಕಿಸ್ತಾನ ಸರ್ಕಾರ ಅವರಿಗೆ ಕಿಂಚಿತ್ತು ಹಣಕಾಸಿಕ ನೆರವು ನೀಡಲೇ ಇಲ್ಲ. ಕಳೆದ ಟೋಕಿಯೋ ಒಲಿಂಪಿಕ್ಸ್‌ನಲ್ಲಿ, ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿಯೂ ನದೀಮ್ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅವರಿಗೆ ಪಾಕ್‌ ಸರ್ಕಾರದಿಂದ ಯಾವುದೇ ಬೆಂಬಲ ಸಿಕ್ಕಿರಲಿಲ್ಲ. ಊರಿನ ಜನರಿಂದ ಸಿಕ್ಕ ಹಣಕಾಸಿಕ ನೆರವಿನಿಂದ ಟೋಕಿಯೊದಲ್ಲಿ ಪಾಲ್ಗೊಂಡಿದ್ದರು. ಅಲ್ಲಿ 5ನೇ ಸ್ಥಾನ ಪಡೆದಿದ್ದರು. ಈ ಬಾರಿ ಪ್ಯಾರಿಸ್​ನಲ್ಲಿ ಚಿನ್ನದ ಪದಕ ಗೆದ್ದು ಸಂಭ್ರಮಿಸಿದರು.

Continue Reading

ಕ್ರೀಡೆ

Paris Olympics: ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ​ಒಲಿಂಪಿಕ್ಸ್​ ಪದಕ!

Paris Olympics: ಅಮೆರಿಕದ ಸ್ಕೇಟ್‌ಬೋರ್ಡರ್‌ ನೈಜಾ ಹ್ಯೂಸ್ಟನ್‌(Nyjah Huston) ತಮ್ಮ ಕಂಚಿನ ಪದಕ ಕೆಲವೇ ದಿನಗಳಲ್ಲಿ ಮಾಸಿ ಹೋಗಿದೆ ಎಂದು ಆರೋಪಿಸಿದ್ದಾರೆ.

VISTARANEWS.COM


on

Koo

ಪ್ಯಾರಿಸ್‌: ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​ ಹಲವು ವಿವಾದಗಳಿಂದ ಸುದ್ದಿಯಾಗಿತ್ತು. ಇದೀಗ ವಿಜೇತರಿಗೆ ನೀಡಲಾದ ಪದಕಗಳ ಗುಣಮಟ್ಟ ಅತ್ಯಂತ ಕಳಪೆ ಮಟ್ಟದ್ದಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅಮೆರಿಕದ ಸ್ಕೇಟ್‌ಬೋರ್ಡರ್‌ ನೈಜಾ ಹ್ಯೂಸ್ಟನ್‌(Nyjah Huston) ತಮ್ಮ ಕಂಚಿನ ಪದಕ ಕೆಲವೇ ದಿನಗಳಲ್ಲಿ ಮಾಸಿ ಹೋಗಿದೆ ಎಂದು ಆರೋಪಿಸಿದ್ದಾರೆ.

“ಕಂಚಿನ ಪದಕದ ಬಣ್ಣ ಈಗಾಗಲೇ ಮಾಸಿ ಹೋಹಿದೆ. ಪದಕದ ಮೇಲ್ಪದರ ಕಿತ್ತು ಬರಲಾರಂಭಿಸಿದೆ. ಇದು ನಾವು, ನೀವು ನಿರೀಕ್ಷಿಸಿದಷ್ಟು ಉತ್ತಮ ಗುಣಮಟ್ಟವನ್ನು ಹೊಂದಿಲ್ಲ. ಹಿಂದೆಂದು ಕೂಡ ಈ ರೀತಿಯ ಒಲಿಂಪಿಕ್‌ ಪದಕಗಳು ಕಂಡಿಲ್ಲ. ಇದು ಅತ್ಯಂತ ಕಳಪೆ ಗುಣಮಟ್ಟವನ್ನು ಹೊಂದಿದೆ. ಇದನ್ನು ಜೋಪಾನವಾಗಿ ಇಡುವುದು ಹೇಗೆ ಎಂದು ತಿಳಿಯುತ್ತಿಲ್ಲ” ಎಂದು ನೈಜಾ ಹ್ಯೂಸ್ಟನ್‌ ವಿಡಿಯೊ ಮೂಲಕ ಹೇಳಿದ್ದಾರೆ.

ಪದಕದ ಜತೆ ಕಬ್ಬಿಣ ವಿಶ್ರಣ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ವಿಜೇತರಾದ ಕ್ರಿಡಾಳುಗಳಿಗೆ ನೀಡಲಾದ ಪದಕಗಳಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚು ಮಾತ್ರವಲ್ಲದೆ ಈ ಬಾರಿ ಕಬ್ಬಿಣವೂ ಸೇರಿತ್ತು. ಪ್ಯಾರಿಸ್ ನಗರದ ಪ್ರಸಿದ್ಧ ಐಫೆಲ್ ಟವರ್​ನ ಕಬ್ಬಿಣದ ತುಂಡುಗಳನ್ನು ಈ ಬಾರಿ ಕ್ರಾಂತಿಕಾರಿಯಾಗಿ ಪದಕದೊಂದಿಗೆ ವಿನ್ಯಾಸಗೊಳಿಸಲಾಗಿತ್ತು. ಐಫೆಲ್ ಟವರ್ ನವೀಕರಣ ಕೆಲಸದ ವೇಳೆ ಕತ್ತರಿಸಲ್ಪಟ್ಟ ಕಬ್ಬಿಣದ ತುಂಡುಗಳನ್ನು ಸಂಗ್ರಹಿಸಿಡಲಾಗಿತ್ತು ಇದನ್ನು ಒಲಿಂಪಿಕ್ಸ್ ಪದಕಗಳಲ್ಲಿ ಬಳಸಲಾಗಿತ್ತು. ಪ್ರತಿ ಪದಕವೂ 18 ಗ್ರಾಂ ಭಾರದ ಕಬ್ಬಿಣದ ತುಂಡನ್ನು ಒಳಗೊಂಡಿತ್ತು. ಇದೇ ಕಬ್ಬಿಣ ವಿಶ್ರಿತ ಮಾಡಿದ ಕಾರಣದಿಂದಲೂ ಪದಕದ ಗುಣಮಟ್ಟ ಕಳೆದುಕೊಂಡಿರುವ ಸಾಧ್ಯತೆ ಇದೆ. ಕೆಲವರು ಈ ಬಾರಿಯ ಚಿನ್ನದ ಪದಕದಲ್ಲಿ ಕೇವಲ ಶೇ.1ರಷ್ಟು ಮಾತ್ರ ಚಿನ್ನ ಇದೆ ಎಂದು ದೂರಿದ್ದಾರೆ.

ಒಲಿಂಪಿಕ್ಸ್​ಗೆ ಇಂದು ತೆರೆ


ಪ್ಯಾರಿಸ್​ನಲ್ಲಿ ನಡೆದ 33ನೇ ಆವೃತ್ತಿಯ ಬೇಸಗೆ ಒಲಿಂಪಿಕ್ಸ್​ಗೆ ಇಂದು(ಭಾನುವಾರ) ಅಧಿಕೃತವಾಗಿ ತೆರೆ ಬೀಳಲಿದೆ. ಕಳೆದ 17 ದಿನಗಳಿಂದ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದ ಸಮಾರೋಪ ಸಮಾರಂಭ ಪ್ಯಾರಿಸ್‌ನ ಹೃದಯ ಭಾಗವಾದ “ಸ್ಟೇಡ್‌ ಡೆ ಫ್ರಾನ್ಸ್‌ ಸ್ಟೇಡಿಯಂ’ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದಂತೆ ರಾತ್ರಿ 12.30ಕ್ಕೆ ಈ ಕಾರ್ಯಕ್ರಮ ಆರಂಭವಾಗಲಿದೆ. ಹಾಕಿ ಆಟಗಾರ ಪಿ.ಆರ್ ಶ್ರೀಜೇಶ್(PR Sreejesh)​ ಮತ್ತು ಅವಳಿ ಕಂಚಿನ ಪದಕ ವಿಜೇತೆ ಶೂಟರ್​ ಮನು ಭಾಕರ್​(Manu Bhaker) ಭಾರದ ಧ್ವಜಧಾರಿಗಳಾಗಿ( India’s Co-Flag Bearer) ಪಥಸಂಚಲನದಲ್ಲಿ ಸಾಗಲಿದ್ದಾರೆ. 

ಇದನ್ನೂ ಓದಿ Paris Olympics: “ಇಂಡಿಯಾ ಹೌಸ್‌”ನಲ್ಲಿ ನೀರಜ್​ ಚೋಪ್ರಾ ಸೇರಿ ಪದಕ ವಿಜೇತರನ್ನು ಗೌರವಿಸಿದ ನೀತಾ ಅಂಬಾನಿ

ಸಮಾರೋಪ ಸಮಾರಂಭದಲ್ಲಿ ಅಮೆರಿಕದ ಖ್ಯಾತ ನಟ ಹಾಗೂ ನಿರ್ಮಾಪಕ ಟಾಮ್‌ ಕ್ರುಯಿಸ್‌ ಇದರಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮುಂದಿನ ಒಲಿಂಪಿಕ್ಸ್‌ ಕ್ರೀಡಾಕೂಟ ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುವುದರಿಂದ ಹಾಲಿವುಡ್‌ ತಂಡವೊಂದು ಪಾಲ್ಗೊಳ್ಳುವುದಾಗಿ ವರದಿಯಾಗಿದೆ. ಫ್ರೆಂಚ್‌ ಮತ್ತು ಅಮೆರಿಕನ್‌ ಕಲಾವಿದರು ಜಂಟಿಯಾಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಮುಂದಿನ ಒಲಿಂಪಿಕ್‌ ಆತಿಥ್ಯ ವಹಿಸಿದ ದೇಶಕ್ಕೆ ಒಲಿಂಪಿಕ್​​ ಧ್ವಜವನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ಯಾರಿಸ್‌ ಹಾಗೂ ಲಾಸ್‌ ಏಂಜಲೀಸ್‌ ನಗರಗಳ ಮೇಯರ್‌ಗಳು ಉಪಸ್ಥಿತರಿರುತ್ತಾರೆ. ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ ಅಧ್ಯಕ್ಷ ಥಾಮಸ್‌ ಬಾಶ್‌ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ಮುಕ್ತಾಯವನ್ನು ಘೋಷಿಸಲಿದ್ದಾರೆ.

Continue Reading
Advertisement
Bear attack
ಹಾಸನ2 mins ago

Bear Attack : ರೈತನ ಮೇಲೆ ಡೆಡ್ಲಿ ಅಟ್ಯಾಕ್‌ ಮಾಡಿ ಕೊಂದು ಹಾಕಿದ ಕರಡಿ

Viral Video
ವೈರಲ್ ನ್ಯೂಸ್42 mins ago

Viral Video: ಸಾಧುಗಳಂತೆ ನಟಿಸಿ ಜನರನ್ನು ದೋಚುತ್ತಿದ್ದ ಖದೀಮರು; ಸಾರ್ವಜನಿಕರಿಂದ ಗೂಸಾ! ವಿಡಿಯೋ ಇದೆ

Maharaja Trophy schedule
ಕ್ರೀಡೆ44 mins ago

Maharaja Trophy schedule: ಮಹಾರಾಜ ಟ್ರೋಫಿಯ ವೇಳಾಪಟ್ಟಿ ಪ್ರಕಟ; ಆಗಸ್ಟ್​ 15ರಿಂದ ಟೂರ್ನಿ ಆರಂಭ

Tungabhadra Dam
ಬೆಂಗಳೂರು52 mins ago

Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

Hidden camera
ಬೆಂಗಳೂರು58 mins ago

Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

Tharun Sudhir - Sonal marriage vibe photos Out
ಸಿನಿಮಾ1 hour ago

Tharun Sudhir – Sonal: ತರುಣ್‌ ಸುಧೀರ್‌ -ಸೋನಲ್‌ ಕಲ್ಯಾಣ; ಹೇಗೆ ಕಾಣ್ತಿದ್ದಾಳೆ ನೋಡಿ ಮದುಮಗಳು!

Kieron Pollard
ಕ್ರೀಡೆ1 hour ago

Kieron Pollard: ರಶೀದ್ ಖಾನ್‌ ಓವರ್​ನಲ್ಲಿ ಸತತ 5 ಸಿಕ್ಸರ್ ಬಾರಿಸಿದ ಪೊಲಾರ್ಡ್‌; ವಿಡಿಯೊ ಇಲ್ಲಿದೆ

Serial Killer
ದೇಶ1 hour ago

Serial Killer: 9 ಮಹಿಳೆಯರ ಕೊಂದ ಸರಣಿ ಹಂತಕ ಸೆರೆ; ಆತ ಹೇಗೆ ಕೊಲೆ ಮಾಡುತ್ತಿದ್ದ? ವಿಡಿಯೊ ಇಲ್ಲಿದೆ

Tharun Sudhir and Sonal Monteiro tie the knot
ಸ್ಯಾಂಡಲ್ ವುಡ್2 hours ago

Tharun Sudhir: ವೈವಾಹಿಕ ಜೀವನಕ್ಕೆ ಕಾಲಿಟ್ಟ ತರುಣ್‌ ಸುಧೀರ್‌- ಸೋನಲ್‌ ಮೊಂಥೆರೋ!

Tharun Sudhir mother malathi sudheer old video viral
ಸಿನಿಮಾ2 hours ago

Tharun Sudhir: ನನ್ನ ಮಗ ಸುಂದರ ಇಲ್ವಾ, ಒಳ್ಳೆಯ ಗುಣ ಇಲ್ವಾ ಎಂದು ಕಣ್ಣೀರಿಟ್ಟಿದ್ದ ತರುಣ್ ಸುಧೀರ್ ತಾಯಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌