World Athletics Championships; ಇಂದು ನೀರಜ್​ ಚೋಪ್ರಾ ಕಣಕ್ಕೆ - Vistara News

ಕ್ರೀಡೆ

World Athletics Championships; ಇಂದು ನೀರಜ್​ ಚೋಪ್ರಾ ಕಣಕ್ಕೆ

ಚಿನ್ನದ ಹುಡುಗ ನೀರಜ್​ ಚೋಪ್ರಾ(Neeraj Chopra) ಅವರು ಇಂದು ನಡೆಯುವ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ ಕಣಕ್ಕಿಳಿಯಲಿದ್ದಾರೆ.

VISTARANEWS.COM


on

Indian track and field athlete
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬುಡಾಪೆಸ್ಟ್ (ಹಂಗೇರಿ): ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ(World Athletics Championships) ಭಾರತದ ಸ್ಟಾರ್​ ಜಾವೆಲಿನ್​ ಎಸೆತಗಾರ, ಚಿನ್ನದ ಹುಡುಗ ನೀರಜ್​ ಚೋಪ್ರಾ(Neeraj Chopra) ಅವರು ಇಂದು ನಡೆಯುವ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ ಕಣಕ್ಕಿಳಿಯಲಿದ್ದಾರೆ. ಇಂದು ಮಧ್ಯಾಹ್ನ 1:40 ಕ್ಕೆ ನಿಗದಿಪಡಿಸಲಾದ ಗುಂಪು A ಕ್ವಾಲಿಫೈಯರ್‌ನಲ್ಲಿ ಅವರು ಜಾವೆಲಿನ್​ ಎಸೆಯಲಿದ್ದಾರೆ.

ಟೋಕಿಯೊ ಒಲಿಂಪಿಕ್ಸ್​ ಸೇರಿ ಡೈಮಂಡ್​ ಲೀಗ್​ನಲ್ಲಿ ಚಿನ್ನ ಗೆದ್ದಿರುವ ನೀರಜ್​ ಚೋಪ್ರಾ ಈ ಬಾರಿ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಶ್ರೇಷ್ಠ ಪ್ರದರ್ಶನದೊಂದಿಗೆ ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ಜಯಿಸುವ ವಿಶ್ವಾಸದಲ್ಲಿದ್ದಾರೆ. ಕಳೆದ ವರ್ಷ ಬೆಳ್ಳಿ ಪದಕಕ್ಕೆ ಕೊರಳೊಡಿದ್ದರು. ಈ ಟೂರ್ನಿಯಲ್ಲಿ ಭಾರತ ಕೇವಲ ಎರಡು ಪದಕ ಮಾತ್ರ ಗೆದ್ದಿದೆ. 2003ರ ಪ್ಯಾರಿಸ್‌ ವಿಶ್ವ ಕೂಟದ ಮಹಿಳೆಯರ ಲಾಂಗ್‌ಜಂಪ್‌ನಲ್ಲಿ ಅಂಜು ಬಾಬಿ ಜಾರ್ಜ್‌ ಮೊದಲ ಪದಕ ಪಡೆದಿದ್ದರು. ಇದಾದ ಬಳಿಕ ಕಳೆದ ವರ್ಷ ನೀರಜ್​ ಅವರು ದ್ವಿತೀಯ ಪದಕ ಗೆದ್ದಿದ್ದರು.

ಭಾನುವಾರ ಫೈನಲ್​

ಒಟ್ಟು 27 ಜಾವೆಲಿನ್ ಎಸೆತಗಾರರನ್ನು ಎ ಮತ್ತು ಬಿ ಎಂದು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಆಯ್ಕೆಯಾಗುವ 12 ಮಂದಿ ಭಾನುವಾರದಂದು ನಿಗದಿಯಾಗಿರುವ ಫೈನಲ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಫೈನಲ್‌ ಪ್ರವೇಶಿಸಲು 83.00 ಮೀ. ಅರ್ಹತಾ ಅಂಕ ಪಡೆಯಬೇಕಿದೆ. ಇದೇ ವರ್ಷ ಏಷ್ಯನ್ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಮನು ಕೂಡ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದಾರೆ. ಮೊಬ್ಬ ಭಾರತೀಯ ಜೆನಾ ಬಿ ಗುಂಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಒಟ್ಟಾರೆ ಮೂವರು ಭಾರತಿಯರು ಈ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಆಂಡರ್ಸನ್ ಪೀಟರ್ಸ್, ಲಂಡನ್​ನ 2012ರ ಒಲಿಂಪಿಕ್ ಚಾಂಪಿಯನ್ ಟ್ರಿನಿಡಾಡ್ ಮತ್ತು ಟೊಬಾಗೋದ ಕೆಶೋರ್ನ್ ವಾಲ್ಕಾಟ್, ಜರ್ಮನಿಯ ವಿಶ್ವದ ನಂ. 2 ಜೂಲಿಯನ್ ವೆಬರ್ ಅವರಂತಹ ಘಟಾನುಘಟಿಗಳು ಕಾಣಿಸಿಕೊಂಡಿದ್ದಾರೆ.

ಪ್ಯಾರಿಸ್​ ಒಲಿಂಪಿಕ್ಸ್​ಗೆ ಸಿದ್ಧತೆ

ಲಾಸನ್​ನಲ್ಲಿ ಕಳೆದ ವರ್ಷ ನಡೆದ ಡೈಮಂಡ್​ ಲೀಗ್​ನಲ್ಲಿ ಚೋಪ್ರಾ 89.04 ದೂರ ಜಾವೆಲಿನ್‌ ಎಸೆದಿದ್ದರು. ಇದು ಅವರ ಇದುವರೆಗೆ ಅತ್ಯುತ್ತಮ ಸಾಧನೆಯಾಗಿದೆ. ವಿಶ್ವ ಆ್ಯತ್ಲೆಟಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಮುಂದಿನ ವರ್ಷ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ಗೆ ಸಿದ್ಧತೆ ಮಾಡಿಕೊಳ್ಳುವುದು ಅವರ ಯೋಜನೆಯಾಗಿದೆ.

ಇದನ್ನೂ ಓದಿ Neeraj Chopra : ಚಿನ್ನದ ಹುಡುಗ ನೀರಜ್​ಗೆ ಗಾಯದ ಬಾಧೆ, ಏನಾಯಿತು ಅವರಿಗೆ?

90 ಮೀ. ಗುರಿ

ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ 90 ಮೀ. ದೂರ ಜಾವೆಲಿನ್‌ ಎಸೆಯುವುದು ನನ್ನ ಪ್ರಮುಖ ಗುರಿ ಎಂದು ಈಗಾಗಲೇ ನೀರಜ್​ ಚೋಪ್ರಾ ಹೇಳಿದ್ದಾರೆ. ಇದೇ ಮೇ 5ರಂದು ದೋಹಾದಲ್ಲಿ ನಡೆದಿದ್ದ ಡೈಮಂಡ್‌ ಲೀಗ್‌ನಲ್ಲಿ(Diamond League) ಚಿನ್ನದ ಪದಕ ಗೆದ್ದಿದ್ದರು. ಈ ಕೂಟದಲ್ಲಿ ಅವರು ತಮ್ಮ 4ನೇ ಅತ್ಯುತ್ತಮ ದೂರದ(88.67 ಮೀ.) ಸಾಧನೆಯೊಂದಿಗೆ ಗುರುತಿಸಿಕೊಂಡಿದ್ದರು. ಬಳಿಕ ಸ್ನಾಯು ಸೆಳೆತಕ್ಕೆ ಸಿಲುಕಿದ ಕಾರಣ ವಿಶ್ರಾಂತಿ ಪಡೆದಿದ್ದರು. ಹೀಗಾಗಿ ಮೇ 29ರಂದು ನೆದರ್ಲೆಂರ್ಡ್ಸ್​ನಲ್ಲಿ ನಡೆದಿದ್ದ ಎಫ್ಬಿಕೆ ಗೇಮ್ಸ್‌ ಮತ್ತು ಜೂನ್​ 13ರಂದು ಫಿನ್​ಲೆಂಡ್‌ನ‌ಲ್ಲಿ ನಡೆದ ಪಾವೋ ನುರ್ಮಿ ಟೂರ್ನಿಯಿಂದ ಹೊರಗುಳಿದಿದ್ದರು. ಆದರೆ ಜುಲೈನಲ್ಲಿ ನಡೆದ ಲೌಸನ್ನೆ ಚರಣರದ ಡೈಮಂಡ್​ ಲೀಗ್​ನಲ್ಲಿ(Lausanne Diamond League) ಚಿನ್ನ ಗೆದ್ದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

T20 World Cup 2024: ಅಭ್ಯಾಸ ಪಂದ್ಯಗಳು ಮೇ 27ರಿಂದ ಜೂನ್ 1ರವರೆಗೆ ನಡೆಯಲಿದೆ. ಭಾರತ ಮಾತ್ರ ಏಕೈಕ ಪಂದ್ಯ ಆಡಲಿದ್ದು, ಉಳಿದ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತ ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಅಭ್ಯಾಸ ಪಂದ್ಯವನ್ನು ಆಡಲಿದೆ.

VISTARANEWS.COM


on

T20 World Cup 2024
Koo

ದುಬೈ: ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಪಂದ್ಯಾವಳಿಗಳು ನಡೆಯಲಿವೆ. ಜೂನ್​ 1ರಿಂದ ಆರಂಭಗೊಂಡು ಜೂನ್​ 29ರ ತನಕ ಸಾಗಲಿದೆ. ಇದೀಗ ಅಭ್ಯಾಸ ಪಂದ್ಯಗಳ(warm up matches schedule) ವೇಳಾಪಟ್ಟಿ ಐಸಿಸಿ ಪ್ರಕಟಿಸಿದ್ದು, ಭಾರತ ಕೇವಲ ಒಂದು ಪಂದ್ಯ ಮಾತ್ರ ಆಡಲಿದೆ.

ಕೆಲವು ದಿನಗಳ ಹಿಂದೆಯೇ ಭಾರತ ತಂಡ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ ಎಂದು ಕ್ರಿಕ್​ಬಜ್​ ವರದಿ ಮಾಡಿತ್ತು. ಐಪಿಎಲ್​ ಟೂರ್ನಿ ಮೇ 26ಕ್ಕೆ ಮುಕ್ತಾಯ ಕಾಣಲಿದೆ. ಹೀಗಾಗಿ ಆಟಗಾರರಿಗೆ ಮುಂಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ ಎಂದು ಕ್ರಿಕ್​ಬಜ್ ತಿಳಿಸಿತ್ತು. ಇದೀಗ ಈ ವರದಿ ನಿಜವಾಗಿದೆ. ಭಾರತ ಕೇವಲ ಒಂದು ಪಂದ್ಯ ಮಾತ್ರ ಆಡಲಿದೆ.

ಅಭ್ಯಾಸ ಪಂದ್ಯಗಳು ಮೇ 27ರಿಂದ ಜೂನ್ 1ರವರೆಗೆ ನಡೆಯಲಿದೆ. ಭಾರತ ಮಾತ್ರ ಏಕೈಕ ಪಂದ್ಯ ಆಡಲಿದ್ದು, ಉಳಿದ ತಂಡಗಳು ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಭಾರತ ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಅಭ್ಯಾಸ ಪಂದ್ಯವನ್ನು ಆಡಲಿದೆ. ಆದರೆ ಪಂದ್ಯದ ತಾಣ ಎಲ್ಲಿ ಎನ್ನುವುದು ಇನ್ನಷ್ಟೇ ಖಚಿತವಾಗಬೇಕಿದೆ. ಮೂಲಗಲ ಪ್ರಕಾರ ನ್ಯೂಯಾರ್ಕ್‌ನಲ್ಲಿ ನಡೆಯಲಿದೆ ಎನ್ನಲಾಗಿದೆ.


ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಉಚಿತ ಪ್ರಸಾರ


ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ​ಡಿಸ್ನಿ + ಹಾಟ್‌ಸ್ಟಾರ್(Disney+ Hotstar) ಕ್ರಿಕೆಟ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಈ ವರ್ಷದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಅನ್ನು OTT ಪ್ಲಾಟ್‌ಫಾರ್ಮ್‌ನಲ್ಲಿ ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಡಿಸ್ನಿ + ಹಾಟ್‌ಸ್ಟಾರ್ ಈಗಾಗಲೇ ಘೋಷಿಸಿದೆ. ಕಳೆದ ವರ್ಷ ಏಕದಿನ ವಿಶ್ವಕಪ್ ಮತ್ತು ಏಷ್ಯಾ ಕಪ್‌ ಟೂರ್ನಿಯನ್ನು ಕೂಡ ಡಿಸ್ನಿ + ಹಾಟ್‌ಸ್ಟಾರ್, ಮೊಬೈಲ್​ ಬಳಕೆ ದಾರರಿಗೆ ಉಚಿತ ವೀಕ್ಷಣೆಯನ್ನು ನೀಡಿತ್ತು. ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಇದೇ ನಿಲುವನ್ನು ಮುಂದುವರಿಸಿದೆ.

Continue Reading

ಕ್ರೀಡೆ

RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

RCB vs CSK: 11 ವರ್ಷಗಳ ಹಿಂದೆ ನಡೆದಿದ್ದ ಪಂದ್ಯಕ್ಕೂ ನಾಳೆ ನಡೆಯುವ ಪಂದ್ಯಕ್ಕೂ ದಿನಾಂಕ, ದಿವಸ ಮತ್ತು ಮಳೆಯ ಅಂಕಿ ಸಂಖ್ಯೆಗಳ ಚಮತ್ಕಾರ ತಾಳೆಯಾಗುತ್ತಿದ್ದು ಈ ಆಧಾರದಲ್ಲಿ ಆರ್​ಸಿಬಿ ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ಭವಿಷ್ಯ ನುಡಿಯಲಾರಂಭಿಸಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ನಾಳೆ(ಶನಿವಾರ) ನಡೆಯುವ ಪ್ಲೇ ಆಫ್​ ಪ್ರವೇಶದ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ(RCB vs CSK) ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೆ ಮಳೆ ಭೀತಿ ಇದ್ದರೂ ಕೂಡ ಕಾಕತಾಳೀಯ ಲೆಕ್ಕಾಚಾರವೊಂದರ ಪ್ರಕಾರ ಆರ್​ಸಿಬಿ ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ಪಂದ್ಯಕ್ಕೂ ಮುನ್ನವೇ ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಹೌದು, ಆರ್​ಸಿಬಿ ಮತ್ತು ಚೆನ್ನೈ 2013ರಲ್ಲಿ ತನ್ನ ಕೊನೆಯ ಲೀಗ್​ ಪಂದ್ಯವನ್ನು ಮೇ 18ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆಡಿತ್ತು. ಈ ಪಂದ್ಯ ಕೂಡ ಶನಿವಾರವೇ ಆಗಿತ್ತು. ಅಲ್ಲದೆ ಪಂದ್ಯಕ್ಕೆ ಮಳೆಯ ಭೀತಿಯೂ ಎದುರಾಗಿತ್ತು. ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯಂತೆ ಪಂದ್ಯಕ್ಕೆ ಮಳೆ ಕೂಡ ಅಡ್ಡಿಪಡಿಸಿತ್ತು. ಬಳಿಕ ಡಕ್​ವರ್ತ್ ಲೂಯಿಸ್​ ನಿಯಮದ ಅನುಸಾರ ಈ ಪಂದ್ಯವನ್ನು 8 ಓವರ್​ಗೆ ಸೀಮಿತಗೊಳಿಸಿ ಆಡಿಸಲಾಗಿತ್ತು.

ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ಓವರ್​ಗೆ ಕೇವಲ 2 ವಿಕೆಟ್​ ಕಳೆದುಕೊಂಡು 106 ರನ್​ ಪೇರಿಸಿತ್ತು. ಕಿಂಗ್​ ವಿರಾಟ್​ ಕೊಹ್ಲಿ ಅಜೇಯ 56 ರನ್​ ಬಾರಿಸಿದರೆ, ಕ್ರಿಸ್​ ಗೇಲ್​ 28 ರನ್​ ಬಾರಿಸಿದ್ದರು. ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್​ ಕಿಂಗ್ಸ್​ 6 ವಿಕೆಟ್​ ಕಳೆದುಕೊಂಡು 82 ರನ್​ಗಳಿಸಲಷ್ಟೇ ಶಕ್ತವಾಗಿ 24 ರನ್​ಗಳ ಸೋಲು ಕಂಡಿತ್ತು.

ಇದೀಗ ನಾಳೆ ನಡೆಯುವ ಪಂದ್ಯವೂ ಕೂಡ ಮೇ 18 ಶನಿವಾರವಾಗಿದೆ. ಜತೆಗೆ ಪಂದ್ಯಕ್ಕೆ ಮಳೆಯ ಭೀತಿ ಕೂಡ ಇದೆ. 11 ವರ್ಷಗಳ ಹಿಂದೆ ನಡೆದಿದ್ದ ಪಂದ್ಯಕ್ಕೂ ನಾಳೆ ನಡೆಯುವ ಪಂದ್ಯಕ್ಕೂ ದಿನಾಂಕ, ದಿವಸ ಮತ್ತು ಮಳೆಯ ಅಂಕಿ ಸಂಖ್ಯೆಗಳ ಚಮತ್ಕಾರ ತಾಳೆಯಾಗುತ್ತಿದ್ದು ಈ ಆಧಾರದಲ್ಲಿ ಆರ್​ಸಿಬಿ ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಹವಾಮಾನ ಇಲಾಖೆ ಈಗಾಗಕೇ ಪಂದ್ಯಕ್ಕೆ ಶೇ.89 ರಷ್ಟು ಮಳೆ(Rain forecast for Bengaluru) ಇದೆ ಎಂದು, ಒಂದು ವಾರಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಶುಕ್ರವಾರ ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆಯೂ ಆಗಿದೆ. ಹೀಗಾಗಿ ಶನಿವಾರವೂ ಮಳೆ ಇರುವುದು ಖಚಿತಗೊಂಡಿದೆ. ಒಂದೊಮ್ಮೆ ಮಳೆ ಬಂದು ಪಂದ್ಯ ರದ್ದಾದರೆ ಆರ್​ಸಿಬಿ ಪ್ಲೇ ಆಫ್​ನಿಂದ ಹೊರಬೀಳಲಿದೆ. 15 ಅಂಕ ಪಡೆಯುವ ಚೆನ್ನೈ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ. ಈಗಾಗಲೇ ಮೂರು ತಂಡಗಳಾದ ಕೆಕೆಆರ್​, ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ಪ್ಲೇ ಆಫ್​ ತಲುಪಿದೆ. ಒಂದು ಸ್ಥಾನ ನಾಳೆ ನಿರ್ಧಾರವಾಗಲಿದೆ.

ಇದನ್ನೂ ಓದಿ IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

Continue Reading

ಕ್ರೀಡೆ

RCB vs CSK: ಚೆನ್ನೈ-ಆರ್​ಸಿಬಿ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿ ಏನು?

RCB vs CSK: ಶುಕ್ರವಾರ ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆಯೂ ಆಗಿದೆ. ಹೀಗಾಗಿ ಶನಿವಾರವೂ ಮಳೆ ಇರುವುದು ಖಚಿತಗೊಂಡಿದೆ. ಒಂದೊಮ್ಮೆ ಮಳೆ ಬಂದು ಪಂದ್ಯ ರದ್ದಾದರೆ ಆರ್​ಸಿಬಿ ಪ್ಲೇ ಆಫ್​ನಿಂದ ಹೊರಬೀಳಲಿದೆ.

VISTARANEWS.COM


on

RCB vs CSK
Koo

ಬೆಂಗಳೂರು: ಸತತ ಸೋಲಿನಿಂದ ಕಂಗೆಟ್ಟು ಸ್ವತಃ ಅಭಿಮಾನಿಗಳಿಂದಲೇ ಟ್ರೋಲ್​ ಆಗಿದ್ದ ರಾಯಲ್​​ ಚಾಲೆಂಜರ್ಸ್​ ಬೆಂಗಳೂರು(RCB vs CSK) ತಂಡ ಆ ಬಳಿಕದ ಪಂದ್ಯಗಳಲ್ಲಿ ಸತತವಾಗಿ ಗೆದ್ದು ಯಾರೂ ಕೂಡ ಊಹಿಸದಂತೆ ಪ್ಲೇ ಆಪ್​ ರೇಸ್​ಗೆ ಬಂದು ನಿಂತಿದೆ. ತನ್ನ ಅಂತಿಮ ಲೀಗ್​ ಪಂದ್ಯವನ್ನು ನಾಳೆ(ಶನಿವಾರ) ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಆಡಲಿದೆ. ಗೆದ್ದರೆ ಪ್ಲೇ ಆಫ್​(RCB’s playoff hopes) ಟಿಕೆಟ್​​ ಅಧಿಕೃತಗೊಳ್ಳಲಿದೆ. ಆದರೆ, ಆರ್​ಸಿಬಿ ಪಾಲಿಗೆ ಮಳೆ ವಿಲನ್ ಆಗುವ ಎಲ್ಲ ಸಾಧ್ಯತೆ ಅಧಿಕವಾಗಿ ಗೋಚರಿಸಿದೆ.

​ಭಾರೀ ಮಳೆ ಎಚ್ಚರಿಕೆ


ಹವಾಮಾನ ಇಲಾಖೆ ಶನಿವಾರ ಶೇ.89 ರಷ್ಟು ಮಳೆ(Rain forecast for Bengaluru) ಇದೆ ಎಂದು, ಒಂದು ವಾರಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಶುಕ್ರವಾರ ಬೆಳಗ್ಗಿನಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆಯೂ ಆಗಿದೆ. ಹೀಗಾಗಿ ಶನಿವಾರವೂ ಮಳೆ ಇರುವುದು ಖಚಿತಗೊಂಡಿದೆ. ಒಂದೊಮ್ಮೆ ಮಳೆ ಬಂದು ಪಂದ್ಯ ರದ್ದಾದರೆ ಆರ್​ಸಿಬಿ ಪ್ಲೇ ಆಫ್​ನಿಂದ ಹೊರಬೀಳಲಿದೆ. 15 ಅಂಕ ಪಡೆಯುವ ಚೆನ್ನೈ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ. ಈಗಾಗಲೇ ಮೂರು ತಂಡಗಳಾದ ಕೆಕೆಆರ್​, ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ಪ್ಲೇ ಆಫ್​ ತಲುಪಿದೆ. ಒಂದು ಸ್ಥಾನ ನಾಳೆ ನಿರ್ಧಾರವಾಗಲಿದೆ.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

ಇದನ್ನೂ ಓದಿ IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

ಚೆನ್ನೈ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಬಿಸಿ ಬಿಸಿ ಚಹಾ ಕುಡಿದು ಸಂಭ್ರಮಿಸುತ್ತಿದ್ದಾರೆ. ಇದು ನಡೆದಿರುವುದು ಗುರುವಾರ ಬೆಳಗ್ಗೆ ಅಭ್ಯಾಸದ ಅವಧಿಯಲ್ಲಿ. ಚಿನ್ನಸ್ವಾಮಿ ಸ್ಟೇಡಿಯಮ್​​ಲ್ಲಿದ್ದ ಆರ್​ಸಿಬಿ ಶಿಬಿರವು ಎಂ.ಎಸ್. ಧೋನಿಯನ್ನು ಬಿಸಿ ಕಪ್ ಚಹಾದೊಂದಿಗೆ ಸ್ವಾಗತಿಸಿತು. ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ಗೆ ಭೇಟಿ ನೀಡಿದ ಧೋನಿಗೆ ತಂಡದ ಸಹಾಯಕ ಸಿಬ್ಬಂದಿ ಬಿಸಿ ಬಿಸಿ ಚಹಾವನ್ನು ನೀಡಿ ಸತ್ಕರಿಸಿದರು. ಬೆಂಗಳೂರಿನ ಮೋಡ ಮುಸುಕಿದ ಹವಾಮಾನದ ನಡುವೆ, ಧೋನಿ ತಮ್ಮ ತರಬೇತಿಯ ಸಮಯದಲ್ಲಿ ತಮ್ಮ ನೆಚ್ಚಿನ ಪಾನೀಯ ಸೇವಿಸಿದರು.

Continue Reading

ಕ್ರೀಡೆ

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

MS Dhoni : ಧೋನಿ ಕಡಿಮೆ ವೇಗದ ಆಫ್-ಸ್ಪಿನ್ ಬೌಲಿಂಗ್ ಮಾಡುತ್ತಿರುವುದು ಕಂಡುಬಂದಿದೆ. ನೆಟ್ಸ್​ನಲ್ಲಿ ತಮ್ಮ ಕೈಚಳಕ ತೋರಿದ್ದಾರೆ. ಐಪಿಎಲ್ 2023 ರ ಸಮಯದಲ್ಲಿಯೂ ಧೋನಿ ಸಿಎಸ್​ಕೆ ಬ್ಯಾಟರ್​ಗಳಿಗೆ ನೆಟ್ಸ್​ನಲ್ಲಿ ಬೌಲಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಸಿಎಸ್​ಕೆ ಸ್ಟಾರ್ ಬೌಲಿಂಗ್​ನ ಇತ್ತೀಚಿನ ವೀಡಿಯೊ ಈಗಾಗಲೇ ವೈರಲ್ ಆಗಿದೆ.

VISTARANEWS.COM


on

MS Dhoni
Koo

ಬೆಂಗಳೂರು: ಮೇ 18 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ಮೇಲೆ ಎಂಎಸ್ ಧೋನಿ (MS Dhoni) ಸಂಪೂರ್ಣ ಗಮನ ಹರಿಸಿದ್ದಾರೆ. ಸ್ಟಾರ್ ವಿಕೆಟ್ ಕೀಪರ್ ನೆಟ್ ಸೆಷನ್ ಸಮಯದಲ್ಲಿ ತಮ್ಮ ವಿಕೆಟ್​ಕೀಪಿಂಗ್​ ಗ್ಲೌಸ್ ಗಳೊಂದಿಗೆ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಏತನ್ಮಧ್ಯೆ ಅವರು ಸ್ವಲ್ಪ ಬೌಲಿಂಗ್ ಕೂಡ ಮಾಡುತ್ತಿದ್ದಾರೆ. ಧೋನಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಎಂದಿಗೂ ಬೌಲಿಂಗ್ ಮಾಡಿಲ್ಲ. ಆದರೆ ಆರ್​ಸಿಬಿ ವಿರುದ್ಧ ಬೌಲಿಂಗ್ ಮಾಡಬಲ್ಲರು ಎಂದು ಹೇಳಲಾಗುತ್ತಿದೆ!

ಧೋನಿ ಕಡಿಮೆ ವೇಗದ ಆಫ್-ಸ್ಪಿನ್ ಬೌಲಿಂಗ್ ಮಾಡುತ್ತಿರುವುದು ಕಂಡುಬಂದಿದೆ. ನೆಟ್ಸ್​ನಲ್ಲಿ ತಮ್ಮ ಕೈಚಳಕ ತೋರಿದ್ದಾರೆ. ಐಪಿಎಲ್ 2023 ರ ಸಮಯದಲ್ಲಿಯೂ ಧೋನಿ ಸಿಎಸ್​ಕೆ ಬ್ಯಾಟರ್​ಗಳಿಗೆ ನೆಟ್ಸ್​ನಲ್ಲಿ ಬೌಲಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಸಿಎಸ್​ಕೆ ಸ್ಟಾರ್ ಬೌಲಿಂಗ್​ನ ಇತ್ತೀಚಿನ ವೀಡಿಯೊ ಈಗಾಗಲೇ ವೈರಲ್ ಆಗಿದೆ.

ನೆಟ್ಸ್​ನಲ್ಲಿ ತಾವು ಎದುರಿಸಿದ ಕಠಿಣ ಬೌಲರ್ ಧೋನಿ ಎಂದು ರೈನಾ ಒಮ್ಮೆ ಹೇಳಿದ್ದರು. ಅಭ್ಯಾಸದ ವೇಲೆ ಧೋನಿ ಎಸೆತಕ್ಕೆ ಔಟಾದರೆ ಅವರು ನಿಮ್ಮನ್ನು ಪದೇ ಪದೇ ಕಾಡುತ್ತಾರೆ. ಹೇಗೆ ಔಟ್ ಮಾಡಿದೆ ಎಂಬುದನ್ನು ನೆನಪಿಸುತ್ತಾರೆ ಎಂದು ಸಿಎಸ್​ಕೆ ಮಾಜಿ ಬ್ಯಾಟ್ಸ್ಮನ್ ಹೇಳಿದ್ದರು.

“ನಾನು ಎದುರಿಸಿದ ಕಠಿಣ ಬೌಲರ್​​ ಮುರಳೀಧರನ್ ಮತ್ತು ಮಾಲಿಂಗ ಎಂದು ಭಾವಿಸುತ್ತೇನೆ. ಆದರೆ ನೆಟ್ಸ್​ನಲ್ಲಿ ಅದು ಎಂಎಸ್ ಧೋನಿ. ಅವರಯ ನಿಮ್ಮನ್ನು ಔಟ್ ಮಾಡಿದರೆ ನೀವು ಒಂದೂವರೆ ತಿಂಗಳವರೆಗೆ ಅವರ ಬಳಿಗೆ ಹೋಗಲು ಸಾಧ್ಯವಾಗುವುದಿಲ್ಲ ಏಕೆಂದರೆ ಅವರು ಔಟಾದ ರೀತಿಯನ್ನು ಸನ್ನೆ ಮಾಡುತ್ತಲೇ ಇರುತ್ತಾರೆ. ಅವರು ನಿಮ್ಮನ್ನು ಹೇಗೆ ಔಟ್ ಮಾಡಿದನೆಂದು ನೆನಪಿಸುತ್ತಾರೆ . ಅವರು ಆಫ್-ಸ್ಪಿನ್, ಮಧ್ಯಮ ವೇಗ, ಲೆಗ್ ಸ್ಪಿನ್, ಎಲ್ಲವನ್ನೂ ಬೌಲಿಂಗ್ ಮಾಡುತ್ತಿದ್ದರು. ನೆಟ್ಸ್​ಬಲ್ಲಿ ಅವರು ತಮ್ಮ ಮುಂಭಾಗದ ಪಾದದ ನೋ-ಬಾಲ್​ಗಳನ್ನು ಸಹ ಸಮರ್ಥಿಸುತ್ತಿದ್ದರು. ಟೆಸ್ಟ್ ನೆಟ್ಸ್​ನಲ್ಲಿ ಅವರು ಬೌಲಿಂಗ್ ಚೆನ್ನಾಗಿ ಮಾಡುತ್ತಿದ್ದರು. ಇಂಗ್ಲೆಂಡ್​​ನಲ್ಲಿ ಅವರು ಅದನ್ನು ವೇಗದಲ್ಲಿ ಸ್ವಿಂಗ್ ಮಾಡುತ್ತಿದ್ದರು, “ಎಂದು ರೈನಾ ಹೇಳಿದ್ದರು.

ಇದನ್ನೂ ಓದಿ: MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

ಧೋನಿ ಗುರುವಾರ ನೆಟ್ಸ್​ನಲ್ಲಿ ಬೌಲಿಂಗ್ ಮಾಡಿದ್ದರೂ, ಶನಿವಾರದ ಪಂದ್ಯದ ಸಮಯದಲ್ಲಿ ಸಿಎಸ್ಕೆ ಸ್ಟಾರ್ ಅದೇ ರೀತಿ ಮಾಡುವುದಿಲ್ಲ ಎಂದು ಅಭಿಮಾನಿಗಳು ಸಂಪೂರ್ಣವಾಗಿ ನಿರೀಕ್ಷಿಸಬಹುದು. ಧೋನಿ ಈ ಋತುವಿನಲ್ಲಿ ಕೆಲವು ಗಾಯದ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಚೆನ್ನೈನ ಮಾಜಿ ನಾಯಕ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ತಡವಾಗಿ ಬರಲು ಇದು ಕಾರಣವಾಗಿದೆ.

ಧೋನಿ ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದಾರೆ. 50 ಓವರ್​ಗಳ ಸ್ವರೂಪದಲ್ಲಿ ಒಂದು ವಿಕೆಟ್ ಪಡೆದಿದ್ದಾರೆ. ಧೋನಿ ಆರ್​ಸಿಬಿ ಶಿಬಿರದೊಂದಿಗೆ ಸ್ವಲ್ಪ ಮೋಜಿನ ಸಮಯವನ್ನು ಕಳೆಯುತ್ತಿದ್ದರು. ಅವರೊಂದಿಗೆ ಚಹಾ ಕೂಡ ಸೇವಿಸಿದ್ದರು.

Continue Reading
Advertisement
Physical Abuse
ಕ್ರೈಂ15 mins ago

Physical Abuse: ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅರ್ಚಕನಿಂದ ನಿರೂಪಕಿ ಮೇಲೆ ಅತ್ಯಾಚಾರ

anjali murder suspect girish2
ಕ್ರೈಂ16 mins ago

Anjali Murder Case: ಥಳಿಸಿದವರಿಗೆ ಈತ ಅಂಜಲಿ ಹಂತಕ ಎಂದು ಗೊತ್ತೇ ಇರಲಿಲ್ಲ! ಕೊಲೆಗಾರ ಸಿಕ್ಕಿಬಿದ್ದಿದ್ದು ಹೀಗೆ

Viral video
ವೈರಲ್ ನ್ಯೂಸ್20 mins ago

Viral Video: ಅಬ್ಬಾ.. ಮದ್ವೆ ಮಂಟಪದಲ್ಲೇ ಬಿಗ್‌ ಫೈಟ್‌; ವರನಿಗಾಗಿ ಯುವತಿಯರ ಮಾರಾಮಾರಿ-ವಿಡಿಯೋ ವೈರಲ್‌

T20 World Cup 2024
ಕ್ರೀಡೆ28 mins ago

T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

Anushka Shetty producer marriage news viral
ಟಾಲಿವುಡ್37 mins ago

Anushka Shetty: ಕನ್ನಡ ನಿರ್ಮಾಪಕನ ಜತೆ ʻಟಾಲಿವುಡ್‌ ಸ್ವೀಟಿʼ ಅನುಷ್ಕಾ ಶೆಟ್ಟಿ ಮದುವೆ?

RCB vs CSK
ಕ್ರೀಡೆ51 mins ago

RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

shoot out doddaballapur murder case
ಕ್ರೈಂ1 hour ago

Shoot Out: ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

Narendra Modi
Lok Sabha Election 20241 hour ago

Narendra Modi: ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ವಿಪಕ್ಷಕ್ಕೆ ಪ್ರಧಾನಿ ಮೋದಿ ತಿರುಗೇಟು

Pakistan
ವಿದೇಶ1 hour ago

Pakistan: ಟಾಪ್‌ ಕಂಪನಿಗಳಲ್ಲಿ ಭಾರತೀಯರೇ CEO; ಆದರೆ ನಮ್ಮ ಮಕ್ಕಳು? ಪಾಕ್‌ ಸಂಸದನ ವಿಡಿಯೊ ವೈರಲ್‌

Rashmika Madanna Appreciation Post PM Modi Reacts
ಟಾಲಿವುಡ್1 hour ago

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಪೋಸ್ಟ್‌ಗೆ ಪ್ರಧಾನಿ ಮೋದಿ ಮೆಚ್ಚುಗೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ4 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ20 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು23 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌