WTC Point Table ಪ್ರಕಟ: ಹೊಸ ಪಟ್ಟಿಯಲ್ಲಿ ಭಾರತದ ಸ್ಥಾನವೆಷ್ಟು? - Vistara News

ಕ್ರಿಕೆಟ್

WTC Point Table ಪ್ರಕಟ: ಹೊಸ ಪಟ್ಟಿಯಲ್ಲಿ ಭಾರತದ ಸ್ಥಾನವೆಷ್ಟು?

ವೆಸ್ಟ್‌ ಇಂಡೀಸ್‌ ಮತ್ತು ಬಾಂಗ್ಲಾದೇಶ , ಇಂಗ್ಲೆಂಡ್‌ ಮತ್ತು ನ್ಯೂಜಿಲೆಂಡ್‌ ನಡುವಿನ ಟೆಸ್ಟ್‌ ಸರಣಿ ಮುಕ್ತಾಯದ ಬೆನ್ನಲ್ಲೇ ಐಸಿಸಿ WTC Point Table ಬಿಡುಗಡೆ ಮಾಡಿದ್ದು, ಭಾರತ ಮೂರನೇ ಸ್ಥಾನದಲ್ಲಿದೆ.

VISTARANEWS.COM


on

WTC Point Table
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಐಸಿಸಿ ಸೋಮವಾರ ಬಿಡುಗಡೆ ಮಾಡಿರುವ WTC Point Tableನಲ್ಲಿ ಭಾರತ ತಂಡ ೩ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಆದರೆ, ಇಂಗ್ಲೆಂಡ್‌ ಹಾಗೂ ವೆಸ್ಟ್‌ ಇಂಡೀಸ್‌ ತಂಡಗಳು ಒಂದೊಂದು ಸ್ಥಾನಗಳ ಮುಂಬಡ್ತಿ ಪಡೆದುಕೊಂಡಿವೆ.

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್‌ ತಂಡ ಹಾಗೂ ವೆಸ್ಟ್‌ ಇಂಡೀಸ್‌ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಟೆಸ್ಟ್‌ ಸರಣಿಗಳು ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಐಸಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಮೂರು ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ನ್ಯೂಜಿಲೆಂಡ್‌ ತಂಡವನ್ನು ಇಂಗ್ಲೆಂಡ್‌ ಬಳಗ ಕ್ಲೀನ್ ಸ್ವೀಪ್‌ ಮಾಡಿದ್ದರೆ, ಬಾಂಗ್ಲಾದೇಶ ಬಳಗವನ್ನು ವೆಸ್ಟ್‌ ಇಂಡೀಸ್‌ ೨-೦ ಅಂತರದಲ್ಲಿ ವೆಸ್ಟ್‌ ಇಂಡೀಸ್ ಸರಣಿ ಗೆಲುವು ಕಂಡಿತ್ತು. ಹೀಗಾಗಿ ಇಂಗ್ಲೆಂಡ್‌ ತಂಡ ಶೇಕಡಾವಾರು ೨೮.೮೯ ಅಂಕಗಳೊಂದಿಗೆ ಏಳನೇ ಸ್ಥಾನಕ್ಕೇರಿದೆ. ಏತನ್ಮಧ್ಯೆ, ಕಳೆದ ಬಾರಿಯ ವರ್ಲ್ಡ್‌ ಟೆಸ್ಟ್‌ ಚಾಂಪಿಯನ್‌ಶಿಪ್‌ ಟ್ರೋಫಿ ಗೆದ್ದಿದ್ದ ನ್ಯೂಜಿಲೆಂಡ್‌ ತಂಡ ಎಂಟನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಆ ತಂಡದ ಫೈನಲ್‌ ತಲುಪುವ ಅವಕಾಶ ಕಡಿಮೆಯಾಗಿದೆ.

ಇನ್ನು ಶೇಕಡಾ ೫೦ರಷ್ಟು ಅಂಕ ಪಡೆದುಕೊಂಡಿರುವ ವೆಸ್ಟ್‌ ಇಂಡೀಸ್ ತಂಡವೂ ಒಂದು ಸ್ಥಾನ ಮೇಲಕ್ಕೇರಿದ್ದು, ಆರನೇ ರ‍್ಯಾಂಕ್‌ ಪಡೆದುಕೊಂಡಿದೆ. ಬಾಂಗ್ಲಾದೇಶ ತಂಡ ೯ನೇ ಸ್ಥಾನಕ್ಕೆ ಕುಸಿದಿದೆ.

ಇಂಗ್ಲೆಂಡ್‌ ವಿರುದ್ಧ ಗೆದ್ದರೆ ಭಾರತಕ್ಕೆ ಅನುಕೂಲ

ಭಾರತ ತಂಡ ಸದ್ಯ ೫೮.೩೩ ಶೇಕಡಾವಾರು ಅಂಕವನ್ನು ಹೊಂದಿದೆ. ಇಂಗ್ಲೆಂಡ್‌ ವಿರುದ್ಧದ ಸರಣಿಯ ಬಾಕಿ ಉಳಿದಿರುವ ಒಂದು ಪಂದ್ಯ ಜುಲೈ ೧ರಂದು ಆರಂಭವಾಗಲಿದ್ದು. ಆ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಅಂಕ ಇನ್ನಷ್ಟು ಹೆಚ್ಚಳವಾಗಬಹುದು.

ಟೆಸ್ಟ್‌ ಚಾಂಪಿಯನ್‌ಷಿಪ್‌ನಲ್ಲಿ ಆಡುವ ೯ ತಂಡಗಳ ಪೈಕಿ ಭಾರತ ಅತಿ ೪ ಸರಣಿಯಲ್ಲಿ ೧೧ ಪಂದ್ಯಗಳನ್ನು ಆಡಿದೆ. ಆದರೆ, ೬ ಗೆಲುವು ೩ ಸೋಲು ಹಾಗೂ ೨ ಪಂದ್ಯಗಳ ಸೋಲಿನೊಂದಿಗೆ ಒಟ್ಟು ೬೦ ಅಂಕಗಳನ್ನು ಪಡೆದುಕೊಂಡಿದೆ. ಆದರೆ, ಸೋಲಿನ ಪ್ರಮಾಣ ಅಧಿಕವಾಗಿರುವ ಕಾರಣ ಶೇಕಡಾವಾರು ಅಂಕ ಕಡಿಮೆಯಿದೆ. ಹೀಗಾಗಿ ಮೂರನೇ ಸ್ಥಾನದಲ್ಲಿ ಉಳಿದುಕೊಂಡಿದೆ.

ಒಟ್ಟಾರೆ ೭೧.೪೩ ಶೇಕಡಾವಾರು ಅಂಕಗಳನ್ನು ಹೊಂದಿರುವ ದಕ್ಷಿಣ ಆಫ್ರಿಕಾ ತಂಡ ಎರಡನೇ ಸ್ಥಾನ ಪಡೆದುಕೊಂಡಿದ್ದು, ಶೇಕಡಾ ೭೫ರಷ್ಟು ಗೆಲುವಿನ ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ. ಪಾಕಿಸ್ತಾನ ತಂಡ ಐದನೇ ಸ್ಥಾನ ಹಾಗೂ ಶ್ರೀಲಂಕಾ ತಂಡ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಟೆಸ್ಟ್‌ ಚಾಂಪಿಯನ್‌ಷಿಪ್‌ ೨೦೨೧ರಲ್ಲಿ ಅರಂಭಗೊಂಡಿದ್ದು, ೨೦೨೩ರಲ್ಲಿ ಫೈನಲ್‌ ಪಂದ್ಯ ನಡೆಯಲಿದೆ. ಪ್ರತಿಯೊಂದು ತಂಡಗಳು ತಲಾ ೬ ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳಲಿವೆ. ಮೂರು ತವರು ನೆಲದಲ್ಲಿ ಹಾಗೂ ಅಷ್ಟೇ ಸಂಖ್ಯೆಯ ಸರಣಿಯನ್ನು ವಿದೇಶದಲ್ಲಿ ಆಡಬೇಕಾಗಿದೆ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌ ಹಾಗೂ ಬಾಂಗ್ಲಾದೇಶಕ್ಕೆ ಭಾರತ ಪ್ರವಾಸ ಮಾಡಲಿದ್ದರೆ, ನ್ಯೂಜಿಲೆಂಡ್‌, ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಸೆಣಸಲಿದೆ

ಇದನ್ನೂ ಓದಿ : ಲಂಕಾ ಪ್ರವಾಸ: clean sweep ಅವಕಾಶ ತಪ್ಪಿಸಿದ ಚಾಮರಿ ಅಟ್ಟಪಟ್ಟು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs PAK : ಭಾರತ ವಿರುದ್ಧ ಸೋಲುವುದಕ್ಕಾಗಿ ಮ್ಯಾಚ್ ಫಿಕ್ಸಿಂಗ್ ಮಾಡಿದ ಪಾಕ್​ ಆಟಗಾರ; ಆರೋಪ

IND vs PAK : ಪಂದ್ಯವು ಕಡಿಮೆ ಸ್ಕೋರಿಂಗ್ ಥ್ರಿಲ್ಲರ್ ಆಗಿತ್ತು. 2 ನೇ ಇನ್ನಿಂಗ್ಸ್ ನ ಅಂತಿಮ ಎಸೆತದವರೆಗೂ ಸಂಪೂರ್ಣವಾಗಿ ಸಾಗಿತು. ಪಾಕಿಸ್ತಾನಕ್ಕೆ 120 ಎಸೆತಗಳಲ್ಲಿ ಕೇವಲ 120 ರನ್​ಗಳ ಅಗತ್ಯವಿತ್ತು. ಈ ಸಮೀಕರಣ ಬರೆಯಲು ಸರಳವಾಗಿ ಕಂಡರೂ, ಅನುಷ್ಠಾನವು ಅತ್ಯಂತ ಕಳಪೆಯಾಗಿತ್ತು. ಕೊನೆಯಲ್ಲಿ ಗ್ರೀನ್ ಆರ್ಮಿ 6 ರನ್​ಗಳಿಂದ ಸೋತಿತು.

VISTARANEWS.COM


on

IND vs PAK
Koo

ನವದೆಹಲಿ: ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ (IND vs PAK) ವಿರುದ್ಧ ಸೋತ ನಂತರ ಪಾಕಿಸ್ತಾನದ ಕ್ರಿಕೆಟ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಜತೆಗೆ ಮಾಜಿ ಆಟಗಾರರು ಬೆಂಕಿಯಾಗಿದ್ದಾರೆ. ಅವರೆಲ್ಲರೂ ಒಂದೊಂದು ತೆರನಾದ ಆರೋಪಗಳನ್ನು ಮಾಡುತ್ತಿದ್ದಾರೆ. ಅಂತೆಯೇ ಅಲ್ಲಿನ ಮಾಜಿ ಕ್ರಿಕೆಟಿಗರಾದ ಸಲೀಮ್ ಮಲಿಕ್ ಮ್ಯಾಚ್ ಫಿಕ್ಸಿಂಗ್ ಆರೋಪವನ್ನು ಮಾಡಿದ್ದಾರೆ.

2007 ರಲ್ಲಿ ಐಸಿಸಿ ಟಿ 20 ವಿಶ್ವಕಪ್ ಪ್ರಾರಂಭವಾದಾಗಿನಿಂದ ಭಾರತ ಮತ್ತು ಪಾಕಿಸ್ತಾನ 8 ನೇ ಬಾರಿಗೆ ಮುಖಾಮುಖಿಯಾಗಿವೆ. ಮೊದಲಿನಿಂದಲೂ, ಪಾಕಿಸ್ತಾನಿಗಳ ಮೇಲೆ ಭಾರತೀಯರು ಯಾವಾಗಲೂ ಮೇಲುಗೈ ಸಾಧಿಸಿದ್ದಾರೆ. 2007ರ ಆವೃತ್ತಿಯ ಗ್ರೂಪ್ ಮ್ಯಾಚ್ ಆಗಿರಲಿ ಅಥವಾ ಫೈನಲ್ ಆಗಿರಲಿ, ಮೆನ್ ಇನ್ ಬ್ಲೂ ತಂಡವು ಒಂದು ಬಾರಿ ಹೊರತುಪಡಿಸಿ ಪ್ರತಿ ಬಾರಿಯೂ ಗೆದ್ದಿದೆ.

ಇದನ್ನೂ ಓದಿ: IND vs PAK : ಪಾಕಿಸ್ತಾನದ ಬೌಲರ್​ ವಿರುದ್ಧ ವಿಶೇಷ ದಾಖಲೆ ಮಾಡಿದ ರೋಹಿತ್ ಶರ್ಮಾ

2021 ರಲ್ಲಿ, ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನವು ಟಿ 20 ವಿಶ್ವಕಪ್​​ನಲ್ಲಿ ಭಾರತದ ವಿರುದ್ಧ ಮೊದಲ ಗೆಲುವನ್ನು ಸಾಧಿಸಿತು. ಆದರೆ ಆ ಗೆಲುವಿನ ನಂತರ ಎರಡು ಬಾರಿ ಸೋತಿದ್ದಾರೆ. 2022 ರ ಆವೃತ್ತಿಯಲ್ಲಿ, ವಿರಾಟ್ ಕೊಹ್ಲಿ ಪಾಕಿಸ್ತಾನಿಗಳಿಂದ ಗೆಲುವನ್ನು ಕಸಿದುಕೊಂಡಿದ್ದರು. ಭಾನುವಾರ ರಾತ್ರಿ ಜಸ್​ಪ್ರಿತ್​ ಬುಮ್ರಾ ಪಾಕ್ ಆಸೆಗೆ ತಣ್ಣೀರು ಎರಚಿದ್ದರು.

ಈ ಪಂದ್ಯವು ಕಡಿಮೆ ಸ್ಕೋರಿಂಗ್ ಥ್ರಿಲ್ಲರ್ ಆಗಿತ್ತು. 2 ನೇ ಇನ್ನಿಂಗ್ಸ್ ನ ಅಂತಿಮ ಎಸೆತದವರೆಗೂ ಸಂಪೂರ್ಣವಾಗಿ ಸಾಗಿತು. ಪಾಕಿಸ್ತಾನಕ್ಕೆ 120 ಎಸೆತಗಳಲ್ಲಿ ಕೇವಲ 120 ರನ್​ಗಳ ಅಗತ್ಯವಿತ್ತು. ಈ ಸಮೀಕರಣ ಬರೆಯಲು ಸರಳವಾಗಿ ಕಂಡರೂ, ಅನುಷ್ಠಾನವು ಅತ್ಯಂತ ಕಳಪೆಯಾಗಿತ್ತು. ಕೊನೆಯಲ್ಲಿ ಗ್ರೀನ್ ಆರ್ಮಿ 6 ರನ್​ಗಳಿಂದ ಸೋತಿತು.

ಸಲೀಮ್ ಮಲಿಕ್ ಕೋಪ ಇಮಾದ್ ಮೇಲೆ

ಪಾಕಿಸ್ತಾನದ ಮಾಜಿ ನಾಯಕ ಸಲೀಮ್ ಮಲಿಕ್ ಅವರು ಆಲ್ರೌಂಡರ್ ಇಮಾದ್ ವಾಸಿಮ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಾಸಿಮ್ 2023 ರಲ್ಲಿ ನಿವೃತ್ತಿ ಘೋಷಿಸಿದ್ದರು/ ಅವರು ವಿಶ್ವದಾದ್ಯಂತದ ದೇಶೀಯ ಲೀಗ್​ಗಳಲ್ಲಿ ಮಾತ್ರ ಆಡುತ್ತಿದ್ದರು. ಅವರು ವಾಪಸ್ ಆಗಿರುವುದೂ ಟೀಕೆಗೆ ಗುರಿಯಾಗಿತ್ತು. ಭಾನುವಾರದ ಅವರ ಪ್ರದರ್ಶನವು ಅವರನ್ನು ಇನ್ನಷ್ಟು ಟೀಕೆಗೆ ಗುರಿ ಮಾಡಿತು.

ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಇಮಾದ್ ವಾಸಿಮ್ 23 ಎಸೆತಗಳಲ್ಲಿ ಕೇವಲ 15 ರನ್ ಬಾರಿಸಿದ್ದರು. ಮಂಡಳಿಯೇ ವಾಪಸ್​ ಕರೆಸಿದ ಆಟಗಾರನಿಂದ ಇದು ಹೆಚ್ಚು ಪ್ರಶ್ನಾರ್ಹ. ರಾಷ್ಟ್ರೀಯ ಮಟ್ಟದ ಸುದ್ದಿ ವಾಹಿನಿಯೊಂದರೊಂದಿಗಿನ ಚಾಟ್​ನಲ್ಲಿ ಸಲೀಮ್ ಮಲಿಕ್ ಅವರು ಸುಮಾರು 4 ಓವರ್​ಗಳ ಕಳಪೆ ಬ್ಯಾಟಿಂಗ್ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ವಾಸಿಮ್ ಉದ್ದೇಶಪೂರ್ವಕವಾಗಿ ಅನೇಕ ಚೆಂಡುಗಳನ್ನು ವ್ಯರ್ಥ ಮಾಡಿದ್ದಾರೆ ಮತ್ತು ಅವರು ಸ್ವಾರ್ಥದಿಂದ ಆಡಿದರು ಮತ್ತು ಅವರ ಸರಾಸರಿಯನ್ನು ಹೆಚ್ಚಿಸಲು ಬಯಸಿದ್ದರು ಎಂದು ಸಲೀಮ್ ಮಲಿಕ್ ಆರೋಪಿಸಿದ್ದಾರೆ. “ನೀವು ಅವರ (ವಾಸಿಮ್) ಇನ್ನಿಂಗ್ಸ್ ಅನ್ನು ನೋಡಿದರೆ ಅವರು ರನ್ ಗಳಿಸದೆ ಚೆಂಡುಗಳನ್ನು ವ್ಯರ್ಥ ಮಾಡುತ್ತಿದ್ದಾರೆ. ಅದು ಮ್ಯಾಚ್​ ಫಿಕ್ಸಿಂಗ್ ರೀತಿ ಅನಿಸುತ್ತಿತ್ತು. ರನ್ ಚೇಸ್​​ ವಿಷಯಗಳನ್ನು ಕಷ್ಟಕರವಾಗಿಸುತ್ತಿದ್ದಾರೆ ಎಂದು ತೋರುತ್ತದೆ” ಎಂದು ಸಲೀಮ್ ಮಲಿಕ್ ಹೇಳಿದ್ದಾರೆ.

ಶಾಹಿದ್ ಅಫ್ರಿದಿ ಹೇಳಿದ್ದೇನು?

ಪಾಕಿಸ್ತಾನದ ದಂತಕಥೆ ಶಾಹಿದ್ ಅಫ್ರಿದಿ ಕೂಡ ತಂಡದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಫ್ರಿದಿ ಅವರು ಆಟಗಾರರ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದು ವಿಶ್ವ ಕಪ್​ ಮುಗಿದ ಬಳಿಕ ಬಹಿರಂಗ ಪಡಿಸುವೆ ಎಂದಿದ್ದಾರೆ.

“ಒಬ್ಬ ನಾಯಕನು ಎಲ್ಲರನ್ನೂ ಒಟ್ಟುಗೂಡಿಸುತ್ತಾನೆ. ಆತನೇ ತಂಡದ ವಾತಾವರಣವನ್ನು ಹಾಳುಮಾಡಬಹುದು ಅಥವಾ ಅವನು ತಂಡವನ್ನು ನಿರ್ಮಿಸಬಹುದು. ಈ ವಿಶ್ವಕಪ್ ಮುಗಿಯಲಿ, ನಾನು ಬಹಿರಂಗವಾಗಿ ಮಾತನಾಡುತ್ತೇನೆ” ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.

Continue Reading

ಕ್ರೀಡೆ

IND vs PAK : ಸೂಪರ್ ಫ್ಯಾನ್​​; ಟೀಮ್​ ಇಂಡಿಯಾ ಜೆರ್ಸಿ ಧರಿಸಿ ಭಾರತವನ್ನು ಬೆಂಬಲಿಸಿದ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾದೆಳ್ಳಾ

IND vs PAK :

VISTARANEWS.COM


on

IND vs PAK
Koo

ಬೆಂಗಳೂರು: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಳಾ ಅವರು ಕ್ರಿಕೆಟ್ ಅಭಿಮಾನಿ. ಕ್ರಿಕೆಟ್​ ಪಂದ್ಯಗಳನ್ನು ತಪ್ಪದೇ ವೀಕ್ಷಿಸುತ್ತಾರೆ. ಅದರಲ್ಲೂ ಭಾರತದ ಪಂದ್ಯವಿದ್ದರೆ ಅವರಿಗೆ ಹಬ್ಬ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ ಪುರುಷರ ಟಿ 20 ವಿಶ್ವಕಪ್ 2024 ರ ಪಂದ್ಯಕ್ಕೆ ಹಾಜರಾದ ದೊಡ್ಡ ಹೆಸರುಗಳಲ್ಲಿ ಅವರು ಇದ್ದರೂ. ಮೈಕ್ರೋಸಾಫ್ಟ್ ಸಿಇಒ ಭಾರತೀಯ ಕ್ರಿಕೆಟ್ ತಂಡದ ಜೆರ್ಸಿ ಧರಿಸಿ ಉದ್ಯಮಿ ಗೌರವ್ ಜೈನ್ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ . ಈ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

“ಸೂಪರ್ ಅಭಿಮಾನಿ @satyanadella #PakvsInd #t20USA ತಂಡದೊಂದಿಗೆ ಟೀಮ್ ಇಂಡಿಯಾವನ್ನು ಹುರಿದುಂಬಿಸಲು ಉತ್ಸುಕನಾಗಿದ್ದೇನೆ” ಎಂದು ಜೈನ್ ಪೋಸ್ಟ್​​ನ ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಈ ಚಿತ್ರವನ್ನು ಹೊಸದಾಗಿ ನಿರ್ಮಿಸಲಾದ ಕ್ರೀಡಾಂಗಣದ ಸ್ಟ್ಯಾಂಡ್​ಗಳ ಮೇಲಿನಿಂದ ತೆಗೆದುಕೊಳ್ಳಲಾಗಿದೆ.

ಭಾನುವಾರ ರಾತ್ರಿ ಪೋಸ್ಟ್​​ ಹಂಚಿಕೊಂಡಾಗಿನಿಂದ, (ಹಿಂದೆ ಟ್ವಿಟರ್) ನಲ್ಲಿ 2.7 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. “ಸಿಲಿಕಾನ್ ವ್ಯಾಲಿಯ ಅರ್ಧದಷ್ಟು ಭಾಗವು ಒಟ್ಟುಗೂಡಿದೆ” ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಮಹಾಕಾವ್ಯ !!” ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು “ಇದು ಅಮೆರಿಕದಲ್ಲಿರುವ ಭಾರತೀಯರಿಗೆ ಸೂಪರ್​ಬೌಲ್​ ಎಂದು ಹೇಳಿದ್ದಾರೆ. “ಅವರು ಜೆರ್ಸಿಯನ್ನು ನಿರೀಕ್ಷಿಸಿರಲಿಲ್ಲ” ಎಂದು ಎಕ್ಸ್ ಬಳಕೆದಾರರೊಬ್ಬರು ಹೇಳಿದರು.

ಟೂರ್ನಿಯ ಕೇಂದ್ರ ಬಿಂದು ಈ ಪಂದ್ಯ

ಕ್ರೀಡಾ ಜಗತ್ತಿನಲ್ಲಿ ಅತ್ಯಂತ ತೀವ್ರವಾದ ಭಾರತ-ಪಾಕಿಸ್ತಾನ ಕ್ರಿಕೆಟ್ ಪೈಪೋಟಿಯು ಪ್ರೇಕ್ಷಕರನ್ನು ಆಕರ್ಷಿಸುವಲ್ಲಿ ಎಂದಿಗೂ ವಿಫಲವಾಗುವುದಿಲ್ಲ. ಈ ಪಂದ್ಯವು ಇದಕ್ಕೆ ಹೊರತಾಗಿರಲಿಲ್ಲ, ಪ್ರಪಂಚದಾದ್ಯಂತದ ವೀಕ್ಷಕರನ್ನು ಸೆಳೆಯಿತು ಮತ್ತು ಕ್ರಿಕೆಟ್​​ನ ಉತ್ಸಾಹವನ್ನು ಪ್ರದರ್ಶಿಸಿತು. ಟಿ20 ವಿಶ್ವಕಪ್ ಟೂರ್ನಿಯಲ್ಲಿ 120 ರನ್​ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ಸೋತಿದೆ. ಆರಂಭದಲ್ಲಿ ಪಾಕಿಸ್ತಾನ ಉತ್ತಮವಾಗಿ ಆಡಿತು. ಕ್ರಮೇಣ ವಿಕೆಟ್​ಗಳನ್ನು ಕಳೆದುಕೊಂಡು ಆರು ರನ್​ಗಳಿಂದ ಸೋತಿತ. ಭಾರತದ ಪರ ಜಸ್ಪ್ರೀತ್ ಬುಮ್ರಾ 3 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 2 ವಿಕೆಟ್ ಪಡೆದರು.

ಇದನ್ನೂ ಓದಿ :IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

ಭಾರತ-ಅಮೆರಿಕನ್ ಸಿಇಒ ಕ್ರಿಕೆಟ್ ಮೇಲಿನ ತಮ್ಮ ಪ್ರೀತಿಯ ಬಗ್ಗೆ ಆಗಾಗ ಹೇಳುತ್ತಿರುತ್ತಾರೆ. ಕ್ರೀಡೆಯು ಅವರಿಗೆ ಟೀಮ್​ ವರ್ಕ್​ ಮತ್ತು ನಾಯಕತ್ವ ಕಲಿಸಿದೆ. ಅದು ಕಾರ್ಪೊರೇಟ್ ಪ್ರಪಂಚ ಎದುರಿಸುವ ಅಚ್ಚರಿಗಳಿಂದ ಮೇಲಕ್ಕೇರಲು ಸಹಾಯ ಮಾಡಿತು ಎಂದು ಹೇಳಿದ್ದಾರೆ. “ಕ್ರಿಕೆಟ್ ನನಗೆ ತಂಡಗಳಲ್ಲಿ ಕೆಲಸ ಮಾಡುವ ಕುರಿತು ಮತ್ತು ವೃತ್ತಿಜೀವನದುದ್ದಕ್ಕೂ ನಾಯಕತ್ವದ ಬಗ್ಗೆ ನನಗೆ ಹೆಚ್ಚು ಕಲಿಸಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಮೈಕ್ರೋಸಾಫ್ಟ್ ಸಿಇಒ ಆಗಿ ನೇಮಕವಾದಾಗ ಹೇಳಿದ್ದರು.

Continue Reading

ಕ್ರೀಡೆ

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

IND vs PAK:

VISTARANEWS.COM


on

IND VS PAK
Koo

ನ್ಯೂಯಾರ್ಕ್: : ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024ರ (T20 World Cup) ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು(IND vs PAK) ಮಣಿಸಿದೆ. ಇದರೊಂದಿಗೆ ಟಿ20 ವಿಶ್ವ ಕಪ್​ ಟೂರ್ನಿಯಲ್ಲಿ ತನ್ನ ಪ್ರಾಬಲ್ಯವನ್ನು 8-1ರ ಮುನ್ನಡೆಗೆ ಕೊಂಡೊಯ್ದಿದೆ. ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್​​ ಇಳಿಯುವುದರೊಂದಿಗೆ ಆಟ ಪ್ರಾರಂಭವಾಯಿತು. ಮೊದಲ ಇನ್ನಿಂಗ್ಸ್ ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ಕೇವಲ 119 ರನ್ ಗಳಿಸಲಷ್ಟೇ ಶಕ್ತವಾಯಿತು. ಆದಾಗ್ಯೂ, ಮೆನ್ ಇನ್ ಬ್ಲೂ (Men In Blue) ತಂಡವು ಬೌಲಿಂಗ್​ ಸಾಮರ್ಥ್ಯವನ್ನು ಬಂಡವಾಳ ಮಾಡಿಕೊಂಡಿತು. ಒಂದು ಹಂತದಲ್ಲಿ ಕೈ ಜಾರುತ್ತಿರುವಂತೆ ಕಂಡುಬಂದರೂ ಭಾರತವು ಚೇತರಿಕೆಯ ನಂತರ ಅದನ್ನು ಮರಳಿ ತರುವಲ್ಲಿ ಯಶಸ್ವಿಯಾಯಿತು.

ಪಂದ್ಯದ ನಂತರ, ದೆಹಲಿ ಪೊಲೀಸರ ಅಧಿಕೃತ ಎಕ್ಸ್ ಹ್ಯಾಂಡಲ್ ತಮಾಷೆಯೊಂದನ್ನು ಮಾಡಿತು. ಪೊಲೀಸರ ಬಳಗ ಸಾಮಾಜಿಕ ಮಾಧ್ಯಮದ ಮೂಲಕ ನ್ಯೂಯಾರ್ಕ್​​ ಸಿಟಿ ಪೊಲೀಸರಿಗೆ ಸಂದೇಶವೊಂದನ್ನು ಟ್ಯಾಗ್ ಮಾಡಿತು “ಹೇ, @NYPDnews, ನಾವು ಎರಡು ದೊಡ್ಡ ಶಬ್ದಗಳನ್ನು ಕೇಳಿದ್ದೇವೆ. ಒಂದು “ಇಂಡಿಯಾ ಎ.. ಭಾರತ!” ಇನ್ನೊಂದು ಬಹುಶಃ ಮುರಿದ ಟಿವಿಗಳಾಗಿದ್ದರಬಹುದು. ದಯವಿಟ್ಟು ದೃಢೀಕರಿಸುವಿರಾ?” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪಂದ್ಯ ನಡೆದ ನ್ಯೂಯಾರ್ಕ್​ ಸಿಟಿಯ ನಸ್ಸೌ ಸ್ಟೇಡಿಯಮ್​ನಲ್ಲಿ ಸುಮಾರು 125 ಡೆಸಿಬಲ್​ನಷ್ಟು ಸದ್ದು ಭಾರತೀಯ ಕ್ರಿಕೆಟ್​ ಪ್ರೇಮಿಗಳಿಂದ ಕೇಳಿ ಬಂದಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ಸೋತ ಕಾರಣ ಯಥಾವತ್ ಅಲ್ಲಿನ ಪ್ರೇಕ್ಷಕರು ಟಿವಿ ಒಡೆದು ಹಾಕಿರಬಹುದು ಎಂದು ಡೆಲ್ಲಿ ಪೊಲೀಸರು ತಮಾಷೆ ಮಾಡಿದ್ದಾರೆ.

ಭಾರತಕ್ಕೆ ಸತತ ಎರಡನೇ ವಿಜಯ

ರೋಹಿತ್ ಶರ್ಮಾ 13 ಹಾಗೂ ವಿರಾಟ್ ಕೊಹ್ಲಿ 4 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ 20 ರನ್ ಗಳಿಸಿ ನಿರ್ಗಮಿಸಿದರೆ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಕ್ರಮವಾಗಿ ಕೇವಲ 7 ಮತ್ತು 3 ರನ್ ಸೇರಿಸಿದರು.

ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಗಳಿಸುವ ಮೂಲಕ ಭಾರತ ಇನ್ನಿಂಗ್ಸ್ ಅನ್ನು ಸ್ಥಿರಗೊಳಿಸಲು ಸಹಾಯ ಮಾಡಿದರು. ಅವರ ತಂಡವು ಮೊದಲ ಇನ್ನಿಂಗ್ಸ್​ನಲ್ಲಿ ಒಟ್ಟು 119 ರನ್ ಗಳಿಸಲು ಸಹಾಯ ಮಾಡಿತು. ಪಾಕಿಸ್ತಾನದ ಪರ ನಸೀಮ್ ಶಾ ಹಾಗೂ ಹ್ಯಾರಿಸ್ ರವೂಫ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಭಾರತದ ಪರ ಮೊಹಮ್ಮದ್ ಅಮೀರ್ 2 ವಿಕೆಟ್ ಕಿತ್ತರೆ, ಶಾಹೀನ್ ಅಫ್ರಿದಿ 1 ವಿಕೆಟ್ ಪಡೆದರು.

ಇದನ್ನೂ ಓದಿ: T20 World Cup : ಪಾಕಿಸ್ತಾನಕ್ಕೆ ಸಂಕಷ್ಟ ತಂದಿಟ್ಟ ಭಾರತ; ಸೂಪರ್ 8 ಹಂತ ಪ್ರವೇಶವೂ ಕಷ್ಟ!

ಗುರಿ ಬೆನ್ನಟ್ಟಿದ ಪಾಕಿಸ್ತಾನ ಪರ ಆರಂಭಿಕ ಆಟಗಾರರಾದ ಬಾಬರ್ ಅಜಮ್ 13 ಮತ್ತು ಮೊಹಮ್ಮದ್ ರಿಜ್ವಾನ್ 31 ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಉಸ್ಮಾನ್ ಖಾನ್, ಫಖರ್ ಜಮಾನ್ ಮತ್ತು ಇಮಾದ್ ವಾಸಿಮ್ ಕ್ರಮವಾಗಿ 13, 13 ಮತ್ತು 15 ರನ್ ಗಳಿಸಿದರು.

ಪಂದ್ಯದ ಒಂದು ಹಂತದಲ್ಲಿ, ಪಾಕಿಸ್ತಾನವು ಪ್ರತಿ ಎಸೆತಕ್ಕೆ ಒಂದು ರನ್ ಗಳಿಸಬೇಕಾಗಿತ್ತು. ಆದರೆ ನಂತರದಲ್ಲಿ ಭಾರತವು ಪಂದ್ಯದಲ್ಲಿಹಿಡಿದ ಸಾಧಿಸಿತು. ಭಾರತದ ಪರ ಜಸ್ಪ್ರೀತ್ ಬುಮ್ರಾ 3, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ಅರ್ಷ್ದೀಪ್ ಸಿಂಗ್ ತಲಾ 1 ವಿಕೆಟ್ ಪಡೆದರು.

Continue Reading

Latest

T20 World Cup : ಪಾಕಿಸ್ತಾನಕ್ಕೆ ಸಂಕಷ್ಟ ತಂದಿಟ್ಟ ಭಾರತ; ಸೂಪರ್ 8 ಹಂತ ಪ್ರವೇಶವೂ ಕಷ್ಟ!

T20 World Cup : ಸದ್ಯದ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ಆಡಿರುವ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ನಾಲ್ಕು ಅಂಕಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿದೆ. ಇದು ಅವರ ನೆಟ್ ರನ್ ರೇಟ್ (ಎನ್ಆರ್ಆರ್) ಅನ್ನು +1.455 ಕ್ಕೆ ಹೆಚ್ಚಿಸಿದೆ. ಭಾರತದಷ್ಟೇ ಅಂಕ ಹೊಂದಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ನಂತರದ ಸ್ಥಾನದಲ್ಲಿದೆ.

VISTARANEWS.COM


on

T20 World Cup
Koo

ನ್ಯೂಯಾರ್ಕ್​: ಇಲ್ಲಿ ಭಾನುವಾರ ರಾತ್ರಿ ನಡೆದ ಟಿ 20 ವಿಶ್ವಕಪ್ 2024ರ (T20 World Cup) 19 ನೇ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಪಾಕಿಸ್ತಾನ (Pakistan Cricket Team) ಮುಖಾಮುಖಿಯಾದಾಗ ಟೂರ್ನಿಯ ಕೇಂದ್ರ ಬಿಂದು ಎಂದು ಹೇಳಲಾಯಿತು. ಅದು ಸಾಕ್ಷಿ ಸಮೇತ ಸಾಬೀತು ಕೂಡ ಆಗಿದೆ. ಟಾಸ್ ಗೆದ್ದ ನಂತರ ನಾಯಕ ಬಾಬರ್ ಅಜಮ್ ಭಾರತ ತಂಡಕ್ಕೆ ಬ್ಯಾಟ್ ಮಾಡಲು ಆಹ್ವಾನ ಕೊಟ್ಟರು. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬೇಗ ಔಟಾದಾಗ ಇದು ಸರಿ ಎನಿಸಿತು. ಆದರೆ, ಸಿಕ್ಕ ಅವಕಾಶವನ್ನು ಕಳೆದುಕೊಂಡ ಪಾಕಿಸ್ತಾನ ತಂಡ ಕೊನೆಯಲ್ಲಿ 6 ರನ್​ಗಳಿಂದ ಸೋತಿತು. ಈ ಮೂಲಕ ಪರಿತಪಿಸಲು ಆರಂಭಿಸಿದೆ. ಭಾರತ ತಂಡದ ಪಾಕಿಸ್ತಾನದ ಸೂಪರ್-8 ಹಂತದ ಪ್ರವೇಶಕ್ಕೆ ಮುಳ್ಳಾಗಿದೆ.

ಪಂದ್ಯದಲ್ಲಿ ಭಾರತ ಪರ ಯುವ ಬ್ಯಾಟರ್​ ರಿಷಭ್ ಪಂತ್ 41 ರನ್ ಬಾರಿಸಿದರು. ಅವರ ರನ್​ ಭಾರತ ಪರ ಗರಿಷ್ಠ ಸ್ಕೋರ್. ಆದರೆ ನಸೀಮ್ ಶಾ ಮತ್ತು ಮೊಹಮ್ಮದ್ ಅಮೀರ್ ಅವರ ಬೌಲಿಂಗ್ ಸ್ಪೆಲ್​ಗಳು ಭಾರತದ ಬ್ಯಾಟಿಂಗ್ ಘಟಕವನ್ನು ಧೂಳಿಪಟ ಮಾಡಿದರು. ಒಂದು ಬಾರಿ ಕುಸಿದ ಭಾರತ ಚೇತರಿಸಿಕೊಳ್ಳಲೇ ಇಲ್ಲ. ಅಂತಿಮವಾಗಿ 18.3 ಓವರ್​ಗಳಲ್ಲಿ 119 ರನ್​ಗಳಿಗೆ ಆಲ್​ಔಟ್ ಆಯಿತು.

ಉತ್ತರವಾಗಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಎಚ್ಚರಿಕೆಯಿಂದ ಇನಿಂಗ್ಸ್​​ ಪ್ರಾರಂಭಿಸಿದರು. ಆದರೆ ಶೀಘ್ರದಲ್ಲೇ ಜಸ್ಪ್ರೀತ್ ಬುಮ್ರಾ ಭಾರತಕ್ಕೆ ಪ್ರಗತಿ ತಂದುಕೊಟ್ಟರು. ಆದಾಗ್ಯೂ, ರಿಜ್ವಾನ್ ತಳವೂರಿ ಆಡಿ ಸ್ಕೋರ್ ಬೋರ್ಡ್ ಹಿಗ್ಗಿಸಲು ಯತ್ನಿಸಿದರು. ಆದರೆ ಮೊಹಮ್ಮದ್ ಸಿರಾಜ್ ಮತ್ತು ನಂತರ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಅವರ ಕೆಲವು ಬಿಗಿಯಾದ ಸ್ಪೆಲ್​ಗಳು ಪಾಕಿಸ್ತಾನಕ್ಕೆ ರನ್​ ಗಳಿಸಲು ಕೊಂಚವೂ ಅವಕಾಶ ಕೊಡಲಿಲ್ಲ. ನಂತರ, ಬುಮ್ರಾ 19 ನೇ ಓವರ್​ನಲ್ಲಿ ವಿಕೆಟ್ ಪಡೆಯುವ ಮೂಲಕ ಪಂದ್ಯವನ್ನು ಭಾರತ ತಂಡ ಪರ ತಿರುಗಿಸಿದರು. ಅಲ್ಲದೆ ಮತ್ತೊಮ್ಮೆ ತಾವು ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತುಪಡಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ಆಡಿರುವ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ನಾಲ್ಕು ಅಂಕಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿದೆ. ಇದು ಅವರ ನೆಟ್ ರನ್ ರೇಟ್ (ಎನ್ಆರ್ಆರ್) ಅನ್ನು +1.455 ಕ್ಕೆ ಹೆಚ್ಚಿಸಿದೆ. ಭಾರತದಷ್ಟೇ ಅಂಕ ಹೊಂದಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ನಂತರದ ಸ್ಥಾನದಲ್ಲಿದೆ. ಅವರ ನೆಟ್ ರನ್ ರೇಟ್ ಪ್ರಸ್ತುತ +0.626 ಆಗಿದೆ. ಇದಲ್ಲದೆ, ಆರಂಭಿಕ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಸೋತ ನಂತರ ಐರ್ಲೆಂಡ್ ಅನ್ನು ಸೋಲಿಸಿದ ಕೆನಡಾ ಮೂರನೇ ಸ್ಥಾನದಲ್ಲಿದೆ. ಪಾಕಿಸ್ತಾನ ಮತ್ತು ಐರ್ಲೆಂಡ್ ಪ್ರಸ್ತುತ ನಾಲ್ಕು ಮತ್ತು ಐದನೇ ಸ್ಥಾನಗಳಲ್ಲಿವೆ. ಪಾಕ್​ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಇನ್ನೂ ಖಾತೆ ತೆರೆದಿಲ್ಲ. ಹೀಗಾಗಿ ಸೂಪರ್ 8 ರೌಂಡ್ ಅರ್ಹತೆಯ ಬೇಟೆಯಲ್ಲಿ ಆ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ.

ಪಾಕಿಸ್ತಾನದ ಪರಿಸ್ಥಿತಿ ಏನು?

ಮುಂದಿನ ಪಂದ್ಯಗಳಲ್ಲಿ ನೆಟ್ ರನ್ ರೇಟ್ (ಎನ್ಆರ್​ಆರ್​) ವಿಷಯದಲ್ಲಿ ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡುವುದರ ಜೊತೆಗೆ ಪಾಕಿಸ್ತಾನ ತಂಡವು ಈಗ ಇತರ ತಂಡಗಳನ್ನು ಅವಲಂಬಿಸಬೇಕಾಗಿದೆ. ಸೂಪರ್ 8 ಹಂತಕ್ಕೆ ಅರ್ಹತೆ ಪಡೆಯಲು ಪಾಕ್​ ಮೊದಲು ಗ್ರೂಪ್ ಹಂತದ ಉಳಿದ ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಇದೇ ವೇಳೆ ಅಮೆರಿಕ ಮತ್ತು ಐರ್ಲೆಂಡ್​​ ಭಾರತ ವಿರುದ್ಧ ಸೋಲಲೇಬೇಕು. ಹಾಗಾದರೆ ಮಾತ್ರ ಯುಎಸ್ಎ ತಂಡ ಆರು ಅಂಕಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ:IND vs PAK : ಪಾಕಿಸ್ತಾನದ ಬೌಲರ್​ ವಿರುದ್ಧ ವಿಶೇಷ ದಾಖಲೆ ಮಾಡಿದ ರೋಹಿತ್ ಶರ್ಮಾ

ಕುತೂಹಲಕಾರಿ ಸಂಗತಿಯೆಂದರೆ, ಐರ್ಲೆಂಡ್ ಯುಎಸ್ಎ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ, ಇದು ಪಾಕಿಸ್ತಾನಕ್ಕೆ ಅವಕಾಶ ಕೊಡಲಿದೆ. ತಮ್ಮ ಉಳಿದ ಪಂದ್ಯಗಳನ್ನು ದೊಡ್ಡ ಅಂತರದಿಂದ ಗೆದ್ದು ಮತ್ತು ಭಾರತ ಅಥವಾ ಯುಎಸ್ಎಗಿಂತ ಉತ್ತಮ ರನ್ ರೇಟ್ ಹೊಂದಿದರೆ ಟಿ 20 ವಿಶ್ವಕಪ್ 2024 ರ ಸೂಪರ್ 8 ಸುತ್ತಿಗೆ ಪ್ರವೇಶಿಸಬಹುದು. ಇಲ್ಲದಿದ್ದರೆ ಪಾಕಿಸ್ತಾನ ಗುಂಪು ಹಂತದಿಂದಲೇ ಹೊರಕ್ಕೆ ಹೋಗುವುದು ಖಚಿತ.

ಟೀಮ್ ಇಂಡಿಯಾದ ಹೇಳುವುದಾದರೆ ಈಗಾಗಲೇ ಮುಂಚೂಣಿ ಸ್ಥಾನ ಪಡೆದುಕೊಂಡಿದೆ. ಗುಂಪಿನ ಅಗ್ರಸ್ಥಾನಿಗಳಾಗಿ ಉಳಿಯಲು ಇನ್ನೂ ಒಂದು ಪಂದ್ಯ ಗೆಲ್ಲಬೇಕು. ಆದ್ದರಿಂದ ಜೂನ್ 12 ರಂದು ಯುಎಸ್ಎ ವಿರುದ್ಧ ಗೆದ್ದರೆ ಸಾಕು. ಭಾರತಕ್ಕೆ ಕೆನಡಾ ವಿರುದ್ಧ ಇನ್ನೊಂದು ಪಂದ್ಯವಿದೆ. ಆದಾಗ್ಯೂ ಅಮೆರಿಕ ಮಣಿಸಿದರೆ ಸೂಪರ್8 ಸ್ಥಾನ ಖಾತರಿ.

Continue Reading
Advertisement
Modi 3.0 Cabinet
ದೇಶ18 mins ago

Modi 3.0 Cabinet: ಮೈತ್ರಿ ಸರ್ಕಾರದಲ್ಲೂ ಮೋದಿಯದ್ದೇ ಪ್ರಾಬಲ್ಯ; 4 ಪ್ರಮುಖ ಖಾತೆಗಳು ಬಿಜೆಪಿ ಪಾಲು!

Karnataka Weather Forecast
ಮಳೆ44 mins ago

Karnataka Weather : ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ; ಮುಕ್ಕಾಲು ಕರ್ನಾಟಕಕ್ಕೆ ರೆಡ್‌ ಅಲರ್ಟ್‌

Rakshit Shetty Richard Anthony Produce By Hombale
ಆರೋಗ್ಯ44 mins ago

Menopause: ಮಹಿಳೆಯರೇ, ಈ ಸಮಸ್ಯೆಗಳು ಕಾಣಿಸುತ್ತಿವೆಯೇ?; ಹಾಗಿದ್ದರೆ ನಿಮ್ಮ ಮೆನೋಪಾಸ್‌ ಸಮೀಪದಲ್ಲಿದೆ ಎಂದರ್ಥ!

Yuva Rajkumar
ಕರ್ನಾಟಕ47 mins ago

Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ; ಪತ್ನಿ ಶ್ರೀದೇವಿ ಆರೋಪ

Cervical Cancer
ಆರೋಗ್ಯ2 hours ago

Cervical Cancer: ಮಹಿಳೆಯರ ಗರ್ಭಕಂಠದ ಕ್ಯಾನ್ಸರ್‌; ಪುರುಷರಿಗೂ ಇದೆ ಅಪಾಯ!

Dina Bhavishya
ಭವಿಷ್ಯ2 hours ago

Dina Bhavishya : ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ!

Yuva Rajkumar
ಕರ್ನಾಟಕ7 hours ago

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar
ಪ್ರಮುಖ ಸುದ್ದಿ8 hours ago

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Minister Dinesh Gundurao instructed to prepare for the disaster management that may occur on the coast during rainy season.
ದಕ್ಷಿಣ ಕನ್ನಡ9 hours ago

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Inauguration of Pushpam Ayurveda Wellness Center in Bengaluru
ಬೆಂಗಳೂರು9 hours ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ15 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌