WPL 2023: ಸತತ 5ನೇ ಸೋಲು; ಟೂರ್ನಿಯಿಂದ ಬಹುತೇಕ ಹೊರಬಿದ್ದ ಆರ್​ಸಿಬಿ - Vistara News

ಕ್ರಿಕೆಟ್

WPL 2023: ಸತತ 5ನೇ ಸೋಲು; ಟೂರ್ನಿಯಿಂದ ಬಹುತೇಕ ಹೊರಬಿದ್ದ ಆರ್​ಸಿಬಿ

ಆರ್​ಸಿಬಿ ವಿರುದ್ಧದ ಸೋಮವಾರದ ಮಹಿಳಾ ಪ್ರೀಮಿಯರ್​ ಲೀಗ್​ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ 6 ವಿಕೆಟ್​ಗಳ ಗೆಲುವು ದಾಖಲಿಸಿದೆ.

VISTARANEWS.COM


on

WPL 2023: 5th defeat in a row; RCB almost out of the tournament
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಆರ್​ಸಿಬಿ ಆಡಿದ ಐದೂ ಪಂದ್ಯಗಳಲ್ಲಿಯೂ ಸೋಲು ಕಾಣುವ ಮೂಲಕ ಐಪಿಎಲ್​ನಲ್ಲಿ ಪುರುಷರ ತಂಡದಂತೆ ನತದೃಷ್ಟ ತಂಡ ಎಂಬ ಅವಮಾನಕ್ಕೆ ಸಿಲುಕಿದೆ. ಡೆಲ್ಲಿ ಕ್ಯಾಪಿಟಲ್ಸ್​(Delhi Capitals) ವಿರುದ್ಧದ ಪಂದ್ಯದಲ್ಲಿ 6 ವಿಕೆಟ್​ಗಳ ಸೋಲಿಗೆ ತುತ್ತಾಯಿತು. ಈ ಮೂಲಕ ಟೂರ್ನಿಯಲ್ಲಿ ಡೆಲ್ಲಿ ವಿರುದ್ಧ ಆಡಿದ ಎರಡೂ ಪಂದ್ಯಗಳಲ್ಲಿಯೂ ಆರ್​ಸಿಬಿ ಸೋಲು ಕಂಡಂತಾಗಿದೆ.

ಮುಂಬಯಿಯ ಡಿವೈ ಪಾಟೀಲ್ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 150 ರನ್​ ಗಳಿಸಿತು. ಜವಾಬಿತ್ತ ಡೆಲ್ಲಿ ಕ್ಯಾಪಿಟಲ್ಸ್ 19.4 ಓವರ್​ಗಳಲ್ಲಿ 4 ವಿಕೆಟ್​ನಷ್ಟಕ್ಕೆ 154 ರನ್​​ ಪೇರಿಸಿ ಗೆಲುವು ದಾಖಲಿಸಿತು. ಆರ್​ಸಿಬಿ ಈ ಸೋಲಿನೊಂದಿಗೆ ಟೂರ್ನಿಯಿಂದ ಬಹುತೇಕ ಹೊರಬಿದ್ದಾಂತಾಗಿದೆ.

ಚೇಸಿಂಗ್​ ವೇಳೆ ಡೆಲ್ಲಿ ಮೊದಲ ಓವರ್​ನಲ್ಲಿಯೇ ಶಫಾಲಿ ವರ್ಮ ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತ ಎದುರಿಸಿತು. ಇದರ ಬೆನ್ನಲ್ಲೇ ತಂಡದ ನಾಯಕಿ ಮೆಗ್​ ಲ್ಯಾನಿಂಗ್​ ಕೂಡ 15 ರನ್​ಗೆ ವಿಕೆಟ್​ ಒಪ್ಪಿಸಿದ ಪರಿಣಾಮ ತಂಡ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ತಂಡಕ್ಕೆ ಆಸೆರೆಯಾದ ಜೆಮಿಮಾ ರೋಡ್ರಿಗಸ್​ ಮತ್ತು ಅಲೈಸ್​ ಕ್ಯಾಪ್ಸಿ ತಾಳ್ಮೆಯುತ ಬ್ಯಾಟಿಂಗ್​ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

17 ರನ್​ ಗಳಿಸಿದ ವೇಳೆ ಜೀವದಾನ ಪಡೆದ ಜೆಮಿಮಾ ರೋಡ್ರಿಗಸ್​ ಈ ಲಾಭವನ್ನು ಎರಡೂ ಕೈಗಳಿಂದ ಬಾಚಿ 32 ರನ್​ ಬಾರಿಸಿದರು. ಅಲೈಸ್​ ಕ್ಯಾಪ್ಸಿ 8 ಬೌಂಡರಿ ನೆರವಿನಿಂದ 38 ರನ್​ ಗಳಿಸಿದರು. ಈ ಇಬ್ಬರು ಆಟಗಾರ್ತಿಯರ ವಿಕೆಟ್​ ಪತನದ ಬಳಿಕ ಆರ್​ಸಿಬಿ ಮೇಲುಗೈ ಸಾಧಿಸುವ ಸೂಚನೆ ನೀಡಿತು. ಆದರೆ ಜೆಸ್‌ ಜೊನಾಸೆನ್‌ ಮತ್ತು ಮರಿಜಾನ್‌ ಕಾಪ್‌ ದಿಟ್ಟ ಹೋರಾಟವೊಂದನ್ನು ನಡೆಸಿ ಆರ್​ಸಿಬಿಯ ಗೆಲುವನ್ನು ಕಸಿದುಕೊಂಡರು. ಮರಿಜಾನ್‌ ಕಾಪ್‌ ಅಜೇಯ 32 ಮತ್ತು ಜೆಸ್‌ ಜೊನಾಸೆನ್‌ ಅಜೇಯ 29 ರನ್​ ಬಾರಿಸಿದರು. ಆರ್​ಸಿಬಿ ಪರ ಆಶಾ ಶೋಭನಾ 2 ವಿಕೆಟ್​ ಉರುಳಿಸಿದರು.

ಇದನ್ನೂ ಓದಿ WPL 2023: ಗೆಲುವಿನ ನಾಗಾಲೋಟ ಮುಂದುವರಿಸಿದ ಮುಂಬೈ; ಯುಪಿ ವಿರುದ್ಧ 8 ವಿಕೆಟ್‌ ಜಯ

ಅರ್ಧಶತಕ ಬಾರಿಸಿದ ಎಲ್ಲಿಸ್​ ಪೆರ್ರಿ

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಆರ್​ಸಿಬಿಗೆ ಆಸೀಸ್​ ಆಲ್​ರೌಂಡರ್​ ಎಲ್ಲಿಸ್​ ಪೆರ್ರಿ ಆಸರೆಯಾದರು. ಡೆಲ್ಲಿಯ ಫಾತಕ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಅವರು ತಾಳ್ಮೆಯುತ ಬ್ಯಾಟಿಂಗ್​ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಮೇಲೆತ್ತಿದರು. ಆರಂಭದಲ್ಲಿ ಎಸೆತವೊಂದಕ್ಕೆ ರನ್​ ಗಳಿಸುತ್ತಿದ್ದ ಅವರು ಅಂತಿಮ 4 ಓವರ್​ಗಳ ಆಟದ ವೇಳೆ ಬಿರುಸಿನ ಬ್ಯಾಟಿಂಗ್​ ನಡೆಸಿದರು. ಇವರ ಈ ಅಜೇಯ ಅರ್ಧಶತಕದ ಬ್ಯಾಟಿಂಗ್​ ಸಾಹಸದಿಂದ ಆರ್​ಸಿಬಿ ನೂರರ ಗಡಿ ದಾಟುವಲ್ಲಿ ಯಶಸ್ಸು ಕಂಡಿತು.

ಎಲ್ಲಿಸ್​ ಪೆರ್ರಿಗೆ ಉತ್ತಮ ಸಾಥ್​ ನೀಡಿದ ರಿಚಾ ಘೋಷ್​ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್​ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ನರೆವಾದರು. ಆದರೆ ಶಿಖಾ ಪಾಂಡೆ ಅವರ ಎಸೆತದಲ್ಲಿ ರಿವರ್ಸ್​ ಸ್ವೀಪ್ ಮಾಡುವ​ ಪ್ರಯತ್ನದಲ್ಲಿ ಎಡವಿದ ಅವರು ಕೀಪರ್​ ತನಿಯಾ ಭಾಟಿಯಾಗೆ ಕ್ಯಾಚ್​ ನೀಡಿ ವಿಕೆಟ್ ಕೈಚೆಲ್ಲಿದರು. 16 ಎಸೆತ ಎದುರಿಸಿದ ಅವರು ತಲಾ ಮೂರು ಸಿಕ್ಸರ್​ ಮತ್ತು ಬೌಂಡರಿ ನೆರವಿನಿಂದ 37 ರನ್​ ಚಚ್ಚಿದರು. ಎಲ್ಲಿಸ್​ ಪೆರ್ರಿ 52ಎಸೆತ ಎದುರಿಸಿ ಅಜೇಯ 67 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 5 ಸಿಕ್ಸರ್​ ಮತ್ತು 4 ಬೌಂಡರಿ ಸಿಡಿಯಿತು.

ಕೂಟದಲ್ಲಿ ದುಬಾರಿ ಮೊತ್ತ ಪಡೆದ ಆಟಗಾರ್ತಿ ಸ್ಮೃತಿ ಮಂಧಾನಾ ಈ ಪಂದ್ಯದಲ್ಲಿಯೂ ಬ್ಯಾಟಿಂಗ್​ ಮಂದಹಾಸ ಮೂಡಿಸುವಲ್ಲಿ ವಿಫಲರಾದರು. ಕೇವಲ 8 ರನ್​ಗೆ ಔಟಾಗುವ ಮೂಲಕ ಆಡಿದ ಐದೂ ಪಂದ್ಯಗಳಲ್ಲಿಯೂ ಘೋರ ಬ್ಯಾಟಿಂಗ್​ ವೈಫಲ್ಯ ಮುಂದುವರಿಸಿದರು.

ಡೆಲ್ಲಿ ಪರ ಅನುಭವಿ ಬೌಲರ್​ ಶಿಖಾ ಪಾಂಡೆ 4 ಓವರ್​ಗೆ 23 ರನ್​ ನೀಡಿ 3 ವಿಕೆಟ್​ ಕಿತ್ತು ಮಿಂಚಿದರು. ಕಳೆದ ಪಂದ್ಯದಲ್ಲಿ ಘಾತಕ ಬೌಲಿಂಗ್​ ದಾಳಿ ನಡೆಸಿದ ಮರಿಜಾನೆ ಕಾಪ್ ಈ ಪಂದ್ಯದಲ್ಲಿ ವಿಕೆಟ್​ ಪಡೆಯದಿದ್ದರೂ ನಾಲ್ಕು ಓವರ್​ನಲ್ಲಿ ಒಂದು ಮೇಡನ್​ ಸಹಿತ 18 ರನ್​ ಬಿಟ್ಟುಕೊಟ್ಟ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು.

ಸಂಕ್ಷಿಪ್ತ ಸ್ಕೋರ್​: ರಾಯಲ್ ಚಾಲೆಂಜರ್ಸ್​ ಬೆಂಗಳೂರು; 20 ಓವರ್​ಗಳಲ್ಲಿ 4 ವಿಕೆಟ್​ಗೆ 150 (ಎಲ್ಲಿಸ್​ ಪೆರ್ರಿ ಅಜೇಯ 67, ರಿಚಾ ಘೋಷ್​ 37, ಶಿಖಾ ಪಾಂಡೆ 23ಕ್ಕೆ 3).

ಡೆಲ್ಲಿ ಕ್ಯಾಪಿಟಲ್ಸ್:​ 19.4 ಓವರ್​ಗಳಲ್ಲಿ 4 ವಿಕೆಟ್​ನಷ್ಟಕ್ಕೆ 154 ( ಅಲೈಸ್​ ಕ್ಯಾಪ್ಸಿ 38, ಮರಿಜಾನ್‌ ಕಾಪ್‌ ಅಜೇಯ 32, ಜೆಸ್‌ ಜೊನಾಸೆನ್‌ ಅಜೇಯ 29, ಜೆಮಿಮಾ ರೋಡ್ರಿಗಸ್​ 32, ಆಶಾ ಶೋಭನಾ 27ಕ್ಕೆ 2)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು

T20 World Cup 2024: ವಿರಾಟ್​ ಕೊಹ್ಲಿ ಮತ್ತು ಸಂಜು ಸ್ಯಾಮ್ಸನ್​ ತಮ್ಮ ವೈಯಕ್ತಿಕ ಕಾರಣಗಳಿಂದ ತಂಡ ಸೇರುವುದು ಕೊಂಚ ತಡವಾಗಲಿದೆ ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ. ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಟಿ20 ವಿಶ್ವಕಪ್(T20 World Cup 2024)​ ಆಡಲು ಭಾರತ ತಂಡದ 2ನೇ ಬ್ಯಾಚ್​ ಕೂಡ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸಿದೆ. ಸೋಮವಾರ ತಡರಾತ್ರಿ ಯಜುವೇಂದ್ರ ಚಹಲ್(Yuzvendra Chahal)​, ಅವೇಶ್​ ಖಾನ್(Avesh Khan)​ ಮತ್ತು ಯಶಸ್ವಿ ಜೈಸ್ವಾಲ್(Yashasvi Jaiswal)​ ಮೂವರು ಮುಂಬೈಯಿಂದ ಪ್ರಯಾಣಿಸಿದರು. ಮೂರನೇ ಬ್ಯಾಚ್​ ಇಂದು ಪ್ರಯಾಣಿಸಲಿದೆ. ಈಗಾಗಲೇ ಮೊದಲ ಬ್ಯಾಚ್​ನಲ್ಲಿ ಪ್ರಯಾಣಿಸಿದ ತಂಡದ ನಾಯಕ ರೋಹಿತ್​ ಶರ್ಮ, ಕೋಚ್​ ರಾಹುಲ್​ ದ್ರಾವಿಡ್​, ರಿಷಭ್​ ಪಂತ್​, ಕುಲ್​ದೀಪ್​ ಯಾದವ್​, ಜಸ್​ಪ್ರೀತ್​ ಬುಮ್ರಾ ಸೇರಿ ಬಹುತೇಕ ಆಟಗಾರರು ನ್ಯೂಯಾರ್ಕ್​ಗೆ ತಲುಪಿದ್ದಾರೆ. ಆಟಗಾರರು ತಲುಪಿದ ವಿಚಾರವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ವಿಡಿಯೊ ಹಂಚಕೊಳ್ಳುವ ಮೂಲಕ ತಿಳಿಸಿದೆ.

ವಿರಾಟ್​ ಕೊಹ್ಲಿ ಮತ್ತು ಸಂಜು ಸ್ಯಾಮ್ಸನ್​ ತಮ್ಮ ವೈಯಕ್ತಿಕ ಕಾರಣಗಳಿಂದ ತಂಡ ಸೇರುವುದು ಕೊಂಚ ತಡವಾಗಲಿದೆ ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ. ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊಹ್ಲಿ ಮೇ 30ಕ್ಕೆ ಚಾರ್ಟರ್​ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ ಎನ್ನಲಾಗಿದೆ.

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ನೀಡಲಾಗಿದೆ. ಚಹಲ್​ ಇದುವರೆಗೆ ಭಾರತ ಪರ 72 ಏಕದಿನ ಪಂದ್ಯಗಳಿಂದ 121 ವಿಕೆಟ್​, 80 ಟಿ20 ಆಡಿ 96 ವಿಕೆಟ್​ ಕಡೆವಿದ್ದಾರೆ. ಇದುವರೆಗೂ ಟೆಸ್ಟ್​ ಕ್ರಿಕೆಟ್​ ಆಡಿಲ್ಲ.


2ನೇ ಬ್ಯಾಚ್​ನಲ್ಲಿ ಪ್ರಯಾಣಿಸಿದ ಯಜುವೇಂದ್ರ ಚಹಲ್​, ಅವೇಶ್​ ಖಾನ್​ ಮತ್ತು ಯಶಸ್ವಿ ಜೈಸ್ವಾಲ್ ರಾಜಸ್ಥಾನ್​ ರಾಯಲ್ಸ್​ ತಂಡದ ಆಟಗಾರರಾಗಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧದ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿತ್ತು.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ


Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

T20 World Cup 2024: ರೋಹಿತ್ ಶರ್ಮ ಟಿ20 ವಿಶ್ವ ಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ

VISTARANEWS.COM


on

T20 World Cup 2024
Koo

ಬೆಂಗಳೂರು: 2007ರಲ್ಲಿ ಆರಂಭಗೊಂಡ ಟಿ20 ವಿಶ್ವ ಕಪ್ (T20 World Cup 2024) ​ನಿಂದ 2022ರ ವಿಶ್ವ ಕಪ್​ವರೆಗೆ ನಡೆದ ಟಿ20 ವಿಶ್ವ ಕಪ್​ನಲ್ಲಿ ಭಾರತ ಕ್ರಿಕೆಟ್​ ತಂಡದ ಆಟಗಾರರು ಎಷ್ಟು ಸಿಕ್ಸರ್​ ಸಾಧನೆ ಮಾಡಿದ್ದಾರೆ ಎನ್ನುವ ಸ್ವಾರಸ್ಯಕರ ಸಂಗತಿ ಇಂತಿದೆ.

ರೋಹಿತ್​ ಶರ್ಮ


ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮ ಟಿ20 ವಿಶ್ವ ಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ರೋಹಿತ್ ಉದ್ಘಾಟನ ಆವೃತ್ತಿಯ ವಿಶ್ವಕಪ್​ನಿಂದ ಆಡಿ ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ. ಇದೀಗ 2024 ರ ವಿಶ್ವ ಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್​ ತಮ್ಮ ಸಿಕ್ಸರ್​ಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. 2007-2022ರ ವಿಶ್ವಕಪ್​ ಆವೃತ್ತಿಯಲ್ಲಿ ರೋಹಿತ್​ ಒಟ್ಟು 39 ಪಂದ್ಯಗಳನ್ನು ಆಡಿದ್ದಾರೆ.


ಯುವರಾಜ್ ಸಿಂಗ್


ಭಾರತ ಕ್ರಿಕೆಟ್​ ಕಂಡ ಅತ್ಯಂತ ಶ್ರೇಷ್ಠ ಆಲ್​ರೌಂಡರ್, ಮಾಜಿ ಆಟಗಾರ, 2007 ವಿಶ್ವಕಪ್​ ಟೂರ್ನಿಯಲ್ಲಿ ಸ್ಟುವರ್ಟ್​ ಬ್ರಾಡ್​ ಓವರ್​ಗೆ ಸತತವಾಗಿ 6 ಸಿಕ್ಸರ್​ ಬಾರಿಸಿದ ಯುವರಾಜ್​ ಸಿಂಗ್ ಈ ಸಾಲಿನಲ್ಲಿ ಸದ್ಯ ದ್ವಿತೀಯ ಸ್ಥಾನದಲ್ಲಿದ್ದಾರೆ. ಯುವಿ ಒಟ್ಟು 31 ವಿಶ್ವ ಕಪ್​ ಪಂದ್ಯಗಳನ್ನು ಆಡಿದ್ದು 33 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಭಾರತ 2007 ಮತ್ತು 2011 ರ ವಿಶ್ವ ಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ಆಟಗಾರ ಎನ್ನುವ ಕೀರ್ತಿಯೂ ಇವರದ್ದಾಗಿದೆ.


ವಿರಾಟ್​ ಕೊಹ್ಲಿ


ಕಳೆದ 2 ವರ್ಷಗಳ ಬಳಿಕ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ, ಈ ಆವೃತ್ತಿ ಐಪಿಎಲ್​ನಲ್ಲಿ ಗರಿಷ್ಠ ಮೊತ್ತ ದಾಖಲಿಸಿದ ಕಿಂಗ್ ಖ್ಯಾತಿಯ​ ವಿರಾಟ್​ ಕೊಹ್ಲಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. 2012ರಿಂದ ಟಿ20 ವಿಶ್ವಕಪ್​ ಆಡುತ್ತಿರುವ ಕೊಹ್ಲಿ ಇದುವರೆಗೆ 27 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 28 ಸಿಕ್ಸರ್​ ಬಾರಿಸಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಕೇವಲ 4 ಸಿಕ್ಸರ್​ ಬಾರಿಸಿದರೆ ಯುವರಾಜ್​ ಸಿಂಗ್​ ದಾಖಲೆ ಮುರಿಯಲಿದ್ದಾರೆ.

ಇದನ್ನೂ ಓದಿ T20 World Cup 2024: ಮಿನಿ ವಿಶ್ವಕಪ್​ ಸಮರದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ದಾಂಡಿಗರಿವರು!


ಎಂ.ಎಸ್​ ಧೋನಿ


ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಈ ಯಾದಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಧೋನಿ 2007ರಿಂದ 2016ರ ತನಕ 33 ಪಂದ್ಯಗಳನ್ನಾಡಿ ಒಟ್ಟು 16 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಆದರೆ ಧೋನಿ ಚೊಚ್ಚಲ ಟಿ20 ವಿಶ್ವಕಪ್​ನಲ್ಲಿಯೇ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿದ ಖ್ಯಾತಿ ಹೊಂದಿದ್ದಾರೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು


ಕೆ.ಎಲ್​ ರಾಹುಲ್​


ಕನ್ನಡಿಗ ಕೆ.ಎಲ್​ ರಾಹುಲ್​ ಅವರು ಇದುವರೆಗೆ 11 ಟಿ20 ವಿಶ್ವಕಪ್​ ಆಡಿದ್ದು 15 ಸಿಕ್ಸರ್​ ಬಾರಿಸಿದ್ದಾರೆ. ಟಿ20 ವಿಶ್ವ ಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಅವರಿಗೆ 5ನೇ ಸ್ಥಾನ. ವಿಪರ್ಯಾಸವೆಂದರೆ ಈ ಬಾರಿ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿಲ್ಲ.

Continue Reading

ಕ್ರೀಡೆ

Team India Coach: ಟೀಮ್​ ಇಂಡಿಯಾದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಪ್ರಧಾನಿ ಮೋದಿ, ಅಮಿತ್ ಶಾ!

Team India Coach: ಮೂಲಗಳ ಪ್ರಕಾರ ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌(Team India Coach) ಹುದ್ದೆಗೆ ಈಗಾಗಲೇ 3,000 ಅರ್ಜಿಗಳು ಬಂದಿಗೆ ಎಂದು ಹೇಳಲಾಗಿದೆ. ಇದರಲ್ಲಿ ಬಹುಪಾಲು ನಕಲಿ ಅರ್ಜಿಗಳಾಗಿವೆ.

VISTARANEWS.COM


on

Team India Coach
Koo

ಮುಂಬಯಿ: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌(Team India Coach) ಹುದ್ದೆಗೆ(Team India Coach Applications) ಯಾರು ಸೂಕ್ತ ಎಂದು ಚಿಂತಿಸುತ್ತಿರುವ ಮಧ್ಯೆ ಬಿಸಿಸಿಐಗೆ ಅಚ್ಚರಿಯೊಂದು ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi), ಸಚಿನ್​ ತೆಂಡೂಲ್ಕರ್​(Sachin Tendulkar) , ಎಂ.ಎಸ್​ ಧೋನಿ(MS Dhoni), ಅಮಿತ್ ಶಾ(Amit Shah) ಸೇರಿ ಹಲವು ಪ್ರಮುಖರು ಅರ್ಜಿ ಸಲ್ಲಿದ್ದಾರೆ. ಅಸಲಿಗೆ ಇವರ್‍ಯಾರು‌ ಈ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ನೆಟ್ಟಿಗರು ಇವರ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಅರ್ಜಿ ಸಲ್ಲಿಸಲು ಮೇ 27 ಅಂತಿಮ ಗಡುವಾಗಿತ್ತು. ಹೀಗಾಗಿ ಕೆಲ ನೆಟ್ಟಿಗರು ಮೋದಿ, ಸಚಿನ್​, ಅಮಿತ್ ಶಾ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿ ಬಿಸಿಸಿಐಗೆ ಚಕಮ್​ ಕೊಟ್ಟಿದ್ದಾರೆ. ಇದಕ್ಕೂ ಮುನ್ನ ಅನೇಕ ಕ್ರಿಕೆಟ್​ ಅಭಿಮಾನಿಗಳು(Cricket Fans Apply For India’s Head Coach) ಗೂಗಲ್​ ಅರ್ಜಿ ಪಡೆದುಕೊಂಡು ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತ ಟ್ವೀಟ್​ಗಳು ವೈರಲ್​ ಆಗಿತ್ತು. ಮೂಲಗಳ ಪ್ರಕಾರ ಈಗಾಗಲೇ 3,000 ಅರ್ಜಿಗಳು ಬಂದಿಗೆ ಎಂದು ಹೇಳಲಾಗಿದೆ.

ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. 

ಇದನ್ನೂ ಓದಿ Team India Coach Applications: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಸಾವಿರಾರು ಅಭಿಮಾನಿಗಳು; ಫಜೀತಿಗೆ ಸಿಲುಕಿದ ಬಿಸಿಸಿಐ

2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಆರಂಭಿಕ ಹಂತದಲ್ಲಿ ಯೋಚಿಸಿತ್ತು. ಆದರೆ ಅನೇಕ ವಿದೇಶಿ ಆಟಗಾರರು ಕೋಚ್​ ಆಗಲಿ ಆಸಕ್ತಿ ಹೊಂದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಹೀಗಾಗಿ ಬಿಸಿಸಿಐ ದೇಶೀಯ ಆಟಗಾರರ ಮೊರೆ ಹೋದಂತಿದೆ.

ಮೂಲಗಳ ಪ್ರಕಾರ ಗೌತಮ್​ ಗಂಭೀರ್​ ಅವರು ಭಾರತ ತಂಡದ ಕೋಚ್ ಆಗುವ ಸಾಧ್ಯತೆ ಕಂಡುಬಂದಿದೆ. ಭಾನುವಾರ ಮುಕ್ತಾಯ ಕಂಡ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಕೆಕೆಆರ್​ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಗೌತಮ್​ ಗಂಭೀರ್​ ತಂಡದ ಮೆಂಟರ್​ ಆಗಿದ್ದರು. ಪಂದ್ಯದ ಮುಕ್ತಾಯದ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಗಂಭೀರ್​ ಜತೆ ಅತ್ಯಂತ ಆತ್ಮೀಯವಾಗಿ ಸುರ್ದೀಘ ಚರ್ಚೆ ಕೂಡ ನಡೆಸಿದ್ದರು. ಇದನ್ನೆಲ್ಲ ನೋಡುವಾಗ ಗಂಭೀರ್​ ಕೋಚ್​ ಆಗುವುದು ಬಹುತೇಖ ಖಚಿತವಾದಂತಿದೆ.

Continue Reading

ಕ್ರೀಡೆ

T20 World Cup 2024: ಮಿನಿ ವಿಶ್ವಕಪ್​ ಸಮರದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ದಾಂಡಿಗರಿವರು!

T20 World Cup 2024: ಪಾಕಿಸ್ತಾನ ತಂಡದ ಮಾಜಿ ಆಟಗಾರ ಅಹ್ಮದ್​ ಶೆಹಜಾದ್​ 2014ರ ಟಿ20 ವಿಶ್ವ ಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 62 ಎಸೆತ ಎದುರಿಸಿ 10 ಬೌಂಡರಿ ಹಾಗೂ 5 ಸಿಕ್ಸರ್​ ನೆರವಿನಿಂದ ಅಜೇಯ 111 ರನ್​ ಗಳಿಸಿದ್ದರು. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಆಟಗಾರರ ಯಾದಿಯಲ್ಲಿ ಶೆಹಜಾದ್ 4ನೇ ಸ್ಥಾನಿಯಾಗಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಕಳೆದ ಮೂರು ತಿಂಗಳುಗಳ ಕಾಲ ಐಪಿಎಲ್​ ಗುಂಗಿನಲ್ಲಿದ್ದ ಕ್ರಿಕೆಟ್​ ಪ್ರೇಮಿಗಳು ಇನ್ನು ಟಿ20 ವಿಶ್ವಕಪ್​(T20 World Cup 2024) ಕಡೆ ತೆರೆದುಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಟಿ20 ವಿಶ್ವಕಪ್​ ನಡೆಯಲಿದ್ದು ಟೂರ್ನಿ ಆರಂಭಕ್ಕೆ ಇನ್ನು ಕೇವಲ 4 ದಿನ ಮಾತ್ರ ಉಳಿದುಕೊಂಡಿದೆ. ಇದುವರೆಗಿನ 8 ಆವೃತ್ತಿಯ ಟಿ20 ವಿಶ್ವ ಕಪ್​ ಟೂರ್ನಿಯ ಇತಿಹಾಸದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಅಗ್ರ 5 ಆಟಗಾರರನ್ನು ಪಟ್ಟಿ ಮಾಡಲಾಗಿದ್ದು ಈ ವಿವರ ಇಂತಿದೆ.

ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್‌)


ಟಿ20 ವಿಶ್ವ ಕಪ್ ಕೂಟದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಮಾಡಿದ ದಾಖಲೆ ನ್ಯೂಜಿಲ್ಯಾಂಡ್​ ತಂಡದ ಮಾಜಿ ನಾಯಕ ಬ್ರೆಂಡನ್ ಮೆಕಲಮ್(BB McCullum) ಅವರ ಹೆಸರಿನಲ್ಲಿದೆ. ಬಾಂಗ್ಲಾದೇಶದ ವಿರುದ್ಧ 2012ರ ಆವೃತ್ತಿಯ ಆರಂಭಿಕ ಪಂದ್ಯದ ವೇಳೆ ಮೆಕಲಮ್ 58 ಎಸೆತಗಳಲ್ಲಿ 123 ರನ್ ಗಳಿಸಿದ್ದರು. ಈ ಇನಿಂಗ್ಸ್ ವೇಳೆ ಅವರ ಬ್ಯಾಟ್‌ನಿಂದ 11 ಬೌಂಡರಿ ಮತ್ತು ಏಳು ಸಿಕ್ಸರ್​ ಸಿಡಿಯಲ್ಪಟ್ಟಿತು. ಇದು ಸದ್ಯ ದಾಖಲೆಯಾಗಿಯೇ ಉಳಿದಿದೆ.


ಕ್ರಿಸ್​ ಗೇಲ್​ (ವೆಸ್ಟ್‌ ಇಂಡೀಸ್‌)


2007ರ ಟಿ20 ವಿಶ್ವ ಕಪ್‌ನ ಉದ್ಘಾಟನಾ ಆವೃತ್ತಿಯ ಮೊದಲ ಪಂದ್ಯದಲ್ಲಿ “ಯೂನಿವರ್ಸ್ ಬಾಸ್” ಖ್ಯಾತಿಯ ವಿಂಡೀಸ್​ ದೈತ್ಯ ಕ್ರಿಸ್ ಗೇಲ್(Chris Gayl), ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ 57 ಎಸೆತಗಳಲ್ಲಿ 7 ಬೌಂಡರಿಗಳು ಮತ್ತು 10 ಸಿಕ್ಸರ್‌ಗಳನ್ನು ಒಳಗೊಂಡ ಇನಿಂಗ್ಸ್​ನಲ್ಲಿ 117 ರನ್ ಗಳಿಸಿದರು. ಗೇಲ್​ ಅವರ ಈ ಸ್ಫೋಟಕ ಇನಿಂಗ್ಸ್​ ವೇಳೆ 88 ರನ್​ ಕೇವಲ ಸಿಕ್ಸರ್​ ಮತ್ತು ಬೌಂಡರಿಯಿಂದ ಒಟ್ಟುಗೂಡಿದ್ದವು.


ಅಲೆಕ್ಸ್ ಹೇಲ್ಸ್ (ಇಂಗ್ಲೆಂಡ್‌)

ಇಂಗ್ಲೆಂಡ್​ ಕ್ರಿಕೆಟ್​ ತಂಡದ ಬಲಗೈ ದಾಂಡಿಗ ಅಲೆಕ್ಸ್ ಹೇಲ್ಸ್(Alex Hales) ಈ ಯಾದಿಯಲ್ಲಿ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. 2014ರ ಟಿ20 ವಿಶ್ವ ಕಪ್​ನಲ್ಲಿ ಶ್ರೀಲಂಕಾ ವಿರುದ್ಧ 64 ಎಸೆತಗಳಲ್ಲಿ ಅಜೇಯ 116 ರನ್ ಗಳಿಸಿದ್ದರು. ಈ ವೇಳೆ 11 ಬೌಂಡರಿ ಮತ್ತು 6 ಸಿಕ್ಸರ್​ ಸಿಡಿಯಲ್ಪಟ್ಟಿತು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಎಂದೂ ಮರೆಯದ ಸ್ಮರಣೀಯ ಸನ್ನಿವೇಶಗಳಿವು


ಅಹ್ಮದ್​ ಶೆಹಜಾದ್​ (ಪಾಕಿಸ್ತಾನ)


ಪಾಕಿಸ್ತಾನ ತಂಡದ ಮಾಜಿ ಆಟಗಾರ ಅಹ್ಮದ್​ ಶೆಹಜಾದ್​ 2014ರ ಟಿ20 ವಿಶ್ವ ಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 62 ಎಸೆತ ಎದುರಿಸಿ 10 ಬೌಂಡರಿ ಹಾಗೂ 5 ಸಿಕ್ಸರ್​ ನೆರವಿನಿಂದ ಅಜೇಯ 111 ರನ್​ ಗಳಿಸಿದ್ದರು. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಆಟಗಾರರ ಯಾದಿಯಲ್ಲಿ ಶೆಹಜಾದ್ 4ನೇ ಸ್ಥಾನಿಯಾಗಿದ್ದಾರೆ.


ರಿಲೀ ರೋಸೊ


ದಕ್ಷಿಣ ಆಫ್ರಿಕಾ ತಂಡದ ಮಧ್ಯಮ ಕ್ರಮಾಂಕದ ಎಡಗೈ ಬ್ಯಾಟರ್​ ರಿಲೀ ರೋಸೊ ಅವರು ವಿಶ್ವಕಪ್​ ಟೂರ್ನಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್‌ ಗಳಿಸಿದ ಆಟಗಾರರ ಯಾದಿಯಲ್ಲಿ 5ನೇ ಸ್ಥಾನಿಯಾಗಿದ್ದಾರೆ. ಕಳೆದ 2022ರಲ್ಲಿ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದಿದ್ದ ಟೂರ್ನಿಯಲ್ಲಿ ರೋಸೊ ಬಾಂಗ್ಲಾದೇಶ ವಿರುದ್ಧ ಸಿಡ್ನಿಯಲ್ಲಿ ನಡೆದಿದ್ದ ಪಂದ್ಯದಲ್ಲಿ 56 ಎಸೆತಗಳಿಂದ 7 ಬೌಂಡರಿ ಮತ್ತು 8 ಸಿಕ್ಸರ್​ ನೆರವಿನಿಂದ 109 ರನ್​ ಬಾರಿಸಿದ್ದರು. ಸದ್ಯ ಈ ಆಟಗಾರರ ಹೆಸರಿನಲ್ಲಿರುವ ದಾಖಲೆಯನ್ನು ಈ ಬಾರಿ ಯಾರು ಮುರಿಯಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವ ಕಪ್​ನಲ್ಲಿ ಟೀಮ್​ ಇಂಡಿಯಾದ ಮುಂದಿರುವ ಸವಾಲುಗಳೇನು?

Continue Reading
Advertisement
Love Case
ವಿಜಯಪುರ2 mins ago

Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

Bengaluru Traffic
ಬೆಂಗಳೂರು4 mins ago

Bengaluru Traffic: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಹೊಸ ತಂತ್ರಜ್ಞಾನ; ಸಂಚಾರ ಇಲಾಖೆಯ ಪ್ಲಾನ್

car care tips
ಆಟೋಮೊಬೈಲ್22 mins ago

Car Care Tips : ಕಾಸು ಉಳಿಸಿ ಎಂಜಿನ್ ಬೆಳಗಿಸಿ, ಕಾರಿನ ಎಂಜಿನ್ ನೀವೇ ​ಕ್ಲೀನ್ ಮಾಡಲು ಇಲ್ಲಿವೆ ಟಿಪ್ಸ್​​​

Viral Video
ವೈರಲ್ ನ್ಯೂಸ್44 mins ago

Viral Video: ದಿಗಂಬರ ಜೈನ ಮುನಿಗಳಿಗೆ ಈ ಪಾಪಿ ಮಾಡಿದ್ದೇನು ಗೊತ್ತಾ? ಶಾಕಿಂಗ್‌ ವಿಡಿಯೋ ವೈರಲ್‌

Prajwal Revanna Case
ಕರ್ನಾಟಕ46 mins ago

Prajwal Revanna Case: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

assault case
ದಕ್ಷಿಣ ಕನ್ನಡ55 mins ago

Assault Case : ರೊಚ್ಚಿಗೆದ್ದ ಸ್ಥಳೀಯರು; ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ

T20 World Cup 2024
ಕ್ರೀಡೆ1 hour ago

T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು

namaz in road mangalore
ದಕ್ಷಿಣ ಕನ್ನಡ1 hour ago

Namaz: ಸಾರ್ವಜನಿಕ ನಮಾಜ್‌ ನಿಲ್ಲಿಸದಿದ್ದರೆ ಹನುಮಾನ್‌ ಚಾಲೀಸಾ ಪಠನ: ವಿಹಿಂಪ ಎಚ್ಚರಿಕೆ

Veer Savarkar
ದೇಶ1 hour ago

Veer Savarkar: ಸ್ವಾತಂತ್ರ್ಯ ಯೋಧ ವೀರ್ ಸಾವರ್ಕರ್ ಜೀವನದ ಕುತೂಹಲಕರ ಸಂಗತಿಗಳಿವು

Drain pipe collapse
ದೇಶ1 hour ago

Drain Pipe collapse: 700 ಮೀಟರ್‌ ಉದ್ದದ ಕಬ್ಬಿಣದ ಪೈಪ್ ಕುಸಿತ; ವಾಹನಗಳು ಸಂಪೂರ್ಣ ಜಖಂ; ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ23 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌