WPL 2023: ಡೆಲ್ಲಿ ಕ್ಯಾಪಿಟಲ್ಸ್​ ಸವಾಲಿಗೆ ಸಜ್ಜಾದ ಯುಪಿ ವಾರಿಯರ್ಸ್​ - Vistara News

ಕ್ರಿಕೆಟ್

WPL 2023: ಡೆಲ್ಲಿ ಕ್ಯಾಪಿಟಲ್ಸ್​ ಸವಾಲಿಗೆ ಸಜ್ಜಾದ ಯುಪಿ ವಾರಿಯರ್ಸ್​

ಮಂಗಳವಾರದ ಮಹಿಳಾ ಪ್ರೀಮಿಯರ್​ ಲೀಗ್​ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಯುಪಿ ವಾರಿಯರ್ಸ್​ ತಂಡಗಳು ಮುಖಾಮುಖಿಯಾಗಲಿವೆ.

VISTARANEWS.COM


on

WPL 2023: UP Warriors ready to challenge Delhi Capitals
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮಹಿಳಾ ಪ್ರೀಮಿಯರ್​ ಲೀಗ್​ನ(WPL 2023) ಬಲಿಷ್ಠ ತಂಡಗಳಾದ ಯುಪಿ ವಾರಿಯರ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು ಇಂದು(ಮಂಗಳವಾರ ಮಾರ್ಚ್​ 7) ಮುಖಾಮುಖಿಯಾಲಿವೆ. ಉಭಯ ತಂಡಗಳು ಆಡಿದ ಮೊದಲ ಪಂದ್ಯದನ್ನು ಗೆದ್ದು ಬೀಗಿದೆ. ಇದೀಗ ತಮ್ಮ ಗೆಲುವಿನ ನಾಗಲೋಟವನ್ನು ಮುಂದುವರಿಸುವ ನಿಟ್ಟಿನಲ್ಲಿ ಈ ಪಂದ್ಯದಲ್ಲಿಯೂ ಶಕ್ತಿ ಮೀರಿ ಪ್ರದರ್ಶನ ತೋರುವ ಸಾಧ್ಯತೆ ಇದೆ.

ಡೆಲ್ಲಿ ಕ್ಯಾಪಿಟಲ್ಸ್​ ಪರ ಕಳೆದ ಆರ್​ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಸ್ಫೋಟಕ ಆಟವಾಡಿದ ಡ್ಯಾಶಿಂಗ್​ ಓಪನರ್​ ಶಫಾಲಿ ವರ್ಮಾ ಮತ್ತು ನಾಯಕಿ ಮೆಗ್​ ಲ್ಯಾನಿಂಗ್​ ಹಾಗೂ ಬೌಲಿಂಗ್​ನಲ್ಲಿ 5 ವಿಕೆಟ್​ ಕಿತ್ತು ಮಿಂಚಿದ ತಾರಾ ನೋರಿಸ್​ ಮೇಲೆ ಈ ಪಂದ್ಯದಲ್ಲಿಯೂ ತಂಡ ಹೆಚ್ಚಿನ ಭರವಸೆ ಇರಿಸಿದೆ. ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೋಡ್ರಿಗಸ್​ ಮತ್ತು ಮರಿಜಯಾನ್​ ಕಾಪ್​ ಬಿರುಸಿನ ಬ್ಯಾಟಿಂಗ್​ ನಡೆಸುವ ಕಾರಣ ತಂಡದ ಬೃಹತ್​ ಮೊತ್ತಕ್ಕೇನು ಅಡ್ಡಿಯಿಲ್ಲ. ಒಟ್ಟಾರೆ ಡೆಲ್ಲಿ ತಂಡ ಸಮರ್ಥವಾಗಿ ಕಾಣಿಸಿಕೊಂಡಿದೆ.

ಇದನ್ನೂ ಓದಿ WPL 2023: ಬೌಂಡರಿ ಲೈನ್​ ಬಳಿ ಭಾಂಗ್ರಾ ನೃತ್ಯ ಮಾಡಿದ ಜೆಮಿಮಾ ರೋಡ್ರಿಗಸ್‌; ವಿಡಿಯೊ ವೈರಲ್​

ಯುಪಿ ವಾರಿಯರ್ಸ್​ ತಂಡವನ್ನು ಕಡೆಗಣಿಸುವಂತಿಲ್ಲ. ಏಕೆಂದರೆ ಅಸಾಧ್ಯವಾದುದನ್ನು ಸಾಧ್ಯ ಎಂದು ತೋರಿಸಿಕೊಡುವಲ್ಲಿ ಯುಪಿ ಎತ್ತಿದ ಕೈ. ಇದಕ್ಕೆ ಕಳೆದ ಗುಜರಾತ್​ ಜೈಂಟ್ಸ್​ ವಿರುದ್ದದ ಪಂದ್ಯವೇ ಉತ್ತಮ ನಿದರ್ಶನ. ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಯುಪಿ 20 ರನ್​ ಗಳಿಸಿದ ವೇಳೆ ಪ್ರಮುಖ ಮೂರು ವಿಕೆಟ್​ ಕಳೆದುಕೊಂಡು ಸೋಲು ಕಾಣುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್​ ನಡೆಸಿದ ಗ್ರೇಸ್​ ಹ್ಯಾರಿಸ್​ ಅಜೇಯ 59 ರನ್​ ಸಿಡಿಸಿ ಯಾರು ಊಹಿಸದ ರೀತಿಯಲ್ಲಿ ತಂಡಕ್ಕೆ ಮೂರು ವಿಕೆಟ್​ಗಳ ರೋಚಕ ಗೆಲುವು ತಂದು ಕೊಟ್ಟರು. ಹೀಗಾಗಿ ಯುಪಿ ಸವಾಲನ್ನು ಕಡೆಗಣಿಸುವಂತಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

IPL 2024: ಆರ್​ಸಿಬಿ ಮುಂದಿನ ಪಂದ್ಯವನ್ನು ಮೇ 9ರಂದು ಪಂಜಾಬ್​ ಕಿಂಗ್ಸ್​ ವಿರುದ್ಧ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಆಡಲಿದೆ. ಈ ಪಂದ್ಯದಲ್ಲಿ ಸೋತರೆ ಆರ್​ಸಿಬಿ ಪ್ಲೇ ಆಫ್​ನಿಂದ ಅಧಿಕೃತವಾಗಿ ಹೊರಬೀಳಲಿದೆ. ಜತೆಗೆ ಆ ಬಳಿಕದ 2 ಪಂದ್ಯಗಳು ಕೇವಲ ಔಪಚಾರಿಕ ಪಂದ್ಯವಾಗಲಿದೆ.

VISTARANEWS.COM


on

IPL 2024
Koo

ಬೆಂಗಳೂರು: ಯುದ್ದ ಮುಗಿದ ಬಳಿಕ ಕೋಟೆಯ ಬಾಗಿಲು ಮುಚ್ಚಿದಂತಾಗಿದೆ ಆರ್​ಸಿಬಿಯ(Royal Challengers Bengaluru) ಸದ್ಯದ ಸ್ಥಿತಿ. ಹೌದು, ಆರಂಭಿಕ ಹಂತದಲ್ಲಿ ಸತತವಾಗಿ ಸೋಲು ಕಂಡು ಪ್ಲೇ ಆಫ್​ನ ಕ್ಷೀಣ ಅವಕಾಶ ಇರುವಾಗ ಇದೀಗ ಸತತವಾಗಿ ಗೆಲುವು ಸಾಧಿಸುತ್ತಿದೆ. ಇದುವರೆಗೂ ಕೊನೆಯ(IPL 2024) ಸ್ಥಾನಿಯಾಗಿದ್ದ ಆರ್​ಸಿಬಿ ಹ್ಯಾಟ್ರಿಕ್​ ಗೆಲುವಿನೊಂದಿಗೆ ಇದೀಗ 7ನೇ ಸ್ಥಾನಕ್ಕೇರಿದೆ. ಸದ್ಯಕ್ಕೆ ಆರ್​ಸಿಬಿಯ ಪ್ಲೇ ಆಫ್​ ಬಾಗಿಲು ಇನ್ನೂ ಮುಚ್ಚಿಲ್ಲ. ಇನ್ನೂ ಕೂಡ ಆರ್​ಸಿಬಿಗೆ ಅವಕಾಶವಿದೆ. ತಂಡದ ಪ್ಲೇ ಆಫ್​ ಲೆಕ್ಕಾಚಾರ(RCB Playoffs calculation) ಹೇಗಿದೆ ಎಂಬ ಮಾಹಿತಿ ಇಂತಿದೆ.

ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ಮತ್ತು ಪವಾಡವೊಂದು ನಡೆದರೆ ಆರ್​ಸಿಬಿಗೆ ಪ್ಲೇ ಆಫ್​ ಟಿಕೆಟ್ ಖಚಿತವಾಗಿ​ ಸಿಗಲಿದೆ. ಈಗಾಗಲೇ 11 ಪಂದ್ಯ ಆಡಿದ್ದು, 4 ಪಂದ್ಯ ಗೆದ್ದು, 7 ಪಂದ್ಯದಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ 8 ಅಂಕ ಸಂಪಾದಿಸಿ 7ನೇ ಸ್ಥಾನದಲ್ಲಿದೆ. ಆರ್​ಸಿಬಿಗೆ ಇನ್ನು ಮೂರು ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಹೀಗಾಗಿ ಉಳಿದಿರುವ ಈ ಎಲ್ಲ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ 14 ಅಂಕ ಲಭಿಸಲಿದೆ. ಆದರೂ ಕೂಡ ಪ್ಲೇ ಆಫ್ ಟಿಕೆಟ್​ ಖಚಿತಗೊಳ್ಳುವುದಿಲ್ಲ. ಇದು ಖಚಿತಗೊಳ್ಳಬೇಕಿದ್ದರೆ, ಆರ್​ಸಿಬಿಗಿಂತ ಮೇಲಿರುವ ತಂಡಗಳು ಸತತ ಸೋಲು ಕಂಡರೆ ಕನಿಷ್ಠ 4ನೇ ಸ್ಥಾನಿಯಾಗಿ ಪ್ಲೇ ಆಫ್ ಗೇರುವ ಸಣ್ಣ ಅವಕಾಶವೊಂದಿದೆ. ಉಳಿದ 3 ಪಂದ್ಯಗಳ ಪೈಕಿ 1 ಪಂದ್ಯವನ್ನು ಆರ್​ಸಿಬಿ ತವರಿನಲ್ಲಿ ಆಡಲಿದೆ. ಇದು ಹಾಲಿ ಚಾಂಪಿಯನ್​ ಚೆನ್ನೈ ವಿರುದ್ಧ.

16 ಅಂಕ ಗಳಿಸಿರುವ ರಾಜಸ್ಥಾನ್​ ತಂಡಕ್ಕೆ ಪ್ಲೇ ಆಫ್​ ಸ್ಥಾನ ಬಹುತೇಕ ಖಚಿತಗೊಂಡಂತಿದೆ. ಅದಲ್ಲದೆ ರಾಜಸ್ಥಾನ್​ಗೆ ಇನ್ನೂ ಕೂಡ 4 ಪಂದ್ಯಗಳು ಬಾಕಿ ಇದೆ. ಇದರಲ್ಲಿ 1 ಪಂದ್ಯ ಗೆದ್ದರೂ ಸಾಕು. ಉಳಿದಿರುವ ಮೂರು ಸ್ಥಾನಗಳಿಗೆ 5 ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದರಲ್ಲಿ ಕೆಕೆಆರ್​ 14 ಅಂಕ ಪಡೆದು 2ನೇ ಸ್ಥಾನಿಯಾಗಿದೆ. ಕೆಕೆಆರ್​ಗೂ ಇನ್ನು 4 ಪಂದ್ಯ ಬಾಕಿ ಉಳಿದಿವೆ. ಲಕ್ನೋ 12 ಅಂಕದೊಂದಿಗೆ ಮೂರನೇ ಸ್ಥಾನಿಯಾಗಿದೆ. ಇಂದು ನಡೆಯುವ ಪಂದ್ಯದಲ್ಲಿ ಕೆಕೆಆರ್​ ಮತ್ತು ಲಕ್ನೋ ಮುಖಾಮುಖಿಯಾಗಲಿವೆ. ಇಲ್ಲಿ ಒಂದು ತಂಡಕ್ಕೆ ಸೋಲು ಖಚಿತ. ಲಕ್ನೋ ಗೆದ್ದರೆ ಆರ್​ಸಿಬಿಗೆ ನಷ್ಟವಾಗಲಿದೆ. ಇನ್ನೊಂದು ಪಂದ್ಯದಲ್ಲಿ ಚೆನ್ನೈ ಮತ್ತು ಪಂಜಾಬ್​ ಆಡಲಿವೆ. ಇಲ್ಲಿ ಚೆನ್ನೈ ಗೆದ್ದರೆ 12 ಅಂಕ ಆಗಲಿವೆ. ಹೈದರಾಬಾದ್​ 12 ಅಂಕದೊಂದಿಗೆ ಸದ್ಯ ಮೂರನೇ ಸ್ಥಾನಿಯಾಗಿದೆ. ಹೀಗಾಗಿ ಈ ಎಲ್ಲ 5 ತಂಡಗಳ ಪೈಕಿ ಕನಿಷ್ಠ ಮೂರು ತಂಡಗಳು ಉಳಿದ ಲೀಗ್​ ಪಂದ್ಯಗಳಲ್ಲಿ ಸೋಲು ಕಂಡರೆ, 14 ಅಂಕದ ಗಡಿ ದಾಟಲು ವಿಫಲರಾದರೆ ಆಗ ಆರ್​ಸಿಬಿಗೆ ಪ್ಲೇ ಆಫ್​ ಅವಕಾಶ ಸಿಗಲಿದೆ. ಒಟ್ಟಾರೆ ಆರ್​ಸಿಬಿಗೆ ಗೆಲುವಿನ ಜತೆಗೆ ಅದೃಷ್ಟ ಕೂಡ ಕೈ ಹಿಡಿಯಬೇಕಿದೆ.

ಇದನ್ನೂ ಓದಿ IPL 2024 Points Table: 7ನೇ ಸ್ಥಾನಕ್ಕೇರಿದ ಆರ್​ಸಿಬಿ; ಮುಂಬೈಗೆ ಕೊನೆಯ ಸ್ಥಾನ

ಆರ್​ಸಿಬಿ ಮುಂದಿನ ಪಂದ್ಯವನ್ನು ಮೇ 9ರಂದು ಪಂಜಾಬ್​ ಕಿಂಗ್ಸ್​ ವಿರುದ್ಧ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಆಡಲಿದೆ. ಈ ಪಂದ್ಯದಲ್ಲಿ ಸೋತರೆ ಆರ್​ಸಿಬಿ ಪ್ಲೇ ಆಫ್​ನಿಂದ ಅಧಿಕೃತವಾಗಿ ಹೊರಬೀಳಲಿದೆ. ಜತೆಗೆ ಆ ಬಳಿಕದ 2 ಪಂದ್ಯಗಳು ಕೇವಲ ಔಪಚಾರಿಕ ಪಂದ್ಯವಾಗಲಿದೆ.

Continue Reading

ಕ್ರಿಕೆಟ್

IPL 2024 Points Table: 7ನೇ ಸ್ಥಾನಕ್ಕೇರಿದ ಆರ್​ಸಿಬಿ; ಮುಂಬೈಗೆ ಕೊನೆಯ ಸ್ಥಾನ

IPL 2024 Points Table: ಇಂದು ನಡೆಯುವ ಡಬಲ್​ ಹೆಡರ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ಹಗಲು ಪಂದ್ಯದಲ್ಲಿ ಮುಖಾಮುಖಿಯಾದರೆ, ರಾತ್ರಿಯ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಮತ್ತು ಕೆಕೆಆರ್​ ಸೆಣಸಾಟ ನಡೆಸಲಿವೆ. ಎಲ್ಲ ನಾಲ್ಕು ತಂಡಗಳಿಗೂ ಪ್ಲೇ ಆಫ್​ ಪ್ರವೇಶದ ನಿಟ್ಟಿನಲ್ಲಿ ಇದು ಮಹತ್ವದ ಪಂದ್ಯವಾಗಿದೆ.

VISTARANEWS.COM


on

IPL 2024 Points Table
Koo

ಬೆಂಗಳೂರು: ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 52ನೇ ಪಂದ್ಯದಲ್ಲಿ ತವರು ತಂಡವಾದ ಆರ್​ಸಿಬಿ(Royal Challengers Bengaluru) 4 ವಿಕೆಟ್​ಗಳಿಂದ ಗುಜರಾತ್ ಟೈಟಾನ್ಸ್​ಗೆ(Gujarat Titans) ಸೋಲಿನ ರುಚಿ ತೋರಿಸಿತು. ಜತೆಗೆ ಅಂಕಪಟ್ಟಿಯಲ್ಲಿಯೂ(IPL 2024 Points Table) ಭಾರೀ ಪ್ರಗತಿ ಸಾಧಿಸಿ ಕೊನೆಯ ಸ್ಥಾನದಿಂದ 7ನೇ ಸ್ಥಾನಕ್ಕೇರಿದೆ. 5 ಬಾರಿಯ ಚಾಂಪಿಯನ್​ ಮುಂಬೈ ಕೊನೆಯ ಸ್ಥಾನಕ್ಕೆ ಕುಸಿದಿದೆ.

​ಇಂದು ನಡೆಯುವ ಡಬಲ್​ ಹೆಡರ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ಹಗಲು ಪಂದ್ಯದಲ್ಲಿ ಮುಖಾಮುಖಿಯಾದರೆ, ರಾತ್ರಿಯ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಮತ್ತು ಕೆಕೆಆರ್​ ಸೆಣಸಾಟ ನಡೆಸಲಿವೆ. ಎಲ್ಲ ನಾಲ್ಕು ತಂಡಗಳಿಗೂ ಪ್ಲೇ ಆಫ್​ ಪ್ರವೇಶದ ನಿಟ್ಟಿನಲ್ಲಿ ಇದು ಮಹತ್ವದ ಪಂದ್ಯವಾಗಿದೆ. ಹೀಗಾಗಿ ಪಂದ್ಯಗಳು ತೀವ್ರ ಪೈಪೋಟಿಯಿಂದ ಕೂಡಿರುವ ಸಾಧ್ಯತೆ ಅಧಿಕವಾಗಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​107314 (+1.098)
ಲಕ್ನೋ​​106412 (+0.094)
ಹೈದರಾಬಾದ್​106512 (+0.072)
ಚೆನ್ನೈ​105510 (+0.627)
ಡೆಲ್ಲಿ115610 (-0.442)
ಆರ್​ಸಿಬಿ11478 (-0.049)
ಪಂಜಾಬ್​10468 (-0.062)
ಗುಜರಾತ್​11478 (-1.320)
ಮುಂಬೈ11386 (-0.356)

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​​ಸಿಬಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಗುಜರಾತ್ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಕಾರಣ 19.3 ಓವರ್​ಗಳಲ್ಲಿ 147 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆರ್​ಸಿಬಿ ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು.

ಇದನ್ನೂ ಓದಿ IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

ಸಾಧಾರಣ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಆರ್​ಸಿಬಿ ಉತ್ತಮ ಆರಂಭವನ್ನೇ ಪಡೆಯಿತು. ಫಾಫ್​ ಡು ಪ್ಲೆಸಿಸ್​ 23 ಎಸೆತಕ್ಕೆ 63 ರನ್ ಬಾರಿಸಿದರು. ಕೇವಲ 3.1 ಓವರ್​ಗಳಲ್ಲಿ 50 ರನ್ ಗಡಿ ದಾಟಿಸಿದ ಕೊಹ್ಲಿ ಮತ್ತು ಫಾಪ್​ ಗೆಲುವು ಸುಲಭ ಎಂದು ಅಂದುಕೊಳ್ಳುವಂತೆ ಮಾಡಿದರು. ಈ ಜೋಡಿ ಮೊದಲ ವಿಕೆಟ್​ಗೆ 5.5 ಓವರ್​ಗಳಲ್ಲಿ 92 ರನ್ ಬಾರಿಸಿತು. ಆದರೆ ಈ ವೇಳೆ ನಾಟಕೀಯ ಕುಸಿತ ಕಂಡು 17 ರನ್​ಗಳಿಗೆ 6 ವಿಕೆಟ್​ ಕಳೆದುಕೊಂಡ ಆರ್​ಸಿಬಿ ಅಭಿಮಾನಿಗಳಿಗೆ ಆತಂಕ ಉಂಟು ಮಾಡಿಯು. ಆದರೆ, ಕೊನೆಯಲ್ಲಿ ಪಿನಿಶರ್ ದಿನೇಶ್ ಕಾರ್ತಿಕ್​ 21 ರನ್ ಹಾಗೂ ಸ್ವಪ್ನಿಲ್​ ಸಿಂಗ್ 15 ರನ್ ಬಾರಿಸಿ ಗೆಲುವು ತಂದುಕೊಟ್ಟರು.

Continue Reading

ಪ್ರಮುಖ ಸುದ್ದಿ

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024: ಪಂದ್ಯದ ನಂತರ ಟೀಕಾಕಾರರ ವಿರುದ್ಧ ಕೊಹ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಂತೆಯೇ ಶನಿವಾರ ನಡೆದ ಆರ್​ಸಿಬಿ ಮತ್ತು ಜಿಟಿ ಪಂದ್ಯಕ್ಕೆ ಮುಂಚಿತವಾಗಿ ಕೊಹ್ಲಿಯ ಪ್ರತಿಕ್ರಿಯೆಗಳ ಬಗ್ಗೆ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಕೊಹ್ಲಿ 118 ಸ್ಟ್ರೈಕ್ ರೇಟ್ ನಲ್ಲಿ ಆಡಿ ನಂತರ 14 ಅಥವಾ 15 ನೇ ಓವರ್​ಗಳಲ್ಲಿ ನಿಧಾನಗೊಳಿಸುವುದನ್ನು ವೀಕ್ಷಕ ವಿವರಣೆಗಾರರು ಪ್ರಶ್ನಿಸಿದ್ದಾರೆ ಅಷ್ಟೆ. ಅದರಲ್ಲಿ ಏನು ತಪ್ಪು ಎಂದು ಎಂದು ಭಾರತೀಯ ದಂತಕಥೆ ಪ್ರಶ್ನಸಿದ್ದಾರೆ.

VISTARANEWS.COM


on

Virat kohli
Koo

ನವದೆಹಲಿ: ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಮಾತನಾಡಿರುವುದಕ್ಕೆ ತಿರುಗೇಟು ಕೊಟ್ಟಿರುವ ಕೊಹ್ಲಿಯ ಬಗ್ಗೆ ಕ್ರಿಕೆಟ್ ದಂತಕತೆ ಸುನಿಲ್​ ಗವಾಸ್ಕರ್​ ಮತ್ತೆ ಕೋಪ ವ್ಯಕ್ತಪಡಿಸಿದ್ದಾರೆ. ಐಪಿಎಲ್​ (IPL 2024) ಪಂದ್ಯಗಳ ಸಮಯದಲ್ಲಿ ವೀಕ್ಷಕ ವಿವರಣೆಗಾರರು ತಮ್ಮ ಮುಂದೆ ನಡೆಯುತ್ತಿರುವುದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ. ಹಾಗೆಂದು ಅವರಿಗೆ ಯಾವುದೇ ದುರುದ್ದೇಶ ಇರುವುದಿಲ್ಲ ಎಂಬುದಾಗಿ ಗವಾಸ್ಕರ್ ಹೇಳಿದ್ದಾರೆ. ಕೊಹ್ಲಿಯ ಸ್ಟ್ರೈಕ್ ರೇಟ್ ಇತ್ತೀಚೆಗೆ ಚರ್ಚೆಯ ವಿಷಯವಾಗಿತ್ತು. ಪವರ್​ಪ್ಲೇ ಓವರ್ಗಳ ನಂತರ ಅವರು ನಿಧಾನವಾಗಿ ಅಡುತ್ತಾರೆ ಎಂದು ಅನೇಕರು ಟೀಕಿಸಿದ್ದಾರೆ. ಏಪ್ರಿಲ್ 28 ರಂದು ಜಿಟಿ ವಿರುದ್ಧ ಕೊಹ್ಲಿ 44 ಎಸೆತಗಳಲ್ಲಿ 70 ರನ್ ಗಳಿಸಿದ್ದು ಅದರಲ್ಲೊಂದು .

ಪಂದ್ಯದ ನಂತರ ಟೀಕಾಕಾರರ ವಿರುದ್ಧ ಕೊಹ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಂತೆಯೇ ಶನಿವಾರ ನಡೆದ ಆರ್​ಸಿಬಿ ಮತ್ತು ಜಿಟಿ ಪಂದ್ಯಕ್ಕೆ ಮುಂಚಿತವಾಗಿ ಕೊಹ್ಲಿಯ ಪ್ರತಿಕ್ರಿಯೆಗಳ ಬಗ್ಗೆ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಕೊಹ್ಲಿ 118 ಸ್ಟ್ರೈಕ್ ರೇಟ್ ನಲ್ಲಿ ಆಡಿ ನಂತರ 14 ಅಥವಾ 15 ನೇ ಓವರ್​ಗಳಲ್ಲಿ ನಿಧಾನಗೊಳಿಸುವುದನ್ನು ವೀಕ್ಷಕ ವಿವರಣೆಗಾರರು ಪ್ರಶ್ನಿಸಿದ್ದಾರೆ ಅಷ್ಟೆ. ಅದರಲ್ಲಿ ಏನು ತಪ್ಪು ಎಂದು ಎಂದು ಭಾರತೀಯ ದಂತಕಥೆ ಪ್ರಶ್ನಸಿದ್ದಾರೆ.

ಸ್ಟ್ರೈಕ್ ರೇಟ್ 118 ಇದ್ದಾಗ ಮಾತ್ರ ವೀಕ್ಷಕ ವಿವರಣೆಗಾರರು ಪ್ರಶ್ನಿಸಿದ್ದರು. ನನಗೆ ಹೆಚ್ಚು ಖಚಿತವಿಲ್ಲ. ನಾನು ಹೆಚ್ಚು ಪಂದ್ಯಗಳನ್ನು ನೋಡುವುದಿಲ್ಲ. ಆದ್ದರಿಂದ ಇತರ ವೀಕ್ಷಕ ವಿವರಣೆಗಾರರು ಬೇರೆ ರೀತಿಯಲ್ಲಿ ಏನು ಹೇಳಿದ್ದಾರೆಂದು ನನಗೆ ತಿಳಿದಿಲ್ಲ. ಆದರೆ ನೀವು 118 ಸ್ಟ್ರೈಕ್ ಹೊಂದಿದ್ದರೆ ಮತ್ತು ನಂತರ 118 ಸ್ಟ್ರೈಕ್ ರೇಟ್ನೊಂದಿಗೆ ಔಟ್ ಆಗಿದ್ದರೆ ಸರಿಯಲ್ಲ. ನನ್ನ ಪ್ರಕಾರ ನಿಮ್ಮದು ಚಪ್ಪಾಳೆಗಾಗಿ ಪ್ರಯತ್ನ ಎಂದು ಗವಾಸ್ಕರ್​ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

ಹೊರಗಿನ ಮಾತುಗಳಿಗೆ ನೀವು ಏಕೆ ಪ್ರತಿಕ್ರಿಯಿಸುತ್ತಿದ್ದೀರಿ?

ಗವಾಸ್ಕರ್ ಅವರು ಕೊಹ್ಲಿಯನ್ನು ಸತತವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೊರಗಿನ ಗದ್ದಲ ಹಾಗೂ ವಿಶ್ಲೇಷಣೆಗೆ ಗಮನ ಹರಿಸುವುದನ್ನೂ ಪ್ರಶ್ನಿಸಿದ್ದಾರೆ. ವೀಕ್ಷಕ ವಿವರಣೆಗಾರರಿಗೆ ಯಾರ ವಿರುದ್ಧವೂ ಯಾವುದೇ ಕಾರ್ಯಸೂಚಿಗಳಿಲ್ಲ ಮತ್ತು ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಭಾರತೀಯ ಕ್ರಿಕೆಟ್ ದಂತಕಥೆ ಹೇಳಿದರು.

“ನೀವು ಯಾವುದೇ ಹೊರಗಿನ ಮಾತುಗಳಿಗೆ ಏಕೆ ಉತ್ತರಿಸುತ್ತಿದ್ದೀರಿ. ನಾವೆಲ್ಲರೂ ಸ್ವಲ್ಪ ಕ್ರಿಕೆಟ್ ಆಡಿದ್ದೇವೆ. ಸಾಕಷ್ಟು ಕ್ರಿಕೆಟ್ ಅಲ್ಲ. ಆದರೆ ನಮಗೆ ಯಾವುದೇ ಕಾರ್ಯಸೂಚಿಗಳಿಲ್ಲ. ನಾವು ಏನನ್ನು ನೋಡುತ್ತೇವೆಯೋ ಅದರ ಬಗ್ಗೆ ಮಾತನಾಡುತ್ತೇವೆ. ನಮಗೆ ಯಾವುದೇ ಇಷ್ಟಗಳು ಮತ್ತು ಇಷ್ಟಪಡದಿರುವಿಕೆಗಳು ಇರಬೇಕಾಗಿಲ್ಲ. ನಮಗೆ ಇಷ್ಟಗಳು ಮತ್ತು ಇಷ್ಟಪಡದಿರುವಿಕೆಗಳು ಇದ್ದರೂ ಉಪಯೋಗವಿಲ್ಲ ಎಂದು ಗವಾಸ್ಕರ್ ಹೇಳಿದರು.

Continue Reading

ಕ್ರೀಡೆ

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

IPL 2024: ಎಂಐ ವಿರುದ್ಧದ ಪಂದ್ಯದ ವೇಳೆ ಮಯಾಂಕ್ ತಂಡಕ್ಕೆ ಮರಳಿದ್ದರು. ಆದರೆ ಗಾಯ ಮತ್ತೆ ಉಲ್ಬಣಗೊಂಡ ಕಾರಣ 3.1 ಓವರ್​ಗಳ ಎಸೆದ ನಂತರ ಮೈದಾನದಿಂದ ಹೊರಗುಳಿಯಬೇಕಾಯಿತು. ಯುವ ಆಟಗಾರನ ಅಭಿಯಾನವು ಮುಗಿದಿದೆ ಎಂದು ಲ್ಯಾಂಗರ್ ಈಗ ಬಹಿರಂಗಪಡಿಸಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಲಕ್ನೊ ಸೂಪರ್​ ಜೈಂಟ್ಸ್​ ವೇಗದ ಬೌಲರ್​​ ಮಯಾಂಕ್ ಯಾದವ್ ಗಾಯದ ಸಮಸ್ಯೆ ಹೆಚ್ಚಾಗಿದ್ದು ಐಪಿಎಲ್​ನ (IPL 2024) ಉಳಿದ ಪಂದ್ಯಗಳಿಂದ ಹೊರಕ್ಕೆ ಉಳಿಯುವಂತಾಗಿದೆ. ಹಿಂದಿನ ಪಂದ್ಯದಲ್ಲಿ ಅರ್ಧದಲ್ಲೇ ಮೈದಾನದಿಂದ ಹೊರಕ್ಕೆ ಹೋಗಿದ್ದ ಅವರು ಐಪಿಎಲ್ 2024 ಋತುವಿನ ಉಳಿದ ಭಾಗವನ್ನು ಕಳೆದುಕೊಳ್ಳಲಿದ್ದಾರೆ ಎಂದು ಎಲ್ಎಸ್​ಜಿ ಕೋಚ್ ಜಸ್ಟಿನ್ ಲ್ಯಾಂಗರ್ ಖಚಿತಪಡಿಸಿದ್ದಾರೆ. ಐಪಿಎಲ್ 2024 ರಲ್ಲಿ ಮಯಾಂಕ್ 2 ಪಂದ್ಯಗಳಲ್ಲಿ 6 ವಿಕೆಟ್ ಪಡೆಯುವ ಮೂಲಕ ತಮ್ಮ ಜೀವನಕ್ಕೆ ಅದ್ಭುತ ಆರಂಭ ನೀಡಿದ್ದರು. ನಂತರ ದೆಹಲಿ ವೇಗಿ ಗಾಯಗೊಂಡು 5 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

ಎಂಐ ವಿರುದ್ಧದ ಪಂದ್ಯದ ವೇಳೆ ಮಯಾಂಕ್ ತಂಡಕ್ಕೆ ಮರಳಿದ್ದರು. ಆದರೆ ಗಾಯ ಮತ್ತೆ ಉಲ್ಬಣಗೊಂಡ ಕಾರಣ 3.1 ಓವರ್​ಗಳ ಎಸೆದ ನಂತರ ಮೈದಾನದಿಂದ ಹೊರಗುಳಿಯಬೇಕಾಯಿತು. ಯುವ ಆಟಗಾರನ ಅಭಿಯಾನವು ಮುಗಿದಿದೆ ಎಂದು ಲ್ಯಾಂಗರ್ ಈಗ ಬಹಿರಂಗಪಡಿಸಿದ್ದಾರೆ. ಮಯಾಂಕ್ ಅವರಿಗೆ ಸ್ಕ್ಯಾನ್ ಮಾಡಲಾಯಿತು ಮತ್ತು ಅವರು ಮೊದಲ ಗಾಯ ಮಾಡಿಕೊಂಡ ಅದೇ ಪ್ರದೇಶದಲ್ಲಿ ಅವರಿಗೆ ಸಣ್ಣ ಗಾಯವಿದೆ ಎಂದು ಎಲ್ಎಸ್​ಜಿ ಕೋಚ್ ಹೇಳಿದರು.

ಇಲ್ಲ, ಅವರು ಪ್ಲೇ-ಆಫ್​ನಲ್ಲಿ ಆಡಬಹುದೆಂದು ನಮ್ಮ ಆಶಾವಾದ ಇಟ್ಟುಕೊಂಡಿದ್ದೆವು. ಆದರೆ ನಾನು ವಾಸ್ತವವಾದಿಯೂ ಹೌದು. ಪಂದ್ಯಾವಳಿಯ ಕೊನೆ ಹಂತಕ್ಕೆ ಬರುವುದು ಅವರಿಗೆ ಕಷ್ಟಕರವಾಗಿರುತ್ತದೆ ಎಂದು ಹೇಳಿದರು.

“ಅವರು (ಮಯಾಂಕ್) ಸ್ಕ್ಯಾನ್ ಮಾಡಿಸಿಕೊಂಡಿದ್ದಾರೆ. ಅವರ ಕೊನೆಯ ಗಾಯ (ಗಾಯ) ಇದ್ದ ಪ್ರದೇಶಕ್ಕೆ ಹೋಲುವ ಪ್ರದೇಶದಲ್ಲಿ ಅವರಿಗೆ ಸಣ್ಣ ಹರಿತ ಕಂಡು ಬಂದಿದೆ. ಇದು ತುಂಬಾ ದುರದೃಷ್ಟಕರ. ಅವರು ಆಟಕ್ಕೆ ಮರಳಿದಾಗ ಅವರು ಬೀರಿದ ಪರಿಣಾಮವನ್ನು ನಾವು ನೋಡಿದ್ದೇವೆ, “ಎಂದು ಲ್ಯಾಂಗರ್ ಹೇಳಿದರು.

ಪಂದ್ಯದ ನಂತರ ಮಯಾಂಕ್ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಮಾತನಾಡಿದ್ದಾರೆ. ಅವರು ವೇಗದ ಬೌಲರ್ ಆಗಲು ಹೊರಟರೆ ಅಂತಹ ಗಾಯಗಳನ್ನು ಎದುರಿಸಬೇಕಾಗುತ್ತದೆ ಹೇಳಿದರು ಎಂದು ಲ್ಯಾಂಗರ್ ಹೇಳಿದರು.

“ವೇಗದ ಬೌಲರ್ಗಳ ಬಗ್ಗೆ ಯಾವಾಗಲೂ ಸಾಕಷ್ಟು ಚರ್ಚೆ ಇರುತ್ತದೆ. ಪಂದ್ಯದ ನಂತರ ಅವರು [ಜಸ್ಪ್ರೀತ್] ಬುಮ್ರಾ ಅವರೊಂದಿಗೆ ಮಾತನಾಡಿದ್ದಾರೆ ಎಂದು ನನಗೆ ತಿಳಿದಿದೆ. ವೇಗದ ಬೌಲರ್ ಆಗಲು ಹೊರಟರೆ ಆಗುವ ಗಾಯವನ್ನು ವಿವರಿಸಿದ್ದಾರೆ. ನನ್ನ ಅನುಭವದಲ್ಲಿ, ಪ್ರತಿಯೊಬ್ಬ ಯುವ ವೇಗದ ಬೌಲರ್, ಬಹುಶಃ ಅವರು 25 ಅಥವಾ 26 ವರ್ಷ ವಯಸ್ಸಿನವರೆಗೆ ವಿಭಿನ್ನ ಗಾಯಗಳನ್ನು ಅನುಭವಿಸಲಿದ್ದಾರೆ. ಇದು ಅತ್ಯಂತ ದುರದೃಷ್ಟಕರ. ಆದಾಗ್ಯೂ ಅವರು ಅಪಾರ ಸಾಮರ್ಥ್ಯವನ್ನು ಹೊಂದಿದ್ದಾರೆ, “ಎಂದು ಲ್ಯಾಂಗರ್ ಹೇಳಿದರು.

ಮಯಾಂಕ್ ಅವರ ವಿಚಾರದಲ್ಲಿ ಎಲ್ಎಸ್ಜಿ ತಂಡದ ಗಾಯ ನಿರ್ವಹಣೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಲ್ಯಾಂಗರ್ ಇದಕ್ಕೆ ಪ್ರತಿಕ್ರಿಯಿಸಿದ್ದು, ಅವರ ಪುನಶ್ಚೇತನವು ಉತ್ತಮವಾಗಿ ಸಾಗಿದೆ ಮತ್ತು ವೇಗಿ ನೋವು ಮುಕ್ತರಾಗಿದ್ದಾರೆ ಎಂದು ಹೇಳಿದರು.

ಅವರ ಪುನಶ್ಚೇತನ ಅತ್ಯುತ್ತಮವಾಗಿತ್ತು. ಅವರು [ಎಂಐ ವಿರುದ್ಧ] ಆಟಕ್ಕೆ ಪ್ರವೇಶಿಸಿದರು. ಪಂದ್ಯಕ್ಕೆ ಮೊದಲು ಒಂದೆರಡು ಸಮಸ್ಯೆಗಳನ್ನು ಹೊಂದಿದ್ದರು. ಸಂಪೂರ್ಣವಾಗಿ ನೋವು ಮುಕ್ತರಾಗಿದ್ದರು. ಆದ್ದರಿಂದ, ಇದು ಅವರಿಗೆ ತುಂಬಾ ಬೇಸರದ ವಿಯ. ಅವರು (ಪಂದ್ಯಾವಳಿಯ ಉಳಿದ ಭಾಗ) ಆಡದಿರುವುದು ಎಲ್ಎಸ್ಜಿಗೆ ನಿರಾಶಾದಾಯಕ ಎಂದು ಹೇಳಿದ್ದಾರೆ.

Continue Reading
Advertisement
Annamalai Biopic Will Be Made In Kollywood Annamalai Biopic Will Be Made In Kollywood Annamalai Biopic Will Be Made In Kollywood
ಕಾಲಿವುಡ್11 mins ago

Annamalai Biopic: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಯೋಪಿಕ್‌ಗೆ ತಮಿಳು ಖ್ಯಾತ ನಟ ನಟನೆ!

IPL 2024
ಕ್ರೀಡೆ20 mins ago

IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

HD Revanna
ಕರ್ನಾಟಕ36 mins ago

HD Revanna: ಎಚ್‌.ಡಿ.ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಇಲ್ಲಿದೆ ಮಾಹಿತಿ

Shreyas Talpade hints his heart attack side effect of Covid vaccine
ಬಾಲಿವುಡ್42 mins ago

Shreyas Talpade: ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್‌ ಕಾರಣವಂತೆ! ನಟ ಹೇಳಿದ್ದೇನು?

IPL 2024 Points Table
ಕ್ರಿಕೆಟ್50 mins ago

IPL 2024 Points Table: 7ನೇ ಸ್ಥಾನಕ್ಕೇರಿದ ಆರ್​ಸಿಬಿ; ಮುಂಬೈಗೆ ಕೊನೆಯ ಸ್ಥಾನ

Blood Pressure
ಆರೋಗ್ಯ52 mins ago

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Prajwal Revanna Case
ಕರ್ನಾಟಕ53 mins ago

Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

Tips To Prevent Curd
ಆಹಾರ/ಅಡುಗೆ1 hour ago

Tips To Prevent Curd: ಮೊಸರು ಹುಳಿಯಾಗದೇ ಇರಲು ಈ ಟಿಪ್ಸ್ ಪಾಲಿಸಿ

Terrorist attack
ದೇಶ1 hour ago

Terrorist Attack: ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ; ಓರ್ವ ಯೋಧ ಹುತಾತ್ಮ, ಐವರ ಸ್ಥಿತಿ ಗಂಭೀರ

HD Revanna
ಕರ್ನಾಟಕ1 hour ago

HD Revanna: ತಡರಾತ್ರಿವರೆಗೂ ರೇವಣ್ಣರನ್ನು ವಿಚಾರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌