Wrestlers Protest: ಸೌರವ್​ ಗಂಗೂಲಿ ಹೇಳಿಕೆಗೆ ತಿರುಗೇಟು ನೀಡಿದ ವಿನೇಶ್‌ ಫೋಗಟ್‌ - Vistara News

ಕ್ರೀಡೆ

Wrestlers Protest: ಸೌರವ್​ ಗಂಗೂಲಿ ಹೇಳಿಕೆಗೆ ತಿರುಗೇಟು ನೀಡಿದ ವಿನೇಶ್‌ ಫೋಗಟ್‌

ಸೌರವ್ ಗಂಗೂಲಿ ಅವರು ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ಬಯಸಿದರೆ ದೆಹಲಿಯ ಜಂತರ್ ಮಂತರ್‌ಗೆ ಕ್ರೀಡಾಪಟುವಾಗಿ ಬರಬಹುದು ಎಂದು ಹೇಳುವ ಮೂಲಕ ವಿನೇಶ್‌ ಫೋಗಟ್‌ ತಿರುಗೇಟು ನೀಡಿದ್ದಾರೆ.

VISTARANEWS.COM


on

jantar mantar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕುಸ್ತಿಪಟುಗಳು ಜಂತರ್‌ಮಂತರ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆ(Wrestlers Protest) ಬಗ್ಗೆ ಟೀಮ್​ ಇಂಡಿಯಾದ ಮಾಜಿ ಆಟಗಾರ ಸೌರವ್​ ಗಂಗೂಲಿ ಅವರು ನೀಡಿದ್ದ ಹೇಳಿಕೆಗೆ ವಿನೇಶ್‌ ಫೋಗಟ್‌​ ಅವರು ತಿರುಗೇಟು ನೀಡಿದ್ದಾರೆ. ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕಿದ್ದರೆ ಪ್ರತಿಭಟನಾ ಸ್ಥಳಕ್ಕೆ ಬರುವಂತೆ ಸೂಚಿಸಿದ್ದಾರೆ.

ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಭಾರತ ಪ್ರಮುಖ ಕುಸ್ತಿಪಟುಗಳು ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ(Wrestlers Protest) ನಡೆಸುತ್ತಿದ್ದಾರೆ. ಇದೇ ವಿಚಾರವಾಗಿ ಪಿಟಿಐ ಸುದ್ದಿ ಸಂಸ್ಥೆ ನಡೆಸಿದ್ದ ಸಂದರ್ಶನವೊಂದರಲ್ಲಿ ಸೌರವ್​ ಗಂಗೂಲಿ ಅವರಿಗೆ ಪ್ರಶ್ನೆಯೊಂದನ್ನು ಕೇಳಲಾಯಿತು. ಇದಕ್ಕೆ ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದ್ದ ಗಂಗೂಲಿ ಅವರು “ಪ್ರತಿಭಟನೆ ಮಾಡಲಿ. ಅಲ್ಲಿ ಏನಾಗುತ್ತಿದೆ ಎಂದು ನನಗೆ ಸಂಪೂರ್ಣ ಜ್ಞಾನವಿಲ್ಲ. ನಾನು ಈ ಬಗ್ಗೆ ಪತ್ರಿಕೆಗಳಲ್ಲಿ ಓದುತ್ತಿದ್ದೇನೆ ಅಷ್ಟೇ. ನಮಗೆ ತಿಳಿದಿರದ ವಿಚಾರದ ಬಗ್ಗೆ ಸುಮ್ಮನೆ ಮಾತನಾಡಿದರೆ ಅದು ತಪ್ಪಾಗುತ್ತದೆ” ಎಂದು ಹೇಳುವ ಮೂಲಕ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದರು.

ಇದನ್ನೂ ಓದಿ Wrestlers Protest: ಕುಸ್ತಿ ಪಟುಗಳ ಪ್ರತಿಭಟನೆ ಬಗ್ಗೆ ಗಂಗೂಲಿ ನೀಡಿದ ಹೇಳಿಕೆಗೆ ನೆಟ್ಟಿಗರ ಆಕ್ರೋಶ

ಇದೀಗ ಗಂಗೂಲಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಪ್ರತಿಭಟನಾನಿರತ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಸೌರವ್ ಗಂಗೂಲಿ ಅವರು ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ಬಯಸಿದರೆ ದೆಹಲಿಯ ಜಂತರ್ ಮಂತರ್‌ಗೆ ಕ್ರೀಡಾಪಟುವಾಗಿ ಬರಬಹುದು ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಬೆದರಿಕೆಯೊಡ್ಡಿದ ಕುಸ್ತಿಪಟುಗಳು

ಬುಧವಾರ ರಾತ್ರಿ ದೆಹಲಿ ಪೊಲೀಸರ ನಡುವೆ ಮಾತಿನ ಚಕಮಕಿ ಮತ್ತು ಹೊಡೆದಾಟ ನಡೆದ ಕಾರಣ ಇಬ್ಬರು ಕುಸ್ತಿಪಟುಗಳು ಗಾಯಗೊಂಡಿದ್ದರು. ಪೊಲೀಸರ ಕೆಟ್ಟ ವರ್ತನೆಯಿಂದ ಆಘಾತಗೊಂಡಿರುವ ಕುಸ್ತಿಪಟುಗಳು ಪದ್ಮಶ್ರೀ ಸಹಿತ ತಾವು ಗಳಿಸಿರುವ ಪದಕಗಳನ್ನು ಸರ್ಕಾರಕ್ಕೆ ಹಿಂದಿರುಗಿಸುವ ಬೆದರಿಕೆಯೊಡ್ಡಿದ್ದಾರೆ. ಇಂತಹ ಅವಮಾನಗಳಿಂದ ನಾವು ದೇಶಕ್ಕಾಗಿ ಗಳಿಸಿರುವ ಗೌರವಗಳು ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ. ನಮಗೆ ನ್ಯಾಯ ಸಿಗುವ ವರೆಗೆ ಇಲ್ಲಿಂದ ತೆರಳುವ ಪ್ರಶ್ನೇಯೇ ಇಲ್ಲ ಪಟ್ಟು ಹಿಡಿದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Viral Video: ವಿಚ್ಛೇದನ ಕೇಸ್​ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ ಎಂದ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ

Viral Video: ಕಳೆದ ಮೂರು ವರ್ಷಗಳಲ್ಲಿ ಪಾಕಿಸ್ತಾನದಲ್ಲಿ ವಿಚ್ಛೇದನ ಪ್ರಮಾಣ ಸುಮಾರು 30 ಪ್ರತಿಶತದಷ್ಟು ಹೆಚ್ಚಳವಾಗಿದೆ. ಮಹಿಳೆಯರು ಕೆಲಸ ಮಾಡಲು ಆರಂಭಿಸಿದ್ದೇ ಇದಕ್ಕೆ ಪ್ರಮುಖ ಕಾರಣ ಎಂದು ಪಾಕಿಸ್ತಾನ ಮಾಜಿ ನಾಯಕ ಸಯೀದ್ ಅನ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

VISTARANEWS.COM


on

viral video
Koo

ಕರಾಚಿ: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಕೇಸ್​ ಹೆಚ್ಚಳವಾಗಲು(Rising divorce rate) ಪ್ರಮುಖ ಕಾರಣ ಏನೆಂಬುದನ್ನು ಪಾಕಿಸ್ತಾನ ಮಾಜಿ ಆಟಗಾರ ಮತ್ತು ನಾಯಕ ಸಯೀದ್ ಅನ್ವರ್(Saeed Anwar) ವಿವರಿಸಿದ್ದಾರೆ. ಮಹಿಳೆಯರು ಕೆಲಸ ಮಾಡಲು ಆರಂಭಿಸಿದ್ದೇ ವಿಚ್ಛೇದನ ಹೆಚ್ಚಳಕ್ಕೆ ಕಾರಣ ಎಂದು ಹೇಳಿದ್ದಾರೆ. ಅವರು ನೀಡಿರುವ ಈ ಹೇಳಿಕೆ ಇದೀಗ ಭಾರೀ ವಿವಾದ ಮತ್ತು ವೈರಲ್(Viral Video) ಆಗಿದೆ.

ಕಳೆದ ಮೂರು ವರ್ಷಗಳಲ್ಲಿ ಪಾಕಿಸ್ತಾನದಲ್ಲಿ ವಿಚ್ಛೇದನ ಪ್ರಮಾಣ ಸುಮಾರು 30 ಪ್ರತಿಶತದಷ್ಟು ಹೆಚ್ಚಳವಾಗಿದೆ. ಮಹಿಳೆಯರ ದುಡಿಯಲು ಆರಂಭಿಸಿದ ಕಾರಣ ಅವರು ಕೂಡ ಆರ್ಥಿಕವಾಗಿ ಸಧೃಡವಾಗಿದ್ದಾರೆ. ಹೀಗಾಗಿ ಅವರು ಮನೆಯ ಮೇಲೆ ನಿಯಂತ್ರಣವನ್ನು ಸಾಧಿಸುತ್ತಾರೆ. ಬೈಗುಳ ಕೇಳಿ ನರಕದಲ್ಲಿ ಜೀವನ ಮಾಡುವುದಕ್ಕಿಂತ, ನಾನೇ ಸಂಪಾದಿಸಬಲ್ಲೆ. ನಾನು ಸ್ವಂತವಾಗಿ ಸಂಸಾರ ನಡೆಸಬಲ್ಲೆ ಎಂಬ ಬಲವಾದ ನಂಬಿಕೆ ಬರುತ್ತದೆ. ಇದೇ ಕಾರಣದಿಂದ ವಿಚ್ಛೇದನ ಪ್ರಮಾಣ ಹೆಚ್ಚಾಗಿದೆ ಎಂದು ಅನ್ವರ್ ಹೇಳಿದರು.

“1.05 ನಿಮಿಷಗಳ ವಿಡಿಯೊದಲ್ಲಿ ಮಾತನಾಡಿದ ಅನ್ವರ್, ನಾನು ಜಗತ್ತಿನ ಹಲವು ರಾಷ್ಟ್ರಗಳಿಗೆ ಪ್ರಯಾಣಿಸಿದ್ದೇನೆ. ನಾನು ಈಗಷ್ಟೇ ಆಸ್ಟ್ರೇಲಿಯಾ, ಯುರೋಪ್‍ನಿಂದ ಹಿಂತಿರುಗುತ್ತಿದ್ದೇನೆ. ಅಲ್ಲಿ ಯುವಕರು ನರಳುತ್ತಿದ್ದಾರೆ. ಕುಟುಂಬಗಳು ಕೆಟ್ಟ ಸ್ಥಿತಿಯಲ್ಲಿವೆ. ದಂಪತಿಗಳು ಜಗಳವಾಡುತ್ತಿದ್ದಾರೆ. ವ್ಯವಹಾರದ ಸ್ಥಿತಿ ತುಂಬಾ ಕೆಟ್ಟದಾಗಿದೆ. ನ್ಯೂಜಿಲ್ಯಾಂಡ್​ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಆಸ್ಟ್ರೇಲಿಯಾದ ಮಾಜಿ ಆಟಗಾರ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಅನ್ವರ್ ಹೇಳಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಅನ್ವರ್ ಹೇಳಿಕೆಗೆ ಅನೇಕರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಮೂಲಭೂತವಾಗಿ ನೀವು ಮಹಿಳೆಯರನ್ನು ಗುಲಾಮರನ್ನಾಗಿ ಮಾಡಬೇಕೆಂದು ಹೇಳುತ್ತಿದ್ದೀರಿ. ಮಹಿಳೆಯರಿಗೂ ರೆಕ್ಕೆಗಳನ್ನು ಬಿಚ್ಚಿ ಹಾರಾಡುವ ಅಕಾಶ ನೀಡಬೇಕು. ಆದರೆ ನೀವು ಅವರನ್ನು ಸಾಕುಪ್ರಾಣಿಗಳಂತೆ ಪುರುಷರಿಗೆ ಸೇವೆ ಸಲ್ಲಿಸಬೇಕೆಂಬ ಮನಸ್ಥಿತಿ ಹೊಂದಿದ್ದೀರಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ Viral Video: ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌.. ಜೊಮ್ಯಾಟೊದಿಂದ ಮತ್ತೊಂದು ಎಡವಟ್ಟು

“ಮಹಿಳೆಯರು ಕೆಲಸ ಮಾಡಲು ಮತ್ತು ಅವರ ಸಾಮರ್ಥ್ಯವನ್ನು ಅರಿತುಕೊಳ್ಳಲು ಸುರಕ್ಷಿತ ವಾತಾವರಣವನ್ನು ಕೇಳುವ ಬದಲು, ಅವರು ಮಹಿಳೆಯರನ್ನು ಮನೆಯಲ್ಲಿಯೇ ಇರಲು ಕೇಳುತ್ತಿದ್ದಾರೆ. ಸಿದ್ಧಾಂತದಲ್ಲಿ ಏನೋ ತಪ್ಪಾಗಿದೆ” ಎಂದು ಮತ್ತೊಬ್ಬ ಮಹಿಳೆ ಕಮೆಂಟ್​ ಮಾಡಿದ್ದಾರೆ. “ ಜಗತ್ತು ಮತಾಂತರಗೊಳ್ಳಬೇಕೆಂದು ಬಯಸುವ ನಿಮ್ಮಿಂದ ಇನ್ನೇನು ನಿರೀಕ್ಷಿಸಬಹುದು. “ಇದು ಮಹಿಳೆಯರಿಗೆ ತುಂಬಾ ಅವಮಾನಕರವಾಗಿದೆ” ಹೀಗೆ ಹಲವು ಮಹಿಳೇಯರು ಅನ್ವರ್​ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿದ್ದರಾಮಯ್ಯ

T20 World Cup 2024: ಸಿಎಂ ಸಿದ್ದರಾಮಯ್ಯ(Siddaramaiah) ಅವರು ಗುರುವಾರ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಹರ್ಷ ವ್ಯಕ್ತಪಡಿಸಿ, ‘ನಂದಿನಿ’ ಲಾಂಛನ ಜಾಗತಿಕ ಬ್ರ್ಯಾಂಡ್‌ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌(T20 World Cup 2024) ಟೂರ್ನಿಯಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ(KMF) ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ‘ನಂದಿನಿ’ ಲಾಂಛನ(nandini milk logo) ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ತಂಡ ಬುಧವಾರ ಬಿಡುಗಡೆ ಮಾಡಿತ್ತು. ಕೆಎಂಎಫ್‌ ಕೇಂದ್ರ ಕಚೇರಿಯಲ್ಲಿ ನಡೆದ ವರ್ಚುವಲ್‌ ಮಾದರಿಯ ಸಭೆಯಲ್ಲಿ ಈ ಜೆರ್ಸಿಯನ್ನು ಬಿಡುಗಡೆಗೊಳಿಸಲಾಗಿತ್ತು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಗುರುವಾರ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಹರ್ಷ ವ್ಯಕ್ತಪಡಿಸಿ, ‘ನಂದಿನಿ’ ಲಾಂಛನ ಜಾಗತಿಕ ಬ್ರ್ಯಾಂಡ್‌ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.

“ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ನಂದಿನಿಯ ಹೆಸರು ರಾರಾಜಿಸಲಿದೆ. ಕನ್ನಡದ ಕಂಪು ಕಂಗೊಳಿಸಲಿದೆ” ಎಂದು ಬಣ್ಣಿಸಿದ್ದಾರೆ.

ಈಗಾಗಲೇ ಮಲೇಷ್ಯಾ, ವಿಯೆಟ್ನಾಂ, ಸಿಂಗಾಪುರ, ಅಮೆರಿಕ, ದುಬೈ, ಯುಎಇ ಸೇರಿ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು.

ಕೆಎಂಎಫ್‌ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ. ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ಇದನ್ನೂ ಓದಿ T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕನ್ನಡ ಮತ್ತು ಇಂಗ್ಲೀಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading

ಕ್ರೀಡೆ

Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

Head Coach: ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಹಲವು ಬಾರಿ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಕೋಚ್ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಯಶಸ್ಸು ಕಂಡಿದ್ದರು. ಹೀಗಾಗಿ ದ್ರಾವಿಡ್​ ಬಳಿಕ ಟೀಮ್​ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್ ಸೂಕ್ತ ಎಂದು ಬಿಸಿಸಿಐ ನಿರ್ಧರಿಸಿತ್ತು. ಆದರೆ ಲಕ್ಷ್ಮಣ್ ಕೂಡಾ ಈ ಹುದ್ದೆಯನ್ನು ಅಲಂಕರಿಸಲು ನಿರಾಕರಿಸಿದ್ದಾರೆ

VISTARANEWS.COM


on

Head Coach
Koo

ಮುಂಬಯಿ: ರಾಹುಲ್​ ದ್ರಾವಿಡ್(Rahul Dravid)​ ಅವರು ಭಾರತ ಕ್ರಿಕೆಟ್​ ತಂಡದ ಮುಖ್ಯ ಹುದ್ದೆಯಲ್ಲಿ(Head Coach) ಮುಂದುವರಿಯಲು ಆಸಕ್ತಿ ತೋರದ ಕಾರಣ ಬಿಸಿಸಿಐ ಹೊಸ ಕೋಚ್​ಗಾಗಿ ಅರ್ಜಿ ಆಹ್ವಾನಿಸಿದೆ. ದ್ರಾವಿಡ್​ ಬಳಿಕ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್​ಸಿಎ) ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್(VVS Laxman) ಅವರು ಮುಂದಿನ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಲಕ್ಷ್ಮಣ್ ಕೂಡಾ ಈ ಹುದ್ದೆಯನ್ನು ಅಲಂಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಕೆಲ ದಿನಗಳ ಹಿಂದೆ ಕೆಲವು ಹಿರಿಯ ಆಟಗಾರರು ಡ್ರಾವಿಡ್​ಗೆ​ ರೆಡ್​ ಬಾಲ್​ ಟೆಸ್ಟ್ ತಂಡದ ಕೋಚ್​ ಆಗಿ ಮುಂದುವರಿಯುವಂತೆ ಮನವಿ ಮಾಡಿದ್ದರು. ಆದರೆ, ದ್ರಾವಿಡ್​ ಇದನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ದ್ರಾವಿಡ್​ ಮೊದಲ ಬಾರಿಗೆ ಭಾರತ ತಂಡ ಮುಖ್ಯ ಕೋಚ್ ಆಗಲು ನಿರಾಸಕ್ತಿ ತೋರಿದ್ದರು. ಆದರೆ ಹಲವರ ಒತ್ತಾಯದ ಮೇರೆಗೆ ಅವರು ಕೋಚ್ ಜವಾಬ್ದಾರಿ ವಹಿಸಿಕೊಂಡಿದ್ದರು. ಇದೀಗ ಅವರು ಎರಡನೇ ಅವಧಿಗೆ ಕೋಚ್ ಆಗಿ ಮುಂದುವರಿಯಲು ಮನಸ್ಸು ಮಾಡಿಲ್ಲ. ಹೀಗಾಗಿ ಬಿಸಿಸಿಐ ವಿದೇಶಿ ಕೋಚ್​ ಬದಲು ಈ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್ ಅವರನ್ನು ಆಯ್ಕೆ ಮಾಡಲು ಮನಸ್ಸು ಮಾಡಿದೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಹಲವು ಬಾರಿ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಕೋಚ್ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. 2022ರಲ್ಲಿ ಜಿಂಬಾಬ್ವೆ ಹಾಗೂ ಐರ್ಲೆಂಡ್ ನಡುವಿನ ಸರಣಿಗೆ ಲಕ್ಷ್ಮಣ್ ಕೋಚ್ ಆಗಿ ಕಾರ್ಯನಿರ್ವಹಿಸಿ ಯಶಸ್ಸು ಕಂಡಿದ್ದರು. ಇವರ ಮಾರ್ಗದರ್ಶನದಲ್ಲೇ ಅಂಡರ್ 19 ವಿಶ್ವ ಕಪ್ ಕೂಡ ಟೀಮ್​ ಇಂಡಿಯಾ ಗೆದ್ದಿತ್ತು. ಹೀಗಾಗಿ ದ್ರಾವಿಡ್​ ಬಳಿಕ ಟೀಮ್​ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್ ಸೂಕ್ತ ಎಂದು ಬಿಸಿಸಿಐ ನಿರ್ಧರಿಸಿತ್ತು. ಇದೀಗ ಲಕ್ಷ್ಮಣ್ ಕೋಚಿಂಗ್​ ಬಗ್ಗೆ ಆಸಕ್ತಿ ಹೊಂದಿಲ್ಲ, ಅವರು ಅರ್ಜಿ ಸಲ್ಲಿಸಲು ಹಿಂದೇಟು ಹಾಕಿದ್ದಾರೆ ಎಂದು ವರದಿಯಾಗಿದೆ.

ಸ್ಪೋರ್ಟ್‌ಸ್ಟಾರ್‌ನ ವರದಿಯ ಪ್ರಕಾರ, ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ರಾಹುಲ್ ದ್ರಾವಿಡ್, ವೈಯಕ್ತಿಕ ಕಾರಣಗಳಿಗಾಗಿ ಇನ್ನು ಮುಂದೆ ಕೋಚ್​ ಹುದ್ದೆಯಲ್ಲಿ ಮತ್ತೊಂದು ವಿಸ್ತರಣೆಯನ್ನು ಬಯಸುವುದಿಲ್ಲ ಎಂದು ಮಂಡಳಿಗೆ ಮೊದಲೇ ತಿಳಿಸಿದ್ದರು. ಆದರೆ ಟಿ20 ವಿಶ್ವಕಪ್​ ತನಕ ತಂಡಕ್ಕೆ ಮಾರ್ಗದರ್ಶನ ಮಾಡುವಂತೆ ಬಿಸಿಸಿಐ ಒತ್ತಾಯಿಸಿದ ಕಾರಣ ದ್ರಾವಿಡ್​ ತಮ್ಮ ಕೋಚಿಂಗ್​ ಅವಧಿಯನ್ನು ಟಿ20 ವಿಶ್ವಕಪ್​ ತನ ಮುಂದುವರಿಸಿದರು. ಇದೀಗ ಟಿ20 ಮುಗಿದ ತಕ್ಷಣ ಅವರು ಈ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಇದೇ ಕಾರಣಕ್ಕೆ ಬಿಸಿಸಿಐ ನೂತನ ಕೋಚ್​ ಹುಡುಕಾಟದಲ್ಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ.

Continue Reading

ಕ್ರೀಡೆ

Virat Kohli: ನಿವೃತ್ತಿಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ ವಿರಾಟ್​ ಕೊಹ್ಲಿ; ಅಭಿಮಾನಿಗಳಿಗೆ ಆತಂಕ

Virat Kohli ಒಬ್ಬ ಕ್ರೀಡಾಪಟು ಇಂದಲ್ಲ ನಾಳೆ ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ. ಆದ್ದರಿಂದಲೇ ನಾನು ಈ ರೀತಿ ಹೆಚ್ಚು ಶ್ರಮವಹಿಸಿ, ಮಿತಿಮೀರಿ ಕೆಲಸ ಮಾಡುತ್ತಿದ್ದೇನೆ. ನೀವೃತ್ತಿಯ ಬಳಿಕ ನಾನು ಸಾಧನೆ ಮಾಡದರ ಕುರಿತು ಚಿಂತಿಸ ಬಾರದು. ಅಂತಹ ಪರಿಸ್ಥಿತಿ ನನಗೆ ಬರಬಾರದು ಎಂದರೆ, ಇಂದು ಅದ್ಭುತ ಆಟ ಆಡಲೇಬೇಕಿದೆ’ ಎಂದು ಹೇಳುವ ಮೂಲಕ ಕೊಹ್ಲಿ ತಮ್ಮ ನಿವೃತ್ತಿ ಬಗ್ಗೆ ಸ್ಪಷ್ಟತೆ ನೀಡಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ, ದಾಖಲೆಗಳ ಸರದಾರ, ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ(Virat Kohli) ನೀಡಿದ ಹೇಳಿಕೆಯೊಂದು ಅವರ ಅಭಿಮಾನಿಗಳಿಗೆ ಭಾರೀ ಆತಂಕ ಉಂಟುಮಾಡುವಂತೆ ಮಾಡಿದೆ. ಹೌದು, ಕೊಹ್ಲಿ ತಮ್ಮ ನಿವೃತ್ತಿ(Virat Kohli restaurant) ವಿಚಾರದ ಬಗ್ಗೆ ಮಾತನಾಡಿದ್ದು, ಒಬ್ಬ ಕ್ರೀಡಾಪಟುವಾದ ಮೇಲೆ ಇಂದಲ್ಲ ನಾಳೆ, ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಕೊಹ್ಲಿಗೆ ಸಕ್ಸಸ್​​ ಹಿಂದೆ ಯಾಕಿಷ್ಟು ಹಸಿವಿನಿಂದ ಓಡುತ್ತಿದ್ದೀರಿ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ಒಬ್ಬ ಕ್ರೀಡಾಪಟು ಇಂದಲ್ಲ ನಾಳೆ ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ. ಆದ್ದರಿಂದಲೇ ನಾನು ಈ ರೀತಿ ಹೆಚ್ಚು ಶ್ರಮವಹಿಸಿ, ಮಿತಿಮೀರಿ ಕೆಲಸ ಮಾಡುತ್ತಿದ್ದೇನೆ. ನೀವೃತ್ತಿಯ ಬಳಿಕ ನಾನು ಸಾಧನೆ ಮಾಡದರ ಕುರಿತು ಚಿಂತಿಸ ಬಾರದು. ಅಂತಹ ಪರಿಸ್ಥಿತಿ ನನಗೆ ಬರಬಾರದು ಎಂದರೆ, ಇಂದು ಅದ್ಭುತ ಆಟ ಆಡಲೇಬೇಕಿದೆ’ ಎಂದು ಹೇಳಿದರು.

‘ನನ್ನ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಬಳಿಕ ನನಗೆ ಯಾವುದೇ ವಿಷಾದ ಇರಬಾರದು. ಖಂಡಿತವಾಗಿ ಆ ರೀತಿ ನಾನು ಮಾಡಿಕೊಳ್ಳುವುದಿಲ್ಲ ಎಂದು ನನಗೆ ಖಾತ್ರಿಯಿದೆ. ಒಮ್ಮೆ ನಾನು ಕ್ರಿಕೆಟ್​ನಿಂದ ದೂರ ಸರಿದರೆ ಖಂಡಿತ ಮತ್ತೆ ನೀವು ನನ್ನನ್ನು ನೋಡೋದಿಲ್ಲ. ನಾನು ಆಡುವ ಕೊನೆವರೆಗೂ ನನ್ನಲ್ಲಿರುವ ಬೆಸ್ಟ್​ ಅನ್ನು ನೀಡಲು ಬಯಸುತ್ತೇನೆ. ಅದೊಂದೇ ನನ್ನನ್ನು ಮುಂದಕ್ಕೆ ಕೊಂಡೊಯ್ಯಲು ಸಾಧ್ಯ’ ಎಂದು ಹೇಳುವ ಮೂಲಕ ತಮ್ಮ ನಿವೃತ್ತಿಯ ಬಗೆಗಿನ ಸ್ಪಷ್ಟತೆಯನ್ನು ತಿಳಿಸಿದರು. ಕೊಹ್ಲಿಯ ಈ ಹೇಳಿಕೆ ಕಂಡು ಅವರ ಅಭಿಮಾನಿಗಳು ಆತಂಕಕ್ಕೆ ಒಳಪಟ್ಟಿದ್ದು, ಶೀಘ್ರದಲ್ಲೇ ಕೊಹ್ಲಿ ನಿವೃತ್ತಿ ಹೇಳಲಿದ್ದಾರಾ? ಎಂದು ಚಿಂತೆ ಪಡುವಂತೆ ಮಾಡಿದೆ.

ಇದನ್ನೂ ಓದಿ Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

ವಿರಾಟ್​ ಕೊಹ್ಲಿ(Virat Kohli) ಅವರು ಇಂಗ್ಲೆಂಡ್​ ವಿರುದ್ಧದ ತವರಿನ ಟೆಸ್ಟ್​ ಸರಣಿ ವೇಳೆ ವೈಯಕ್ತಿಕ ಕಾರಣ ನೀಡಿ ಸರಣಿಯಿಂದ ಹಿಂದೆ ಸರಿದ್ದರು. ಎರಡು ತಿಂಗಳ ಬಿಡುವಿನ ವೇಳೆಯಲ್ಲಿ ಕುಟುಂಬದ ಜತೆ ಅಮೂಲ್ಯ ಸಮಯ ಕಳೆದಿದ್ದರು. ಇದೇ ವಿಚಾರವಾಗಿ ಮಾತನಾಡಿದ್ದ ಕೊಹ್ಲಿ, ‘ಜನರು ನಮ್ಮನ್ನು ಗುರುತಿಸಲು ಸಾಧ್ಯವಾಗದ ಪ್ರದೇಶದಲ್ಲಿ ನಾವಿದ್ದೆವು. ಈ ಎರಡು ತಿಂಗಳ ಕಾಲ ಕುಟುಂಬದೊಂದಿಗೆ ಅತ್ಯಮೂಲ್ಯ ಸಮಯವನ್ನು ಕಳೆದಿದ್ದೇನೆ. ರಸ್ತೆಯಲ್ಲಿ ಓಡಾಡುವಾಗ ಎಲ್ಲರಂತೆ ನಾನೂ ಕೂಡ ಸಾಮಾನ್ಯ ವ್ಯಕ್ತಿಯಾಗಿ ಓಡಾಡಿದ್ದು ನಿಜಕ್ಕೂ ಅದ್ಭುತ ಅನುಭವ. ಇದಕ್ಕಾಗಿ ದೇವರಿಗೆ ಧನ್ಯವಾದ ತಿಳಿಸುತ್ತೇನೆ. ನನ್ನ ಹಾಗೂ ಕುಟುಂಬಕ್ಕೆ ಇದು ಅದ್ಭುತ ಅನುಭವವಾಗಿತ್ತು” ಎಂದು ಹೇಳಿದ್ದರು. ಕುಟುಂಬಕ್ಕೆ ಹೆಚ್ಚಿನ ಒತ್ತು ನೀಡುವ ಕೊಹ್ಲಿ ತಮ್ಮ ನಿವೃತ್ತಿ ಬಳಿಕ ಕುಟುಂಬದ ಜತೆಯೇ ಹೆಚ್ಚಿನ ಕಾಲ ಕಳೆಯಲು ನಿರ್ಧರಿಸಿದಂತಿದೆ. ಇದೇ ಕಾರಣಕ್ಕೆ ಅವರು ನಿಂದ ದೂರ ಸರಿದರೆ ಖಂಡಿತ ಮತ್ತೆ ನೀವು ನನ್ನನ್ನು ನೋಡೋದಿಲ್ಲ ಎಂದು ಹೇಳಿದಂತಿದೆ.

Continue Reading
Advertisement
Karnataka Weather Forecast
ಮಳೆ3 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

BMW X3 xDrive20d
ಪ್ರಮುಖ ಸುದ್ದಿ18 mins ago

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

Most costly medicine
ಆರೋಗ್ಯ20 mins ago

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

Cannes 2024 Fashion celebrities trend
ಫ್ಯಾಷನ್25 mins ago

Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

PM Narendra Modi
ದೇಶ29 mins ago

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

viral video
ಕ್ರಿಕೆಟ್33 mins ago

Viral Video: ವಿಚ್ಛೇದನ ಕೇಸ್​ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ ಎಂದ ಪಾಕ್​ ಕ್ರಿಕೆಟ್​ ತಂಡದ ಮಾಜಿ ನಾಯಕ

Sita Temple
ದೇಶ35 mins ago

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Prajwal Revanna Case pen drive and hard disk were found during the raids in Hassan and Bengaluru
ಕ್ರೈಂ44 mins ago

Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

Chandu Champion Injured Kartik Aaryan looks intense
ಸಿನಿಮಾ49 mins ago

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Money Guide
ಮನಿ-ಗೈಡ್58 mins ago

Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ3 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Suspicious Case
ಬೆಂಗಳೂರು6 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

ಟ್ರೆಂಡಿಂಗ್‌