Wrestlers Protest: ದೇಶಕ್ಕಾಗಿ ಗೆದ್ದ ಪದಕಗಳನ್ನು ಗಂಗಾ ನದಿಯಲ್ಲಿ ಎಸೆಯಲಿರುವ ಕುಸ್ತಿಪಟುಗಳು - Vistara News

ಕ್ರೀಡೆ

Wrestlers Protest: ದೇಶಕ್ಕಾಗಿ ಗೆದ್ದ ಪದಕಗಳನ್ನು ಗಂಗಾ ನದಿಯಲ್ಲಿ ಎಸೆಯಲಿರುವ ಕುಸ್ತಿಪಟುಗಳು

ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ತಾವು ದೇಶಕ್ಕಾಗಿ ಗೆದ್ದ ಪದಕಗಳನ್ನು ಇಂದು(ಮಂಗಳವಾರ) ಹರಿದ್ವಾರದ ಗಂಗಾನದಿಯಲ್ಲಿ ಎಸೆಯುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

VISTARANEWS.COM


on

wrestlers protest latest news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭಾನುವಾರ ಅತ್ಯಂತ ಅಮಾನುಷವಾಗಿ ಬಂಧಿಸಿ ಬಳಿಕ ಬಿಡುಗಡೆಗೊಳಿಸಲಾಗಿತ್ತು. ಈ ಘಟನೆ ನಡೆದ ಬಳಿಕ ಕುಸ್ತಿಪಟುಗಳು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಮತ್ತು ತಾವು ದೇಶಕ್ಕಾಗಿ ಗೆದ್ದ ಪದಕಗಳನ್ನು ಇಂದು(ಮಂಗಳವಾರ) ಹರಿದ್ವಾರದ ಗಂಗಾನದಿಯಲ್ಲಿ ಎಸೆಯುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಭಾನುವಾರ ಉದ್ಘಾಟನೆಯಾದ ಸಂಸತ್‌ನ ನೂತನ ಕಟ್ಟಡಕ್ಕೆ ಮುತ್ತಿಗೆ ಹಾಕಲು ಯೋಜನೆ ರೂಪಿಸಿದ್ದರು. ಇದೇ ವೇಳೆ ಸಂಸತ್​ ಭವನಕ್ಕೆ ತೆರಳುವ ಸಿದ್ಧತೆಯಲ್ಲಿದ್ದ ಈ ಕುಸ್ತಿಪಟುಗಳನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕುಸ್ತಿಪಟುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ನೂಕು ನುಗ್ಗಲು ಉಂಟಾಯಿತು. ವಿನೇಶ್ ಫೋಗಟ್ ಮತ್ತು ಅವರ ಸೋದರಿ​ ಸಂಗೀತಾ ಫೋಗಟ್​​ ಒಬ್ಬರ ಮೇಲೊಬ್ಬರು ಬಿದ್ದರು. ಆದರೂ ಅವರನ್ನು ಅತ್ಯಂತ ಅಮಾನುಷವಾಗಿ ರಸೆಯಲ್ಲಿ ಎಳೆದಾಡಿ ಬಂಧಿಸಲಾಗಿತ್ತು. ಪೊಲೀಸರ ಈ ನಡೆಗೆ ಟೋಕೊಯೊ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ನೀರಜ್​ ಚೋಪ್ರಾ ಸೇರಿ ದೇಶದ ಅಗ್ರಮಾನ್ಯ ಹಾಲಿ ಮತ್ತು ಮಾಜಿ ಕ್ರೀಡಾಪಟುಗಳು ಖಂಡನೆ ವ್ಯಕ್ತಪಡಿಸಿ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿದ್ದರು.

ಇದನ್ನೂ ಓದಿ Wrestlers Protest : ಕುಸ್ತಿಪಟುಗಳ ಬಂಧನದ ಬಗ್ಗೆ ಒಲಿಂಪಿಕ್‌ ಸ್ಟಾರ್‌ ನೀರಜ್​ ಚೋಪ್ರಾ ಹೇಳಿದ್ದೇನು?

ಈ ಎಲ್ಲ ಘಟನೆ ನಡೆದ ಬಳಿಕ ಮಹತ್ವದ ನಿರ್ಧಾರ ಕೈಗೊಂಡಿರುವ ಕುಸ್ತಿಪಟುಗಳು ಇಂದು(ಮಂಗಳವಾರ) ಸಂಜೆ 6 ಗಂಟೆಗೆ ಪದಕಗಳನ್ನು ಗಂಗಾನದಿಯಲ್ಲಿ ನದಿಯಲ್ಲಿ ವಿಸರ್ಜನೆ ಮಾಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಟ್ವಿಟರ್​ನಲ್ಲಿ ವಿನೇಶ್​ ಫೋಗಟ್​, ಬಜರಂಗ್​ ಪೂನಿಯಾ ಮತ್ತು ಸಾಕ್ಷಿ ಮಲಿಕ್​ ಸುದೀರ್ಘ ಪತ್ರವನ್ನು ಪ್ರಕಟಿಸಿದ್ದಾರೆ. “ಪದಕಗಳನ್ನು ಇಂದು ಸಂಜೆ ಗಂಗಾ ನದಿಗೆ ಎಸೆದ ಬಳಿಕ ಇಂಡಿಯಾ ಗೇಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡಲಿದ್ದೇವೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

IPL 2024: ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧದ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ ಅರ್ಧಶತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತ್ಯಧಿಕ ಬಾರಿ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ತಮ್ಮದಾಗಿಸಿಕೊಂಡರು.

VISTARANEWS.COM


on

IPL 2024
Koo

ನವದೆಹಲಿ: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಬಿರುಸಿನ ಬ್ಯಾಟಿಂಗ್​ ಮೂಲಕ ಸಂಚಲನ ಮೂಡಿಸಿರುವ ಆಸ್ಟ್ರೇಲಿಯಾದ ಬ್ಯಾಟರ್​, ಡೆಲ್ಲಿ(Delhi Capitals) ತಂಡದ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್(Jake Fraser-McGurk) ಐಪಿಎಲ್​ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತ್ಯಧಿಕ ಬಾರಿ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ತಮ್ಮದಾಗಿಸಿಕೊಂಡರು.

ರಾಜಸ್ಥಾನ್​ ರಾಯಲ್ಸ್​ ಎದುರಿನ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ ಕೇವಲ 19 ಎಸೆತಗಳಿಂದ ಅರ್ಧತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆದ ಎದುರಿಸಿ ಅತ್ಯಧಿಕ ಐಪಿಎಲ್​ ಅರ್ಧಶತಕ ಬಾರಿಸಿದ ದಾಖಲೆ ಬರೆದರು. 3 ಬಾರಿ ಮ್ಯಾಕ್‌ಗುರ್ಕ್ ಈ ಸಾಧನೆ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್​ 2 ಬಾರಿ ಈ ಸಾಧನೆ ಮಾಡಿದ್ದಾರೆ. ಕಳೆದ ಮುಂಬೈ ಇಂಡಿಯನ್ಸ್​ ಮತ್ತು ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ 15 ಎಸೆತಗಳಿಂದ ಅರ್ಧಶತಕ ಬಾರಿಸಿದ್ದರು.

20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರು


ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್- 3

ಯಶಸ್ವಿ ಜೈಸ್ವಾಲ್​-2

ನಿಕೋಲಸ್​ ಪೂರನ್​-2

ಇಶಾನ್​ ಕಿಶನ್​-2

ಸುನೀಲ್​ ನರೈನ್​-2

ಕೈರನ್​ ಪೊಲಾರ್ಡ್​-2

ಟ್ರಾವಿಸ್​ ಹೆಡ್​-2​

ಕೆ.ಎಲ್​ ರಾಹುಲ್​-2

ಅರುಣ್​ ಜೇಟ್ಲಿ ಕ್ರಿಕೆಟ್​​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024: ಅಂಪೈರ್​ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ

ಸಂಜು ಸ್ಯಾಮ್ಸನ್​ ಕ್ರೀಸ್​ನಲ್ಲಿರುವ ತನಕ ಪಂದ್ಯ ರಾಜಸ್ಥಾನ್ ಪರವಾಗಿತ್ತು. ಆದರೆ, ಸಂಜು ವಿಕೆಟ್​ ಪತನದ ಬಳಿಕ ಏಕಾಏಕಿ ಕುಸಿತ ಕಂಡ ರಾಜಸ್ತಾನ್​ ಸೋಲಿಗೆ ಸಿಲುಕಿತು. ಕುಲ್​ದೀಪ್​​ ಯಾದವ್​ 25 ರನ್​ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಸಂಜು 46 ಎಸೆತಕ್ಕೆ 86 ರನ್ ಬಾರಿಸಿ ಹೋಪ್​ ಹಿಡಿದ ಸೂಪರ್​ ಕ್ಯಾಚ್​ಗೆ ವಿಕೆಟ್​ ಕೈಚೆಲ್ಲಿದರು.

Continue Reading

ಕ್ರೀಡೆ

Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

Paris Olympics 2024: ಒಲಿಂಪಿಕ್‌ ಜ್ಯೋತಿ ಬುಧವಾರ ಬಂದರು ನಗರ ಮಾರ್ಸೆಗೆ ಬಂದಿಳಿಯಲಿದೆ. 19ನೇ ಶತಮಾನದ ವ್ಯಾಪಾರಿ ಹಡಗು ‘ಬೆಲೆಮ್‌’ನಲ್ಲಿ ಜ್ಯೋತಿ(Olympic flame) ಹಸ್ತಾಂತರ ಪ್ರಕ್ರಿಯೆ ನಡೆಯಲಿದ್ದು ಈ ಹಡಿನಲ್ಲಿ ಒಲಿಂಪಿಕ್‌ ಜ್ಯೋತಿ ಬರುತ್ತಿರುವ ವಿಡಿಯೊವನ್ನು ಒಲಿಂಪಿಕ್‌ ಸಮಿತಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

VISTARANEWS.COM


on

Paris Olympics 2024
Koo

ಪ್ಯಾರಿಸ್‌: ಬಹುನಿರೀಕ್ಷಿತ ಪ್ಯಾರಿಸ್‌ ಒಲಿಂಪಿಕ್ಸ್‌(Paris Olympics 2024) ಟೂರ್ನಿ ಆರಂಭಕ್ಕೆ ಇನ್ನು ಕೆಲವೇ ತಿಂಗಳು ಮಾತ್ರ ಬಾಕಿ ಉಳಿದಿವೆ. ಈ ಮಹೋನ್ನತ ಕ್ರೀಡಾಕೂಟವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಇಡೀ ಪ್ಯಾರಿಸ್​ ಸರ್ವ ಸನ್ನದ್ದವಾಗಿದೆ. ಇದೀಗ ಒಲಿಂಪಿಕ್‌ ಜ್ಯೋತಿ ಬುಧವಾರ ಬಂದರು ನಗರ ಮಾರ್ಸೆಗೆ ಬಂದಿಳಿಯಲಿದೆ. 19ನೇ ಶತಮಾನದ ವ್ಯಾಪಾರಿ ಹಡಗು ‘ಬೆಲೆಮ್‌’ನಲ್ಲಿ ಜ್ಯೋತಿ(Olympic flame) ಹಸ್ತಾಂತರ ಪ್ರಕ್ರಿಯೆ ನಡೆಯಲಿದ್ದು ಈ ಹಡಿನಲ್ಲಿ ಒಲಿಂಪಿಕ್‌ ಜ್ಯೋತಿ ಬರುತ್ತಿರುವ ವಿಡಿಯೊವನ್ನು ಒಲಿಂಪಿಕ್‌ ಸಮಿತಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

ಒಲಿಂಪಿಕ್‌ ಜ್ಯೋತಿ ಫ್ರಾನ್ಸ್‌ನಲ್ಲಿ ಮತ್ತು ಫ್ರೆಂಚ್‌ ನೇರ ಆಡಳಿತದ ದೇಶಗಳ ರಸ್ತೆಗಳಲ್ಲಿ ಒಟ್ಟು 12,000 ಕಿ.ಮೀ. (7,500 ಮೈಲಿ) ದೂರ ಸಂಚರಿಸಲಿದೆ. ಒಲಿಂಪಿಕ್ಸ್‌ ನೂರು ವರ್ಷಗಳ ನಂತರ ಪ್ಯಾರಿಸ್‌ಗೆ ಹಿಂತಿರುಗುತ್ತಿದೆ. ಈ ಹಿಂದೆ 1924 ಮತ್ತು 1900ರಲ್ಲಿ ನಡೆದ ಕ್ರೀಡೆಗಳ ಆತಿಥ್ಯವನ್ನು ಪ್ಯಾರಿಸ್‌ ವಹಿಸಿತ್ತು. 12 ದಿನಗಳ ಹಿಂದೆ ಗ್ರೀಸ್‌ನಿಂದ ಹೊರಟ ವಾಣಿಜ್ಯ ನೌಕೆ ಬೆಲೆಮ್‌, ಬುಧವಾರ ಮಾರ್ಸೆಗೆ ತಲುಪಲಿದೆ. ‌ಬೆಲೆಮ್‌ ನೌಕೆ ಬಂದರು ಪ್ರವೇಶಿಸುವಾಗ ಇತರ 1000 ದೋಣಿಗಳು ಜತೆಯಾಗಲಿವೆ. ಕಾರ್ಯಕ್ರಮಕ್ಕೆ 6000 ಮಂದಿ ಭದ್ರತಾ ಸಿಬ್ಬಂದಿ ಕಣ್ಗಾವಲು ಏರ್ಪಡಿಸಲಾಗಿದೆ.

ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ


ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ ಆಗಸ್ಟ್‌ 28 ರಿಂದ ಸೆಪ್ಟೆಂಬರ್‌ 8ರವರೆಗೆ ನಿಗದಿಯಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಇದನ್ನೂ ಓದಿ Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

ಬೋಟ್‌ಗಳಲ್ಲೇ ಪರೇಡ್‌


ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಸಾರ್ವಜನಿಕ ನಿಧಿಯಿಂದ ಸ್ವಚ್ಛಗೊಂಡ ನದಿ

ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ. ಕಳೆದ ವಾರ ಕ್ರೀಡಾಪಟುಗಳು ಉಳಿದುಕೊಳ್ಳಲು ನಿರ್ಮಿಸಲಾಗಿರುವ ಕ್ರೀಡಾಗ್ರಾಮವನ್ನು ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮಾಕ್ರನ್‌ ಅವರು ಪರಿಶೀಲಿಸಿದ್ದರು. ಈ ವೇಳೆ ಅವರು ಸೀನ್​ ನದಿ ಸ್ವಚ್ಛಗೊಂಡಿದ್ದು, ತಾನು ಕೂಡ ಈ ನದಿಯಲ್ಲಿ ಈಜುವುದಾಗಿ ಭರವಸೆ ನೀಡಿದ್ದರು.

Continue Reading

ಕ್ರೀಡೆ

Shakib Al Hasan: ಸೆಲ್ಫಿ ತೆಗೆಯಲು ಬಂದ ಅಭಿಮಾನಿಗೆ ಥಳಿಸಲು ಮುಂದಾದ ಶಕಿಬ್; ವಿಡಿಯೊ ವೈರಲ್​

Shakib Al Hasan: ಶೇಖ್ ಜಮಾಲ್ ಧನ್ಮೊಂಡಿ ಕ್ಲಬ್ ಪರವಾಗಿ ಆಡುತ್ತಿರುವ ಶಕೀಬ್​ ಪಂದ್ಯಕ್ಕೂ ಮುನ್ನ ಸಹ ಆಟಗಾರರ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ಬಂದು ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಈ ಅಭಿಮಾನಿಯನ್ನು ಕಂಡ ಕೂಡಲೇ ಕೆರಳಿದ ಶಕೀಬ್ ಕುತ್ತಿಗೆಗೆ ಕೈಹಾಕಿ ಹೊಡೆಯಲು ಮುಂದಾಗಿದ್ದಾರೆ. ಈ ವಿಡಿಯೊ ಇದೀಗ ವೈರಲ್​ ಆಗುತ್ತಿದೆ.

VISTARANEWS.COM


on

Shakib Al Hasan
Koo

ಢಾಕಾ: ಬಾಂಗ್ಲಾದೇಶದ ಕ್ರಿಕೆಟ್​ ತಂಡದ ಹಿರಿಯ ಆಲ್​ರೌಂಡರ್​ ಶಕಿಬ್ ಅಲ್ ಹಸನ್‌(Shakib Al Hasan) ತಾಳ್ಮೆ ಕಳೆದುಕೊಂಡು, ಅಂಪೈರ್​ಗಳ ಜತೆ ಮತ್ತು ಅಭಿಮಾನಿಗಳ ನಡುವೆ ಈಗಾಗಲೇ ಹಲವು ಬಾರಿ ಕಿರಿಕ್​ ಮಾಡಿಕೊಂಡು ಸುದ್ದಿಯಾಗಿದ್ದರು. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಸೆಲ್ಫಿ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಶಕಿಬ್​ ಥಳಿಸಲು ಮುಂದಾಗಿದ್ದಾರೆ. ಈ ವಿಡಿಯೊ ವೈರಲ್(Video Viral)​ ಆಗಿದ್ದು ಶಕಿಬ್​​ ವರ್ತನೆ ಬಗ್ಗೆ ಅನೇಕ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಕಣ್ಣಿನ ದೃಷ್ಟಿ ಸಮಸ್ಯೆಗೆ ಒಳಗಾಗಿದ್ದ ಶಕೀಬ್​ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬಹುದಿನಗಳ ವಿಶ್ರಾಂತಿ ಪಡೆದಿದ್ದರು. ಇದೇ ಜೂನ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಆಡುವ ಸಲುವಾಗಿ ಢಾಕಾ ಪ್ರೀಮಿಯರ್ ಲೀಗ್​ನಲ್ಲಿ ಆಡಲಿಳಿದಿದ್ದಾರೆ.

ಶೇಖ್ ಜಮಾಲ್ ಧನ್ಮೊಂಡಿ ಕ್ಲಬ್ ಪರವಾಗಿ ಆಡುತ್ತಿರುವ ಶಕೀಬ್​ ಪಂದ್ಯಕ್ಕೂ ಮುನ್ನ ಸಹ ಆಟಗಾರರ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ಬಂದು ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಈ ಅಭಿಮಾನಿಯನ್ನು ಕಂಡ ಕೂಡಲೇ ಕೆರಳಿದ ಶಕೀಬ್, ಇಲ್ಲ ಫೋಟೊ ತೆಗೆಸಿಕೊಳ್ಳಲ್ಲ ಇಲ್ಲಿಂದ ಹೋಗು ಎಂದು ​ಸೂಚನೆ ನೀಡಿದ್ದಾರೆ. ಆದರೂ ಕೂಡ ಅಭಿಮಾನಿ ಮತ್ತೆ ಮತ್ತೆ ಫೋಟೊ ತೆಗೆಯಲು ಒತ್ತಾಯಿಸಿದಾಗ, ಅವರ ಕುತ್ತಿಗೆಗೆ ಕೈಹಾಕಿದ ಶಾಕಿಬ್ ಹೊಡೆಯಲು ಮುಂದಾದರು. ಈ ವಿಡಿಯೊ ಇದೀಗ ವೈರಲ್​ ಆಗುತ್ತಿದೆ.

ಶಕಿಬ್‌ ಅವರು ಈ ರೀತಿ ತಾಳ್ಮೆ ಕಳೆದುಕೊಂಡಿರುವುದು ಇದೇ ಮೊದಲೇನಲ್ಲ ಹಲವು ಬಾರಿ ಅವರು ಮೈದಾನದಲ್ಲಿ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಅಂಪೈರ್‌ ಅವರೊಂದಿಗೆ ಶಕಿಬ್‌ ಹಲವು ಬಾರಿ ವಾಗ್ವಾದಕ್ಕೆ ಇಳಿದ ಹಲವು ನಿದರ್ಶನಗಳಿವೆ. ಕಳೆದ ಬಾರಿಯ ಬಾಂಗ್ಲಾ ಪ್ರೀಮಿಯರ್​ ಲೀಗ್​ನಲ್ಲಿ ಅಂಪೈರ್​ ಅವರು ಔಟ್​ ನೀಡಿಲ್ಲ ಎಂಬ ಕಾರಣಕ್ಕೆ ಶಬಿಕ್​ ವಿಕೆಟ್​ಗೆ ಕಾಲಿನಿಂದ ಒದ್ದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ Shakib Al Hasan : ರಾಜಕೀಯ ಆಟದಲ್ಲಿ ಗೆಲುವು ಕಂಡ ಶಕಿಬ್ ಅಲ್ ಹಸನ್​

ಹಿಂದೊಮ್ಮೆ ಜಾಹೀರಾತು ಪ್ರಚಾರದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಶಕಿಬ್‌ ಸಾಗುವ ಮಾರ್ಗದಲ್ಲಿ ಅನೇಕ ಕ್ರೀಡಾಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಅಭಿಮಾನಿಯೊಬ್ಬ ಗುಂಪಿನ ಮಧ್ಯೆಯಿಂದ ಫೋಟೊ ತೆಗೆಯಲು ಮುಂದಾಗಿದ್ದ ಇದರಿಂದ ಸಿಟ್ಟಿಗೆದ್ದ ಶಕೀಬ್​ತಲೆಯಿಂದ ಕ್ಯಾಪ್​ ಎಳೆದಿದ್ದರು. ಅಲ್ಲದೆ ಕ್ಯಾಪ್‌ ನಿಂದಲೇ ಒಂದೆರಡು ಬಾರಿ ಥಳಿಸಿದ್ದರು. 

Continue Reading

ಕ್ರೀಡೆ

IPL 2024: ಅಂಪೈರ್​ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ

IPL 2024: ಐಪಿಎಲ್​ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ ಶೇ.30ರ ಅನ್ವಯದಲ್ಲಿ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಜತೆಗೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ಮ್ಯಾಚ್ ರೆಫ್ರಿ ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ಮತ್ತೆ ಸಂಜು ಈ ರೀತಿಯ ತಪ್ಪು ಮಾಡಿದರೆ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಬೇಕಾಗುತ್ತದೆ.

VISTARANEWS.COM


on

IPL 2024
Koo

ನವದೆಹಲಿ: ಮಂಗಳವಾರ ರಾತ್ರಿ ನಡೆದ ಐಪಿಎಲ್​ನ 56ನೇ ಪಂದ್ಯದಲ್ಲಿ(IPL 2024) ರಾಜಸ್ಥಾನ್​ ರಾಯಲ್ಸ್​(Rajasthan Royals) ಮತ್ತು ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ್​ ನಾಯಕ ಸಂಜು ಸ್ಯಾಮ್ಸನ್(Sanju Samson)​ ತಮ್ಮ ವಿವಾದಾತ್ಮಕ ಕ್ಯಾಚ್​ಗೆ ಔಟ್​ ನೀಡಿದ್ದಕ್ಕಾಗಿ ಅಂಪೈರ್​ ಜತೆ ವಾಗ್ವಾದ ನಡೆಸಿದ್ದರು. ಈ ತಪ್ಪಿಗಾಗಿ ಸಂಜುಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ.

ಐಪಿಎಲ್​ನಲ್ಲಿ 14 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ ಶೇ.30ರ ಅನ್ವಯದಲ್ಲಿ 30 ಲಕ್ಷ ರೂ. ದಂಡ ಪಾವತಿಸಬೇಕಿದೆ. ಜತೆಗೆ ಇಂತಹ ತಪ್ಪುಗಳನ್ನು ಪುನರಾವರ್ತಿಸದಂತೆ ಮ್ಯಾಚ್ ರೆಫ್ರಿ ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ಮತ್ತೆ ಸಂಜು ಈ ರೀತಿಯ ತಪ್ಪು ಮಾಡಿದರೆ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಬೇಕಾಗುತ್ತದೆ.

ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಸ್ಯಾಮ್ಸನ್ 16ನೇ ಓವರ್​ನ 4ನೇ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದ್ದರು. ಬೌಂಡರಿ ಲೈನ್​ನಲ್ಲಿದ್ದ ಶಾಯ್ ಹೋಪ್ ಅವರು ಈ ಕ್ಯಾಚ್​ ಪಡೆದರು. ಹೋಪ್​ ಕಾಲು ಬೌಂಡರಿ ಲೈನ್​ಗೆ ತಗುಲಿದಂತೆ ಕಂಡು ಬಂದ ಕಾರಣ ಮೂರನೇ ಅಂಪೈರ್​ ಇದನ್ನು ಪರೀಕ್ಷಿಸಿದ ಬಳಿಕ ಔಟ್​ ಎಂದು ತೀರ್ಪು ನೀಡಿದರು. ಈ ವೇಳೆ ಸಂಜು ಮರು ತೀರ್ಪನ್ನು ಮರು ಪರಿಶೀಲಿಸುವಂತೆ ಫೀಲ್ಡ್ ಅಂಪೈರ್ ಜತೆ ವಾಗ್ವಾದ ನಡೆಸಿದರು. ಅಂಪೈರ್​ ತಮ್ಮ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರೂ ಕೂಡ ಸಂಜು ಇದಕ್ಕೆ ಒಪ್ಪದೆ ಅಂಪೈರ್​ ಜತೆ ವಾಗ್ವಾದ ನಡೆಸಿದರು. ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಮೊದಲ ಹಂತದ ಅಪರಾಧವಾಗಿದೆ. ಹೀಗಾಗಿ ಅವರಿಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್​ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ IPL 2024 Points Table: ಡೆಲ್ಲಿಗೆ ಗೆಲುವು ಅಂಕಪಟ್ಟಿಯಲ್ಲಿ ಕುಸಿತ ಕಂಡ ಲಕ್ನೋ

ಸಂಜು ಸ್ಯಾಮ್ಸನ್​ ಕ್ರೀಸ್​ನಲ್ಲಿರುವ ತನಕ ಪಂದ್ಯ ರಾಜಸ್ಥಾನ್ ಪರವಾಗಿತ್ತು. ಆದರೆ, ಸಂಜು ವಿಕೆಟ್​ ಪತನದ ಬಳಿಕ ಏಕಾಏಕಿ ಕುಸಿತ ಕಂಡ ರಾಜಸ್ತಾನ್​ ಸೋಲಿಗೆ ಸಿಲುಕಿತು. ಕುಲ್​ದೀಪ್​​ ಯಾದವ್​ 25 ರನ್​ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಸಂಜು 46 ಎಸೆತಕ್ಕೆ 86 ರನ್ ಬಾರಿಸಿ ಹೋಪ್​ ಹಿಡಿದ ಸೂಪರ್​ ಕ್ಯಾಚ್​ಗೆ ವಿಕೆಟ್​ ಕೈಚೆಲ್ಲಿದರು.

ಅರುಣ್​ ಜೇಟ್ಲಿ ಕ್ರಿಕೆಟ್​​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

Continue Reading
Advertisement
Fried Oil
ಆರೋಗ್ಯ8 mins ago

Fried Oil: ಒಮ್ಮೆ ಕರಿದ ಎಣ್ಣೆಯನ್ನು ಮತ್ತೊಮ್ಮೆ ಬಳಸಬಹುದೆ?

IPL 2024
ಕ್ರೀಡೆ19 mins ago

IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

Akshaya Tritiya Jewellery
ಫ್ಯಾಷನ್38 mins ago

Akshaya Tritiya Jewellery: ಅಕ್ಷಯ ತೃತೀಯಕ್ಕೆ ಬಂದಿವೆ ವೈವಿಧ್ಯಮಯ ಫ್ಯಾಷನ್‌ ಜ್ಯುವೆಲರಿಗಳು!

Narendra Modi
ದೇಶ42 mins ago

Narendra Modi: ಅಂಬಾನಿ, ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ; ಮೋದಿ ತಿರುಗುಬಾಣ!

Apple New Products
ಗ್ಯಾಜೆಟ್ಸ್47 mins ago

Apple New Products: ಐಪ್ಯಾಡ್ ಪ್ರೊನಿಂದ ಪೆನ್ಸಿಲ್ ಪ್ರೊವರೆಗೆ; 2024ರ ಆಪಲ್‌ ಹೊಸ ಉತ್ಪನ್ನಗಳಿವು

State Education Policy
ಕರ್ನಾಟಕ50 mins ago

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

Actor Ravichandran female lead in ravichandrans premaloka 2
ಸ್ಯಾಂಡಲ್ ವುಡ್53 mins ago

Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

Prajwal Revanna Case Two additional SPPs appointed for SIT cases
ಕ್ರೈಂ56 mins ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

Paris Olympics 2024
ಕ್ರೀಡೆ1 hour ago

Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

Chicken Shawarma
ಪ್ರಮುಖ ಸುದ್ದಿ2 hours ago

Chicken Shawarma: ಬೀದಿ ಬದಿ ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು; ಚಿಕನ್‌ ಪ್ರಿಯರೇ ಎಚ್ಚರ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ21 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ24 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌