ICC Test Ranking : ಮತ್ತೆ ಮತ್ತೆ ಎಡವಟ್ಟು, ಟೆಸ್ಟ್​​ ರ‍್ಯಾಂಕಿಂಗ್​​ನಲ್ಲಿ ಭಾರತವನ್ನು ಮೇಲಕ್ಕೇರಿಸಿ, ಕೆಳಕ್ಕಿಳಿಸಿದ ಐಸಿಸಿ - Vistara News

ಕ್ರಿಕೆಟ್

ICC Test Ranking : ಮತ್ತೆ ಮತ್ತೆ ಎಡವಟ್ಟು, ಟೆಸ್ಟ್​​ ರ‍್ಯಾಂಕಿಂಗ್​​ನಲ್ಲಿ ಭಾರತವನ್ನು ಮೇಲಕ್ಕೇರಿಸಿ, ಕೆಳಕ್ಕಿಳಿಸಿದ ಐಸಿಸಿ

ಭಾರತ ಕ್ರಿಕೆಟ್​ ತಂಡವನ್ನು ICC Test Ranking ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆಏರಿಸಿದ ಐಸಿಸಿ ಬಳಿಕ ಕೆಳಕ್ಕೆ ಇಳಿಸಿ ತಪ್ಪು ಸರಿಪಡಿಸಿಕೊಂಡಿದೆ!

VISTARANEWS.COM


on

ICC ODI Ranking
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್​ ಸಮಿತಿ ತನ್ನ ರ‍್ಯಾಂಕ್‌ ಪಟ್ಟಿ (ICC Test Ranking) ಸಿದ್ದಪಡಿಸುವ ವೇಳೆ ಮತ್ತೆ ಮತ್ತೆ ಎಡವಟ್ಟು ಮಾಡುತ್ತಿದೆ. ಕಳೆದ ಬಾರಿ ರ‍್ಯಾಂಕ್‌ ಪಟ್ಟಿ ತಯಾರಿಸುವ ವೇಳೆ ಭಾರತ ತಂಡವನ್ನು ಮೊದಲ ಸ್ಥಾನಕ್ಕೆ ಏರಿಸಿ ಬಳಿಕ ಎರಡನೇ ಸ್ಥಾನಕ್ಕೆ ಇಳಿಸಿತ್ತು. ಈ ಬಾರಿಯೂ ಮತ್ತದೇ ಮಾದರಿಯ ತಪ್ಪು ಮಾಡುವ ಮೂಲಕ ಟೀಕೆಗೆ ಒಳಗಾಗಿದೆ. ಅಂಕಿ ಅಂಶಗಳ ದಾಖಲೆ ಮಾಡುವಲ್ಲಿ ಐಸಿಸಿ ಸೋತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಬುಧವಾರ ಮಧ್ಯಾಹ್ನ (ಫೆಬ್ರವರಿ 15ರಂದು) ಐಸಿಸಿ ತನ್ನ ಟೆಸ್ಟ್​ ರ‍್ಯಾಂಕ್‌ ಪಟ್ಟಿ ಬಿಡುಗಡೆ ಮಾಡಿತ್ತು. ಅದರಲ್ಲಿ ಭಾರತ ತಂಡಕ್ಕೆ 116 ರೇಟಿಂಗ್ ಅಂಕಗಳನ್ನು ನೀಡಿ ಮೊದಲ ಸ್ಥಾನಕ್ಕೆ ಏರಿಸಿತ್ತು. ಮೊದಲ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ತಂಡಕ್ಕೆ 11 ರೇಟಿಂಗ್ಸ್​ ಅಂಕಗಳನ್ನು ಕೊಟ್ಟು ಎರಡನೇ ಸ್ಥಾನಕ್ಕೆ ಇಳಿಸಿತ್ತು. ವಾಸ್ತವದಲ್ಲಿ ಅದು ತಪ್ಪು ಲೆಕ್ಕಾಚಾರ. ಆಸೀಸ್ ಪಡೆ ಭಾರತಕ್ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡಿದೆ. 126 ರೇಟಿಂಗ್​ ಅಂಕಗಳು ಆ ತಂಡಕ್ಕಿದೆ. ಆದರೆ, ಮಾಹಿತಿ ಅಪ್​ಡೇಟ್​ ಮಾಡುವ ವೇಳೆ ಐಸಿಸಿ ಎಡವಟ್ಟು ಮಾಡಿಕೊಂಡಿದೆ. ವಿಷಯ ಗೊತ್ತಾದ ತಕ್ಷಣವೇ ತಪ್ಪು ಸರಿಪಡಿಸಿಕೊಂಡಿದೆ.

ಭಾರತ ತಂಡದ ಮೊದಲ ಸ್ಥಾನಕ್ಕೆ ಏರಿದೆ ಎಂದು ತಿಳಿದುಕೊಂಡ ಭಾರತದ ಕ್ರಿಕೆಟ್ ಅಭಿಮಾನಿಗಳು ಸಂಭ್ರಮಿಸಿದ್ದರು. ಭಾರತ ತಂಡ ಈಗಾಗಲೇ ಟಿ20 ಹಾಗೂ ಏಕ ದಿನ ಮಾದರಿಯಲ್ಲಿ ಮೊದಲ ಸ್ಥಾನದಲ್ಲಿರುವ ಕಾರಣ ಮೂರು ಮಾದರಿಯಲ್ಲಿ ಭಾರತದ್ದೇ ಪಾರುಪತ್ಯ ಎಂದು ಹೇಳಿಕೊಂಡಿದ್ದರು. ಆದರೆ, ಸಂಭ್ರಮ ಎರಡು ಗಂಟೆ ಅವಧಿಯೊಳಗೆ ಕೊನೆಗೊಂಡಿದೆ.

ಇದನ್ನೂ ಓದಿ : David Warner | ನಾನು ಕ್ರಿಮಿನಲ್‌ ಅಲ್ಲ, ನನ್ನ ಮೇಲಿನ ನಿಷೇಧ ಹಿಂದಕ್ಕೆ ಪಡೆಯಿರಿ ಎಂದ ಆಸೀಸ್‌ ಬ್ಯಾಟರ್‌

ಐಸಿಸಿ ಈ ರೀತಿಯ ಎಡವಟ್ಟು ಮಾಡುವುದು ಇದೇ ಮೊದಲಲ್ಲ. ಈ ಹಿಂದೆಯೂ ಟೆಸ್ಟ್​ ರ‍್ಯಾಂಕ್‌ ಪಟ್ಟಿ ಬಿಡುಗಡೆ ಮಾಡುವಾಗ ತಪ್ಪು ಮಾಡಿತ್ತು. ಕ್ರಿಕೆಟ್​ನ ಅಂತಾರಾಷ್ಟ್ರೀಯ ಸಂಸ್ಥೆಯೊಂದರ ನಿರಂತರ ತಪ್ಪಿಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rashid khan 600 wickets: ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ ರಶೀದ್​ ಖಾನ್​; ಮೊದಲ ಸ್ಪಿನ್ನರ್

Rashid khan 600 wickets: ಟಿ20 ವಿಕೆಟ್ ಸಾಧಕರ ಪಟ್ಟಿಯಲ್ಲಿ ಸದ್ಯ ಡ್ವೇನ್ ಬ್ರಾವೊ ಅವರೇ ಅಗ್ರಸ್ಥಾನ ಪಡೆದಿದ್ದಾರೆ. ಅವರು ಒಟ್ಟು 630 ವಿಕೆಟ್​ ಕಬಳಿಸಿದ್ದಾರೆ. ಈ ದಾಖಲೆಯನ್ನು ಮುರಿಯಲು ರಶೀದ್ ಖಾನ್​ಗೆ ಇನ್ನು 31 ವಿಕೆಟ್​ಗಳ ಅಗತ್ಯವಿದೆ.

VISTARANEWS.COM


on

Rashid khan 600 wickets
Koo

ದುಬೈ: ಅಫಘಾನಿಸ್ತಾನ ತಂಡದ ಸ್ಟಾರ್​ ಸ್ಪಿನ್ನರ್ ರಶೀದ್ ಖಾನ್ (Rashid Khan) ಅವರು ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ‘ದಿ ಹಂಡ್ರೆಡ್’ ಕ್ರಿಕೆಟ್​ ಲೀಗ್​ನಲ್ಲಿ 2 ವಿಕೆಟ್ ಕಬಳಿಸುವುದರೊಂದಿಗೆ ರಶೀದ್ ಖಾನ್ ಎಲ್ಲ ಮಾದರಿಯ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್(Rashid khan 600 wickets)​ ಪೂರ್ತಿಗೊಳಿಸಿದ ವಿಶ್ವದ ಮೊದಲ ಸ್ಪಿನ್ನರ್ ಹಾಗೂ 2ನೇ ಬೌಲರ್​​ ಎನಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ್ದ ವಿಶ್ವ ದಾಖಲೆಯನ್ನು ಮೊದಲ ನಿರ್ಮಿಸಿದ್ದು ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ಡ್ವೇನ್ ಬ್ರಾವೊ. ಇದೀಗ ರಶೀದ್​ ಖಾನ್​ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಅತೀ ವೇಗವಾಗಿ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್ ಕಬಳಿಸಿದ ದಾಖಲೆ ರಶೀದ್ ಹೆಸರಿಗೆ ದಾಖಲಾಗಿದೆ. ಬ್ರಾವೊ 545 ಟಿ20 ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದರೆ, ರಶೀದ್​ ಖಾನ್​ ಕೇವಲ 441 ಪಂದ್ಯಗಳನ್ನಾಡಿ ಈ ಮೈಲುಗಲ್ಲು ನಿರ್ಮಿಸಿದ್ದಾರೆ.

ಬ್ರಾವೊ ದಾಖಲೆ ಮುರಿಯಲು 31 ವಿಕೆಟ್​ ಅಗತ್ಯ


ಟಿ20 ವಿಕೆಟ್ ಸಾಧಕರ ಪಟ್ಟಿಯಲ್ಲಿ ಸದ್ಯ ಡ್ವೇನ್ ಬ್ರಾವೊ ಅವರೇ ಅಗ್ರಸ್ಥಾನ ಪಡೆದಿದ್ದಾರೆ. ಅವರು ಒಟ್ಟು 630 ವಿಕೆಟ್​ ಕಬಳಿಸಿದ್ದಾರೆ. ಈ ದಾಖಲೆಯನ್ನು ಮುರಿಯಲು ರಶೀದ್ ಖಾನ್​ಗೆ ಇನ್ನು 31 ವಿಕೆಟ್​ಗಳ ಅಗತ್ಯವಿದೆ. 25 ವರ್ಷದ ರಶೀದ್​ಗೆ ಈ ದಾಖಲೆ ಮುರಿಯುವು ಕಷ್ಟದ ಮಾತಲ್ಲ. ಬ್ರಾವೊ ಈಗಾಗಲೇ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿದ್ದಾರೆ. ರಶೀದ್​ ಇನ್ನೂ ಕನಿಷ್ಠ 10 ವರ್ಷಗಳ ಕಾಲ ಕ್ರಿಕೆಟ್​ ಆಡುವುದರಲ್ಲಿ ಯಾವುದೇ ಅನುಮಾನ ಬೇಡ. ಉಳಿದಂತೆ ಲೆಗ್ ಸ್ಪಿನ್ನರ್ ಇಮ್ರಾನ್ ತಾಹಿರ್ 405 ಪಂದ್ಯಗಳಲ್ಲಿ 502 ವಿಕೆಟ್ ಪಡೆದರೆ, ಶಕೀಬ್ ಅಲ್ ಹಸನ್ 444 ಪಂದ್ಯಗಳಲ್ಲಿ 492 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ Rashid Khan: ರಶೀದ್ ಖಾನ್​ಗೆ ದಂಡ ವಿಧಿಸಿದ ಐಸಿಸಿ, ಅವರು ಮಾಡಿದ ತಪ್ಪೇನು?

ರಶೀದ್ ಖಾನ್ 93 ಅಂತಾರಾಷ್ಟ್ರೀಯ ಟಿ 20 ಪಂದ್ಯಗಳಲ್ಲಿ 14.14 ಸರಾಸರಿ ಮತ್ತು 6.08 ಎಕಾನಮಿ ರೇಟ್​ನಲ್ಲಿ 152 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ 121 ಪಂದ್ಯಗಳಲ್ಲಿ 21.82ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ರಶೀದ್ 2017 ರಿಂದ 2021 ರವರೆಗೆ ಸನ್ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ಪರ ಆಡಿದ್ದರು. ನಂತರ ಗುಜರಾತ್​ ಟೈಟನ್ಸ್ ಸೇರಿಕೊಂಡಿದ್ದಾರೆ.

Continue Reading

ಕ್ರೀಡೆ

Virat Kohli: ಗಂಭೀರ್​ ಮಾರ್ಗದರ್ಶನದಂತೆ ಅತ್ಯಂತ ಜೋಶ್​ನಿಂದ ಬ್ಯಾಟಿಂಗ್​ ಅಭ್ಯಾಸ ನಡೆಸಿದ ಕೊಹ್ಲಿ; ಫೋಟೊ ವೈರಲ್​

Virat Kohli: ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್​ ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

VISTARANEWS.COM


on

Virat Kohli
Koo

ಕೊಲಂಬೊ: ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆದ್ದ ಜೋಶ್​ನಲ್ಲಿರುವ ಟೀಮ್​ ಇಂಡಿಯಾ ಇದೀಗ ಏಕದಿನ ಸರಣಿಯನ್ನಾಡಲು ಸಜ್ಜಾಗಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಆಗಸ್ಟ್​ 2ರಂದು ನಡೆಯಲಿದೆ. ಈಗಾಗಲೇ ಲಂಕಾ ತಲುಪಿರುವ ಏಕದಿನ ತಂಡದ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಬುಧವಾರ ವಿರಾಟ್​ ಕೊಹ್ಲಿ(Virat Kohli) ಅವರು ನೂತನ ಕೋಚ್​ ಗೌತಮ್ ಗಂಭೀರ್(Head Coach Gambhir)​ ಜತೆ ಅತ್ಯಂತ ಆತ್ಮೀಯವಾಗಿ ಚರ್ಚಿಸುತ್ತಿರುವುದು ಕಂಡು ಬಂತು. ಈ ಫೋಟೊ(photo viral) ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿರಾಟ್​ ಕೊಹ್ಲಿ ಅವರು ಗಂಭೀರ್(Gautam Gambhir)​ ಜತೆ ಬ್ಯಾಟಿಂಗ್​ ಮಾರ್ಗದರ್ಶನ ಮತ್ತು ಆತ್ಮೀಯವಾಗಿ ಚರ್ಚಿಸುತ್ತಿರುವ ಫೋಟೊವನ್ನು ನೆಟ್ಟಿಗರೊಬ್ಬರು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊ ಕಂಡ ಅನೇಕ ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಗಂಭೀರ್​ ಕೋಚ್​ ಆಗುತ್ತಿದ್ದಂತೆಯೇ ಕೆಲ ನೆಟ್ಟಿಗರು ಗಂಭೀರ್​ ಮತ್ತು ಕೊಹ್ಲಿ ನಡುವಣ ಆನ್ ಫೀಲ್ಡ್ ಜಗಳ ಮತ್ತೆ ಶುರುವಾಗಿ ಇದು ತಂಡಕ್ಕೆ ಭಾದಿಸಲಿದೆ ಎಂದು ಹೇಳಿದ್ದರು. ನೆಟ್ಟಿಗರು ಈ ಮಾತು ಹೇಳಲು ಕೂಡ ಕಾರಣವಿತ್ತು. ಅದೇನೆಂದರೆ, ವಿರಾಟ್​ ಕೊಹ್ಲಿ ಮತ್ತು ಗಂಭೀರ್​ ಐಪಿಎಲ್​ ವೇಳೆ ಹಾವು ಮುಂಗುಸಿಯಂತೆ ಕಿತ್ತಾಡಿಕೊಳ್ಳುತ್ತಿದ್ದರು. ಕಳೆದ ವರ್ಷದ ಐಪಿಎಲ್​ ವೇಳೆ ಕೈ ಕೈ ಮಿಲಾಯಿಸುವ ಹಂತಕ್ಕೂ ಇಬರಿಬ್ಬರ ಜಗಳ ಮುಂದುವರಿದಿತ್ತು. ಕೊಹ್ಲಿಯ ವಿರುದ್ಧ ಹಲವು ಬಾರಿ ಬಹಿರಂಗವಾಗಿ ಮುನಿಸನ್ನು ಕೂಡ ಗಂಭೀರ್ ಪ್ರದರ್ಶಿಸಿದ್ದರು. ಹೀಗಿರುವಾಗ ಇವರಿಬ್ಬರ ಜಗಳ ಮತ್ತೆ ಮುಂದುವರಿದರೆ ತಂಡದ ಒಗ್ಗಟ್ಟು ಇಲ್ಲದಂತಾಗಬಹುದೆಂದು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಇಬರಿಬ್ಬರು ಎಲ್ಲ ಮುನಿಸು ಮರೆತು ಆತ್ಮೀಯವಾಗಿರುವಂತೆ ಕಾಣಿಸಿದೆ.

ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಕೊಹ್ಲಿ ಅವರು ಬಿಸಿಸಿಐ ಬಳಿ ತಾನು ಗಂಭೀರ್ ಜತೆಗೆ ನಡೆಸಿದ ಕಿತ್ತಾಟಗಳನ್ನು ಮರೆತು ಅವರೊಂದಿಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದಾಗಿ, ಗಂಭೀರ್​ ಕೂಡ ತಾನು ಕೊಹ್ಲಿ ಜತೆ ಉತ್ತಮ ಬಾಂಧವ್ಯದೊಂದಿಗೆ ಇರುವುದಾಗಿ ತಿಳಿಸಿದ್ದಾಗಿ ವರದಿಯಾಗಿತ್ತು.

ಇದನ್ನೂ ಓದಿ Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು?

ದಾಖಲೆ ಬರೆಯಲು ಕೊಹ್ಲಿ ಸಜ್ಜು

ವಿರಾಟ್​ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

Continue Reading

ಪ್ರಮುಖ ಸುದ್ದಿ

IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

IND vs SL :ಭಾರತ ತಂಡ ವೈಫಲ್ಯ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 137 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಲಂಕಾ ತಂಡ ನಿಗದಿತ 20 ಓವರ್​ಗಳು ಮುಗಿಯುವ ವೇಳೆ 8 ವಿಕೆಟ್ ಕಳೆದುಕೊಂಡು 137 ರನ್ ಬಾರಿಸಿತು. ಹೀಗಾಗಿ ಫಲಿತಾಂಶಕ್ಕಾಗಿ ಸೂಪರ್ ಓವರ್​ ಮೊರೆ ಹೋಗಲಾಯಿತು. ಮೊದಲು ಬ್ಯಾಟ್ ಮಾಡಿದ ಲಂಕಾ 1 ರನ್ ಬಾರಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ತಮ್ಮ ಅವಕಾಶವನ್ನು ಕೊನೆಗೊಳಿಸಿತು. ಭಾರತ ಪರ ಸೂರ್ಯಕುಮಾರ್ ಮೊದಲ ಎಸೆತಕ್ಕೆ ಫೋರ್ ಬಾರಿಸಿ ಜಯ ತಂದುಕೊಟ್ಟರು.

VISTARANEWS.COM


on

IND vs SL
Koo

ಪಲ್ಲೆಕೆಲೆ: ಮೂರು ಪಂದ್ಯಗಳ ಟಿ20 ಸರಣಿಯ (IND vs SL) ಕೊನೇ ಪಂದ್ಯದಲ್ಲೂ ಭಾರತ ತಂಡ ಶ್ರೀಲಂಕಾ ವಿರುದ್ಧ ಗೆದ್ದಿದೆ. ಅತ್ಯಂತ ರೋಚಕವಾಗಿ ನಡೆದ ಪಂದ್ಯದಲ್ಲಿ ಸೂಪರ್​ ಓವರ್​ ಮೂಲಕ ಭಾರತ ಜಯ ಕಂಡಿದೆ. ನಿಗದಿತ ಓವರ್​ಗಳ ಪಂದ್ಯ ಟೈ ಆದ ಕಾರಣ ಸೂಪರ್ ಓವರ್ ಮೊರೆ ಹೋಗಲಾಯಿತು. ಭಾರತ ಅತ್ಯಂತ ಸುಲಭವಾಗಿ ಪಂದ್ಯವನ್ನು ಗೆದ್ದುಕೊಂಡಿತು. ಅಲ್ಲದೆ, ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿತು. ಈ ಸರಣಿಯ ಮೂಲಕ ನಾಯಕ ಸೂರ್ಯಕುಮಾರ್ ಯಾದವ್​ ಮೊದಲ ಸರಣಿಯಲ್ಲೇ ಯಶಸ್ಸು ಕಂಡರೆ, ಕೋಚ್​ ಗೌತಮ್ ಗಂಭೀರ್​ಗೂ ಶುಭಾರಂಭದ ಸಿಹಿ ದೊರೆಯಿತು.

ಇಲ್ಲಿನ ಪಲ್ಲೆಕೆಲೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ವೈಫಲ್ಯ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 137 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಲಂಕಾ ತಂಡ ನಿಗದಿತ 20 ಓವರ್​ಗಳು ಮುಗಿಯುವ ವೇಳೆ 8 ವಿಕೆಟ್ ಕಳೆದುಕೊಂಡು 137 ರನ್ ಬಾರಿಸಿತು. ಹೀಗಾಗಿ ಫಲಿತಾಂಶಕ್ಕಾಗಿ ಸೂಪರ್ ಓವರ್​ ಮೊರೆ ಹೋಗಲಾಯಿತು. ಮೊದಲು ಬ್ಯಾಟ್ ಮಾಡಿದ ಲಂಕಾ 1 ರನ್ ಬಾರಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ತಮ್ಮ ಅವಕಾಶವನ್ನು ಕೊನೆಗೊಳಿಸಿತು. ಭಾರತ ಪರ ಸೂರ್ಯಕುಮಾರ್ ಮೊದಲ ಎಸೆತಕ್ಕೆ ಫೋರ್ ಬಾರಿಸಿ ಜಯ ತಂದುಕೊಟ್ಟರು.

ಸಾಧಾರಣ ಗುರಿಯನ್ನು ಬೆನ್ನಟ್ಟಿದ ಲಂಕಾ ತಂಡಕ್ಕೆ ಉತ್ತಮ ಆರಂಭ ದೊರಕಿತು. ಮೊದಲ ವಿಕೆಟ್​ಗೆ 58 ರನ್ ಬಾರಿಸಿತು. ಪಾಥುಮ್ ನಿಸ್ಸಾಂಕ 26 ರನ್ ಬಾರಿಸಿದರೆ ಕುಸಾಲ್ ಮೆಂಡಿಸ್​ 43 ರನ್ ಬಾರಿಸಿದರು. ಇವರಿಬ್ಬರ ಆಟದಿಂದಾಗಿ ಲಂಕಾಗೆ ಉತ್ತಮ ಲಾಭ ದೊರಕಿತು. ಬಳಿಕ ಕುಸಾಲ್ ಪೆರೆರಾ 34 ಎಸೆತಕ್ಕೆ 44 ರನ್ ಬಾರಿಸಿ ಗುರಿಯ ಸಮೀಪಕ್ಕೆ ರನ್ ತಂದಿಟ್ಟರು. ವಾನಿಂದು ಹಸರಂಗ 3 ರನ್ ಗೆ ಔಟಾದರೆ ಚರಿತ್ ಅಸಲಂಕಾ ಶೂನ್ಯಕ್ಕೆ ಔಟಾದರು. ಅಲ್ಲಿಂದ ಲಂಕಾ ತಂಡದ ಪತನ ಶುರುವಾಯಿತು.110 ರನ್​ಗೆ 2 ವಿಕೆಟ್ ನಷ್ಟ ಮಾಡಿಕೊಂಡಿದ್ದ ಲಂಕಾ ಮುಂದಿನ 22 ರನ್ ಮಾಡುವಷ್ಟರಲ್ಲಿ 6 ವಿಕೆಟ್ ನಷ್ಟ ಮಾಡಿಕೊಂಡಿತು. ರಿಂಕ ಸಿಂಗ್​, ಸೂರ್ಯಕುಮಾರ್ ಯಾದವ್​, ರವಿ ಬಿಷ್ಣೋಯಿ, ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್ ಉರುಳಿಸಿ ಮಿಂಚಿದರು. ಸೂಪರ್ ಓವರ್​ನಲ್ಲೂ ಬಿಷ್ಣೋಯಿ 2 ವಿಕೆಟ್ ಪಡೆದು ಭಾರತದ ಗೆಲುವನ್ನು ಸುಲಭವಾಗಿಸಿದರು.

ಭಾರತದ ಬ್ಯಾಟಿಂಗ್ ವೈಫಲ್ಯ

ಭಾರತ ತಂಡ ಬ್ಯಾಟಿಂಗ್​ನಲ್ಲಿ ಹೆಚ್ಚು ಪ್ರಭಾವ ಬೀರಲಿಲ್ಲ.. 11 ರನ್​ಗೆ ಮೊದಲ ವಿಕೆಟ್​ ನಷ್ಟ ಮಾಡಿಕೊಂಡಿತು. ಯಶಸ್ವಿ ಜೈಸ್ವಾಲ್​ 10 ರನ್​ಗೆ ಸೀಮಿತಗೊಂಡರು. ಶುಭ್​ಮನ್ ಗಿಲ್​ 39 ರನ್ ಬಾರಿಸಿ ಚೈತನ್ಯ ತಂದರೂ ಅವರಿಗೆ ಹೆಚ್ಚು ಹೊತ್ತು ಇನಿಂಗ್ಸ್ ಮುಂದುವರಿಸಲು ಸಾಧ್ಯವಾಗಲಿಲ್ಲ. ಅವರಿಬ್ಬರು ಔಟಾದ ಬಳಿಕ ಭಾರತ ನಿರಂತರವಾಗಿ ವಿಕೆಟ್ ಕಳೆದುಕೊಂಡಿತು. ಸಂಜು ಸ್ಯಾಮ್ಸನ್​ ಮತ್ತೊಂದು ಬಾರಿ ಶೂನ್ಯಕ್ಕೆ ಔಟಾದರು. ಅವರು ಎರಡನೇ ಪಂದ್ಯದಲ್ಲೂ ಡಕ್​ಔಟ್ ಆಗಿದ್ದರು. ಈ ಮೂಲಕ ಅಭಿಮಾನಿಗಳ ಕೋಪಕ್ಕೆ ಕಾರಣರಾದರು.

ಇದನ್ನೂ ಓದಿ: ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

ನಾಲ್ಕನೇ ಕ್ರಮಾಂಕಕ್ಕೆ ಬಡ್ತಿ ಪಡೆದುಕೊಂಡ ರಿಂಕು ಸಿಂಗ್ ನಿರಾಸೆ ಮೂಡಿಸಿ ಒಂದು ರನ್​ಗೆ ಔಟಾದರು. ಬಳಿಕ ಬಂದ ನಾಯಕ ಸೂರ್ಯಕುಮಾರ್​ ಯಾದವ್ ಕೂಡ 8 ರನ್​ಗೆ ಸೀಮಿತಗೊಂಡರು. ಈ ಪಂದ್ಯದಲ್ಲಿ ತಂಡಕ್ಕೆ ಸೇರ್ಪಡೆಗೊಂಡಿದ್ದ ಶಿವಂ ದುಬೆ 13 ರನ್ ಬಾರಿಸಿ ನಿರ್ಗಮಿಸಿದರು. ಬಳಿಕ ರಿಯಾನ್ ಪರಾಗ್​ 26 ರನ್ ಹಾಗೂ ವಾಷಿಂಗ್ಟನ್ ಸುಂದರ್​ 25 ರನ್ ಬಾರಿಸಿ ಸ್ಪರ್ಧಾತ್ಮಕ ಮೊತ್ತ ಪೇರಿಸಲು ತಂಡಕ್ಕೆ ನೆರವಾದರು.

Continue Reading

ಪ್ರಮುಖ ಸುದ್ದಿ

Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

Rashid Khan : ಬೌಲರ್ ಡಾಟ್ ಬಾಲ್ ಸೇರಿದಂತೆ 20 ಎಸೆತಗಳಲ್ಲಿ ಕೇವಲ 24 ರನ್​ಗಳನ್ನು ಬಿಟ್ಟುಕೊಟ್ಟರು. ಅದೇ ರೀತಿ ಅವರು 9 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 15 ರನ್ ಸಿಡಿಸಿ ಔಟಾದರು. ಮ್ಯಾಂಚೆಸ್ಟರ್​ನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ರಾಕೆಟ್ಸ್ ತಂಡ 145 ರನ್​ಗಳ ಭರ್ಜರಿ ಜಯ ದಾಖಲಿಸಿದೆ. ರಾಕೆಟ್ಸ್ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿತು.

VISTARANEWS.COM


on

Rashid Khan
Koo

ಬೆಂಗಳೂರು: ಪುರುಷರ ಹಂಡ್ರೆಡ್ ಕ್ರಿಕೆಟ್​ ಟೂರ್ನಿಯಲ್ಲಿ ಟ್ರೆಂಟ್ ರಾಕೆಟ್ಸ್ ಮತ್ತು ಮ್ಯಾಂಚೆಸ್ಟರ್ ಒರಿಜಿನಲ್ಸ್ ನಡುವಿನ ಪಂದ್ಯದ ಸಮಯದಲ್ಲಿ ಅಫ್ಘಾನಿಸ್ತಾನದ ಲೆಗ್ ಸ್ಪಿನ್ನರ್ ರಶೀದ್ ಖಾನ್ (Rashid Khan) ಹೊಸ ದಾಖಲೆ ಮಾಡಿದ್ದಾರೆ, ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೋ ನಂತರ ಕ್ರಿಕೆಟ್​​ನಲ್ಲಿ 600 ವಿಕೆಟ್ ಪಡೆದ ಮೊದಲ ಸ್ಪಿನ್ನರ್​​ ಮತ್ತು ಒಟ್ಟಾರೆ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ರಶೀದ್ ಖಾನ್ ಪಾತ್ರರಾಗಿದ್ದಾರೆ.

ರಶೀದ್ ಖಾನ್ ಇತ್ತೀಚಿನ ವರ್ಷಗಳಲ್ಲಿ ವಿವಿಧ ಜಾಗತಿಕ ಲೀಗ್​​ಗಳಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಮೇಜರ್ ಲೀಗ್ ಕ್ರಿಕೆಟ್ (ಎಂಎಸ್​​ಸಿ) 2024 ಋತುವಿನಲ್ಲಿ ಎಂಐ ನ್ಯೂಯಾರ್ಕ್ ಪರ ಆಡಿದ ನಂತರ ಅಫ್ಘಾನಿಸ್ತಾನದ ನಾಯಕ ಟ್ರೆಂಟ್ ರಾಕೆಟ್ಸ್​​ ಸೇರಿ್ದರು. ಈ ವರ್ಷದ ಪುರುಷರ ಹಂಡ್ರೆಡ್​​ನಲ್ಲಿ ತಮ್ಮ ಮೊದಲ ಪ್ರದರ್ಶನದಲ್ಲಿ ಅವರು ಎರಡು ವಿಕೆಟ್​ಗಳನ್ನು ಪಡೆದಿದ್ದಾರೆ.

ಬೌಲರ್ ಡಾಟ್ ಬಾಲ್ ಸೇರಿದಂತೆ 20 ಎಸೆತಗಳಲ್ಲಿ ಕೇವಲ 24 ರನ್​ಗಳನ್ನು ಬಿಟ್ಟುಕೊಟ್ಟರು. ಅದೇ ರೀತಿ ಅವರು 9 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 15 ರನ್ ಸಿಡಿಸಿ ಔಟಾದರು. ಮ್ಯಾಂಚೆಸ್ಟರ್​ನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ರಾಕೆಟ್ಸ್ ತಂಡ 145 ರನ್​ಗಳ ಭರ್ಜರಿ ಜಯ ದಾಖಲಿಸಿದೆ. ರಾಕೆಟ್ಸ್ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿತು.

600 ವಿಕೆಟ್ ಪೂರೈಸಿದ ರಶೀದ್ ಖಾನ್

ಟಿ20 ಕ್ರಿಕೆಟ್​​ನಲ್ಲಿ 600 ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ರಶೀದ್ ಖಾನ್ ಪಾತ್ರರಾಗಿದ್ದಾರೆ. ಅವರು ಈ ಮೈಲಿಗಲ್ಲನ್ನು ಸಾಧಿಸಿದ ಅತ್ಯಂತ ಕಿರಿಯ ಮತ್ತು ವೇಗದ ಕ್ರಿಕೆಟಿಗ. ಅವರು ಕೇವಲ 438 ಇನ್ನಿಂಗ್ಸ್ ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದರು. ಅವರು 18.25 ಸರಾಸರಿ ಮತ್ತು 6.47 ಎಕಾನಮಿ ರೇಟ್​ನಲ್ಲ 600 ವಿಕೆಟ್​ಗಳನ್ನು ಪಡೆದಿದ್ದಾರೆ. 2015 ರಲ್ಲಿ ಟಿ20 ಐ ಗೆ ಪಾದಾರ್ಪಣೆ ಮಾಡಿದಾಗಿನಿಂದ ಅವರು ಸುಮಾರು 20 ತಂಡಗಳಿಗಾಗಿ ಆಡಿದ್ದಾರೆ.

ಡ್ವೇನ್ ಬ್ರಾವೋ 543 ಟಿ20 ಇನ್ನಿಂಗ್ಸ್​​ನಲ್ಲಿ 630 ವಿಕೆಟ್​ಗಳೊಂದಿಗೆ ಬೌಲಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸುನಿಲ್ ನರೈನ್ 519 ಪಂದ್ಯಗಳಲ್ಲಿ 6.12 ಎಕಾನಮಿ ರೇಟ್​ನಲ್ಲಿ 557 ವಿಕೆಟ್ ಉರುಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಅನುಭವಿ ಲೆಗ್ ಸ್ಪಿನ್ನರ್ ಇಮ್ರಾನ್ ತಾಹಿರ್ 405 ಪಂದ್ಯಗಳಲ್ಲಿ 502 ವಿಕೆಟ್ ಪಡೆದರೆ, ಶಕೀಬ್ ಅಲ್ ಹಸನ್ 444 ಪಂದ್ಯಗಳಲ್ಲಿ 492 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

ರಶೀದ್ ಖಾನ್ 93 ಅಂತಾರಾಷ್ಟ್ರೀಯ ಟಿ 20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 14.14 ಸರಾಸರಿ ಮತ್ತು 6.08 ಎಕಾನಮಿ ರೇಟ್ನಲ್ಲಿ 152 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ 121 ಪಂದ್ಯಗಳಲ್ಲಿ 21.82ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ರಶೀದ್ 2017 ರಿಂದ 2021 ರವರೆಗೆ ಸನ್ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ಪರ ಆಡಿದ್ದರು. ನಂತರ ಗುಜರಾತ್​ ಟೈಟನ್ಸ್ ಸೇರಿಕೊಂಡಿದ್ದಾರೆ.

Continue Reading
Advertisement
cm siddaramaiah MUDA scam
ಪ್ರಮುಖ ಸುದ್ದಿ20 mins ago

CM Siddaramaiah: ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ‌ ನೋಟೀಸ್

Students writing SSLC Exam in Examination centre
ಪ್ರಮುಖ ಸುದ್ದಿ43 mins ago

SSLC Exam: ನಾಳೆಯಿಂದ SSLC ಪರೀಕ್ಷೆ-3 ಆರಂಭ; ಎಕ್ಸಾಮ್‌ ತೆಗೆದುಕೊಳ್ಳಲಿರುವ 97,933 ವಿದ್ಯಾರ್ಥಿಗಳು

Health tips Kannada
ಆರೋಗ್ಯ1 hour ago

Health tips Kannada: ವೃತ್ತಿನಿರತ ತಾಯಂದಿರೇ, ಖಿನ್ನತೆ ಆವರಿಸಿಕೊಳ್ಳುವ ಮೊದಲೇ ಎಚ್ಚೆತ್ತುಕೊಳ್ಳಿ!

Vastu Tips
Latest2 hours ago

Vastu Tips: ಮನೆ ಖರೀದಿ ಮಾಡುವಾಗ ಈ ಸಂಗತಿಗಳನ್ನು ತಪ್ಪದೇ ಗಮನಿಸಿ

World Lung Cancer Day
ಆರೋಗ್ಯ2 hours ago

World Lung Cancer Day: ಶ್ವಾಸಕೋಶದ ಕ್ಯಾನ್ಸರ್‌ಗೆ ಪ್ರತಿವರ್ಷ 16 ಲಕ್ಷ ಮಂದಿ ಬಲಿ; ಇದರಿಂದ ಪಾರಾಗುವುದು ಹೇಗೆ?

ಮಳೆ2 hours ago

Karnataka Weather: ಇಂದು ಕೊಡಗು, ಬೆಳಗಾವಿ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಭದ್ರಾ ನದಿ ಪಾತ್ರದಲ್ಲಿ ಪ್ರವಾಹ ಎಚ್ಚರಿಕೆ!

Paris Olympics 2024 Day 6
ಕ್ರೀಡೆ3 hours ago

Paris Olympics 2024 Day 6: ಇಂದಿನಿಂದ ಅಥ್ಲೆಟಿಕ್ಸ್ ಆರಂಭ; ಭಾರತದ ಕ್ರೀಡಾ ಸ್ಪರ್ಧೆಗಳ ವಿವರ ಹೀಗಿದೆ

Dina Bhavishya
ಭವಿಷ್ಯ3 hours ago

Dina Bhavishya: ವಿದೇಶ ಪ್ರವಾಸಕ್ಕೆ ಕಾಯುತ್ತಿರುವ ಈ ರಾಶಿಯವರಿಗೆ ಶುಭ ಸೂಚನೆ ಸಿಗಲಿದೆ

Kabini Dam
ಕರ್ನಾಟಕ8 hours ago

ಮೈಸೂರು: ಕಬಿನಿ ಜಲಾಶಯದ ಬಲದಂಡೆ ನಾಲೆ ಬಳಿ ಭಾರಿ ಬಿರುಕು, ನಾಲೆ ಒಡೆಯುವ ಭೀತಿಯಲ್ಲಿ ಜನ

Shiradi Ghat
ಕರ್ನಾಟಕ8 hours ago

Shiradi Ghat: ಗುಡ್ಡ ಕುಸಿತ; ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್‌, ಬದಲಿ ಮಾರ್ಗ ಸೂಚನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌