China Stapled Visa: ವೀಸಾ ನೀಡಲು ಕುತಂತ್ರ; ಚೀನಾಗೆ ತೆರಳದ ಭಾರತದ ವುಶು ಕ್ರೀಡಾಪಟುಗಳು - Vistara News

ಕ್ರೀಡೆ

China Stapled Visa: ವೀಸಾ ನೀಡಲು ಕುತಂತ್ರ; ಚೀನಾಗೆ ತೆರಳದ ಭಾರತದ ವುಶು ಕ್ರೀಡಾಪಟುಗಳು

China Stapled Visa: ಚೀನಾಗೆ ತೆರಳಬೇಕಿದ್ದ ಭಾರತದ 12 ಸದಸ್ಯರ ತಂಡದಲ್ಲಿ ಅರುಣಾಚಲ ಪ್ರದೇಶದ ಮೂವರು ಅಥ್ಲೀಟ್‌ಗಳಿಗೆ ಚೀನಾ ಸಮರ್ಪಕ ವೀಸಾ ನೀಡದ ಕಾರಣ ಇಡೀ ತಂಡ ಟೂರ್ನಿಯಲ್ಲಿ ಭಾಗವಹಿಸದಿರಲು ತೀರ್ಮಾನಿಸಿದೆ.

VISTARANEWS.COM


on

Indian Wushu Team
ಭಾರತದ ವುಶು ಕ್ರೀಡಾಪಟುಗಳು (ಸಾಂದರ್ಭಿಕ ಚಿತ್ರ)
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅರುಣಚಾಲ ಪ್ರದೇಶದ ಮೂವರು ವುಶು (ಮಾರ್ಷಲ್‌ ಆರ್ಟ್ಸ್)‌ ಕ್ರೀಡಾಪಟುಗಳಿಗೆ ವೀಸಾ ನೀಡಲು ಚೀನಾ (China Stapled Visa) ಕುತಂತ್ರ ಬುದ್ಧಿ ತೋರಿದ ಹಿನ್ನೆಲೆಯಲ್ಲಿ ಭಾರತ ವುಶು ತಂಡವು ಚೀನಾಗೆ ತೆರಳದಿರಲು ತೀರ್ಮಾನಿಸಿದೆ. ಆ ಮೂಲಕ ಚೀನಾದ ಚೆಂಗ್ಡುವಿನಲ್ಲಿ ಜುಲೈ 28ರಿಂದ ಆಗಸ್ಟ್‌ 8ರವರೆಗೆ ನಡೆಯುವ ವಲ್ಡ್‌ ಯುನಿವರ್ಸಿಟಿ ಗೇಮ್ಸ್‌ ಟೂರ್ನಿಯನ್ನು ಭಾರತ ಬಹಿಷ್ಕರಿಸಿದೆ.

ಒಬ್ಬ ತರಬೇತುದಾರ, ಮೂವರು ಅಧಿಕಾರಿಗಳು ಹಾಗೂ 8 ವುಶು ಕ್ರೀಡಾಪಟುಗಳು ಸೇರಿ ಒಟ್ಟು 12 ಸದಸ್ಯರ ತಂಡವು ಚೀನಾಗೆ ತೆರಳಬೇಕಿತ್ತು. ಆದರೆ, ಅರುಣಾಚಲ ಪ್ರದೇಶದ ಮೂವರು ಮಹಿಳಾ ಅಥ್ಲೀಟ್‌ಗಳಾದ ನ್ಯೆಮಾನ್‌ ವಾಗ್ಸು, ಒನಿಲು ತೆಂಗ ಹಾಗೂ ಮೆಪುಂಗ್‌ ಲಮ್ಗು ಅವರಿಗೆ ಚೀನಾ ಸ್ಟೇಪಲ್ಡ್‌ ವೀಸಾ (Stapled Visa- ಇದೊಂದು ರೀತಿಯ ಪೇಪರ್‌ ವೀಸಾ. ಪಾಸ್‌ಪೋರ್ಟ್‌ ಮೇಲೆ ಸ್ಟಾಂಪ್‌ ಬದಲು ಪೇಪರ್‌ ಅಂಟಿಸುವುದು) ನೀಡುವ ಮೂಲಕ ಉದ್ಧಟತನ ಮಾಡಿದೆ. ಹಾಗಾಗಿ, ಭಾರತ ತಂಡವು ವಲ್ಡ್‌ ಯುನಿವರ್ಸಿಟಿ ಗೇಮ್ಸ್‌ನಲ್ಲಿ ಭಾಗವಹಿಸದೆ ಪ್ರತಿಭಟನೆ ವ್ಯಕ್ತಪಡಿಸಿದೆ.

ಜುಲೈ 25ರಂದು ತಡರಾತ್ರಿ ಭಾರತದ ವುಶು ತಂಡವು ಚೀನಾಗೆ ತೆರಳಲು ಮುಂದಾಗಿತ್ತು. ಆದರೆ, ದೆಹಲಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಂಡವನ್ನು ತಡೆದಿದ್ದಾರೆ. ಇದಾದ ಬಳಿಕ ಟೂರ್ನಿಯಲ್ಲಿ ಭಾಗವಹಿಸದಿರಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಜುಲೈ 16ರಂದೇ ಅರುಣಾಚಲ ಪ್ರದೇಶದ ಮೂವರು ಅಥ್ಲೀಟ್‌ಗಳು ಸೇರಿ ತಂಡದ ಎಲ್ಲ ಸದಸ್ಯರು ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅರುಣಾಚಲ ಪ್ರದೇಶದ ಮೂವರು ಅಥ್ಲೀಟ್‌ಗಳ ಹೊರತಾಗಿ ಎಲ್ಲರಿಗೂ ಸರಿಯಾದ ಸಮಯಕ್ಕೆ ಸರಿಯಾದ ವೀಸಾ ಸಿಕ್ಕಿದೆ.

ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

ಭಾರತದ ಮೂವರು ಅಥ್ಲೀಟ್‌ಗಳಿಗೆ ಸರಿಯಾದ ವೀಸಾ ನೀಡದ ಚೀನಾ ವಿರುದ್ಧ ಭಾರತ ಆಕ್ರೋಶ ವ್ಯಕ್ತಪಡಿಸಿದೆ. “ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಲು ಭಾರತದ ಮೂವರು ಅಥ್ಲೀಟ್‌ಗಳಿಗೆ ಸ್ಟೇಪಲ್ಡ್‌ ವೀಸಾ ನೀಡಿರುವುದು ಖಂಡನೀಯ. ಭಾರತವು ಚೀನಾದ ಇಂತಹ ನೀತಿಯನ್ನು ವಿರೋಧಿಸುತ್ತದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊಹ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಏಷ್ಯಾದ 2ನೇ ಕ್ರೀಡಾಪಟು; ಮೊದಲ ಸ್ಥಾನದಲ್ಲಿ ಮಹಿಳಾ ಆಟಗಾರ್ತಿ

ಚೀನಾದಲ್ಲಿ ಸೆಪ್ಟೆಂಬರ್‌ನಲ್ಲಿ ಆರಂಭವಾಗುವ ಏಷ್ಯನ್‌ ಗೇಮ್ಸ್‌ನಲ್ಲೂ ಅರುಣಾಚಲ ಪ್ರದೇಶದ ಮೂವರು ಅಥ್ಲೀಟ್‌ಗಳಿದ್ದಾರೆ. ಅರುಣಾಚಲ ಪ್ರದೇಶ ನಮ್ಮ ದೇಶಕ್ಕೆ ಸೇರಿದ್ದು ಎಂದು ಹುರುಳಿಲ್ಲದ ವಾದ ಮಂಡಿಸುವ ಚೀನಾ, ಅಥ್ಲೀಟ್‌ಗಳು ಅರುಣಾಚಲ ಪ್ರದೇಶದವರಾದ ಕಾರಣ ಇಂತಹ ಕುತಂತ್ರ ಬುದ್ಧಿ ಪ್ರದರ್ಶಿಸಿದೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Paris Olympics: ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡಲು ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ತೀರ್ಮಾನಿಸಿದೆ. 2028ರಲ್ಲಿ ಲಾಸ್‌ ಏಂಜಲಿಸ್​ನಲ್ಲಿ ನಡೆಯುವ ಒಲಿಂಪಿಕ್ ಕೂಟದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಎಲ್ಲರಿಗೂ ನಗದು ಪ್ರಶಸ್ತಿ ನೀಡುವುದಾಗಿಯೂ ಸಂಸ್ಥೆ ಘೋಷಿಸಿದೆ. ಇದೇ ಮೊದಲ ಬಾರಿಗೆ ಒಲಿಂಪಿಕ್ ಕೂಟದಲ್ಲಿ ನಗದು ಪ್ರಶಸ್ತಿ ನೀಡಲಾಗುತ್ತಿದೆ.

VISTARANEWS.COM


on

Paris Olympics
Koo

ನವದೆಹಲಿ: ಭಾರತದ ಪುರುಷರ ಮತ್ತು ಮಹಿಳೆಯರ 4×400 ಮೀಟರ್ ರಿಲೇ ತಂಡಗಳು ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​​ ಟೂರ್ನಿಗೆ ಅರ್ಹತೆ ಸಂಪಾದಿಸಿದೆ. ಮಹಿಳೆಯರ(India Women’s 4x400m Relay Teams) ಸ್ಪರ್ಧೆಯಲ್ಲಿ ರೂಪಲ್ ಚೌಧರಿ, ಎಂ ಆರ್ ಪೂವಮ್ಮ, ಜ್ಯೋತಿಕಾ ಶ್ರೀ ದಂಡಿ ಮತ್ತು ಶುಭಾ ವೆಂಕಟೇಶನ್ ಸ್ಪರ್ಧಿಸಿಲಿದ್ದಾರೆ. ಸೋಮವಾರ ನಡೆದ ವಿಶ್ವ ಅಥ್ಲೆಟಿಕ್ಸ್ ರಿಲೇ ಟೂರ್ನಿಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಈ ಮಹಿಳಾ ತಂಡ ಅರ್ಹತೆ ಪಡೆಯಿತು. 3 ನಿಮಿಷ 29.35 ಸೆಕೆಂಡ್‌ಗಳಲ್ಲಿ ಗುರಿ ತಲುಪಿದರು. ಮೊದಲ ಸ್ಥಾನಿ ಜಮೈಕಾ (3:28.54) ಮೊದಲ ಸ್ಥಾನಿಯಾಯಿತು.

ಪುರುಷರ ತಂಡದಲ್ಲಿ(India Men’s 4x400m Relay Teams) ಮುಹಮ್ಮದ್ ಅನಾಸ್, ಮುಹಮ್ಮದ್ ಅಜ್ಮಲ್, ಅರೋಕಿಯಾ ರಾಜೀವ್ ಮತ್ತು ಅಮೋಜ್ ಜೇಕಬ್ ಅವರ ತಂಡವು 3 ನಿಮಿಷ ಮತ್ತು 3.23 ಸೆಕೆಂಡುಗಳಲ್ಲಿ ಗುರಿ ತಲುಪಿ ಒಲಿಂಪಿಕ್ಸ್​ ಟಿಕೆಟ್​ ಪಡೆದುಕೊಂಡಿತು. ಎರಡನೇ ಸುತ್ತಿನ ಮೂರು ಹೀಟ್ಸ್‌ಗಳಲ್ಲಿ ಅಗ್ರ ಎರಡು ತಂಡಗಳು ಜುಲೈ 26 ರಿಂದ ಆಗಸ್ಟ್ 11 ರವರೆಗೆ ನಡೆಯಲಿರುವ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಬೇಕಿತ್ತು. ಎರಡನೇ ಲೆಗ್ ಓಟಗಾರ ರಾಜೇಶ್ ರಮೇಶ್ ಸೆಳೆತದ ಕಾರಣ ಮಧ್ಯಂತರದಲ್ಲಿ ಹಿಂದೆ ಸರಿದ ನಂತರ ಪುರುಷರ ತಂಡವು ಮೊದಲ ಸುತ್ತಿನ ಅರ್ಹತಾ ಹೀಟ್‌ನಲ್ಲಿ ಮುಗಿಸಲು ವಿಫಲವಾಯಿತು. ಇದರೊಂದಿಗೆ, ಭಾರತವು ಈಗ 19 ಮಂದಿ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್‌ಗಳೊಂದಿಗೆ ಪ್ಯಾರಿಸ್​ಗೆ ಹೋಗಲಿದೆ. ಈ ಪಟ್ಟಿಯಲ್ಲಿ ಹಾಲಿ ಜಾವೆಲಿನ್ ಥ್ರೋ ಚಾಂಪಿಯನ್ ನೀರಜ್ ಚೋಪ್ರಾ ಇತರರು ಕೂಡ ಸೇರಿದ್ದಾರೆ.

ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡಲು ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ತೀರ್ಮಾನಿಸಿದೆ. 2028ರಲ್ಲಿ ಲಾಸ್‌ ಏಂಜಲಿಸ್​ನಲ್ಲಿ ನಡೆಯುವ ಒಲಿಂಪಿಕ್ ಕೂಟದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಎಲ್ಲರಿಗೂ ನಗದು ಪ್ರಶಸ್ತಿ ನೀಡುವುದಾಗಿಯೂ ಸಂಸ್ಥೆ ಘೋಷಿಸಿದೆ. ಇದೇ ಮೊದಲ ಬಾರಿಗೆ ಒಲಿಂಪಿಕ್ ಕೂಟದಲ್ಲಿ ನಗದು ಪ್ರಶಸ್ತಿ ನೀಡಲಾಗುತ್ತಿದೆ.

ಇದನ್ನೂ ಓದಿ Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 7 ಶಟ್ಲರ್​ಗಳು; ಕನ್ನಡತಿ ಅಶ್ವಿನಿ ಪೊನ್ನಪ್ಪಗೂ ಅವಕಾಶ

ಟೋಕಿಯೊ ಒಲಿಂಪಿಕ್ ಕೂಟದ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್​ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್‌ ಡಾಲರ್‌ ಬಹುಮಾನ ದೊರೆಯಲಿದೆ. ನೀರಜ್​ ಅವರು ಟ್ರ್ಯಾಕ್‌ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಪ್ಯಾರಿಸ್‌ನಲ್ಲಿಯೂ ಅವರ ಮೇಲೆ ಚಿನ್ನದ ನಿರೀಕ್ಷೆ ಮಾಡಲಾಗಿದೆ.

ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

T20 World Cup 2024: ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್) ಮಾಧ್ಯಮ ಮೂಲಗಳು ಕ್ರೀಡಾಕೂಟಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಅಭಿಯಾನಗಳನ್ನು ಪ್ರಾರಂಭಿಸಿದ್ದು ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಪಂದ್ಯಗಳಿಗೆ ಭಯೋತ್ಪಾದಕ ದಾಳಿಯ ಎಚ್ಚರಿಕೆ ಬಂದಿರುವುದಾಗಿ ವರದಿಯಾಗಿದೆ.

VISTARANEWS.COM


on

T20 World Cup 2024
Koo

ಬಾರ್ಬಡಾಸ್​: ಇದೇ ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್​ ಪಂದ್ಯಾವಳಿಗೆ(T20 World Cup 2024) ಪಾಕಿಸ್ತಾನದ ಉಗ್ರರಿಂದ ದಾಳಿಯ ಬೆದರಿಕೆಯೊಂದು(Terror Threat to T20 World Cup) ಬಂದಿರುವುದಾಗಿ ವರದಿಯಾಗಿದೆ. ಕೆರಿಬಿಯನ್ ದ್ವೀಪಗಳ ಮಾಧ್ಯಮ ವರದಿಗಳ ಪ್ರಕಾರ ಟೂರ್ನಿಯ ಮೊದಲ ಪಂದ್ಯ ನಡೆಯುವ ಪ್ರದೇಶದಲ್ಲಿ ಭಯೋತ್ಪಾದಕ ಎಚ್ಚರಿಕೆಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದೆ. ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಈ ಬೆದರಿಕೆ ಉತ್ತರ ಪಾಕಿಸ್ತಾನದಿಂದ ಬಂದಿದೆ ಎಂದು ತಿಳಿಸಿದೆ.

ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್) ಮಾಧ್ಯಮ ಮೂಲಗಳು ಕ್ರೀಡಾಕೂಟಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಅಭಿಯಾನಗಳನ್ನು ಪ್ರಾರಂಭಿಸಿವೆ, ಇದರಲ್ಲಿ ಅಫ್ಘಾನಿಸ್ತಾನ-ಪಾಕಿಸ್ತಾನ ಉಗ್ರರ ಅಡಗು ತಾಣಗಳಿಂದ ವೀಡಿಯೊ ಸಂದೇಶಗಳ ಮೂಲಕ ಹಲವಾರು ದೇಶಗಳಲ್ಲಿ ದಾಳಿ ನಡೆಸುವ ಮತ್ತು ಈ ಉಗ್ರ ಸಂಚಿನಲ್ಲಿ ಬೆಂಬಲ ನೀಡಲು ಒತ್ತಾಯಿಸಿರುವುದಾಗಿ ಕ್ರಿಕ್‌ಬಜ್‌ ತನ್ನ​ ವರದಿಯಲ್ಲಿ ತಿಳಿಸಿದೆ.

“ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಪ್ರತಿಯೊಬ್ಬರ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ ಮತ್ತು ನಾವು ಸಮಗ್ರ ಮತ್ತು ದೃಢವಾದ ಭದ್ರತಾ ಯೋಜನೆಯನ್ನು ಹೊಂದಿದ್ದೇವೆ ಎಂದು ನಾವು ಎಲ್ಲ ಪಾಲುದಾರರಿಗೆ ಭರವಸೆ ನೀಡಲು ಬಯಸುತ್ತೇವೆ” ಎಂದು ವೆಸ್ಟ್​ ಇಂಡೀಸ್​ ಕ್ರಿಕೆಟ್​ ಬೋರ್ಡ್​ ಅಧ್ಯಕ್ಷ ಜಾನಿ ಗ್ರೇವ್ಸ್ ಹೇಳಿದರು.

“ನಾವು ಆತಿಥೇಯ ದೇಶಗಳು ಮತ್ತು ನಗರಗಳಲ್ಲಿನ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತೇವೆ ಮತ್ತು ನಮ್ಮ ದೇಶದಲ್ಲಿ ನಿಗದಿಯಾದ ಪಂದ್ಯಾವಳಿಗೆ ಯಾವುದೇ ಅಪಾಯವಾಗದಂತೆ ಸೂಕ್ತವಾದ ಯೋಜನೆಗಳು ಜಾರಿಯಲ್ಲಿವೆ” ಎಂದು ಗ್ರೇವ್ಸ್ ಹೇಳಿರುವುದಾಗಿ ಕ್ರಿಕ್‌ಬಜ್‌ ವರದಿ ಮಾಡಿದೆ. ವೆಸ್ಟ್ ಇಂಡೀಸ್‌ನಲ್ಲಿ ಆಂಟಿಗುವಾ ಬಾರ್ಬುಡಾ, ಬಾರ್ಬಡೋಸ್, ಗಯಾನಾ, ಸೇಂಟ್ ಲೂಸಿಯಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಟ್ರಿನಿಡಾಡ್ ಮತ್ತು ಟೊಬಾಗೊ ಸೇರಿದಂತೆ ಆರು ಸ್ಥಳಗಳಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ ICC Women’s T20 World Cup: ಮಹಿಳಾ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ; ಒಂದೇ ಗುಂಪಿನಲ್ಲಿ ಭಾರತ-ಪಾಕ್​

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading

ಕ್ರೀಡೆ

Sunil Narine: ಅತ್ಯಧಿಕ ಸಿಕ್ಸರ್​ ಸಾಧಕರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸುನೀಲ್​ ನರೈನ್

Sunil Narine: ಬಿರುಸಿನ ಬ್ಯಾಟಿಂಗ್​ ನಡೆಸಿದ ನರೈನ್​ ಕೇವಲ 39 ಎಸೆತಗಳಿಂದ 6 ಬೌಂಡರಿ ಮತ್ತು 7 ಸೊಗಸಾದ ಸಿಕ್ಸರ್ ಸಿಡಿಸಿ 81 ರನ್​ ಚಚ್ಚಿದರು. ಈ 7 ಸಿಕ್ಸರ್​ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು.

VISTARANEWS.COM


on

Sunil Narine
Koo

ಲಕ್ನೋ: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿರುವ ಕೆಕೆಆರ್(Kolkata Knight Riders)​ ತಂಡದ ಎಡಗೈ ಆಟಗಾರ ಸುನೀಲ್​ ನರೈನ್(Sunil Narine)​ ಲಕ್ನೋ(Lucknow Super Giants) ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 7 ಸಿಕ್ಸರ್​ ಬಾರಿಸುವ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಭಾನುವಾರ ರಾತ್ರಿ ನಡೆದ ಐಪಿಎಲ್​ನ 54ನೇ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿದ ನರೈನ್​ ಕೇವಲ 39 ಎಸೆತಗಳಿಂದ 6 ಬೌಂಡರಿ ಮತ್ತು 7 ಸೊಗಸಾದ ಸಿಕ್ಸರ್ ಸಿಡಿಸಿ 81 ರನ್​ ಚಚ್ಚಿದರು. ಈ 7 ಸಿಕ್ಸರ್​ ಮೂಲಕ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು. ಇದಕ್ಕೂ ಮುನ್ನ ಸನ್​ರೈಸರ್ಸ್​ ಹೈದರಾಬಾದ್​ ತಂಡದ ಹೆನ್ರಿಚ್​ ಕ್ಲಾಸೆನ್​(31 ಸಿಕ್ಸರ್​) ಅಗ್ರಸ್ಥಾನದಲ್ಲಿದ್ದರು. ಇದೀಗ ನರೈನ್​ 32 ಸಿಕ್ಸರ್​ಗಳೊಂದಿಗೆ ಕ್ಲಾಸೆನ್​ ಅವರನ್ನು ಹಿಂದಿಕ್ಕಿದ್ದಾರೆ.

​ಇಂದು ನಡೆಯುವ ಪಂದ್ಯದಲ್ಲಿ ಹೈದರಾಬಾದ್​ ತಂಡ ಮುಂಬೈ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಕ್ಲಾಸೆನ್​ 2 ಸಿಕ್ಸರ್​ ಸಿಡಿಸಿದರೆ ಮತ್ತೆ ತಮ್ಮ ಅಗ್ರಸ್ಥಾನವನ್ನು ವಶಪಡಿಸಿಕೊಳ್ಳಲಿದ್ದಾರೆ. ಸದ್ಯ ನರೈನ್​ ಮತ್ತು ಕ್ಲಾಸೆನ್​ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ. 28 ಸಿಕ್ಸರ್​ ಬಾರಿಸಿರುವ ಅಭಿಷೇಕ್​ ಶರ್ಮ ಮೂರನೇ ಸ್ಥಾನದಲ್ಲಿದ್ದಾರೆ. ಶಿವಂ ದುಬೆ(26 ಸಿಕ್ಸರ್​) ನಾಲ್ಕನೇ ಸ್ಥಾನಿಯಾಗಿದ್ದಾರೆ.

ಇದನ್ನೂ ಓದಿ IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

ಅಗ್ರಸ್ಥಾನಕ್ಕೆ ಜಿಗಿದ ಕೆಕೆಆರ್​


ಇದೇ ಮೊದಲ ಬಾರಿಗೆ ಶ್ರೀ ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಏಕನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ದಾಖಲಾದ ಬೃಹತ್​ ಮೊತ್ತದ ಮೇಲಾಟದಲ್ಲಿ ಕೆಕೆಆರ್​ ತಂಡ ಲಕ್ನೋ ವಿರುದ್ಧ 98 ರನ್​ಗಳ ಬೃಹತ್​ ಜಯ ಸಾಧಿಸಿತು. ಜತೆಗೆ ಅಂಕಪಟ್ಟಿಯಲ್ಲಿ ರಾಜಸ್ಥಾನ್​ ರಾಯಲ್ಸ್​ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿತು. ಈ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ತುತ್ತಾಯಿತು.

Continue Reading

ಕ್ರೀಡೆ

IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

IPL 2024 Points Table: ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ 98 ರನ್​ಗಳ ಗೆಲುವು ಸಾಧಿಸಿದ ಕೆಕೆಆರ್​ 16 ಅಂಕ ಗಳಿಸಿ ಅಗ್ರಸ್ಥಾನಕ್ಕೇರಿದೆ. ಅಗ್ರಸ್ಥಾನಿಯಾಗಿದ್ದ ರಾಜಸ್ಥಾನ್​ 2ನೇ ಸ್ಥಾನಕ್ಕೆ ಕುಸಿದಿದೆ.

VISTARANEWS.COM


on

IPL 2024 Points Table
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್(IPL 2024)​ ಟೂರ್ನಿಯಲ್ಲಿ ಲೀಗ್ ಹಂತದ ಪಂದ್ಯಗಳು​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಪ್ಲೇ ಆಫ್​ ಟಿಕೆಟ್​ ಪಡೆಯಲು ಎಲ್ಲ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಭಾನುವಾರ ನಡೆದ ಡಬಲ್​ ಹೆಡರ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಕೆಕೆಆರ್​ ಭರ್ಜರಿ ಗೆಲುವು ಸಾಧಿಸಿವೆ. ಉಭಯ ತಂಡಗಳ ಗೆಲುವಿನಿಂದ ಅಂಕಪಟ್ಟಿಯಲ್ಲಿ(IPL 2024 Points Table) ಭಾರೀ ಬದಲಾವಣೆ ಸಂಭವಿಸಿದೆ.

ನಂ.1 ಸ್ಥಾನಕ್ಕೇರಿದ ಕೆಕೆಆರ್​


ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ 98 ರನ್​ಗಳ ಗೆಲುವು ಸಾಧಿಸಿದ ಕೆಕೆಆರ್​ 16 ಅಂಕ ಗಳಿಸಿ ಅಗ್ರಸ್ಥಾನಕ್ಕೇರಿದೆ. ಅಗ್ರಸ್ಥಾನಿಯಾಗಿದ್ದ ರಾಜಸ್ಥಾನ್​ 2ನೇ ಸ್ಥಾನಕ್ಕೆ ಕುಸಿದಿದೆ. ಉಭಯ ತಂಡಗಳಿಗೂ 16 ಅಂಕ ಇದ್ದರೂ ಕೆಕೆಆರ್​ ರನ್​ ರೇಟ್​ ಉತ್ತಮವಾಗಿದೆ. ಹೀಗಾಗಿ ಮೊದಲ ಸ್ಥಾನ ಪಡೆದಿದೆ. ಸೋಲು ಕಂಡ ಲಕ್ನೋ 5ನೇ ಸ್ಥಾನಕ್ಕೆ ಜಾರಿದೆ. ಪಂಜಾಬ್​ ವಿರುದ್ಧ 28 ರನ್​​ ಅಂತರದ ಗೆಲುವು ಸಾಧಿಸಿದ ಹಾಲಿ ಚಾಂಪಿಯನ್​ ಚೆನ್ನೈ 5ರಿಂದ 3ನೇ ಸ್ಥಾನಕ್ಕೇರಿದೆ. ಪಂಜಾಬ್​ 8ನೇ ಸ್ಥಾನದಲ್ಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​118316 (+1.453)
ರಾಜಸ್ಥಾನ್​ ರಾಯಲ್ಸ್​​​108216 (+0.622)
ಚೆನ್ನೈ​​116514 (+0.700)
ಹೈದರಾಬಾದ್​106512 (+0.072)
ಲಕ್ನೋ​116512 (-0.371)
ಡೆಲ್ಲಿ115610 (-0.442)
ಆರ್​ಸಿಬಿ11478 (-0.049)
ಪಂಜಾಬ್​10468 (-0.062)
ಗುಜರಾತ್​11478 (-1.320)
ಮುಂಬೈ11386 (-0.356)

ಪಂಜಾಬ್​ಗೆ ಸೋಲು


ದಿನದ ಮೊದಲ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ತಂಡ ಚೆನ್ನೈ ವಿರುದ್ಧ ಸೋಲು ಕಂಡಿತು. ಸಾಧಾರಣ ಮೊತ್ತವನ್ನು ಕೂಡ ಬೆನ್ನಟ್ಟಲಾಗದೆ 28 ರನ್​ಗಳ ಸೋಲಿಗೆ ತುತ್ತಾಯಿತು. ಈ ಸೋಲಿನಿಂದ ತಂಡದ ಪ್ಲೇ ಆಫ್​ ಹಾದಿ ಮತ್ತಷ್ಟು ಕಠಿಣವಾಗಿದೆ. ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯಲ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತು. ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌, ಸತತವಾಗಿ ವಿಕೆಟ್‌ ಕಳೆದುಕೊಂಡು ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ


ರಾತ್ರಿಯ ಪಂದ್ಯದಲ್ಲಿ ಕೆಕೆಆರ್​ ತಂಡ ಲಕ್ನೋ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಮೆರೆದಾಡಿತು.  ಶ್ರೀ ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಏಕನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ಒಳಗಾಯಿತು.

Continue Reading
Advertisement
Drowned in water
ದಕ್ಷಿಣ ಕನ್ನಡ20 mins ago

Drowned In water : ಹೆತ್ತವರ ಕಣ್ಣೇದುರಿಗೆ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋದರು ಪುತ್ರಿಯರು

ED Raid
ದೇಶ33 mins ago

ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

Mahanati Show Gagana Comedy About Rishi actor
ಕಿರುತೆರೆ43 mins ago

Mahanati Show: ‘ಮಹಾನಟಿʼ ವೇದಿಕೆಯಲ್ಲಿ ನಟ ರಿಷಿ ಫೋನ್‌ ನಂಬರ್‌ ಕೇಳಿದ ಚಿತ್ರದುರ್ಗದ ಗಗನಾ!

amethi unrest
ದೇಶ58 mins ago

Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

Paris Olympics
ಕ್ರೀಡೆ2 hours ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ​ಭಾರತದ ಪುರುಷರ & ಮಹಿಳೆಯರ ರಿಲೇ ತಂಡ

Prajwal Revanna Case
ಕರ್ನಾಟಕ2 hours ago

Prajwal Revanna Case: ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

Boat Capsize
ವೈರಲ್ ನ್ಯೂಸ್2 hours ago

Boat Capsizes: ಜಲಾವೃತ ಸೇತುವೆಗೆ ದೋಣಿ ಡಿಕ್ಕಿ; ಶಾಕಿಂಗ್‌ ವಿಡಿಯೋ ವೈರಲ್‌

T20 World Cup 2024
ಕ್ರೀಡೆ2 hours ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕ್​ ಉಗ್ರರಿಂದ ಭಯೋತ್ಪಾದಕ ದಾಳಿಯ ಎಚ್ಚರಿಕೆ

Megha Dhade bigg boss marathi winner crptic post about rahul gandhi
ಸಿನಿಮಾ2 hours ago

Megha Dhade: ನಮ್ಮ ದೇಶ ಬಿಟ್ಟು ನರಕಕ್ಕೆ ಹೋಗಿ ಎಂದು ರಾಹುಲ್‌ ಗಾಂಧಿ ವಿರುದ್ಧ ʻಬಿಗ್‌ ಬಾಸ್‌ʼ ವಿಜೇತೆ ಆಕ್ರೋಶ!

Prajwal Revanna Case
ಕರ್ನಾಟಕ2 hours ago

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ16 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ17 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ18 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌