Zaheer Khan: ಪತ್ನಿ ಜತೆ ಯುಗಾದಿ ಹಬ್ಬ ಆಚರಿಸಿದ ಜಹೀರ್​ ಖಾನ್​ಗೆ ನಿಂದನೆ - Vistara News

ಕ್ರೀಡೆ

Zaheer Khan: ಪತ್ನಿ ಜತೆ ಯುಗಾದಿ ಹಬ್ಬ ಆಚರಿಸಿದ ಜಹೀರ್​ ಖಾನ್​ಗೆ ನಿಂದನೆ

Zaheer Khan: ಬಾಲಿವುಡ್‌ ನಟಿ ಸಾಗರಿಕಾ ಘಾಟ್ಕೆ ಅವರನ್ನು ಜಹೀರ್​ ಅವರು 2017ರಲ್ಲಿ ವಿವಾಹವಾಗಿದ್ದರು. ಸಾಗರಿಕಾ ಘಾಟ್ಕೆ ಚಕ್‌ ದೇ ಇಂಡಿಯಾ ಸಿನಿಮಾ ಮೂಲಕ ಪ್ರಚಾರಕ್ಕೆ ಬಂದರು. ಅದಕ್ಕೂ ಮುನ್ನ ಅವರು ಭಾರತೀಯ ಹಾಕಿ ತಂಡದಲ್ಲಿ ಆಡಿದ್ದರು. ಮುಂದೆ ಬಾಲಿವುಡ್‌ನ‌ಲ್ಲಿ ಸಾಗರಿಕಾ ಹೆಸರು ಮಾಡಿದರು. ಇದೇ ಕಾರಣಕ್ಕೆ ಜಹೀರ್‌ ನಡುವೆ ಪ್ರೀತಿ ಬೆಳೆದಿತ್ತು.

VISTARANEWS.COM


on

zaheer khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾದ ಮಾಜಿ ವೇಗಿ, ವಿಶ್ವಕಪ್​ ವಿಜೇತ ತಂಡದ ಆಟಗಾರ ಜಹೀರ್​ ಖಾನ್​(Zaheer Khan) ಅವರು ಇತ್ತೀಗೆಚೆ ತಮ್ಮ ಪತ್ನಿ ಸಾಗರಿಕಾ ಘಾಟ್ಗೆ(Sagarika Ghatge) ಜತೆಗೂಡಿ ಹಿಂದುಗಳ ಹೊಸ ವರ್ಷವಾದ ಯುಗಾದಿ ಹಬ್ಬವನ್ನು ಆಚರಿಸಿಕೊಂಡಿದ್ದರು. ಇದರ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದನ್ನು ಕಂಡ ಕೆಲ ಮುಸ್ಲಿಂ ಮೂಲಭೂತವಾದಿಗಳು ಜಹೀರ್​ ವಿರುದ್ಧ ಕೆಂಡಕಾರಿದ್ದಾರೆ.


ಅಂತರ್​ ಧಮೀರ್ಯ ವಿವಾಹವಾಗಿರುವ ಜಹೀರ್ ಹಿಂದುಗಳ ಹಬ್ಬವನ್ನು ಆಚರಿಸಿದ್ದಕ್ಕೆ ಜಹೀರ್​ ವಿರುದ್ಧ ದ್ವೇಷಪೂರಿತ ಕಾಮೆಂಟ್​ಗಳ ಮೂಲಕ ನಿಂದನೆ ಮಾಡಲಾಗಿದೆ. ಜಹೀರ್​ ಅವರನ್ನು ಮೂಲಭೂತವಾದಿಗಳು ಈ ರೀತಿ ನಿಂದನೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ದೀಪಾವಳಿ ಹಬ್ಬವನ್ನು ಆಚರಿಸಿದಾಗಲೂ​ ಇಂಥದ್ದೇ ನಿಂದನೆಗಳಿಗೆ ಒಳಪಟ್ಟಿದ್ದರು. ಯಾರು ಏನೇ ಅಂದರೂ ಕೂಡ ಜಹೀರ್ ಮಾತ್ರ ಈ ಬಗ್ಗೆ ತಲೆ ಕೆಡಿಸಿಕೊಳ್ಳ ತಮಗಿಷ್ಟದ ರೀತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಬಾಲಿವುಡ್‌ ನಟಿ ಸಾಗರಿಕಾ ಘಾಟ್ಕೆ ಅವರನ್ನು ಜಹೀರ್​ ಅವರು 2017ರಲ್ಲಿ ವಿವಾಹವಾಗಿದ್ದರು. ಸಾಗರಿಕಾ ಘಾಟ್ಕೆ ಚಕ್‌ ದೇ ಇಂಡಿಯಾ ಸಿನಿಮಾ ಮೂಲಕ ಪ್ರಚಾರಕ್ಕೆ ಬಂದರು. ಅದಕ್ಕೂ ಮುನ್ನ ಅವರು ಭಾರತೀಯ ಹಾಕಿ ತಂಡದಲ್ಲಿ ಆಡಿದ್ದರು. ಮುಂದೆ ಬಾಲಿವುಡ್‌ನ‌ಲ್ಲಿ ಸಾಗರಿಕಾ ಹೆಸರು ಮಾಡಿದರು. ಇದೇ ಕಾರಣಕ್ಕೆ ಜಹೀರ್‌ ನಡುವೆ ಪ್ರೀತಿ ಬೆಳೆದಿತ್ತು.

ಇದನ್ನೂ ಓದಿ IPL 2024: ಆರ್​ಸಿಬಿ ಪ್ಲೇ ಆಫ್​ ಪ್ರವೇಶದ ಲೆಕ್ಕಾಚಾರ ಹೇಗಿದೆ?

ಕ್ರಿಕೆಟ್​ ಸಾಧನೆ


ಭಾರತ ಕ್ರಿಕೆಟ್‌ ತಂಡದ ವೇಗದ ಬೌಲರ್‌ ಆಗಿ ಜಹೀರ್‌ ಖಾನ್‌ ಅಪಾರ ಸಾಧನೆ ಮಾಡಿದ್ದಾರೆ. 2011ರ ಏಕದಿನ ವಿಶ್ವಕಪ್​ನಲ್ಲಿ ಮಪದಲ ಓವರ್​ ಮೇಡನ್​ ಎಸೆದು ಎದುರಾಳಿ ಲಂಕಾ ತಂಡದ ಮೇಲೆ ಒತ್ತಡ ಹೇರಿದ್ದರು. ಭಾರತ ಪರ 200 ಏಕದಿನ ಪಂದ್ಯ ಆಡಿರುವ ಅವರು 282 ವಿಕೆಟ್​ ಕಬಳಿಸಿದ್ದಾರೆ. 92 ಟೆಸ್ಟ್​ಗಳಿಂದ 311 ವಿಕೆಟ್​, 17 ಟಿ20 ಪಂದ್ಯಗಳಿಂದ 17 ವಿಕೆಟ್​ ಪಡೆದಿದ್ದಾರೆ. ಐಪಿಎಲ್​ನಲ್ಲಿ ಭರ್ತಿ 100 ಪಂದ್ಯ ಆಡಿ 102 ವಿಕೆಟ್​ ಪಡೆದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 610 ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

IND vs PAK:ಭಾರತ ಮತ್ತು ಪಾಕ್​ ಪಂದ್ಯದ ಟಿಕೆಟ್​ ಸಿಗುವುದೇ ಒಂದು ಅದೃಷ್ಟ. ಮ್ಯಾಚ್​ನ ಟಿಕೆಟ್​ಗಳು ಘೋಷಣೆಯಾದ ಕ್ಷಣಾರ್ಧದಲ್ಲೇ ಮಾರಾಟವಾಗುತ್ತಿದ್ದವು. ಆದರೆ ಈ ಬಾರಿ ಯಾರಿಗೂ ಕೂಡ ಟಿಕೆಟ್​ ಕೊಳ್ಳಲು ಆಸಕ್ತಿಯೇ ಇಲ್ಲದಂತಾಗಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಕ್ರಿಕೆಟ್​ ಅಭಿಮಾನಿಗಳು ಕಾದು ಕುಳಿತಿರುವ ಜೂನ್​ 9ರಂದು ನಡೆಯುವ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್​ನ(T20 World Cup 2024) ಹೈವೋಲ್ಟೇಜ್ ಪಂದ್ಯಕ್ಕೆ ಈ ಬಾರಿ ಪ್ರೇಕ್ಷಕರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ. ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಇನ್ನೂ ಮಾರಾಟವಾಗಿಲ್ಲ. ಈ ಪಂದ್ಯದ ಟಿಕೆಟ್‌ಗಳು ಇನ್ನೂ ಐಸಿಸಿ ವೆಬ್​ಸೈಟ್​ನಲ್ಲಿ ಲಭ್ಯವಿದ್ದು, ಇನ್ನೂ ಕೂಡ ಮಾರಾಟವಾಗದಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದೆ.

ಭಾರತ ಮತ್ತು ಪಾಕ್​ ಪಂದ್ಯದ ಟಿಕೆಟ್​ ಸಿಗುವುದೇ ಒಂದು ಅದೃಷ್ಟ. ಮ್ಯಾಚ್​ನ ಟಿಕೆಟ್​ಗಳು ಘೋಷಣೆಯಾದ ಕ್ಷಣಾರ್ಧದಲ್ಲೇ ಮಾರಾಟವಾಗುತ್ತಿದ್ದವು. ಆದರೆ ಈ ಬಾರಿ ಯಾರಿಗೂ ಕೂಡ ಟಿಕೆಟ್​ ಕೊಳ್ಳಲು ಆಸಕ್ತಿಯೇ ಇಲ್ಲದಂತಾಗಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು. ಈ ಪಂದ್ಯಕ್ಕಾಗಿ ಐಸಿಸಿ ಮೂರು ಪ್ಯಾಕೇಜ್‌ಗಳಲ್ಲಿ ಟಿಕೆಟ್‌ಗಳನ್ನು ಇರಿಸಿದೆ. ಇದರಲ್ಲಿ ಡೈಮಂಡ್ ಕ್ಲಬ್, ಪ್ರೀಮಿಯಂ ಕ್ಲಬ್ ಲಾಂಜ್​​ ಮತ್ತು ಕಾರ್ನರ್ ಕ್ಲಬ್​​ಗಳನ್ನು ಒಳಗೊಂಡಿವೆ.

ಡೈಮಂಡ್ ಕ್ಲಬ್ ಟಿಕೆಟ್ ಬೆಲೆ 8.34 ಲಕ್ಷ ರೂ. ಈ ಟಿಕೆಟ್​ ಖರೀದಿಸುವ ಅಭಿಮಾನಿಗಳಿಗೆ ಅತ್ಯುತ್ತಮ ಸೌಲಭ್ಯಗಳು ಸಿಗುತ್ತವೆ. ಪ್ರೀಮಿಯಂ ಕ್ಲಬ್ ಲಾಂಜ್​ ಟಿಕೆಟ್ ಬೆಲೆ 2 ಲಕ್ಷ ರೂ, ಮತ್ತು ಕಾರ್ನರ್ ಕ್ಲಬ್ ಟಿಕೆಟ್ ಬೆಲೆ 2.29 ಲಕ್ಷ ರೂ. ಆಗಿದೆ. ಭಾರತ-ಪಾಕಿಸ್ತಾನ ಪಂದ್ಯದ ದೃಷ್ಟಿಯಿಂದ ಐಸಿಸಿ ಟಿಕೆಟ್ ಬೆಲೆಯನ್ನು ಇಷ್ಟು ದುಬಾರಿ ಇರಿಸಿದೆ. ಇದಲ್ಲದೆ ಪಂದ್ಯಕ್ಕೆ ಉಗ್ರರು ಬಾಂಬ್​ ಬೆದರಿಕೆ ಹಾಕಿದ್ದು ಕೂಡ ಅಭಿಮಾನಿಗಳ ಹಿಂದೇಟಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಹೆಚ್ಚಿನ ಟಿಕೆಟ್​ಗಳು ಖರೀದಿಯಾಗದಿದ್ದಲ್ಲಿ ಐಸಿಸಿ ಮತ್ತೆ ಪರಿಷ್ಕೃತ ಟಿಕೆಟ್​ ದರ ಹೊರಡಿಡುವ ಸಾಧ್ಯತೆ ಇದೆ.

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಪಂದ್ಯಕ್ಕೆ ಉಗ್ರರಿಂದ ದಾಳಿಯ ಬೆದರಿಕೆ ಬಂದಿರುವ ಕಾರಣ ಕ್ರೀಡಾಂಗಣದಲ್ಲಿ ಭಾರೀ ಭದ್ರತಾ ವ್ಯವಸ್ಥೆ ಕೈಗೊಳಲಾಗಿದೆ. ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯಕ್ಕೆ ಸುಧಾರಿತ ಕಣ್ಗಾವಲು ಏರ್ಪಡಿಸಲಾಗಿದೆ.

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಟಿ20 ಮುಖಾಮುಖಿ

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರೀಡೆ

Taiwan Athletics Open: ತೈವಾನ್‌ ಓಪನ್​ನಲ್ಲಿ ಚಿನ್ನ ಗೆದ್ದ ಕನ್ನಡಿಗ ಡಿ.ಪಿ. ಮನು

Taiwan Athletics Open: ನಿತ್ಯ ರಾಮರಾಜ್ ಮಹಿಳೆಯರ 100 ಮೀಟರ್ ಹರ್ಡಲ್ಸ್‌ನಲ್ಲಿ 13.23 ಸೆಕೆಂಡ್‌ಗಳೊಂದಿಗೆ ಬೆಳ್ಳಿ ಗೆದ್ದರೆ, ಮಹಿಳಾ ಪೋಲ್ ವಾಲ್ಟ್ ರಾಷ್ಟ್ರೀಯ ದಾಖಲೆ ಹೊಂದಿರುವ ರೋಸಿ ಮೀನಾ ಪೌಲ್‌ರಾಜ್ (4.21 ಮೀ, 2022) 3.75 ಮೀಟರ್‌ಗಳೊಂದಿಗೆ ನಿರಾಶಾದಾಯಕ ಆರನೇ ಸ್ಥಾನ ಪಡೆದರು.

VISTARANEWS.COM


on

Taiwan Athletics Open
Koo

ತೈಪಿ (ತೈವಾನ್‌): ಕಳೆದ ತಿಂಗಳು ಭುವನೇಶ್ವರದಲ್ಲಿ ನಡೆದಿದ್ದ ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ತೀವ್ರ ಪೈಪೋಟಿ ನೀಡಿ ಬೆಳ್ಳಿ ಪದಕ ಗೆದ್ದಿದ ಕರ್ನಾಟಕದ ಡಿ.ಪಿ. ಮನು(DP Manu) ಅವರು “ತೈವಾನ್‌ ಓಪನ್‌’ ಕೂಟದಲ್ಲಿ(Taiwan Athletics Open) ಚಿನ್ನದ ಪದಕ(DP Manu bags gold) ಜಯಿಸಿದ್ದಾರೆ. ಅಂತಿಮ ಎಸೆತದಲ್ಲಿ 81.58 ಮೀಟರ್‌ಗಳ ಗರಿಷ್ಠ ದೂರ ದಾಖಲಿಸಿ ಈ ಸಾಧನೆ ತೋರಿದರು. ಆರಂಭಿಕ ಎಸೆತವನ್ನು 78.32 ಮೀ ಎಸೆತದ ಮನು ದ್ವಿತೀಯ ಎಸೆತದಲ್ಲಿ 76.80 ಮೀ, 3ನೇ ಎಸೆತದಲ್ಲಿ 80.59 ಮೀ., 5ನೇ ಎಸೆತದಲ್ಲಿ 81.52 ಮೀ. ದೂರ ದಾಖಲಿಸಿದರು.

ಚಿನ್ನ ಗೆದ್ದರೂ ಕೂಡ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಒಲಿಂಪಿಕ್ಸ್​ ಟಿಕೆಟ್​ ಪಡೆಯಬೇಕಿದ್ದರೆ 85.50 ಮೀ. ದೂರ ಎಸೆಯಬೇಕು. ಮನದಂಡವನ್ನು ಇನ್ನೂ ಕೂಡ ದಾಟದ ಕಾರಣ ಮನುಗೆ ಇನ್ನೂ ಪ್ಯಾರಿಸ್​ ಒಲಿಂಪಿಕ್ಸ್​ ಬಾಗಿಲು ತೆರೆದಿಲ್ಲ. ನೀರಜ್‌ ಚೋಪ್ರಾ ಮತ್ತು ಕಿಶೋರ್‌ ಜೇನಾ ಮಾತ್ರ ಜಾವೆಲಿನ್​ ವಿಭಾಗದಿಂದ ಒಲಿಂಪಿಕ್ಸ್​ ಅರ್ಹತೆ ಪೆಡೆದಿದ್ದಾರೆ.

ನಿತ್ಯ ರಾಮರಾಜ್ ಮಹಿಳೆಯರ 100 ಮೀಟರ್ ಹರ್ಡಲ್ಸ್‌ನಲ್ಲಿ 13.23 ಸೆಕೆಂಡ್‌ಗಳೊಂದಿಗೆ ಬೆಳ್ಳಿ ಗೆದ್ದರೆ, ಮಹಿಳಾ ಪೋಲ್ ವಾಲ್ಟ್ ರಾಷ್ಟ್ರೀಯ ದಾಖಲೆ ಹೊಂದಿರುವ ರೋಸಿ ಮೀನಾ ಪೌಲ್‌ರಾಜ್ (4.21 ಮೀ, 2022) 3.75 ಮೀಟರ್‌ಗಳೊಂದಿಗೆ ನಿರಾಶಾದಾಯಕ ಆರನೇ ಸ್ಥಾನ ಪಡೆದರು.

23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ತಂದೆ ಪ್ರಕಾಶ ಹಾಗೂ ತಾಯಿ ಸುಜಾತಾ. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇದೇ ವೇಳೆ ಮನು ಅವರು ಅಂತಾರಾಜ್ಯ, ಜೂನಿಯರ್‌ ರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡರು. ಆಳ್ವಾಸ್‌ ಕಾಲೇಜಿನಲ್ಲಿ ಅವರು ಪಡೆದ ತರಬೇತಿ, ನೀಡಿದ ಪ್ರದರ್ಶನವು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

ಕಳೆದ ವರ್ಷ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಮನು (84.14 ಮೀ.) 6ನೇ ಸ್ಥಾನ ಪಡೆದು ಭಾರೀ ಸಂಚಲನ ಮೂಡಿಸಿದ್ದರು. ಅಲ್ಲದೆ 2023ರಲ್ಲಿ ನಡೆದ ಏಶ್ಯನ್​ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು. ಇಂದು ನಡೆದ ಫೆಡರೇಷನ್ ಕಪ್‌ನಲ್ಲಿ (82.06 ಮೀ) ಬೆಳ್ಳಿ ಗೆದ್ದಿದ್ದಾರೆ. ಮೂರನೇ ಸುತ್ತಿನ ವರೆಗೂ ಅಗ್ರಸ್ಥಾನ ಕಾಯ್ದುಕೊಂಡು ಅನುಭವಿ ನೀರಜ್​ಗೆ ಒಂದು ಕ್ಷಣ ಬೆವರಿಳಿಸುವಂತೆ ಮಾಡಿದ್ದು ನಿಜಕ್ಕೂ ಸಣ್ಣ ಮಾತಲ್ಲ.

ಕಾಶಿನಾಥ ನಾಯ್ಕ್ ಗರಡಿಯಲ್ಲಿ ಬೆಳೆದ ಪ್ರತಿಭೆ


ಮನು ಅವರು ಕಾಶಿನಾಥ ನಾಯ್ಕ್​ ಅವರ ಗರಡಿಯಲ್ಲಿ ಬೆಳೆದು ಬಂದ ಪ್ರತಿಭೆ. 2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಅವರ ಪರಿಚಯವಾಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು. ಇದೀಗ ವಿಶ್ವ ಚಾಂಪಿಯನ್​ ನೀರಜ್​ಗೆ ತೀವ್ರ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದು ನಿಂತಿದ್ದಾರೆ. ನೀರಜ್​ ಕೂಡ ಕಾಶಿನಾಥ ನಾಯ್ಕ್ ಮಾರ್ಗದರ್ಶನದಲ್ಲೇ ಬೆಳೆದು ಬಂದ ಪ್ರತಿಭೆಯಾಗಿದ್ದಾರೆ.

Continue Reading

ಕ್ರೀಡೆ

USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

USA vs CAN: ಭಾನುವಾರ ನಡೆದ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಉದ್ಘಾಟನ ಪಂದ್ಯದಲ್ಲಿಕೆನಡಾ ವಿರುದ್ಧ ಅಮೆರಿಕ(USA vs CAN) 7 ವಿಕೆಟ್​ಗಳ ಗೆಲುವು ಸಾಧಿಸಿತು.

VISTARANEWS.COM


on

USA vs CAN
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ(USA vs CAN) ಗೆಲುವಿನ ಖಾತೆ ತೆರೆದಿದೆ. ಭಾನುವಾರ ನಡೆದ ಬೃಹತ್​ ಮೊತ್ತದ ಮೇಲಾಟದಲ್ಲಿ ಕೆನಡಾ ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸಿ ಮೆರೆದಾಡಿದೆ. ಜತೆಗೆ ‘ಎ’ ಗುಂಪಿನಲ್ಲಿ ಅಂಕದ ಖಾತೆ ತೆರೆದಿದೆ.

ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

ಚೇಸಿಂಗ್​ ವೇಳೆ ಅಮೆರಿಕ ಆರಂಭಿಕ ಆಘಾತ ಎದುರಿಸಿತು. ತಂಡ ಖಾತೆ ತೆರೆಯುವ ಮುನ್ನವೇ ಸ್ಟೀವನ್ ಟೇಲರ್(0) ಶೂನ್ಯಕ್ಕೆ ವಿಕೆಟ್​ ಕೈಚೆಲ್ಲಿದರು. 42 ರನ್​ ಒಟ್ಟುಗೂಡುವಷ್ಟರಲ್ಲಿ ಮೊನಾಂಕ್ ಪಟೇಲ್(16) ವಿಕೆಟ್​ ಕೂಡ ಬಿತ್ತು. ಈ ವೇಳೆ ಜತೆಗೂಡಿದ ಆಂಡ್ರೀಸ್ ಗೌಸ್ ಮತ್ತು ಆರನ್ ಜೋನ್ಸ್ ಬಿರುಸಿನ ಬ್ಯಾಟಿಂಗ್​ ಮೂಲಕ ಅರ್ಧಶತಕ ಬಾರಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಉತ್ತಮ ಹಿಡಿತ ಸಾಧಿಸಿದ್ದ ಕೆನಡಾ ಬೌಲರ್​ಗಳು ಗೌಸ್ ಮತ್ತು ಜೋನ್ಸ್ ಬ್ಯಾಟಿಂಗ್​ ಆರ್ಭಟದ ಮುಂದೆ ಸಂಪೂರ್ಣ ಲಯ ಕಳೆದುಕೊಂಡರು.

ಉಭಯ ಆಟಗಾರರು ಸೇರಿಕೊಂಡು ಸಿಕ್ಸರ್​ ಮತ್ತು ಬೌಂಡರಿಗಳ ಸುರಿಮಳೆಗೈದರು. ಕಿಕ್ಕಿರಿದು ನೆರೆದ ತವರಿನ ವೀಕ್ಷಕರಿಗೆ ಭರಪೂರ ರಂಜನೆ ಲಭಿಸಿತು. ಈ ಜೋಡಿ ಮೂರನೇ ವಿಕೆಟ್​ಗೆ ಬರೋಬ್ಬರಿ 131 ರನ್​ಗಳ ಅಮೂಲ್ಯ ಜತೆಯಾಟ ನಡೆಸಿತು. ಆಂಡ್ರೀಸ್ ಗೌಸ್ 46 ಎಸೆತಗಳಿಂದ 7 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 65 ರನ್​ ಬಾರಿಸಿದರು. ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಆರನ್ ಜೋನ್ಸ್ 40 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 4 ಬೌಂಡರಿ ಸಿಡಿಸಿ ಅಜೇಯ 94 ರನ್​ ಬಾರಿಸಿದರು. ಗೆಲುವಿಗೆ ನಾಲ್ಕು ರನ್​ ಬೇಕಿದ್ದಾಗ ಸಿಕ್ಸರ್​ ಬಡಿದಟ್ಟಿ ತಂಡಕ್ಕೆ ಗೆಲುವು ತಂದುಕೊಟ್ಟುರು. ನ್ಯೂಜಿಲ್ಯಾಂಡ್​ ತಂಡ ತೊರೆದು ಅಮೆರಿಕ ಪರ ಆಡುತ್ತಿರುವ ಕೋರಿ ಆ್ಯಂಡರ್ಸನ್​ ಅಜೇಯ 3 ರನ್​ ಬಾರಿಸಿದರು. ಬೌಲಿಂಗ್​ನಲ್ಲಿ ಒಂದು ವಿಕೆಟ್​ ಪಡೆದರು.

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಕೆನಡಾ ಪರ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಶ್ರೇಯಸ್ ಮೊವ್ವ(32) ಆರಂಭಿಕ ಆಟಗಾರ ಆರನ್ ಜಾನ್ಸನ್(23) ರನ್​ ಬಾರಿಸಿದರು. ಬೃಹತ್​ ಮೊತ್ತ ಪೇರಿಸಿದರು ಕೂಡ ಬೌಲರ್​ಗಳಿಂದ ಸಂಘಟಿತ ಪ್ರದರ್ಶನ ಕಂಡು ಬಾರದ ಕಾರಣ ಪಂದ್ಯವನ್ನು ಕಳೆದುಕೊಂಡರು.

Continue Reading

ಕ್ರೀಡೆ

Rohit Sharma: ರೋಹಿತ್​ ಅಪ್ಪಿಕೊಳ್ಳಲು ಯತ್ನಿಸಿದ ಅಭಿಮಾನಿಯನ್ನು ಹೆಡೆಮುರಿ ಕಟ್ಟಿದ ನ್ಯೂಯಾರ್ಕ್ ಪೊಲೀಸ್; ವಿಡಿಯೊ ವೈರಲ್​

Rohit Sharma: ಬೇರೆ ದೇಶದಲ್ಲಿ ಈ ರೀತಿ ಮೈದಾನಕ್ಕೆ ನುಗ್ಗಿದರೆ ಎಚ್ಚರಿಕೆ ನೀಡಿ ಕಳಿಸಲಾಗುತ್ತದೆ. ಆದರೆ ಅಮೆರಿಕದಲ್ಲಿ ಮಾತ್ರ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಯಾರು ಏನೇ ಹೇಳಿದರು ಕೂಡ ಇಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಖಚಿತ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರೊಬ್ಬರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ಹಂಚಿಕೊಂಡು ಜಾಗ್ರತೆ ವಹಿಸಿ. ಇಲ್ಲಿ ಹುಚ್ಚಾಟ ನಡೆಸಿದರೆ ಜೈಲು ಕಂಬಿ ಎಣಿಸುವುದು ನಿಶ್ಚಿತ ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

VISTARANEWS.COM


on

Rohit Sharma
Koo

ನ್ಯೂಯಾರ್ಕ್: ಬಾಂಗ್ಲಾದೇಶ(IND vs BAN) ವಿರುದ್ಧ ನಿನ್ನೆ(ಶನಿವಾರ) ನಡೆದ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯ ಅಭ್ಯಾಸ ಪಂದ್ಯದ ವೇಳೆ ರೋಹಿತ್​ ಶರ್ಮ(Rohit Sharma) ಅವರ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ರೋಹಿತ್​ ಅವರನ್ನು ಅಪ್ಪಿಕೊಂಡಿದ್ದಾನೆ. ಈ ವೇಳೆ ನ್ಯೂಯಾರ್ಕ್​ನ ಪೊಲೀಸ್‌ ಪಡೆ ಶರವೇಗದಲ್ಲಿ ಓಡಿ ಒಂದು ಈ ಅಭಿಮಾನಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಭಾರತ ತಂಡ ಫೀಲ್ಡಿಂಗ್​ ನಡೆಸುತ್ತಿದ್ದ ವೇಳೆ ಅಭಿಮಾನಿಯೊಬ್ಬ ಟೀಮ್​ ಇಂಡಿಯಾದ ಜೆರ್ಸಿ ತೊಟ್ಟು ನೇರವಾಗಿ ಮೈದಾನಕ್ಕೆ ಓಡಿ ಬಂದು ರೋಹಿತ್​ ಅವರನ್ನು ಅಪ್ಪಿಕೊಂಡು ಕಾಲಿಗೆ ಬಿದ್ದಿದ್ದಾನೆ. ಇದೇ ವೇಳೆ ಇಲ್ಲಿನ ಪೊಲೀಸ್‌ ಪಡೆ ಆತನನ್ನು ಮೈದಾನದಲ್ಲೇ ಕೈಗೆ ಕೋಳ ಹಾಕಿ ಎಳೆದುಕೊಂಡು ಹೋಗಿದ್ದಾರೆ. ಈ ವೇಳೆ ರೋಹಿತ್​ ಮತ್ತು ಟೂರ್ನಿಯ ಸಂಘಟಕರು ಆತನಿಗೆ ಏನು ಮಾಡಬೇಡಿ ಎಂದು ಹೇಳಿದರೂ ಕೂಡ ಕೆಳದೆ 2 ಪೊಲೀಸರು ಆತನ್ನು ಉಗ್ರಮಾಮಿಯನ್ನು ಬಂಧಿಸಿದಂತೆ ಎಳೆದುಕೊಂಡು ಹೋಗಿದ್ದಾರೆ. ಈತನಿಗೆ ಜೈಲು ಶಿಕ್ಷೆ ಖಚಿತ ಎನ್ನಲಾಗಿದೆ.

ಬೇರೆ ದೇಶದಲ್ಲಿ ಈ ರೀತಿ ಮೈದಾನಕ್ಕೆ ನುಗ್ಗಿದರೆ ಎಚ್ಚರಿಕೆ ನೀಡಿ ಕಳಿಸಲಾಗುತ್ತದೆ. ಆದರೆ ಅಮೆರಿಕದಲ್ಲಿ ಮಾತ್ರ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಯಾರು ಏನೇ ಹೇಳಿದರು ಕೂಡ ಇಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಖಚಿತ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರೊಬ್ಬರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ಹಂಚಿಕೊಂಡು ಜಾಗ್ರತೆ ವಹಿಸಿ. ಇಲ್ಲಿ ಹುಚ್ಚಾಟ ನಡೆಸಿದರೆ ಜೈಲು ಕಂಬಿ ಎಣಿಸುವುದು ನಿಶ್ಚಿತ ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ರಿಷಭ್​ ಪಂತ್​ ಅವರ ಅರ್ಧಶತಕ ಮತ್ತು ಪಾಂಡ್ಯ ಅವರ ಅಜೇಯ 40 ರನ್​ಗಳ ನೆರವಿನಿಂದ 5 ವಿಕೆಟಿಗೆ 182 ರನ್‌ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾ 8 ವಿಕೆಟ್ ಕಳೆದುಕೊಂಡು 121 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಬಾಂಗ್ಲಾ ತಂಡ ಇದಕ್ಕೂ ಮುನ್ನ ಆಡಿದ ಅಭ್ಯಾಸ ಪಂದ್ಯದಲ್ಲಿ ಅಮೆರಿಕ ವಿರುದ್ಧವೂ ಸೋಲು ಕಂಡಿತ್ತು.

ಇದನ್ನೂ ಓದಿ IND vs BAN: ಪಾಂಡ್ಯ ಬಲಿಷ್ಠ ಹೊಡೆತಕ್ಕೆ ನೆತ್ತರು ಚೆಲ್ಲಿದ ಬಾಂಗ್ಲಾ ಬೌಲರ್; ವಿಡಿಯೊ ವೈರಲ್​

ಐಪಿಎಲ್​ನಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡರಲ್ಲೂ ವಿಫಲವಾಗಿದ್ದ ಹಾರ್ದಿಕ್​ ಪಾಂಡ್ಯ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆದಿದ ಪಾಂಡ್ಯ ಬಿರುಸಿನ ಬ್ಯಾಟಿಂಗ್​ ಮೂಲಕ ಕೇವಲ 23 ಎಸೆತಗಳಿಂದ 2 ಬೌಂಡರಿ ಮತ್ತು 4 ಸಿಕ್ಸರ್‌ ಸಹಿತ ಅಜೇಯ 40 ರನ್ ಚಚ್ಚಿದರು. ಒಂದು ವಿಕೆಟ್​ ಕೂಡ ಕಿತ್ತರು.ಕಾರು ಅಪಘಾತದ ಬಳಿಕ ಮೊದಲ ಬಾರಿ ಟೀಮ್​ ಇಂಡಿಯಾ ಪರ ಆಡಿದ ರಿಷಭ್​ ಪಂತ್​ ಪ್ರಚಂಡ ಬ್ಯಾಟಿಂಗ್​ ನಡೆಸುವ ಮೂಲಕ ಗಮನಸೆಳೆದರು. ತಮ್ಮ ನೆಚ್ಚಿನ ಒನ್​ ಹ್ಯಾಂಡ್​ ಸಿಕ್ಸರ್​ ಕೂಡ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಿದ ಪಂತ್​ ಬರೋಬ್ಬರಿ 4 ಬೌಂಡರಿ ಮತ್ತು 4 ಸಿಕ್ಸರ್​ ಬಾರಿಸಿ 53 ರನ್​ ಗಳಿಸಿದರು.

Continue Reading
Advertisement
Karnataka Rain
ಮಳೆ8 mins ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Bhavani Revanna hide Not Present For SIT Questioning At Home
ಕರ್ನಾಟಕ11 mins ago

Bhavani Revanna: ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ; ಎಸ್ ಐ ಟಿಗೆ ಅರೆಸ್ಟ್ ಮಾಡಿ ಜೈಲಿಗಟ್ಟುವ ಹಠ!

IND vs PAK
ಕ್ರಿಕೆಟ್18 mins ago

IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

Foeticide Case Foeticide another Case in Bagalkot
ಬಾಗಲಕೋಟೆ50 mins ago

Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

Healthy Sandwich Spread
ಆರೋಗ್ಯ54 mins ago

Healthy Sandwich Spread: ಮನೆಯಲ್ಲೇ ಮಾಡಿ ಕಡಿಮೆ ಕ್ಯಾಲರಿಯ ಆರೋಗ್ಯಕರ ಸ್ಯಾಂಡ್‌ವಿಚ್‌ ಸ್ಪ್ರೆಡ್‌!

Taiwan Athletics Open
ಕ್ರೀಡೆ1 hour ago

Taiwan Athletics Open: ತೈವಾನ್‌ ಓಪನ್​ನಲ್ಲಿ ಚಿನ್ನ ಗೆದ್ದ ಕನ್ನಡಿಗ ಡಿ.ಪಿ. ಮನು

Assembly Election Results 2024:
ದೇಶ1 hour ago

Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ, ಸಿಕ್ಕಿಂನಲ್ಲಿ ಕ್ಲೀನ್‌ ಸ್ವೀಪ್‌ನತ್ತ SKM

Man
ಆರೋಗ್ಯ1 hour ago

Health Tips For Rainy Season: ಮಳೆಗಾಲ ಶುರುವಾಗಿದೆ, ಅನಾರೋಗ್ಯಕ್ಕೆ ತುತ್ತಾಗದಿರಲು ಈ ಸಲಹೆ ಪಾಲಿಸಿ

WhatsApp Features
ಗ್ಯಾಜೆಟ್ಸ್1 hour ago

WhatsApp Features: ವಾಟ್ಸ್ ಆ್ಯಪ್ ನಲ್ಲಿರುವ ಈ 7 ವಿಶೇಷ ಫೀಚರ್ ಗಳ ಬಗ್ಗೆ ಗೊತ್ತೇ? ನೀವೂ ಬಳಸಿ

USA vs CAN
ಕ್ರೀಡೆ2 hours ago

USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು18 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌