Zaheer Khan: ಟೀಮ್​ ಇಂಡಿಯಾ ಇನ್ನೂ ಹಳೆಯ ಬೋಟ್​ನಲ್ಲೇ ಪ್ರಯಾಣಿಸುತ್ತಿದೆ; ಜಹೀರ್​ ಖಾನ್​ ಹೀಗೆ ಹೇಳಿದ್ದು ಏಕೆ? Vistara News
Connect with us

ಕ್ರಿಕೆಟ್

Zaheer Khan: ಟೀಮ್​ ಇಂಡಿಯಾ ಇನ್ನೂ ಹಳೆಯ ಬೋಟ್​ನಲ್ಲೇ ಪ್ರಯಾಣಿಸುತ್ತಿದೆ; ಜಹೀರ್​ ಖಾನ್​ ಹೀಗೆ ಹೇಳಿದ್ದು ಏಕೆ?

ಇದೇ ವರ್ಷ ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್​ಗೆ ತಯಾರಿ ನಡೆಸುತ್ತಿರುವ ಟೀಮ್ ಇಂಡಿಯಾ ಇನ್ನೂ ಹಳೆಯ ಬೋಟ್​ನಲ್ಲೇ ಪ್ರಯಾಣಿಸುತ್ತಿದೆ ಎಂದು ಜಹೀರ್ ಖಾನ್ ಹೇಳಿದ್ದಾರೆ.

VISTARANEWS.COM


on

Zaheer Khan Team India is still sailing in an old boat Why did Zaheer Khan say this
Koo

ಮುಂಬಯಿ: ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲಿ ಭಾರತ ಸೋಲು ಕಂಡ ಬಳಿಕ ಏಕದಿನ ವಿಶ್ವಕಪ್​ನಲ್ಲಿ ಟೀಮ್​ ಇಂಡಿಯಾದ ಪ್ರದರ್ಶನದ ಬಗ್ಗೆ ಹಲವು ಕ್ರಿಕೆಟ್​ ಪಂಡಿತರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿಲು ಆರಂಭಿಸಿದ್ದಾರೆ. ಇದೀಗ ಈ ಸಾಲಿಗೆ 2011ರ ವಿಶ್ವ ಕಪ್(2019 World Cup)​ ವಿಜೇತ ತಂಡ ವೇಗಿ ಜಹೀರ್ ಖಾನ್​​(Zaheer Khan) ಕೂಡ ಸೇರಿದ್ದಾರೆ. ಇದೇ ವರ್ಷ ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್​ಗೆ ತಯಾರಿ ನಡೆಸುತ್ತಿರುವ ಟೀಮ್ ಇಂಡಿಯಾ ಇನ್ನೂ ಹಳೆಯ ಬೋಟ್​ನಲ್ಲೇ ಪ್ರಯಾಣಿಸುತ್ತಿದೆ ಎಂದು ಹೇಳಿದ್ದಾರೆ.

ಕ್ರಿಕ್​ ಬಝ್​ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಜಹೀರ್ ಖಾನ್​ , “ಟೀಮ್​ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಖಂಡಿತವಾಗಿಯೂ ಮತ್ತೊಮ್ಮೆ ಚಿಂತಿಸುವ ಅಗತ್ಯವಿದೆ. ನಾಲ್ಕನೇ ಕ್ರಮಾಂಕದ ಆಯ್ಕೆಯ ಲೆಕ್ಕಾಚಾರ ಇನ್ನೂ ಬಗೆಹರಿದಿಲ್ಲ. ಇದು 2019ರ ವಿಶ್ವಕಪ್​ನಲ್ಲೂ ಚರ್ಚೆಗೆ ಕಾರಣವಾಗಿತ್ತು. ನಾಲ್ಕು ವರ್ಷಗಳ ಬಳಿಕವೂ ನಾವು ಅದೇ ದೋಣಿಯಲ್ಲಿದ್ದೇವೆ. ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದ ಆಟಗಾರ ಎಂದು ನನಗೆ ಗೊತ್ತು. ಆದರೆ ಅವರು ಈಗ ದೀರ್ಘಕಾಲದವರೆಗೆ ಗಾಯಗೊಂಡಿದ್ದರೆ. ಹೀಗಾಗಿ ಇದಕ್ಕೆ ಶೀಘ್ರದಲ್ಲೇ ಉತ್ತರ ಕಂಡುಕೊಳ್ಳಬೇಕಾದ ಸಮಯ ಬಂದಿದೆ” ಎಂದು ಬಿಸಿಸಿಐ ಮತ್ತು ಆಯ್ಕೆ ಸಮಿತಿಗೆ ಜಹೀರ್​ ಸಲಹೆಯೊಂದನ್ನು ನೀಡಿದ್ದಾರೆ.

ಭಾರತದ ಏಕದಿನ ತಂಡದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡುವ ನಿರೀಕ್ಷೆಯಲ್ಲಿದ್ದ ಸೂರ್ಯಕುಮಾರ್ ಯಾದವ್(Suryakumar Yadav) ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಸರಣಿಯಲ್ಲಿ ಸತತ ಮೂರು ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು. ಇದು ಅವರ ಏಕದಿನ ಭವಿಷ್ಯದ ಮೇಲೆ ಗಂಭೀರ ಪ್ರಶ್ನೆಗಳು ಏಳುವಂತೆ ಮಾಡಿದೆ. ಇನ್ನೊಂದೆಡೆ ಗಾಯದ ಸಮಸ್ಯೆಯೂ ಕಾಡುತ್ತಿದೆ. ಒಟ್ಟಾರೆ ಭಾರತದಲ್ಲಿ ಸದ್ಯ ಕೊಹ್ಲಿ ಮತ್ತು ರೋಹಿತ್​ ಅವರನ್ನು ಹೊರತುಪಡಿಸಿ ಇನಿಂಗ್ಸ್​ ಕಟ್ಟುವ ಆಟಗಾರರ ಕೊರತೆ ಎದ್ದು ಕಾಣುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ World Cup 2023 : ಟೀಕೆ ನಿಲ್ಲಿಸಿ, ವಿಶ್ವ ಕಪ್ ಗೆಲ್ಲಲಿದೆ ಭಾರತ ತಂಡ ಎಂದಿದ್ದಾರೆ ಮಾಜಿ ಹೆಡ್​​ ಕೋಚ್​

ನಾವು ವಿಶ್ವ ಕಪ್ ಗೆಲ್ಲುವ ಸಮಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕೊಹ್ಲಿ, ಧೋನಿ, ಯುವರಾಜ್​ ಸಿಂಗ್​, ಸುರೇಶ್​ ರೈನಾ ಅವರಂತರ ಶ್ರೇಷ್ಠ ಆಟಗಾರರನ್ನು ಹೊಂದಿದ್ದೆವು. ಆದರೆ ಈಗ ಭಾರತದಲ್ಲಿ ಇಂತಹ ಮ್ಯಾಚ್​ ವಿನ್ನಿಂಗ್​ ಮತ್ತು ಇನಿಂಗ್ಸ್​ ಬೆಳೆಸುವ ಆಟಗಾರರ ಕೊರತೆ ಎದ್ದು ಕಾಣುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಾಣದ ಹೊರತು ಭಾರತ ವಿಶ್ವ ಕಪ್​ ಗೆಲ್ಲುವುದು ಅನುಮಾನ ಎಂದು ಜಹೀರ್​ ಖಾನ್​ ಅಭಿಪ್ರಾಯಪಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರಿಕೆಟ್

IPL 2023: ಗಿಲ್​ ಕ್ರಿಕೆಟ್​ ಭವಿಷ್ಯ ನುಡಿದ ಕಪಿಲ್ ದೇವ್​

ಗಿಲ್​ ಅವರು ಭಾರತ ಕಂಡ ದಿಗ್ಗಜ ಕ್ರಿಕೆಟ್​ ಆಟಗಾರರ ಸಾಲಿಗೆ ಸೇರಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ ಕಪಿಲ್‌ ದೇವ್ ಅವರು ಭವಿಷ್ಯ ನುಡಿದಿದ್ದಾರೆ.

VISTARANEWS.COM


on

Edited by

kapil dev 1983 world cup captain
Koo

ಮುಂಬಯಿ: ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ಶುಭಮನ್​ ಗಿಲ್ ಅವರ ಪ್ರದರ್ಶನಕ್ಕೆ 1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್‌ ದೇವ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ ಅವರ ಕ್ರಿಕೆಟ್​ ಬಗೆಗಿನ ಭವಿಷ್ಯವನ್ನು ನುಡಿದಿದ್ದಾರೆ. ಗಿಲ್​ ಅವರು ಭಾರತ ಕಂಡ ದಿಗ್ಗಜ ಕ್ರಿಕೆಟ್​ ಆಟಗಾರರ ಸಾಲಿಗೆ ಸೇರಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದರುವ ಕಪಿಲ್​, “ಸುನಿಲ್ ಗವಾಸ್ಕರ್ ಬಳಿಕ ಸಚಿನ್ ತೆಂಡೂಲ್ಕರ್ ಬಂದರು, ಅದಾದ ಬಳಿಕ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್, ವಿರಾಟ್ ಕೊಹ್ಲಿ ಹೀಗೆ ಹಲವು ಆಟಗಾರರು ಕಾಣಿಸಿಕೊಂಡರು. ಇದೀಗ ಶುಭಮನ್​ ಗಿಲ್​ ಅವರ ಉದಯವಾಗಿದೆ. ಈ ಯುವ ಆಟಗಾರ ಇನ್ನು ಕೆಲ ಕಾಲ ಭಾರತ ಕ್ರಿಕೆಟ್​ ತಂಡವನ್ನು ಆಳುವುದರಲ್ಲಿ ಯಾವುದೇ ಅನುಮಾನವಿಲ್ಲ. ಅವಕ ಕ್ರಿಕೆಟ್​ ಕೌಶಲವನ್ನು ನೋಡುವಾಗ ಇದು ಅರಿವಿಗೆ ಬರುತ್ತದೆ” ಎಂದರು.

ವಿರಾಟ್​ ಕೊಹ್ಲಿ ಟೀಮ್​ ಇಂಡಿಯಾಕ್ಕೆ ಬಂದಾಗಲೂ ಇದೇ ರೀತಿಯ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದರು. ಮುಂದಿನದ್ದು ಇತಿಹಾಸ. ಇದೀಗ ಕೊಹ್ಲಿಯಂತೆಯೇ ಗಿಲ್ ಕೂಡ ಹಲವು ದಾಖಲೆಗಳನ್ನು ಬರೆಯುವ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ವಿಶೇಷ ಸ್ಥಾನ ಪಡೆಯುವ ವಿಶ್ವಾಸ ನನ್ನಲ್ಲಿದೆ ಎಂದು ಕಪಿಲ್​ ಅಭಿಪ್ರಾಯಪಟ್ಟರು. ಇದರ ಜತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ. ಆಟದ ಗಮನವನ್ನು ಯಾವತ್ತು ಕಳೆದುಕೊಳ್ಳಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

ಶುಭಮನ್​ ಗಿಲ್​ ಅವರು ಈ ಬಾರಿಯ ಐಪಿಎಲ್​ನಲ್ಲಿ ಮೂರು ಶತಕ ಬಾರಿಸಿ ಮಿಂಚಿದ್ದಾರೆ. ಸದ್ಯ ಇಂದು ನಡೆಯುವ ಚೆನ್ನೈ ವಿರುದ್ಧದ ಫೈನಲ್​ ಪಂದ್ಯದಲ್ಲಿಯೂ ಅವರ ಬ್ಯಾಟಿಂಗ್​ ಮೇಲೆ ಹಲವರು ಬೆಟ್ಟದಂತ ನಿರೀಕ್ಷೆ ಇರಿಸಿದ್ದಾರೆ. ಈಗಾಗಲೇ ಭಾರತ ತಂಡದ ಪರ ಏಕದಿನದಲ್ಲಿ ದ್ವಿಶತಕ ಬಾರಿಸಿದ ಸಾಧನೆಯನ್ನೂ ಮಾಡಿದ್ದಾರೆ. ಸದ್ಯಕ್ಕಂತು ಅವರನ್ನು ಭಾರತದ ನವ ಕ್ರಿಕೆಟ್​ ತಾರೆ ಎಂದೇ ಬಣ್ಣಿಸಲಾಗಿದೆ.

Continue Reading

ಕ್ರಿಕೆಟ್

IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

ಈಗಾಗಲೇ ಆರೆಂಜ್​ ಕ್ಯಾಪ್​​ ಪಡೆದಿರುವ ಶುಭಮನ್​ ಗಿಲ್ ಅವರು ವಿರಾಟ್​ ಕೊಹ್ಲಿಯ ದಾಖಲೆಯೊಂದನ್ನು ಮುರಿಯಲು ಸಜ್ಜಾಗಿದ್ದಾರೆ.

VISTARANEWS.COM


on

Edited by

ipl records gill
Koo

ಅಹಮದಾಬಾದ್​: ನ್ಯೂ ಬ್ಯಾಟಿಂಗ್​ ಸೆನ್ಸೇಷನಲ್ ಶುಭಮನ್​ ಗಿಲ್ ಅವರು ಇದೀಗ ಐಪಿಎಲ್​ನಲ್ಲಿ ವಿರಾಟ್​ ಕೊಹ್ಲಿಯ ದಾಖಲೆಯೊಂದರ ಮೇಲೆ ಕಣ್ಣಿಟ್ಟಿದ್ದಾರೆ. ಸದ್ಯ 851 ರನ್​ ಗಳಿಸಿರುವ ಗಿಲ್​ ಅವರು ಚೆನ್ನೈ ವಿರುದ್ಧದ ಪಂದ್ಯದಲ್ಲಿ 122ರನ್​ ಗಳಿಸಿದರೆ ವಿರಾಟ್​ ಅವರ ಹೆಸರಿನಲ್ಲಿದ್ದ ದಾಖಲೆ ಪತನಗೊಳ್ಳಲಿದೆ.

ಮುಂಬೈ ಇಂಡಿಯನ್ಸ್​ ವಿರುದ್ಧದ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಮಿಂಚಿದ್ದ ಗಿಲ್​ ಅವರು ಈ ಬಾರಿಯ ಐಪಿಎಲ್​ನ​ ಆರೆಂಜ್​ ಕ್ಯಾಪ್ ಮುಡಿಗೇರಿಸಿಕೊಂಡಿದ್ದರು. 730 ರನ್​ ಗಳಿಸಿ ಅಗ್ರಸ್ಥಾನದಲ್ಲಿದ್ದ ಡು ಪ್ಲೆಸಿಸ್ ಇದೀಗ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ. ಸದ್ಯ ಗಿಲ್​ ಅವರು 851 ರನ್​ ಬಾರಿಸಿದ್ದಾರೆ. ಆರ್​ಸಿಬಿ ತಂಡ ಸೋತು ಹೊರ ಬಿದ್ದ ಕಾರಣ ಡು ಪ್ಲೆಸಿಸ್​ಗೆ ಇನ್ನು ಗಿಲ್​ ದಾಖಲೆ ಮುರಿಯುವ ಅವಕಾಶವಿಲ್ಲ.

ಕಳೆದ ನಾಲ್ಕು ಇನ್ನಿಂಗ್ಸ್​ಗಳಲ್ಲಿ ಮೂರು ಶತಕ ಬಾರಿಸಿರುವ ಗಿಲ್​ ಇದೀಗ ಹೊಸ ಮೈಲಿಗಲ್ಲು ಸ್ಥಾಪಿಸುವ ಸನಿಹದಲ್ಲಿದ್ದಾರೆ. 2016ರಲ್ಲಿ ವಿರಾಟ್ ಕೊಹ್ಲಿ ಅವರು ಗಳಿಸಿದ್ದ 973ರನ್​ ಗಳ ದಾಖಲೆಯನ್ನು ಮುರಿಯಲು ಮುಂದಾಗಿದ್ದಾರೆ. ಇದಕ್ಕೆ ಗಿಲ್​ ಅವರಿಗೆ ಬೇಕಿರುವುದು 122ರನ್​ಗಳ ಗುರಿ. ಫೈನಲ್​ ಪಂದ್ಯದಲ್ಲಿ ಶತಕದೊಂದಿ ಈ ಮೊತ್ತ ಪೇರಿಸಿದಲ್ಲಿ ಗಿಲ್​ ಅವರು ಐಪಿಎಲ್ನ ಇತಿಹಾಸದ ಪುಟ ಸೇರಲಿದ್ದಾರೆ.

ಫೈನಲ್​ ಪಂದ್ಯಕ್ಕೆ ಉಭಯ ತಂಡಗಳು

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್/ ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ಯಶ್ ದಯಾಳ್, ನೂರ್ ಅಹ್ಮದ್/ ಜೋಶುವಾ ಲಿಟಲ್, ಮೋಹಿತ್ ಶರ್ಮಾ.

ಇದನ್ನೂ ಓದಿ IPL 2023 : ತಮ್ಮ ದೇಹದಲ್ಲಿರುವ ಟ್ಯಾಟೂಗಳ ಅರ್ಥ ವಿವರಿಸಿದ ಸೂರ್ಯಕುಮಾರ್!

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು/ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಥೀಶಾ ಪತಿರಾಣಾ, ಮಹೀಶ್ ತೀಕ್ಷಣ.

Continue Reading

ಕ್ರಿಕೆಟ್

IPL 2023: ಫೈನಲ್​ ಪಂದ್ಯಕ್ಕೆ ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್​ ಇಲೆವೆನ್​

ಗುಜರಾತ್ ಟೈಟನ್ಸ್​​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ನಡುವಿನ ಫೈನಲ್​ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ಈ ಹೋರಾಟ ಇಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

Edited by

Narendra Modi Stadium Ahmedabad
Koo

ಅಹಮದಾಬಾದ್​: ಹಾಲಿ ಚಾಂಪಿಯನ್​ ಗುಜರಾತ್ ಟೈಟನ್ಸ್​​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ನಡುವಿನ ಫೈನಲ್​ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ಈ ಪ್ರಶಸ್ತಿ ಸಮರಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಸರ್ವ ವಿಧದಲ್ಲೂ ಸಜ್ಜಾಗಿ ನಿಂತಿದೆ. ಈ ಪಂದ್ಯಕ್ಕೆ ಇತ್ತಂಡಗಳ ಪ್ಲೇಯಿಂಗ್​ ಇಲೆವೆನ್​ ಹೇಗಿರಲಿದೆ ಎಂಬ ಮಾಹಿತಿ ಇಂತಿದೆ.

ಸಮಬಲದ ತಂಡಗಳು

ಎರಡೂ ತಂಡಗಳು ಸಮಬಲದಿಂದ ಕೂಡಿದೆ. ಬ್ಯಾಟಿಂಗ್​ ಮತ್ತು ಬೌಲಿಂಗ್‌ ದಾಳಿ ಸಂಘಟಿಸುವಲ್ಲಿ ಎರಡೂ ತಂಡಗಳು ಬಲಿಷ್ಠವಾಗಿದೆ. ಗುಜರಾತ್​ ಪರ ಶುಭಮನ್‌ ಗಿಲ್‌, ಸಾಯಿ ಸುದರ್ಶನ್‌, ವಿಜಯ್‌ ಶಂಕರ್‌, ಡೇವಿಡ್‌ ಮಿಲ್ಲರ್‌, ರಾಹುಲ್‌ ತೆವಾಟಿಯ ಅತ್ಯಂತ ಅಪಾಯಕಾರಿಗಳು. ಚೆನ್ನೈ ಪರ ಋತುರಾಜ್​ ಗಾಯಕ್ವಾಡ್​, ಡೆವೋನ್​ ಕಾನ್ವೆ, ರಹಾನೆ ಮತ್ತು ಶಿವಂ ದುಬೆ ಕೂಡ ಸಿಡಿಯಬಲ್ಲರು. ಆದರೆ ಮೊಯಿನ್​ ಅಲಿ ಈ ಆವೃತ್ತಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ಅವರು ಮಹತ್ವದ ಪಂದ್ಯದಲ್ಲಿ ಆಡಬೇಕಾದ ಅನಿವಾರ್ಯತೆ ಇದೆ.

ಮುಖಾಮುಖಿ

ಚೆನ್ನೈ ಮತ್ತು ಗುಜರಾತ್​ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ 4 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಗುಜರಾತ್​ ಮೂರು ಬಾರಿ ಗೆದ್ದಿದೆ. ಚೆನ್ನೈ ತಂಡ ಒಂದು ಪಂದ್ಯ ಗೆದ್ದಿದೆ. ಈ ಗೆಲುವು ಇದೇ ಆವೃತ್ತಿಯ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ದಾಖಲಾಗಿತ್ತು. ಅಹಮದಾಬಾದ್​ನಲ್ಲೇ ನಡೆದ ಉದ್ಘಾಟನ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗುಜರಾತ್​ ಗೆದ್ದು ತನ್ನ ಅಭಿಯಾನವನ್ನು ಆರಂಭಿಸಿತ್ತು. ಇದೀಗ ಅಂತಿಮ ಪಂದ್ಯದಲ್ಲಿಯೂ ಇತ್ತಂಡಗಳು ಮುಖಾಮುಖಿಯಾಗಿವೆ. ಇಲ್ಲಿ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದು ಈ ಪಂದ್ಯದ ಕೌತುಕ.

ಸಂಭಾವ್ಯ ತಂಡಗಳು

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್/ ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ಯಶ್ ದಯಾಳ್, ನೂರ್ ಅಹ್ಮದ್/ ಜೋಶುವಾ ಲಿಟಲ್, ಮೋಹಿತ್ ಶರ್ಮಾ.

ಇದನ್ನೂ ಓದಿ IPL 2023 : ತಮ್ಮ ದೇಹದಲ್ಲಿರುವ ಟ್ಯಾಟೂಗಳ ಅರ್ಥ ವಿವರಿಸಿದ ಸೂರ್ಯಕುಮಾರ್!

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು/ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಥೀಶಾ ಪತಿರಾಣಾ, ಮಹೀಶ್ ತೀಕ್ಷಣ.

Continue Reading

ಕ್ರಿಕೆಟ್

World Cup 2023 : ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ

ಬಹುತೇಕ ಎಲ್ಲ ಮೆಟ್ರೋ ಸಿಟಿಗಳಲ್ಲಿ ಪಂದ್ಯಗಳನ್ನು ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಹೇಳಿದ್ದಾರೆ.

VISTARANEWS.COM


on

BCCI MEETING
Koo

ಅಹಮದಾಬಾದ್​​: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್​ ಫೈನಲ್​​ನಲ್ಲಿ ಆಡಲು ಇಂಗ್ಲೆಂಡ್​ಗೆ ತೆರಳಲಿದೆ. ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಟೂರ್ನಿಯ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಇದಾದ ಬಳಿಕ ನಡೆಯಲಿರುವ ಐಸಿಸಿ ಟೂರ್ನಿಯೆಂದರೆ ಏಕ ದಿನ ವಿಶ್ವ ಕಪ್​. ಇದು ಭಾರತದ ಆತಿಥ್ಯದಲ್ಲಿ ಆಯೋಜನೆಗೊಂಡಿದೆ. ಅದಕ್ಕಾಗಿ ಬಿಸಿಸಿಐ ಸಜ್ಜಾಗುತ್ತಿದೆ. ವರ್ಷದ ಕೊನೆಯಲ್ಲಿ ನಡೆಯಲಿರುವ ಈ ಟೂರ್ನಿಯ ವೇಳಾಪಟ್ಟಿ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಉಂಟಾಗಿದೆ. ಜತೆಗೆ ಪಂದ್ಯದ ತಾಣಗಳು ಎಲ್ಲೆಲ್ಲಿ ಎಂದು ತಿಳಿಯುವ ಕುತೂಹಲವೂ ಸೃಷ್ಟಿಯಾಗಿದೆ. ಮಾಹಿತಿಯೊಂದರ ಪ್ರಕಾರ ಟೂರ್ನಿಯ ವೇಳಾಪಟ್ಟಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ನ ಫೈನಲ್​ ಪಂದ್ಯದ ಬಳಿಕ ನಡೆಯಲಿದೆ.

ಡಬ್ಲ್ಯುಟಿಸಿ ಫೈನಲ್ ಸಮೀಪಿಸುತ್ತಿರುವುದರಿಂದ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದ ಸಮಯದಲ್ಲಿ ಬಿಸಿಸಿಐ ವಿಶ್ವಕಪ್​ನ ಸ್ಥಳಗಳು ಮತ್ತು ವೇಳಾಪಟ್ಟಿಯನ್ನು ಅನಾವರಣ ಮಾಡಲಿದೆ ಎಂದು ಹಲವಾರು ವರದಿಗಳು ಹೇಳುತ್ತಿವೆ.

ಬಿಸಿಸಿಐನ ವಿಶೇಷ ಸಾಮಾನ್ಯ ಸಭೆ ಮೇ 27 ರಂದು ಅಹಮದಾಬಾದ್​​ನಲ್ಲಿ ನಡೆದಿದೆ. ಅಲ್ಲಿ ಕ್ರೀಡಾಂಗಣಗಳ ಗುಣಮಟ್ಟ ಹದಗೆಡುತ್ತಿರುವುದನ್ನು ಮಂಡಳಿಯು ಬೊಟ್ಟು ಮಾಡಿ ತೋರಿಸಿದೆ. ದೇಶಾದ್ಯಂತ ಅನೇಕ ಸ್ಟೇಡಿಯಮ್​ಗಳೂ ಇರುವುದರಿಂದ ಸೌಲಭ್ಯಗಳ ಗುಣಮಟ್ಟವನ್ನು ಸುಧಾರಿಸುವ ಜವಾಬ್ದಾರಿಯನ್ನು ಆಯಾಯ ಕ್ರಿಕೆಟ್​ ಸಂಸ್ಥೆಗಳು ವಹಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಹೇಳಲಾಗಿದೆ. ಮೂಲ ಸೌಕರ್ಯ ಹೆಚ್ಚಿಸಲು ಬೇಕಾದ ಅನುದಾನ ವಿತರಣೆಗೂ ವ್ಯವಸ್ಥೆ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ :IPL 2023: ಟಿ20 ವಿಶ್ವ ಕಪ್​ಗೆ ಹಾರ್ದಿಕ್​ ಪಾಂಡ್ಯ ಸೂಕ್ತ ನಾಯಕ; ರವಿಶಾಸ್ತ್ರಿ ವಿಶ್ವಾಸ

ಬಿಸಿಸಿಐ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಕ್ರೀಡಾಂಗಣಗಳ ಸಂಭಾವ್ಯ ನವೀಕರಣಗಳ ಬಗ್ಗೆ ಚರ್ಚಿಸಲಾಯಿತು. ಮೂಲಸೌಕರ್ಯ ಸುಧಾರಣೆಯು ಹೆಚ್ಚು ಚರ್ಚಿಸಲಾದ ವಿಷಯಗಳಲ್ಲಿ ಒಂದು. ಏಕದಿನ ವಿಶ್ವ ಕಪ್ ವೇಗವಾಗಿ ಸಮೀಪಿಸುತ್ತಿರುವುದರಿಂದ, ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸು ನಿರ್ಧಾರ ಕೈಗೊಳ್ಳಲಾಯಿತು. ವಿಶ್ವ ಕಪ್​ ಅಕ್ಟೋಬರ್ ಅಥವಾ ನವೆಂಬರ್​ನಲ್ಲಿ ನಡೆಯುವ ಕಾರಣ ಅದಕ್ಕಿಂತ ಮೊದಲು ಸಜ್ಜುಗೊಳಿಸುವಂತೆ ಸೂಚಿಸಲಾಯಿತು.

ವಿಶ್ವಕಪ್ನ ಸ್ಥಳಗಳ ಯೋಜನೆಯೊಂದಿಗೆ, ಪದಾಧಿಕಾರಿಗಳಿಗೆ ನಿರ್ದಿಷ್ಟ ಸ್ಥಳಗಳ ಉಸ್ತುವಾರಿ ನೀಡುವ ಯೋಜನೆ ರೂಪಿಸಲಾಯಿತು. ನಾವು ಎಲ್ಲಾ ಮಹಾನಗರಗಳನ್ನು ಪಂದ್ಯಗಳಿಗೆ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

Continue Reading
Advertisement
Prime minister Modi in 101th Mann ki Baat
ದೇಶ6 mins ago

Mann Ki Baat : 101ನೇ ಮನ್‌ ಕಿ ಬಾತ್‌ನಲ್ಲಿ ಮೋದಿಯವರು ವೀರ ಸಾವರ್ಕರ್‌ ವಿಚಾರಗಳ ಬಗ್ಗೆ ಹೇಳಿದ್ದೇನು?

Vinayak damodar savarkar
ಅಂಕಣ7 mins ago

Savarkar Jayanti: ಭಾರತೀಯರನ್ನು ಸ್ವಸ್ವರೂಪದ ಅರಿವಿನೆಡೆಗೆ ನಡೆಸಿದ ವೀರ ಸಾವರ್ಕರ್‌

kapil dev 1983 world cup captain
ಕ್ರಿಕೆಟ್22 mins ago

IPL 2023: ಗಿಲ್​ ಕ್ರಿಕೆಟ್​ ಭವಿಷ್ಯ ನುಡಿದ ಕಪಿಲ್ ದೇವ್​

daredevil mustafa Running successful
South Cinema23 mins ago

Kannada New Movie: ʻಡೇರ್‌ಡೆವಿಲ್‌ ಮುಸ್ತಾಫಾ‌ʼ ಅಮೋಘ ಪ್ರದರ್ಶನ; ಹೊರದೇಶದಲ್ಲಿ ತೆರೆಕಾಣಲಿದೆ ಸಿನಿಮಾ

somana kunitha
ಕಲೆ/ಸಾಹಿತ್ಯ24 mins ago

ವಿಸ್ತಾರ ಯುಗಾದಿ ಕಥಾ ಸ್ಪರ್ಧೆ: ಪ್ರಥಮ ಬಹುಮಾನ 55,000 ರೂ. ಪಡೆದ ಕಥೆ: ಸೋಮನ ಕುಣಿತ

Ram Charan presents The India House Film
South Cinema24 mins ago

Ram Charan: ವೀರ್ ಸಾವರ್ಕರ್ ಜನುಮದಿನದಂದೇ ʻವಿ ಮೆಗಾ ಪಿಕ್ಚರ್ಸ್ʼ ಹೊಸ ಸಿನಿಮಾ ಅನೌನ್ಸ್‌; ವಿಡಿಯೊ ಹಂಚಿಕೊಂಡ ರಾಮ್‌ಚರಣ್‌!

PM Modi Tweet After inaugurates new Parliament building
ದೇಶ28 mins ago

ಹೊಸ ಸಂಸತ್​ ಭವನ ಉದ್ಘಾಟನೆ; ಈ ಕಟ್ಟಡ ಸಬಲೀಕರಣಕ್ಕೆ ತೊಟ್ಟಿಲಾಗಲಿ ಎಂದ ಪ್ರಧಾನಿ ಮೋದಿ

Bandipur National Park PM Narendra modi visit
ಕರ್ನಾಟಕ29 mins ago

Bandipur National Park: ಬಂಡೀಪುರವೀಗ ಫುಲ್‌ ರಶ್, ದಿನಕ್ಕೆ 8 ಲಕ್ಷ ರೂ. ಆದಾಯ; ಇದು ಮೋದಿ ಎಫೆಕ್ಟ್‌!

CM Siddaramaiah and B Nagendra and DK Shivakumar
ಕರ್ನಾಟಕ34 mins ago

Karnataka Cabinet: 34 ಸಚಿವರ ಪೈಕಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, ನಂ.1 ಸ್ಥಾನದಲ್ಲಿ ಯಾರಿದ್ದಾರೆ?

Rain alert
ಉಡುಪಿ49 mins ago

Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ2 hours ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ8 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ19 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!