ChatGPT: ಚಾಟ್‌ಜಿಪಿಟಿ ಮೂಲಕ ಬರ್ಲಿನ್‌ ನಗರದಲ್ಲಿ ಬಾಡಿಗೆ ಮನೆ ಹುಡುಕಿದ ಯುವಕ! - Vistara News

ತಂತ್ರಜ್ಞಾನ

ChatGPT: ಚಾಟ್‌ಜಿಪಿಟಿ ಮೂಲಕ ಬರ್ಲಿನ್‌ ನಗರದಲ್ಲಿ ಬಾಡಿಗೆ ಮನೆ ಹುಡುಕಿದ ಯುವಕ!

ChatGPT: ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ದಿಮತ್ತೆ ಆಧರಿತ ಚಾಟ್‌ಜಿಪಿಟಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಈ ಚಾಟ್‌ಜಿಪಿಟಿಯ ಬಳಕೆಯ ಸಾಧ್ಯತೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ.

VISTARANEWS.COM


on

ChatGPT
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬೃಹತ್ ನಗರಗಳಲ್ಲಿ ಬಾಡಿಗೆ ಮನೆ ಹುಡುಕುವುದು ಸರಳವಲ್ಲ. ತುಂಬಾ ಕಷ್ಟಪಡಬೇಕಾಗುತ್ತದೆ. ಇದಕ್ಕಾಗಿ ಸಾಕಷ್ಟು ಆ್ಯಪ್‌ಗಳಿವೆ. ಆದರೂ, ಬಾಡಿಗೆ ಮನೆ ಹುಡುಕುವುದು ಹರಸಾಹಸದ ಕೆಲಸವೇ ಸರಿ. ಆದರೆ, ಎಐ ಆಧರಿತ ಚಾಟ್‌ಜಿಪಿಟಿ ನಿಮ್ಮ ಕೆಲಸವನ್ನು ಹಗುರ ಮಾಡುತ್ತಿದೆ. ಹೌದು, 28 ವರ್ಷದ ಯುವಕನೊಬ್ಬ ಜರ್ಮನಿಯ ಬರ್ಲಿನ್‌ (Berlin) ನಗರದಲ್ಲಿ ಬಾಡಿಗೆ ಮನೆ ಹುಡುಕಿ ಸುಸ್ತಾಗಿದ್ದ. ಆದರೂ ಸಿಕ್ಕಿರಲಿಲ್ಲ. ಕೊನೆಗೆ ಚಾಟ್‌ಜಿಪಿಟಿ (ChatGPT) ಮೂಲಕ ಎರಡೇ ವಾರದಲ್ಲಿ ಆತನಿಗೆ ಮನೆ ಸಿಕ್ಕಿದೆ!(Viral News)

ಇಡಬ್ಲ್ಯೂಒಆರ್ ಎಂಬ ಸಾಹಸೋದ್ಯಮ ಬಂಡವಾಳ ಸಂಸ್ಥೆಯನ್ನು ನಡೆಸುತ್ತಿರುವ 28 ವರ್ಷದ ಉದ್ಯಮಿ ಡೇನಿಯಲ್ ಡಿಪೋಲ್ಡ್ ಮತ್ತು ಅವನ ಗೆಳತಿ ಬರ್ಲಿನ್‌ ನಗರದಲ್ಲಿ ಅಪಾರ್ಟ್‌ಮೆಂಟ್‌ ಬಾಡಿಗೆ ಪಡೆಯಲು ಭಾರೀ ಕಷ್ಟಪಟ್ಟಿದ್ದರು. ಆದರೂ ಸಿಕ್ಕಿರಲಿಲ್ಲ. ಸುಮಾರು ನಾಲ್ಕು ತಿಂಗಳುಗಳ ಕಾಲ ಹುಡುಕಿದರು. ಜತೆಗೆ Immo Scout24, immowelt ಮತ್ತು Immonet ಜನಪ್ರಿಯ ರಿಯಾಲ್ಟಿ ವೆಬ್‌ಸೈಟ್‌ಗಳ ಮೂಲಕ ಹುಡುಕಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ತಮಗೆ ಪರಿಚಯದವರ ಮೂಲಕವೂ ಬಾಡಿಗೆ ಮನೆಗೆ ಪ್ರಯತ್ನಿಸಿದರೂ ಏನೂ ಲಾಭವಾಗಲಿಲ್ಲ.

ತಿಂಗಳುಗಟ್ಟಲೆ ಬಾಡಿಗೆ ಮನೆ ಪಡೆಯಲು ಕಷ್ಟಪಟ್ಟ ನಂತರ ಡಿಪೋಲ್ಡ್ ಅವರು ಚಾಟ್‌ಜಿಪಿಟಿ ಮೊರೆ ಹೋದರು. ಬುದ್ಧಿವಂತ ಮತ್ತು ತಂತ್ರಜ್ಞಾನ-ಕೇಂದ್ರಿತ ವಿಧಾನವನ್ನು ಬಳಸಿಕೊಂಡು ಅಪಾರ್ಟ್‌ಮೆಂಟ್ ಹೇಗೆ ಕಂಡುಹಿಡಿಯುವುದು ಎಂಬುದರ ಕುರಿತು 20 ಐಡಿಯಾಗಳನ್ನು ಒದಗಿಸುವಂತೆ ಅವರು ಚಾಟ್‌ಬಾಟ್‌ಗೆ ಕೇಳಿದರು. ಹೌಸಿಂಗ್ ವೆಬ್‌ಸೈಟ್‌ಗಳಲ್ಲಿ ಸ್ವಯಂಚಾಲಿತ ಎಚ್ಚರಿಕೆಗಳನ್ನು ಹೊಂದಿಸುವುದು ಮತ್ತು ಉತ್ತಮ ವ್ಯವಹಾರಗಳೊಂದಿಗೆ ಪ್ರದೇಶಗಳನ್ನು ನಿರ್ಧರಿಸಲು ಮಷಿನ್ ಲರ್ನಿಂಗ್ ಸಿಸ್ಟಮ್ ರಚಿಸುವಂತಹ ವಿವಿಧ ಸಲಹೆಗಳೊಂದಿಗೆ ಚಾಟ್‌ಬಾಟ್ ಉತ್ತರಗಳನ್ನು ನೀಡಿತು.

ಇದನ್ನೂ ಓದಿ: Apple employees : ಆ್ಯಪಲ್‌ ಉದ್ಯೋಗಿಗಳಿಗೆ ಚಾಟ್‌ಜಿಪಿಟಿ ಬ್ಯಾನ್‌, ಕಾರಣವೇನು?

ಚಾಟ್‌ಜಿಪಿಟಿ ನೀಡಿದ ಕೆಲವು ಸಲಹೆಗಳು ಡಿಪೋಲ್ಡ್‌ನಲ್ಲಿ ಆಸಕ್ತಿ ಹುಟ್ಟು ಹಾಕಿದರೂ, ಬಹಳಷ್ಟು ಸಲಹೆಗಳು ಪ್ರಾಯೋಗಿಕವಾಗಿರಲಿಲ್ಲ ಎಂಬುದನ್ನು ಅವರು ಕಂಡುಕೊಂಡರು. ಹಾಗಾಗಿ, ಮತ್ತೆ ಸಲಹೆ ನೀಡುವಂತೆ ಚಾಟ್‌ಜಿಪಿಟಿಗೆ ಕೇಳಿಕೊಂಡರು. ಆಗ ಬಂದ ಕೆಲವು ಸಲಹೆಗಳ ಪೈಕಿ ಕೆಲವು ತುಂಬಾ ಚೆನ್ನಾಗಿದ್ದವು. ಈ ಪೈಕಿ ಒಂದು ಸಲಹೆಯಲ್ಲಿ, ಬರ್ಲಿನ್‌ನಲ್ಲಿರುವ ಎಲ್ಲ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳ ವ್ಯವಸ್ಥಾಪಕರ ಮಾಹಿತಿಯನ್ನು ಒಳಗೊಂಡ ಡೇಟಾ ಬೇಸ್ ರಚಿಸುವುದು ಮತ್ತು ಅದರಿಂದ ಸಂಭಾವ್ಯ ಬಾಡಿಗೆ ಆಯ್ಕೆಗಳನ್ನು ಗುರುತಿಸುವುದಾಗಿತ್ತು. ಈ ಮಾರ್ಗದ ಮೂಲಕ ಅವರು ಕೊನೆಗೂ ಬಾಡಿಗೆ ಅಪಾರ್ಟ್‌ಮೆಂಟ್ ಪಡೆದುಕೊಂಡರು.

ಇನ್ನಷ್ಟು ಕುತೂಹಲಕರ ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

Whatsapp: ಎನ್‌ಕ್ರಿಪ್ಶನ್‌ ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತ ತೊರೆಯುತ್ತೇವೆ ಎಂಬುದಾಗಿ ದೆಹಲಿ ಹೈಕೋರ್ಟ್‌ಗೆ ವಾಟ್ಸ್‌ಆ್ಯಪ್‌ ಪರ ವಕೀಲರು ತಿಳಿಸಿದ್ದಾರೆ. ಜನರು ತಾವು ಕಳುಹಿಸುವ ಮೆಸೇಜ್‌ಗೆ ಸುರಕ್ಷತೆ ಇದೆ, ಬೇರೆ ಯಾರೂ ಓದುವುದಿಲ್ಲ ಎಂಬ ಕಾರಣಕ್ಕಾಗಿ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಅದಕ್ಕೆ ಧಕ್ಕೆಯಾದರೆ ಭಾರತದಲ್ಲಿ ಇರಲ್ಲ ಎಂದು ವಾಟ್ಸ್‌ಆ್ಯಪ್‌ ತಿಳಿಸಿದೆ.

VISTARANEWS.COM


on

Whatsapp
Koo

ನವದೆಹಲಿ: ಭಾರತದಲ್ಲಿ ಕೋಟ್ಯಂತರ ಜನ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಟೆಲಿಗ್ರಾಮ್ ಸೇರಿ ಹಲವು ಮೆಸೇಜಿಂಗ್‌ ಆ್ಯಪ್‌ಗಳು ಇದ್ದರೂ ವಾಟ್ಸ್‌ಆ್ಯಪ್‌‌ (WhatsApp) ಹೆಚ್ಚು ಜನಪ್ರಿಯವಾಗಿದೆ. ಮೆಸೇಜ್‌, ಫೋಟೊ, ವಿಡಿಯೊಗಳನ್ನು ಕಳುಹಿಸುವ ಜತೆಗೆ ವಾಟ್ಸ್‌ಆ್ಯಪ್‌ ಸ್ಟೇಟಸ್‌ ಕೂಡ ಜನರ ಮನಸೆಳೆದಿದೆ. ಆದರೆ, ಇಷ್ಟೊಂದು ಖ್ಯಾತಿ, ಜನಪ್ರಿಯತೆ ಗಳಿಸಿರುವ ವಾಟ್ಸ್‌ಆ್ಯಪ್‌, “ನಾವು ಭಾರತದಿಂದ ಹೊರಹೋಗುತ್ತೇವೆ” ಎಂದು ದೆಹಲಿ ಹೈಕೋರ್ಟ್‌ಗೆ (Delhi High Court) ತಿಳಿಸಿದೆ. ಇದು, ಕೇಂದ್ರ ಸರ್ಕಾರ ಹಾಗೂ ವಾಟ್ಸ್‌ಆ್ಯಪ್‌ ನಡುವಿನ ಬಿಕ್ಕಟ್ಟಿನಿಂದಾಗಿ ನೀಡಿದ ಎಚ್ಚರಿಕೆಯಾಗಿದೆ.

“ಮೆಟಾ ಒಡೆತನದ ವಾಟ್ಸ್‌ಆ್ಯಪ್‌ನ ಎನ್‌ಕ್ರಿಪ್ಶನ್‌ (ಎಂಡ್-ಟು-ಎಂಡ್‌ ಎನ್‌ಕ್ರಿಪ್ಶನ್‌- ಯಾವುದೇ ವ್ಯಕ್ತಿ ಇನ್ನೊಬ್ಬನಿಗೆ ಕಳುಹಿಸುವ ಮೆಸೇಜ್‌ಅನ್ನು ಬೇರೆಯವರು ನೋಡಲು ಆಗದಿರುವ ಸುರಕ್ಷತಾ ವ್ಯವಸ್ಥೆ) ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತದಿಂದಲೇ ಹೊರಹೋಗುತ್ತೇವೆ. ಜನರು ತಾವು ಕಳುಹಿಸಿದ ಮೆಸೇಜ್‌ಅನ್ನು ಬೇರೆಯವರು ಓದುವುದಿಲ್ಲ, ಖಾಸಗಿತನಕ್ಕೆ ಧಕ್ಕೆಯಾಗುವುದಿಲ್ಲ ಎಂಬ ಕಾರಣಕ್ಕಾಗಿಯೇ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಹಾಗಾಗಿ, ಎನ್‌ಕ್ರಿಪ್ಶನ್‌ಗೆ ಧಕ್ಕೆಯಾದರೆ ನಾವು ಭಾರತದಲ್ಲಿ ಮುಂದುವರಿಯುವುದಿಲ್ಲ” ಎಂಬುದಾಗಿ ವಾಟ್ಸ್‌ಆ್ಯಪ್‌ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಸಾಧಿಸುವ, ಅದರಲ್ಲೂ ವಾಟ್ಸ್‌ಆ್ಯಪ್‌ ಚಾಟ್‌ಗಳ ಮೇಲೆ ನಿಗಾ ಇರಿಸುವ ಕುರಿತು ಕೇಂದ್ರ ಸರ್ಕಾರ 2021ರಲ್ಲಿ ಜಾರಿಗೆ ತಂದ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ವಾಟ್ಸ್‌ಆ್ಯಪ್‌ ದೆಹಲಿ ಹೈಕೋರ್ಟ್‌ ಮೊರೆ ಹೋಗಿದೆ. ಅರ್ಜಿಯ ವಿಚಾರಣೆ ವೇಳೆ ವಾಟ್ಸ್‌ಆ್ಯಪ್‌ ಪರ ವಕೀಲ ತೇಜಸ್‌ ಕಾರಿಯಾ ವಾದ ಮಂಡಿಸಿದರು.

“ಸಾಮಾಜಿಕ ಜಾಲತಾಣವಾಗಿ ನಾವು ಹೇಳುತ್ತಿದ್ದೇವೆ. ಎನ್‌ಕ್ರಿಪ್ಶನ್‌ ಬೇಡ ಎಂದು ಹೇಳಿದರೆ, ಭಾರತದಲ್ಲಿ ವಾಟ್ಸ್‌ಆ್ಯಪ್‌ ಇರುವುದಿಲ್ಲ. ನಾವು ಒಂದು ಪ್ರಕ್ರಿಯೆಯನ್ನು ಪಾಲಿಸಬೇಕಾಗುತ್ತದೆ. ಯಾವ ಸಂದೇಶವನ್ನು ಬಹಿರಂಗಪಡಿಸಬೇಕು ಎಂದು ಹೇಳುತ್ತಾರೋ ಗೊತ್ತಾಗುವುದಿಲ್ಲ. ಇದಕ್ಕಾಗಿ ನಾವು ವರ್ಷಗಳವರೆಗೆ ಕೋಟ್ಯಂತರ ಮೆಸೇಜ್‌ಗಳನ್ನು ಸ್ಟೋರ್‌ ಮಾಡಿ ಇಡಬೇಕಾಗುತ್ತದೆ” ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಹಾಗೂ ನ್ಯಾ.ಮನ್‌ಮೀತ್‌ ಪ್ರೀತಂ ಸಿಂಗ್‌ ಅರೋರಾ ಅವರಿದ್ದ ನ್ಯಾಯಪೀಠಕ್ಕೆ ತೇಜಸ್‌ ಕಾರಿಯಾ ತಿಳಿಸಿದರು.

ಮಾಹಿತಿ ತಂತ್ರಜ್ಞಾನ ನಿಯಮಗಳನ್ನು (2021) ಕೇಂದ್ರ ಸರ್ಕಾರವು 2021ರ ಫೆಬ್ರವರಿ 25ರಂದು ಜಾರಿಗೆ ತಂದಿದೆ. ಎಕ್ಸ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಹಾಗೂ ವಾಟ್ಸ್‌ಆ್ಯಪ್‌ನಂತಹ ಸಾಮಾಜಿಕ ಜಾಲತಾಣಗಳು ಹೊಸ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶಿಸಲಾಗಿದೆ. ಇದೇ ಕಾರಣಕ್ಕಾಗಿ, ಸಾಮಾಜಿಕ ಜಾಲತಾಣಗಳು ಪ್ರತಿ ತಿಂಗಳು, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಖಾತೆಗಳನ್ನು ರದ್ದುಗೊಳಿಸುತ್ತಿದೆ.

ಇದನ್ನೂ ಓದಿ: WhatsApp Update: ವಾಟ್ಸ್ ಆಪ್ ನಲ್ಲಿ ಮತ್ತೊಂದು ಹೊಸ ಫೀಚರ್! ಫೋಟೊ, ವಿಡಿಯೊ ಶೇರಿಂಗ್ ಇನ್ನೂ ಸುಲಭ

Continue Reading

ಆಟೋಮೊಬೈಲ್

Xiaomi EV: ತಿಂಗಳಲ್ಲಿ 75 ಸಾವಿರ ಆರ್ಡರ್ ಸ್ವೀಕರಿಸಿದ ಕ್ಸಿಯೋಮಿ ಎಸ್‌ಯು 7 ಎಲೆಕ್ಟ್ರಿಕ್‌ ಕಾರು; ಟೆಸ್ಲಾಗಿಂತ ಅಗ್ಗ!

Xiaomi EV: ಟೆಕ್ ದೈತ್ಯ ಕಂಪೆನಿ ಚೀನಾದ ಕ್ಸಿಯೋಮಿ (Xiaomi) ಆಟೋ ಉದ್ಯಮವನ್ನು ಪ್ರವೇಶಿಸಿದ್ದು, ಕೇವಲ ಒಂದು ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಆರ್ಡರ್ ಸ್ವೀಕರಿಸಿದೆ. ಕ್ಸಿಯೋಮಿ ಇವಿ ಎಸ್ ಯು7 ವರ್ಷದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಾಹನ ಮಾರಾಟ ಗುರಿಯನ್ನು ಹೊಂದಿದೆ.

VISTARANEWS.COM


on

By

Xiaomi EV
Koo

ಸ್ಮಾರ್ಟ್‌ಫೋನ್ (smart phone) ತಯಾರಿಕ ಟೆಕ್ ದೈತ್ಯ ಕಂಪನಿ ಚೀನಾದ (china) ಕ್ಸಿಯೋಮಿ (Xiaomi) ಇದೀಗ ಆಟೋ (auto) ಉದ್ಯಮವನ್ನು ಪ್ರವೇಶಿಸಲು ಸಜ್ಜಾಗಿದ್ದು, ಕ್ಸಿಯೋಮಿ ಈ ತಿಂಗಳಲ್ಲಿ ತನ್ನ ಹೊಸ ಎಸ್ ಯು 7 (Xiaomi EV) ಎಲೆಕ್ಟ್ರಿಕ್ ಸೆಡಾನ್‌ಗಾಗಿ 75,723 ಆರ್ಡರ್‌ಗಳನ್ನು ಪಡೆದುಕೊಂಡಿದೆ ಮತ್ತು ಜೂನ್ ವೇಳೆಗೆ 10,000 ಯೂನಿಟ್‌ಗಳನ್ನು ತಲುಪಿಸಲು ಯೋಜನೆ ರೂಪಿಸಿದೆ ಎಂದು ಕ್ಸಿಯೋಮಿ ಸಂಸ್ಥಾಪಕ ಲೀ ಜುನ್ ತಿಳಿಸಿದ್ದಾರೆ.

ಬೀಜಿಂಗ್ (Beijing) ಆಟೋ ಶೋನ ಮೊದಲ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿತರಣೆ ಗುರಿಯು ಎಲೆಕ್ಟ್ರಿಕ್ ವೆಹಿಕಲ್ (EV) ಸ್ಟಾರ್ಟ್‌ಅಪ್‌ಗಾಗಿ ಹೊಸ ದಾಖಲೆಯನ್ನು ಸ್ಥಾಪಿಸುತ್ತದೆ ಎಂದು ಹೇಳಿದರು.

ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಆರ್ಡರ್ ಸ್ವೀಕರಿಸಲು ಪ್ರಾರಂಭಿಸಲಾಗಿದ್ದು, ಮರುಪಾವತಿಸಲಾಗದ ಠೇವಣಿಗಳೊಂದಿಗೆ 75,೦೦೦ಕ್ಕೂ ಹೆಚ್ಚು SU7 ನ ಆರ್ಡರ್‌ಗಳನ್ನು ಸ್ವೀಕರಿಸಲಾಗಿದೆ. ಕೇವಲ ಒಂದು ತಿಂಗಳಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಆರ್ಡರ್ ಸಿಕ್ಕಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?


ವರ್ಷದಲ್ಲಿ 1 ಲಕ್ಷ ಮಾರಾಟ ಗುರಿ

ಕ್ಸಿಯೋಮಿ ಈ ವರ್ಷ ಎಸ್ ಯು7ಗಾಗಿ 1,00,000ಕ್ಕೂ ಹೆಚ್ಚು ವಿತರಣೆ ಗುರಿಯನ್ನು ಹೊಂದಿದೆ. ಮುಂದಿನ ಮೂರು ವರ್ಷಗಳವರೆಗೆ ಚೀನೀ ಮಾರುಕಟ್ಟೆಯ ಮೇಲೆ ಸ್ಥಿರವಾದ ಬೇಡಿಕೆಯನ್ನು ಉಳಿಸಿಕೊಳ್ಳಲು ಕಂಪನಿ ಉದ್ದೇಶಿಸಿದೆ ಎಂದು ಲೀ ತಿಳಿಸಿದರು.

ಮೇ ಅಂತ್ಯಕ್ಕೆ ಪ್ರೊ ಮಾದರಿ ಪರಿಚಯ

ಬೇಡಿಕೆಯನ್ನು ಪೂರೈಸಲು ಕ್ಸಿಯಾವೋಮಿ SU7ನ ಪ್ರಮಾಣಿತ ಮತ್ತು ಮ್ಯಾಕ್ಸ್ ಆವೃತ್ತಿಗಳ ವಿತರಣೆಯನ್ನು ನಿಗದಿತ ಸಮಯಕ್ಕಿಂತ ಹನ್ನೆರಡು ದಿನಗಳ ಮುಂಚಿತವಾಗಿ ಪೂರ್ಣಗೊಳಿಸಿದೆ. ಮೇ ಅಂತ್ಯದ ವೇಳೆಗೆ ಪ್ರೊ ಮಾದರಿಗಳನ್ನು ಪರಿಚಯಿಸಲು ಕಂಪೆನಿಯು ಯೋಜನೆ ಹಾಕಿಕೊಂಡಿದೆ.

ಬೆಲೆ ಕಡಿತ, ಸಬ್ಸಿಡಿ ಘೋಷಣೆ

ಟೆಸ್ಲಾದ ಮಾಡೆಲ್ 3 ಗೆ ಪೈಪೋಟಿ ನೀಡುವ SU7ನ ಚೀನಾದ ಬೃಹತ್ ವಾಹನ ಮಾರುಕಟ್ಟೆಯಲ್ಲಿ EV ಬೆಲೆಗೆ ಪೈಪೋಟಿ ನೀಡಲಿದೆ. Xiaomi ಮಾರುಕಟ್ಟೆ ಪ್ರವೇಶಕ್ಕೆ ಮುಂಚಿತವಾಗಿಯೇ ವಾಹನ ತಯಾರಕರು ಬೆಲೆ ಕಡಿತ ಮತ್ತು ಸಬ್ಸಿಡಿಗಳನ್ನು ಘೋಷಿಸಿದ್ದಾರೆ.


Xiaomiಯ ತಯಾರಿಕೆಯಲ್ಲಿ 6,000 ಆಟೋ ತಂಡವು ಕಾರ್ಯ ನಿರ್ವಹಿಸುತ್ತಿದ್ದು, ಇದು ಸಾಕಾಗುವುದಿಲ್ಲ. ಕಂಪೆನಿಯ ಶೀಘ್ರದಲ್ಲೇ ಹೊಸ ಪ್ರತಿಭೆಗಳನ್ನು ತನ್ನೊಂದಿಗೆ ಸೇರಿಸಿಕೊಳ್ಳಲಿದೆ. ಆಟೋಮೋಟಿವ್ ಕ್ಷೇತ್ರದಲ್ಲಿ ಆಸಕ್ತರಿರುವವರು ಕಂಪೆನಿ ಸೇರಲು ಈ ಸಂದರ್ಭದಲ್ಲಿ ಜಾಗತಿಕ ಪ್ರತಿಭೆಗಳಿಗೆ ಕರೆ ನೀಡಿದರು.

ಟೆಸ್ಲಾಗಿಂತ ಅಗ್ಗ

ಎಸ್ ಯು7 ಅನ್ನು ಸ್ಪೀಡ್ ಅಲ್ಟ್ರಾ 7 ಎಂದೂ ಕರೆಯುತ್ತಾರೆ. ಇದು ಸ್ಪರ್ಧಾತ್ಮಕ ಚೈನೀಸ್ ಇವಿ ಮಾರುಕಟ್ಟೆಯನ್ನು 30,000 ಡಾಲರ್ ಗಿಂತ ಕಡಿಮೆ ಬೆಲೆಯ ಮೂಲ ಮಾದರಿಯೊಂದಿಗೆ ಪ್ರವೇಶಿಸಲಿದೆ. ಇದು ಚೀನಾದಲ್ಲಿ ಟೆಸ್ಲಾ ಮಾದರಿ 3ಕ್ಕಿಂತ ಅಗ್ಗವಾಗಿ ಕೈಗೆಟುಕುವ ದರದಲ್ಲಿ ಲಭ್ಯವಾಗಲಿದೆ.


5,000 ಉತ್ಪಾದನೆ

Xiaomi ಈಗಾಗಲೇ 5,000 SU7 ವಾಹನಗಳನ್ನು ಉತ್ಪಾದಿಸಿದೆ. ಇದನ್ನು “ಸ್ಥಾಪಕರ ಆವೃತ್ತಿ” ಎಂದು ಕರೆಯಲಾಗುತ್ತದೆ. ವಿಶೇಷ ಆವೃತ್ತಿ, EV ಯ ಸೀಮಿತ ಉತ್ಪಾದನಾ ಆವೃತ್ತಿಯು ಆರಂಭಿಕ ಖರೀದಿದಾರರಿಗೆ ಹೆಚ್ಚುವರಿ ಬಿಡಿಭಾಗಗಳೊಂದಿಗೆ ಬರಲಿದೆ.

SU7 ವಾಹನಗಳ ಆರಂಭಿಕ ಬ್ಯಾಚ್‌ನ ವಿತರಣೆಗಳು ಶೀಘ್ರದಲ್ಲೇ 28 ಚೀನೀ ನಗರಗಳಲ್ಲಿ ಪ್ರಾರಂಭವಾಗಲಿದೆ ಎಂದು ಲೀ ಜುನ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು.

Xiaomi SU7 ಆಟೋ ವ್ಯವಹಾರದಲ್ಲಿ 10 ಶತಕೋಟಿ ಡಾಲರ್ ಹೂಡಿಕೆ ಮಾಡಲಾಗಿದೆ. ಪ್ರಾರಂಭದಲ್ಲಿ ಕಂಪೆನಿ ಸಲ್ಪ ನಷ್ಟ ಅನುಭವಿಸಬೇಕಾಗುತ್ತದೆ. ಎಂದು ಕೆಲವು ವಿಶ್ಲೇಷಕರು ಹೇಳಿದ್ದಾರೆ. Xiaomi ಗಮನಾರ್ಹ ಪ್ರಮಾಣದ ಹಣವನ್ನು ಕಳೆದುಕೊಳ್ಳುತ್ತಾರೆ. ಯೋಜಿತ ಮಾರಾಟದ ಪರಿಮಾಣದ ಆಧಾರದ ಮೇಲೆ 4.1 ಶತಕೋಟಿ ಯುವಾನ್ ಅಥವಾ ಸುಮಾರು 566.82 ಮಿಲಿಯನ್ ಡಾಲರ್ ನಷ್ಟವಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

Continue Reading

ದೇಶ

Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

Samsung: ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ್ಯ ಹೆಚ್ಚಿಸಲು ವಿನ್ಯಾಸ ಮಾಡಲಾದ ರಾಷ್ಟ್ರೀಯ ಕೌಶಲ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಷನ್ ಕ್ಯಾಂಪಸ್ ನ ಎರಡನೇ ಆವೃತ್ತಿಯನ್ನು ಸ್ಯಾಮ್‌ಸಂಗ್ ಇಂಡಿಯಾ ಪ್ರಾರಂಭಿಸಿದೆ.

VISTARANEWS.COM


on

Samsung India launched the 2nd edition of Samsung Innovation Campus
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್‌ಸಂಗ್ (Samsung) ಎಐ, ಐಒಟಿ, ಬಿಗ್ ಡೇಟಾ, ಮತ್ತು ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಮುಂತಾದ ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ ಹೆಚ್ಚಿಸಲು ವಿನ್ಯಾಸ ಮಾಡಲಾದ ತನ್ನ ರಾಷ್ಟ್ರೀಯ ಕೌಶಲ್ಯ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಕಾರ್ಯಕ್ರಮವು 18-25 ವರ್ಷ ವಯಸ್ಸಿನ ಯುವಜನತೆಗೆ ಭವಿಷ್ಯದ ತಂತ್ರಜ್ಞಾನಗಳ ಕೌಶಲ ಒದಗಿಸುವ ಮತ್ತು ಆ ಮೂಲಕ ಅವರಿಗೆ ಉದ್ಯೋಗಾವಕಾಶ ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಯುವಜನತೆಗೆ ಸರಿಯಾದ ಅವಕಾಶಗಳನ್ನು ಸೃಷ್ಟಿ ಮಾಡಲು ರೂಪಿಸಲಾಗಿರುವ ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾದಂತಹ ಉಪಕ್ರಮಗಳನ್ನು ಬೆಂಬಲಿಸಲು ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

ಭಾರತದಾದ್ಯಂತ ಇರುವ 3,500 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ತಿಳುವಳಿಕೆ ಒಪ್ಪಂದಕ್ಕೆ ಈ ವಾರದ ಆರಂಭದಲ್ಲಿ ಸ್ಯಾಮ್‌ಸಂಗ್ ಮತ್ತು ಎಲೆಕ್ಟ್ರಾನಿಕ್ಸ್ ಸೆಕ್ಟರ್ ಸ್ಕಿಲ್ಸ್ ಕೌನ್ಸಿಲ್ ಆಫ್ ಇಂಡಿಯಾ (ಇಎಸ್‌ಎಸ್‌ಸಿಐ) ನಡುವೆ ಸಹಿ ಮಾಡಲಾಗಿದೆ.

ಈ ವರ್ಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ ಒದಗಿಸುವುದರ ಜತೆಗೆ ಇನ್ನೂ ಹೆಚ್ಚಿನ ಆಸಕ್ತಿಕರ ಅಂಶಗಳು ಸೇರ್ಪಡೆಗೊಂಡಿವೆ. ಪ್ರತಿ ಕ್ಷೇತ್ರದಲ್ಲಿ ರಾಷ್ಟ್ರೀಯ ಟಾಪರ್‌ ಸ್ಥಾನ ಪಡೆಯುವವರು ದೆಹಲಿ/ಎನ್‌ಸಿಆರ್‌ನಲ್ಲಿರುವ ಸ್ಯಾಮ್‌ಸಂಗ್ ಘಟಕಗಳಿಗೆ ಭೇಟಿ ನೀಡುವ ಅವಕಾಶ ಪಡೆಯುತ್ತಾರೆ. ಜತೆಗೆ ರೂ. 1 ಲಕ್ಷದ ನಗದು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈ ಘಟಕಗಳಿಗೆ ಭೇಟಿ ನೀಡುವ ವಿದ್ಯಾರ್ಥಿಗಳು ಸ್ಯಾಮ್‌ಸಂಗ್‌ನ ನಾಯಕತ್ವದ ತಂಡಗಳೊಂದಿಗೆ ಸಂವಹನ ನಡೆಸುವ ಮತ್ತು ಅವರಿಂದ ಮಾರ್ಗದರ್ಶನ ಪಡೆಯುವ ಅವಕಾಶ ಹೊಂದಲಿದ್ದಾರೆ. ರಾಷ್ಟ್ರ ಮಟ್ಟದ ಕೋರ್ಸ್ ಟಾಪರ್‌ಗಳು ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ವಾಚ್‌ಗಳಂತಹ ಅತ್ಯಾಕರ್ಷಕ ಸ್ಯಾಮ್‌ಸಂಗ್ ಉತ್ಪನ್ನಗಳನ್ನು ಸಹ ಪಡೆಯಲಿದ್ದಾರೆ.

ಈ ಕುರಿತು ಮಾತನಾಡಿದ ಸ್ಯಾಮ್‌ಸಂಗ್ ನೈಋತ್ಯ ಏಷ್ಯಾದ ಅಧ್ಯಕ್ಷ ಮತ್ತು ಸಿಇಓ ಜೆಬಿ ಪಾರ್ಕ್, ಸ್ಯಾಮ್‌ಸಂಗ್ ಭಾರತದಲ್ಲಿ ಕಳೆದ 28 ವರ್ಷಗಳಿಂದ ತನ್ನ ಅಸ್ತಿತ್ವ ಹೊಂದಿದ್ದು, ಈ ಎಲ್ಲಾ ವರ್ಷಗಳಲ್ಲಿ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಿದೆ. ನಮ್ಮ ದೃಷ್ಟಿಕೋನವು ಯುವಜನರಿಗೆ ಕೌಶಲ್ಯ ಒದಗಿಸುವ ಮತ್ತು ಅವರಿಗೆ ವೃತ್ತಿಪರ ಬೆಳವಣಿಗೆಯ ಅವಕಾಶಗಳನ್ನು ಒದಗಿಸಿ ಅವರನ್ನು ಸಬಲೀಕರಣಗೊಳಿಸುವ ಭಾರತ ಸರ್ಕಾರದ ಉದ್ದೇಶಗಳೊಂದಿಗೆ ಸರಿಯಾಗಿ ಹೊಂದಿಕೆಯಾಗುತ್ತದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಮೂಲಕ, ನಾವು ಯುವಜನತೆಯ ಕೌಶಲ್ಯವನ್ನು ವೃದ್ಧಿಸುವ ಕೌಶಲ್ಯ ಆಧಾರಿತ ಕಲಿಕೆಯ ವೇದಿಕೆಯನ್ನು ನಿರ್ಮಿಸುತ್ತಿದ್ದೇವೆ. ಅದರಿಂದ ಯುವಕರು ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ ಮತ್ತು ಅರ್ಥಪೂರ್ಣ ಬದಲಾವಣೆ ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

ಇಎಸ್‌ಎಸ್‌ಸಿಐ ಸಂಸ್ಥೆಯು ಕೌಶಲಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಉದ್ಯಮ ಸಂಘಗಳಿಂದ ಉತ್ತೇಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ಕೌಶಲ ಒದಗಿಸುವ ಸಂಸ್ಥೆಯಾಗಿದೆ ಮತ್ತು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ಅಡಿಯಲ್ಲಿ ಸೆಕ್ಟರ್ ಸ್ಕಿಲ್ ಕೌನ್ಸಿಲ್ (ವಲಯ ಕೌಶಲ್ಯ ಮಂಡಳಿ) ಆಗಿ ಕಾರ್ಯನಿರ್ವಹಿಸುತ್ತದೆ. ಇದು ತನ್ನ ರಾಷ್ಟ್ರವ್ಯಾಪಿ ಇರುವ ಅನುಮೋದಿತ ತರಬೇತಿ ಮತ್ತು ಶಿಕ್ಷಣ ಪಾಲುದಾರರ ನೆಟ್‌ವರ್ಕ್ ಮೂಲಕ ಸ್ಥಳೀಯ ಮಟ್ಟದಲ್ಲಿ ತರಬೇತಿಯನ್ನು ನೀಡುತ್ತದೆ. ಇಎಸ್‌ಎಸ್‌ಸಿಐ ಸಂಸ್ಥೆಯು ಭಾರತದ ಸಣ್ಣ ಪಟ್ಟಣಗಳಲ್ಲಿ ಎಲ್ಲೆಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನ ಶಿಕ್ಷಣದ ಲಭ್ಯತೆ ಇಲ್ಲವೋ ಅಲ್ಲೆಲ್ಲಾ ಯುವಜನತೆಗೆ ಕೋರ್ಸ್‌ಗಳನ್ನು ಒದಗಿಸುವ ಅವಕಾಶಗಳನ್ನು ಕೂಡ ಎದುರು ನೋಡುತ್ತದೆ.

ಈ ಕುರಿತು ಇಎಸ್‌ಎಸ್‌ಸಿಐ ಚೀಫ್ ಆಫರೇಟಿಂಗ್ ಆಫೀಸರ್ (Officiating CEO) ಡಾ. ಅಭಿಲಾಷಾ ಗೌರ್ ಮಾತನಾಡಿ, ದೇಶದಲ್ಲಿ ಕೌಶಲ ಒದಗಿಸುವ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಸಿಎಸ್‌ಆರ್‌ ಉಪಕ್ರಮಕ್ಕಾಗಿ ಸ್ಯಾಮ್‌ಸಂಗ್ ಜತೆಗೆ ಪಾಲುದಾರಿಕೆ ಹೊಂದಲು ಇಎಸ್‌ಎಸ್‌ಸಿಐ ಸಂತೋಷ ಪಡುತ್ತದೆ. ನಮ್ಮ ಉದ್ದೇಶಕ್ಕೆ ಅನುಗುಣವಾಗಿ ರಾಷ್ಟ್ರದ ಯುವಜನರಿಗೆ ಅದರಲ್ಲೂ ವಿಶೇಷವಾಗಿ ಕಡಿಮೆ ಸವಲತ್ತು ಹೊಂದಿರುವ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಕೌಶಲ ಮತ್ತು ಅಗತ್ಯ ಜ್ಞಾನವನ್ನು ಒದಗಿಸಲು ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ ಒದಗಿಸುತ್ತದೆ ಮತ್ತು ಅವರನ್ನು ಉದ್ಯೋಗಕ್ಕೆ ಸಿದ್ಧಗೊಳಿಸುತ್ತದೆ ಎಂಬ ಭರವಸೆ ನಮಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ದಾಖಲಾದ ಯುವಜನತೆ ತರಗತಿ ಮೂಲಕ ಮತ್ತು ಆನ್‌ಲೈನ್ ತರಬೇತಿ ಪಡೆಯುತ್ತಾರೆ ಹಾಗೂ ಎಐ, ಐಒಟಿ, ಬಿಗ್ ಡೇಟಾ ಮತ್ತು ಕೋಡಿಂಗ್ ಆಂಡ್ ಪ್ರೋಗ್ರಾಮಿಂಗ್‌ನಲ್ಲಿ ತಮ್ಮ ಆಯ್ದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್ ಅನ್ನು ಪೂರ್ಣಗೊಳಿಸುತ್ತಾರೆ.

ಅವರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಸಾಫ್ಟ್ ಸ್ಕಿಲ್ಸ್ ತರಬೇತಿಯನ್ನೂ ನೀಡಲಾಗುವುದು. ಭಾಗವಹಿಸುವವರು ಭಾರತದಾದ್ಯಂತ ಇರುವ ಇಎಸ್‌ಎಸ್‌ಸಿಐಯ ತರಬೇತಿದಾರರು ಮತ್ತು ಶಿಕ್ಷಣ ಪಾಲುದಾರರ ಮೂಲಕ ಸಿದ್ಧಗೊಳಿಸಲಾಗುತ್ತದೆ. ಈ ಕಾರ್ಯಕ್ರಮವು ಆಫ್‌ಲೈನ್ ಮತ್ತು ಆನ್‌ಲೈನ್ ಕಲಿಕೆ, ಹ್ಯಾಕಥಾನ್‌ಗಳು ಮತ್ತು ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್‌ಗಳು ಮತ್ತು ಸ್ಯಾಮ್‌ಸಂಗ್ ಉದ್ಯೋಗಿಗಳು ಒದಗಿಸುವ ಪರಿಣಿತ ಮಾರ್ಗದರ್ಶನವನ್ನು ಒಳಗೊಂಡಿರುತ್ತದೆ.

ಈ ಕಾರ್ಯಕ್ರಮವು ನಾಲ್ಕು ರಾಜ್ಯಗಳಲ್ಲಿ ಎಂಟು ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಯುತ್ತದೆ. ದೇಶದ ಉತ್ತರ ಭಾಗದಲ್ಲಿ, ದೆಹಲಿ ಎನ್‌ಸಿಆರ್‌ನಲ್ಲಿರುವ ಎರಡು ಕೇಂದ್ರಗಳ ಜತೆಗೆ ಲಕ್ನೋ ಮತ್ತು ಗೋರಖ್‌ಪುರದಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ದಕ್ಷಿಣ ಭಾರತದಲ್ಲಿ, ತಮಿಳುನಾಡಿನ ಚೆನ್ನೈ ಮತ್ತು ಶ್ರೀಪೆರಂಬದೂರಿನಲ್ಲಿ 2 ಕೇಂದ್ರಗಳು ಮತ್ತು ಕರ್ನಾಟಕದ ಬೆಂಗಳೂರಿನಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

ಕಾರ್ಯಕ್ರಮವು ಏಪ್ರಿಲ್ 2024 ರಲ್ಲಿ ಪ್ರಾರಂಭವಾಗಲಿದೆ ಮತ್ತು ವಿಶೇಷವಾಗಿ ವಿನ್ಯಾಸಗೊಳಿಸಲಾದ ಆರು ತಿಂಗಳ ಕೋರ್ಸ್ ಅಕ್ಟೋಬರ್ 2024ರಲ್ಲಿ ಕೊನೆಗೊಳ್ಳುತ್ತದೆ. ನವೆಂಬರ್ 2024ರಲ್ಲಿ ಕೋರ್ಸ್ ಟಾಪರ್‌ಗಳ ಹೆಸರನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದೆ.

Continue Reading

ವಾಣಿಜ್ಯ

Tata Motors: ಮ್ಯಾಜಿಕ್ ಬೈ-ಫ್ಯುಯೆಲ್ ವ್ಯಾನ್‌ ಬಿಡುಗಡೆ ಮಾಡಿದ ಟಾಟಾ ಮೋಟರ್ಸ್

Tata Motors: ಟಾಟಾ ಮೋಟರ್ಸ್ ಕಂಪನಿಯು ಟಾಟಾ ಮ್ಯಾಜಿಕ್‌ನ ಹೊಸ ಶ್ರೇಣಿಯಾದ ಮ್ಯಾಜಿಕ್ ಬೈ-ಫ್ಯುಯೆಲ್ ವ್ಯಾನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. 10 ಆಸನಗಳ ಟಾಟಾ ಮ್ಯಾಜಿಕ್ ವ್ಯಾನ್‌ ಪ್ರಯಾಣಿಕರು ಮತ್ತು ಚಾಲಕರಿಗೆ ಹೇಳಿ ಮಾಡಿಸಿದ ವಾಹನವಾಗಿದೆ.

VISTARANEWS.COM


on

Tata Motors launched the Magic bi fuel van
Koo

ಬೆಂಗಳೂರು: ಭಾರತದ ಅತಿ ದೊಡ್ಡ ವಾಣಿಜ್ಯ ವಾಹನಗಳ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ (Tata Motors), ದೇಶದ ಅತ್ಯಂತ ಜನಪ್ರಿಯ ವ್ಯಾನ್ ಟಾಟಾ ಮ್ಯಾಜಿಕ್ (Tata Magic) ಅನ್ನು 4 ಲಕ್ಷ ಗ್ರಾಹಕರು ಖರೀದಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪನೆ ಮಾಡಿದ್ದು, ಟಾಟಾ ಮ್ಯಾಜಿಕ್‌ನ ಹೊಸ ಶ್ರೇಣಿಯಾದ ಮ್ಯಾಜಿಕ್ ಬೈ-ಫ್ಯುಯೆಲ್ (Magic Bi Fuel) ಅನ್ನು ಕಂಪನಿಯು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ವಿಶ್ವಾಸಾರ್ಹತೆ, ಕಾರ್ಯದಕ್ಷತೆ ಮತ್ತು ಕೈಗೆಟುಕುವ ದರಕ್ಕೆ ಹೆಸರುವಾಸಿಯಾಗಿರುವ ಟಾಟಾ ಮೋಟರ್ಸ್ ಅತ್ಯುತ್ತಮ ಸೇವೆಯನ್ನು ನೀಡುವ ಬದ್ಧತೆಯನ್ನು ಹೊಂದಿದೆ. 10 ಆಸನಗಳ ಟಾಟಾ ಮ್ಯಾಜಿಕ್ ವ್ಯಾನ್‌ ಪ್ರಯಾಣಿಕರು ಮತ್ತು ಚಾಲಕರಿಗೆ ಹೇಳಿ ಮಾಡಿಸಿದ ವಾಹನವಾಗಿದೆ. ಸ್ಲೀಕ್ ಡಿಸೈನ್, ಸುರಕ್ಷತೆ ಮತ್ತು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಅನುಭವವನ್ನು ನೀಡುವ ಟಾಟಾ ಮ್ಯಾಜಿಕ್ ಕಳೆದ ಹಲವು ವರ್ಷಗಳಿಂದ ಯಶಸ್ಸಿನ ಹಾದಿಯಲ್ಲಿ ಸಾಗಿದೆ.

ಇದನ್ನೂ ಓದಿ: Ayodhya Ram mandir: ಈವರೆಗೆ ಅಯೋಧ್ಯೆ ರಾಮಲಲ್ಲಾನ ದರ್ಶನ ಮಾಡಿದವರ ಸಂಖ್ಯೆ 1.5 ಕೋಟಿ!

ಇಕೋ ಸ್ವಿಚ್, ಗೇರ್ ಶಿಫ್ಟ್ ಅಡ್ವೈಸರ್ ಮತ್ತು ಚಾಲಕರಿಗೆ ಅನುಕೂಲದಾಯಕ ಅಂಶಗಳು ಸೇರಿದಂತೆ ಹಲವಾರು ಮೌಲ್ಯವರ್ಧಿತ ವೈಶಿಷ್ಟ್ಯತೆಗಳನ್ನು ಈ ಟಾಟಾ ಮ್ಯಾಜಿಕ್ ಹೊಂದಿದೆ. ಇದಲ್ಲದೇ, ಕೈಗೆಟುಕುವ ದರದಲ್ಲಿ ಈ ವಾಹನ ಲಭ್ಯವಿದೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪ್ರಯಾಣಕ್ಕೆ ಸೂಕ್ತವಾದ ವಾಹನವಾಗಿರುವ ಟಾಟಾ ಮ್ಯಾಜಿಕ್, ಕಟ್ಟಕಡೆಯ ಮೈಲಿಯವರೆಗೆ ಸಾರಿಗೆ ಸೌಲಭ್ಯ ಒದಗಿಸುವ ವಾಹನವಾಗಿದೆ.

ಟಾಟಾ ಮ್ಯಾಜಿಕ್ –ಬೈ-ಫ್ಯುಯೆಲ್ ವಾಹನವು 694 ಸಿಸಿ ಎಂಜಿನ್ ಮತ್ತು 60 ಲೀಟರ್ ಸಾಮರ್ಥ್ಯದ ಸಿಎನ್‌ಜಿ ಟ್ಯಾಂಕ್ ಹಾಗೂ 5 ಲೀಟರ್ ಪೆಟ್ರೋಲ್ ಟ್ಯಾಂಕ್ ಅನ್ನು ಹೊಂದಿದೆ. ಒಂದು ಬಾರಿ ಸಿಎನ್‌ಜಿ ಟ್ಯಾಂಕ್ ತುಂಬಿಸಿದರೆ 380 ಕಿಲೋಮೀಟರ್‌ವರೆಗೆ ಸಾಗಬಹುದಾಗಿದೆ. ಸರಿಸಾಟಿಯಿಲ್ಲದ ಕಾರ್ಯದಕ್ಷತೆ ಮತ್ತು ಕಡಿಮೆ ನಿರ್ವಹಣೆ ವೆಚ್ಚದಿಂದ ಕೂಡಿರುವ ಈ ಮ್ಯಾಜಿಕ್ ವಾಹನಕ್ಕೆ 2 ವರ್ಷಗಳ ಅಥವಾ 72,000 ಕಿಲೋಮೀಟರ್‌ಗಳ ವಾರಂಟಿಯನ್ನು ನೀಡಲಾಗುತ್ತಿದೆ.

ಇದನ್ನೂ ಓದಿ: Leopard Attack: ನೂರಕ್ಕೂ ಹೆಚ್ಚು ಕುರಿಗಳ ಜತೆಯೇ ಎರಡು ಗಂಟೆ ಇದ್ದ ಚಿರತೆ!

ಈ ಕುರಿತು ಮಾತನಾಡಿದ ಟಾಟಾ ಮೋಟರ್ಸ್ ವಾಣಿಜ್ಯ ವಾಹನಗಳ ವಿಭಾಗದ ಪ್ಯಾಸೆಂಜರ್ ಬ್ಯುಸಿನೆಸ್‌ನ ಉಪಾಧ್ಯಕ್ಷ ಮತ್ತು ಮುಖ್ಯಸ್ಥ ಆನಂದ್ ಎಸ್., ನಮ್ಮ ವಿನೂತನವಾದ ಮ್ಯಾಜಿಕ್ ಬ್ರ್ಯಾಂಡ್ ಅನ್ನು 4 ಲಕ್ಷ ಗ್ರಾಹಕರಿಗೆ ತಲುಪಿಸಿರುವುದಕ್ಕೆ ನಮಗೆ ಸಂತಸವಾಗುತ್ತಿದೆ. ಈ ಮೈಲಿಗಲ್ಲು ಸ್ಥಾಪಿಸಿರುವ ಸವಿನೆನಪಿಗಾಗಿ ನಾವು ಈ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಮ್ಯಾಜಿಕ್ ಬೈ-ಫ್ಯುಯೆಲ್ ವಾಹನವನ್ನು ಬಿಡುಗಡೆ ಮಾಡುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಇದು ಪೆಟ್ರೋಲ್‌ನೊಂದಿಗೆ ಸಿಎನ್‌ಜಿ ಚಾಲಿತ ವಾಹನವಾಗಿದೆ. ಸಾರಿಗೆ ಅಗತ್ಯತೆಗಳನ್ನು ಪೂರೈಸುವುದು ಮತ್ತು ನಮ್ಮ ಗ್ರಾಹಕರ ಲಾಭದ ಪ್ರಮಾಣ ಹಾಗೂ ಅನುಕೂಲವನ್ನು ಸುಧಾರಣೆ ಮಾಡುವುದಕ್ಕೆ ಪೂರಕವಾಗಿ ಈ ಹೊಸ ಶ್ರೇಣಿಯ ವಾಹನವನ್ನು ವಿನ್ಯಾಸಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Whatsapp
ದೇಶ2 mins ago

WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

Lok sabha election 2024
Lok Sabha Election 20242 mins ago

Lok Sabha Election 2024: ಆಪರೇಷನ್‌ಗೂ ಮುನ್ನ ಆಂಬ್ಯುಲೆನ್ಸ್‌ನಲ್ಲಿ ಬಂದು ವೋಟ್‌ ಮಾಡಿದ ಉತ್ಸಾಹಿ ಮತದಾರ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ8 mins ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Shruti Haasan and boyfriend santanu hazarika break up
ಕಾಲಿವುಡ್12 mins ago

Shruti Haasan: ಎರಡನೇ ಬಾಯ್‌ಫ್ರೆಂಡ್‌ ನಿಂದಲೂ ಕಮಲ್‌ ಹಾಸನ್‌ ಪುತ್ರಿ ಬ್ರೇಕಪ್?

Kiran Rao Laapataa Ladies to release on OTT
ಬಾಲಿವುಡ್13 mins ago

Kiran Rao: ಆಮೀರ್ ಖಾನ್ ಮಾಜಿ ಪತ್ನಿ ಸಿನಿಮಾ ಒಟಿಟಿಗೆ ಬಂದೇ ಬಿಡ್ತು! ಎಲ್ಲಿ ಸ್ಟ್ರೀಮಿಂಗ್?

gold rate today tapasi pannu
ಚಿನ್ನದ ದರ35 mins ago

Gold Rate Today: ಮತದಾನದ ದಿನ ಬಂಗಾರದ ದರ ತೇಜಿ, ಬೆಂಗಳೂರಿನಲ್ಲಿ 24K ಚಿನ್ನಕ್ಕೆ ₹440 ಏರಿಕೆ

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202449 mins ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

lok sabha election 2024
Lok Sabha Election 202453 mins ago

Lok Sabha Election 2024: ಮತದಾರರು ಜಸ್ಟ್‌ ಮಿಸ್‌; ಮತಗಟ್ಟೆ ಸಮೀಪವೇ ನೆಲಕ್ಕುರುಳಿದ ಬೃಹತ್ ಮರ, ಕಾರು ಜಖಂ

ವಿದೇಶ1 hour ago

Indian origin man: ಅಮೆರಿಕದಲ್ಲಿ ಮತ್ತೋರ್ವ ಭಾರತೀಯನ ಹತ್ಯೆ; ಪೊಲೀಸರ ಗುಂಡೇಟಿಗೆ ವ್ಯಕ್ತಿ ಬಲಿ

VVPAT Verification
EXPLAINER1 hour ago

ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಇವಿಎಂ ಪರಿಶೀಲನೆ ಅವಕಾಶ; ಏನಿದು ಸುಪ್ರೀಂ ಆದೇಶ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ8 mins ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202449 mins ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 hour ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ7 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ20 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ20 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ24 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌