Aadhaar Update: ಆನ್‌ಲೈನ್‌ನಲ್ಲಿ ಆಧಾರ್ ಅಪ್‌ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ Vistara News
Connect with us

ಗ್ಯಾಜೆಟ್ಸ್

Aadhaar Update: ಆನ್‌ಲೈನ್‌ನಲ್ಲಿ ಆಧಾರ್ ಅಪ್‌ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ

Aadhaar Update: ಆಧಾರ್‌ ಅಪ್‌ಡೇಟ್ ಮಾಡಕೊಳ್ಳಲು ಜೂನ್ 14ರವರೆಗೆ ಉತ್ತಮ ಅವಕಾಶವಿದೆ. ನೀವು ಉಚಿತವಾಗಿಯೇ ಆನ್‌ಲೈನ್ ಮೂಲಕ ಆಧಾರ್ ಅಪ್‌ಡೇಟ್ ಮಾಡಬಹುದು.

VISTARANEWS.COM


on

Aadhaar update online is free This facility is only till June 14
Koo

ಬೆಂಗಳೂರು, ಕರ್ನಾಟಕ: 12 ಅಂಕಿಗಳುಳ್ಳ ವಿಶಿಷ್ಟ ನಂಬರ್ ಆಧಾರ್ ಬಹಳ ಪ್ರಮುಖವಾದ ಒಂದು ದಾಖಲೆಯಾಗಿದೆ. ನಮ್ಮ ವೈಯಕ್ತಿಕ ಮಾಹಿತಿಯನ್ನು ಒಳಗೊಂಡಿರುವ ಈ ನಂಬರ್ ಅನ್ನು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು, ಯಾವುದೇ ರೀತಿಯ ದೃಢೀಕರಣಕ್ಕೆ ಬಳಸುತ್ತೇವೆ. ಆದರೆ, ಕೆಲವೊಮ್ಮೆ ನಾನಾ ಕಾರಣದಿಂದ ಮಾಹಿತಿಯ ತಪ್ಪಾಗಿದ್ದರೆ, ಅದನ್ನು ಅಪ್‌ಡೇಟ್ ಮಾಡಬೇಕಾಗುತ್ತದೆ. ಆಧಾರ್ ಕೇಂದ್ರಗಳಿಗೆ ಹೋಗಿ ಅಪ್‌ಡೇಟ್ ಮಾಡುವುದಾದರೆ 50 ರೂ. ನೀಡಬೇಕಾಗುತ್ತದೆ. ಆದರೆ, ಆನ್‌ಲೈನ್‌ನಲ್ಲಿ ಆಧಾರ್ ಅಪ್‌ಡೇಟ್ (Aadhaar Update) ಮಾಡಲು ಯಾವುದೇ ದುಡ್ಡಿಲ್ಲ. ಆಧರೆ, ಈ ಸೌಲಭ್ಯವು ಜೂನ್ 14ರವರೆಗೆ ಮಾತ್ರವೇ ಇದೆ ಎಂಬುದನ್ನು ನೆನಪಿಡಿ. ಹಾಗೆಯೇ, ಆಧಾರ್ ಅಪ್‌ಡೇಟ್ ಕಡ್ಡಾಯ ಕೂಡ ಅಲ್ಲ.

Aadhaar Update: ಏನೇನು ಅಪ್‌ಡೇಟ್ ಮಾಡಬಹುದು?

ಬಳಕೆದಾರರ ವಿವರಗಳನ್ನು ಮರುಮೌಲ್ಯಮಾಪನ ಮಾಡಲು ಗುರುತಿನ ಪುರಾವೆ (PoI) ಮತ್ತು ವಿಳಾಸದ ಪುರಾವೆ (PoA) ದಾಖಲೆಗಳನ್ನು ಆನ್ಲೈನ್‌ನಲ್ಲಿ ಉಚಿತವಾಗಿ ಅಪ್‌ಲೋಡ್ ಮಾಡಬಹುದು. ಆಧಾರ್ ಕಾರ್ಡ್ ಪಡೆದು ದಶಕಗಳಾಗಿದ್ದರೆ, ಅಪ್‌ಡೇಟ್ ಮಾಡಿದರೆ ಒಳ್ಳೆಯವುದು. ಆದರೆ, ನೆನಪಿನಲ್ಲಿಡಿ ಅಪ್‌ಡೇಟ್ ಮಾಡುವುದೇನೂ ಕಡ್ಡಾಯವಲ್ಲ. ನಿಮ್ಮ ಮಾಹಿತಿ ಸರಿಯಾಗಿರಬೇಕು ಎಂದಾದರೆ ಅಥವಾ ಅಗತ್ಯ ಇದೆ ಎನ್ನುವುದಾದರೆ ಅಪ್‌ಡೇಟ್ ಮಾಡಿಕೊಳ್ಳಬಹುದು.

ಆನ್‌ಲೈನ್‌ನಲ್ಲಿಆಧಾರ್ ಅಪ್‌ಡೇಟ್ ಮಾಡುವುದು ತುಂಬ ಕಷ್ಟವೇನೂ ಅಲ್ಲ. ಕೇವಲ ಕೆಲವೇ ನಿಮಿಷಗಳಲ್ಲಿ ಆನ್‌ಲೈನ್‌ನಲ್ಲಿ ಆಧಾರ್ ಅಪ್‌ಡೇಟ್ ಮಾಡಬಹುದು. ಇದಕ್ಕಾಗಿ ಸಂಬಂಧಿಸಿದ ದಾಖಲೆಗಳನ್ನು ಮೊದಲೇ ಸ್ಕ್ಯಾನ್ ಮಾಡಿಟ್ಟುಕೊಂಡಿರಬೇಕು. ಅಂದರೆ, ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆಯನ್ನು ಪುರಸ್ಕರಿಸುವ ದಾಖಲೆ ಪತ್ರಗಳನ್ನು ಸ್ಕ್ಯಾನ್ ಮಾಡಿ, ಸೇವ್ ಮಾಡಿಟ್ಟುಕೊಂಡಿರಬೇಕು. ಆಗ, ಆನ್‌ಲೈನ್‌ನಲ್ಲಿ ಅಪ್‌ಡೇಟ್ ಮಾಡುವುದು ಸುಲಭವಾಗುತ್ತದೆ.

ಇದನ್ನೂ ಓದಿ: Aadhaar Update | ಹೊಸ ಮೊಬೈಲ್‌ ಸಂಖ್ಯೆಯನ್ನು ಆಧಾರ್‌ ಕಾರ್ಡ್‌ಗೆ ಲಿಂಕ್‌ ಮಾಡುವುದು ಹೇಗೆ?

ಆನ್‌ಲೈನ್‌ನಲ್ಲಿ ಆಧಾರ್ ಅಪ್‌ಡೇಟ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ….

  • ಮೊದಲಿಗೆ UIDAI ಜಾಲತಾಣದಲ್ಲಿ Aadhaar Self Service (ಆಧಾರ್ ಸೆಲ್ಪ್ ಸರ್ವಿಸ್) ಪೋರ್ಟಲ್‌ಗೆ ಭೇಟಿ ನೀಡಿ. ಆನ್‌ಲೈನ್ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ.
  • ಡಾಕ್ಯುಮೆಂಟ್ ಅಪ್‌ಡೇಟ್ (Document Update)ಮೇಲೆ ಕ್ಲಿಕ್ ಮಾಡಿ ಮತ್ತು ಈಗಿರುವ ದಾಖಲೆ, ಮಾಹಿತಿಯನ್ನು ಖಚಿತಪಡಿಸಿ.
  • ಡ್ರಾಪ್-ಡೌನ್ ಪಟ್ಟಿಯನ್ನು ಬಳಸಿ, ಪರಿಶೀಲನೆಗಾಗಿ ಮೂಲ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಆಯ್ಕೆಮಾಡಿ ಮತ್ತು ಅಪ್‌ಲೋಡ್ ಮಾಡಿ.
  • ಈ ವೇಳೆ ನೀಡಲಾಗುವ ಸರ್ವೀಸ್ ರಿಕ್ವೆಸ್ಟ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ. ಇದರಿಂದ ಅಪ್‌ಡೇಟ್ ಪ್ರೊಸೆಸಿಂಗ್ ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ.
  • ಇಷ್ಟಾದರೆ, ನಿಮ್ಮ ಆನ್‌ಲೈನ್ ಆಧಾರ್ ಅಪ್‌ಡೇಟ್ ಪ್ರಕ್ರಿಯೆ ಪೂರ್ಣವಾಗುತ್ತದೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಗ್ಯಾಜೆಟ್ಸ್

Monsoon Precaution: ಮಳೆಗಾಲಕ್ಕೆ ಶುರುವಾಯ್ತು ಕ್ಷಣಗಣನೆ; ಈ ಆ್ಯಪ್‌ಗಳು ಈಗ ನಿಮಗೆ ಅತ್ಯಗತ್ಯ

ಮಳೆಗಾಲ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಮಳೆಗಾಲದಲ್ಲಿ ಮುನ್ನೆಚ್ಚರಿಕೆ (Monsoon Precaution)‌ ವಹಿಸುವುದಕ್ಕೆ ಈ ಕೆಳಗಿನ ಕೆಲವು ಆ್ಯಪ್‌ಗಳು ನಿಮಗೆ ಸಹಕಾರಿ.

VISTARANEWS.COM


on

Edited by

monsoon Precaution apps
Koo

ಬೆಂಗಳೂರು: ಮಳೆ ಬರಬಹುದು ಎಂದು ಛತ್ರಿ ಕೊಂಡೊಯ್ದ ದಿನ ಮಳೆಯೇ ಬರುವುದಿಲ್ಲ. ಬಿಸಿಲು ಸುಡುತ್ತಿರುವ ದಿನದಂದು ಮಳೆ ಬರುವುದೇ ಇಲ್ಲವೆಂದು ಹೋದಾಗ ಮಳೆ ಧೋ ಎಂದು ಸುರಿದುಬಿಡುತ್ತದೆ. ಇದು ಬಹುತೇಕರ ಅದರಲ್ಲೂ ಬೆಂಗಳೂರಿನಲ್ಲಿರುವವರ ದೊಡ್ಡ ಕಂಪ್ಲೇಂಟ್‌. ಮಳೆಗಾಲ ಯಾವಾಗ ಆರಂಭವಾಗುತ್ತದೆ ಎನ್ನುವುದನ್ನು ಭಾರತೀಯ ಹವಾಮಾನ ಇಲಾಖೆ ಹೇಳುತ್ತದೆಯಾದರೂ ಯಾವ ದಿನ ಯಾವ ಸಮಯದಲ್ಲಿ ಯಾವ ಪ್ರದೇಶದಲ್ಲಿ ಯಾವ ರೀತಿಯ ವಾತಾವರಣ ಇರುತ್ತದೆ (Monsoon Precaution) ಎಂದು ನಿಖರವಾಗಿ ಹೇಳುವುದು ಕಷ್ಟದ ಕೆಲಸವೇ. ಅದಕ್ಕೆಂದೇ ನಿಮ್ಮ ನೆರವಿಗೆ ನಾವಿಲ್ಲಿ ಬಂದಿದ್ದೇವೆ.

ಮಳೆಯ ಭವಿಷ್ಯವನ್ನು ನುಡಿಯುವಂತಹ ಸಾಕಷ್ಟು ಆ್ಯಪ್‌ಗಳು ಪ್ಲೇಸ್ಟೋರ್‌ನಲ್ಲಿ ಲಭ್ಯವಿವೆ. ಅವುಗಳಲ್ಲಿ ಕೆಲವು ಆ್ಯಪ್‌ಗಳು ನಿಖರತೆಗೆ ಹತ್ತಿರವಾದ ಉತ್ತರವನ್ನು ಕೊಡುತ್ತವೆ. ಅವುಗಳ ಸಣ್ಣ ಪರಿಚಯ ಇಲ್ಲಿದೆ ನೋಡಿ.

ಇದನ್ನೂ ಓದಿ: Viral Video: ಟೆರೇಸ್ಸೇ ಡ್ಯಾನ್ಸ್ ಫ್ಲೋರ್ ಆಯ್ತು, ಯುವತಿ ಸಖತ್ ಸ್ಟೆಪ್ಸ್! ವಿಡಿಯೋ ವೈರಲ್

MAUSAM

ಇದು ಭಾರತದ ಹವಾಮಾನ ಇಲಾಖೆ ಮತ್ತು ಭೂ ವಿಜ್ಞಾನ ಸಚಿವಾಲಯ ಜಂಟಿಯಾಗಿ ತಯಾರಿಸಿರುವ ಆ್ಯಪ್‌ ಇದು. ನಿಜ ಹೇಳಬೇಕೆಂದರೆ ಈ ಆ್ಯಪ್‌ ಐಎಂಡಿಯ ವೆಬ್‌ಸೈಟ್‌ ಮಾಹಿತಿಗಳಿಗಿಂತಲೂ ಹೆಚ್ಚು ನಿಖರವಾಗಿರುತ್ತವೆ. ನೀವು ಈ ಆ್ಯಪ್‌ ಬಳಸುತ್ತಿರುವ ಸ್ಮಾರ್ಟ್‌ಫೋನ್‌ ಇರುವ ಸ್ಥಳದ ರಾಡಾರ್‌ ಚಿತ್ರಗಳು, ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ಈ ಆ್ಯಪ್‌ ಮುನ್ಸೂಚನೆಗಳನ್ನು ಕೊಡುತ್ತದೆ. ಮಳೆ, ಬಿರುಗಾಳಿ, ಚಂಡಮಾರುತಗಳ ಬಗ್ಗೆ ಎಚ್ಚರಿಕೆ ಕೊಡುತ್ತದೆ.

Skymet Weather(ಸ್ಕೈಮೆಟ್ ಹವಾಮಾನ)


ಭಾರತದಲ್ಲಿ ಹವಾಮಾನವನ್ನು ಊಹಿಸಲು ಇರುವ ಮತ್ತೊಂದು ಅತ್ಯಂತ ವಿಶ್ವಾಸಾರ್ಹ ಆ್ಯಪ್‌. ಭಾರತದಲ್ಲಿಯೇ ತಯಾರಾಗಿರುವ ಈ ಆ್ಯಪ್‌ ಮಳೆ ಸೇರಿದಂತೆ ಎಲ್ಲ ರೀತಿಯ ಹವಾಮಾನವನ್ನು ಊಹಿಸಬಲ್ಲದ್ದಾಗಿದೆ. ದೇಶಾದ್ಯಂತ ಇರುವ 7000ಕ್ಕೂ ಅಧಿಕ ಹವಾಮಾನ ಕೇಂದ್ರಗಳು ಮತ್ತು ಉಪ್ರಗಹಗಳ ಚಿತ್ರಣಗಳನ್ನು ಬಳಸಿಕೊಂಡು ಈ ಆ್ಯಪ್‌ ಹವಾಮಾನದ ಬಗ್ಗೆ ಮುನ್ಸೂಚನೆ ನೀಡುತ್ತದೆ. ಈಗಿನ ತಾಪಮಾನ ಹಾಗೆಯೇ ಮುಂದಿನ 14 ದಿನಗಳ ಹವಾಮಾನ ವರದಿಯನ್ನು ಇದು ನೀಡಬಲ್ಲದು.

AccuWeather


ಇದು ಸ್ಮಾರ್ಟ್‌ಫೋನ್‌ ಬಳಕೆದಾರರಲ್ಲಿ ಅತ್ಯಂತ ಜನಪ್ರಿಯ ಹವಾಮಾನ ಮುನ್ಸೂಚನೆ ಅಪ್ಲಿಕೇಶನ್‌ಗಳಲ್ಲಿ ಒಂದಾಗಿದೆ. ನಿಖರತೆ ವಿಚಾರದಲ್ಲಿ ಈ ಆ್ಯಪ್‌ ಬೇರೆಲ್ಲ ಆ್ಯಪ್‌ಗಳಿಗಿಂತ ಬೆಸ್ಟ್‌ ಎಂದೇ ಹೇಳಬಹುದು. ಇದು ಇತರ ಅಪ್ಲಿಕೇಶನ್‌ಗಳಿಗಿಂತ ಸ್ಥಳೀಯ ಹವಾಮಾನದ ಕುರಿತು ಹೆಚ್ಚು ವಿವರವಾದ ಮಾಹಿತಿಯನ್ನು ನೀಡುತ್ತದೆ. ಹಾಗೇ ನಿಮಿಷಕ್ಕೊಮ್ಮೆ ಅದನ್ನು ಅಪ್‌ಡೇಟ್‌ ಮಾಡುತ್ತಿರುತ್ತದೆ. ಹಾಗೆಯೇ ಮುಂದಿನ 45 ದಿನಗಳವರೆಗಿನ ವರದಿಯನ್ನು ಈ ಆ್ಯಪ್‌ ನೀಡಬಲ್ಲದು.

ದಿ ವೆದರ್‌ ಚಾನೆಲ್

ಇದು ಐಫೋನ್‌ ಬಳಕೆದಾರರಿಗೆ ಪರಿಚಯದ ಆ್ಯಪ್‌. ಐಬಿಎಂನ ಈ ಆ್ಯಪ್‌ ಐಫೋನ್‌ಗಳಿಗೆ ಅಧಿಕೃತ ಹವಾಮಾನ ವರದಿ ಪೂರೈಕೆದಾರ. ಹಾಗೆಯೇ ಬೇರೆಯವರೂ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿರುವ ಈ ಆ್ಯಪ್‌ ಹವಾಮಾನದ ಬಗ್ಗೆ ಸಂಪೂರ್ಣ ಎಚ್ಚರಿಕೆಗಳನ್ನು ನೀಡುತ್ತದೆ. ಮಿಂಚು, ಮಳೆಯ ಬಗ್ಗೆ ಎಚ್ಚರಿಸುತ್ತದೆ.

Continue Reading

ಗ್ಯಾಜೆಟ್ಸ್

WWDC 2023: 15 ಇಂಚಿನ ಮ್ಯಾಕ್‌ಬುಕ್ ಏರ್ ಅನಾವರಣಗೊಳಿಸಿದ ಆಪಲ್, ಬೆಲೆ ಎಷ್ಟು?

ಹೊಸ ಮ್ಯಾಕ್‌ಬುಕ್‌ ಏರ್‌ ತೆಳುವಾದ ಮತ್ತು ಹಗುರವಾದ ವಿನ್ಯಾಸವನ್ನು ಹೊಂದಿದೆ. 11.5 ಮಿಮೀ ದಪ್ಪವಿದೆ. 3 ಪೌಂಡ್‌ ತೂಕವಿದೆ. MagSafe, ಎರಡು TB ಪೋರ್ಟ್‌ಗಳನ್ನು ಹೊಂದಿದೆ. ಸ್ಟ್ಯಾಂಡರ್ಡ್ ಮ್ಯಾಕ್‌ಬುಕ್ ಏರ್‌ನಂತೆ ನಾಲ್ಕು ಬಣ್ಣಗಳಲ್ಲಿದ್ದು, ಮ್ಯಾಕ್‌ಬುಕ್ ಪ್ರೊ M2 ಅಲ್ಟ್ರಾ ಚಿಪ್‌ನಿಂದ ಚಾಲಿತವಾಗಿದೆ.

VISTARANEWS.COM


on

Edited by

macbook air
Koo

ನ್ಯೂಯಾರ್ಕ್‌: ಆಪಲ್ ಸಂಸ್ಥೆ (Apple) ಸೋಮವಾರ 15 ಇಂಚಿನ ಮ್ಯಾಕ್‌ಬುಕ್ ಏರ್ (MacBook Air) ಅನ್ನು ವರ್ಲ್ಡ್‌ವೈಡ್ ಡೆವಲಪರ್‌ಗಳ ಸಮ್ಮೇಳನದಲ್ಲಿ (WWDC 2023) ಅನಾವರಣಗೊಳಿಸಿದೆ. ಈ ಲ್ಯಾಪ್‌ಟಾಪ್‌ನ ಬೆಲೆ $1299 (₹ 1.07 ಲಕ್ಷ).

ಹೊಸ ಮ್ಯಾಕ್‌ಬುಕ್‌ ಏರ್‌ ತೆಳುವಾದ ಮತ್ತು ಹಗುರವಾದ ವಿನ್ಯಾಸವನ್ನು ಹೊಂದಿದೆ. 11.5 ಮಿಮೀ ದಪ್ಪವಿದೆ. 3 ಪೌಂಡ್‌ ತೂಕವಿದೆ. MagSafe, ಎರಡು TB ಪೋರ್ಟ್‌ಗಳನ್ನು ಹೊಂದಿದೆ. ಸ್ಟ್ಯಾಂಡರ್ಡ್ ಮ್ಯಾಕ್‌ಬುಕ್ ಏರ್‌ನಂತೆ ನಾಲ್ಕು ಬಣ್ಣಗಳಲ್ಲಿದ್ದು, ಮ್ಯಾಕ್‌ಬುಕ್ ಪ್ರೊ M2 ಅಲ್ಟ್ರಾ ಚಿಪ್‌ನಿಂದ ಚಾಲಿತವಾಗಿದೆ.

ಆಪಲ್‌ನ ಮ್ಯಾಕ್ ತಂಡವು 2020ರಲ್ಲಿ ತನ್ನದೇ ಆದ ಚಿಪ್‌ಗಳನ್ನು ಬಳಸಲು ಪ್ರಾರಂಭಿಸಿತು. ಆಗಿನಿಂದ ಅದರ ಲ್ಯಾಪ್‌ಟಾಪ್‌ ಮಾರುಕಟ್ಟೆ ಸುಧಾರಿಸಿದೆ. ಹೊಸ ಉತ್ಪನ್ನದಲ್ಲಿ ಅದು ತನ್ನ ಮ್ಯಾಕ್ ಸ್ಟುಡಿಯೋ ಡೆಸ್ಕ್‌ಟಾಪ್ ಯಂತ್ರವನ್ನು ನವೀಕರಿಸಿದೆ. ಇದರ ಹೊಸ M2 ಅಲ್ಟ್ರಾ ಚಿಪ್, ಕೃತಕ ಬುದ್ಧಿಮತ್ತೆಯ ಕೆಲಸವನ್ನು ವೇಗಗೊಳಿಸಿದೆ. ಇದರ ಪ್ರತಿಸ್ಪರ್ಧಿ ಸಂಸ್ಥೆಗಳ ಚಿಪ್‌ಗಳು ಈ ಕೆಲಸ ನಿರ್ವಹಿಸಲು ಬೇಕಾದ ಮೆಮೊರಿ ಹೊಂದಿಲ್ಲ ಎನ್ನಲಾಗಿದೆ.

ಕ್ಯುಪರ್ಟಿನೊ ಮೂಲದ ತಂತ್ರಜ್ಞಾನ ದೈತ್ಯ ಸಂಸ್ಥೆ ಆಪಲ್‌, ಹೊಸ ಮ್ಯಾಕ್ ಪ್ರೊ ಅನ್ನು ಕೂಡ ಡೆವಲಪರ್‌ಗಳ ಸಮ್ಮೇಳನದಲ್ಲಿ ಅನಾವರಣಗೊಳಿಸಿದೆ. ಇದರ ಬೆಲೆ 6,999 ಡಾಲರ್.‌ ಮ್ಯಾಕ್‌ ಪ್ರೊದಲ್ಲಿ ಆರು ತೆರೆದ ವಿಸ್ತರಣೆ ಸ್ಲಾಟ್‌ಗಳಿವೆ, ಆಡಿಯೋ, ನೆಟ್‌ವರ್ಕಿಂಗ್, ವೀಡಿಯೊ ಮತ್ತು ಸ್ಟೋರೇಜ್ ಕಾರ್ಡ್‌ಗಳೊಂದಿಗೆ ಸಂಪೂರ್ಣವಾಗಿ ಸಜ್ಜಾಗಿದೆ. ಇಂಟೆಲ್-ಚಾಲಿತ ಮ್ಯಾಕ್‌ಗಳಿಗಿಂತ ಮೂರು ಪಟ್ಟು ವೇಗವಾಗಿ ಕಾರ್ಯನಿರ್ವಹಿಸುತ್ತದೆ.

ಆಪಲ್ ಮಿಶ್ರ-ರಿಯಾಲಿಟಿ ಹೆಡ್‌ಸೆಟ್ ಅನ್ನು ಅನಾವರಣಗೊಳಿಸಲಿದೆ. ಒಂಬತ್ತು ವರ್ಷಗಳ ಹಿಂದೆ ಆಪಲ್ ವಾಚ್ ಅನ್ನು ಪರಿಚಯಿಸಿದ ನಂತರ ಹೊಸ ಬಗೆಯ ಉತ್ಪನ್ನಗಳ ವರ್ಗಕ್ಕೆ ಇದು ಇನ್ನೊಂದು ಸೇರ್ಪಡೆ. ಇದರೊಂದಿಗೆ ಆಪಲ್ ಗ್ರಾಹಕರೊಂದಿಗೆ ಇನ್ನಷ್ಟು ಉತ್ಪನ್ನಗಳ ಸಂಬಂಧ ಸಾಧಿಸಿದೆ. ಫೇಸ್‌ಬುಕ್ ಮಾಲೀಕರಾದ ಮೆಟಾ ಪ್ಲಾಟ್‌ಫಾರ್ಮ್‌ನೊಂದಿಗೆ ಈಗ ಇದು ನೇರ ಸ್ಪರ್ಧೆಯಲ್ಲಿದೆ.

ಮೆಟಾದಿಂದ ಕಳೆದ ವರ್ಷ ಬಂದಿರುವ ಕ್ವೆಸ್ಟ್ ಪ್ರೊ ಮತ್ತು ಕಳೆದ ವಾರ ಬಂದ ಕ್ವೆಸ್ಟ್ 3 ಸಾಧನಗಳಂತೆ ಆಪಲ್‌ನ ಈ ಸಾಧನವೂ ಹೆಡ್‌ಸೆಟ್‌ನೊಳಗಿನ ಪರದೆಯ ಮೇಲೆ ಪ್ರದರ್ಶಿಸಲಾದ ವರ್ಚುವಲ್ ಪ್ರಪಂಚದೊಂದಿಗೆ ಹೊರಗಿನ ಪ್ರಪಂಚದ ವೀಡಿಯೊ ಫೀಡ್ ಅನ್ನು ಸಂಯೋಜಿಸುವ ಕೆಲಸ ಮಾಡುತ್ತದೆ.

ಇದನ್ನೂ ಓದಿ: ಗ್ಲೋಕಲ್‌ ಲೋಕ ಅಂಕಣ | ಮೆಟಾವರ್ಸ್ ಮುಂದಿರುವ ಸವಾಲುಗಳು

Continue Reading

ಗ್ಯಾಜೆಟ್ಸ್

Nothing Phone: ಐಫೋನ್ ಬೆನ್ನಲ್ಲೇ ಭಾರತದಲ್ಲಿ ಮತ್ತೊಂದು ಕಂಪನಿಯಿಂದ ಸ್ಮಾರ್ಟ್‌ಫೋನ್ ತಯಾರಿಕಾ ಘಟಕ

Nothing Phone: ಇತ್ತೀಚೆಗಷ್ಟೇ ಆ್ಯಪಲ್ ಕಂಪನಿಯು ಐಫೋನ್ ತಯಾರಿಕೆಯಲ್ಲಿ ಭಾರತದಲ್ಲೇ ಆರಂಭಿಸಲಾಗುವುದು ಎಂದು ಘೋಷಿಸಿತ್ತು. ಈಗ ಇಂಗ್ಲೆಂಡ್ ಮೂಲದ ನಥಿಂಗ್ ಟೆಕ್ನಾಲಜಿ ಕೂಡ ಇದೇ ಹಾದಿಯನ್ನು ತುಳಿದಿದೆ.

VISTARANEWS.COM


on

Edited by

Nothing phone to produce in India and company confirms it
Koo

ನವದೆಹಲಿ: ಚೀನಾ ಬಿಟ್ಟು ಭಾರತದಲ್ಲೇ ಐಫೋನ್‌ಗಳನ್ನು ಉತ್ಪಾದಿಸಲು ಆ್ಯಪಲ್ ಕಂಪನಿ (Apple Inc) ಮುಂದಾದ ಬೆನ್ನಲ್ಲೇ, ಮತ್ತೊಂದು ಸ್ಮಾರ್ಟ್‌ಫೋನ್ (Smartphone) ತಯಾರಿಕಾ ಕಂಪನಿಯು ಇದೇ ಹಾದಿಯನ್ನು ತುಳಿದಿದೆ. ನಥಿಂಗ್ ಫೋನ್ (2) Nothing Phone (2) ಸ್ಮಾರ್ಟ್‌ಫೋನ್‌ವನ್ನು ಭಾರತದಲ್ಲಿ (India) ತಯಾರಿಸಲಾಗುವುದು ಎಂದು ನಥಿಂಗ್ ಟೆಕ್ನಾಲಜಿ (Nothing Technology Company) ಕಂಪನಿ ಹೇಳಿದೆ. ಈ ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು ತನ್ನ ಮುಂಬರುವ 5ಜಿ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ತಯಾರಿಸಲಾಗುವುದು ಎಂದು ನಥಿಂಗ್ ಫೋನ್ ಕಂಪನಿಯು ಮಾಧ್ಯಮಗಳಿಗೆ ಖಚಿತಪಡಿಸಿದೆ. ಹೊಸ ಫೋನ್ ಬಿಡುಗಡೆಗೆ ಮುಂಚೆಯೇ ಕೆಲವು ಫೀಚರ್‌ಗಳನ್ನು ಕಂಪನಿಯು ಬಹಿರಂಗಪಡಿಸಿದೆ. ಆದರೆ, ಯಾವ ದಿನದಂದು ಈ ಫೋನ್ ಲಾಂಚ್ ಆಗಲಿದೆ ಎಂಬ ಖಚಿತ ಮಾಹಿತಯನ್ನು ಕಂಪನಿ ಬಿಟ್ಟು ಕೊಟ್ಟಿಲ್ಲ. ಮುಂದಿನ ತಿಂಗಳು ಅಂದರೆ ಜುಲೈನಲ್ಲಿ ನಥಿಂಗ್ ಫೋನ್ (2) ಭಾರತ ಮತ್ತು ಇತರ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಕಂಪನಿಯು ಘೋಷಿಸಿದೆ.

ನಥಿಂಗ್ ಫೋನ್ (1) ಅನ್ನು ಭಾರತದಲ್ಲಿ ತಯಾರಿಸಲಾಗಿಲ್ಲ. ಈ ಸ್ಮಾರ್ಟ್‌ಫೋನ್ ಉತ್ತರಾಧಿಕಾರಿ ಅರ್ಥಾತ್ ಹೊಸ ಫೋನ್ ಭಾರತದಲ್ಲಿ ತಯಾರಾಗಲಿದೆ. ಭಾರತದಲ್ಲಿ ಉತ್ಪಾದನೆಯಾಗಲಿದೆ ಎಂದು ಫೋನ್ ಬೆಲೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅಗ್ಗದ ಬೆಲೆಗೆ ಫೋನ್ ಸಿಗುತ್ತದೆ ಎಂದು ಭಾವಿಸಬೇಕಿಲ್ಲ. ಯಾಕೆಂದರೆ ಭಾರತದಲ್ಲಿ ಸಾಧನವನ್ನು ಜೋಡಿಸಲಾಗುತ್ತಿಲ್ಲ. ನಥಿಂಗ್ ಫೋನ್ (2) ಜುಲೈನಲ್ಲಿ ಬಿಡುಗಡೆಯಾದಾಗ ಭಾರತದಲ್ಲಿ 40,000 ರೂ.ಕ್ಕಿಂತ ಕಡಿಮೆ ಬೆಲೆಯನ್ನು ನಿರೀಕ್ಷಿಸಲಾಗಿದೆ.

ನಥಿಂಗ್ ಸ್ಮಾರ್ಟ್‌ಫೋನ್‌ಗಳು ತಮ್ಮ ಸಾಂಪ್ರದಾಯಿಕ ಪಾರದರ್ಶಕ ವಿನ್ಯಾಸಕ್ಕೆ ಹೆಸರುವಾಸಿಯಾಗಿವೆ. ಈ ವಿನ್ಯಾಸಗಳಿಗೆ ಹೈಟೆಕ್ ಉತ್ಪಾದನಾ ಪ್ರಕ್ರಿಯೆಗಳು ಮತ್ತು ನಿಖರವಾದ ಎಂಜಿನಿಯರಿಂಗ್ ಅಗತ್ಯವಿರುತ್ತದೆ. ಹಾಗಾಗಿ, ಭಾರತದಲ್ಲಿ ಸ್ಮಾರ್ಟ್‌ಫೋನ್ ಉತ್ಪಾದನಾ ಸಾಮರ್ಥ್ಯಗಳನ್ನು ಹೆಚ್ಚಿಸಲು ಕಾರಣವಾಗಿದೆ. ಭಾರತದಲ್ಲಿ ಉತ್ಪಾದನೆಗೆ ನಮ್ಮ ಚಾಲನೆಯು ಸ್ಥಳೀಯ ಗ್ರಾಹಕರು ಮತ್ತು ಅವರ ಬೇಡಿಕೆಗಳ ಕಡೆಗೆ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಫೋನ್ (2) ಅನ್ನು ಭಾರತದಲ್ಲಿ ತಯಾರಿಸಲಾಗುವುದು ಎಂದು ಘೋಷಿಸಲು ನಾವು ಹೆಮ್ಮೆಪಡುತ್ತೇವೆ ಎಂದು ನಥಿಂಗ್ ಇಂಡಿಯಾದ ಉಪಾಧ್ಯಕ್ಷ ಮತ್ತು ಜನರಲ್ ಮ್ಯಾನೇಜರ್ ಮನು ಶರ್ಮಾ ಅವರು ಹೇಳಿದ್ದಾರೆ.

ಹೊಸ ಬ್ರ್ಯಾಂಡ್ ಆಗಿರುವ ನಥಿಂಗ್ ಫೋನ್ ಹೊಸ ಹೊಸ ಆವಿಷ್ಕಾರಗಳಲ್ಲಿ ನಂಬಿಕೆಯನ್ನು ಇಟ್ಟಿದೆ. ಫೋನ್ (2) ಅನ್ನು ಮಾರುಕಟ್ಟೆಯಲ್ಲಿ ಅತ್ಯಂತ ಸಮರ್ಥನೀಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಮನು ಶರ್ಮಾ ಅವರು ಹೇಳಿದರು.

ಇದನ್ನೂ ಓದಿ: Apple India:‌ ಭಾರತದಲ್ಲಿ ಆ್ಯಪಲ್‌ ಕಂಪನಿಗೆ ಕೇವಲ 2 ಸ್ಟೋರ್‌ಗಳಲ್ಲಿ ತಿಂಗಳಿಗೆ ಸೇಲ್ಸ್‌ ಎಷ್ಟು ಕೋಟಿ?

2020ರಲ್ಲಿ ಆರಂಭವಾದ ನಥಿಂಗ್ ಕಂಪನಿಯು ಇಂಗ್ಲೆಂಡ್‌ನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ. ಮಾರುಕಟ್ಟೆಗೆ ಪ್ರವೇಶಿಸಿದ ಎರಡೇ ವರ್ಷಗಳಲ್ಲಿ ತನ್ನದೇ ಬ್ರ್ಯಾಂಡ್ ಬಿಲ್ಡ್ ಮಾಡಿಕೊಂಡಿದೆ. ಹೊಸ ವಿನ್ಯಾಸದ ಸ್ಮಾರ್ಟ್‌ಫೋನ್‌ಗಳ ಮೂಲಕ ಭಾರತವು ಸೇರಿದಂತೆ ಜಗತ್ತಿನಾದ್ಯಂತ ತನ್ನದೇ ಪಾಲು ಪಡೆದುಕೊಂಡಿದೆ. ಆಪಲ್, ಸ್ಯಾಮ್ಸಂಗ್‌ ಕಂಪನಿಯ ಫೋನುಗಳಿಗೆ ತೀವ್ರ ಸ್ಪರ್ಧೆಯನ್ನು ಒಡ್ಡಿದೆ.

ತಂತ್ರಜ್ಞಾನ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಗ್ಯಾಜೆಟ್ಸ್

Google Wallet: ಗೂಗಲ್ ವಾಲೆಟ್‌ಗೆ 5 ಹೊಸ ಫೀಚರ್ಸ್, ಇವುಗಳಿಂದ ಏನೆಲ್ಲ ಉಪಯೋಗ?

Google Wallet: ಟೆಕ್ ದೈತ್ಯ ಕಂಪನಿ ಗೂಗಲ್ ಕಳೆದ ವರ್ಷವಷ್ಟೇ ಗೂಗಲ್ ವಾಲೆಟ್ ಸೇವೆಯನ್ನು ಆರಂಭಿಸಿತ್ತು. ಇದೀಗ, ಐದು ಹೊಸ ಫೀಚರ್‌ಗಳನ್ನು ಜಾರಿ ಮಾಡಿದೆ.

VISTARANEWS.COM


on

Edited by

Google wallet gets new features and check details
Koo

ಬೆಂಗಳೂರು, ಕರ್ನಾಟಕ: ಕಳೆದ ವರ್ಷ ಜುಲೈ ತಿಂಗಳಲ್ಲಿ ಗೂಗಲ್ (Google) ಕಂಪನಿಯು ತನ್ನ ವಾಲೆಟ್ ಸೇವೆಯಾದ ಗೂಗಲ್ ವಾಲೆಟ್ (Google Wallet) ಲಾಂಚ್ ಮಾಡಿತ್ತು. ಈ ಉತ್ಪನ್ನಕ್ಕೆ ಈಗ ಕಂಪನಿಯು ಐದು ಹೊಸ ಫೀಚರ್‌ಗಳನ್ನು (New Feature) ಸೇರಿಸಿದ್ದು, ಬಳಕೆದಾರರಿಗೆ ಇನ್ನಷ್ಟು ನೆರವು ಒದಗಿಸಿದೆ. ಎಲ್ಲಕ್ಕಿಂತ ಹೆಚ್ಚಾಗಿ ಗೂಗಲ್ ವಾಲೆಟ್ ಈ ಮೊದಲಿಗಿಂತಲೂ ಈಗ ಹೆಚ್ಚು ಸುಭದ್ರ ಮತ್ತು ಪ್ರೈವೇಟ್ ಡಿಜಿಟಲ್ ವಾಲೆಟ್ ಆಗಿ ಬದಲಾಗಿದೆ. ಅನುಕೂಲತೆ, ಭದ್ರತೆ ಮತ್ತು ಗೌಪ್ಯತೆಗೆ ಆದ್ಯತೆ ನೀಡುವ ಹೊಸ ಡಿಜಿಟಲ್ ವ್ಯಾಲೆಟ್ ಅನ್ನು ರಚಿಸಲು ನಾವು ಹೊರಟಿದ್ದೇವೆ. ಎಲ್ಲಕ್ಕಿಂತ ಮುಖ್ಯವಾಗಿ, ಯಾರಿಗಾದರೂ, ಎಲ್ಲಿಯಾದರೂ ಪ್ರವೇಶಿಸಬಹುದಾದ ಅನುಭವವನ್ನು ನಿರ್ಮಿಸಲು ನಾವು ಬಯಸುತ್ತೇವೆ. ಆ ದೃಷ್ಟಿಯನ್ನು ರಿಯಾಲಿಟಿ ಮಾಡಲು ನಾವು ಹೇಗೆ ಕೆಲಸ ಮಾಡುತ್ತಿದ್ದೇವೆ ಎಂಬುದು ಇಲ್ಲಿದೆ ಎಂದು ಗೂಗಲ್ ವಾಲೆಟ್‌ನ ಉಪಾಧ್ಯಕ್ಷ ಮತ್ತು ಜನರಲ್ ಮ್ಯಾನೇಜರ್ ಜೆನ್ನಿ ಚಾಂಗ್ ಅವರು ಗೂಗಲ್ ಬ್ಲಾಗ್‌ನಲ್ಲಿ ಹೊಸ ಫೀಚರ್‌ಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

Google Wallet: ಸುಲಭವಾಗಿ ಪಾಸ್ ಇಮೇಜ್ ಸೇವ್

ಶೀಘ್ರದಲ್ಲೇ ಬಳಕೆದಾರರು ವ್ಯಾಲೆಟ್‌ನಲ್ಲಿ ಕಾರ್ಡ್‌ನ ಸುರಕ್ಷಿತ, ಡಿಜಿಟಲ್ ಆವೃತ್ತಿಯನ್ನುಕ್ರಿಯೇಟ್ ಮಾಡಲು ಮತ್ತು ಸೇವ್ ಮಾಡಲು ಸಾಧ್ಯವಾಗಲಿದೆ. ಈ ಕ್ರಿಯೇಯನ್ನು ಕಾರ್ಡ್‌ನ ಫೋಟೋವನ್ನು ತೆಗೆದುಕೊಳ್ಳುವ ಮೂಲಕ ಮಾಡಬಹುದಾಗಿದೆ. ಈ ಫೀಚರ್, ಬಾರ್‌ಕೋಡ್ ಅಥವಾ ಕ್ಯೂಆರ್ ಕೋಡ್‌ನೊಂದಿಗೆ ಯಾವುದೇ ಪಾಸ್‌ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ, ಪ್ರಾಥಮಿಕವಾಗಿ ಟ್ರಾನ್ಸಿಟ್ ಕ್ಯೂಆರ್ ಟಿಕೆಟ್‌ಗಳು, ಪಾರ್ಕಿಂಗ್ ಪಾಸ್‌ಗಳು ಅಥವಾ ಇ-ಕಾಮರ್ಸ್ ರಿಟರ್ನ್ ಕ್ಯೂಆರ್ ಕೋಡ್‌ಗಳಂತಹ ಪಾಸ್‌ಗಳಿಗೆ ಇದು ಅನ್ವಯವಾಗುತ್ತದೆ.

ಸೇವ್ ಹೆಲ್ತ್ ಇನ್ಶೂರೆನ್ಸ್ ಕಾರ್ಡ್ಸ್

ಆರೋಗ್ಯ ವಿಮೆಯ ಪತ್ರ ಕಾರ್ಡ್‌ನ ಡಿಜಿಟಿಲ್ ಆವೃತ್ತಿಯನ್ನು ಅಭಿವೃದ್ಧಿ ಮಾಡಲು ಗೂಗಲ್ ಹುಮನಾ (ಅಮೆರಿಕದ ಹೆಲ್ತ್ ಇನ್ಶೂರೆನ್ಸ್ ಕಂಪನಿ) ಜತೆ ಕೆಲಸ ಮಾಡುತ್ತಿದೆ. ಇದರಿಂದ ಬಳಕೆದಾರರು ವಾಲೆಟ್‌ನಲ್ಲಿ ಕಾರ್ಡ್ ಸೇವ್ ಮಾಡಿಕೊಳ್ಳಲು ಸಹಾಯವಾಗಲಿದೆ. ಇನ್ನು ಬ್ರಿಟನ್‌ನಲ್ಲಿ ಬಳಕೆದಾರರು ಎಚ್ಎಂಆರ್‌ಸಿ ಆ್ಯಪ್‌ನಿಂದ ರಾಷ್ಟ್ರೀಯ ವಿಮಾ ನಂಬರ್ ಸೇವ್ ಮಾಡಿಕೊಳ್ಳಲು ನೆರವು ನೀಡಲಿದೆ.

ನಿಮ್ಮ ಐಡಿ ಸೇವ್ ಮಾಡಿ

ಜೂನ್ 1ರಿಂದ ಮೇರಿಲ್ಯಾಂಡ್ ಐಡಿ ಅಥವಾ ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರು ಈಗಾಗಲೇ ತಮ್ಮ ಐಡಿಯನ್ನು ಆಂಡ್ರಾಯ್ಡ್ 8.0 ಅಥವಾ ನಂತರದ ಯಾವುದೇ ಫೋನ್‌ನಲ್ಲಿ ವ್ಯಾಲೆಟ್‌ಗೆ ಸೇರಿಸಬಹುದು. ಮುಂಬರುವ ತಿಂಗಳುಗಳಲ್ಲಿ ಅಮೆರಿಕದ ಅರಿಝೋನಾ, ಕೊಲೊರಾಡೋ ಮತ್ತು ಜಾರ್ಜಿಯಾದಲ್ಲಿಯೂ ಈ ಸೌಲಭ್ಯ ಲಭ್ಯವಾಗಲಿದೆ. ಮೇರಿಲ್ಯಾಂಡ್‌ನಿಂದ ಕೊಡ ಮಾಡಲಾದ ಐಡಿಗಳನ್ನು ವಾಲೆಟ್‌ಗಳನ್ನು ಸೇವ್ ಮಾಡಿಕೊಂಡು, ಅವುಗಳ್ನು ಸಾರಿಗೆ ಭದ್ರತಾ ಆಡಳಿತಕ್ಕಾಗಿ ಬಳಸಿಕೊಳ್ಳಬಹುದಾಗಿದೆ. ಇನ್ನು ಹೆಚ್ಚಿನ ಲಾಭಗಳು ಈ ಫೀಚರ್‌ ಮೂಲಕ ಲಭ್ಯವಾಗಲಿವೆ.

ಇದನ್ನೂ ಓದಿ: ವಿಸ್ತಾರ Explainer | ನಿಮ್ಮ ಹಣ ಕದಿಯುವ SOVA Virus! ಮೊಬೈಲ್ ಬಳಸುವಾಗ ಹುಷಾರ್!

Google Wallet: ಮೆಸೇಜ್‌ಗಳಿಂದ ಪಾಸ್‌ಗಳನ್ನು ಸೇವ್ ಮಾಡಿ

ಸದ್ಯದಲ್ಲಿಯೇ, RCS (ರಿಚ್ ಕಮ್ಯುನಿಕೇಶನ್ ಸೇವೆಗಳು) ಸಕ್ರಿಯಗೊಳಿಸಲಾದ Google ನ ಸಂದೇಶಗಳ ಅಪ್ಲಿಕೇಶನ್ ಅನ್ನು ಬಳಸುವ ಜನರು ತಮ್ಮ ಬೋರ್ಡಿಂಗ್ ಪಾಸ್ ಅಥವಾ ರೈಲು ಟಿಕೆಟ್ ಅನ್ನು ನೇರವಾಗಿ ಸಂದೇಶಗಳಲ್ಲಿ ಸ್ವೀಕರಿಸುತ್ತಾರೆ; ಇಲ್ಲಿಂದ, ಅವರು ಇವುಗಳನ್ನು ವಾಲೆಟ್‌ಗೆ ಉಳಿಸಬಹುದು. ವಿಯೆಟ್ನಾಂ ಏರ್‌ಲೈನ್ಸ್ ಪ್ರಯಾಣಿಕರು ಮತ್ತು ಸ್ಪೇನ್‌ನ ಪ್ರಮುಖ ರೈಲು ನಿರ್ವಾಹಕರಾದ ರೆನ್‌ಫೆಯಲ್ಲಿರುವ ಅವರ ಸಹವರ್ತಿಗಳು ಈ ಸೌಲಭ್ಯವನ್ನು ಬೇರೆಯವರಿಗಿಂತ ಮೊದಲು ಪಡೆದುಕೊಳ್ಳುತ್ತಾರೆ.

ತಂತ್ರಜ್ಞಾನದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Continue Reading
Advertisement
Love propose at Oval Stadium
ಕ್ರಿಕೆಟ್7 mins ago

WTC Final 2023 : ಸ್ಟೇಡಿಯಂನಲ್ಲೇ ಪ್ರಪೋಸ್​, ಅಲ್ಲೇ ಕಿಸ್​, ಅಲ್ಲೇ ರೊಮ್ಯಾನ್ಸ್​​, ಓವಲ್​ನಲ್ಲೊಂದು ಪ್ರೇಮ ಪ್ರಸಂಗ!

Chief Minister Siddaramaiah
ಕರ್ನಾಟಕ13 mins ago

ಇಂದು ಮಧ್ಯಾಹ್ನದಿಂದಲೇ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ; ’ಶಕ್ತಿ’ ಟಿಕೆಟ್​​ ಹಂಚಲಿರುವ ಸಿಎಂ ಸಿದ್ದರಾಮಯ್ಯ

curd myths
ಆರೋಗ್ಯ42 mins ago

Health Tips: ಮೊಸರಿನ ಜೊತೆಗೆ ಈ ಆಹಾರಗಳನ್ನು ತಿಂದರೆ ಅಪಾಯ ಕಟ್ಟಿಟ್ಟಬುತ್ತಿ!

Sphoorti Salu
ಸುವಚನ2 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Horoscope Today
ಪ್ರಮುಖ ಸುದ್ದಿ2 hours ago

Horoscope Today: ಈ ರಾಶಿಯವರ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಎಚ್ಚರ ಇರಲಿ!

Hindu janajagruti samiti pressmeet
ಕರ್ನಾಟಕ7 hours ago

ಜೂ.16 ರಿಂದ 22ರವರೆಗೆ ಗೋವಾದಲ್ಲಿ ‘ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವʼ

Man Dies Of Heart Attack In Noida
ಕ್ರೀಡೆ7 hours ago

Heart Attack: ಬ್ಯಾಡ್ಮಿಂಟನ್‌ ಆಡುತ್ತಿದ್ದವನ ಬಾಳಲ್ಲಿ ಆಟವಾಡಿದ ವಿಧಿ; ಹೃದಯಾಘಾತದಿಂದ ವ್ಯಕ್ತಿ ಸಾವು

Digital Payment
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ಡಿಜಿಟಲ್ ಪಾವತಿಯಲ್ಲಿ ಭಾರತ ನಂ.1, ಭಾರತೀಯರ ಪ್ರೌಢಿಮೆಗೆ ಇದು ಸಾಕ್ಷಿ

aamir khan to act in rajamouli movie
ಸಿನಿಮಾ8 hours ago

Aamir Khan : ದಕ್ಷಿಣ ಭಾರತ ಸಿನಿಮಾದಲ್ಲಿ ವಿಲನ್‌ ಆಗ್ತಾರಂತೆ ಬಾಲಿವುಡ್‌ನ ಮಿಸ್ಟರ್‌ ಪರ್ಫೆಕ್ಟ್‌ ಆಮೀರ್ ಖಾನ್‌!

Minister Pralhad Joshi
ಕರ್ನಾಟಕ8 hours ago

ಹುಬ್ಬಳ್ಳಿ ಏರ್‌ಪೋರ್ಟ್‌ ವಿಸ್ತರಣೆಗೆ 273 ಕೋಟಿ ರೂ.; ಕೇಂದ್ರಕ್ಕೆ ಪ್ರಲ್ಹಾದ್‌ ಜೋಶಿ ಧನ್ಯವಾದ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ1 day ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Autodrivers oppose free bus service
ಕರ್ನಾಟಕ14 hours ago

Free Bus Service: ನನ್ ಒಂದೇ ಓಟಲ್ಲ ಸ್ವಾಮಿ, ನಮ್ ಫ್ಯಾಮಿಲಿದೆಲ್ಲ ಇದೆ ಹುಷಾರ್: ಸಿದ್ದರಾಮಯ್ಯಗೆ ಆಟೋ ಡ್ರೈವರ್‌ ವಾರ್ನಿಂಗ್‌

accident in kerala
ವೈರಲ್ ನ್ಯೂಸ್19 hours ago

Viral Video: ಬಸ್ಸು ಮತ್ತು ಲಾರಿ ಮಧ್ಯೆ ಸ್ಕೂಟರ್‌ ಅಪ್ಪಚ್ಚಿ, ಸವಾರರ ಕಣ್ ಮುಂದೆ ಯಮ ರಪ್ ಅಂತ ಪಾಸ್ ಆದ!

Cancellation of tenders for 108 ambulances and Dinesh Gundu rao
ಆರೋಗ್ಯ2 days ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ2 days ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ2 days ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ2 days ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ2 days ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ3 days ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ3 days ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ3 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

ಟ್ರೆಂಡಿಂಗ್‌

error: Content is protected !!