Alternative to Whatsapp: ವಾಟ್ಸಾಪ್ ಸ್ಥಗಿತಗೊಂಡರೆ ಏನ್‌ ಮಾಡೋದು? ಇಲ್ಲಿದೆ ಪರ್ಯಾಯ ಆ್ಯಪ್‌ಗಳ ಪಟ್ಟಿ - Vistara News

ತಂತ್ರಜ್ಞಾನ

Alternative to Whatsapp: ವಾಟ್ಸಾಪ್ ಸ್ಥಗಿತಗೊಂಡರೆ ಏನ್‌ ಮಾಡೋದು? ಇಲ್ಲಿದೆ ಪರ್ಯಾಯ ಆ್ಯಪ್‌ಗಳ ಪಟ್ಟಿ

ವಾಟ್ಸಾಪ್ ಭಾರತಕ್ಕೆ ಬಂದಾಗಿನಿಂದ ಜನರು ಪರಸ್ಪರ ಮಾಹಿತಿಯನ್ನು ಹಂಚಿಕೊಳ್ಳುವುದು ಸುಲಭವಾಗಿದೆ. ಪಠ್ಯ ಸಂದೇಶಗಳು, ಆಡಿಯೋ, ವಿಡಿಯೋ ಸೇರಿದಂತೆ ಹಲವು ವಿಷಯಗಳನ್ನು ಹಂಚಿಕೊಳ್ಳುವ ವೇದಿಕೆಯಾಗಿತ್ತು. ಈಗಾಗಲೇ ಹಲವಾರು ಬಾರಿ ಭಾರತದಲ್ಲಿ ವಾಟ್ಸಾಪ್ ನಿಷೇಧವಾಗುವ (Whatsapp Shutdown) ಬೆದರಿಕೆ ಹಾಕಲಾಗಿತ್ತು. ಒಂದು ವೇಳೆ ವಾಟ್ಸಾಪ್ ನಿಷೇಧಿಸಲ್ಪಟ್ಟರೆ ಭಾರತೀಯರಿಗೆ ಇರುವ ಮುಂದಿನ ಆಯ್ಕೆ ಏನು? ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

Whatsapp Shutdown
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸ ಐಟಿ ನಿಯಮಗಳು (New IT Rules) ಬಂದಾಗಿನಿಂದ ದೇಶದಲ್ಲಿ (Alternative to Whatsapp) ವಾಟ್ಸಾಪ್ ನಿಷೇಧವಾಗುವ (Whatsapp Shutdown) ಆತಂಕ ಎದುರಾಗಿದೆ. 53.58 ಕೋಟಿಗಿಂತಲೂ ಹೆಚ್ಚು ಭಾರತೀಯ ಗ್ರಾಹಕರು (Indian customers) ಬಳಸಲ್ಪಡುತ್ತಿರುವ ವಾಟ್ಸಾಪ್ (whatsapp) ಒಂದು ವೇಳೆ ನಿಷೇಧಿಸಲ್ಪಟ್ಟರೆ ಮುಂದೇನು ಎನ್ನುವ ಚಿಂತೆ ಹೆಚ್ಚಿನವರನ್ನು ಕಾಡಲಾರಂಭಿಸಿದೆ.

ವಾಟ್ಸಾಪ್ ಭಾರತಕ್ಕೆ ಬಂದಾಗಿನಿಂದ ಜನರು ಪರಸ್ಪರ ಮಾಹಿತಿಯನ್ನು ಹಂಚಿಕೊಳ್ಳುವುದು ಸುಲಭವಾಗಿದೆ. ಅದು ಪಠ್ಯ ಸಂದೇಶಗಳು ಅಥವಾ ಆಡಿಯೋ, ವಿಡಿಯೋ ಹೀಗೆ ಎಲ್ಲವನ್ನೂ ಸುಲಭವಾಗಿ ಹಂಚಿಕೊಳ್ಳಲು ವೇದಿಕೆಯನ್ನು ಸೃಷ್ಟಿಸಿತ್ತು. ಈಗಾಗಲೇ ಹಲವಾರು ಬಾರಿ ಭಾರತದಲ್ಲಿ ವಾಟ್ಸಾಪ್ ನಿಷೇಧವಾಗುವ ಬೆದರಿಕೆ ಹಾಕಲಾಗಿತ್ತು. ಒಂದು ವೇಳೆ ವಾಟ್ಸಾಪ್ ನಿಷೇಧಿಸಲ್ಪಟ್ಟರೆ ಭಾರತೀಯರಿಗೆ ಇರುವ ಮುಂದಿನ ಆಯ್ಕೆ ಏನು?

Whatsapp Shutdown
Whatsapp Shutdown


ವಾಟ್ಸಾಪ್ ದೇಶದಲ್ಲಿ ಸ್ಥಗಿತಗೊಂಡರೆ ಗ್ರಾಹಕರು ಉಳಿದ ಚಾಟಿಂಗ್ ಆಪ್‌ಗಳತ್ತ ಹೊರಳುವ ಸಾಧ್ಯತೆ ಇದೆ. ಭಾರತದಲ್ಲಿ ವಾಟ್ಸಾಪ್‌ಗೆ ಪರ್ಯಾಯವಾಗಿ ಹಲವು ಆಯ್ಕೆಗಳಿವೆ.

Whatsapp Shutdown
Whatsapp Shutdown


ಟೆಲಿಗ್ರಾಮ್

ಟೆಲಿಗ್ರಾಮ್ ವಾಟ್ಸಾಪ್‌ಗೆ ಪರ್ಯಾಯವಾಗಿರಬಹುದು. ಟೆಲಿಗ್ರಾಮ್ ಚಾಟಿಂಗ್, ಗ್ರೂಪ್ ಚಾಟ್, ಧ್ವನಿ, ವಿಡಿಯೋ ಕರೆಗಳು ಮತ್ತು ವಾಟ್ಸಾಪ್‌ನಂತೆಯೇ ಫೈಲ್ ಹಂಚಿಕೆಯಂತಹ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇದಲ್ಲದೆ ಟೆಲಿಗ್ರಾಮ್ ಚಾನೆಲ್ ಮೂಲಕ ಹೆಚ್ಚಿನ ಜನರನ್ನು ಸಂಪರ್ಕಿಸುವುದು ಸಾಧ್ಯವಿದೆ.

Whatsapp Shutdown
Whatsapp Shutdown


ಸಿಗ್ನಲ್

ಸಿಗ್ನಲ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು, ಇದು ಭಾರತದಲ್ಲಿ ನಿಧಾನವಾಗಿ ಜನಪ್ರಿಯವಾಗುತ್ತಿದೆ. ಇದು ವಾಟ್ಸಾಪ್ ನಂತೆಯೇ ಹಲವು ವೈಶಿಷ್ಟ್ಯಗಳನ್ನು ಗ್ರಾಹಕರಿಗೆ ನೀಡುತ್ತದೆ.

Whatsapp Shutdown
Whatsapp Shutdown


ಸ್ನ್ಯಾಪ್ ಚಾಟ್

ವಾಟ್ಸಾಪ್‌ಗೆ ಪರ್ಯಾಯವಾಗಿ ಸ್ನ್ಯಾಪ್ ಚಾಟ್ ಅನ್ನು ಅತ್ಯುತ್ತಮ ಆಯ್ಕೆಯಾಗಿ ಇರಿಸಬಹುದು. ಇದರ ಮೂಲಕ ಪರಸ್ಪರ ಚಿತ್ರಗಳು ಮತ್ತು ಫೈಲ್‌ಗಳನ್ನು ಹಂಚಿಕೊಳ್ಳಬಹುದು.


ಇದನ್ನೂ ಓದಿ: Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆ್ಯಪ್‌? ಕೇಂದ್ರ ಸರ್ಕಾರ ಹೇಳೋದೇನು?

ವಾಟ್ಸಾಪ್ ಸ್ಥಗಿತವಾದರೆ ಏನು ಸಮಸ್ಯೆ?

ಭಾರತದಲ್ಲಿ ವಾಟ್ಸಾಪ್ ತನ್ನ ಸೇವೆಯನ್ನು ಸ್ಥಗಿತಗೊಳಿಸಿದರೆ ಗ್ರಾಹಕರು ಮುಖ್ಯವಾಗಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಯಾಕೆಂದರೆ ಈ ಆಪ್ ಅನ್ನು ಸಾಕಷ್ಟು ಗ್ರಾಹಕರು ಹಲವಾರು ವರ್ಷಗಳಿಂದ ಬಳಸುತ್ತಿದ್ದಾರೆ. ಇದರಿಂದ ಬೇರೆ ಆಪ್ ಗೆ ಹೊಂದಿಕೊಳ್ಳಲು ಸಾಕಷ್ಟು ಕಾಲಾವಕಾಶ ಬೇಕಾಗಬಹುದು. ಆಗ ಕೆಲವೊಂದು ಸಮಸ್ಯೆಗಳು ಎದುರಾಗಬಹುದು. ಆದರೂ ಪರ್ಯಾಯ ಆಪ್‌ಗಳಿಗೆ ಜನ ಕ್ರಮೇಣ ಒಗ್ಗಿಕೊಳ್ಳಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

kotak bank smart watch: ಕೋಟಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್ (ಕೆಎಂಬಿಎಲ್/ಕೋಟಕ್) ಮತ್ತು ಜಿಓಕ್ಯೂಐಐ ಸಹಯೋಗದಲ್ಲಿ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್‌ವಾಚ್ ಬಿಡುಗಡೆ ಮಾಡಲಾಗಿದೆ. ರುಪೇ ಆನ್-ದ-ಗೋ ಮೂಲಕ ಕಾರ್ಯನಿರ್ವಹಿಸುವ ಈ ಸ್ಮಾರ್ಟ್ ವಾಚ್ ಮೂಲಕ ಪಿನ್ ಹಾಕದೆಯೇ ರೂ. 5000ವರೆಗಿನ ಕಾಂಟಾಕ್ಟ್ ಲೆಸ್ ಪೇಮೆಂಟ್‌ಗಳನ್ನು ಮಾಡಬಹುದು ಅನ್ನುವುದು ವಿಶೇಷ. ಈ ವಿಶಿಷ್ಟವಾದ ಸ್ಮಾರ್ಟ್ ವಾಚ್‌ನ ಬೆಲೆ 3499 ರೂ. ಆಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

kotak bank smart watch
Koo

ಬೆಂಗಳೂರು: ಡಿಜಿಟಲ್ ಪೇಮೆಂಟ್ ಕ್ಷೇತ್ರದಲ್ಲಿ ಕ್ರಾಂತಿ (kotak bank smart watch) ಮಾಡುವ ನಿಟ್ಟಿನಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್ (ಕೆಎಂಬಿಎಲ್/ಕೋಟಕ್) ಮತ್ತು ಜಿಓಕ್ಯೂಐಐ ಸಹಯೋಗದಲ್ಲಿ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್‌ವಾಚ್ (Smart Watch) ಬಿಡುಗಡೆ ಮಾಡಲಾಗಿದೆ. ರುಪೇ ಆನ್-ದ-ಗೋ ಮೂಲಕ ಕಾರ್ಯನಿರ್ವಹಿಸುವ ಈ ಸ್ಮಾರ್ಟ್ ವಾಚ್ ಮೂಲಕ ಪಿನ್ ಹಾಕದೆಯೇ ರೂ. 5000ವರೆಗಿನ ಕಾಂಟಾಕ್ಟ್ ಲೆಸ್ ಪೇಮೆಂಟ್‌ಗಳನ್ನು ಮಾಡಬಹುದು ಅನ್ನುವುದು ವಿಶೇಷ. ಈ ವಿಶಿಷ್ಟವಾದ ಸ್ಮಾರ್ಟ್ ವಾಚ್‌ನ ಬೆಲೆ 3499 ರೂ. ಆಗಿದೆ.

ಕೋಟಕ್ ಮಹೀಂದ್ರಾ ಬ್ಯಾಂಕ್‌ನ ರಿಟೇಲ್ ಲಯಬಿಲಿಟೀಸ್ ಪ್ರೊಡಕ್ಟ್ ಹೆಡ್ ಆಂಡ್ ಚೀಫ್ ಮಾರ್ಕೆಟಿಂಗ್ ಆಫೀಸರ್ ರೋಹಿತ್ ಭಾಸಿನ್, ಈ ಸ್ಮಾರ್ಟ್ ವಾಚ್ ಉತ್ಪನ್ನವನ್ನು ಬಿಡುಗಡೆ ಮಾಡಿ ಮಾತನಾಡಿ, “ಡಿಜಿಟಲ್ ಪೇಮೆಂಟ್ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ ಉಂಟಾಗಿದೆ. ಗ್ರಾಹಕರು ಪದೇಪದೇ ಕಡಿಮೆ ಮೊತ್ತಗಳನ್ನು ಪಾವತಿ ಮಾಡಲು ನಗದು ರಹಿತ ಪೇಮೆಂಟ್ ವಿಧಾನವನ್ನೇ ಇಷ್ಟ ಪಡುತ್ತಾರೆ. ಅದಕ್ಕಾಗಿಯೇ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್‌ ವಾಚ್ ಅನ್ನು ಬಿಡುಗಡೆ ಮಾಡಿದ್ದು, ಈ ಸಾಧನ ಇದ್ದರೆ ನಗದು, ಕಾರ್ಡ್‌ಗಳು ಅಥವಾ ಸ್ಮಾರ್ಟ್‌ಫೋನ್‌ಗಳು ಬೇಕಾಗಿಯೇ ಇಲ್ಲ. ಈ ಮೂಲಕ ಸುರಕ್ಷಿತ ಮತ್ತು ಸುಲಭ ಬ್ಯಾಂಕಿಂಗ್ ವ್ಯವಸ್ಥೆಯನ್ನು ಒದಗಿಸುತ್ತಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

ಕೋಟಕ್–ಜಿಓಕ್ಯೂಐಐ ಸ್ಮಾರ್ಟ್ ವೈಟಲ್ ಪ್ಲಸ್ ವಾಚ್ ಅನ್ನು ಬಳಸುವ ಬಳಕೆದಾರರು ತಮ್ಮ ರಕ್ತದೊತ್ತಡ, ದೇಹದ ಉಷ್ಣತೆ ಮತ್ತು ಎಸ್ ಪಿ ಓ2 ಮಟ್ಟವನ್ನು ತಮ್ಮ ಮಣಿಕಟ್ಟಿನಲ್ಲಿಯೇ ಚೆಕ್ ಮಾಡಬಹುದು. ಜತೆಗೆ ಈ ಸ್ಮಾರ್ಟ್ ವಾಚ್ ಬಳಕೆದಾರ ಸ್ನೇಹಿ ಇಂಟರ್ಫೇಸ್ ಹೊಂದಿದ್ದು, ಸುಲಭವಾಗಿ ಪಾವತಿ ಮಾಡಲು ಅನುವು ಮಾಡಿಕೊಡುತ್ತದೆ. ಗ್ರಾಹಕರು ತಮ್ಮ ಕೋಟಕ್ ಖಾತೆಗಳಿಗೆ ಸುಲಭವಾಗಿ ಸೈನ್ ಇನ್ ಆಗಬಹುದು ಮತ್ತು ಸ್ಮಾರ್ಟ್ ವಾಚ್ ಅನ್ನು ಬಳಸಿಕೊಂಡು ಕಾಂಟಾಕ್ಟ್ ಲೆಸ್ ಪೇಮೆಂಟ್ ಅನ್ನು ಮಾಡಬಹುದು. ಈ ವಿಧಾನವು ಸಾಂಪ್ರದಾಯಿಕ ಕಾಂಟಾಕ್ಟ್ ಲೆಸ್ ಕಾರ್ಡ್‌ಗಳು ಮತ್ತು ಮೊಬೈಲ್ ಸಾಧನಗಳಂತೆಯೇ ಅದೇ ಮಟ್ಟದ ಸುರಕ್ಷತೆ ಮತ್ತು ಭದ್ರತೆಯನ್ನು ನೀಡುತ್ತದೆ.

ಈ ಕುರಿತು ಜಿಓಕ್ಯೂಐಐ ಸಂಸ್ಥಾಪಕ ಮತ್ತು ಸಿಇಓ ವಿಶಾಲ್ ಗೊಂಡಲ್ ಮಾತನಾಡಿ, “ಆರೋಗ್ಯವೇ ಭಾಗ್ಯ ಎಂಬುದು ಎಲ್ಲಾ ಕಾಲದಲ್ಲೂ ಪ್ರಸ್ತುತ ಅನ್ನಿಸುವ ಒಂದು ಗಾದೆ. ಮೊದಲೇ ರೋಗ ತಡೆಗಟ್ಟುವ ಪ್ರಕ್ರಿಯೆ ಮತ್ತು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವ ಪ್ರಾಮುಖ್ಯತೆಯನ್ನು ಜಿಓಕ್ಯೂಐಐ ಯಾವಾಗಲೂ ನಂಬುತ್ತದೆ. ಅದಕ್ಕೆ ಪೂರಕವಾಗಿರುವ ಜಿಓಕ್ಯೂಐಐನ ಅತ್ಯಾಧುನಿಕ ಆರೋಗ್ಯ ಫೀಚರ್‌ಗಳ ಜತೆಗೆ ಕೋಟಕ್ ಬ್ಯಾಂಕ್‌ನ ಕಾಂಟಾಕ್ಟ್ ಲೆಸ್ ಪೇಮೆಂಟ್ ಫೀಚರ್ ಅನ್ನು ಸಂಯೋಜಿತಗೊಳಿಸಿರುವ ಸ್ಮಾರ್ಟ್ ವಾಚ್ ಅನ್ನು ಗ್ರಾಹಕರಿಗೆ ಒದಗಿಸುತ್ತಿರುವುದು ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ: Hosanagara News: ಹಡ್ಲುಬೈಲು ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

ಈ ಒಟ್ಟುಗೂಡುವಿಕೆ ಬಹಳ ಮುಖ್ಯವಾಗಿದೆ. ಯಾಕೆಂದರೆ ಈ ಸಹಯೋಗವು ಗ್ರಾಹಕರ ಅನುಕೂಲತೆಯನ್ನು ಹೆಚ್ಚಿಸುತ್ತದೆ, ಆರೋಗ್ಯ ಮತ್ತು ಸುರಕ್ಷತೆ ಕಾಪಾಡಿಕೊಳ್ಳಲು ಪ್ರೇರೇಪಿಸುತ್ತದೆ, ಸುರಕ್ಷಿತ ವಹಿವಾಟು ಮಾಡುವ ಸೌಲಭ್ಯಗಳನ್ನು ನೀಡುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಸಾಧನವು ಈ ಕಾಲಕ್ಕೆ ಅವಶ್ಯವಾಗಿ ಬೇಕಾದ ಆರೋಗ್ಯಕರ ಮತ್ತು ಪರಿಣಾಮಕಾರಿ ಜೀವನಶೈಲಿ ಕಾಪಾಡಿಕೊಳ್ಳಲು ಬೆಂಬಲ ಒದಗಿಸುತ್ತದೆ”ಎಂದು ಹೇಳಿದರು.

ಎನ್‌ಪಿಸಿಐನ ಚೀಫ್ ರಿಲೇಷನ್ ಶಿಪ್ ಮ್ಯಾನೇಜ್ಮೆಂಟ್ ರಾಜೀತ್ ಪಿಳ್ಳೈ ಮಾತನಾಡಿ, “ಎನ್‌ಪಿಸಿಐ ಪರಿಚಯಿಸಿರುವ ಹೊಸ ರುಪೇ ಆನ್-ದ-ಗೋ ಅನ್ನು ಬಳಸಿಕೊಂಡು ಕಾಂಟಾಕ್ಟ್ ಲೆಸ್ ಪೇಮೆಂಟ್ ಸೌಲಭ್ಯ ಒದಗಿಸುವ ಸ್ಮಾರ್ಟ್ ವೈಟಲ್ ಪ್ಲಸ್ ಸ್ಮಾರ್ಟ್ ವಾಚ್ ಅನ್ನು ಬಿಡುಗಡೆ ಮಾಡಿರುವುದು ನಮಗೆ ಸಂತೋಷದ ವಿಚಾರವಾಗಿದೆ. ಈ ಸಹಯೋಗವು ಬಳಕೆದಾರರಿಗೆ ತಮ್ಮ ದೈನಂದಿನ ವಹಿವಾಟುಗಳನ್ನು ಸುಲಭವಾಗಿ ಮತ್ತು ಸುರಕ್ಷಿತವಾಗಿ ಮಾಡಲು ಅನುವು ಮಾಡಿಕೊಡುತ್ತದೆ. ಈ ಹೊಸ ವೈಶಿಷ್ಟ್ಯಗಳು ಕಾಂಟಾಕ್ಟ್ ಲೆಸ್ ಪೇಮೆಂಟ್ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲಿದೆ. ಜತೆಗೆ ವಹಿವಾಟು ಮಾಡಲು ಸುಲಭವಾಗುವುದರಿಂದ ಬಳಕೆದಾರರ ಅನುಭವವನ್ನು ಉತ್ತಮಗೊಳಿಸುತ್ತದೆ. ಟೆಕ್ ಸ್ಯಾವಿ ಗ್ರಾಹಕರ ಕಾರಣದಿಂದ ಕಾಂಟಾಕ್ಟ್ ಲೆಸ್ ಪೇಮೆಂಟ್ ಉತ್ಪನ್ನಗಳಿಗೆ ಹೆಚ್ಚು ಬೇಡಿಕೆ ಉಂಟಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

ಕೋಟಕ್ ಬ್ಯಾಂಕ್ ಗ್ರಾಹಕರು ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ಸ್ಮಾರ್ಟ್ ವಾಚ್ ಅನ್ನು ಖರೀದಿಸಬಹುದು. ಕೋಟಕ್ ಗ್ರಾಹಕರಲ್ಲದವರು ಈ ಸೌಲಭ್ಯವನ್ನು ಪಡೆಯಲು ಕೋಟಕ್‌ನಲ್ಲಿ ಖಾತೆಯನ್ನು ತೆರೆಯಬೇಕಾಗುತ್ತದೆ.

Continue Reading

ಕರ್ನಾಟಕ

New Traffic Rules: ಹೆದ್ದಾರಿಯಲ್ಲಿ ವೇಗದ ಮಿತಿ 130 ಕಿ.ಮೀ ದಾಟಿದರೆ ದಂಡ, ಜೈಲು ಶಿಕ್ಷೆ; ಇಂದಿನಿಂದಲೇ ಹೊಸ ರೂಲ್ಸ್‌

New Traffic Rules: ಕರ್ನಾಟಕದ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಆಗಸ್ಟ್ 1ರಿಂದ ಜಾರಿಯಾಗುವಂತೆ ಪ್ರತಿ ಗಂಟೆಗೆ 130 ಕಿ.ಮೀ ಎಂಬ ಷರತ್ತನ್ನು(Traffic Rules) ವಿಧಿಸಲಾಗಿದ್ದು, ಇದನ್ನು ಮೀರಿ ವಾಹನ ಚಲಾಯಿಸಿದರೆ ವಾಹನ ಮತ್ತು ಚಾಲಕರ ವಿರುದ್ಧ ಎಫ್ ಐಆರ್ ದಾಖಲಿಸಲು ಕರ್ನಾಟಕ ಪೊಲೀಸರು ನಿರ್ಧರಿಸಿದ್ದಾರೆ. ಈ ನಿಯಮ ಉಲ್ಲಂಘಿಸುವವರಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1,000 ರೂ. ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.

VISTARANEWS.COM


on

By

New Traffic Rules
Koo

ಬೆಂಗಳೂರು: ಇನ್ನು ಮುಂದೆ ರಾಜ್ಯದ ಯಾವುದೇ ಹೆದ್ದಾರಿಯಲ್ಲಿ (karnataka highway) ಅತಿ ವೇಗದ ವಾಹನ ಚಾಲನೆಯು ನಿಮ್ಮನ್ನು ಕಾನೂನು ತೊಂದರೆಯಲ್ಲಿ (New Traffic Rules) ಸಿಕ್ಕಿಸಿ ಹಾಕಬಹುದು. ಯಾಕೆಂದರೆ ಕರ್ನಾಟಕ ಪೊಲೀಸರು (karnataka police) ಈಗ ಹೆದ್ದಾರಿಯಲ್ಲಿ ಅತಿ ವೇಗದ ಮತ್ತು ನಿರ್ಲಕ್ಷ್ಯದ ವಾಹನ ಚಾಲನೆಯನ್ನು (Excessive speed and careless driving) ನಿಯಂತ್ರಿಸಲು ಮುಂದಾಗಿದ್ದಾರೆ. ಆಗಸ್ಟ್ 1ರಿಂದ ಜಾರಿಯಾಗುವಂತೆ ಪ್ರತಿ ಗಂಟೆಗೆ 130 ಕಿ.ಮೀ ಎಂಬ ಷರತ್ತನ್ನು ವಿಧಿಸಲಾಗಿದ್ದು, ಇದನ್ನು ಮೀರಿ ವಾಹನ ಚಲಾಯಿಸಿದರೆ ವಾಹನ ಮತ್ತು ಚಾಲಕರ ವಿರುದ್ಧ ಎಫ್ ಐಆರ್ ದಾಖಲಿಸಲು ನಿರ್ಧರಿಸಿದ್ದಾರೆ.

ಈ ನಿಯಮ ಉಲ್ಲಂಘಿಸುವವರಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1,000 ರೂ. ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ. ಗುರುವಾರವೇ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ 155 ವಾಹನಗಳು ಗಂಟೆಗೆ 130 ಕಿಲೋ ಮೀಟರ್ ವೇಗದ ಮಿತಿಯನ್ನು ಮೀರಿದ್ದು ಕೆಮರಾದಲ್ಲಿ ಸೆರೆಯಾಗಿದೆ. ಸಿಕ್ಕಿಬಿದ್ದ ವಾಹನಗಳಲ್ಲಿ ಒಂದು ಕೆಎಸ್‌ಆರ್‌ಟಿಸಿ ಬಸ್ ಕೂಡ ಸೇರಿದ್ದು, ಇದು ಗಂಟೆಗೆ 140 ಕಿ.ಮೀ. ವೇಗದಲ್ಲಿ ಸಂಚರಿಸುತ್ತಿತ್ತು.

ವೇಗದ ಮಿತಿ ಎಷ್ಟಿದೆ?

ರಾಜ್ಯದ ಅನೇಕ ಹೆದ್ದಾರಿಗಳಲ್ಲಿ ವೇಗದ ಮಿತಿಗಳು ಪ್ರತಿ ಗಂಟೆಗೆ 130 ಕಿ.ಮೀ.ಗಿಂತ ಕಡಿಮೆಯಿದೆ. ಬೆಂಗಳೂರು- ಮೈಸೂರು ಹೆದ್ದಾರಿ ಮತ್ತು ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವೇಗದ ಮಿತಿಗಳು ಹೀಗಿದೆ.

  • – ಪ್ರತಿ ಗಂಟೆಗೆ 80ರಿಂದ 100 ಕಿ.ಮೀ. ಆಗಿದ್ದು, ವಾಹನ ಚಾಲಕರು ಗಂಟೆಗೆ 130 ಕಿ.ಮೀ. ಮೀರಿದರೆ ಹೊಸ ನಿಯಮ ಅನ್ವಯಿಸಲಾಗುತ್ತದೆ.
  • – ಅತಿ ವೇಗ ಮತ್ತು ಅಸುರಕ್ಷಿತ ವಾಹನ ಚಲನೆಯಿಂದ ಶೇ. 90ರಷ್ಟು ಮಾರಣಾಂತಿಕ ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಅತಿ ವೇಗವಾಗಿ ವಾಹನ ಚಲಾಯಿಸುವ ವಾಹನ ಚಾಲಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ರಾಜ್ಯ ಪೊಲೀಸರು ಮುಂದಾಗಿದ್ದಾರೆ.
  • – ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಈ ಕುರಿತು ಪ್ರತಿಕ್ರಿಯಿಸಿ ನಾವು ಬೆಂಗಳೂರು- ಮೈಸೂರು ಹೆದ್ದಾರಿಯ ಉದ್ದಕ್ಕೂ ಸ್ಪೀಡ್ ಲೇಸರ್ ಗನ್‌ಗಳನ್ನು ಸ್ಥಾಪಿಸಿದ್ದೇವೆ. ಇದು ರಾತ್ರಿಯೂ ವಾಹನಗಳ ವೇಗವನ್ನು ದಾಖಲಿಸುತ್ತದೆ. ಸ್ವಯಂ ಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ, ಕೆಮರಾಗಳು, ಹೆದ್ದಾರಿಯ ಉದ್ದಕ್ಕೂ ಅತಿ ವೇಗದ ವಾಹನಗಳ ಚಿತ್ರಗಳನ್ನು ಅವುಗಳ ವೇಗದೊಂದಿಗೆ ರೆಕಾರ್ಡ್ ಮಾಡಲು ನಮಗೆ ಸಹಾಯ ಮಾಡುತ್ತದೆ ಎಂದಿದ್ದಾರೆ.

ಇದನ್ನೂ ಓದಿ: FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

ಕೆಮರಾ ಮತ್ತು ಲೇಸರ್ ಗನ್

ವಿವಿಧ ಜಿಲ್ಲೆಗಳು ಮತ್ತು ನಗರ ಪೊಲೀಸರಿಗೆ ಒಟ್ಟು 155 ಸ್ಪೀಡ್ ಲೇಸರ್ ಗನ್‌ಗಳನ್ನು ವಿತರಿಸಲಾಗಿದೆ. ಅಂದಾಜಿನ ಪ್ರಕಾರ, ಪ್ರತಿ ಜಿಲ್ಲೆಗೆ ಐದರಿಂದ ಆರು ಸ್ಪೀಡ್ ಲೇಸರ್ ಗನ್‌ ಸಿಗುತ್ತದೆ. ಜಿಲ್ಲೆಗಳಲ್ಲಿ ಪೊಲೀಸ್ ಸೂಪರಿಂಟೆಂಡೆಂಟ್ ಮತ್ತು ನಗರಗಳಲ್ಲಿನ ಇತರ ಹಿರಿಯ ಹೆದ್ದಾರಿ ಅಧಿಕಾರಿಗಳಿಗೆ ಈ ಲೇಸರ್ ಗನ್‌ಗಳನ್ನು ಎಲ್ಲಿ, ಹೇಗೆ ಬಳಸಬೇಕು ಎಂಬುದರ ಕುರಿತು ಮಾಹಿತಿ ನೀಡಲಾಗುತ್ತದೆ. ಎಫ್‌ಐಆರ್‌ಗಳನ್ನು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 281 ರ ಅಡಿಯಲ್ಲಿ ದಾಖಲಿಸಲಾಗುತ್ತದೆ ಎಂದರು.

Continue Reading

ದೇಶ

Servicenow: ಭಾರತೀಯರು ಗ್ರಾಹಕ ಸೇವೆ ಪಡೆಯಲು ವರ್ಷದಲ್ಲಿ 15 ಶತಕೋಟಿ ಗಂಟೆ ಕಳೆಯುತ್ತಾರೆ! ಅಧ್ಯಯನ ವರದಿ

Servicenow: ಸರ್ವೀಸ್‌ನೌ ಮಾಡಿರುವ ಹೊಸ ಸಂಶೋಧನೆಯ ಪ್ರಕಾರ, ಭಾರತೀಯರು ಹೋಲ್ಡ್ ಟು ಕಸ್ಟಮರ್ ಸರ್ವೀಸ್ (ಗ್ರಾಹಕರಿಗೆ ಕಾಯಿಸುವುದು) ಕಾರಣದಿಂದ 15 ಶತಕೋಟಿ ಗಂಟೆಗಳಿಗೂ ಹೆಚ್ಚು ಸಮಯವನ್ನು ಕಳೆದಿದ್ದಾರೆ. ‘ಕಸ್ಟಮರ್ ಎಕ್ಸ್‌ಪೀರಿಯನ್ಸ್ ಇಂಟೆಲಿಜೆನ್ಸ್ ರಿಪೋರ್ಟ್ 2024’ ವರದಿಯು ಒಬ್ಬ ಗ್ರಾಹಕ ಯಾವುದೇ ದೂರು ಅಥವಾ ಸಮಸ್ಯೆಯ ಪರಿಹಾರ ಕಾರಣಕ್ಕೆ ಕಾಯುವಿಕೆಯಲ್ಲಿ ಸರಾಸರಿ ಒಂದಕ್ಕಿಂತ ಹೆಚ್ಚು ದಿನವನ್ನು (30.7 ಗಂಟೆಗಳು) ಕಳೆದಿದ್ದಾರೆ ಎಂದು ತಿಳಿಸಿದೆ. ಇದು ವಾರ್ಷಿಕವಾಗಿ $55 ಬಿಲಿಯನ್* (ಯುಎಸ್‌ಡಿ)ಯಷ್ಟು ಆರ್ಥಿಕ ನಷ್ಟಕ್ಕೆ ಸಮಾನಾಗಿದೆ ಎಂದೂ ತಿಳಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Indians spend 15 billion hours waiting for customer service time in 2023 ServiceNow information
Koo

ಬೆಂಗಳೂರು: ಬಿಸಿನೆಸ್ ಟ್ರಾನ್ಸ್‌ಫಾರ್ಮೇಷನ್‌ಗೆ ಇರುವ ಎಐ ಪ್ಲಾಟ್‌ಫಾರ್ಮ್ ಆಗಿರುವ ಸರ್ವೀಸ್‌ನೌ (Servicenow) ಮಾಡಿರುವ ಹೊಸ ಸಂಶೋಧನೆಯ ಪ್ರಕಾರ, ಭಾರತೀಯರು ಹೋಲ್ಡ್ ಟು ಕಸ್ಟಮರ್ ಸರ್ವೀಸ್ (ಗ್ರಾಹಕರಿಗೆ ಕಾಯಿಸುವುದು) ಕಾರಣದಿಂದ 15 ಶತಕೋಟಿ ಗಂಟೆಗಳಿಗೂ ಹೆಚ್ಚು ಸಮಯವನ್ನು ಕಳೆದಿದ್ದಾರೆ. ‘ಕಸ್ಟಮರ್ ಎಕ್ಸ್‌ಪೀರಿಯನ್ಸ್ ಇಂಟೆಲಿಜೆನ್ಸ್ ರಿಪೋರ್ಟ್ 2024’ ವರದಿಯು ಒಬ್ಬ ಗ್ರಾಹಕ ಯಾವುದೇ ದೂರು ಅಥವಾ ಸಮಸ್ಯೆಯ ಪರಿಹಾರ ಕಾರಣಕ್ಕೆ ಕಾಯುವಿಕೆಯಲ್ಲಿ ಸರಾಸರಿ ಒಂದಕ್ಕಿಂತ ಹೆಚ್ಚು ದಿನವನ್ನು (30.7 ಗಂಟೆಗಳು) ಕಳೆದಿದ್ದಾರೆ ಎಂದು ತಿಳಿಸಿದೆ. ಇದು ವಾರ್ಷಿಕವಾಗಿ $55 ಬಿಲಿಯನ್* (ಯುಎಸ್‌ಡಿ)ಯಷ್ಟು ಆರ್ಥಿಕ ನಷ್ಟಕ್ಕೆ ಸಮಾನಾಗಿದೆ ಎಂದೂ ತಿಳಿಸಲಾಗಿದೆ.

18 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ 4500ಕ್ಕೂ ಹೆಚ್ಚು ಭಾರತೀಯರು ಲೋನರ್ಗನ್ ಸಹಯೋಗದಲ್ಲಿ ನಡೆಸಿದ ಈ ಅಧ್ಯಯನದಲ್ಲಿ ಪಾಲ್ಗೊಂಡಿದ್ದು, ಕಳೆದ ವರ್ಷದಲ್ಲಿ ಗ್ರಾಹಕ ಸೇವಾ ಕ್ಷೇತ್ರವನ್ನು ಅರ್ಥ ಮಾಡಿಕೊಳ್ಳಲು ನೆರವಾಗಿದ್ದಾರೆ. ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮಂದಿ ತಮ್ಮ ಕಾಯುವಿಕೆ ಸಮಯವು ಹಿಂದಿನ ವರ್ಷಗಳಿಗಿಂತ ಈಗ ಇನ್ನೂ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. ನಿಧಾನ ಗತಿಯ ಸೇವೆ ಎಂದರೆ ಪ್ರತೀ ಗ್ರಾಹಕರ ಸಮಸ್ಯೆಯನ್ನು ಪರಿಹರಿಸಲು ಉದ್ಯೋಗಿಯೊಬ್ಬ ಸರಾಸರಿ 3.9 ದಿನಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದರ್ಥ. ವಿಶೇಷ ಎಂದರೆ ಪ್ರತಿಕ್ರಿಯಿಸಿದವರಲ್ಲಿ 66 ಪ್ರತಿಶತ ಮಂದಿ ತಮ್ಮ ಸಮಸ್ಯೆಯನ್ನು ಮೂರು ಕೆಲಸದ ದಿನಗಳಲ್ಲಿ ಪರಿಹರಿಸದಿದ್ದರೆ ಮತ್ತೊಂದು ಕಂಪನಿಗೆ ಹೋಗುವ ಮನಸ್ಸು ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಈ ಕುರಿತು ಸರ್ವೀಸ್‌ನೌ ಇಂಡಿಯಾ ಟೆಕ್ನಾಲಜಿ ಮತ್ತು ಬಿಸಿನೆಸ್ ಸೆಂಟರ್‌ನ ಹಿರಿಯ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಮೀತ್ ಮಾಥುರ್ ಮಾತನಾಡಿ, “ನಿಧಾನಗತಿಯ ಸೇವೆಯ ಕಾರಣದಿಂದಾಗಿ 2024ರಲ್ಲಿ ಭಾರತೀಯ ಉದ್ದಿಮೆಗಳು ತಮ್ಮ ಗ್ರಾಹಕರ ನೆಲೆಯಲ್ಲಿನ ಮೂರನೇ ಎರಡರಷ್ಟು ಭಾಗದ ಗ್ರಾಹಕರನ್ನು ಕಳೆದುಕೊಳ್ಳುವ ಅಪಾಯ ಎದುರಿಸುತ್ತಿವೆ. ತಮ್ಮ ಸಮಸ್ಯೆ ಪರಿಹರಿಸಲು ಗರಿಷ್ಠ ಮೂರು ದಿನ ಕಾಯಬಹುದು, ಅದಕ್ಕಿಂತ ಹೆಚ್ಚು ಸಮಯ ತೆಗೆದುಕೊಂಡರೆ ಬೇರೆ ಕಡೆಗೆ ಹೋಗಬೇಕಾಗುತ್ತದೆ ಎಂದು ಗ್ರಾಹಕರು ತಿಳಿಸಿದ್ದಾರೆ. ಅಷ್ಟೂ ಕೆಲಸವನ್ನು ಮಾಡಲು ಸಾಧ್ಯವಾಗದೇ ಇರುವ ಉದ್ಯಮಗಳು ಗ್ರಾಹಕರ ಬೆರಳ ತುದಿಯಲ್ಲಿ ಲಭ್ಯವಿರುವ ಎಐ ಆಧರಿತ ಸೆಲ್ಫ್- ಸರ್ವೀಸ್ ಉತ್ಪನ್ನಗಳನ್ನು ಇನ್‌ಸ್ಟಾಲ್ ಮಾಡಬೇಕು” ಎಂದು ತಿಳಿಸಿದ್ದಾರೆ.

ನಿಮಗೆ ಎಐ ಹೇಗೆ ಸಹಾಯ ಮಾಡಬಹುದು?

ಪ್ರತಿಕ್ರಿಯಿಸಿದವರಲ್ಲಿ ಸುಮಾರು ಮೂರನೇ ಎರಡರಷ್ಟು (62%) ಮಂದಿ ಕಳೆದ ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಸೆಲ್ಫ್ ಸರ್ವೀಸ್ ವ್ಯವಸ್ಥೆಯ ಮೂಲಕ ತಮ್ಮ ಸಮಸ್ಯೆ ಪರಿಹರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅರ್ಧದಷ್ಟು ಮಂದಿ ಅವರಿಗೆ ಚಾಟ್‌ಬೋಟ್‌ಗಳು (55%) ಮತ್ತು ಸೆಲ್ಫ್ ಹೆಲ್ಪ್ ಮಾರ್ಗದರ್ಶಿ (56%) ಮೇಲೆ ಇದ್ದ ನಂಬಿಕೆಗಳು ಈಗ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಈ ಅಧ್ಯಯನವು ಭಾರತೀಯರಲ್ಲಿ ಎಐ ಮೇಲೆ ನಂಬಿಕೆ ಹೆಚ್ಚಾಗಿರುವ ಗಮನಾರ್ಹ ವಿಚಾರವನ್ನು ಪ್ರಸ್ತುತ ಪಡಿಸುತ್ತದೆ. ವಿಶೇಷವಾಗಿ ಮೂರನೇ ಎರಡು ಭಾಗದಷ್ಟು ಮಂದಿ (66%) ಜೆನ್ ಎಐ ಉತ್ತಮ ಗ್ರಾಹಕ ಸೇವೆ ಒದಗಿಸುವ ವಿಶ್ವಾಸ ಹೊಂದಿದ್ದಾರೆ. ಸಾಂಪ್ರದಾಯಿಕ ವ್ಯಕ್ತಿ ಕೇಂದ್ರಿತ ಗ್ರಾಹಕ ಸೇವೆಗಿಂತ ಎಐ ಸೇವೆಯ ಮೇಲೆ 10% ನಂಬಿಕೆ ಹೆಚ್ಚಾಗಿದೆ. ಇವೆಲ್ಲವೂ ಜನರಲ್ಲಿ ಅದರಲ್ಲೂ ವಿಶೇಷವಾಗಿ ಯುವಜನತೆಯಲ್ಲಿ ಆದ್ಯತೆ ಬದಲಾಗಿರುವ ಬದಲಾವಣೆಯನ್ನು ತೋರಿಸುತ್ತದೆ.

ಈ ಕುರಿತಾಗಿ ಸುಮೀತ್ ಮಾಥುರ್, “ಗ್ರಾಹಕರು ಎಐನಿಂದ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದು ಈಗ ಸ್ಪಷ್ಟವಾಗಿವೆ. ಪರಿಣಾಮಕಾರಿಯಾಗಿ ಸಮಸ್ಯೆ ಪರಿಹರಿಸುವುದು, ಸುಲಭವಾಗಿ ಬಳಸಲು ಸಾಧ್ಯವಾಗುವುದು, ಶೀಘ್ರವಾಗಿ ಪ್ರತಿಕ್ರಿಯೆ ನೀಡುವುದು ಮತ್ತು ನಿಖರವಾಗಿ ಪ್ರಶ್ನೆಯನ್ನು ಗ್ರಹಿಸುವುದು ಇತ್ಯಾದಿಗಳನ್ನು ಗ್ರಾಹಕರು ಬಯಸುತ್ತಾರೆ.

ಇದನ್ನೂ ಓದಿ: Paris Olympics: ಫೈನಲ್​ ಪ್ರವೇಶಿಸಿದ ಸ್ವಪ್ನಿಲ್‌ ಕುಸಾಲೆ; 16ರ ಸುತ್ತಿಗೇರಿದ ಸಿಂಧು

ಮಾನವ-ಆಧರಿತ ಕೆಲಸದಿಂದ ಹಿಡಿದು ಎಐ ಒದಗಿಸುವ ವೈವಿಧ್ಯಮಯ ಸೌಲಭ್ಯಗಳನ್ನು ಬಳಸುವಷ್ಟರ ಮಟ್ಟಿಗೆ ಉಂಟಾಗಿರುವ ಈ ಬದಲಾವಣೆಯಿಂದ ಉದ್ಯಮ 4.0 ಯುಗದ ಆರಂಭವಾದಂತೆ ಕಾಣುತ್ತದೆ. ಗ್ರಾಹಕರ ಧಾರಣ ಶಕ್ತಿಯು ಕಡಿಮೆಯಾಗುತ್ತಿರುವ ಈ ಸವಾಲಿನ ಸಂದರ್ಭದಲ್ಲಿ ಉದ್ಯಮಗಳು ಎಐ ಅನ್ನು ಹೆಚ್ಚು ದುಡಿಸಿಕೊಳ್ಳಲು ಮತ್ತು ತಮ್ಮ ಉದ್ಯಮದ ಬೆಳವಣಿಗೆಯನ್ನು ಹೆಚ್ಚಿಸಲು, ದಕ್ಷತೆಯನ್ನು ಸುಧಾರಿಸಲು ಮತ್ತು ಸ್ಪರ್ಧಾತ್ಮಕ ಬಿಸಿನೆಸ್ ಕ್ಷೇತ್ರದಲ್ಲಿ ಉತ್ತಮ ಗ್ರಾಹಕರ ಸೇವೆ ಅನುಭವಗಳನ್ನು ನೀಡಲು ಮುಂದಾಗಲು ಇದು ಸೂಕ್ತ ಸಮಯವಾಗಿದೆ” ಎಂದು ತಿಳಿಸಿದ್ದಾರೆ.

ಸರ್ವೀಸ್‌ನೌ ಇದೀಗ ಭಾರತೀಯ ಉದ್ಯಮಗಳು ಮತ್ತು ಸರ್ಕಾರಿ ಏಜೆನ್ಸಿಗಳಿಗೆ ನೌ ಅಸಿಸ್ಟ್ ಮೂಲಕ ಎಐ ಸೌಲಭ್ಯವನ್ನು ಒದಗಿಸುತ್ತಿದೆ. ಉದ್ಯೋಗಿಗಳ ಮೇಲೆ ಇರುವ ಕೆಲಸದ ಹೊರೆಯನ್ನು ಎಐ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆ ಮೂಲಕ ಉದ್ಯೋಗಿಗಳು ಹೆಚ್ಚು ಸಂಕೀರ್ಣವಾದ ಮತ್ತು ಮೌಲ್ಯವರ್ಧಿತ ಸಂವಹನಗಳ ಮೇಲೆ ಗಮನ ಕೇಂದ್ರೀಕರಿಸಲು ಅನುವು ಮಾಡಿಕೊಡುತ್ತದೆ. ಅದರ ಜತೆಗೆ ಹಳೆಯ ಗ್ರಾಹಕ ಮಾಹಿತಿಗಳನ್ನು ವಿಶ್ಲೇಷಿಸುವ ಮೂಲಕ ಎಐ, ವೈಯಕ್ತಿಕ ಆದ್ಯತೆಗಳು, ಅವಶ್ಯಕತೆಗಳು ಮತ್ತು ವರ್ತನೆಗಳನ್ನು ಮೊದಲೇ ತಿಳಿದುಕೊಳ್ಳಬಹುದಾಗಿದೆ.

ಆ ಮೂಲಕ ಗ್ರಾಹಕರ ಜತೆಗೆ ವೈಯಕ್ತೀಕರಿಸಿದ ಮಾತುಕತೆ ನಡೆಸಬಹುದಾಗಿದೆ. ಈ ಉದ್ದೇಶಿತ ವಿಧಾನದ ಮೂಲಕ ಗ್ರಾಹಕರಲ್ಲಿ ತಿಳುವಳಿಕೆ ಮತ್ತು ಮೌಲ್ಯ ಪ್ರಜ್ಞೆಯನ್ನು ಬೆಳೆಸಬಹುದಾಗಿದೆ. ಆ ಮೂಲಕ ಬ್ರಾಂಡ್ ಜತೆಗಿನ ಅವರ ಸಂಪರ್ಕವನ್ನು ಹೆಚ್ಚಿಸಿ ಅವರ ಒಟ್ಟಾರೆ ಅನುಭವವನ್ನು ಉತ್ತಮಗೊಳಿಸಬಹುದಾಗಿದೆ.

ನಿಧಾನಗತಿಯ ಸೇವೆಯೇ ಗ್ರಾಹಕ ಸೇವೆ ವಿಫಲಗೊಳ್ಳಲು ಕಾರಣ

ಈ ಅಧ್ಯಯನದ ಪ್ರಕಾರ ಹಲವು ರಚನಾತ್ಮಕ ಸಮಸ್ಯೆಗಳು ಗ್ರಾಹಕರ ಕಾಯುವ ಸಮಯ ಗಣನೀಯವಾಗಿ ಹೆಚ್ಚಲು ಕಾರಣವಾಗಿದೆ. ವಿಶೇಷವಾಗಿ 48 ಪ್ರತಿಶತ ಭಾರತೀಯರು ಅಸಮರ್ಪಕ ಆಂತರಿಕ ಸಂವಹನವೇ ಗ್ರಾಹಕ ಸೇವಾ ವಿಳಂಬಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ. 47 ಪ್ರತಿಶತ ಗ್ರಾಹಕರು ಸೇವಾ ಸಿಬ್ಬಂದಿಗೆ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯ ಕೊರತೆಯಿದೆ ಎಂದು ಹೇಳಿದ್ದಾರೆ. 44 ಪ್ರತಿಶತ ಭಾರತೀಯರು ವಿವಿಧ ಇಲಾಖೆಗಳ ನಡುವೆ ಸಹಯೋಗ ಮತ್ತು ಜವಾಬ್ದಾರಿಯ ಕೊರತೆ ಇದೆ ಎಂದು ತಿಳಿಸಿದ್ದಾರೆ. 44 ಪ್ರತಿಶತದಷ್ಟು ಜನರು ಹಳೆಯ ಸಮಸ್ಯೆಗಳ ದಾಖಲೆಗಳನ್ನು ಇಟ್ಟುಕೊಳ್ಳದೇ ಇರುವುದೇ ಸಮಸ್ಯಗೆ ಕಾರಣ ಎಂದು ಹೇಳುತ್ತಾರೆ. 41 ಪ್ರತಿಶತದಷ್ಟು ಜನರು ತಮ್ಮ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸುವಲ್ಲಿ ವಿಳಂಬವಾಗಲು ಮಾತುಕತೆ ಮೂಲಕ ಸರಿಪಡಿಸಿಕೊಳ್ಳಬಹುದಾದ ಆಂತರಿಕ ವ್ಯವಸ್ಥೆಗಳಲ್ಲಿನ ಕೆಲವು ಸಮಸ್ಯೆಗಳು ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸುತ್ತಾರೆ.

ಪಾರದರ್ಶಕತೆ, ವೇಗ ಮತ್ತು ಸಹಾನುಭೂತಿ ಮುಖ್ಯ

60 ಪ್ರತಿಶತದಷ್ಟು ಭಾರತೀಯರು ಗ್ರಾಹಕ ಸೇವಾ ತಂಡಗಳು ಸಮಸ್ಯೆಗೆ ಪರಿಹಾರ ಒದಗಿಸುವ ವೇಗವನ್ನು ಹೆಚ್ಚುಗೊಳಿಸಲು ಬಯಸುತ್ತಾರೆ. ಅರ್ಧದಷ್ಟು ಜನರು ಗ್ರಾಹಕರನ್ನು ಹೋಲ್ಡ್‌ನಲ್ಲಿ ಇರಿಸಿಕೊಳ್ಳುವ ಸಮಯವನ್ನು ಕಡಿಮೆ ಮಾಡಲು ಬಯಸುತ್ತಾರೆ. ಸರಿಸುಮಾರು ಅರ್ಧದಷ್ಟು (48 ಪ್ರತಿಶತ) ಜನರು ಉತ್ತಮ ಗ್ರಾಹಕ ಸೇವಾ ಸೌಲಭ್ಯವನ್ನು ಬಯಸುತ್ತಾರೆ. ಸುಮಾರು 5ರಲ್ಲಿ 2 ಭಾರತೀಯರು (40 ಪ್ರತಿಶತ) ಪ್ರತಿಕ್ರಿಯೆ ನೀಡುವ ಸಮಯವನ್ನು ತೀವ್ರಗೊಳಿಸಬೇಕು ಅಥವಾ ಕಡಿಮೆಗೊಳಿಸಬೇಕು ಎಂದು ಬಯಸುತ್ತಾರೆ. ಈ ನಿಟ್ಟಿನಲ್ಲಿ 40 ಪ್ರತಿಶತ ಮಂದಿ ಸ್ವ-ಸಹಾಯ ಮಾರ್ಗದರ್ಶಿಗಳು (ಸೆಲ್ಫ್ ಹೆಲ್ಪ್ ಗೈಡ್) ಮತ್ತು ಸಂಪನ್ಮೂಲಗಳ ಬಳಕೆಯನ್ನು ಸುಧಾರಿಸಬೇಕು ಎಂದು ತಿಳಿಸಿದ್ದಾರೆ. 39 ಪ್ರತಿಶತ ಮಂದಿ ಚಾಟ್ ಬಾಟ್‌ಗಳ ಬಳಕೆಯನ್ನು ಹೆಚ್ಚುಗೊಳಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಈ ಬಗ್ಗೆ ಸುಮೀತ್ ಮಾಥುರ್ ಮಾತನಾಡಿ, “ಭಾರತೀಯ ಉದ್ಯಮಗಳ ಬಳಿಗೆ ಈಗ ಎರಡು ಆಯ್ಕೆಗಳಿವೆ. ಒಂದು ಹಳೆಯ ಪದ್ಧತಿಗಳನ್ನು ಬಳಸಿ ತಮ್ಮ ಗ್ರಾಹಕರ ವಿಶ್ವಾಸವನ್ನು ಕಳೆದುಕೊಳ್ಳುವುದು ಅಥವಾ ಇನ್ನೊಂದು ಗ್ರಾಹಕರು ಬಯಸುವುದನ್ನು ನೀಡುವಂತಹ ವಿಧಾನವನ್ನು ವಿನ್ಯಾಸಗೊಳಿಸಿ, ಅವರು ಬಯಸಿದ್ದು ನೀಡುವಂತೆ ಮರುಯೋಚನೆ ಮಾಡುವುದು. ಈ ಅಧ್ಯಯನದಿಂದ ಗ್ರಾಹಕರು ಎಐ ಆಧರಿತ ಚಾಟ್‌ಬಾಟ್‌ಗಳು ಅಥವಾ ಸ್ವಯಂ-ಸಹಾಯ ಮಾರ್ಗದರ್ಶಿಗಳನ್ನು ಬಳಸಲು ಸಿದ್ಧರಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಮತ್ತು ಗ್ರಾಹಕ ಸೇವಾ ಪ್ರತಿನಿಧಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಉದ್ಯಮಗಳು ಎಐ ಅನ್ನು ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

Continue Reading

ತಂತ್ರಜ್ಞಾನ

FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

ಆಗಸ್ಟ್ 1ರಿಂದ ಫಾಸ್ಟ್ ಟ್ಯಾಗ್ ಗೆ ಸಂಬಂಧಿಸಿ ಹೊಸ ನಿಯಮಗಳು (FASTag new rule) ಜಾರಿಗೆ ಬರಲಿದ್ದು, ಇದಕ್ಕಾಗಿ ಗ್ರಾಹಕರು ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಟೋಲ್ ಪಾವತಿಗಳನ್ನು ಸರಳಗೊಳಿಸಲು ಮತ್ತು ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಎನ್ ಪಿಸಿಐ ಜಾರಿಗೊಳಿಸಿರುವ ಹೊಸ ನಿಯಮಗಳು ಯಾವುದು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

FASTag new rule
Koo

ಫಾಸ್ಟ್ ಟ್ಯಾಗ್ ಬಳಕೆದಾರರಿಗೆ ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ಹೊಸ ನಿಯಮಗಳು (FASTag new rule) ಜಾರಿಗೆ ಬರಲಿದೆ. ಯಾಕೆಂದರೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ನವೀಕರಿಸಿದ ಮಾರ್ಗಸೂಚಿಗಳನ್ನು ಪರಿಚಯಿಸಿದ್ದು, ಇದಕ್ಕಾಗಿ ಗ್ರಾಹಕರು ಕೆವೈಸಿ (KYC) ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗುತ್ತದೆ.

ಟೋಲ್ ಪಾವತಿಗಳನ್ನು ಸರಳಗೊಳಿಸಲು ಮತ್ತು ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಫಾಸ್ಟ್ ಟ್ಯಾಗ್ ಅತ್ಯಗತ್ಯವಾಗಿದೆ. ಆದರೆ ಎನ್ ಪಿಸಿಐ ಮಾಡಿರುವ ಈ ಬದಲಾವಣೆಗಳು ಬಳಕೆದಾರರ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ.

ಆಗಸ್ಟ್ 1ರಿಂದ ಫಾಸ್ಟ್‌ಟ್ಯಾಗ್ ಸೇವೆಗಳನ್ನು ಒದಗಿಸುವ ಕಂಪನಿಗಳು 3- 5 ವರ್ಷಗಳ ಹಿಂದೆ ನೀಡಲಾದ ಎಲ್ಲಾ ಫಾಸ್ಟ್‌ಟ್ಯಾಗ್‌ಗಳಿಗೆ ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಅಕ್ಟೋಬರ್ 31ರವರೆಗೆ ಸಮಯಾವಕಾಶವನ್ನು ನೀಡಲಿದೆ. ಈ ಅವಧಿಯಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವವರು ಸೇವೆಯಲ್ಲಿ ಯಾವುದೇ ಅಡಚಣೆಗಳು ಉಂಟಾಗದಂತೆ ತಡೆಗಟ್ಟಲು ಕೆವೈಸಿ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯವಾಗಿದೆ.

ಐದು ವರ್ಷಕ್ಕಿಂತ ಹಳೆಯದಾದ ಫಾಸ್ಟ್ ಟ್ಯಾಗ್ ಅನ್ನು ಬದಲಾಯಿಸಬೇಕು. ವಾಹನ ಮಾಲೀಕರು ತಮ್ಮ ಫಾಸ್ಟ್ ಟ್ಯಾಗ್ ಗಳ ವಿತರಣೆಯ ದಿನಾಂಕಗಳನ್ನು ಪರಿಶೀಲಿಸಬೇಕು ಮತ್ತು ಸಮಸ್ಯೆಗಳನ್ನು ತಪ್ಪಿಸಲು ತ್ವರಿತವಾಗಿ ಕ್ರಮ ತೆಗೆದುಕೊಳ್ಳಬೇಕು.

ಹಳೆಯ ವಾಹನಗಳನ್ನು ಹೊಂದಿರುವ ಚಾಲಕರಿಗೆ ಈ ನವೀಕರಣಗಳು ವಿಶೇಷವಾಗಿ ಮುಖ್ಯವಾಗಿದೆ. ಆಗಸ್ಟ್ 1 ಮತ್ತು ಅಕ್ಟೋಬರ್ 31ರ ಗಡುವಿನೊಳಗೆ ಫಾಸ್ಟ್ ಟ್ಯಾಗ್ ಸೇವೆಗಳನ್ನು ಒದಗಿಸುವ ಕಂಪೆನಿಗಳು ಮೂರು ಮತ್ತು ಐದು ವರ್ಷಗಳ ಹಿಂದೆ ನೀಡಲಾದ ಎಲ್ಲಾ ಫಾಸ್ಟ್‌ಟ್ಯಾಗ್‌ಗಳಿಗೆ ಕೆವೈಸಿ ಅನ್ನು ಪೂರ್ಣಗೊಳಿಸಬೇಕಾಗುತ್ತದೆ. ಈ ಗಡುವುಗಳನ್ನು ತಪ್ಪಿಸಿಕೊಂಡರೆ ಮುಂದೆ ಹಲವು ತೊಂದರೆಗಳನ್ನು ಎದುರಿಸಬೇಕಾಗಬಹುದು.

ಹೊಸ ನಿಯಮಗಳು ಆಗಸ್ಟ್ 1ರಿಂದ ಎಲ್ಲಾ ಫಾಸ್ಟ್‌ಟ್ಯಾಗ್‌ಗಳನ್ನು ವಾಹನದ ನೋಂದಣಿ ಸಂಖ್ಯೆ ಮತ್ತು ಚಾಸಿಸ್ ಸಂಖ್ಯೆಗೆ ಲಿಂಕ್ ಮಾಡಬೇಕು ಎಂಬ ಷರತ್ತು ವಿಧಿಸಲಾಗಿದೆ.

ಹೊಸ ವಾಹನ ಮಾಲೀಕರು ವಾಹನವನ್ನು ಖರೀದಿಸಿದ 90 ದಿನಗಳಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನವೀಕರಿಸಬೇಕು. ಫಾಸ್ಟ್‌ಟ್ಯಾಗ್ ಪೂರೈಕೆದಾರರು ತಮ್ಮ ಡೇಟಾಬೇಸ್‌ಗಳು ನಿಖರ ಮತ್ತು ಪ್ರಸ್ತುತ ಎಂದು ಖಚಿತಪಡಿಸಿಕೊಳ್ಳಲು ಅಗತ್ಯವಿದೆ. ಇದು ಎಲ್ಲಾ ವಿವರಗಳನ್ನು ಪರಿಶೀಲಿಸುವುದು ಮತ್ತು ನವೀಕರಿಸುವುದನ್ನು ಒಳಗೊಂಡಿರುತ್ತದೆ.

ಈ ಬದಲಾವಣೆಗಳ ಜೊತೆಗೆ ಸುಲಭವಾಗಿ ಗುರುತಿಸಲು ಅನುಕೂಲವಾಗುವಂತೆ ವಾಹನದ ಮುಂಭಾಗ ಮತ್ತು ಬದಿಯ ಸ್ಪಷ್ಟ ಫೋಟೋಗಳನ್ನು ಅಪ್‌ಲೋಡ್ ಮಾಡಬೇಕು. ಸುಗಮ ಸಂವಹನ ಮತ್ತು ನವೀಕರಣಗಳನ್ನು ಖಚಿತಪಡಿಸಿಕೊಳ್ಳಲು ಪ್ರತಿ ಫಾಸ್ಟ್‌ಟ್ಯಾಗ್ ಅನ್ನು ಮೊಬೈಲ್ ಸಂಖ್ಯೆಯೊಂದಿಗೆ ಲಿಂಕ್ ಮಾಡಬೇಕು.

ಇದನ್ನೂ ಓದಿ: New Toll System: ಫಾಸ್ಟ್‌ ಟ್ಯಾಗ್‌ಗೂ ಉಪಗ್ರಹ ಆಧರಿತ ಟೋಲ್‌ ಸಂಗ್ರಹಕ್ಕೂ ಏನು ವ್ಯತ್ಯಾಸ? ಏನು ಪ್ರಯೋಜನ?

ನಿಯಮ ಏನಿದೆ?

5 ವರ್ಷಕ್ಕಿಂತ ಹಳೆಯದಾದ ಫಾಸ್ಟ್‌ಟ್ಯಾಗ್‌ಗಳನ್ನು ಬದಲಾಯಿಸಬೇಕು.

3 ವರ್ಷಗಳ ಹಿಂದೆ ನೀಡಲಾದ ಫಾಸ್ಟ್‌ಟ್ಯಾಗ್‌ಗಳಿಗೆ ಕೆವೈಸಿ ಅನ್ನು ನವೀಕರಿಸಬೇಕು.

ವಾಹನ ನೋಂದಣಿ ಸಂಖ್ಯೆ ಮತ್ತು ಚಾಸಿಸ್ ಸಂಖ್ಯೆಯನ್ನು ಫಾಸ್ಟ್‌ಟ್ಯಾಗ್‌ನೊಂದಿಗೆ ಲಿಂಕ್ ಮಾಡಬೇಕು.

ಹೊಸ ವಾಹನವನ್ನು ಖರೀದಿಸಿದ 90 ದಿನಗಳಲ್ಲಿ ನೋಂದಣಿ ಸಂಖ್ಯೆಯನ್ನು ನವೀಕರಿಸಬೇಕು.

ಫಾಸ್ಟ್ ಟ್ಯಾಗ್ ಪೂರೈಕೆದಾರರು ತಮ್ಮ ಡೇಟಾಬೇಸ್‌ಗಳನ್ನು ಪರಿಶೀಲಿಸಬೇಕು.

ಕಾರಿನ ಮುಂಭಾಗ ಮತ್ತು ಬದಿಯ ಸ್ಪಷ್ಟ ಫೋಟೋಗಳನ್ನು ಅಪ್‌ಲೋಡ್ ಮಾಡಬೇಕು.

ಫಾಸ್ಟ್ ಟ್ಯಾಗ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಬೇಕು.

Continue Reading
Advertisement
Kupwara Encounter
ದೇಶ6 mins ago

ಕಾಶ್ಮೀರದಲ್ಲಿ ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ ಆಪ್ತನ ಹತ್ಯೆ; ಈತ ಪಾಕ್‌ ಕಮಾಂಡೋ ಕೂಡ ಹೌದು!

PV Sindhu
ಪ್ರಮುಖ ಸುದ್ದಿ17 mins ago

PV Sindhu : ಪಿವಿ ಸಿಂಧು ಹ್ಯಾಟ್ರಿಕ್​ ಒಲಿಂಪಿಕ್ಸ್​ ಪದಕದ ಕನಸು ಭಗ್ನ, 16ನೇ ಸುತ್ತಿನಲ್ಲಿ ಸೋಲು

Prajwal Revanna
ಕರ್ನಾಟಕ27 mins ago

Prajwal Revanna: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಅಸಲಿ; ಎಫ್‌ಎಸ್‌ಎಲ್‌ ವರದಿ ಬಹಿರಂಗ, ಎಸ್‌ಐಟಿ ತನಿಖೆಗೆ ಬಲ!

MS Dhoni
ಪ್ರಮುಖ ಸುದ್ದಿ35 mins ago

MS Dhoni : ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿಯಮವನ್ನೇ ಬದಲಾಯಿಸಲು ಕೋರಿದ ಚೆನ್ನೈ ಸೂಪರ್ ಕಿಂಗ್ಸ್​

Kabini dam not cracked no need to worry says DCM DK Shivakumar
ಕರ್ನಾಟಕ1 hour ago

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಬೇಡ; ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Blood Cancer
ಆರೋಗ್ಯ2 hours ago

Blood Cancer: ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ರನ್ನು ಬಲಿ ಪಡೆದ ರಕ್ತದ ಕ್ಯಾನ್ಸರ್‌ಗೆ ಏನು ಕಾರಣ? ಇದರ ಲಕ್ಷಣಗಳೇನು?

Kerala Floods
ಪ್ರಮುಖ ಸುದ್ದಿ2 hours ago

Kerala Floods : ಬಾನೆಟ್​ ಎತ್ತರಕ್ಕೆ ತುಂಬಿದ್ದ ಪ್ರವಾಹದ ನೀರಿನಲ್ಲಿ ಸಾಗಿ ಕುಟುಂಬವೊಂದನ್ನು ರಕ್ಷಿಸಿದ ಮಹೀಂದ್ರಾ ಬೊಲೆರೊ! video ಇದೆ

DK Shivakumar
ಕರ್ನಾಟಕ2 hours ago

DK Shivakumar: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರಶ್ನೆಗಳ ಸವಾಲು, ಹೆಜ್ಜೆಗೆ ಒಂದು ಪ್ರಶ್ನೆ ಎಂದ ಡಿಕೆಶಿ

Paris Olympics 202
ಪ್ರಮುಖ ಸುದ್ದಿ2 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಗಸ್ಟ್​​ 2ರಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಯ ವಿವರ ಇಲ್ಲಿದೆ

Former minister B Sriramulu alleged that the Congress government is not interested in the construction of the Kampli bridge
ಬಳ್ಳಾರಿ2 hours ago

Ballari News: ಕಂಪ್ಲಿ ಸೇತುವೆ ನಿರ್ಮಿಸಲು ಆಸಕ್ತಿ ವಹಿಸದ ಕಾಂಗ್ರೆಸ್ ಸರ್ಕಾರ; ಶ್ರೀರಾಮುಲು ಆರೋಪ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ10 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ11 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ11 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌