Rain News : ಹಿಂಡನ್​ ನದಿಯಲ್ಲಿ ಮುಳುಗಿದ 500 ಹೊಚ್ಚ ಹೊಸ ಕಾರುಗಳು! Vistara News

ಆಟೋಮೊಬೈಲ್

Rain News : ಹಿಂಡನ್​ ನದಿಯಲ್ಲಿ ಮುಳುಗಿದ 500 ಹೊಚ್ಚ ಹೊಸ ಕಾರುಗಳು!

ನೊಯ್ಡಾದ ಹಿಂಡನ್​ ನದಿ ಪಕ್ಕದ ಯಾರ್ಡ್​ನಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ನದಿಯಲ್ಲಿ ಪ್ರವಾಹ ಅಧಿಕವಾಗಿ (Rain News) ಮುಳುಗಿವೆ ಎಂದು ಹೇಳಲಾಗಿದೆ.

VISTARANEWS.COM


on

Rain News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಮುಂಗಾರು ಮಳೆ (Rain News) ದೇಶಾದ್ಯಂತ ಆರ್ಭಟಿಸುತ್ತಿದೆ. ಮಳೆಯ ಅಬ್ಬರಕ್ಕೆ ನದಿಗಳೆಲ್ಲವೂ ತುಂಬಿ ಹರಿಯುತ್ತಿದ್ದು ಅಪಾಯಕಾರಿ ಮಟ್ಟವನ್ನೂ ಮೀರಿದೆ. ಇದರಿಂದಾಗಿ ಅಲ್ಲಲ್ಲಿ ಅವಾಂತರಗಳು ನಡೆಯುತ್ತಿವೆ. ಮಳೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಕಾರುಗಳು, ಜಾನುವಾರುಗಳು ಸೇರಿದಂತೆ ನಾನಾ ಬಗೆಯ ಮಳೆ ಹಾನಿಯ ದೃಶ್ಯಗಳು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಅಂತೆಯೇ ನೋಯ್ಡಾದಲ್ಲಿ 500 ಹೊಚ್ಚ ಹೊಸ ಕಾರುಗಳು ಹಿಂಡನ್​ ನದಿಯಲ್ಲಿ ಮುಳುಗಿರುವ ವಿಡಿಯೊವೊಂದು ವೈರಲ್​ ಆಗಿದೆ.

500 ಕಾರುಗಳನ್ನು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಾರ್ಡ್ ನಲ್ಲಿ ನಿಲ್ಲಿಸಲಾಗಿತ್ತು.. ಹಿಂಡನ್ ನದಿ ಉಕ್ಕಿ ಹರಿಯುತ್ತಾ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಾರುಗಳನ್ನು ಎಳೆದುಕೊಂಡು ಹೋಗಿದೆ. ಉತ್ತರ ಭಾರತದ ಕೆಲವು ಭಾಗಗಳಲ್ಲಿ ಇತಿಹಾಸದಲ್ಲಿಯೇ ಅತಿ ಹೆಚ್ಚು ಮಳೆಯಾಗಿದ್ದು ಭೀಕರ ಪ್ರವಾಹ, ಭೂಕುಸಿತ ಮತ್ತು ಇತರ ನೈಸರ್ಗಿಕ ವಿಪತ್ತುಗಳಿಗೆ ಸಾಕ್ಷಿಯಾಗಿವೆ. ಈ ಪ್ರದೇಶದಲ್ಲಿ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ನೂರಾರು ಜನರನ್ನು ಸ್ಥಳಾಂತರಿಸಲಾಗಿದೆ. ಆದರೆ, ವಸ್ತುಗಳನ್ನು ಅಲ್ಲೇ ಬಿಟ್ಟು ಹೋಗಿರುವ ಕಾರಣ ಅವುಗಳು ನೀರುಪಾಲಾಗುತ್ತಿವೆ.

ಗ್ರೇಟರ್ ನೋಯ್ಡಾದ ಸುಥಿಯಾನಾ ಗ್ರಾಮದ ಡ್ರೋನ್ ವಿಡಿಯೊ ತುಣುಕು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಯಾರ್ಡ್​​ನಲ್ಲಿ ನಿಲ್ಲಿಸಿದ್ದ ಹಲವಾರು ಕಾರುಗಳು ಪ್ರವಾಹದ ನೀರಿನಲ್ಲಿ ಮುಳುಗಿವೆ. ಅಧಿಕಾರಿಗಳ ಪ್ರಕಾರ, ಹಿಂಡನ್ ನದಿಯ ನೀರಿನ ಮಟ್ಟವು ಇದ್ದಕ್ಕಿದ್ದಂತೆ ಏರಿದ್ದು, ಪಕ್ಕದ ಪ್ರದೇಶಗಳಲ್ಲಿ ಪ್ರವಾಹಕ್ಕೆ ಕಾರಣವಾಯಿತು. ಈ ಸ್ಟಾಕ್ ಯಾರ್ಡ್ ಕೂಡ ನೀರಲ್ಲಿ ಮುಳುಗಿತು ಎಂದು ಹೇಳಿದ್ದಾರೆ.

ವಿಮೆ ಪಾವತಿಸದ ಕಾರಣ ಈ ವಾಹನಗಳಿವು ಎಂದು ಹೇಳಲಾಗುತ್ತಿದೆ. ಪೊಲೀಸ್ ಇಲಾಖೆ ವಶಪಡಿಸಿಕೊಂಡು ತಂದು ನಿಲ್ಲಿಸಿತ್ತು ಎಂದು ಹೇಳಲಾಗಿದೆ. ವಿಮೆಯ ಅವಧಿ ಮುಗಿದಿರುವುದರಿಂದ ಮಾಲೀಕರು ತಮ್ಮ ಜೇಬಿನಿಂದ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : Monsoon Diet: ಮಳೆಗಾಲದಲ್ಲಿ ಆಹಾರ ಸೇವನೆ ಹೀಗಿರಲಿ

ಕೆಲವು ವಾರಗಳ ಹಿಂದೆ, ಪರ್ವತಗಳ ಕುಸಿತದಿಂದ ವಾಹನಗಳಿಗೆ ಹಾನಿಯಾಗಿರುವ ವೀಡಿಯೊಗಳು ಹರಿದಾಡಿದ್ದವು. ಬೆಟ್ಟಗಳಿಂದ ಧಾರಾಕಾರವಾಗಿ ಹರಿದು ಬಂದಿದ್ದ ನೀರು ನಿಲ್ಲಿಸಿದ್ದ ಕಾರುಗಳನ್ನು ಎಳೆದುಕೊಂಡು ಹೋಗಿತ್ತು. ಅವು ಗೊತ್ತುಪಡಿಸಿದ ಪಾರ್ಕಿಂಗ್ ಪ್ರದೇಶವೆಂದು ಎಂದು ಹೇಳಲಾಗುತ್ತಿದೆ. ಮನಾಲಿಯಂತಹ ಗುಡ್ಡಗಾಡು ಪಟ್ಟಣಗಳು ಭಾರಿ ಮಳೆಗೆ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಹಿಮಾಚಲ ಪ್ರದೇಶದ ಪ್ರಮುಖ ರಸ್ತೆಗಳು ಮತ್ತು ಸೇತುವೆಗಳಿಗೆ ಪ್ರವಾಹದಿಂದಾಗಿ ಗಮನಾರ್ಹ ಹಾನಿಯಾಗಿದೆ.

ತೀವ್ರ ಪ್ರವಾಹದ ಪರಿಣಾಮವಾಗಿ, ಈ ಗುಡ್ಡಗಾಡು ಪ್ರದೇಶಗಳು ಮತ್ತು ಹತ್ತಿರದ ನಗರಗಳಾದ ಚಂಡೀಗಢ ಮತ್ತು ನವದೆಹಲಿ ನಡುವಿನ ಸಂಪರ್ಕವು ಅಸ್ತವ್ಯಸ್ತಗೊಂಡಿದೆ. ಎರಡೂ ನಗರಗಳು ಭಾರಿ ಮಳೆ ಮತ್ತು ಪ್ರವಾಹದಿಂದ ನಲುಗಿವೆ. ಇದು ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ. ಹವಾಮಾನ ಇಲಾಖೆ ಎಚ್ಚರಿಕೆಗಳನ್ನು ನೀಡಿದೆ.

ಸಂಭಾವ್ಯ ಹಾನಿಯನ್ನು ತಗ್ಗಿಸುವ ಸಲುವಾಗಿ ಕಾರು ಮಾಲೀಕರು ತಮ್ಮ ವಾಹನಗಳನ್ನು ವೇಗವಾಗಿ ಹರಿಯುವ ನೀರಿನಿಂದ ದೂರವಿರುವ ಎತ್ತರದ ಪ್ರದೇಶಗಳಲ್ಲಿ ನಿಲ್ಲಿಸಲು ಸೂಚಿಸಲಾಗಿದೆ. ಪ್ರವಾಹದಂತಹ ಪರಿಸ್ಥಿತಿಗಳು ಮುಂದುವರಿಯುತ್ತಿರುವುದರಿಂದ ಉತ್ತರ ಭಾರತದ ಕೆಲವು ನಗರಗಳಲ್ಲಿ ಮತ್ತಷ್ಟು ಹಾನಿಯಾಗುವ ಅಪಾಯವಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

ಮಾರುತಿ ಸುಜುಕಿ ಕಾರುಗಳನ್ನು ಈಗ್ಲೇ ಖರೀದಿಸಿ; ಜನವರಿಯಿಂದ ಆಗಲಿವೆ ತುಟ್ಟಿ!

Maruti Suzuki: ಮಾರುತಿ ಸುಜುಕಿ ಕಂಪನಿಯು 2024 ಜನವರಿಯಿಂದ ತನ್ನ ಎಲ್ಲ ಮಾದರಿಯ ಕಾರುಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ.

VISTARANEWS.COM


on

Maruti suzuki cars price will be hike in January 2024
Koo

ನವದೆಹಲಿ: ದೇಶದ ಅತಿದೊಡ್ಡ ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿ (Maruti Suzuki) ಮುಂದಿನ ವರ್ಷದಿಂದ ತನ್ನ ಕಾರುಗಳ ಬೆಲೆಯನ್ನು ಹೆಚ್ಚಿಸುವ (Car Price Hike) ನಿರ್ಧಾರ ಮಾಡಿದೆ. ಹೆಚ್ಚುತ್ತಿರುವ ಹಣದುಬ್ಬರದ (Inflation) ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗುತ್ತಿದೆ ಎಂದು ಕಂಪನಿಯು ಸೋಮವಾರ ಷೇರು ಮಾರುಕಟ್ಟೆಗೆ ತಿಳಿಸಿದೆ. ಹಾಗಿದ್ದೂ, ಎಷ್ಟರ ಮಟ್ಟಿಗೆ ದರ ಏರಿಕೆಯಾಗಲಿದೆ ನಿಖರ ಮಾಹಿತಿಯನ್ನು ಕಂಪನಿಯೇನೂ ನೀಡಿಲ್ಲ. ಆದರೆ, ಎಲ್ಲ ಮಾದರಿ ಕಾರುಗಳ ಬೆಲೆ ಏರಿಕೆಯಾಗಲಿದೆ.

ಒಟ್ಟಾರೆ ಹಣದುಬ್ಬರ ಮತ್ತು ಸರಕು ಬೆಲೆಗಳು ಹೆಚ್ಚುತ್ತಿರುವ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು 2024ರಿಂದ ಜನವರಿಯಿಂದ ಕಾರುಗಳ ಬೆಲೆಯನ್ನು ಹೆಚ್ಚಿಸುವ ಕುರಿತು ಕಂಪನಿ ಪ್ಲ್ಯಾನ್ ಮಾಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಇದೇ ವೇಳೆ, ಕಂಪನಿಯು ಹೆಚ್ಚುತ್ತಿರುವ ವೆಚ್ಚವನ್ನು ತಡೆಯುವ ಎಲ್ಲ ಪ್ರಯತ್ನಗಳನ್ನು ಮಾಡಿದೆ ಎಂದು ಹೇಳಿದೆ.

ಮಾರುತಿ ಸುಜುಕಿ ತನ್ನ ಅತಿ ಹೆಚ್ಚು ಮಾಸಿಕ ಮಾರಾಟವನ್ನು ಅಕ್ಟೋಬರ್‌ನಲ್ಲಿ 1.99 ಲಕ್ಷ ಯುನಿಟ್‌ಗಳಲ್ಲಿ ದಾಖಲಿಸಿದೆ. ಇದು ವರ್ಷದಿಂದ ವರ್ಷಕ್ಕೆ ಶೇ.19 ರಷ್ಟು ಬೆಳವಣಿಗೆಯಾಗಿದೆ. ಏತನ್ಮಧ್ಯೆ, ಕಂಪನಿಯ ನಿವ್ವಳ ಲಾಭವು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ.80.3 ರಷ್ಟು ಏರಿಕೆಯಾಗಿ 3,716.5 ಕೋಟಿ ರೂಪಾಯಿಗಳಿಗೆ ತಲುಪಿದೆ. ಉತ್ತಮ ಮಾರಾಟ, ಸರಕುಗಳ ಬೆಲೆಗಳನ್ನು ಕಡಿಮೆ ಮತ್ತು ವೆಚ್ಚ ಕಡಿತದ ಪ್ರಯತ್ನಗಳ ಫಲವಾಗಿ ಆದಾಯ ಹೆಚ್ಚಾಗಿದೆ.

ಮುಂದಿನ 2-3 ವರ್ಷಗಳಲ್ಲಿ ಹೆಚ್ಚುತ್ತಿರುವ ಜನರ ಆದಾಯದ ಮಟ್ಟಗಳು ಮತ್ತು ಬೆಳೆಯುತ್ತಿರುವ ಆರ್ಥಿಕತೆಯ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ, ಕೈಗೆಟುಕುವ ಸಣ್ಣ ಕಾರುಗಳ ಮತ್ತೆ ಪ್ರಾಬಲ್ಯ ಮೆರೆಯುವ ನಿರೀಕ್ಷೆ ಇದೆ ಎಂದು ಮಾರುತಿ ಸುಜುಕಿ ಕಂಪನಿ ಹೇಳಿಕೊಂಡಿದೆ.

ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ, ಹೆಚ್ಚಿನ ಮಾರಾಟದ ಪ್ರಮಾಣ ಮತ್ತು ಉತ್ಪನ್ನ ಮಿಶ್ರಣದ ಕಾರಣದಿಂದಾಗಿ ಕಂಪನಿಯು ಹಿಂದಿನ ಹಣಕಾಸು ವರ್ಷದ ಅದೇ ತ್ರೈಮಾಸಿಕದಲ್ಲಿ 28,543.50 ಕೋಟಿ ರೂ.ಗಳ ವಿರುದ್ಧ 35,535.1 ಕೋಟಿ ರೂ.ಗಳ ನಿವ್ವಳ ಮಾರಾಟವನ್ನು ದಾಖಲಿಸಿದೆ ಎಂದು ಕಂಪನಿ ಹೇಳಿಕೊಂಡಿದೆ.

ಈ ಸುದ್ದಿಯನ್ನೂ ಓದಿ: Maruti Suzuki: ಇನ್‌ಕಮ್‌ ಟ್ಯಾಕ್ಸ್‌ ನೋಟೀಸ್‌, ಮಾರುತಿ ಸುಜುಕಿ ಷೇರು ಬೆಲೆ 2% ಕುಸಿತ

Continue Reading

ಆಟೋಮೊಬೈಲ್

Royal Enfield Himalayan : ಭರ್ಜರಿ ಲುಕ್​ನ ಎನ್​ಫೀಲ್ಡ್​ ಹಿಮಾಲಯನ್​ ಬೆಲೆ ಬಹಿರಂಗ

ರಾಯಲ್​ ಎನ್​ಫೀಲ್ಡ್​ ಬೈಕಿನ (Royal Enfield Himalayan) ಬೆಲೆಯನ್ನು ಕಂಪನಿಯು ಘೋಷಿಸಿದ್ದು ನಾನಾ ವೇರಿಯೆಂಟ್​ಗಳ ಮೂಲಕ ಮಾರಾಟ ಮಾಡಿದೆ.

VISTARANEWS.COM


on

Royal Enfield Himalayan
Koo

ಬೆಂಗಳೂರು : ಇತ್ತೀಚೆಗೆ ಅನಾವರಣಗೊಂಡ ರಾಯಲ್ ಎನ್ ಫೀಲ್ಡ್ (royal Enfield bike price) ಹಿಮಾಲಯನ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರ ರೂ.2.69 ಲಕ್ಷ ರೂಪಾಯಿಗಳಾಗಿವೆ. ಡಿಸೆಂಬರ್ 31ರವರೆಗೆ ಈ ಬೆಲೆಯಲ್ಲಿ ಬೈಕ್ ದೊರೆಯಲಿದೆ. ಹಿಮಾಲಯನ್ 450 ಸರಣಿಯ ಬೇಸ್ ವೇರಿಯೆಂಟ್​ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ 2.74 ಲಕ್ಷ ರೂಪಾಯಿಗಳಾದರೆ, ಪಾಸ್ ಮಾದರಿಯ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.2.79 ಲಕ್ಷ ರೂಪಾಯಿಗಳಾಗಿದೆ. ಬೈಕ್​ಗಳು ಏಕ ರೂಪದಲ್ಲಿ ಇರುವ ಹೊರತಾಗಿಯೂ ಪ್ರತಿ ವೇರಿಯೆಂಟ್​ ವಿಭಿನ್ನ ಬಣ್ಣಗಳನ್ನು ಹೊಂದಿದೆ. ಅಂದ ಹಾಗೆ ಈ ಬೆಲೆಗಳು ಪರಿಚಯಾತ್ಮಕ ಬೆಲೆಯಾಗಿದೆ.

ಈ ಮಾಡೆಲ್​ಗಳು ಗ್ರೌಂಡ್ ಲೆವೆಲ್​ ಅಭಿವೃದ್ಧಿಯಾಗಿದ್ದು. ರಾಯಲ್​ ಎನ್ ಫೀಲ್ಡ್ ನಿಂದ ಹೊಸ ಸರಣಿಯ ಉತ್ಪನ್ನಗಳ ಪ್ರಾರಂಭವನ್ನು ಸೂಚಿಸುತ್ತದೆ. ಟ್ವಿನ್ ಸ್ಪಾರ್ ಫ್ರೇಮ್ ಹೊಂದಿರುವ ಈ ಬೈಕ್ ಅನ್ನು ಹೊಸದಾಗಿ ಅಭಿವೃದ್ಧಿಪಡಿಸಿದ ಶೆರ್ಪಾ 450 ಎಂಜಿನ್ ಪ್ಲಾಟ್ ಫಾರ್ಮ್ ನಲ್ಲಿ ನಿರ್ಮಿಸಲಾಗಿದೆ.

ಇದನ್ನೂ ಓದಿ :

ಎಂಜಿನ್ ಬಗ್ಗೆ ಹೇಳುವುದಾದರೆ, ಹೊಸ ಹಿಮಾಲಯನ್ ನ 452 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್​ ಹೊಂದಿದೆ ಈ ಎಂಜಿನ್ 39.4 ಬಿ ಹೆಚ್ ಪಿ ಪವರ್ ಮತ್ತು 40 ಎನ್ ಎಂ ಟಾರ್ಕ್ ಉತ್ಪಾದಿಸುತ್ತದೆ.

ಎಂಜಿನ್​ ಸಾಮರ್ಥ್ಯ ಎಷ್ಟು?

ಹಿಮಾಲಯನ್ 450 ಬೈಕಿನ ಸಸ್ಪೆಂಷನ್ ಸೆಟಪ್ ಮುಂಭಾಗದಲ್ಲಿ ಯುಎಸ್ ಡಿ ಫೋರ್ಕ್ ಗಳು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಅನ್ನು ಹೊಂದಿದೆ. ಬೈಕಿನ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 270 ಎಂಎಂ ಡಿಸ್ಕ್ ಬ್ರೇಕ್ ಅಳವಡಿಸಲಾಗಿದೆ. ಈ ಬೈಕ್ 230 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ. ಸೀಟ್ ಎತ್ತರವನ್ನು ಸರಿಹೊಂದಿಸಬಹುದು, 825 ಎಂಎಂ ನಿಂದ 845 ಎಂಎಂ ವರೆಗೆ ಏರಿಸಲು ಸಾಧ್ಯ. 805 ಎಂಎಂ ಸೀಟ್ ಅಕ್ಸೆಸರಿಯಾಗಿ ಲಭ್ಯವಿದೆ. ರಾಯಲ್ ಎನ್ ಫೀಲ್ಡ್ ಅಡ್ವೆಂಚರ್ ರೇಂಜ್ ಸೇರಿದಂತೆ ಅಡ್ವೆಂಚರ್ ಬೈಕ್ ಗಾಗಿ ವಿವಿಧ ಅಕ್ಸೆಸರಿಗಳನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಎತ್ತರದ ಸೀಟ್​ ಹಾಗೂ ಸುಧಾರಿತ ರಕ್ಷಣಾ ರ್ಯಾಲಿ ಕಿಟ್ ಆಯ್ಕೆ ನೀಡಲಾಗಿದೆ.

ಟ್ಯೂಬ್​ ಟಯರ್​ಗಳು

ಹಿಮಾಲಯನ್ 450 ಬೈಕ್ 21 ಇಂಚಿನ ಫ್ರಂಟ್ ಮತ್ತು 17 ಇಂಚಿನ ರಿಯರ್ ಸ್ಪೋಕ್ಡ್ ವ್ಹೀಲ್ ಗಳನ್ನು ಹೊಂದಿದೆ. ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಟ್ಯೂಬ್ ಮಾದರಿಯ ಟೈರ್ ಗಳನ್ನು ಹೊಂದಿದೆ. ರಾಯಲ್ ಎನ್ ಫೀಲ್ಡ್ ಮುಂದಿನ ವರ್ಷ ಟ್ಯೂಬ್ ಲೆಸ್ ಟೈರ್ ಗಳನ್ನು ಸ್ವಲ್ಪ ಹೆಚ್ಚಿನ ಬೆಲೆಗೆ ಪರಿಚಯಿಸುವ ಯೋಜನೆಯನ್ನು ಹೊಂದಿದೆ. ಹೊಸ ಹಿಮಾಲಯನ್ ಬೈಕಿನ ವಿತರಣೆ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಕೆಟಿಎಂ 390 ಅಡ್ವೆಂಚರ್, ಟ್ರಯಂಫ್ ಸ್ಕ್ರಾಂಬ್ಲರ್ 400 ಎಕ್ಸ್ ಮತ್ತು ಯೆಜ್ಡಿ ಅಡ್ವೆಂಚರ್ ಬೈಕುಗಳಿಗೆ ಪೈಪೋಟಿ ನೀಡಲಿದೆ.

ಎನ್​ಫೀಲ್ಡ್ ಶಾಟ್​ಗನ್​ 650 ಅನಾವರಣ

ರಾಯಲ್ ಎನ್ ಫೀಲ್ಡ್ ಕಂಪನಿಯು 2023ರ ಮೋಟೊವರ್ಸ್ ನಲ್ಲಿ ಶಾಟ್ ಗನ್ 650 ಬೈಕ್ ಅನ್ನು ಅನಾವರಣಗೊಳಿಸಿದೆ. ಈಗಾಗಲೇ ಇಂಟರ್ ಸೆಪ್ಟರ್, ಕಾಂಟಿನೆಂಟಲ್ ಜಿಟಿ ಮತ್ತು ಸೂಪರ್ ಮೆಟಿಯೋರ್ ಬೈಕುಗಳನ್ನು ಒಳಗೊಂಡಿರುವ 650 ಸಿಸಿ ಸರಣಿಯನ್ನು ವಿಸ್ತರಿಸಿದೆ.

ಈ ಬೈಕ್ ಬುಲೆಟ್ 350 ಬೈಕಿನಲ್ಲಿ ಕೈಯಿಂದ ಮಾಡಿದ ಪಿನ್ ಸ್ಟ್ರೈಪಿಂಗ್ ನಂತೆಯೇ. ವೈಶಿಷ್ಟ್ಯ ಹೆಚ್ಚಿಸಲು ಕೈಯಿಂದ ಬಣ್ಣ ಬಳಿಯಲಾಗಿದೆ. ವಿಶೇಷವೆಂದರೆ, ಎಂಜಿನ್ ಕೇಸಿಂಗ್ ಅನ್ನು ಹೊಳಪುಳ್ಳ ಕಪ್ಪು ಫಿನಿಶ್ ನಲ್ಲಿ ನೀಡಲಾಗಿದೆ. ಇದು ರಾಯಲ್ ಎನ್ ಫೀಲ್ಡ್ ನಲ್ಲಿ ಸಿಗುವ ಹೊಸ ವಿನ್ಯಾಸವಾಗಿದೆ.

ವಿಶೇಷ ಆವೃತ್ತಿಯ ಶಾಟ್ ಗನ್ 650 ಮೋಟಾರ್ ವರ್ಸ್ ಎಡಿಷನ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.4.25 ಲಕ್ಷಗಳಾಗಿದೆ. 2024ರ ಜನವರಿಯಿಂದ ಈ ಬೈಕಿನ ಡೆಲಿವರಿ ಆರಂಭವಾಗಲಿದೆ. ಈ ಬೆಲೆಯನ್ನು ಒಳಗೊಂಡಂತೆ, ಈ ಬೈಕಿನಲ್ಲಿ ಬಾರ್-ಎಂಡ್ ಮಿರರ್ ಗಳು ಮತ್ತು ಎಲ್ ಇಡಿ ಟರ್ನ್ ಇಂಡಿಕೇಟರ್ ಗಳಂತಹ ಆಯ್ದ ನೈಜ ಬಿಡಿಭಾಗಗಳನ್ನು ಅಳವಡಿಸಲಾಗಿದೆ. ಹೆಚ್ಚುವರಿಯಾಗಿ, ಸೀಮಿತ ಆವೃತ್ತಿಯ ಮೋಟಾರ್ ಸೈಕಲ್ ವಿಸ್ತರಿತ ವಾರಂಟಿ ಸೇವೆಯನ್ನು ಹೊಂದಿರುತ್ತದೆ.

Continue Reading

ಆಟೋಮೊಬೈಲ್

ಭಾರತದಲ್ಲಿ ಫ್ಯಾಕ್ಟರಿ ಆರಂಭಿಸಲು ಸಿದ್ಧ, ಆದ್ರೆ ಒಂದ್ ಕಂಡೀಷನ್ ಎಂದ ಟೆಸ್ಲಾ!

Tesla: ಭಾರತದಲ್ಲಿ ಫ್ಯಾಕ್ಟರಿ ಆರಂಭಿಸುವ ಸಂಬಂಧ ಭಾರತ ಸರ್ಕಾರ ಮತ್ತು ಟೆಸ್ಲಾ ಕಂಪನಿಯ ಮಧ್ಯೆ ಒಪ್ಪಂದವು ಅಂತಿಮ ಹಂತಕ್ಕೆ ತಲುಪಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

VISTARANEWS.COM


on

Tesla is ready to start a factory in India, but it has one condition
Koo

ನವದೆಹಲಿ: ಎಲಾನ್ ಮಸ್ಕ್ (Elon Musk) ನೇತೃತ್ವದ ಟೆಸ್ಲಾ ಕಂಪನಿ (Tesla Company) ಮುಂದಿನ ವರ್ಷದಿಂದ ಭಾರತದಲ್ಲಿ ಕಾರ್ಯಾಚಣೆ (India Operation) ನಡೆಸಲಿದೆ. ಈ ಬಗ್ಗೆ ಭಾರತ ಸರ್ಕಾರ (Indian Government) ಮತ್ತು ಕಂಪನಿ ನಡುವಿನ ಒಪ್ಪಂದವು ಅಂತಿಮ ಹಂತದಲ್ಲಿದೆ. ಹಾಗಿದ್ದೂ, ಟೆಸ್ಲಾ ಕಂಪನಿ ಷರತ್ತೊಂದನ್ನು ವಿಧಿಸಿದೆ ಎಂದು ತಿಳಿದು ಬಂದಿದೆ. ತನ್ನ ವಾಹನಗಳ ಮೇಲಿನ ಆಮದು ಸುಂಕವನ್ನು (import duty) ಮೊದಲ ಎರಡು ವರ್ಷಗಳ ಕಾರ್ಯಾಚರಣೆಗೆ ಶೇ.15 ಕಡಿತಗೊಳಿಸಿದರೆ ಭಾರತದಲ್ಲಿ ಕಾರ್ಖಾನೆಯನ್ನು (Factory in India) ಸ್ಥಾಪಿಸಲು 2 ಶತಕೋಟಿ ಹೂಡಿಕೆ ಮಾಡಲು ಸಿದ್ಧವಾಗಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಎಲೆಕ್ಟ್ರಿಕ್ ವಾಹನಗಳಗೆ ಸಂಬಂಧಿಸಿದಂತೆ ಭಾರತವು ಹೊಸ ನೀತಿಯನ್ನು ರೂಪಿಸುತ್ತಿದೆ. ಇದರ ಪ್ರಕಾರ, 40 ಸಾವಿರ ಡಾಲರ್ ಮೇಲ್ಪಟ್ಟ ಇವಿ ಕಾರುಗಳ ಮೇಲಿನ ಆಮದು ಸಂಕವನ್ನು ಶೇ.100 ಬದಲಿಗೆ ಶೇ.15ರಷ್ಟು ಇಳಿಸಲಾಗುತ್ತದೆ ಮತ್ತು ಸ್ಥಳೀಯವಾಗಿ ನಿರ್ಮಾಣದ ಬದ್ಧತೆಯನ್ನು ತೋರುವ ಕಂಪನಿಗಳಿಗೆ ಶೇ.70ರಷ್ಟು ಕಡಿಮೆ ಮಾಡುವ ನೀತಿಯನ್ನು ಒಳಗೊಳ್ಳಲಿದೆ ಎಂದು ಈ ಹಿಂದೆ ವರದಿಯಾಗಿತ್ತು.

ಎಲಾನ್ ಮಸ್ಕ್ ನೇತೃತ್ವದ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಟೆಸ್ಲಾ ಕಂಪನಿಯು, ಸರ್ಕಾರವು 12,000 ವಾಹನಗಳಿಗೆ ಕಡಿಮೆ ಸುಂಕವನ್ನು ಅನುಮೋದಿಸಿದರೆ 500 ಮಿಲಿಯನ್ ಡಾಲರ್ ಮತ್ತು 30,000 ವಾಹನಗಳಿಗೆ ರಿಯಾಯಿತಿ ನೀಡಿದರೆ 2 ಬಿಲಿಯನ್ ಡಾಲರ್‌ವರೆಗೆ ಹೂಡಿಕೆ ಮಾಡಲು ಸಿದ್ಧವಾಗಿದೆ ಎಂದು ಹೇಳಲಾಗುತ್ತಿದೆ.

2 ಶತಕೋಟಿ ಡಾಲರ್ ಹೂಡಿಕೆ ಮಾಡುವ ಟೆಸ್ಲಾ ಪ್ರಸ್ತಾವನೆಯ ಕಾರ್ಯಸಾಧ್ಯತೆಯನ್ನು ಸರ್ಕಾರವು ಪರಿಶೀಲಿಸುತ್ತಿದೆ. ಆದರೆ ಟೆಸ್ಲಾದ ಪ್ರಸ್ತಾಪಕ್ಕೆ ಹೋಲಿಸಿದರೆ ಕಡಿಮೆ ಸುಂಕದ ಮೇಲೆ ಆಮದು ಮಾಡಿಕೊಳ್ಳುವ ಕಾರುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಬಯಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಈ ಬಗ್ಗೆ ಟೆಸ್ಲಾ ಕಂಪನಿಯಾಗಲಿ ಅಥವಾ ಸಂಬಂಧಿ ಕೇಂದ್ರ ಸರ್ಕಾರದ ಇಲಾಖೆಗಳಾಗಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ತಮಿಳುನಾಡು, ಮಹಾರಾಷ್ಟ್ರ, ಗುಜರಾತ್‌ ರಾಜ್ಯದಲ್ಲಿ ಫ್ಯಾಕ್ಟರಿ?

ಅಮೆರಿಕ ನಿರ್ಮಿತ ಟೆಸ್ಲಾ ಕಾರುಗಳನ್ನು (Tesla Car) ಭಾರತೀಯ ಮಾರುಕಟ್ಟೆಗೆ (Indian Market) ತರುವ ಸಂಬಂಧ ಟೆಸ್ಲಾ ಕಂಪನಿ ಮತ್ತು ಭಾರತೀಯ ಸರ್ಕಾರವು (Indian Government) ಒಪ್ಪಂದವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಮುಂದಿನ ವರ್ಷ ಟೆಸ್ಲಾ ಭಾರತೀಯ ಮಾರುಕಟ್ಟೆಗೆ ಪ್ರವೇಶ ಪಡೆಯಲಿದೆ ಬ್ಲೂಮ್‌ಬರ್ಗ್ ತಿಳಿಸಿದೆ. 2024ರಲ್ಲಿ ಟೆಸ್ಲಾ ಕಂಪನಿ ಭಾರತದಲ್ಲಿ ಫ್ಯಾಕ್ಟರಿ (Tesla Factory) ಕೂಡ ಆರಂಭಿಸಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಟೆಸ್ಲಾ ಕಂಪನಿ ಭಾರತಕ್ಕೆ ಎಂಟ್ರಿ ಕೊಡಲಿದೆ ಎನ್ನುವ ಸುದ್ದಿಗಳು ಮೊದಲಿಗೆ ಹೊರ ಬಂದಾಗಲೇ ಕರ್ನಾಟಕದಲ್ಲಿ ಫ್ಯಾಕ್ಟರಿ ತೆರೆಯಬಹುದು ಎಂದು ಹೇಳಲಾಗಿತ್ತು. ಆದರೆ, ಈಗ ಕಂಪನಿಯ ಯೋಜನೆಗಳು ಬದಲಾಗಿವೆ.

ಭಾರತ ಸರ್ಕಾರ ಮತ್ತು ಟೆಸ್ಲಾ ಕಂಪನಿ ಒಪ್ಪಂದವನ್ನು ಅಂತಿಮಗೊಳಿಸುವ ಪ್ರಯತ್ನದಲ್ಲಿವೆ. ಈ ಒಪ್ಪಂದ ಅನ್ವಯ ಟೆಸ್ಲಾ ಕಂಪನಿಯ ಅಮೆರಿಕದಲ್ಲಿ ನಿರ್ಮಿತ ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗಿದೆ. ಹಾಗೆಯೇ, ಮುಂದಿನ ವರ್ಷ ಭಾರತದಲ್ಲಿ ಫ್ಯಾಕ್ಟರಿ ಕೂಡ ಆರಂಭಿಸಲಿದೆ ಎನ್ನಲಾಗಿದೆ.

ಈ ಸುದ್ದಿಯನ್ನೂ ಓದಿ: Tesla Inc: ಟೆಸ್ಲಾ ಕಂಪನಿಗೆ ಭಾರತೀಯ ಮೂಲದ ವೈಭವ್ ತನೇಜಾ ಹೊಸ ಸಿಎಫ್ಒ

Continue Reading

ಆಟೋಮೊಬೈಲ್

ಕರ್ನಾಟಕಕ್ಕೆ ತಪ್ಪಿದ ಟೆಸ್ಲಾ ಫ್ಯಾಕ್ಟರಿ ಮಹಾರಾಷ್ಟ್ರ, ತಮಿಳು ನಾಡು, ಗುಜರಾತ್‌ನಲ್ಲಿ ಸ್ಥಾಪನೆ?

Tesla Car: ಅಮೆರಿಕದಲ್ಲಿ ತಯಾರಾದ ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಂಬಂಧ ಟೆಸ್ಲಾ ಕಂಪನಿ ಹಾಗೂ ಭಾರತ ಸರ್ಕಾರ ನಡುವಿನ ಒಪ್ಪಂದವು ಅಂತಿಮ ಹಂತಕ್ಕೆ ಬಂದಿದೆ.

VISTARANEWS.COM


on

Tesla May set up factory in Maharashtra, Tamil Nadu and Gujarat Says Report
Koo

ನವದೆಹಲಿ: ಅಮೆರಿಕ ನಿರ್ಮಿತ ಟೆಸ್ಲಾ ಕಾರುಗಳನ್ನು (Tesla Car) ಭಾರತೀಯ ಮಾರುಕಟ್ಟೆಗೆ (Indian Market) ತರುವ ಸಂಬಂಧ ಟೆಸ್ಲಾ ಕಂಪನಿ ಮತ್ತು ಭಾರತೀಯ ಸರ್ಕಾರವು (Indian Government) ಒಪ್ಪಂದವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಮುಂದಿನ ವರ್ಷ ಟೆಸ್ಲಾ ಭಾರತೀಯ ಮಾರುಕಟ್ಟೆಗೆ ಪ್ರವೇಶ ಪಡೆಯಲಿದೆ ಬ್ಲೂಮ್‌ಬರ್ಗ್ ತಿಳಿಸಿದೆ. 2024ರಲ್ಲಿ ಟೆಸ್ಲಾ ಕಂಪನಿ ಭಾರತದಲ್ಲಿ ಫ್ಯಾಕ್ಟರಿ (Tesla Factory) ಕೂಡ ಆರಂಭಿಸಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಟೆಸ್ಲಾ ಕಂಪನಿ ಭಾರತಕ್ಕೆ ಎಂಟ್ರಿ ಕೊಡಲಿದೆ ಎನ್ನುವ ಸುದ್ದಿಗಳು ಮೊದಲಿಗೆ ಹೊರ ಬಂದಾಗಲೇ ಕರ್ನಾಟಕದಲ್ಲಿ ಫ್ಯಾಕ್ಟರಿ ತೆರೆಯಬಹುದು ಎಂದು ಹೇಳಲಾಗಿತ್ತು. ಆದರೆ, ಈಗ ಕಂಪನಿಯ ಯೋಜನೆಗಳು ಬದಲಾಗಿವೆ.

ಭಾರತ ಸರ್ಕಾರ ಮತ್ತು ಟೆಸ್ಲಾ ಕಂಪನಿ ಒಪ್ಪಂದವನ್ನು ಅಂತಿಮಗೊಳಿಸುವ ಪ್ರಯತ್ನದಲ್ಲಿವೆ. ಈ ಒಪ್ಪಂದ ಅನ್ವಯ ಟೆಸ್ಲಾ ಕಂಪನಿಯ ಅಮೆರಿಕದಲ್ಲಿ ನಿರ್ಮಿತ ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗಿದೆ. ಹಾಗೆಯೇ, ಮುಂದಿನ ವರ್ಷ ಭಾರತದಲ್ಲಿ ಫ್ಯಾಕ್ಟರಿ ಕೂಡ ಆರಂಭಿಸಲಿದೆ ಎನ್ನಲಾಗಿದೆ.

2024ರ ಜನವರಿಯಲ್ಲಿ ನಡೆಯಲಿರುವ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗದಲ್ಲಿ ಈ ಕುರಿತು ಅಂತಿಮ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಟೆಸ್ಲಾ ಕಂಪನಿಯು ಮಹಾರಾಷ್ಟ್ರ, ತಮಿಳುನಾಡು ಮತ್ತು ಗುಜರಾತ್‌ ರಾಜ್ಯಗಳಲ್ಲಿ ತನ್ನ ಫ್ಯಾಕ್ಟರಿಯನ್ನು ಸ್ಥಾಪಿಸುವ ಯೋಜನೆಯನ್ನು ಹಾಕಿಕೊಂಡಿದೆ. ಟೆಸ್ಲಾ ಕಂಪನಿಯು ಆರಂಭದಲ್ಲಿ 2 ಶತಕೋಟಿ ಡಾಲರ್ ಹೂಡಿಕೆ ಮಾಡಲಾಗಿದೆ. ವಾಹನ ಬಿಡಿಭಾಗಗಳ ಖರೀದಿಗಾಗಿ 15 ಶತಕೋಟಿ ಡಾಲರ್‌ಗೆ ಹೆಚ್ಚಿಸಲು ನೋಡುತ್ತಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಯೋಜನೆಗಳು ಇನ್ನೂ ಅಂತಿಮಗೊಂಡಿಲ್ಲ ಮತ್ತು ಭವಿಷ್ಯದಲ್ಲಿ ಈಗಿರುವ ಯೋಜನೆಗಳಲ್ಲಿ ಬದಲಾಗಬಹುದು ಎಂದು ಮೂಲಗಳು ತಿಳಿಸಿವೆ. ಎಲಾನ್ ಮಸ್ಕ್ ಅವರ ಕಂಪನಿಯು ಮಹಾರಾಷ್ಟ್ರ ಮತ್ತು ತಮಿಳುನಾಡು ಈಗಾಗಲೇ ಎಲೆಕ್ಟ್ರಿಕ್ ವಾಹನಗಳು ಮತ್ತು ರಫ್ತಿಗಾಗಿ ಸುಸ್ಥಾಪಿತ ಪರಿಸರ ವ್ಯವಸ್ಥೆಯನ್ನು ಹೊಂದಿರುವುದರಿಂದ ಅವುಗಳ ಮೇಲೆ ಕಣ್ಣಿಟ್ಟಿದೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ತ್ವರಿತ ಹೆಚ್ಚಳದಿಂದಾಗಿ ಗುಜರಾತ್ ಅನ್ನು ಪರಿಗಣಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಆಟೋ ಬಿಡಿ ಭಾಗಗಳು ಮತ್ತು ಇವಿಗಳ ಆಮದು ಹೊರತಾಗಿಯೂ ಟೆಸ್ಲಾ ಕಂಪನಿಯು ವೆಚ್ಚವನ್ನು ಕಡಿತ ಮಾಡುವುದಕ್ಕಾಗಿ ಬ್ಯಾಟರಿಗಳನ್ನು ದೇಶೀಯವಾಗಿ ತಯಾರಿಸುವ ಯೋಜನೆಯನ್ನು ಹಾಕಿಕೊಂಡಿದೆ. ಸದ್ಯಕ್ಕೆ ಚೀನಾ, ಅಮೆರಿಕ, ಜರ್ಮನಿ ದೇಶಗಳಲ್ಲಿ ಟೆಸ್ಲಾ ಫ್ಯಾಕ್ಟರಿಗಳನ್ನು ಹೊಂದಿದೆ. ಈ ಹೊತ್ತಿನಲ್ಲಿ ಭಾರತದಲ್ಲಿ ಮೋದಿ ಸರ್ಕಾರವು ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿರುವುದರಿಂದ ಅದರ ಲಾಭವನ್ನು ಟೆಸ್ಲಾ ಕಂಪನಿ ಬಾಚಿಕೊಳ್ಳಲು ಮುಂದಾಗಿದೆ.

ನಿರಂತರ ಪ್ರೋತ್ಸಾಹ, ಉತ್ತೇಜನದ ಹೊರತಾಗಿಯೂ ಭಾರತದಲ್ಲಿ ಎಲೆಕ್ಟ್ರಿಕ್ ವೆಹಿಕಲ್‌ಗಳ ಮಾರುಕಟ್ಟೆ ಇನ್ನೂ ಭಾರೀ ಏರಿಕೆಯನ್ನು ಕಂಡಿಲ್ಲ. ಕಳೆದ ವರ್ಷ ಭಾರತದಲ್ಲಿ ಮಾರಾಟದ ಒಟ್ಟು ಪ್ಯಾಸೆಂಜರ್‌ ವೆಹಿಕಲ್‌ಗಳಲ್ಲಿ ಶೇ. 1.3 ಅಷ್ಟೇ ವಿದ್ಯುತ್ ಚಾಲಿತ ವಾಹನಗಳಾಗಿವೆ.

ಈ ಸುದ್ದಿಯನ್ನೂ ಓದಿ: Tesla cars : ಭಾರತದಲ್ಲಿ ಕಾರ್ಖಾನೆ ನಿರ್ಮಾಣಕ್ಕೆ ಟೆಸ್ಲಾ ಮಾತುಕತೆ ಶುರು, 20 ಲಕ್ಷ ರೂ.ಗೆ ಕಾರು

Continue Reading
Advertisement
Fashion Show
ದೇಶ28 mins ago

Fashion Show : ಏಕತೆಗೆ ಧಕ್ಕೆ; ಫ್ಯಾಶನ್​ ಶೋದಲ್ಲಿ ಬುರ್ಖಾ ಹಾಕಿದ್ದಕ್ಕೆ ಮುಸ್ಲಿಂ ನಾಯಕನ ಆಕ್ಷೇಪ!

kalpamrutha cold pressed oil production unit inaugurated
ಕರ್ನಾಟಕ28 mins ago

ಕಲ್ಪಾಮೃತ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕಕ್ಕೆ ಚಾಲನೆ

Gadaga accident two bike riders dead
ಕರ್ನಾಟಕ28 mins ago

Road Accident : ಸೋದರನ ನಿಶ್ಚಿತಾರ್ಥ ಮುಗಿಸಿ ಹೊರಟ ಇಬ್ಬರು ಅಪಘಾತದಲ್ಲಿ ಮೃತ್ಯು

Anju who went to Pakistan for to marry her lover, returns to India
ದೇಶ31 mins ago

Anju Love Story: ಪಾಕ್‌ಗೆ ಹೋಗಿ ಪ್ರಿಯಕರನ ಮದ್ವೆಯಾಗಿದ್ದ ಅಂಜು ಭಾರತಕ್ಕೆ ವಾಪಸ್!

vijaypura accident
ಕರ್ನಾಟಕ44 mins ago

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Task force committee meeting at Kottur
ವಿಜಯನಗರ55 mins ago

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Pooja Gandhi and Vijay Ghorpade
ಕರ್ನಾಟಕ60 mins ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್1 hour ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ1 hour ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

physical abuse
ದೇಶ2 hours ago

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌