Rain News : ಹಿಂಡನ್​ ನದಿಯಲ್ಲಿ ಮುಳುಗಿದ 500 ಹೊಚ್ಚ ಹೊಸ ಕಾರುಗಳು! - Vistara News

ಆಟೋಮೊಬೈಲ್

Rain News : ಹಿಂಡನ್​ ನದಿಯಲ್ಲಿ ಮುಳುಗಿದ 500 ಹೊಚ್ಚ ಹೊಸ ಕಾರುಗಳು!

ನೊಯ್ಡಾದ ಹಿಂಡನ್​ ನದಿ ಪಕ್ಕದ ಯಾರ್ಡ್​ನಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ನದಿಯಲ್ಲಿ ಪ್ರವಾಹ ಅಧಿಕವಾಗಿ (Rain News) ಮುಳುಗಿವೆ ಎಂದು ಹೇಳಲಾಗಿದೆ.

VISTARANEWS.COM


on

Rain News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಮುಂಗಾರು ಮಳೆ (Rain News) ದೇಶಾದ್ಯಂತ ಆರ್ಭಟಿಸುತ್ತಿದೆ. ಮಳೆಯ ಅಬ್ಬರಕ್ಕೆ ನದಿಗಳೆಲ್ಲವೂ ತುಂಬಿ ಹರಿಯುತ್ತಿದ್ದು ಅಪಾಯಕಾರಿ ಮಟ್ಟವನ್ನೂ ಮೀರಿದೆ. ಇದರಿಂದಾಗಿ ಅಲ್ಲಲ್ಲಿ ಅವಾಂತರಗಳು ನಡೆಯುತ್ತಿವೆ. ಮಳೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಕಾರುಗಳು, ಜಾನುವಾರುಗಳು ಸೇರಿದಂತೆ ನಾನಾ ಬಗೆಯ ಮಳೆ ಹಾನಿಯ ದೃಶ್ಯಗಳು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಅಂತೆಯೇ ನೋಯ್ಡಾದಲ್ಲಿ 500 ಹೊಚ್ಚ ಹೊಸ ಕಾರುಗಳು ಹಿಂಡನ್​ ನದಿಯಲ್ಲಿ ಮುಳುಗಿರುವ ವಿಡಿಯೊವೊಂದು ವೈರಲ್​ ಆಗಿದೆ.

500 ಕಾರುಗಳನ್ನು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಾರ್ಡ್ ನಲ್ಲಿ ನಿಲ್ಲಿಸಲಾಗಿತ್ತು.. ಹಿಂಡನ್ ನದಿ ಉಕ್ಕಿ ಹರಿಯುತ್ತಾ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಾರುಗಳನ್ನು ಎಳೆದುಕೊಂಡು ಹೋಗಿದೆ. ಉತ್ತರ ಭಾರತದ ಕೆಲವು ಭಾಗಗಳಲ್ಲಿ ಇತಿಹಾಸದಲ್ಲಿಯೇ ಅತಿ ಹೆಚ್ಚು ಮಳೆಯಾಗಿದ್ದು ಭೀಕರ ಪ್ರವಾಹ, ಭೂಕುಸಿತ ಮತ್ತು ಇತರ ನೈಸರ್ಗಿಕ ವಿಪತ್ತುಗಳಿಗೆ ಸಾಕ್ಷಿಯಾಗಿವೆ. ಈ ಪ್ರದೇಶದಲ್ಲಿ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ನೂರಾರು ಜನರನ್ನು ಸ್ಥಳಾಂತರಿಸಲಾಗಿದೆ. ಆದರೆ, ವಸ್ತುಗಳನ್ನು ಅಲ್ಲೇ ಬಿಟ್ಟು ಹೋಗಿರುವ ಕಾರಣ ಅವುಗಳು ನೀರುಪಾಲಾಗುತ್ತಿವೆ.

ಗ್ರೇಟರ್ ನೋಯ್ಡಾದ ಸುಥಿಯಾನಾ ಗ್ರಾಮದ ಡ್ರೋನ್ ವಿಡಿಯೊ ತುಣುಕು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಯಾರ್ಡ್​​ನಲ್ಲಿ ನಿಲ್ಲಿಸಿದ್ದ ಹಲವಾರು ಕಾರುಗಳು ಪ್ರವಾಹದ ನೀರಿನಲ್ಲಿ ಮುಳುಗಿವೆ. ಅಧಿಕಾರಿಗಳ ಪ್ರಕಾರ, ಹಿಂಡನ್ ನದಿಯ ನೀರಿನ ಮಟ್ಟವು ಇದ್ದಕ್ಕಿದ್ದಂತೆ ಏರಿದ್ದು, ಪಕ್ಕದ ಪ್ರದೇಶಗಳಲ್ಲಿ ಪ್ರವಾಹಕ್ಕೆ ಕಾರಣವಾಯಿತು. ಈ ಸ್ಟಾಕ್ ಯಾರ್ಡ್ ಕೂಡ ನೀರಲ್ಲಿ ಮುಳುಗಿತು ಎಂದು ಹೇಳಿದ್ದಾರೆ.

ವಿಮೆ ಪಾವತಿಸದ ಕಾರಣ ಈ ವಾಹನಗಳಿವು ಎಂದು ಹೇಳಲಾಗುತ್ತಿದೆ. ಪೊಲೀಸ್ ಇಲಾಖೆ ವಶಪಡಿಸಿಕೊಂಡು ತಂದು ನಿಲ್ಲಿಸಿತ್ತು ಎಂದು ಹೇಳಲಾಗಿದೆ. ವಿಮೆಯ ಅವಧಿ ಮುಗಿದಿರುವುದರಿಂದ ಮಾಲೀಕರು ತಮ್ಮ ಜೇಬಿನಿಂದ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : Monsoon Diet: ಮಳೆಗಾಲದಲ್ಲಿ ಆಹಾರ ಸೇವನೆ ಹೀಗಿರಲಿ

ಕೆಲವು ವಾರಗಳ ಹಿಂದೆ, ಪರ್ವತಗಳ ಕುಸಿತದಿಂದ ವಾಹನಗಳಿಗೆ ಹಾನಿಯಾಗಿರುವ ವೀಡಿಯೊಗಳು ಹರಿದಾಡಿದ್ದವು. ಬೆಟ್ಟಗಳಿಂದ ಧಾರಾಕಾರವಾಗಿ ಹರಿದು ಬಂದಿದ್ದ ನೀರು ನಿಲ್ಲಿಸಿದ್ದ ಕಾರುಗಳನ್ನು ಎಳೆದುಕೊಂಡು ಹೋಗಿತ್ತು. ಅವು ಗೊತ್ತುಪಡಿಸಿದ ಪಾರ್ಕಿಂಗ್ ಪ್ರದೇಶವೆಂದು ಎಂದು ಹೇಳಲಾಗುತ್ತಿದೆ. ಮನಾಲಿಯಂತಹ ಗುಡ್ಡಗಾಡು ಪಟ್ಟಣಗಳು ಭಾರಿ ಮಳೆಗೆ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಹಿಮಾಚಲ ಪ್ರದೇಶದ ಪ್ರಮುಖ ರಸ್ತೆಗಳು ಮತ್ತು ಸೇತುವೆಗಳಿಗೆ ಪ್ರವಾಹದಿಂದಾಗಿ ಗಮನಾರ್ಹ ಹಾನಿಯಾಗಿದೆ.

ತೀವ್ರ ಪ್ರವಾಹದ ಪರಿಣಾಮವಾಗಿ, ಈ ಗುಡ್ಡಗಾಡು ಪ್ರದೇಶಗಳು ಮತ್ತು ಹತ್ತಿರದ ನಗರಗಳಾದ ಚಂಡೀಗಢ ಮತ್ತು ನವದೆಹಲಿ ನಡುವಿನ ಸಂಪರ್ಕವು ಅಸ್ತವ್ಯಸ್ತಗೊಂಡಿದೆ. ಎರಡೂ ನಗರಗಳು ಭಾರಿ ಮಳೆ ಮತ್ತು ಪ್ರವಾಹದಿಂದ ನಲುಗಿವೆ. ಇದು ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ. ಹವಾಮಾನ ಇಲಾಖೆ ಎಚ್ಚರಿಕೆಗಳನ್ನು ನೀಡಿದೆ.

ಸಂಭಾವ್ಯ ಹಾನಿಯನ್ನು ತಗ್ಗಿಸುವ ಸಲುವಾಗಿ ಕಾರು ಮಾಲೀಕರು ತಮ್ಮ ವಾಹನಗಳನ್ನು ವೇಗವಾಗಿ ಹರಿಯುವ ನೀರಿನಿಂದ ದೂರವಿರುವ ಎತ್ತರದ ಪ್ರದೇಶಗಳಲ್ಲಿ ನಿಲ್ಲಿಸಲು ಸೂಚಿಸಲಾಗಿದೆ. ಪ್ರವಾಹದಂತಹ ಪರಿಸ್ಥಿತಿಗಳು ಮುಂದುವರಿಯುತ್ತಿರುವುದರಿಂದ ಉತ್ತರ ಭಾರತದ ಕೆಲವು ನಗರಗಳಲ್ಲಿ ಮತ್ತಷ್ಟು ಹಾನಿಯಾಗುವ ಅಪಾಯವಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Maruti Swift : ಹೊಸ ಮಾರುತಿ ಸ್ವಿಫ್ಟ್​ ಕಾರಿನಲ್ಲಿದೆ 50ಕ್ಕೂ ಹೆಚ್ಚು ಫೀಚರ್​ಗಳು

Maruti Swift: ಕಾರಿನಲ್ಲಿ ವೈ-ಫೈ ಮೊಬೈಲ್‌ ಚಾರ್ಜರ್‌, ಹಿಂಭಾಗದಲ್ಲಿ ಏಸಿ ವೆಂಟ್‌, ಟೆಲಿಮ್ಯಾಟಿಕ್ಸ್‌ ಮತ್ತಿತರ ಹೊಸ ಫೀಚರ್​ಗಳನ್ನು ನೀಡಲಾಗಿದೆ. ಈ ನಾಲ್ಕನೆ ತಲೆಮಾರಿನ ಸ್ವಿಫ್ಟ್‌, ʼಬಿʼ ವಿಭಾಗದ ವಾಹನಗಳಲ್ಲಿ ಸಾಮಾನ್ಯವಾಗಿರುವ ಎಲ್‌ಇಡಿ ಪ್ರೊಜೆಕ್ಟರ್​, ಹೆಡ್‌ಲೈಟ್ಸ್‌ ಮತ್ತು ಟೇಲ್‌ಲೈಟ್ಸ್‌ಗಳನ್ನು ಸಹ ಒಳಗೊಂಡಿದೆ ಎಂದು ಮಾರುತಿ ಸುಜುಕಿ ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

Maruti Swift
Koo

ಬೆಂಗಳೂರು: ಐಷಾರಾಮಿ, ಆರಾಮದಾಯಕ ಮತ್ತು ಇಂಧನ ದಕ್ಷತೆಯ ಕಾರುಗಳ ವಿಭಾಗದಲ್ಲಿ (ಪ್ರೀಮಿಯಂ ಹ್ಯಾಚ್‌ಬ್ಯಾಕ್​ ) ಮಾರುತಿ ಸುಜುಕಿ ಕಂಪನಿಯು ದೇಶಿ ಮಾರುಕಟ್ಟೆಗೆ ಹೊಸದಾಗಿ ಪರಿಚಯಿಸಲಿರುವ ʼಎಪಿಕ್‌ ನ್ಯೂ ಸ್ವಿಫ್ಟ್‌ʼ ಕಾರ್‌ (Maruti Swift) 50ಕ್ಕೂ ಹೆಚ್ಚು ವೈಶಿಷ್ಟತೆಗಳನ್ನು ಒಳಗೊಂಡಿದೆ. ಇದು ನಾಲ್ಕನೇ ಪೀಳಿಗೆಯ ಸ್ವಿಫ್ಟ್ ಕಾರಾಗಿದ್ದು ಇದು 26 ಕಿಲೋಮೀಟರ್​ ಮೈಲೇಜ್ ಕೊಡುವುದಾಗಿ ಕಂಪನಿ ಹೇಳಿಕೊಂಡಿದೆ.

ಕಾರಿನಲ್ಲಿ ವೈ-ಫೈ ಮೊಬೈಲ್‌ ಚಾರ್ಜರ್‌, ಹಿಂಭಾಗದಲ್ಲಿ ಏಸಿ ವೆಂಟ್‌, ಟೆಲಿಮ್ಯಾಟಿಕ್ಸ್‌ ಮತ್ತಿತರ ಹೊಸ ಫೀಚರ್​ಗಳನ್ನು ನೀಡಲಾಗಿದೆ. ಈ ನಾಲ್ಕನೆ ತಲೆಮಾರಿನ ಸ್ವಿಫ್ಟ್‌, ʼಬಿʼ ವಿಭಾಗದ ವಾಹನಗಳಲ್ಲಿ ಸಾಮಾನ್ಯವಾಗಿರುವ ಎಲ್‌ಇಡಿ ಪ್ರೊಜೆಕ್ಟರ್​, ಹೆಡ್‌ಲೈಟ್ಸ್‌ ಮತ್ತು ಟೇಲ್‌ಲೈಟ್ಸ್‌ಗಳನ್ನು ಸಹ ಒಳಗೊಂಡಿದೆ ಎಂದು ಮಾರುತಿ ಸುಜುಕಿ ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ʼಎಪಿಕ್ ನ್ಯೂ ಸ್ವಿಫ್ಟ್ʼ ನ ಇತರ ವೈಶಿಷ್ಟತೆಗಳು

ʼಎಪಿಕ್ ನ್ಯೂ ಸ್ವಿಫ್ಟ್ʼ ಉತ್ತಮ ಇಂಧನ ದಕ್ಷತೆ ಹೊಂದಿದೆ. ಸ್ವಯಂಚಾಲಿತ ಮಾದರಿಯಲ್ಲಿ ಇಂಧನ ದಕ್ಷತೆಯು ಶೇ 14ರಷ್ಟು ಸುಧಾರಿಸಿದೆ. ಮ್ಯಾನ್ಯುವಲ್‌ನಲ್ಲಿ ಇಂಧನ ದಕ್ಷತೆಯು ಶೇ 10 ರಷ್ಟು ಸುಧಾರಿಸಿದೆ. ಮೈಲೇಜ್‌ಗೆ ಸಂಬಂಧಿಸಿದಂತೆ, ಸ್ವಯಂಚಾಲಿತ ಮಾದರಿಯಲ್ಲಿ ಮೈಲೇಜ್ 25.7 ಕಿಮೀ/ಲೀಟರ್‌ ಮತ್ತು ಮ್ಯಾನ್ಯುವಲ್‌ನಲ್ಲಿ ಇದು 24.85 ಕಿಮೀ/ಲೀಟರ್‌ ನೀಡುತ್ತದೆ.. ಇವೆರಡೂ ಈ ವಿಭಾಗದಲ್ಲಿ ಗರಿಷ್ಠ ಮೈಲೇಜ್ ಅಗಿದೆ.

ಇದನ್ನೂ ಓದಿ: Powerful Bikes : 2.5 ಲಕ್ಷ ರೂ.ಗಿಂತಲೂ ಕಡಿಮೆ ಬೆಲೆಗೆ ಸಿಗ್ತವೆ ಈ 5 ಪವರ್​ಫುಲ್ ಬೈಕ್​ಗಳು

ಸ್ವಿಫ್ಟ್‌ನಲ್ಲಿ ಬಳಸಲಾದ ಹೊಸ ಎಂಜಿನ್ ಕಾರ್ಬನ್‌ ಡೈಆಕ್ಸೈಡ್‌ (ಸಿಒ2) ಹೊರಸೂಸುವಿಕೆಯನ್ನು ಶೇ 12ವರೆಗೆ ಕಡಿಮೆ ಮಾಡುತ್ತದೆ. ಕಾರಿನ ಎಲ್ಲ ಮಾದರಿಗಳಲ್ಲಿ ಆರು ಏರ್‌ಬ್ಯಾಗ್‌ಗಳು ಇರಲಿವೆ. ಇದು ಸ್ಟ್ಯಾಂಡರ್ಡ್ ಫೀಚರ್ ಆಗಿದೆ.

ಪ್ರೀಮಿಯಂ ಹ್ಯಾಚ್ ವಿಭಾಗವು ಮುಂಬರುವ ದಿನಗಳಲ್ಲಿ ಗಮನಾರ್ಹವಾಗಿ ಬೆಳೆಯುವುದನ್ನು ನಾವು ಎದುರು ನೋಡುತ್ತಿದ್ದೇವೆ. ಸದ್ಯಕ್ಕೆ ವಾರ್ಷಿಕ 7 ಲಕ್ಷದಂತೆ ಮಾರಾಟವಾಗುತ್ತಿರುವ ಈ ವಿಭಾಗದ ಕಾರುಗಳ ಮಾರಾಟವು 2030ರ ವೇಳೆಗೆ, 10 ಲಕ್ಷಕ್ಕೆ ಏರಿಕೆಯಾಗಲಿದೆ ಎಂಬುದು ನಮ್ಮ ನಿರೀಕ್ಷೆಯಾಗಿದೆ. ಇದು ಗಮನಾರ್ಹವಾಗಿ ಬೆಳೆಯುತ್ತಿರುವ ವಿಭಾಗವಾಗಿದೆ. ಪ್ರೀಮಿಯಂ ಹ್ಯಾಚ್ ವಿಭಾಗಕ್ಕೆ ಸ್ವಿಫ್ಟ್ ಪುನಶ್ಚೇತನ ನೀಡಲಿದೆ ಎಂಬುದು ನಮ್ಮ ದೃಢ ನಂಬಿಕೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಣ್ಣಗಳ ಆಯ್ಕೆ

ಎರಡು ಆ್ಯಕ್ಸೆಸರಿ ಪ್ಯಾಕೇಜ್‌ಗಳಾದ ರೇಸಿಂಗ್ ರೋಡ್‌ಸ್ಟಾರ್ ಮತ್ತು ಥ್ರಿಲ್ ಚೇಸರ್ ನೀಡುತ್ತದೆ. ಎಪಿಕ್ ನ್ಯೂ ಸ್ವಿಫ್ಟ್ – ಎರಡು ಹೊಸ ಬಣ್ಣಗಳಾದ ಲಸ್ಟರ್ ಬ್ಲೂ ಮತ್ತು ನೋವೆಲ್ ಆರೆಂಜ್‌ನಲ್ಲಿ ಲಭ್ಯ ಇರಲಿದೆ. ಜೊತೆಗೆ ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವ್ಹೈಟ್, ಮ್ಯಾಗ್ಮಾ ಗ್ರೇ ಒಳಗೊಂಡಿರುವ ವ್ಯಾಪಕ ಶ್ರೇಣಿಯ ಬಣ್ಣಗಳಲ್ಲಿಯೂ ದೊರೆಯಲಿದೆ. ಮೂರು ಡ್ಯುಯಲ್-ಟೋನ್ ಬಣ್ಣದ ಆಯ್ಕೆಗಳಾದ – ಲಸ್ಟರ್ ಬ್ಲೂ ಜೊತೆಗೆ ಮಿಡ್‌ನೈಟ್‌ ಬ್ಲ್ಯಾಕ್ ರೂಫ್‌, ಸಿಜ್ಲಿಂಗ್ ರೆಡ್ ಜೊತೆಗೆ ಮಿಡ್‌ನೈಟ್‌ ಬ್ಲ್ಯಾಕ್ ರೂಫ್‌, ಪರ್ಲ್ ಆರ್ಕ್ಟಿಕ್ ವೈಟ್ ಜೊತೆಗೆ ಮಿಡ್‌ನೈಟ್‌ ಬ್ಲ್ಯಾಕ್ ರೂಫ್‌ ನಲ್ಲಿಯೂ ಸಹ ಲಭ್ಯ ಇವೆ

ಸ್ವಿಫ್ಟ್​ ಭಾರತದಲ್ಲಿ ಸುಮಾರು 3 ದಶಲಕ್ಷ ಗ್ರಾಹಕರನ್ನು ಹೊಂದಿದೆ

ಸ್ವಿಫ್ಟ್ ಕಾರನ್ನು ಭಾರತದಿಂದ 39 ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಹಣಕಾಸು ವರ್ಷ 2023-24 ರಲ್ಲಿ, 33,000 ಕ್ಕೂ ಹೆಚ್ಚು ಸ್ವಿಫ್ಟ್‌ಗಳನ್ನು ರಫ್ತು ಮಾಡಲಾಗಿದೆ. ಮಾರುತಿ ಸುಜುಕಿಯ ಮುಂಚೂಣಿ 3 ರಫ್ತು ಮಾದರಿಗಳಲ್ಲಿ ಸ್ವಿಫ್ಟ್ ಕೂಡ ಸೇರಿದೆ.

ಕರ್ನಾಟಕದ ಮಾರುಕಟ್ಟೆ ಹೇಗಿದೆ?

ಕರ್ನಾಟಕ ಮಾರುಕಟ್ಟೆಯಲ್ಲಿ, ಮಾರುತಿ ಸುಜುಕಿ 1,15,000 ವಾಹನಗಳನ್ನು ಮಾರಾಟ ಮಾಡಿದ್ದು, ಇದು ಶೇ 19ರಷ್ಟು ಬೆಳವಣಿಗೆಯಾಗಿದೆ. ಬೆಂಗಳೂರಿನಲ್ಲಿ 70,000 ಕಾರ್‌ಗಳನ್ನು ಮಾರಾಟ ಮಾಡಲಾಗಿದ್ದು, ರಾಜ್ಯದಲ್ಲಿನ ಒಟ್ಟಾರೆ ಮಾರಾಟದ ಶೇ 60ರಷ್ಟು ಪಾಲು ಹೊಂದಿದೆ. ಬೆಂಗಳೂರಿನಲ್ಲಿನ ಮಾರಾಟವು ಶೇ 15ರಷ್ಟು ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾರುತಿ ಸುಜುಕಿಯು 186 ಮಾರಾಟ ಕೇಂದ್ರಗಳು ಮತ್ತು 244 ಸರ್ವೀಸ್‌ ಕೇಂದ್ರಗಳನ್ನು ಹೊಂದಿದೆ.

Continue Reading

ಪ್ರಮುಖ ಸುದ್ದಿ

Powerful Bikes : 2.5 ಲಕ್ಷ ರೂ.ಗಿಂತಲೂ ಕಡಿಮೆ ಬೆಲೆಗೆ ಸಿಗ್ತವೆ ಈ 5 ಪವರ್​ಫುಲ್ ಬೈಕ್​ಗಳು

Powerful Bikes: 150 ಸಿಸಿಗಳಿಗಿಂತ ಹೆಚ್ಚಿನ ಬೈಕ್​ಗಳೇ ಅವರ ಆದ್ಯತೆಗಳಾಗಿರುತ್ತವೆ. ಹಿಂದೆಲ್ಲ ಭಾರತದ ಮಾರುಕಟ್ಟೆಯಲ್ಲಿ ಪವರ್​ಫುಲ್​ ಬೈಕ್​​ಗಳ ಸಂಖ್ಯೆ ಕಡಿಮೆಯಿದ್ದವು. ಆದರೆ, ಪರಿಸ್ಥಿತಿ ಹಿಂದಿನಂತಿಲ್ಲ. ಕಳೆದ ದಶಕದಲ್ಲಿ, ಪರ್ಫಾಮೆನ್ಸ್ ಬೈಕ್ ಗಳು ಹೆಚ್ಚು ಪ್ರವೇಶಿಸಿವೆ ಮತ್ತು ಕೈಗೆಟುಕುವ ಬೆಲೆಗೆ ದೊರೆಯುತ್ತಿವೆ.

VISTARANEWS.COM


on

Powerful Bike
Koo

ಬೆಂಗಳೂರು: ಪರ್ಫಾಮೆನ್ಸ್​ ಬೈಕ್​ಗಳ ಕಡೆಗಿನ ಕ್ರೇಜ್ ಇತ್ತೀಚಿನ ದಿನಗಳಲ್ಲಿ ಜಾಸ್ತಿಯಾಗಿದೆ. ಹೆಚ್ಚು ಸಿಸಿ ಹಾಗೂ ಅಧಿಕ ಪವರ್ ಬಿಡುಗಡೆ ಮಾಡುವ ಬೈಕ್​ಗಳನ್ನು ಹೊಸ ಪೀಳಿಗೆಯ ಜನರು ಇಷ್ಟ ಪಡುತ್ತಾರೆ. 150 ಸಿಸಿಗಳಿಗಿಂತ ಹೆಚ್ಚಿನ ಬೈಕ್​ಗಳೇ ಅವರ ಆದ್ಯತೆಗಳಾಗಿರುತ್ತವೆ. ಹಿಂದೆಲ್ಲ ಭಾರತದ ಮಾರುಕಟ್ಟೆಯಲ್ಲಿ ಪವರ್​ಫುಲ್​ ಬೈಕ್​​ಗಳ (Powerful Bikes) ಸಂಖ್ಯೆ ಕಡಿಮೆಯಿದ್ದವು. ಆದರೆ, ಪರಿಸ್ಥಿತಿ ಹಿಂದಿನಂತಿಲ್ಲ. ಕಳೆದ ದಶಕದಲ್ಲಿ, ಪರ್ಫಾಮೆನ್ಸ್ ಬೈಕ್ ಗಳು ಹೆಚ್ಚು ಪ್ರವೇಶಿಸಿವೆ ಮತ್ತು ಕೈಗೆಟುಕುವ ಬೆಲೆಗೆ ದೊರೆಯುತ್ತಿವೆ. ಜತೆಗೆ ಸ್ಪರ್ಧೆಯೂ ಹೆಚ್ಚಿದೆ. ಹೀಗೆ 2.5 ಲಕ್ಷ ರೂಪಾಯಿಗಿಂತ ಕಡಿಮೆ (ಎಕ್ಸ್​ಶೋರೂಮ್​) ಬೆಲೆಹೊಂದಿರುವ ಕೆಲವು ಬೈಕ್​ಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ. ನಿಮಗೆ ಇಷ್ಟವಾದದ್ದನ್ನು ಆಯ್ಕೆ ಮಾಡಿಕೊಳ್ಳಿ.

ಕೆಟಿಎಂ 250 ಡ್ಯೂಕ್ (31 ಬಿಹೆಚ್ ಪಿ)

ಕೆಟಿಎಂ ಡ್ಯೂಕ್ ಪವರ್​ಫುಲ್​ ಬೈಕ್​ ಮಾತ್ರವಲ್ಲದೆ ಅತ್ಯುತ್ತಮ ಹ್ಯಾಂಡ್ಲರ್ ಕೂಡ ಆಗಿದೆ. ಉತ್ತಮ ಗುಣಮಟ್ಟದ ಬಿಡಿಭಾಗಗಳು ಮತ್ತು ಫೀಚರ್​ಗಳನ್ನು ಹೊಂದಿರುವ 250 ಡ್ಯೂಕ್ ಮಾರುಕಟ್ಟೆಯಲ್ಲಿ ಛಾಪು ಮೂಡಿಸಿದೆ. ಈ ಬೈಕ್ 249 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದಿಂದ 9,250 ಆರ್ ಪಿಎಂನಲ್ಲಿ 31 ಬಿಹೆಚ್ ಪಿ ಪವರ್ ಮತ್ತು 7,250 ಆರ್ ಪಿಎಂನಲ್ಲಿ 25 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಜೆನ್-3 250 ಡ್ಯೂಕ್ ಬೈಕಿನಲ್ಲಿ ಪರಿಷ್ಕೃತ ಎರ್ಗೊನಾಮಿಕ್ಸ್, ಅಲ್ಯೂಮಿನಿಯಂ ಸ್ವಿಂಗ್ ಆರ್ಮ್ ಮತ್ತು ಕ್ವಿಕ್ ಶಿಫ್ಟರ್ ಹೊಂದಿದೆ. 250 ಡ್ಯೂಕ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.2.40 ಲಕ್ಷಗಳಾಗಿದೆ.

ಟಿವಿಎಸ್ ಅಪಾಚೆ ಆರ್ ಟಿಆರ್ 310 (35.6 ಬಿಹೆಚ್ ಪಿ)

ಅಪಾಚೆ ಆರ್ ಟಿಆರ್ 310 ಬೈಕ್ ಅಪಾಚೆ ಆರ್ ಆರ್ 310 ಬೈಕಿನ ನೇಕೆಡ್ ಆವೃತ್ತಿಯಾಗಿದೆ. ಆದರೆ ಎಂಜಿನ್ ಹೆಚ್ಚಿನ ಶಕ್ತಿ ಮತ್ತು ಟಾರ್ಕ್ ಬದಲಾವಣೆಯಿಲ್ಲ. ಆರ್ ಟಿಆರ್ 310 ಬೈಕ್ 312 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 9,700 ಆರ್ ಪಿಎಂನಲ್ಲಿ 35.6 ಬಿಹೆಚ್ ಪಿ ಪವರ್ ಮತ್ತು 6,650 ಆರ್ ಪಿಎಂನಲ್ಲಿ 28.7 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಅಪಾಚೆ ಆರ್ ಟಿಆರ್ 310 ಬೈಕ್ ಎಲೆಕ್ಟ್ರಾನಿಕ್ ವಿಜಾರ್ಡಿ ಮತ್ತು ಸೇಫ್ಟಿ ನೆಟ್​ನಂಥ ಸುರಕ್ಷತಾ ಫೀಚರ್​ಗಳಿಂ ಕೂಡಿದೆ. 2.43 ಲಕ್ಷ ರೂ.ಗಳಿಂದ 2.63 ಲಕ್ಷ ರೂ.ಗಳ ನಡುವಿನ ಬೆಲೆಯ ಮೂರು ವೇರಿಯೆಂಟ್​ಗಳು ದೊರೆಯುತ್ತವೆ.

ಬಜಾಜ್ ಡೊಮಿನಾರ್ 400 (40 ಎಚ್​ಪಿ)


ಡೊಮಿನಾರ್ 400 ಬೈಕ್ ಕೆಟಿಎಂ 390 ಡ್ಯೂಕ್ ಬೈಕಿನಿಂದ ಎರವಲು ಪಡೆದ ಎಂಜಿನ್ಹೊಂ ದಿದೆ. ಇದರ 373 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ 8,800 ಆರ್ ಪಿಎಂನಲ್ಲಿ 40 ಬಿಹೆಚ್ ಪಿ ಪವರ್ ಮತ್ತು 6,500 ಆರ್ ಪಿಎಂನಲ್ಲಿ 35 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಡೊಮಿನಾರ್ 400 ಬೈಕ್​​ನ ಪ್ಲಸ್​ ಮತ್ತು ಮೈನಸ್ ವಿಚಾರವೆಂದರೆ ಅದರ ತೂಕ. 192 ಕೆ.ಜಿ ತೂಕವನ್ನು ಹೊಂದಿರುವ ಇದು ಈ ಪಟ್ಟಿಯಲ್ಲಿ ಅತಿ ಭಾರವಾದ ಬೈಕ್ ಆಗಿದೆ. ಡೊಮಿನಾರ್ 400 ಬೈಕಿನ ಬೆಲೆಯು ರೂ.2.30 ಲಕ್ಷ ರೂಪಾಯಿ.

ಬಜಾಜ್ ಪಲ್ಸರ್ ಎನ್ಎಸ್400ಝಡ್ (40ಹೆಚ್​ಪಿ)

ಪಲ್ಸರ್ ಎನ್ ಎಸ್ 400 ಝಡ್ ಬಜಾಜ್ ನ ಪಲ್ಸರ್ ಸರಣಿಯ ಬೈಕುಗಳ ಪಟ್ಟಿಗೆ ಹೊಸ ಸೇರ್ಪಡೆ. ಇದು ಡೊಮಿನಾರ್ 400ರ ಎಂಜಿನ್ ಮತ್ತು ಫ್ರೇಮ್ ಅನ್ನು ಹಂಚಿಕೊಳ್ಳುತ್ತದೆ. ಆದರೆ 18 ಕೆಜಿ ಹಗುರ. 174 ಕೆ.ಜಿ ತೂಕ ಹೊಂದಿರುವ ಎನ್ ಎಸ್ 400 ಝಡ್ ಕಾರ್ಯಕ್ಷಮತೆಯ ವಿಷಯದಲ್ಲಿ ಸ್ಪಷ್ಟ ಪ್ರಯೋಜನ ಹೊಂದಿದೆ. ಎಬಿಎಸ್ ನೊಂದಿಗೆ ಜೊತೆಯಾಗಿ ಕಾರ್ಯನಿರ್ವಹಿಸುವ ಟ್ರಾಕ್ಷನ್ ಕಂಟ್ರೋಲ್ ಮತ್ತು ರೈಡಿಂಗ್ ಮೋಡ್ ಗಳಂತಹ ಫೀಚರ್​ಗಳಿಎ. ಪಲ್ಸರ್ ಎನ್ ಎಸ್ 400 ಝಡ್ ಬೈಕಿನ ಬೆಲೆಯು ರೂ.1.85 ಲಕ್ಷಗಳಾಗಿದೆ.

ಇದನ್ನೂ ಓದಿ: Car Care Tips : ನಿಮ್ಮ ಕಾರಿನ ಈ ಬಿಡಿಭಾಗಗಳಿಗೂ ಇವೆ ಎಕ್ಸ್​ಪೈರಿ ಡೇಟ್​​; ಅವುಗಳು ಯಾವವು ಎಂಬುದು ತಿಳಿದಿರಲಿ

ಟ್ರಯಂಫ್ ಸ್ಪೀಡ್ 400 (40hp)

ಟ್ರಯಂಫ್ ಸ್ಪೀಡ್ 400 ಹಿಂದಿನ ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿದೆ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ, 176 ಕೆಜಿ ತೂಕವನ್ನು ಹೊಂದಿರುವ ಇದು ಬಜಾಜ್ ಪಲ್ಸರ್ ಎನ್ ಎಸ್ 400 ಝಡ್ ಗಿಂತ ಕೇವಲ 2 ಕೆ.ಜಿ ಹೆಚ್ಚು ತೂಕ ಹೊಂದಿದೆ. ಟ್ರಯಂಫ್ ಬೈಕ್ 398 ಸಿಸಿ ಎಂಜಿನ್ ಸಹಾಯದಿಂದ 8,000 ಆರ್ ಪಿಎಂನಲ್ಲಿ 40 ಬಿಹೆಚ್ ಪಿ ಪವರ್ ಮತ್ತು 6,500 ಆರ್ ಪಿಎಂನಲ್ಲಿ 37.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. 2.34 ಲಕ್ಷ ರೂ.ಗಳಲ್ಲಿ, ಟ್ರಯಂಫ್ ‘ವಾಲ್ಯೂ ಫಾರ್ ಮನಿ.

Continue Reading

ಪ್ರಮುಖ ಸುದ್ದಿ

Car Care Tips : ನಿಮ್ಮ ಕಾರಿನ ಈ ಬಿಡಿಭಾಗಗಳಿಗೂ ಇವೆ ಎಕ್ಸ್​ಪೈರಿ ಡೇಟ್​​; ಅವುಗಳು ಯಾವವು ಎಂಬುದು ತಿಳಿದಿರಲಿ

Car Care Tips: ಕಾರು ಅಥವಾ ಇನ್ಯಾವುದೇ ವಾಹನವನ್ನು ಸರಿಯಾಗಿ ಮೆಂಟೇನ್​ ಅದು ಕೆಲಸ ಮಾಡುತ್ತಲೇ ಇರುತ್ತದೆ ಎಂಬುದು ಒಂದು ನಂಬಿಕೆ. ಆದರೆ ಅವಧಿ ಮುಗಿದ ಬಿಡಿಭಾಗಗಳನ್ನು ಹೊಂದಿರುವ ಕಾರನ್ನು ಓಡಿಸುವುದು ಖಂಡಿತವಾಗಿಯೂ ಅಪಾಯಕಾರಿ. ಹೀಗಾಗಿ ಬಿಡಿಭಾಗಗಳು ಏನೂ ಆಗಿಲ್ಲ. ಸರಿಪಡಿಸಬೇಡ ಎಂಬ ಮನಸ್ಥಿತಿಯಿಂದ ಹೊರಕ್ಕೆ ಬರಲೇಬೇಕು.

VISTARANEWS.COM


on

Car Care tips
Koo

ಬೆಂಗಳೂರು: ಕೆಲವರಿಗೆ ಈ ಅಭ್ಯಾಸ ಇಲ್ಲ ಹಾಗೂ ಇನ್ನೂ ಕೆಲವರು ಈ ವಿಷಯದ ಬಗ್ಗೆ ನಿಧಾನವಾಗಿ ಜಾಗೃತರಾಗುತ್ತಿದ್ದಾರೆ. ಅದೇನೆಂದರೆ ವಸ್ತುಗಳ ಎಕ್ಸ್​ಪೈರಿ ಡೇಟ್​ (Expiry Date) ಪರಿಶೀಲನೆ ಮಾಡುವುದು. ಅಂದರೆ ತಾವು ಖರೀದಿಸುವ ಯಾವುದೇ ವಸ್ತುವಿನ ಉತ್ಪಾದನಾ ಮತ್ತು ಮುಕ್ತಾಯ ದಿನಾಂಕವನ್ನು ಪರಿಶೀಲಿಸುವುದು. ಸಾಕಷ್ಟು ಮಂದಿ ಮನೆಗೆ ತರುವ ದೀನಸಿ ವಸ್ತುಗಳಿಗೆ ಮಾತ್ರ ಇದು ಸೀಮಿತ ಎಂದು ನಂಬಿ ದ್ದಾರೆ. ಆದರೆ, ಉತ್ಪಾದನಾ ಘಟಕವೊಂದರಲ್ಲಿ ತಯಾರಾಗುವ ಎಲ್ಲ ವಸ್ತುಗಳಿಗೂ ಎಕ್ಸ್​ಪೈರಿ ಡೇಟ್​ ಇರುತ್ತದೆ. ಹೀಗಾಗಿ ಈ ಸಲಹೆಯು ಕಾರಿನ ಬಿಡಿ ಭಾಗಗಳು ಮತ್ತು ಪರಿಕರಗಳಿಗೂ ಅನ್ವಯಿಸುತ್ತದೆ ಎಂದು ಮತ್ತೊಮ್ಮೆ ಹೇಳಬೇಕಾಗಿಲ್ಲ. ಆದರೆ, ಬಹುತೇಕ ಕಾರು ಮಾಲೀಕರು ಈ ಬಗ್ಗೆ ಜಾಗೃತವಾಗಿಲ್ಲ. ಕೆಟ್ಟು ಕಳಚಿ ಬಿದ್ದ ಮೇಲೆ ಮಾತ್ರ ಸರಿಪಡಿಸುತ್ತಾರೆ. (Car Care Tips) ಇದು ಸರಿಯಾದ ಅಭ್ಯಾಸವಲ್ಲ ಎಂಬುದು ಸತ್ಯ.

ಕಾರು ಅಥವಾ ಇನ್ಯಾವುದೇ ವಾಹನವನ್ನು ಸರಿಯಾಗಿ ಮೆಂಟೇನ್​ ಆದರೆ ಅದು ಕೆಲಸ ಮಾಡುತ್ತಲೇ ಇರುತ್ತದೆ ಎಂಬುದು ಒಂದು ನಂಬಿಕೆ. ಆದರೆ ಅವಧಿ ಮುಗಿದ ಬಿಡಿಭಾಗಗಳನ್ನು ಹೊಂದಿರುವ ಕಾರನ್ನು ಓಡಿಸುವುದು ಖಂಡಿತವಾಗಿಯೂ ಅಪಾಯಕಾರಿ. ಹೀಗಾಗಿ ‘ಬಿಡಿಭಾಗಗಳು ಏನೂ ಆಗಿಲ್ಲ. ಸರಿಪಡಿಸಬೇಡ’ ಎಂಬ ಮನಸ್ಥಿತಿಯಿಂದ ಹೊರಕ್ಕೆ ಬರಲೇಬೇಕು. ಯಾಕೆಂದರೆ ಒಂದು ಭಾಗಕ್ಕೆ ಆಗಿರುವ ಹಾನಿಯು ವಾಹನದ ಸಂಪೂರ್ಣ ದಕ್ಷತೆಯನ್ನು ಹಾಳು ಮಾಡುವ ಜತೆಗೆ ಪ್ರಯಾಣವನ್ನು ಅಪಾಯಕ್ಕೆ ತಳ್ಳಬಹುದು. ಹೀಗಾಗಿ ನಿಮ್ಮ ಕಾರಿನಲ್ಲಿ ಯಾವೆಲ್ಲ ವಸ್ತುಗಳನ್ನು ಅವಧಿ ಮುಗಿದ ತಕ್ಷಣ ಬದಲಾಯಿಸಬೇಕು ಎಂಬುದನ್ನು ಈ ಕೆಳಗೆ ತಿಳಿಸಿಕೊಡಲಾಗಿದೆ.

ಎಂಜಿನ್ ಆಯಿಲ್​

ಎಂಜಿನ್ ಆಯಿಲ್ ಎಂಜಿನ್​ ಒಳಗಿನ ಘರ್ಷಣೆಯನ್ನು ನಿಯಂತ್ರಿಸುವ ಬಹುಮುಖ್ಯ ದ್ರಾವಣ. 12ರಿಂದ 18 ತಿಂಗಳ ಒಳಗೆ ಎಂಜಿನ್ ಆಯಿಲ್ ಬದಲಾಯಿಸಬೇಕು ಹಾಗೂ ಬಳಸಲು ಶುರು ಮಾಡಿದ ಮೇಲೆ ಅದರ ಅವಧಿ ಮುಕ್ತಾಯಗೊಳ್ಳುತ್ತದೆ. ಅಥವಾ 10,000 ಕಿ.ಮೀ.ಗೆ ಬದಲಾವಣೆ ಮಾಡಲೇಬೇಕು. ಕೆಲವರು ಇದನ್ನು ನಿರ್ಲಕ್ಷ್ಯ ಮಾಡುತ್ತಾರೆ. ಸರ್ವಿಸ್​ ಮಾಡಿದಾಗ ಮಾಡಿದರಾಯ್ತು ಎಂದು ಅಂದುಕೊಳ್ಳುತ್ತಾರೆ. ಇದು ಎಂಜಿನ್​ ಒಳಗಿನ ಭಾಗಗಳ ಸವೆತ ಹಾಗೂ ಮುರಿತಕ್ಕೆ ಕಾರಣವಾಗುತ್ತದೆ.

ಬ್ರೇಕ್ ಆಯಿಲ್

ಕಾರಿನಲ್ಲಿ ಸುರಕ್ಷತೆ ಎಂದರೆ ಮೊದಲು ಬರುವುದು ಸೂಕ್ತವಾಗಿ ಕಾರ್ಯನಿರ್ವಹಿಸುವ ಬ್ರೇಕಿಂಗ್ ಸಿಸ್ಟಮ್​. ಬ್ರೇಕ್​ ವ್ಯವಸ್ಥೆಯಲ್ಲಿ ಬ್ರೇಕ್​ ಆಯಿಲ್​ ಕೆಲಸ ದೊಡ್ಡದು.. ಪ್ರತಿ 10,000 ಕಿ.ಮೀಗೆ ಬ್ರೇಕ್ ಆಯಿಲ್ ಬಾಳಿಕೆ ಮುಗಿಯುತ್ತದೆ. ಹೀಗಾಗಿ ಪ್ರತಿ ಮೂರು ವರ್ಷಗಳಿಗೊಮ್ಮೆ ಬ್ರೇಕ್ ಆಯಿಲ್ ಅನ್ನು ಸಂಪೂರ್ಣವಾಗಿ ಬದಲಾಯಿಸಬೇಕು. ಆಯಿಲ್ ದಪ್ಪವಾದರೆ ಬ್ರೇಕಿಂಗ್ ದಕ್ಷತೆ ಇಳಿಯುತ್ತದೆ.

ಎಸಿ ರೆಫ್ರಿಜರೇಟರ್ ರೀಫಿಲ್​

ಎಸಿ ರೆಫ್ರಿಜರೇಟರ್ ಗ್ಯಾಸ್​ ರಿಫಿಲ್ ಮಾಡುವ ಕೆಲಸವನ್ನು ಕಾಲಕಾಲಕ್ಕೆ ಮಾಡಬೇಕು. ಎಸಿ ವೆಂಟ್ ಗಳಿಂದ ಹೊರಬರುವ ಗಾಳಿಯು ಸಾಕಷ್ಟು ತಂಪಾಗಿಲ್ಲದಿದ್ದರೆ ವಾಹನದಲ್ಲಿನ ಹವಾನಿಯಂತ್ರಣ ವ್ಯವಸ್ಥೆ ಸರಿಯಿಲ್ಲ ಎಂದು ಅರ್ಥ. ಫಿಲ್ಟರ್ ಜತೆಗೆ ಎಸಿ ಗ್ಯಾಸ್​ ನ ಬಾಳಿಕೆಯೂ ಮುಗಿದಿದೆ ಎಂದರ್ಥ. ಹೀಗಾಗಿ ಅದನ್ನು ಅವಧಿ ಮುಗಿದಾಗ ಬದಲಾಯಿಸಬೇಕು.

ಟೈರ್ ಗಳು

ಕಾರನ್ನು ಓಡಿಸಿಲ್ಲ ಮತ್ತು ಸವೆದಿಲ್ಲ ಎಂದ ತಕ್ಷಣ ಕಾರಿನ ಟೈರಿನ ಬಾಳಿಕೆ ಮುಗಿದಿಲ್ಲ ಎಂದರ್ಥವಲ್ಲ. ಯಾಕೆಂದರೆ ಅದಕ್ಕೂ ಒಂದು ಎಕ್ಸ್​ಪಯರೀ ಡೇಟ್​ ಇದೆ. ಮೊದಲಾಗಿ 3 ಎಂಎಂಗಿಂತ ಕಡಿಮೆ ಥ್ರೆಡ್​ ಇದ್ದರೆ ಸವೆದಿದೆ ಎಂದರ್ಥ. ಆದರೆ, ಟೈರ್​ನ ಮೇಲೆ ಬರೆದಿರುವ ಎಕ್ಸ್​ಪಯರೀ ಡೇಟ್​ ಪರಿಶೀಲನೆ ಮಾಡಲೇಬೇಕು. ಹೊರ ಅಂಚಿ ಉತ್ಪಾದನಾ ವಾರ ಮತ್ತು ಉತ್ಪಾದನೆಯ ವರ್ಷವನ್ನು ಬರೆದಿರಲಾಗುತ್ತದೆ. ಉದಾಹರಣೆಗೆ ಡಾಟ್ ಸಂಖ್ಯೆ 5011 ಇದ್ದರೆ ಟೈರ್ ಅನ್ನು 2011 ರ 50 ನೇ ವಾರದಲ್ಲಿ ತಯಾರಿಸಲಾಗಿದೆ ಎಂದರ್ಥ.

ಕ್ಯಾಬಿನ್ ಏರ್ ಫಿಲ್ಟರ್

ಕ್ಯಾಬಿನ್ ಏರ್ ಫಿಲ್ಟರ್ ಕ್ಯಾಬಿನ್ ಏರ್ ಫಿಲ್ಟರ್ ಬಾಳಿಕೆ ಕಾರು ಚಾಲನೆ ಮಾಡುವ ಪ್ರದೇಶದ ಗಾಳಿಯ ಗುಣಮಟ್ಟ ಅವಲಂಬಿಸಿರುತ್ತದೆ. ಆದರೆ, ಕಾರನ್ನು 25,000 ಕಿ.ಮೀ ನಿಂದ 30,000 ಕಿ.ಮೀ ಓಡಿಸಿದ ನಂತರ ಅದನ್ನು ಬದಲಾಯಿಸಲೇಬೇಕು. ನೀವು ಡಿಫ್ರಾಸ್ಟ್ ಆನ್ ಮಾಡಿದಾಗ ಆದರೆ ಕ್ಯಾಬಿನ್ ನಲ್ಲಿ ಗಾಳಿಯ ಹರಿವು ತುಂಬಾ ದುರ್ಬಲವಾಗಿದ್ದರೆ ಬ್ಲೋವರ್ ಸ್ವಿಚ್ ಮೂಲಕ ಶಬ್ದ ಹೆಚ್ಚಾಗಿದ್ದರೆ ಫಿಲ್ಟರ್ ಬಾಳಿಕೆ ಮುಗಿದಿದೆ ಎಂದರ್ಥ.

ಏರ್ ಬ್ಯಾಗ್ ಗಳು

ಏರ್ ಬ್ಯಾಗ್ ಗಳು ಮತ್ತು ಸೀಟ್ ಟೈಟರ್ ಗಳ ಬಾಳಿಕ 10 ವರ್ಷಕ್ಕೆ ಮುಗಿಯುತ್ತದೆ. ಅದಕ್ಕಿಂತ ಹೆಚ್ಚಾಗಿ ಬೆಲ್ಟ್ ಹರಿದಿದ್ದರೆ ತಕ್ಷಣ ಬದಲಾಯಿಸಬೇಕಾಗುತ್ತದೆ.

ಪ್ರಥಮ ಚಿಕಿತ್ಸಾ ಕಿಟ್

ಪ್ರಥಮ ಚಿಕಿತ್ಸಾ ಕಿಟ್ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಕಾರುಗಳಲ್ಲಿ ಇರುತ್ತವೆ. ಅದರು ಅಗತ್ಯ ಕೂಡ. ಆದರೆ, ಅದರಲ್ಲಿರುವ ಕೆಲವು ಮುಲಾಮುಗಳು ಮತ್ತು ಅನೇಕ ರೀತಿಯ ಡ್ರೆಸ್ಸಿಂಗ್ ವಸ್ತುಗಳು ಮುಕ್ತಾಯ ದಿನಾಂಕಗಳನ್ನು ಹೊಂದಿರುತ್ತವೆ. ಆದರೆ ಹೆಚ್ಚಿನ ಕಿಟ್​ಗಳು ಉತ್ಪಾದನೆಯ ದಿನಾಂಕದಿಂದ 3 ರಿಂದ 5 ವರ್ಷಗಳ ಜೀವಿತಾವಧಿ ಹೊಂದಿರುತ್ತವೆ.

ಇದನ್ನೂ ಓದಿ: Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

ಟೈಮಿಂಗ್ ಬೆಲ್ಟ್

ಇದು ಎಂಜಿನ್ ಒಳಗಿನ ಸಾಧನ. ಟೈಮಿಂಗ್ ಬೆಲ್ಟ್ ಬದಲಾಯಿಸುವ ಅವಧಿಯ ಅಂತರವು ಕಂಪನಿ ಮತ್ತು ಕಾರು ಮಾದರಿಯಿಂದ ಬದಲಾಗುತ್ತದೆ. ಸಾಮಾನ್ಯವಾಗಿ ಇದನ್ನು 60,000 ಮತ್ತು 80,000 ಕಿಲೋಮೀಟರ್ ನಡುವೆ ಬದಲಾಯಿಸಬೇಕು. ಕಂಪನಿ ಜತೆ ಈ ಬಗ್ಗೆ ಚರ್ಚೆ ನಡೆಸಬೇಕು. ದೋಷಯುಕ್ತ ಬೆಲ್ಟ್ ಅನ್ನು ಬಳಸಿದರೆ ಅದು ಕಾಲಾನಂತರದಲ್ಲಿ ಎಂಜಿನ್ ಹಾಳಾಗಲು ಕಾರಣವಾಗಬಹುದು.

Continue Reading

ಆಟೋಮೊಬೈಲ್

Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

Mahindra XUV 3XO: ಎಕ್ಸ್​ಯುವಿ 3 ಎಕ್ಸ್ ಒ ದೇಶಾದ್ಯಂತ ಗ್ರಾಹಕರ ಮನ ಗೆದ್ದಿದೆ. ಮೊದಲ 10 ನಿಮಿಷಗಳಲ್ಲಿ 27000 ಕ್ಕೂ ಹೆಚ್ಚು ಬುಕಿಂಗ್ ಗಳನ್ನು ದಾಖಲಿಸಿದೆ. ಇದು ಮಹೀಂದ್ರಾ ಕಂಪನಿಯು ಹೊಸ ಎಸ್ ಯುವಿ ಕಡೆಗೆ ಹೊಸ ಆಕರ್ಷಣೆಯನ್ನು ಪ್ರದರ್ಶಿಸಿದೆ

VISTARANEWS.COM


on

XVU300
Koo

ನವದೆಹಲಿ: ಭಾರತದ ಮುಂಚೂಣಿ ಎಸ್​ಯುವಿ (Sport Utility Vehicle) ತಯಾರಕ ಕಂಪನಿಯಾದ ಮಹೀಂದ್ರಾ ಆ್ಯಂಡ್​ ಮಹೀಂದ್ರಾ ಲಿಮಿಟೆಡ್ ಇತ್ತೀಚೆಗೆ ಬಿಡುಗಡೆ ಮಾಡಿದ ಕಾಂಪ್ಯಾಕ್ಟ್ ಎಸ್​​ಯುವಿ ಕಾರಾಗಿರುವ ಎಕ್ಸ್​ಯುವಿ 3ಎಕ್ಸ್ (Mahindra XUV 3XO) ಕಾರು ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಮೇ 15ರಂದು ಬುಕಿಂಗ್ ಆರಂಭಗೊಂಡ ಕೇವಲ ಒಂದು ಗಂಟೆಯಲ್ಲಿ (60 ನಿಮಿಷ) 50 ಸಾವಿರ ಬುಕಿಂಗ್​ ಪಡೆದುಕೊಂಡಿದೆ. ಈ ಮೂಲಕ ಬಿಡುಗಡೆಗೊಂಡು ಬುಕಿಂಗ್ ಆರಂಭಗೊಂಡ ಒಂದೇ ಗಂಟೆಯಲ್ಲಿ 50 ಸಾವಿರ ಬುಕಿಂಗ್​ ಪಡೆದ ವಿನೂತನ ಸಾಧನೆ ಮಾಡಿದೆ.

ಎಕ್ಸ್​ಯುವಿ 3 ಎಕ್ಸ್ ಒ ದೇಶಾದ್ಯಂತ ಗ್ರಾಹಕರ ಮನ ಗೆದ್ದಿದೆ. ಮೊದಲ 10 ನಿಮಿಷಗಳಲ್ಲಿ 27000 ಕ್ಕೂ ಹೆಚ್ಚು ಬುಕಿಂಗ್ ಗಳನ್ನು ದಾಖಲಿಸಿದೆ. ಇದು ಮಹೀಂದ್ರಾ ಕಂಪನಿಯು ಹೊಸ ಎಸ್ ಯುವಿ ಕಡೆಗೆ ಹೊಸ ಆಕರ್ಷಣೆಯನ್ನು ಪ್ರದರ್ಶಿಸಿದೆ. ಈ ಮೈಲಿಗಲ್ಲು ಎಕ್ಸ್ ಯುವಿ 3 ಎಕ್ಸ್ ಒನ ಅತ್ಯುತ್ತಮ ವಿನ್ಯಾಸ, ಪ್ರೀಮಿಯಂ ಒಳಾಂಗಣ, ಆರಾಮದಾಯಕ ಸವಾರಿ, ಅತ್ಯಾಧುನಿಕ ತಂತ್ರಜ್ಞಾನ, ರೋಮಾಂಚಕ ಕಾರ್ಯಕ್ಷಮತೆ ಮತ್ತು ಸಾಟಿಯಿಲ್ಲದ ಸುರಕ್ಷತೆಯ ಕಡೆಗೆ ಗ್ರಾಹಕರ ಗಮನವಾಗಿದೆ.

ಈ ಕುರಿತು ಮಹೀಂದ್ರಾ ಆ್ಯಂಡ್​ ಮಹಿಂದ್ರಾ ಲಿಮಿಟೆಡ್ ನ ಆಟೋಮೋಟಿವ್ ವಿಭಾಗದ ಅಧ್ಯಕ್ಷ ವೀಜಯ್ ನಕ್ರಾ ಮಾತನಾಡಿ, ಎಕ್ಸ್ ಯುವಿ 3 ಎಕ್ಸ್ ಒ ಬಿಡುಗಡೆಯಾದ ಸ್ವಲ್ಪ ಸಮಯದಲ್ಲೇ 50,000 ಬುಕಿಂಗ್ ಗಳನ್ನು ಸ್ವೀಕರಿಸಿದೆ ಎಂದು ಘೋಷಿಸಲು ನಾವು ಹೆಮ್ಮೆಪಡುತ್ತೇವೆ. ಇದು ನಮ್ಮ ಗ್ರಾಹಕರು ನಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿ. ಇಂತಹ ಅಗಾಧ ಮಾರುಕಟ್ಟೆ ಪ್ರತಿಕ್ರಿಯೆಯು ನಾವೀನ್ಯತೆ ಮತ್ತು ನಿರೀಕ್ಷೆಗಳನ್ನು ಮೀರಿ ಮೌಲ್ಯವನ್ನು ತಲುಪಿಸುವ ನಮ್ಮ ಬದ್ಧತೆಗೆ ಪೂರಕ. ಎಕ್ಸ್ ಯುವಿ 3 ಎಕ್ಸ್ ಸಾರಿಗೆ ವ್ಯವಸ್ಥೆಯ ಭವಿಷ್ಯದತ್ತ ಒಂದು ಮಹತ್ವದ ಹೆಜ್ಜೆ. ಇದನ್ನು ಗ್ರಾಹಕರಿಗೆ ಬೇಕಾದ ಹಾಗೆ ಮತ್ತು ಇನ್ನಷ್ಟು ಸೌಲಭ್ಯಗಳನ್ನ ಕೊಡುವುದಕ್ಕೆ ವಿನ್ಯಾಸಗೊಳಿಸಲಾಗಿದೆ. ಈ ನಂಬಲಾಗದ ಬೇಡಿಕೆಯನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಮತ್ತು ನಮ್ಮ ಗ್ರಾಹಕರಿಗೆ ಎಕ್ಸ್ ಯುವಿ 3 ಎಕ್ಸ್ ಒ ಅನ್ನು ತಲುಪಿಸಲು ಪ್ರಾರಂಭಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ಎಕ್ಸ್ ಯುವಿ 3 ಎಕ್ಸ್ ಒ ವಿತರಣೆಯು ಮೇ 26, 2024 ರಂದು ಪ್ರಾರಂಭವಾಗಲಿದೆ. ಉತ್ಸಾಹವನ್ನು ನಿರೀಕ್ಷಿಸಿ ನಾವು ಈಗಾಗಲೇ 10000 ಕ್ಕೂ ಹೆಚ್ಚು ಯುನಿಟ್ ಗಳನ್ನು ಉತ್ಪಾದಿಸಿದ್ದೇವೆ. ಗ್ರಾಹಕರ ಅನುಭವದ ಮೇಲೆ ಹೆಚ್ಚಿನ ಗಮನ ಹರಿಸುತ್ತೇವೆ. ಸಮಯೋಚಿತ ವಿತರಣೆಗ ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಮಹೀಂದ್ರಾ ತೆಗೆದುಕೊಳ್ಳುತ್ತದೆ. ಎಕ್ಸ್ ಯುವಿ 3 ಎಕ್ಸ್ ಒ ಗಾಗಿ ಬುಕಿಂಗ್ ಆನ್ ಲೈನ್ ನಲ್ಲಿ ಮತ್ತು ಎಲ್ಲಾ ಅಧಿಕೃತ ಮಹೀಂದ್ರಾ ಡೀಲರ್ ಶಿಪ್ ಗಳಲ್ಲಿ ತೆರೆದಿರುತ್ತದೆ.

Continue Reading
Advertisement
IPL 2024
ಕ್ರೀಡೆ5 mins ago

IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

Cannes Star Fashion
ಫ್ಯಾಷನ್8 mins ago

Cannes Star Fashion: ಕ್ರಾಪ್‌ ಟುಕ್ಸೆಡೊ ಧರಿಸಿ ತಾಯಿಗೆ ಶ್ರದ್ಧಾಂಜಲಿ ಅರ್ಪಿಸಿದ ನಟ ಪ್ರತೀಕ್‌ ಬಬ್ಬರ್

Reservation in outsourcing
ಪ್ರಮುಖ ಸುದ್ದಿ16 mins ago

Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

Karnataka weather Forecast
ಮಳೆ30 mins ago

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

MLC N Ravikumar Spoke in North East Graduate Constituency Election Preliminary meeting in hosapete
ವಿಜಯನಗರ33 mins ago

MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಎನ್. ರವಿಕುಮಾರ್

Lok Sabha Election
ದೇಶ39 mins ago

Lok Sabha Election: 5ನೇ ಹಂತದಲ್ಲಿ ಕೇವಲ ಶೇ.56ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Public Exam Good news for students of classes 5 and 8 and 9 Important decision of Karnataka government
ಶಿಕ್ಷಣ43 mins ago

Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

KKR vs SRH
ಕ್ರೀಡೆ54 mins ago

KKR vs SRH: ನಾಳೆ ಮೊದಲ ಕ್ವಾಲಿಫೈಯರ್‌ ಪಂದ್ಯ; ಗೆದ್ದವರಿಗೆ ನೇರ ಫೈನಲ್‌ ಸೋತವರಿಗೆ ಇನ್ನೊಂದು ಅವಕಾಶ

Air Crashes
ವಿದೇಶ56 mins ago

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

Phone Tapping
ಕರ್ನಾಟಕ1 hour ago

Phone Tapping: ಎಚ್‌ಡಿಕೆ ಫೋನ್‌ ಟ್ಯಾಪ್‌ ಮಾಡೋಕೆ, ಅವರೇನು ಟೆರರಿಸ್ಟಾ? ಎಂದ ಡಿಕೆಶಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌