Increase mileage : ನಿಮ್ಮ ಕಾರಿನಲ್ಲಿ ಜಾಸ್ತಿ ಮೈಲೇಜ್​ ಸಿಗಬೇಕಾ? ಈ ತಂತ್ರಗಳನ್ನು ಬಳಸಿ - Vistara News

ಆಟೋಮೊಬೈಲ್

Increase mileage : ನಿಮ್ಮ ಕಾರಿನಲ್ಲಿ ಜಾಸ್ತಿ ಮೈಲೇಜ್​ ಸಿಗಬೇಕಾ? ಈ ತಂತ್ರಗಳನ್ನು ಬಳಸಿ

ಪೆಟ್ರೋಲ್​ ಬೆಲೆ ಗಗನಕ್ಕೆ ಮುಟ್ಟಿರುವ ಕಾರಣ ಮೈಲೇಜ್​ ಎಂಬುದು ವಾಹನ ಮಾಲೀಕರ ಪಾಲಿಗೆ ಆದ್ಯತೆಯ ವಿಷಯವಾಗಿದೆ. ಅದಕ್ಕಾಗಿ ಉತ್ತಮ ಚಾಲನಾ ಹವ್ಯಾಸಗಳನ್ನು (High Mileage Trick) ಬೆಳೆಸಿಕೊಳ್ಳಬೇಕು.

VISTARANEWS.COM


on

Milage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪೆಟ್ರೋಲ್​, ಡೀಸೆಲ್ (Fuel Rate)​ ಬೆಲೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು, ವಾಹನ ಮಾಲೀಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಎಲ್ಲಿಗಾದರೂ ಪ್ರಯಾಣ ಹೊರಟರೆ ಇಂಧನ ದರವೇ ಜಾಸ್ತಿಯಾಗುತ್ತದೆ. ಅದು ಪ್ರಯಾಣದ ಒಟ್ಟು ಸಂತೋಷವನ್ನು ಕಸಿದುಕೊಳ್ಳುತ್ತದೆ. ಹೀಗಾಗಿ ಗಗನಕ್ಕೇರುತ್ತಿರುವ ಇಂಧನ ವೆಚ್ಚವನ್ನು ಸರಿದೂಗಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ನಿಮ್ಮ ವಾಹನದಲ್ಲಿ ಪ್ರತಿ ಲೀಟರ್​ಗೆ ಹೆಚ್ಚು ಮೈಲೇಜ್​ ಪಡೆಯುವುದು. ಅದಕ್ಕೆ ಕೆಲವೊಂದು ಸರಳ ಸೂತ್ರಗಳನ್ನು ಪಾಲಿಸಬೇಕು (Increase mileage). ಅವುಗಳನ್ನು ಇಲ್ಲಿ ವಿವರಿಸಲಾಗಿದೆ.

ನಿಧಾನಕ್ಕೆ ಆಕ್ಸಿಲೇಟರ್ ಕೊಡಿ

ಡ್ರೈವಿಂಗ್ ಮಾಡುವಾಗ ಸಾಧ್ಯವಾದಷ್ಟು ನಿಧಾನಕ್ಕೆ ಆಕ್ಸಿಲೇಟರ್​ ಒತ್ತುವ ಅಭ್ಯಾಸ ಬೆಳೆಸಿ. ನಿಧಾನವಾಗಿ ಹೋಗುವ ವಾಹನದ ವೇಗ ವೃದ್ಧಿಸಲು ಆಕ್ಸಿಲೇಟರ್​ ಒತ್ತಲೇಬೇಕು ನಿಜ. ಆದರೆ ಏಕಾಏಕಿ ಆಕ್ಸಿಲೇಟರ್​ ಒತ್ತುವ ಮೂಲಕ ವೇಗ ಹೆಚ್ಚಿಸಲು ಹೋದರೆ ಇಂಧನ ಏಕಾಏಕಿ ಉರಿದು ಹೊಗೆಯಾಗುತ್ತದೆ. ಈ ರೀತಿ ಇಂಧನ ಹೆಚ್ಚು ಉರಿದು ಹೋಗದಂತೆ ನೋಡಿಕೊಳ್ಳುವುದಕ್ಕೆ ನಯವಾದ ಮತ್ತು ಸ್ಥಿರವಾದ ರೀತಿಯಲ್ಲಿ ವೇಗವನ್ನು ಹೆಚ್ಚಿಸಬೇಕು. ಅದಕ್ಕಾಗಿ ನಿಧಾನವಾಗಿ ಆಕ್ಸಿಲರೇಟರ್ ಒತ್ತಬೇಕು. ಅಗತ್ಯ ಇರುವಷ್ಟು ವೇಗವು ಕೆಟ್ಟದ್ದಲ್ಲ, ಆದರೆ ವೇಗವನ್ನು ನಿಧಾನಕ್ಕೆ ಹೆಚ್ಚಿಸಿದರೆ ಮಾತ್ರ ಉತ್ತಮ ಮೈಲೇಜ್ ಸಿಗುತ್ತದೆ.

ನಿಮ್ಮ ವಾಹನ ಚಲಾಯಿಸುವುದನ್ನು ಮ್ಯಾರಥಾನ್ ಓಟ ಎಂದೇ ಭಾವಿಸಬೇಕು. ಎಷ್ಟು ವೇಗ ಬೇಕು ಸರಾಗವಾಗಿ ಹೋಗುವುದಕ್ಕೆ ಎಷ್ಟು ಸಾಮರ್ಥ್ಯ ಅಗತ್ಯ ಎಂಬುದನ್ನು ಸ್ಪಷ್ಟವಾಗಿದ್ದರೆ ಹೆಚ್ಚು ಮೈಲೇಜ್ ಪಡೆಯಬಹುದು. ಬೇರೆ ವಾಹನದ ಚಾಲಕರ ಜತೆ ಜಿದ್ದಿಗೆ ಬಿದ್ದು ಏಕಾಏಕಿ ವೇಗ ಹೆಚ್ಚಿಸಲು ಯತ್ನಿಸಿದರೆ ಮೈಲೇಜ್​ ಡ್ರಾಪ್​ ಆಗುವುದು ಖಚಿತ.

ಕಾಲಕಾಲಕ್ಕೆ ಸರ್ವಿಸ್​ ಮಾಡಿಸಿ

ಕಾರು ಮಾಲೀಕರು ಮಾಡುವ ಒಂದು ಸಾಮಾನ್ಯ ತಪ್ಪು ಎಂದರೆ ಅದು ಹಣ ಉಳಿಸಲೆಂದು ಸೂಕ್ತ ಕಾಲಕ್ಕೆ ಮೆಂಟೇನೆನ್ಸ್ ಮಾಡದಿರುವುದು ಮತ್ತು ಕಾರು ಕೆಟ್ಟುಹೋದ ನಂತರವೇ ಅದನ್ನು ಸರಿಪಡಿಸುವುದು. ಆದರೆ ಕಾರನ್ನು ಆರೋಗ್ಯಕರವಾಗಿಡಲು ಕಾಲಕಾಲಕ್ಕೆ ಸರ್ವಿಸ್ ಮಾಡಿಸಲೇಬೇಕು. ಕೆಲವೊಂದು ಪಾರ್ಟ್​​ಗಳನ್ನೂ ಬದಲಾಯಿಸಬೇಕು. ಇಲ್ಲದಿದ್ದರೆ ನಿಮ್ಮ ಕಾರು ಸರಿಯಾಗಿ ಮೈಲೇಜ್ ಕೊಡುವುದಕ್ಕೆ ಸಾಧ್ಯವೇ ಇಲ್ಲ.

ಎಂಜಿನ್ ಆಯಿಲ್ ಜೊತೆಗೆ ಏರ್ ಮತ್ತು ಆಯಿಲ್ ಫಿಲ್ಟರ್ ನಂತಹ ಕೆಲವು ಬಿಡಿಭಾಗಗಳನ್ನು ನಿಯಮಿತವಾಗಿ ಬದಲಾಯಿಸಬೇಕಾಗುತ್ತದೆ. ಏರ್ ಫಿಲ್ಟರ್ ಧೂಳು ಎಂಜಿನ್ ಗೆ ಪ್ರವೇಶಿಸುವುದನ್ನು ತಡೆಯುತ್ತದೆ. ಆದರೆ ಪರಿಸರದ ಪರಿಸ್ಥಿತಿಗಳಿಂದಾಗಿ ಕೆಲವಷ್ಟು ಸಾವಿರ ಕಿಲೋಮೀಟರ್ ಓಡಿದ ನಂತರ ಪಿಲ್ಟರ್ ಧೂಳಿನಿಂದ ಮುಚ್ಚಿಕೊಳ್ಳುತ್ತದೆ. ಹೀಗಾಗಿ ಎಂಜಿನ್​ಗೆ ಕಡಿಮೆ ಗಾಳಿ ಹೋಗುವ ಕಾರಣ ಒಳಗೆ ದಹ್ಯ ಕ್ರಿಯೆ ಸರಿಯಾಗಿ ನಡೆಯುವುದಿಲ್ಲ. ಇದರಿಂದ ವಾಹನದಲ್ಲಿ ಸಮಸ್ಯೆ ಉಂಟಾಗುತ್ತದೆ.

ಎಂಜಿನ್ ಆಯಿಲ್ ಒಳಗಿರುವ ಭಾಗಗಳನ್ನು ನಯಗೊಳಿಸುತ್ತದೆ. ಈ ಆಯಿಲ್​ ನಿಧಾನವಾಗಿ ತನ್ನ ಸ್ಥಿಗ್ಧತೆ ಕಳೆದುಕೊಳ್ಳುತ್ತದೆ. ಹೀಗಾಗಿ ಆಯಿಲ್​ ಬದಲಾಯಿಸದಿರುವುದು ಎಂಜಿನ್ ಅನ್ನು ಹೆಚ್ಚು ಒತ್ತಡಕ್ಕೆ ಸಿಲುಕಿಸುತ್ತದೆ. ಇದರಿಂದ ಮೈಲೇಜ್ ಕಡಿಮೆಯಾಗುತ್ತದೆ. ಹೀಗಾಗಿ ಕಾಲಕಾಲಕ್ಕೆ ಸರ್ವಿಸ್ ಮಾಡಿಸಿದರೆ ಮಾತ್ರ ಉತ್ತಮ ಮೈಲೇಜ್ ಪಡೆಯುವುದಕ್ಕೆ ಸಾಧ್ಯವಿದೆ.

ಟೈರ್​ನಲ್ಲಿ ಗಾಳಿಯ ಒತ್ತಡ ಸಮರ್ಪಕವಾಗಿರಲಿ

ಟೈರ್​ಗಳಲ್ಲಿ ಸೂಕ್ತ ಪ್ರಮಾಣದ ಗಾಳಿಯ ಒತ್ತಡ ಇರುವಂತೆ ನೋಡಿಕೊಳ್ಳುವುದು ಅತ್ಯಗತ್ಯ. ಅದರಿಂದ ಮಾತ್ರ ಉತ್ತಮ ಮೈಲೇಜ್​ ಸಿಗುತ್ತದೆ. ಟೈರ್​ಗಳಲ್ಲಿ ಗಾಳಿ ಕಡಿಮೆ ಇದ್ದರೆ ವಾಹನ ಮತ್ತು ನೆಲಕ್ಕೆ ಹೆಚ್ಚು ಅಂಟಿಕೊಳ್ಳುತ್ತವೆ. ಇದರಿಂದ ತಿರುಗುವುದಕ್ಕೆ ಕಷ್ಟ ವಾಗುತ್ತದೆ (ರೋಲಿಂಗ್ ಪ್ರತಿರೋಧ). ಇಂಥ ಸಂದರ್ಭದಲ್ಲಿ ಎಂಜಿನ್ ನ ಹೆಚ್ಚಿನ ಶಕ್ತಿಯನ್ನು ರೋಲ್ ಮಾಡಲು ಬಳಸಬೇಕಾಗುತ್ತದೆ. ಇದು ಅದರ ಇಂಧನ ಬಳಕೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ, ಟೈರ್ ಗಳಲ್ಲಿ ಶಿಫಾರಸು ಮಾಡಿದ ಗಾಳಿಯ ಒತ್ತಡ ಇರಬೇಕು. ವಾರಕ್ಕೊಮ್ಮೆ ಅಥವಾ ಲಾಂಗ್ ಡ್ರೈವ್ ಗೆ ಹೋಗುವ ಮೊದಲು ಟೈರ್ ಒತ್ತಡವನ್ನು ಪರಿಶೀಲಿಸಿಬೇಕು. ಟೈರ್ ಒತ್ತಡದ ಮಾಹಿತಿಯನ್ನು ಸಾಮಾನ್ಯವಾಗಿ ಚಾಲಕನ ಸೈಡ್ ಡೋರ್ ಕೆಳಗೆ ಬರೆದಿರಲಾಗುತ್ತದೆ. ಅವುಗಳನ್ನು ಒಂದು ಬಾರಿ ನೋಡಿಕೊಳ್ಳಬೇಕು.

ಹೊಸ ಮಾಡೆಲ್​ನ ವಾಹನಗಳಲ್ಲಿ ಟೈರ್​ ಪ್ರೆಶರ್​ ಮಾಹಿತಿ ಇನ್​ಸ್ಟ್ರುಮೆಂಟ್​ ಕ್ಲಸ್ಟರ್​ನಲ್ಲಿ ಡಿಸ್​ಪ್ಲೇ ಆಗುತ್ತದೆ. ಅವುಗಳ ಬಗ್ಗೆಯೂ ಗಮನ ಇಟ್ಟುಕೊಳ್ಳಬೇಕು.

ಮುಂದಿರುವ ವಾಹನಗಳ ಅಂತರ ಗಮನಿಸಿ ಓಡಿಸಿ

ಮುಂದಿರುವ ರಸ್ತೆಯನ್ನು ನೋಡಿ ಮತ್ತು ಸಂಚಾರದ ವೇಗವನ್ನು ಸ್ಥಿರವಾಗಿಟ್ಟುಕೊಳ್ಳುವುದು ಮೈಲೇಜ್​ ಪಡೆಯುವ ಮತ್ತೊಂದು ವಿಧಾನ. ಅಂದರೆ ನೀವು ಚಲಾಯಿಸುವ ವಾಹನದ ಮುಂದಿರುವ ವಾಹನ ಹಾಗೂ ನಿಮ್ಮ ವಾಹನಗಳ ನಡುವಿನ ಅಂತರವನ್ನು ಅಂದಾಜು ಮಾಡಿಕೊಂಡು ಚಲಾಯಿಸುವುದು. ಈ ಸ್ಥಿತಿ ಪ್ರಮುಖವಾಗಿ ಎದುರಾಗುವುದು ನಗರದೊಳಗೆ.

ಕೆಲವರು ವೇಗವಾಗಿ ಹೋಗಿ ಮುಂದಿರುವ ವಾಹನ ಸಮೀಪದಲ್ಲಿ ಬ್ರೇಕ್​ ಹಾಕುತ್ತದೆ. ಇದರಿಂದ ಬ್ರೇಕಿಂಗ್ ಶಕ್ತಿ ಹಾಗೂ ಅನಗತ್ಯವಾಗಿ ಗೇರ್ ಬದಲಾಯಿಸಬೇಕಾಗುತ್ತದೆ. ಅಂತರ ಕಾಪಾಡಿಕೊಂಡು ಹೋಗುವ ಮೂಲಕ ಸುಮ್ಮನೆ ಆಕ್ಸಿಲೇಟರ್ ಕೊಡುವುದನ್ನು ಹಾಗೂ ಅನಗತ್ಯ ಬ್ರೇಕ್ ಹಾಕುವುದನ್ನು ತಪ್ಪಿಸಬಹುದು. ಸಿಟಿಯಲ್ಲಾದರೆ ಟ್ರಾಫಿಕ್ ಸಿಗ್ನಲ್ ಗಳನ್ನು ಮುಂಚಿತವಾಗಿ ಗುರುತಿಸಿ ಅನಗತ್ಯ ಬ್ರೇಕ್ ಹಾಕುವುದು ತಪ್ಪಿಸಬಹುದು. ಸ್ಥಿರವಾದ ವೇಗದಲ್ಲಿ ಚಾಲನೆ ಮಾಡುವ ಮೂಲಕ, ನೀವು ಇಂಧನವನ್ನು ಉಳಿಸಬಹುದು ಮತ್ತು ವಾಹನದ ಬ್ರೇಕ್ ಸವೆಯುವುದನ್ನು ಕೂಡ ತಪ್ಪಿಸಬಹುದು.

ಸಿಗ್ನಲ್​ಗಳಲ್ಲಿ ಎಂಜಿನ್ ಆಫ್​ ಮಾಡಿ

ಕೆಲವರು ಎರಡು ನಿಮಿಷಗಳಷ್ಟು ಹೊತ್ತು ಸಿಗ್ನಲ್ ಇದ್ದರೂ ಎಂಜಿನ್​ ಸ್ಟಾರ್ಟ್​ ಮಾಡಿಟ್ಟುಕೊಂಡಿರುತ್ತಾರೆ. ಇದರಿಂದ ಅನಗತ್ಯವಾಗಿ ಇಂಧನ ಖರ್ಚಾಗುತ್ತದೆ. ಹೀಗಾಗಿ ಸಿಗ್ನಲ್​ಗಳಲ್ಲಿ ಎಂಜಿನ್ ಆಫ್​ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ. ಅದೇ ರೀತಿ ಎಲ್ಲಾದರೂ ವಾಹನ ನಿಲ್ಲಿಸಿದಾಗಲೂ ತಕ್ಷಣ ಎಂಜಿನ್ ಆಫ್​ ಮಾಡಿ. ಇದರಿಂದ ಸಾಕಷ್ಟು ಇಂಧನ ಉಳಿಸಬಹುದು.

ಹೊಸ ವಾಹನಗಳಲ್ಲಿ ಸ್ಟಾರ್ಟ್​, ಸ್ಪಾಟ್ ಎಂಬ ಹೊಸ ತಾಂತ್ರಿಕತೆ ಇರುತ್ತದೆ. ಇದು ವಾಹನನ್ನು ತಟಸ್ಥವಾಗಿ ಇಟ್ಟ ತಕ್ಷಣ ಎಂಜಿನ್ ಆಫ್​ ಮಾಡುತ್ತದೆ. ಮತ್ತೆ ಕ್ಲಚ್ ಒತ್ತಿದಾಗ ಎಂಜಿನ್ ಸ್ಟಾರ್ಟ್​ ಆರಂಭವಾಗುತ್ತದೆ. ಈ ಅಭ್ಯಾಸದಿಂದ ಮೈಲೇಜ್ ಜಾಸ್ತಿ ಸಿಗುವ ಜತೆಗೆ ಪರಿಸರಕ್ಕೂ ಪೂರಕವಾಗಿರುತ್ತದೆ.

ಅನಗತ್ಯ ಭಾರ ಹಾಕಬಾರದು

ಎಲ್ಲಾ ತಯಾರಕರು ವಾಹನದ ಸುರಕ್ಷತೆಯ ಮೇಲೆ ಪರಿಣಾಮ ಬೀರದೆ ವಾಹನದ ತೂಕವನ್ನು ಸಾಧ್ಯವಾದಷ್ಟು ಕಡಿಮೆ ಮಾಡಲು ಪ್ರಯತ್ನಿಸುತ್ತಾರೆ. ಒಟ್ಟಾರೆ ತೂಕವು ಕಡಿಮೆಯಾದಾಗ, ಎಂಜಿನ್ ಮೇಲೆ ಕಡಿಮೆ ಒತ್ತಡ ಸೃಷ್ಟಿಯಾಗುತ್ತದೆ. ಹಗುರವಾದ ವಾಹನವು ಎಂಜಿನ್ ನಿಂದ ಚಾಲಿತ ಭಾರವಾದ ವಾಹನಕ್ಕಿಂತ ಕಡಿಮೆ ಇಂಧನವನ್ನು ಬಳಸುತ್ತದೆ. ಆದ್ದರಿಂದ, ಸಾಧ್ಯವಾದಷ್ಟು ವಾಹನವನ್ನು ಹಗುರವಾಗಿಡುವುದು ಅತ್ಯಗತ್ಯ. ಹೀಗಾಗಿ ನಿಮ್ಮ ವಾಹನದಲ್ಲಿ ಅನಗತ್ಯ ವಸ್ತುಗಳು ಇದ್ದರೆ, ಬೂಟ್​ ಸ್ಪೇಸ್​ನಲ್ಲಿ ಬೇಡದ ವಸ್ತುಗಳನ್ನು ತುಂಬಿದ್ದರೆ ಅವರುಗಳನ್ನು ತೆಗೆದು ಹಾಕುವ ಮೂಲಕ ಮೈಲೇಜ್ ಹೆಚ್ಚಿಸಬಹುದು.

ಇದನ್ನೂ ಓದಿ : Monsoon car care tips : ಮಳೆಗಾಲದಲ್ಲಿ ನಿಮ್ಮ ಕಾರನ್ನು ಈ ರೀತಿ ಮೆಂಟೇನ್ ಮಾಡಿ

ಕಾರು ತಯಾರಕರು ತಮ್ಮ ವಾಹನಗಳನ್ನು ಸಾಧ್ಯವಾದಷ್ಟು ಏರೋಡೈನಾಮಿಕ್ಸ್​ಗೆ ಪೂರಕವಾಗಿ ವಿನ್ಯಾಸಗೊಳಿಸುತ್ತಾರೆ. ಆದಾಗ್ಯೂ, ಕಾರಿನ ರೂಫ್ ರ್ಯಾಕ್ ಗಾಳಿಯ ಪ್ರತಿರೋಧವನ್ನು ಹೆಚ್ಚಿಸುತ್ತದೆ. ಕೆಲವು ವಾಹನಗಳ ಟಾಪ್​ ಮೇಲೆಯೂ ಸರಕುಗಳನ್ನು ಇಡುತ್ತಾರೆ. ಇದು ಕೂಡ ಮೈಲೇಜ್​ ಕಡಿಮೆಯಾಗಲು ಕಾರಣವಾಗುತ್ತದೆ.

ಗುಣಮಟ್ಟದ ಇಂಧನ ಹಾಕಿಸಿ

ಕಲಬೆರಕೆ ಇಂಧನವು ಇಂಧನ ದಕ್ಷತೆಯನ್ನು ಕಡಿಮೆ ಮಾಡುವುದಲ್ಲದೆ, ಎಂಜಿನ್ ಗೆ ಹಾನಿ ಮಾಡುತ್ತದೆ. ನಿಮ್ಮ ವಾಹನವನ್ನು ಇಂಧನ ಹಾಕುವ ಮೊದಲು ಇಂಧನದ ಗುಣಮಟ್ಟ ಪರಿಶೀಲಿಸಿ. ಇಂದು, ನೀವು ಯಾವುದೇ ಪಂಪ್ ನಲ್ಲಿ ಮಾರಾಟವಾಗುವ ಇಂಧನದ ಸಾಂದ್ರತೆಯನ್ನು ಪರಿಶೀಲನೆ ಮಾಡಬಹುದು. ಹೆದ್ದಾರಿಯಲ್ಲಿ ಸಂಚರಿಸುವ ವೇಳೆ ಸಣ್ಣಪುಟ್ಟ ಬಂಕ್​ಗಳಲ್ಲಿ ಆಗುವ ಮೋಸದಿಂದ ತಪ್ಪಿಸಿಕೊಳ್ಳಿ. ಉತ್ತಮ ಗುಣಮಟ್ಟದ ಇಂಧನದಿಂದ ಮಾತ್ರ ಮೈಲೇಜ್​ ಹೆಚ್ಚಿಸಲು ಸಾಧ್ಯ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆಟೋಮೊಬೈಲ್

Maruti Suzuki: ಶೀಘ್ರ ರಸ್ತೆಗಿಳಿಯಲಿದೆ ಬರೋಬ್ಬರಿ 26 ಕಿ.ಮೀ ಮೈಲೇಜ್ ಕೊಡುವ ಮಾರುತಿ ಸ್ವಿಫ್ಟ್​; ಶುರುವಾಗಿದೆ ಬುಕಿಂಗ್​

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಮಾರುತಿ ಸುಜುಕಿಯ (Maruti Suzuki) 4ನೇ-ಜನ್ ಸ್ವಿಫ್ಟ್‌ ಗಾಗಿ 1,450 ಕೋಟಿ ರೂ. ಹೂಡಿಕೆ ಮಾಡಿದ್ದು,2030 ರ ವೇಳೆಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಉತ್ಪಾದನೆಯು 10 ಲಕ್ಷ ವರೆಗೆ ಬೆಳೆಯುವ ನಿರೀಕ್ಷೆ ಇದೆ. ಹೊಸ ಸ್ವಿಫ್ಟ್ ಹೊಸ ಎಂಜಿನ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬರಲಿದೆ.

VISTARANEWS.COM


on

By

Maruti Suzuki
Koo

ನವದೆಹಲಿ: ಮಾರುತಿ ಸುಜುಕಿ (Maruti Suzuki) ಇಂಡಿಯಾ ಲಿಮಿಟೆಡ್ (MSIL) ತನ್ನ ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ (hatchback) ಸ್ವಿಫ್ಟ್‌ನ ಹೊಸ-ಪೀಳಿಗೆ ಮಾದರಿಯನ್ನು (4th-gen Swift) ಶೀಘ್ರ ಮಾರುಕಟ್ಟೆಗೆ ಇಳಿಸಲಿದೆ. ಕಾರನ್ನು ಈಗಾಗಲೇ ಕಂಪನಿ ಪರಿಚಯಿಸಿದ್ದು ಬುಕಿಂಗ್ ಕೂಡ ಆರಂಭಗೊಂಡಿದೆ. ಈ ಕಾರಿನ ಮಾಡೆಲ್​ಗಾಗಿ ಕಂಪನಿಯು ಸುಮಾರು 1,450 ಕೋಟಿ ರೂ. ಹೂಡಿಕೆ ಮಾಡಿದ್ದು, ಇದು ಹೊಸ Z-ಸರಣಿ 1.2L ಎಂಜಿನ್‌ ಜತೆಗೆ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸ್ವಿಫ್ಟ್ ನ 4 ನೇ ಪೀಳಿಗೆಯ ಬೆಲೆಗಳು 6.49 ಲಕ್ಷ ರೂ. ನಿಂದ ಪ್ರಾರಂಭವಾಗಿ 9.64 ಲಕ್ಷ ರೂ. ವರೆಗೆ ಇರುತ್ತದೆ. ಇದು ಎಕ್ಸ್​ ಶೋರೂಮ್​ ಬೆಲೆಯಾಗಿದೆ.

ಆರು ಏರ್‌ಬ್ಯಾಗ್‌ಗಳು, ಎಲ್ಲಾ ಆಸನಗಳಿಗೆ 3 ಪಾಯಿಂಟ್ ಸೀಟ್‌ಬೆಲ್ಟ್‌ಗಳೊಂದಿಗೆ ರಿಮೈಂಡರ್‌ಗಳು, ಎಬಿಎಸ್ ಸೇರಿದಂತೆ ಹಲವು ಸುರಕ್ಷತಾ ಫೀಚರ್​ಗಳು ಹೊಚ್ಚ ಹೊಸ ಜೆನ್​ 4 ಸ್ವಿಫ್ಟ್​ನಲ್ಲಿ ಇರಲಿವೆ. ಪ್ರತಿ ಲೀಟರ್‌ಗೆ 25.75 ಕಿ.ಮೀ. ವರೆಗೆ ಮೈಲೇಜ್​ ನೀಡುವ ಮೂಲಕ ಸ್ವಿಫ್ಟ್​ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗುವುದು ಖಾತರಿ. ಹೊಸ ಮಾದರಿಯ ಸ್ವಿಫ್ಟ್​​ನ ಬುಕಿಂಗ್ ಮೇ 1ರಿಂದ ಆರಂಭಗೊಂಡಿದ್ದು, 11,000 ರೂಪಾಯಿ ಟೋಕನ್ ಮೊತ್ತ ನೀಡಿ ಕಾಯ್ದಿರಿಸಬಹುದು.

ಹ್ಯಾಚ್​ ಬ್ಯಾಕ್​ ಸೆಗ್ಮೆಂಟ್​ನಲ್ಲಿ ಸ್ವಿಫ್ಟ್​ ಪ್ರಾಬಲ್ಯ

19 ವರ್ಷಗಳಿಂದ ಭಾರತದ ರಸ್ತೆಗಳಲ್ಲಿ ಓಡುತ್ತಿರುವ ಸಿಫ್ಟ್ ಕಾರಿನ ಮೊದಲ ಮಾಡೆಲ್​ ಅನ್ನು 2005 ರಲ್ಲಿ ಬಿಡುಗಡೆ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ 29 ಲಕ್ಷ ಸ್ವಿಫ್ಟ್ ಮಾರಾಟ ಮಾಡಿರುವುದಾಗಿ ಕಂಪನಿ ಹೇಳಿಕೊಂಡಿದೆ. 2011 ರಲ್ಲಿ 2 ನೇ ಪೀಳಿಗೆಯ ಸ್ವಿಫ್ಟ್​ ಪರಿಚಯಿಸಲಾಯಿತು. ನಂತರ 2018 ರಲ್ಲಿ 3ನೇ ಪೀಳಿಗೆಯನ್ನು ರಸ್ತೆಗೆ ಇಳಿಯಿತು. ಸ್ವಿಫ್ಟ್ ತನ್ನ ಮೊದಲ 10 ಲಕ್ಷ ಯೂನಿಟ್​ಗಳ ಮಾರಾಟವನ್ನು 2013 ರಲ್ಲಿ ಪೂರ್ಣಗೊಳಿಸಿತ್ತು ಮತ್ತು 2018 ರ ವೇಳೆಗೆ 20 ಲಕ್ಷದ ಗಡಿ ದಾಟಿ ಈ ಸೆಗ್ಮೆಂಟ್​ನಲ್ಲಿ ಪ್ರಾಬಲ್ಯ ಸಾಧಿಸಿತು.

2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಆದ್ದರಿಂದ ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಆರ್ಥಿಕ ಚಟುವಟಿಕೆ ಹೆಚ್ಚಾಗಲಿದ್ದು ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಬೇಡಿಕೆ ಉಂಟಾಗುವ ಸಾಧ್ಯತೆ ಇದೆ. ಭಾರತದಲ್ಲಿ ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಕಾರಿನ ಮಾಲೀಕತ್ವ ಹೆಚ್ಚಾದಂತೆ ಹ್ಯಾಚ್‌ಬ್ಯಾಕ್ ವಿಭಾಗವು ಗ್ರಾಹಕರಿಗೆ ಹೆಚ್ಚು ಪ್ರಿಯವಾಗಲಿದೆ. ಹೀಗಾಗಿ ಹ್ಯಾಚ್‌ಬ್ಯಾಕ್ ಕಾರುಗಳ ಅಭಿವೃದ್ಧಿಯನ್ನು ವಿಸ್ತರಿಸುತ್ತಿದ್ದೇವೆ ಎಂದು ಮಾರುತಿ ಸುಜುಕಿಯ ಎಂಡಿ ಮತ್ತು ಸಿಇಒ ಹಿಸಾಶಿ ಟೇಕುಚಿ ಹೇಳಿದರು.


ಸುಜುಕಿಗೆ ಪ್ರಮುಖ ಮಾರುಕಟ್ಟೆ

ಭಾರತವು ಸುಜುಕಿಗೆ ಪ್ರಮುಖ ಮಾರುಕಟ್ಟೆಯಾಗಿದೆ. ವೈವಿಧ್ಯಮಯ ಗ್ರಾಹಕರ ಬೇಡಿಕೆಗಳನ್ನು ಪೂರೈಸುವುದು ಮುಖ್ಯವಾಗಿರುವುದರಿಂದ ಹ್ಯಾಚ್​ಬ್ಯಅಕ್​ ವಿಭಾಗದ ಮೇಲೆ ನಮ್ಮ ಹೆಚ್ಚಿನ ಗಮನವಿದೆ. ಹೊಸ ಸ್ವಿಫ್ಟ್ ಈ ವಿಭಾಗದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಪಡೆಯಲಿದೆ ಎಂದು ಅವರು ತಿಳಿಸಿದರು.

ಸ್ಪರ್ಧೆಯಲ್ಲಿ ಹಲವು ಕಾರುಗಳು

ಹ್ಯಾಚ್‌ಬ್ಯಾಕ್ ಸ್ವಿಫ್ಟ್‌ ಗೆ ಪ್ರತಿ ಸ್ಪರ್ಧಿಯಾಗಿ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಟಾಟಾ ಆಲ್ಟ್ರೋಜ್ . ಹ್ಯುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ಸೇರಿದಂತೆ ಮೈಕ್ರೋ ಎಸ್‌ಯುವಿಗಳು ಮಾರುಕಟ್ಟೆಯಲ್ಲಿವೆ. ಇವುಗಳು ಇದೇ ಶ್ರೇಣಿಯಲ್ಲಿನ ಬೆಲೆಯನ್ನು ಹೊಂದಿವೆ.

ಕಳೆದ 3- 4 ವರ್ಷಗಳಲ್ಲಿ ಒಟ್ಟು ಪ್ರಯಾಣಿಕ ವಾಹನ ಮಾರಾಟ ಶೇಕಡಾ 47 ರಷ್ಟಿದ್ದು, ಇದರಲ್ಲಿ ಸಣ್ಣ ಕಾರು ಮಾರುಕಟ್ಟೆಯ ಪಾಲು 2024ನೇ ಹಣಕಾಸು ವರ್ಷದಲ್ಲಿ ಸುಮಾರು ಶೇ. 28ರಷ್ಟಾಗಿದೆ. ಮಾರುತಿ ಸುಜುಕಿ ಹ್ಯಾಚ್‌ಬ್ಯಾಕ್ ವಿಭಾಗದ ಬೇಡಿಕೆ 2026 ಅಂತ್ಯ ಅಥವಾ 2027 ರ ವೇಳೆಗೆ ಪುನರುಜ್ಜೀವನಗೊಳ್ಳುವ ನಿರೀಕ್ಷೆಯಿದೆ ಎಂದು ಹಿಸಾಶಿ ಟೇಕುಚಿ ಹೇಳಿದರು.

ಇದನ್ನೂ ಓದಿ: Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಬೆಳವಣಿಗೆ ಭಾರತದಲ್ಲಿನ ಒಟ್ಟು ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಶೇ. 28ರಷ್ಟು ಪಾಲನ್ನು ಪಡೆದುಕೊಳ್ಳುತ್ತವೆ. ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಪಾರ್ಥೋ ಬ್ಯಾನರ್ಜಿ ಪ್ರಕಾರ, ಪ್ರಸ್ತುತ ಒಟ್ಟು 7 ಲಕ್ಷ ವಾರ್ಷಿಕ ಉತ್ಪಾದನೆ ಹೊಂದಿರುವ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗವು 2030 ರ ವೇಳೆಗೆ 10 ಲಕ್ಷಕ್ಕೆ ಬೆಳೆಯಬಹುದು. ಮಾರುತಿ ಪ್ರಸ್ತುತ ಸ್ವಿಫ್ಟ್ ಮತ್ತು ಬಲೆನೊದಂತಹ ಮಾದರಿಗಳೊಂದಿಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಶೇ. 62ರಷ್ಟು ಪಾಲನ್ನು ಹೊಂದಿದೆ.

Continue Reading

ವಾಣಿಜ್ಯ

Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

Tata Motors: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಯನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ತನ್ನ ಇ-ಕಾರ್ಗೊ ಸಾರಿಗೆ ಪರಿಹಾರಗಳನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ಇದು ಶೂನ್ಯ ಮಾಲಿನ್ಯ ಹೊರಹೊಮ್ಮುವ ಮಿನಿ ಟ್ರಕ್ ಆಗಿದೆ.

VISTARANEWS.COM


on

New Tata Ace EV 1000 launched by Tata Motors
Koo

ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ (Tata Motors) ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಬಿಡುಗಡೆ ಮಾಡಿದ್ದು, ಈ ಮೂಲಕ ತನ್ನ ಇ-ಕಾರ್ಗೊ ಸಾರಿಗೆ ಪರಿಹಾರಗಳನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ಕಟ್ಟಕಡೆಯ ಮೈಲು ತಲುಪಲು ಪೂರಕವಾಗಿ ಈ ವಾಹನವನ್ನು ಕ್ರಾಂತಿಕಾರಕವಾಗಿ ಅಭಿವೃದ್ಧಿಪಡಿಸಲಾಗಿದೆ.

ಏಸ್ ಇವಿ ವಿಶೇಷತೆ ಏನು?

ಹೊಸದಾದ ಏಸ್ ಇವಿ ವಾಹನವು ಶೂನ್ಯ ಮಾಲಿನ್ಯ ಹೊರಹೊಮ್ಮುವ ಮಿನಿ ಟ್ರಕ್ ಆಗಿದ್ದು, 1 ಟನ್‌ವರೆಗೆ ಪೇಲೋಡ್ ಅನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 161 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು. ತನ್ನ ಗ್ರಾಹಕರಿಂದ ಅತ್ಯಮೂಲ್ಯವಾದ ಸಲಹೆಗಳನ್ನು ಪಡೆದುಕೊಂಡು ಅದಕ್ಕೆ ತಕ್ಕಂತೆ ಈ ಏಸ್ ಇವಿಯನ್ನು ಅಭಿವೃದ್ಧಿಪಡಿಸಲಾಗಿದೆ. ಈ ಹೊಸ ಶ್ರೇಣಿಯ ವಾಹನವು ಎಫ್ಎಂಸಿಜಿ, ಬೇವರೇಜಸ್, ಪೇಂಟ್ಸ್ & ಲ್ಯೂಬ್ರಿಕೆಂಟ್ಸ್, ಎಲ್‌ಪಿಜಿ & ಡೈರಿ ಉತ್ಪನ್ನಗಳ ಸಾಗಣೆ ಅಗತ್ಯತೆಗಳನ್ನು ಪೂರೈಸಲಿದೆ.

ಇದನ್ನೂ ಓದಿ: UGCET 2024: ಯುಜಿಸಿಇಟಿ ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ ನೀಡಿದ ಕೆಇಎ; ಕೊನೆಯ ದಿನಾಂಕ ಯಾವಾಗ?

ದೇಶಾದ್ಯಂತ 150ಕ್ಕೂ ಹೆಚ್ಚು ಎಲೆಕ್ಟ್ರಿಕ್ ವೆಹಿಕಲ್ ಸಪೋರ್ಟ್ ಸೆಂಟರ್‌ಗಳ ಬೆಂಬಲದೊಂದಿಗೆ ಈ ಏಸ್ ಇವಿ ವಾಹನವು ಅತ್ಯಾಧುನಿಕ, ಸುಧಾರಿತ ಬ್ಯಾಟರಿ ಮ್ಯಾನೇಜ್ಮೆಂಟ್ ಸಿಸ್ಟಂ, ಫ್ಲೀಟ್ ಎಡ್ಜ್ ಟೆಲಿಮ್ಯಾಟಿಕ್ಸ್ ಸಿಸ್ಟಂ ಮತ್ತು ಅತ್ಯುತ್ತಮ ಸಾಮರ್ಥ್ಯವನ್ನು ಹೊಂದಿದ ವಾಹನವಾಗಿದೆ.

ಟಾಟಾ ಸಮೂಹ ಸಂಸ್ಥೆಗಳ ಅಂಗವಾಗಿರುವ Tata UniEVerse ಅಗಾಧವಾದ ಸಾಮರ್ಥ್ಯಗಳನ್ನು ಬಳಸಿಕೊಂಡು ಈ ಏಸ್ ಇವಿಯನ್ನು ಸಿದ್ಧಪಡಿಸಲಾಗಿದೆ. ಗ್ರಾಹಕರಿಗೆ ಸಮಗ್ರ ಇ-ಕಾರ್ಗೊ ಮೊಬಿಲಿಟಿ ಪರಿಹಾರವನ್ನು ನೀಡಲು ದೇಶದ ಪ್ರಮುಖ ಹಣಕಾಸು ಸಂಸ್ಥೆಗಳ ಪಾಲುದಾರಿಕೆಯನ್ನೂ ಸಹ ಹೊಂದಲಾಗಿದೆ. ಇದು ಬಹುಮುಖ ಕಾರ್ಗೊ ಡೆಕ್‌ಗಳೊಂದಿಗೆ ಲಭ್ಯವಿದೆ ಮತ್ತು ದೇಶಾದ್ಯಂತ ಎಲ್ಲಾ ಟಾಟಾ ಮೋಟರ್ಸ್ ವಾಣಿಜ್ಯ ವಾಹನಗಳ ಡೀಲರ್ ಶಿಪ್‌ಗಳಲ್ಲಿ ಮಾರಾಟವಾಗಲಿದೆ. ಇದರ ಬೆಲೆ ಸುಮಾರು 9 ಲಕ್ಷ ರೂ. ಆಗುತ್ತದೆ.

ಇದನ್ನೂ ಓದಿ: Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

ಟಾಟಾ ಮೋಟರ್ಸ್ ವಾಣಿಜ್ಯ ವಾಹನಗಳ ಎಸ್‌ಸಿವಿ & ಪಿಯು ವಿಭಾಗದ ಉಪಾಧ್ಯಕ್ಷ & ಬ್ಯುಸಿನೆಸ್ ಹೆಡ್ ವಿನಯ್ ಪಾಠಕ್ ಈ ಕುರಿತು ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ನಮ್ಮ ಏಸ್ ಇವಿ ಗ್ರಾಹಕರು ಸರಿಸಾಟಿಯಿಲ್ಲದ ಅನುಭವವನ್ನು ಪಡೆಯುವ ಮೂಲಕ ಅತ್ಯಮೂಲ್ಯ ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ. ಇದೇ ವೇಳೆ ಅವರು ಲಾಭವನ್ನು ಮತ್ತು ಸುಸ್ಥಿರತೆಯನ್ನು ಪಡೆದುಕೊಂಡಿದ್ದಾರೆ. ಕ್ರಾಂತಿಕಾರಕ ಶೂನ್ಯ ಮಾಲಿನ್ಯದ ಕಟ್ಟಕಡೆಯ ಸಾರಿಗೆ ಪರಿಹಾರಗಳ ರಾಯಭಾರಿಗಳಾಗಿ ಈ ಗ್ರಾಹಕರು ಹೊರಹೊಮ್ಮಿದ್ದಾರೆ.

ಇದೀಗ ಏಸ್ ಇವಿ 1000 ಬಿಡುಗಡೆಯೊಂದಿಗೆ ಗ್ರಾಹಕರಿಗೆ ಸುಧಾರಿತ ಅನುಭವವನ್ನು ನೀಡುತ್ತಿದ್ದೇವೆ. ಈ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವುದರೊಂದಿಗೆ ಆರ್ಥಿಕತೆಯನ್ನು ಸುಧಾರಣೆ ಮಾಡಲಾಗುತ್ತಿದೆ. ಏಸ್ ಇವಿ 1000 ಉತ್ಕೃಷ್ಟ ಮೌಲ್ಯ ಮತ್ತು ಕಡಿಮೆ ವೆಚ್ಚದ ಮಾಲೀಕತ್ವವನ್ನು ನೀಡುವ ಮೂಲಕ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡಲಿದೆ ಎಂಬ ವಿಶ್ವಾಸ ನಮ್ಮದಾಗಿದೆ ಎಂದು ತಿಳಿಸಿದ್ದಾರೆ.

ಏಸ್ ಇವಿಯು EVOGEN ಪವರ್ ಟ್ರೇನ್‌ನಿಂದ ಚಾಲಿತವಾಗಿದ್ದು, ಇದು 7 ವರ್ಷಗಳ ಬ್ಯಾಟರಿ ವಾರಂಟಿ ಮತ್ತು 5 ವರ್ಷದ ಸಮಗ್ರ ನಿರ್ವಹಣೆ ಪ್ಯಾಕೇಜ್‌ನೊಂದಿಗೆ ಸರಿಸಾಟಿಯಿಲ್ಲದ ಚಾಲನಾ ಅನುಭವವನ್ನು ನೀಡುತ್ತದೆ. ಇದು ಚಾಲನಾ ಶ್ರೇಣಿಯನ್ನು ಹೆಚ್ಚಿಸಲು ಸುಧಾರಿತ ಬ್ಯಾಟರಿ ಕೂಲಿಂಗ್ ಸಿಸ್ಟಂ ಮತ್ತು ಪುನರುತ್ಪಾದಕ ಬ್ರೇಕಿಂಗ್ ಸಿಸ್ಟಂನೊಂದಿಗೆ ಸುರಕ್ಷಿತ, ಎಲ್ಲಾ ಹವಾಮಾನ ಕಾರ್ಯಾಚರಣೆಗಳನ್ನು ನೀಡುತ್ತದೆ.

ಇದನ್ನೂ ಓದಿ: IPL 2024 : ಆರ್​ಸಿಬಿಯ ಪ್ಲೇಆಫ್​ ಚಾನ್ಸ್​ ಇದೆಯೇ? ಇಲ್ಲಿದೆ ನೋಡಿ ಲೆಕ್ಕಾಚಾರ

ಇದು ಹೆಚ್ಚಿನ ಸಮಯಕ್ಕಾಗಿ ನಿಯಮಿತ ಮತ್ತು ವೇಗದ ಚಾರ್ಜಿಂಗ್ ಸಾಮರ್ಥ್ಯಗಳನ್ನು ಹೊಂದಿದೆ. ಇದು 27kW (36hp) ಮೋಟರ್ ನಿಂದ 130Nm ಪೀಕ್ ಟಾರ್ಕ್ ನೊಂದಿಗೆ ಚಾಲಿತವಾಗಿದೆ. ಬೆಸ್ಟ್-ಇನ್-ಕ್ಲಾಸ್ ಪಿಕಪ್ ಮತ್ತು ಗ್ರೇಡ್ ಸಾಮರ್ಥ್ಯವನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಲೋಡ್ ಮಾಡಲಾದ ಪರಿಸ್ಥಿತಿಗಳಲ್ಲಿ ಸುಲಭವಾಗಿ ಸಾಗಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದೆ.

Continue Reading

ಆಟೋಮೊಬೈಲ್

Nissan India : ಉಚಿತ ಏಸಿ ರಿಪೇರಿ ಮಾಡಿಸಿಕೊಳ್ಳಲು ನಿಸ್ಸಾನ್ ಕಾರು ಮಾಲೀಕರಿಗೆ ಇಲ್ಲಿದೆ ಅವಕಾಶ

Nissan India: ಉಚಿತ ಏಸಿ ತಪಾಸಣಾ ಕಾರ್ಯಾಗಾರ ಏಪ್ರಿಲ್ 15ರಿಂದಲೇ ಆರಂಭಗೊಂಡಿದ್ದು ಜೂನ್ 15ರವರೆಗೆ ನಡೆಯಲಿದೆ. ನಿಸ್ಸಾನ್ ಗ್ರಾಹಕರು ವಿವಿಧ ಶ್ರೇಣಿಗಳ ಸರ್ವೀಸ್ ಗಳು ಮತ್ತು ರಿಯಾಯಿತಿ ಪಡೆಯುವ ಭಾರತದಾದ್ಯಂತ ಇರುವ ಎಲ್ಲಾ ನಿಸ್ಸಾನ್ ಅಧಿಕೃತ ಸರ್ವೀಸ್ ವರ್ಕ್ ಶಾಪ್ ಗಳಲ್ಲಿ ಈ ಸೌಲಭ್ಯ ಲಭ್ಯವಿದೆ.

VISTARANEWS.COM


on

Nissan India
Koo

ಬೆಂಗಳೂರು: ನಿಸ್ಸಾನ್ ಮೋಟಾರ್ ಇಂಡಿಯಾ (Nissan India) ದೇಶಾದ್ಯಂತ ಇರುವ ತನ್ನ ಗ್ರಾಹಕರಿಗೆ ಎರಡು ತಿಂಗಳ ಕಾಲ ಉಚಿತ ಏಸಿ ತಪಾಸಣಾ ಕಾರ್ಯಾಗಾರ ಆಯೋಜಿಸಿದೆ. ಆ ಮೂಲಕ ಗ್ರಾಹಕ ತೃಪ್ತಿಯನ್ನು ಬಯಸು ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ನಿಸ್ಸಾನ್ ಉಚಿತ ಏಸಿ ತಪಾಸಣಾ ಕಾರ್ಯಾಗಾರ ಏಪ್ರಿಲ್ 15ರಿಂದಲೇ ಆರಂಭಗೊಂಡಿದ್ದು ಜೂನ್ 15ರವರೆಗೆ ನಡೆಯಲಿದೆ. ನಿಸ್ಸಾನ್ ಗ್ರಾಹಕರು ವಿವಿಧ ಶ್ರೇಣಿಗಳ ಸರ್ವೀಸ್ ಗಳು ಮತ್ತು ರಿಯಾಯಿತಿ ಪಡೆಯುವ ಭಾರತದಾದ್ಯಂತ ಇರುವ ಎಲ್ಲಾ ನಿಸ್ಸಾನ್ ಅಧಿಕೃತ ಸರ್ವೀಸ್ ವರ್ಕ್ ಶಾಪ್ ಗಳಲ್ಲಿ ಈ ಸೌಲಭ್ಯ ಲಭ್ಯವಿದೆ. ನಿಸ್ಸಾನ್‌ನ ನುರಿತ ಮತ್ತು ತರಬೇತಿ ಪಡೆದ ಸರ್ವೀಸ್ ಉದ್ಯೋಗಿಗಳು ನಿಸ್ಸಾನ್ ನಿಜವಾದ ಬಿಡಿಭಾಗಗಳನ್ನು ಬಳಸಿಕೊಂಡು ಏಸಿ ತಪಾಸಣೆ ಶಿಬಿರವನ್ನು ನಡೆಸಿಕೊಡುತ್ತಾರೆ.

ಎಲ್ಲಾ ನಿಸ್ಸಾನ್ ಮತ್ತು ಡಾಟ್ಸನ್ ವಾಹನ ಮಾಲೀಕರು ನಿಸ್ಸಾನ್ ಒನ್ ಆ್ಯಪ್ ಅಥವಾ ನಿಸ್ಸಾನ್ ಮೋಟಾರ್ ಇಂಡಿಯಾ ವೆಬ್‌ಸೈಟ್ (www.nissan.in) ಮೂಲಕ ತಪಾಸಣೆ ಪಡೆಯಲು ಸರ್ವೀಸ್ ಅಪಾಯಿಂಟ್‌ಮೆಂಟ್ ಅನ್ನು ಪಡೆಯಬಹುದು. ಇದರಿಂದಾಗಿ ಗ್ರಾಹಕರು ಯಾವುದೇ ತೊಂದರೆ ಇಲ್ಲದೆ ನಿಸ್ಸಾನ್ ಮಾಲೀಕತ್ವವನ್ನು ಅನುಭವಿಸುವ ಸೌಕರ್ಯ ಪಡೆಯುವುದಲ್ಲದೆ, ಈ ಉಪಕ್ರಮವು ಬ್ರಾಂಡ್ ಮೇಲೆ ಗ್ರಾಹಕರು ಇಟ್ಟಿರುವ ವಿಶ್ವಾಸಕ್ಕೆ ಸಣ್ಣ ಪ್ರಮಾಣದ ಕೊಡುಗೆಯೂ ಆಗಿದೆ. ಈ ಸರ್ವೀಸ್ ಶಿಬಿರಗಳು ಎಲ್ಲಾ ನಿಸ್ಸಾನ್ ಮತ್ತು ಡಾಟ್ಸನ್ ಬ್ರಾಂಡ್ ವಾಹನಗಳಿಗೆ ಸರ್ವೀಸ್ ಒದಗಿಸುವ ಕಂಪನಿಯ ವ್ಯಾಪಕವಾದ 120 ಸರ್ವೀಸ್ ವರ್ಕ್ ಶಾಪ್ ಗಳಲ್ಲಿಯೂ ನಡೆಯಲಿದೆ.

ಇದನ್ನೂ ಓದಿ: Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

ಶಿಬಿರವು ಉಚಿತ ಕಾರ್ ಟಾಪ್ ವಾಶ್ ಅನ್ನು ಕೂಡ ಒಳಗೊಂಡಿದೆ. ಜೊತೆಗೆ ಸಮಗ್ರ 20-ಪಾಯಿಂಟ್ ತಪಾಸಣೆಯನ್ನು ಮಾಡಲಾಗುತ್ತದೆ. ಪಿಎಂಎಸ್ (ಪೀರಿಯಾಡಿಕಲ್ ಮೇಂಟನೆನ್ಸ್ ಸರ್ವೀಸ್) ಆಯ್ಕೆ ಮಾಡುವ ಗ್ರಾಹಕರಿಗೆ ಉಚಿತ ಪಿಕ್-ಅಪ್ ಮತ್ತು ಡ್ರಾಪ್ ಸೌಲಭ್ಯ ಕೂಡ ನೀಡಲಾಗುತ್ತದೆ. ಹೆಚ್ಚುವರಿಯಾಗಿ, ಗ್ರಾಹಕರು ಶೇ.20ರವರೆಗೆ ಭಾಗಗಳು/ಪರಿಕರಗಳ ಮೇಲೆ ರಿಯಾಯಿತಿ (ಡೀಲರ್ ತೀರ್ಮಾನದ ಪ್ರಕಾರ) ಪಡೆಯಬಹುದು. ಕಾರ್ಮಿಕ ಶುಲ್ಕಗಳ ಮೇಲೆ 20% ವರೆಗೆ ಮತ್ತು ಮೌಲ್ಯವರ್ಧಿತ ಸೇವೆಗಳ ಮೇಲೆ (ವಿಎಎಸ್) 10% ವರೆಗೆ ರಿಯಾಯಿತಿ ಪಡೆಯಬಹುದು. ಕಂಪನಿಯು ಎಲ್ಲಾ ನಿಸ್ಸಾನ್ ಮತ್ತು ಡಾಟ್ಸನ್ ವಾಹನಗಳು ಈ ವಿಶೇಷ ಕೊಡುಗೆಗಳ ಲಾಭವನ್ನು ಪಡೆಯಬೇಕು ಮತ್ತು ಅದರಿಂದ ವಾಹನಗಳ ಕಾರ್ಯಕ್ಷಮತೆ ಉತ್ತಗೊಳಿಸಬೇಕು, ವಾಹನಗಳು ಆಯುಷ್ಯ ಹೆಚ್ಚಿಸಬೇಕು ಎಂದು ಹೇಳಿದೆ.

Continue Reading

ಆಟೋಮೊಬೈಲ್

Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

ಕಾರಿನಲ್ಲಿರುವ ಏರ್ ಪ್ಯೂರಿಫೈಯರ್ ಗಾಳಿಯ ಗುಣಮಟ್ಟವನ್ನು ಸುಧಾರಿಸುವಲ್ಲಿ ಮತ್ತು ಆರೋಗ್ಯವನ್ನು ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳು (Air Purifier) ಅಗತ್ಯವಾಗಿರುವುದಕ್ಕೆ ಕೆಲವು ಪ್ರಮುಖ ಕಾರಣಗಳೂ ಇವೆ. ಕಾರಿನಲ್ಲಿ ಓಡಾಡುವವರಿಗೆ ಏರ್‌ ಪ್ಯೂರಿಫೈಯರ್‌ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Air Purifier
Koo

ವಾಯು ಮಾಲಿನ್ಯವು (Air pollution) ಈಗ ಜಾಗತಿಕವಾಗಿ ಒಂದು ಸಮಸ್ಯೆಯಾಗಿದೆ. ಹೊರಾಂಗಣ ಪರಿಸರವನ್ನು ಮಾತ್ರವಲ್ಲದೆ ಇದು ನಮ್ಮ ಮನೆ (home) ಮತ್ತು ವಾಹನಗಳ (vehicles) ಒಳಗಿನ ಗಾಳಿಯ ಮೇಲೂ ಪರಿಣಾಮ ಬೀರುತ್ತಿದೆ. ಒಳಾಂಗಣ ವಾಯು ಮಾಲಿನ್ಯವನ್ನು ಎದುರಿಸಲು ಅನೇಕ ಜನರು ತಮ್ಮ ಮನೆಗಳಲ್ಲಿ ಏರ್ ಪ್ಯೂರಿಫೈಯರ್‌ಗಳನ್ನು (Air Purifier) ಬಳಸಲು ಪ್ರಾರಂಭಿಸಿದ್ದಾರೆ. ಆದರೆ ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳ ಅಗತ್ಯವನ್ನು ಸಾಮಾನ್ಯವಾಗಿ ಹೆಚ್ಚಿನವರು ಕಡೆಗಣಿಸುತ್ತಾರೆ.

ಕಲುಷಿತ ಗಾಳಿಯು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಜಾಗೃತಿ ಹೆಚ್ಚಾಗುತ್ತಿದ್ದು, ವಾಹನಗಳಲ್ಲಿ ಏರ್ ಪ್ಯೂರಿಫೈಯರ್ ಗಳ ಪ್ರಾಮುಖ್ಯತೆಯು ಎಲ್ಲರ ಗಮನ ಸೆಳೆಯುತ್ತಿದೆ. ಸ್ವಂತ ವಾಹನ ಚಾಲನೆ ಮಾಡುವಾಗ ವಿಶೇಷವಾಗಿ ಭಾರೀ ವಾಹನ ದಟ್ಟಣೆಯ ಪ್ರದೇಶಗಳಲ್ಲಿ ಸುತ್ತಮುತ್ತ ನಿರಂತರವಾಗಿ ಹಾನಿಕಾರಕ ಅನಿಲಗಳು ಮತ್ತು ಕಣಗಳು ಹೊರಸೂಸುತ್ತಿರುತ್ತದೆ. ಈ ಮಾಲಿನ್ಯಕಾರಕಗಳು ಕಾರಿನ ಕ್ಯಾಬಿನ್ ಅನ್ನು ಪ್ರವೇಶಿಸಬಹುದು. ಇದು ಒಳಗೆ ಕಲುಷಿತ ಗಾಳಿಯ ಸಂಗ್ರಹಕ್ಕೆ ಕಾರಣವಾಗುತ್ತದೆ. ಪರಿಸರದಲ್ಲಿರುವ ಧೂಳು, ಹೊಗೆ, ಬ್ಯಾಕ್ಟೀರಿಯಾ, ವೈರಸ್‌ಗಳು ಮತ್ತು ಅಲರ್ಜಿನ್‌ಗಳಂತಹ ಅಂಶಗಳಿಂದ ಇದು ಮತ್ತಷ್ಟು ಹದಗೆಡುತ್ತದೆ.
ಕಾರಿನಲ್ಲಿರುವ ಏರ್ ಪ್ಯೂರಿಫೈಯರ್ ಗಾಳಿಯ ಗುಣಮಟ್ಟವನ್ನು ಸುಧಾರಿಸುವಲ್ಲಿ ಮತ್ತು ಆರೋಗ್ಯವನ್ನು ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ಗಳು ಅಗತ್ಯವಾಗಿರುವುದಕ್ಕೆ ಕೆಲವು ಪ್ರಮುಖ ಕಾರಣಗಳೂ ಇವೆ.


1. ಮಾಲಿನ್ಯಕಾರಕಗಳನ್ನು ಕಡಿಮೆ ಮಾಡುತ್ತದೆ

ಗಾಳಿಯ ಶುದ್ಧೀಕರಣವು ಕಾರಿನೊಳಗಿನ ಗಾಳಿಯಿಂದ ಧೂಳು, ಹೊಗೆ, ಪರಾಗ, ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳಂತಹ ಮಾಲಿನ್ಯಕಾರಕಗಳನ್ನು ಪರಿಣಾಮಕಾರಿಯಾಗಿ ಫಿಲ್ಟರ್ ಮಾಡುತ್ತದೆ. ಚಾಲನೆ ಮಾಡುವಾಗ ನೀವು ಉಸಿರಾಡುವ ಹಾನಿಕಾರಕ ಕಣಗಳ ಸಾಂದ್ರತೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

2. ಅಲರ್ಜಿಕಾರಕಗಳನ್ನು ತೆಗೆದು ಹಾಕುತ್ತದೆ

ಅಲರ್ಜಿ ಅಥವಾ ಆಸ್ತಮಾದಂತಹ ಉಸಿರಾಟದ ತೊಂದರೆ ಹೊಂದಿರುವ ವ್ಯಕ್ತಿಗಳಿಗೆ ಕಲುಷಿತ ಗಾಳಿಯು ಅಸ್ವಸ್ಥತೆ ಮತ್ತು ಆರೋಗ್ಯ ಸಮಸ್ಯೆಗಳನ್ನು ಪ್ರಚೋದಿಸುತ್ತದೆ. ಏರ್ ಪ್ಯೂರಿಫೈಯರ್ ಗಾಳಿಯಿಂದ ಅಲರ್ಜಿಯನ್ನು ತೆಗೆದುಹಾಕುತ್ತದೆ. ಸೂಕ್ಷ್ಮ ವ್ಯಕ್ತಿಗಳಿಗೆ ಸ್ವಚ್ಛ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸುತ್ತದೆ.

3. ವಾಸನೆ ತೊಡೆದು ಹಾಕುವುದು

ಮಾಲಿನ್ಯಕಾರಕಗಳ ಜೊತೆಗೆ ಏರ್ ಪ್ಯೂರಿಫೈಯರ್‌ಗಳು ಕಾರಿನೊಳಗಿನ ಅಹಿತಕರ ವಾಸನೆಯನ್ನು ತೆಗೆದು ಹಾಕುತ್ತದೆ. ಅದು ಹೊಗೆ, ಆಹಾರ ಅಥವಾ ಇತರ ವಾಸನೆಯ ಪದಾರ್ಥಗಳು ತೊಡೆದು ಹಾಕಿ ಗಾಳಿ ಶುದ್ಧೀಕರಣ ಮಾಡಿ ಸುವಾಸನೆಯನ್ನು ಬೀರುತ್ತದೆ. ವಾಹನ ಚಾಲನೆಯ ಅನುಭವವನ್ನು ಹೆಚ್ಚಿಸುತ್ತದೆ.

4. ಆರೋಗ್ಯದ ಅಪಾಯಗಳ ವಿರುದ್ಧ ರಕ್ಷಣೆ

ಕಲುಷಿತ ಗಾಳಿಗೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಉಸಿರಾಟದ ಸಮಸ್ಯೆಗಳು, ಅಲರ್ಜಿಗಳು, ಆಸ್ತಮಾ ಮತ್ತು ಹೃದಯರಕ್ತನಾಳದ ಕಾಯಿಲೆಗಳು ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಕಾರಿನೊಳಗಿನ ಗಾಳಿಯನ್ನು ಶುದ್ಧೀಕರಿಸುವ ಮೂಲಕ ಈ ಆರೋಗ್ಯದ ಅಪಾಯಗಳನ್ನು ಕಡಿಮೆ ಮಾಡಲು ಮತ್ತು ಆರೋಗ್ಯಕರ ಚಾಲನಾ ವಾತಾವರಣವನ್ನು ಉತ್ತೇಜಿಸಲು ಏರ್ ಪ್ಯೂರಿಫೈಯರ್ ಸಹಾಯ ಮಾಡುತ್ತದೆ.

5. ಚಾಲನಾ ಸೌಕರ್ಯವನ್ನು ಹೆಚ್ಚಿಸುವುದು

ಕಾರಿನೊಳಗೆ ಶುದ್ಧ ಮತ್ತು ತಾಜಾ ಗಾಳಿಯು ಹೆಚ್ಚು ಆರಾಮದಾಯಕ ಮತ್ತು ಆನಂದದಾಯಕ ಚಾಲನಾ ಅನುಭವಕ್ಕೆ ಕೊಡುಗೆ ನೀಡುತ್ತದೆ. ವಿಶೇಷವಾಗಿ ದೀರ್ಘ ಪ್ರಯಾಣದ ಸಮಯದಲ್ಲಿ ಅಥವಾ ಸವಾಲಿನ ಚಾಲನಾ ಪರಿಸ್ಥಿತಿಗಳಲ್ಲಿ ಇದು ಗಮನ ಮತ್ತು ಜಾಗರೂಕತೆಯನ್ನು ಸುಧಾರಿಸುತ್ತದೆ.

ಇದನ್ನೂ ಓದಿ: Xiaomi EV: ತಿಂಗಳಲ್ಲಿ 75 ಸಾವಿರ ಆರ್ಡರ್ ಸ್ವೀಕರಿಸಿದ ಕ್ಸಿಯೋಮಿ ಎಸ್‌ಯು 7 ಎಲೆಕ್ಟ್ರಿಕ್‌ ಕಾರು; ಟೆಸ್ಲಾಗಿಂತ ಅಗ್ಗ!

6. ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌

ಕಾರು ತಯಾರಕರು ಈಗ ತಮ್ಮ ವಾಹನದ ವೈಶಿಷ್ಟ್ಯಗಳ ಭಾಗವಾಗಿ ಇನ್‌ಬಿಲ್ಟ್‌ ಆಗಿ ಏರ್ ಪ್ಯೂರಿಫೈಯರ್‌ಗಳನ್ನು ನೀಡುತ್ತಿದ್ದಾರೆ. ಹೆಚ್ಚುವರಿಯಾಗಿ ಕಾರುಗಳಲ್ಲಿ ಬಳಸಲು ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾದ ಪೋರ್ಟಬಲ್ ಮತ್ತು ಕಾಂಪ್ಯಾಕ್ಟ್ ಏರ್ ಪ್ಯೂರಿಫೈಯರ್‌ಗಳು ಇವೆ. ಚಾಲಕರು ತಮ್ಮ ವಾಹನದ ಮಾದರಿಯನ್ನು ಲೆಕ್ಕಿಸದೆಯೇ ಶುದ್ಧ ಗಾಳಿಯನ್ನು ಆನಂದಿಸಲು ಇದು ಅನುವು ಮಾಡಿಕೊಡುತ್ತದೆ.

Continue Reading
Advertisement
Namma Metro green line
ಬೆಂಗಳೂರು7 mins ago

Namma Metro : ಜುಲೈ ಅಂತ್ಯಕ್ಕೆ ನಾಗಸಂದ್ರ-ಮಾದಾವರ ಮೆಟ್ರೋ ಕಾಮಗಾರಿ ಪೂರ್ಣ!

Rohit Sharma
ಕ್ರೀಡೆ8 mins ago

Rohit Sharma : ಭಾರತ ತಂಡದ ಹೊಸ ಜೆರ್ಸಿ ಬಿಡುಗಡೆ ಮಾಡಿದ ರೋಹಿತ್​ ಶರ್ಮಾ, ಇಲ್ಲಿದೆ ವಿಡಿಯೊ

Abdu Rozik
Latest16 mins ago

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

Song Release
ಸಿನಿಮಾ21 mins ago

Song Release: ‘ಇದು ನಮ್ ಶಾಲೆ’ ಚಿತ್ರದ ಹಾಡಿನ ಅನಾವರಣ

Prajwal Revanna Case
ಕರ್ನಾಟಕ22 mins ago

Prajwal Revanna Case: ರೇವಣ್ಣಗೆ ಜಾಮೀನು; ಹೊಳೆನರಸೀಪುರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು ವಶಕ್ಕೆ

MS Dhoni
ಕ್ರೀಡೆ34 mins ago

MS Dhoni : ಧೋನಿಗೆ ದೇವಸ್ಥಾನ; ಸಿಎಸ್​​ಕೆ ತಂಡದ ಮಾಜಿ ಆಟಗಾರ ಅಭಿಮಾನದ ನುಡಿ

HD Revanna Bail Revanna will not leave the country condition imposed by the court
ಕ್ರೈಂ40 mins ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Lok Sabha Election
ದೇಶ44 mins ago

Lok Sabha Election: ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ; ಬಂಗಾಳದಲ್ಲಿ ಹೆಚ್ಚು

Mumbai Rain
ದೇಶ46 mins ago

Mumbai Rain: ಮಹಾಮಳೆಗೆ ಮುಂಬೈ ತತ್ತರ; ಸೋಶಿಯಲ್‌ ಮೀಡಿಯಾದಲ್ಲಿ ಮೀಮ್ಸ್‌ ಹವಾ!

Prajwal Revanna case HD Revanna finally gets bail What was the argument like
ಕ್ರೈಂ55 mins ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ40 mins ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ55 mins ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 hour ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ2 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ2 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ8 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ13 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ15 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌