nissan-magnite-geza-special-edition-launched-at-rs-7-39-lakh Nissan Magnite : ನಿಸ್ಸಾನ್​ ಮ್ಯಾಗ್ನೈಟ್ ಗೆಜಾ ಬೆಲೆ 7.39 ಲಕ್ಷ ರೂ.ಗಳಿಂದ ಆರಂಭ - Vistara News

ಆಟೋಮೊಬೈಲ್

Nissan Magnite : ನಿಸ್ಸಾನ್​ ಮ್ಯಾಗ್ನೈಟ್ ಗೆಜಾ ಬೆಲೆ 7.39 ಲಕ್ಷ ರೂ.ಗಳಿಂದ ಆರಂಭ

ಪ್ರೀಮಿಯಂ ಆಡಿಯೋ ಮತ್ತು ಇನ್ಫೋಟೈನ್ಮೆಂಟ್​ ಹೊಂದಿರುವ ಕಾರಿನ ಬುಕಿಂಗ್​ ಮೇ 19ರಿಂದ ಆರಂಭಗೊಂಡಿದೆ.

VISTARANEWS.COM


on

Nissan Magnite Geza Special Edition
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿಸಾನ್ ಮೋಟರ್ ಇಂಡಿಯಾ ತನ್ನ ಬಿಗ್, ಬೋಲ್ಡ್, ಬ್ಯೂಟಿಫುಲ್ ಎಸ್​​ಯುವಿ ನಿಸಾನ್ ಮ್ಯಾಗ್ನೈಟ್ GEZA ವಿಶೇಷ (Nissan Magnite) ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಅದರ ಬೆಲೆ 7,39,000 (ಎಕ್ಸ್ ಶೋರೂಂ ದೆಹಲಿ) ರೂಪಾಯಿಗಳಿಂದ ಆರಂಭವಾಗಲಿದೆ. ಈ ಮ್ಯಾಗ್ನೈಟ್ GEZA ದಲ್ಲಿ ಸುಧಾರಿತ ಇನ್ಫೋಟೇನ್ಮೆಂಟ್ ಸಿಸ್ಟಂ, ಪವರ್ ಪ್ಯಾಕ್ಡ್ ಪರ್ಮಾರ್ಫೆನ್ಸ್, ಸುಧಾರಿತ ವೈಶಿಷ್ಟ್ಯತೆಗಳು ಮತ್ತು ಸುರಕ್ಷತಾ ಸೌಲಭ್ಯಗಳಿವೆ. ಈ ಮೂಲಕ ಈ ಎಸ್​​ಯುವಿ ಭಾರತೀಯ ಗ್ರಾಹಕರ ಪ್ರಯಾಣವನ್ನು ಪುನರ್ ವ್ಯಾಖ್ಯಾನಿಸಲಿದೆ. ಈ ಮ್ಯಾಗ್ನೈಟ್ GEZA ವಿಶೇಷ ಆವೃತ್ತಿಯು ಜಪಾನ್​​ನ ಥಿಯೇಟರ್ ಮತ್ತು ಅದರ ಅತ್ಯುತ್ತಮವಾದ ಮ್ಯೂಸಿಕಲ್ ಥೀಮ್ಸ್​​ನಿಂದ ಪ್ರೇರಣೆ ಪಡೆದುಕೊಂಡಿದೆ.

ಮ್ಯಾಗ್ನೈಟ್​ GEZA ವಿಶೇಷ ಆವೃತ್ತಿಯ ವಾಹನವು ಹತ್ತು ಹಲವಾರು ವಿಶೇಷ ವೈಶಿಷ್ಟ್ಯತೆಗಳನ್ನು ಒಳಗೊಂಡಿದ್ದು, ಅವುಗಳಲ್ಲಿ ಪ್ರಮುಖವಾದವು ಇಲ್ಲಿವೆ. ಹೈ ರೆಸಲ್ಯೂಶನ್​​ ನ 22.86 ಸೆಂ.ಮೀ(9 ಇಂಚು) ಅಳತೆಯ ಟಚ್ ಸ್ಕ್ರೀನ್. ವೈರ್ ಲೆಸ್ ಕನೆಕ್ಟಿವಿಟಿಯೊಂದಿಗೆ ಆ್ಯಂಡ್ರಾಯ್ಡ್ ಕಾರ್ ಪ್ಲೇ, ಪ್ರೀಮಿಯಂ ಜೆಬಿಎಲ್ ಸ್ಪೀಕರ್​​ಗಳು, ಟ್ರಾಜೆಕ್ಟರಿ ರಿಯರ್ ಕ್ಯಾಮೆರಾ,  ಆ್ಯಪ್-ಆಧಾರಿತ ಕಂಟ್ರೋಲ್ಸ್ ನೊಂದಿಗೆ ಆಂಬಿಯೆಂಟ್ ಲೈಟಿಂಗ್, ಪ್ರೀಮಿಯಂ ಬ್ಯಾಗಿ ಕಲರ್ ಸೀಟ್, ಶಾರ್ಕ್ ಫಿನ್ ಆಂಟೆನಾ ಈ ಕಾರಿನ ಆಕರ್ಷಣೆಯಾಗಿದೆ.

ನಿಸಾನ್ ಮೋಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶ್ರೀವಾಸ್ತವ ಅವರು ಮಾತನಾಡಿ, “ನಿಸಾನ್ ಮ್ಯಾಗ್ನೈಟ್ GEZA ವಿಶೇಷ ಆವೃತ್ತಿಯು ಪ್ರೀಮಿಯಂ ಆಡಿಯೋ ಮತ್ತು ಇನ್ಫೋಟೇನ್ಮೆಂಟ್ ಅನುಭವದೊಂದಿಗೆ ಸರಿಸಾಟಿಯಿಲ್ಲದ ಮೌಲ್ಯವನ್ನು ನೀಡುತ್ತದೆ. ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದ್ದು, ಶಕ್ತಿಯುತವಾದ ಸುರಕ್ಷತೆ ಮತ್ತು ಕಾರ್ಯದಕ್ಷತೆಯ ವೈಶಿಷ್ಟ್ಯತೆಗಳನ್ನು ಹೊಂದಿದೆ’’ ಎಂದರು.

ಮ್ಯಾಗ್ನೈಟ್ GEZA ವಿಶೇಷ ಆವೃತ್ತಿಯನ್ನು ಎಲ್ಲಾ ನಿಸಾನ್ ಶೋರೂಂಗಳಲ್ಲಿ 11,000 ರೂಪಾಯಿ ಪಾವತಿಸಿ ಮುಂಗಡ ಬುಕಿಂಗ್ ಮಾಡಲು ಅವಕಾಶವಿದೆ. ಮೊನೊಟೋನ್ ಬಣ್ಣಗಳ ಶ್ರೇಣಿಯಲ್ಲಿ ಲಭ್ಯವಿದ್ದು, ಗ್ರಾಹಕರ ಆದ್ಯತೆಗಳಿಗೆ ಅನುಗುಣವಾಗಿ ವ್ಯಾಪಕವಾದ ಶ್ರೇಣಿಯ ಆಯ್ಕೆಯನ್ನು ನೀಡಲಾಗಿದೆ.

ನಿಸಾನ್ ಮ್ಯಾಗ್ನೈಟ್ ಅತ್ಯುತ್ತಮ, ಅತ್ಯಂತ ಕಡಿಮೆ ನಿರ್ಹವಣಾ ವೆಚ್ಚದೊಂದಿಗೆ ರಸ್ತೆಗೆ ಇಳಿದಿದೆ. ಪ್ರತಿ ಒಂದು ಕಿಲೋಮೀಟರ್ ಗೆ ಕೇವಲ 35 ಪೈಸೆ (50,000 ಕಿಲೋಮೀಟರ್ ಗೆ) ವೆಚ್ಚವಾಗಲಿದೆ. ಅದೇ ರೀತಿ 2 ವರ್ಷಗಳವರೆಗೆ ವಾರಂಟಿ (50,000 ಕಿಮೀ)ಇರುವುದರೊಂದಿಗೆ ಗ್ರಾಹಕರಿಗೆ ಯಾವುದೇ ಚಿಂತೆ ಇರುವುದಿಲ್ಲ ಮತ್ತು ಈ ವಾರಂಟಿಯನ್ನು ಸುಲಭ ದರದಲ್ಲಿ 5 ವರ್ಷಗಳವರೆಗೆ (ಅಥವಾ ಒಂದು ಲಕ್ಷ ಕಿಮೀ) ವಿಸ್ತರಣೆ ಮಾಡಿಕೊಳ್ಳಬಹುದು.

ಇದನ್ನೂ ಓದಿ : Nissan Magnite | ನಿಸ್ಸಾನ್‌ ಕಂಪನಿಯ ಮ್ಯಾಗ್ನೈಟ್‌ ಎಸ್‌ಯುವಿ ಟಿ20 ವಿಶ್ವ ಕಪ್‌ಗೆ ಅಧಿಕೃತ ಕಾರು

ನಿಸಾನ್ ಸರ್ವೀಸ್ ಹಬ್ ಅಥವಾ ನಿಸಾನ್ ಕನೆಕ್ಟ್ ಮೂಲಕ ಆನ್ ಲೈನ್ ನಲ್ಲಿ ನಿಸಾನ್ ಸರ್ವೀಸ್ ಕಾಸ್ಟ್ ಕ್ಯಾಲ್ಕ್ಯುಲೇಟರ್ ನಲ್ಲಿ ಸರ್ವೀಸ್ ಅನ್ನು ಬುಕ್ ಮಾಡಬಹುದು ಮತ್ತು ವೆಚ್ಚವನ್ನು ಪರಿಶೀಲಿಸಬಹುದಾಗಿದೆ.
ಗ್ಲೋಬಲ್ ಅನ್​ಕ್ಯಾಪ್​​ ನೀಡುವ ಅಡಲ್ಟ್ ಆಕ್ಯುಪೆಂಟ್ ಸೇಫ್ಟಿಯಲ್ಲಿ 4-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದುಕೊಂಡಿರುವ ನಿಸಾನ್ ಮ್ಯಾಗ್ನೈಟ್ ಈ ಸೆಗ್ಮೆಂಟ್ ನಲ್ಲಿ ಅತ್ಯುತ್ತಮ ಸುರಕ್ಷತಾ ಗುಣಮಟ್ಟಗಳನ್ನು ಹೊಂದಿರುವ ವಾಹನ ಎನಿಸಿದೆ. ಇತ್ತೀಚೆಗೆ ನಿಸಾನ್ ತನ್ನ ಮ್ಯಾಗ್ನೈಟ್ ನ ಎಲ್ಲಾ ಶ್ರೇಣಿಯ ವಾಹನಗಳಲ್ಲಿ ಹೆಚ್ಚುವರಿ ಸುರಕ್ಷತಾ ವೈಶಿಷ್ಟ್ಯತೆಗಳನ್ನು ಪರಿಚಯಿಸಲಾಗಿದೆ. ಇದಲ್ಲದೇ, ಬಿಎಸ್6 ಹಂತ 2 ನ್ನು ಪರಿಚಯಿಸಿದ್ದು, ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ.

ನಿಸ್ಸಾನ್​ ಮ್ಯಾಗ್ನೈಟ್ ಕಾರನ್ನು ಡಿಸೆಂಬರ್ 2020 ರಲ್ಲಿ ಭಾರತೀಯ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಇದನ್ನು ಜಪಾನ್ ನಲ್ಲಿ ವಿನ್ಯಾಸಗೊಳಿಸಿ ಭಾರತದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಈ ಮೂಲಕ ನಿಸಾನ್ ಮೋಟರ್ ಇಂಡಿಯಾದ ಉತ್ಪಾದನಾ ತತ್ತ್ವವಾದ ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್’ ಅನ್ನು ಅನುಸರಿಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಮೋದಿ ಅವರ ಡೀಸೆಲ್ ಚಾಲಿತ ವಿಶೇಷ ವಾಹನಗಳ ನೋಂದಣಿ ವಿಸ್ತರಣೆ ತಿರಸ್ಕರಿಸಿದ ಎನ್‌ಜಿಟಿ; ಕಾರಣವೇನು?

Narendra Nodi: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಭದ್ರತೆಯ ಉದ್ದೇಶಕ್ಕಾಗಿ ಅಗತ್ಯವಿರುವ ಮೂರು ಡೀಸೆಲ್ ಚಾಲಿತ ವಿಶೇಷ ಶಸ್ತ್ರಸಜ್ಜಿತ ವಾಹನಗಳ ನೋಂದಣಿಯನ್ನು ವಿಸ್ತರಿಸುವಂತೆ ವಿಶೇಷ ಸಂರಕ್ಷಣಾ ಗುಂಪು ಸಲ್ಲಿಸಿದ್ದ ಮನವಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತಿರಸ್ಕರಿಸಿದೆ. ಇದಕ್ಕೇನು ಕಾರಣ ಎನ್ನುವ ವಿವರ ಇಲ್ಲಿದೆ.

VISTARANEWS.COM


on

narendra modi
Koo

ನವದೆಹಲಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿ (Narendra Nodi) ಅವರ ಭದ್ರತೆಯ ಉದ್ದೇಶಕ್ಕಾಗಿ ಅಗತ್ಯವಿರುವ ಮೂರು ಡೀಸೆಲ್ ಚಾಲಿತ ವಿಶೇಷ ಶಸ್ತ್ರಸಜ್ಜಿತ ವಾಹನಗಳ ನೋಂದಣಿಯನ್ನು ವಿಸ್ತರಿಸುವಂತೆ ವಿಶೇಷ ಸಂರಕ್ಷಣಾ ಗುಂಪು (Special Protection Group) ಸಲ್ಲಿಸಿದ್ದ ಮನವಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (National Green Tribunal) ತಿರಸ್ಕರಿಸಿದೆ.

ದೆಹಲಿ ಎನ್‌ಸಿಆರ್‌ ರಸ್ತೆಗಳಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ಓಡಿಸುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ 2018ರಲ್ಲಿ ನೀಡಿದ ತೀರ್ಪನ್ನು ಉಲ್ಲೇಖಿಸಿ ಈ ಆದೇಶ ಹೊರಡಿಸಲಾಗಿದೆ.

“ಈ ಮೂರು ವಾಹನಗಳು ಸಾಮಾನ್ಯವಾಗಿ ಬಳಸಲ್ಪಡದ, ವಿಶೇಷ ಉದ್ದೇಶದ ವಾಹನಗಳಾಗಿವೆ. ಈ ವಾಹನಗಳು ಹತ್ತು ವರ್ಷಗಳಲ್ಲಿ ಬಹಳ ಕಡಿಮೆ ಚಲಿಸಿವೆ ಮತ್ತು ಪ್ರಧಾನಿ ಅವರ ಭದ್ರತೆಯ ನಿರ್ದಿಷ್ಟ ಉದ್ದೇಶಕ್ಕಾಗಿ ಅಗತ್ಯವಾಗಿವೆ. ಆದರೆ ಸುಪ್ರೀಂ ಕೋರ್ಟ್ 2018ರ ಅಕ್ಟೋಬರ್‌ 29ರಂದು ನೀಡಿದ ಆದೇಶದಂತೆ ಆ ವಾಹನಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನವಿಯನ್ನು ತಿರಸ್ಕರಿಸಲಾಗಿದೆ” ಎಂದು ಎನ್‌ಜಿಟಿ ಹೇಳಿದೆ.

ʼʼಎಸ್‌ಪಿಜಿ ಅರ್ಜಿಯನ್ನು ತಿರಸ್ಕರಿಸಿದ ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ಸದಸ್ಯ ಡಾ.ಎ.ಸೆಂಥಿಲ್ ವೇಲ್ ಅವರನ್ನೊಳಗೊಂಡ ಎನ್‌ಜಿಟಿ ಪ್ರಧಾನ ಪೀಠವು ಮಾರ್ಚ್ 22ರ ಆದೇಶದಲ್ಲಿ, ದೆಹಲಿ ಎನ್‌ಸಿಆರ್‌ ರಸ್ತೆಗಳಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ಓಡಿಸುವುದನ್ನು ನಿಷೇಧಿಸುವ ಸುಪ್ರೀಂ ಕೋರ್ಟ್‌ನ ಆದೇಶವನ್ನು ಉಲ್ಲೇಖಿಸಿ ತೀರ್ಪು ನೀಡಿದೆʼʼ ಎಂದು ಮೂಲಗಳು ತಿಳಿಸಿವೆ.

ಈ 3 ವಿಶೇಷ ಶಸ್ತ್ರಸಜ್ಜಿತ ವಾಹನಗಳ ನೋಂದಣಿ ಅವಧಿಯನ್ನು ಐದು ವರ್ಷಗಳವರೆಗೆ ಅಂದರೆ 2029ರ ಡಿಸೆಂಬರ್‌ 23ರವರೆಗೆ ವಿಸ್ತರಿಸಲು ಅನುಮತಿ ನೀಡುವಂತೆ ದೆಹಲಿಯ ಸಾರಿಗೆ ಇಲಾಖೆ, ನೋಂದಣಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡುವಂತೆ ಎಸ್‌ಪಿಜಿಯು ಎನ್‌ಜಿಟಿಯನ್ನು ಸಂಪರ್ಕಿಸಿತ್ತು.

2013ರಲ್ಲಿ ತಯಾರಿಸಿದ ಮತ್ತು 2014ರ ಡಿಸೆಂಬರ್‌ನಲ್ಲಿ ನೋಂದಾಯಿಸಲಾದ ಮೂರು ರೆನಾಲ್ಟ್ ಎಂಡಿ -5 (Renault MD-5) ವಿಶೇಷ ಶಸ್ತ್ರಸಜ್ಜಿತ ವಾಹನಗಳು 9 ವರ್ಷಗಳಲ್ಲಿ ಕ್ರಮವಾಗಿ ಸುಮಾರು 6,000 ಕಿ.ಮೀ., 9,500 ಕಿ.ಮೀ. ಮತ್ತು 15,000 ಕಿ.ಮೀ. ಕ್ರಮಿಸಿವೆ. ಈ ವಾಹನಗಳನ್ನು ವಿಶೇಷ ಸಂದರ್ಭಗಳಲ್ಲಿ ಮಾತ್ರ ಬಳಸಲಾಗುತ್ತದೆ.

ಈ ವಾಹನಗಳನ್ನು 2029ರ ವರೆಗೆ 15 ವರ್ಷಗಳ ಅವಧಿಗೆ ನೋಂದಾಯಿಸಲಾಗಿದೆ. ಆದರೆ ಈ ವಾಹನಗಳು 10 ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಸುಪ್ರೀಂ ಕೋರ್ಟ್‌ನ ಆದೇಶದ ಅನುಗುಣವಾಗಿ 2024ರ ಡಿಸೆಂಬರ್‌ನಲ್ಲಿ ನೋಂದಣಿಯನ್ನು ರದ್ದುಗೊಳಿಸಲಾಗುತ್ತದೆ.

ಇದನ್ನೂ ಓದಿ: Lok Sabha Election: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ; ಇವರೇ ನೋಡಿ ಆ ಸ್ಟಾರ್‌ಗಳು

ಎಸ್‌ಪಿಜಿ ಸಲ್ಲಿಸಿದ ಮನವಿಯಲ್ಲಿ ಏನಿದೆ?

ನೋಂದಣಿಯನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಿದ ಎಸ್‌ಪಿಜಿ ಅದಕ್ಕೆ ಕಾರಣವನ್ನೂ ನೀಡಿದೆ. ʼʼಈ ವಾಹನಗಳು ವಿನ್ಯಾಸ ಮತ್ತು ತಾಂತ್ರಿಕ / ಕಾರ್ಯತಂತ್ರಗಳ ವಿಚಾರದಲ್ಲಿ ಬಹಳ ವಿಶೇಷವಾಗಿವೆ ಮತ್ತು ಈ ಅಗತ್ಯಗಳನ್ನು ಪೂರೈಸುವ ವಾಹನಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಾಗುವುದಿಲ್ಲʼʼ ಎಂದು ಎಸ್‌ಪಿಜಿ ತಿಳಿಸಿದೆ.

ಸುಪ್ರೀಂ ಕೋರ್ಟ್‌ನ 2018ರ ಆದೇಶಕ್ಕೆ ಮೊದಲು ಎನ್‌ಜಿಟಿ 2015ರ ಏಪ್ರಿಲ್‌ನಲ್ಲಿ ದೆಹಲಿ ಎನ್‌ಸಿಆರ್‌ ರಸ್ತೆಗಳಲ್ಲಿ 10 ವರ್ಷಕ್ಕಿಂತ ಹಳೆಯದಾದ ಎಲ್ಲ ಡೀಸೆಲ್ ವಾಹನಗಳನ್ನು ಓಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. 10 ವರ್ಷಕ್ಕಿಂತ ಹಳೆಯದಾದ ಯಾವುದೇ ಡೀಸೆಲ್ ವಾಹನವನ್ನು ನೋಂದಾಯಿಸದಂತೆ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ದೆಹಲಿ ಎನ್‌ಸಿಆರ್‌ನಲ್ಲಿನ ಗಾಳಿಯ ಗುಣಮಟ್ಟವನ್ನು ಸುಧಾರಿಸುವ ಕ್ರಮವಾಗಿ ಎನ್‌ಜಿಟಿ ಮತ್ತು ಸುಪ್ರೀಂ ಕೋರ್ಟ್ ಈ ಆದೇಶಗಳನ್ನು ಹೊರಡಿಸಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆಟೋಮೊಬೈಲ್

Bajaj CNG Bike:‌ ಜೂನ್‌ನಲ್ಲಿ ಬಜಾಜ್ ಸಿಎನ್‌ಜಿ ಬೈಕ್ ಬಿಡುಗಡೆ; ಇದರ ಬಗ್ಗೆ ನಿಮಗೆಷ್ಟು ಗೊತ್ತು?

Bajaj CNG Bike:‌ ಇದು ಬಜಾಜ್‌ ಕಂಪನಿಯು ಬಿಡುಗಡೆ ಮಾಡುತ್ತಿರುವ ಮೊದಲ ಸಿಎನ್‌ಜಿ ಮೋಟಾರ್‌ಸೈಕಲ್. ಈ ಬೈಕ್ ಅನ್ನು ಕಂಪನಿ ʼಬ್ರೂಜರ್’ ಎಂದು ಕರೆದಿದೆ ಎಂದು ಗೊತ್ತಾಗಿದೆ.

VISTARANEWS.COM


on

Bajaj CNG Bike
Koo

ಬೆಂಗಳೂರು: ಬಜಾಜ್ ಆಟೋ ತನ್ನ ಮುಂಬರುವ ಸಿಎನ್‌ಜಿ ಚಾಲಿತ ಬೈಕನ್ನು (Bajaj CNG Bike) ಜೂನ್‌ನಲ್ಲಿ ಬಿಡುಗಡೆ ಮಾಡಲಿದೆ. ಸಿಎನ್‌ಜಿ ಬೈಕ್ ಬಿಡುಗಡೆಯನ್ನು ಜೂನ್‌ನಲ್ಲಿ ನಿಗದಿಪಡಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ರಾಜೀವ್ ಬಜಾಜ್ (Rajiv Bajaj) ಅವರ ಇತ್ತೀಚಿನ ಪ್ರಕಟಣೆಗಳು ಖಚಿತಪಡಿಸಿವೆ.

ಇದು ಬಜಾಜ್‌ ಕಂಪನಿಯು ಬಿಡುಗಡೆ ಮಾಡುತ್ತಿರುವ ಮೊದಲ ಸಿಎನ್‌ಜಿ ಮೋಟಾರ್‌ಸೈಕಲ್. ಈ ಬೈಕ್ ಅನ್ನು ಕಂಪನಿ ʼಬ್ರೂಜರ್’ ಎಂದು ಕರೆದಿದೆ ಎಂದು ಗೊತ್ತಾಗಿದೆ.

CNG ಟ್ಯಾಂಕ್

ಪರೀಕ್ಷಾರ್ಥ ವೀಕ್ಷಣೆಯ ಆಧಾರದ ಮೇಲೆ ಈ ಬೈಕ್‌ನ ಕೆಲವು ಫೀಚರ್‌ಗಳನ್ನು ಊಹಿಸಲಾಗಿದೆ. ಈ ಬೈಕ್‌ನಲ್ಲಿ ಸಿಎನ್‌ಜಿ ಸಿಲಿಂಡರ್‌ ಅಸಾಂಪ್ರದಾಯಿಕ ರೀತಿಯಲ್ಲಿ ಸಂಯೋಜನೆ ಆಗಿದೆ. ಇದು ಉದ್ದವಾದ, ಸಮತಟ್ಟಾದ ಸೀಟಿನ ಕೆಳಗೆ ಅಡ್ಡಲಾಗಿ ಸಂಯೋಜಿಸಲ್ಪಟ್ಟಿರಬಹುದು ಹಾಗೂ ಬೈಕ್‌ನ ರಚನೆಯಲ್ಲಿ ಹದವಾಗಿ ಮಿಶ್ರಗೊಂಡಿರಬಹುದು. ಈ ನವೀನ ವಿನ್ಯಾಸವು ಸೀಟಿಂಗ್‌ ವ್ಯವಸ್ಥೆಯನ್ನು ಉತ್ತಮಗೊಳಿಸುವುದು ಮಾತ್ರವಲ್ಲದೆ ಬೈಕ್‌ನ ಸಪೂರವಾದ ನೋಟಕ್ಕೆ ಕೊಡುಗೆ ನೀಡುತ್ತದೆ. ಇದಲ್ಲದೆ, ಶ್ರೇಣಿ ಮತ್ತು ಅನುಕೂಲದ ಸಮಸ್ಯೆಗಳನ್ನು ನಿಭಾಯಿಸಲು, ಬೈಕ್ ತುರ್ತು ಬಳಕೆಗಾಗಿ ಕಾಂಪ್ಯಾಕ್ಟ್ ಪೆಟ್ರೋಲ್ ಟ್ಯಾಂಕ್ ಅನ್ನು ಒಳಗೊಂಡಿರುತ್ತದೆ ಎಂದು ಹೇಳಲಾಗಿದೆ.

ವೈಶಿಷ್ಟ್ಯಗಳು

ಅದರ ಚಕ್ರದ ಗಾತ್ರ, ಡಿಸ್ಕ್ ಬ್ರೇಕ್ ಮತ್ತು ರೈಡರ್ ವ್ಯಾಪ್ತಿಯ ಪ್ರಯಾಣಿಕರ ವಿಭಾಗದಲ್ಲಿ ಗಮನ ಹರಿಸಿದರೆ, ಬಜಾಜ್ 100-160 ಸಿಸಿ ಶ್ರೇಣಿಯ ಖರೀದಿದಾರರನ್ನು ಗುರಿಯಾಗಿಸಿಕೊಂಡಿದೆ. ಎಲ್ಇಡಿ ದೀಪಗಳು, ಸಂಭವನೀಯ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟೆಲಿಸ್ಕೋಪಿಕ್ ಫೋರ್ಕ್, ಮೊನೊಶಾಕ್ ಸಸ್ಪೆನ್ಷನ್ ಮತ್ತು 17 ಇಂಚಿನ ಮಿಶ್ರಲೋಹದ ಚಕ್ರಗಳಂತಹ ವೈಶಿಷ್ಟ್ಯಗಳ ಸೇರ್ಪಡೆಯಾಗಿದೆ.

ಬ್ರೇಕಿಂಗ್ ಮತ್ತು ಸೇಫ್ಟಿ ಫೀಚರ್ಸ್‌

ಸುರಕ್ಷತೆಯ ದೃಷ್ಟಿಯಿಂದ, ಬಜಾಜ್ ಸಿಎನ್‌ಜಿ ಬೈಕು ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಹೊಂದಿದ್ದು, ಸಾಕಷ್ಟು ನಿಲುಗಡೆ ಶಕ್ತಿ ಮತ್ತು ನಿಯಂತ್ರಣವನ್ನು ಖಾತ್ರಿಪಡಿಸುತ್ತದೆ.

ಉದ್ಯಮದ ಒಳನೋಟಗಳು ಮತ್ತು ಊಹಾಪೋಹಗಳ ಆಧಾರದ ಮೇಲೆ ಹೊಸ ಮಾದರಿಯ ಬೈಕ್‌ನ ನಿರೀಕ್ಷಿತ ಬೆಲೆ ಅಂದಾಜು 80,000 ರೂ (ಎಕ್ಸ್ ಶೋ ರೂಂ) ಎಂದು ಊಹಿಸಲಾಗಿದೆ. ಅಂತಿಮ ಉತ್ಪನ್ನವನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ಮೊದಲು ಪೂರ್ವ-ಉತ್ಪಾದನಾ ಮಾದರಿಗಳು ಸಂಭಾವ್ಯ ಬದಲಾವಣೆಗಳಿಗೆ ಒಳಪಟ್ಟಿರುತ್ತವೆ ಎಂಬುದನ್ನು ನೆನಪಿನಲ್ಲಿಡುವುದು ಮುಖ್ಯ.

ಬಜಾಜ್ ತನ್ನ ಸಿಎನ್‌ಜಿ-ಚಾಲಿತ ಬೈಕ್‌ನ ಬಿಡುಗಡೆಗೆ ಸಜ್ಜಾಗುತ್ತಿದ್ದಂತೆ, ಮೋಟಾರ್‌ಸೈಕಲ್ ರೈಡರ್‌ಗಳಲ್ಲಿ ನಿರೀಕ್ಷೆ ಬೆಳೆಯುತ್ತಿದೆ. ಮೇಲೆ ಕೊಟ್ಟಿರುವ ವಿವರಗಳು ಆಗಾಗ ಕಂಪನಿಯು ನೀಡಿರುವ ಕೆಲವು ಮೂಲಭೂತ ಮಾಹಿತಿಗಳನ್ನು ಆಧರಿಸಿದೆ. ಬಿಡುಗಡೆಯ ತಿಂಗಳನ್ನು ಹೊರತುಪಡಿಸಿ ಬಜಾಜ್ ಇನ್ನೂ ಏನನ್ನೂ ಖಚಿತಪಡಿಸಿಲ್ಲ.

ಇದನ್ನೂ ಓದಿ: Bajaj Auto : ಮತ್ತೆ ರಸ್ತೆಗೆ ಇಳಿಯಲಿದೆ ಬಜಾಜ್ ಅವೆಂಜರ್ 220 ಸ್ಟ್ರೀಟ್

Continue Reading

ಪ್ರಮುಖ ಸುದ್ದಿ

Bajaj : ಜೂನ್​ನಲ್ಲಿ ಮಾರುಕಟ್ಟೆಗೆ ಇಳಿಯಲಿದೆ ಮೊಟ್ಟ ಮೊದಲ ಸಿಎನ್​ಜಿ ಬೈಕ್​

Bajaj : ಪರಿಸರ ಸ್ನೇಹಿ ಇಂಧನದ ಮೂಲಕ ಚಲಿಸುವ ಬೈಕ್ ಅನ್ನು ಮಾರುಕಟ್ಟೆಗೆ ತರಲು ಬಜಾಜ್ ಮುಂದಾಗಿದೆ.

VISTARANEWS.COM


on

Rajjiv Bajaj
Koo

ನವ ದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಸಿಎನ್​ಜಿ (CNG) ಇಂಧನ ಆಧಾರಿತ ತ್ರಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳು ಹೆಚ್ಚಾಗುತ್ತಿವೆ. ಹೆಚ್ಚು ಮೈಲೇಜ್ ಹಾಗೂ ಪರಿಸರ ಸ್ನೇಹಿ ಇಂಧನದ ಈ ವಾಹನಗಳಿಗೆ ಬೇಡಿಕೆಯೂ ಹೆಚ್ಚಾಗಿದೆ. ಇದೇ ನಿಟ್ಟಿನಲ್ಲಿ ಸಿಎನ್​ಜಿ ಬೈಕ್​​ಗಳನ್ನು ಮಾರುಕಟ್ಟೆಗೆ ಇಳಿಸಲು ಭಾರತದ ಮುಂಚೂಣಿ ದ್ವಿಚಕ್ರ ವಾಹನ ಕಂಪನಿಯಾಗಿರುವ ಬಜಾಜ್​ ಆಟೋ (Bajaj) ಮುಂದಾಗಿದೆ. ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಬಜಾಜ್ (Rajeev Bajaj) ಅವರು ಈ ಘೋಷಣೆಯನ್ನು ಮಾಡಿದ್ದಾರೆ. ಬೈಕ್​ನ ಮೊದಲ ಮಾದರಿ ಜೂನ್ ನಲ್ಲಿ ಮಾರುಕಟ್ಟೆಗೆ ಬರಲಿದೆ ಎಂದು ವರದಿಯಾಗಿದೆ.

ಮುಂದಿನ ಐದು ವರ್ಷಗಳಲ್ಲಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ಪ್ರಯತ್ನಗಳಲ್ಲಿ 5,000 ಕೋಟಿ ರೂ.ಗಳನ್ನು ಹೂಡಿಕೆ ಮಾಡುವ ಬಜಾಜ್ ಗ್ರೂಪ್​, ಆ ನಿಟ್ಟಿನಲ್ಲಿ ಸಿಎನ್​ಜಿ ಬೈಕ್​ಗಳನ್ನು ಮಾರುಕಟ್ಟೆಗೆ ಇಳಿಸಲಿದೆ.

ಮುಂಬರುವ ಬೈಕ್ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (ಸಿಎನ್ ಜಿ) ನಲ್ಲಿ ಕಾರ್ಯನಿರ್ವಹಿಸಲಿದ್ದು, ಪರಿಸರ ಪ್ರಜ್ಞೆಯುಳ್ಳ ಗ್ರಾಹಕರಿಗೆ ನೆರವಾಗಲಿದೆ. ಈ ಬೈಕ್​ಗಳು ಹೆಚ್ಚು ಮೈಲೇಜ್ ಕೂಡ ನೀಡುತ್ತದೆ. ಹೊಸ ಬೈಕ್ ಮೈಲೇಜ್ ಪ್ರಜ್ಞೆಯುಳ್ಳ ಸವಾರರನ್ನು ಆಕರ್ಷಿಸಲೂ ಸಾಧ್ಯವಿದೆ. ಬಜಾಜ್ ಈ ಬೈಕ್ ಅನ್ನು ವಿಭಿನ್ನ ಬ್ರಾಂಡ್ ಅಡಿಯಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ : Viral News : ರೈಲಿನಲ್ಲಿ ಹುಟ್ಟಿದ ಹೆಣ್ಣು ಮಗುವಿಗೆ ರೈಲಿನದ್ದೇ ಹೆಸರಿಟ್ಟರು!

ಸಿಎನ್ ಜಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಹೆಚ್ಚಿದ ಉತ್ಪಾದನಾ ವೆಚ್ಚ ಮತ್ತು ಪೆಟ್ರೋಲ್ ಮತ್ತು ಸಿಎನ್ ಜಿ ಇಂಧನ ಆಯ್ಕೆಗಳನ್ನು ಸಕ್ರಿಯಗೊಳಿಸುವ ವಿಶೇಷ ಟ್ಯಾಂಕ್ ಅಳವಡಿಸಬೇಕಾಗುತ್ತದೆ. ಹೀಗಾಗಿ ಸಿಎನ್ ಜಿ ಮೋಟಾರ್ ಸೈಕಲ್ ಗಳು ಸಾಂಪ್ರದಾಯಿಕ ಪೆಟ್ರೋಲ್ ಮಾದರಿಗಳಿಗೆ ಹೋಲಿಸಿದರೆ ಹೆಚ್ಚಿನ ಬೆಲೆ ಹೊಂದಿರುತ್ತವೆ ಎಂದು ನಿರೀಕ್ಷಿಸಲಾಗಿದೆ.

ಅರ್ಥಪೂರ್ಣ ಯೋಜನೆಗಳ ಜಾರಿಗೆ

ಬಜಾಜ್ ಫಿನ್ ಸರ್ವ್ ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಂಜೀವ್ ಬಜಾಜ್ ಮಾತನಾಡಿ, ಸಕಾರಾತ್ಮಕ ಸಾಮಾಜಿಕ ಪರಿಣಾಮವನ್ನು ಹೆಚ್ಚಿಸುವಲ್ಲಿ ಕೌಶಲ್ಯ ಅಭಿವೃದ್ಧಿಯ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದರು. ವೇಗವಾಗಿ ವಿಸ್ತರಿಸುತ್ತಿರುವ ಹಣಕಾಸು ಸೇವಾ ವಲಯದಲ್ಲಿ ಉದ್ಯೋಗಾವಕಾಶಗಳಿಗಾಗಿ ಯುವಕರನ್ನು ಸಿದ್ಧಪಡಿಸುವ ಬ್ಯಾಂಕಿಂಗ್, ಹಣಕಾಸು ಮತ್ತು ವಿಮೆಯಲ್ಲಿ ಪ್ರಮಾಣಪತ್ರ ಕಾರ್ಯಕ್ರಮ (ಸಿಪಿಬಿಎಫ್ಐ) ನಂತಹ ಉಪಕ್ರಮಗಳ ಯಶಸ್ಸನ್ನು ಅವರು ಎತ್ತಿ ತೋರಿಸಿದರು.

Continue Reading

ದೇಶ

​ ಕಾರನ್ನು ಹೆಲಿಕಾಪ್ಟರ್​ ಆಗಿ ಬದಲಾಯಿಸಿದ ಸಹೋದರರು; ಅರೆಸ್ಟ್​ ಮಾಡಿದ ಪೊಲೀಸರು! ಇಲ್ಲಿದೆ ವಿಡಿಯೊ

ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಸಹೋದರರು ‘ಹೆಲಿಕಾರ್’ ಗೆ ಬಣ್ಣ ಹಚ್ಚುವ ಮೊದಲು ಪೊಲೀಸರು ಅವರನ್ನು ಹಿಡಿದು ವಾಹನವನ್ನು ವಶಪಡಿಸಿಕೊಂಡಿದ್ದಾರೆ.

VISTARANEWS.COM


on

Maruti Wagon R
Koo

ಲಖನೌ: ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಇಬ್ಬರು ಸಹೋದರರು ಮಾರುತಿ ಸುಜುಕಿ ವ್ಯಾಗನ್ ಆರ್ ಕಾರನ್ನು (Wagon R Car) ಅನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿ ಸುದ್ದಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ಯೋಜನೆಯನ್ನು ಪೂರ್ಣಗೊಳಿಸಿ ಅದಕ್ಕೆ ಬಣ್ಣ ಹಚ್ಚುವ ಮೊದಲು ಪೊಲೀಸರು ಅವರನ್ನು ಹಿಡಿದು ವಾಹನವನ್ನು (Viral News) ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ವಾಹನದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದಕ್ಕೆ ನೆಟ್ಟಿಗರಿಂದ ಸಾಕಷ್ಟು ಕಾಮೆಂಟ್​ಗಳು ಬಂದಿವೆ.

ಪತ್ರಕರ್ತೆ ಪ್ರಿಯಾ ಸಿಂಗ್ ಹಿಂದಿಯಲ್ಲಿ ಶೀರ್ಷಿಕೆಯೊಂದಿಗೆ ಎಕ್ಸ್ ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. “ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ, ಇಬ್ಬರು ಸಹೋದರರು ಜುಗಾಡ್ ತಂತ್ರ ಬಳಸಿ ವ್ಯಾಗನ್ ಆರ್​ ಕಾರನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ್ದಾರೆ. ಪೊಲೀಸರು ಅವರನ್ನು ಹಿಡಿದು ಅದನ್ನು ವಶಪಡಿಸಿಕೊಂಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಹೆಲಿಕಾಪ್ಟರ್​ನ ರೋಟರ್ ಬ್ಲೇಡ್ ಅನ್ನು ಕಾರಿನ ಮೇಲ್ಛಾವಣಿಗೆ ವೆಲ್ಡ್ ಮಾಡಲಾಗಿದೆ ಮತ್ತು ಟೈಲ್ ರೋಟರ್ ಅನ್ನು ಕಾರಿನ ಬೂ ಟ್​ಗೆ ವೆಲ್ಡ್ ಮಾಡಿರುವುದು ವೀಡಿಯೊದಲ್ಲಿ ಕಾಣುತ್ತದೆ. ಅಂಬೇಡ್ಕರ್ ನಗರದ ಪೊಲೀಸ್ ಠಾಣೆಯ ಹೊರಗೆ ನಿಲ್ಲಿಸಿರುವ ವಾಹನದ ಸುತ್ತಲೂ ಜನರು ಸೇರುತ್ತಿದ್ದಾರೆ. ಹೀಗಾಗಿ ಅಲ್ಲಿಯೂ ಅದಕ್ಕೆ ಪೊಲೀಸರು ರಕ್ಷಣೆ ಕೊಡುವಂತಾಗಿದೆ.

ಇದನ್ನೂ ಓದಿ : Lok Sabha Election : ಶುಕ್ರವಾರ ಮತದಾನ ಬೇಡ, ಮುಸ್ಲಿಮರಿಗೆ ತೊಂದರೆಯಾಗುತ್ತದೆ; ಕಾಂಗ್ರೆಸ್​ನಿಂದ ಪತ್ರ

ವರದಿಗಳ ಪ್ರಕಾರ, ವಾಹನವು ಪೇಟಿಂಗ್​ಗಾಗಿ ಅಕ್ಬರ್​ಪುರಕ್ಕೆ ತೆರಳುತ್ತಿದ್ದಾಗ ಕೊಟ್ವಾಲಿ ಪ್ರದೇಶದಲ್ಲಿ ತಪಾಸಣೆ ಮಾಡುತ್ತಿದ್ದ ಪೊಲೀಸರು ಹಿಡಿದಿದ್ದಾರೆ. ಮಾರ್ಪಾಟು ಮಾಡಿರುವ ಕಾರನ್ನು ಬಸ್ ನಿಲ್ದಾಣದಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಿಂಗ್ ಮಾರ್ಚ್ 17 ರಂದು ಎಕ್ಸ್ ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅಂದಿನಿಂದ ಇದು 68,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಹೆಚ್ಚುವರಿಯಾಗಿ, ರಿಟ್ವೀಟ್ ಕೂಡ ಆಗಿದೆ. ಅನೇಕರು ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.

ಸೃಜನಶೀಲತೆಯನ್ನು ಗೌರವಿಸಿ


ನಾವು ಸೃಜನಶೀಲತೆಯನ್ನು ಗೌರವಿಸಬೇಕು. ಹೊಸ ಆವಿಷ್ಕಾರವು ಪ್ರಗತಿಯ ದ್ಯೋತಕ. ಸಮಾಜದ ಪ್ರತಿಯೊಂದು ಅಂಶದಲ್ಲೂ ವ್ಯಾಪ್ತಿ ಮೀರಿ ಸಾಗಬೇಕು. ಇಂಥವರನ್ನು ಗೌರವಿಸುವುದು ಮುಖ್ಯ ಎಂದು ಹೇಳಿದ್ದಾರೆ. ಇನ್ನೊಬ್ಬರು “ತುಂಬಾ ಆಸಕ್ತಿದಾಯಕ ಮತ್ತು ಅದ್ಭುತ. ನಂಬಲಾಗದ ಸಾಧನೆ ಎಂದು ಹೇಳಿದ್ದಾರೆ.

Continue Reading
Advertisement
narendra modi
ದೇಶ8 mins ago

ಮೋದಿ ಅವರ ಡೀಸೆಲ್ ಚಾಲಿತ ವಿಶೇಷ ವಾಹನಗಳ ನೋಂದಣಿ ವಿಸ್ತರಣೆ ತಿರಸ್ಕರಿಸಿದ ಎನ್‌ಜಿಟಿ; ಕಾರಣವೇನು?

Varun Gandhi
ಪ್ರಮುಖ ಸುದ್ದಿ30 mins ago

Varun Gandhi: ಸಂಸದ ಅಲ್ಲದಿದ್ದರೂ ನಿಮ್ಮ ಮಗ; ಜನಕ್ಕೆ ಟಿಕೆಟ್‌ ವಂಚಿತ ವರುಣ್‌ ಗಾಂಧಿ ಭಾವುಕ ಪತ್ರ!

supreme court CJI DY chandrachud
ಪ್ರಮುಖ ಸುದ್ದಿ38 mins ago

CJI DY Chandrachud: 600 ವಕೀಲರಿಂದ ಮುಖ್ಯ ನ್ಯಾಯಮೂರ್ತಿಗೆ ಪತ್ರ; ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ಬಗೆಗೆ ಕಳವಳ

40 per cent commission advertisement against BJP and Summons to CM Siddaramaiah and DCM DK Shivakumar
ರಾಜಕೀಯ43 mins ago

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು; ಸಿಎಂ, ಡಿಸಿಎಂಗೆ ಸಮನ್ಸ್‌

Murder case Family Dispute
ಬೆಂಗಳೂರು ಗ್ರಾಮಾಂತರ46 mins ago

Murder Case : ಮಚ್ಚಿನಿಂದ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ ಪತಿ

Bengaluru News air pressure pipe
ಬೆಂಗಳೂರು2 hours ago

Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20242 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Actor Darshan at Matinee Movie Team
ಸ್ಯಾಂಡಲ್ ವುಡ್2 hours ago

Actor Darshan: ಸತೀಶ್ ನೀನಾಸಂ-ರಚಿತಾ `ಮ್ಯಾಟ್ನಿ’ ಸಿನಿಮಾಗೆ ಡಿ ಬಾಸ್ ದರ್ಶನ್ ಸಾಥ್!

Drone Prathap prayag
ಸ್ಯಾಂಡಲ್ ವುಡ್2 hours ago

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Bhagwant Mann
ದೇಶ2 hours ago

Bhagwant Mann: 50ನೇ ವಯಸ್ಸಲ್ಲಿ ತಂದೆಯಾದ ಪಂಜಾಬ್‌ ಸಿಎಂ ಭಗವಂತ್ ಮಾನ್;!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20242 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20243 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ11 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌