This is how to maintain your vehicles for a safe journey during the rainy season Mansoon 2023 : ಮಳೆಗಾಲದ ಸೇಫ್​ ಜರ್ನಿಗೆ ನಿಮ್ಮ ವಾಹನಗಳನ್ನು ಈ ರೀತಿ ಮೇಂಟೇನ್​ ಮಾಡಿ - Vistara News

ಆಟೋಮೊಬೈಲ್

Mansoon 2023 : ಮಳೆಗಾಲದ ಸೇಫ್​ ಜರ್ನಿಗೆ ನಿಮ್ಮ ವಾಹನಗಳನ್ನು ಈ ರೀತಿ ಮೇಂಟೇನ್​ ಮಾಡಿ

ಮಳೆಗಾಲದಲ್ಲಿ ಕಾರನ್ನು ಹೇಗೆ ಇಟ್ಟುಕೊಳ್ಳಬೇಕು ಎಂಬುದು ವಿಷಯವಾಗಿದೆ. ಅಸಮರ್ಪಕ ನಿರ್ವಹಣೆಯಿಂದ ವಾಹನದ ಹಾಗೂ ನಿಮ್ಮ ಜೀವನದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಕಾರು ಸರಿಯಾಗಿ ಕೆಲಸ ಮಾಡಲು ಪ್ರಮಾಣಿತ ಕಾರ್ಯವಿಧಾನಗಳನ್ನು ಅನುಸರಿಸಲೇಬೇಕು.

VISTARANEWS.COM


on

Car Service Before Mansoon
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾನ್ಸೂನ್ ಶೀಘ್ರದಲ್ಲೇ ಭಾರತದಾದ್ಯಂತ ಆವರಿಸಲಿದೆ. ಬಳಿಕ ಎಲ್ಲಿ ನೋಡಿದರೂ ಮುಂಗಾರು ಮಳೆಯ ಹನಿಯ ಲೀಲೆ ಕಾಣಲಿದೆ. ನೀವೇನಾದರೂ ಕಾರು ಅಥವಾ ಇನ್ಯಾವುದಾದರೂ ವಾಹನದ ಮಾಲೀಕ ಅಥವಾ ಚಾಲಕರಾಗಿದ್ದರೆ ಮಳೆಗಾಲದಲ್ಲಿ ಕಾರಿನ ನಿರ್ವಹಣೆ ಹೇಗೆ ಎಂಬ ಚಿಂತೆ ಶುರುವಾಗಿರುತ್ತದೆ. ದೂರದ ಪ್ರಯಾಣವೇ ಆಗಲಿ ಸಿಟಿಯೊಳಗಿನ ಜರ್ನಿಯೇ ಆಗಿರಲಿ ಮಳೆಗಾಲದಲ್ಲಿ ವಾಹನ ಓಡಿಸುವಾಗ ಅಪಾಯ ಹೆಚ್ಚು. ಇಂಥ ಪರಿಸ್ಥಿತಿಗಳನ್ನು ತಪ್ಪಿಸಲು ಕೆಲವೊಂದು ಕನಿಷ್ಠ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅದರಲ್ಲಿ ಮೊದಲನೆಯದ್ದು ಮಳೆಗಾಲಕ್ಕೆ ಮೊದಲು ವಾಹನವನ್ನು ಪೂರ್ತಿಯಾಗಿ ಸರ್ವಿಸ್​ ಮಾಡಿಸುವುದು. ಹಾಗಾದರೆ ಮಾನ್ಸೂನ್ ಪ್ರಾರಂಭವಾಗುವ ಮೊದಲು ನೀವು ಪರಿಶೀಲಿಸಬೇಕಾದ ಅಥವಾ ಸರಿಪಡಿಸಬೇಕಾದ ಕೆಲವು ಪ್ರಮುಖ ಸಂಗತಿಗಳು ಈ ಕೆಳಗಿನಂತಿವೆ.

ಟೈರ್​ಗಳನ್ನು ಪರೀಕ್ಷಿಸಿ

ಟೈರ್​ಗಳ ಬಗ್ಗೆ ಕಾರಿನ ಮಾಲೀಕರು ನಿರ್ಲಕ್ಷ್ಯ ತಾಳುತ್ತಾರೆ. ಆದರೂ ಅವು ಬಹಳ ಮುಖ್ಯ ಮತ್ತು ಕಾರು ಚಾಲನೆ ಮಾಡುವ ವಿಧಾನದ ಮೇಲೆ ಪ್ರಮುಖ ಪರಿಣಾಮ ಬೀರುತ್ತವೆ. ಮಳೆಗಾಲದಲ್ಲಿ ಸವಾರಿ ಮಾಡುವಾಗ ಸೂಕ್ತ ಪ್ರಮಾಣದಲ್ಲಿ ಥ್ರೆಡ್​ ಹೊಂದಿರುವ ಟೈರ್​​ಗಳು ಇರಲೇಬೇಕು. ಒಣಗಿರುವ ರಸ್ತೆಗಳಿಗೆ ಹೋಲಿಸಿದರೆ ಒದ್ದೆಯಾದ ರಸ್ತೆಗಳಲ್ಲಿ ಜಾರುವಿಕೆ ಜಾಸ್ತಿ. ಸರಿಯಾದ ಥ್ರೆಡ್​ ಇಲ್ಲದಿದ್ದರೆ ಬ್ರೇಕ್​ ಹಿಡಿಯವ ವೇಳೆ ಜೋರಾಗಿ ತಿರುಗಿಸಿದಾಗ ಕಾರು ಜಾರಿಕೊಂಡು ಹೋಗಿ ಅಪಘಾತಕ್ಕೆ ಒಳಗಾಗಬಹುದು. ಉತ್ತಮ ಥ್ರೆಡ್​ ಇದ್ದರೆ ರಸ್ತೆಯ ಮೇಲೆ ನಿಮ್ಮ ಕಾರಿನ ಹಿಡಿತ ಹೆಚ್ಚಿರುತ್ತದೆ. ಇತ್ತೀಚಿನ ದಿನಗಳಲ್ಲಿ, ಹೆಚ್ಚಿನ ಟೈರ್​​ಗಳಲ್ಲಿ ಥ್ರೆಡ್​​ವೇರ್ ಇಂಡಿಕೇಟರ್ ಇರುತ್ತದೆ. ಥ್ರೆಡ್​ಗಳ ನಡುವೆ ಒಂದು ಸಣ್ಣ ರಬ್ಬರ್ ಬಾರ್ ಇಟ್ಟಿರುತ್ತಾರೆ . ಟೈರ್ ರಬ್ಬರ್ ಸವೆದು ಹೋದ ಬಳಿಕ ಇಂಡಿಕೇಟರ್ ಕೂಡ ತೆಳುವಾಗುತ್ತದೆ. ಇದು ಟೈರ್​ಗಳನ್ನು ಬದಲಾಯಿಸುವ ಸಮಯ. ಹೀಗಾಗಿ ಮಳೆಗಾಲಕ್ಕೆ ಮೊದಲು ಸವೆದ ಟೈರ್​ಗಳನ್ನು ಬದಲಾಯಿಸಲೇಬೇಕು.

ಬ್ಯಾಟರಿ ಚಾರ್ಜ್​ ಸರಿಯಾಗಿದೆಯಾ ಚೆಕ್​ ಮಾಡಿ

ಸರಿಯಾಗಿ ಕೆಲಸ ಮಾಡುವ ಬ್ಯಾಟರಿಯನ್ನು ಹೊಂದಿರುವುದು ವರ್ಷದುದ್ದಕ್ಕೂ ಅಗತ್ಯವೇ ಆಗಿರುತ್ತದೆ. ಆದರೂ ಇದು ಮಳೆಗಾಲದಲ್ಲಿ ಇನ್ನಷ್ಟು ಹೆಚ್ಚಿನ ಆದ್ಯತೆ ಪಡೆಯುತ್ತದೆ. ಮಳೆ ಮತ್ತು ಮೋಡ ಕವಿದ ವಾತಾವರಣದಿಂದಾಗಿ ಚಾಲಕನ ಗೋಚರತೆ ಕಡಿಮೆಯಾಗುತ್ತದೆ. ಹೀಗಾಗಿ ಇತರ ಸಮಯಕ್ಕಿಂಗ ಹೆಚ್ಚಾಗಿ ವೈಪರ್​ ಹಾಗೂ ಹೆಡ್​ಲೈಟ್​ ಸೇರಿದಂತೆ ಇತರ ಲೈಟ್​​ಗಳನ್ನು ಬಳಬೇಕಾಗುತ್ತದೆ. ಇದು ಬ್ಯಾಟರಿಯ ಮೇಲಿನ ಒತ್ತಡ ಹೆಚ್ಚಿಸುತ್ತದೆ. ಹೀಗಾಗಿ ಮಳೆಗಾಲಕ್ಕೆ ಮೊದಲು ಬ್ಯಾಟರಿ ಚಾರ್ಜಿಂಗ್​ ಸಾಮರ್ಥ್ಯ ಹಾಗೂ ಬಾಳಿಕೆಯನ್ನು ಪರೀಕ್ಷೆ ಮಾಡಿಕೊಳ್ಳಲೇಬೇಕು. ಸರಿಯಾಗಿರದಿದ್ದರೆ ಕಡ್ಡಾಯವಾಗಿ ಬದಲಾಯಿಸಬೇಕು.

ವೈರಿಂಗ್​ಗಳ ಪರೀಕ್ಷೆ ಮಾಡಿಸಿಕೊಳ್ಳಿ

ಮಳೆಗಾದಲ್ಲಿ ನಿಮ್ಮ ವಾಹದ ವೈರಿಂಗ್​​ಗಳ ಬಗ್ಗೆ ಹೆಚ್ಚಿನ ಗಮನ ಕೊಡಬೇಕು. ಅಸಮರ್ಪಕ ವೈರಿಂಗ್ ಅಥವಾ ಇನ್ಸುಲೇಷನ್ ಟೇಪ್​ ಜಾರಿ ಹೋಗಿರುವ ಸಾಧ್ಯತೆಗಳು ಇದ್ದರೆ ತಕ್ಷಣ ರಿಪೇರಿ ಮಾಡಿಸಬೇಕು. ವೈರ್​ಗಳ ತೆರೆದ ಭಾಗವು ನೀರಿನ ಸಂಪರ್ಕಕ್ಕೆ ಬಂದಾಗ ಶಾರ್ಟ್​ ಸರ್ಕೀಟ್​, ಶಾಕ್​ ಸೇರಿದಂತೆ ನಾನಾ ರೀತಿಯ ಅಪಾಯಗಳು ಉಂಟಾಗಬಹುದು. ಆದ್ದರಿಂದ ಎದ್ದು ಕಾಣುತ್ತಿರುವ ಕೇಬಲ್​ಗಳನ್ನು ರಿಪೇರಿ ಮಾಡಿಸಬೇಕು. ಆಫ್ಟರ್​ ಮಾರ್ಕೆಟ್​ ಫಿಟ್​ಮೆಂಟ್​​ಗಳಿದ್ದರೆ ವೈರ್​​ಗಳು ಹೊರಗೆ ಕಾಣಿಸದಂತೆ ಸರಿಪಡಿಸಿಕೊಳ್ಳಬೇಕು.

ಲೈಟ್​ಗಳ ರಿಪೇರಿ ಕಡ್ಡಾಯ ಮಾಡಿಸಿ

ಹೆಡ್ ಲೈಟ್ ಗಳು, ಟೈಲ್​ಲೈಟ್​​ಗಳು ಫಾಗ್ ಲೈಟ್​​​ಗಳು ಮತ್ತು ಟರ್ನ್ ಇಂಡಿಕೇಟರ್​​ಗಳು ಸೇರಿದಂತೆ ನಿಮ್ಮ ವಾಹನದ ಎಲ್ಲ ದೀಪಗಳು ಸರಿಯಾಗಿ ಕೆಲಸ ಮಾಡುತ್ತಿವೆಯೇ ಎಂದು ಮಳೆಗಾಲಕ್ಕೆ ಮೊದಲು ಪರೀಕ್ಷೆ ಮಾಡಿಸಿಕೊಳ್ಳಬೇಕು. ಇದು ಹವಾಮನಕ್ಕೆ ಸಂಬಂಧಿಸದ ವಿಚಾರವಾಗಿದ್ದರೂ ಮಳೆಗಾಲದಲ್ಲಿ ಇದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಭಾರಿ ಮಳೆ ಮತ್ತು ಮೋಡ ಕವಿದ ವಾತಾವರಣವು ಗೋಚರತೆಗೆ ತೊಂದರೆ ಮಾಡಿದರೆ, ಇತರ ವಾಹನಗಳ ಸವಾರರಿಗೆ ನಿಮ್ಮ ಇರುವಿಕ ಕಾಣಿಸಲು ದೀಪಗಳು ಸರಿಯಾಗಿ ಕೆಲಸ ಮಾಡಬೇಕಾಗುತ್ತದೆ.

ಇದನ್ನೂ ಓದಿ : Coastal Karnataka travel: ಮಳೆ ಬಂದಾಗ ಈ ಕರಾವಳಿ ತೀರದ ತಾಣಗಳಿಗೆ ನೀವು ಒಂದು ಟ್ರಿಪ್‌ ಹೋಗ್ಲೇಬೇಕು!

ಮಳೆಗಾಲಕ್ಕೆ ಮೊದಲು ಎಲ್ಲ ಲೈಟ್​ಗಳನ್ನು ಒಟ್ಟಿಗೆ ಆನ್​ ಮಾಡಿ. ಹೆಡ್​ಲೈಟ್​ ಸೇರಿದಂತೆ ಯಾವುದಾದರೂ ಲೈಟ್​​ಗಳು ಮಸುಕಾಗಿದೆ ಎಂದು ಅನಿಸಿದರೆ ಬಲ್ಟ್​ ಅಥವಾ ಲೈಟ್​ ಅನ್ನೇ ಬದಲಿಸಿ. ಲೈಟ್​​ಗಳನ್ನು ಏಕಕಾಲಕ್ಕೆ ಚಾಲನೆ ಮಾಡುವ ಮೂಲಕ ಬ್ಯಾಟರಿ ಲೈಫ್​ ಅನ್ನೂ ಪರೀಕ್ಷಿಸಬಹುದು. ಕೆಲವೊಂದು ಬಾರಿ ಲೈಟ್​​ನೊಳಗೆ ನೀರು ತುಂಬಿಕೊಳ್ಳುತ್ತದೆ. ಅಳವಡಿಕೆ ವೇಳೆ ಬಿರುಕ ಉಂಟಾಗಿದ್ದರೆ ಅಥವಾ ಕ್ಯಾಪ್​ ಸರಿಯಾಗಿ ಕೂತಿರದಿದ್ದರೆ ಇಂಥ ಸಮಸ್ಯೆ ಇರುತ್ತದೆ. ಹೀಗಾಗಿ ಮಳೆಗಾಲಕ್ಕೆ ಮೊದಲು ಇವೆಲ್ಲವೂ ರಿಪೇರಿ ಆಗಲೇಬೇಕು.

ಬ್ರೇಕ್​​​ ಪ್ಯಾಡ್​ಗಳು ಬದಲಿಸಿ

ಒದ್ದೆಯಾದ ರಸ್ತೆಗಳು ಕಾರಿನ ಬ್ರೇಕಿಂಗ್ ಅಂತರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಬ್ರೇಕ್​ಗಳು ಎಲ್ಲ ಋತುವಿನಲ್ಲಿಯೂ ಚೆನ್ನಾಗಿರಬೇಕು ಎಂಬುದು ನಿಯಮ. ಆದರೆ, ಮಳೆಗಾದಲ್ಲಿ ಇದರ ಅಗತ್ಯ ಇನ್ನಷ್ಟು ಹೆಚ್ಚು. ಬ್ರೇಕ್​ ಪ್ಯಾಡ್​​ಗಳು ಅಥವಾ ಶೂಗಳು ಸವೆದು ಹೋಗಿದ್ದರೆ ನಿರೀಕ್ಷಿತ ಅಂತರದಲ್ಲಿ ವಾಹನವನ್ನು ನಿಲ್ಲಿಸಲು ಸಾಧ್ಯವಿಲ್ಲ. ಅದೇ ರೀತಿ ಚಲನೆ ಏರುಪೇರಾಗಿ ಸ್ಕಿಡ್​ ಆಗುವ ಸಾಧ್ಯತೆಗಳೂ ಇರುತ್ತವೆ. ಹೀಗಾಗಿ ಮಳೆಗಾಲಕ್ಕೆ ಮೊದಲು ಬ್ರೇಕ್​ ಚೆನ್ನಾಗಿದೆಯೇ ಎಂದು ಪರೀಕ್ಷಿಸಿಕೊಳ್ಳಬೇಕು. ಖಾಲಿ ರಸ್ತೆಯಲ್ಲಿ ಒಂದು ಬಾರಿ ವೇಗವಾಗಿ ಕಾರು ಚಲಾಯಿಸಿ ಜೋರಾಗಿ ಬ್ರೇಕ್​ ಒತ್ತಿ ನೋಡಿ. ಬ್ರೇಕ್​ ಪೆಡಲ್​ ಒಳಕ್ಕೆ ಹೋಗುತ್ತಿದೆ ಎಂದಾದರೆ ಸಮಸ್ಯೆ ಇದೆ ಎಂದರ್ಥ. ನಿಮ್ಮ ವಾಹನದ ಬ್ರೇಕಿಂಗ್ ಸಿಸ್ಟಮ್ ಅನ್ನು ವೃತ್ತಿಪರರ ಬಳಿ ಮಳೆಗಾಲಕ್ಕೆ ಮೊದಲು ಪರಿಶೀಲಿಸಿ. ಬೇಗ ಹಾಳಾದ ಭಾಗಗಳನ್ನು ಬದಲಿಸಿ.

ವೈಪರ್​ಗಳು, ವಾಷರ್​​ಗಳು ಸರಿಯಾಗಿರಲಿ

ಮಾನ್ಸೂನ್​ ಬರುವ ಮೊದಲ ವಾಹನದ ವೈಪರ್​​ಗಳು ಮತ್ತು ವಾಷರ್ ವ್ಯವಸ್ಥೆಯನ್ನು ಪರೀಕ್ಷಿಸಬೇಕು. ಇವೆರಡನ್ನೂ ಮಳೆಗಾಲದಲ್ಲಿ ಆಗಾಗ ಬದಲಿಸಬೇಕಾಗುತ್ತದೆ. ಕನ್ನಡಿಗೆ ಸ್ವಲ್ಪ ನೀರು ಹಾಕಿ ವೈಪರ್​ ಚಾಲನೆ ಮಾಡಿ ನೋಡಿ. ವಿಂಡ್ ಸ್ಕ್ರೀನ್ ಮೇಲೆ ಯಾವುದೇ ಕೆಸರು ಅಥವಾ ನೀರಿನ ಸಾಲುಗಳನ್ನು ಒರೆಸುತ್ತಿಲ್ಲ ಎಂದಾದರೆ ವೈಪರ್​ ಬ್ಲೇಡ್​ ಕೆಟ್ಟು ಹೋಗಿದೆ ಎಂದರ್ಥ. ತಕ್ಷಣವೇ ಬದಲಿಸಿ. ಬೇಸಿಗೆಯ ಬಿಸಿಗೆ ವೈಪರ್​ ಬ್ಲೇಡ್​ನ ರಬ್ಬರ್​​ನಲ್ಲಿ ಬಿರುಕು ಬಿಟ್ಟಿರುತ್ತದೆ. ಇಂಥ ಬ್ಲೇಡ್​ಗಳು ಮಳೆಗಾಲದಲ್ಲಿ ಪರಿಣಾಮಕಾರಿಯಾಗಿರುವುದಿಲ್ಲ.

ವಾಷರ್​ಗಳು ವಿಂಡ್​ಶೀಲ್ಡ್​ ಗೆ ನೀರನ್ನು ಸರಿಯಾಗಿ ಸಿಂಪಡಿಸುತ್ತಿವೆ ಎಂದು ಖಚಿತಪಡಿಸಿಕೊಳ್ಳಿ. ಈ ವಾಷರ್​ಗಳ ತೂತಿನಲ್ಲಿ ಕೊಳೆ ನಿಂತು ಕಟ್ಟಿಕೊಂಡಿರುವ ಸಾಧ್ಯತೆಗಳಿರುತ್ತದೆ. ಹಾಗಿದ್ದರೆ ನೀರು ಸರಿಯಾಗಿ ಪಂಪ್ ಆಗುವುದಿಲ್ಲ. ಮಳೆಗಾಲಕ್ಕೆ ಮೊದಲು ಇದನ್ನೂ ಬದಲಿಸಬೇಕು ಹಾಗೂ ವಾಷರ್​ನ ನೀರಿನ ಮಟ್ಟವೂ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಿ..

ವಾಹನದಲ್ಲಿ ಸೋರಿಕೆ ಇದೆಯಾ ಪರೀಕ್ಷಿಸಿ

ಸನ್​​​ರೂಫ್ ಗಳು, ಕಿಟಕಿಗಳು ಅಥವಾ ವಿಂಡ್​​ಶೀಲ್ಡ್​​ನಂತಹ ಗಾಜಿನ ಭಾಗಗಳನ್ನು ವಾಹನಗಳಿಗೆ ಅಳವಡಿಸಲು ಸುತ್ತಲೂ ರಬ್ಬರ್​​ಗಳನ್ನು ಹಾಕಿರುತ್ತಾರೆ. ಬೇಸಿಗೆಯ ಬಿಸಿಗೆ ಇದು ಒಡೆದು ಹೋಗಿ ಮಳೆಗಾಲದಲ್ಲಿ ಸೋರಿಕೆಯಾಗಲು ಪ್ರಾರಂಭಿಸುವುದು ಅಸಾಮಾನ್ಯವೇನಲ್ಲ. ಹೀಗಾಗಿ ಮಳೆಗಾಲಕ್ಕೆ ಮೊದಲು ಸರ್ವಿಸ್​ ಮಾಡುವಾಗ ಈ ಭಾಗಗಳ ಬಗ್ಗೆ ಗಮನ ಇಡಿ.

ವಾಹನದ ಸುತ್ತಲೂ ಇರುವ ಡ್ರೈನೇಜ್​ ರಂಧ್ರಗಳು ಮುಚ್ಚಿಹೋಗಿರಬಹುದು. ಈ ಜಾಗದಲ್ಲಿ ನೀರು ಸಂಗ್ರಹವಾದರೆ ತುಕ್ಕು ಹಿಡಿಯಲು ಕಾರಣವಾಗಬಹುದು. ಸರ್ವಿಸ್ ಮಾಡಿಸುವ ಸಮಯದಲ್ಲಿ ಸೋರಿಕೆಯ ಮೂಲವನ್ನು ಆದಷ್ಟು ಬೇಗ ಗುರುತಿಸಿ ಅವುಗಳನ್ನು ಸರಿಪಡಿಸುವುದು ಒಳ್ಳೆಯದು.

ಕಿತ್ತು ಹೋಗಿದ್ದರೆ ಪೇಂಟಿಂಗ್ ಮಾಡಿ

ವಾಹನದ ಮೇಲೆ ನಿರಂತರವಾಗಿ ತೇವಾಂಶ ನಿಂತಿದ್ದರೆ ತುಕ್ಕು ಹಿಡಿಯಲು ಕಾರಣವಾಗುತ್ತದೆ. ಕಾರಿನ ಸುತ್ತಲಿನ ರಬ್ಬರ್ ಸೀಲ್​​ಗಲ್ಲಿ ಉಂಟಾಗುವ ಸೋರಿಕೆ ತುಕ್ಕು ಹಿಡಿಯುವ ಮೂಲ. ಪೇಂಟ್ ಕೋಟ್ ಹಾನಿಗೊಳಗಾದ ಸ್ಥಳಗಳಲ್ಲೂ ತುಕ್ಕು ಹಿಡಿಯಬಹುದು. ಇಂಥ ಜಾಗಗಳು ಇದ್ದರೆ ಮಳೆಗಾಲಕ್ಕೆ ಮೊದಲು ಬೇಗ ದುರಸ್ತಿ ಮಾಡುವುದು ಉತ್ತಮ. ನಿಮ್ಮ ಕಾರಿನ ಕೆಳಭಾಗವನ್ನು ಸ್ವಚ್ಛವಾಗಿ ಮತ್ತು ರಸ್ತೆಯ ಧೂಳು ಮತ್ತು ಧೂಳಿನಿಂದ ಮುಕ್ತವಾಗಿಡಬೇಕು. ಏಕೆಂದರೆ ಇವು ಚಾಸಿಸ್ ಸವೆತಕ್ಕೆ ಕಾರಣವಾಗಬಹುದು. ಕಾರು ತೊಳೆದ ನಂತ ಪಾಲಿಶ್ ಹಾಕಬೇಕು. ಇದು ನಿಮ್ಮ ಕಾರನ್ನು ಹೊಳೆಯುವ ಮತ್ತು ಹೊಸದಾಗಿ ಕಾಣುವಂತೆ ಮಾಡುತ್ತದೆ ಹಾಗೂ ತುಕ್ಕು ಹಿಡಿಯಂತೆ ನೋಡಿಕೊಳ್ಳುತ್ತದೆ.

ನಿಯಮಿತ ಕಡ್ಡಾಯ ಸರ್ವಿಸ್ ಮಾಡಿಸಿ

ನಿಮ್ಮ ಕಾರನ್ನು ಮಳೆಗಾಲಕ್ಕೆ ಮೊದಲು ಕಡ್ಡಾಯ ಸರ್ವಿಸ್ ಮಾಡಿಸಿ. ಮೇಲೆ ಪಟ್ಟಿ ಮಾಡಿರುವ ಸಮಸ್ಯೆಗಳನ್ನು ಸರ್ವಿಸ್​ ಸ್ಟೇಷನ್​ನಲ್ಲಿ ಪತ್ತೆ ಮಾಡಬಹುದು. ನಿಮ್ಮ ಕಣ್ಣಿಗೆ ಬೀಳದ ಅಥವಾ ಗುರುತಿಸಲ ಸಾಧ್ಯವಾಗದ ಸಮಸ್ಯೆಗಳು ಇಲ್ಲಿ ಗೋಚರವಾಗುತ್ತವೆ. ವೃತ್ತಿಪರವಾಗಿ ಕಾರನ್ನು ಮಳೆಗಾಲಕ್ಕೆ ಸಿದ್ಧಪಡಿಸಿಕೊಳ್ಳಬಹುದು. ಅಂತಿಮವಾಗಿ ಉತ್ತಮ ಗುಣಮಟ್ಟದ ಪಾಲಿಶ್​ ಹಾಗೂ ಅಂಡರ್​ಕೋಟ್​​ಗಳೂ ಸಿಗಬಹುದು.

ಈ ಎಲ್ಲ ಸ್ಪೇರ್​ಗಳನ್ನು ಜತೆಗಿಟ್ಟುಕೊಳ್ಳಿ

ಮಾನ್ಸೂನ್​ ಸಂದರ್ಭದಲ್ಲಿ ಜೋರು ಮಳೆ ಏಕಾಏಕಿ ಬಿಸಿಲು ಇಂಥ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಮಳೆಗಾಲದ ಪ್ರಯಾಣದ ವೇಳೆ ಕೆಲವೊಂದು ಸ್ಪೇರ್​ ಪಾರ್ಟ್​​ಗಳನ್ನು ಜತೆಗಿಟ್ಟುಕೊಳ್ಳುವುದು ಉತ್ತಮ. ವೈಪರ್ ಬ್ಲೇಡ್​ಗಳು ಮತ್ತು ಫ್ಯೂಸ್​ನಂಥ ಭಾಗಗಳು ಇಟ್ಟುಕೊಳ್ಳಿ. ರಸ್ತೆ ಬದಿ ನಿಲ್ಲಿಸುವಾಗ ರಿಫ್ಲೆಕ್ಟರ್​ಗಳನ್ನು ಇಡಲು ಅದನ್ನೂ ತೆಗೆದುಕೊಂಡು ಹೋಗಿ. ವಾಹನಕ್ಕೆ ಸಂಬಂಧಿಸಿದ್ದು ಅಲ್ಲವಾದರೂ ಬಟ್ಟೆಗಳು, ಹೆಚ್ಚುವರಿ ಶೂಗಳು, ಛತ್ರಿ / ರೇನ್ ಕೋಟ್ ಮತ್ತು ಟವೆಲ್​ಗಳನ್ನು ಜತೆಗಿಟ್ಟುಕೊಳ್ಳಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Car Care Tips : ನಿಮ್ಮ ಕಾರಿನ ಈ ಬಿಡಿಭಾಗಗಳಿಗೂ ಇವೆ ಎಕ್ಸ್​ಪೈರಿ ಡೇಟ್​​; ಅವುಗಳು ಯಾವವು ಎಂಬುದು ತಿಳಿದಿರಲಿ

Car Care Tips: ಕಾರು ಅಥವಾ ಇನ್ಯಾವುದೇ ವಾಹನವನ್ನು ಸರಿಯಾಗಿ ಮೆಂಟೇನ್​ ಅದು ಕೆಲಸ ಮಾಡುತ್ತಲೇ ಇರುತ್ತದೆ ಎಂಬುದು ಒಂದು ನಂಬಿಕೆ. ಆದರೆ ಅವಧಿ ಮುಗಿದ ಬಿಡಿಭಾಗಗಳನ್ನು ಹೊಂದಿರುವ ಕಾರನ್ನು ಓಡಿಸುವುದು ಖಂಡಿತವಾಗಿಯೂ ಅಪಾಯಕಾರಿ. ಹೀಗಾಗಿ ಬಿಡಿಭಾಗಗಳು ಏನೂ ಆಗಿಲ್ಲ. ಸರಿಪಡಿಸಬೇಡ ಎಂಬ ಮನಸ್ಥಿತಿಯಿಂದ ಹೊರಕ್ಕೆ ಬರಲೇಬೇಕು.

VISTARANEWS.COM


on

Car Care tips
Koo

ಬೆಂಗಳೂರು: ಕೆಲವರಿಗೆ ಈ ಅಭ್ಯಾಸ ಇಲ್ಲ ಹಾಗೂ ಇನ್ನೂ ಕೆಲವರು ಈ ವಿಷಯದ ಬಗ್ಗೆ ನಿಧಾನವಾಗಿ ಜಾಗೃತರಾಗುತ್ತಿದ್ದಾರೆ. ಅದೇನೆಂದರೆ ವಸ್ತುಗಳ ಎಕ್ಸ್​ಪೈರಿ ಡೇಟ್​ (Expiry Date) ಪರಿಶೀಲನೆ ಮಾಡುವುದು. ಅಂದರೆ ತಾವು ಖರೀದಿಸುವ ಯಾವುದೇ ವಸ್ತುವಿನ ಉತ್ಪಾದನಾ ಮತ್ತು ಮುಕ್ತಾಯ ದಿನಾಂಕವನ್ನು ಪರಿಶೀಲಿಸುವುದು. ಸಾಕಷ್ಟು ಮಂದಿ ಮನೆಗೆ ತರುವ ದೀನಸಿ ವಸ್ತುಗಳಿಗೆ ಮಾತ್ರ ಇದು ಸೀಮಿತ ಎಂದು ನಂಬಿ ದ್ದಾರೆ. ಆದರೆ, ಉತ್ಪಾದನಾ ಘಟಕವೊಂದರಲ್ಲಿ ತಯಾರಾಗುವ ಎಲ್ಲ ವಸ್ತುಗಳಿಗೂ ಎಕ್ಸ್​ಪೈರಿ ಡೇಟ್​ ಇರುತ್ತದೆ. ಹೀಗಾಗಿ ಈ ಸಲಹೆಯು ಕಾರಿನ ಬಿಡಿ ಭಾಗಗಳು ಮತ್ತು ಪರಿಕರಗಳಿಗೂ ಅನ್ವಯಿಸುತ್ತದೆ ಎಂದು ಮತ್ತೊಮ್ಮೆ ಹೇಳಬೇಕಾಗಿಲ್ಲ. ಆದರೆ, ಬಹುತೇಕ ಕಾರು ಮಾಲೀಕರು ಈ ಬಗ್ಗೆ ಜಾಗೃತವಾಗಿಲ್ಲ. ಕೆಟ್ಟು ಕಳಚಿ ಬಿದ್ದ ಮೇಲೆ ಮಾತ್ರ ಸರಿಪಡಿಸುತ್ತಾರೆ. (Car Care Tips) ಇದು ಸರಿಯಾದ ಅಭ್ಯಾಸವಲ್ಲ ಎಂಬುದು ಸತ್ಯ.

ಕಾರು ಅಥವಾ ಇನ್ಯಾವುದೇ ವಾಹನವನ್ನು ಸರಿಯಾಗಿ ಮೆಂಟೇನ್​ ಆದರೆ ಅದು ಕೆಲಸ ಮಾಡುತ್ತಲೇ ಇರುತ್ತದೆ ಎಂಬುದು ಒಂದು ನಂಬಿಕೆ. ಆದರೆ ಅವಧಿ ಮುಗಿದ ಬಿಡಿಭಾಗಗಳನ್ನು ಹೊಂದಿರುವ ಕಾರನ್ನು ಓಡಿಸುವುದು ಖಂಡಿತವಾಗಿಯೂ ಅಪಾಯಕಾರಿ. ಹೀಗಾಗಿ ‘ಬಿಡಿಭಾಗಗಳು ಏನೂ ಆಗಿಲ್ಲ. ಸರಿಪಡಿಸಬೇಡ’ ಎಂಬ ಮನಸ್ಥಿತಿಯಿಂದ ಹೊರಕ್ಕೆ ಬರಲೇಬೇಕು. ಯಾಕೆಂದರೆ ಒಂದು ಭಾಗಕ್ಕೆ ಆಗಿರುವ ಹಾನಿಯು ವಾಹನದ ಸಂಪೂರ್ಣ ದಕ್ಷತೆಯನ್ನು ಹಾಳು ಮಾಡುವ ಜತೆಗೆ ಪ್ರಯಾಣವನ್ನು ಅಪಾಯಕ್ಕೆ ತಳ್ಳಬಹುದು. ಹೀಗಾಗಿ ನಿಮ್ಮ ಕಾರಿನಲ್ಲಿ ಯಾವೆಲ್ಲ ವಸ್ತುಗಳನ್ನು ಅವಧಿ ಮುಗಿದ ತಕ್ಷಣ ಬದಲಾಯಿಸಬೇಕು ಎಂಬುದನ್ನು ಈ ಕೆಳಗೆ ತಿಳಿಸಿಕೊಡಲಾಗಿದೆ.

ಎಂಜಿನ್ ಆಯಿಲ್​

ಎಂಜಿನ್ ಆಯಿಲ್ ಎಂಜಿನ್​ ಒಳಗಿನ ಘರ್ಷಣೆಯನ್ನು ನಿಯಂತ್ರಿಸುವ ಬಹುಮುಖ್ಯ ದ್ರಾವಣ. 12ರಿಂದ 18 ತಿಂಗಳ ಒಳಗೆ ಎಂಜಿನ್ ಆಯಿಲ್ ಬದಲಾಯಿಸಬೇಕು ಹಾಗೂ ಬಳಸಲು ಶುರು ಮಾಡಿದ ಮೇಲೆ ಅದರ ಅವಧಿ ಮುಕ್ತಾಯಗೊಳ್ಳುತ್ತದೆ. ಅಥವಾ 10,000 ಕಿ.ಮೀ.ಗೆ ಬದಲಾವಣೆ ಮಾಡಲೇಬೇಕು. ಕೆಲವರು ಇದನ್ನು ನಿರ್ಲಕ್ಷ್ಯ ಮಾಡುತ್ತಾರೆ. ಸರ್ವಿಸ್​ ಮಾಡಿದಾಗ ಮಾಡಿದರಾಯ್ತು ಎಂದು ಅಂದುಕೊಳ್ಳುತ್ತಾರೆ. ಇದು ಎಂಜಿನ್​ ಒಳಗಿನ ಭಾಗಗಳ ಸವೆತ ಹಾಗೂ ಮುರಿತಕ್ಕೆ ಕಾರಣವಾಗುತ್ತದೆ.

ಬ್ರೇಕ್ ಆಯಿಲ್

ಕಾರಿನಲ್ಲಿ ಸುರಕ್ಷತೆ ಎಂದರೆ ಮೊದಲು ಬರುವುದು ಸೂಕ್ತವಾಗಿ ಕಾರ್ಯನಿರ್ವಹಿಸುವ ಬ್ರೇಕಿಂಗ್ ಸಿಸ್ಟಮ್​. ಬ್ರೇಕ್​ ವ್ಯವಸ್ಥೆಯಲ್ಲಿ ಬ್ರೇಕ್​ ಆಯಿಲ್​ ಕೆಲಸ ದೊಡ್ಡದು.. ಪ್ರತಿ 10,000 ಕಿ.ಮೀಗೆ ಬ್ರೇಕ್ ಆಯಿಲ್ ಬಾಳಿಕೆ ಮುಗಿಯುತ್ತದೆ. ಹೀಗಾಗಿ ಪ್ರತಿ ಮೂರು ವರ್ಷಗಳಿಗೊಮ್ಮೆ ಬ್ರೇಕ್ ಆಯಿಲ್ ಅನ್ನು ಸಂಪೂರ್ಣವಾಗಿ ಬದಲಾಯಿಸಬೇಕು. ಆಯಿಲ್ ದಪ್ಪವಾದರೆ ಬ್ರೇಕಿಂಗ್ ದಕ್ಷತೆ ಇಳಿಯುತ್ತದೆ.

ಎಸಿ ರೆಫ್ರಿಜರೇಟರ್ ರೀಫಿಲ್​

ಎಸಿ ರೆಫ್ರಿಜರೇಟರ್ ಗ್ಯಾಸ್​ ರಿಫಿಲ್ ಮಾಡುವ ಕೆಲಸವನ್ನು ಕಾಲಕಾಲಕ್ಕೆ ಮಾಡಬೇಕು. ಎಸಿ ವೆಂಟ್ ಗಳಿಂದ ಹೊರಬರುವ ಗಾಳಿಯು ಸಾಕಷ್ಟು ತಂಪಾಗಿಲ್ಲದಿದ್ದರೆ ವಾಹನದಲ್ಲಿನ ಹವಾನಿಯಂತ್ರಣ ವ್ಯವಸ್ಥೆ ಸರಿಯಿಲ್ಲ ಎಂದು ಅರ್ಥ. ಫಿಲ್ಟರ್ ಜತೆಗೆ ಎಸಿ ಗ್ಯಾಸ್​ ನ ಬಾಳಿಕೆಯೂ ಮುಗಿದಿದೆ ಎಂದರ್ಥ. ಹೀಗಾಗಿ ಅದನ್ನು ಅವಧಿ ಮುಗಿದಾಗ ಬದಲಾಯಿಸಬೇಕು.

ಟೈರ್ ಗಳು

ಕಾರನ್ನು ಓಡಿಸಿಲ್ಲ ಮತ್ತು ಸವೆದಿಲ್ಲ ಎಂದ ತಕ್ಷಣ ಕಾರಿನ ಟೈರಿನ ಬಾಳಿಕೆ ಮುಗಿದಿಲ್ಲ ಎಂದರ್ಥವಲ್ಲ. ಯಾಕೆಂದರೆ ಅದಕ್ಕೂ ಒಂದು ಎಕ್ಸ್​ಪಯರೀ ಡೇಟ್​ ಇದೆ. ಮೊದಲಾಗಿ 3 ಎಂಎಂಗಿಂತ ಕಡಿಮೆ ಥ್ರೆಡ್​ ಇದ್ದರೆ ಸವೆದಿದೆ ಎಂದರ್ಥ. ಆದರೆ, ಟೈರ್​ನ ಮೇಲೆ ಬರೆದಿರುವ ಎಕ್ಸ್​ಪಯರೀ ಡೇಟ್​ ಪರಿಶೀಲನೆ ಮಾಡಲೇಬೇಕು. ಹೊರ ಅಂಚಿ ಉತ್ಪಾದನಾ ವಾರ ಮತ್ತು ಉತ್ಪಾದನೆಯ ವರ್ಷವನ್ನು ಬರೆದಿರಲಾಗುತ್ತದೆ. ಉದಾಹರಣೆಗೆ ಡಾಟ್ ಸಂಖ್ಯೆ 5011 ಇದ್ದರೆ ಟೈರ್ ಅನ್ನು 2011 ರ 50 ನೇ ವಾರದಲ್ಲಿ ತಯಾರಿಸಲಾಗಿದೆ ಎಂದರ್ಥ.

ಕ್ಯಾಬಿನ್ ಏರ್ ಫಿಲ್ಟರ್

ಕ್ಯಾಬಿನ್ ಏರ್ ಫಿಲ್ಟರ್ ಕ್ಯಾಬಿನ್ ಏರ್ ಫಿಲ್ಟರ್ ಬಾಳಿಕೆ ಕಾರು ಚಾಲನೆ ಮಾಡುವ ಪ್ರದೇಶದ ಗಾಳಿಯ ಗುಣಮಟ್ಟ ಅವಲಂಬಿಸಿರುತ್ತದೆ. ಆದರೆ, ಕಾರನ್ನು 25,000 ಕಿ.ಮೀ ನಿಂದ 30,000 ಕಿ.ಮೀ ಓಡಿಸಿದ ನಂತರ ಅದನ್ನು ಬದಲಾಯಿಸಲೇಬೇಕು. ನೀವು ಡಿಫ್ರಾಸ್ಟ್ ಆನ್ ಮಾಡಿದಾಗ ಆದರೆ ಕ್ಯಾಬಿನ್ ನಲ್ಲಿ ಗಾಳಿಯ ಹರಿವು ತುಂಬಾ ದುರ್ಬಲವಾಗಿದ್ದರೆ ಬ್ಲೋವರ್ ಸ್ವಿಚ್ ಮೂಲಕ ಶಬ್ದ ಹೆಚ್ಚಾಗಿದ್ದರೆ ಫಿಲ್ಟರ್ ಬಾಳಿಕೆ ಮುಗಿದಿದೆ ಎಂದರ್ಥ.

ಏರ್ ಬ್ಯಾಗ್ ಗಳು

ಏರ್ ಬ್ಯಾಗ್ ಗಳು ಮತ್ತು ಸೀಟ್ ಟೈಟರ್ ಗಳ ಬಾಳಿಕ 10 ವರ್ಷಕ್ಕೆ ಮುಗಿಯುತ್ತದೆ. ಅದಕ್ಕಿಂತ ಹೆಚ್ಚಾಗಿ ಬೆಲ್ಟ್ ಹರಿದಿದ್ದರೆ ತಕ್ಷಣ ಬದಲಾಯಿಸಬೇಕಾಗುತ್ತದೆ.

ಪ್ರಥಮ ಚಿಕಿತ್ಸಾ ಕಿಟ್

ಪ್ರಥಮ ಚಿಕಿತ್ಸಾ ಕಿಟ್ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಕಾರುಗಳಲ್ಲಿ ಇರುತ್ತವೆ. ಅದರು ಅಗತ್ಯ ಕೂಡ. ಆದರೆ, ಅದರಲ್ಲಿರುವ ಕೆಲವು ಮುಲಾಮುಗಳು ಮತ್ತು ಅನೇಕ ರೀತಿಯ ಡ್ರೆಸ್ಸಿಂಗ್ ವಸ್ತುಗಳು ಮುಕ್ತಾಯ ದಿನಾಂಕಗಳನ್ನು ಹೊಂದಿರುತ್ತವೆ. ಆದರೆ ಹೆಚ್ಚಿನ ಕಿಟ್​ಗಳು ಉತ್ಪಾದನೆಯ ದಿನಾಂಕದಿಂದ 3 ರಿಂದ 5 ವರ್ಷಗಳ ಜೀವಿತಾವಧಿ ಹೊಂದಿರುತ್ತವೆ.

ಇದನ್ನೂ ಓದಿ: Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

ಟೈಮಿಂಗ್ ಬೆಲ್ಟ್

ಇದು ಎಂಜಿನ್ ಒಳಗಿನ ಸಾಧನ. ಟೈಮಿಂಗ್ ಬೆಲ್ಟ್ ಬದಲಾಯಿಸುವ ಅವಧಿಯ ಅಂತರವು ಕಂಪನಿ ಮತ್ತು ಕಾರು ಮಾದರಿಯಿಂದ ಬದಲಾಗುತ್ತದೆ. ಸಾಮಾನ್ಯವಾಗಿ ಇದನ್ನು 60,000 ಮತ್ತು 80,000 ಕಿಲೋಮೀಟರ್ ನಡುವೆ ಬದಲಾಯಿಸಬೇಕು. ಕಂಪನಿ ಜತೆ ಈ ಬಗ್ಗೆ ಚರ್ಚೆ ನಡೆಸಬೇಕು. ದೋಷಯುಕ್ತ ಬೆಲ್ಟ್ ಅನ್ನು ಬಳಸಿದರೆ ಅದು ಕಾಲಾನಂತರದಲ್ಲಿ ಎಂಜಿನ್ ಹಾಳಾಗಲು ಕಾರಣವಾಗಬಹುದು.

Continue Reading

ಆಟೋಮೊಬೈಲ್

Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

Mahindra XUV 3XO: ಎಕ್ಸ್​ಯುವಿ 3 ಎಕ್ಸ್ ಒ ದೇಶಾದ್ಯಂತ ಗ್ರಾಹಕರ ಮನ ಗೆದ್ದಿದೆ. ಮೊದಲ 10 ನಿಮಿಷಗಳಲ್ಲಿ 27000 ಕ್ಕೂ ಹೆಚ್ಚು ಬುಕಿಂಗ್ ಗಳನ್ನು ದಾಖಲಿಸಿದೆ. ಇದು ಮಹೀಂದ್ರಾ ಕಂಪನಿಯು ಹೊಸ ಎಸ್ ಯುವಿ ಕಡೆಗೆ ಹೊಸ ಆಕರ್ಷಣೆಯನ್ನು ಪ್ರದರ್ಶಿಸಿದೆ

VISTARANEWS.COM


on

XVU300
Koo

ನವದೆಹಲಿ: ಭಾರತದ ಮುಂಚೂಣಿ ಎಸ್​ಯುವಿ (Sport Utility Vehicle) ತಯಾರಕ ಕಂಪನಿಯಾದ ಮಹೀಂದ್ರಾ ಆ್ಯಂಡ್​ ಮಹೀಂದ್ರಾ ಲಿಮಿಟೆಡ್ ಇತ್ತೀಚೆಗೆ ಬಿಡುಗಡೆ ಮಾಡಿದ ಕಾಂಪ್ಯಾಕ್ಟ್ ಎಸ್​​ಯುವಿ ಕಾರಾಗಿರುವ ಎಕ್ಸ್​ಯುವಿ 3ಎಕ್ಸ್ (Mahindra XUV 3XO) ಕಾರು ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಮೇ 15ರಂದು ಬುಕಿಂಗ್ ಆರಂಭಗೊಂಡ ಕೇವಲ ಒಂದು ಗಂಟೆಯಲ್ಲಿ (60 ನಿಮಿಷ) 50 ಸಾವಿರ ಬುಕಿಂಗ್​ ಪಡೆದುಕೊಂಡಿದೆ. ಈ ಮೂಲಕ ಬಿಡುಗಡೆಗೊಂಡು ಬುಕಿಂಗ್ ಆರಂಭಗೊಂಡ ಒಂದೇ ಗಂಟೆಯಲ್ಲಿ 50 ಸಾವಿರ ಬುಕಿಂಗ್​ ಪಡೆದ ವಿನೂತನ ಸಾಧನೆ ಮಾಡಿದೆ.

ಎಕ್ಸ್​ಯುವಿ 3 ಎಕ್ಸ್ ಒ ದೇಶಾದ್ಯಂತ ಗ್ರಾಹಕರ ಮನ ಗೆದ್ದಿದೆ. ಮೊದಲ 10 ನಿಮಿಷಗಳಲ್ಲಿ 27000 ಕ್ಕೂ ಹೆಚ್ಚು ಬುಕಿಂಗ್ ಗಳನ್ನು ದಾಖಲಿಸಿದೆ. ಇದು ಮಹೀಂದ್ರಾ ಕಂಪನಿಯು ಹೊಸ ಎಸ್ ಯುವಿ ಕಡೆಗೆ ಹೊಸ ಆಕರ್ಷಣೆಯನ್ನು ಪ್ರದರ್ಶಿಸಿದೆ. ಈ ಮೈಲಿಗಲ್ಲು ಎಕ್ಸ್ ಯುವಿ 3 ಎಕ್ಸ್ ಒನ ಅತ್ಯುತ್ತಮ ವಿನ್ಯಾಸ, ಪ್ರೀಮಿಯಂ ಒಳಾಂಗಣ, ಆರಾಮದಾಯಕ ಸವಾರಿ, ಅತ್ಯಾಧುನಿಕ ತಂತ್ರಜ್ಞಾನ, ರೋಮಾಂಚಕ ಕಾರ್ಯಕ್ಷಮತೆ ಮತ್ತು ಸಾಟಿಯಿಲ್ಲದ ಸುರಕ್ಷತೆಯ ಕಡೆಗೆ ಗ್ರಾಹಕರ ಗಮನವಾಗಿದೆ.

ಈ ಕುರಿತು ಮಹೀಂದ್ರಾ ಆ್ಯಂಡ್​ ಮಹಿಂದ್ರಾ ಲಿಮಿಟೆಡ್ ನ ಆಟೋಮೋಟಿವ್ ವಿಭಾಗದ ಅಧ್ಯಕ್ಷ ವೀಜಯ್ ನಕ್ರಾ ಮಾತನಾಡಿ, ಎಕ್ಸ್ ಯುವಿ 3 ಎಕ್ಸ್ ಒ ಬಿಡುಗಡೆಯಾದ ಸ್ವಲ್ಪ ಸಮಯದಲ್ಲೇ 50,000 ಬುಕಿಂಗ್ ಗಳನ್ನು ಸ್ವೀಕರಿಸಿದೆ ಎಂದು ಘೋಷಿಸಲು ನಾವು ಹೆಮ್ಮೆಪಡುತ್ತೇವೆ. ಇದು ನಮ್ಮ ಗ್ರಾಹಕರು ನಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿ. ಇಂತಹ ಅಗಾಧ ಮಾರುಕಟ್ಟೆ ಪ್ರತಿಕ್ರಿಯೆಯು ನಾವೀನ್ಯತೆ ಮತ್ತು ನಿರೀಕ್ಷೆಗಳನ್ನು ಮೀರಿ ಮೌಲ್ಯವನ್ನು ತಲುಪಿಸುವ ನಮ್ಮ ಬದ್ಧತೆಗೆ ಪೂರಕ. ಎಕ್ಸ್ ಯುವಿ 3 ಎಕ್ಸ್ ಸಾರಿಗೆ ವ್ಯವಸ್ಥೆಯ ಭವಿಷ್ಯದತ್ತ ಒಂದು ಮಹತ್ವದ ಹೆಜ್ಜೆ. ಇದನ್ನು ಗ್ರಾಹಕರಿಗೆ ಬೇಕಾದ ಹಾಗೆ ಮತ್ತು ಇನ್ನಷ್ಟು ಸೌಲಭ್ಯಗಳನ್ನ ಕೊಡುವುದಕ್ಕೆ ವಿನ್ಯಾಸಗೊಳಿಸಲಾಗಿದೆ. ಈ ನಂಬಲಾಗದ ಬೇಡಿಕೆಯನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಮತ್ತು ನಮ್ಮ ಗ್ರಾಹಕರಿಗೆ ಎಕ್ಸ್ ಯುವಿ 3 ಎಕ್ಸ್ ಒ ಅನ್ನು ತಲುಪಿಸಲು ಪ್ರಾರಂಭಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

ಎಕ್ಸ್ ಯುವಿ 3 ಎಕ್ಸ್ ಒ ವಿತರಣೆಯು ಮೇ 26, 2024 ರಂದು ಪ್ರಾರಂಭವಾಗಲಿದೆ. ಉತ್ಸಾಹವನ್ನು ನಿರೀಕ್ಷಿಸಿ ನಾವು ಈಗಾಗಲೇ 10000 ಕ್ಕೂ ಹೆಚ್ಚು ಯುನಿಟ್ ಗಳನ್ನು ಉತ್ಪಾದಿಸಿದ್ದೇವೆ. ಗ್ರಾಹಕರ ಅನುಭವದ ಮೇಲೆ ಹೆಚ್ಚಿನ ಗಮನ ಹರಿಸುತ್ತೇವೆ. ಸಮಯೋಚಿತ ವಿತರಣೆಗ ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಮಹೀಂದ್ರಾ ತೆಗೆದುಕೊಳ್ಳುತ್ತದೆ. ಎಕ್ಸ್ ಯುವಿ 3 ಎಕ್ಸ್ ಒ ಗಾಗಿ ಬುಕಿಂಗ್ ಆನ್ ಲೈನ್ ನಲ್ಲಿ ಮತ್ತು ಎಲ್ಲಾ ಅಧಿಕೃತ ಮಹೀಂದ್ರಾ ಡೀಲರ್ ಶಿಪ್ ಗಳಲ್ಲಿ ತೆರೆದಿರುತ್ತದೆ.

Continue Reading

ಪ್ರಮುಖ ಸುದ್ದಿ

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

BMW X3: ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಮ್​​ ದರದಂತೆ ರೂ. 74,90,000ಗಳಾಗಿದೆ. ಇದು ಲಾಂಚಿಂಗ್ ಬೆಲೆಯಾಗಿದ್ದು ಮುಂದೆ ಬೆಲೆಯಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ. ಬಿಎಂಡಬ್ಲ್ಯು ಎಕ್ಸ್ 3 ಎಕ್ಸ್ ಡ್ರೈವ್ 20 ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಕಾರು ಬ್ರೂಕ್ಲಿನ್ ಗ್ರೇ ಮತ್ತು ಕಾರ್ಬನ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯವಿದೆ.

VISTARANEWS.COM


on

BMW X3 xDrive20d
Koo

ಬೆಂಗಳೂರು: ಬಿಎಂಡಬ್ಲ್ಯು ಎಕ್ಸ್3 (BMW X3) ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲಾಗಿದೆ. ಯಶಸ್ವಿ ಎಸ್​​ಯುವಿಯಾದ ಬಿಎಂಡಬ್ಲ್ಯು ಎಕ್ಸ್ 3 ನ ಈ ವಿಶೇಷ ಆವೃತ್ತಿಯು ಇಂದಿನಿಂದ ಎಲ್ಲಾ ಬಿಎಂಡಬ್ಲ್ಯು ಇಂಡಿಯಾ ಡೀಲರ್ ಶಿಪ್ ಗಳು ಮತ್ತು ಬಿಎಂಡಬ್ಲ್ಯು ಆನ್ ಲೈನ್ ಶಾಪ್ ಗಳಲ್ಲಿ ಡೀಸೆಲ್ ವೇರಿಯೆಂಟ್​ಗಳಲ್ಲಿ ಲಭ್ಯವಿದೆ.

ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಮ್​​ ದರದಂತೆ ರೂ. 74,90,000ಗಳಾಗಿದೆ. ಇದು ಲಾಂಚಿಂಗ್ ಬೆಲೆಯಾಗಿದ್ದು ಮುಂದೆ ಬೆಲೆಯಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ. ಬಿಎಂಡಬ್ಲ್ಯು ಎಕ್ಸ್ 3 ಎಕ್ಸ್ ಡ್ರೈವ್ 20 ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಕಾರು ಬ್ರೂಕ್ಲಿನ್ ಗ್ರೇ ಮತ್ತು ಕಾರ್ಬನ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯವಿದೆ. ಲೆದರ್ ವೆರ್ನಾಸ್ಕಾ ಅಪ್​ಹೋಲ್​​ಸ್ಟೆರಿಯನ್ನು ಸ್ಟ್ಯಾಂಡರ್ಡ್ ಆಗಿ ಹೊಂದಿದೆ. ಮೋಚಾ & ಬ್ಲ್ಯಾಕ್ ವಿತ್ ಕಾಂಟ್ರಾಸ್ಟ್ ಸ್ಟಿಚಿಂಗ್ ಕೂಡ ಹೊಂದಿರುತ್ತದೆ.

ಬಿಎಂಡಬ್ಲ್ಯು ಇಂಡಿಯಾ ಫೈನಾನ್ಷಿಯಲ್ ಸರ್ವೀಸಸ್ ಗೆ ಧನ್ಯವಾದಗಳು, ಕಸ್ಟಮೈಸ್ ಮಾಡಿದ ಮತ್ತು ಹೊಂದಿಕೊಳ್ಳುವ ಹಣಕಾಸು ಪರಿಹಾರಗಳನ್ನು ವೈಯಕ್ತಿಕ ಅವಶ್ಯಕತೆಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದೆ. ಬಿಎಂಡಬ್ಲ್ಯು 360 ಫೈನಾನ್ಸ್ ಪ್ಲಾನ್ ನೊಂದಿಗೆ ಗ್ರಾಹಕರು ಉತ್ತಮ ಮೌಲ್ಯ ಮತ್ತು ಸಂಪೂರ್ಣ ಮನಸ್ಸಿನ ಶಾಂತಿಯನ್ನು ಆನಂದಿಸುತ್ತಾರೆ. ಇದು ಆಕರ್ಷಕ ಮಾಸಿಕ ಕಂತುಗಳು, ಐದು ವರ್ಷಗಳವರೆಗೆ ಭರವಸೆಯ ಬೈ-ಬ್ಯಾಕ್ ಆಯ್ಕೆ, ಹೊಂದಿಕೊಳ್ಳುವ ಟರ್ಮ್-ಎಂಡ್ ಅವಕಾಶಗಳು ಮತ್ತು ಹೊಸ ಬಿಎಂಡಬ್ಲ್ಯುಗೆ ಅಪ್ಗ್ರೇಡ್ ಮಾಡುವ ಆಯ್ಕೆಗಳನ್ನು ಒಳಗೊಂಡಿದೆ.

ಟರ್ಬೊ ಎಂಜಿನ್​

ಬಿಎಂಡಬ್ಲ್ಯು ಟ್ವಿನ್ ಪವರ್ ಟರ್ಬೊ ತಂತ್ರಜ್ಞಾನ ಹೊಂದಿದೆ. ಡೀಸೆಲ್ ಎಂಜಿನ್ ಗರಿಷ್ಠ ದಕ್ಷತೆಯನ್ನು ಹೊಂದಿರುತ್ತದೆ. ಕಡಿಮೆ ಎಂಜಿನ್ ವೇಗದಲ್ಲಿಯೂ ಆಟೊಮ್ಯಾಟಿಕ್​ ಪ್ರತಿಕ್ರಿಯೆ ನೀಡುತ್ತದೆ. ಎರಡು ಲೀಟರ್ ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ 1,750 – 2,500 ಆರ್ ಪಿಎಂನಲ್ಲಿ 140 ಕಿಲೋವ್ಯಾಟ್ / 190 ಬಿಹೆಚ್ ಪಿ ಮತ್ತು 400 ಎನ್ಎಂ ಗರಿಷ್ಠ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರು 0-100 ಕಿ.ಮೀ ವೇಗವನ್ನು ಕೇವಲ 7.9 ಸೆಕೆಂಡುಗಳಲ್ಲಿ ಕ್ರಮಿಸುತ್ತದೆ.

ಇದನ್ನೂ ಓದಿ: Startup Investment : ಡ್ರಿಂಕ್​​ಪ್ರೈಮ್​ ವಿಸ್ತರಣಾ ಯೋಜನೆಯಲ್ಲಿ ಎಸ್​​ಐಡಿಬಿಐ ಹಣಕಾಸು ಸಂಸ್ಥೆಯ ಹೂಡಿಕೆ

ಅತ್ಯುತ್ತಮ ದರ್ಜೆಯ ತಂತ್ರಜ್ಞಾನವು ಆಟೋಮೋಟಿವ್ ಕ್ಷೇತ್ರದಲ್ಲಿ ಹೊಸತನದ ಗಡಿಯನ್ನು ಮೀರುತ್ತದೆ. ಬಿಎಂಡಬ್ಲ್ಯು ಗೆಸ್ಚರ್ ಕಂಟ್ರೋಲ್ ಮತ್ತು ವೈರ್ ಲೆಸ್ ಆ್ಯಪಲ್​ ಕಾರ್ ಪ್ಲೇಯರ್​ ಮತ್ತು ಆಂಡ್ರಾಯ್ಡ್ ಆಟೋ ವ್ಯವಸ್ಥೆಯನ್ನು ಇದು ಹೊಂದಿದೆ. ಬಿಎಂಡಬ್ಲ್ಯು ಆಪರೇಟಿಂಗ್ ಸಿಸ್ಟಮ್ 7.0 ನಲ್ಲಿ ಚಾಲನೆಯಲ್ಲಿರುವ ಬಿಎಂಡಬ್ಲ್ಯು ಲೈವ್ ಕಾಕ್ ಪಿಟ್ ಪ್ರೊಫೆಷನಲ್ 3 ಡಿ ನ್ಯಾವಿಗೇಷನ್ ಅನ್ನು ಒಳಗೊಂಡಿದೆ. ಸ್ಟೀರಿಂಗ್ ವೀಲ್​​ ಹಿಂದೆ ಹೆಚ್ಚಿನ ರೆಸಲ್ಯೂಶನ್ 12.3 ಸ್ಕ್ರೀನ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಕಂಟ್ರೋಲ್ ಡಿಸ್ ಪ್ಲೇಯನ್ನು ಹೊಂದಿದೆ. ಇದು ಬಿಎಂಡಬ್ಲ್ಯು ಗೆಸ್ಚರ್ ಕಂಟ್ರೋಲ್ ನೊಂದಿಗೆ ಕೆಲಸ ಮಾಡುತ್ತದೆ. ಇದು ಹಲವಾರು ಕಾರ್ಯಗಳ ನಿಯಂತ್ರಣಕ್ಕಾಗಿ ಆರು ಪೂರ್ವನಿರ್ಧರಿತ ಕೈ ಚಲನೆಗಳನ್ನು ಹೊಂದಿದೆ. ಬಿಎಂಡಬ್ಲ್ಯು ಹೆಡ್-ಅಪ್ ಡಿಸ್​ಪ್ಲೇ ಮಾಹಿತಿಯನ್ನೂ ಹೊಂದಿತ್ತು.

ತಾಂತ್ರಿಕ ಮಾಹಿತಿಗಳು ಹೀಗಿವೆ

ಎಂಟು-ಸ್ಪೀಡ್ ಆಟೋಮ್ಯಾಟಿಕ್ ಸ್ಟೆಪ್ಟ್ರಾನಿಕ್ ಸ್ಪೋರ್ಟ್ ಟ್ರಾನ್ಸ್ ಮಿಷನ್ ನಯವಾದ ಗೇರ್​ಶಿಫ್ಟ್​ ಕಾರ್ಯವನ್ನು ಮಾಡುತ್ತದೆ. ಯಾವುದೇ ಸಮಯದಲ್ಲಿ, ಯಾವುದೇ ಗೇರ್​ನಲ್ಲಿ ಟ್ರಾನ್ಸ್​​​ಮಿಷನ್​​ ಎಂಜಿನ್​ನೊಂದಿಗೆ ಸಂಪೂರ್ಣ ಹೊಂದಾಣಿಕೆಯಾಗುತ್ತದೆ. ಇದು ಅದರ ಪೂರ್ಣ ಶಕ್ತಿ ಮತ್ತು ದಕ್ಷತೆ ಪಡೆಯಲು ನೆರವು ನೀಡುತ್ತದೆ.

ಅಡಾಪ್ಟಿವ್ ಸಸ್ಪೆಂಷನ್ ತನ್ನ ವೈಯಕ್ತಿಕ ಎಲೆಕ್ಟ್ರಾನಿಕ್ ನಿಯಂತ್ರಿತ ಡ್ಯಾಂಪರ್ ಗಳೊಂದಿಗೆ ರಸ್ತೆ ಪರಿಸ್ಥಿತಿಗಳು ಮತ್ತು ವೈಯಕ್ತಿಕ ಚಾಲನಾ ಶೈಲಿ ಎರಡಕ್ಕೂ ಹೊಂದಿಕೊಳ್ಳುತ್ತದೆ, ಆ ಮೂಲಕ ಅಸಾಧಾರಣ ನಿಖರತೆ ಕೊಡುತ್ತದೆ. ಡ್ರೈವ್ ಮತ್ತು ಹ್ಯಾಂಡ್ಲಿಂಗ್ ಡೈನಾಮಿಕ್ಸ್ ಅನ್ನು ಹೆಚ್ಚಿಸುತ್ತದೆ. ಇದು ಸ್ಟೀರಿಂಗ್ ವೀಲ್ ಪ್ಯಾಡಲ್ ಶಿಫ್ಟರ್ ಗಳು, ಬ್ರೇಕಿಂಗ್ ಫಂಕ್ಷನ್ ನೊಂದಿಗೆ ಕ್ರೂಸ್ ಕಂಟ್ರೋಲ್ ಮತ್ತು ಎಲೆಕ್ಟ್ರಾನಿಕ್ ಡಿಫರೆನ್ಷಿಯಲ್ ಲಾಕ್. ಆಟೋಮ್ಯಾಟಿಕ್ ಡಿಫರೆನ್ಷಿಯಲ್ ಬ್ರೇಕ್ (ಎಡಿಬಿ) ಗಳೊಂದಿಗೆ ಲಭ್ಯವಿದೆ. ಬಿಎಂಡಬ್ಲ್ಯು ಪರ್ಫಾಮೆನ್ಸ್ ಕಂಟ್ರೋಲ್ ಬ್ರೇಕಿಂಗ್ ಮೂಲಕ ಕಾರಿನ ಸ್ಥಿರತೆ ಹೆಚ್ಚಿಸುತ್ತದೆ.

ಇಂಟಲಿಜೆಂಟ್​ ಆಲ್-ವೀಲ್ ಡ್ರೈವ್ ವ್ಯವಸ್ಥೆಯಾದ ಬಿಎಂಡಬ್ಲ್ಯು ಎಕ್ಸ್ ಡ್ರೈವ್, ಚಾಲನಾ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತದೆ. ಎಲೆಕ್ಟ್ರಾನಿಕ್ ನಿಯಂತ್ರಿತ ಸ್ವಯಂಚಾಲಿತ ಡಿಫರೆನ್ಷಿಯಲ್ ಬ್ರೇಕ್ ಗಳು / ಲಾಕ್ ಗಳು (ಎಡಿಬಿ-ಎಕ್ಸ್), ಡೈನಾಮಿಕ್ ಟ್ರಾಕ್ಷನ್ ಕಂಟ್ರೊಲ್​ ಕೂಡ ಹೊಂದಿದೆ.

ಡ್ರೈವ್ ಅಸಿಸ್ಟ್​ ವ್ಯವಸ್ಥೆ

ಚಾಲಕ ಸಹಾಯ ವ್ಯವಸ್ಥೆಗಳ ಹರಡುವಿಕೆ ಹಿಂದೆಂದಿಗಿಂತಲೂ ಹೆಚ್ಚು ವ್ಯಾಪಕ. ಬಿಎಂಡಬ್ಲ್ಯು ಡ್ರೈವಿಂಗ್ ಅಸಿಸ್ಟೆಂಟ್ ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಅನ್ನು ಒದಗಿಸುತ್ತದೆ. ಲೇನ್ ಬದಲಾವಣೆಗಳು, ಮುಂಭಾಗದ ಘರ್ಷಣೆಗಳು ಮತ್ತು ಹಿಂಭಾಗದ ಘರ್ಷಣೆಗಳ ಬಗ್ಗೆ ಚಾಲಕನನ್ನು ಎಚ್ಚರಿಸಲು ಸಹಾಯ ಮಾಡುತ್ತದೆ. 360 ಕ್ಯಾಮೆರಾ ಹೊಂದಿರುವ ಪಾರ್ಕಿಂಗ್ ಅಸಿಸ್ಟೆಂಟ್ ಪ್ಲಸ್ ವೇಗವರ್ಧನೆ, ಬ್ರೇಕಿಂಗ್ ಮತ್ತು ಅತ್ಯುತ್ತಮ ಪಾರ್ಕಿಂಗ್ ವ್ಯವಸ್ಥೆ ಹೊಂದಿದೆ.

ಬಿಎಂಡಬ್ಲ್ಯು ಎಫಿಶಿಯೆಂಟ್ ಡೈನಾಮಿಕ್ಸ್ ನಲ್ಲಿ 8-ಸ್ಪೀಡ್ ಸ್ಟೆಪ್ಟ್ರಾನಿಕ್ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್, ಆಟೋ ಸ್ಟಾರ್ಟ್-ಸ್ಟಾಪ್, ಬ್ರೇಕ್-ಎನರ್ಜಿ ರಿಜನರೇಷನ್, ಆಕ್ಟಿವ್ ಏರ್ ಸ್ಟ್ರೀಮ್ ಕಿಡ್ನಿ ಗ್ರಿಲ್, ಎಲೆಕ್ಟ್ರಾನಿಕ್ ಪವರ್ ಸ್ಟೀರಿಂಗ್, 50:50 ತೂಕ ಡಿಸ್ಟ್ರಿಬ್ಯೂಷನ್​, ಕಂಫರ್ಟ್ / ಇಕೋ ಪ್ರೊ / ಸ್ಪೋರ್ಟ್ ನಂತಹ ವಿವಿಧ ಡ್ರೈವಿಂಗ್ ಮೋಡ್ ಗಳಿವೆ. ಡ್ರೈವಿಂಗ್ ಎಕ್ಸ್ ಪೀರಿಯನ್ಸ್ ಕಂಟ್ರೋಲ್ ಸ್ವಿಚ್ ಮತ್ತು ಇತರ ಅನೇಕ ನವೀನ ತಂತ್ರಜ್ಞಾನಗಳನ್ನು ಒಳಗೊಂಡಿದೆ.

ಸುರಕ್ಷತಾ ಫೀಚರ್​ಗಳು

ಬಿಎಂಡಬ್ಲ್ಯು ಸುರಕ್ಷತಾ ತಂತ್ರಜ್ಞಾನಗಳಲ್ಲಿ ಆರು ಏರ್ ಬ್ಯಾಗ್ ಗಳು, ಬ್ರೇಕ್ ಅಸಿಸ್ಟ್ ನೊಂದಿಗೆ ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್ (ಎಬಿಎಸ್), ಅಟೆನ್ಸಿನೆಸ್ ಅಸಿಸ್ಟೆನ್ಸ್, ಡೈನಾಮಿಕ್ ಟ್ರಾಕ್ಷನ್ ಕಂಟ್ರೋಲ್ (ಡಿಟಿಸಿ), ಕಾರ್ನರಿಂಗ್ ಬ್ರೇಕ್ ಕಂಟ್ರೋಲ್ (ಸಿಬಿಸಿ), ಆಟೋ ಹೋಲ್ಡ್ ನೊಂದಿಗೆ ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಸೈಡ್-ಇಂಪ್ಯಾಕ್ಟ್ ಪ್ರೊಟೆಕ್ಷನ್, ಎಲೆಕ್ಟ್ರಾನಿಕ್ ವೆಹಿಕಲ್ ಇಮೊಬೈಲೈಜರ್ ಮತ್ತು ಕ್ರ್ಯಾಶ್ ಸೆನ್ಸಾರ್, ಡೈನಾಮಿಕ್ ಬ್ರೇಕಿಂಗ್ ಲೈಟ್ ಗಳು, ಐಎಸ್ ಒಫಿಕ್ಸ್ ಚೈಲ್ಡ್ ಸೀಟ್ ಮೌಂಟಿಂಗ್ ಸೇರಿದಂತೆ ಹಲವಾರು ಸುರಕ್ಷತಾ ಫೀಚರ್​ಗಳಿವೆ.

Continue Reading

ಆಟೋಮೊಬೈಲ್

Maruti Suzuki: ಶೀಘ್ರ ರಸ್ತೆಗಿಳಿಯಲಿದೆ ಬರೋಬ್ಬರಿ 26 ಕಿ.ಮೀ ಮೈಲೇಜ್ ಕೊಡುವ ಮಾರುತಿ ಸ್ವಿಫ್ಟ್​; ಶುರುವಾಗಿದೆ ಬುಕಿಂಗ್​

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಮಾರುತಿ ಸುಜುಕಿಯ (Maruti Suzuki) 4ನೇ-ಜನ್ ಸ್ವಿಫ್ಟ್‌ ಗಾಗಿ 1,450 ಕೋಟಿ ರೂ. ಹೂಡಿಕೆ ಮಾಡಿದ್ದು,2030 ರ ವೇಳೆಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಉತ್ಪಾದನೆಯು 10 ಲಕ್ಷ ವರೆಗೆ ಬೆಳೆಯುವ ನಿರೀಕ್ಷೆ ಇದೆ. ಹೊಸ ಸ್ವಿಫ್ಟ್ ಹೊಸ ಎಂಜಿನ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬರಲಿದೆ.

VISTARANEWS.COM


on

By

Maruti Suzuki
Koo

ನವದೆಹಲಿ: ಮಾರುತಿ ಸುಜುಕಿ (Maruti Suzuki) ಇಂಡಿಯಾ ಲಿಮಿಟೆಡ್ (MSIL) ತನ್ನ ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ (hatchback) ಸ್ವಿಫ್ಟ್‌ನ ಹೊಸ-ಪೀಳಿಗೆ ಮಾದರಿಯನ್ನು (4th-gen Swift) ಶೀಘ್ರ ಮಾರುಕಟ್ಟೆಗೆ ಇಳಿಸಲಿದೆ. ಕಾರನ್ನು ಈಗಾಗಲೇ ಕಂಪನಿ ಪರಿಚಯಿಸಿದ್ದು ಬುಕಿಂಗ್ ಕೂಡ ಆರಂಭಗೊಂಡಿದೆ. ಈ ಕಾರಿನ ಮಾಡೆಲ್​ಗಾಗಿ ಕಂಪನಿಯು ಸುಮಾರು 1,450 ಕೋಟಿ ರೂ. ಹೂಡಿಕೆ ಮಾಡಿದ್ದು, ಇದು ಹೊಸ Z-ಸರಣಿ 1.2L ಎಂಜಿನ್‌ ಜತೆಗೆ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸ್ವಿಫ್ಟ್ ನ 4 ನೇ ಪೀಳಿಗೆಯ ಬೆಲೆಗಳು 6.49 ಲಕ್ಷ ರೂ. ನಿಂದ ಪ್ರಾರಂಭವಾಗಿ 9.64 ಲಕ್ಷ ರೂ. ವರೆಗೆ ಇರುತ್ತದೆ. ಇದು ಎಕ್ಸ್​ ಶೋರೂಮ್​ ಬೆಲೆಯಾಗಿದೆ.

ಆರು ಏರ್‌ಬ್ಯಾಗ್‌ಗಳು, ಎಲ್ಲಾ ಆಸನಗಳಿಗೆ 3 ಪಾಯಿಂಟ್ ಸೀಟ್‌ಬೆಲ್ಟ್‌ಗಳೊಂದಿಗೆ ರಿಮೈಂಡರ್‌ಗಳು, ಎಬಿಎಸ್ ಸೇರಿದಂತೆ ಹಲವು ಸುರಕ್ಷತಾ ಫೀಚರ್​ಗಳು ಹೊಚ್ಚ ಹೊಸ ಜೆನ್​ 4 ಸ್ವಿಫ್ಟ್​ನಲ್ಲಿ ಇರಲಿವೆ. ಪ್ರತಿ ಲೀಟರ್‌ಗೆ 25.75 ಕಿ.ಮೀ. ವರೆಗೆ ಮೈಲೇಜ್​ ನೀಡುವ ಮೂಲಕ ಸ್ವಿಫ್ಟ್​ ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗುವುದು ಖಾತರಿ. ಹೊಸ ಮಾದರಿಯ ಸ್ವಿಫ್ಟ್​​ನ ಬುಕಿಂಗ್ ಮೇ 1ರಿಂದ ಆರಂಭಗೊಂಡಿದ್ದು, 11,000 ರೂಪಾಯಿ ಟೋಕನ್ ಮೊತ್ತ ನೀಡಿ ಕಾಯ್ದಿರಿಸಬಹುದು.

ಹ್ಯಾಚ್​ ಬ್ಯಾಕ್​ ಸೆಗ್ಮೆಂಟ್​ನಲ್ಲಿ ಸ್ವಿಫ್ಟ್​ ಪ್ರಾಬಲ್ಯ

19 ವರ್ಷಗಳಿಂದ ಭಾರತದ ರಸ್ತೆಗಳಲ್ಲಿ ಓಡುತ್ತಿರುವ ಸಿಫ್ಟ್ ಕಾರಿನ ಮೊದಲ ಮಾಡೆಲ್​ ಅನ್ನು 2005 ರಲ್ಲಿ ಬಿಡುಗಡೆ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ 29 ಲಕ್ಷ ಸ್ವಿಫ್ಟ್ ಮಾರಾಟ ಮಾಡಿರುವುದಾಗಿ ಕಂಪನಿ ಹೇಳಿಕೊಂಡಿದೆ. 2011 ರಲ್ಲಿ 2 ನೇ ಪೀಳಿಗೆಯ ಸ್ವಿಫ್ಟ್​ ಪರಿಚಯಿಸಲಾಯಿತು. ನಂತರ 2018 ರಲ್ಲಿ 3ನೇ ಪೀಳಿಗೆಯನ್ನು ರಸ್ತೆಗೆ ಇಳಿಯಿತು. ಸ್ವಿಫ್ಟ್ ತನ್ನ ಮೊದಲ 10 ಲಕ್ಷ ಯೂನಿಟ್​ಗಳ ಮಾರಾಟವನ್ನು 2013 ರಲ್ಲಿ ಪೂರ್ಣಗೊಳಿಸಿತ್ತು ಮತ್ತು 2018 ರ ವೇಳೆಗೆ 20 ಲಕ್ಷದ ಗಡಿ ದಾಟಿ ಈ ಸೆಗ್ಮೆಂಟ್​ನಲ್ಲಿ ಪ್ರಾಬಲ್ಯ ಸಾಧಿಸಿತು.

2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಆದ್ದರಿಂದ ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಆರ್ಥಿಕ ಚಟುವಟಿಕೆ ಹೆಚ್ಚಾಗಲಿದ್ದು ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಬೇಡಿಕೆ ಉಂಟಾಗುವ ಸಾಧ್ಯತೆ ಇದೆ. ಭಾರತದಲ್ಲಿ ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಕಾರಿನ ಮಾಲೀಕತ್ವ ಹೆಚ್ಚಾದಂತೆ ಹ್ಯಾಚ್‌ಬ್ಯಾಕ್ ವಿಭಾಗವು ಗ್ರಾಹಕರಿಗೆ ಹೆಚ್ಚು ಪ್ರಿಯವಾಗಲಿದೆ. ಹೀಗಾಗಿ ಹ್ಯಾಚ್‌ಬ್ಯಾಕ್ ಕಾರುಗಳ ಅಭಿವೃದ್ಧಿಯನ್ನು ವಿಸ್ತರಿಸುತ್ತಿದ್ದೇವೆ ಎಂದು ಮಾರುತಿ ಸುಜುಕಿಯ ಎಂಡಿ ಮತ್ತು ಸಿಇಒ ಹಿಸಾಶಿ ಟೇಕುಚಿ ಹೇಳಿದರು.


ಸುಜುಕಿಗೆ ಪ್ರಮುಖ ಮಾರುಕಟ್ಟೆ

ಭಾರತವು ಸುಜುಕಿಗೆ ಪ್ರಮುಖ ಮಾರುಕಟ್ಟೆಯಾಗಿದೆ. ವೈವಿಧ್ಯಮಯ ಗ್ರಾಹಕರ ಬೇಡಿಕೆಗಳನ್ನು ಪೂರೈಸುವುದು ಮುಖ್ಯವಾಗಿರುವುದರಿಂದ ಹ್ಯಾಚ್​ಬ್ಯಅಕ್​ ವಿಭಾಗದ ಮೇಲೆ ನಮ್ಮ ಹೆಚ್ಚಿನ ಗಮನವಿದೆ. ಹೊಸ ಸ್ವಿಫ್ಟ್ ಈ ವಿಭಾಗದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಪಡೆಯಲಿದೆ ಎಂದು ಅವರು ತಿಳಿಸಿದರು.

ಸ್ಪರ್ಧೆಯಲ್ಲಿ ಹಲವು ಕಾರುಗಳು

ಹ್ಯಾಚ್‌ಬ್ಯಾಕ್ ಸ್ವಿಫ್ಟ್‌ ಗೆ ಪ್ರತಿ ಸ್ಪರ್ಧಿಯಾಗಿ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಟಾಟಾ ಆಲ್ಟ್ರೋಜ್ . ಹ್ಯುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ಸೇರಿದಂತೆ ಮೈಕ್ರೋ ಎಸ್‌ಯುವಿಗಳು ಮಾರುಕಟ್ಟೆಯಲ್ಲಿವೆ. ಇವುಗಳು ಇದೇ ಶ್ರೇಣಿಯಲ್ಲಿನ ಬೆಲೆಯನ್ನು ಹೊಂದಿವೆ.

ಕಳೆದ 3- 4 ವರ್ಷಗಳಲ್ಲಿ ಒಟ್ಟು ಪ್ರಯಾಣಿಕ ವಾಹನ ಮಾರಾಟ ಶೇಕಡಾ 47 ರಷ್ಟಿದ್ದು, ಇದರಲ್ಲಿ ಸಣ್ಣ ಕಾರು ಮಾರುಕಟ್ಟೆಯ ಪಾಲು 2024ನೇ ಹಣಕಾಸು ವರ್ಷದಲ್ಲಿ ಸುಮಾರು ಶೇ. 28ರಷ್ಟಾಗಿದೆ. ಮಾರುತಿ ಸುಜುಕಿ ಹ್ಯಾಚ್‌ಬ್ಯಾಕ್ ವಿಭಾಗದ ಬೇಡಿಕೆ 2026 ಅಂತ್ಯ ಅಥವಾ 2027 ರ ವೇಳೆಗೆ ಪುನರುಜ್ಜೀವನಗೊಳ್ಳುವ ನಿರೀಕ್ಷೆಯಿದೆ ಎಂದು ಹಿಸಾಶಿ ಟೇಕುಚಿ ಹೇಳಿದರು.

ಇದನ್ನೂ ಓದಿ: Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಬೆಳವಣಿಗೆ ಭಾರತದಲ್ಲಿನ ಒಟ್ಟು ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಶೇ. 28ರಷ್ಟು ಪಾಲನ್ನು ಪಡೆದುಕೊಳ್ಳುತ್ತವೆ. ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಪಾರ್ಥೋ ಬ್ಯಾನರ್ಜಿ ಪ್ರಕಾರ, ಪ್ರಸ್ತುತ ಒಟ್ಟು 7 ಲಕ್ಷ ವಾರ್ಷಿಕ ಉತ್ಪಾದನೆ ಹೊಂದಿರುವ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗವು 2030 ರ ವೇಳೆಗೆ 10 ಲಕ್ಷಕ್ಕೆ ಬೆಳೆಯಬಹುದು. ಮಾರುತಿ ಪ್ರಸ್ತುತ ಸ್ವಿಫ್ಟ್ ಮತ್ತು ಬಲೆನೊದಂತಹ ಮಾದರಿಗಳೊಂದಿಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಶೇ. 62ರಷ್ಟು ಪಾಲನ್ನು ಹೊಂದಿದೆ.

Continue Reading
Advertisement
Pakistan
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ3 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ3 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ3 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ3 hours ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು3 hours ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ3 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

BJP district president N S Hegde pressmeet in Yallapur
ಉತ್ತರ ಕನ್ನಡ3 hours ago

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

IPL 2024
ಪ್ರಮುಖ ಸುದ್ದಿ3 hours ago

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

Lady Constable
ದೇಶ5 hours ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ10 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ12 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು16 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌