Chandrayaan -3 : ಚಂದ್ರನ ಮೇಲೆ ಇಳಿದ ಬಳಿಕ ಲ್ಯಾಂಡರ್​ ಮತ್ತು ರೋವರ್​ ಏನು ಮಾಡಲಿವೆ? - Vistara News

ತಂತ್ರಜ್ಞಾನ

Chandrayaan -3 : ಚಂದ್ರನ ಮೇಲೆ ಇಳಿದ ಬಳಿಕ ಲ್ಯಾಂಡರ್​ ಮತ್ತು ರೋವರ್​ ಏನು ಮಾಡಲಿವೆ?

ಚಂದ್ರನ ಮೇಲ್ಮೈನಲ್ಲಿ (Chandrayaan -3) ಇಳಿದ ತಕ್ಷಣ ಲ್ಯಾಂಡರ್ ಮತ್ತು ರೋವರ್​ ನಿರಂತರವಾಗಿ ಸಂಶೋಧನಾ ಕೆಲಸದಲ್ಲಿ ಪಾಲ್ಗೊಳ್ಳಲಿವೆ.

VISTARANEWS.COM


on

Chandrayaaan 3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಚಂದ್ರಯಾನ -3 ಲ್ಯಾಂಡರ್​ ಮಾಡ್ಯೂಲ್ ಬುಧವಾರ ಸಂಜೆಯ 6 ಗಂಟೆ 04 ನಿಮಿಷಕ್ಕೆ ಚಂದ್ರನ ಮೇಲ್ಮೈಯಲ್ಲಿ ಭಾರತೀಯರ ಸಂಭ್ರಮ ಮುಗಿಲುಮುಟ್ಟಲಿದೆ. ಆದರೆ ಇಸ್ರೋಗೆ ಪಾಲಿಗೆ ಅದು ಅರ್ಧ ಕೆಲಸ ಮುಗಿದಂತೆ! ಯಾಕೆಂದರೆ ಇಸ್ರೋ ವಿಜ್ಞಾನಿಗಳ ನಿಜವಾದ ಕೆಲಸವು ಸಾಫ್ಟ್​ ಲ್ಯಾಂಡ್​ ಆದ ಬಳಿ ಪ್ರಾರಂಭವಾಗುತ್ತದೆ. ಏಕೆಂದರೆ ಅವರು ಒಂದು ಚಂದ್ರ ದಿನದಲ್ಲಿ (14 ಭೂಮಿಯ ದಿನಗಳು) ಲ್ಯಾಂಡರ್ ಒಳಗಿರುವ ರೋವರ್​ ಕಾರ್ಯಾಚರಣೆಯಲ್ಲಿ ನಡೆಸಬೇಕಾಗುತ್ತದೆ. ಲ್ಯಾಂಡರ್ (3 ಪೇಲೋಡ್​) ಮತ್ತು ರೋವರ್ (2 ಪೇಲೋಡ್​) ನಲ್ಲಿರುವ ಐದು ವೈಜ್ಞಾನಿಕ ಉಪಕರಣಗಳಿಂದ ಬರುವ ಟನ್​​ಗಟ್ಟಲೆ ಡೇಟಾವನ್ನು ವಿಶ್ಲೇಷಣೆ ಮಾಡಬೇಕಾಗುತ್ತದೆ.

ಲ್ಯಾಂಡರ್​ ಟಚ್​ಡೌನ್​ ಆದ ಸ್ವಲ್ಪ ಸಮಯದ ನಂತರ ವಿಕ್ರಮ್ ಲ್ಯಾಂಡರ್​​ನ ಒಂದು ಬದಿಯ ಫಲಕವು ತೆರೆದುಕೊಳ್ಳುತ್ತದೆ. ಇದು ಒಳಗಿರುವ ಪ್ರಜ್ಞಾನ್ ರೋವರ್​ಗೆ ರ‍್ಯಾಂಪ್ ಸೃಷ್ಟಿಸುತ್ತದೆ. ತ್ರಿವರ್ಣ ಧ್ವಜ ಮತ್ತು ಅದರ ಚಕ್ರಗಳ ಮೇಲೆ ಇಸ್ರೋ ಲಾಂಛನ ಹೊಂದಿರುವ ಆರು ಚಕ್ರಗಳ ಪ್ರಜ್ಞಾನ್ 4 ಗಂಟೆಗಳ ನಂತರ ಚಂದ್ರನ ಮೇಲ್ಮೈನಲ್ಲಿ ಇಳಿದಿರುವ ಲ್ಯಾಂಡರ್​​ನ ಹೊಟ್ಟೆಯಿಂದ ಇಳಿಯುತ್ತದೆ. ಸೆಕೆಂಡಿಗೆ 1 ಸೆಂ.ಮೀ ವೇಗದಲ್ಲಿ ಚಲಿಸಲು ಆರಂಭಿಸುತ್ತದೆ. ಅದು ಚಂದ್ರನ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ಕ್ಯಾನ್ ಮಾಡಿಕೊಳ್ಳುತ್ತದೆ. ಅದಕ್ಕಾಗಿ ನ್ಯಾವಿಗೇಷನ್ ಕ್ಯಾಮೆರಾಗಳನ್ನು ಬಳಸುತ್ತದೆ. ಲ್ಯಾಂಡರ್​ ಹೊಟ್ಟೆಯಿಂದ ಹೊರಗೆ ಬರುವ ರೋವರ್ ಚಂದ್ರನ ಮೇಲೆ ತ್ರಿವರ್ಣ ಧ್ವಜ ಮತ್ತು ಇಸ್ರೋ ಲಾಂಛನದ ಮುದ್ರೆಗಳನ್ನು ಅಚ್ಚೊತ್ತಲಿದೆ. ಈ ಮೂಲಕ ಚಂದ್ರನ ಮೇಲೆ ಭಾರತದ ಹೆಗ್ಗುರುತನ್ನು ಮೂಡಿಸುತ್ತದೆ. ಅದೇ ರೀತಿ ಚಂದ್ರನ ಮೇಲ್ಮೈಗೆ ಸಂಬಂಧಿಸಿದ ಡೇಟಾವನ್ನು ರವಾನಿಸಲು ರೋವರ್ ಪೇಲೋಡ್​ನೊಂದಿಗೆ ಕಾನ್ಫಿಗರ್ ಮಾಡಿದ ಉಪಕರಣಗಳನ್ನು ಬಳಸುತ್ತವೆ. ಇದು ಚಂದ್ರನ ವಾತಾವರಣದ ಧಾತು ಸಂಯೋಜನೆಯ ಬಗ್ಗೆ ಡೇಟಾವನ್ನು ಸಂಗ್ರಹಿಸುತ್ತದೆ ಮತ್ತು ಲ್ಯಾಂಡರ್​​ಗೆ ಡೇಟಾ ಕಳುಹಿಸುತ್ತದೆ. ಮೂರು ಪೇಲೋಡ್​​​ಗಳೊಂದಿಗೆ, ವಿಕ್ರಮ್ ಲ್ಯಾಂಡರ್ ಹತ್ತಿರದ ಮೇಲ್ಮೈ ಪ್ಲಾಸ್ಮಾ (ಅಯಾನುಗಳು ಮತ್ತು ಎಲೆಕ್ಟ್ರಾನ್​ಗಳನ್ನು) ಸಾಂದ್ರತೆಯನ್ನು ಅಳೆಯುತ್ತದೆ. ಚಂದ್ರನ ಮೇಲ್ಮೈಯ ಉಷ್ಣ ಗುಣಲಕ್ಷಣಗಳ ಮಾಪನಗಳನ್ನು ನಡೆಸುತ್ತದೆ. ಲ್ಯಾಂಡಿಂಗ್ ಸೈಟ್ ಸುತ್ತಲೂ ಭೂಕಂಪನ ಅಳೆಯುತ್ತದೆ. ಚಂದ್ರನ ಹೊರಪದರ ಮತ್ತು ಕವಚದ ರಚನೆಯನ್ನು ಅಳೆಯುತ್ತದೆ.

ಎರಡು ವಾರ ಅಧ್ಯಯನ

ಸೌರಶಕ್ತಿ ಚಾಲಿತ ಲ್ಯಾಂಡರ್ ಮತ್ತು ರೋವರ್ ಚಂದ್ರನ ಸುತ್ತಮುತ್ತಲಿನ ಪ್ರದೇಶಗಳನ್ನು ಅಧ್ಯಯನ ಮಾಡಲು ಸುಮಾರು ಎರಡು ವಾರಗಳನ್ನು ಹೊಂದಿದೆ. ರೋವರ್ ಲ್ಯಾಂಡರ್​​ನೊಂದಿಗೆ ಮಾತ್ರ ಸಂವಹನ ನಡೆಸಬಹುದು. ಲ್ಯಾಂಡರ್​​ ಭೂಮಿಯೊಂದಿಗೆ ನೇರವಾಗಿ ಸಂವಹನ ನಡೆಸುತ್ತದೆ. ಇದೇ ವೇಳೆ ಚಂದ್ರಯಾನ -2 ಆರ್ಬಿಟರ್ ಅನ್ನು ಆಕಸ್ಮಿಕ ಸಂವಹನ ಪ್ರಸಾರವಾಗಿಯೂ ಬಳಸಬಹುದು ಎಂದು ಇಸ್ರೋ ಹೇಳಿದೆ. ಸೋಮವಾರ ಚಂದ್ರಯಾನ -2 ಆರ್ಬಿಟರ್ ಚಂದ್ರಯಾನ 3ರ ಲ್ಯಾಂಡರ್ ಮಾಡ್ಯುಲ್​ನೊಂದಿಗೆ ಸಂವಹನ ನಡೆಸಿದೆ.

ಮಾಧ್ಯಮದ ಜತೆ ಮಾತನಾಡಿದ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್, 14 ಭೂಮಿಯ ದಿನಗಳಲ್ಲಿ ರೋವರ್ ಪ್ರಯಾಣಿಸಲಿರುವ ನಿಜವಾದ ದೂರವನ್ನು ಈಗ ಅಂದಾಜು ಮಾಡಲು ಸಾಧ್ಯವಿಲ್ಲ. ಏಕೆಂದರೆ ಅದನ್ನು ವಿವಿಧ ವಿಷಯಗಳ (ಲೆಕ್ಕಾಚಾರಗಳು) ಆಧಾರದ ಮೇಲೆ ಮಾಡಲಾಗುತ್ತದೆ ಎನ್ನಲಾಗುತ್ತದೆ.

ರೋವರ್ ಮತ್ತು ಲ್ಯಾಂಡರ್ ಚಂದ್ರನ ಎರಡನೇ ದಿನ ಬದುಕುಳಿಯಬೇಕಾದರೆ ಮೊದಲು ದಕ್ಷಿಣ ಧ್ರುವದಲ್ಲಿ ಚಂದ್ರನ ರಾತ್ರಿಯ ಮೈನಸ್ 238 ಡಿಗ್ರಿ ಸೆಲ್ಸಿಯಸ್ ಘನೀಕರಿಸುವ ತಾಪಮಾನ ತಡೆದುಕೊಳ್ಳಬೇಕು. ಆದಾಗ್ಯೂ ಲ್ಯಾಂಡರ್ ಮತ್ತು ರೋವರ್ ಎರಡೂ ಮತ್ತೊಂದು ಚಂದ್ರನ ದಿನ ಬದುಕುವ ಸಾಧ್ಯತೆಯಿದೆ ಎಂದು ಇಸ್ರೋ ಅಧ್ಯಕ್ಷರು ತಿಳಿಸಿದ್ದಾರೆ.

ಪರಿಪೂರ್ಣ ಕಾರ್ಯ ನಿರ್ವಹಣೆ

ಇಸ್ರೋ ಅಧ್ಯಕ್ಷರು ಸೋಮವಾರ ದೆಹಲಿಯಲ್ಲಿ ಬಾಹ್ಯಾಕಾಶ ಸಚಿವ ಜಿತೇಂದ್ರ ಸಿಂಗ್ ಅವರಿಗೆ ಚಂದ್ರಯಾನ -3 ರ ಆರೋಗ್ಯ ಸ್ಥಿತಿಯ ಬಗ್ಗೆ ವಿವರಿಸಿದ್ದಾರೆ. ಎಲ್ಲಾ ವ್ಯವಸ್ಥೆಗಳು ಪರಿಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ ಮತ್ತು ಬುಧವಾರ ಯಾವುದೇ ಆಕಸ್ಮಿಕಗಳನ್ನು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಲ್ಯಾಂಡಿಂಗ್​​ನ ಅಂತಿಮ ಕ್ರಮವನ್ನು ಎರಡು ದಿನಗಳ ಮುಂಚಿತವಾಗಿ ಲೋಡ್ ಮಾಡಿ ಪರೀಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Chandrayaan- 3 : ಚಂದ್ರಯಾನ ಕುತೂಹಲಿಗಳು ತಿಳಿಯಲೇಬೇಕಾದ ಸಂಗತಿಗಳಿವು; ವಿಜ್ಞಾನಿ ಗುರುಪ್ರಸಾದ್‌ Exclusive Details​

ಚಂದ್ರಯಾನ -3 ಮಿಷನ್​​ ಪ್ರಾಥಮಿಕ ಉದ್ದೇಶಗಳು ಮೂರು ವಿಧದ್ದು. ಚಂದ್ರನ ಮೇಲ್ಮೈಯಲ್ಲಿ ಸುರಕ್ಷಿತ ಮತ್ತು ಮೃದುವಾಗಿ ಇಳಿಸುವುದು, ಚಂದ್ರನ ಮೇಲೆ ರೋವರ್ ತಿರುಗುವುದು ಮತ್ತು ಆಂತರಿಕ ವೈಜ್ಞಾನಿಕ ಪ್ರಯೋಗಗಳನ್ನು ನಡೆಸುವುದು. ಯುಎಸ್, ರಷ್ಯಾ ಮತ್ತು ಚೀನಾದ ನಂತರ ಲ್ಯಾಂಡಿಂಗ್ ಸಾಧನೆಯನ್ನು ಸಾಧಿಸಿದ ವಿಶ್ವದ ನಾಲ್ಕನೇ ದೇಶ ಭಾರತವಾಗಲಿದೆ. ಆದರೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ವಿಶ್ವದ ಏಕೈಕ ದೇಶವಾಗಲಿದೆ ಎಂದು ಅವರು ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಜಿತೇಂದ್ರ ಸಿಂಗ್ “ನಾವು ದಕ್ಷಿಣ ಧ್ರುವಕ್ಕೆ ಹೋಗಲು ಕಾರಣವೆಂದರೆ ಯಾರೂ ಅನ್ವೇಷಿಸದ ಸ್ಥಳಗಳನ್ನು ಅನ್ವೇಷಿಸಲು ಬಯಸಿದ್ದು. ಚಂದ್ರನ ಮೇಲೆ ಕಪ್ಪು (ಶಾಶ್ವತವಾಗಿ ನೆರಳು) ಕುಳಿಗಳ ಚಿತ್ರಗಳನ್ನು ನಾವು ಸ್ವೀಕರಿಸಿದ್ದೇವೆ. ಅದು ನೀರನ್ನು ಹೊಂದಿರಬಹುದು ಎಂದು ಸೂಚನೆ ನೀಡಿದೆ. ಚಂದ್ರಯಾನ -3ರಲ್ಲಿ ಹೈಡ್ರೋಜನ್ ಮತ್ತು ಆಮ್ಲಜನಕವನ್ನು ಒಳಗೊಂಡಿರುವ ಪುರಾವೆಗಳನ್ನು ಕಂಡುಕೊಂಡರೆ, ಅದು ಸಾಕಷ್ಟು ವೈಜ್ಞಾನಿಕ ಅನ್ವೇಷಣೆಗೆ ಅವಕಾಶಗಳನ್ನು ಕಲ್ಪಿಸಿಕೊಡುತ್ತದೆ. ಜಲಜನಕವನ್ನು ನೀರಿನಿಂದ ಹೊರತೆಗೆಯಲು ಸಾಧ್ಯವಾದರೆ, ಅದು ಶುದ್ಧ ಶಕ್ತಿಯ ಸಮೃದ್ಧ ಮೂಲವಾಗಬಹುದು ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Citroen C3 Aircross: ಸಿ3 ಏರ್ ಕ್ರಾಸ್ ಧೋನಿ ಆವೃತ್ತಿಯ ಹೊರಭಾಗದಲ್ಲಿ ಧೋನಿಯ ಹೆಸರು ಮತ್ತು ಅವರ ಜೆರ್ಸಿ ಸಂಖ್ಯೆ 7 ನೊಂದಿಗೆ ಹೊಸ ಡೆಕಾಲ್ ನೀಡಲಾಗಿದೆ. ಒಳಭಾಗದಲ್ಲಿ ಲಿಮಿಟೆಡ್ ರನ್​ ಮಾಡೆಲ್ ಆಗಿದ್ದು. ಹೊಸ ಬಣ್ಣ-ಸಂಯೋಜಿತ ಸೀಟ್ ಕವರ್ ಗಳು ಮತ್ತು ಕುಶನ್ ಪಿಲ್ಲೊ, ಸೀಟ್ ಬೆಲ್ಟ್ ಕುಶನ್ ಗಳು, ಹೆಚ್ಚು ಪ್ರಕಾಶಮಾನವಾಗಿರವು ಡೋರ್ ಸಿಲ್ ಪ್ಲೇಟ್ ಗಳು ಮತ್ತು ಮುಂಭಾಗದ ಡ್ಯಾಶ್ ಕ್ಯಾಮ್ ನೀಡಲಾಗಿದೆ.

VISTARANEWS.COM


on

Citroen C3 Aircross
Koo

ಬೆಂಗಳೂರು: ಸಿಟ್ರೋಯನ್​ ತನ್ನ ಮಧ್ಯಮ ಗಾತ್ರದ ಎಸ್​ಯುವಿ ಕಾರಾಗಿರುವ ಸಿ3 ಏರ್ ಕ್ರಾಸ್ (Citroen C3 Aircross) ಧೋನಿ ಎಡಿಷನ್ ಹೊಸ ವಿಶೇಷ ಆವೃತ್ತಿ ಹೊರತಂದಿದೆ. 11.82 ಲಕ್ಷ ರೂ.ಗಳ ಬೆಲೆ ಹೊಂದಿರುವ ಧೋನಿ ಎಡಿಷನ್ ಅನೇಕ ರೂಪಾಂತರಗಳು 5 ಮತ್ತು 7 ಸೀಟರ್​ ಕಾನ್ಫಿಗರೇಶನ್ ಗಳಲ್ಲಿ ಲಭ್ಯವಿದೆ. ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ. ಈ ವಿಶೇಷ ಆವೃತ್ತಿಯ ಮಾದರಿಯು 100 ಯುನಿಟ್ ಗಳಿಗೆ ಸೀಮಿತವಾಗಿದೆ ಎಂಬುದೇ ವಿಶೇಷ. ಈ ಎಡಿಷನ್​ನಲ್ಲಿ ಸಿ3 ಏರ್ ಕ್ರಾಸ್ ಗಿಂತ ಸಣ್ಣ ಪ್ರಮಾಣದ ಇಂಟೀರಿಯರ್​ ಬದಲಾವಣೆ ಮಾಡಲಾಗಿದೆ.

ಸಿ3 ಏರ್ ಕ್ರಾಸ್ ಧೋನಿ ಆವೃತ್ತಿಯ ಹೊರಭಾಗದಲ್ಲಿ ಧೋನಿಯ ಹೆಸರು ಮತ್ತು ಅವರ ಜೆರ್ಸಿ ಸಂಖ್ಯೆ 7 ನೊಂದಿಗೆ ಹೊಸ ಡೆಕಾಲ್ ನೀಡಲಾಗಿದೆ. ಒಳಭಾಗದಲ್ಲಿ ಲಿಮಿಟೆಡ್ ರನ್​ ಮಾಡೆಲ್ ಆಗಿದ್ದು. ಹೊಸ ಬಣ್ಣ-ಸಂಯೋಜಿತ ಸೀಟ್ ಕವರ್ ಗಳು ಮತ್ತು ಕುಶನ್ ಪಿಲ್ಲೊ, ಸೀಟ್ ಬೆಲ್ಟ್ ಕುಶನ್ ಗಳು, ಹೆಚ್ಚು ಪ್ರಕಾಶಮಾನವಾಗಿರವು ಡೋರ್ ಸಿಲ್ ಪ್ಲೇಟ್ ಗಳು ಮತ್ತು ಮುಂಭಾಗದ ಡ್ಯಾಶ್ ಕ್ಯಾಮ್ ನೀಡಲಾಗಿದೆ.

ಪ್ರತಿ ಧೋನಿ ಎಡಿಷನ್​ ಕಾರಿನ ಗ್ಲೋವ್ ಬಾಕ್ಸ್​ನಲ್ಲಿ ವಿಶೇಷ ‘ಧೋನಿ ಗೂಡಿ’ ಒಳಗೊಂಡಿರುತ್ತದೆ ಎಂದು ಸಿಟ್ರನ್ ಹೇಳುತ್ತಾರೆ. ಅಂದರೆ ಅದೃಷ್ಟಶಾಲಿ ವಿಜೇತರು ಸ್ವತಃ ಧೋನಿಯಿಂದ ಸಹಿ ಮಾಡಿದ ಗ್ಲವ್ಸ್​​ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Bajaj CNG Bike: ವಿಶ್ವದ ಮೊದಲ ಸಿಎನ್‌ಜಿ ಬೈಕ್‌; ಬಜಾಜ್‌ನಿಂದ ಜುಲೈ 5ರಂದು ಬಿಡುಗಡೆ

ಉಳಿದಂತೆ ಧೋನಿ ಆವೃತ್ತಿಯು ಸ್ಟ್ಯಾಂಡರ್ಡ್ ಸಿ 3 ಏರ್ ಕ್ರಾಸ್ ನಂತೆಯೇ ಇದೆ. ಇದು 110 ಬಿಹೆಚ್ ಪಿ, 1.2-ಲೀಟರ್ ಮೂರು ಸಿಲಿಂಡರ್ ಟರ್ಬೊ-ಪೆಟ್ರೋಲ್ ಎಂಜಿನ್ ಹೊಂದಿದೆ. ಇದು 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಬರುತ್ತದೆ.

ಸಚಿನ್​ ಹೆಸರಿನ ಫಿಯೆಟ್​ ಕಾರು ಬಂದಿತ್ತು

ಖ್ಯಾತ ಕ್ರಿಕೆಟಿಗರೊಬ್ಬರು ಕಾರು ತಯಾರಕರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿರುವುದು ಇದೇ ಮೊದಲಲ್ಲ. 2002 ರಲ್ಲಿ ಫಿಯೆಟ್ ತಂಡವು ಸಚಿನ್ ತೆಂಡೂಲ್ಕರ್ ಅವರೊಂದಿಗೆ ಕೈಜೋಡಿಸಿ ಪಾಲಿಯೋ ಎಸ್ 10 ಅನ್ನು ಹೊರತಂದಿತ್ತು. ಈ ಸೀಮಿತ ರನ್ ಮಾದರಿಯನ್ನು (ಕೇವಲ 500 ಮಾತ್ರ ಉತ್ಪಾದಿಸಲಾಗಿತ್ತು. ಪ್ರತಿಯೊಂದೂ ಅದರ ಸರಣಿ ಸಂಖ್ಯೆಯನ್ನು ಸೂಚಿಸುವ ಅಲ್ಯೂಮಿನಿಯಂ ಫಲಕವನ್ನು ಪಡೆದುಕೊಂಡಿತ್ತು ) ಹೊರಗೆ ಹಲವಾರು ಕಾಸ್ಮೆಟಿಕ್ ನವೀಕರಣಗಳೊಂದಿಗೆ ಬಂದಿತ್ತಯ. ವಿಶೇಷ ಬಣ್ಣ ಮತ್ತು ಸಚಿನ್ ಅವರ ಆಟೋಗ್ರಾಫ್ ನಿಂದ ಹಿಡಿದು ಹಿಂಭಾಗದ ಸ್ಪಾಯ್ಲರ್ ಮತ್ತು ಹೊಸ ಅಲಾಯ್ ಚಕ್ರಗಳವರೆಗೆ ವಿಶೇಷತೆ ಇತ್ತು.

Continue Reading

Latest

Bajaj CNG Bike: ವಿಶ್ವದ ಮೊದಲ ಸಿಎನ್‌ಜಿ ಬೈಕ್‌; ಬಜಾಜ್‌ನಿಂದ ಜುಲೈ 5ರಂದು ಬಿಡುಗಡೆ

Bajaj CNG Bike: ಬೈಕ್ ಪ್ರಿಯರಿಗೊಂದು ಸಿಹಿ ಸುದ್ದಿ. ಇಂಧನ ಬೆಲೆಗಳಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಬಜಾಜ್ ಸಿಎನ್ ಜಿ ಬೈಕ್ ಗಳ ಆವಿಷ್ಕಾರಕ್ಕೆ ಮುಂದಾಗಿದ್ದು, ಇದೀಗ ತನ್ನ ಸಿಎನ್ ಜಿ ಬೈಕ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಮುಂದಿನ ತಿಂಗಳು ಜುಲೈ 5 ರಂದು ಬಜಾಜ್ ತನ್ನ ಸಿಎನ್ ಜಿ ಬೈಕ್ ಗಳನ್ನು ಬಿಡುಗಡೆ ಮಾಡಲಿದೆ ಎನ್ನಲಾಗಿದೆ. ಈ ಬೈಕ್ ಅನ್ನು ಸದ್ಯಕ್ಕೆ ‘ಬಜಾಜ್ ಬ್ರೂಜರ್’ ಎಂದು ಕರೆಯಲಾಗುತ್ತದೆ. ಆದರೆ ಬಿಡುಗಡೆಯ ವೇಳೆ ಇದರ ಹೆಸರನ್ನು ಬದಲಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.

VISTARANEWS.COM


on

Bajaj CNG Bike
Koo

ನವದೆಹಲಿ: ಯುವ ಜನತೆಗೆ ಬೈಕ್ ಕ್ರೇಜ್ ಸಹಜ. ಮಾರುಕಟ್ಟೆಯಲ್ಲಿ ಯಾವುದೇ ಹೊಸ ಬೈಕ್ ಬಂದರೂ ಅವರ ಕಣ್ಣು ಅದರ ಮೇಲಿರುತ್ತದೆ. ಇನ್ನು ಸಾಲ ಮಾಡಿಯಾದರೂ ಸರಿ ಒಂದು ಬೈಕ್‌ ತೆಗೆದುಕೊಳ್ಳಬೇಕು ಎಂಬ ಕ್ರೇಜ್‌ ಹುಡುಗರಿಗಿರುತ್ತದೆ. ಇಂತಹ ಬೈಕ್ ಪ್ರಿಯರಿಗೆ ಇದೀಗ ಬಜಾಜ್ (Bajaj CNG Bike) ಸಿಹಿ ಸುದ್ದಿಯೊಂದನ್ನು ನೀಡಿದೆ.

ಇಂಧನ ಬೆಲೆಗಳಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಬಜಾಜ್ ಸಿಎನ್‌ಜಿ ಬೈಕ್‌ಗಳ ಆವಿಷ್ಕಾರಕ್ಕೆ ಮುಂದಾಗಿದ್ದು, ಇದೀಗ ತನ್ನ ಸಿಎನ್‌ಜಿ ಬೈಕ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಮುಂದಿನ ತಿಂಗಳು ಜುಲೈ 5ರಂದು ಬಜಾಜ್ ತನ್ನ ಸಿಎನ್‌ಜಿ ಬೈಕ್‌ಗಳನ್ನು ಬಿಡುಗಡೆ ಮಾಡಲಿದೆ.

ಈ ಬೈಕ್ ಅನ್ನು ಸದ್ಯಕ್ಕೆ ‘ಬಜಾಜ್ ಬ್ರೂಜರ್’ ಎಂದು ಕರೆಯಲಾಗುತ್ತದೆ. ಆದರೆ ಬಿಡುಗಡೆಯ ವೇಳೆ ಇದರ ಹೆಸರನ್ನು ಬದಲಿಸುವ ನಿರೀಕ್ಷೆ ಇದೆ ಎನ್ನಲಾಗಿದೆ. ಬಜಾಜ್ ಬ್ರೂಜರ್ ವಿಶ್ವದ ಮೊದಲ ಸಿಎನ್‌ಜಿ ಮೋಟಾರ್ ಸೈಕಲ್ ಆಗಿದ್ದು, ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯ ನಿರ್ವಹಿಸುತ್ತದೆ.

ಈ ಬೈಕ್ ನ ಉದ್ದಕ್ಕೂ ಸಿಎನ್‌ಜಿ ಟ್ಯಾಂಕ್ ಅನ್ನು ಅಳವಡಿಸಲಾಗಿದೆ. ಹಾಗೇ ಇದನ್ನು ನಿರ್ವಹಿಸುವ ವಿಶಿಷ್ಟವಾದ ಚಾಸಿಸ್ ಸೆಟಪ್ ಅನ್ನು ಬೈಕ್ ಹೊಂದಿದೆ ಎಂಬುದನ್ನು ಅದರ ಬ್ಲೂಪ್ರಿಂಟ್ ತೋರಿಸುತ್ತದೆ. ಸಿಎನ್‌ಜಿ ಬೈಕ್‌ನ ಆಯಿಲ್ ಟ್ಯಾಂಕ್ ಚಿಕ್ಕದಾಗಿದ್ದರೂ, ಬೈಕ್‌ಗೆ ಹೆಚ್ಚುವರಿ ಮೈಲೇಜ್ ನೀಡುತ್ತದೆ. ಈ ಬಜಾಜ್ ಬ್ರೂಜರ್ 5 – ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾದ 125 ಸಿಸಿ ಎಂಜಿನ್‌ನೊಂದಿಗೆ ಬರುವ ನಿರೀಕ್ಷೆ ಇದೆ ಎನ್ನಲಾಗಿದೆ. ಅಲ್ಲದೇ ಈ ಬೈಕ್ ಅನ್ನು ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎರಡೂ ಕಡೆ ಆರಾಮವಾಗಿ ಓಡಿಸಬಹುದು. ಈ ಬೈಕ್ ಕ್ಲಚ್ ಗಾರ್ಡ್, ಹ್ಯಾಂಡಲ್ ಬಾರ್ ಬ್ರೇಸ್ ಮತ್ತು ಸಂಪ್ ಗಾರ್ಡ್ ಅನ್ನು ಹೊಂದಿರುವುದರಿಂದ ಇದರಲ್ಲಿ ಕಳಪೆ ರಸ್ತೆಯಲ್ಲೂ ಕೂಡ ಆರಾಮವಾಗಿ ಸವಾರಿ ಮಾಡಬಹುದು.

ಇದನ್ನೂ ಓದಿ: Passport Forgery Case: ಗಡ್ಡಕ್ಕೆ ಬಣ್ಣಹಚ್ಚಿ ಮುದುಕನ ವೇಷ ಧರಿಸಿ ಪ್ರಯಾಣಿಸುತ್ತಿದ್ದ 24ರ ಯುವಕ ಅರೆಸ್ಟ್!

ಬೈಕ್‌ ದರ ಎಷ್ಟು?:

ಈ ಬೈಕ್ ಬೆಲೆ ಸುಮಾರು 90,000 ರೂ. ಆಗಿರುವ ನಿರೀಕ್ಷೆ ಇದೆ. ಇದನ್ನು ಮುಂದಿನ ತಿಂಗಳು ಜುಲೈ 5ಕ್ಕೆ ಬಿಡುಗಡೆ ಮಾಡಲಿದ್ದಾರೆ. ಬಜಾಜ್ ಬ್ರೂಸರ್ ಬೈಕ್ ಟಿವಿಎಸ್ ರೇಡಿಯನ್, ಹೋಂಡಾ ಸಿಬಿ ಶೈನ್, ಹೀರೋ ಹೆಚ್ ಎಫ್ 100, ಟಿವಿಎಸ್ ಸ್ಪೋರ್ಟ್, ಬಜಾಜ್ ಸಿಟಿ 110 ಮತ್ತು ಬಜಾಜ್ ಪ್ಲಾಟಿನಾಗಳಂತಹ ಇತರ ಮೋಟಾರ್ ಸೈಕಲ್‌ಗಳ ಎದುರು ಸ್ಪರ್ಧೆಗಿಳಿಯಲಿದೆ ಎನ್ನಲಾಗಿದೆ.

Continue Reading

ವಾಣಿಜ್ಯ

Tata Motors: ಬೆಲೆ ಏರಿಕೆಗೆ ಮುಂದಾದ ಟಾಟಾ ಮೋಟಾರ್ಸ್‌; ಜುಲೈಯಿಂದ ಕಮರ್ಷಿಯಲ್‌ ವಾಹನ ದುಬಾರಿ

Tata Motors: ಜುಲೈಯಿಂದ ಜಾರಿಗೆ ಬರುವಂತೆ ಟಾಟಾ ಮೋಟಾರ್ಸ್ ಕಮರ್ಷಿಯಲ್‌ ವಾಹನಗಳ ಬೆಲೆಯನ್ನು ಶೇ. 2ರಷ್ಟು ಹೆಚ್ಚಿಸುವುದಾಗಿ ಘೋಷಿಸಿದೆ. ಕಚ್ಛಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಇದು ಅನಿವಾರ್ಯ ಎಂದೂ ಕಂಪನಿ ಹೇಳಿದೆ. ಎಲ್ಲ ವಾಣಿಜ್ಯ ವಾಹನಗಳಿಗೆ ಈ ಬೆಲೆ ಏರಿಕೆ ಅನ್ವಯವಾಗಲಿದ್ದು, ನಿರ್ದಿಷ್ಟ ಮಾದರಿಯನ್ನು ಅವಲಂಬಿಸಿ ದರ ವ್ಯತ್ಯಾಸವಾಗಲಿದೆ.

VISTARANEWS.COM


on

Tata Motors
Koo

ಮುಂಬೈ: ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆ ಟಾಟಾ ಮೋಟಾರ್ಸ್ (Tata Motors) ತನ್ನ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್‌ ನೀಡಲು ಮುಂದಾಗಿದೆ. ಜುಲೈಯಿಂದ ಜಾರಿಗೆ ಬರುವಂತೆ ಕಮರ್ಷಿಯಲ್‌ ವಾಹನ (Commercial vehicles)ಗಳ ಬೆಲೆಯನ್ನು ಶೇ. 2ರಷ್ಟು ಹೆಚ್ಚಿಸುವುದಾಗಿ ಟಾಟಾ ಮೋಟಾರ್ಸ್ ಬುಧವಾರ ಘೋಷಿಸಿದೆ.

”ಟಾಟಾ ಮೋಟಾರ್ಸ್ ಲಿಮಿಟೆಡ್‌ ಜುಲೈ 1ರಿಂದ ಜಾರಿಗೆ ಬರುವಂತೆ ಕಮರ್ಷಿಯಲ್‌ ವಾಹನಗಳ ಬೆಲೆ ಹೆಚ್ಚಿಸಲಿದೆʼʼ ಎಂದು ಪ್ರಕಟಣೆ ತಿಳಿಸಿದೆ. ಕಚ್ಛಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಇದು ಅನಿವಾರ್ಯ ಎಂದೂ ಕಂಪನಿ ಹೇಳಿದೆ. ಎಲ್ಲ ವಾಣಿಜ್ಯ ವಾಹನಗಳಿಗೆ ಈ ಬೆಲೆ ಏರಿಕೆ ಅನ್ವಯವಾಗಲಿದ್ದು, ನಿರ್ದಿಷ್ಟ ಮಾದರಿಯನ್ನು ಅವಲಂಬಿಸಿ ದರ ವ್ಯತ್ಯಾಸವಾಗಲಿದೆ.

ಟಾಟಾ ಮೋಟಾರ್ಸ್ ಭಾರತದ ಪ್ರಮುಖ ಆಟೋಮೊಬೈಲ್ ತಯಾರಕ ಕಂಪನಿಯಾಗಿದ್ದು, ಇದು ವಾಣಿಜ್ಯ ಮತ್ತು ಪ್ರಯಾಣಿಕ ವಾಹನಗಳನ್ನು ತಯಾರಿಸುತ್ತದೆ. ಕಂಪನಿಯು ದೇಶದ ಪ್ರಯಾಣಿಕ ವಾಹನಗಳ ಮಾರುಕಟ್ಟೆಯ ಅಗ್ರ ಮೂರರಲ್ಲಿ ಸ್ಥಾನ ಪಡೆದುಕೊಂಡಿದೆ. ಮೇ ತಿಂಗಳಲ್ಲಿ ಕಂಪನಿಯು ಸುಮಾರು 29,691 ಕಮರ್ಷಿಯಲ್‌ ವಾಹನಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 2ರಷ್ಟು ಹೆಚ್ಚಳ ದಾಖಲಿಸಿದೆ.

ಅದಾಗ್ಯೂ ಟ್ರಕ್ ಮಾರಾಟದ ಕುಸಿತ ಕಂಡು ಬಂದಿದೆ. ಒಟ್ಟಾರೆ ಟ್ರಕ್ ಮಾರಾಟವು 12,402 ಯೂನಿಟ್‌ಗೆ ತಲುಪಿದೆ. ಈ ವಿಭಾಗದಲ್ಲಿ ಹೆವಿ ಕಮರ್ಷಿಯಲ್ ವೆಹಿಕಲ್ಸ್ (Heavy Commercial Vehicles) ಮಾರಾಟದ ಪ್ರಮಾಣ ಸ್ವಲ್ಪ ಕುಸಿದಿದೆ. ಎಚ್‌ಸಿವಿ ಮಾರಾಟವು ಶೇ. 3ರಷ್ಟು ಕುಸಿದಿದ್ದು, 2023ರಲ್ಲಿನ 8,160 ಯೂನಿಟ್‌ನಿಂದ 2024ರ ಮೇ ವೇಳೆಗೆ 7,924 ಯುನಿಟ್‌ಗೆ ಇಳಿದಿದೆ.

ಮತ್ತೊಂದೆಡೆ ಇಂಟರ್‌ಮಿಡಿಯೆಟ್‌ ಲೈಟ್ ಮೀಡಿಯಂ ಕಮರ್ಷಿಯಲ್ ವೆಹಿಕಲ್ (Intermediate Light Medium Commercial Vehicle) ವಿಭಾಗವು ದೃಢವಾದ ಬೆಳವಣಿಗೆಯನ್ನು ತೋರಿದೆ. ಐಎಲ್ಎಂಸಿವಿಯ ಮಾರಾಟವು ಶೇ. 30ರಷ್ಟು ಏರಿಕೆಯಾಗಿದ್ದು, 2023ರ ಮೇಯಲ್ಲಿ 3,450 ಯೂನಿಟ್‌ ಮಾರಾಟವಾಗಿದ್ದರೆ 2024ರ ಮೇಯಲ್ಲಿ 4,478 ವಾಹನ ಬಿಕರಿಯಾಗಿದೆ.‌ ಮುಂದಿನ ದಿನಗಳಲ್ಲಿ ಟಾಟಾ ಮೋಟಾರ್ಸ್‌ನಂತೆ ಇತರ ವಾಹನ ತಯಾರಿಕಾ ಕಂಪನಿಗಳೂ ಬೆಲೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ.

ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವ

ಟಾಟಾ ಮೋಟಾರ್ಸ್ ಭಾರತದ ನಂ. 1 ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವದಂದು 7 ಲಕ್ಷ ಯೂನಿಟ್ ಮಾರಾಟದ ಸಂಭ್ರಮಾಚರಣೆ ನಡೆಸುತ್ತಿದೆ. 2017ರಲ್ಲಿ ಬಿಡುಗಡೆಯಾದ ನೆಕ್ಸಾನ್ 2021 ರಿಂದ 2023 ರವರೆಗೆ ಸತತ ಮೂರು ವರ್ಷಗಳಲ್ಲಿ ಮೂರು ಬಾರಿ ಭಾರತದ ಅತಿ ಹೆಚ್ಚು ಮಾರಾಟವಾದ ಎಸ್‌ಯುವಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. 2018ರಲ್ಲಿ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಗಳಿಸಿದ ಭಾರತದ ಮೊದಲ ವಾಹನ ಎಂಬ ಖ್ಯಾತಿಯನ್ನು ನೆಕ್ಸಾನ್ ಹೊಂದಿದೆ. ಆ ಮೂಲಕ ಎಲ್ಲಾ ಭಾರತೀಯ ಆಟೋಮೊಬೈಲ್‌ಗಳಿಗೆ ಅನುಸರಿಸಲು ಹೊಸ ಮಾನದಂಡವನ್ನು ಹಾಕಿಕೊಟ್ಟಿದೆ. ಅಂದಿನಿಂದ ಇಂದಿನವರೆಗೂ ಅದರ ಗೆಲುವಿನ ಓಟ ಮುಂದುವರಿದಿದೆ.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ಹೊಸ ಮೈಲುಗಲ್ಲು; 333 ಪೇಟೆಂಟ್‌ಗಳಿಗೆ ಅನುಮೋದನೆ

ಫೆಬ್ರವರಿ 2024ರಲ್ಲಿ, ಹೊಸ ಜನರೇಷನ್‌ನ ನೆಕ್ಸಾನ್ 2022ರ ಹೆಚ್ಚಿನ ಪ್ರೋಟೋಕಾಲ್ ಪ್ರಕಾರ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ. ನೆಕ್ಸಾನ್.ಇವಿ ಕೂಡ ಅದೇ ದಾರಿಯಲ್ಲಿ ಸಾಗಿದ್ದು, ಇದೇ ತಿಂಗಳಲ್ಲಿ ಭಾರತ್- ಎನ್‌ಸಿಎಪಿಯಿಂದ ಪ್ರತಿಷ್ಠಿತ 5-ಸ್ಟಾರ್ ರೇಟಿಂಗ್ ಅನ್ನು ಗಳಿಸಿದೆ.

Continue Reading

ದೇಶ

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Train Accident: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿಯಾಗಿ ಸುಮಾರು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೀಗ ರೈಲು ಅಪಘಾತಕ್ಕೆ ಕಾರಣವೇನು ಎನ್ನುವ ತನಿಖೆ ನಡೆಯುತ್ತಿದೆ. ಪ್ರಾಥಮಿಕ ವರದಿ ಪ್ರಕಾರ ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಸಿಗ್ನಲ್‌ನಲ್ಲಿ ಕಂಡು ಬಂದ ದೋಷವೇ ದುರಂತಕ್ಕೆ ಕಾರಣ ಎನ್ನಲಾಗಿದೆ.

VISTARANEWS.COM


on

Train Accident
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿಯಾಗಿ (Train Accident) ಸುಮಾರು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೀಗ ರೈಲು ಅಪಘಾತಕ್ಕೆ ಕಾರಣವೇನು ಎನ್ನುವ ತನಿಖೆ ನಡೆಯುತ್ತಿದೆ. ಪ್ರಾಥಮಿಕ ವರದಿ ಪ್ರಕಾರ ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಸಿಗ್ನಲ್‌ನಲ್ಲಿ ಕಂಡು ಬಂದ ದೋಷವೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ದೋಷದಿಂದ ಕೂಡಿದ ಸ್ವಯಂಚಾಲಿತ ಸಿಗ್ನಲ್‌ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಗೂಡ್ಸ್‌ ರೈಲು ವೇಗದ ಮಿತಿಯನ್ನು ಮೀರಿ ಸಂಚರಿಸಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮಂಡಳಿಯ ಆರಂಭಿಕ ವರದಿ ತಿಳಿಸಿದೆ.

ನಿಯಮ ಏನು ಹೇಳುತ್ತದೆ?

ಟಿಎ 912 (TA 912) (ಸ್ವಯಂಚಾಲಿತ ವ್ಯವಸ್ಥೆಯಲ್ಲಿ ಸಿಗ್ನಲ್ ವೈಫಲ್ಯ ಸಂಭವಿಸಿದಾಗ, ಕೆಂಪು ಸಿಗ್ನಲ್‌ಗಳನ್ನು ದಾಟಲು ಸ್ಟೇಷನ್ ಮಾಸ್ಟರ್ ಚಾಲಕನಿಗೆ ಲಿಖಿತ ಪಾಸ್ ಅನ್ನು ಟಿಎ 912 ಎಂದು ಕರೆಯಲಾಗುತ್ತದೆ) ನಿಯಮದ ಪ್ರಕಾರ ಒಂದುವೇಳೆ ದೋಷಪೂರಿತ ಸಿಗ್ನಲ್‌ಗಳನ್ನು ದಾಟಲು ಅನುಮತಿ ಪಡೆದಿದ್ದರೆ, ಚಾಲಕ ಪ್ರತಿ ಸಿಗ್ನಲ್‌ನಲ್ಲಿ ಕೆಲವು ಹೊತ್ತು ನಿಂತು ಗಂಟೆಗೆ 10 ಕಿ.ಮೀ. ವೇಗದಲ್ಲಿ ಮಾತ್ರ ರೈಲು ಓಡಿಸಬೇಕು. ಮಾತ್ರವಲ್ಲ ಇನ್ನೊಂದು ರೈಲಿನಿಂದ 150 ಮೀಟರ್ ಅಂತರವನ್ನು ಕಾಯ್ದುಕೊಳ್ಳಬೇಕು. ಆದಾಗ್ಯೂ ಈ ಘಟನೆಯಲ್ಲಿ ಗೂಡ್ಸ್‌ ರೈಲು ಚಾಲಕ ಈ ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್‌ ಟಿಎ 912ರೊಂದಿಗೆ 9 ಸ್ವಯಂಚಾಲಿತ ಸಿಗ್ನಲ್‌ಗಳನ್ನು ದಾಟಿ ಮುಂದೆ ಸಾಗಲು ಅನುಮತಿಗಾಗಿ ಕಾಯುತ್ತಿತ್ತು ಎನ್ನಲಾಗಿದೆ.

ದೋಷಯುಕ್ತ ಸ್ವಯಂಚಾಲಿತ ಸಿಗ್ನಲ್‌ ವ್ಯವಸ್ಥೆಯಿಂದಾಗಿ ಗೂಡ್ಸ್‌ ರೈಲು ಚಾಲಕನಿಗೆ ರಂಗಪಾಣಿ ಮತ್ತು ಚಟ್ಟರ್ ಹ್ಯಾಟ್ ರೈಲ್ವೆ ನಿಲ್ದಾಣಗಳ ನಡುವಿನ ಎಲ್ಲ ಸಿಗ್ನಲ್‌ಗಳನ್ನು ದಾಟಲು ಅನುಮತಿ ನೀಡಲಾಗಿತ್ತು. ಆದರೆ ರೈಲು ಅಂತಹ ಸಂದರ್ಭಗಳಿಗೆ ನಿಗದಿಪಡಿಸಿದ ಮಿತಿಯನ್ನು ಮೀರಿ ಸಂಚರಿಸಿದೆ. ʼʼರಾಣಿಪಾತ್ರ ರೈಲ್ವೆ ನಿಲ್ದಾಣ ಮತ್ತು ಚಟ್ಟರ್ ಹ್ಯಾಟ್ ಜಂಕ್ಷನ್ ನಡುವಿನ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯು ಸೋಮವಾರ ಬೆಳಿಗ್ಗೆ 5.50ರಿಂದ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಗೂಡ್ಸ್ ರೈಲು ಚಾಲಕನಿಗೆ ರಂಗಪಾಣಿಯ ಸ್ಟೇಷನ್ ಮಾಸ್ಟರ್ ಟಿಎ 912 ಅನ್ನು ನೀಡಿ, ಒಂಬತ್ತು ಸಿಗ್ನಲ್‌ ಅನ್ನು ಹಾದುಹೋಗಲು ಅನುಮತಿ ನೀಡಿದ್ದರು. ಆದರೆ ಚಾಲಕ ನಿಗದಿ ಪಡಿಸಿದ ಮಿತಿಗಿಂತ ವೇಗವಾಗಿ ಚಲಿಸಿದ್ದರಿಂದ ದುರಂತ ಸಂಭವಿಸಿದೆʼʼ ಎಂದು ಮೂಲಗಳು ತಿಳಿಸಿವೆ.

ಬೆಳಿಗ್ಗೆ 8:42ಕ್ಕೆ ರಂಗಪಾಣಿಯಿಂದ ಹೊರಟ ಗೂಡ್ಸ್ ರೈಲು ಬೆಳಿಗ್ಗೆ 8:55ಕ್ಕೆ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಗಾರ್ಡ್ ಕೋಚ್, ಎರಡು ಪಾರ್ಸೆಲ್ ಬೋಗಿಗಳು ಮತ್ತು ಪ್ಯಾಸೆಂಜರ್ ರೈಲಿನ ಸಾಮಾನ್ಯ ಆಸನದ ಬೋಗಿ ಹಳಿ ತಪ್ಪಿದೆ. ಮೃತರಲ್ಲಿ ಗೂಡ್ಸ್ ರೈಲಿನ ಚಾಲಕ ಕೂಡ ಸೇರಿದ್ದಾರೆ. ಇತ್ತ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಚಾಲಕ ಸಿಗ್ನಲಿಂಗ್ ದೋಷದ ಸಮಯದಲ್ಲಿ ಅಗತ್ಯವಿರುವ ಸುರಕ್ಷತಾ ಮಾನದಂಡಗಳನ್ನು ಅನುಸರಿಸಿದ್ದಾರೆ. ಎಲ್ಲ ಕೆಂಪು ಸಿಗ್ನಲ್‌ಗಳಲ್ಲಿ ಒಂದು ನಿಮಿಷ ನಿಲ್ಲಿಸಿ 10 ಕಿ.ಮೀ. ವೇಗದಲ್ಲಿ ಸಂಚರಿಸಿದ್ದರು ಎಂದು ವರದಿ ತಿಳಿಸಿದೆ.

ಸದ್ಯ ರೈಲ್ವೆ ಸುರಕ್ಷತಾ ಆಯುಕ್ತರು (Commissioner of Railway Safety) ಅಪಘಾತದ ಕಾರಣದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50 ಸಾವಿರ ರೂ. ಪ್ರಕಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Andhra train accident: 13 ಜನರ ಬಲಿ ಪಡೆದ ಆಂಧ್ರ ರೈಲು ಅಪಘಾತದ‌ ಮೂಲ ಕಾರಣ ಬಹಿರಂಗ

Continue Reading
Advertisement
assault Case
ಕ್ರೈಂ14 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ18 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್21 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest37 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest40 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ45 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ1 hour ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Pakistan Violence
ವಿದೇಶ2 hours ago

Pakistan Violence: ಕುರಾನ್‌ಗೆ ಅಪಮಾನ; ಪೊಲೀಸ್‌ ಸ್ಟೇಶನ್‌ಗೆ ಬೆಂಕಿ..ಠಾಣೆಯೊಳಗೇ ಆರೋಪಿಯ ಬರ್ಬರ ಕೊಲೆ

Actor Darshan was careful at every step to escape from Renuka case
ಸ್ಯಾಂಡಲ್ ವುಡ್2 hours ago

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌