ChatGpt Jobs: ಚಾಟ್‌ಜಿಪಿಟಿಯಿಂದ ಭಾರಿ ಉದ್ಯೋಗ ಸೃಷ್ಟಿ, ಇವರಿಗೆ ಸಿಗಲಿದೆ 2.75 ಕೋಟಿ ರೂ. ಸಂಬಳ - Vistara News

ತಂತ್ರಜ್ಞಾನ

ChatGpt Jobs: ಚಾಟ್‌ಜಿಪಿಟಿಯಿಂದ ಭಾರಿ ಉದ್ಯೋಗ ಸೃಷ್ಟಿ, ಇವರಿಗೆ ಸಿಗಲಿದೆ 2.75 ಕೋಟಿ ರೂ. ಸಂಬಳ

ChatGpt Jobs: ಚಾಟ್‌ಜಿಪಿಟಿಯಂತಹ ಚಾಟ್‌ಬಾಟ್‌ಗಳು, ಕೃತಕ ಬುದ್ಧಿಮತ್ತೆಯಿಂದ ಉದ್ಯೋಗ ಕಡಿತವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಬ್ಲೂಮ್‌ಬರ್ಗ್‌ ವರದಿ ಪ್ರಕಾರ, ಇವುಗಳಿಂದ ಉದ್ಯೋಗ ಸೃಷ್ಟಿಯಾಗುವ ಜತೆಗೆ ಕೋಟ್ಯಂತರ ರೂಪಾಯಿ ಸಂಬಳವನ್ನೂ ಎಣಿಸಬಹುದಾಗಿದೆ. ಹೇಗೆ ಅಂತೀರಾ? ಇಲ್ಲಿದೆ ಮಾಹಿತಿ.

VISTARANEWS.COM


on

ChatGPT
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಚಾಟ್‌ಜಿಪಿಟಿ (ChatGpt Jobs) ಚಾಟ್‌ಬಾಟ್‌ ಬಗ್ಗೆಯೇ ಈಗ ಎಲ್ಲಡೆ ಮಾತು ಕೇಳಿಬರುತ್ತಿವೆ. ಅದರಲ್ಲೂ, ಕೃತಕ ಬುದ್ಧಿಮತ್ತೆಯಿಂದ (Artificial Intelligence) ಇದು ಕಾರ್ಯನಿರ್ವಹಿಸುತ್ತಿರುವ ಕಾರಣ ಚಾಟ್‌ಜಿಪಿಟಿ ತಂತ್ರಜ್ಞಾನವನ್ನು ಬಹುತೇಕರು ಬಳಸುತ್ತಿದ್ದಾರೆ. ಹಾಗೆಯೇ, ಇದು ಯಾವುದೇ ವಿಷಯದ ಬಗ್ಗೆ ಲೇಖನ ಬರೆಯುವುದರಿಂದ ಹಿಡಿದು, ಕೋಡಿಂಗ್‌ವರೆಗೆ ಎಲ್ಲ ಕೆಲಸ ಮಾಡುತ್ತಿರುವ ಕಾರಣ ಮುಂದೊಂದು ದಿನ ಚಾಟ್‌ಜಿಪಿಟಿಯು ಉದ್ಯೋಗ ಕಸಿಯಲಿದೆ ಎಂಬ ಚರ್ಚೆಗಳು ಕೇಳಿಬರುತ್ತಿವೆ. ಮಾನವ ಸಂಪನ್ಮೂಲ ಕುಸಿಯುತ್ತದೆ, ಉದ್ಯೋಗ ಕಸಿಯುತ್ತದೆ ಎಂದೇ ಹೇಳಲಾಗುತ್ತಿದೆ. ಆದರೆ, ಜಾಟ್‌ಜಿಪಿಟಿ ಹಾಗೂ ಕೃತಕ ಬುದ್ಧಿಮತ್ತೆಯು ಭಾರಿ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಲಿವೆ. ಅದರಲ್ಲೂ, ವಾರ್ಷಿಕ 2 ಕೋಟಿ ರೂಪಾಯಿಗೂ ಅಧಿಕ ಸಂಬಳ ಇರುವ ಉದ್ಯೋಗಗಳನ್ನು ಸೃಷ್ಟಿಸಲಿವೆ ಎಂದು ತಿಳಿದುಬಂದಿದೆ.

ಹೌದು, ಚಾಟ್‌ಜಿಪಿಟಿ ಹಾಗೂ ಕೃತಕ ಬುದ್ಧಿಮತ್ತೆಯಿಂದ ಹೆಚ್ಚು ಸಂಬಳ ಇರುವ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಜಾಗತಿಕ ಮಟ್ಟದ ಬ್ಲೂಮ್‌ಬರ್ಗ್‌ ಸಂಸ್ಥೆಯ ವರದಿ ತಿಳಿಸಿದೆ. ಅದರಲ್ಲೂ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಹೆಚ್ಚು ಬಳಕೆಯಿಂದ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿವೆ. ಅದರಲ್ಲೂ, ಪ್ರಾಂಪ್ಟ್‌ ಎಂಜಿನಿಯರ್‌ಗಳಿಗಂತೂ ವಾರ್ಷಿಕ 2.75 ಕೋಟಿ ರೂಪಾಯಿವರೆಗೆ ಸಂಬಳ ಸಿಗಲಿದೆ. ಚಾಟ್‌ಜಿಪಿಟಿ ಹಾಗೂ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಪ್ರಾಂಪ್ಟ್‌ ಎಂಜಿನಿಯರ್‌ಗಳಿಗೆ ಭಾರಿ ಬೇಡಿಕೆ ಉಂಟಾಗಲಿದೆ. ಅವರಿಗೆ ಭಾರಿ ಸಂಬಳ ಸಿಗಲಿದೆ ಎಂದು ವರದಿಯಲ್ಲಿ ತಿಳಿಸಿದೆ.

ಪ್ರಾಂಪ್ಟ್‌ ಎಂಜಿನಿಯರ್‌ಗಳ ಕೆಲಸವೇನು?

ಪ್ರಾಂಪ್ಟ್‌ ಎಂಜಿನಿಯರ್‌ ಆಗಿರುವವರು ಕೃತಕ ಬುದ್ಧಿಮತ್ತೆ ಟೂಲ್ಸ್‌ ಹಾಗೂ ಚಾಟ್‌ಬಾಟ್‌ಗಳಿಗೆ ಪ್ರಶ್ನೆಗಳನ್ನು ನೀಡುತ್ತಾರೆ. ಪ್ರಶ್ನೆಗಳನ್ನು ಇವರೇ ಸಿದ್ಧಪಡಿಸುತ್ತಾರೆ. ಕೃತಕ ಬುದ್ಧಿಮತ್ತೆ ಉಪಯೋಗಿಸಿಕೊಂಡು ಚಾಟ್‌ಬಾಟ್‌ಗಳು ಸರಿಯಾದ ಉತ್ತರ ನೀಡಲು, ಶುದ್ಧವಾದ ಭಾಷೆಯಲ್ಲಿ, ಉತ್ತಮ ಪದಬಳಕೆ, ಸರಿಯಾದ ವಾಕ್ಯರಚನೆ ಸೇರಿ ಹಲವು ರೀತಿಯಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಪ್ರಾಂಪ್ಟ್‌ ಎಂಜಿನಿಯರ್‌ಗಳ ಪಾತ್ರ ಹಿರಿದಾಗಿದೆ. ಮತ್ತೊಂದು ಮಹತ್ವದ ವಿಷಯ ಏನೆಂದರೆ, ಭಾಷೆ ಹಾಗೂ ತಂತ್ರಜ್ಞಾನದ ಬಗ್ಗೆ ಮಾಹಿತಿ ಇದ್ದರೆ, ಎಂಜಿನಿಯರಿಂಗ್‌, ತಂತ್ರಜ್ಞಾನದ ವಿಷಯದಲ್ಲಿ ಪದವಿ ಪಡೆದವರೇ ಬೇಕಿಲ್ಲ ಎಂದು ವರದಿ ತಿಳಿಸಿದೆ. ಹಾಗಾಗಿ, ಭಾಷೆ, ವಿಶ್ಲೇಷಣೆ, ತಂತ್ರಜ್ಞಾನದ ಬಳಕೆ ಗೊತ್ತಿದ್ದವರೂ ಪ್ರಾಂಪ್ಟ್‌ ಎಂಜಿನಿಯರ್‌ ಆಗಬಹುದಾಗಿದೆ.

ಚಾಟ್‌ಜಿಪಿಟಿ ಬಳಕೆಯಿಂದ ಇತ್ತೀಚೆಗೆ ಹಲವು ರೀತಿಯಲ್ಲಿ ಜನರಿಗೆ ಉಪಯೋಗವಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರು ಮೂಲದ ಕ್ಯಾಪಿಟಲ್‌ ಮೈಂಡ್‌ (Capital Mind) ಎಂಬ ಕಂಪನಿಯು ಉದ್ಯೋಗಿಗಳಿಗೆ ಉಚಿತವಾಗಿ ಚಾಟ್‌ಜಿಪಿಟಿ ಸಬ್‌ಸ್ಕ್ರಿಪ್ಶನ್‌ ನೀಡಿದೆ. ಇತ್ತೀಚೆಗೆ ಚಾಟ್‌ಜಿಪಿಟಿ ಬಳಕೆಯಿಂದ ಕಂಪನಿಯ ನೌಕರರ ಕಾರ್ಯದಕ್ಷತೆ ಹಾಗೂ ಉತ್ಪಾದಕೆಯು ಜಾಸ್ತಿಯಾದ ಕಾರಣ ಚಾಟ್‌ಜಿಪಿಟಿಯ ನೋಂದಣಿಯ ಶುಲ್ಕವನ್ನು ಕಂಪನಿಯೇ ಭರಿಸಲಿದೆ ಎಂದು ಘೋಷಿಸಲಾಗಿದೆ. ಚಾಟ್‌ಜಿಪಿಟಿಯ ನೋಂದಣಿ ಶುಲ್ಕವು ಮಾಸಿಕ 1,640‌ ರೂ. (20 ಡಾಲರ್) ಆಗಲಿದೆ. ಇಷ್ಟನ್ನೂ ಕಂಪನಿಯೇ ನೀಡುತ್ತಿದೆ.

ಇದನ್ನೂ ಓದಿ: Viral News : ಚಾಟ್‌ಜಿಪಿಟಿ ಬಗ್ಗೆ ಪಾಠ ಮಾಡಿ ಮೂರೇ ತಿಂಗಳಲ್ಲಿ 28 ಲಕ್ಷ ರೂ. ದುಡಿದ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

ಮಾರುತಿ ಸುಜುಕಿ (Maruti Suzuki) ತನ್ನ ಎಸ್ ಸಿಎನ್‌ಜಿ ಶ್ರೇಣಿಗಾಗಿ ಹೊಸ ತಂತ್ರಜ್ಞಾನವನ್ನು ಪರಿಚಯಿಸಲು ಸಿದ್ಧವಾಗಿದೆ. ಕಂಪನಿಯು ಬಿಡುಗಡೆ ಮಾಡಿರುವ ಹೊಸ ಸಿಎನ್‌ಜಿ ಟೀಸರ್‌ನಲ್ಲಿ ಮಾರುತಿ ಸುಜುಕಿಯಲ್ಲಿನ ಅತ್ಯಾಕರ್ಷಕ ಬೆಳವಣಿಗೆಗಳ ಮುನ್ನೋಟವನ್ನು ನೀಡುತ್ತಿದೆ. ಸಿಎನ್‌ಜಿ ವಾಹನಗಳ ಕುರಿತಾದ ಮಾರುತಿ ಸುಜುಕಿಯ ಟೀಸರ್‌ ನೀವೇ ನೋಡಿ.

VISTARANEWS.COM


on

By

Maruti Suzuki
Koo

ಭಾರತದ (India) ಮಾರುಕಟ್ಟೆಗೆ (market) ಶೀಘ್ರದಲ್ಲೇ ಪ್ರವೇಶಿಸಲಿರುವ ಮಾರುತಿ ಸುಜುಕಿಯ (Maruti Suzuki) ಸಿಎನ್‌ಜಿ (CNG) ವಾಹನಗಳಲ್ಲಿರುವ ವಿಶೇಷತೆ ಕುರಿತು ಹೊಸ ಟೀಸರ್ (New Teaser) ಅನ್ನು ಬಿಡುಗಡೆ ಮಾಡಿದೆ. ಒಇಎಂ ಬಿಡುಗಡೆ ಮಾಡಿರುವ ಈ ಸಣ್ಣ ವಿಡಿಯೋ ಕ್ಲಿಪ್ ಸಿಎನ್‌ಜಿಯ ಮಾದರಿಗಳ ಮೇಲೆ ಕೇಂದ್ರೀಕರಿಸಿದೆ. ಇದು ಬ್ರ್ಯಾಂಡ್ ಎಸ್‌ಸಿಎನ್‌ಜಿ (S CNG) ಬ್ಯಾಡ್ಜ್‌ನೊಂದಿಗೆ ಬರಲಿದೆ. ಸಿಎನ್‌ಜಿಯಲ್ಲಿ ಕಾರ್ಯನಿರ್ವಹಿಸಲು ಅಗತ್ಯವಿರುವ ಅತ್ಯಾಧುನಿಕ ಸಾಧನಗಳನ್ನು ಹೊಂದಿವೆ.

ಮಾರುತಿ ಸುಜುಕಿ ಭಾರತೀಯ ಕಾರು ಮಾರುಕಟ್ಟೆಯಲ್ಲಿ ದೊಡ್ಡ ಮಾರುಕಟ್ಟೆ ಪಾಲನ್ನು ಹೊಂದಿದೆ. ಅದರ ಮಾರಾಟ ಸಂಖ್ಯೆಗೆ ದೊಡ್ಡ ಕೊಡುಗೆಯನ್ನು ಸಿಎನ್‌ಜಿ ಪವರ್‌ಟ್ರೇನ್‌ಗಳೊಂದಿಗೆ ಮಾಡೆಲ್‌ಗಳು ಮಾಡುತ್ತವೆ.
ಮಾರುತಿ ಸುಜುಕಿ ತನ್ನ ಹೆಚ್ಚಿನ ಫ್ಲೀಟ್ ಅನ್ನು ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಗಳೊಂದಿಗೆ ಒದಗಿಸುವ ಏಕೈಕ ವಾಹನ ತಯಾರಕ ಕಂಪೆನಿಯಾಗಿದೆ. ಗ್ರಾಹಕರಿಗೆ ಇಂಧನ ಸಾಮರ್ಥ್ಯ ಆಯ್ಕೆಯನ್ನು ನೀಡಲು ಬ್ರ್ಯಾಂಡ್ ತನ್ನ ಹೆಚ್ಚಿನ ಕಾರುಗಳಲ್ಲಿ ಎಸ್ ಸಿಎನ್ ಜಿ ಕಿಟ್‌ಗಳನ್ನು ನೀಡುತ್ತದೆ.

ಈಗ ಮಾರುತಿ ಸುಜುಕಿ ತನ್ನ ಎಸ್ ಸಿಎನ್‌ಜಿ ಶ್ರೇಣಿಗಾಗಿ ಹೊಸ ತಂತ್ರಜ್ಞಾನವನ್ನು ಪರಿಚಯಿಸಲು ಸಿದ್ಧವಾಗಿದೆ. ಕಂಪೆನಿಯು ಬಿಡುಗಡೆ ಮಾಡಿರುವ ಹೊಸ ಸಿಎನ್‌ಜಿ ಟೀಸರ್ ನಲ್ಲಿ ಮಾರುತಿ ಸುಜುಕಿಯಲ್ಲಿನ ಅತ್ಯಾಕರ್ಷಕ ಬೆಳವಣಿಗೆಗಳು ನಡೆಯುತ್ತಿವೆ ಎಂಬುದನ್ನು ಸೂಚಿಸುತ್ತದೆ.


ಅವಳಿ ಸಿಲಿಂಡರ್ ನಿರೀಕ್ಷೆ

ಟಾಟಾದಂತಹ ಕಾರು ತಯಾರಕರು ತಮ್ಮ ಸಿಎನ್‌ಜಿ ಕೊಡುಗೆಗಳನ್ನು ಟ್ವಿನ್- ಸಿಲಿಂಡರ್ ತಂತ್ರಜ್ಞಾನ ಮತ್ತು ಸಿಎನ್‌ಜಿಗೆ ಹೊಂದಿಕೆಯಾಗುವ ಎಎಂಟಿ ಗೇರ್‌ಬಾಕ್ಸ್‌ಗಳಂತಹ ವೈಶಿಷ್ಟ್ಯಗಳೊಂದಿಗೆ ಹೆಚ್ಚಿಸಿದ್ದಾರೆ. ಸಿಎನ್‌ಜಿ ವಾಹನ ವಿಭಾಗದಲ್ಲಿನ ಈ ಸುಧಾರಣೆಯು ಟಾಟಾ ಸಿಎನ್‌ಜಿ ವಾಹನಗಳ ಮಾರಾಟವನ್ನು ಹೆಚ್ಚಿಸಿದೆ. ಮಾರುತಿ ಸುಜುಕಿ ಇನ್ನೂ ಒಂದೇ ಸಿಎನ್‌ಜಿ ಟ್ಯಾಂಕ್ ಅನ್ನು ನೀಡುತ್ತದೆ.

ಈಗಿನ ಟೀಸರ್ ನಲ್ಲಿ ಮಾರುತಿ ಕೆಲವು ಹೊಸ ತಂತ್ರಜ್ಞಾನವನ್ನು ಪ್ರಾರಂಭಿಸಲು ಯೋಜಿಸುತ್ತಿದೆ ಎಂದು ಸೂಚಿಸುತ್ತದೆ. ಸಿಎನ್ ಜಿ ವಾಹನಗಳಲ್ಲಿ ನೇರ ಸಿಎನ್ ಜಿ ಪ್ರಾರಂಭ ಮತ್ತು ಸ್ವಿಚ್‌ಓವರ್ ವ್ಯವಸ್ಥೆಯೊಂದಿಗೆ ಅವಳಿ ಸಿಲಿಂಡರ್ ತಂತ್ರಜ್ಞಾನವನ್ನು ಬ್ರ್ಯಾಂಡ್ ಪ್ರಾರಂಭಿಸುತ್ತದೆ ಎಂಬುದನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

ಅವಳಿ ಸಿಲಿಂಡರ್ ತಂತ್ರಜ್ಞಾನವು ಎರಡು 25- 30 ಲೀಟರ್ ಸಿಲಿಂಡರ್‌ಗಳನ್ನು ಸ್ಪೇರ್ ವೀಲ್‌ನ ಜಾಗದಲ್ಲಿ ಇರಿಸುವ ನಿರೀಕ್ಷೆಯಿದೆ. ಬಿಡಿ ಚಕ್ರವನ್ನು ಬೂಟ್ ಅಡಿಯಲ್ಲಿ ಇರಿಸಬಹುದು. ಆದರೆ, ಹೊಸ ತಂತ್ರಜ್ಞಾನದಲ್ಲಿ ಏನನ್ನು ತರಲಿದೆ ಎಂಬುದನ್ನು ಕಂಪನಿ ಇನ್ನೂ ಬಹಿರಂಗಪಡಿಸಿಲ್ಲ.

ಅರೆನಾ ಔಟ್‌ಲೆಟ್‌ಗಳ ಮೂಲಕ ಮಾರಾಟವಾಗುವ ಮಾದರಿಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಡಿಜೈರ್, ಆಲ್ಟೊ, ಎರ್ಟಿಗಾ, ವ್ಯಾಗನ್ಆರ್, ಸೆಲೆರಿಯೊ, ಇಕೊ, ಎಸ್-ಪ್ರೆಸ್ಸೊ ಮತ್ತು ಬ್ರೆಝಾ ಸೇರಿವೆ. ಏತನ್ಮಧ್ಯೆ, ಫ್ರಾಂಕ್ಸ್, ಬಲೆನೊ, ಗ್ರ್ಯಾಂಡ್ ವಿಟಾರಾ ಮತ್ತು ಎಕ್ಸ್‌ಎಲ್ 6 ನಂತಹ ಇತರ ಮಾದರಿಗಳನ್ನು ನೆಕ್ಸಾ ಔಟ್‌ಲೆಟ್‌ಗಳ ಮೂಲಕ ಮಾರಾಟ ಮಾಡಲಾಗುತ್ತದೆ.

Continue Reading

ದೇಶ

Tollgates: ಇನ್ನು ಫಾಸ್ಟ್‌ಟ್ಯಾಗ್‌‌ ಮರೆತುಬಿಡಿ; ಟೋಲ್‌ ಸಂಗ್ರಹಕ್ಕೆ ಬರುತ್ತಿದೆ ಸ್ಯಾಟಲೈಟ್‌ ಆಧಾರಿತ ವ್ಯವಸ್ಥೆ: ಏನಿದರ ಪ್ರಯೋಜನ?

Tollgates: ವಾಹನ ಸವಾರರಿಗೆ ಗುಡ್‌ನ್ಯೂಸ್‌. ಇನ್ನು ಹೆದ್ದಾರಿಯಲ್ಲಿ ಟೋಲ್‌ ಕಟ್ಟಲು ಕಾಯುವ ಕಿರಿಕಿರಿ ತಪ್ಪಲಿದೆ. ಫಾಸ್ಟ್‌ಟ್ಯಾಗ್‌‌ ಟೋಲ್‌ ಸಂಗ್ರಹಕ್ಕಿಂತ ಭಿನ್ನವಾದ, ಸ್ಯಾಟಲೈಟ್‌ ಆಧಾರಿತ ಟೋಲ್‌ ಸಿಸ್ಟಂ ಜಾರಿಗೆ ತರುವುದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಹೊಸ ತಂತ್ರಜ್ಞಾನದಿಂದ ಏನೆಲ್ಲ ಪ್ರಯೋಜನಗಳಿವೆ, ಸವಾಲುಗಳೇನು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Tollgates
Koo

ನವದೆಹಲಿ: ಕೇಂದ್ರ ಸರ್ಕಾರ ಹೆದ್ದಾರಿಗಳಲ್ಲಿನ ಟೋಲ್‌ ಸಂಗ್ರಹ (Tollgates) ವ್ಯವಸ್ಥೆಯ ಬದಲಾವಣೆಗೆ ಚಿಂತನೆ ನಡೆಸಿದೆ. ಕಳೆದ ವರ್ಷವೇ ಸರ್ಕಾರ ಈ ಬಗ್ಗೆ ಸೂಚನೆ ನೀಡಿದೆ. ಫಾಸ್ಟ್‌ಟ್ಯಾಗ್‌‌ (FASTag) ಟೋಲ್‌ ಸಂಗ್ರಹಕ್ಕಿಂತ ಭಿನ್ನವಾದ, ಸ್ಯಾಟಲೈಟ್‌ ಆಧಾರಿತ ಟೋಲ್‌ ಸಿಸ್ಟಂ ಜಾರಿಗೆ ತರುವುದು ಸರ್ಕಾರದ ಯೋಜನೆ. ಉಪಗ್ರಹ ಆಧಾರಿತವಾಗಿ ಇದು ಕಾರ್ಯ ನಿರ್ವಹಿಸಲಿದೆ (Satellite Based Toll System). ಉಪಗ್ರಹ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲು ವಿವಿಧ ಜಾಗತಿಕ ಸಂಸ್ಥೆಗಳ ಜತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NationalHighway aAuthority of India) ಚರ್ಚೆ ನಡೆಸಿದೆ. ಈ ಹೊಸ ತಂತ್ರಜ್ಞಾನದಿಂದ ಏನೆಲ್ಲ ಪ್ರಯೋಜನಗಳಿವೆ, ಸವಾಲುಗಳೇನು ಎನ್ನುವ ವಿವರ ಇಲ್ಲಿದೆ.

ಕೇಂದ್ರ ಸರ್ಕಾರವು 2021ರಿಂದ ಫಾಸ್ಟ್‌ಟ್ಯಾಗ್‌ ಕಡ್ಡಾಯಗೊಳಿಸಿದ್ದು, ಇದರಿಂದ ಟೋಲ್‌ಗೇಟ್‌ಗಳಲ್ಲಿ ಜನರ ಅರ್ಧ ಸಮಯ ಉಳಿತಾಯವಾಗಿದೆ. ರಸ್ತೆಯ ಉದ್ದಕ್ಕೂ ಕ್ಯೂ ನಿಲ್ಲುವ ಪ್ರಮೇಯ ತಪ್ಪಿದೆ. ಅದಾಗ್ಯೂ ಕಾಯುವ ಕಿರಿಕಿರಿ ಪೂರ್ತಿಯಾಗಿ ತಪ್ಪಿಲ್ಲ. ಇದೀಗ ಹೊಸ ವ್ಯವಸ್ಥೆ ಮೂಲಕ ಈ ಎಲ್ಲ ಸಮಸ್ಯೆ ಪರಿಹಾರವಾಗಲಿದೆ ಎನ್ನುವ ನಿರೀಕ್ಷೆ ಇದೆ.

ಜಿಪಿಎಸ್‌ ಆಧಾರಿತ ಟೋಲ್‌ ಸಿಸ್ಟಮ್‌ ಹೇಗೆ ಕಾರ್ಯ ನಿರ್ವಹಿಸುತ್ತದೆ?

ಭಾರತದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಜಿಪಿಎಸ್ ಅಥವಾ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯಲ್ಲಿ ಫಾಸ್ಟ್‌ಟ್ಯಾಗ್‌ ಐಡಿಗಳನ್ನು ಸ್ಕ್ಯಾನ್ ಮಾಡುವ ಬದಲು, ವಾಹನದ ನಂಬರ್ ಪ್ಲೇಟ್ ಅನ್ನು ಸ್ಕ್ಯಾನ್ ಮಾಡಲಾಗುತ್ತದೆ. ಇದಕ್ಕಾಗಿ ಹೆದ್ದಾರಿಗಳನ್ನು ವರ್ಚುವಲ್ ಟೋಲ್‌ನಿಂದ ಸಜ್ಜುಗೊಳಿಸಲಾಗುತ್ತದೆ. ಇದರಲ್ಲಿನ ಕ್ಯಾಮೆರಾ ಚಲಿಸುತ್ತಿರುವ ವಾಹನಗಳ ನಂಬರ್‌ ಪ್ಲೇಟ್‌ ಅನ್ನು ಗುರುತಿಸುತ್ತದೆ. ಬಳಿಕ ವಾಹನ ಪ್ರಯಾಣಿಸಿದ ದೂರವನ್ನು ಆಧರಿಸಿ ಬ್ಯಾಂಕ್ ಖಾತೆಯಿಂದ ಟೋಲ್ ಮೊತ್ತವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸಲಾಗುತ್ತದೆ. ಜತೆಗೆ ವಿವಿಧ ವಿವರಗಳನ್ನು ಮೇಲ್ವಿಚಾರಣೆ ನಡೆಸಲು ಜಿಪಿಎಸ್ ಅನ್ನು ಬಳಸಲಾಗುತ್ತದೆ. ಒಟ್ಟಿನಲ್ಲಿ ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯು ಜಾರಿಗೆ ಬಂದರೆ ಸಮಯದ ಜತೆಗೆ ಹಣವೂ ಉಳಿತಾಯವಾಗುತ್ತದೆ. ಟೋಲ್‌ ಸಂಗ್ರಹ ಇರುವ ಹೆದ್ದಾರಿಯಲ್ಲಿ ನಾವು ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಟೋಲ್‌ ಶುಲ್ಕ ಪಾವತಿಸದರೆ ಸಾಕಾಗುತ್ತದೆ.

ಅನುಕೂಲಗಳೇನು?

ಈ ಹೊಸ ಟೋಲ್ ಸಂಗ್ರಹ ವ್ಯವಸ್ಥೆಯ ಕಾಯುವ ಸಮಯವನ್ನು ಕಡಿಮೆ ಮಾಡುತ್ತದೆ. ಇದು ಸರಾಸರಿ ಕಾಯುವ ಸಮಯವನ್ನು 714 ಸೆಕೆಂಡುಗಳಿಂದ (ಸುಮಾರು 11 ನಿಮಿಷ) 47 ಸೆಕೆಂಡುಗಳಿಗೆ ಇಳಿಸುತ್ತದೆ. ಅಂತಿಮವಾಗಿ ಪ್ರಯಾಣದ ಸಮಯವನ್ನೂ ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಈ ವಿಧಾನವು ಸಂಚಾರ ದಟ್ಟಣೆಯನ್ನು ಇಳಿಸಲು ಸಹಾಯ ಮಾಡುತ್ತದೆ. ಇದಕ್ಕಾಗಿ ವಿಶೇಷ ಟೋಲ್ ಲೇನ್‌ಗಳನ್ನು ನಿರ್ಮಿಸುವ ಅಗತ್ಯವಿಲ್ಲ. ಟೋಲ್‌ ಬೂತ್‌ಗಳನ್ನು ತೆಗೆದುಹಾಕುವುದರಿಂದ ಇವುಗಳ ನಿರ್ವಹಣೆ ಮತ್ತು ನಿರ್ಮಾಣ ವೆಚ್ಚಗಳನ್ನು ಉಳಿಸಬಹುದು. ಇದಲ್ಲದೆ, ಬಿಲ್ಲಿಂಗ್ ಪ್ರಕ್ರಿಯೆಯು ಸುಲಭವಾಗುತ್ತದೆ. ಏಕೆಂದರೆ ಬಳಕೆದಾರರು ಅವರು ಪ್ರಯಾಣಿಸುವ ದೂರಕ್ಕೆ ಮಾತ್ರ ಪಾವತಿಸಿದರೆ ಸಾಕು. ಅಂದರೆ ಈಗ ನಾವು ಟೋಲ್‌ ಗೇಟ್‌ ನಂತರ ಅರ್ಧ ಕಿಲೋಮೀಟರ್‌ ಇದ್ದರೂ, ಪೂರ್ತಿ ಹಣವನ್ನು ಪಾವತಿಸಬೇಕು. ಆದರೆ ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಗೆ ಬಂದರೆ, ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಹಣ ಪಾವತಿ ಮಾಡಿದರಾಯ್ತು.

ಸವಾಲುಗಳೇನು?

ಇನ್ನು ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಗೆ ಹಲವು ಸವಾಲುಗಳಿವೆ. ಪ್ರಸ್ತುತ ಬಳಸಲಾಗುವ ಫಾಸ್ಟ್‌ಟ್ಯಾಗ್‌ಗೆ ಹೋಲಿಸಿದರೆ ಇದು ಮುಂದುವರಿದಿದ ತಂತ್ರಜ್ಞಾನವಾಗಿದ್ದರೂ ಈ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆ ಅಗತ್ಯ. ಉದಾಹರಣೆಗೆ, ವಾಹನ ದಟ್ಟಣೆ ಇರುವ ಸ್ಥಳಗಳಲ್ಲಿ ನಿಖರವಾದ ಡೇಟಾವನ್ನು ಸಂಗ್ರಹಿಸಲು ಸಿಸ್ಟಮ್‌ಗೆ ಸಾಧ್ಯವಾಗದಿರಬಹುದು. ಈ ಸಮಸ್ಯೆಗಳು ಗ್ರಾಮೀಣ ಭಾಗಗಳು ಅಥವಾ ಭೌಗೋಳಿಕವಾಗಿ ಸವಾಲಿನ ಭೂ ಪ್ರದೇಶವನ್ನು ಹೊಂದಿರುವ ಪ್ರದೇಶಗಳಲ್ಲಿ ನಿರಂತರವಾಗಿರಬಹುದು. ಈ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಅಲ್ಲದೆ ಇದು ಗ್ರಾಹಕರ ಗೌಪ್ಯತೆಯ ಬಗ್ಗೆಯೂ ಪ್ರಶ್ನೆ ಏಳುವಂತೆ ಮಾಡುತ್ತದೆ.

ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಯಲ್ಲಿರುವ ದೇಶಗಳಿವು

ಈ ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆಯನ್ನು ಈಗಾಗಲೇ ಹಲವು ದೇಶಗಳು ಬಳಸುತ್ತಿವೆ. ಜರ್ಮನಿ, ರಷ್ಯಾ ಮತ್ತು ಸ್ಲೋವಾಕಿಯಾದಂತಹ ಯುರೋಪಿಯನ್‌ ರಾಷ್ಟ್ರಗಳು ತಮ್ಮ ಹೆದ್ದಾರಿಗಳಲ್ಲಿ ಪ್ರಯಾಣವನ್ನು ಸುಗಮಗೊಳಿಸಲು ಈ ವ್ಯವಸ್ಥೆಯನ್ನು ಯಶಸ್ವಿಯಾಗಿ ಬಳಸುತ್ತಿವೆ. ಈ ದೇಶಗಳಲ್ಲಿನ ಸಾವಿರಾರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಭಾರತದಲ್ಲಿ ಯಾವಾಗ ಜಾರಿಗೆ ಬರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Money Guide: ಫಾಸ್ಟ್‌ಟ್ಯಾಗ್‌ ಇದ್ದರೂ ದಂಡ ಕಟ್ಟುತ್ತಿದ್ದೀರಾ?; ಪರಿಹಾರ ಇಲ್ಲಿದೆ

Continue Reading

ಪ್ರಮುಖ ಸುದ್ದಿ

HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

HSRP Number Plate : ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

VISTARANEWS.COM


on

HSRP Number plate
Koo

ಬೆಂಗಳೂರು: 2019ಕ್ಕಿಂತ ಹಿಂದೆ ಮಾರುಕಟ್ಟೆಗೆ ಇಳಿದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಸಂಖ್ಯೆ ಫಲಕ (HSRP Number Plate) ಕಡ್ಡಾಯವಾಗಿ ಅಳವಡಿಸಬೇಕೆಂಬ ಗಡುವು ಜುಲೈ 4ರವರೆಗೆ ವಿಸ್ತರಣೆಯಾಗಿದೆ. ಹೀಗಾಗಿ ನಾನಾ ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ನಂಬರ್​ಪ್ಲೇಟ್​ ಅಳವಡಿಸದ ವಾಹನಗಳ ಮಾಲೀಕರಿಗೆ ನೆಮ್ಮದಿ ಸಿಕ್ಕಿದೆ. ಹೊಸ ನಂಬರ್​ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಹೈಕೋರ್ಟ್‌ ಮೇ 21ರಂದು ಹೊರಡಿಸಿದ್ದ ಆದೇಶ ಜುಲೈ 4ರವರೆಗೆ ವಿಸ್ತರಣೆಯಾಗಿರುವುದರಿಂದ ವಾಹನ ಮಾಲೀಕರಿಗೆ ತೊಂದರೆ ತಪ್ಪಿದೆ.

ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

ಪ್ರಕರಣದಲ್ಲಿ ಸರಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ, ಅವರೂ ಸರ್ಕಾರದ ನಿಲುವನ್ನು ಇದೇ ವೇಳೆ ವ್ಯಕ್ತಪಡಿಸಿದ್ದಾರೆ. “ಎಚ್‌ಎಸ್‌ಆರ್‌ಪಿ ಫಲಕಗಳ ಅಳವಡಿಕೆ ಅವಧಿಯನ್ನು ರಾಜ್ಯ ಸರಕಾರ 2024ರ ಆಗಸ್ಟ್‌ ಇಲ್ಲವೇ ಸೆಪ್ಟೆಂಬರ್‌ವರೆಗೂ ವಿಸ್ತರಿಸುವ ಚಿಂತನೆ ನಡೆಸಿದೆ. ಹೈಕೋರ್ಟ್‌ ಅನುಮತಿ ನೀಡಿದಲ್ಲಿ ಸರಕಾರ ಈ ಸಂಬಂಧ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಿದೆ,” ಎಂದು ಮನವರಿಕೆ ಮಾಡಿದರು. ಈ ವೇಳೆ ನ್ಯಾಯಪೀಠ, ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಅವಧಿಯನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲು ಸರಕಾರ ಸ್ವತಂತ್ರ,” ಎಂದು ಹೇಳಿತು.

ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮುನ್ನ ನೋಂದಣಿಯಾದ ಎಲ್ಲ ಮಾದರಿಯ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ 2023ರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ, ವಿತರಣೆ, ಅಳವಡಿಕೆ ಸೇರಿದಂತೆ ನಾನಾ ಸಮಸ್ಯೆಗಳಿಂದ ಈ ಯೋಜನೆಗೆ ಸಮಸ್ಯೆಯಾಗುತ್ತಿದೆ. ಸುರಕ್ಷಿತ ನಂಬರ್​ ಪ್ಲೇಟ್ ಅಳವಡಿಸಲು ಸುಮಾರು ಅರ್ಧದಷ್ಟು ವಾಹನ ಮಾಲೀಕರಿಗೆ ಇನ್ನೂ ಆಗಿಲ್ಲ. ಹೀಗಾಗಿ ಗಡುವು ವಿಸ್ತರಣೆ ಆಗುತ್ತಲೇ ಇದೆ. ಇದೀಗ ಕೋರ್ಟ್​ ಆದೇಶದ ಮೂಲಕ ಮತ್ತಷ್ಟು ವಿಸ್ತರಣೆಯಾಗಿದೆ. ಸರ್ಕಾರವೂ ಇದನ್ನು ಇನ್ನಷ್ಟು ಮುಂದುವರಿಸುವ ಯೋಜನೆ ಹೊಂದಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಕೆಲವು ಸಂಸ್ಥೆಗಳನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಆಕ್ಷೇಪಿಸಿ ಹೈ ಸೆಕ್ಯುರಿಟಿ ರೆಜಿಸ್ಪ್ರೇಷನ್‌ ಪ್ಲೇಟ್‌ ಮ್ಯಾನುಫ್ಯಾಕ್ಚರರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಸೇರಿ ಅವಕಾಶ ವಂಚಿತ ಕೆಲ ಸಂಸ್ಥೆಗಳು ನ್ಯಾಯಾಲಯದ ಮೊರೆ ಹೋಗಿವೆ. ಆ ಅರ್ಜಿ ಜತೆಗೆ ಮಧ್ಯಂತರ ಅರ್ಜಿ ಹೂಡಿರುವ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಎಚ್‌ಎಸ್‌ಆರ್‌ಪಿ ಅಳವಡಿಕೆ ವಿಧಿಸಿರುವ ಗಡುವು ವಿಸ್ತರಿಸಲು ಕೋರಿದೆ.

Continue Reading

ಕರ್ನಾಟಕ

Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

Tata Motors: ಟಾಟಾ ಮೋಟಾರ್ಸ್ ಇಂದು ಕಂಪನಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಸ್ಪೋರ್ಟಿ ವರ್ಷನ್ ಆಗಿರುವ ಆಲ್ಟ್ರೋಜ್ ರೇಸರ್ ಅನ್ನು ಬಿಡುಗಡೆ ಮಾಡಿದೆ. 1.2 ಲೀ ಟರ್ಬೊ ಪೆಟ್ರೋಲ್ ಎಂಜಿನ್‌ ಹೊಂದಿರುವ ಅಲ್ಟ್ರೋಜ್ ಅತ್ಯುನ್ನತ ಕಾರ್ಯಕ್ಷಮತೆಯನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ. 360 ಡಿಗ್ರಿ ಕ್ಯಾಮೆರಾ, 26.03 ಸೆಂ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್, ವೆಂಟಿಲೇಟೆಡ್ ಸೀಟ್‌ಗಳು ಮತ್ತು 6 ಏರ್‌ಬ್ಯಾಗ್‌ಗಳು ಹೀಗೆ ಹಲವಾರು ಫೀಚರ್‌ಗಳನ್ನು ಹೊಂದಿವೆ.

VISTARANEWS.COM


on

Altroz Racer launched by Tata Motors
Koo

ಬೆಂಗಳೂರು: ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆಯಾದ ಟಾಟಾ ಮೋಟಾರ್ಸ್ (Tata Motors) ಇಂದು ಕಂಪನಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಸ್ಪೋರ್ಟಿ ವರ್ಷನ್ ಆಗಿರುವ ಆಲ್ಟ್ರೋಜ್ ರೇಸರ್ ಅನ್ನು ಬಿಡುಗಡೆ ಮಾಡಿದೆ. 1.2 ಲೀ ಟರ್ಬೊ ಪೆಟ್ರೋಲ್ ಎಂಜಿನ್‌ ಹೊಂದಿರುವ ಅಲ್ಟ್ರೋಜ್ ಅತ್ಯುನ್ನತ ಕಾರ್ಯಕ್ಷಮತೆಯನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ. ರೇಸ್ ಕಾರ್‌ಗಳಿಂದ ಸ್ಫೂರ್ತಿ ಪಡೆದು ರಚಿಸಿದ ಹೊರಾಂಗಣ ಮತ್ತು ಒಳಾಂಗಣ ಲುಕ್ ಅನ್ನು ಹೊಂದಿದೆ.

5500 ಆರ್‌ಪಿಎಂನಲ್ಲಿ 120 ಪಿಎಸ್ ಉತ್ಪಾದಿಸುವ, 1750ರಿಂದ 4000 ಆರ್‌ಪಿಎಂನಲ್ಲಿ 170 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ಅಲ್ಟ್ರೋಜ್ ಅತ್ಯುನ್ನತ ಡ್ರೈವಿಂಗ್ ಅನುಭವವನ್ನು ಒದಗಿಸಲಿದೆ. 360 ಡಿಗ್ರಿ ಕ್ಯಾಮೆರಾ, 26.03 ಸೆಂ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್, ವೆಂಟಿಲೇಟೆಡ್ ಸೀಟ್‌ಗಳು ಮತ್ತು 6 ಏರ್‌ಬ್ಯಾಗ್‌ಗಳು (ರೇಸರ್‌ನಲ್ಲಿ ಸ್ಟ್ಯಾಂಡರ್ಡ್ ಆಗಿ ಬರುತ್ತವೆ) ಹೀಗೆ ಹಲವಾರು ಫೀಚರ್‌ಗಳನ್ನು ಹೊಂದಿರುವ ರೇಸರ್ ಆವೃತ್ತಿಯು ಆಲ್ಟ್ರೊಜ್‌ ಕಾರು ಆವೃತ್ತಿಗಳಲ್ಲಿಯೇ ಅಗ್ರಸ್ಥಾನದಲ್ಲಿದೆ.

ಇದನ್ನೂ ಓದಿ: University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

ಇದು 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅನ್ನು ಒದಗಿಸುವ ಏಕೈಕ ಹ್ಯಾಚ್‌ಬ್ಯಾಕ್ ಆಗಿದ್ದು, ನಗರದ ಟ್ರಾಫಿಕ್ ಮತ್ತು ಹೆದ್ದಾರಿಗಳಲ್ಲಿ ಅತ್ಯುತ್ತಮ ಚಾಲನಾ ಅನುಭವವನ್ನು ಒದಗಿಸುತ್ತದೆ. ಸುಧಾರಿತ ತಂತ್ರಜ್ಞಾನ, ವೈಶಿಷ್ಟ್ಯಗಳು ಮತ್ತು ಹ್ಯಾಚ್‌ಬ್ಯಾಕ್‌ನಲ್ಲಿ ಕ್ಲಾಸ್-ಲೀಡಿಂಗ್ ಸುರಕ್ಷತೆಯನ್ನು ಹೊಂದಿರುವ ಆಲ್ಟ್ರೋಜ್ ರೇಸರ್ 3 ವೇರಿಯಂಟ್‌ಗಳಲ್ಲಿ (ಆರ್1, ಆರ್2 ಮತ್ತು ಆರ್3) ಲಭ್ಯವಿರುತ್ತದೆ. ಮೂರು ಬಣ್ಣಗಳ (ಪ್ಯೂರ್ ಗ್ರೇ, ಅಟಾಮಿಕ್ ಆರೆಂಜ್ ಮತ್ತು ಅವೆನ್ಯೂ ವೈಟ್) ಆಯ್ಕೆ ಗ್ರಾಹಕರಿಗೆ ಸಿಗುತ್ತದೆ.

ಇದರ ಜತೆಗೆ ಅಲ್ಟ್ರೋಜ್ ಶ್ರೇಣಿಯನ್ನು ವಿಸ್ತರಿಸುತ್ತಾ ಟಾಟಾ ಮೋಟಾರ್ಸ್ ಎರಡು ಹೊಸ ವೇರಿಯಟ್‌ಗಳನ್ನು (ಎಕ್ಸ್‌ ಝಡ್‌ ಎಲ್‌ಯುಎಕ್ಸ್‌ ಮತ್ತು ಎಕ್ಸ್‌ ಝಡ್‌+ಎಸ್‌ ಎಲ್‌ಯುಎಕ್ಸ್‌) ಪರಿಚಯಿಸಿದೆ ಮತ್ತು ಅಲ್ಟ್ರೋಜ್ ಶ್ರೇಣಿಯ ಒಂದು ವೇರಿಯಂಟ್ ಅನ್ನು (ಎಕ್ಸ್‌ ಝಡ್‌+ಓಎಸ್) ನವೀಕರಿಸಿದೆ. ಈ ಎರಡು ಹೊಸ ಹೆಚ್ಚುವರಿ ವೇರಿಯಂಟ್‌ಗಳು ಪೆಟ್ರೋಲ್ ಮ್ಯಾನ್ಯುವಲ್, ಪೆಟ್ರೋಲ್ ಡಿಸಿಎ, ಡೀಸೆಲ್ ಮತ್ತು ಸಿ ಎನ್ ಜಿ ವಿಭಾಗಗಳ ಆಯ್ಕೆಯಲ್ಲಿ ಲಭ್ಯವಿರುತ್ತವೆ.

ದರ ಪಟ್ಟಿ

ರೇಸರ್ ವೇರಿಯಂಟ್‌ಗಳು ಪರಿಚಯಾತ್ಮಕ ಬೆಲೆ (ಪೆಟ್ರೋಲ್ ಎಂಟಿ), ಭಾರತೀಯ ರೂಪಾಯಿಗಳಲ್ಲಿ, ಎಕ್ಸ್ ಶೋರೂಂ, ದೆಹಲಿ ಆರ್1 -9,49,000, ಆರ್2- 10,49,000, ಆರ್3- 10,99,000 ಆಗಿವೆ.

ವೇರಿಯಂಟ್‌ಗಳು ಪರಿಚಯಾತ್ಮಕ ಬೆಲೆ (ಪೆಟ್ರೋಲ್ ಎನ್ಎ ಎಂಟಿ), ಭಾರತೀಯ ರೂಪಾಯಿಗಳಲ್ಲಿ, ಎಕ್ಸ್ ಶೋರೂಂ, ದೆಹಲಿ ಎಕ್ಸ್‌ ಝಡ್‌ ಎಲ್‌ಯುಎಕ್ಸ್ (ಹೊಸತು) – 8,99,900, ಎಕ್ಸ್‌ ಝಡ್‌+ಎಸ್ ಎಲ್‌ಯುಎಕ್ಸ್ – (ಹೊಸತು) -9,64,990, ಎಕ್ಸ್‌ ಝಡ್‌+ಓಎಸ್ (ಅಪ್ ಗ್ರೇಡೆಡ್) -9,98,900 ರಷ್ಟಿದೆ.

ಇದನ್ನೂ ಓದಿ: EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

ಟಾಟಾ ಆಲ್ಟ್ರೊಜ್ ರೇಸರ್ ಬಿಡುಗಡೆಯ ಕುರಿತು ಪ್ರತಿಕ್ರಿಯಿಸಿದ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್‌ನ ಮುಖ್ಯ ವಾಣಿಜ್ಯ ಅಧಿಕಾರಿ ವಿವೇಕ್ ಶ್ರೀವತ್ಸ ಮಾತನಾಡಿ, ಪ್ರತಿ ದಿನ ವಾಹನ ಚಾಲನೆ ಮಾಡುವವರಿಗೆ ಉತ್ಕೃಷ್ಟ ಅನುಭವ ಒದಗಿಸಲೆಂದೇ ವಿನ್ಯಾಸಗೊಂಡಿರುವ ಆಲ್ಟ್ರೋಜ್ ರೇಸರ್ ಅನ್ನು ಬಿಡುಗಡೆ ಮಾಡವ ಮೂಲಕ ಆಲ್ಟ್ರೋಜ್ ಶ್ರೇಣಿಯನ್ನು ಬಲಪಡಿಸಲು ಹೆಮ್ಮೆ ಪಡುತ್ತೇವೆ. ವಿಭಾಗ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿರುವ ಮತ್ತು ತಂತ್ರಜ್ಞಾನ ಆಧರಿತವಾಗಿ ರೂಪುಗೊಂಡಿರುವ, ಅತ್ಯುನ್ನತ ಶಕ್ತಿ ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ರೇಸರ್, ವಿಭಿನ್ನ ಕಾರನ್ನು ಡ್ರೈವ್ ಮಾಡಲು ಬಯಸುವ, ಕನೆಕ್ಟೆಡ್ ಆಗಿರುವ ಮತ್ತು ಫ್ಯಾಷನ್ ಆಸಕ್ತಿಯನ್ನು ಹೊಂದಿರುವ ಹೊಸ ಪೀಳಿಗೆಯ ಗ್ರಾಹಕರನ್ನು ಹೆಚ್ಚು ಆಕರ್ಷಿಸಬಹುದಾಗಿದೆ.

ಅದ್ಭುತ ಕಾರ್ಯಕ್ಷಮತೆಯ ಡಿಎನ್ಎ ಹೊಂದಿರುವ ಮತ್ತು ರೇಸ್ ಕಾರ್‌ನಿಂದ ಸ್ಫೂರ್ತಿ ಪಡೆದಿರುವ ಲುಕ್ ಹೊಂದಿರುವ ರೇಸರ್ ನಿಮ್ಮನ್ನು #RacePastTheRoutine ಎಂಬ ಭಾವನೆ ಉಂಟು ಮಾಡುವ ಪರಿಪೂರ್ಣ ಒಡನಾಡಿಯಾಗುವ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

2.5 ಲಕ್ಷ ಗ್ರಾಹಕರನ್ನು ಹೊಂದಿರುವ ಅಲ್ಟ್ರೋಜ್ ಅದರ ಸೊಗಸಾದ ವಿನ್ಯಾಸ, ಅಪೂರ್ವ ವೈಶಿಷ್ಟ್ಯಗಳು, ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಉತ್ತಮ ಸುರಕ್ಷತೆಯ ಮೂಲಕ ಭಾರತದಲ್ಲಿನ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ಗಳಲ್ಲಿಯೇ ಉನ್ನತ ಮಾನದಂಡವನ್ನು ಸ್ಥಾಪಿಸಿದೆ. ಈ ಕಾರು ಅನೇಕ ವಿಭಾಗಗಳಲ್ಲಿ ಪ್ರವರ್ತಕ ಫೀಚರ್ ಗಳನ್ನು ಹೊಂದಿದೆ. ಗ್ಲೋಬಲ್ ಎಸಿಎಪಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಗಳಿಸಿದ ಭಾರತದ ಮೊದಲ ಹ್ಯಾಚ್‌ಬ್ಯಾಕ್ ಎಂಬ ಹೆಗ್ಗಳಿಗೆ ಗಳಿಸಿದೆ. ಟ್ವಿನ್-ಸಿಲಿಂಡರ್ ತಂತ್ರಜ್ಞಾನವನ್ನು ಒಳಗೊಂಡಿರುವ ದೇಶದ ಮೊದಲ ಸಿಎನ್‌ಜಿ ಕಾರ್ ಮತ್ತು ಗ್ರಾಹಕರಿಗೆ ಆಯ್ಕೆ ಮಾಡಲು ಪವರ್‌ಟ್ರೇನ್ ಆಯ್ಕೆಗಳನ್ನು ಒದಗಿಸುವ ಏಕೈಕ ಹ್ಯಾಚ್‌ಬ್ಯಾಕ್ ಆಗಿದೆ.

Continue Reading
Advertisement
Jammu Kashmir
ದೇಶ58 mins ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ1 hour ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ2 hours ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

ISIS Terrorists
ಕರ್ನಾಟಕ3 hours ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ3 hours ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Namma Clinic
ಕರ್ನಾಟಕ3 hours ago

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Maruti Suzuki
ಆಟೋಮೊಬೈಲ್4 hours ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ5 hours ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ5 hours ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು5 hours ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌