IRCTC Scam Alert: ರೈಲ್ವೆ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಿ ಎಂಬ ಲಿಂಕ್ ಬಂದಿದೆಯಾ? ಹುಷಾರ್ ಇದು ಫೇಕ್ ಲಿಂಕ್ - Vistara News

ಗ್ಯಾಜೆಟ್ಸ್

IRCTC Scam Alert: ರೈಲ್ವೆ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಿ ಎಂಬ ಲಿಂಕ್ ಬಂದಿದೆಯಾ? ಹುಷಾರ್ ಇದು ಫೇಕ್ ಲಿಂಕ್

IRCTC Scam Alert: ನಕಲಿ ಐಆರ್‌ಸಿಟಿಸಿ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಲು ಪ್ರೇರೇಪಿಸುವ ಫಿಶಿಂಗ್ ಲಿಂಕ್ ಹಂಚಿಕೆಯಾಗುತ್ತಿರುವ ಬಗ್ಗೆ ರೈಲ್ವೆ ಇಲಾಖೆ ಎಚ್ಚರಿಸಿದೆ.

VISTARANEWS.COM


on

IRCTC App
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತೀಯ ರೈಲ್ವೆ ಕೆಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ(IRCTC) ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದು, ಐಆರ್‌ಸಿಟಿಸಿ (IRCTC Rail Connect App) ನಕಲಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಫಿಶಿಂಗ್ ಲಿಂಕ್ (Fishing Link) ಹರಿದಾಡುತ್ತಿದೆ ತಿಳಿಸಿದೆ. ಈ ಆ್ಯಪ್ ಮೂಲಕ ಬಳಕೆದಾರರ ಮಾಹಿತಿಯನ್ನು ಕದಿಯುವ ಸಾಧ್ಯೆತಗಳಿರುತ್ತವೆ. ಹಾಗಾಗಿ ಎಚ್ಚರಿಕೆಯನ್ನು ವಹಿಸಬೇಕು ಎಂದು ಐಆರ್‌ಸಿಟಿಸಿ ಎಚ್ಚರಿಕೆಯನ್ನು ನೀಡಿದೆ.

ಐಆರ್‌ಸಿಟಿಸಿ ಅಸಲಿ ಆ್ಯಪ್‌ನಂತೆ ಕಾಣುವ ಈ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿರುವವರನ್ನು ಮೊಸಗೊಳಿಸಲು ಬಳಸಲಾಗುತ್ತಿದೆ. ಸಾಮಾನ್ಯ ಬಳಕೆದಾರರಿಗೂ ಇದರಿಂದ ಅಪಾಯವಿದ್ದು, ಅಂಥ ಲಿಂಕ್ ಕ್ಲಿಕ್ ಮಾಡಿ ನಕಲಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬಾರದು ಎಂದು ಐಆರ್‌ಟಿಸಿ ಎಚ್ಚರಿಕೆಯನ್ನು ನೀಡಿದೆ.

ಐಆರ್‌ಸಿಟಿಸಿ ರೈಲ್ ಕೆನೆಕ್ಟ್‌ ಆ್ಯಪ್‌ನ ಫೇಕ್ ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಲು ಪ್ರೇರೇಪಿಸುವ ಲಿಂಕ್‌ ಅನ್ನು ಹಂಚಿಕೆ ಮಾಡಲಾಗುತ್ತಿದೆ. ಈ ಮೂಲಕ ಜನರನ್ನು ಮೋಸ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಳಕೆದಾರರ ರಕ್ಷಣೆ ಮಾಡುವುದಕ್ಕಾಗಿ ಐಆರ್‌ಸಿಟಿಸಿ ತ್ವರಿತ ಕ್ರಮವನ್ನು ತೆಗೆದುಕೊಂಡಿದೆ. ಈ ಕುರಿತು ಎಚ್ಚರಿಕೆಯನ್ನು ರವಾನಿಸಿದೆ. ಸೈಬರ್ ಕ್ರೈಮ್‌ನ ಈ ವಂಚನೆಯ ಬಲೆಗೆ ಬೀಳದಂತೆ ತನ್ನ ಜನರಿಗೆ ತೋರಿಸಿದೆ.

ಐಆರ್‌ಸಿಟಿಸಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಎಚ್ಚರಿಕೆಯ ಸಂದೇಶವನ್ನು ಷೇರ್ ಮಾಡಿಕೊಳ್ಳಲಾಗಿದೆ. ಈ ವಂಚನೆಯುಕಾನೂನುಬಾಹಿರ ಉದ್ದೇಶಗಳಿಗಾಗಿ ವ್ಯಕ್ತಿಗಳನ್ನು ಬಳಸಿಕೊಳ್ಳುವ ಗುರಿಯನ್ನು ಹೊಂದಿದೆ. ನಿಜವಾದ ರೈಲ್ ಕನೆಕ್ಟ್ ಮೊಬೈಲ್ ಅಪ್ಲಿಕೇಶನ್‌ಗಳು ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್‌ನಂತಹ ವಿಶ್ವಾಸಾರ್ಹ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರತ್ಯೇಕವಾಗಿ ಲಭ್ಯವಿವೆ ಎಂದು ಐಆರ್‌ಸಿಟಿಸಿ ಹೇಳಿದೆ.

ಈ ಸುದ್ದಿಯನ್ನೂ ಓದಿ : Pink WhatsApp Scam: ಈ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದೀರಾ? ಹಾಗಾದ್ರೆ ನಿಮ್ಮ ಫೋನ್ ಹ್ಯಾಕ್ ಆಗಿರಬಹುದು, ಚೆಕ್ ಮಾಡ್ಕೊಳ್ಳಿ

ಐಆರ್‌ಸಿಟಿಸಿ ಎಚ್ಚರಿಕೆಯನ್ನು ಕೆಲವು ವಂಚನೆಕಾರರು ಫಿಶಿಂಗ್ ಲಿಂಕ್ ಹಂಚಿಕೆ ಮಾಡುತ್ತಿದ್ದಾರೆ. ಆ ಮೂಲಕ ನಿಜವಾದ ಐಆರ್‌ಸಿಟಿಸಿ ರೈಲ್ ಕನೆಕ್ಟ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಪ್ರೇರೇಪಿಸುವ ಮೂಲಕ, ನಕಲಿ ಆ್ಯಪ್ ಇನ್‌ಸ್ಟಾಲ್ ಮಾಡುವಂತೆ ಮಾಡಲಾಗುತ್ತದೆ. ಹಾಗಾಗಿ, ಇಂಥ ಮೋಸದ ಬಲೆಗೆ ಜನರು ಬಲಿಯಾಗಬಾರದು. ಜನರು ಈ ಲಿಂಕ್ ನಂಬಿ ನಕಲಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬಾರದು. ಬದಲಿಗೆ ಅಧಿಕೃತ ಆ್ಯಪ್ ಸ್ಟೋರ್ ಗಳಾದ, ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಆ್ಯಪ್ ಸ್ಟೋರ್‌ಗಳಿಂದ ಮಾತ್ರವೇ ಐಆರ್‌ಸಿಟಿಸಿ ರೈಲ್ ಕೆನೆಕ್ಟ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಗ್ಯಾಜೆಟ್ಸ್

Old Phone Sale: ನಿಮ್ಮ ಹಳೆಯ ಫೋನ್ ಮಾರಾಟ ಮಾಡುವ ಮೊದಲು ಈ ವಿಷಯ ತಿಳಿದಿರಲಿ!

ಬಹಳಷ್ಟು ಬಾರಿ ಜನರು ತಮ್ಮ ಫೋನ್ ಅನ್ನು ಅಪರಿಚಿತರಿಗೆ ಮಾರಾಟ ಮಾಡುವ ಮೊದಲು ಅಗತ್ಯ ಅಥವಾ ಮೂಲಭೂತ ಹಂತಗಳನ್ನು ನಿರ್ವಹಿಸುವುದಿಲ್ಲ. ಇದರಿಂದ ಮುಂದೆ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಹಳೆಯ ಫೋನ್ ಮಾರಾಟ (Old Phone Sale) ಮಾಡುವ ಮೊದಲು ನಿರ್ವಹಿಸಬೇಕಾದ ಕೆಲವು ಕ್ರಮಗಳನ್ನು ತಿಳಿದುಕೊಳ್ಳಿ.

VISTARANEWS.COM


on

By

Old Phone Sale
Koo

ಹಳೆಯ ಫೋನ್ (Old Phone) ಮಾರಾಟ (Old Phone Sale) ಮಾಡುವ ಅಥವಾ ಎಕ್ಸ್ ಚೇಂಚ್ (Old Phone exchange) ಮಾಡುವ ಆಲೋಚನೆಯಲ್ಲಿ ಇದ್ದೀರಾ ? ಹಾಗಿದ್ದರೆ ಅದಕ್ಕೂ ಮೊದಲು ಗಮನಿಸಬೇಕಾದ ಹಲವು ಸಂಗತಿಗಳಿವೆ. ಇಲ್ಲವಾದರೆ ನಿಮ್ಮ ಅಮೂಲ್ಯ ದಾಖಲೆಗಳು ಇನ್ನೊಬ್ಬರ ಕೈಸೇರುವ, ದುರ್ಬಳಕೆಯಾಗುವ ಸಾಧ್ಯತೆ ಇದೆ.

ಹಳೆಯ ಮೊಬೈಲ್ ಮಾರಾಟ ಮಾಡುವ ಮೊದಲು ಡೇಟಾವನ್ನು ಬ್ಯಾಕಪ್ ಮಾಡಬೇಕು, ಅನಂತರ ಫ್ಯಾಕ್ಟರಿ ರೀಸೆಟ್ ಮಾಡಿ ಮೊಬೈಲ್ ನಲ್ಲಿರುವ ಎಲ್ಲ ಡೇಟಾಗಳನ್ನು ಅಳಿಸಿ ಹಾಕಬೇಕು. ಎಲ್ಲಾ ಖಾತೆಗಳಿಂದ ಫೋನ್ ಅನ್ನು ಲಾಗೌಟ್ ಮಾಡಿ ಫೋನ್ ಅನ್ನು ಸಂಪೂರ್ಣವಾಗಿ ರಿಸೆಟ್ ಮಾಡಿಯೇ ಕೊಡಬೇಕು. ಜೊತೆಗೆ ಕೆಲವು ನಿಯಮಗಳನ್ನು ಪಾಲಿಸಬೇಕು ಎನ್ನುತ್ತಾರೆ ಪೊಲೀಸರು.

ಬಹಳಷ್ಟು ಬಾರಿ ಜನರು ತಮ್ಮ ಫೋನ್ ಅನ್ನು ಅಪರಿಚಿತರಿಗೆ ಮಾರಾಟ ಮಾಡುವ ಮೊದಲು ಅಗತ್ಯ ಅಥವಾ ಮೂಲಭೂತ ಹಂತಗಳನ್ನು ನಿರ್ವಹಿಸುವುದಿಲ್ಲ. ಇದರಿಂದ ಮುಂದೆ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ.

ಏನು ಮಾಡಬೇಕು?

ಹಳೆಯ ಫೋನ್ ಮಾರಾಟ ಮಾಡುವ ಮುನ್ನ ಈ ಕೆಳಗಿನ ಅಂಶಗಳು ಗಮನದಲ್ಲಿ ಇರಿಸಿ.

Old Phone Sale
Old Phone Sale


ಡೇಟಾ ಬ್ಯಾಕಪ್

ಮೊಬೈಲ್ ನಲ್ಲಿರುವ ಡೇಟಾವನ್ನು ಮುಖ್ಯವಾಗಿ ಫೋಟೋ, ವಿಡಿಯೋ, ಡಾಕ್ಯುಮೆಂಟ್‌ಗಳನ್ನು ಗೂಗಲ್ ಖಾತೆಗೆ ಅಥವಾ ಐ ಕ್ಲೌಡ್ ಗೆ ಬ್ಯಾಕಪ್ ಮಾಡಿ. ಫೋನ್‌ನಿಂದ ಎಲ್ಲಾ ಫೈಲ್‌ಗಳನ್ನು ತೆಗೆದುಹಾಕಿ. ಇದನ್ನು ಕ್ಲೌಡ್‌ನಲ್ಲಿ ಸಂಗ್ರಹಿಸುವ ಬದಲು ಕಂಪ್ಯೂಟರ್‌ ನಲ್ಲೂ ಸಂಗ್ರಹಿಸಿ ಇಡಬಹುದು. ಸೆಟ್ಟಿಂಗ್‌ ಗೆ ಹೋಗುವ ಮೂಲಕ ನಿಮ್ಮ ಎಲ್ಲಾ ಡೇಟಾವನ್ನು ಬ್ಯಾಕಪ್ ಮಾಡಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಸೈನ್ ಔಟ್

ಜನರು ಸಾಮಾನ್ಯವಾಗಿ ನಿರ್ಲಕ್ಷಿಸುವ ಅಥವಾ ಮರೆತುಬಿಡುವ ಅತ್ಯಂತ ನಿರ್ಣಾಯಕ ಹಂತ ಇದಾಗಿದೆ. ಭವಿಷ್ಯದಲ್ಲಿ ಯಾವುದೇ ವಂಚನೆಯನ್ನು ತಪ್ಪಿಸುವ ಸಲುವಾಗಿ ಪೇಟಿಎಂ, ಗೂಗಲ್ ಪೇ, ಭೀಮ್, ಬ್ಯಾಂಕ್ ಅಪ್ಲಿಕೇಶನ್‌ಗಳು ಇತ್ಯಾದಿ ಎಲ್ಲಾ ಪಾವತಿ ಅಪ್ಲಿಕೇಶನ್‌ಗಳಿಂದ ಸೈನ್ ಔಟ್ ಮಾಡಿ. ನಿಮ್ಮ ವಿವರಗಳನ್ನು ಈ ಖಾತೆಗಳಿಗೆ ಲಾಗ್ ಇನ್ ಆಗಿರಿಸುವುದು ಕಳ್ಳತನ ಮತ್ತು ಇತರ ಗಂಭೀರ ಭದ್ರತಾ ಉಲ್ಲಂಘನೆಗಳಿಗೆ ಕಾರಣವಾಗಬಹುದು. ಅನಗತ್ಯ ಭದ್ರತಾ ಹಗರಣವನ್ನು ತಪ್ಪಿಸಲು ಗೂಗಲ್, ಫೇಸ್ ಬುಕ್, ಇನ್ ಸ್ಟಾ ಗ್ರಾಮ್ ಇತ್ಯಾದಿ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮ ಖಾತೆಗಳಿಂದ ಸೈನ್ ಔಟ್ ಮಾಡಲು ಮರೆಯದಿರಿ.

ಜೋಡಣೆಯನ್ನು ತೆಗೆದು ಹಾಕಿ

ಸ್ಮಾರ್ಟ್ ವಾಚ್‌, ಬ್ಲೂಟೂತ್, ಇಯರ್‌ಫೋನ್‌, ಫಿಟ್‌ನೆಸ್ ಬ್ಯಾಂಡ್‌ ಅಥವಾ ಏರ್‌ಪಾಡ್‌ಗಳಂತಹ ಸಾಧನಗಳನ್ನು ಅನ್‌ಪೇರ್ ಮಾಡಿ. ಅಲ್ಲದೇ ಫೋನ್‌ನಲ್ಲಿ ಏನೂ ಉಳಿಯದಂತೆ ಎಲ್ಲಾ ಜೋಡಿಸಲಾದ ಸಾಧನಗಳಿಂದ ಡೇಟಾವನ್ನು ತೆಗೆದುಹಾಕಿ.

ಫ್ಯಾಕ್ಟರಿ ರೀಸೆಟ್

ಸಾಧನವನ್ನು ಅದರ ಫ್ಯಾಕ್ಟರಿ ಸ್ಥಿತಿಗೆ ಹೊಂದಿಸಲು ಪೂರ್ಣ ಫ್ಯಾಕ್ಟರಿ ಮರುಹೊಂದಿಕೆಯನ್ನು ನಿರ್ವಹಿಸಿ. ಇದು ಸಾಧನದಿಂದ ಎಲ್ಲವನ್ನೂ ಅಳಿಸುತ್ತದೆ ಮತ್ತು ನಿಮ್ಮ ಫೋನ್ ಅನ್ನು ಹೊಚ್ಚ ಹೊಸ ಸ್ಥಿತಿಯಲ್ಲಿ ಇರಿಸುತ್ತದೆ. ಫೋನ್‌ನಿಂದ ಎಲ್ಲಾ ಡೇಟಾ ಮತ್ತು ಸೆಟ್ಟಿಂಗ್‌ಗಳನ್ನು ಅಳಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಫ್ಯಾಕ್ಟರಿ ಮರುಹೊಂದಿಕೆಯನ್ನು ಎರಡು ಬಾರಿ ಮಾಡಬಹುದು.


ಸಿಮ್ ಕಾರ್ಡ್ ತೆಗೆದುಹಾಕಿ

ಫೋನ್‌ನಿಂದ ಸಿಮ್ ಮತ್ತು ಎಸ್ ಡಿ ಕಾರ್ಡ್ ಅನ್ನು ತೆಗೆಯಲು ಮರೆಯಬೇಡಿ. ಕೆಲವು ಸಾಧನ, ಸಂಪರ್ಕ ಮತ್ತು ಕರೆ ಲಾಗ್‌ಗಳನ್ನು ಸಿಮ್ ಕಾರ್ಡ್‌ಗಳಲ್ಲಿ ಸಂಗ್ರಹಿಸಲಾಗುತ್ತದೆ. ಆದ್ದರಿಂದ ಇವುಗಳು ಪ್ರಮುಖ ಹಾರ್ಡ್‌ವೇರ್ ತುಣುಕುಗಳಾಗಿವೆ. ಖರೀದಿದಾರರಿಗೆ ಮೊಬೈಲ್ ಹಸ್ತಾಂತರಿಸುವ ಮೊದಲು ಇದರಲ್ಲಿರುವ ಪಠ್ಯ ಸಂದೇಶ, ಕರೆ ಲಾಗ್‌ ಅನ್ನು ಬ್ಯಾಕಪ್ ನಲ್ಲಿ ಇಡಿ. ಇದಕ್ಕಾಗಿ ಗೂಗಲ್ ಡ್ರೈವ್ ಅಥವಾ ಡ್ರಾಪ್‌ಬಾಕ್ಸ್‌ ಬಳಸಿ. ಹೊಸ ಫೋನ್ ಬಂದಾಗ ಇದನ್ನು ಶೇರ್ ಇಟ್ ಅಪ್ಲಿಕೇಶನ್ ಮೂಲಕ ವರ್ಗಾಯಿಸಿಕೊಳ್ಳಬಹುದು.

ಇದನ್ನೂ ಓದಿ: TRAI New Rules: ನಿಮಗೆ ಗೊತ್ತಿರಲಿ; ಸೆ.1ರಿಂದ ಈ ಸಿಮ್ ಕಾರ್ಡ್‌ಗಳು ಕಪ್ಪು ಪಟ್ಟಿಗೆ!

ಬಿಲ್ ಪಡೆಯಿರಿ

ಫೋನ್ ಅನ್ನು ಮಾರಾಟ ಮಾಡಲು ನಿರ್ಧರಿಸಿದರೆ ಬಿಲ್ ಅನ್ನು ಪಡೆಯಲು ಮರೆಯದಿರಿ. ಇದು ಯಾವುದೇ ವಂಚನೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ ಮತ್ತು ಯಾವುದೇ ದುಷ್ಕೃತ್ಯವನ್ನು ನಿರ್ವಹಿಸಲು ಫೋನ್ ಅನ್ನು ಬಳಸಿದರೆ ನಿಮ್ಮನ್ನು ರಕ್ಷಿಸುತ್ತದೆ.

Continue Reading

ಗ್ಯಾಜೆಟ್ಸ್

TRAI New Rules: ನಿಮಗೆ ಗೊತ್ತಿರಲಿ; ಸೆ.1ರಿಂದ ಈ ಸಿಮ್ ಕಾರ್ಡ್‌ಗಳು ಕಪ್ಪು ಪಟ್ಟಿಗೆ!

ಸೆಪ್ಟೆಂಬರ್ 1ರಿಂದ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI New Rules) ದೇಶಾದ್ಯಂತ ನಕಲಿ ಮತ್ತು ಸ್ಕ್ಯಾಮ್ ಕರೆಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಹೊಸ ನಿಯಮವನ್ನು ಜಾರಿಗೆ ತರಲಿದೆ. ಟೆಲಿಕಾಂ ವಲಯದಲ್ಲಿ ಮೋಸದ ಚಟುವಟಿಕೆಗಳನ್ನು ಎದುರಿಸಲು ಸರ್ಕಾರದ ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ.

VISTARANEWS.COM


on

By

TRAI New Rules
Koo

ಭಾರತೀಯ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (Telecom Regulatory Authority of India) ಅನಗತ್ಯ ಕರೆಗಳಿಗೆ ಬಳಸುತ್ತಿರುವ ಸಂಖ್ಯೆಗಳನ್ನು ಕಪ್ಪುಪಟ್ಟಿಗೆ ಸೇರಿಸುವ ಹೊಸ ನಿಯಮವನ್ನು (TRAI New Rules) ಜಾರಿಗೆ ತರಲು ಸಜ್ಜಾಗಿದೆ. ದೇಶಾದ್ಯಂತ ನಕಲಿ (fake call) ಮತ್ತು ಜಾಹೀರಾತು ಕರೆಗಳಿಂದ ಬಳಕೆದಾರರಿಗೆ ತೊಂದರೆಯಾಗುತ್ತಿರುವುದರಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಸೆಪ್ಟೆಂಬರ್ 1ರಿಂದ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ದೇಶಾದ್ಯಂತ ನಕಲಿ ಮತ್ತು ಸ್ಕ್ಯಾಮ್ ಕರೆಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಹೊಸ ನಿಯಮವನ್ನು ಜಾರಿಗೆ ತರಲಿದೆ. ಟೆಲಿಕಾಂ ವಲಯದಲ್ಲಿ ಮೋಸದ ಚಟುವಟಿಕೆಗಳನ್ನು ಎದುರಿಸಲು ಸರ್ಕಾರದ ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ.

ಹೊಸ ಸಿಮ್ ಕಾರ್ಡ್ ನಿಯಮಗಳು

ಹೊಸ ನಿಯಮಗಳ ಅಡಿಯಲ್ಲಿ ಟೆಲಿಕಾಂ ಕಂಪನಿಗಳು ತಮ್ಮ ನೆಟ್‌ವರ್ಕ್‌ಗಳ ಮೂಲಕ ಮಾಡುವ ನಕಲಿ ಕರೆಗಳಿಗೆ ಜವಾಬ್ದಾರರಾಗಿರುತ್ತಾರೆ.

ಗ್ರಾಹಕರು ನಕಲಿ ಕರೆಯನ್ನು ವರದಿ ಮಾಡಿದರೆ ಟೆಲಿಕಾಂ ಪೂರೈಕೆದಾರರು ಸಮಸ್ಯೆಯನ್ನು ಪರಿಹರಿಸಲು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಹೊಂದಿರಬೇಕಾಗುತ್ತದೆ. ಈ ಬದಲಾವಣೆಯು ಬಳಕೆದಾರರನ್ನು ಕಾಡುತ್ತಿರುವ ನಕಲಿ ಕರೆಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.


ವಂಚನೆಯ ವಿರುದ್ಧ ಕಠಿಣ ನಿಲುವು

ಅನುಮಾನಾಸ್ಪದ ಗ್ರಾಹಕರನ್ನು ಬಳಸಿಕೊಳ್ಳಲು ವಿವಿಧ ತಂತ್ರಗಳನ್ನು ಬಳಸುತ್ತಿರುವ ವಂಚಕರಿಗೆ ಟಿಆರ್‌ಎಐ ಎಚ್ಚರಿಕೆ ನೀಡಿದೆ. ಟೆಲಿಕಾಂ ಕಂಪನಿಗಳ ಮೇಲೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸುವ ಮೂಲಕ ಈ ದುರುದ್ದೇಶಪೂರಿತ ಚಟುವಟಿಕೆಗಳಿಂದ ಬಳಕೆದಾರರನ್ನು ರಕ್ಷಿಸಲು ಹೊಸ ನಿಯಮವನ್ನು ವಿನ್ಯಾಸಗೊಳಿಸಲಾಗಿದೆ.
ನಕಲಿ ಮತ್ತು ಪ್ರಚಾರದ ಕರೆಗಳಿಗೆ ಮೋಸಗೊಳಿಸುವ ವಿಧಾನಗಳನ್ನು ಬಳಸುವುದು ದೂರಸಂಪರ್ಕ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಮತ್ತು ಈ ಸಮಸ್ಯೆಯನ್ನು ಪರಿಹರಿಸಲು ಪ್ರಾಧಿಕಾರವು ದೃಢವಾದ ಕ್ರಿಯಾ ಯೋಜನೆಯನ್ನು ರೂಪಿಸಿದೆ ಎಂದು ಟಿಆರ್‌ಎಐ ಹೇಳಿದೆ.

ಎರಡು ವರ್ಷಗಳ ಕಾಲ ಕಪ್ಪುಪಟ್ಟಿಗೆ

ಟಿಆರ್‌ಎಐ ಪ್ರಕಾರ ಯಾವುದೇ ವ್ಯಕ್ತಿ ತಮ್ಮ ಮೊಬೈಲ್ ಸಂಖ್ಯೆಯನ್ನು ಟೆಲಿಮಾರ್ಕೆಟಿಂಗ್ ಅಥವಾ ಪ್ರಚಾರದ ಉದ್ದೇಶಗಳಿಗಾಗಿ ಬಳಸಿದರೆ ಅವರ ಸಂಖ್ಯೆಯನ್ನು ಎರಡು ವರ್ಷಗಳವರೆಗೆ ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ.

ಹಣಕಾಸಿನ ವಂಚನೆಯನ್ನು ತಡೆಯಲು ಸರ್ಕಾರವು ಈ ಹಿಂದೆ ನಿರ್ದಿಷ್ಟ ಸಂಖ್ಯೆಯ ಸರಣಿ 160 ಅನ್ನು ಪರಿಚಯಿಸಿತ್ತು. ಆದರೂ ಅನೇಕ ಬಳಕೆದಾರರಿಗೆ ಖಾಸಗಿ ಸಂಖ್ಯೆಗಳಿಂದ ಪ್ರಚಾರದ ಕರೆಗಳು ಬರುವುದು ಮುಂದುವರಿದಿದೆ. ಇದು ಹೆಚ್ಚು ಕಠಿಣ ಕ್ರಮಗಳ ಅಗತ್ಯವನ್ನು ಪ್ರೇರೇಪಿಸುತ್ತದೆ.

ನಿಯಮ ಉಲ್ಲಂಘನೆ ಪರಿಣಾಮ

ವಂಚನೆ ಅಥವಾ ಸ್ಕ್ಯಾಮ್ ಕರೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಟಿಆರ್‌ಎಐ ಸ್ಪಷ್ಟಪಡಿಸಿದೆ. ಹೀಗಾಗಿ ಪ್ರಚಾರದ ಕರೆಗಳಿಗಾಗಿ ತಮ್ಮ ಸಂಖ್ಯೆಗಳನ್ನು ಬಳಸುವ ವ್ಯಕ್ತಿಗಳು ಜಾಗರೂಕರಾಗಿರಬೇಕು. ಯಾಕೆಂದರೆ ಹೊಸ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಹೊಸ ನಿಯಮಾವಳಿಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ಬಳಕೆದಾರರಿಗೆ ಸುರಕ್ಷಿತ ಟೆಲಿಕಾಂ ವಾತಾವರಣವನ್ನು ಸೃಷ್ಟಿಸುವ ಗುರಿಯನ್ನು ಟಿಆರ್ ಎಐ ಹೊಂದಿದೆ.


ದೂರು ನೀಡಬಹುದು

ದೂರಸಂಪರ್ಕ ಇಲಾಖೆಯ ಮಾಹಿತಿ ಪ್ರಕಾರ ಕಳೆದ 3 ತಿಂಗಳಲ್ಲಿ 10 ಸಾವಿರಕ್ಕೂ ಹೆಚ್ಚು ವಂಚನೆಯ ಸಂದೇಶಗಳನ್ನು ಕಳುಹಿಸಲಾಗಿದೆ. ಅಂತಹ ಸಂದೇಶಗಳನ್ನು ಸ್ವೀಕರಿಸಿರುವವರು ‘ಸಂಚಾರ್ ಸಾತಿ ಪೋರ್ಟಲ್’ ನಲ್ಲಿ ದೂರು ನೀಡಬಹುದು ಅಥವಾ ಅದರ ಬಗ್ಗೆ ನೇರವಾಗಿ 1909 ಗೆ ಕರೆ ಮಾಡಿ ದೂರು ಸಲ್ಲಿಸಬಹುದು.

ಇದನ್ನೂ ಓದಿ BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

ದೂರು ದಾಖಲಿಸುವುದು ಹೇಗೆ?

sancharsathi.gov.in ವೆಬ್‌ಸೈಟ್‌ನಲ್ಲಿ ಸಿಟಿಜನ್ ಸೆಂಟ್ರಿಕ್ ಸೇವೆಗೆ ಸ್ಕ್ರಾಲ್ ಮಾಡಿ. ಅನಂತರ ಟ್ಯಾಬ್‌ನ ಕೆಳಗೆ ನೀಡಲಾದ ಚಕ್ಷು ಆಯ್ಕೆಯನ್ನು ಆರಿಸಿ ವರದಿ ಮಾಡುವಿಕೆ ಮೇಲೆ ಕ್ಲಿಕ್ ಮಾಡಿ. ಡ್ರಾಪ್-ಡೌನ್ ಮೆನುವಿನಿಂದ ವಂಚನೆ ವರ್ಗವನ್ನು ಆಯ್ಕೆ ಮಾಡಿ ಮತ್ತು ಅದರ ಸ್ಕ್ರೀನ್‌ಶಾಟ್ ಅನ್ನು ಲಗತ್ತಿಸಿ. ವಂಚನೆ ಕರೆ ಸಂದೇಶವನ್ನು ಸ್ವೀಕರಿಸಿದ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ವಂಚನೆಯ ಕರೆ ದಿನಾಂಕ ಮತ್ತು ಸಮಯವನ್ನು ನಮೂದಿಸಿ ಮತ್ತು ಅದನ್ನು ವರದಿ ಮಾಡಿ. ಅನಂತರ ನಿಮ್ಮ ವಿವರಗಳನ್ನು ನಮೂದಿಸಿ. ಒಟಿಪಿ ಹಾಕಿ ಪರಿಶೀಲಿಸಿ ಮತ್ತು ದೂರನ್ನು ಸಲ್ಲಿಸಿ.

Continue Reading

ಗ್ಯಾಜೆಟ್ಸ್

BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಬಿಎಸ್‌ಎನ್‌ಎಲ್ ಈಗ ದೇಶದ ಎಲ್ಲಾ ಟೆಲಿಕಾಂ ವಲಯಗಳಲ್ಲಿ 4ಜಿ ಸೇವೆಗಳನ್ನು (BSNL 4G Plan) ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಬಿಎಸ್ ಎನ್ ಎಲ್ ನ 4ಜಿ ಸೇವೆಯನ್ನು ಈಗಾಗಲೇ ಹೊರತರಲಾಗಿದೆ.ಬಿಎಸ್‌ಎನ್‌ಎಲ್‌ನಿಂದ ಗ್ರಾಹಕರಿಗೆ ಹೆಚ್ಚಿನ ಲಾಭ ಕೊಡುವ ಒಂದು ರೀಚಾರ್ಜ್ ಯೋಜನೆಯನ್ನು ಈಗ ಪ್ರಕಟಿಸಿದೆ.

VISTARANEWS.COM


on

By

BSNL 4G Plan
Koo

ಬಿಎಸ್‌ಎನ್‌ಎಲ್ (BSNL 4G Plan) ತನ್ನ ಟೆಲಿಕಾಂ (telecom) ಬಳಕೆದಾರರಿಗೆ ಹಲವಾರು ಹೊಸ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳನ್ನು (new prepaid recharge plans) ಪರಿಚಯಿಸಿದೆ. ಇವುಗಳು ದೀರ್ಘಾವಧಿಯ ಲಾಭದೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಅನಿಯಮಿತ ಧ್ವನಿ ಕರೆಗಳು ಮತ್ತು ಡೇಟಾದಂತಹ ಪ್ರಯೋಜನಗಳನ್ನು ನೀಡಲಿದೆ. ಜುಲೈನಲ್ಲಿ ಖಾಸಗಿ ಕಂಪನಿಗಳು ತಮ್ಮ ಪ್ರಿಪೇಯ್ಡ್ ಯೋಜನೆಗಳ ಬೆಲೆಗಳನ್ನು ಹೆಚ್ಚಿಸಿದ ಕಾರಣ ಅನೇಕ ಬಳಕೆದಾರರು ಬಿಎಸ್‌ಎನ್‌ಎಲ್‌ಗೆ ತಮ್ಮ ನಂಬರ್ ಗಳನ್ನು ಪೋರ್ಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯು ಈಗ ದೇಶದ ಎಲ್ಲಾ ಟೆಲಿಕಾಂ ವಲಯಗಳಲ್ಲಿ 4ಜಿ ಸೇವೆಗಳನ್ನು ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಬಿಎಸ್‌ಎನ್‌ಎಲ್ 4ಜಿ ಸೇವೆಯನ್ನು ಈಗಾಗಲೇ ಹೊರತರಲಾಗಿದೆ.


ಬಿಎಸ್‌ಎನ್‌ಎಲ್‌ನಿಂದ ಗ್ರಾಹಕರಿಗೆ ಹೆಚ್ಚಿನ ಲಾಭ ಕೊಡುವ ಒಂದು ರೀಚಾರ್ಜ್ ಯೋಜನೆಯು 160 ದಿನಗಳ ಮಾನ್ಯತೆಯನ್ನು ನೀಡುತ್ತದೆ. ಈ ಪ್ರಿಪೇಯ್ಡ್ ಯೋಜನೆಯಲ್ಲಿ, ಬಳಕೆದಾರರು ಒಟ್ಟು 320 ಜಿಬಿ ಡೇಟಾವನ್ನು ಪಡೆಯುತ್ತಾರೆ. 997 ರೂ. ಬೆಲೆಯ ಈ ಪ್ಲಾನ್ ಪ್ರತಿದಿನ 100 ಉಚಿತ ಎಸ್‌ಎಂಎಸ್ ಜೊತೆಗೆ ದಿನಕ್ಕೆ 2ಜಿಬಿ ಹೈ-ಸ್ಪೀಡ್ ಡೇಟಾವನ್ನು ಒದಗಿಸುತ್ತದೆ.

ಹೆಚ್ಚುವರಿಯಾಗಿ ಬಳಕೆದಾರರು ದೇಶದ ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ಉಚಿತ ಧ್ವನಿ ಕರೆಗಳನ್ನು ಮಾಡಬಹುದಾಗಿದೆ. ಈ ಯೋಜನೆಯು ಭಾರತದಾದ್ಯಂತ ಉಚಿತ ರೋಮಿಂಗ್ ಮತ್ತು ಜಿಂಗ್ ಮ್ಯೂಸಿಕ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್‌ಗಳಂತಹ ಹಲವಾರು ಮೌಲ್ಯವರ್ಧಿತ ಸೇವೆಗಳೊಂದಿಗೆ ಬರುತ್ತದೆ.

ಇದನ್ನೂ ಓದಿ: Phone Charging Tips: ಫೋನ್‌ಗಳನ್ನು ಚಾರ್ಜ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

BSNL 4G Plan
BSNL 4G Plan


ಬಿಎಸ್‌ಎನ್‌ಎಲ್‌ ಕೂಡ ಶೀಘ್ರದಲ್ಲೇ 5ಜಿ ಸೇವೆಗಳನ್ನು ಪ್ರಾರಂಭಿಸಲು ಕೆಲಸ ಮಾಡುತ್ತಿದೆ. ಕಂಪನಿಯು ತನ್ನ 4ಜಿ ಸೇವೆಗಾಗಿ ಎಲ್ಲಾ ಟೆಲಿಕಾಂ ವಲಯಗಳಲ್ಲಿ ಸಾವಿರಾರು ಹೊಸ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದೆ ಮತ್ತು 5ಜಿ ನೆಟ್‌ವರ್ಕ್ ಪರೀಕ್ಷೆಯು ಈಗಾಗಲೇ ಪ್ರಾರಂಭವಾಗಿದೆ.

ಮುಂಬರುವ ತಿಂಗಳುಗಳಲ್ಲಿ ಸರ್ಕಾರಿ ಟೆಲಿಕಾಂ ಕಂಪನಿಯು 5ಜಿ ಸೇವೆಗಳನ್ನು ಪರಿಚಯಿಸುವ ನಿರೀಕ್ಷೆಯಿದೆ. ಇದಲ್ಲದೆ ದೆಹಲಿ ಮತ್ತು ಮುಂಬೈನಲ್ಲಿರುವ ಎಂಟಿಎನ್ ಎಲ್ ಬಳಕೆದಾರರು ಶೀಘ್ರದಲ್ಲೇ 4ಜಿ ಸೇವೆಗಳಿಗೆ ಪ್ರವೇಶವನ್ನು ಪಡೆಯುತ್ತಾರೆ. ಯಾಕೆಂದರೆ ಎಂಟಿಎನ್‌ಎಲ್ ಬಿಎಸ್‌ಎನ್‌ಎಲ್ ನ 4ಜಿ ಮೂಲಸೌಕರ್ಯವನ್ನು ಬಳಸುತ್ತಿದೆ.

Continue Reading

ತಂತ್ರಜ್ಞಾನ

Independence Day 2024: ವಾಟ್ಸ್‌ಆಪ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸ್ಟಿಕ್ಕರ್‌, ಮೆಸೆಜ್‌, ಇಮೇಜ್‌ ಪಡೆಯುವುದು ಹೇಗೆ?

ಈ ಬಾರಿ ಸ್ವಾತಂತ್ರ್ಯ ದಿನಾಚರಣೆಗೆ (Independence day 2024) ವಾಟ್ಸ್ ಆಪ್ ಮೂಲಕ ಸ್ನೇಹಿತರು, ಬಂಧುಗಳಿಗೆ ಶುಭ ಹಾರೈಸಿ. ಇದಕ್ಕಾಗಿ ಸ್ಟಿಕ್ಕರ್‌, ಸಂದೇಶ ಅಥವಾ ಚಿತ್ರಗಳನ್ನು ಎಲ್ಲಿಂದ, ಹೇಗೆ ಪಡೆಯಬಹುದು ಎನ್ನುವ ಕುರಿತ ಮಾಹಿತಿ ಇಲ್ಲಿದೆ. ಇದನ್ನು ಬಳಸಿಕೊಂಡು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಸ್ನೇಹಿತರು ಮತ್ತು ಬಂಧುಗಳೊಂದಿಗೆ ಹಂಚಿಕೊಳ್ಳಿ.

VISTARANEWS.COM


on

By

Independence day 2024
Koo

ಭಾರತದ 78ನೇ ಸ್ವಾತಂತ್ರ್ಯ ದಿನದ (Independence day 2024) ಸಂಭ್ರಮ ಈಗಾಗಲೇ ಎಲ್ಲೆಲ್ಲೂ ರಂಗು ತುಂಬಲಾರಂಭಿಸಿದೆ. ಆಗಸ್ಟ್ 15ರಂದು ಇದರ ಆಚರಣೆಗೆ ಸಜ್ಜಾಗುತ್ತಿರುವ ಅನೇಕರು ಈ ಮಹತ್ವದ ದಿನದ ಸಂತೋಷವನ್ನು (joy of this significant day) ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳಲು ವಿವಿಧ ದಾರಿಗಳನ್ನು ಹುಡುಕುತ್ತಿರುತ್ತಾರೆ. ಈ ಬಾರಿ ವಿಶೇಷವಾಗಿ ವಾಟ್ಸ್ ಆಪ್ (whatsapp) ಸ್ಟಿಕ್ಕರ್‌ಗಳು, ಶುಭಾಶಯ ಸಂದೇಶಗಳ ಮೂಲಕ ಸ್ವಾತಂತ್ರ್ಯ ದಿನಕ್ಕೆ ಶುಭಾಶಯಗಳನ್ನು ಕೋರಬಹುದು. ವಾಟ್ಸ್ ಆಪ್ ಸ್ಟಿಕ್ಕರ್‌ , ಮೆಸೆಜ್‌ ಮತ್ತು ಚಿತ್ರಗಳ ಬಳಕೆ ಸೇರಿದಂತೆ ಡಿಜಿಟಲ್ ವಿಧಾನಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಹೇಗೆ ಹೆಚ್ಚಿಸಬಹುದು ಎನ್ನುವ ಮಾಹಿತಿ ಇಲ್ಲಿದೆ.

ವಾಟ್ಸ್‌ಆಪ್ ಸ್ಟಿಕ್ಕರ್‌ಗಳು

ಶುಭಾಶಯಗಳನ್ನು ಹಂಚಿಕೊಳ್ಳಲು ಆಧುನಿಕ ಮಾರ್ಗವಾಗಿರುವ ವಾಟ್ಸ್ ಆಪ್ ಸ್ಟಿಕ್ಕರ್‌ಗಳು ಶೀಘ್ರವಾಗಿ ಶುಭಾಶಯಗಳನ್ನು ಕಳುಹಿಸಲು ಅನುಕೂಲಕರವಾದ ಮಾರ್ಗವಾಗಿದೆ. ವಾಟ್ಸ್ ಆಪ್‌ನಲ್ಲಿ ಸ್ವಾತಂತ್ರ್ಯ ದಿನದ ಸ್ಟಿಕ್ಕರ್‌ಗಳನ್ನು ಹೇಗೆ ಡೌನ್‌ಲೋಡ್ ಮಾಡಬಹುದು ಎನ್ನುವ ಮಾಹಿತಿ ಇಲ್ಲಿದೆ.

Google Play Store ಅಥವಾ Apple ಆಪ್ ಸ್ಟೋರ್‌ನಲ್ಲಿ “Sticker.ly” ಅಥವಾ “ಭಾರತೀಯ ಸ್ವಾತಂತ್ರ್ಯ ದಿನದ ಸ್ಟಿಕ್ಕರ್‌ಗಳು” (indian independence day stickers)ನಂತಹ ಅಪ್ಲಿಕೇಶನ್‌ ಅನ್ನು ಹುಡುಕಿ. ಈ ಅಪ್ಲಿಕೇಶನ್‌ಗಳು ವಿವಿಧ ಸ್ವಾತಂತ್ರ್ಯ ದಿನದ ವಿಷಯದ ಸ್ಟಿಕ್ಕರ್ ಪ್ಯಾಕ್‌ಗಳನ್ನು ನೀಡುತ್ತವೆ.

ಅಪ್ಲಿಕೇಶನ್ ಅನ್ನು ಡೌನ್ ಲೋಡ್ ಮಾಡಿ ತೆರೆಯಿರಿ. ಬಳಿಕ ಅದರಲ್ಲಿ ನೀವು ಇಷ್ಟಪಡುವ ಸ್ಟಿಕ್ಕರ್ ಅನ್ನು ಆಯ್ಕೆ ಮಾಡಿ ಮತ್ತು ವಾಟ್ಸ್ ಆಪ್‌ಗೆ ಸೇರಿಸಲು ಟ್ಯಾಪ್ ಮಾಡಿ. ಇದು ವಾಟ್ಸ್ ಆಪ್ ಖಾತೆಗೆ ಸ್ಟಿಕ್ಕರ್‌ಗಳನ್ನು ಸಂಯೋಜಿಸುತ್ತದೆ. ಬಳಿಕ ವಾಟ್ಸ್ ಆಪ್‌ನಲ್ಲಿ ಯಾವುದೇ ಚಾಟ್ ತೆರೆಯಿರಿ. ಎಮೋಜಿ ಐಕಾನ್ ಮೇಲೆ ಟ್ಯಾಪ್ ಮಾಡಿ ಸ್ಟಿಕ್ಕರ್ ಟ್ಯಾಬ್ ಆಯ್ಕೆ ಮಾಡಿ. ಇಲ್ಲಿ ಹೊಸದಾಗಿ ಸೇರಿಸಲಾದ ಸ್ವಾತಂತ್ರ್ಯ ದಿನದ ಸ್ಟಿಕ್ಕರ್‌ಗಳನ್ನು ಕಾಣಬಹುದು ಮತ್ತು ಅದನ್ನು ಹಂಚಿಕೊಳ್ಳಬಹುದು.


ಶುಭಾಶಯ ಸಂದೇಶ

ಸ್ಟಿಕ್ಕರ್‌ಗಳ ಹೊರತಾಗಿ ಪ್ರೀತಿಪಾತ್ರರಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಅಥವಾ ಸಂದೇಶಗಳನ್ನೂ ಕಳುಹಿಸಬಹುದು. ಪಠ್ಯ, ಚಿತ್ರ ಮತ್ತು ಜಿಫ್‌ಗಳೊಂದಿಗೆ ಸಂದೇಶಗಳನ್ನು ಕಳುಹಿಸಲು ವಾಟ್ಸ್ ಆಪ್ ಅನುಮತಿ ನೀಡುತ್ತದೆ.

ಜಿಫ್ ಹುಡುಕಲು ವಾಟ್ಸ್ ಆಪ್ ತೆರೆಯಿರಿ. ಯಾವುದೇ ಸಂಪರ್ಕದೊಂದಿಗೆ ಚಾಟ್ ಪ್ರಾರಂಭಿಸಿ. ಎಮೋಜಿ ವಿಭಾಗದ ಪರದೆಯ ಕೆಳಗಿನ ಎಡಭಾಗದಲ್ಲಿರುವ ಎಮೋಜಿ ಐಕಾನ್ ಅನ್ನು ಟ್ಯಾಪ್ ಮಾಡಿ ಜಿಫ್ ಅನ್ನು ಆಯ್ಕೆ ಮಾಡಿ. ಜಿಫ್ ವಿಭಾಗದಲ್ಲಿ “ಸ್ವಾತಂತ್ರ್ಯ ದಿನ” ಜಿಫ್‌ಗಳನ್ನು ಹುಡುಕಲು ಹುಡುಕಾಟ ಪಟ್ಟಿಯನ್ನು ಬಳಸಿ. ನಿಮಗೆ ಇಷ್ಟವಾಗುವ ಜಿಫ್ ಅನ್ನು ಆಯ್ಕೆ ಮಾಡಿ ಮತ್ತು ಅದನ್ನು ಒಂದೇ ಟ್ಯಾಪ್‌ನಲ್ಲಿ ಕಳುಹಿಸಿ.

Independence day 2024
Independence day 2024


ಚಿತ್ರಗಳು

ಚಿತ್ರ ಅಥವಾ ವೆಕ್ಟರ್ ಕಲೆಯನ್ನು ಹಂಚಿಕೊಳ್ಳಲು ಆದ್ಯತೆ ನೀಡುವವರಿಗೆ ಹಲವಾರು ಆಯ್ಕೆಗಳು ಲಭ್ಯವಿದೆ. ಆನ್‌ಲೈನ್‌ನಲ್ಲಿ ತ್ವರಿತ ಹುಡುಕಾಟ ನಡೆಸುವ ಮೂಲಕ ಉತ್ತಮ ಗುಣಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಚಿತ್ರಗಳನ್ನು ಪಡೆಯಬಹುದು.

ಇದನ್ನೂ ಓದಿ: Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

ಅನೇಕ ವೆಬ್‌ಸೈಟ್‌ಗಳು ದೇಶಭಕ್ತಿಯ ಚಿತ್ರಗಳ ಉಚಿತ ಡೌನ್‌ಲೋಡ್‌ಗಳಿಗೆ ಅನುಮತಿ ನೀಡುತ್ತವೆ. ಅಲ್ಲದೇ ‘Canva’ ಮತ್ತು ‘Pixabay’ ನಂತಹ ಅಪ್ಲಿಕೇಶನ್‌ಗಳು ವಾಟ್ಸಾಪ್ ಅಥವಾ ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ನೇರವಾಗಿ ಹಂಚಿಕೊಳ್ಳಬಹುದಾದ ಸ್ವಾತಂತ್ರ್ಯ ದಿನದ ಚಿತ್ರಗಳು ಮತ್ತು ವೆಕ್ಟರ್ ಕಲೆಯನ್ನು ಒದಗಿಸುತ್ತವೆ.

Continue Reading
Advertisement
Siddeshwara Temple
ಬೆಂಗಳೂರು4 ಗಂಟೆಗಳು ago

Siddheshwar Temple : ಸೊಲ್ಲಾಪುರದ ಸಿದ್ದೇಶ್ವರ ದೇಗುಲದ ಆವರಣದಲ್ಲಿ ವಚನಕಾರ ಸಿದ್ದರಾಮನ ವಚನಗಳ ಅಳವಡಿಕೆಗೆ ಕಸಾಪ ಆಗ್ರಹ

school admission
ಬೆಂಗಳೂರು4 ಗಂಟೆಗಳು ago

School Admissions : ಗಲ್ಲಿಗೊಂದು ಹುಟ್ಟಿಕೊಂಡ ಖಾಸಗಿ ಶಾಲೆಗಳು; ವಿದ್ಯಾರ್ಥಿಗಳ ಆಡ್ಮಿನ್‌ಗಾಗಿ ಹೊಸ ತಂತ್ರ

karnataka weather Forecast
ಮಳೆ10 ಗಂಟೆಗಳು ago

Karnataka Weather : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆ; ಯೆಲ್ಲೊ ಅಲರ್ಟ್‌ ಘೋಷಣೆ

Dina Bhavishya
ಭವಿಷ್ಯ10 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ಅನಿರೀಕ್ಷಿತ ಲಾಭವು ದುಪ್ಪಟ್ಟು ಖುಷಿ ಸಿಗಲಿದೆ

Murder case
ಬೆಂಗಳೂರು22 ಗಂಟೆಗಳು ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ23 ಗಂಟೆಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ23 ಗಂಟೆಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು1 ದಿನ ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ1 ದಿನ ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ1 ದಿನ ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌