BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ - Vistara News

ಗ್ಯಾಜೆಟ್ಸ್

BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಬಿಎಸ್‌ಎನ್‌ಎಲ್ ಈಗ ದೇಶದ ಎಲ್ಲಾ ಟೆಲಿಕಾಂ ವಲಯಗಳಲ್ಲಿ 4ಜಿ ಸೇವೆಗಳನ್ನು (BSNL 4G Plan) ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಬಿಎಸ್ ಎನ್ ಎಲ್ ನ 4ಜಿ ಸೇವೆಯನ್ನು ಈಗಾಗಲೇ ಹೊರತರಲಾಗಿದೆ.ಬಿಎಸ್‌ಎನ್‌ಎಲ್‌ನಿಂದ ಗ್ರಾಹಕರಿಗೆ ಹೆಚ್ಚಿನ ಲಾಭ ಕೊಡುವ ಒಂದು ರೀಚಾರ್ಜ್ ಯೋಜನೆಯನ್ನು ಈಗ ಪ್ರಕಟಿಸಿದೆ.

VISTARANEWS.COM


on

BSNL 4G Plan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಿಎಸ್‌ಎನ್‌ಎಲ್ (BSNL 4G Plan) ತನ್ನ ಟೆಲಿಕಾಂ (telecom) ಬಳಕೆದಾರರಿಗೆ ಹಲವಾರು ಹೊಸ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳನ್ನು (new prepaid recharge plans) ಪರಿಚಯಿಸಿದೆ. ಇವುಗಳು ದೀರ್ಘಾವಧಿಯ ಲಾಭದೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಅನಿಯಮಿತ ಧ್ವನಿ ಕರೆಗಳು ಮತ್ತು ಡೇಟಾದಂತಹ ಪ್ರಯೋಜನಗಳನ್ನು ನೀಡಲಿದೆ. ಜುಲೈನಲ್ಲಿ ಖಾಸಗಿ ಕಂಪನಿಗಳು ತಮ್ಮ ಪ್ರಿಪೇಯ್ಡ್ ಯೋಜನೆಗಳ ಬೆಲೆಗಳನ್ನು ಹೆಚ್ಚಿಸಿದ ಕಾರಣ ಅನೇಕ ಬಳಕೆದಾರರು ಬಿಎಸ್‌ಎನ್‌ಎಲ್‌ಗೆ ತಮ್ಮ ನಂಬರ್ ಗಳನ್ನು ಪೋರ್ಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯು ಈಗ ದೇಶದ ಎಲ್ಲಾ ಟೆಲಿಕಾಂ ವಲಯಗಳಲ್ಲಿ 4ಜಿ ಸೇವೆಗಳನ್ನು ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಬಿಎಸ್‌ಎನ್‌ಎಲ್ 4ಜಿ ಸೇವೆಯನ್ನು ಈಗಾಗಲೇ ಹೊರತರಲಾಗಿದೆ.


ಬಿಎಸ್‌ಎನ್‌ಎಲ್‌ನಿಂದ ಗ್ರಾಹಕರಿಗೆ ಹೆಚ್ಚಿನ ಲಾಭ ಕೊಡುವ ಒಂದು ರೀಚಾರ್ಜ್ ಯೋಜನೆಯು 160 ದಿನಗಳ ಮಾನ್ಯತೆಯನ್ನು ನೀಡುತ್ತದೆ. ಈ ಪ್ರಿಪೇಯ್ಡ್ ಯೋಜನೆಯಲ್ಲಿ, ಬಳಕೆದಾರರು ಒಟ್ಟು 320 ಜಿಬಿ ಡೇಟಾವನ್ನು ಪಡೆಯುತ್ತಾರೆ. 997 ರೂ. ಬೆಲೆಯ ಈ ಪ್ಲಾನ್ ಪ್ರತಿದಿನ 100 ಉಚಿತ ಎಸ್‌ಎಂಎಸ್ ಜೊತೆಗೆ ದಿನಕ್ಕೆ 2ಜಿಬಿ ಹೈ-ಸ್ಪೀಡ್ ಡೇಟಾವನ್ನು ಒದಗಿಸುತ್ತದೆ.

ಹೆಚ್ಚುವರಿಯಾಗಿ ಬಳಕೆದಾರರು ದೇಶದ ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ಉಚಿತ ಧ್ವನಿ ಕರೆಗಳನ್ನು ಮಾಡಬಹುದಾಗಿದೆ. ಈ ಯೋಜನೆಯು ಭಾರತದಾದ್ಯಂತ ಉಚಿತ ರೋಮಿಂಗ್ ಮತ್ತು ಜಿಂಗ್ ಮ್ಯೂಸಿಕ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್‌ಗಳಂತಹ ಹಲವಾರು ಮೌಲ್ಯವರ್ಧಿತ ಸೇವೆಗಳೊಂದಿಗೆ ಬರುತ್ತದೆ.

ಇದನ್ನೂ ಓದಿ: Phone Charging Tips: ಫೋನ್‌ಗಳನ್ನು ಚಾರ್ಜ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

BSNL 4G Plan
BSNL 4G Plan


ಬಿಎಸ್‌ಎನ್‌ಎಲ್‌ ಕೂಡ ಶೀಘ್ರದಲ್ಲೇ 5ಜಿ ಸೇವೆಗಳನ್ನು ಪ್ರಾರಂಭಿಸಲು ಕೆಲಸ ಮಾಡುತ್ತಿದೆ. ಕಂಪನಿಯು ತನ್ನ 4ಜಿ ಸೇವೆಗಾಗಿ ಎಲ್ಲಾ ಟೆಲಿಕಾಂ ವಲಯಗಳಲ್ಲಿ ಸಾವಿರಾರು ಹೊಸ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದೆ ಮತ್ತು 5ಜಿ ನೆಟ್‌ವರ್ಕ್ ಪರೀಕ್ಷೆಯು ಈಗಾಗಲೇ ಪ್ರಾರಂಭವಾಗಿದೆ.

ಮುಂಬರುವ ತಿಂಗಳುಗಳಲ್ಲಿ ಸರ್ಕಾರಿ ಟೆಲಿಕಾಂ ಕಂಪನಿಯು 5ಜಿ ಸೇವೆಗಳನ್ನು ಪರಿಚಯಿಸುವ ನಿರೀಕ್ಷೆಯಿದೆ. ಇದಲ್ಲದೆ ದೆಹಲಿ ಮತ್ತು ಮುಂಬೈನಲ್ಲಿರುವ ಎಂಟಿಎನ್ ಎಲ್ ಬಳಕೆದಾರರು ಶೀಘ್ರದಲ್ಲೇ 4ಜಿ ಸೇವೆಗಳಿಗೆ ಪ್ರವೇಶವನ್ನು ಪಡೆಯುತ್ತಾರೆ. ಯಾಕೆಂದರೆ ಎಂಟಿಎನ್‌ಎಲ್ ಬಿಎಸ್‌ಎನ್‌ಎಲ್ ನ 4ಜಿ ಮೂಲಸೌಕರ್ಯವನ್ನು ಬಳಸುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Independence Day 2024: ವಾಟ್ಸ್‌ಆಪ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸ್ಟಿಕ್ಕರ್‌, ಮೆಸೆಜ್‌, ಇಮೇಜ್‌ ಪಡೆಯುವುದು ಹೇಗೆ?

ಈ ಬಾರಿ ಸ್ವಾತಂತ್ರ್ಯ ದಿನಾಚರಣೆಗೆ (Independence day 2024) ವಾಟ್ಸ್ ಆಪ್ ಮೂಲಕ ಸ್ನೇಹಿತರು, ಬಂಧುಗಳಿಗೆ ಶುಭ ಹಾರೈಸಿ. ಇದಕ್ಕಾಗಿ ಸ್ಟಿಕ್ಕರ್‌, ಸಂದೇಶ ಅಥವಾ ಚಿತ್ರಗಳನ್ನು ಎಲ್ಲಿಂದ, ಹೇಗೆ ಪಡೆಯಬಹುದು ಎನ್ನುವ ಕುರಿತ ಮಾಹಿತಿ ಇಲ್ಲಿದೆ. ಇದನ್ನು ಬಳಸಿಕೊಂಡು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಸ್ನೇಹಿತರು ಮತ್ತು ಬಂಧುಗಳೊಂದಿಗೆ ಹಂಚಿಕೊಳ್ಳಿ.

VISTARANEWS.COM


on

By

Independence day 2024
Koo

ಭಾರತದ 78ನೇ ಸ್ವಾತಂತ್ರ್ಯ ದಿನದ (Independence day 2024) ಸಂಭ್ರಮ ಈಗಾಗಲೇ ಎಲ್ಲೆಲ್ಲೂ ರಂಗು ತುಂಬಲಾರಂಭಿಸಿದೆ. ಆಗಸ್ಟ್ 15ರಂದು ಇದರ ಆಚರಣೆಗೆ ಸಜ್ಜಾಗುತ್ತಿರುವ ಅನೇಕರು ಈ ಮಹತ್ವದ ದಿನದ ಸಂತೋಷವನ್ನು (joy of this significant day) ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳಲು ವಿವಿಧ ದಾರಿಗಳನ್ನು ಹುಡುಕುತ್ತಿರುತ್ತಾರೆ. ಈ ಬಾರಿ ವಿಶೇಷವಾಗಿ ವಾಟ್ಸ್ ಆಪ್ (whatsapp) ಸ್ಟಿಕ್ಕರ್‌ಗಳು, ಶುಭಾಶಯ ಸಂದೇಶಗಳ ಮೂಲಕ ಸ್ವಾತಂತ್ರ್ಯ ದಿನಕ್ಕೆ ಶುಭಾಶಯಗಳನ್ನು ಕೋರಬಹುದು. ವಾಟ್ಸ್ ಆಪ್ ಸ್ಟಿಕ್ಕರ್‌ , ಮೆಸೆಜ್‌ ಮತ್ತು ಚಿತ್ರಗಳ ಬಳಕೆ ಸೇರಿದಂತೆ ಡಿಜಿಟಲ್ ವಿಧಾನಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಹೇಗೆ ಹೆಚ್ಚಿಸಬಹುದು ಎನ್ನುವ ಮಾಹಿತಿ ಇಲ್ಲಿದೆ.

ವಾಟ್ಸ್‌ಆಪ್ ಸ್ಟಿಕ್ಕರ್‌ಗಳು

ಶುಭಾಶಯಗಳನ್ನು ಹಂಚಿಕೊಳ್ಳಲು ಆಧುನಿಕ ಮಾರ್ಗವಾಗಿರುವ ವಾಟ್ಸ್ ಆಪ್ ಸ್ಟಿಕ್ಕರ್‌ಗಳು ಶೀಘ್ರವಾಗಿ ಶುಭಾಶಯಗಳನ್ನು ಕಳುಹಿಸಲು ಅನುಕೂಲಕರವಾದ ಮಾರ್ಗವಾಗಿದೆ. ವಾಟ್ಸ್ ಆಪ್‌ನಲ್ಲಿ ಸ್ವಾತಂತ್ರ್ಯ ದಿನದ ಸ್ಟಿಕ್ಕರ್‌ಗಳನ್ನು ಹೇಗೆ ಡೌನ್‌ಲೋಡ್ ಮಾಡಬಹುದು ಎನ್ನುವ ಮಾಹಿತಿ ಇಲ್ಲಿದೆ.

Google Play Store ಅಥವಾ Apple ಆಪ್ ಸ್ಟೋರ್‌ನಲ್ಲಿ “Sticker.ly” ಅಥವಾ “ಭಾರತೀಯ ಸ್ವಾತಂತ್ರ್ಯ ದಿನದ ಸ್ಟಿಕ್ಕರ್‌ಗಳು” (indian independence day stickers)ನಂತಹ ಅಪ್ಲಿಕೇಶನ್‌ ಅನ್ನು ಹುಡುಕಿ. ಈ ಅಪ್ಲಿಕೇಶನ್‌ಗಳು ವಿವಿಧ ಸ್ವಾತಂತ್ರ್ಯ ದಿನದ ವಿಷಯದ ಸ್ಟಿಕ್ಕರ್ ಪ್ಯಾಕ್‌ಗಳನ್ನು ನೀಡುತ್ತವೆ.

ಅಪ್ಲಿಕೇಶನ್ ಅನ್ನು ಡೌನ್ ಲೋಡ್ ಮಾಡಿ ತೆರೆಯಿರಿ. ಬಳಿಕ ಅದರಲ್ಲಿ ನೀವು ಇಷ್ಟಪಡುವ ಸ್ಟಿಕ್ಕರ್ ಅನ್ನು ಆಯ್ಕೆ ಮಾಡಿ ಮತ್ತು ವಾಟ್ಸ್ ಆಪ್‌ಗೆ ಸೇರಿಸಲು ಟ್ಯಾಪ್ ಮಾಡಿ. ಇದು ವಾಟ್ಸ್ ಆಪ್ ಖಾತೆಗೆ ಸ್ಟಿಕ್ಕರ್‌ಗಳನ್ನು ಸಂಯೋಜಿಸುತ್ತದೆ. ಬಳಿಕ ವಾಟ್ಸ್ ಆಪ್‌ನಲ್ಲಿ ಯಾವುದೇ ಚಾಟ್ ತೆರೆಯಿರಿ. ಎಮೋಜಿ ಐಕಾನ್ ಮೇಲೆ ಟ್ಯಾಪ್ ಮಾಡಿ ಸ್ಟಿಕ್ಕರ್ ಟ್ಯಾಬ್ ಆಯ್ಕೆ ಮಾಡಿ. ಇಲ್ಲಿ ಹೊಸದಾಗಿ ಸೇರಿಸಲಾದ ಸ್ವಾತಂತ್ರ್ಯ ದಿನದ ಸ್ಟಿಕ್ಕರ್‌ಗಳನ್ನು ಕಾಣಬಹುದು ಮತ್ತು ಅದನ್ನು ಹಂಚಿಕೊಳ್ಳಬಹುದು.


ಶುಭಾಶಯ ಸಂದೇಶ

ಸ್ಟಿಕ್ಕರ್‌ಗಳ ಹೊರತಾಗಿ ಪ್ರೀತಿಪಾತ್ರರಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಅಥವಾ ಸಂದೇಶಗಳನ್ನೂ ಕಳುಹಿಸಬಹುದು. ಪಠ್ಯ, ಚಿತ್ರ ಮತ್ತು ಜಿಫ್‌ಗಳೊಂದಿಗೆ ಸಂದೇಶಗಳನ್ನು ಕಳುಹಿಸಲು ವಾಟ್ಸ್ ಆಪ್ ಅನುಮತಿ ನೀಡುತ್ತದೆ.

ಜಿಫ್ ಹುಡುಕಲು ವಾಟ್ಸ್ ಆಪ್ ತೆರೆಯಿರಿ. ಯಾವುದೇ ಸಂಪರ್ಕದೊಂದಿಗೆ ಚಾಟ್ ಪ್ರಾರಂಭಿಸಿ. ಎಮೋಜಿ ವಿಭಾಗದ ಪರದೆಯ ಕೆಳಗಿನ ಎಡಭಾಗದಲ್ಲಿರುವ ಎಮೋಜಿ ಐಕಾನ್ ಅನ್ನು ಟ್ಯಾಪ್ ಮಾಡಿ ಜಿಫ್ ಅನ್ನು ಆಯ್ಕೆ ಮಾಡಿ. ಜಿಫ್ ವಿಭಾಗದಲ್ಲಿ “ಸ್ವಾತಂತ್ರ್ಯ ದಿನ” ಜಿಫ್‌ಗಳನ್ನು ಹುಡುಕಲು ಹುಡುಕಾಟ ಪಟ್ಟಿಯನ್ನು ಬಳಸಿ. ನಿಮಗೆ ಇಷ್ಟವಾಗುವ ಜಿಫ್ ಅನ್ನು ಆಯ್ಕೆ ಮಾಡಿ ಮತ್ತು ಅದನ್ನು ಒಂದೇ ಟ್ಯಾಪ್‌ನಲ್ಲಿ ಕಳುಹಿಸಿ.

Independence day 2024
Independence day 2024


ಚಿತ್ರಗಳು

ಚಿತ್ರ ಅಥವಾ ವೆಕ್ಟರ್ ಕಲೆಯನ್ನು ಹಂಚಿಕೊಳ್ಳಲು ಆದ್ಯತೆ ನೀಡುವವರಿಗೆ ಹಲವಾರು ಆಯ್ಕೆಗಳು ಲಭ್ಯವಿದೆ. ಆನ್‌ಲೈನ್‌ನಲ್ಲಿ ತ್ವರಿತ ಹುಡುಕಾಟ ನಡೆಸುವ ಮೂಲಕ ಉತ್ತಮ ಗುಣಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಚಿತ್ರಗಳನ್ನು ಪಡೆಯಬಹುದು.

ಇದನ್ನೂ ಓದಿ: Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

ಅನೇಕ ವೆಬ್‌ಸೈಟ್‌ಗಳು ದೇಶಭಕ್ತಿಯ ಚಿತ್ರಗಳ ಉಚಿತ ಡೌನ್‌ಲೋಡ್‌ಗಳಿಗೆ ಅನುಮತಿ ನೀಡುತ್ತವೆ. ಅಲ್ಲದೇ ‘Canva’ ಮತ್ತು ‘Pixabay’ ನಂತಹ ಅಪ್ಲಿಕೇಶನ್‌ಗಳು ವಾಟ್ಸಾಪ್ ಅಥವಾ ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ನೇರವಾಗಿ ಹಂಚಿಕೊಳ್ಳಬಹುದಾದ ಸ್ವಾತಂತ್ರ್ಯ ದಿನದ ಚಿತ್ರಗಳು ಮತ್ತು ವೆಕ್ಟರ್ ಕಲೆಯನ್ನು ಒದಗಿಸುತ್ತವೆ.

Continue Reading

ತಂತ್ರಜ್ಞಾನ

Google Map: ಪ್ರಯಾಣ ಇನ್ನೂ ಸಲೀಸು! ಗೂಗಲ್ ಮ್ಯಾಪ್‌ನಲ್ಲಿ ಲಭ್ಯವಾಗಲಿದೆ ಈ 6 ಹೊಸ ವೈಶಿಷ್ಟ್ಯ!

ಗೂಗಲ್ ಸಂಸ್ಥೆ ಭಾರತದಲ್ಲಿ ಗೂಗಲ್ ಮ್ಯಾಪ್‌ಗಳಿಗಾಗಿ (Google Map) ಆರು ಹೊಸ ವೈಶಿಷ್ಟ್ಯವನ್ನು ಪರಿಚಯಿಸಲು ಮುಂದಾಗಿದೆ. ಬಳಕೆದಾರರ ಪ್ರಯಾಣ ಸುಧಾರಿಸಲು, ಸುಸ್ಥಿರ ಪ್ರಯಾಣಕ್ಕೆ ಬೆಂಬಲ ನೀಡಲು ಗೂಗಲ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮತ್ತು ಸ್ಥಳೀಯ ಪಾಲುದಾರಿಕೆಗಳ ಮೇಲೆ ಕೇಂದ್ರೀಕರಿಸಿ ಈ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಲಿದೆ. ಈ ಎಲ್ಲ ಅಪ್ಡೇಟ್‌ಗಳು ಈ ವಾರದಿಂದಲೇ ಬೆಂಗಳೂರು ಸೇರಿದಂತೆ ಭಾರತದ ಕೆಲವು ನಗರಗಳಲ್ಲಿ ಲಭ್ಯವಾಗಲಿವೆ.

VISTARANEWS.COM


on

By

Google Map
Koo

ಬಳಕೆದಾರರ ಅನುಭವವನ್ನು ಸುಧಾರಿಸಲು ಮತ್ತು ಸುಸ್ಥಿರ ಪ್ರಯಾಣಕ್ಕೆ ಬೆಂಬಲ ನೀಡಲು ಗೂಗಲ್ (google) ಸಂಸ್ಥೆಯು ಭಾರತದಲ್ಲಿ ಗೂಗಲ್ ಮ್ಯಾಪ್‌ಗಳಿಗಾಗಿ (Google Map) ಆರು ಹೊಸ ವೈಶಿಷ್ಟ್ಯಗಳನ್ನು (new features) ಅನಾವರಣಗೊಳಿಸಿದೆ. ಆರ್ಟಿಫಿಷಿಯಲ್ ಇಂಟಲಿಜೆನ್ಸ್ (Artificial Intelligence) ಮತ್ತು ಸ್ಥಳೀಯ ಪಾಲುದಾರಿಕೆಗಳ ಮೇಲೆ ಕೇಂದ್ರೀಕರಿಸಿ ಈ ವೈಶಿಷ್ಟ್ಯಗಳನ್ನು ಪರಿಚಯಿಸಲಾಗುತ್ತಿದೆ. ಸಾಮಾನ್ಯ ಪ್ರಯಾಣಿಕರಿಗೆ ಎದುರಾಗುವ ಸವಾಲುಗಳನ್ನು ಗುರಿಯಾಗಿಸಿಕೊಂಡು ಮಾಡಿರುವ ಈ ಹೊಸ ವೈಶಿಷ್ಟ್ಯಗಳು ಶೀಘ್ರದಲ್ಲೇ ಬಳಕೆದಾರರಿಗೆ ಲಭ್ಯವಾಗಲಿವೆ.

1. ಕಿರಿದಾದ ರಸ್ತೆ ತಪ್ಪಿಸುವಿಕೆ

ನಾಲ್ಕು ಚಕ್ರ ವಾಹನಗಳಿಗೆ ಸೂಕ್ತವಲ್ಲದ ರಸ್ತೆಗಳ ಮೂಲಕ ಸಂಚಾರವನ್ನು ತಡೆಯಲು, ಕಿರಿದಾದ ರಸ್ತೆಗಳನ್ನು ಗುರುತಿಸಲು ಮತ್ತು ಅವುಗಳನ್ನು ತಪ್ಪಿಸಲು ಗೂಗಲ್ ನಕ್ಷೆಗಳು ಈಗ ಎಐ ಅನ್ನು ಬಳಸುತ್ತವೆ. ಈ ವೈಶಿಷ್ಟ್ಯವು ರಸ್ತೆಯ ಅಗಲವನ್ನು ಅಂದಾಜು ಮಾಡಲು ಮತ್ತು ರೂಟಿಂಗ್ ಅಲ್ಗಾರಿದಮ್‌ಗಳನ್ನು ಪರಿಷ್ಕರಿಸಲು ಉಪಗ್ರಹ ಚಿತ್ರಣ, ಗಲ್ಲಿ ವೀಕ್ಷಣೆ ಡೇಟಾವನ್ನು ಬಳಸಿಕೊಳ್ಳುತ್ತದೆ. ಇದು ಆರಂಭದಲ್ಲಿ ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಎಂಟು ನಗರಗಳಲ್ಲಿ ಲಭ್ಯವಾಗಲಿದೆ.

2. ಫ್ಲೈಓವರ್ ನ್ಯಾವಿಗೇಷನ್

ಗೂಗಲ್ ನಕ್ಷೆಗಳು ಈಗ 40 ಭಾರತೀಯ ನಗರಗಳಲ್ಲಿ ಶಿಫಾರಸು ಮಾಡಲಾದ ಮಾರ್ಗಗಳಲ್ಲಿ ಫ್ಲೈಓವರ್‌ಗಳನ್ನು ಹೈಲೈಟ್ ಮಾಡುತ್ತವೆ. ಇದು ಚಾಲಕರು ಎತ್ತರದ ರಸ್ತೆ ಮಾರ್ಗಗಳಲ್ಲಿ ಸರಾಗವಾಗಿ ಸಾಗಲು ಸಹಾಯ ಮಾಡುತ್ತದೆ.


3. ಮೆಟ್ರೋ ಟಿಕೆಟ್ ಬುಕಿಂಗ್

ಕೊಚ್ಚಿ ಮತ್ತು ಚೆನ್ನೈನಲ್ಲಿ ಬಳಕೆದಾರರು ಈಗ ನೇರವಾಗಿ ಗೂಗಲ್ ನಕ್ಷೆಗಳು, ಒಎನ್‌ಡಿಸಿ ಮತ್ತು ನಮ್ಮ ಯಾತ್ರಿ ಜೊತೆಗಿನ ಏಕೀಕರಣದ ಮೂಲಕ ಮೆಟ್ರೋ ಟಿಕೆಟ್‌ಗಳನ್ನು ಬುಕ್ ಮಾಡಬಹುದು.

4. ಇವಿ ಚಾರ್ಜಿಂಗ್ ಸ್ಟೇಷನ್ ಇಂಟಿಗ್ರೇಷನ್

ನಕ್ಷೆಗಳು ಮತ್ತು ಹುಡುಕಾಟದಲ್ಲಿ 8,000ಕ್ಕೂ ಹೆಚ್ಚು ಚಾರ್ಜಿಂಗ್ ಸ್ಟೇಷನ್‌ಗಳ ವಿವರಗಳನ್ನು ಸಂಯೋಜಿಸಲು ಗೂಗಲ್ ಇವಿ ಚಾರ್ಜಿಂಗ್ ಪೂರೈಕೆದಾರರೊಂದಿಗೆ ಪಾಲುದಾರಿಕೆ ಹೊಂದಿದೆ. ಇದು ನೈಜ ಸಮಯದ ಲಭ್ಯತೆ ಮತ್ತು ಚಾರ್ಜರ್ ಪ್ರಕಾರದ ಮೂಲಕ ಫಿಲ್ಟರಿಂಗ್ ಅನ್ನು ಒಳಗೊಂಡಿರುತ್ತದೆ. ಗೂಗಲ್ ನಕ್ಷೆಗಳಲ್ಲಿ ದ್ವಿಚಕ್ರ ವಾಹನ ಇವಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಒಳಗೊಂಡಿರುವ ಮೊದಲ ದೇಶವಾಗಿ ಭಾರತವನ್ನು ಮಾಡಿದೆ.


5. ಮುಖ್ಯ ಸ್ಥಳಗಳ ಶಿಫಾರಸುಗಳು

ಪ್ರಮುಖ ನಗರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಶಿಫಾರಸು ಮಾಡಲಾದ ಸ್ಥಳಗಳ ಪಟ್ಟಿಗಳನ್ನು ಸಂಗ್ರಹಿಸಲು ಸ್ಥಳೀಯ ತಜ್ಞರು ಗೂಗಲ್‌ನೊಂದಿಗೆ ಸಹಕರಿಸುತ್ತಿದ್ದಾರೆ.

ಇದನ್ನೂ ಓದಿ: Bike Mileage Tips: ಬೈಕ್‌‌ಗೆ ಟ್ಯೂಬ್, ಟ್ಯೂಬ್ ಲೆಸ್ ಟಯರ್; ಇವೆರಡರಲ್ಲಿ ಯಾವುದು ಬೆಸ್ಟ್?

6. ಸುಧಾರಿತ ರಸ್ತೆ ಮಾಹಿತಿ

ಆಂಡ್ರಾಯ್ಡ್, ಐಒಎಸ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇನಲ್ಲಿ ಲಭ್ಯವಿರುವ ರಸ್ತೆಗಳ ನೈಜ ಚಿತ್ರಣದ ವಿವರಗಳನ್ನು ಬಳಕೆದಾರರು ವರದಿ ಮಾಡಲು ಅನುಮತಿಸುತ್ತದೆ. ಸ್ಥಳೀಯ ಸಾರಿಗೆ ಸವಾಲುಗಳನ್ನು ಪರಿಹರಿಸಲು ಈ ವೈಶಿಷ್ಟ್ಯಗಳನ್ನು ವಿನ್ಯಾಸಗೊಳಿಸಲಾಗಿದೆ. ಆಂಡ್ರಾಯ್ಡ್ ಮತ್ತು ಐಒಎಸ್ ಸಾಧನಗಳಲ್ಲಿ ಇದು ಕ್ರಮೇಣ ಲಭ್ಯವಾಗಲಿದೆ.

Continue Reading

ಗ್ಯಾಜೆಟ್ಸ್

Phone Charging Tips: ಫೋನ್‌ಗಳನ್ನು ಚಾರ್ಜ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

ಫೋನ್ ಚಾರ್ಜ್ ಮಾಡುವುದು (Phone Charging Mistakes) ಎಲ್ಲರ ಬದುಕಿನ ದೈನಂದಿನ ದಿನಚರಿಯ ಒಂದು ಭಾಗವಾಗಿದೆ. ಫೋನ್‌ಗಳ ಬ್ಯಾಟರಿ ಅವಧಿಯನ್ನು ಆಗಾಗ ಮೇಲ್ವಿಚಾರಣೆ ಮಾಡುವ ಜೊತೆಗೆ ಫೋನ್ ಬ್ಯಾಟರಿ ಬೇಗನೆ ಖಾಲಿಯಾಗದಂತೆ ನೋಡಿಕೊಳ್ಳಲು ಚಾರ್ಜಿಂಗ್ ವೇಳೆ ಕೆಲವೊಂದು ಅಭ್ಯಾಸಗಳು ಪಾಲಿಸುವುದು ಬಹುಮುಖ್ಯ. ಅವು ಯಾವುದು ಎನ್ನುವುದರ ಕುರಿತು ಇಲ್ಲಿದೆ ಮಾಹಿತಿ. ಈ ಟಿಪ್ಸ್‌ಗಳನ್ನು ಪಾಲಿಸಿ, ಬ್ಯಾಟರಿ ಬಾಳಿಕೆ ಹೆಚ್ಚಿಸಿ. ಜತೆಗೆ ನೀವೂ ಅಪಾಯದಿಂದ ಪಾರಾಗಿ.

VISTARANEWS.COM


on

By

Phone Charging Tips
Koo

ಬೆಳಗ್ಗೆ ಶೇ. 100ರಷ್ಟು ಚಾರ್ಜ್ ಮಾಡಿದ್ದ ಫೋನ್ ಬ್ಯಾಟರಿ (Phone Charging Tips) ಮಧ್ಯಾಹ್ನಕ್ಕೆ ಖಾಲಿಯಾಗುತ್ತದೆ. ಮಧ್ಯಾಹ್ನ ಮಾಡಿದ್ದು ಸಂಜೆ ವೇಳೆಗೆ ಬ್ಯಾಟರಿ ಲೋ (Battery Low) ತೋರಿಸುತ್ತದೆ. ಹೊಸ ಫೋನ್ ಬ್ಯಾಟರಿಯಲ್ಲಿ (New Phone battery) ಏನೂ ಸಮಸ್ಯೆ ಇರಲಿಕ್ಕಿಲ್ಲ. ಆದರೂ ಯಾಕೆ ಹೀಗಾಗುತ್ತಿದೆ ಎನ್ನುವ ಪ್ರಶ್ನೆ ಮೂಡುವುದು ಸಹಜ.

ಫೋನ್ ಚಾರ್ಜ್ ಮಾಡುವುದು ಎಲ್ಲರ ಬದುಕಿನ ದೈನಂದಿನ ದಿನಚರಿಯ ಒಂದು ಭಾಗವಾಗಿ ಬಿಟ್ಟಿದೆ. ಅಲ್ಲದೇ ಫೋನ್ ಗಳ ಬ್ಯಾಟರಿ ಅವಧಿಯನ್ನು ಆಗಾಗ್ಗೆ ಮೇಲ್ವಿಚಾರಣೆ ನಡೆಸುತ್ತಿರುತ್ತೇವೆ. ಫೋನ್ ಬ್ಯಾಟರಿ ಬೇಗನೆ ಖಾಲಿಯಾಗದಂತೆ ನೋಡಿಕೊಳ್ಳಲು ಚಾರ್ಜಿಂಗ್ ವೇಳೆ ಕೆಲವೊಂದು ಅಭ್ಯಾಸಗಳು ಬಹು ದೊಡ್ಡ ಪಾತ್ರವನ್ನು ವಹಿಸುತ್ತವೆ.


ಪೂರ್ಣ ಖಾಲಿ ಆಗುವ ಮೊದಲೇ ಚಾರ್ಜ್‌ಗೆ ಇಡಬೇಡಿ

ಆಧುನಿಕ ಫೋನ್‌ಗಳು ಬಹುತೇಕವಾಗಿ ಪುನರ್ ಭರ್ತಿ ಮಾಡಬಹುದಾದ ಲಿಥಿಯಂ- ಐಯಾನ್ ಬ್ಯಾಟರಿಗಳನ್ನು ಬಳಸುತ್ತವೆ. ಈ ಬ್ಯಾಟರಿಗಳಿಗೆ ಹೆಚ್ಚು ಸಂಗ್ರಹ ಸಾಮರ್ಥ್ಯ ಇದೆ. ಆದರೆ ಇವು ಕೆಲವು ಮಿತಿಗಳನ್ನು ಹೊಂದಿವೆ. ನಿರ್ದಿಷ್ಟವಾಗಿ ಹೇಳುವುದಾದರೆ ಸಂಪೂರ್ಣವಾಗಿ ಬರಿದಾಗಲು ಅಥವಾ ಈಗಾಗಲೇ ತುಂಬಿರುವಾಗ ಚಾರ್ಜ್ ಆಗಲು ಈ ಬ್ಯಾಟರಿಗಳು ಸೂಕ್ತವಲ್ಲ.

ಅನ್ ಪ್ಲಗ್ ಮಾಡಲು ಮರೆಯದಿರಿ

ಫೋನ್ ಅನ್ನು ನಿರ್ದಿಷ್ಟ ಗಂಟೆಗಳ ಕಾಲ ಮಾತ್ರ ಚಾರ್ಜ್ ಮಾಡಿ. ನಿಗದಿತ ಸಮಯಕ್ಕಿಂತ ಹೆಚ್ಚು ಕಾಲ ಚಾರ್ಜ್ ಮಾಡಲು ಇಡದಿರಿ. ಬ್ಯಾಟರಿ ಶೇ. 100 ಆದಾಗ ಕೂಡಲೇ ಅನ್‌ಪ್ಲಗ್ ಮಾಡಿ. ಬಹಳಷ್ಟು ಫೋನ್‌ಗಳು ತುಂಬಿದ ಅನಂತರ ಚಾರ್ಜ್ ಆಗುವುದನ್ನು ನಿಲ್ಲಿಸುವ ಸಿಸ್ಟಮ್‌ಗಳನ್ನು ಒಳಗೊಂಡಿವೆ. ಆದರೆ ಇವುಗಳ ಕಾರ್ಯವಿಧಾನದ ಮೇಲೆ ನೀವು ಅನ್‌ಪ್ಲಗ್ ಮಾಡದೇ ಇದ್ದರೆ ಪರಿಣಾಮ ಬೀರಬಹುದು. ಸ್ಫೋಟ ಆಗಲೂಬಹುದು.


ಬೆಚ್ಚಗಿನ ಸ್ಥಳದಲ್ಲಿ ಚಾರ್ಜ್ ಮಾಡಬೇಡಿ

ಬೆಚ್ಚಗಿನ ಸ್ಥಳದಲ್ಲಿ ಇಟ್ಟು ಫೋನ್‌ ಚಾರ್ಜ್ ಮಾಡಬೇಡಿ. ಯಾಕೆಂದರೆ ಬ್ಯಾಟರಿಯ ಆರೋಗ್ಯಕ್ಕಿಂತ ನಿಮ್ಮ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ನೀಡಿ. ಫೋನ್‌ಗಳನ್ನು ಹೆಚ್ಚು ಚಾರ್ಜ್ ಮಾಡುವುದರಿಂದ ಬ್ಯಾಟರಿ ತುಂಬಿ ಗಮನಾರ್ಹವಾದ ಉಷ್ಣತೆಗೆ ಕಾರಣವಾಗುತ್ತದೆ. ಇದು ಮೊಬೈಲ್ ಸ್ಫೋಟಕ್ಕೂ ಕಾರಣವಾಗಬಹುದು. ಹೀಗಾಗಿ ಮೊಬೈಲ್ ಅನ್ನು ಸುರಕ್ಷಿತ ಸ್ಥಳದಲ್ಲಿ ಇಟ್ಟು ಚಾರ್ಜ್ ಮಾಡಿ.

ಉತ್ತಮ ಗುಣಮಟ್ಟದ ಕೇಬಲ್‌, ಪ್ಲಗ್‌ ಬಳಸಿ

ಫೋನ್ ಪಡೆದ ಕೆಲವು ವರ್ಷಗಳ ಅನಂತರವೂ ಮೂಲ ಚಾರ್ಜಿಂಗ್ ಕೇಬಲ್ ಮತ್ತು ಪ್ಲಗ್ ಹೊಂದಿದ್ದರೆ ಅದನ್ನು ಬದಲಾಯಿಸುವುದು ಉತ್ತಮ. ಅಗ್ಗದ ಬದಲಿಗೆ ಹೆಚ್ಚು ಗುಣಮಟ್ಟಕ್ಕೆ ಆದ್ಯತೆ ನೀಡಿ.

ಇದನ್ನೂ ಓದಿ: Phone Storage Issue: ನಿಮ್ಮ ಮೊಬೈಲ್ ಸ್ಟೋರೇಜ್ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ!


ಬ್ಯಾಟರಿ ಉಳಿಸಿ

ಮೊಬೈಲ್‌ನಲ್ಲಿ ಕೆಲವು ಆಪ್‌ಗಳು ಮೊಬೈಲ್ ಬ್ಯಾಟರಿ ಲೈಫ್ ಅನ್ನು ಉಳಿಸುತ್ತದೆ. ಇಂತಹ ಆಪ್‌ಗಳನ್ನು ಡೌನ್ ಲೋಡ್ ಮಾಡಿಕೊಳ್ಳಿ. ಸಾಧ್ಯವಾದಷ್ಟು ಮೊಬೈಲ್‌ನಲ್ಲಿ ಬ್ಯಾಟರಿ ಸೇವ್ ಮೋಡ್ ಬಳಸಿ. ಅನಗತ್ಯವಾದ ಆಪ್‌ಗಳ ನೋಟಿಫಿಕೇಶನ್‌ಗಳನ್ನು ಆಫ್ ಮಾಡಿ.

ಚಾರ್ಜ್‌ಗೆ ಇಟ್ಟು ಸ್ಟ್ರೀಮಿಂಗ್ ನೋಡಬೇಡಿ

ಚಾರ್ಜ್ ಗೆ ಇಟ್ಟು ಮೊಬೈಲ್‌ನಲ್ಲಿ ವಿಡಿಯೋ ನೋಡುವುದು, ಗೇಮ್ ಆಡುವುದು, ಕರೆ ರಿಸೀವ್ ಮಾಡುವುದು ಹೆಚ್ಚು ಅಪಾಯಕಾರಿ. ಇದರಿಂದ ಫೋನ್‌ಗಳು ಹೆಚ್ಚು ಬಿಸಿಯಾಗುತ್ತವೆ. ಯಾವಾಗ ಬೇಕಾದರೂ ಸ್ಫೋಟಗೊಂಡು ಭಾರಿ ಅಪಾಯ ಸಂಭವಿಸಬಹುದು.

Continue Reading

ವಾಣಿಜ್ಯ

Mukesh Ambani Mobile: ಮುಕೇಶ್ ಅಂಬಾನಿ, ನೀತಾ ಅಂಬಾನಿ ಯಾವ ಮೊಬೈಲ್‌ ಬಳಸುತ್ತಾರೆ? ಅವುಗಳ ವೈಶಿಷ್ಟ್ಯ ಏನೇನು?

Mukesh Ambani Mobile: ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪತ್ನಿ ನೀತಾ ಅಂಬಾನಿ ಅವರೊಂದಿಗೆ ಆಗಮಿಸಿದ್ದ ರಿಲಯನ್ ಇಂಡಸ್ಟ್ರೀಸ್ ಮಾಲೀಕ ಮುಕೇಶ್ ಅಂಬಾನಿ ಅವರು ಬಳಸುತ್ತಿರುವ ಫೋನ್ ಎಲ್ಲರ ಗಮನ ಸೆಳೆಯಿತು. ಮುಕೇಶ್ ಅಂಬಾನಿ (Mukesh Ambani) ಬಳಸುತ್ತಿದ್ದ ಈ ಫೋನ್ ಅತ್ಯಂತ ದುಬಾರಿಯಾಗಿದೆ. ಇದಕ್ಕೆ ಕಾರಣವೂ ಇದೆ. ಅದು ಏನು ಎಂಬ ಮಾಹಿತಿ ಇಲ್ಲಿದೆ. ವಿಶೇಷ ಏನೆಂದರೆ, ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಒಂದೇ ಮಾಡೆಲ್‌ನ ಮೊಬೈಲ್‌ ಫೋನ್‌ ಬಳಸುತ್ತಾರೆ.

VISTARANEWS.COM


on

By

Mukesh Ambani Mobile
Koo

ರಿಲಾಯನ್ಸ್ ಇಂಡಸ್ಟ್ರೀಸ್ (Reliance Industries) ಮಾಲೀಕ ಮತ್ತು ಭಾರತದ ಶ್ರೀಮಂತ ವ್ಯಕ್ತಿ (India’s richest man) ಮುಕೇಶ್ ಅಂಬಾನಿ (Mukesh Ambani) ಅವರು ಧರಿಸುವ, ಬಳಸುವ ಪ್ರತಿಯೊಂದು ವಸ್ತುವಿನ ಬಗ್ಗೆಯೂ ತಿಳಿದುಕೊಳ್ಳುವ ಕುತೂಹಲ ಎಲ್ಲರಿಗೂ ಇರುತ್ತದೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಪತ್ನಿ ನೀತಾ ಅಂಬಾನಿ (nita ambani) ಅವರೊಂದಿಗೆ ಪಾಲ್ಗೊಂಡಿದ್ದ ಮುಕೇಶ್ ಅಂಬಾನಿ ಅವರ ಕೈಯಲ್ಲಿದ್ದ ಫೋನ್ (Mukesh Ambani Mobile) ಎಲ್ಲರ ಗಮನ ಸೆಳೆದಿತ್ತು.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಾಗಿ ಸುಮಾರು ಎಂಟು ತಿಂಗಳಾಗುತ್ತ ಬಂದರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಲೆಬ್ರಿಟಿಗಳು, ವಿಐಪಿಗಳು ಎಲ್ಲರ ಗಮನ ಸೆಳೆದಿರುವುದು ಇನ್ನೂ ಚರ್ಚೆಯಾಗುತ್ತಲೇ ಇದೆ. ಮುಕೇಶ್ ಅಂಬಾನಿ ಕೂಡ ತಮ್ಮ ಕುಟುಂಬದೊಂದಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಎಲ್ಲರ ಗಮನ ಸೆಳೆದಿದ್ದು ಅವರು ಬಳಸುತ್ತಿದ್ದ ಫೋನ್.

ಅದ್ಧೂರಿ ಸಮಾರಂಭದಲ್ಲಿ ಮುಖೇಶ್ ಅಂಬಾನಿ ತಮ್ಮ ಪತ್ನಿ ನೀತಾ ಅಂಬಾನಿ ಅವರೊಂದಿಗೆ ಕಾಣಿಸಿಕೊಂಡರು. ಅವರ ಕೈಯಲ್ಲಿದ್ದ ಸ್ಮಾರ್ಟ್ ಫೋನ್ ಎಲ್ಲರ ಗಮನ ಸೆಳೆಯಲು ಹಲವು ಕಾರಣಗಳಿವೆ. ಮುಕೇಶ್ ಅಂಬಾನಿ ಇತ್ತೀಚಿನ ಆಪಲ್ ಐಫೋನ್ ಅನ್ನು ಬಳಸುತ್ತಿದ್ದಾರೆ. ಐಫೋನ್ 15 ಪ್ರೊ ಮ್ಯಾಕ್ಸ್ ಕೇವಲ ಸಾಮಾನ್ಯ ಐಫೋನ್ ಅಲ್ಲ. ಇದು ಐಫೋನ್ 15 ಸರಣಿಯ ಅತ್ಯಂತ ದುಬಾರಿ ಮಾದರಿಯಾಗಿದೆ. ಈ ಫೋನ್‌ನ 256 GB ಮಾದರಿಯು ಸುಮಾರು 1.50 ಲಕ್ಷ ರೂ. ನದ್ದಾಗಿದೆ. 1 ಟಿಬಿ ಸ್ಟೋರೇಜ್ ರೂಪಾಂತರದ ಬೆಲೆ ಅಂದಾಜು 2 ಲಕ್ಷ ರೂ.

Mukesh Ambani
Mukesh Ambani


ನೀತಾ ಅಂಬಾನಿ ಫೋನ್

ನೀತಾ ಅಂಬಾನಿ ಕೂಡ ಅದೇ ಮಾದರಿಯ ಐಫೋನ್ ಅನ್ನು ಬಳಸುತ್ತಿದ್ದಾರೆ. ಅನೇಕ ಇತರ ಪ್ರಮುಖ ವ್ಯಕ್ತಿಗಳು ಮತ್ತು ಸೆಲೆಬ್ರಿಟಿಗಳು ಈ ಫೋನ್ ಅನ್ನು ಅದರ ಅಸಾಧಾರಣ ವೈಶಿಷ್ಟ್ಯಗಳಿಗಾಗಿ ಆದ್ಯತೆ ನೀಡುತ್ತಾರೆ. ಐಫೋನ್ 15 ಪ್ರೊ ಮ್ಯಾಕ್ಸ್ ಅತ್ಯುತ್ತಮ ಕೆಮರಾ, ನೀರಿನ ಪ್ರತಿರೋಧ ಮತ್ತು ಅತ್ಯಂತ ಗಟ್ಟಿಮುಟ್ಟಾದ ವಿನ್ಯಾಸವನ್ನು ಹೊಂದಿದೆ. ಇದರ ವಿನ್ಯಾಸ ಮತ್ತು ವೈಶಿಷ್ಟ್ಯಗಳು ಉನ್ನತ ದರ್ಜೆಯದ್ದಾಗಿದ್ದು, ಪ್ರೀಮಿಯಂ ನೋಟ ಮತ್ತು ಅತ್ಯುತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ. ಪ್ರತಿಯೊಂದು ಅಂಶದಲ್ಲೂ ಈ ಫೋನ್ ಮಾರುಕಟ್ಟೆಯಲ್ಲಿನ ಇತರ ಸ್ಮಾರ್ಟ್‌ಫೋನ್‌ಗಳನ್ನು ಮೀರಿಸುತ್ತದೆ.

Mukesh Ambani
Mukesh Ambani


ಐಫೋನ್ 15 ಪ್ರೊ ಮ್ಯಾಕ್ಸ್ ನ ವೈಶಿಷ್ಟ್ಯಗಳು ಏನೇನು?

ಐಫೋನ್ 15 ಪ್ರೊ ಮ್ಯಾಕ್ಸ್ ಅಸಾಧಾರಣವಾದ ಫೋಟೋ ಮತ್ತು ವಿಡಿಯೋ ಗುಣಮಟ್ಟವನ್ನು ನೀಡುವ ಉನ್ನತ ಆಫ್ ಲೈನ್ ಕೆಮೆರಾವನ್ನು ಒಳಗೊಂಡಿದೆ.

ಇದನ್ನೂ ಓದಿ: Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟು ಮುದ್ರಿಸಲು 96 ಪೈಸೆ ಬೇಕು!

ಈ ಫೋನ್ ಜಲ ನಿರೋಧಕವಾಗಿದೆ (ವಾಟರ್‌ ಪ್ರೂಫ್‌) ಮತ್ತು ಬಲಿಷ್ಠ ಸಾಮಗ್ರಿಗಳಿಂದ ನಿರ್ಮಿಸಲಾಗಿದೆ. ಇದು ಯಾವುದೇ ಕಠಿಣ ಪರಿಸ್ಥಿತಿಗಳನ್ನು ತಡೆದುಕೊಳ್ಳುತ್ತದೆ.

ಐಫೋನ್ 15 ಪ್ರೊ ಮ್ಯಾಕ್ಸ್ ನ ನಯವಾದ ಮತ್ತು ಪ್ರೀಮಿಯಂ ವಿನ್ಯಾಸವು ಅದನ್ನು ಸೊಗಸಾದ ಆಯ್ಕೆಯನ್ನಾಗಿ ಮಾಡುತ್ತದೆ. ಹಲವು ಸುಧಾರಿತ ವೈಶಿಷ್ಟ್ಯಗಳು ಮತ್ತು ಶಕ್ತಿಯುತ ಕಾರ್ಯಕ್ಷಮತೆಯನ್ನು ಒಳಗೊಂಡಿದೆ. 256ಜಿಬಿ ಮತ್ತು 1 ಟಿಬಿ ಸೇರಿದಂತೆ ಮಲ್ಟಿ ಸ್ಟೋರೇಜ್‌ ರೂಪಾಂತರಗಳಲ್ಲಿ ಇದು ಲಭ್ಯವಿದೆ.

Continue Reading
Advertisement
PM Narendra Modi
ದೇಶ16 mins ago

PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

Congress Protest
ಚಿಕ್ಕಬಳ್ಳಾಪುರ28 mins ago

Congress Protest: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ; ಚಿಕ್ಕಬಳ್ಳಾಪುರ, ದೇವನಹಳ್ಳಿಯಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ

National Pension Scheme
ಮನಿ-ಗೈಡ್38 mins ago

National Pension Scheme: ಎನ್‌ಪಿಎಸ್‌ನಲ್ಲಿ ದಿನಕ್ಕೆ 200 ರೂ. ಹೂಡಿಕೆ ಮಾಡಿದರೆ ಸಿಗುವ ಮಾಸಿಕ ಪಿಂಚಣಿ ಎಷ್ಟು ಗೊತ್ತೇ?

Hoax bomb threat
ಪ್ರಮುಖ ಸುದ್ದಿ47 mins ago

Hoax Bomb Threat: ವೈಟ್ ಫೀಲ್ಡ್‌ನ ಮಾಲ್ ಸೇರಿ‌ ಬೆಂಗಳೂರಿನ ಹಲವು ಮಾಲ್‌ಗಳಿಗೆ ಬಾಂಬ್ ಬೆದರಿಕೆ!

triple talaq
ಪ್ರಮುಖ ಸುದ್ದಿ1 hour ago

Triple Talaq : ತ್ರಿವಳಿ ತಲಾಖ್​​ಗೆ ಶಿಕ್ಷೆ ಆಗಲೇಬೇಕು; ಸುಪ್ರೀಂ ಕೋರ್ಟ್​ಗೆ ಹೊಸ ಅಫಿಡವಿಟ್​ ಸಲ್ಲಿಸಿ ಕಾನೂನನ್ನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

DK Shivakumar
ಕರ್ನಾಟಕ2 hours ago

Congress Protest: 10 ಜನ್ಮ ಎತ್ತಿ ಬಂದ್ರೂ ನಮ್ಮ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಎಂದ ಡಿಕೆಶಿ

Viral Video
Latest2 hours ago

Viral Video: ಮೆಟ್ರೊದಲ್ಲಿ ಕುಳಿತು ಜೋಡಿಯ ಖುಲ್ಲಂಖುಲ್ಲಾ ಕಿಸ್ಸಿಂಗ್‌; ಪ್ರಯಾಣಿಕರಿಗೆ ಟೆನ್ಶನ್‌!

BSNL 4G Plan
ಗ್ಯಾಜೆಟ್ಸ್2 hours ago

BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

Viral Video
Latest2 hours ago

Viral Video: ಎಲ್ಲ ಬಿಟ್ಟು ಟ್ರಾನ್ಸ್‌ಫಾರ್ಮರ್‌ ಏರಿ ಸತ್ತ ಕರಡಿ; ಮೃತ ದೇಹದ ಮೇಲೆ ಕೂತ ಲೈನ್‌ಮನ್!

Karnataka Weather Forecast
ಮಳೆ3 hours ago

Karnataka Weather : ಸಣ್‌ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು; ನಾಳೆಗೂ ಅಲರ್ಟ್‌

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌