Gaganyaan: ಮಾನವಸಹಿತ ಗಗನಯಾನದ ಮೊದಲ ಪ್ರಾತ್ಯಕ್ಷಿಕೆ ಅಕ್ಟೋಬರ್ 25ರಂದು - Vistara News

ತಂತ್ರಜ್ಞಾನ

Gaganyaan: ಮಾನವಸಹಿತ ಗಗನಯಾನದ ಮೊದಲ ಪ್ರಾತ್ಯಕ್ಷಿಕೆ ಅಕ್ಟೋಬರ್ 25ರಂದು

ಸಿದ್ಧತೆಗಳು ನಿರೀಕ್ಷೆಯಂತೆ ನಡೆದರೆ ಅಕ್ಟೋಬರ್ 25ರ ಸುಮಾರಿಗೆ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ ನಡೆಸಲಾಗುತ್ತದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ- ISRO) ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

gaganyaan1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಭಾರತದ ಮಹತ್ವಾಕಾಂಕ್ಷಿ ಮಾನವಸಹಿತ ಬಾಹ್ಯಾಕಾಶ ಪ್ರಯಾಣ (manned space mission) ʼಗಗನಯಾನʼದ (Gaganyaan) ʼಅಬಾರ್ಟ್ ಟೆಸ್ಟ್ ಡೆಮೊʼ (abort test demo- ನೌಕೆ ಸ್ಥಗಿತ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ) ಇದೇ ತಿಂಗಳ 25ರಂದು ನಡೆಸಲು ಉದ್ದೇಶಿಸಲಾಗಿದೆ.

ಸಿದ್ಧತೆಗಳು ನಿರೀಕ್ಷೆಯಂತೆ ನಡೆದರೆ ಅಕ್ಟೋಬರ್ 25ರ ಸುಮಾರಿಗೆ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ ನಡೆಸಲಾಗುತ್ತದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ- ISRO) ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದು ಭಾರತದ ಮಹತ್ವಾಕಾಂಕ್ಷೆಯ ಮಾನವಸಹಿತ ಬಾಹ್ಯಾಕಾಶ ಮಿಷನ್‌ ಅನ್ನು ಇನ್ನೊಂದು ಹೆಜ್ಜೆ ಮುಂದಕ್ಕೆ ಒಯ್ಯಲಿದೆ.

“ಮಿಷನ್ ತಯಾರಿ ಯೋಜನೆಯ ಪ್ರಕಾರ ನಡೆಯುತ್ತಿದೆ. ನಾವು ಅಕ್ಟೋಬರ್ 25ರ ಸುಮಾರಿಗೆ ನೌಕೆ ಸ್ಥಗಿತಗೊಳಿಸುವ ಪರೀಕ್ಷಾ ಪ್ರದರ್ಶನವನ್ನು ಗುರಿಯಾಗಿರಿಸಿಕೊಂಡಿದ್ದೇವೆ. ಅದನ್ನು ಸಾಧಿಸಿದ ನಂತರ ನಾವು ಮಾನವರಹಿತ ಕಾರ್ಯಾಚರಣೆಯ ಸಿದ್ಧತೆಗಳನ್ನು ನಡೆಸುತ್ತೇವೆ” ಎಂದು ಇಸ್ರೋ ಅಧಿಕಾರಿ ಹೇಳಿದ್ದಾರೆ.

ಸೆಪ್ಟೆಂಬರ್ 26ರಂದು ಕೌನ್ಸಿಲ್ ಫಾರ್ ಸೈಂಟಿಫಿಕ್ ಆಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಸಂಸ್ಥಾಪನಾ ದಿನದ ಸಂದರ್ಭದಲ್ಲಿ, ಅಕ್ಟೋಬರ್‌ನಲ್ಲಿ ಸ್ಥಗಿತ ಪರೀಕ್ಷಾ ಪ್ರದರ್ಶನ ನಡೆಸುವ ಯೋಜನೆ ಬಗ್ಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಮಾತನಾಡಿದ್ದರು. ಆದರೆ ದಿನಾಂಕ ಬಹಿರಂಗಪಡಿಸಿರಲಿಲ್ಲ.

ಗಗನಯಾನ ಯೋಜನೆಯು ಇಸ್ರೋದ ಮಾನವಸಹಿತ ಬಾಹ್ಯಾಕಾಶ ಹಾರಾಟದ ಸಾಮರ್ಥ್ಯ ಸಾಬೀತುಪಡಿಸಲಿದೆ. ಮೂವರು ಗಗನಯಾತ್ರಿಗಳನ್ನು ಭೂಮಿಯಿಂದ 400 ಕಿಮೀ ದೂರದ ಕಕ್ಷೆಗೆ ಉಡಾಯಿಸಿ, ಮೂರು ದಿನಗಳ ನಂತರ ಅವರನ್ನು ಸುರಕ್ಷಿತವಾಗಿ ಹಿಂತಿರುಗಿಸುವ ಗುರಿಯನ್ನು ಹೊಂದಿದೆ.

ಸಿಬ್ಬಂದಿಯನ್ನು ಸುರಕ್ಷಿತವಾಗಿ ಬಾಹ್ಯಾಕಾಶಕ್ಕೆ ಸಾಗಿಸುವ ಅತ್ಯುತ್ತಮ ದರ್ಜೆಯ ಉಡಾವಣಾ ವಾಹನ, ಬಾಹ್ಯಾಕಾಶದಲ್ಲಿ ಸಿಬ್ಬಂದಿಗೆ ಭೂಮಿಯಂತಹ ಪರಿಸರವನ್ನು ಒದಗಿಸುವ ಜೀವಾಧಾರಕ ವ್ಯವಸ್ಥೆ, ಸಿಬ್ಬಂದಿ ತುರ್ತುಸ್ಥಿತಿಯಲ್ಲಿ ಪಾರಾಗಲು ವ್ಯವಸ್ಥೆ, ಸಿಬ್ಬಂದಿ ತರಬೇತಿಗೆ ವ್ಯವಸ್ಥೆ ಸೇರಿದಂತೆ ಹಲವು ನಿರ್ಣಾಯಕ ತಂತ್ರಜ್ಞಾನಗಳ ಅಭಿವೃದ್ಧಿ, ಸಿಬ್ಬಂದಿ ಚೇತರಿಕೆ ಮತ್ತು ಪುನರ್ವಸತಿ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.

ಮಾನವ ಬಾಹ್ಯಾಕಾಶ ಯಾನದ ಕಾರ್ಯಾಚರಣೆಯ ಮುಂದಿನ ಹಂತಗಳ ಪ್ರಾತ್ಯಕ್ಷಿಕೆಗಳಲ್ಲಿ ಇಂಟಿಗ್ರೇಟೆಡ್ ಏರ್ ಡ್ರಾಪ್ ಟೆಸ್ಟ್ (ಐಎಡಿಟಿ), ಪ್ಯಾಡ್ ಅಬಾರ್ಟ್ ಟೆಸ್ಟ್ (ಪಿಎಟಿ) ಮತ್ತು ಟೆಸ್ಟ್ ವೆಹಿಕಲ್ (ಟಿವಿ) ಫ್ಲೈಟ್‌ಗಳು ಸೇರಿವೆ. ಇವೆಲ್ಲವೂ 2024ರ ಮೊದಲ ತ್ರೈಮಾಸಿಕದಲ್ಲಿ ನಿಗದಿಪಡಿಸುವ ನಿರೀಕ್ಷೆಯಿದೆ. ನಂತರ ಮಾನವರಿಲ್ಲದ ಮಿಷನ್ ಪ್ರಯೋಗ ನಡೆಯಲಿದೆ. ಎಲ್ಲಾ ವ್ಯವಸ್ಥೆಗಳ ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಂಡು ಮುಂದಿನ ಹೆಜ್ಜೆ ಎಂದು ಇಸ್ರೋ ಹೇಳಿದೆ.

2024ರ ಕೊನೆಯ ತ್ರೈಮಾಸಿಕದಲ್ಲಿ ಅಥವಾ 2025ರ ಆರಂಭದಲ್ಲಿ ಗಗನಯಾನ ಉಡಾವಣೆಯ ನಿರೀಕ್ಷೆಯಿದೆ. ಮಿಷನ್‌ಗಾಗಿ ಆಯ್ಕೆಯಾದ ಗಗನಯಾತ್ರಿಗಳು ಪ್ರಸ್ತುತ ಇಸ್ರೋದ ವಿವಿಧ ಕಡೆಗಳಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಈ ವಾರದ ಆರಂಭದಲ್ಲಿ ಭಾರತೀಯ ವಾಯುಪಡೆ (IAF) ಈ ಗಗನಯಾತ್ರಿಗಳ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಆದರೆ ಗುರುತು ಬಹಿರಂಗಪಡಿಸಿಲ್ಲ. ಈ ಗಗನಯಾತ್ರಿಗಳನ್ನು ʼಗಗನ್ನಾಟ್‌ʼ (Gaganauts) ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: Gaganayaan Mission: ಬಾಹ್ಯಾಕಾಶಕ್ಕೆ ತೆರಳಲಿದೆ ‘ವ್ಯೋಮಿತ್ರ’ ಲೇಡಿ ರೋಬೋಟ್, ಇದು ಗಗನಯಾನ ಮಿಷನ್ ವಿಶೇಷ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

WhatsApp colour: ವಾಟ್ಸ್ಆ್ಯಪ್​ನ ಬಣ್ಣ ಬದಲಾಗಿದ್ದು ಯಾಕೆ? ಏನಿದರ ಗುಟ್ಟು?

WhatsApp colour: ನಿರಂತರ ಅಪ್ಡೇಟ್ ಆಗುತ್ತಿರುವ ವಾಟ್ಸ್ ಆಪ್ ನಲ್ಲಿ ಈಗ ಬಣ್ಣ ಬದಲಾವಣೆ ಆಗಿದ್ದು, ಹೆಚ್ಚಿನವರು ಇದನ್ನು ಗಮನಿಸಿ ಇಲ್ಲದೇ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಯಾಕೆ ಈ ಬಣ್ಣ ಬದಲಾಯಿಸಲಾಗಿದೆ ಗೊತ್ತೇ?

VISTARANEWS.COM


on

By

WhatsApp color
Koo

ಜಗತ್ತಿನಾದ್ಯಂತ (world) ಎರಡು ಬಿಲಿಯನ್ ಗಿಂತಲೂ ಹೆಚ್ಚು ಮಂದಿ ಬಳಸುತ್ತಿರುವ ವಾಟ್ಸ್ ಆಪ್ (whatsApp) ತನ್ನ ವೈಶಿಷ್ಟ್ಯದಿಂದಾಗಿ ನಿರಂತರ ಎಲ್ಲರ ಗಮನ ಸೆಳೆಯುತ್ತದೆ. ಎಲ್ಲರೂ ಬಹು ಸುಲಭವಾಗಿ ಬಳಸಬಹುದಾದ ಈ ಪುಟ್ಟ ಆ್ಯಪ್ ಈಗ ನವೀಕರಣಗೊಂಡಿದ್ದು ಬಣ್ಣದ ಬದಲಾವಣೆಯಿಂದ (WhatsApp colour) ಬಳಕೆದಾರರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

ವಾಟ್ಸ್ ಆಪ್ ಈಗ ಒಂದು ಸೂಕ್ಷ್ಮ ಬದಲಾವಣೆಗೆ ಒಳಗಾಗಿದ್ದು ಅದು ಅದರ ಹಸಿರು ಬಣ್ಣ (green colour). ಸಂದೇಶ ಕಳುಹಿಸುವಿಕೆಯ ಅಪ್ಲಿಕೇಶನ್‌ ವಾಟ್ಸ್ ಆ್ಯಪ್​ ನ ಭಾಗಗಳು ಈಗ ಲೋಗೋದಂತೆಯೇ ಹಸಿರು ಬಣ್ಣಕ್ಕೆ ತಿರುಗಿದೆ. ಆದರೆ ಇದು ಹೆಚ್ಚಿನವರ ಗಮನಕ್ಕೆ ಬರಲಿಲ್ಲವಾದರೂ ಕೆಲವರು ಮಾತ್ರ ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಪ್ರಾರಂಭಿಸಿದ್ದಾರೆ.

ಕೆಲವು ಬಳಕೆದಾರರು ಈ ಬದಲಾವಣೆ ತುಂಬಾ ಚೆನ್ನಾಗಿಲ್ಲ ಎಂದು ಹೇಳಿದ್ದು, ಮೆಟಾ (meta) ಮಾಲೀಕತ್ವದ ಈ ಅಪ್ಲಿಕೇಶನ್ ಈ ರೀತಿ ಮಾಡಲು ಏಕೆ ನಿರ್ಧರಿಸಿದೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

ಭಾರತೀಯ ಬಳಕೆದಾರರಿಗೂ ಈ ಹೊಸ ಅಪ್ಡೇಟ್ ಲಭ್ಯವಾಗಿದ್ದು, ಒಂದು ವೇಳೆ ವಾಟ್ಸ್ ಆಪ್ ಈ ಸಣ್ಣ ಬದಲಾವಣೆ ಕಂಡು ಬಂದರೆ ಈ ಬಗ್ಗೆ ಆಶ್ಚರ್ಯ ಪಡಬೇಕಿಲ್ಲ.


ವಾಟ್ಸಾಪ್ ಏಕೆ ಹಸಿರಾಗಿದೆ?

ವಾಟ್ಸ್ ಆ್ಯಪ್​​ನ ಮಾಲೀಕರಾಗಿರುವ ಮೆಟಾ ಈ ಬದಲಾವಣೆಗಳ ಮೂಲಕ ಬಳಕೆದಾರರಿಗೆ ಆಧುನಿಕ, ಹೊಸ ಅನುಭವ ನೀಡುವ ಗುರಿಯನ್ನು ಹೊಂದಿದೆ ಮತ್ತು ಅದನ್ನು ಹೆಚ್ಚು ಸುಲಭವಾಗಿ ಮತ್ತು ಬಳಸಲು ಸರಳವಾಗುವಂತೆ ಮಾಡಲಾಗುತ್ತದೆ ಎಂದು ಹೇಳಿದೆ.

ಬದಲಾವಣೆಗಳೇನು?

ವಾಟ್ಸ್ ಆ್ಯಪ್ ನವೀಕರಣದ ಬಳಿಕ iOS ಮತ್ತು Android ಬಳಕೆದಾರರಿಗೆ ಇದು ಲಭ್ಯವಾಗುತ್ತಿದೆ. Android ಬಳಕೆದಾರರು ಹಿಂದಿನ ಹಸಿರು ಬಣ್ಣದಲ್ಲಿ ಬದಲಾವಣೆಯನ್ನು ಗಮನಿಸಬಹುದು.

ವಾಟ್ಸ್​​ಆ್ಯಪ್​ನಲ್ಲಿ ಹಸಿರು ಬಣ್ಣವನ್ನು ಮಾತ್ರವಲ್ಲ ಸ್ಟೇಟಸ್ ಬಾರ್‌ನಿಂದ ಚಾಟ್-ಲಿಸ್ಟ್ ವಿಂಡೋದವರೆಗೆ ಎಲ್ಲವೂ ವಿನ್ಯಾಸ ಬದಲಾವಣೆಯಾಗಿದೆ. ಅಪ್ಲಿಕೇಶನ್‌ನಲ್ಲಿ ಹಂಚಿಕೊಳ್ಳಲಾದ ಲಿಂಕ್‌ಗಳು ಕೂಡ ಹಸಿರು ಬಣ್ಣದಲ್ಲಿ ಗೋಚರಿಸುತ್ತವೆ.

ಆಂಡ್ರಾಯ್ಡ್ ಬಳಕೆದಾರರು ಡಾರ್ಕ್ ಮೋಡ್‌ ನಲ್ಲಿ ಸೂಕ್ಷ್ಮ ಹೊಂದಾಣಿಕೆಗಳನ್ನು ಕಾಣಬಹುದು. ಡಾರ್ಕ್ ಮೋಡ್ ನಲ್ಲಿ ಅದು ಇನ್ನಷ್ಟು ಗಾಢವಾಗುತ್ತದೆ ಮತ್ತು ಲೈಟ್ ಮೋಡ್ ನಲ್ಲಿ ಹೆಚ್ಚುವರಿ ಸ್ಥಳಾವಕಾಶದೊಂದಿಗೆ ಸುಧಾರಿತ ಓದುವಿಕೆಗೆ ಪ್ರಾಶಸ್ತ್ಯ ನೀಡುತ್ತದೆ.

ಬಳಕೆದಾರರ ಅನುಭವ ಸುಧಾರಣೆಗೆ ಕ್ರಮ

ವಾಟ್ಸ್ ಆ್ಯಪ್ ನಲ್ಲಿ ಬಣ್ಣ ಬದಲಾವಣೆಯೊಂದಿಗೆ ಬಳಕೆದಾರರ ಅನುಭವವನ್ನು ಸುಧಾರಿಸುವ ಉದ್ದೇಶದಿಂದ ಹಲವು ನವೀಕರಣಗಳನ್ನು ಮಾಡಿದೆ.

ವಾಟ್ಸ್ ಆ್ಯಪ್ ತನ್ನ ಸಂದೇಶ ಸೂಚಕಗಳಲ್ಲಿ ಕೆಲವು ಪದಗಳನ್ನು ದೊಡ್ಡಕ್ಷರ ಮಾಡಲು ಇತ್ತೀಚೆಗೆ ಪರಿಶೀಲನೆಗೆ ಒಳಗಾಯಿತು. ಕೆಲವು ಬಳಕೆದಾರರು “ಆನ್‌ಲೈನ್” ಮತ್ತು “ಟೈಪಿಂಗ್” ನ ಮೊದಲ ಅಕ್ಷರಗಳನ್ನು ಕ್ರಮವಾಗಿ “ಆನ್‌ಲೈನ್” ಮತ್ತು “ಟೈಪಿಂಗ್” ಎಂದು ದೊಡ್ಡಕ್ಷರದಲ್ಲಿ ಬದಲಾವಣೆಯನ್ನು ಗಮನಿಸಿದ್ದಾರೆ. ಆಂಡ್ರಾಯ್ಡ್ ಮತ್ತು ಐಒಎಸ್ ಎರಡರಲ್ಲೂ ಗಮನಿಸಲಾದ ಬದಲಾವಣೆಯು ಆನ್‌ಲೈನ್‌ನಲ್ಲಿ ಮಹತ್ವದ ಚರ್ಚೆಗಳನ್ನು ಹುಟ್ಟುಹಾಕಿದೆ.

Continue Reading

ತಂತ್ರಜ್ಞಾನ

English Speaking Practice: ಸರಳ, ಸುಲಭವಾಗಿ ಇಂಗ್ಲಿಷ್ ಮಾತನಾಡಬೇಕೇ?; ಗೂಗಲ್​​ನಲ್ಲಿದೆ ‘ಸ್ಪೀಕಿಂಗ್ ಪ್ರಾಕ್ಟೀಸ್’

English Speaking Practice: ಇಂಗ್ಲಿಷ್ ಮಾತನಾಡುವ ಕೌಶಲವನ್ನು ವೃದ್ಧಿಸಿಕೊಳ್ಳಬೇಕೇ. ಇದಕ್ಕಾಗಿ ಇನ್ನು ಹೆಚ್ಚಿನ ಕಡೆ ಅಲೆದಾಡಬೇಕಿಲ್ಲ. ನಾವು ನಿತ್ಯ ಏನಾದರೊಂದು ವಿಷಯದ ಬಗ್ಗೆ ಹುಡುಕಾಡುವ ಗೂಗಲ್ ನಲ್ಲೇ ಇದು ಲಭ್ಯವಾಗಲಿದೆ.

VISTARANEWS.COM


on

By

English Speaking Practice
Koo

ಸ್ಮಾರ್ಟ್ ಫೋನ್ (smart phone) ಬಳಕೆದಾರರ ಇಂಗ್ಲಿಷ್ ಮಾತನಾಡುವ ಕೌಶಲ್ಯವನ್ನು (English Speaking Practice) ಸುಧಾರಿಸಲು ಗೂಗಲ್ (google) ಹೊಸ ವೈಶಿಷ್ಠ್ಯವೊಂದನ್ನು ಪರಿಚಯಿಸಿದೆ. ‘ಸ್ಪೀಕಿಂಗ್ ಪ್ರಾಕ್ಟೀಸ್’ ಎಂದು ಕರೆಯಲ್ಪಡುವ ಈ ಹೊಸ ವೈಶಿಷ್ಟ್ಯವು ಪ್ರಸ್ತುತ ಅರ್ಜೆಂಟೀನಾ (Argentina), ಕೊಲಂಬಿಯಾ (Colombia), ಭಾರತ (India), ಇಂಡೋನೇಷ್ಯಾ (Indonesia), ಮೆಕ್ಸಿಕೋ (Mexico) ಮತ್ತು ವೆನೆಜುವೆಲಾದಲ್ಲಿ (Venezuela) ಗೂಗಲ್ ಹುಡುಕಾಟದಲ್ಲಿ ಲಭ್ಯವಾಗುತ್ತಿದೆ.

ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಸಹಾಯದಿಂದ ಹೊಸ ವೈಶಿಷ್ಟ್ಯವು ಸಂವಹನ ಭಾಷಾ ಕಲಿಕೆಯನ್ನು ಪ್ರಾಕ್ಟೀಸ್ ಮಾಡಲು ಬಳಕೆದಾರರಿಗೆ ಅವಕಾಶ ಕಲ್ಪಿಸುತ್ತದೆ. ದಿನನಿತ್ಯ ಬಳಸಬಹುದಾದ ಹೊಸ ಪದಗಳನ್ನು ಕಲಿಯಲು ಇದು ಸಹಾಯ ಮಾಡುತ್ತದೆ ಎಂದು ಟೆಕ್ ದೈತ್ಯ ಗೂಗಲ್ ಹೇಳಿದೆ.

ಟೆಕ್ಕ್ರಂಚ್ ಪ್ರಕಾರ, ಸ್ಪೀಕಿಂಗ್ ಪ್ರಾಕ್ಟೀಸ್ ಅನ್ನು ಟ್ವಿಟರ್​​ ನಲ್ಲಿ ಹಿಂದೆ ಪರಿಚಯಿಸಲಾಗಿತ್ತು. ಈ ಹೊಸ ವೈಶಿಷ್ಟ್ಯವು ಬಳಕೆದಾರರಿಗೆ ಪ್ರಶ್ನೆ ಕೇಳುವ ಮೂಲಕ ಕಾರ್ಯನಿರ್ವಹಿಸುತ್ತದೆ. ಅದರ ಅನಂತರ ಬಳಕೆದಾರರು ಪೂರ್ವನಿರ್ಧರಿತ ಪದಗಳ ಗುಂಪಿನಿಂದ ಉತ್ತರಿಸಲು ಪ್ರೇರೇಪಿಸುತ್ತಾರೆ.

ಇದನ್ನೂ ಓದಿ: WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

ಬಳಕೆದಾರರು ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳಲ್ಲಿ ಒಂದಾದ ವೈಶಿಷ್ಟ್ಯವು ಎಐ ಚಾಟ್‌ಬಾಟ್ ಅನ್ನು ಹೊಂದಿರುತ್ತದೆ. ಅದು ಬಳಕೆದಾರರು ಏನು ಮಾಡಬೇಕು ಎಂದು ತಿಳಿಸುತ್ತದೆ. ಬಳಕೆದಾರರು ಅನಂತರ ‘ದಣಿದ’, ‘ಹೃದಯ’ ಮತ್ತು ‘ವ್ಯಾಯಾಮ’ ದಂತಹ ಪದಗಳನ್ನು ಒಳಗೊಂಡಿರುವ ಒಂದು ಪದದ ಪ್ರತಿಕ್ರಿಯೆಗಳೊಂದಿಗೆ ಉತ್ತರಿಸ ಬೇಕು.


ಜನರು ತಮ್ಮ ಸ್ಮಾರ್ಟ್ ಫೋನ್‌ಗಳಲ್ಲಿ ಇಂಗ್ಲಿಷ್ ಸಂವಹನವನ್ನು ವೃದ್ಧಿಸಿಕೊಳ್ಳಲು ಗೂಗಲ್ ತನ್ನ ಎಐ ಆಲಿಸುವ ಕೌಶಲ್ಯಗಳನ್ನು 2023ರ ಅಕ್ಟೋಬರ್ ನಲ್ಲಿ ಹೊರತಂದಿದೆ. ಮೊದಲು ಮಾತನಾಡುವ ವಾಕ್ಯಗಳ ಕುರಿತು ಮಾತ್ರ ಪ್ರತಿಕ್ರಿಯೆಯನ್ನು ಒದಗಿಸುತಿತ್ತು. ಈಗ, ಬಳಕೆದಾರರು ತಾವು ಕಲಿಯುತ್ತಿರುವ ಭಾಷೆಯಲ್ಲಿ ನಡೆಯುತ್ತಿರುವ ಸಂಭಾಷಣೆಗಳನ್ನು ಅಭ್ಯಾಸ ಮಾಡಬಹುದು.


ಇಂಗ್ಲಿಷ್ ಟ್ಯೂಟರಿಂಗ್

ಇದಲ್ಲದೇ ಗೂಗಲ್ ಕಳೆದ ವರ್ಷ ಹೊಸ ಡ್ಯುಯೊಲಿಂಗೋ ನಂತಹ ಇಂಗ್ಲಿಷ್ ಟ್ಯೂಟರಿಂಗ್ ವೈಶಿಷ್ಟ್ಯವನ್ನು ಪರಿಚಯಿಸಿತ್ತು. ಅದು ಜನರು ತಮ್ಮ ಇಂಗ್ಲಿಷ್ ಮಾತನಾಡುವ ಕೌಶಲ್ಯಗಳನ್ನು ಅಭ್ಯಾಸ ಮಾಡಲು ಮತ್ತು ಸುಧಾರಿಸಲು ಸಹಾಯ ಮಾಡಿತು. ಮಾತನಾಡುವ ಅಭ್ಯಾಸ ಕಾರ್ಯವು ಇದನ್ನು ಒಳಗೊಂದು ನಿರ್ಮಿಸಲಾಗಿದೆ.

ಹೇಗೆ ಅಭ್ಯಾಸ ಮಾಡುವುದು?

ಹೊಸ ಮಾತನಾಡುವ ಅಭ್ಯಾಸ ವೈಶಿಷ್ಟ್ಯವನ್ನು ಬಳಸಲು ಸ್ಮಾರ್ಟ್ ಫೋನ್ ಅಥವಾ ಲ್ಯಾಪ್ ಟಾಪ್ ನಲ್ಲಿ ಗೂಗಲ್ ಅಪ್ಲಿಕೇಶನ್ ತೆರೆಯಿರಿ ಮತ್ತು ಮೇಲಿನ ಎಡ ಮೂಲೆಯಲ್ಲಿರುವ ಲ್ಯಾಬ್ಸ್ ಐಕಾನ್ ಮೇಲೆ ಟ್ಯಾಪ್ ಮಾಡಿ. ಇಲ್ಲಿ, ನಿಮ್ಮ ಖಾತೆಯಲ್ಲಿ ಲಭ್ಯವಿರುವ ಹೊಸ ವೈಶಿಷ್ಟ್ಯವನ್ನು ನೋಡಬಹುದು.

ಎರಡು ಅತ್ಯಂತ ಜನಪ್ರಿಯ ಭಾಷಾ-ಕಲಿಕೆಯ ಅಪ್ಲಿಕೇಶನ್‌ಗಳಾದ ಡ್ಯುಯೊಲಿಂಗೋ ಮತ್ತು ಬಾಬೆಲ್‌ಗಳಂತಹವುಗಳನ್ನು ಗ್ರಾಹಕರಿಗೆ ಪರಿಚಯಿಸಲು ಗೂಗಲ್ ಬಯಸುತ್ತಿರುವಂತೆ ತೋರುತ್ತಿದೆ. ಈಗಿನಂತೆ ಗೂಗಲ್ ಈ ಪ್ರಾಯೋಗಿಕ ವೈಶಿಷ್ಟ್ಯವನ್ನು ಹೆಚ್ಚಿನ ಪ್ರದೇಶಗಳಿಗೆ ತರಲು ಯೋಜಿಸುತ್ತಿದೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.

Continue Reading

ತಂತ್ರಜ್ಞಾನ

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Deep Fakes Report: ಲೋಕಸಭಾ ಚುನಾವಣೆ, ಇಂಡಿಯನ್ ಪ್ರೀಮಿಯರ್ ಲೀಗ್ ನಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವವರು ಹೆಚ್ಚಾಗಿ ಡೀಪ್‌ಫೇಕ್‌ಗಳಿಗೆ ಒಳಗಾಗಿದ್ದಾರೆ. ಇದರ ನೈಜ್ಯ ಅಂಕಿ ಅಂಶಗಳು ಮತ್ತಷ್ಟು ಹೆಚ್ಚಿರಬಹುದು ಎಂದು ಕಂಪ್ಯೂಟರ್ ಭದ್ರತಾ ಕಂಪೆನಿ ಮ್ಯಾಕ್‌ಅಫೀ ತಿಳಿಸಿದೆ.

VISTARANEWS.COM


on

By

deepfake
Koo

ನವದೆಹಲಿ: ಭಾರತೀಯರಲ್ಲಿ (indian’s) ಶೇ. 75ರಷ್ಟು ಮಂದಿ ಡೀಪ್‌ಫೇಕ್‌ (Deep Fakes) ಪಿಡುಗಿಗೆ ಒಳಗಾಗಿದ್ದು, ಶೇಕಡಾ 22ರಷ್ಟು ಮಂದಿಗೆ ಮಾತ್ರ ಇದು ಗಮನಕ್ಕೆ ಬಂದಿದೆ. ತಮ್ಮ ಡೀಪ್ ಫೇಕ್ ಮಾಡಿರುವ ವಿಡಿಯೋ, ಚಿತ್ರ ಅಥವಾ ರೆಕಾರ್ಡಿಂಗ್ ಅನ್ನು ಕೆಲವರು ಮಾತ್ರ ನೋಡಿ ಅದರ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಕಂಪ್ಯೂಟರ್ ಭದ್ರತಾ ಕಂಪನಿ (Computer security company) ಮ್ಯಾಕ್‌ಅಫೀಯ (McAfee) ಸಂಶೋಧನೆಗಳು ತಿಳಿಸಿದೆ.

ಲೋಕಸಭಾ ಚುನಾವಣೆ (lok sabha election), ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವವರು ಹೆಚ್ಚಾಗಿ ಡೀಪ್‌ಫೇಕ್‌ಗಳಿಗೆ ಒಳಗಾಗಿದ್ದಾರೆ. ಇವರ ನೈಜ್ಯ ಪ್ರಮಾಣ ಮತ್ತಷ್ಟು ಹೆಚ್ಚಾಗಿರಬಹುದು. ಅನೇಕ ಭಾರತೀಯರಿಗೆ ನಿಜ ಮತ್ತು ನಕಲಿ ಏನೆಂದು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಗಳ ಬಗ್ಗೆ ಹೆಚ್ಚಿನವರಿಗೆ ಅರಿವಿಲ್ಲ. ಹೀಗಾಗಿ ಈ ರೀತಿ ಆಗಿದೆ ಎನ್ನಲಾಗಿದೆ.

ಶೇ. 22ರಷ್ಟು ಮಾತ್ರ ಬಹಿರಂಗ

ಕೃತಕ ಬುದ್ಧಿಮತ್ತೆಯ ಪ್ರಭಾವ ಮತ್ತು ಗ್ರಾಹಕರ ದೈನಂದಿನ ಜೀವನದಲ್ಲಿ ಡೀಪ್‌ಫೇಕ್‌ಗಳ ಹೆಚ್ಚಳವನ್ನು ಕಂಡುಹಿಡಿಯಲು 2024 ರ ಆರಂಭದಲ್ಲಿ ಸಂಶೋಧನೆಯನ್ನು ನಡೆಸಲಾಯಿತು. ಈ ಸಮೀಕ್ಷೆಯ ಸಮಯದಲ್ಲಿ, ಸುಮಾರು 1ರಲ್ಲಿ 4 ಭಾರತೀಯರು ಅಂದರೆ ಸರಿಸುಮಾರು ಶೇ. 22ರಷ್ಟು ಮಂದಿ ಇತ್ತೀಚೆಗೆ ನಕಲಿ ಎಂದು ಕಂಡುಹಿಡಿದ ವಿಡಿಯೋಗಳನ್ನು ನೋಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?


ವರ್ಷದಿಂದ ಹೆಚ್ಚಾಗಿದೆ ಕಾಳಜಿ

ಒಂದು ವರ್ಷದಲ್ಲಿ 10ರಲ್ಲಿ 8 ಮಂದಿ, ಅಂದರೆ ಸರಿ ಸುಮಾರು ಶೇ. 80ರಷ್ಟು ಮಂದಿ ಇದ್ದಕ್ಕಿಂತ ಡೀಪ್‌ಫೇಕ್‌ಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ.

ಅರ್ಧಕ್ಕಿಂತ ಹೆಚ್ಚು ಜನರಲ್ಲಿ ಶೇ. 64ರಷ್ಟು ಮಂದಿಗೆ ಕೃತಕ ಬುದ್ಧಿಮತ್ತೆಯ ಆನ್‌ಲೈನ್ ಸ್ಕ್ಯಾಮ್‌ಗಳನ್ನು ಗುರುತಿಸಲು ಕಷ್ಟಕರವಾಗಿದೆ ಎಂದು ಹೇಳುತ್ತಾರೆ. ಆದರೆ ಸುಮಾರು ಶೇ. 30ರಷ್ಟು ಮಂದಿ ಕೃತಕ ಬುದ್ಧಿಮತ್ತೆಯೊಂದಿಗೆ ರಚಿಸಲಾದ ಧ್ವನಿ ಮೇಲ್ ಅಥವಾ ಧ್ವನಿ ಟಿಪ್ಪಣಿಯನ್ನು ಹಂಚಿಕೊಂಡರೆ ಮಾತ್ರ ನಕಲಿ ಎಂದು ಗುರುತಿಸಬಹುದು ಎಂದು ಹೇಳಿದ್ದಾರೆ.


ಶೇ. 75ರಷ್ಟು ಮಂದಿಗೆ ಗೊತ್ತಾಗಿದೆ

ಮ್ಯಾಕ್‌ಅಫೀಯ ಪ್ರಕಾರ ಕಳೆದ 12 ತಿಂಗಳುಗಳಲ್ಲಿ ಶೇ. 75ರಷ್ಟು ಮಂದಿ ತಾವು ಡೀಪ್‌ಫೇಕ್ ವಿಷಯವನ್ನು ನೋಡಿದ್ದೇವೆ ಎಂದು ಹೇಳುತ್ತಾರೆ. ಶೇ. 38ರಷ್ಟು ಮಂದಿ ಡೀಪ್‌ಫೇಕ್ ಹಗರಣವನ್ನು ಎದುರಿಸಿದ್ದಾರೆ.

ಶೇ. 57ರಷ್ಟು ಸೆಲೆಬ್ರಿಟಿಗಳು

ಡೀಪ್‌ಫೇಕ್ ವಂಚನೆಗೆ ಒಳಗಾದವರಲ್ಲಿ 57 ಪ್ರತಿಶತದಷ್ಟು ಸೆಲೆಬ್ರಿಟಿಗಳಾಗಿದ್ದಾರೆ. ವಿಡಿಯೋ ಚಿತ್ರ ಅಥವಾ ಆಡಿಯೋವನ್ನು ನೋಡಿ ಅದು ನಿಜವೆಂದು ಭಾವಿಸಿ ಶೇ. 31 ರಷ್ಟು ಮಂದಿ ಹಣವನ್ನು ಕಳೆದುಕೊಂಡಿದ್ದಾರೆ. ಶೇ. 40ರಷ್ಟು ಮಂದಿ ಜನರು ತಮ್ಮ ಧ್ವನಿಯನ್ನು ಕಾಪಿ ಮಾಡಲಾಗಿದೆ. ವೈಯಕ್ತಿಕ ಮಾಹಿತಿ ಅಥವಾ ಹಣದ ಲೆಕ್ಕವನ್ನು ಬಹಿರಂಗಪಡಿಸಲು ತಮಗೆ ತಿಳಿದಿರುವ ಯಾರನ್ನಾದರೂ ದಾರಿತಪ್ಪಿಸಲು ಬಳಸುತ್ತಾರೆ ಎಂದು ಕಂಡುಹಿಡಿಯಲಾಗಿದೆ. ಶೇ. 39ರಷ್ಟು ಜನರು ಕರೆ, ಧ್ವನಿಮೇಲ್ ಅಥವಾ ಧ್ವನಿ ಟಿಪ್ಪಣಿಯನ್ನು ಸ್ವೀಕರಿಸಿದ್ದಾರೆಂದು ವರದಿ ಮಾಡಿದ್ದಾರೆ.

ಡೀಪ್‌ಫೇಕ್‌ ಅಪಾಯ

ಡೀಪ್‌ಫೇಕ್‌ ನಿಂದಾಗುವ ಅಪಾಯಗಳ ಬಗ್ಗೆ ಕೇಳಿದಾಗ ಶೇ. 55ರಷ್ಟು ಮಂದಿ ಸೈಬರ್‌ ವಂಚನೆಗೆ ಒಳಗಾಗುತ್ತಾರೆ ಎಂದು ಹೇಳಿದರು. ಶೇ. 52ರಷ್ಟು ಮಂದಿ ನಕಲಿ ಅಶ್ಲೀಲ ವಿಷಯವನ್ನು ರಚಿಸುತ್ತಿರುವುದಾಗಿ ಹೇಳಿದರು. ಶೇ. 37 ರಷ್ಟು ಮಂದಿ ಮಾಧ್ಯಮದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ದುರ್ಬಲಗೊಳಿಸಿರುವುದಾಗಿ ತಿಳಿಸಿದ್ದಾರೆ. ಶೇ.31ರಷ್ಟು ಮಂದಿ ಚುನಾವಣೆಯ ಮೇಲೆ ಪ್ರಭಾವ ಬೀರುವುದಾಗಿ ಹೇಳಿದ್ದು, ಶೇ.27ರಷ್ಟು ಮಂದಿ ಐತಿಹಾಸಿಕ ಸತ್ಯಗಳನ್ನು ತಿರುಚುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ದೇಶ

WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

Whatsapp: ಎನ್‌ಕ್ರಿಪ್ಶನ್‌ ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತ ತೊರೆಯುತ್ತೇವೆ ಎಂಬುದಾಗಿ ದೆಹಲಿ ಹೈಕೋರ್ಟ್‌ಗೆ ವಾಟ್ಸ್‌ಆ್ಯಪ್‌ ಪರ ವಕೀಲರು ತಿಳಿಸಿದ್ದಾರೆ. ಜನರು ತಾವು ಕಳುಹಿಸುವ ಮೆಸೇಜ್‌ಗೆ ಸುರಕ್ಷತೆ ಇದೆ, ಬೇರೆ ಯಾರೂ ಓದುವುದಿಲ್ಲ ಎಂಬ ಕಾರಣಕ್ಕಾಗಿ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಅದಕ್ಕೆ ಧಕ್ಕೆಯಾದರೆ ಭಾರತದಲ್ಲಿ ಇರಲ್ಲ ಎಂದು ವಾಟ್ಸ್‌ಆ್ಯಪ್‌ ತಿಳಿಸಿದೆ.

VISTARANEWS.COM


on

Whatsapp
Koo

ನವದೆಹಲಿ: ಭಾರತದಲ್ಲಿ ಕೋಟ್ಯಂತರ ಜನ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಟೆಲಿಗ್ರಾಮ್ ಸೇರಿ ಹಲವು ಮೆಸೇಜಿಂಗ್‌ ಆ್ಯಪ್‌ಗಳು ಇದ್ದರೂ ವಾಟ್ಸ್‌ಆ್ಯಪ್‌‌ (WhatsApp) ಹೆಚ್ಚು ಜನಪ್ರಿಯವಾಗಿದೆ. ಮೆಸೇಜ್‌, ಫೋಟೊ, ವಿಡಿಯೊಗಳನ್ನು ಕಳುಹಿಸುವ ಜತೆಗೆ ವಾಟ್ಸ್‌ಆ್ಯಪ್‌ ಸ್ಟೇಟಸ್‌ ಕೂಡ ಜನರ ಮನಸೆಳೆದಿದೆ. ಆದರೆ, ಇಷ್ಟೊಂದು ಖ್ಯಾತಿ, ಜನಪ್ರಿಯತೆ ಗಳಿಸಿರುವ ವಾಟ್ಸ್‌ಆ್ಯಪ್‌, “ನಾವು ಭಾರತದಿಂದ ಹೊರಹೋಗುತ್ತೇವೆ” ಎಂದು ದೆಹಲಿ ಹೈಕೋರ್ಟ್‌ಗೆ (Delhi High Court) ತಿಳಿಸಿದೆ. ಇದು, ಕೇಂದ್ರ ಸರ್ಕಾರ ಹಾಗೂ ವಾಟ್ಸ್‌ಆ್ಯಪ್‌ ನಡುವಿನ ಬಿಕ್ಕಟ್ಟಿನಿಂದಾಗಿ ನೀಡಿದ ಎಚ್ಚರಿಕೆಯಾಗಿದೆ.

“ಮೆಟಾ ಒಡೆತನದ ವಾಟ್ಸ್‌ಆ್ಯಪ್‌ನ ಎನ್‌ಕ್ರಿಪ್ಶನ್‌ (ಎಂಡ್-ಟು-ಎಂಡ್‌ ಎನ್‌ಕ್ರಿಪ್ಶನ್‌- ಯಾವುದೇ ವ್ಯಕ್ತಿ ಇನ್ನೊಬ್ಬನಿಗೆ ಕಳುಹಿಸುವ ಮೆಸೇಜ್‌ಅನ್ನು ಬೇರೆಯವರು ನೋಡಲು ಆಗದಿರುವ ಸುರಕ್ಷತಾ ವ್ಯವಸ್ಥೆ) ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತದಿಂದಲೇ ಹೊರಹೋಗುತ್ತೇವೆ. ಜನರು ತಾವು ಕಳುಹಿಸಿದ ಮೆಸೇಜ್‌ಅನ್ನು ಬೇರೆಯವರು ಓದುವುದಿಲ್ಲ, ಖಾಸಗಿತನಕ್ಕೆ ಧಕ್ಕೆಯಾಗುವುದಿಲ್ಲ ಎಂಬ ಕಾರಣಕ್ಕಾಗಿಯೇ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಹಾಗಾಗಿ, ಎನ್‌ಕ್ರಿಪ್ಶನ್‌ಗೆ ಧಕ್ಕೆಯಾದರೆ ನಾವು ಭಾರತದಲ್ಲಿ ಮುಂದುವರಿಯುವುದಿಲ್ಲ” ಎಂಬುದಾಗಿ ವಾಟ್ಸ್‌ಆ್ಯಪ್‌ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಸಾಧಿಸುವ, ಅದರಲ್ಲೂ ವಾಟ್ಸ್‌ಆ್ಯಪ್‌ ಚಾಟ್‌ಗಳ ಮೇಲೆ ನಿಗಾ ಇರಿಸುವ ಕುರಿತು ಕೇಂದ್ರ ಸರ್ಕಾರ 2021ರಲ್ಲಿ ಜಾರಿಗೆ ತಂದ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ವಾಟ್ಸ್‌ಆ್ಯಪ್‌ ದೆಹಲಿ ಹೈಕೋರ್ಟ್‌ ಮೊರೆ ಹೋಗಿದೆ. ಅರ್ಜಿಯ ವಿಚಾರಣೆ ವೇಳೆ ವಾಟ್ಸ್‌ಆ್ಯಪ್‌ ಪರ ವಕೀಲ ತೇಜಸ್‌ ಕಾರಿಯಾ ವಾದ ಮಂಡಿಸಿದರು.

“ಸಾಮಾಜಿಕ ಜಾಲತಾಣವಾಗಿ ನಾವು ಹೇಳುತ್ತಿದ್ದೇವೆ. ಎನ್‌ಕ್ರಿಪ್ಶನ್‌ ಬೇಡ ಎಂದು ಹೇಳಿದರೆ, ಭಾರತದಲ್ಲಿ ವಾಟ್ಸ್‌ಆ್ಯಪ್‌ ಇರುವುದಿಲ್ಲ. ನಾವು ಒಂದು ಪ್ರಕ್ರಿಯೆಯನ್ನು ಪಾಲಿಸಬೇಕಾಗುತ್ತದೆ. ಯಾವ ಸಂದೇಶವನ್ನು ಬಹಿರಂಗಪಡಿಸಬೇಕು ಎಂದು ಹೇಳುತ್ತಾರೋ ಗೊತ್ತಾಗುವುದಿಲ್ಲ. ಇದಕ್ಕಾಗಿ ನಾವು ವರ್ಷಗಳವರೆಗೆ ಕೋಟ್ಯಂತರ ಮೆಸೇಜ್‌ಗಳನ್ನು ಸ್ಟೋರ್‌ ಮಾಡಿ ಇಡಬೇಕಾಗುತ್ತದೆ” ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಹಾಗೂ ನ್ಯಾ.ಮನ್‌ಮೀತ್‌ ಪ್ರೀತಂ ಸಿಂಗ್‌ ಅರೋರಾ ಅವರಿದ್ದ ನ್ಯಾಯಪೀಠಕ್ಕೆ ತೇಜಸ್‌ ಕಾರಿಯಾ ತಿಳಿಸಿದರು.

ಮಾಹಿತಿ ತಂತ್ರಜ್ಞಾನ ನಿಯಮಗಳನ್ನು (2021) ಕೇಂದ್ರ ಸರ್ಕಾರವು 2021ರ ಫೆಬ್ರವರಿ 25ರಂದು ಜಾರಿಗೆ ತಂದಿದೆ. ಎಕ್ಸ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಹಾಗೂ ವಾಟ್ಸ್‌ಆ್ಯಪ್‌ನಂತಹ ಸಾಮಾಜಿಕ ಜಾಲತಾಣಗಳು ಹೊಸ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶಿಸಲಾಗಿದೆ. ಇದೇ ಕಾರಣಕ್ಕಾಗಿ, ಸಾಮಾಜಿಕ ಜಾಲತಾಣಗಳು ಪ್ರತಿ ತಿಂಗಳು, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಖಾತೆಗಳನ್ನು ರದ್ದುಗೊಳಿಸುತ್ತಿದೆ.

ಇದನ್ನೂ ಓದಿ: WhatsApp Update: ವಾಟ್ಸ್ ಆಪ್ ನಲ್ಲಿ ಮತ್ತೊಂದು ಹೊಸ ಫೀಚರ್! ಫೋಟೊ, ವಿಡಿಯೊ ಶೇರಿಂಗ್ ಇನ್ನೂ ಸುಲಭ

Continue Reading
Advertisement
Narendra Modi
ಕರ್ನಾಟಕ8 mins ago

Narendra Modi: ಇಂದು ರಾತ್ರಿಯೇ ರಾಜ್ಯಕ್ಕೆ ಮೋದಿ ಆಗಮನ; ನಾಳೆಯಿಂದ ಅಬ್ಬರದ ಪ್ರಚಾರ, ವಿವರ ಇಲ್ಲಿದೆ

Namma Metro
ಬೆಂಗಳೂರು11 mins ago

Namma Metro: ಟಿಸಿಎಸ್‌ ಮ್ಯಾರಥಾನ್‌ ಹಿನ್ನೆಲೆ ಭಾನುವಾರ ಮುಂಜಾನೆ 3.35ರಿಂದಲೇ ಮೆಟ್ರೋ ರೈಲು ಸೇವೆ

ipl 2024
ಕ್ರೀಡೆ13 mins ago

IPL 2024 : ಪಂದ್ಯದ ನಡುವೆ ಮೈದಾನದಲ್ಲೇ ಗಾಳಿಪಟ ಹಾರಿಸಿದ ಪಂತ್​, ರೋಹಿತ್! ಇಲ್ಲಿದೆ ವಿಡಿಯೊ

Viral News
ವೈರಲ್ ನ್ಯೂಸ್29 mins ago

Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

WhatsApp color
ತಂತ್ರಜ್ಞಾನ38 mins ago

WhatsApp colour: ವಾಟ್ಸ್ಆ್ಯಪ್​ನ ಬಣ್ಣ ಬದಲಾಗಿದ್ದು ಯಾಕೆ? ಏನಿದರ ಗುಟ್ಟು?

Traffic Restrictions
ಬೆಂಗಳೂರು54 mins ago

Traffic Restrictions: ಟಿಸಿಎಸ್‌ ವರ್ಲ್ಡ್ 10ಕೆ ಮ್ಯಾರಥಾನ್; ನಾಳೆ ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

karnataka weather Forecast
ಮಳೆ1 hour ago

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Home Remedy For Cracked Heels
ಆರೋಗ್ಯ1 hour ago

Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

IPL 2024
ಕ್ರೀಡೆ1 hour ago

IPL 2024 : ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಸಿಎಸ್​ಕೆ?

Ujjwal Nikam
ದೇಶ1 hour ago

Ujjwal Nikam: ಪ್ರಮೋದ್‌ ಮಹಾಜನ್‌ ಪುತ್ರಿಗೆ ಕೊಕ್‌, ಮುಂಬೈ ದಾಳಿ ವಕೀಲನಿಗೆ ಬಿಜೆಪಿ ಟಿಕೆಟ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20243 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ7 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ14 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌