Geyser Blast: ಬಾಂಬ್‌‌ನಂತೆ ಬ್ಲಾಸ್ಟ್ ಆಗಬಹುದು ಗೀಸರ್! ಮಳೆಗಾಲದಲ್ಲಿ ಈ ಮುನ್ನೆಚ್ಚರಿಕೆ ಇರಲಿ - Vistara News

ತಂತ್ರಜ್ಞಾನ

Geyser Blast: ಬಾಂಬ್‌‌ನಂತೆ ಬ್ಲಾಸ್ಟ್ ಆಗಬಹುದು ಗೀಸರ್! ಮಳೆಗಾಲದಲ್ಲಿ ಈ ಮುನ್ನೆಚ್ಚರಿಕೆ ಇರಲಿ

ಕೆಲವೊಮ್ಮೆ ಗೀಸರ್ ಬಾಂಬ್‌ನಂತೆ (Geyser Blast) ಸ್ಫೋಟಿಸಿದ ಘಟನೆ ನಡೆದಿದ್ದಿದೆ. ಹೀಗಾಗಿ ಮಳೆಗಾಲದಲ್ಲಿ ಗೀಸರ್ ಕುರಿತು ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ನಾವು ಮಾಡುವ ಒಂದು ಸಣ್ಣ ತಪ್ಪು ಗೀಸರ್ ಸ್ಫೋಟಕ್ಕೆ ಕಾರಣವಾಗಬಹುದು. ಗೀಸರ್ ಹಾನಿಗೊಳಗಾಗಲು ಅಥವಾ ಸ್ಫೋಟಗೊಳ್ಳಲು ಕಾರಣಗಳು ಮತ್ತು ನಾವು ಮಾಡಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Geyser Blast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಳೆ ಬಂದಾಗ (rainy season) ವಿದ್ಯುತ್ ಶಾರ್ಟ್ ಸರ್ಕ್ಯೂಟ್ (electric short circuit ) ಅಪಾಯ ಹೆಚ್ಚಾಗಿರುತ್ತದೆ. ಹೀಗಾಗಿ ಮನೆಯಲ್ಲಿರುವ ಪ್ರತಿಯೊಂದು ಎಲೆಕ್ಟ್ರಾನಿಕ್ ವಸ್ತುಗಳು ಅದರಲ್ಲೂ ಮುಖ್ಯವಾಗಿ ಎಸಿ, ಗೀಸರ್ ಗಳ ಬಗ್ಗೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಗೀಸರ್ ಸ್ಫೋಟ (Geyser Blast) ಉಂಟಾಗುವ ಘಟನೆಗಳು ನಡೆಯುತ್ತಿದ್ದು, ಮುನ್ನೆಚ್ಚರಿಕೆ ವಹಿಸದೆ ಇದ್ದರೆ ಜೀವಕ್ಕೆ ಅಪಾಯ ಉಂಟಾಗಬಹುದು.

ಕರ್ನಾಟಕ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಋತುವಿನಲ್ಲಿ ತೊಟ್ಟಿಯಲ್ಲಿ ಸಂಗ್ರಹಿಸಿಟ್ಟ ನೀರು ತುಂಬಾ ತಂಪಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಅನೇಕ ಜನರು ಮಳೆಗಾಲದಲ್ಲಿ ಗೀಸರ್ ಆನ್ ಮಾಡಲು ಯೋಚಿಸುತ್ತಾರೆ. ಆದರೆ ಮಳೆಯ ಕಾರಣದಿಂದ ಗೀಸರ್ ಅನ್ನು ಆನ್ ಮಾಡುವುದು ತುಂಬಾ ಅಪಾಯಕಾರಿ.

ಗೀಸರ್ ಬಾಂಬ್‌ನಂತೆ ಸ್ಫೋಟಗೊಳ್ಳುತ್ತದೆ. ಹೀಗಾಗಿ ಮಳೆಗಾಲದಲ್ಲಿ ಕೆಲವೊಂದು ತಪ್ಪುಗಳನ್ನು ಮಾಡಬಾರದು. ನಾವು ಮಾಡುವ ಒಂದು ಸಣ್ಣ ತಪ್ಪು ಗೀಸರ್ ಸ್ಫೋಟಕ್ಕೆ ಕಾರಣವಾಗಬಹುದು. ಗೀಸರ್ ಹಾನಿಗೊಳಗಾಗಲು ಅಥವಾ ಸ್ಫೋಟಗೊಳ್ಳಲು ಕಾರಣಗಳು ಇಲ್ಲಿವೆ.

Geyser Blast
Geyser Blast


ಶಾರ್ಟ್ ಸರ್ಕ್ಯೂಟ್ ಅಪಾಯ

ಮಳೆಗಾಲದಲ್ಲಿ ವಾತಾವರಣದಲ್ಲಿ ತೇವಾಂಶವು ಹೆಚ್ಚಾಗಿರುತ್ತದೆ. ಇದು ಶಾರ್ಟ್ ಸರ್ಕ್ಯೂಟ್ ಅಪಾಯವನ್ನು ಹೆಚ್ಚಿಸುತ್ತದೆ. ವೈರಿಂಗ್ ಅಥವಾ ಗೀಸರ್ ಸಂಪರ್ಕದಲ್ಲಿ ಯಾವುದೇ ದೋಷವಿದ್ದರೆ, ಆರ್ದ್ರತೆಯಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಬಹುದು ಮತ್ತು ಬೆಂಕಿಯ ಅಪಾಯವೂ ಇದೆ.

ತುಕ್ಕಿನಿಂದ ಸಮಸ್ಯೆ

ಮಳೆಗಾಲದಲ್ಲಿ ತೇವಾಂಶದಿಂದಾಗಿ ಗೀಸರ್‌ನ ಲೋಹದ ಭಾಗಗಳು ತುಕ್ಕು ಹಿಡಿಯಬಹುದು. ಇದು ಗೀಸರ್‌ನ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ ಮತ್ತು ಅದರ ಕಾರ್ಯ ಸಾಮರ್ಥ್ಯದ ಮೇಲೂ ಪರಿಣಾಮ ಬೀರುತ್ತದೆ.

ವಿದ್ಯುತ್ ಬಳಕೆ

ಸಾಮಾನ್ಯವಾಗಿ ಮಳೆಗಾಲದಲ್ಲಿ ತಾಪಮಾನ ಕಡಿಮೆ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಗೀಸರ್ ನಿಂದ ಬಿಸಿ ನೀರು ಉತ್ಪಾದಿಸಲು ಹೆಚ್ಚಿನ ವಿದ್ಯುತ್ ಅಗತ್ಯವಿರುತ್ತದೆ. ವಿದ್ಯುತ್ ಪೂರೈಕೆಯಲ್ಲಿ ಉಂಟಾಗುವ ವ್ಯತ್ಯಾಸಗಳು ಗೀಸರ್ ಸ್ಫೋಟಕ್ಕೆ ಕಾರಣವಾಗುತ್ತದೆ.

ನೀರಿನ ಗುಣಮಟ್ಟ

ಮಳೆನೀರು ಸಾಮಾನ್ಯವಾಗಿ ಕಲ್ಮಶಗಳನ್ನು ಹೊಂದಿರುತ್ತದೆ. ಇದು ಗೀಸರ್ ಒಳಗೆ ಸಂಗ್ರಹಗೊಳ್ಳುತ್ತದೆ ಮತ್ತು ಅದರ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ.

Geyser Blast
Geyser Blast


ಎಚ್ಚರಿಕೆ ವಹಿಸುವುದು ಹೇಗೆ?

ಗೀಸರ್‌ನ ವೈರಿಂಗ್ ಸರಿಯಾಗಿ ಮಾಡಲಾಗಿದೆಯೇ ಮತ್ತು ಅದರಲ್ಲಿ ಯಾವುದೇ ದೋಷವಿಲ್ಲ ಎಂದು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ: Samsung Galaxy: ಸ್ಯಾಮ್‌ಸಂಗ್‌ನಿಂದ ಗ್ಯಾಲಕ್ಸಿ ವಾಚ್7, ಗ್ಯಾಲಕ್ಸಿ ವಾಚ್ ಅಲ್ಟ್ರಾ, ಬಡ್ಸ್ 3 ಸರಣಿ ಬಿಡುಗಡೆ

ಗೀಸರ್ ಅನ್ನು ನಿಯಮಿತವಾಗಿ ಸ್ವಚ್ಛಗೊಳಿಸುತ್ತಿರಿ. ಇದರಿಂದ ಅದು ತುಕ್ಕು ಹಿಡಿಯುವುದಿಲ್ಲ ಮತ್ತು ಅದು ಉತ್ತಮವಾಗಿ ಕಾರ್ಯವನ್ನು ನಿರ್ವಹಿಸುತ್ತದೆ.

ತುಕ್ಕು ಮತ್ತು ತೇವಾಂಶಕ್ಕೆ ಹೆಚ್ಚು ನಿರೋಧಕವಾಗಿರುವ ಉತ್ತಮ ಗುಣಮಟ್ಟದ ಗೀಸರ್ ಅನ್ನು ಖರೀದಿಸಿ.
ಗೀಸರ್ ಅನ್ನು ಓವರ್‌ಲೋಡ್ ಮಾಡಬೇಡಿ. ಏಕೆಂದರೆ ಇದು ಗೀಸರ್ ಅನ್ನು ಹಾನಿಗೊಳಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

4 ಲಕ್ಷ ಬೈಕ್‌, ಸ್ಕೂಟರ್‌ ಹಿಂಪಡೆಯಲು ಮುಂದಾದ ಸುಜುಕಿ ಇಂಡಿಯಾ; ಈ ಪಟ್ಟಿಯಲ್ಲಿ ನಿಮ್ಮ ವಾಹನವೂ ಇದ್ಯಾ? ಹೀಗೆ ಚೆಕ್‌ ಮಾಡಿ

Suzuki India: ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿ ಸುಜುಕಿ ಇಂಡಿಯಾ ಗ್ರಾಹಕರು ಈ ಸುದ್ದಿ ಓದಲೇಬೇಕು. ಕಂಪನಿ ಸುಮಾರು 4 ಲಕ್ಷಕ್ಕೂ ಹೆಚ್ಚು ಬೈಕ್‌ ಮತ್ತು ಸ್ಕೂಟರ್‌ಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಮುಂದಾಗಿದೆ. ಇಗ್ನಿಷನ್ ಕಾಯಿಲ್‌ಗೆ ಸಂಪರ್ಕ ಹೊಂದಿರುವ ಹೈ-ಟೆನ್ಶನ್ ಕಾರ್ಡ್‌ನಲ್ಲಿ ದೋಷ ಪತ್ತೆಯಾದ ಹಿನ್ನಲೆಯಲ್ಲಿ ಒಟ್ಟು 3,88,411 ದ್ವಿಚಕ್ರ ವಾಹನಗಳನ್ನು ತಪಾಸಣೆ ಮಾಡಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ವಾಹನವೂ ಇದ್ಯಾ ಎನ್ನುವುದನ್ನು ಪರಿಶೀಲಿಸಲು ಇಲ್ಲಿದೆ ಸುಲಭ ವಿಧಾನ.

VISTARANEWS.COM


on

Suzuki India
Koo

ನವದೆಹಲಿ: ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿ ಸುಜುಕಿ ಇಂಡಿಯಾ (Suzuki India) ಸುಮಾರು 4 ಲಕ್ಷಕ್ಕೂ ಹೆಚ್ಚು ಬೈಕ್‌ ಮತ್ತು ಸ್ಕೂಟರ್‌ಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಮುಂದಾಗಿದೆ. ಇಗ್ನಿಷನ್ ಕಾಯಿಲ್‌ಗೆ ಸಂಪರ್ಕ ಹೊಂದಿರುವ ಹೈ-ಟೆನ್ಶನ್ ಕಾರ್ಡ್‌ನಲ್ಲಿ ದೋಷ ಪತ್ತೆಯಾದ ಹಿನ್ನಲೆಯಲ್ಲಿ ಒಟ್ಟು 3,88,411 ದ್ವಿಚಕ್ರ ವಾಹನಗಳನ್ನು ತಪಾಸಣೆ ಮಾಡಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಂಪನಿ ತಿಳಿಸಿದೆ.

2022ರ ಏಪ್ರಿಲ್ 30 ಮತ್ತು 2022ರ ಡಿಸೆಂಬರ್ 3ರ ನಡುವೆ ತಯಾರಿಸಲಾದ, ಬಹು ಬೇಡಿಕೆಯ ಆಕ್ಸೆಸ್ 125, ಅವೆನಿಸ್ 125 ಮತ್ತು ಬರ್ಗ್‌ಮ್ಯಾನ್ ಸ್ಟ್ರೀಟ್ 125 (Access 125, Avenis 125, and Burgman Street 125) ಅನ್ನು ಹಿಂಪಡೆಯಲು ಕಂಪನಿ ಮುಂದಾಗಿದೆ ಎಂದು ವರದಿ ತಿಳಿಸಿದೆ. ಇನ್ನು ಬೈಕ್‌ಗಳ ಪೈಕಿ ಟೆಕ್-ಲೋಡೆಡ್ ವಿ-ಸ್ಟ್ರೋಮ್ 800 ಡಿಇ (V-Strom 800 DE) ಮಾಡೆಲ್‌ನಲ್ಲಿ ಕೂಡ ಇದೇ ಸಮಸ್ಯೆ ಕಂಡು ಬಂದಿದೆ. ಜತೆಗೆ ಹಿಂದಿನ ಟೈರ್‌ ವಿಚಾರದಲ್ಲಿ ಸಮಸ್ಯೆ ಇರುವ ಬಗ್ಗೆಯೂ ಕಂಪನಿ ಗಮನಿಸಿದೆ. ಬ್ರ್ಯಾಂಡ್ ಹಂಚಿಕೊಂಡ ವಿವರಗಳ ಪ್ರಕಾರ, ಟೈರ್ ಟ್ರೆಡ್‌ನ ಕೆಲವು ಭಾಗವು ಬೇರ್ಪಟ್ಟು ಅದರಲ್ಲಿ ಬಿರುಕುಗಳನ್ನು ಉಂಟು ಮಾಡಬಹುದು ಈ ಕಾರಣಕ್ಕೆ ವಿ-ಸ್ಟ್ರೋಮ್ 800 ಡಿಇ ಅನ್ನೂ ಪರಿಶೀಲನೆಗೆ ಒಳಪಡಿಸಲಾಗುತ್ತದೆ.

ಹೀಗೆ ಪರಿಶೀಲಿಸಿ

ಒಂದುವೇಳೆ ನೀವು ಖರೀದಿಸಿದ ವಾಹನ ಕಂಪನಿ ಹಿಂಪಡೆಯಲಿರುವ ಲಿಸ್ಟ್‌ನಲ್ಲಿದ್ದು ಅದನ್ನು ಹೇಗೆ ಕಂಡುಕೊಳ್ಳುವುದು ಎನ್ನುವ ಚಿಂತೆಯಲ್ಲಿದ್ದೀರಾ? ಪರಿಶೀಲಿಸಲು ಇಲ್ಲಿದೆ ಸುಲಭ ವಿಧಾನ. ನೀವು ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ವಾಹನದ ವಿಐಎನ್‌ (VIN) ನಮೂದಿಸಿ ನಿಮ್ಮ ವಾಹನದಲ್ಲಿಯೂ ಬದಲಾವಣೆಯ ಅವಶ್ಯಕತೆ ಇದೆಯೇ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಬಹುದಾಗಿದೆ.

ನಿಮ್ಮ ವಾಹನವನ್ನು ಚೆಕ್‌ ಮಾಡಲು ಇಲ್ಲಿ ಕ್ಲಿಕ್‌ ಮಾಡಿ (https://www.suzukimotorcycle.co.in/service-campaign)

ಅಪಾರ ಬೇಡಿಕೆ

ಸುಜುಕಿ ಇಂಡಿಯಾ ಸದ್ಯ ಸ್ಕೂಟರ್ ಮತ್ತು ಬೈಕ್ ವಿಭಾಗಗಳಲ್ಲಿ ಭಾರತದ ಗ್ರಾಹಕರ ಮನಸ್ಸು ಗೆದ್ದಿದೆ. ವ್ಯಾಪಕ ಶ್ರೇಣಿಯ ಉತ್ಪನ್ನಗಳನ್ನು ಹೊಂದಿದ್ದು ಪ್ರತಿಸ್ಪರ್ಧಿಗಳಿಗೆ ಸವಾಲೊಡ್ಡಿದೆ. ಈ ಪಟ್ಟಿಯಲ್ಲಿ ಸುಜುಕಿ ಆಕ್ಸೆಸ್ 125, ಸುಜುಕಿ ಬರ್ಗ್‌ಮ್ಯಾನ್ ಸ್ಟ್ರೀಟ್ ಮತ್ತು ಸುಜುಕಿ ಬರ್ಗ್‌ಮ್ಯಾನ್ ಸ್ಟ್ರೀಟ್ 125, ಸುಜುಕಿ ಕಟಾನಾ, ಸುಜುಕಿ ಜಿಕ್ಸರ್ ಎಸ್ಎಫ್, ಸುಜುಕಿ ಜಿಕ್ಸರ್ 250, ಸುಜುಕಿ ವಿ-ಸ್ಟ್ರೋಮ್ ಎಸ್ಎಕ್ಸ್, ಸುಜುಕಿ ಜಿಎಸ್ಎಕ್ಸ್-ಆರ್ 1000 ಆರ್‌ಗೆ ಅಪಾರ ಬೇಡಿಕೆ ಇದೆ.

ಕಂಪನಿ ಹೇಳಿದ್ದೇನು?

ಎಂಜಿನ್ ಸ್ಥಗಿತ, ಸ್ಟಾರ್ಟ್ ಮಾಡುವಾಗ ಕಂಡುಬರುವ ತೊಂದರೆ, ದೋಷಪೂರಿತ ಸ್ಪೀಡೋಮೀಟರ್‌ಗಳ ಬಗ್ಗೆ ಗ್ರಹಾಕರು ದೂರು ಸಲ್ಲಿಸಿರುವ ಹಿನ್ನಲೆಯಲ್ಲಿ ವಾಹನಗಳನ್ನು ಹಿಂಪಡೆಯಲಾಗುತ್ತಿದೆ. ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕೃತ ಸುಜುಕಿ ಸೇವಾ ಕೇಂದ್ರಗಳಲ್ಲಿ ತಮ್ಮ ವಾಹನಗಳನ್ನು ದುರಸ್ತಿ ಪಡಿಸಬೇಕು ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ: Royal Enfield Guerrilla 450 : ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಖರೀದಿ ಮಾಡಲು ಐದು ಕಾರಣ ಇಲ್ಲಿದೆ

Continue Reading

ಗ್ಯಾಜೆಟ್ಸ್

Apple iPhones: ಆ್ಯಪಲ್‌ ಬ್ರ್ಯಾಂಡ್‌ ಪ್ರಿಯರಿಗೆ ಗುಡ್‌ನ್ಯೂಸ್;‌ ಐಫೋನ್‌ಗಳ ಬೆಲೆಯಲ್ಲಿ ಗಣನೀಯ ಇಳಿಕೆ

ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024 ರಲ್ಲಿ ಮೊಬೈಲ್ ಫೋನ್‌ಗಳ ಮೂಲ ಕಸ್ಟಮ್ಸ್ ಸುಂಕವನ್ನು ಶೇ.20 ರಿಂದ 15ರಷ್ಟು ಇಳಿಕೆ ಮಾಡಿರುವುದಾಗಿ ಘೋಷಣೆ ಮಾಡಿದ ಬಳಿಕ ಆ್ಯಪಲ್‌ (Apple iPhones) ಈ ಬಾರಿ ಪ್ರೊ ಮಾಡೆಲ್‌ಗಳ ಬೆಲೆಗಳನ್ನು ಕಡಿಮೆ ಮಾಡಿದೆ.

VISTARANEWS.COM


on

By

Apple iPhones
Koo

ನವದೆಹಲಿ: ಆ್ಯಪಲ್‌ ತನ್ನ ಎಲ್ಲ ಮಾದರಿಗಳ ಐಫೋನ್‌ಗಳ (Apple iPhones) ಬೆಲೆಗಳನ್ನು ಶೇ. 3- 4ರಷ್ಟು ಕಡಿತಗೊಳಿಸಿದೆ. ಇದರಿಂದ ಗ್ರಾಹಕರು ಪ್ರೊ ಅಥವಾ ಪ್ರೊ ಮ್ಯಾಕ್ಸ್ ಮಾದರಿ ಮೇಲೆ 5,100 ರಿಂದ 6,000 ರೂ. ವರೆಗೆ (Apple cut prices) ಉಳಿಸಬಹುದಾಗಿದೆ. ಐಫೋನ್ 13, 14 ಮತ್ತು 15 ಸೇರಿದಂತೆ ಇನ್ನು ಕೆಲವು ಮಾದರಿಯ ಐಫೋನ್‌ಗಳು ಮೇಲೆ 300 ರೂ. ಮತ್ತು ಐಫೋನ್ ಎಸ್‌ಇ 2,300 ರೂ. ಕಡಿತ ಮಾಡಲಾಗಿದೆ ಎಂದು ಕಂಪೆನಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಆ್ಯಪಲ್‌ ತನ್ನ ಪ್ರೊ ಮಾದರಿಗಳಿಗೆ (Pro models) ಬೆಲೆಗಳನ್ನು ಕಡಿಮೆ ಮಾಡಿದೆ. ಹೊಸ ಪ್ರೊ ಮಾದರಿಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ ಅನಂತರ ಕಂಪೆನಿಯು ಹಳೆಯ ಪ್ರೊ ಮಾದರಿಗಳನ್ನು ನಿಲ್ಲಿಸುತ್ತದೆ. ಹಳೆಯ ಪ್ರೊ ಮಾಡೆಲ್‌ಗಳ ದಾಸ್ತಾನುಗಳನ್ನು ಮಾತ್ರ ವಿತರಕರು ಮತ್ತು ಮರುಮಾರಾಟಗಾರರ ಮೂಲಕ ರಿಯಾಯಿತಿ ದರದಲ್ಲಿ ತೆರವು ಮಾಡಲಾಗುತ್ತದೆ. ಹೀಗಾಗಿ ಪ್ರೊ ಮಾದರಿಗಳ ಗರಿಷ್ಠ ಚಿಲ್ಲರೆ ಮಾರಾಟದ ಬೆಲೆಯನ್ನು (MRP) ಇಲ್ಲಿ ಕಡಿಮೆ ಮಾಡಲಾಗಿಲ್ಲ.

ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024 ರಲ್ಲಿ ಮೊಬೈಲ್ ಫೋನ್‌ಗಳ ಮೂಲ ಕಸ್ಟಮ್ಸ್ ಸುಂಕವನ್ನು ಶೇ.20 ರಿಂದ 15ರಷ್ಟು ಇಳಿಕೆ ಮಾಡಿರುವುದಾಗಿ ಘೋಷಣೆ ಮಾಡಿದ ಬಳಿಕ ಆ್ಯಪಲ್‌ ಈ ಬಾರಿ ಪ್ರೊ ಮಾಡೆಲ್‌ಗಳ ಬೆಲೆಗಳನ್ನು ಕಡಿಮೆ ಮಾಡಿದೆ. ಮೊಬೈಲ್ ಫೋನ್‌ಗಳ ಹೊರತಾಗಿ ಮೊಬೈಲ್ ಫೋನ್ ಚಾರ್ಜರ್‌ಗಳಿಗೆ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ ಜೋಡಣೆ ಕಸ್ಟಮ್ಸ್ ಸುಂಕವನ್ನು ಕಡಿತಗೊಳಿಸಲಾಗಿದೆ.

Apple iPhones
Apple iPhones


ಪ್ರಸ್ತುತ, ಭಾರತದಲ್ಲಿ ಮಾರಾಟವಾಗುವ ಆಮದು ಮಾಡಿದ ಸ್ಮಾರ್ಟ್‌ಫೋನ್‌ಗಳು ಶೇ. 18ರಷ್ಟು ಜಿಎಸ್‌ಟಿ ಮತ್ತು ಶೇ. 22ರಷ್ಟು ಕಸ್ಟಮ್ಸ್ ಸುಂಕವನ್ನು ಪಾವತಿಸಬೇಕಾಗುತ್ತದೆ. ಇದರಲ್ಲಿ ಹೆಚ್ಚುವರಿ ಶುಲ್ಕ, ಮೂಲ ಕಸ್ಟಮ್ಸ್ ಸುಂಕ ಕಳೆದು ಶೇ. 10ರಷ್ಟುಉಳಿಯುತ್ತದೆ. ಬಜೆಟ್ ಕಡಿತದ ಅನಂತರ ಒಟ್ಟು ಕಸ್ಟಮ್ಸ್ ಸುಂಕವು ಶೇ. 16.5ರಷ್ಟಾಗಿರುತ್ತದೆ. ಇದರಲ್ಲಿ ಶೇ. 15% ಮೂಲ ಮತ್ತು ಶೇ. 1.5 ಹೆಚ್ಚುವರಿ ಶುಲ್ಕ ಸೇರಿದೆ. ಭಾರತದಲ್ಲಿ ತಯಾರಿಸಿದ ಫೋನ್‌ಗಳಿಗೆ ಕೇವಲ ಶೇ. 18ರಷ್ಟು ಜಿಎಸ್ ಟಿ ವಿಧಿಸಲಾಗುತ್ತದೆ.

ಇದನ್ನೂ ಓದಿ: Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಪ್ರಸ್ತುತ ಭಾರತದಲ್ಲಿ ಮಾರಾಟವಾಗುವ ಶೇ.99ರಷ್ಟು ಆ್ಯಪಲ್‌ನ ಮೊಬೈಲ್ ಫೋನ್‌ಗಳನ್ನು ಸ್ಥಳೀಯವಾಗಿ ತಯಾರಿಸಲಾಗುತ್ತದೆ. ಆದರೆ ಆಯ್ದ ಉನ್ನತ ಮಟ್ಟದ ಮಾದರಿಗಳನ್ನು ಮಾತ್ರ ಆಮದು ಮಾಡಿಕೊಳ್ಳಲಾಗುತ್ತದೆ.

Continue Reading

ವಾಣಿಜ್ಯ

Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

Jio Air Fiber: ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಂದ ಹಾಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್ಡದಾದ ಗೃಹ ಬ್ರಾಡ್ ಬ್ಯಾಂಡ್ ಹಾಗೂ ಮನರಂಜನಾ ಸೇವೆಯನ್ನು ಒದಗಿಸುತ್ತಿರುವ ಸಂಸ್ಥೆಯಾಗಿದೆ. ಏನು ಈ ಕೊಡುಗೆ ಎಂಬ ವಿವರ ಇಲ್ಲಿದೆ.

VISTARANEWS.COM


on

Jio announced 30 Percent discount on Freedom Offer for Air Fiber new customers
Koo

ಮುಂಬೈ: ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ “ಫ್ರೀಡಂ ಆಫರ್” ಶೇಕಡಾ 30ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿದೆ. ಅಂದ ಹಾಗೆ ಜಿಯೋ ಫೈಬರ್ ಅಥವಾ ಏರ್ ಫೈಬರ್ ಎಂಬುದು ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್ಡದಾದ ಗೃಹ ಬ್ರಾಡ್ ಬ್ಯಾಂಡ್ ಹಾಗೂ ಮನರಂಜನಾ ಸೇವೆಯನ್ನು ಒದಗಿಸುತ್ತಿರುವ (Jio Air Fiber) ಸಂಸ್ಥೆಯಾಗಿದೆ.

1.2 ಕೋಟಿ ಮನೆಗಳೊಂದಿಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ಭಾರತೀಯರ ಮನೆಗಳನ್ನು ಇನ್ನಷ್ಟು ವೇಗವಾಗಿ ಡಿಜಿಟೈಸ್ ಮಾಡುವ ಉದ್ದೇಶದಿಂದ ಮತ್ತು ಭಾರತವನ್ನು ಡಿಜಿಟಲ್ ಸಮುದಾಯವಾಗಿ ಮಾರ್ಪಡಿಸುವ ಉದ್ದೇಶದಿಂದ ಜಿಯೋದಿಂದ ಈ ಭರವಸೆಯ ಕೊಡುಗೆಯನ್ನು ಘೋಷಣೆ ಮಾಡಲಾಗಿದೆ. ಇದರಿಂದಾಗಿ ಇನ್ನಷ್ಟು ಮನೆಗಳಲ್ಲಿ ಈ ಸಂಪರ್ಕ ಪಡೆಯುವುದಕ್ಕೆ ಉತ್ತೇಜನ ದೊರೆಯುತ್ತದೆ. ಈಗಾಗಲೇ ಕೈಗೆಟುಕುವ ಬೆಲೆಯಲ್ಲಿ ಇರುವ ಜಿಯೋಏರ್ ಫೈಬರ್ ಪ್ಲಾನ್‌ಗಳ ಜತೆಗೆ ಶೇಕಡಾ 30ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ಕಂಪನಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Paris Olympics India schedule: ಒಲಿಂಪಿಕ್ಸ್​ನಲ್ಲಿ ನಾಳೆ ಭಾರತ ಯಾವೆಲ್ಲ ವಿಭಾಗದಲ್ಲಿ ಸ್ಪರ್ಧಿಸಲಿದೆ?; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಈ ಫ್ರೀಡಂ ಆಫರ್ ಜತೆಗೆ ಹೊಸ ಜಿಯೋಏರ್ ಫೈಬರ್ ಬಳಕೆದಾರರು ಶೇ 30ರಷ್ಟು ರಿಯಾಯಿತಿಯನ್ನು ಹೊಸ ಸಂಪರ್ಕವನ್ನು 1000 ರೂಪಾಯಿಯ ಇನ್‌ಸ್ಟಲೇಷನ್ ಶುಲ್ಕದ ಮನ್ನಾದ ಮೂಲಕ ಪಡೆಯುತ್ತಾರೆ. ಇದು ಸೀಮಿತ ಅವಧಿಯ ಕೊಡುಗೆ ಆಗಿದ್ದು, ಜುಲೈ 26ರಿಂದ ಆಗಸ್ಟ್ 15ನೇ ತಾರೀಕಿನ ಮಧ್ಯೆ ಇರುತ್ತದೆ.

ಜಿಯೋಏರ್ ಫೈಬರ್ ಸಂಪರ್ಕ ಪಡೆಯುವುದು ಹೇಗೆ?

ಇನ್ನು ಜಿಯೋಏರ್ ಫೈಬರ್ ಸಂಪರ್ಕ ಪಡೆಯುವುದು ಹೇಗೆ ಎಂಬ ಪ್ರಶ್ನೆ ಇದೆಯಾ? ಅದು ಬಹಳ ಸರಳ. Jio.com ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ನಿಮಗಿರುವ ಆಸಕ್ತಿಯನ್ನು ತಿಳಿಸಿ ಅಥವಾ 60008-60008 ಈ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ. ಜಿಯೋದಿಂದ ಸ್ಥಿರ ನಿಸ್ತಂತು (ವೈರ್ಲೆಸ್) ಕೊಡುಗೆ ಏರ್ ಫೈಬರ್ ಅನ್ನು ಕಳೆದ ವರ್ಷ ಗಣೇಶ ಚತುರ್ಥಿಗೆ ಪರಿಚಯಿಸಲಾಯಿತು.

ಜಿಯೋದಿಂದ 5ಜಿ ಸ್ಟ್ಯಾಂಡ್ ಅಲೋನ್ ಸಂಪರ್ಕ ಸೇವೆಗಳನ್ನು ನಿಯೋಜಿಸಲಾಗಿದೆ. 5ಜಿ ಸ್ಥಿರ ನಿಸ್ತಂತು ಸಂಪರ್ಕವನ್ನು ಒದಗಿಸುವುದಕ್ಕೆ ಮೀಸಲಿಟ್ಟ ನೆಟ್‌ವರ್ಕ್ ಬಳಕೆ ಮಾಡುತ್ತಿದೆ. ನೆಟ್‌ವರ್ಕ್ ಇಕ್ಕಟ್ಟಾಗುವುದನ್ನು ನಿರ್ವಹಿಸುವುದಕ್ಕೆ ಇದರಿಂದ ಸಹಾಯ ಆಗುತ್ತದೆ. ಆದರೂ ಏರ್‌ಫೈಬರ್‌ನ ಸರಾಸರಿ ಬಳಕೆದಾರರು ಒಂದು ತಿಂಗಳಿಗೆ 400 ಜಿಬಿ ಡೇಟಾ ಬಳಸುತ್ತಾರೆ.

ಏನಿದು ಜಿಯೋ ಏರ್ ಫೈಬರ್?

ಯಾವುದೇ ತಂತಿ ಇಲ್ಲದೆ ಫೈಬರ್ ರೀತಿ ವೇಗವನ್ನು ಗಾಳಿಯ ಮೂಲಕವೇ ಒದಗಿಸುತ್ತದೆ ಏರ್ ಫೈಬರ್. ಬಳಕೆದಾರರು ಪ್ಲಗ್ ಹಾಕಿ, ಆನ್ ಮಾಡಿದರೆ ಆಯಿತು. ಇಷ್ಟು ಮಾಡಿದಲ್ಲಿ ತಮ್ಮ ಮನೆಯಲ್ಲಿ ವೈಯಕ್ತಿಕವಾಗಿ ಹಾಟ್‌ಸ್ಪಾಟ್ ಅನ್ನು ತಮ್ಮ ಮನೆಯಲ್ಲಿ ಇರಿಸಿಕೊಂಡಂತಾಗುತ್ತದೆ.

ಇದನ್ನೂ ಓದಿ: Rain in Karnataka: ಬೆಳಗಾವಿಯಲ್ಲಿ ನಗರದೊಳಗೆ ಬಂದ ನದಿಗಳು, ಮನೆ ಖಾಲಿ ಮಾಡಿದ ಜನ

ಜಿಯೋಫೈಬರ್ ಸ್ಥಿರ ನಿಸ್ತಂತು ಸಂಪರ್ಕ ಪರಿಹಾರವಾಗಿದ್ದು, ಇದರಿಂದ ಯಾವುದೇ ಅಡೆತಡೆಯಿಲ್ಲದೆ 1 ಜಿಬಿಪಿಎಸ್ ತನಕದ ಹೈ- ಸ್ಪೀಡ್ ಸಂಪರ್ಕ ಮನೆ ಮತ್ತು ಕಚೇರಿಗಳಿಗೆ ದೊರೆಯುತ್ತದೆ. ಏಕಕಾಲಕ್ಕೆ ಹಲವು ಸಾಧನಗಳನ್ನು ಬಳಸಬಹುದು. ಸ್ಮಾರ್ಟ್‌ ಫೋನ್, ಪರ್ಸನಲ್ ಕಂಪ್ಯೂಟರ್‌ಗಳು, ಟ್ಯಾಬ್ಲೆಟ್, ಸ್ಮಾರ್ಟ್ ಟಿವಿಗಳು, ಮತ್ತು ಇದರ ಜತೆಗೆ ಸೆಟ್ ಟಾಪ್ ಬಾಕ್ಸ್‌ಗಳನ್ನು ಸಹ ಏಕಕಾಲಕ್ಕೆ ಸಂಪರ್ಕ ಕೊಡಬಹುದು, ಅದು ಕೂಡ ಇಂಟರ್‌ನೆಟ್ ವೇಗದಲ್ಲಿ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲದಂತೆ ಸಾಧ್ಯವಾಗುತ್ತದೆ.

Continue Reading

ಆಟೋಮೊಬೈಲ್

Nissan SUV X-TRAIL : ನಿಸ್ಸಾನ್ ನ ಹೊಚ್ಚ ಹೊಸ 4 ಜನರೇಷನ್ ಪ್ರೀಮಿಯಂ ಅರ್ಬನ್ ಎಸ್‌ಯುವಿ ಎಕ್ಸ್-ಟ್ರಯಲ್ ಬಿಡುಗಡೆ

Nissan SUV X-TRAIL : ನಿಸ್ಸಾನ್ ಈ ಎಸ್‌ಯುವಿ ಅನ್ನು ಈಗಾಗಲೇ ಜಾಗತಿಕವಾಗಿ ಬಿಡುಗಡೆ ಮಾಡಿದ್ದು, ನಿಸ್ಸಾನ್ ಎಕ್ಸ್-ಟ್ರಯಲ್ ಪ್ರಸ್ತುತ 150ಕ್ಕೂ ಹೆಚ್ಚು ಮಾರುಕಟ್ಟೆಗಳಲ್ಲಿ ಲಭ್ಯವಿದೆ. ವಿಶೇಷ ಎಂದರೆ ಈಗಾಗಲೇ ವಿಶ್ವದಾದ್ಯಂತ ಈ ಕಾರಿನ 7.8 ಮಿಲಿಯನ್ ಯುನಿಟ್ ಗಳು ಮಾರಾಟವಾಗಿವೆ. 2023ನೇ ವರ್ಷದಲ್ಲಿ ಜಾಗತಿಕವಾಗಿ ಮಾರಾಟವಾಗಿರುವ ಟಾಪ್ 5 ಎಸ್‌ಯುವಿಗಳಲ್ಲಿ ಇದೂ ಕೂಡ ಒಂದಾಗಿದೆ.

VISTARANEWS.COM


on

Nissan SUV X-TRAIL
Koo

ಬೆಂಗಳೂರು: ನಿಸ್ಸಾನ್ ಮೋಟಾರ್ ಇಂಡಿಯಾ ಇಂದು ಹೊಚ್ಚ ಹೊಸ ಮೇಡ್ ಇನ್ ಜಪಾನ್ 4 ಜನರೇಷನ್ ಪ್ರೀಮಿಯಂ ಅರ್ಬನ್‌ ಎಸ್‌ಯುವಿ ನಿಸ್ಸಾನ್‌ ಎಕ್ಸ್-ಟ್ರಯಲ್ (Nissan SUV X-TRAIL) ಅನ್ನು ಬಿಡುಗಡೆ ಮಾಡಿದೆ. ಇದು 7 ಸೀಟರ್ ಎಸ್‌ಯುವಿ ಆಗಿದ್ದು, ಜುಲೈ 26ರಿಂದ ರೂ.1 ಲಕ್ಷ ನೀಡಿ ಬುಕ್ ಬುಕ್ ಮಾಡಬಹುದಾಗಿದೆ. ಆಗಸ್ಟ್ ನಲ್ಲಿ ಎಕ್ಸ್ ಟ್ರಯಲ್ ಡೆಲಿವರಿ ಆರಭವಾಗಲಿದೆ.

ನಿಸ್ಸಾನ್ ಈ ಎಸ್‌ಯುವಿ ಅನ್ನು ಈಗಾಗಲೇ ಜಾಗತಿಕವಾಗಿ ಬಿಡುಗಡೆ ಮಾಡಿದ್ದು, ನಿಸ್ಸಾನ್ ಎಕ್ಸ್-ಟ್ರಯಲ್ ಪ್ರಸ್ತುತ 150ಕ್ಕೂ ಹೆಚ್ಚು ಮಾರುಕಟ್ಟೆಗಳಲ್ಲಿ ಲಭ್ಯವಿದೆ. ವಿಶೇಷ ಎಂದರೆ ಈಗಾಗಲೇ ವಿಶ್ವದಾದ್ಯಂತ ಈ ಕಾರಿನ 7.8 ಮಿಲಿಯನ್ ಯುನಿಟ್ ಗಳು ಮಾರಾಟವಾಗಿವೆ. 2023ನೇ ವರ್ಷದಲ್ಲಿ ಜಾಗತಿಕವಾಗಿ ಮಾರಾಟವಾಗಿರುವ ಟಾಪ್ 5 ಎಸ್‌ಯುವಿಗಳಲ್ಲಿ ಇದೂ ಕೂಡ ಒಂದಾಗಿದೆ.

ನಿಸಾನ್ ತನ್ನ ಜಾಗತಿಕ ಉತ್ಪನ್ನಗಳನ್ನು ಮತ್ತು ತಂತ್ರಜ್ಞಾನವನ್ನು ಭಾರತಕ್ಕೆ ಒದಗಿಸುವ ಉದ್ದೇಶವನ್ನು ಹೊಂದಿದ್ದು, ಅದರ ಆರಂಭಿಕ ಹೆಜ್ಜೆಯಾಗಿ ಎಕ್ಸ್ ಟ್ರಯಲ್ ಬಿಡುಗಡೆ ಆಗಿದೆ. ಈ ಮೂಲಕ ಕಂಪನಿಯು ತನ್ನ ಸಿಬಿಯು ಬಿಸಿನೆಸ್ ಅನ್ನು ಮರು ಆರಂಭಿಸುವುದಾಗಿ ಘೋಷಿಸಿದೆ.

ಎಂಜಿನ್ ಪವರ್​

ಈ ಮೇಡ್ ಇನ್ ಜಪಾನ್ 4ನೇ ಜನರೇಷನ್ ನ ನಿಸ್ಸಾನ್‌ಎಕ್ಸ್-ಟ್ರಯಲ್ ವಿಶ್ವದ ಮೊತ್ತ ಮೊದಲ ಪ್ರೊಡಕ್ಷನ್ ವೇರಿಯೇಬಲ್ ಕಂಪ್ರೆಷನ್-ಟರ್ಬೊ ಎಂಜಿನ್‌ ಅನ್ನು ಹೊಂದಿದೆ. ಇದರ ಅತ್ಯಾಧುನಿಕ ಡಿಎನ್ಎ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವನ್ನು ಹೊಂದಿದ್ದು, ಅದರಿಂದ ಟಾರ್ಕ್ ಅಸಿಸ್ಟ್, ಹೆಚ್ಚುವರಿ ಐಡಲ್-ಸ್ಟಾಪ್, ಕ್ವಿಕ್ ರೀಸ್ಟಾರ್ಟ್ ಮತ್ತು ಸುಧಾರಿತ ಮೈಲೇಜ್​ ಇತ್ಯಾದಿ ಸೌಕರ್ಯಗಳು ದೊರೆಯಲಿವೆ.

ಎಕ್ಸ್-ಟ್ರಯಲ್ 1.5ಲೀ ಪೆಟ್ರೋಲ್ ವೇರಿಯೇಬಲ್ ಕಂಪ್ರೆಷನ್- ಟರ್ಬೊ ಎಂಜಿನ್ ಹೊಂದಿದೆ. ಇದರ ಮೈಲ್ಡ್ ಹೈಬ್ರಿಡ್ 2ಡಬ್ಲ್ಯೂಡಿ ಎಂಜಿನ್‌ ಜೊತೆಗೆ 3 ಜೆನ್ ಎಕ್ಸ್‌ ಟ್ರಾನಿಕ್ ಸಿವಿಟಿ ಪವರ್‌ಟ್ರೇನ್‌ ಅನ್ನು ಸಂಯೋಜಿಸಲಾಗಿದೆ. ಈ ಎಂಜಿನ್ 163ಪಿಎಸ್ ಮತ್ತು 300ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಆಕರ್ಷಕ ಸೀಟ್​​​ಗಳು

ಎಕ್ಸ್-ಟ್ರಯಲ್ ವಿಶಾಲವಾದ ಜಾಗ ಹೊಂದಿದೆ. 7- ಸೀಟರ್ ವಿನ್ಯಾಸದಲ್ಲಿ ಲಭ್ಯವಿರುವ ಈ ಕಾರಿನ 2ನೇ ಮತ್ತು 3 ನೇ ಸಾಲಿನ ಆಸನಗಳಿಗೆ ಸುಲಭವಾಗಿ ಪ್ರವೇಶಿಸಲು/ಅಲ್ಲಿಂದ ಹೊರಹೋಗಲು ವಿಶೇಷವಾದ 85-ಡಿಗ್ರಿ ರೇರ್ ಡೋರ್ ಓಪನಿಂಗ್ ಅನುಕೂಲ ಒದಗಿಸಲಾಗಿದೆ. ಜಪಾನಿ ಶೈಲಿಯ ವಿನ್ಯಾಸ ಹೊಂದಿರುವ ಈ ಕಾರು ಸುಂದರವಾದ ಎಕ್ಸ್ ಟೀರಿಯರ್ ಮತ್ತು ಇಂಟೀರಿಯರ್ ಅನ್ನು ಹೊಂದಿದೆ. ಇ-ಶಿಫ್ಟರ್, ಡ್ರೈವ್ ಮೋಡ್ ಸೆಲೆಕ್ಟರ್ ಮತ್ತು ಟ್ವಿನ್ ಕಪ್ ಹೋಲ್ಡರ್‌ಗಳು, ಹಾಗೆಯೇ ಸ್ಮಾರ್ಟ್‌ಫೋನ್‌ಗಳಿಗಾಗಿ 15w ವೈರ್‌ಲೆಸ್ ಚಾರ್ಜ್ ಪ್ಯಾಡ್ ಅನ್ನು ಕಾರು ಒಳಗೊಂಡಿದೆ. ಮುಂಭಾಗದ ಸೀಟಿನಲ್ಲಿ ಕುಳಿತುಕೊಳ್ಳುವವರಿಗೆ ಆರ್ಮ್​ರೆಸ್ಟ್​ ಇದೆ. ಬೆಲೆಬಾಳುವ ವಸ್ತುಗಳನ್ನು ಇಡಲು ಸ್ಟೋರೇಜ್ ಸ್ಪೇಸ್ ನೀಡಲಾಗಿದೆ. ಸೈಡಿನಲ್ಲಿ ಹಿಂದಿನ ಸೀಟಿನ ಪ್ರಯಾಣಿಕರಿಗೆ ವಸ್ತು ಗಳನ್ನು ಇಡಬಹುದಾದ ಸ್ಥಳಗಳನ್ನು ನೀಡಲಾಗಿದೆ. ಪ್ಯಾನೋರಮಿಕ್ ಸನ್‌ರೂಫ್ ಸೌಕರ್ಯ ಹೊಂದಿದ್ದು, ಇದರ 3ನೇ ಸಾಲಿನ ಸೀಟನ್ನು ಮಡಿಸಿದರೆ ಒಟ್ಟು 585 ಲೀಟರ್‌ಗಳಷ್ಟು ಸಾಮರ್ಥ್ಯದ ಲಗೇಜ್ ಜಾಗ ಸಿಗುತ್ತದೆ. ಎಕ್ಸ್‌ಟ್ರಯಲ್‌ ಹೈ-ಡೆಫಿನಿಷನ್, ಸಂಪೂರ್ಣ ಎಲೆಕ್ಟ್ರಾನಿಕ್ 31.2ಸೆಂಮೀನ ಟಿ ಎಫ್ ಟಿ ಮಲ್ಟಿ-ಇನ್ಫರ್ಮೇಷನ್ ಸ್ಕ್ರೀನ್ ಹೊಂದಿದೆ.

ಇದನ್ನೂ ಓದಿ: Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್

7 ಏರ್‌ಬ್ಯಾಗ್‌ಗಳು, ಅರೌಂಡ್ ವ್ಯೂ ಮಾನಿಟರ್ (ಎವಿಎಂ) ಜೊತೆಗೆ ಮೂವಿಂಗ್ ಆಬ್ಜೆಕ್ಟ್ ಡಿಟೆಕ್ಷನ್ (ಎಂಓಡಿ), ಬ್ರೇಕ್ ಲಿಮಿಟೆಡ್ ಸ್ಲಿಪ್ ಡಿಫರೆನ್ಷಿಯಲ್ (ಬಿಎಲ್ಎಸ್ಡಿ(, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್‌ (ಇ ಎಸ್ ಸಿ), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್(ಟಿಸಿಎಸ್), ಹಿಲ್ ಸ್ಟಾರ್ಟ್ ಅಸಿಸ್ಟ್ (ಎಚ್ಎಸ್ಎ), ಎಬಿಡಿ ಜೊತೆಗೆ ಎಬಿಎಸ್, ಫ್ರಂಟ್ ಆಂಡ್ ರೇರ್ ಪಾರ್ಕಿಂಗ್ ಸೆನ್ಸರ್ ಗಳು ಮತ್ತು 4 ವೀಲ್ ಡಿಸ್ಕ್ ಬ್ರೇಕ್ ಗಳು ಮುಂತಾದ ಹಲವಾರು ಸುರಕ್ಷತಾ ಫೀಚರ್ ಗಳಿವೆ.

ಹೊಸ ಎಕ್ಸ್-ಟ್ರಯಲ್ ನಲ್ಲಿ ಲಭ್ಯವಿರುವ 12ವಿ ಎಎಲ್ಐಎಸ್ (ಸುಧಾರಿತ ಲೀಥಿಯಂ ಐಯಾನ್ ಬ್ಯಾಟರಿ ಸಿಸ್ಟಮ್) ಮೈಲ್ಡ್ ಹೈಬ್ರಿಡ್ ಸಿಸ್ಟಮ್, ಟಾರ್ಕ್ ಅಸಿಸ್ಟ್, ಹೆಚ್ಚುವರಿ ಐಡಲ್ ಸ್ಟಾಪ್, ಕ್ವಿಕ್ ರೀಸ್ಟಾರ್ಟ್ ಮತ್ತು ಕೋಸ್ಟಿಂಗ್ ಸ್ಟಾಪ್ ಫೀಚರ್ ಒದಗಿಸುತ್ತದೆ.

ಎಕ್ಸ್-ಟ್ರಯಲ್ ಷಾಂಪೇನ್ ಸಿಲ್ವರ್, ಪರ್ಲ್ ವೈಟ್ ಮತ್ತು ಡೈಮಂಡ್ ಬ್ಲ್ಯಾಕ್ ಎಂಬ ಮೂರು ಸೊಗಸಾದ ಬಣ್ಣಗಳಲ್ಲಿ ಲಭ್ಯವಿದೆ. ಬುಕಿಂಗ್‌ಗಳು ಜುಲೈ 26 ರಂದು ರಾಷ್ಟ್ರಾದ್ಯಂತ ಇರುವ ನಿಸ್ಸಾನ್ ಡೀಲರ್‌ಶಿಪ್‌ಗಳು ಮತ್ತು ನಿಸ್ಸಾನ್‌ನ ವೆಬ್‌ಸೈಟ್ ನಲ್ಲಿ https://book.Nissan.in/ ನಲ್ಲಿ ಪ್ರಾರಂಭವಾಗುತ್ತಿದೆ. ಎಕ್ಸ್-ಟ್ರಯಲ್ ಗಾಗಿ ಬುಕಿಂಗ್ ಮೊತ್ತ ರೂ. 100,000 ಆಗಿದೆ ಮತ್ತು ವಾಹನದ ಡೆಲಿವರಿ 2024ರ ಆಗಸ್ಟ್ ನಲ್ಲಿ ರಿಂದ ಪ್ರಾರಂಭವಾಗುತ್ತದೆ.

ನಿಸ್ಸಾನ್ ಇಂಡಿಯಾ ಆಪರೇಷನ್ಸ್ ಪ್ರೆಸಿಡೆಂಟ್ ಮತ್ತು ಎಎಂಐಇಓ ರೀಜನ್ ಬಿಸಿನೆಸ್ ಟ್ರಾನ್ಸ್‌ ಫಾರ್ಮೇಶನ್ ನ ಡಿವಿಷನಲ್ ವೈಸ್ ಪ್ರೆಸಿಡೆಂಟ್ ಫ್ರಾಂಕ್ ಟೊರೆಸ್, ನಿಸ್ಸಾನ್ ಮೋಟಾರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೌರಭ್ ವತ್ಸಾ ಹರ್ಷ ವ್ಯಕ್ತ ಪಡಿಸಿದ್ದಾರೆ.

Continue Reading
Advertisement
Sexual Harassment
ಪ್ರಮುಖ ಸುದ್ದಿ3 mins ago

Sexual Harassment : ರಿಕ್ಷಾದಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಚಾಲಕ

Viral Video
ವೈರಲ್ ನ್ಯೂಸ್8 mins ago

Viral Video: ಶೇ. 100ರಷ್ಟು ಆದಾಯ ತೆರಿಗೆಯನ್ನು ಹೀಗೂ ಉಳಿಸಬಹುದಂತೆ ನೋಡಿ!

Union Budget 2024
ಕರ್ನಾಟಕ12 mins ago

Union Budget 2024: ವಾರ್ಷಿಕ 7.5 ಲಕ್ಷ ವೇತನ ಪಡೆಯುವವರಿಗೆ ಯಾವುದೇ ತೆರಿಗೆ ಇಲ್ಲ: ನಿರ್ಮಲಾ ಸೀತಾರಾಮನ್

Paris Olympics Badminton
ಕ್ರೀಡೆ13 mins ago

Paris Olympics Badminton: ಗೆಲುವಿನ ಶುಭಾರಂಭ ಮಾಡಿದ ಪಿ.ವಿ. ಸಿಂಧು

Health Tips
ಪ್ರಮುಖ ಸುದ್ದಿ13 mins ago

Health Tips : ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ 5 ವಿಧದ ಸೂಪ್ ಸೇವಿಸಿ

Naveen Sajju debuts movie titled first look out
ಸಿನಿಮಾ25 mins ago

Naveen Sajju: ಗುಡ್‌ ನ್ಯೂಸ್‌ ಕೊಟ್ಟ ʻಚುಕ್ಕಿತಾರೆ ಸೀರಿಯಲ್‌ʼ ನಟ ನವೀನ್‌ ಸಜ್ಜು: ಶುಭ ಕೋರಿದ ಫ್ಯಾನ್ಸ್‌!

Assault case
ಚಿಕ್ಕೋಡಿ34 mins ago

Assault Case : ಠಾಣೆಗೆ ಬಂದ ಮಹಿಳೆಗೆ ಜಾಡಿಸಿ ಒದ್ದ ಖಡಕಲಾಟ ಪಿಎಸ್‌ಐ!

Mann Ki Baat
ದೇಶ36 mins ago

Mann Ki Baat: ಪ್ಯಾರಿಸ್ ಒಲಿಂಪಿಕ್ಸ್​: ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ʼಮನ್​ ಕಿ ಬಾತ್​ʼನಲ್ಲಿ ಮೋದಿ ಕರೆ

valmiki corporation scam satyanarayana varma
ಕ್ರೈಂ38 mins ago

Valmiki Corporation Scam: 10 ಕೆಜಿ ಚಿನ್ನದ ಗಟ್ಟಿ ಮನೆಯಲ್ಲಿಟ್ಟಿದ್ದ ವಾಲ್ಮೀಕಿ ನಿಗಮ ಹಗರಣದ ಆರೋಪಿ! ಇನ್ನೂ 5 ಕಿಲೋ ಗಾಯಬ್

ಕ್ರೀಡೆ43 mins ago

Paris Olympics boxing: ಎದುರಾಳಿಗೆ ಪವರ್​ ಪಂಚ್​ ನೀಡಿ ಪ್ರೀ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟ ಬಾಕ್ಸರ್ ಪ್ರೀತಿ ಪವಾರ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ19 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ24 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

ಟ್ರೆಂಡಿಂಗ್‌