Kantara Cinema : ಕಾಂತಾರ ಚಾಪ್ಟರ್​ 1 ಟೀಸರ್​ಗೆ ವಾಹ್​ ಎಂದ ಗೂಗಲ್ - Vistara News

ತಂತ್ರಜ್ಞಾನ

Kantara Cinema : ಕಾಂತಾರ ಚಾಪ್ಟರ್​ 1 ಟೀಸರ್​ಗೆ ವಾಹ್​ ಎಂದ ಗೂಗಲ್

Kanatara Cinema : ಕಾಂತಾರ ಚಾಪ್ಟರ್​-1 ಸಿನಿಮಾದ ಫಸ್ಟ್​ ಲುಕ್​ ನವೆಂಬರ್​ 27ರಂದು ಅನಾವರಣಗೊಂಡಿತ್ತು.

VISTARANEWS.COM


on

Kantara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಿಷಭ್​ ಶೆಟ್ಟಿ ನಿರ್ದೇಶನದ ಮತ್ತು ಹೊಂಬಾಳೆ ಫೀಲ್ಮ್ಸ್​ ನಿರ್ಮಾಣದ ಕಾಂತಾರ ಚಾಪ್ಟರ್ 1 ಸಿನಿಮಾದ ಟೀಸರ್​ ಸೋಮವಾರ (ನವೆಂಬರ್​ 27) ಅನಾವರಣಗೊಂಡಿತ್ತು. ಮೊದಲ ಕಾಂತಾರ ಸಿನಿಮಾದ ಸೂಪರ್​ ಹಿಟ್​ ಇತಿಹಾಸದ ಹಿನ್ನೆಲೆಯಲ್ಲಿ ಈ ವಿಡಿಯೊ ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆಗಳು ಇದ್ದವು. ಇದೀಗ ಎಲ್ಲರ ನಿರೀಕ್ಷೆಗಳನ್ನು ಮೀರಿ ಸಿನಿಮಾದ ಫಸ್ಟ್​ ಲುಕ್​ ಜನಮೆಚ್ಚುಗೆ ಗಳಿಸಿದೆ. ರಿಷಭ್​ ಅವರ ಲುಕ್​ ಹಾಗೂ ವಿಡಿಯೊ ನಿರ್ಮಾಣದ ಹಿಂದಿರುವ ಅದ್ಧೂರಿತನದ ಬಗ್ಗೆ ಶಹಬ್ಬಾಸ್​ಗಿರಿಗಳು ಬರುತ್ತಿವೆ. ಇದೀಗ ಅದೆಲ್ಲದಕ್ಕಿಂತ ಹೆಚ್ಚಾಗಿ ವಿಶ್ವದ ಅತಿ ದೊಡ್ಡ ಸರ್ಚ್ ಎಂಜಿನ್​ ಗೂಗಲ್​ ಕೂಡ ಕಾಂತಾರದ ಫಸ್ಟ್​ ಲುಕ್ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದು, ವಾಹ್​ ಎಂದು ಉದ್ಗಾರ ತೆಗೆದಿದೆ.

2024 ಹೆಚ್ಚು ರೋಮಾಂಚನಕಾರಿಯಾಗಿರಲಿದೆ. ಕಾಂತಾರ ಟೀಸರ್​ ಅನ್ನು ನೋಡಿದೆ. ವಾಹ್​ ಎಂದು ಹೇಳದಿರಲು ಸಾಧ್ಯವೇ ಇಲ್ಲ ಎಂದು ಗೂಗಲ್​ ಇಂಡಿಯಾ ತನ್ನ ಹುಡುಕಾಟದ (ಸರ್ಚ್​) ಪೇಜ್​ನಲ್ಲಿ ಬರೆದುಕೊಂಡಿದೆ. ಗೂಗಲ್ ಈ ರೀತಿ ಹೇಳುವುದಕ್ಕೊಂದು ಕಾರಣವಿದೆ. ಈ ಟೀಸರ್ ಬಿಡುಗಡೆಗೊಂಡ ಒಂದೇ ದಿನಲ್ಲಿ 77 ಲಕ್ಷಕ್ಕೂ ಅಧಿಕ ಮಂದಿ ಅದಕ್ಕಾಗಿ ಗೂಗಲ್​ನಲ್ಲಿ ಹುಡುಕಾಟ ನಡೆಸಿದ್ದಾರೆ. ಸರ್ಚ್​ ಎಂಜಿನ್ ಒಂದಕ್ಕೆ ಇಂಥ ಹುಡುಕಾಟಗಳು ದೊಡ್ಡ ಬೋನಸ್. ಹೀಗಾಗಿ ಗೂಗಲ್​ ಕಾಂತಾರದ ಜನಪ್ರಿಯತೆಯನ್ನು ಮೆಚ್ಚಿದೆ.

ಕಾಂತಾರ; ಚಾಪ್ಟರ್‌ 1 ಫಸ್ಟ್ ಲುಕ್‌ನಲ್ಲಿ ರಿಷಬ್ ಶೆಟ್ಟಿ ರೌದ್ರಾವತಾರ

ಕಾಂತಾರʼ ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ ಹಾಗೂ ನಟಿಸಿದ್ದ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಯಾವಾಗ ಎಂಬುದು ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಇದೀಗ ಡಿವೈನ್ಸ್‌ ಸ್ಟಾರ್‌ ತಮ್ಮ ರೌದ್ರಾವತಾರವನ್ನು ತೋರಿಸಿದ್ದಾರೆ. ಇಂಗ್ಲಿಷ್‌ನಲ್ಲಿಯೇ ಕಾಂತಾರ ಚಾಪ್ಟರ್‌ -1 ಲುಕ್ ಬಿಡುಗಡೆಯಾಗಿದೆ. ಪ್ರತಿಕ್ಷಣವು ದೈವಿಕ ಸ್ಪರ್ಶ ನೀಡುವಂತಹ ಹಿನ್ನೆಲೆ ಧ್ವನಿಯಲ್ಲಿ ತಮ್ಮ ಅವತಾರವನ್ನು ಬಹಿರಂಗಗೊಳಿಸಿದ್ದಾರೆ.

ಕೆಜಿಎಫ್ ಚಾಪ್ಟರ್ 2 (KGF Chapter 2) ಪ್ಯಾನ್-ಇಂಡಿಯಾ ಮಟ್ಟದಲ್ಲಿ ಹೇಗೆ ಖ್ಯಾತಿ ಗಳಿಸಿತೋ ಅದೇ ರೀತಿ ಕಾಂತಾರ 2 ಕೂಡ ಅಷ್ಟೇ ಎತ್ತರದ ನಿರೀಕ್ಷೆಯನ್ನು ಹೊತ್ತುಕೊಂಡಿದೆ. ಕಾಂತಾರ-2 ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಹಲವು ದಿನಗಳಿಂದ ಕಾದು ಕುಳಿತ್ತಿದ್ದರು. ಇದೀಗ ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಆಗಿದೆ.

ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ವಿಶ್ವಾದ್ಯಂತ ಸಿನಿಮಾ ಏಳು ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ. ಕಾಡುಬೆಟ್ಟು ಶಿವನ ತಂದೆಯ ರಹಸ್ಯ ರಿವೀಲ್ ಮಾಡಲು ಹೊರಟ್ಟಿದ್ದಾರೆ ರಿಷಬ್‌. 2024ಕ್ಕೆ ‘ಕಾಂತಾರ-1’ ಚಿತ್ರಮಂದಿರಗಳಿಗೆ ಬರಲಿದೆ.

ಇದನ್ನೂ ಓದಿ : ಕನ್ನಡ ಚಿತ್ರಗಳನ್ನು ನಿರಾಕರಿಸುತ್ತಿರುವ ಒಟಿಟಿ ವೇದಿಕೆಗಳು: ರಿಷಬ್ ಶೆಟ್ಟಿ ಆರೋಪ

ಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಿ ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ಈಗಾಗಲೇ ಕಾಂತಾರ 2 ಸಿನಿಮಾ ಕೆಲಸಗಳು ಭರದಿಂದ ಸಾಗಿದೆ. ವರದಿಗಳ ಪ್ರಕಾರ ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Isha Ambani: ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು. ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ ತಿಳಿಸಿದ್ದಾರೆ.

VISTARANEWS.COM


on

Participation of young women in science technology information and communication fields should be increased says Isha Ambani
Koo

ನವದೆಹಲಿ: ನಾಲ್ಕನೇ ಕೈಗಾರಿಕೆ ಕ್ರಾಂತಿಯಾದ ಈ ಡಿಜಿಟಲ್ ಯುಗದಲ್ಲಿ ಭಾರತ ದೇಶವು ವಿಶ್ವನಾಯಕ ಆಗಿ ಹೊರಹೊಮ್ಮಲು ಹೆಣ್ಣು ಮಕ್ಕಳನ್ನು ಮುಂದೆ ತರಬೇಕು. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ (Isha Ambani) ಅಭಿಪ್ರಾಯಪಟ್ಟರು.

ದೂರಸಂಪರ್ಕ ಇಲಾಖೆಯಿಂದ ಆಯೋಜಿಸಿದ್ದ ಗರ್ಲ್ಸ್ ಇನ್ ಐಸಿಟಿ ಇಂಡಿಯಾ– 2024 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು. ಇದಕ್ಕಾಗಿ ನಾವು ಇನ್ನೂ ಬಹಳ ದೂರ ಸಾಗಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

ಭಾರತ ಸರ್ಕಾರ, ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ (ದಕ್ಷಿಣ ಏಷ್ಯಾ), ಇನ್ನೋವೇಶನ್ ಸೆಂಟರ್ – ದೆಹಲಿ ಮತ್ತು ಇತರ ಯುಎನ್ ಏಜೆನ್ಸಿಗಳ ದೂರಸಂಪರ್ಕ ಇಲಾಖೆ ಜಂಟಿಯಾಗಿ ‘ಗರ್ಲ್ಸ್ ಇನ್ ಇನ್ಫರ್ಮೇಷನ್ ಅಂಡ್ ಕಮ್ಯುನಿಕೇಷನ್ ಟೆಕ್ನಾಲಜಿ (ಜಿಐಸಿಟಿ) ಇಂಡಿಯಾ – 2024’ ಅನ್ನು ಆಯೋಜಿಸಿವೆ.

ಇನ್ನು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಇಶಾ ಅಂಬಾನಿ, ಸರ್ಕಾರವು ಅಗತ್ಯ ಸುಧಾರಣೆಗಳನ್ನು ಮಾಡುತ್ತಿದೆ ಮತ್ತು ಅದರ ಫಲಿತಾಂಶಗಳು ಸಹ ಗೋಚರಿಸುತ್ತಿವೆ. ಕಳೆದ ಒಂದು ದಶಕದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರನ್ನು ಗಮನಿಸಿದರೆ ಮಹಿಳಾ ಪ್ರಾತಿನಿಧ್ಯವು ಶೇ. 6ರಷ್ಟು ಹೆಚ್ಚಾಗಿದೆ. ಆದರೆ ಉದ್ಯಮವು ತನ್ನ ಪಾತ್ರವನ್ನು ನಿರ್ವಹಿಸಬೇಕಾಗಿದೆ. ಮಹಿಳೆಯರ ವೃತ್ತಿ ಜೀವನದಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಅಂತಹ ವಿಧಾನಗಳು ಮತ್ತು ಸಾಧನಗಳನ್ನು ಸಿದ್ಧಪಡಿಸಬೇಕು. ಒಟ್ಟಾರೆಯಾಗಿ, ನಮ್ಮ ಹೆಣ್ಣುಮಕ್ಕಳು ನಾಳಿನ ನಾಯಕತ್ವ ವಹಿಸುವುದಕ್ಕೆ ಸಮಾನ ಅವಕಾಶಗಳನ್ನು ಹೊಂದಿರುವ ಭವಿಷ್ಯವನ್ನು ನಾವು ರೂಪಿಸಬಹುದು ಎಂದು ಹೇಳಿದರು.

ಇದನ್ನೂ ಒದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ಇಶಾ ಅವರು ತಮ್ಮ ತಾಯಿ ನೀತಾ ಅಂಬಾನಿಯವರ ಮಾತನ್ನು ಉಲ್ಲೇಖಿಸಿ, “ಒಬ್ಬ ಪುರುಷನನ್ನು ಸಬಲಗೊಳಿಸಿದರೆ ಆತ ತನ್ನ ಕುಟುಂಬವನ್ನು ಪೋಷಿಸುತ್ತಾನೆ, ಆದರೆ ಮಹಿಳೆ ಸಬಲಳಾಗಿದ್ದರೆ, ಅವಳು ಇಡೀ ಗ್ರಾಮವನ್ನು ಪೋಷಿಸುತ್ತಾಳೆ” ಎಂದು ಅವರು ಪದೇ ಪದೇ ಹೇಳುತ್ತಾರೆ. “ನನಗೆ ಅಮ್ಮ ಹೇಳುವ ಮಾತಿನಲ್ಲಿ ಸಂಪೂರ್ಣ ವಿಶ್ವಾಸವಿದೆ. ಮಹಿಳೆಯರು ಹುಟ್ಟಿನಿಂದಲೇ ನಾಯಕಿಯರು. ಅವರಲ್ಲಿರುವ ಸಹಜವಾದ ನಿಸ್ವಾರ್ಥತೆಯು ಅತ್ಯುತ್ತಮ ನಾಯಕರನ್ನಾಗಿ ಮಾಡುತ್ತದೆ. ಮಹಿಳಾ ಉದ್ಯೋಗಿಗಳನ್ನು ಅವರ ವೃತ್ತಿ ಜೀವನದ ಆರಂಭದಿಂದಲೂ ಪ್ರೋತ್ಸಾಹಿಸಬೇಕು ಮತ್ತು ಕೇವಲ ಕಾಗದದ ಮೇಲೆ ಮಾತ್ರ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯನ್ನು ತೋರಿಸುವುದರಿಂದ ಯಾವುದೇ ಬದಲಾವಣೆಯನ್ನು ಆಗುವುದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ ಎಂದು ತಿಳಿಸಿದರು.

Continue Reading

ತಂತ್ರಜ್ಞಾನ

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

ಕೃತಕ ಬುದ್ಧಿಮತ್ತೆಯಿಂದ ವೆಬ್ ಸೈಟ್ ಲಿಂಕ್ ಗಳಿಗಾಗಿ ರಚಿಸಲಾದ ಹುಡುಕಾಟ ಎಂಜಿನ್ ಅನ್ನು ಗೂಗಲ್ (Google Update) ಅನಾವರಣಗೊಳಿಸಿದೆ. ಈ ದಿಟ್ಟ ಮತ್ತು ಜವಾಬ್ದಾರಿಯುತ ವಿಧಾನವು ನಮ್ಮ ಧ್ಯೇಯವನ್ನು ಬಳಕೆದಾರರಿಗೆ ತಲುಪಿಸಲು ಮತ್ತು ಎಲ್ಲರಿಗೂ ಎಐ ಅನ್ನು ಹೆಚ್ಚು ಆಪ್ತ ಗೊಳಿಸಲು ಸಹಾಯಕವಾಗಿಸುವುದು ಎಂದು ಗೂಗಲ್ ಕಂಪೆನಿಯ ಸಿಇಒ ಸುಂದರ್ ಪಿಚೈ ತಿಳಿಸಿದ್ದಾರೆ.

VISTARANEWS.COM


on

By

Google Update
Koo

ವೆಬ್ ಸೈಟ್ ಲಿಂಕ್‌ಗಳ (website link) ಮೂಲಕ ಕೃತಕ ಬುದ್ಧಿಮತ್ತೆಯಿಂದ (artificial intelligence) ರಚಿಸಲಾದ, ಆಗಾಗ ಒಲವು ತೋರುವ ಪ್ರತಿಕ್ರಿಯೆಗಳಿಗೆ ಹುಡುಕಾಟ ಎಂಜಿನ್ ಅನ್ನು ಗೂಗಲ್ (Google Update) ಅನಾವರಣಗೊಳಿಸಿರುವುದಾಗಿ ವಾರ್ಷಿಕ ಡೆವಲಪರ್‌ಗಳ ಸಮ್ಮೇಳನದಲ್ಲಿ ಕಂಪೆನಿಯ ಸಿಇಒ (CEO) ಸುಂದರ್ ಪಿಚೈ (Sundar Pichai) ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸುಂದರ್ ಪಿಚೈ, ಈ ದಿಟ್ಟ ಮತ್ತು ಜವಾಬ್ದಾರಿಯುತ ವಿಧಾನವು ನಮ್ಮ ಧ್ಯೇಯವನ್ನು ಬಳಕೆದಾರರಿಗೆ ತಲುಪಿಸಲು ಮತ್ತು ಎಲ್ಲರಿಗೂ ಎಐ ಅನ್ನು ಹೆಚ್ಚು ಸಹಾಯಕವಾಗಿಸಲು ಪ್ರಯತ್ನಿಸಲಾಗುವುದು ಎಂದರು.

ಪ್ರಮುಖ ಪ್ರಕಟಣೆಗಳು ಏನೇನು?:

ಫೈರ್‌ಬೇಸ್ ಜೆನ್‌ಕಿಟ್

ಫೈರ್‌ಬೇಸ್ ಪ್ಲಾಟ್‌ಫಾರ್ಮ್‌ಗೆ ಫೈರ್‌ಬೇಸ್ ಜೆನ್‌ಕಿಟ್ ಎಂಬ ಹೊಸ ಸೇರ್ಪಡೆ ಇದ್ದು, ಇದು ಗೋ ಬೆಂಬಲದೊಂದಿಗೆ ಜಾವಾ ಸ್ಕ್ರಿಪ್ಟ್/ಟೈಪ್‌ಸ್ಕ್ರಿಪ್ಟ್‌ನಲ್ಲಿ ಎಐ-ಚಾಲಿತ ಅಪ್ಲಿಕೇಶನ್‌ಗಳನ್ನು ನಿರ್ಮಿಸಲು ಡೆವಲಪರ್‌ಗಳಿಗೆ ಸುಲಭವಾಗುತ್ತದೆ. ಫ್ರೇಮ್‌ವರ್ಕ್ ಮುಕ್ತ ಮೂಲವಾಗಿರುತ್ತದೆ ಮತ್ತು ವಿಷಯ ಉತ್ಪಾದನೆ, ಸಾರಾಂಶ, ಪಠ್ಯ ಅನುವಾದ ಮತ್ತು ಚಿತ್ರಗಳನ್ನು ಉತ್ಪಾದಿಸಲು ಬಳಸಬಹುದು ಎಂದು ಕಂಪನಿ ಹೇಳಿದೆ.

ಲರ್ನ್‌ ಎಲ್‌ಎಂ

ಕಂಪನಿಯು ಲರ್ನ್‌ಎಲ್‌ಎಂ ಅನ್ನು ಅನಾವರಣಗೊಳಿಸಿದ್ದು, ಇದು ಕಲಿಕೆಗಾಗಿ “ಫೈನ್-ಟ್ಯೂನ್ಡ್” ಉತ್ಪಾದಕ ಎಐ ಮಾದರಿಗಳ ಹೊಸ ಕುಟುಂಬವಾಗಿದೆ. ಗೂಗಲ್‌ನ ಡೀಪ್‌ಮೈಂಡ್ ಎಐ ಸಂಶೋಧನಾ ವಿಭಾಗ ಮತ್ತು ಗೂಗಲ್ ರಿಸರ್ಚ್ ನಡುವಿನ ಸಹಯೋಗ- ಮಾದರಿಗಳು ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ “ಸಂಭಾಷಣೆಯ” ಬೋಧನೆಯನ್ನು ನೀಡುತ್ತದೆ ಎಂದು ಗೂಗಲ್ ಹೇಳಿದೆ.

ಯೂಟ್ಯೂಬ್ ರಸಪ್ರಶ್ನೆಗಳು

ಯೂಟ್ಯೂಬ್ ಎಐ ರಚಿತವಾದ ರಸಪ್ರಶ್ನೆಗಳನ್ನು ಸಹ ಹೊಂದಿದೆ. ಇದು ಶೈಕ್ಷಣಿಕ ವಿಡಿಯೋಗಳನ್ನು ವೀಕ್ಷಿಸುತ್ತಿರುವಾಗ ಬಳಕೆದಾರರಿಗೆ ಸಾಂಕೇತಿಕವಾಗಿ “ತಮ್ಮ ಕೈಯನ್ನು ಮೇಲಕ್ಕೆತ್ತಲು” ಅನುಮತಿಸುತ್ತದೆ. ಉಪಕರಣವನ್ನು ಬಳಸಿಕೊಂಡು, ನೀವು ಪ್ರಶ್ನೆಗಳನ್ನು ಕೇಳಬಹುದು, ವಿವರಣೆಗಳನ್ನು ಪಡೆಯಬಹುದು ಅಥವಾ ವಿಷಯದ ಬಗ್ಗೆ ರಸಪ್ರಶ್ನೆ ತೆಗೆದುಕೊಳ್ಳಬಹುದು.

ಜೆಮ್ಮಾ 2 ನವೀಕರಣಗಳು

ಗೂಗಲ್ ಜೆಮ್ಮಾ 2ಗೆ ಹೊಸ 27 ಬಿಲಿಯನ್ ಪ್ಯಾರಾಮೀಟರ್ ಮಾದರಿಯನ್ನು ಸೇರಿಸಲಿದೆ ಮತ್ತು ಈ ಮಾದರಿಗಳ ಮುಂದಿನ ಪೀಳಿಗೆಯು ಈ ವರ್ಷದ ಜೂನ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಕಂಪನಿ ತಿಳಿಸಿದೆ.

ಗೂಗಲ್ ಪ್ಲೇಗೆ ಬದಲಾವಣೆಗಳು

ಗೂಗಲ್ ಪ್ಲೇ ಅಪ್ಲಿಕೇಶನ್‌ಗಳಿಗಾಗಿ ಹೊಸ ಅನ್ವೇಷಣೆ ವೈಶಿಷ್ಟ್ಯವನ್ನು ಹೊಂದಿರುತ್ತದೆ. ಬಳಕೆದಾರರನ್ನು ಪಡೆದುಕೊಳ್ಳಲು ಹೊಸ ಮಾರ್ಗಗಳು, ಪ್ಲೇ ಪಾಯಿಂಟ್‌ಗಳಿಗೆ ನವೀಕರಣಗಳು ಮತ್ತು ಗೂಗಲ್ ಪ್ಲೇ ಎಸ್ ಡಿಕೆ ಕನ್ಸೋಲ್ ಮತ್ತು ಪ್ಲೇ ಇಂಟೆರ್ ಗ್ರಿಟಿ ಎಪಿಐ ನಂತಹ ವರ್ಧನೆಗಳನ್ನು ಒಳಗೊಂಡಿರುತ್ತದೆ.


ಇದನ್ನೂ ಓದಿ: Warning For Android Users: ಆಂಡ್ರಾಯ್ಡ್ ಬಳಕೆದಾರರಿಗೆ ಕಾದಿದೆ ಅಪಾಯ; ಸರ್ಕಾರದಿಂದ ಗಂಭೀರ ಎಚ್ಚರಿಕೆ

ಕರೆಗಳ ಸಮಯದಲ್ಲಿ ವಂಚನೆಯ ಅಲರ್ಟ್‌

ಕರೆಗಳ ಸಮಯದಲ್ಲಿ ಸಂಭಾವ್ಯ ವಂಚನೆಗಳ ಬಗ್ಗೆ ಬಳಕೆದಾರರನ್ನು ಎಚ್ಚರಿಸುವ ವೈಶಿಷ್ಟ್ಯವನ್ನು ಗೂಗಲ್ ಪೂರ್ವವೀಕ್ಷಣೆ ಮಾಡಿದೆ. ಇದನ್ನು ಆಂಡ್ರಾಯ್ಡ್‌ನ ಭವಿಷ್ಯದ ಆವೃತ್ತಿಯಲ್ಲಿ ನಿರ್ಮಿಸಲಾಗುವುದು ಮತ್ತು ನೈಜ ಸಮಯದಲ್ಲಿ ಸಾಮಾನ್ಯವಾಗಿ ಸ್ಕ್ಯಾಮ್‌ಗಳೊಂದಿಗೆ ಸಂಯೋಜಿತವಾಗಿರುವ ಸಂಭಾಷಣೆ ಮಾದರಿಗಳನ್ನು ಪರಿಣಾಮಕಾರಿಯಾಗಿ ಕೇಳಲು ಜೆಮಿನಿ ನ್ಯಾನೋವನ್ನು ಬಳಸುತ್ತದೆ ಎಂದು ಕಂಪೆನಿ ಹೇಳಿದೆ.

ಒಟ್ಟಿನಲ್ಲಿ ಪ್ರಾಜೆಕ್ಟ್ ಅಸ್ಟ್ರಾ, ಸುಧಾರಿತ ನೋಡುವ ಮತ್ತು ಮಾತನಾಡುವ ಎಐ ಏಜೆಂಟ್, ವೆಯೋ ಜನರೇಟಿವ್ ಎಐ ವಿಡಿಯೋ ಮಾದರಿ ಮತ್ತು 6 ನೇ ತಲೆಮಾರಿನ ಟ್ರಿಲಿಯಮ್ ಟೆನ್ಸರ್ ಪ್ರೊಸೆಸಿಂಗ್ ಯುನಿಟ್ ಅನ್ನು ಗೂಗಲ್ ನ ವಾರ್ಷಿಕ ಡೆವಲಪರ್ ಕಾನ್ಫರೆನ್ಸ್ I/O ನಲ್ಲಿ ಘೋಷಿಸಲಾಯಿತು. ಹುಡುಕಾಟದಲ್ಲಿ ಎಐ ಅವಲೋಕನ, ಜೆಮಿನಿ 1.5 ಪ್ರೊ ಸುಧಾರಣೆಗಳು ಮತ್ತು ಹೊಸ 1.5 ಫ್ಲ್ಯಾಶ್ ಮಾದರಿಯನ್ನು ಹೊರತರುವುದಾಗಿ ಗೂಗಲ್ ಘೋಷಿಸಿತು. ಜೆಮಿನಿಯೊಂದಿಗೆ ಫೋಟೋಗಳನ್ನು ಹುಡುಕಲು ಹೊಸ ಮಾರ್ಗವಾದ ‘ಫೋಟೋಗಳನ್ನು ಕೇಳಿ’ ಅನ್ನು ಕೂಡ ಘೋಷಿಸಲಾಗಿದೆ.

Continue Reading

ತಂತ್ರಜ್ಞಾನ

Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Facebook, Instagram Down: ಮೆಟಾ ಒಡೆತನದ ಫೇಸ್‌ಬುಕ್‌ (Facebook) ಹಾಗೂ ಇನ್‌ಸ್ಟಾಗ್ರಾಂ (Instagram) ಸರ್ವರ್‌ ಡೌನ್‌ (Server Down) ಆಗಿದ್ದು, ಸಾಮಾಜಿಕ ಜಾಲತಾಣಗಳಿಲ್ಲದೆ ಪ್ರಪಂಚದಾದ್ಯಂತದ ಜನ ಪರದಾಡುತ್ತಿದ್ದಾರೆ (Facebook, Instagram Down). ಸಾವಿರಾರು ಬಳಕೆದಾರರ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ವಿಶ್ವಾದ್ಯಂತ ಕಾರ್ಯನಿರ್ವಹಿಸುತ್ತಿಲ್ಲ ಎಂದು ಇಂಟರ್‌ನೆಟ್‌ ಟ್ರಾಫಿಕ್‌ ಮೇಲೆ ನಿಗಾ ಇರಿಸುವ ಡೌನ್‌ ಡಿಟೆಕ್ಟರ್‌ ಸಂಸ್ಥೆ ಹೇಳಿದೆ.

VISTARANEWS.COM


on

Facebook, Instagram Down
Koo

ನವದೆಹಲಿ: ಮೆಟಾ ಒಡೆತನದ ಫೇಸ್‌ಬುಕ್‌ (Facebook) ಹಾಗೂ ಇನ್‌ಸ್ಟಾಗ್ರಾಂ (Instagram) ಸರ್ವರ್‌ ಡೌನ್‌ (Server Down) ಆಗಿದ್ದು, ಸಾಮಾಜಿಕ ಜಾಲತಾಣಗಳಿಲ್ಲದೆ ಪ್ರಪಂಚದಾದ್ಯಂತದ ಜನ ಪರದಾಡುತ್ತಿದ್ದಾರೆ (Facebook, Instagram Down). ಇಂಟರ್‌ನೆಟ್‌ ಟ್ರಾಫಿಕ್‌ ಮೇಲೆ ನಿಗಾ ಇರಿಸುವ ಡೌನ್‌ ಡಿಟೆಕ್ಟರ್‌ ಸಂಸ್ಥೆಯ ಪ್ರಕಾರ, ಸಾವಿರಾರು ಬಳಕೆದಾರರ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ವಿಶ್ವಾದ್ಯಂತ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಸುಮಾರು 18,000ಕ್ಕೂ ಹೆಚ್ಚು ವರದಿಗಳು ಬಂದಿದ್ದು, ಆ ಪೈಕಿ ಶೇ. 59ರಷ್ಟು ಮಂದಿ ಅಪ್ಲಿಕೇಶನ್ ಪ್ರವೇಶಿಸುವಾಗ ಸಮಸ್ಯೆಗಳನ್ನು ಎದುರಿಸಿದರೆ ಶೇ. 34ರಷ್ಟು ಬಳಿಕೆದಾರರು ಸರ್ವರ್ ಸಂಪರ್ಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಶೇ. 7ರಷ್ಟು ಮಂದಿಗೆ ಲಾಗಿನ್ ಮಾಡುವಾಗ ಸಮಸ್ಯೆ ಕಂಡು ಬಂದಿದೆ.

ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಬಳಕೆದಾರರು ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆ್ಯಪ್‌ ಓಪನ್‌ ಮಾಡುವಾಗ ʼSomething went wrong. There’s an issue and the page could not be loadedʼ, ʼError loading media’ ಮುಂತಾದ ಮೆಸೇಜ್‌ ಕಂಡು ಬರುತ್ತಿದೆ ಎಂದು ಬಳಕೆದಾರರು ದೂರಿದ್ದಾರೆ. ಇಂಟರ್‌ನೆಟ್‌ ಮೇಲ್ವಿಚಾರಣಾ ಗುಂಪು ನೆಟ್‌ಬ್ಲಾಕ್ಸ್‌ (NetBlocks) ಕೂಡ ಎರಡು ಸಾಮಾಜಿಕ ಜಾಲತಾಣದ ವೆಬ್‌ಸೈಟ್‌ಗಳು ಪ್ರಸ್ತುತ ‘ಅಂತಾರಾಷ್ಟ್ರೀಯ ಸ್ಥಗಿತಗಳನ್ನು’ ಅನುಭವಿಸುತ್ತಿವೆ ಎಂಬ ಅಂಶವನ್ನು ಗಮನಿಸಿದೆ.

“ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ ಸೇರಿದಂತೆ ಮೆಟಾ ಪ್ಲಾಟ್‌ಫಾರ್ಮ್‌ಗಳು ಪ್ರಸ್ತುತ ಅಂತಾರಾಷ್ಟ್ರೀಯ ಸ್ಥಗಿತಗಳನ್ನು ಅನುಭವಿಸುತ್ತಿವೆ. ಇದು ದೇಶೀಯ ಮಟ್ಟದ ಇಂಟರ್‌ನೆಟ್‌ ಅಡೆತಡೆಗಳು ಅಥವಾ ಫಿಲ್ಟರಿಂಗ್‌ಗೆ ಸಂಬಂಧಿಸಿಲ್ಲ” ಎಂದು ನೆಟ್‌ಬ್ಲಾಕ್ಸ್‌ ತಿಳಿಸಿದೆ. ವಿಶೇಷವೆಂದರೆ ಈ ವರ್ಷದ ಮಾರ್ಚ್‌ನಲ್ಲಿಯೂ ಇದೇ ರೀತಿಯ ಸಮಸ್ಯೆ ಕಂಡು ಬಂದಿತ್ತು. ಪ್ರಪಂಚದಾದ್ಯಂತದ ಲಕ್ಷಾಂತರ ಬಳಕೆದಾರರು ತಮ್ಮ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಖಾತೆ ಲಾಗ್ ಔಟ್ ಆಗುತ್ತಿರುವ ಬಗ್ಗೆ ದೂರು ನೀಡಿದ್ದರು.

ನೆಟ್ಟಿಗರು ಏನಂದ್ರು?

ಮೆಟಾ ಫ್ಲಾಟ್‌ಫಾರ್ಮ್‌ನಲ್ಲಿ ಪದೇ ಪದೆ ಇಂತಹ ಸಮಸ್ಯೆ ಎದುರಾಗುತ್ತಿರುವ ಬಗ್ಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇರೆ ಯಾವ ಅಪ್ಲಿಕೇಷನ್‌ಗಳಲ್ಲಿಯೂ ಇಷ್ಟರ ಮಟ್ಟಿಗೆ ಸಮಸ್ಯೆ ಕಂಡುಬರುತ್ತಿಲ್ಲ ಎಂದು ಹೇಳಿದ್ದಾರೆ. ಪರಿಸ್ಥಿತಿಯಿಂದ ನಿರಾಶೆಗೊಂಡ ಬಳಕೆದಾರರೊಬ್ಬರು ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಂ ಸ್ಥಗಿತದ ಬಗೆಗಿನ ನೆಟ್‌ಬ್ಲಾಕ್ಸ್‌ ಪೋಸ್ಟ್‌ಗೆ ಪ್ರತಿಕ್ರಿಯಿಸಿ, “ಬಹುಶಃ ಈ ಸಮಸ್ಯೆ ಬಗೆಹರಿಯುವಂತೆ ಕಾಣಿಸುತ್ತಿಲ್ಲʼʼ ಎಂದು ಹೇಳಿದ್ದಾರೆ. ʼʼಮೆಟಾ ಸರ್ವರ್‌ನಲ್ಲಿ ಸಮಸ್ಯೆ ಎದುರಾಗಿರಬೇಕು. ಅದೇ ಕಾರಣಕ್ಕೆ ಫೇಸ್‌ಬುಕ್‌ ಕೂಡ ಕೆಲಸ ಮಾಡುತ್ತಿಲ್ಲʼʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Facebook Server: ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

ಈ ವರ್ಷ ಮಾರ್ಚ್‌ನಲ್ಲಿ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಸರ್ವರ್‌ ಡೌನ್‌ ಆಗಿತ್ತು. ಕೆಲಹೊತ್ತು ಮೊಬೈಲ್‌ ಹಾಗೂ ಕಂಪ್ಯೂಟರ್‌ನಲ್ಲಿ ಎರಡೂ ಖಾತೆಗಳು ಲಾಗ್‌ಔಟ್‌ ಆಗಿದ್ದು, ಮತ್ತೆ ಲಾಗ್‌ಇನ್‌ ಆಗುತ್ತಿರಲಿಲ್ಲ. ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಇಲ್ಲದೆ ಜನ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಮೆಟಾ ಕಂಪನಿಯು ಪ್ರತಿಕ್ರಿಯಿಸಿದ್ದು, ಜನರ ಕ್ಷಮೆಯಾಚಿಸಿತ್ತು.

Continue Reading

ತಂತ್ರಜ್ಞಾನ

WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

ಒಂದು ವರ್ಷದ ಹಿಂದೆ ಪರಿಚಯಿಸಲಾದ ವಾಟ್ಸ್ ಆಪ್ ಚಾನೆಲ್ (WhatsApp Update) ಶೀಘ್ರದಲ್ಲೇ ಅಪ್ ಡೇಟ್ ಅಗಲಿದ್ದು, ಹಲವಾರು ವಿಶೇಷತೆಗಳು ಲಭ್ಯವಾಗುವ ಸುಳಿವು ಸಿಕ್ಕಿದೆ. ವಾಟ್ಸ್‌ ಆಪ್‌ ಚಾನೆಲ್‌ನಲ್ಲಿ ಹೊಸ ಬದಲಾವಣೆಗಳು ಏನೇನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

WhatsApp Update
Koo

ಸಂದೇಶ (messaging) ಕಳುಹಿಸಲು, ಕರೆ (calling) ಮಾಡಲು ಮೀಸಲಾಗಿದ್ದ ವಾಟ್ಸ್ ಆಪ್ (WhatsApp Update) 2023ರ ಜೂನ್‌ನಲ್ಲಿ ವಾಟ್ಸ್ ಆಪ್ ಚಾನೆಲ್ ಪರಿಚಯಿಸಿ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿತು. ಸುಮಾರು ಒಂದು ವರ್ಷದ ಹಿಂದೆ ಪರಿಚಯಿಸಲಾದ ವಾಟ್ಸ್ ಆಪ್ ಚಾನೆಲ್ ಶೀಘ್ರದಲ್ಲಿ ರಚಿಸಲು ಮತ್ತು ಫಾಲೋ ಮಾಡಲು ಬಳಕೆದಾರರಿಗೆ ಅನುಕೂಲವಾಗುವಂತೆ ಹೊಸ ವೈಶಿಷ್ಟ್ಯವನ್ನು ( feature) ಪರಿಚಯಿಸಲು ಇದೀಗ ವಾಟ್ಸ್ ಆಪ್ ಮುಂದಾಗಿದೆ.

ವ್ಯಾಪಾರಿಗಳು, ವಿಷಯ ರಚನೆಕಾರರಿಗೆ ವಾಟ್ಸ್ ಆಪ್ ಪ್ಲಾಟ್‌ಫಾರ್ಮ್ ಸಾಕಷ್ಟು ವೈಶಿಷ್ಟ್ಯವನ್ನು ಒದಗಿಸುತ್ತಿದ್ದು, ಬಹುಪಯೋಗಿಯಾಗಿದೆ. ಚಾನೆಲ್‌ಗಳ ಹಲವು ವೈಶಿಷ್ಟ್ಯವು ಕಳೆದ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಬಂದಿತು ಮತ್ತು ಅಂದಿನಿಂದ ಜನರು ಇದನ್ನು ವ್ಯಾಪಕವಾಗಿ ಬಳಸುತ್ತಿದ್ದಾರೆ. ಇದೀಗ ಗ್ರಾಹಕರ ಸಲಹೆಗಳ ಮೇರೆಗೆ ವಾಟ್ಸ್ ಆಪ್ ಚಾನೆಲ್‌ಗಳಲ್ಲಿ ಹೊಸ ವೈಶಿಷ್ಟ್ಯವನ್ನು ಪರಿಚಯಿಸಲಾಗುತ್ತಿದೆ. ಶೀಘ್ರದಲ್ಲೇ ಇದು ಬಳಕೆದಾರರಿಗೆ ಲಭ್ಯವಾಗಲಿದೆ.

ಏನು ವಿಶೇಷ?

ಮಾಹಿತಿ ಪ್ರಕಾರ ವಾಟ್ಸ್ ಆಪ್ ಈಗ ಲಿಂಕ್ ಮಾಡಲಾದ ಸಾಧನಗಳಲ್ಲಿಯೂ ಚಾನೆಲ್‌ಗಳನ್ನು ನಿರ್ವಹಿಸಲು, ರಚಿಸಲು ಮತ್ತು ವೀಕ್ಷಿಸಲು ಬಳಕೆದಾರರಿಗೆ ಅವಕಾಶ ನೀಡುವ ವೈಶಿಷ್ಟ್ಯವನ್ನು ಪರಿಚಯಿಸಲಿದೆ. ಈ ವೈಶಿಷ್ಟ್ಯವು ಇಲ್ಲಿಯವರೆಗೆ ಪ್ರಾಥಮಿಕ ಸಾಧನಗಳಿಗೆ ಮಾತ್ರ ಸೀಮಿತವಾಗಿತ್ತು. ಇದರರ್ಥ ನೀವು ಸಂಪರ್ಕಿತ ಸಾಧನದಲ್ಲಿ ವಾಟ್ಸ್ ಆಪ್ ಅನ್ನು ನಿರ್ವಹಿಸುತ್ತಿದ್ದರೂ ಚಾನಲ್‌ಗಳಿಂದ ನವೀಕರಣಗಳನ್ನು ಪಡೆಯಬಹುದು ಮತ್ತು ಅವುಗಳನ್ನು ನಿರ್ವಹಿಸಬಹುದು.


ವಾಟ್ಸ್ ಆಪ್ ಬೀಟಾ ಇನ್ಫೋದಲ್ಲಿನ ವರದಿ ಪ್ರಕಾರ, ವಾಟ್ಸ್ ಆಪ್ ಬಳಕೆದಾರರು ತಮ್ಮ ಲಿಂಕ್ ಮಾಡಲಾದ ಸಾಧನಗಳಿಂದ ಚಾನಲ್‌ಗಳನ್ನು ರಚಿಸಲು, ವೀಕ್ಷಿಸಲು ಮತ್ತು ಸಂವಹನ ಮಾಡುವ ಸಾಮರ್ಥ್ಯವನ್ನು ಹೊರತರಲು ಪ್ರಾರಂಭಿಸಿದೆ. ಈ ಅಭಿವೃದ್ಧಿಯು ಹಿಂದಿನ ಆವೃತ್ತಿಗಳಿಂದ ಗಮನಾರ್ಹ ಬದಲಾವಣೆಯನ್ನು ಹೊಂದಿದೆ. ಅಲ್ಲಿ ಚಾನಲ್ ನಿರ್ವಹಣೆಯನ್ನು ಪ್ರಾಥಮಿಕ ಸಾಧನಕ್ಕೆ ನಿರ್ಬಂಧಿಸಲಾಗಿದೆ. ಆಂಡ್ರಾಯ್ಡ್ ಗಾಗಿ ಗೂಗಲ್ ಪ್ಲೇ ಸ್ಟೋರ್ ಮತ್ತು ಐಒಎಸ್ ಗಾಗಿ ಟೆಸ್ಟ್ ಪ್ಲೈಟ್ ಅಪ್ಲಿಕೇಶನ್ ಮೂಲಕ ಲಭ್ಯವಿರುವ ಇತ್ತೀಚಿನ ನವೀಕರಣಗಳಲ್ಲಿ ಈ ಮಿತಿಯನ್ನು ತಿಳಿಸಲಾಗಿದೆ.

ಪರೀಕ್ಷೆ ಹಂತದಲ್ಲಿ

ಪೋರ್ಟಲ್ ಹಂಚಿಕೊಂಡ ಸ್ಕ್ರೀನ್‌ಶಾಟ್ ಪ್ರಕಾರ ಕೆಲವು ಬಳಕೆದಾರರು ಈಗಾಗಲೇ ಈ ಹೊಸ ಸಾಮರ್ಥ್ಯವನ್ನು ಪರೀಕ್ಷಿಸುತ್ತಿದ್ದಾರೆ. ಇದು ಹಂತ ಹಂತದ ರೋಲ್‌ಔಟ್ ಅನ್ನು ಸೂಚಿಸುತ್ತದೆ. ಈ ಹಿಂದೆ ಬಳಕೆದಾರರು ತಮ್ಮ ಚಾನಲ್‌ಗಳನ್ನು ಲಿಂಕ್ ಮಾಡಲಾದ ಸಾಧನಗಳಿಂದ ನಿರ್ವಹಿಸಲು ಸಾಧ್ಯವಾಗಲಿಲ್ಲ. ಇದು ಅವರ ಪ್ರಾಥಮಿಕ ಸಾಧನದಲ್ಲಿ ಹೊರತು ಅಪ್ಲಿಕೇಶನ್‌ನ ವೈಶಿಷ್ಟ್ಯಗಳೊಂದಿಗೆ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಅವರ ಸಾಮರ್ಥ್ಯವನ್ನು ನಿರ್ಬಂಧಿಸುತ್ತದೆ.

ಈಗ, ಅಪ್‌ಡೇಟ್‌ನೊಂದಿಗೆ ವಾಟ್ಸ್ ಆಪ್ ಏಕೀಕೃತ ಅನುಭವವನ್ನು ಖಾತ್ರಿಗೊಳಿಸುತ್ತದೆ. ಬಳಕೆಯಲ್ಲಿರುವ ಸಾಧನವನ್ನು ಲೆಕ್ಕಿಸದೆಯೇ ಚಾನೆಲ್‌ಗಳೊಂದಿಗೆ ಸಂವಹನ ನಡೆಸಲು ಬಳಕೆದಾರರಿಗೆ ಅವಕಾಶ ನೀಡುತ್ತದೆ. ವರದಿಯ ಪ್ರಕಾರ ಈ ವೈಶಿಷ್ಟ್ಯವು ಐಒಎಸ್ ಮತ್ತು ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿರುತ್ತದೆ.

ಇದನ್ನೂ ಓದಿ: Xiaomi Smart Phone: ವರ್ಷಾಂತ್ಯಕ್ಕೆ ಬರಲಿದೆ ಶಿಯೊಮಿಯ ಫೋಲ್ಡಿಂಗ್​ ಫೋನ್​ಗಳು; ಇಲ್ಲಿದೆ ಸಂಪೂರ್ಣ ವಿವರ

ಲಿಂಕ್ ಮಾಡಲಾದ ಸಾಧನಗಳಲ್ಲಿ ಚಾನೆಲ್‌ಗಳನ್ನು ನಿರ್ವಹಿಸುವ ಸಾಮರ್ಥ್ಯವು ಪ್ರಸ್ತುತ ಆಯ್ದ ಬೀಟಾ ಪರೀಕ್ಷಕರಿಗೆ ಲಭ್ಯವಿದೆ ಮತ್ತು ಭವಿಷ್ಯದಲ್ಲಿ ಹೆಚ್ಚಿನ ಬಳಕೆದಾರರಿಗೆ ಪ್ರವೇಶಿಸಲು ನಿರೀಕ್ಷಿಸಲಾಗಿದೆ. ಐಒಎಸ್ ಬಳಕೆದಾರರು ಬಳಕೆದಾರರ ಪ್ರೊಫೈಲ್ ಫೋಟೋಗಳ ಸ್ಕ್ರೀನ್‌ಶಾಟ್‌ಗಳನ್ನು ತೆಗೆದುಕೊಳ್ಳುವುದನ್ನು ತಡೆಯಲು ವಾಟ್ಸ್ ಆಪ್ ವೈಶಿಷ್ಟ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ವೈಶಿಷ್ಟ್ಯವು ಮೊದಲು ಆಂಡ್ರಾಯ್ಡ್ ಬಳಕೆದಾರರಿಗೆ ಸೀಮಿತವಾಗಿತ್ತು ಆದರೆ ಭವಿಷ್ಯದಲ್ಲಿ ಐಫೋನ್ ಮಾಲೀಕರಿಗೆ ಸಹ ಇದು ಲಭ್ಯವಾಗಲಿದೆ.

Continue Reading
Advertisement
Amit Shah
ದೇಶ15 mins ago

Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

PBKS vs RR
ಕ್ರೀಡೆ20 mins ago

PBKS vs RR: ಸ್ಯಾಮ್‌ ಕರನ್‌ ಏಕಾಂಗಿ ಬ್ಯಾಟಿಂಗ್​ ಹೋರಾಟಕ್ಕೆ ತಲೆ ಬಾಗಿದ ರಾಜಸ್ಥಾನ್​

Anjali Murder Case
ಕ್ರೈಂ39 mins ago

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Participation of young women in science technology information and communication fields should be increased says Isha Ambani
ದೇಶ49 mins ago

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Retired Teacher G T Bhatt Bommanahalli 80th celebration programme on May 19
ಉತ್ತರ ಕನ್ನಡ56 mins ago

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Dalita Sangharsha samiti demands that Minister HK Patil should be dismissed from the Cabinet
ರಾಯಚೂರು1 hour ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sandeep Lamichhane
ಕ್ರೀಡೆ1 hour ago

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Shyam Rangeela
ದೇಶ1 hour ago

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Terrorist Arrested
ಕರ್ನಾಟಕ2 hours ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ2 hours ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ16 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ19 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌