Honda Activa | ಹೋಂಡಾ ಆಕ್ಟಿವಾ ಪ್ರೀಮಿಯಮ್‌ ಎಡಿಷನ್‌ ಭಾರತದಲ್ಲಿ ಬಿಡುಗಡೆ, - Vistara News

ಆಟೋಮೊಬೈಲ್

Honda Activa | ಹೋಂಡಾ ಆಕ್ಟಿವಾ ಪ್ರೀಮಿಯಮ್‌ ಎಡಿಷನ್‌ ಭಾರತದಲ್ಲಿ ಬಿಡುಗಡೆ,

ಹೋಂಡಾ ಕಂಪನಿಯ ನೂತನ Honda Activa ಪ್ರೀಮಿಯಮ್‌ ಸ್ಕೂಟರ್‌ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ.

VISTARANEWS.COM


on

honda activa premium
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ : ಭಾರತದ ಮುಂಚೂಣಿ ಸ್ಕೂಟರ್‌ ತಯಾರಿಕಾ ಸಂಸ್ಥೆಯಾಗಿರುವ ಹೋಂಡಾ ಮೋಟಾರ್ ಸೈಕಲ್ & ಸ್ಕೂಟರ್ ಇಂಡಿಯಾ ತನ್ನ ಹೊಚ್ಚ ಹೊಸ 2022 ʻಆಕ್ಟಿವಾ ಪ್ರೀಮಿಯಂ ಆವೃತ್ತಿʼಯನ್ನು ಆಗಸ್ಟ್‌ ೧೮ರಂದು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದು ಈಗಾಗಲೇ ಮಾರುಕಟ್ಟೆಯಲ್ಲಿರುವ ಹೋಂಡಾ ಆಕ್ಟಿವಾ DLX ಮತ್ತು STD ಆವೃತ್ತಿಯ ಸುಧಾರಿತ ಆವೃತ್ತಿಯ ಸ್ಕೂಟರ್‌. ಹೊಸ ಮಾದರಿಯಲ್ಲಿ ಹಲವಾರು ಕಾಸ್ಮೆಟಿಕ್‌ ಬದಲಾವಣೆಗಳನ್ನು ಮಾಡಲಾಗಿದ್ದು, 75,400 ರೂಪಾಯಿ (ಎಕ್ಸ್ ಶೋರೂಮ್‌) ಬೆಲೆ ನಿಗದಿ ಮಾಡಲಾಗಿದೆ.

ಡಿಎಲ್‌ಎಕ್ಸ್‌ ಅವೃತ್ತಿಯ ಪ್ರೀಮಿಯಮ್‌ ಎಡಿಷನ್‌ ಸದ್ಯ ಇರುವ ಬೆಲೆಗಿಂತ ೧೦೦೦ ರೂಪಾಯಿ ಹೆಚ್ಚಾದರೆ, STD ಆವೃತ್ತಿಗೆ ೩೦೦೦ ರೂಪಾಯಿಗಳು ಹೆಚ್ಚಿಸಲಾಗಿದೆ. ಇದು ಹೋಂಡಾ ಆಕ್ಟಿವಾ ೬Gಯ ಟಾಪ್‌ ಎಂಡ್‌ ಆವೃತ್ತಿಯಾಗಿದೆ. ಹೋಂಡಾ ಮೋಟಾರ್ ಸೈಕಲ್ & ಸ್ಕೂಟರ್ ಇಂಡಿಯಾ ತನ್ನ ವೆಬ್‌ಸೈಟ್‌ನಲ್ಲಿ ಸ್ಕೂಟರ್ ಬಿಡುಗಡೆಯ ಮಾಹಿತಿಯನ್ನು ಪ್ರಕಟಿಸಿದೆ.

ಪ್ರೀಮಿಯಮ್‌ ಎಡಿಷನ್‌ ಹೋಂಡಾ ಆಕ್ಟಿವಾ ಸ್ಕೂಟರ್‌ಗಳು ಹೊಸ ಬಣ್ಣಗಳೊಂದಿಗೆ ಮಾರುಕಟ್ಟೆಗೆ ಇಳಿಯಲಿದೆ. ಮಾರ್ಷಲ್‌ ಗ್ರಿನ್‌ ಮೆಟಾಲಿಕ್‌, ಮ್ಯಾಟ್‌ ಸಾಂಗ್ರಿಯಾ ರೆಡ್‌ ಮೆಟಾಲಿಕ್, ಪರ್ಲ್‌ ಸಿರೆನ್‌ ಬ್ಲೂ ಬಣ್ಣದೊಂದಿಗೆ ಸ್ಕೂಟರ್‌ ಲಭ್ಯವಿದೆ. ಅಂತೆಯೇ ಎಲ್ಲ ಸ್ಕೂಟರ್‌ಗಳಲ್ಲಿ ಗೋಲ್ಡನ್‌ ಅಸೆಂಟ್ಸ್‌ ನೀಡಲಾಗಿದೆ.

ಎಂಜಿನ್‌ ಮತ್ತು ಫೀಚರ್‌ಗಳಲ್ಲಿ ಯಾವುದೇ ವ್ಯತ್ಯಾಸ ಮಾಡಿಲ್ಲ. ಹೀಗಾಗಿ ಈಗ ಮಾರುಕಟ್ಟೆಯಲ್ಲಿರುವ ಸ್ಕೂಟರ್‌ಗಳ ರೀತಿಯಲ್ಲೇ ಅನಲಾಗ್‌ ಇನ್‌ಸ್ಟ್ರುಮೆಂಟ್‌ ಕ್ಲಸ್ಟರ್‌ನೊಂದಿಗೆ ಲಭ್ಯವಿದೆ. ಅದೇ ರೀತಿ ಎಲ್‌ಇಡಿ ಹೆಡ್‌ಲ್ಯಾಂಪ್‌ ಹಾಗೂ ಎಕ್ಸಟರ್ನಲ್‌ ಫ್ಯಯಲ್‌ ಫಿಲ್ಲರ್‌ ಕ್ಯಾಪ್‌ ಫೀಚರ್ ಕೂಡ ಮುಂದುವರಿದಿದೆ.

ಸ್ಕೂಟರ್‌ನಲ್ಲಿ ೧೦೯. ೫೧ ಸಿಸಿ ಸಾಮರ್ಥ್ಯದ ಫ್ಯಾನ್‌ ಕೂಲ್ಡ್‌ ಸಿಂಗಲ್‌ ಸಿಲಿಂಡರ್‌ ಎಂಜಿನ್‌ ಇದೆ. ಇದು ೭.೬೮ ಬಿಎಚ್‌ಪಿ ಪವರ್‌ ಹಾಗೂ ೮.೮೪ ಎನ್‌ಎಮ್‌ ಟಾರ್ಕ್ಯೂ ಬಿಡುಗಡೆ ಮಾಡಬಲ್ಲುದು. ಫ್ಯುಯಲ್ ಇಂಜೆಕ್ಟರ್‌ ಹಾಗೂ ಸೈಲೆಂಟ್‌ ಸ್ಟಾರ್ಟ್‌ಗಾಗಿ ಇಎಸ್‌ಪಿ ತಂತ್ರಜ್ಞಾನವನ್ನು ಹೊಂದಿದೆ.

ಟ್ಯೂಬ್‌ಲೆಸ್ ಟೈರ್‌, ಸ್ಟೀಲ್‌ ರಿಮ್‌ಗಳು, ೧೩೦ ಎಂಎಂ ಡ್ರಮ್‌ ಬ್ರೇಕ್‌ಗಳು, ಟೆಲಿಸ್ಕೋಪಿಕ್ ಸಸ್ಪೆನ್ಷನ್‌ ಮುಂಬದಿಯಲ್ಲಿದ್ದರೆ, ಹಿಂಬದಿಯಲ್ಲಿ ೩ ಸ್ಟೆಪ್‌ ಅಜಸ್ಟಬಲ್‌ ಸ್ಪ್ರಿಂಗ್‌ ಲೋಡೆಡ್‌ ಹೈಡ್ರಾಲಿಕ್‌ ಶಾಕ್ ಅಬ್ಸಾರ್ಬರ್‌ ಇದೆ. ೧೦೬ ಕೆ. ಜಿ ಭಾರವಿರುವ ಸ್ಕೂಟರ್‌ನಲ್ಲಿ ೫.೩ ಲೀಟರ್‌ ಸಾಮರ್ಥ್ಯದ ಪೆಟ್ರೋಲ್‌ ಟ್ಯಾಂಕ್ ಇದೆ.

ಇದನ್ನೂ ಓದಿ | Scorpio Classic : ಮಹೀಂದ್ರಾ ಸ್ಕಾರ್ಪಿಯೊ ಕ್ಲಾಸಿಕ್‌ ಬಿಡುಗಡೆ, ಹೊಸ ಫೀಚರ್‌ಗಳ ಸೇರ್ಪಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

Best Selling Cars: ಜುಲೈನಲ್ಲಿ ಅತೀ ಹೆಚ್ಚು ಮಾರಾಟವಾದ ಕಾರುಗಳು ಯಾವವು?

ಮನೆಗೊಂದು ಕಾರು ಬೇಕು ಎನ್ನುವ ಆಸೆ ಜೊತೆಗೆ ಇದಕ್ಕೆ ಪೂರಕವಾಗಿ ವಿವಿಧ ಆಕರ್ಷಕ ಕೊಡುಗೆಗಳಿಂದ ಕಾರುಗಳ ಬೇಡಿಕೆ ಇತ್ತೀಚೆಗೆ ಹೆಚ್ಚಾಗುತ್ತಲೇ ಇದೆ. ಜುಲೈ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳು (Best Selling Cars) ಮತ್ತು ಮಾರುಕಟ್ಟೆಯಲ್ಲಿ ಬೇಡಿಕೆ ಕಳೆದುಕೊಂಡ ಕಾರುಗಳು ಯಾವುದು ಗೊತ್ತೇ? ಇಲ್ಲಿದೆ ಇದರ ಸಂಪೂರ್ಣ ಡಿಟೇಲ್ಸ್.

VISTARANEWS.COM


on

By

Best Selling Cars
Koo

ಜುಲೈ ತಿಂಗಳು ಕೆಲವು ಕಾರು ಕಂಪನಿಗಳಿಗೆ (car) ಹಬ್ಬವನ್ನು ಉಂಟು (Best Selling Cars) ಮಾಡಿದರೆ, ಇನ್ನು ಕೆಲವು ಕಾರು ತಯಾರಕರಿಗೆ ಸಣ್ಣ ಹೊಡೆತವನ್ನೂ ನೀಡಿದೆ. ಇದರಲ್ಲಿ ಮುಖ್ಯವಾಗಿ ಮಾರುತಿ ಸುಜುಕಿ (Maruti Suzuki), ಹುಂಡೈ (Hyundai) ಮತ್ತು ಟಾಟಾ ಮೋಟಾರ್ಸ್‌ನ (Tata Motors) ಕಾರುಗಳು ಮಾರಾಟದಲ್ಲಿ ಕುಸಿತವನ್ನು ದಾಖಲಿಸಿತ್ತು. ಹಿನ್ನಡೆಯ ಹೊರತಾಗಿಯೂ ಹುಂಡೈ ಜುಲೈ ತಿಂಗಳಲ್ಲಿ ಕಾರು ಮಾರಾಟದಲ್ಲಿ ಕ್ರೆಟಾ (Hyundai Creta) ಟಾಟಾ ಪಂಚ್ (Tata Punch) ಸೇರಿದಂತೆ ಕೆಲವು ಜನಪ್ರಿಯ ಮಾದರಿಗಳಿಗೆ ಸಡ್ಡು ಹೊಡೆದಿದೆ.

ಜುಲೈ 2024ರಲ್ಲಿ ಹೆಚ್ಚು ಮಾರಾಟವಾದ ಹತ್ತು ಪ್ರಮುಖ ಕಾರುಗಳ ವಿವರ ಇಲ್ಲಿದೆ:

ಜುಲೈ ತಿಂಗಳಲ್ಲಿ 17,350 ಯುನಿಟ್‌ಗಳನ್ನು ಮಾರಾಟ ಮಾಡುವುದರೊಂದಿಗೆ ಹ್ಯುಂಡೈ ಕ್ರೆಟಾ ಮುನ್ನಡೆಯನ್ನು ಕಂಡಿದೆ. 2023ರ ಜುಲೈಗೆ ಹೋಲಿಸಿದರೆ ಶೇ. 23ರಷ್ಟು ಬೇಡಿಕೆ ಹೆಚ್ಚಾಗಿರುವುದಾಗಿ ಕಂಪನಿ ಪ್ರಕಟಿಸಿದೆ. ಅಲ್ಲದೇ ಹೊಸ ಹುಂಡೈ ಕ್ರೆಟಾ ಜನವರಿಯಿಂದ ಈವರೆಗೆ 1 ಲಕ್ಷ ಮಾರಾಟದ ಮೈಲುಗಲ್ಲನ್ನು ತಲುಪಿದೆ. ಈ ವರ್ಷ. ಕ್ರೆಟಾ ಎನ್ ಲೈನ್ ಆವೃತ್ತಿಯಲ್ಲಿಯೂ ಲಭ್ಯವಿದ್ದು, ಸ್ಪೋರ್ಟಿಯರ್ ಆವೃತ್ತಿಯನ್ನು ಬಯಸುವ ಗ್ರಾಹಕರನ್ನು ಆಕರ್ಷಿಸುತ್ತಿದೆ.


ಮಾರುತಿ ಸುಜುಕಿ ಸ್ವಿಫ್ಟ್ ನಂ.2

ಕ್ರೆಟಾದ ಬಳಿಕ ಮಾರುತಿ ಸುಜುಕಿ ಸ್ವಿಫ್ಟ್ 16,854 ಯುನಿಟ್‌ಗಳ ಮಾರಾಟವನ್ನು ದಾಖಲಿಸಿದೆ. ಶೇ. 6ರಷ್ಟು ಮಾರಾಟ ಕುಸಿತವನ್ನು ಕಂಡಿದೆ. ಸ್ವಿಫ್ಟ್ ಅನಂತರ ವ್ಯಾಗನರ್ ಕಳೆದ ತಿಂಗಳು ಮಾರಾಟ ಕುಸಿತವನ್ನು ದಾಖಲಿಸಿದ ಅನಂತರ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 25ರಷ್ಟು ಧನಾತ್ಮಕ ಬೆಳವಣಿಗೆಯನ್ನು ದಾಖಲಿಸಿದೆ.

ಕಳೆದ ತಿಂಗಳ ಬೆಸ್ಟ್-ಸೆಲ್ಲರ್, ಟಾಟಾ ಪಂಚ್ 16,121 ಯುನಿಟ್‌ಗಳ ಮಾರಾಟ ಮತ್ತು ಶೇ. 34ರಷ್ಟು ಬೆಳವಣಿಗೆಯೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಪಂಚ್ ಸೇರಿದಂತೆ ಇನ್ನೂ ಎರಡು ಮಾರುತಿ ಸುಜುಕಿ ವಾಹನಗಳಾದ ಎರ್ಟಿಗಾ ಮತ್ತು ಬ್ರೆಝಾ, ಕ್ರಮವಾಗಿ 15,701 ಯುನಿಟ್ ಮತ್ತು 14,676 ಯುನಿಟ್‌ಗಳನ್ನು ಮಾರಾಟವಾಗಿದೆ. ಎರ್ಟಿಗಾ ಶೇ. 9, ಬ್ರೆಝಾ ಶೇ. 11 ರಷ್ಟು ಮಾರಾಟ ಕುಸಿತವನ್ನು ಅನುಭವಿಸಿದೆ.


ಟಾಟಾ ನೆಕ್ಸಾನ್ ಸ್ಥಾನ ಏನು?:

ಏಳನೇ ಸ್ಥಾನದಲ್ಲಿ ಟಾಟಾ ನೆಕ್ಸಾನ್ ಇದ್ದು, ಇದು ಮೊದಲ ಬಾರಿಗೆ ಧನಾತ್ಮಕ ಬೆಳವಣಿಗೆಯನ್ನು ಕಂಡಿದೆ. ಟಾಟಾ ಜುಲೈ 2024 ರಲ್ಲಿ 13,902 ಯುನಿಟ್‌ಗಳ ಮಾರಾಟವನ್ನು ನೋಂದಾಯಿಸಿದ್ದು, ಶೇ. 13ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಜುಲೈ 2024ರಲ್ಲಿ ಧನಾತ್ಮಕ ಬೆಳವಣಿಗೆಯನ್ನು ದಾಖಲಿಸಿದ ಕೆಲವೇ ಕಾರು ತಯಾರಕರಲ್ಲಿ ಮಹೀಂದ್ರಾ ಕೂಡ ಒಂದಾಗಿದೆ. 12,237 ಯುನಿಟ್‌ಗಳ ಮಾರಾಟವನ್ನು ನೋಂದಾಯಿಸಿದ ಸ್ಕಾರ್ಪಿಯೊ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ. ಮಾರುತಿ ಸುಜುಕಿ ಉತ್ಪನ್ನಗಳಾದ ಇಕೋ, ಡಿಜೈರ್ ಎರಡೂ ಮಾರಾಟದಲ್ಲಿ ಕುಸಿತವನ್ನು ಅನುಭವಿಸಿದೆ.

ಇದನ್ನೂ ಓದಿ: Bike Mileage Tips: ಬೈಕ್‌‌ಗೆ ಟ್ಯೂಬ್, ಟ್ಯೂಬ್ ಲೆಸ್ ಟಯರ್; ಇವೆರಡರಲ್ಲಿ ಯಾವುದು ಬೆಸ್ಟ್?

ಯಾವುದು ಎಷ್ಟು?

ಹುಂಡೈ ಕ್ರೆಟಾ ಈ ಬಾರಿ 17,350ರಷ್ಟು ಮಾರಾಟವಾಗಿದ್ದು, ಕಳೆದ ವರ್ಷ 14,062ರಷ್ಟಾಗಿತ್ತು.


ಮಾರುತಿ ಸುಜುಕಿ ಸ್ವಿಫ್ಟ್ ಈ ಬಾರಿ 16,854, ಕಳೆದ ಬಾರಿ 17,896, ಮಾರುತಿ ಸುಜುಕಿ ವ್ಯಾಗನ್ ಆರ್ ಈ ಬಾರಿ 16,191, ಕಳೆದ ವರ್ಷ 12,970, ಟಾಟಾ ಪಂಚ್ ಈ ಬಾರಿ 16,121, ಕಳೆದ ವರ್ಷ 12,019, ಮಾರುತಿ ಸುಜುಕಿ ಎರ್ಟಿಗಾ ಈ ಬಾರಿ 15,701, ಕಳೆದ ಬಾರಿ 14,352, ಮಾರುತಿ ಸುಜುಕಿ ಬ್ರೆಝಾ ಈ ಬಾರಿ 14,676, ಕಳೆದ ವರ್ಷ 16,543, ಟಾಟಾ ನೆಕ್ಸಾನ್ ಈ ಬಾರಿ 13,902, ಕಳೆದ ವರ್ಷ 12,349, ಮಹೀಂದ್ರ ಸ್ಕಾರ್ಪಿಯೋ ಈ ಬಾರಿ 12,237, ಕಳೆದ ಬಾರಿ 10,522, ಮಾರುತಿ ಸುಜುಕಿ ಇಕೋ ಈ ಬಾರಿ 11,916, ಕಳೆದ ವರ್ಷ 12,037, ಮಾರುತಿ ಸುಜುಕಿ ಡಿಜೈರ್ ಈ ಬಾರಿ 11,647 ಕಳೆದ ವರ್ಷ 13,395ರಷ್ಟು ಮಾರಾಟವನ್ನು ದಾಖಲಿಸಿದೆ.

Continue Reading

ಆಟೋಮೊಬೈಲ್

Electric Vehicles: ಎಲೆಕ್ಟ್ರಿಕ್‌ ಕಾರು ಖರೀದಿಸಿದವರಿಗೆ ಪೆಟ್ರೋಲ್, ಡೀಸೆಲ್‌ ಕಾರಿಗೆ ಮರಳುವ ಇಚ್ಛೆ; ಕಾರಣ ಏನು?

Electric Vehicles: ಕಳೆದ ಕೆಲವು ವರ್ಷಗಳಿಂದ ಭಾರತ ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡುತ್ತಿದೆ. ಆದರೂ ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನಗಳನ್ನು ಖರೀದಿಸಿದ ಅರ್ಧಕ್ಕಿಂತ ಹೆಚ್ಚು ಜನರು ತಮ್ಮ ನಿರ್ಧಾರದಿಂದ ಸಂತುಷ್ಟರಾಗಿಲ್ಲ ಎಂಬುದಾಗಿ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಇದಕ್ಕೆ ಕಾರಣ ಏನು ಎನ್ನುವ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Electric Vehicles
Koo

ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಎಲೆಕ್ಟ್ರಿಕ್ ವಾಹನ (Electric Vehicles) ಮಾರುಕಟ್ಟೆ (EV Market) ಗಮನಾರ್ಹವಾಗಿ ಬೆಳೆದಿದೆ. ಆದರೆ ಇದೀಗ ಭಾರತದ ಶೇ. 50ಕ್ಕಿಂತ ಹೆಚ್ಚು ಎಲೆಕ್ಟ್ರಿಕ್ ವಾಹನ ಹೊಂದಿರುವವರು ಪೆಟ್ರೋಲ್, ಡೀಸೆಲ್ ಕಾರುಗಳಿಗೆ (Petrol-Diesel Cars) ಹಿಂದಿರುಗಲು ಬಯಸುತ್ತಿದ್ದಾರೆ ಎಂಬುದಾಗಿ ಇತ್ತೀಚಿನ ಸಮೀಕ್ಷೆಯೊಂದು ಬಹಿರಂಗಪಡಿಸಿದೆ.

ಎಲೆಕ್ಟ್ರಿಕ್ ವಾಹನಗಳನ್ನು ಜಾಗತಿಕವಾಗಿ ಚಲನಶೀಲತೆಯ ಭವಿಷ್ಯವೆಂದು ಪರಿಗಣಿಸಲಾಗುತ್ತದೆ. ಭಾರತ ಸರ್ಕಾರವೂ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡುತ್ತಿದೆ. ಆದರೂ ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನಗಳನ್ನು ಖರೀದಿಸಿದ ಅರ್ಧಕ್ಕಿಂತ ಹೆಚ್ಚು ಜನರು ತಮ್ಮ ನಿರ್ಧಾರದಿಂದ ಸಂತುಷ್ಟರಾಗಿಲ್ಲ ಎಂಬುದಾಗಿ ಪಾರ್ಕ್ ಪ್ಲಸ್ ಸಮೀಕ್ಷೆ ತಿಳಿಸಿದೆ.

ಸಾಕಷ್ಟು ಇವಿ ಗ್ರಾಹಕರು ಪೆಟ್ರೋಲ್, ಡೀಸೆಲ್ ಕಾರುಗಳಿಗೆ ಹಿಂತಿರುಗಲು ಬಯಸುತ್ತಾರೆ. ಡೀಸೆಲ್, ಪೆಟ್ರೋಲ್ ಅಥವಾ ಸಿಎನ್‌ಜಿ ಚಾಲಿತ ವಾಹನಗಳು ಉತ್ತಮವೆಂದು ನಂಬುತ್ತಾರೆ. ದೆಹಲಿ, ಎನ್‌ಸಿಆರ್, ಮುಂಬಯಿ ಮತ್ತು ಬೆಂಗಳೂರಿನಲ್ಲಿ 500 ಎಲೆಕ್ಟ್ರಿಕ್ ಕಾರು ಮಾಲೀಕರನ್ನು ಗುರಿಯಾಗಿಟ್ಟುಕೊಂಡು ಪಾರ್ಕ್ ಪ್ಲಸ್ ಸಮೀಕ್ಷೆ ನಡೆಸಿದೆ.

ಶೇ. 51ರಷ್ಟು ಎಲೆಕ್ಟ್ರಿಕ್ ಕಾರು ಮಾಲೀಕರು ಮತ್ತೊಂದು ಇವಿ ಖರೀದಿಸಲು ಇಷ್ಟಪಡುವುದಿಲ್ಲ. ಬದಲಿಗೆ ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಬದಲಾಯಿಸಲು ಆದ್ಯತೆ ನೀಡುತ್ತಾರೆ. ಎಲೆಕ್ಟ್ರಿಕ್ ವಾಹನಗಳಿಗೆ ಸಂಬಂಧಿಸಿ ಗ್ರಾಹಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವುದಾಗಿ ಸಮೀಕ್ಷೆ ತಿಳಿಸಿದೆ.

ಎಲೆಕ್ಟ್ರಿಕ್ ವಾಹನಗಳಲ್ಲಿ ಕಂಡು ಬರುವ ತೊಂದರೆಗಳು ಗ್ರಾಹಕರಿಗೆ ದೈನಂದಿನ ಕಾರ್ಯಕ್ಕೆ ಅಡ್ಡಿಯನ್ನು ಉಂಟು ಮಾಡುತ್ತದೆ. ಸಾಕಷ್ಟು ಚಾರ್ಜಿಂಗ್ ಸ್ಟೇಷನ್‌ಗಳ ಕೊರತೆ, ನಿಯಮಿತ ನಿರ್ವಹಣೆಯ ತೊಂದರೆಗಳು ಮತ್ತು ಕಡಿಮೆ ಮರುಮಾರಾಟ ಮೌಲ್ಯವು ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವುದು ಸೂಕ್ತವಲ್ಲ ಎಂದು ಇವಿ ಮಾಲೀಕರು ಭಾವಿಸುವಂತೆ ಮಾಡಿದೆ ಎಂಬುದಾಗಿ ಸಮೀಕ್ಷೆಯಿಂದ ತಿಳಿದು ಬಂದಿದೆ.


ಸಮೀಕ್ಷೆಯ ಪ್ರಕಾರ ಶೇ. 88ರಷ್ಟು ಎಲೆಕ್ಟ್ರಿಕ್ ವಾಹನ ಮಾಲೀಕರು ಚಾರ್ಜಿಂಗ್ ಸ್ಟೇಷನ್‌ಗಳ ಕೊರತೆಯನ್ನು ಉಲ್ಲೇಖಿಸಿದ್ದಾರೆ. ಭಾರತದಲ್ಲಿ 20,000ಕ್ಕೂ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿದ್ದರೂ ಈ ನಿಲ್ದಾಣಗಳ ಗೋಚರತೆ ತುಂಬಾ ಕಳಪೆಯಾಗಿದೆ. ಇದರಿಂದಾಗಿ ಅವುಗಳನ್ನು ಪತ್ತೆಹಚ್ಚಲು ಕಷ್ಟವಾಗುತ್ತದೆ ಎಂದು ಹೇಳಿರುವ ಹೆಚ್ಚಿನ ಇವಿ ಮಾಲೀಕರು 50 ಕಿ.ಮೀ.ಗಿಂತ ಕಡಿಮೆ ದೂರದ ಸಣ್ಣ ನಗರ ಪ್ರವಾಸಗಳಿಗೆ ಆದ್ಯತೆ ನೀಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Nissan SUV X-TRAIL : ನಿಸ್ಸಾನ್ ನ ಹೊಚ್ಚ ಹೊಸ 4 ಜನರೇಷನ್ ಪ್ರೀಮಿಯಂ ಅರ್ಬನ್ ಎಸ್‌ಯುವಿ ಎಕ್ಸ್-ಟ್ರಯಲ್ ಬಿಡುಗಡೆ

ಶೇ. 73ರಷ್ಟು ಇವಿ ಮಾಲೀಕರು ತಮ್ಮ ಎಲೆಕ್ಟ್ರಿಕ್ ಕಾರುಗಳು “ಕಪ್ಪು ಪೆಟ್ಟಿಗೆ” ಯಂತೆ ಭಾಸವಾಗುತ್ತಿದೆ ಎಂದು ಹೇಳಿದ್ದಾರೆ. ಸಾಕಷ್ಟು ಮಂದಿಗೆ ನಿರ್ವಹಣೆ ಒಂದು ಪ್ರಮುಖ ಸಮಸ್ಯೆಯಾಗಿದೆ. ಸ್ಥಳೀಯ ಮೆಕ್ಯಾನಿಕ್ಸ್‌ಗಳಿಗೆ ಸಣ್ಣ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಕಾರನ್ನು ಅಧಿಕೃತ ವಿತರಕರ ಬಳಿಯೇ ತೆಗೆದುಕೊಂಡು ಹೋಗಬೇಕಾಗುತ್ತದೆ ಎನ್ನುತ್ತಾರೆ ಇವಿ ಮಾಲೀಕರು.

ಸಮೀಕ್ಷೆಗೆ ಸುಮಾರು ಶೇ. 33ರಷ್ಟು ಮಂದಿ ಪ್ರತಿಕ್ರಿಯಿಸಿದವರು ತಮ್ಮ ಎಲೆಕ್ಟ್ರಿಕ್ ಕಾರಿನ ಮರುಮಾರಾಟ ಮೌಲ್ಯದಲ್ಲಿನ ಕುಸಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಇ-ಕಾರ್‌ನ ಮರುಮಾರಾಟ ಮೌಲ್ಯವನ್ನು ಆಕಸ್ಮಿಕವಾಗಿ ಪರಿಶೀಲಿಸಿದಾಗ ಅವರು ಸ್ವೀಕರಿಸಿದ ಉಲ್ಲೇಖಗಳು ನಿರೀಕ್ಷೆಗಿಂತ ತುಂಬಾ ಕಡಿಮೆಯಾಗಿದೆ ಎಂದು ಹೇಳಿದರು.

Continue Reading

ಆಟೋಮೊಬೈಲ್

Bike Mileage Tips: ಬೈಕ್‌‌ಗೆ ಟ್ಯೂಬ್, ಟ್ಯೂಬ್ ಲೆಸ್ ಟಯರ್; ಇವೆರಡರಲ್ಲಿ ಯಾವುದು ಬೆಸ್ಟ್?

ಬೈಕ್ ಉತ್ತಮ ಮೈಲೇಜ್ (Bike Mileage Tips) ನೀಡಬೇಕಾದರೆ ಉತ್ತಮ ಗುಣಮಟ್ಟದ ಟಯರ್ ಬಳಕೆ ಮಾಡುವುದು ಎಷ್ಟು ಮುಖ್ಯವೋ ಅದನ್ನು ನಿರ್ವಹಣೆ ಮಾಡುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಟಯರ್ ನ ಪ್ರಕಾರವು ಬೈಕ್ ನ ಮೈಲೇಜ್ ಅನ್ನು ಹೆಚ್ಚಿಸಬಹುದು ಅಥವಾ ಕಡಿಮೆ ಮಾಡಬಹುದು. ಯಾವ ಟಯರ್ ಸೂಕ್ತ? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Bike Mileage Tips
Koo

ವಾಹನದ ಮೈಲೇಜ್ (Bike Mileage Tips) ಹಲವಾರು ಅಂಶಗಳ ಮೇಲೆ ನಿರ್ಧರಿಸಲ್ಪಡುತ್ತದೆ. ಇದರಲ್ಲಿ ಯಾವ ಟಯರ್ (tyres) ಬಳಸುತ್ತಿದ್ದೀರಿ ಎಂಬುದು ಕೂಡ ಒಂದಾಗಿದೆ. ಬೈಕ್ ಉತ್ತಮ ಮೈಲೇಜ್ (Bike mileage) ನೀಡಬೇಕಾದರೆ ಉತ್ತಮ ಗುಣಮಟ್ಟದ ಟಯರ್ (bike tyres) ಬಳಕೆ ಮಾಡುವುದು ಎಷ್ಟು ಮುಖ್ಯವೋ ಅದನ್ನು ನಿರ್ವಹಣೆ ಮಾಡುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಟಯರ್ ನ ಪ್ರಕಾರವು ಬೈಕ್ ನ ಮೈಲೇಜ್ ಅನ್ನು ಹೆಚ್ಚಿಸಬಹುದು ಅಥವಾ ಕಡಿಮೆ ಮಾಡಬಹುದು.

ಸಾಮಾನ್ಯವಾಗಿ ಟ್ಯೂಬ್ ಲೆಸ್ ಬೈಕ್ ಟಯರ್ ಗಳು ಟ್ಯೂಬ್ ಟಯರ್ ಗಳಿಗಿಂತ ಹೆಚ್ಚು ದುಬಾರಿ. ಇದರ ಹಿಂದೆ ಕೆಲವು ಕಾರಣಗಳಿವೆ. ಟ್ಯೂಬ್‌ಲೆಸ್ ಟಯರ್ ಗಳ ಉತ್ಪಾದನಾ ಪ್ರಕ್ರಿಯೆ ಮತ್ತು ತಾಂತ್ರಿಕ ಸಂಕೀರ್ಣತೆ ಹೆಚ್ಚಾಗಿರುತ್ತದೆ. ಗಾಳಿಯ ಸೋರಿಕೆಯನ್ನು ಕಡಿಮೆ ಮಾಡಲು ಅವರಿಗೆ ವಿಶೇಷ ರಬ್ಬರ್ ಮತ್ತು ಸೀಲಿಂಗ್ ಅಗತ್ಯವಿರುತ್ತದೆ. ಇದು ತಯಾರಿಸಲು ಹೆಚ್ಚು ದುಬಾರಿಯಾಗಿದೆ. ಅಲ್ಲದೇ ಟ್ಯೂಬ್‌ಲೆಸ್ ಟಯರ್ ಗಳು ಹೆಚ್ಚು ಪಂಕ್ಚರ್ ನಿರೋಧಕವಾಗಿರುತ್ತವೆ ಮತ್ತು ರೋಲಿಂಗ್ ಪ್ರತಿರೋಧವನ್ನು ಹೊಂದಿರುತ್ತವೆ. ಇದು ದೀರ್ಘಾವಧಿಯಲ್ಲಿ ಉತ್ತಮ ಕಾರ್ಯಕ್ಷಮತೆ ಮತ್ತು ಕಡಿಮೆ ನಿರ್ವಹಣೆಗೆ ಕಾರಣವಾಗುತ್ತದೆ.

ಇನ್ನು ಟ್ಯೂಬ್ಡ್ ಟಯರ್ ಗಳು ಸಾಮಾನ್ಯವಾಗಿ ಅಗ್ಗವಾಗಿರುತ್ತವೆ. ಯಾಕೆಂದರೆ ಅವುಗಳ ಉತ್ಪಾದನಾ ಪ್ರಕ್ರಿಯೆಯು ಸರಳವಾಗಿದೆ ಮತ್ತು ಟ್ಯೂಬ್ ಅನ್ನು ಬದಲಾಯಿಸಲು ಮತ್ತು ಸರಿಪಡಿಸಲು ಸಹ ಸುಲಭವಾಗಿದೆ.

ಟ್ಯೂಬ್ಲೆಸ್ ಮತ್ತು ಟ್ಯೂಬ್ಡ್ ಟಯರ್ ಗಳ ನಡುವಿನ ವ್ಯತ್ಯಾಸ ಏನು?

Bike Mileage Tips
Bike Mileage Tips


ರಚನೆ

ಟ್ಯೂಬ್‌ಲೆಸ್ ಟಯರ್ ಗಳಿಗೆ ಟ್ಯೂಬ್ ಅಗತ್ಯವಿಲ್ಲ. ಟಯರ್ ಮತ್ತು ರಿಮ್ ನಡುವೆ ಏರ್ ಸೀಲ್ ಅನ್ನು ರಚಿಸಲು ವಿಶೇಷ ರೀತಿಯ ರಬ್ಬರ್ ಸೀಲಿಂಗ್ ಇದೆ. ಗಾಳಿಯು ನೇರವಾಗಿ ಟಯರ್ ಒಳಗೆ ಉಳಿಯುತ್ತದೆ ಮತ್ತು ರಿಮ್ ನೊಂದಿಗೆ ಸೀಲ್ ಅನ್ನು ರೂಪಿಸುತ್ತದೆ.

ಟ್ಯೂಬ್ ಟಯರ್ ಒಳಗೆ ಗಾಳಿಯನ್ನು ಆವರಿಸುವ ಒಳಗಿನ ಟ್ಯೂಬ್ ಅನ್ನು ಹೊಂದಿರುತ್ತವೆ. ಈ ಟ್ಯೂಬ್ ರಬ್ಬರ್‌ನಿಂದ ಮಾಡಲ್ಪಟ್ಟಿದೆ ಮತ್ತು ಟಯರ್ ಒಳಗೆ ಗಾಳಿಯನ್ನು ಇರಿಸಲು ಕೆಲಸ ಮಾಡುತ್ತದೆ.

ಪಂಕ್ಚರ್ ಪ್ರೂಫ್ನೆಸ್

ಟ್ಯೂಬ್‌ಲೆಸ್ ಟಯರ್ ಗಳು ಪಂಕ್ಚರ್‌ಗಳಿಗೆ ಹೆಚ್ಚು ನಿರೋಧಕವಾಗಿರುತ್ತವೆ. ಯಾಕೆಂದರೆ ಕಡಿಮೆ ಗಾಳಿಯ ಸೋರಿಕೆ ಇರುತ್ತದೆ. ಸಣ್ಣ ಪಂಕ್ಚರ್‌ಗಳು ಸ್ವಯಂಚಾಲಿತವಾಗಿ ಮುಚ್ಚಿಕೊಳ್ಳಬಹುದು, ತುರ್ತು ಪರಿಸ್ಥಿತಿಯಲ್ಲಿ ಕಡಿಮೆ ಸಮಸ್ಯೆಗಳನ್ನು ಉಂಟುಮಾಡಬಹುದು.

ಟ್ಯೂಬ್ ಟಯರ್ ಪಂಕ್ಚರ್ ಆದ ಸಂದರ್ಭದಲ್ಲಿ ಗಾಳಿಯು ಟ್ಯೂಬ್ ನಿಂದ ವೇಗವಾಗಿ ಹೊರಬರುತ್ತದೆ.

ಉತ್ತಮ ಮೈಲೇಜ್

ಟ್ಯೂಬ್ ಲೆಸ್ ಟಯರ್ ಗಳು ಸಾಮಾನ್ಯವಾಗಿ ಟ್ಯೂಬ್ ಟಯರ್ ಗಳಿಗಿಂತ ಉತ್ತಮ ಮೈಲೇಜ್ ನೀಡಬಲ್ಲವು. ಇದಕ್ಕೆ ಕೆಲವು ಕಾರಣಗಳಿವೆ.

ಪ್ಯಾಚಿಂಗ್ ಮತ್ತು ಪಂಕ್ಚರ್ ಪ್ರೂಫ್ನೆಸ್

ಟ್ಯೂಬ್‌ಲೆಸ್ ಟಯರ್ ಗಳು ಕಡಿಮೆ ಗಾಳಿಯನ್ನು ಸೋರಿಕೆ ಮಾಡುತ್ತವೆ ಮತ್ತು ಪಂಕ್ಚರ್‌ಗಳಿಗೆ ಹೆಚ್ಚು ನಿರೋಧಕವಾಗಿರುತ್ತವೆ. ಇದರರ್ಥ ಕಡಿಮೆ ಬಾರಿ ಗಾಳಿಯನ್ನು ತುಂಬಿದರೆ ಸಾಕಾಗುತ್ತದೆ. ಈ ಟಯರ್ ನ ಬಾಳಿಕೆ ಹೆಚ್ಚು.

ಕಡಿಮೆ ರೋಲಿಂಗ್ ಪ್ರತಿರೋಧ

ಟ್ಯೂಬ್‌ಲೆಸ್ ಟಯರ್ ಗಳು ಕಡಿಮೆ ರೋಲಿಂಗ್ ಪ್ರತಿರೋಧವನ್ನು ಹೊಂದಿವೆ. ಇದು ಬೈಕ್‌ನ ಇಂಧನ ದಕ್ಷತೆಯನ್ನು ಸುಧಾರಿಸುತ್ತದೆ.

ಹಗುರ

ಟ್ಯೂಬ್‌ಲೆಸ್ ಟಯರ್ ಗಳು ಸಾಮಾನ್ಯವಾಗಿ ಹಗುರವಾಗಿರುತ್ತವೆ. ಯಾಕೆಂದರೆ ಅವುಗಳಿಗೆ ಟ್ಯೂಬ್ ಅಗತ್ಯವಿಲ್ಲ. ಇದು ಬೈಕಿನ ಒಟ್ಟಾರೆ ತೂಕವನ್ನು ಕಡಿಮೆ ಮಾಡುತ್ತದೆ. ಇದು ಮೈಲೇಜ್ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: 4 ಲಕ್ಷ ಬೈಕ್‌, ಸ್ಕೂಟರ್‌ ಹಿಂಪಡೆಯಲು ಮುಂದಾದ ಸುಜುಕಿ ಇಂಡಿಯಾ; ಈ ಪಟ್ಟಿಯಲ್ಲಿ ನಿಮ್ಮ ವಾಹನವೂ ಇದ್ಯಾ? ಹೀಗೆ ಚೆಕ್‌ ಮಾಡಿ

ಇನ್ನು ಕೆಲವು ಕಾರಣಗಳಿವೆ

ಸರಿಯಾದ ಟಯರ್ ಅನ್ನು ಆಯ್ಕೆ ಮಾಡುವುದು ಚಾಲನಾ ಶೈಲಿ, ರಸ್ತೆ ಪರಿಸ್ಥಿತಿಗಳು ಮತ್ತು ಬೈಕು ಪ್ರಕಾರವನ್ನು ಅವಲಂಬಿಸಿರುತ್ತದೆ. ಕೆಲವು ಸಂದರ್ಭಗಳಲ್ಲಿ, ಟ್ಯೂಬ್ಡ್ ಟಯರ್ ಗಳು ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತವೆ.

ಟ್ಯೂಬ್‌ಲೆಸ್ ನ ಪ್ರಯೋಜನವೇನು?

ಟ್ಯೂಬ್‌ಲೆಸ್ ಟಯರ್ ಗಳು ಟ್ಯೂಬ್ಡ್ ಟಯರ್ ಗಳಿಗೆ ಹೋಲಿಸಿದರೆ ಹೆಚ್ಚು ದುಬಾರಿಯಾಗಿರುತ್ತವೆ. ಆದರೆ ಹೆಚ್ಚು ಕಾಲ ಬಾಳಿಕೆ ಬರುತ್ತವೆ ಮತ್ತು ಸುಲಭವಾಗಿ ದುರಸ್ತಿ ಮಾಡಬಹುದಾಗಿದೆ.

Continue Reading

ವಾಣಿಜ್ಯ

Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

Tata Motors: ಟಾಟಾ ಮೋಟಾರ್ಸ್ ಸಂಸ್ಥೆಯು ಪುಣೆ, ಲಕ್ನೋ, ಜಮ್‌ಶೆಡ್‌ಪುರ, ಧಾರವಾಡ, ಸನಂದ್ ಮತ್ತು ಪಂತ್ ನಗರ ಸೇರಿದಂತೆ ಭಾರತದಾದ್ಯಂತ ಇರುವ ತಮ್ಮ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ತಂತ್ರಜ್ಞರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ‘ವಿದ್ಯಾಧನ’ ಮತ್ತು ‘ಉತ್ಕರ್ಷ’ ಎಂಬ ಎರಡು ವಿಶೇಷ ಧನಸಹಾಯ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿರುವುದಾಗಿ ಇಂದು ಘೋಷಿಸಿದೆ. ಈ ಮೂಲಕ ಕಂಪನಿಯು ಮಹತ್ವಾಕಾಂಕ್ಷೆ ಮತ್ತು ಅದನ್ನು ಸಾಧಿಸುವ ಪ್ರಕ್ರಿಯೆ ಮಧ್ಯೆ ಇರುವ ಅಂತರವನ್ನು ಕಡಿಮೆಗೊಳಿಸುವ ಗುರಿಯನ್ನು ಹೊಂದಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Tata Motors launched two programs Vidyadhana and Utkarsha to facilitate higher education of technician children
Koo

ಭಾರತದ ಪ್ರಮುಖ ಆಟೋಮೊಬೈಲ್ ತಯಾರಕ ಟಾಟಾ ಮೋಟಾರ್ಸ್ ಸಂಸ್ಥೆಯು (Tata Motors) ಪುಣೆ, ಲಕ್ನೋ, ಜಮ್‌ಶೆಡ್‌ಪುರ, ಧಾರವಾಡ, ಸನಂದ್ ಮತ್ತು ಪಂತ್ ನಗರ ಸೇರಿದಂತೆ ಭಾರತದಾದ್ಯಂತ ಇರುವ ತಮ್ಮ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ತಂತ್ರಜ್ಞರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ‘ವಿದ್ಯಾಧನ’ ಮತ್ತು ‘ಉತ್ಕರ್ಷ’ ಎಂಬ ಎರಡು ವಿಶೇಷ ಧನಸಹಾಯ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿರುವುದಾಗಿ ಇಂದು ಘೋಷಿಸಿದೆ. ಈ ಮೂಲಕ ಕಂಪನಿಯು ಮಹತ್ವಾಕಾಂಕ್ಷೆ ಮತ್ತು ಅದನ್ನು ಸಾಧಿಸುವ ಪ್ರಕ್ರಿಯೆ ಮಧ್ಯೆ ಇರುವ ಅಂತರವನ್ನು ಕಡಿಮೆಗೊಳಿಸುವ ಗುರಿಯನ್ನು ಹೊಂದಿದೆ.

ʼವಿದ್ಯಾಧನʼ ಕಾರ್ಯಕ್ರಮದ ಅಡಿಯಲ್ಲಿ 10ನೇ ಮತ್ತು 12ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ರಿಯಾಯಿತಿ ದರದಲ್ಲಿ ಶಿಕ್ಷಣ ಸಾಲಗಳನ್ನು ಒದಗಿಸಲಾಗುತ್ತದೆ. ‘ಉತ್ಕರ್ಷ’ ಕಾರ್ಯಕ್ರಮದಲ್ಲಿ ಹುಡುಗಿಯರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ವಿಶೇಷ ಚೇತನ ಮಕ್ಕಳಿಗೆ ಹೆಚ್ಚುವರಿ ವಾರ್ಷಿಕ ವಿದ್ಯಾರ್ಥಿವೇತನ ಪ್ರಯೋಜನ ನೀಡಲಾಗುತ್ತದೆ.

ವಿದ್ಯಾಧನ ಮತ್ತು ಉತ್ಕರ್ಷ ಕಾರ್ಯಕ್ರಮ ಆರಂಭವನ್ನು ಘೋಷಿಸಿದ ಟಾಟಾ ಮೋಟಾರ್ಸ್‌ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ (ಸಿಎಚ್‌ಆರ್‌ಓ) ಸೀತಾರಾಮ್ ಕಂಡಿ ಮಾತನಾಡಿ, “ಪ್ರಗತಿ ಮತ್ತು ಅಭಿವೃದ್ಧಿ ಸಾಧಿಸಲು ಗುಣಮಟ್ಟದ ಶಿಕ್ಷಣ ಬಹಳ ಮುಖ್ಯ. ಈ ಕಾರ್ಯಕ್ರಮಗಳು ಸುಲಭವಾಗಿ ಉನ್ನತ ಶಿಕ್ಷಣ ಪಡೆಯುವಂತೆ ಮಾಡುತ್ತದೆ ಮತ್ತು ನಮ್ಮ ಮುಂದಿನ ಪೀಳಿಗೆಯ ಭವಿಷ್ಯದ ಹಾದಿಯನ್ನು ಉತ್ತಮಗೊಳಿಸುತ್ತದೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಆ.3ರಂದು ‘ಬೌದ್ಧ ಸಾಹಿತ್ಯ-ಹಲವು ನೆಲೆಗಳು’ ರಾಷ್ಟ್ರೀಯ ವಿಚಾರ ಸಂಕಿರಣ

ನಮ್ಮ ಸಂಸ್ಥೆಯಲ್ಲಿ ಕಷ್ಟಪಟ್ಟು ದುಡಿಯುವ ತಂತ್ರಜ್ಞರ ಮಕ್ಕಳು ತಮ್ಮ ಸ್ವಂತ ಕನಸುಗಳನ್ನು ಮತ್ತು ಅವರ ಹೆತ್ತವರ ಕನಸುಗಳನ್ನು ಈ ಕಾರ್ಯಕ್ರಮಗಳ ಮುಖಾಂತರ ಈಡೇರಿಸಲಿದ್ದಾರೆ. ಇನ್ನು ನಮ್ಮ ತಂತ್ರಜ್ಞರ ಮಕ್ಕಳು 10 ಮತ್ತು 12 ನೇ ತರಗತಿ ನಂತರ ತಮ್ಮ ಆಯ್ಕೆಯ ಯಾವುದೇ ವಿಷಯದಲ್ಲಿ ಅಧ್ಯಯನ ಮಾಡಲು ಮುಂದಾಗಬಹುದು. ಪೋಷಕರು ಅದಕ್ಕೆ ಅಗತ್ಯವಿರುವ ಹಣಕಾಸಿನ ಬಗ್ಗೆ ಇನ್ನು ಮುಂದೆ ಚಿಂತಿಸಬೇಕಾದ ಅಗತ್ಯ ಇರುವುದಿಲ್ಲ. ಸೂಕ್ತ ರೀತಿಯ ಕ್ವಾಲಿಫಿಕೇಷನ್ ಮತ್ತು ಕೌಶಲ್ಯಗಳನ್ನು ಹೊಂದುವುದರ ಮೂಲಕ ಯಶಸ್ವಿಯಾಗಿ ವೃತ್ತಿ ರೂಪಿಸಲು ಮತ್ತು ಜೀವನವನ್ನು ನಿರ್ಮಿಸಲು ಅವರಿಗೆ ಈ ಕಾರ್ಯಕ್ರಮಗಳು ಉತ್ತಮ ಅವಕಾಶವಾಗಿದೆ” ಎಂದು ತಿಳಿಸಿದರು.

ವಿದ್ಯಾಧನ

‘ವಿದ್ಯಾಧನ’ ಎಂಬುದು ಶಿಕ್ಷಣ ಸಾಲ ಕಾರ್ಯಕ್ರಮವಾಗಿದ್ದು, ಅದು ಮುಂದಿನ ಪೀಳಿಗೆಗೆ ಉನ್ನತ ಶಿಕ್ಷಣ ಪಡೆದು ತಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ಅರಿತುಕೊಳ್ಳಲು ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಅರ್ಹ ತಂತ್ರಜ್ಞರು ದೇಶೀಯ ಶಿಕ್ಷಣದ ಶುಲ್ಕದ 95% ವರೆಗೆ ಅಥವಾ ಅಂತಾರಾಷ್ಟ್ರೀಯ ಶಿಕ್ಷಣ ಶುಲ್ಕದ 85% ವರೆಗೆ ಕಟ್ಟುವ ಸಲುವಾಗಿ 7.5 ಲಕ್ಷ ರೂ.ವರೆಗೆ ಸಾಲವನ್ನು ಪಡೆಯಬಹುದು. ಈ ಶಿಕ್ಷಣ ಸಾಲಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಹಯೋಗದಿಂದ ಒದಗಿಸಲಾಗುತ್ತದೆ ಮತ್ತು ಟಾಟಾ ಮೋಟಾರ್ಸ್ ಎಸ್‌ಬಿಐ ವಿಧಿಸುತ್ತಿರುವ ಬಡ್ಡಿದರದ ಮೇಲೆ ರಿಯಾಯಿತಿಗಳನ್ನು ನೀಡುತ್ತದೆ. ಹುಡುಗರಿಗೆ 50% ಕಡಿಮೆ ಬಡ್ಡಿದರ ಮತ್ತು ಹುಡುಗಿಯರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ವಿಶೇಷ ಚೇತನ ಮಕ್ಕಳು 70% ಬಡ್ಡಿ ರಿಯಾಯಿತಿ ಪಡೆಯಲು ಅರ್ಹರಾಗಿರುತ್ತಾರೆ. ಈ ಪ್ರಯೋಜನ ಪಡೆಯಲು ವಿದ್ಯಾರ್ಥಿಯು ಕನಿಷ್ಠ 2 ವರ್ಷಗಳ ಅವಧಿಯುಳ್ಳ ಫುಲ್ ಟೈಮ್ ಪದವಿ ಕೋರ್ಸಿಗೆ ಅಥವಾ ಸ್ನಾತಕೋತ್ತರ ಕೋರ್ಸ್‌ಗೆ ದಾಖಲಾಗಿರಬೇಕು ಮತ್ತು ಆ ಸಂಸ್ಥೆಗಳು ಭಾರತ ಅಥವಾ ವಿದೇಶದಲ್ಲಿರುವ ಮಾನ್ಯತೆ ಪಡೆದ ಎಐಸಿಟಿಇ- ಸಮಾನ ಸಂಸ್ಥೆಗಳು ಅಥವಾ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಜತೆ ಸಂಯೋಜಿತಗೊಂಡಿರಬೇಕು.

ಇದನ್ನೂ ಓದಿ: Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

ಉತ್ಕರ್ಷ ವಿದ್ಯಾರ್ಥಿವೇತನ

‘ಉತ್ಕರ್ಷʼ ಕಾರ್ಯಕ್ರಮವು 10ನೇ ಅಥವಾ 12ನೇ ತರಗತಿಯನ್ನು ಪೂರ್ಣಗೊಳಿಸಿದ ಹುಡುಗಿಯರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ವಿಶೇಷ ಚೇತನ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಪ್ರತೀ ವರ್ಷ ರೂ.25,000/- ವಿದ್ಯಾರ್ಥಿವೇತನ ಒದಗಿಸುವ ಕಾರ್ಯಕ್ರಮವಾಗಿದೆ. ಇದಕ್ಕೆ ಅರ್ಹತೆ ಪಡೆಯಲು ಅರ್ಜಿದಾರರು ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು ಮತ್ತು ಭಾರತ ಅಥವಾ ವಿದೇಶದಲ್ಲಿರುವ ಮಾನ್ಯತೆ ಪಡೆದ ಎಐಸಿಟಿಇ- ಸಮಾನ ಸಂಸ್ಥೆಗಳು ಅಥವಾ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ದಾಖಲಾತಿ ಪಡೆದುಕೊಂಡಿರಬೇಕು.

Continue Reading
Advertisement
ಪ್ರಮುಖ ಸುದ್ದಿ2 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ಗೆ ತೆರೆ; ಅದ್ಧೂರಿ ಸಮಾರೋಪದಲ್ಲಿ ಮನು ಭಾಕರ್​, ಶ್ರೀಜೇಶ್​ ಭಾಗಿ

Paris Olympics 2024
ಕ್ರೀಡೆ3 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ ಮುಕ್ತಾಯ; ಅಮೆರಿಕಕ್ಕೆ ಅಗ್ರಸ್ಥಾನ; ಚೀನಾಕ್ಕೆ ಎರಡನೇ ಸ್ಥಾನ

Farooq Abdullah
ಪ್ರಮುಖ ಸುದ್ದಿ4 hours ago

Farooq Abdullah : ಗಡಿಯಲ್ಲಿನ ಭಯೋತ್ಪಾದನಾ ಕೃತ್ಯಗಳಲ್ಲಿ ಉಗ್ರರು, ಸೇನೆ ಶಾಮೀಲು; ವಿವಾದದ ಕಿಡಿ ಹೊತ್ತಿಸಿದ ಫಾರೂಕ್ ಅಬ್ದುಲ್ಲಾ

Hindenburg Report
ದೇಶ4 hours ago

Hindenburg Report : ಮೋದಿ ಹೆದರುತ್ತಿದ್ದಾರೆ; ಹಿಂಡೆನ್​ಬರ್ಗ್​ ವರದಿ ಉಲ್ಲೇಖಿಸಿ ಸೆಬಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

Hindenburg report
ಪ್ರಮುಖ ಸುದ್ದಿ5 hours ago

Hindenburg Report : ಹುರುಳಿಲ್ಲದ ಆರೋಪ; ಹಿಂಡೆನ್​ಬರ್ಗ್​ ವರದಿ ಬಗ್ಗೆ ಸೆಬಿ ಸ್ಪಷ್ಟನೆ

Paris Olympics 2024
ಕ್ರೀಡೆ5 hours ago

Paris Olympics 2024 : ಸಮಾರೋಪ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಐಫೆಲ್​ ಟವರ್​ ಏರಿ ಕುಳಿತ ಆಗಂತುಕ!

Self Harming
ಕರ್ನಾಟಕ6 hours ago

Self Harming: ಡೆತ್‌ ನೋಟ್‌ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

PR Sreejesh
ಕ್ರೀಡೆ6 hours ago

PR Sreejesh : ಮಲ್ಲು ಸ್ಟೈಲಲ್ಲಿ ಮುಂಡು ಉಟ್ಟು ಐಫೆಲ್ ಟವರ್ ಮುಂದೆ ಫೋಟೋ ತೆಗಿಸಿಕೊಂಡ ಪಿ.ಆರ್​ ಶ್ರೀಜೇಶ್​​

Vinesh Phogat
ಕ್ರೀಡೆ7 hours ago

Vinesh Phogat : ವಿನೇಶ್​ಗೆ ಬೆಳ್ಳಿಯ ಪದಕ ನೀಡಬೇಕು; ಸೌರವ್​ ಗಂಗೂಲಿ ಆಗ್ರಹ

Tungabhadra Dam
ಕರ್ನಾಟಕ7 hours ago

Tungabhadra Dam: ತುಂಗಭದ್ರಾ ಡ್ಯಾಂ ಗೇಟು ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿ.ಕೆ. ಶಿವಕುಮಾರ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌